Chennai Floods: ಚೆನ್ನೈನಲ್ಲಿ ನೆರೆ ಪೀಡಿತರಿಗೆ ನೆರವು ನೀಡಿದ ಶ್ರೀ ರಾಮಕೃಷ್ಣ ಸೇವಾಶ್ರಮ - Vistara News

ಕರ್ನಾಟಕ

Chennai Floods: ಚೆನ್ನೈನಲ್ಲಿ ನೆರೆ ಪೀಡಿತರಿಗೆ ನೆರವು ನೀಡಿದ ಶ್ರೀ ರಾಮಕೃಷ್ಣ ಸೇವಾಶ್ರಮ

Chennai Floods: ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಅವರ ನೇತೃತ್ವದಲ್ಲಿ ಚೆನ್ನೈ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನೆರೆ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ.

VISTARANEWS.COM


on

Chennai Floods
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಮಿಚಾಂಗ್‌ ಚಂಡಮಾರುತದ ಪರಿಣಾಮ ಸುರಿದ ಭಾರಿ ಮಳೆಯಿಂದ ಚೆನ್ನೈ ಸೇರಿ ತಮಿಳುನಾಡಿನ ಹಲವು ಭಾಗಗಳಲ್ಲಿ ಪ್ರವಾಹ ಸೃಷ್ಟಿಯಾಗಿತ್ತು. ಇದರಿಂದ ಲಕ್ಷಾಂತರ ಜನ ಸಂಕಷ್ಟದಲ್ಲಿದ್ದು, ಹಲವು ಸಂಘ-ಸಂಸ್ಥೆಗಳು ನೆರೆ ಪರಿಹಾರ ಕಾರ್ಯ ಕೈಗೊಂಡಿವೆ. ಅದರಂತೆ ತುಮಕೂರು ಜಿಲ್ಲೆ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮವು(Sri Ramakrishna Sevashram), ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ಸಹಕಾರದೊಂದಿಗೆ ನೆರೆ ಪೀಡಿತರಿಗೆ ನೆರವು ನೀಡುವ ಕಾರ್ಯದಲ್ಲಿ ನಿರತವಾಗಿದೆ.

ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಹಾರಾಜ್ (Swami Japanandaji Maharaj) ಅವರ ನೇತೃತ್ವದಲ್ಲಿ ಚೆನ್ನೈ ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನೆರೆ ಪರಿಹಾರ ಕಾರ್ಯಕ್ರಮಗಳನ್ನು ಮುಗಿಸಿ, ಇದೀಗ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ನೆರೆ ಪರಿಹಾರ ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ಇನ್ಫೋಸಿಸ್ ಫೌಂಡೇಶನ್ ಸಹಕಾರದೊಂದಿಗೆ ಸರಿಸುಮಾರು 5,000 ಕುಟುಂಬಗಳಿಗೆ ತತ್ ಕ್ಷಣದ ಪರಿಹಾರ ಕಾರ್ಯವನ್ನು ಆರಂಭಿಸಲಾಗಿದೆ.

ಭಾರಿ ಮಳೆಯು 2023ರ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ತಮಿಳುನಾಡಿನ ದಕ್ಷಿಣ ಭಾಗದ ತೂತುಕುಡಿ ಮತ್ತು ತಿರುನೆಲ್ವೇಲಿ ಮುಂತಾದ ಪ್ರದೇಶಗಳಲ್ಲಿ ಪ್ರಳಯ ಸ್ವರೂಪವನ್ನೇ ತಂದೊಡ್ಡಿದೆ. ಶ್ರೀರಾಮಕೃಷ್ಣ ಸೇವಾ ಶ್ರಮಕ್ಕೆ ಯಥಾ ಪ್ರಕಾರ ಅಲ್ಲಿಯ ಸಂಘಗಳು ಹಾಗೂ ಜನರ ಪರವಾಗಿ ಅನೇಕ ಮನವಿ ಪತ್ರಗಳು ಹಾಗೂ ಛಾಯಾಚಿತ್ರಗಳು ಬರತೊಡಗಿದವು. ಇದನ್ನು ಕಂಡ ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜರವರು ಎಂದಿನಂತೆ ತಮಿಳುನಾಡಿನಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿ, ಸಂಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಿದ್ದಾರೆ.

ಇದನ್ನೂ ಓದಿ | ವಿಸ್ತಾರ ಅಂಕಣ: ಕೇವಲ ದರೋಡೆಕೋರರಾಗಿದ್ದರೆ ಅಯೋಧ್ಯೆ ಮೇಲೆ ಏಕೆ 76 ಬಾರಿ ದಾಳಿ ಮಾಡುತ್ತಿದ್ದರು?

