Bilkis Bano: ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳಿಗೆ ಜೈಲೇ ಗತಿ; ಗುಜರಾತ್‌ ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ - Vistara News

ದೇಶ

Bilkis Bano: ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳಿಗೆ ಜೈಲೇ ಗತಿ; ಗುಜರಾತ್‌ ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ

Bilkis Bano: ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್‌ ಬಾನೊ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಇವರು ಸಲ್ಲಿಸಿದ ಅರ್ಜಿಯು ವಿಚಾರಣೆಗೆ ಅರ್ಹ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

VISTARANEWS.COM


on

Supreme Court On Bilkis Bano Convicts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2002ರಲ್ಲಿ ಗುಜರಾತ್‌ನಲ್ಲಿ ನಡೆದ ಗುಜರಾತ್‌ ಹತ್ಯಾಕಾಂಡದ ವೇಳೆ ಬಿಲ್ಕಿಸ್‌ ಬಾನೊ (Bilkis Bano Case) ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಅಪರಾಧಿಗಳನ್ನು ಬಿಡುಗಡೆಗೊಳಿಸಿದ್ದ ಗುಜರಾತ್‌ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಅತ್ಯಾಚಾರ ಎಸಗಿದ 11 ಅಪರಾಧಿಗಳ (Bilkis Bano Convicts) ಬಿಡುಗಡೆಗೊಳಿಸಿದ್ದ ಗುಜರಾತ್‌ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ (Supreme Court) ಸೋಮವಾರ (ಜನವರಿ 8) ರದ್ದುಗೊಳಿಸಿದೆ. ಹಾಗಾಗಿ, ಕ್ಷಮಾದಾನದ ಆಧಾರದ ಮೇಲೆ ಬಿಡುಗಡೆಯಾಗಿದ್ದ 11 ಅಪರಾಧಿಗಳಿಗೆ ಈಗ ಜೈಲೇ ಗತಿಯಾಗಿದೆ.

ಸನ್ನಡತೆ ಆಧಾರದ ಮೇಲೆ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರ್ಕಾರದ ಆದೇಶ ಪ್ರಶ್ನಿಸಿ ಬಿಲ್ಕಿಸ್‌ ಬಾನೊ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ತೀರ್ಪು ಕಾಯ್ದಿರಿಸಿತ್ತು. ಈಗ ಗುಜರಾತ್‌ ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ. “ಅತ್ಯಾಚಾರದ ಅಪರಾಧಿಗಳಿಗೆ ಕ್ಷಮಾದಾನ ನೀಡುವ ವಿಧಾನದಲ್ಲಿ ಗುಜರಾತ್‌ ಸರ್ಕಾರ ಸಮರ್ಪಕವಾಗಿ ನಿಯಮ ಪಾಲಿಸಿಲ್ಲ. ಬಿಲ್ಕಿಸ್‌ ಬಾನೊ ಸಲ್ಲಿಸಿದ ಅರ್ಜಿಯು ವಿಚಾರಣೆಗೆ ಅರ್ಹವಾಗಿದೆ. ಹಾಗಾಗಿ, ಗುಜರಾತ್‌ ಸರ್ಕಾರದ ಆದೇಶವನ್ನು ರದ್ದುಗೊಳಿಸಲಾಗುತ್ತಿದೆ” ಎಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ.

ಎರಡು ವಾರದಲ್ಲಿ ಶರಣಾಗಿ

ಸನ್ನಡತೆ ಆಧಾರದ ಮೇಲೆ ಬಿಡುಗಡೆಯಾಗಿರುವ 11 ಅಪರಾಧಿಗಳು ಎರಡು ವಾರದಲ್ಲಿ ಶರಣಾಗಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚಿಸಿದೆ. “ಬಿಡುಗಡೆಯಾಗಿರುವವರು ಕಾನೂನಿಗೆ ಗೌರವ ನೀಡಬೇಕು. ಅವರು 2 ವಾರದೊಳಗೆ ಮತ್ತೆ ಜೈಲು ಸೇರಬೇಕು” ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಏನಿದು ‘ಬಿಡುಗಡೆ’ ಪ್ರಕರಣ?

ಬಿಲ್ಕಿಸ್‌ ಬಾನೊ ಮೇಲೆ ಅತ್ಯಾಚಾರ, ಅವರ ಮಗಳು ಸೇರಿ ಏಳು ಕುಟುಂಬಸ್ಥರ ಹತ್ಯೆ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರವು 1992ರ ನೀತಿ ಅನ್ವಯ 2022ರ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿತ್ತು. ಹಾಗಾಗಿ, ಗುಜರಾತ್‌ ಸರ್ಕಾರದ ತೀರ್ಮಾನದ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಗುಜರಾತ್‌ ಸರ್ಕಾರದ ಕ್ರಮ ಪ್ರಶ್ನಿಸಿ ಬಿಲ್ಕಿಸ್‌ ಬಾನೊ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಇವರ ಪರ ವಕೀಲೆ ಶೋಭಾ ಗುಪ್ತಾ ಅವರು ನವೆಂಬರ್‌ 30ರಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಅವರ ಎದುರು ಅರ್ಜಿ ಪ್ರಸ್ತಾಪಿಸಿದ್ದರು. ಬಳಿಕ ವಿಚಾರಣೆ ನಡೆಸಿದ್ದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿತ್ತು.

