Kasturirangan Report | ಪಶ್ಚಿಮಘಟ್ಟ ತಪ್ಪಲಿನ ಜನರ ನಿದ್ರೆಗೆಡಿಸಿದ ಈ ವರದಿ ಬಂದಿದ್ದಾದರೂ ಏಕೆ? - Vistara News

ಕರ್ನಾಟಕ

Kasturirangan Report | ಪಶ್ಚಿಮಘಟ್ಟ ತಪ್ಪಲಿನ ಜನರ ನಿದ್ರೆಗೆಡಿಸಿದ ಈ ವರದಿ ಬಂದಿದ್ದಾದರೂ ಏಕೆ?

ಕಸ್ತೂರಿ ರಂಗನ್‌ ವರದಿ (Kasturirangan Report) ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಐದನೇ ಬಾರಿಗೆ ಕರಡು ಅಧಿಸೂಚನೆ ಪ್ರಕಟಿಸಿದೆ. ಇದನ್ನು ವಿರೋಧಿಸುವ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿದೆ. ಅಂದಹಾಗೆ ಬಾಹ್ಯಾಕಾಶ ವಿಜ್ಞಾನಿ ಕಸ್ತೂರಿ ರಂಗನ್‌ ಪಶ್ಚಿಮಘಟ್ಟ ಸಂರಕ್ಷಣೆ ಕುರಿತು ವರದಿ ನೀಡಿದ್ದಾದರೂ ಏಕೆ? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

Kasturirangan Report
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮಸ್ವಾಮಿ ಹುಲಕೋಡು
ಮುಂಬಯಿಯಲ್ಲಿ ಖಗೋಳ ವಿಜ್ಞಾನ ಓದಿ, ಅಹ್ಮದಾಬಾದ್‌ನಲ್ಲಿ ತಾರಾಲೋಕದ ತಜ್ಞರೆನಿಸಿ, ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೊ) ನೇತೃತ್ವ ವಹಿಸಿ, ದೇಶದ ಬಾಹ್ಯಾಕಾಶ ಯೋಜನೆಗಳಿಗೆ ರೆಕ್ಕೆಪುಕ್ಕ ಕಟ್ಟಿ, ‘ಚಂದ್ರಯಾನ’ದ ಮೂಲಕ ಚಂದ್ರನಲ್ಲಿಯೂ ನೀರ ಪಸೆ ಇದೆ ಎಂದು ಪತ್ತೆ ಹಚ್ಚಿ, ದೇಶದ ನೂತನ ಶಿಕ್ಷಣ ವ್ಯವಸ್ಥೆಯ ರೂವಾರಿಗಳಲ್ಲಿ ಒಬ್ಬರೆನಿಸಿದ, ಶ್ರೀಯುತ ಕಸ್ತೂರಿ ರಂಗನ್, ಪಶ್ಚಿಮ ಘಟ್ಟದಲ್ಲಿನ ಪರಿಸರ ಸಂರಕ್ಷಿಸುವ ಕುರಿತು ಈ ವರದಿ (Kasturirangan Report) ನೀಡಿದ್ದಾದರೂ ಏಕೆ?

ನೀವು ಈ ಪ್ರಶ್ನೆಯನ್ನು ಯಾರಿಗೆ ಬೇಕಾದರೂ ಕೇಳಿ, ಉತ್ತರ ಥಟ್ಟನೆ ಸಿಗುತ್ತದೆ; ‘ಹೆಸರಾಂತ ಪರಿಸರ ವಿಜ್ಞಾನಿ  ಹಾಗೂ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನ ಕೇಂದ್ರದ ಮಾಜಿ ಅಧ್ಯಕ್ಷ ಡಾ.ಮಾಧವ  ಗಾಡ್ಗೀಳ್‌ರ ನೇತೃತ್ವದ ಸಮಿತಿ ಈ ಹಿಂದೆ ವರದಿ ನೀಡಿತ್ತು. ಈ ವರದಿ ಸಂಪೂರ್ಣವಾಗಿ ಜನ ವಿರೋಧಿಯಾಗಿದ್ದರಿಂದ ಎಲ್ಲ ರಾಜ್ಯ ಸರ್ಕಾರಗಳು, ಅದರಲ್ಲೂ ಮುಖ್ಯವಾಗಿ ಕೇರಳ ವಿರೋಧಿಸಿದ್ದರಿಂದ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಕಸ್ತೂರಿ ರಂಗನ್ ನೇತೃತ್ವದಲ್ಲಿ ಮತ್ತೊಂದು ಸಮಿತಿ ರಚಿಸಿ ವರದಿ ನೀಡುವಂತೆ ಕೋರಿಕೊಂಡಿತ್ತು. ಹೀಗಾಗಿ ಅವರು ವರದಿ ಸಲ್ಲಿಸಿದ್ದರು, ಈ ವರದಿಯ ಜಾರಿಯ ವಿಷಯ ಪದೇ ಪದೇ ಮುನ್ನೆಲೆಗೆ ಬಂದು ಮಲೆನಾಡಿಗರ ನಿದ್ರೆಗೆಡಿಸುತ್ತಿದೆ’ ಎಂದು ವಿವರಿಸುತ್ತಾರೆ. ಇದು ಸತ್ಯ ಕೂಡ.

Kasturirangan Report
ಗಾಡ್ಗೀಳ್‌ ಸಮಿತಿ ವರದಿ

ಇದೇ ಪ್ರಶ್ನಾ ಸರಣಿಯನ್ನು ಮುಂದುವರಿಸಿ, ಡಾ. ಮಾಧವ ಗಾಡ್ಗೀಳ್ ನೇತೃತ್ವದ ಸಮಿತಿಯನ್ನು ಏಕೆ ರಚಿಸಲಾಗಿತ್ತು ಎಂಬ ಮತ್ತೊಂದು ಪ್ರಶ್ನೆಯನ್ನು ಕೇಳಿ ನೋಡಿ, ಉತ್ತರ ಮಾತ್ರ ಭಿನ್ನವಾಗಿರುತ್ತವೆ.