ಮೊದಲ ಹಂತವಾಗಿ ಪರಿಹಾರ ಸಾಮಗ್ರಿಗಳನ್ನು ಹೊಂದಿರುವ ಟ್ರಕ್ ಇದೀಗ ತೂತುಕುಡಿ ಹಾಗೂ ತಿರುನೆಲ್ವೇಲಿ ಪ್ರದೇಶಗಳಿಗೆ ಸಾಗುತ್ತಿವೆ. ಈ ಯೋಜನೆಗೆ ಸ್ಥಳೀಯ ಮದರ್ ತೆರೇಸಾ ಸ್ವಯಂಸೇವಾ ಸಂಸ್ಥೆ, ಲಯನ್ಸ್ ಕ್ಲಬ್‌ ಹಾಗೂ ಶ್ರೀ ರಾಮಕೃಷ್ಣ ಸೇವಾಶ್ರಮ ಪಾವಗಡದ ಸಂಯೋಜಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸ್ವಾಮೀಜಿಯವರು ಕೂಡ ನೆರೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಜನರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಸುಮಾರು 40 ವರ್ಷಗಳಿಂದ ಜನಪರ ಸೇವಾ ಯೋಜನೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಸ್ವಾಮಿ ಜಪಾನಂದಜೀ ಅವರು, ಪ್ರಕೃತಿಯ ವೈಪರೀತ್ಯದ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ನೈಪುಣ್ಯತೆಯನ್ನು ಪಡೆದಿದ್ದಾರೆ. ಇನ್ನು ಸಂಪೂರ್ಣ ಶ್ರದ್ಧೆ ಸೇವಾ ತತ್ಪರತೆ ಹಾಗೂ ಮತ್ತೆಲ್ಲದಕ್ಕಿಂತ ಮಿಗಿಲಾಗಿ ತಮಿಳುನಾಡಿನ ಲಯನ್ಸ್ ಕ್ಲಬ್ ಹಾಗೂ ಇನ್ಫೋಸಿಸ್ ಕಂಪನಿ ಮತ್ತು ಆಶ್ರಮದ ಸ್ವಯಂಸೇವಕರು ಸದಾ ಕಾರ್ಯನಿರ್ವಹಿಸಲು ತಮ್ಮನ್ನೇ ತಾವು ಸಮರ್ಪಿಸಿಕೊಂಡು ಸ್ವಾಮೀಜಿಗಳೊಂದಿಗೆ ಕೈಜೋಡಿಸಿದ್ದಾರೆ.

ಈ ನಿಟ್ಟಿನಲ್ಲಿ ಸರಿಸುಮಾರು 10 ಸಾವಿರ ಪರಿಹಾರ ಕಿಟ್‌ಗಳನ್ನು ತಯಾರಿಸಲು ಪಾವಗಡದ ಸದ್ಭಕ್ತರು ಅದರಲ್ಲಿಯೂ ಮಹಿಳಾ ಭಕ್ತರು, ಬ್ರೈಟ್ ಫ್ಯೂಚರ್ ವಿದ್ಯಾರ್ಥಿಗಳು, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಶ್ರೀ ವಾಜಪೇಯಿ ಶಾಲೆಯ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಶ್ರೀ ರಾಮಕೃಷ್ಣ ಸೇವಾ ಶ್ರಮಕ್ಕೆ ತಮ್ಮ ಸಹಾಯ ಹಸ್ತವನ್ನು ನೀಡುತ್ತಿರುವುದು ಅತ್ಯಂತ ಪ್ರಶಂಸನೀಯ.

ನಿಜಕ್ಕೂ ಹೇಳಬೇಕಾದರೆ ಸ್ವಾಮಿ ವಿವೇಕಾನಂದರು ಬಯಸಿದ ಯುವ ಜನತೆ ನವ ಭಾರತ ನಿರ್ಮಾಣಕ್ಕೆ ತಮ್ಮ ಸಹಾಯವನ್ನು ಕರ್ತವ್ಯದ ಮನೋಭಾವನೆಯಿಂದ ಸಲ್ಲಿಸುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಲಕ್ಷಾಂತರ ಮಂದಿಗೆ ಸಹಾಯ ಹಸ್ತವನ್ನು ನೀಡಿದ್ದು ಇಲ್ಲಿ ಸ್ಮರಿಸಬಹುದಾಗಿದೆ. ಹಾಗೆಯೇ ಸುಮಾರು ಆರು ರಾಜ್ಯಗಳಲ್ಲಿ ಈ ತರನಾದ ಕಾರ್ಯಕ್ರಮಗಳನ್ನು ಪಾವಗಡದಂತಹ ಗ್ರಾಮಾಂತರ ಪ್ರದೇಶದಿಂದ ನಿರಂತರವಾಗಿ ನಡೆಸುತ್ತಿರುವುದು ನಿಜಕ್ಕೂ ಕರ್ನಾಟಕ ರಾಜ್ಯಕ್ಕೆ, ತುಮಕೂರು ಜಿಲ್ಲೆ ಹಾಗೂ ಪಾವಗಡ ತಾಲೂಕಿಗೆ ಅದ್ಭುತವಾದ ಕೀರ್ತಿಯನ್ನು ತಂದಂತಾಗಿದೆ.

ಈ ಯೋಜನೆಗಳು ಅಷ್ಟು ಸುಲಭವಾದದ್ದಲ್ಲ. ಕಾರಣ ಕೇವಲ ಹಣ ಮುಖ್ಯವಲ್ಲ. ಬದಲಾಗಿ ಕೈಗೊಳ್ಳುವ ಮನಸ್ಸು ಸದ್ಯ ಕಾರ್ಯ ತತ್ಪರತೆ, ಸಮರ್ಪಣಾ ಭಾವ ಹಾಗೂ ಪೂರ್ಣ ಮನಸ್ಸಿನಿಂದ ದೇಶ ಸೇವೆಗಾಗಿ ಮತ್ತು ಜೀವನದಲ್ಲಿ ಶಿವನನ್ನು ಕಾಣುವಂತಹ ಮಹತ್ತರವಾದ ಕಾರ್ಯವನ್ನು ಒಂದು ಬಾರಿ, ಎರಡು ಬಾರಿ ಅಲ್ಲ 40 ವರ್ಷಗಳನ್ನು ಕಂಡಿರುವ ಸ್ವಾಮೀಜಿಯವರ ಕಾರ್ಯ ತತ್ಪರತೆ ನಿಜಕ್ಕೂ ಕನ್ನಡ ನಾಡಿನ ಜನತೆಗೆ ಹೆಮ್ಮೆಯನ್ನು ತರುವಂತಿದೆ.

ಇದನ್ನೂ ಓದಿ | Raja Magra Column : ಮಕ್ಕಳಿಗಾಗಿ ಅಮರ ಕಥಾ ಲೋಕ ಸೃಷ್ಟಿಸಿದ ಅಂಕಲ್‌ ಪೈಗೆ ಮಕ್ಕಳೇ ಇರಲಿಲ್ಲ!