Supreme Court On Bilkis Bano Case
Supreme Court On Bilkis Bano Case

2002ರಲ್ಲೇನಾಯಿತು?
2002ನೇ ಇಸ್ವಿಯ ಫೆಬ್ರವರಿ 27ರಂದು ಗುಜರಾತ್​​ನಲ್ಲಿ ಸಾಬರಮತಿ ಎಕ್ಸ್​ಪ್ರೆಸ್​ ರೈಲಿಗೆ ಗೋದ್ರಾ ರೈಲು ನಿಲ್ದಾಣದಲ್ಲಿ ಬೆಂಕಿ ಹಚ್ಚಲಾಗಿತ್ತು. ಇದರಲ್ಲಿ 59 ಕರಸೇವಕರು ಸಜೀವದಹನಗೊಂಡಿದ್ದರು. ಇವರೆಲ್ಲ ಉತ್ತರ ಪ್ರದೇಶದ ಅಯೋಧ್ಯೆಯಿಂದ ಬರುತ್ತಿದ್ದರು. ಗೋದ್ರಾದಲ್ಲಿ ಗಲಾಟೆ-ಹಿಂಸಾಚಾರ ಹೆಚ್ಚಾದ ಬೆನ್ನಲ್ಲೇ ಅಲ್ಲಿನ ಅನೇಕರು ಊರು ತೊರೆಯಲು ಪ್ರಾರಂಭ ಮಾಡಿದರು. ಅಂತೆಯೇ 20 ವರ್ಷದ ಬಿಲ್ಕಿಸ್​ ಬಾನೊ ಕೂಡ ಮಾರ್ಚ್​ 3ರಂದು ತನ್ನ ಪತಿ, ಪುಟ್ಟ ಮಗಳು ಮತ್ತು ಕುಟುಂಬದ ಇತರ 15 ಸದಸ್ಯರೊಂದಿಗೆ ಹಳ್ಳಿಯನ್ನು ಬಿಟ್ಟು ಹೊರಡುತ್ತಿದ್ದರು. ಆಗವರು ಐದು ತಿಂಗಳ ಗರ್ಭಿಣಿ ಕೂಡ. ಆದರೆ ಅದೇ ಹೊತ್ತಲ್ಲಿ ದುರ್ದೈವ ಅವರ ಬೆನ್ನತ್ತಿತ್ತು. 20-30 ಮಂದಿ ಶಸ್ತ್ರಾಸ್ತ್ರಧಾರಿಗಳನ್ನು ಅವರನ್ನು ಮಾರ್ಗ ಮಧ್ಯೆಯೇ ತಡೆದರು. ಗರ್ಭಿಣಿ ಬಿಲ್ಕಿಸ್​ ಬಾನೊ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ, ಆಕೆಯ ಕುಟುಂಬದ ಏಳುಮಂದಿಯನ್ನು ಕೊಂದು ಹಾಕಿದರು. ಉಳಿದವರು ಬಿಲ್ಕಿಸ್​ ಬಾನೊ ಮಗಳೂ ಜೀವ ಕಳೆದುಕೊಂಡಳು. ಉಳಿದವರು ಹೇಗೋ ಪಾರಾಗಿ ಓಡಿಹೋದರು.

ಬಿಲ್ಕಿಸ್ ಬಾನೊ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಬಹುದೊಡ್ಡ ಸುದ್ದಿಯಾಯಿತು. ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಯಿತು. 2004ರಲ್ಲಿ ಸುಪ್ರೀಂಕೋರ್ಟ್​ ಈ ಕೇಸ್​​ನ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ನೀಡಿತು. 2004ರಲ್ಲಿ ಎಲ್ಲ ಆರೋಪಿಗಳೂ ಬಂಧಿತರಾದರು. ಅಹ್ಮದಾಬಾದ್​ ಕೋರ್ಟ್​​ನಲ್ಲಿ ವಿಚಾರಣೆಯೂ ಪ್ರಾರಂಭವಾಯಿತು. ಆದರೆ, ಮತ್ತೆ ಬಿಲ್ಕಿಸ್ ಬಾನೊ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿ ‘ಸಿಬಿಐನಿಂದ ಸಂಗ್ರಹಿಸಲ್ಪಟ್ಟ ಸಾಕ್ಷಿಗಳನ್ನು ತಿರುಚುವ ಸಾಧ್ಯತೆ ಇದೆ. ಪುರಾವೆಗಳು ನಾಶವಾಗುವ ಆತಂಕ ನನಗೆ ಕಾಡುತ್ತಿದೆ’ ಎಂದು ಹೇಳಿದರು. ಈ ಮೂಲಕ ಗುಜರಾತ್​​ನ ಅಹ್ಮದಾಬಾದ್​ ಕೋರ್ಟ್​ನಲ್ಲಿ ಈ ಕೇಸ್​​ನ ವಿಚಾರಣೆ ಬೇಡ ಎಂದೂ ಮನವಿ ಮಾಡಿದರು. ಹೀಗಾಗಿ 2004ರ ಆಗಸ್ಟ್​ನಲ್ಲಿ ಸುಪ್ರೀಂಕೋರ್ಟ್, ವಿಚಾರಣೆಯನ್ನು ಮುಂಬೈ ಕೋರ್ಟ್​ಗೆ ವರ್ಗಾಯಿಸಿತು.

ತಲೆಬುರುಡೆಗಳೇ ಇರಲಿಲ್ಲ !
ಆರೋಪಿಗಳು ಅರೆಸ್ಟ್ ಆಗಿದ್ದರೂ ತನಿಖೆ ಮುಂದುವರಿದಿತ್ತು. ಹತ್ಯೆಯಾದ ಏಳುಮಂದಿಯ (ಬಿಲ್ಕಿಸ್​ ಬಾನೊ ಕುಟುಂಬದವರು) ಪೋಸ್ಟ್​ಮಾರ್ಟಮ್​ ರಿಪೋರ್ಟ್​ ಸರಿಯಾಗಿಲ್ಲ. ಆರೋಪಿಗಳನ್ನು ರಕ್ಷಿಸುವ ಉದ್ದೇಶದಿಂದ ಪೋಸ್ಟ್​ ಮಾರ್ಟಮ್​​ನ್ನು ಸೂಕ್ತವಾಗಿ ನಡೆಸಲಿಲ್ಲ ಎಂದು ಸಿಬಿಐ ಅಧಿಕಾರಿಗಳು ಹೇಳಿದರು. ಅಷ್ಟೇ ಅಲ್ಲ, ಹೂಳಲಾಗಿದ್ದ ಅವರ ಮೃತದೇಹವನ್ನು ಮತ್ತೆ ಹೊರತೆಗೆಸಿದರು. ಹೀಗೆ ತೆಗೆಸಿದಾಗ ಆ ಶವಗಳಲ್ಲಿ ಒಂದಕ್ಕೂ ತಲೆ ಇರಲಿಲ್ಲ. ‘ಶವಪರೀಕ್ಷೆಯ ಬಳಿಕ ಅವುಗಳ ತಲೆ ಕತ್ತರಿಸಲಾಗಿದೆ. ಮೃತರ ಗುರುತು ಸಿಗಬಾರದು ಎಂಬ ಕಾರಣಕ್ಕೇ ಹೀಗೆ ಮಾಡಲಾಗಿದೆ. ಇಂಥ ಪ್ರಯತ್ನಗಳ ಮೂಲಕ ತನಿಖೆಯ ದಾರಿ ತಪ್ಪಿಸಿ, ಆರೋಪಿಗಳನ್ನು ಬಚಾವ್​ ಮಾಡುವ ಪ್ರಯತ್ನ ನಡೆದಿತ್ತು’ ಎಂದು ವರದಿ ಕೊಟ್ಟರು.