ಕೆಲವರು, ಆಗಿನ ಪರಿಸರ ಖಾತೆ ಸಚಿವ ಜಯರಾಮ್ ರಮೇಶ್ (ಇವರು ಮೂಲತಃ ನಮ್ಮ ರಾಜ್ಯದವರು, ಈಗ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ) ಪಶ್ಚಿಮಘಟ್ಟದ ಪರಿಸರವನ್ನು ಉಳಿಸುವ ಉದ್ದೇಶದಿಂದ ಈ  ಸಮಿತಿ ರಚಿಸಿದ್ದರು ಎಂದರೆ, ಇನ್ನು ಕೆಲವರು ಸುಪ್ರೀಂ ಕೋರ್ಟ್ ಸೂಚಿಸಿತ್ತು, ರಾಷ್ಟ್ರೀಯ ಹಸಿರು ಪೀಠ (ಗ್ರೀನ್ ಟ್ರಿಬುನಲ್ ಆದೇಶ ನೀಡಿತ್ತು, ‘ನಿಸರ್ಗ ಸಂರಕ್ಷಣೆಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಸಂಘಟನೆ (ಐಯುಸಿಎನ್’ ಸೂಚನೆ ನೀಡಿತ್ತು… ಹೀಗೆ ಬೇರೆ ಬೇರೆ ಉತ್ತರ ನೀಡುತ್ತಾರೆ.

ಕಸ್ತೂರಿ ರಂಗನ್‌ ವರದಿ

ಇನ್ನು ಕೆಲವರಂತೂ, ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ವಿದೇಶದಿಂದ ಹಣ ಪಡೆದು, ನೆಪ ಮಾತ್ರಕ್ಕೆ ಖರ್ಚು ಮಾಡಿ, ದುಡ್ಡು ಮಾಡಿಕೊಳ್ಳುತ್ತಿರುವ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ(ಎನ್‌ಜಿಒಗಳತ್ತ ಬೊಟ್ಟು ಮಾಡುತ್ತಾರೆ. ಇದರಲ್ಲಿ ಯಾವುದು ಸತ್ಯ ಎಂದು ಹುಡುಕುತ್ತಾ ಹೊರಟಾಗ ಕುತೂಹಲಕಾರಿ ಸಂಗತಿಗಳು ತೆರೆದುಕೊಳ್ಳುತ್ತವೆ.

ಹೀಗೊಂದು ಹಿನ್ನೆಲೆ…

ಮಾಧವ್ ಗಾಡ್ಗೀಳ್ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ (Western Ghats Ecology Expert Panel(WGEEP)) ನೇಮಿಸಲು ಕಾರಣವಾಗಿದ್ದು ಪಶ್ಚಿಮ ಘಟ್ಟದ ಉಳಿವಿಗಾಗಿ ಸುಮಾರು ೩೫ ವರ್ಷಗಳ ಹಿಂದೆ ನಡೆದ ಹೋರಾಟವೇ? ಹೌದು, ಎನ್ನುತ್ತಾರೆ ಸಮಾಜ ಪರಿವರ್ತನ ಸಮುದಾಯದ ಎಸ್.ಆರ್. ಹಿರೇಮಠ್. 1987ರಲ್ಲಿ ಆರಂಭವಾದ ‘ಪಶ್ಚಿಮಘಟ್ಟ ಉಳಿಸಿ ಅಭಿಯಾನ’ 2009ರಲ್ಲಿ ಮರು ಜನ್ಮ ಪಡೆದಿದ್ದು, ಇದರ ಒತ್ತಡಕ್ಕೆ ಮಣಿದ ಆಗಿನ ಕೇಂದ್ರ ಸಚಿವ ಜಯರಾಮ್ ರಮೇಶ್ ಈ ತಜ್ಞರ ಸಮಿತಿಯನ್ನು ರಚಿಸಿದ್ದರು. ಇದು ನಿಜವಾದ ಸಂಗತಿ. ಇದರಲ್ಲಿ ಗೊಂದಲವೇನಿಲ್ಲ. ಆದರೆ ಈ ಬೆಳವಣಿಗೆಯನ್ನು ಅರ್ಥಮಾಡಿಕೊಳ್ಳಬೇಕಾದರೆ ಇನ್ನೊಂದಿಷ್ಟು ಆಳಕ್ಕಿಳಿಯಬೇಕಾಗುತ್ತದೆ.