ಸ್ವಾಮೀಜಿಯವರು ಎಲ್ಲಿಯೇ ಸಂಚರಿಸಲಿ, ಅಲ್ಲಿಯ ಜನರು ಅದರಲ್ಲಿಯೂ ಗ್ರಾಮಾಂತರದ ಜನರು ಅವರನ್ನು ಪೂಜ್ಯ ದೃಷ್ಟಿಯಿಂದ ಕಂಡು ಸತ್ಕರಿಸುವುದನ್ನು ಸ್ವತಃ ಕಂಡಿರುವ ಅಧಿಕಾರಿಗಳು, ಪೊಲೀಸ್ ವರಿಷ್ಠರು ಹಾಗೂ ಇತರರು ಆಶ್ಚರ್ಯವನ್ನು ವ್ಯಕ್ತಪಡಿಸುತ್ತಾರೆ. ಆದರೆ ಪೂಜ್ಯ ಸ್ವಾಮೀಜಿಯವರು, ತಾವು ಸ್ವಾಮಿ ವಿವೇಕಾನಂದರ ನಿಷ್ಠಾವಂತ ಸೈನಿಕ ಹಾಗೂ ಸೇವಕ ಎಂದು ತಿಳಿಸುತ್ತಾರೆ. ತಮಿಳುನಾಡಿನಲ್ಲಿ ನೆರೆ ಪರಿಹಾರ ಕಾರ್ಯ ಜನವರಿ ತಿಂಗಳ ಅಂತ್ಯದವರೆಗೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Cow Smuggling: ಕಾರವಾರದಲ್ಲಿ ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿದ ಪೊಲೀಸರು 20ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕಂಟೇನರ್‌ವೊಂದರಲ್ಲೇ ಜಾನುವಾರಗಳನ್ನು ತುರುಕಿ ಹಿಂಸಾತ್ಮಕವಾಗಿ ರವಾನೆ ಮಾಡಲಾಗುತ್ತಿತ್ತು. ಇತ್ತ ಮೈಸೂರಿನಲ್ಲೂ ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳನ್ನು ರಕ್ಷಣೆ ಮಾಡಲಾಗಿದೆ.

VISTARANEWS.COM


on

By

Cow Smuggling
Koo

ಕಾರವಾರ/ಮೈಸೂರು: ಪ್ರತ್ಯೇಕ ಕಡೆಗಳಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ (Cow Smuggling) ವಾಹನಗಳ ಮೇಲೆ ಪೊಲೀಸರು ದಾಳಿ, ರಾಸುಗಳನ್ನು ರಕ್ಷಣೆ ಮಾಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಮಾಸ್ತಿಕಟ್ಟಾ ಸರ್ಕಲ್ ಬಳಿ ಕಂಟೇನರ್‌ನಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಾಟಕ್ಕೆ ಯತ್ನಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಕಿತ್ತೂರಿನಿಂದ ಭಟ್ಕಳಕ್ಕೆ ಕಂಟೇನರ್‌ ಮೂಲಕ ಜಾನುವಾರಗಳನ್ನು ಸಾಗಾಟಕ್ಕೆ ತೆರಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು 23 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಮಂಡ್ಯ ಮೂಲದ ಚಾಲಕ ಸೈಯ್ಯದ್ ಇಸ್ಮಾಯಿಲ್, ಹಾಸನ ಜಿಲ್ಲೆಯ ಹೊಳೆನರಸೀಪುರದ ಮಹಮ್ಮದ್ ಅತೀಕ್, ಇರ್ಫಾನ್ ಬಂಧಿತರು. ಜಾನುವಾರು ಸಾಗಾಟ ಸಂಬಂಧ ಭಟ್ಕಳದ ಮದೀನಾ ಕಾಲೋನಿಯ ಶಾಯ್ ನೂರ್, ಅವುಫ್ ಅಬು ಅಹ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಿಲ್ಕ್‌ ಟ್ಯಾಂಕ್‌ನಲ್ಲಿದ್ದ ಗೋವು!

ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳ ರಕ್ಷಣೆ ಮಾಡಲಾಗಿದೆ. ಮೈಸೂರಿನಲ್ಲಿ ಹುಣಸೂರು ಪೊಲೀಸರು ಕಾರ್ಯಾಚರಣೆ ನಡೆಸಿದರು. ಜಾನುವಾರುಗಳನ್ನು ಕೂಡಿ ಹಾಕಿದ್ದ ಗೋಡೌನ್ ಮೇಲೆ ಮಧ್ಯರಾತ್ರಿ ವೇಳೆ ದಾಳಿ ಮಾಡಿದಾಗ ಒಂದು ಮಿಲ್ಕ್ ವ್ಯಾನ್ ಸೇರಿದಂತೆ ಮೂರು ಗೂಡ್ಸ್ ವಾಹನಗಳಲ್ಲಿ ತುಂಬಿದ್ದ 49 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಹುಣಸೂರು ತಾಲೂಕಿನ ರತ್ನಪುರಿಯ ಅಲ್ತಾಫ್, ಶಾಬುದ್ದೀನ್ ಎಂಬುವವರಿಗೆ ಸೇರಿದ ಮನೆ ಪಕ್ಕದ ಗೋಡೌನ್‌ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