ಇದನ್ನೂ ಓದಿ: Bilkis Bano Case | ಅತ್ಯಾಚಾರಿಗಳ ಬಿಡುಗಡೆ ನಾಚಿಕೆಗೇಡು, ಈ ಕುರಿತು ಮೋದಿಗೆ ಮನವಿ ಮಾಡುವೆ ಎಂದ ಬಿಜೆಪಿ ನಾಯಕ

2008ರಲ್ಲಿ ಜೈಲು ಶಿಕ್ಷೆ
2004ರಿಂದ 2008ರವರೆಗೆ ಸಿಬಿಐ ನಿರಂತರವಾಗಿ ವಿಚಾರಣೆ-ತನಿಖೆ ನಡೆಸಿ, 2008ರ ಜನವರಿ 1ರಂದು ಅದಕ್ಕೊಂದು ತಾರ್ಕಿಕ ಅಂತ್ಯ ನೀಡಿತು. ಬಂಧಿತರಾಗಿದ್ದ 19 ಆರೋಪಿಗಳಲ್ಲಿ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿತು. ಸರಿಯಾದ ಸಾಕ್ಷಿ ಇಲ್ಲದ ಕಾರಣ ಏಳು ಜನರಿಗೆ ಬಿಡಗಡೆ ಭಾಗ್ಯ ದೊರೆಯಿತು. ಹಾಗೇ, ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದಾಗಲೇ ಒಬ್ಬಾತ ಮೃತಪಟ್ಟಿದ್ದ. ಬಿಲ್ಕಿಸ್​ ಬಾನೊ ಅವರಿಗೆ ಒಂದು ಮನೆ, 50 ಲಕ್ಷ ರೂಪಾಯಿ ಪರಿಹಾರ, ಅವರ ಮನೆಯಲ್ಲಿ ಒಬ್ಬರಿಗೆ ಉದ್ಯೋಗ ಕೊಡುವಂತೆ ಸುಪ್ರೀಂಕೋರ್ಟ್​ 2019ರಲ್ಲಿ ಗುಜರಾತ್ ಸರ್ಕಾರಕ್ಕೆ ಸೂಚನೆಯನ್ನೂ ನೀಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೊಡಗು

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Drugs Mafia: ಕೊಡಗು ಪೊಲೀಸರಿಂದ ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾ ಬಯಲಿಗೆ ಬಂದಿದ್ದು, ರಣರೋಚಕ ಕಾರ್ಯಾಚರಣೆ ನಡೆಸಿ ಏರ್‌ಪೋರ್ಟ್‌ನಲ್ಲಿ ಪೆಡ್ಲರ್ ಅರೆಸ್ಟ್ ಮಾಡಿದ್ದಾರೆ. ಬರೋಬ್ಬರಿ 3 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Drugs Mafia
Koo

ಕೊಡಗು: ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾಗೆ (Drugs Mafia) ಭಾರತವನ್ನೇ ಬೇಸ್ ಮಾಡ್ಕೊಂಡಿದ್ದ ಇಂಟರೆಸ್ಟಿಂಗ್ ಆ್ಯಂಡ್ ಚಾಲೆಂಜಿಂಗ್ ಪ್ರಕರಣ ಭೇದಿಸಿರುವ ಕೊಡಗು ಪೊಲೀಸರು ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ರೋಚಕ ಕಾರ್ಯಾಚರಣೆಯಲ್ಲಿ ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾವನ್ನು ಕೊಡಗು ಜಿಲ್ಲಾ ಪೊಲೀಸ್ ತಂಡ ಭೇದಿಸಿದೆ.

Drugs mafia
Drugs mafia

ಥೈಲ್ಯಾಂಡ್‌ನಲ್ಲಿ ತಯಾರಾರುವ ಹೈಡ್ರೋಪೋನಿಕ್ ಗಾಂಜಾವನ್ನು ದುಬೈಗೆ ಸಪ್ಲೆ ಮಾಡೋಕೆ ಭಾರತವನ್ನೇ ಬೇಸ್ ಮಾಡ್ಕೊಂಡಿದ್ದ ಗ್ಯಾಂಗ್‌ ಅನ್ನು ಕೊಡಗು‌ ಜಿಲ್ಲಾ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಥೈಲ್ಯಾಂಡ್‌ನಿಂದ ವಿಮಾನದ ಮೂಲಕವೇ ಭಾರತಕ್ಕೆ ಅಂದರೆ ಬೆಂಗಳೂರಿಗೆ ತಂದು, ಅಲ್ಲಿಂದ‌ ಬೆಂಗಳೂರು ನಗರ, ಕೊಡಗು,‌ ಕೇರಳದಲ್ಲಿ ಇಟ್ಟು ದುಬೈನಲ್ಲಿ ಕಸ್ಟಮರ್ ಸಿಕ್ಕಿದ್ಮೇಲೆ ಇಂಡಿಯಾದಿಂದ ದುಬೈಗೆ ವಿಮಾನದ ಮೂಲಕವೇ ಈ‌ ಗ್ಯಾಂಗ್ ಸಪ್ಲೆ ಮಾಡುತಿತ್ತು.

ಕೇರಳ ಮೂಲದ ಮಹಮ್ಮದ್ ಅನೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ಕೆಫೆ ಇಟ್ಟುಕೊಂಡಿದ್ದ. ಈತ ಕೇರಳದ ಕಾಸರಗೋಡಿನ ಮೆಹರೂಫ್, ವಿರಾಜಪೇಟೆಯ ರವೂಫ್, ನಾಸೀರುದ್ದೀನ್, ವಾಜೀದ್, ನಾಪೋಕ್ಲುವಿನ ಯಾಹಿಯಾ, ಅಕನಾಸ್, ಅಜ್ಜಲ್, ಕೇರಳದ ರಿಯಾಜ್ ಇವರೊಂದಿಗೆ ತಂಡವನ್ನು ಕಟ್ಟಿಕೊಂಡು ಅಲ್ಲಿಂದ ಹೈಡೋಪೋನಿಕ್ ರೀತಿಯಲ್ಲಿ ಬೆಳೆದಿರುವ ಗಾಂಜಾವನ್ನು ವಿಮಾನದ ಮೂಲಕ ಭಾರತ ಮತ್ತು ದುಬೈಗೆ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ.