ಮೊದಲಿಗೆ ‘ಪಶ್ಚಿಮಘಟ್ಟ ಉಳಿಸಿ ಅಭಿಯಾನ’ದ ಬಗ್ಗೆ ಒಂದಿಷ್ಟು ತಿಳಿದುಕೊಳ್ಳೊಣ. 1986ರಲ್ಲಿ ದಕ್ಷಿಣ ಭಾರತದಲ್ಲಿ ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಕಾರ್ಯನಿರತರಾಗಿರುವ ಸ್ವಯಂ ಸೇವಾ ಸಂಸ್ಥೆಗಳ ಕೆಲವು ಕಾರ್ಯಕರ್ತರು ಗೋವಾದಲ್ಲಿ ಸಭೆ ಸೇರಿದ್ದರು. ತಮಿಳುನಾಡು, ಕೇರಳ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿವಿಧ ಸಂಘಟನೆಗಳ ಪ್ರತಿನಿಗಳು ಇದರಲ್ಲಿದ್ದರು. ಪಶ್ಚಿಮಘಟ್ಟದ ಪರಿಸರ ಸ್ಥಿತಿ-ಗತಿಗಳ ಬಗ್ಗೆ  ಈ ಸಭೆಯಲ್ಲಿ ಚರ್ಚೆ ನಡೆಯಿತು. ಎಲ್ಲ ರಾಜ್ಯದ ಪರಿಸರ ಕಾರ್ಯಕರ್ತರು ತಮ್ಮ ಭಾಗದಲ್ಲಿ ಪಶ್ಚಿಮ ಘಟ್ಟದ ಮೇಲೆ ‘ಅಭಿವೃದ್ಧಿ’ಯ ಹೆಸರಿನಲ್ಲಿ ನಡೆಯುತ್ತಿರುವ ದಾಳಿಯನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಈ ಬಗ್ಗೆ ಸ್ಥಳೀಯರಲ್ಲಿ ಅರಿವು ಮೂಡಿಸಿ, ಆಡಳಿತದ ಗಮನ ಸೆಳೆಯಲು ‘ಪಶ್ಚಿಮಘಟ್ಟ ಉಳಿಸಿ ಅಭಿಯಾನ’ ನಡೆಸಲು ಅಂದು ತೀರ್ಮಾನಿಸಲಾಗಿತ್ತು.

ಆಗ ಸುಮಾರು 145ಕ್ಕಿಂತಲೂ ಹೆಚ್ಚು ನಾಗರಿಕ ಸಂಘಟನೆಗಳು (ಈಗಿನಂತೆ ಆಗ ಹೆಚ್ಚು ಎನ್‌ಜಿಒಗಳಿರಲಿಲ್ಲ) ಈ ಅಭಿಯಾನದಲ್ಲಿ ಭಾಗವಹಿಸುವ ತೀರ್ಮಾನ ಪ್ರಕಟಿಸಿದ್ದವು. ಅಭಿಯಾನದ ಭಾಗವಾಗಿ ಪಾದಯಾತ್ರೆ ಕೈಗೊಳ್ಳುವ ತೀರ್ಮಾನ ಮಾಡಲಾಗಿತ್ತು. ಈ ಆಂದೋಲನ ಯಶಸ್ವಿಗೊಳಿಸಲು ಕೇಂದ್ರ ಸಂಚಾಲನ ಸಮಿತಿ ರಚಿಸಲಾಗಿತ್ತು. ಇದರಲ್ಲಿ ಡಾ. ಕೈಲಾಸ್ ಮಲ್ಹೋತ್ರಾ, ಶಿರಸಿಯ ಪಾಂಡುರಂಗ ಹೆಗಡೆ, ಪ್ರೊ. ಎಲ್.ಟಿ.ಶರ್ಮಾ, ಎಸ್.ಆರ್. ಹಿರೇಮಠ್ ಸೇರಿದಂತೆ ಒಟ್ಟು 22 ಮಂದಿ ಇದ್ದರು. ಇದೇ ರೀತಿಯಾಗಿ ರಾಜ್ಯ ಮಟ್ಟದಲ್ಲಿಯೂ ಸಂಚಾಲನ ಸಮಿತಿ ರಚಿಸಲಾಗಿತ್ತು. ಇದರಲ್ಲಿ ಡಾ. ಕೆ. ಶಿವರಾಮ ಕಾರಂತ, ಮಾಧವ ಗಾಡ್ಗೀಳ್, ಪತ್ರಕರ್ತರಾದ ನಾಗೇಶ್ ಹೆಗಡೆ, ಖಾದ್ರಿ ಶಾಮಣ್ಣ, ಸಂತೋಷ್ ಕುಮಾರ್ ಗುಲ್ವಾಡಿ, ನಟ ಸುರೇಶ್ ಹಬ್ಳೀಕರ್, ರಂಗಕರ್ಮಿ ಕೆ.ವಿ. ಸುಬ್ಬಣ್ಣ ಮತ್ತಿತರ 40 ಮಂದಿ ಇದ್ದರು.

ಈ ಪಾದಯಾತ್ರೆಯನ್ನು ಪಶ್ಚಿಮ ಘಟ್ಟಗಳ ಉತ್ತರ ಮತ್ತು ದಕ್ಷಿಣ ಎರಡೂ ತುದಿಗಳಿಂದ ಪ್ರಾರಂಭಿಸಲಾಗಿತ್ತು. ರಾಜ್ಯದಲ್ಲಿ ಡಿಸೆಂಬರ್ 16, 1987ರಲ್ಲಿ ತಲಕಾವೇರಿಯಿಂದ ಈ ಪಾದಯಾತ್ರೆ ಆರಂಭಗೊಂಡಿತ್ತು. ಕೊಡಗು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಳ್ಳಿಗಳಲ್ಲಿ ಸಂಚರಿಸಿ ಜನವರಿ 28, 1988ರಂದು ಮೊಹಲ್ಲಾ ಎಂಬಲ್ಲಿ ಗೋವಾ ರಾಜ್ಯವನ್ನು ಈ ಪಾದಯಾತ್ರೆ ಪ್ರವೇಶಿಸಿತ್ತು. ಈ ಪಾದಯತ್ರೆಯ ಸಂದರ್ಭದಲ್ಲಿ ಪಶ್ಚಿಮಘಟ್ಟಗಳ ಮಹತ್ವ ಮತ್ತು ಅಲ್ಲಿ ನಡೆದಿರುವ ವಿನಾಶಾತ್ಮಕ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗಿತ್ತು.