ಯಾದಗಿರಿ: ಕಸಾಯಿ ಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ (Cow Smugling) ವಾಹನವನ್ನು ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿದಿದ್ದಾರೆ. ಆ ವಾಹನದಲ್ಲಿ ನಿರ್ದಯವಾಗಿ ಹಾಕಲಾಗಿದ್ದ 7 ಗೋವುಗಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುವವರರ ಬಗ್ಗೆ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಲಾಗಿದ್ದು ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ವರ್ಕನಳ್ಳಿ ಬಳಿ ವಾಹನ ತಡೆದು ಗೋವುಗಳ ರಕ್ಷಣೆ ಮಾಡಲಾಗಿದೆ. ಮಸ್ಕನಳ್ಳಿ ಗ್ರಾಮದಿಂದ ಕಲಬುರಗಿಗೆ ವಾಹನದಲ್ಲಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

ಯಾವುದೇ ಅನುಮತಿಯಿಲ್ಲದೇ ಹಾಗೂ ನಿರ್ದಾಕ್ಷಿಣ್ಯ ರೀತಿಯಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಮಾಹಿತಿಯನ್ನು ಸ್ಥಳೀಯರು ಬಜರಂಗದಳ ಕಾರ್ಯಕರ್ತರಿಗೆ ನೀಡಿದ್ದರು. ತಕ್ಷಣ ಗೋ ಸಾಗಾಟದ ವಾಹನವನ್ನು ಬೆನ್ನಟ್ಟಿ ತಡೆದು ಬಜರಂಗದಳ ಕಾರ್ಯಕರ್ತರು ಅವುಗಳನ್ನು ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ನೀಡಿದ್ದಾರೆ. ಸಾಧಾರಣಾ ಟಾಟಾ ಸುಮೋ ವಾಹನದಲ್ಲಿ 7 ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಕಾರಣ ಅವರುಗಳೆಲ್ಲೂ ಗಂಭೀರ ಸ್ಥಿತಿಯಲ್ಲಿದ್ದವು. ಗೋವುಗಳನ್ನು ರಕ್ಷಿಸಿ ವಾಹನ ಸಹಿತ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಇದೇ ವೇಳೆ ಕಾರ್ಯಕರ್ತರು ಆರೋಪಿಸಿದ್ದಾರೆ. ಬಕ್ರಿದ್ ಹಬ್ಬಕ್ಕೆ ಅತೀ ಹೆಚ್ಚು ಗೋವು ಸಾಗಾಣಿಕೆ ಆಗ್ತಿವೆ. ಇದರಿಂದ ಸ್ಥಳೀಯವಾಗಿ ಸಮಸ್ಯೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಿರುಪದ್ರವಿ ಗೋವುಗಳನ್ನು ತೆಗೆದುಕೊಂಡು ಹೋಗಿ ಮಾಂಸಕ್ಕಾಗಿ ಕಡಿಯಲಾಗಿತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಗೋವಿನ ರಕ್ಷಣೆ ಮಾಡಬೇಕೆಂದು ಬಜರಂಗದಳ ಮುಖಂಡ ಶಿವಕುಮಾರ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

Family Fighting : ಜಮೀನಿನ ವಿಚಾರದಲ್ಲಿ (Family Dispute) ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಕುಡುಗೋಲು, ದೊಣ್ಣೆ ಹಿಡಿದು ಬಡಿದಾಡಿಕೊಂಡಿದ್ದಾರೆ. ಗುಂಡಾಗಳನ್ನು ಕರೆಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ.

VISTARANEWS.COM


on

By

Family Fighting in Belgavi
Koo

ಬೆಳಗಾವಿ: ವಿವಾದಾತ್ಮಕ ಜಮೀನಿನ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ (Family Fighting) ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಜಮೀನಿನಲ್ಲೇ ಎರಡು ಗುಂಪುಗಳು ಕುಡುಗೋಲು, ದೊಣ್ಣೆ ಹಿಡಿದು ಹೊಡೆದಾಡಿಕೊಂಡಿದ್ದಾರೆ.

ಬಡಿದಾಟದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆಯಲ್ಲಿ 7 ಜನರಿಗೆ ಗಂಭೀರ ‌ಗಾಯವಾಗಿದ್ದು, ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಕತಿ ನಿವಾಸಿ ಅನಿಲ್ ಮುಂಗಾರಿ ಸೇರಿ 7 ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಕೃಷಿಯಲ್ಲಿ ತೊಡಗಿದ್ದ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಕಾಕತಿ ನಿವಾಸಿ ಸಿದ್ದರಾಯಿ ತುಂಬರಿ ಎಂಬಾತ ಗುಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅನಿಲ್ ಮುಂಗಾರಿಗೆ ಸೇರಿದ ಜಮೀನು ಲಪಟಾಯಿಸಲು ಸಿದ್ದರಾಯಿ ತುಂಬರಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗಿದೆ.

ಕೋರ್ಟ್‌ ವಿಚಾರಣೆಯಲ್ಲಿರುವ ಜಮೀನು ಬಿಟ್ಟುಕೊಡುವಂತೆ ಸಿದ್ದರಾಯಿ ತುಂಬರಿ ಬೇಡಿಕೆ ಇಟ್ಟಿದ್ದು, ಇದಕ್ಕೆ ಒಪ್ಪದಾಗ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಗುಂಡಾಗಳನ್ನು ಕರೆಯಿಸಿ ಹಲ್ಲೆ ನಡೆಸಿದ್ದಾನೆ. ಸದ್ಯ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Chikkalluru Siddappaji Temple : ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ

ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

ಚಿಕ್ಕೋಡಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ (Assault Case) ನಡೆದಿತ್ತು. ಘಟನೆಯಲ್ಲಿ ಗಾಯಗೊಂಡ ತಂದೆಯನ್ನು ಕಾಪಾಡಲು ಸದಲಗಾ ಸರ್ಕಾರಿ ಆಸ್ಪತ್ರೆಯಿಂದ ಚಿಕ್ಕೋಡಿವರೆಗೂ ಮಗನೇ ಸರ್ಕಾರಿ ಆಂಬ್ಯುಲೆನ್ಸ್‌ ಓಡಿಸಿಕೊಂಡು ಬಂದಿದ್ದಾನೆ.