ಅದರ ಭಾಗವಾಗಿ ಯಾಹ್ಯಾ ಎಂಬಾತ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಥೈಲ್ಯಾಂಡ್‌‌ನಿಂದ ತಂದ ಗಾಂಜಾವನ್ನು ಈ ತಂಡ ಕೊಡಗಿಗೆ ತರುತ್ತಿದ್ದರು. ಇದೇ ವೇಳೆ ಕೇರಳದ ಮೆಹರೂಫ್‌ನ ಮುಂದಿನ ನಿರ್ದೇಶನಕ್ಕಾಗಿ ಈ ತಂಡ ಕಾಯುತ್ತಿದ್ದಾಗ ಕೊಡಗು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಂತರ ಈ ಪ್ರಕರಣದ ಕಿಂಗ್ ಪಿನ್ ಮೆಹರೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್‌ಗೆ ಪರಾರಿಯಾಗಲು ಯತ್ನಿಸುತ್ತಿರುವಾಗ ಕೇರಳದ ಕೊಚ್ಚಿನ್ ಏರ್ ಪೋರ್ಟ್‌ನಲ್ಲಿ ಕೊಡಗು ಪೊಲೀಸರು ಬಂಧಿಸಿದ್ದಾರೆ.

ಈ ಮಾದಕ ವಸ್ತು ಥೈಲ್ಯಾಂಡ್ ಭಾರತ ಹಾಗೂ ದುಬೈ ವಿಮಾನ‌ ನಿಲ್ದಾಣದಲ್ಲಿ ಹೇಗೆ ಪಾಸ್ ಆಗುತ್ತಿತ್ತು ಎನ್ನುವುದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.‌ ಸದ್ಯ ಈ ಬಗ್ಗೆ ಕೂಡ ಕೊಡಗು ಪೊಲೀಸರು ತನಿಖೆಯ ಒಂದು ಭಾಗವಾಗಿ ಮಾಡೋ ಸಾಧ್ಯತೆ ಇದೆ. ಒಟ್ಟಾರೆ ಥೈಲ್ಯಾಂಡ್‌ನಿಂದ ಮಾದಕ ವಸ್ತುವನ್ನು ದುಬೈಗೆ ತಲುಪಿಸಲು ಮಾಡ್ಕೊಂಡಿದ್ದ ಭಾರತದ ಲಿಂಕ್ ಇದೀಗ ಕಟ್ ಆಗಿದೆ. ಈ ನಿಟ್ಟಿನಲ್ಲಿ ಕೊಡಗು ಪೊಲೀಸರು ಮಾಡಿರೋ ಕಾರ್ಯಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Helicopter crashed: ಪುಣೆಯ ಬವ್‌ದಾನ್ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್‌ ಪತನ; ಮೂವರು ದುರ್ಮರಣ

Helicopter crashed: ಪುಣೆಯ ಬವ್‌ದಾನ್ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್‌ ಪತನಗೊಂಡಿದ್ದು, ಮೂವರು ದುರ್ಮರಣ ಹೊಂದಿದ್ದಾರೆ.

VISTARANEWS.COM


on

By

Helicopter crashes in Pune's Bhavdan hilly area Three dead
Koo

ಬೆಳಗಾವಿ: ಮಹಾರಾಷ್ಟ್ರದ ಪುಣೆ ಹೊರವಲಯದಲ್ಲಿ ಹೆಲಿಕಾಪ್ಟರ್ (Helicopter crashed) ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಪೈಲೆಟ್, ಓರ್ವ ಇಂಜಿನಿಯರ್ ಸೇರಿ ಮೂವರು ದುರ್ಮರಣ ಹೊಂದಿದ್ದಾರೆ. ಪುಣೆಯ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದ ಹೆಲಿಕಾಪ್ಟರ್. ಮುಂಬೈಯ ಜುಹುನ್‌ಗೆ ಪ್ರಯಾಣ ಬೆಳೆಸುತ್ತಿತ್ತು ಎಂಬ ಮಾಹಿತಿ ಇದೆ.

ಪುಣೆಯ ಬವ್‌ದಾನ್ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನವಾಗಿದೆ. ದೆಹಲಿಯ ಮೂಲದ ಖಾಸಗಿ ಸಂಸ್ಥೆಗೆ ಸೇರಿದ ವಿಮಾನ ಇದಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ‌ಪುಣೆ ಮಹಾನಗರ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೈಲೆಟ್‌ಗಳಾದ ಪರಂಜಿತ್ ಸಿಂಗ್, ಜಿ.ಕೆ ಪಿಳ್ಳೈ, ಇಂಜಿನಿಯರ್ ಪ್ರೀತಂ ಭರದ್ವಾಜ್ ಮೃತರು ಎಂದು ತಿಳಿದು ಬಂದಿದೆ.

Continue Reading

ದೇಶ

Gandhi Jayanti 2024: `ಗಾಂಧಿ ಕ್ಲಾಸ್‌’ ಹೆಸರು ಬಂದಿದ್ದು ಹೇಗೆ?

Gandhi Jayanti 2024 : ಮಹಾತ್ಮಾ ಗಾಂಧಿ ಎಂಬ ಒಬ್ಬ ವ್ಯಕ್ತಿ ಆ ರೀತಿಯಾಗಿ ಇದ್ದರು ಎಂದು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದಂತೆ ಅವರು ಬದುಕಿದರು. ಅವರ ಚಿಂತನೆ, ಅವರ ನಡೆ ನುಡಿ, ಇಡೀ ದೇಶ ಮಾತ್ರವಲ್ಲ, ಜಗತ್ತನ್ನು ಆವರಿಸಿಕೊಂಡ ರೀತಿ ಕಲ್ಪನಾತೀತ. ಅವರ ಜನ್ಮದಿನದ ಸಂದರ್ಭದಲ್ಲಿ ಗಾಂಧೀಜಿ ಅವರ ಬದುಕಿನ ಕುತೂಹಲಕರ ಸಂಗತಿಗಳು ಇಲ್ಲಿವೆ.