ಕಿರು ಹೊತ್ತಿಗೆ

ಇದಕ್ಕಾಗಿ ‘ಪಶ್ಚಿಮ ಘಟ್ಟಗಳ ಅಳಿವು, ಉಳಿವು’ ಎಂಬ ಕಿರು ಹೊತ್ತಿಗೆಯನ್ನು ಪ್ರಕಟಿಸಿ ಹಂಚಲಾಗಿತ್ತು. ಶಿವರಾಮ ಕಾರಂತ್, ನಾಗೇಶ್ ಹೆಗಡೆ ಮಾಧವ ಗಾಡ್ಗೀಳ್ ಮತ್ತಿತರರ ಲೇಖನಗಳನ್ನು ಈ ಕಿರುಹೊತ್ತಿಗೆ ಒಳಗೊಂಡಿತ್ತು. ಈ ಪಾದಯಾತ್ರೆ ರಾಜ್ಯದಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿತ್ತು ಎಂಬುದರಲ್ಲಿ ಅನುಮಾನವಿಲ್ಲ. ಮುಂದೆ ಹರಿಹರ ಪಾಲಿಫೈಬರ್ಸ್ ವಿರುದ್ಧದ ಹೋರಾಟ, ಕೈಗಾ ಅಣುಸ್ಥಾವರದ ವಿರುದ್ಧ ಹೋರಾಟ ಸೇರಿದಂತೆ ಹಲವಾರು ಪರಿಸರ ಹೋರಾಟಕ್ಕೆ ಇದು ನಾಂದಿ ಹಾಡಿತ್ತು.‌

ಅಭಿಯಾನದ ಹೈಜಾಕ್!

ಈ ಹಿಂದೆ ಹೇಳಿದಂತೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಶಿವರಾಮ ಕಾರಂತ್, ಹೆಸರಾಂತ ಪತ್ರಕರ್ತ ಖಾದ್ರಿ ಶಾಮಣ್ಣ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಕೆ.ವಿ.ಸುಬ್ಬಣ್ಣ ಮತ್ತಿತರ ಪಾಲ್ಗೊಳ್ಳುವಿಕೆಯಿಂದ ಬಹಳ ಮಹತ್ವದ ಪರಿಸರ ಚಳವಳಿಯಾಗಿ ರೂಪಗೊಂಡಿದ್ದ ‘ಪಶ್ಚಿಮ ಘಟ್ಟ ಉಳಿಸಿ ಅಭಿಯಾನ’ವನ್ನು ಸದ್ದಿಲ್ಲದೆ 2009ರಲ್ಲಿ ಕೆಲ ಸರ್ಕಾರೇತರ ಸ್ವಯಂ ಸೇವಾ ಸಂಘಟನೆ (ಎನ್‌ಜಿಒ)ಗಳು ಸದ್ದಿಲ್ಲದೆ ಹೈಜಾಕ್ ಮಾಡಿಬಿಟ್ಟಿವೆ. ಈಗಲೂ ಈ ಅಭಿಯಾನ ಜೀವಂತವಾಗಿವೆ. ಆದರೆ ಇದರ ನೇತೃತ್ವವಹಿಸಿರುವುದು ಎನ್‌ಜಿಒಗಳ ಪ್ರತಿನಿಗಳೇ ಹೊರತು ಸಾಮಾಜದಲ್ಲಿನ ಗಣ್ಯರಲ್ಲ, ನಿಜವಾದ ಪರಿಸರ ಪ್ರೇಮಿಗಳಲ್ಲ. (ಅನೇಕ ಎನ್‌ಜಿಒಗಳು ಹಿಂದೆ ನಡೆದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದನ್ನೇ ಮುಂದಿಟ್ಟುಕೊಂಡು, ಈಗ ಇದರ ಕ್ರೆಡಿಟ್ ಪಡೆದುಕೊಳ್ಳಲು ತಮ್ಮಿಂದಾಗಿಯೇ ಈ ಅಭಿಯಾನ ಯಶಸ್ವಿಯಾಯಿತು ಎಂದು ಪ್ರಚಾರ ನಡೆಸಲಾರಂಭಿಸಿವೆ. ಈ ಬಗ್ಗೆ ತಮ್ಮ ವೆಬ್‌ನಲ್ಲಿ ಪುಟಗಟ್ಟಲೆ ಬರೆದುಕೊಂಡಿವೆ.)

ಅದಿರಲಿ, ‘ಪಶ್ಚಿಮ ಘಟ್ಟ ಉಳಿಸಿ’ ಅಭಿಯಾನ ಮರುಹುಟ್ಟು ಪಡೆದಿದ್ದು ಹೇಗೆ ಎಂಬುದನ್ನು ನೋಡೋಣ. ಅಭಿಯಾನದ ಕೇಂದ್ರ ಸಂಚಾಲನ ಸಮಿತಿಯ ಸದಸ್ಯರಾಗಿದ್ದ ಗೋವಾದ ‘ಪೀಸ್‌ಫುಲ್ ಸೊಸೈಟಿ’ಯ ಕುಮಾರ್ ಕಲಾನಂದ ಮಣಿ ಎಂಬುವರು 2009ರಲ್ಲಿ ಈ ಅಭಿಯಾನದಲ್ಲಿ ಭಾಗಿಯಾದವರೆಲ್ಲರ ಸಭೆಯೊಂದನ್ನು ಗೋವಾದಲ್ಲಿ ಕರೆದಿದ್ದರು. ಈ ಸಭೆಯಲ್ಲಿ ಪಶ್ಚಿಮಘಟ್ಟದ ಆಗು-ಹೋಗುಗಳ ಬಗ್ಗೆ ಚರ್ಚೆ ನಡೆಯಿತು. ಬಹಳ ಮುಖ್ಯವಾದ ವಿಷಯವೆಂದರೆ ಈ ಬಾರಿ ನಾಗರಿಕ ಸಂಘಟನೆಗಳಿಗಿಂತ ಹೆಚ್ಚಾಗಿ, ಪಶ್ಚಿಮಘಟ್ಟ ಪ್ರದೇಶದಲ್ಲಿ ವಿದೇಶಿ ಹಣದಿಂದ ‘ಪರಿಸರ ಉಳಿಸುವ’ ಚಟುವಟಿಕೆ ನಡೆಸುತ್ತಿರುವ ಸ್ವಯಂಸೇವಾ ಸಂಘಟನೆಗಳ ಪ್ರತಿನಿಧಿಗಳೇ ಇದರಲ್ಲಿ ಭಾಗವಹಿಸಿದ್ದರು.