ಸದಲಗಾ ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್‌ನಲ್ಲಿ ಚಾಲಕ ಇಲ್ಲದ ಹಿನ್ನೆಲೆಯಲ್ಲಿ ಯುವಕನೇ ಆಂಬ್ಯುಲೆನ್ಸ್‌ ಚಲಾಯಿಸಿಕೊಂಡು ಬಂದು ತಂದೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಇದು ಹಾಳಾದ ಆರೋಗ್ಯ ಇಲಾಖೆ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜನವಾಡ ಗ್ರಾಮದ ಸಿದ್ದು ಪೂಜಾರಿಗೆ ಆತನ ಪತ್ನಿ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಲ್ಲೆಯಲ್ಲಿ ಸಿದ್ದು ಪೂಜಾರಿ ಕಿವಿ ಕಟ್ ಆಗಿತ್ತು, ಜತೆಗೆ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಗಾಯಗೊಂಡ ತಂದೆಯನ್ನು ಕೂಡಲೇ ಬೈಕ್ ಮೇಲೆ ಕೂರಿಸಿಕೊಂಡ ಮಗ ಮಾಳು ಪೂಜಾರಿ ಸದಲಗಾ ಸರ್ಕಾರಿ ಕರೆದುಕೊಂಡು ಹೋಗಿದ್ದ.

ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಆಂಬ್ಯುಲೆನ್ಸ್‌ ಕೊಡಿ ಎಂದಿದ್ದಕ್ಕೆ ಆಸ್ಪತ್ರೆ ವೈದ್ಯರು ಚಾಲಕ ಇಲ್ಲ, ನೀವೇ ಆಂಬ್ಯುಲೆನ್ಸ್‌ ತೆದುಕೊಂಡು ಹೋಗಿ ಎಂದಿದ್ದಾರೆ. ಹೀಗಾಗಿ ಮಾಳು ಪೂಜಾರಿ ಗಾಯಾಳು ತಂದೆಯನ್ನು ಸರ್ಕಾರಿ ಆಂಬ್ಯುಲೆನ್ಸ್‌ ವಾಹನವನ್ನು ತಾನೇ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ದಾಖಲು ಮಾಡಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಪತ್ನಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Valmiki Corporation Scam: ಪತಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಾಗಿನಿಂದ ಸರಿಯಾಗಿ ಊಟ ಸೇವಿಸದ ಹಿನ್ನೆಲೆಯಲ್ಲಿ ಅಸ್ವಸ್ಥರಾದ ಪತ್ನಿ ಕವಿತಾ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Valmiki Corporation Scam
Koo

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation Scam) ಮೃತ ಅಧೀಕ್ಷಕ ಚಂದ್ರಶೇಖರನ್ ಅವರ ಪತ್ನಿ ಕವಿತಾ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ಪತಿ ಆತ್ಮಹತ್ಯೆ ಮಾಡಿಕೊಂಡಾಗಿನಿಂದ ಸರಿಯಾಗಿ ಊಟ ಸೇವಿಸದ ಹಿನ್ನೆಲೆಯಲ್ಲಿ ಅಸ್ವಸ್ಥರಾದ ಕವಿತಾ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಡನ ಸಾವಿಗೆ ನ್ಯಾಯ ಸಿಗಬೇಕು

ಆಸ್ಪತ್ರೆಗೆ ದಾಖಲಾಗುವ ಮುನ್ನ ಮೃತ ಚಂದ್ರಶೇಖರ್ ಪತ್ನಿ ಕವಿತಾ ಮಾತನಾಡಿ, ನನ್ನ ಗಂಡನ ಸಾವಿಗೆ ನ್ಯಾಯ ಸಿಗಬೇಕು, ಗಂಡನ ಆತ್ಮಕ್ಕೆ ಶಾಂತಿ ಸಿಗಬೇಕು. ಕಚೇರಿಯಲ್ಲಿ ನಡೆದಿರುವ ಸತ್ಯ ಹೊರಬರಬೇಕು. ನಮಗೆ ನ್ಯಾಯ ಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೆಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

ನ್ಯಾಯ ಕೊಡಿಸುತ್ತೇವೆ ಎಂದು ಎಲ್ಲಾ ನಾಯಕರು ಹೇಳಿದ್ದಾರೆ. ನಿಗಮದ ಅಧಿಕಾರಿಗಳ ಬಂಧನ ಆಗಿದೆ ಅಷ್ಟೇ, ಅವರಿಗೆ ಶಿಕ್ಷೆ ಆಗಬೇಕು. ಬ್ಯಾಂಕಿನ ಅಧಿಕಾರಿ ಅರೆಸ್ಟ್ ಆಗಿಲ್ಲ. ಒಬ್ಬ ಹೆಣ್ಣು ಮಗಳ ಗೋಳು ಗೊತ್ತಾಗಬೇಕಾದರೆ ಬ್ಯಾಂಕ್‌ ಅಧಿಕಾರಿ ಬಂಧನವಾಗಬೇಕು. ಯಾವ ತನಿಖೆ ಆಗಲಿ, ಸತ್ಯ ಹೊರಬರಬೇಕು ಎಂದು ತಿಳಿಸಿದರು.