VISTARANEWS.COM


on

By

Mahatma Gandhi How did the name Gandhi Class come about
Koo

ಇಂದು ಗಾಂಧಿ ಜಯಂತಿ. ಮಹಾತ್ಮಾ ಗಾಂಧಿ ಯವರ (Mahatma Gandhi) 155ನೆಯ ಹುಟ್ಟುಹಬ್ಬ. ಗುಜರಾತಿನ ಪೋರಬಂದರಿನಲ್ಲಿ ಹುಟ್ಟಿದ ಒಬ್ಬ ಸಾಮಾನ್ಯ ವ್ಯಕ್ತಿ ಇಡೀ ಜಗತ್ತನ್ನು ಪ್ರಭಾವಿಸಿದ್ದು, ಸಾಮಾನ್ಯ ಸಂಗತಿ ಅಲ್ಲ. ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ (Fight for Indian Independence) 33 ಕೋಟಿ ಭಾರತೀಯರು ಗಾಂಧಿಯವರ ಮಾತುಗಳನ್ನು ಆಲಿಸುತ್ತಿದ್ದರು ಅಂದರೆ ಅದೂ ಆಶ್ಚರ್ಯವೇ. ಅದರ ಬೆಳಕಿನಲ್ಲಿ ಗಾಂಧಿಯವರ ಬದುಕಿನ ಕೆಲವು ರೋಚಕ ಸಂಗತಿಗಳು ಇಲ್ಲಿವೆ.

1. ಗಾಂಧೀಜಿ ಹುಟ್ಟು ಹಬ್ಬವನ್ನು ವಿಶ್ವ ಅಹಿಂಸಾ ದಿನವಾಗಿ (World Non violence day) ಜಗತ್ತು ಆಚರಿಸುತ್ತದೆ. 2007ರಿಂದ ವಿಶ್ವ ಸಂಸ್ಥೆಯು ಗಾಂಧಿಗೆ ಕೊಟ್ಟ ಗೌರವ ಇದು.

2. ಜಗತ್ತಿನ ಅತೀ ಹೆಚ್ಚು ದೇಶಗಳು ಗಾಂಧಿಯವರ ಫೋಟೊ ಇರುವ ಸ್ಟಾಂಪ್ ಬಿಡುಗಡೆ ಮಾಡಿವೆ. ಈ ದಾಖಲೆಯಲ್ಲಿ ಕೂಡ ಗಾಂಧಿ ಎಲ್ಲರಿಗಿಂತ ಮುಂದೆ ಇದ್ದಾರೆ.

Mahatma Gandhi
Mahatma Gandhi memoir at Raj Ghat

3. ಗಾಂಧಿಯವರನ್ನು ಬ್ರಿಟಿಷರು ‘ಅರೆ ನಗ್ನ ಫಕೀರ’ ಎಂದು ಕರೆದರು. ಗಾಂಧಿಯವರ ಡ್ರೆಸ್ ಕೋಡ್ ಹಾಗೆಯೇ ಇತ್ತು. ಅದೇ ಡ್ರೆಸ್ಸಲ್ಲಿ ಗಾಂಧಿ ಇಂಗ್ಲೆಂಡಿಗೆ ದುಂಡು ಮೇಜಿನ ಪರಿಷತ್ತಿಗೆ ಹೋಗಿ ಬಂದರು.

Half Naked Fakeera Mahatma Gandhi

4. ಗಾಂಧಿ ಜೊತೆ ಒಂದೇ ಟೇಬಲ್ ಮೇಲೆ ಊಟ ಮಾಡಲು ಇಂಗ್ಲೆಂಡ್ ಪ್ರಧಾನಿ ವಿನ್‌ಸ್ಟನ್ ಚರ್ಚಿಲ್ (Winston Churchil) ಒಪ್ಪಲಿಲ್ಲ. ಗಾಂಧೀಜಿ ಇದರ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ.

5. ಅಹಿಂಸೆ ಮತ್ತು ಸತ್ಯಾಗ್ರಹ (Nonviolence and Satyagrah) ಎಂಬ ಎರಡು ಅಸ್ತ್ರಗಳನ್ನು ಗಾಂಧೀಜಿ ಸ್ವಾತಂತ್ರ್ಯ ಹೋರಾಟದಲ್ಲಿ ಬಳಸಿದರು. ಅದರಲ್ಲಿಯೂ ಸತ್ಯಾಗ್ರಹ ಎಂಬ ಹೋರಾಟವು ಜಗತ್ತಿನ ಹಲವು ಮಹಾ ನಾಯಕರ ಗಮನ ಸೆಳೆಯಿತು. ಮುಂದೆ ಹಲವು ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೆ ಸತ್ಯಾಗ್ರಹವು ಪ್ರೇರಣೆ ಕೊಟ್ಟಿತು.

6. ಮಾರ್ಟಿನ್ ಲೂಥರ್ ಕಿಂಗ್ ಅವರು ಗಾಂಧೀಜಿಯವರನ್ನು ತನ್ನ ಐಕಾನ್ ಆಗಿ ಆರಿಸಿಕೊಂಡಿದ್ದರು. ಅವರ ಕಚೇರಿಯಲ್ಲಿ ಅವರ ಎದುರಿನ ಗೋಡೆಯಲ್ಲಿ ಗಾಂಧಿಯ ಫೋಟೊ ಇತ್ತು.

Mahatma gandhi preaches
Mahatma Gandhi memoir at Raj Ghat

7. ಯಾವ ದಕ್ಷಿಣ ಆಫ್ರಿಕ ಗಾಂಧಿ ಅವರನ್ನು ಕರಿಯ (ಬ್ಲಾಕ್) ಎಂಬ ಕಾರಣಕ್ಕೆ ಟ್ರೈನಿಂದ ಹೊರಗೆ ದೂಡಿ ಅಪಮಾನ ಮಾಡಿತ್ತಾ, ಅದೇ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಮುಂದೆ ಗಾಂಧಿ ಪ್ರೇರಣೆ ಕೊಟ್ಟರು.