Kasturirangan Report
ಆಂದೋಲನದ ವೆಬ್‌ ಹೀಗಿದೆ….

‘ಪಶ್ಚಿಮ ಘಟ್ಟ ಉಳಿಸಿ ಅಭಿಯಾನ’ದಲ್ಲಿ ಭಾಗವಹಿಸಿದ್ದ ರಾಜ್ಯದ ಪ್ರಮುಖರಿಗೆ ಈ ಬಗ್ಗೆ ಮಾಹಿತಿಯೇ ಇರಲಿಲ್ಲ. ಈ ಸಭೆಯಲ್ಲಿ ಅಭಿಯಾನವನ್ನು ಮುಂದುವರಿಸುವ ತೀರ್ಮಾನ ತೆಗೆದುಕೊಳ್ಳಲಾಯಿತಲ್ಲದೆ, ಇದಕ್ಕಾಗಿ ಕೇಂದ್ರ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿಯು 2010ರಲ್ಲಿ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೊಟಗಿರಿಯಲ್ಲಿ ಮಹತ್ವದ ಸಮಾವೇಶ ನಡೆಸುವ ತೀರ್ಮಾನ ತೆಗೆದುಕೊಂಡಿತ್ತು. ಈ ಅಭಿಯಾನವನ್ನು ಹೈಜಾಕ್ ಮಾಡಲಾಗಿದೆ ಎಂದು ಹೇಳಲು ಕಾರಣವೆಂದರೆ, ಈ ಅಭಿಯಾನಕ್ಕೆ ಸಂಬಂಧಿಸಿದಂತೆ ವೆಬ್ ಸೈಟ್ (www.savethewesternghats.org) ಆರಂಭಿಸಲಾಗಿದೆ. ಇದರಲ್ಲಿ ಅಭಿಯಾನದ ಪಾಲುದಾರರು (ಪಾಟ್ನರ್ಸ್) ಯಾರೆಂದು ಪ್ರಕಟಿಸಲಾಗಿದೆ.

ಪಾಲುದಾರರು ಯಾರೆಂದರೆ?

ಕ್ರಿಟಿಕಲ್ ಎಕೋ ಸಿಸ್ಟಮ್ ಪಾಟ್ನರ್‌ಶಿಪ್ ಫಂಡ್: ಇದು ಶ್ರೀಮಂತ ಜೀವವೈವಿಧ್ಯತೆಯ ಪ್ರದೇಶಗಳನ್ನು, ಜೀವವೈವಿಧ್ಯತೆಯ ಸೂಕ್ಷ್ಮ ತಾಣಗಳನ್ನು ಸಂರಕ್ಷಿಸಲು ಹಣಕಾಸು ನೆರವು ನೀಡುವ ಉದ್ದೇಶದಿಂದಲೇ 2000ರಲ್ಲಿ ಹುಟ್ಟಿಕೊಂಡ ಒಂದು ಅಂತಾರಾಷ್ಟ್ರೀಯ ಸಂಘಟನೆ. ಫ್ರೆಂಚ್‌ ಡೆವಲಪ್‌ಮೆಂಟ್ ಏಜೆನ್ಸಿ, ಐರೋಪ್ಯ ರಾಷ್ಟ್ರಗಳ ಒಕ್ಕೂಟ, ವರ್ಲ್ಡ್ ಬ್ಯಾಂಕ್, ಜಪಾನ್ ಸರ್ಕಾರ, ಕನ್ಸರ್ವೆಷನ್‌ ಇಂಟರ್‌ನ್ಯಾಷನಲ್ ಸೇರಿದಂತೆ ಒಟ್ಟು ಏಳು ಸಂಸ್ಥೆಗಳು ಇದಕ್ಕೆ ಹಣಕಾಸು ನೀಡುತ್ತವೆ. ಇದನ್ನು ಹಂಚುವ ಕೆಲಸವನ್ನು ಈ ಸಂಘಟನೆ ಮಾಡುತ್ತದೆ. (ಪಶ್ಚಿಮ ಘಟ್ಟ ಉಳಿಸಿ ಅಭಿಯಾನಕ್ಕೆ 25 ವರ್ಷಗಳಾದ ಹಿನ್ನೆಲೆಯಲ್ಲಿ, 2012ರಲ್ಲಿ ಕಾರ್ಯಕ್ರಮವೊಂದನ್ನು ಏರ್ಪಡಿಸಲಾಗಿತ್ತು. ಇದರ ಸಂಪೂರ್ಣ ಪ್ರಾಯೋಜಕತ್ವವನ್ನು ಈ ಸಂಸ್ಥೆ ವಹಿಸಿಕೊಂಡಿತ್ತು!)
ಈ ಸಂಸ್ಥೆ ಕುರಿತ ಮಾಹಿತಿಗೆ ಇಲ್ಲಿ ಕ್ಲಿಕ್‌ ಮಾಡಿ; https://www.cepf.net/