ಆಫೀಸ್‌ನಲ್ಲಿ ಏನು ನಡೆದಿದೆ ಎಲ್ಲವೂ ಹೊರ ಬರಬೇಕು. ನನ್ನ ಗಂಡನಿಗೆ ಒತ್ತಡ ಹಾಕಿದ್ದಾರೆ. ಈ ಪ್ರಕರಣ ಸಾಕಷ್ಟು ಜನ ಇದ್ದಾರೆ, ಅದೆಲ್ಲಾ ತನಿಖೆಯಿಂದ ಹೊರ ಬರಬೇಕು. ಸಿಎಂಗೆ ಕೇಳೋದು ಒಂದೇ ಒಂದು, ಗಂಡನ ಸಾವಿಗೆ ನ್ಯಾಯ ಸಿಗಬೇಕು. ನಮಗೆ ಮುಂದಿನ ಜೀವನದ ದಾರಿ ಕಾಣುತ್ತಿಲ್ಲ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕಾದ ಸಂದರ್ಭದಲ್ಲಿ ಹೀಗೆ ಆಯ್ತು, ಸರ್ಕಾರ ನಮ್ಮ ಬಗ್ಗೆ ಗಮನ ಹರಿಸುತ್ತೋ ಇಲ್ವೋ ಗೊತ್ತಿಲ್ಲ. ಯಾವುದಾದರೂ ಸರಿ, ಗಂಡನ ಸಾವಿಗೆ ನ್ಯಾಯ ಸಿಗಬೇಕು. ಬಂಧಿತರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ (Valmiki Corporation Scam) ಸಚಿವ ಬಿ.ನಾಗೇಂದ್ರ ತಲೆ ದಂಡಕ್ಕೆ ಒತ್ತಾಯಗಳು ಕೇಳಿಬರುತ್ತಿವೆ. ಹೀಗಾಗಿ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ, ಎಸ್‌ಐಟಿ ವರದಿ ಬಳಿಕವೂ ಕೇಸ್‌ನಲ್ಲಿ ಸಿಬಿಐ ಎಂಟ್ರಿ ಬಹುತೇಕ ಫೀಕ್ಸ್ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಎಂಟ್ರಿ ಸಾಧ್ಯತೆ ಇದ್ದು, ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯೂ ಇಂಬು ನೀಡಿದೆ. ಇನ್ನು ಪ್ರಕರಣದಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಸಚಿವ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ, ಡಿಸಿಎಂಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ, ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿತ್ತು. 50 ಕೋಟಿ ಅಧಿಕ ಹಣ ಅಕ್ರಮವಾಗಿದ್ದರೆ ಬ್ಯಾಂಕ್ ಅಧಿಕಾರಿಗಳು ದೂರು ನೀಡಬೇಕು ಎಂಬ ಕೇಂದ್ರ ಹಣಕಾಸು ಸಚಿವಾಲಯದ ಸುತ್ತೋಲೆ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ದೂರು ಮನವಿ ಪತ್ರ ಸಲ್ಲಿಸಿದೆ. ಹಾಗಾಗಿ ಪ್ರಕರಣದಲ್ಲಿ ಬಹುತೇಕ ಸಿಬಿಐ ಎಂಟ್ರಿಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ | ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಆತ್ಮಹತ್ಯೆ, 87 ಕೋಟಿ ರೂ. ಹಗರಣ; ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಪ್ರಕರಣದ ಮಾಹಿತಿ ಪಡೆದ ಮಲ್ಲಿಕಾರ್ಜುನ ಖರ್ಗೆ

ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮದ ಹಣ ತೆಲಂಗಾಣಕ್ಕೆ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕರಣದ ಬಗ್ಗೆ ತೆಲಂಗಾಣ ಸಿಎಂ ಬಳಿ ಮಾಹಿತಿ ಪಡೆದಿದ್ದಾರೆ. ಇನ್ನು ಪ್ರಕರಣದ ಪ್ರಕರಣದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ನಾಗೇಂದ್ರ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸಿಎಂ, ಡಿಸಿಎಂಗೆ ಖರ್ಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷರಿಂದ ಕೂಡ ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡಲಾಗಿದೆ.ಇದು ಪಕ್ಷ ಮತ್ತು ಸರ್ಕಾರಕ್ಕೆ ಡ್ಯಾಮೇಜ್. ಮೊದಲು ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಳ್ಳಿ. ತನಿಖೆಯಲ್ಲಿ ತಪ್ಪಿತಸ್ಥರಲ್ಲ ಅಂತ ಸಾಬೀತಾದ್ರೆ ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸಿಬಿಐ ತನಿಖೆ ಬಗ್ಗೆ ಡಿಕೆಶಿ ಏನು ಹೇಳಿದರು?

ವಾಲ್ಮೀಕಿ ನಿಗಮ ಹಗರಣದ ತನಿಖೆಗೆ ಯೂನಿಯನ್ ಬ್ಯಾಂಕ್ ಪತ್ರ ಬರೆದ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯಿಸಿ, ಪತ್ರ ಬರೆಯಲಿ, ತಪ್ಪಿಲ್ಲ. ಅದಕ್ಕೆ ಒಂದು ವಿಧಾನ ಇದೆ. ಇಷ್ಟು ಕೋಟಿ ಅಕ್ರಮ ಇದ್ದಾಗ ನಾನು ಕೊಟ್ಟರೂ ಅಥವಾ ನೀವು ಕೊಡದೇ ಇದ್ದರೂ ಅದು ಸಿಬಿಐ ತನಿಖೆಗೆ ಹೋಗುತ್ತೆ. ನಮಗೆ ಗೊತ್ತಿಲ್ಲ ಅಂತ ತಿಳಿದುಕೊಳ್ಳಬೇಡಿ. ಯಾವುದಾದರೂ ಬ್ಯಾಂಕ್‌ನಲ್ಲಿ ಈ ರೀತಿಯಾದರೆ ಯಾವ ಸರ್ಕಾರವೂ ತನಿಖೆಗೆ ಕೊಡಬೇಕು ಅಂತಿಲ್ಲ. ಅವರು ತಗೋಬೇಕು ಅಂತೇನು ಇಲ್ಲ. ನ್ಯಾಚುರಲ್ ಆಗಿ ಅದು ಸಿಬಿಐ ತನಿಖೆಗೆ ಹೋಗುತ್ತೆ. ನಾವು ತನಿಖೆಗೆ ಸಹಕರಿಸುತ್ತೇವೆ, ರಾಜಕೀಯ ಇಲ್ಲದೇ ತನಿಖೆ ನಡೆಸಲಿ. ಸದ್ಯಕ್ಕೆ ಸಿಬಿಐ ಬರುವ ಸಂದರ್ಭ ಇಲ್ಲ, ನಾವೇ ತನಿಖೆ ಮಾಡ್ತೀವಿ ಎಂದು ಹೇಳಿದ್ದಾರೆ.

ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು. ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ. ಹೀಗಾಗಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

Bhavani Revanna: ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ತನಿಖೆಗೆ ತಾನು ಲಭ್ಯ ಇರುತ್ತೇನೆ ಎಂದು ತಿಳಿಸಿದ್ದ ಭವಾನಿ, ಮಧ್ಯಾಹ್ನ ಎರಡು ಗಂಟೆಯಾದರೂ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆಗಾಗಿ ಬಂದ ಎಸ್‌ಐಟಿ ಅಧಿಕಾರಿಗಳು ಮನೆಯ ಆವರಣದಲ್ಲೇ ಜೀಪ್‌ನಲ್ಲಿ ಕಾದು ಕುಳಿತರು.

VISTARANEWS.COM


on

bhavani revanna SIT team
Koo

ಹಾಸನ: ಕೆ.ಆರ್‌ ನಗರದ ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಕೇಸಿನಲ್ಲಿ (kidnap Case) ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Revanna) ಅವರ ವಿಚಾರಣೆಗಾಗಿ ಹೊಳೆನರಸೀಪುರದ (Holenarasipura) ಅವರ ಮನೆಗೆ ಆಗಮಿಸಿರುವ ಎಸ್‌ಐಟಿ (SIT) ಟೀಮ್‌, ಭವಾನಿ ಅವರ ದರ್ಶನಕ್ಕಾಗಿ ಬೆಳಗಿನಿಂದ ಕಾದು ಕುಳಿತಿತು. ಆದರೆ ಭವಾನಿ ಅವರು ಮನೆಯಲ್ಲಿಲ್ಲ, ಎಲ್ಲಿ ಹೋಗಿದ್ದಾರೆ ಎಂಬ ಸುಳಿವನ್ನೂ ನೀಡಿಲ್ಲ.

ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ತನಿಖೆಗೆ ತಾನು ಲಭ್ಯ ಇರುತ್ತೇನೆ ಎಂದು ತಿಳಿಸಿದ್ದ ಭವಾನಿ, ಮಧ್ಯಾಹ್ನ ಎರಡು ಗಂಟೆಯಾದರೂ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆಗಾಗಿ ಬಂದ ಎಸ್‌ಐಟಿ ಅಧಿಕಾರಿಗಳು ಮನೆಯ ಆವರಣದಲ್ಲೇ ಜೀಪ್‌ನಲ್ಲಿ ಕಾದು ಕುಳಿತರು. ಮನೆಯ ನೆಲಮಾಳಿಗೆಯಲ್ಲಿ ಭವಾನಿ ಅವರ ʼಒಂದು ಕೋಟಿ ರೂಪಾಯಿʼ ಬೆಲೆಯ ಕಾರು ನಿಂತಿದ್ದು, ಕಾರನ್ನು ಮನೆಯಲ್ಲೇ ಬಿಟ್ಟು ಭವಾನಿ ತೆರಳಿದ್ದಾರೆ. KA-05-AL-8055 (BOSS) ನಂಬರ್‌ನ ಕಿಯಾ ಕಾರ್ನಿವಲ್ ಕಾರನ್ನು ಮನೆಯ ನೆಲಮಾಳಿಗೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ಕಾರಿನ ಪಕ್ಕದಲ್ಲೇ ನಿಲ್ಲಿಸಲಾಗಿದೆ.

ನಿನ್ನೆ ಕಿಡ್ನಾಪ್‌ ಕೇಸ್‌ನಲ್ಲಿ ಭವಾನಿ ಅವರ ಜಾಮೀನು ಅರ್ಜಿ ವಜಾ ಆಗಿತ್ತು. ಹೀಗಾಗಿ ಇವತ್ತೋ ನಾಳೆಯೋ ಭವಾನಿ ಬಂಧನ ಆಗುವುದು ಖಚಿತವಾಗಿದೆ. ಹೀಗಾಗಿ ಎಸ್‌ಐಟಿ ಮುಂದೆ ಬಾರದೆ ತಪ್ಪಿಸಿಕೊಂಡಿದ್ದಾರೆ. ಬಂಧನ ಭೀತಿಯಿಂದ ವಿಚಾರಣೆಗೆ ಗೈರುಹಾಜರಾಗಿದ್ದಾರೆ ಎಂದು ಭಾವಿಸಲಾಗಿದೆ. ಭವಾನಿ ಅವರ ಬರವಿಗಾಗಿ ಸಂಜೆ 5 ಗಂಟೆಯವರೆಗೂ ಎಸ್‌ಐಟಿ ತಂಡ ಕಾಯಲಿದೆ ಎಂದು ತಿಳಿದುಬಂದಿದೆ.