8. ಗಾಂಧಿಯವರು ಮದ್ಯಪಾನ ನಿಷೇಧ ಮತ್ತು ಗೋಹತ್ಯೆ ನಿಷೇಧಗಳ ಪರವಾಗಿ ಬಲವಾಗಿ ನಿಂತಿದ್ದರು.

9. ಜಗತ್ತಿನ ಅತ್ಯಂತ ಜನಪ್ರಿಯ ಪತ್ರಿಕೆ ‘ಟೈಮ್ಸ್ ಮ್ಯಾಗಜೀನ್’ ಗಾಂಧಿಯವರನ್ನು ‘ವರ್ಷದ ವ್ಯಕ್ತಿ ಪ್ರಶಸ್ತಿ’ (Times man of the year) ಮೂಲಕ ಗೌರವಿಸಿತು. ಆ ಗೌರವ ಪಡೆದ ಮೊದಲ ಮತ್ತು ಏಕೈಕ ಭಾರತೀಯ ಅಂದರೆ ಅದು ಗಾಂಧಿ.

Mahatma Gandhi TIMES cover in 1930

10. ವಿದೇಶಗಳಲ್ಲಿ ಗಾಂಧಿ ಹೆಸರಿನ 48 ರಸ್ತೆಗಳು ಇವೆ. ಭಾರತದಲ್ಲಿ 53 ದೊಡ್ಡ ರಸ್ತೆಗಳು ಗಾಂಧಿ ಅವರ ಹೆಸರು ಪಡೆದಿವೆ. ಇನ್ನು ಗಾಂಧಿ ಭವನ್, ಗಾಂಧಿ ಪ್ರತಿಮೆ, ಗಾಂಧಿ ಮೈದಾನ, ಗಾಂಧಿ ಚೌಕ….ಇವುಗಳನ್ನು ಲೆಕ್ಕ ಮಾಡಲು ಸಾಧ್ಯವೇ ಇಲ್ಲ!

11. ಗಾಂಧಿಯವರ ಹೆಸರು ನೊಬೆಲ್ ಶಾಂತಿ ಪುರಸ್ಕಾರಕ್ಕೆ (Nobel Peace Award) ಐದು ಬಾರಿ ಶಿಫಾರಸು ಆಗಿತ್ತು. ಆದರೆ ಅದರದ್ದೇ ಒಂದು ಕಾರಣಕ್ಕೆ ಅದು ನಿರಾಕರಣೆ ಆಯ್ತು.

12. ಜಾಗತಿಕ ಅತೀ ದೊಡ್ಡ ಫೌಂಡೇಶನ್ ಆದ ‘ಹೆನ್ರಿ ಫೋರ್ಡ್ ಫೌಂಡೇಶನ್’ ಗಾಂಧಿಯವರನ್ನು ತನ್ನ ಆದರ್ಶವಾಗಿ ತೆಗೆದುಕೊಂಡಿದೆ. ಆ ಫೌಂಡೇಶನ್ ಪ್ರಕಾರ ಗಾಂಧಿಯವರು ‘ಜಾಗತಿಕ ಐಕಾನ್’ (Universal Icon).

Mahatma gandhi with assistants
Mahatma Gandhi memoir at Raj Ghat

13. ಗಾಂಧಿಯವರನ್ನು ಮೊದಲ ಬಾರಿಗೆ ‘ಮಹಾತ್ಮ’ ಎಂದು ಕರೆದದ್ದು ರಾಷ್ಟ್ರಕವಿ ರವೀಂದ್ರನಾಥ್ ಠಾಗೋರ್ ಅವರು.

14. ಗಾಂಧಿಯವರ ಇಂಗ್ಲಿಷ್ ಭಾಷಣದಲ್ಲಿ ಐರಿಷ್ ಅಸೆಂಟ್ ಇತ್ತು. ಅದಕ್ಕೆ ಕಾರಣ ಅವರ ಮೊದಲ ಇಂಗ್ಲಿಷ್ ಟೀಚರ್ ಒಬ್ಬರು ಐರಿಷ್ ಆಗಿದ್ದರು.

15. ಗಾಂಧಿಯವರು ಒಳ್ಳೆಯ ಭಾಷಣಕಾರ ಆಗಿರಲಿಲ್ಲ. ಅವರ ಧ್ವನಿಯೂ ಕೀರಲು ಇತ್ತು. ಆದರೆ ಆ ಭಾಷಣವು ಹೆಚ್ಚು ಪ್ರಭಾವಶಾಲಿ ಆಗಿತ್ತು. ಗಾಂಧಿ ತಮ್ಮ ಭಾಷಣದಲ್ಲಿ ಏನಾದರೂ ಕರೆಕೊಟ್ಟರೆ ಸೇರುತ್ತಿದ್ದ ಸಾವಿರಾರು ಜನರು ಅದನ್ನು ಪ್ರಶ್ನಾತೀತವಾಗಿ ಪಾಲನೆ ಮಾಡುತ್ತಿದ್ದರು. ಗಾಂಧಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುತ್ತಾರೆ ಎಂದು ಆಗ ಬಹುಪಾಲು ಭಾರತೀಯರು ನಂಬಿದ್ದರು.

Mahatma gandhi satyagrah
Mahatma Gandhi memoir at Raj Ghat

16. ಮುಂದೆ ಬಾಂಗ್ಲಾ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೋಬೆಲ್ ಪ್ರಶಸ್ತಿ ಪಡೆದ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ಆರಿಸಿಕೊಂಡದ್ದು ಅಹಿಂಸಾ ಮಾರ್ಗವನ್ನು. ಅದಕ್ಕೆ ಪ್ರೇರಣೆ ಗಾಂಧಿ.