ಇಂಡೀಜಿನಿಯಸ್ ಪಾಟ್ನರ್‌ಶಿಪ್ ಫಾರ್ ಅಗ್ರೋ- ಬಯೋಡೈರ್ವಸಿಟಿ ಆ್ಯಂಡ್ ಫುಡ್ ಸಾವ್ರಿನಿಟಿ (The Indigenous Partnership for Agro-Biodiversity and Food Sovereignty (Indigenous Partnership) : ಇದೊಂದು ಕೃಷಿಯಲ್ಲಿನ ಜೀವವೈವಿಧ್ಯತೆಯನ್ನು ಸಂರಕ್ಷಿಸಲು ಕೆಲಸ ಮಾಡುತ್ತಿರುವ, ಮಾಡುವವರಿಗೆ ಹಣಕಾಸು ಒದಗಿಸುವ ಅಂತಾರಾಷ್ಟ್ರೀಯ ಸಂಘಟನೆಯಾಗಿದೆ. ಈ ಸಂಸ್ಥೆ ಕುರಿತ ಮಾಹಿತಿಗೆ ಇಲ್ಲಿ ಕ್ಲಿಕ್‌ ಮಾಡಿ; https://www.agrobiodiversitypar.org

ಲ್ಯಾಬ್ ಇಂಡಿಯಾ ಇನ್‌ಸ್ಟ್ರುಮೆಂಟ್ ಪ್ರವೇಟ್ ಲಿಮಿಟೆಡ್: ಕಳೆದ ೪೦ ವರ್ಷಗಳಿಂದ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮ ದೇಶದ ಕಂಪನಿ. (ಗಮನಿಸಿ: ಜೈವಿಕ ತಂತ್ರಜ್ಞಾನದಲ್ಲಿ ಕಾರ್ಯ ನಿರ್ವಹಿಸುವ ಕಂಪನಿಗಳಿಗೆ ಜೀವ ವೈವಿಧ್ಯತೆಯ ಸಂರಕ್ಷಣೆ ಬಹಳ ಮುಖ್ಯ) ಈ ಸಂಸ್ಥೆ ಕುರಿತ ಮಾಹಿತಿಗೆ ಇಲ್ಲಿ ಕ್ಲಿಕ್‌ ಮಾಡಿ; http://www.labindia.com/

ಇದರ ಜತೆಗೆ ಬ್ಯಾಂಕ್ ಆಫ್‌ ಬರೋಡ ಮತ್ತು ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾ ಕೂಡ ಈ ಆಂದೋಲನದ ಪಾಲುದಾರರಾಗಿದ್ದಾರೆ. ನಮ್ಮ ಆಂದೋಲನದಲ್ಲಿ 200ಕ್ಕೂ ಹೆಚ್ಚು ಸಂಘಟನೆಗಳು, ವ್ಯಕ್ತಿಗಳು ಭಾಗವಹಿಸುತ್ತಿದ್ದಾರೆ ಎಂದು ವೆಬ್‌ನಲ್ಲಿ ಪಶ್ಚಿಮ ಘಟ್ಟ ಉಳಿಸಿ ಅಭಿಯಾನವನ್ನು ಈಗ ಮುನ್ನೆಡೆಸುತ್ತಿರುವವರು ಹೇಳಿಕೊಂಡಿದ್ದಾರೆ.

ಆಂದೋಲನ ನಡೆಸಲು ಇವರೆಲ್ಲರ ‘ಸಹಕಾರ’ ಅಗತ್ಯ ಎಂದು ಈಗ ಯಾರಿಗಾದರೂ ಅನ್ನಿಸಬಹುದು! ಹೌದು, ಪ್ರತಿ ಹೋರಾಟಕ್ಕೂ ಖರ್ಚು-ವೆಚ್ಚ ಇದ್ದೇ ಇರುತ್ತದೆ. 1987-88ರಲ್ಲಿ ನಡೆದ ಪಾದಯಾತ್ರೆ ಸಂದರ್ಭದಲ್ಲಿಯೂ ದುಡ್ಡು ಖರ್ಚಾಗಿತ್ತು. ಅಂದಾಜಿನ ಪ್ರಕಾರ ಒಟ್ಟು ಸುಮಾರು 3 ಕೋಟಿ ರೂಪಾಯಿ ದುಡ್ಡಿನ ವ್ಯವಹಾರ ನಡೆದಿತ್ತು. ಇದನ್ನು ಆಗಿನ ಆಂದೋಲನದಲ್ಲಿ ಭಾಗಿಯಾಗಿದ್ದ ‘ಪೀಸ್‌ಫುಲ್ ಸೊಸೈಟಿ’ಯೇ ತನ್ನ ವೆಬ್‌ಸೈಟ್‌ನಲ್ಲಿ ಹೇಳಿಕೊಂಡಿದೆ. ಈ ಹಣವನ್ನು ಬಹುತೇಕವಾಗಿ ಜನರಿಂದಲೇ ಸಂಗ್ರಹಿಸಿ, ಖರ್ಚು ಮಾಡಲಾಗಿತ್ತು. ಅಭಿಯಾನದ ಕೇಂದ್ರ ಸಂಚಾಲನ ಸಮಿತಿಯ ಒಟ್ಟಾರೆ ಬಜೆಟ್ 4.8 ಲಕ್ಷ ರೂ.ಗಳಾಗಿತ್ತಂತೆ. ಇದಕ್ಕೆ  ಆಗಿನ ಕೇಂದ್ರ ಸರಕಾರದ ಪರಿಸರ ಸಚಿವಾಲಯವೇ ವಿಶೇಷವಾಗಿ ಅನುದಾನ ನೀಡಿತ್ತು. ಎಷ್ಟು ಗೊತ್ತೇ, 3.8 ಲಕ್ಷ ರೂ. ! ಹೀಗಾಗಿ ಪಾದಯಾತ್ರೆ ಕೊನೆಗೊಂಡಾಗ ಕೇಂದ್ರ ಸಂಚಾಲನ ಸಮಿತಿಯ ಬಳಿ 28 ಸಾವಿರ ರೂಪಾಯಿ ಖರ್ಚಾಗದೇ ಉಳಿದಿತ್ತಂತೆ!