ಕಿಡ್ನಾಪ್ ಆರೋಪ ಪ್ರಕರಣದಲ್ಲಿ ತಮ್ಮ ತನಿಖೆ ಅವಶ್ಯಕತೆ ಇದ್ದು, ತನಿಖೆಗೆ ಸಹಕರಿಸಬೇಕಾಗಿ ಎಸ್‌ಐಟಿ ಹೇಳಿತ್ತು. ತನಿಖೆಗೆ ಹೊಳೆನರಸೀಪುರದ ನಿವಾಸದಲ್ಲಿ ತಾವು ಲಭ್ಯವಿರುವುದಾಗಿ ಮೇ 15ರಂದು ಎಸ್ಐಟಿಗೆ ಭವಾನಿ ಲಿಖಿತ ಪತ್ರ ನೀಡಿದ್ದರು. ಭವಾನಿ ಅವರ ಪತ್ರವನ್ನೇ ಉಲ್ಲೇಖಿಸಿ ನಿನ್ನೆ ಎಸ್‌ಐಟಿ ನೋಟೀಸ್ ನೀಡಿತ್ತು. ಪ್ರಕರಣ ಸಂಬಂಧ ತಮ್ಮ ವಿಚಾರಣೆ ಅಗತ್ಯ ಇದೆ, ಹಾಗಾಗಿ ಜೂನ್ 1ರಂದು ವಿಚಾರಣೆಗೆ ಬರುವುದಾಗಿ ತಿಳಿಸಿತ್ತು. ಜೂನ್ 1ರ ಶನಿವಾರ ಮಹಿಳಾ ಅಧಿಕಾರಿ ಜೊತೆ ಹೊಳೆನರಸೀಪುರದ ಚನ್ನಾಂಬಿಕ ನಿವಾಸಕ್ಕೆ ತಾವು ಬರುವುದಾಗಿ ಎಸ್‌ಐಟಿ ಮುಖ್ಯಸ್ಥ ಹೇಮಂತ್‌ ಕುಮಾರ್‌ ತಿಳಿಸಿದ್ದರು. ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ನಡುವೆ ನೀವು ತಿಳಿಸಿದ ವಿಳಾಸಕ್ಕೆ ಬರುತ್ತೇವೆ. ಈ ಸಮಯದಲ್ಲಿ ನೀವು ಖುದ್ದು ಹಾಜರಿರಬೇಕು ಎಂದು ಸೂಚಿಸಿದ್ದರು.

ಭವಾನಿ ರೇವಣ್ಣ ಅವರಿಗೆ ಕ್ಯಾನ್ಸರ್‌ (Cancer) ಇದೆ. ಚಿಕಿತ್ಸೆ ಪಡೆಯಲು ನಿರೀಕ್ಷಣಾ ಜಾಮೀನು ನೀಡಬೇಕೆಂದು ಭವಾನಿ ಪರ ವಕೀಲರು ಕೋರ್ಟ್‌ನಲ್ಲಿ (Bengaluru Court) ವಾದ ಮಾಡಿದ್ದರು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್‌ ಮಾಡಿದ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಬಂಧನ ಭೀತಿಯಿಂದ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದಲ್ಲಿ ದಾಖಲಾಗಿದ್ದ IPC ಸೆಕ್ಷನ್ 120ಬಿ ಕ್ರಿಮಿನಲ್ ಕಾನ್ಸ್‌ಪಿರೆಸಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೊರ್ಟ್, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.

ನಿನ್ನೆ ಅವರ ಪುತ್ರ, ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಪೊಲೀಸ್‌ ಕಸ್ಟಡಿಗೆ ಕೋರ್ಟ್‌ ನೀಡಿದೆ. ಪ್ರಜ್ವಲ್‌ ಅವರ ವೈದ್ಯಕೀಯ ತಪಾಸಣೆ ಕೂಡ ನಡೆಸಲಾಗಿದೆ. ಪ್ರಜ್ವಲ್‌ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲು ಎಸ್‌ಐಟಿ ಮುಂದಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

Continue Reading
Advertisement
Cow Smuggling
ಕ್ರೈಂ14 mins ago

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Gautam Gambhir
ಕ್ರೀಡೆ37 mins ago

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Rameshwaram Cafe food on Anant Ambani, Radhika Merchant
ಸಿನಿಮಾ40 mins ago

Rameshwaram Cafe: ಅನಂತ್ ಅಂಬಾನಿ ಎರಡನೇ ಪ್ರಿ ವೆಡ್ಡಿಂಗ್‌ನಲ್ಲಿ ಮೇನ್‌ ಮೆನು ರಾಮೇಶ್ವರಂ ಕೆಫೆಯ ಪುಡಿ ಇಡ್ಲಿ ಮತ್ತು ಪುಡಿ ದೋಸೆ!

Family Fighting in Belgavi
ಬೆಳಗಾವಿ43 mins ago

Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

Valmiki Corporation Scam
ಕರ್ನಾಟಕ44 mins ago

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಪತ್ನಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

prashant kishor
ಪ್ರಮುಖ ಸುದ್ದಿ46 mins ago

Lok Sabha Election 2024: ಈಗಲೂ ಹೇಳ್ತೇನೆ ಕೇಳಿ, ಬಿಜೆಪಿಯೇ ಗೆಲ್ಲೋದು! ಎಕ್ಸಿಟ್ ಪೋಲ್‌ಗೆ ಮೊದಲು ಪ್ರಶಾಂತ್ ಕಿಶೋರ್ ಫೈನಲ್ ಲೆಕ್ಕಾಚಾರ ಹೀಗಿದೆ!

IndiGo Flight
ದೇಶ49 mins ago

IndiGo Flight: ಮತ್ತೊಂದು ಹುಸಿ ಬಾಂಬ್‌ ಕರೆ; ಮುಂಬೈಯಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್‌

bhavani revanna SIT team
ಪ್ರಮುಖ ಸುದ್ದಿ1 hour ago

Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

Valmiki Corporation Scam
ಪ್ರಮುಖ ಸುದ್ದಿ1 hour ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

Assault Case
ಬೆಳಗಾವಿ2 hours ago

Assault Case : ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