17. ಗಾಂಧಿ ಕರ್ನಾಟಕವನ್ನು ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ 18 ಬಾರಿ ಭೇಟಿ ಕೊಟ್ಟಿದ್ದರು. ಅದರಲ್ಲಿ ಉಡುಪಿಗೆ ಬಂದದ್ದು ಒಂದು ಬಾರಿ (ಫೆಬ್ರುವರಿ 25, 1934). ಆಗ ಕೃಷ್ಣ ಮಠದ ಬೀದಿಯಲ್ಲಿ ಗಾಂಧಿ ನಡೆದುಕೊಂಡು ಹೋದರೂ ಕೃಷ್ಣ ಮಠದ ಒಳಗೆ ಅವರು ಬರಲಿಲ್ಲ. ಅಜ್ಜರಕಾಡು ಮೈದಾನದಲ್ಲಿ ಗಾಂಧಿಯವರ ಭಾಷಣವನ್ನು 3000 ಮಂದಿ ಸೇರಿ ಕೇಳಿದ್ದರು. ಆ ಕಾರ್ಯಕ್ರಮದ ವ್ಯವಸ್ಥೆ ಮಾಡಿದ್ದು ಕಾರ್ಪೋರೇಶನ್ ಬ್ಯಾಂಕ್ ಸ್ಥಾಪನೆ ಮಾಡಿದ್ದ ಖಾನ್ ಬಹಾದ್ದೂರ್ ಹಾಜಿ ಅಬ್ದುಲ್ಲ ಸಾಹೇಬರು. ಕಾಡಬೆಟ್ಟು ಎಂಬಲ್ಲಿ ಗಾಂಧೀಜಿ ಒಂದು ಖಾದಿ ಭಂಡಾರವನ್ನು ಉದ್ಘಾಟನೆ ಮಾಡಿದ್ದರು.

18. ಗಾಂಧಿ ಅದೇ ಅವಧಿಯಲ್ಲಿ ಮಂಗಳೂರಿಗೆ ಮೂರು ಬಾರಿ ಭೇಟಿ ನೀಡಿದ್ದರು. 1920, 1927, 1934 ಹೀಗೆ ಮೂರು ಭೇಟಿಗಳು. ಗಾಂಧಿಯವರ 1934ರ ಭೇಟಿಯಲ್ಲಿ 10,000 ಮಂದಿ ಸೇರಿದ್ದರು. ಆಗ ಅವರು ಕೆನರಾ ಶಾಲೆಯಲ್ಲಿ ಕೃಷ್ಣ ಮಂದಿರ ಉದ್ಘಾಟನೆ ಮಾಡಿದ್ದರು. ಅವರ ಮಂಗಳೂರು ಸಭೆಗಳನ್ನು ವ್ಯವಸ್ಥೆ ಮಾಡಿದ್ದು ಕಾರ್ನಾಡ್ ಸದಾಶಿವ ರಾಯರು ಮತ್ತು ಆಗಿನ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಿದ್ದ ಎಂ.ಡಿ ಅಧಿಕಾರಿಯವರು. ಅವರು ನನ್ನ ಕಾರ್ಕಳ ತಾಲೂಕಿನವರು.

Mahatma gandhi dandi satyaghraha
Mahatma Gandhi memoir at Raj Ghat

19. ಗಾಂಧೀಜಿಯವರು ಸಾಮೂಹಿಕ ಪ್ರಾರ್ಥನೆಯನ್ನು ಮತ್ತು ಶ್ರೀ ರಾಮನ ಭಜನೆಗಳನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದರು ಮತ್ತು ಆಚರಣೆ ಮಾಡಿದರು. ‘ವೈಷ್ಣವ ಜನತೋ’ ಅವರು ಅತೀ ಹೆಚ್ಚು ಬಾರಿ ಆಲಿಸಿದ ಪದ್ಯ. ರಾಮರಾಜ್ಯದ ಸುಂದರ ಕಲ್ಪನೆಯ ಬಗ್ಗೆ ಅವರು ಹಲವಾರು ಲೇಖನಗಳನ್ನು ಬರೆದಿದ್ದಾರೆ.

20. ಗಾಂಧಿಯವರು ಎಡಗೈಯಿಂದ ಬರೆಯುತ್ತಿದ್ದರು. ಅವರ ಜೊತೆ ಯಾವಾಗಲೂ ಇರುತ್ತಿದ್ದದ್ದು ಒಂದು ಗಡಿಯಾರ.

Mahatma Gandhi
Mahatma Gandhi memoir at Raj Ghat

21. ತನಗೆ ಪತ್ರ ಬರೆಯುತ್ತಿದ್ದ ಪ್ರತಿಯೊಬ್ಬರಿಗೂ ಗಾಂಧೀಜಿ ಅವರು ತಮ್ಮ ಕೈ ಬರಹದಲ್ಲಿ ಉತ್ತರ ಬರೆಯುತ್ತಿದ್ದರು.

22. ಗಾಂಧಿ ತಮ್ಮ ಬದುಕಿನ ಉದ್ದಕ್ಕೂ ರೈಲಿನಲ್ಲಿ ದ್ವಿತೀಯ ದರ್ಜೆಯ ಡಬ್ಬಿಯಲ್ಲಿ ಪ್ರಯಾಣ ಮಾಡಿದ್ದರು. ಮುಂದೆ ಅದನ್ನು ಜನರು `ಗಾಂಧಿ ಕ್ಲಾಸ್’ ಎಂದು ಕರೆದರು.

ಇದನ್ನೂ ಓದಿ: Raja Marga Column : ಅಂದು ಜಿ.ಆರ್‌ ವಿಶ್ವನಾಥ್‌ ಅವರಿಂದಾಗಿ ಭಾರತ ಸೋತಿತ್ತು, ಆದರೆ ಕ್ರಿಕೆಟ್‌ ಗೆದ್ದಿತ್ತು!

23. ಗಾಂಧೀಯವರ ಹತ್ಯೆಯನ್ನು ನಾಥೂರಾಮ್ ಗೋಡ್ಸೆ ಮಾಡಿದಾಗ ಅವರ ಬಾಯಿಂದ ಬಂದ ಮೊದಲ ಶಬ್ದ ಹೇ ರಾಮ್. ಎರಡನೇ ಶಬ್ದ – ಉಸ್ಕೋ ಚೋಡ್ ದೋ!

Mahatma Gandhi memoir at Raj Ghat
Mahatma Gandhi memoir at Raj Ghat

24. ಗಾಂಧಿಯವರ ಅಂತಿಮ ಯಾತ್ರೆಯಲ್ಲಿ ಅಂದು ಭಾಗವಹಿಸಿದ ಜನರ ಸಂಖ್ಯೆಯೂ ಮಹಾ ದಾಖಲೆ. ಆಗ ಎಂಟು ಕಿಲೋಮೀಟರ್ ಉದ್ದವಾದ ಅಂತಿಮ ಯಾತ್ರೆಯು ಸಾಗಿ ಬಂದಿತ್ತು.