ಪರಿಸರ ಉಳಿಸುವ ಚಳವಳಿ ಇರಲೀ, ಇನ್ಯಾವುದೇ ಚಳವಳಿ ಇರಲಿ ಅದು ಜನರ ನಡುವಿನಿಂದಲೇ ಹುಟ್ಟಬೇಕು ಮತ್ತು ಅದು ಜನರ ದುಡ್ಡಿನಿಂದಲೇ ನಡೆಯಬೇಕು ಎಂಬ ಮಾತಿದೆ. ಇದಕ್ಕೆ ವಿರುದ್ಧವಾಗಿ ಈಗಿನ ಪಶ್ಚಿಮಘಟ್ಟ ಉಳಿಸಿ ಅಭಿಯಾನ ಹೊರಟಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತಿದೆ.

ಕೊಟಗಿರಿಯಲ್ಲಿ ನಡೆದಿದ್ದೇನು?

ಸಮಾವೇಶಕ್ಕೆ ಆಗಮಿಸುತ್ತಿರುವ ವಿದೇಶಿ ಪ್ರತಿನಿಧಿಗಳು

ಗೋವಾದಲ್ಲಿ ನಡೆದ ಸಭೆಯ ತೀರ್ಮಾನದಂತೆ 2010ರ ಫೆಬ್ರವರಿ 18 ರಿಂದ 20ರ ವರೆಗೆ ಕೊಟಗಿರಿಯ  ‘ಕೀಸ್ಟೋನ್‌ ಫೌಂಡೇಷನ್‌’ ಎಂಬ ಎನ್‌ಜಿಒ ಒಂದರ ಕ್ಯಾಂಪಸ್‌ನಲ್ಲಿ, ‘ಪಶ್ಚಿಮ ಘಟ್ಟ ಉಳಿಸಿ ಅಭಿಯಾನ’ದ ಮಹತ್ವದ ಸಮಾವೇಶ ನಡೆಯಿತು. ಇದರಲ್ಲಿ ಭಾಗವಹಿಸಿದ್ದು ಕೂಡ ನಾಗರಿಕ ಸಂಘಟನೆಗಳ ಪ್ರತಿನಿಧಿಗಳಿಗಿಂತ ಹೆಚ್ಚಾಗಿ ಎನ್‌ಜಿಒ ಪ್ರತಿನಿಧಿಗಳೇ. ಏಟ್ರೀ, ಡಬ್ಲ್ಯುಡಬ್ಲ್ಯುಎಫ್‌ ಇಂಡಿಯಾ, ಅವೇರ್ ಟ್ರಸ್ಟ್, ಎಕೋಫೋರಂ, ದಿ ನೇಚರ್ ಟ್ರಸ್ಟ್, ಎಕೋನೆಟ್, ವೈಲ್ಡ್‌ಲೈಫ್‌ ಟ್ರಸ್ಟ್… ಈ ರೀತಿಯ ಸಂಘಟನೆಗಳೇ ಪ್ರಮುಖ ಪಾತ್ರ ವಹಿಸಿದ್ದವು. ನಮ್ಮ ರಾಜ್ಯದ ಪರಿಸರವಾದಿಗಳಾದ ಪಾಂಡುರಂಗ ಹೆಗಡೆ, ಎಸ್.ಆರ್. ಹಿರೇಮಠ್, ಆಗುಂಬೆ ರೈನ್‌ಫಾರೆಸ್ಟ್ ರೀಸರ್ಚ್ ಸ್ಟೇಷನ್‌ನ ಗೌರಿ ಶಂಕರ್ ಮತ್ತಿತರರು ಕೂಡ ಭಾಗವಹಿಸಿ, ತಮ್ಮ ಅಭಿಪ್ರಾಯ ಮಂಡಿಸಿದ್ದರು.

ಪ್ರಧಾನಿ ನೇತೃತ್ವದ ಹವಾಮಾನ ಬದಲಾವಣೆ ಕುರಿತ ರಾಷ್ಟ್ರೀಯ ಕ್ರಿಯಾ ಯೋಜನೆಯಲ್ಲಿ ಪಶ್ಚಿಮಘಟ್ಟವನ್ನು ಸೇರ್ಪಡೆಗೊಳಿಸುವುದು, ಗಣಿಗಾರಿಕೆಯನ್ನು ಸಂಪೂರ್ಣ ತಡೆಗಟ್ಟುವುದು, ಸಾವಯವ ಕೃಷಿ ಪದ್ಧತಿಯನ್ನು ಪ್ರೊತ್ಸಾಹಿಸುವುದು, ಹಸಿರು ನ್ಯಾಯಾಲಯದ ಸ್ಥಾಪನೆ, ಪಶ್ಚಿಮ ಘಟ್ಟದಲ್ಲಿ ಅಭಿವೃದ್ಧಿಯೋಜನೆಗಳ ಮೇಲೆ ನಿಯಂತ್ರಣ ಮತ್ತಿತರ ವಿಷಯಗಳ ಕುರಿತು ಈ ಸಮಾವೇಶದಲ್ಲಿ ಚರ್ಚೆ ನಡೆಯಿತು.