25. ಯಾವುದೇ ಸಾಮಾಜಿಕ ಜಾಲ ತಾಣ ಮತ್ತು ದೂರದರ್ಶನ ಇಲ್ಲದ ಕಾಲದಲ್ಲಿ ಕೂಡ ಒಬ್ಬ ವ್ಯಕ್ತಿ ಇಡೀ ಭಾರತವನ್ನು ತಲುಪಿದ್ದು ಮತ್ತು ಇಡೀ ವಿಶ್ವದ ಮೇಲೆ ಪ್ರಭಾವ ಬೀರಿದ್ದು ದೊಡ್ಡ ಸಾಧನೆಯೇ ಹೌದು. ಅದಕ್ಕಾಗಿ ಅವರು ಮಹಾತ್ಮ ಆದದ್ದು.

Continue Reading

ಬಾಲಿವುಡ್

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡೇಟು! ಮುಂಬೈ ಆಸ್ಪತ್ರೆಗೆ ದಾಖಲು

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡು ತಗುಲಿದ್ದು, ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

Actor Govinda
Koo

ಬಾಲಿವುಡ್‌ ನಟ ಗೋವಿಂದ (Actor Govinda) ಕಾಲಿಗೆ ಗುಂಡು ತಗುಲಿದೆ. ರಿವಾಲ್ವರ್​​ ಲಾಕ್​ ಓಪನ್​ ಆಗಿದ್ದರಿಂದ ಜೇಬಿಗೆ ರಿವಾಲ್ವರ್​ ಇಟ್ಟುಕೊಳ್ಳುವಾಗ ಮಿಸ್ ಫೈರ್ ಆಗಿದೆ. ಕೂಡಲೇ ಗೋವಿಂದ ಕುಟುಂಬಸ್ಥರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಮುಂಜಾನೆ 4.45ರ ಸುಮಾರಿಗೆ ಘಟನೆ ನಡೆದಿದೆ.

ನಟ ಗೋವಿಂದ ಲೈಸೆನ್ಸ್​ ರಿವಾಲ್ವರ್​ ಬಳಕೆ ಮಾಡುತ್ತಿದ್ದರು. ಮನೆ ಬಿಡುವಾಗ ಗನ್​ ಚೆಕ್​ ಮಾಡುತ್ತಿದ್ದರು. ಈ ವೇಳೆ ಗೋವಿಂದ ಕಾಲಿಗೆ ಬುಲೆಟ್ ತಗುಲಿದೆ. ತನ್ನದೇ ರಿವಾಲ್ವರ್​​ನಿಂದ ಫೈರಿಂಗ್​​​ ಆಗಿದೆ. ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಯಲ್ಲಿ ಗೋವಿಂದಗೆ ಟ್ರೀಟ್​ಮೆಂಟ್​ ಮುಂದುವರಿದಿದೆ. ಅದೃಷ್ಟವಶಾತ್‌ ಗೋವಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಈ ಸಂಬಂಧ ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿ: Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

ಮುಂಜಾನೆ ಕೋಲ್ಕತ್ತಾಗೆ ಹೊರಡುವ ಮೊದಲು ನಟ ತನ್ನ ಪರವಾನಗಿ ಪಡೆದ ರಿವಾಲ್ವರ್ ಅನ್ನು ಪರಿಶೀಲಿಸುತ್ತಿದ್ದಾಗ ಜುಹು ನಿವಾಸದಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಆಕಸ್ಮಿಕವಾಗಿ ಗೋವಿಂದ ಕೈಯಿಂದ ಬಿದ್ದು, ಕಾಲಿಗೆ ಗುಂಡು ತಗುಲಿದೆ ಎನ್ನಲಾಗಿದೆ. ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗಲು ಬೆಳಿಗ್ಗೆ 6 ಗಂಟೆಗೆ ಫ್ಲೈಟ್‌ ಇತ್ತು. ನಾನು ಮೊದಲೇ ವಿಮಾನ ನಿಲ್ದಾಣವನ್ನು ತಲುಪಿದ್ದೆ. ಗೋವಿಂದ ಅವರು ತಮ್ಮ ನಿವಾಸದಿಂದ ವಿಮಾನ ನಿಲ್ದಾಣಕ್ಕೆ ತೆರಳಲು ಹೊರಟಿದ್ದರು. ಆಗ ಈ ಅವಘಡ ಸಂಭವಿಸಿದೆ. ಸದ್ಯ ವೈದ್ಯರು ಗುಂಡು ಹೊರತೆಗೆದಿದ್ದು, ಗೋವಿಂದ ಆರೋಗ್ಯ ಸ್ಥಿರವಾಗಿದೆ ಎಂದು ನಟನ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ಆಸ್ಪತ್ರೆಯಿಂದ ನಟ ಗೋವಿಂದ ಆಡಿಯೋ ಮೆಸೇಜ್ ರಿಲೀಸ್ ಮಾಡಿದ್ದಾರೆ. ಎಲ್ಲರ ಹಾರೈಕೆ ಆಶೀರ್ವಾದದಿಂದ ನಾನು ಚೆನ್ನಾಗಿದ್ದೇನೆ. ಗುಂಡು ಬಿದ್ದಿದನ್ನು ತೆಗೆಯಲಾಗಿದೆ. ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಂದೇಶ ಕಳುಹಿಸಿದ್ದಾರೆ. ಗೋವಿಂದ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎನ್ನುವ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Namma metro ticket prices will be hiked soon
ಬೆಂಗಳೂರು27 ನಿಮಿಷಗಳು ago

Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

Murder case
ಬೆಂಗಳೂರು48 ನಿಮಿಷಗಳು ago

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

murder case
ಬೆಂಗಳೂರು1 ಗಂಟೆ ago

Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

Wall Collapse
ಬೆಂಗಳೂರು3 ಗಂಟೆಗಳು ago

Wall collapse : ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಸಾವು; ಮತ್ತೊಬ್ಬ ಗಂಭೀರ

karnataka Weather Forecast
ಮಳೆ9 ಗಂಟೆಗಳು ago

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ9 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ

Action Prince Dhruva Sarja much awaited film Martin to hit the screens on October 11
ಸಿನಿಮಾ18 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು19 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು22 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು22 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ18 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