ಬಹಳ ಮುಖ್ಯವಾಗಿ ಆಗಿನ ಪರಿಸರಖಾತೆ ಸಚಿವ ಜಯರಾಮ್ ರಮೇಶ್ ಈ ಸಮಾವೇಶವನ್ನು ಉದ್ಘಾಟಿಸಿ, ಕಲಾಪಗಳಲ್ಲಿ ಭಾಗವಹಿಸಿದ್ದರು. ಪಶ್ಚಿಮಘಟ್ಟದ ಸಂರಕ್ಷಣೆ ಕುರಿತು ಸಂವಾದದಲ್ಲಿ ಕೂಡ ಭಾಗವಹಿಸಿದ್ದರು. (ಈ ಸಮಾವೇಶದಲ್ಲಿ ಒಟ್ಟು ಐದು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು, ಈ ನಿರ್ಣಯಗಳನ್ನು ನೀಲಗಿರಿ ಡಿಕ್ಲರೇಷನ್ ಎಂದು ಕರೆಯಲಾಗಿದೆ) ಈ ಸಂದರ್ಭದಲ್ಲಿ, ಪಶ್ಚಿಮ ಘಟ್ಟದ ಸಂರಕ್ಷಣೆಗೆ ಸಂಬಂಧಿಸಿದಂತೆ ತಜ್ಞರಾದ ಮಾಧವ ಗಾಡ್ಗೀಳ್ ಅವರ ನೇತೃತ್ವದಲ್ಲಿಯೇ ಪರಿಸರ ತಜ್ಞರ ಸಮಿತಿಯೊಂದನ್ನು ರಚಿಸಿ, ವರದಿ ತರಿಸಿಕೊಳ್ಳಬೇಕೆಂದು ಒತ್ತಾಯಿಸಲಾಗಿತ್ತು.

ಸಮಾವೇಶದಲ್ಲಿ ಭಾಗವಹಿಸಿದ್ದ ಆಗಿನ ಪರಿಸರ ಖಾತೆ ಸಚಿವ ಜಯರಾಮ್‌ ರಮೇಶ್‌

ಈ ಸಮಿತಿಯಲ್ಲಿ ಯಾರ್ಯಾರು ಇರಬೇಕು, ವರದಿ ಹೇಗಿರಬೇಕು ಎಂಬುದನ್ನು ಕೂಡ ಎನ್‌ಜಿಒಗಳ ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಭೆಯೇ ತೀರ್ಮಾನಿಸಿ, ಸಚಿವರಿಗೆ ಸೂಚನೆ ನೀಡಿತ್ತು! ಅಲ್ಲದೆ, ‘ಪಶ್ಚಿಮಘಟ್ಟ ಪರಿಸರ ಪ್ರಾಧಿಕಾರ’ ರಚಿಸಿ, ಪಶ್ಚಿಮ ಘಟ್ಟದ ಆಡಳಿತಕ್ಕೇ ಬೇರೆ ವ್ಯವಸ್ಥೆ ಮಾಡಬೇಕೆಂದು ಅಲ್ಲಿದ್ದ ಪರಿಸರವಾದಿಗಳು ಒತ್ತಾಯಿಸಿದ್ದರು!. ಸಚಿವರಾದ ಜಯರಾಮ್ ರಮೇಶ್ ಈ ಬೇಡಿಕೆಗಳನ್ನು ಈಡೇರಿಸುವ ಕುರಿತು ಸಮಾವೇಶದಲ್ಲಿ ಮಾತು ಕೊಟ್ಟಿದ್ದರು.

ಆ ಮಾತಿನಂತೆಯೇ ಕೇವಲ ಹದಿನೈದು ದಿನಗಳ ಒಳಗೆ ಅಂದರೆ ಮಾರ್ಚ್ 4, 2010ರಂದೇ ಗಾಡ್ಗೀಳ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ (Western Ghats Ecology Expert Panel), ಆದೇಶ ಹೊರಡಿಸಿದರು. ಕೊನೆಗೆ ವರದಿಯು ನಿರೀಕ್ಷೆಯಂತೆ, ನಿಗದಿತ ಸಮಯದಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗುವಂತೆಯೂ ನೋಡಿಕೊಂಡಿದ್ದರು.

ಸಮಾವೇಶದ ವರದಿಯ ಮುಖಪುಟ

ಈ ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸಿದ್ದ ‘ಕೀಸ್ಟೋನ್‌ ಫೌಂಡೇಷನ್‌’ ಕೂಡ ನಿಲಿಗಿರಿ ಜೈವಿಕ ತಾಣವನ್ನು ಸಂರಕ್ಷಿಸಲು ಹಗಲಿರುಳು ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆ!  ಈ ಕೆಲಸಕ್ಕೆ ಇದು 13 ಸಂಸ್ಥೆಗಳಿಂದ ಹಣಕಾಸಿನ ನೆರವು ಪಡೆಯುತ್ತಿದೆ. ಇದಕ್ಕೆ ನೆರವು ನೀಡುತ್ತಿರುವ ಸಂಸ್ಥೆಗಳಲ್ಲಿ ಮುಖ್ಯವಾದ ಏಜೆನ್ಸಿಗಳೆಂದರೆ, ನೆದರ್ ಲ್ಯಾಂಡ್‌ನ ಬೋತ್‌ಎಂಡ್ಸ್ (https://www.bothends.org/en/), ಬ್ರಿಟನ್‌ನಲ್ಲಿನ ಬೀಸ್ ಫಾರ್ ಡೆವಲಪ್‌ಮೆಂಟ್, ದೆಹಲಿಯ ಫೋರ್ಡ್ ಫೌಂಡೇಷನ್, ಸ್ವೀಡನ್ ದೇಶದ ಸ್ವಾಲ್ವೋಸ್ ಮತ್ತು ಫ್ಯೂಚರ್ ಅರ್ಥ್ ಮುಂತಾದವು.

ಅಂದ ಹಾಗೆ ಪಶ್ಚಿಮ ಘಟ್ಟ ಉಳಿಸಿ ಅಭಿಯಾನದ ಸಮಾವೇಶವನ್ನೂ ಕೀಸ್ಟೋನ್ ಫೌಂಡೇಷನ್ ವಿದೇಶಿ ಸಂಸ್ಥೆಗಳ ನೆರವು ಪಡೆದೇ ನಡೆಸಿದೆ. ಇದನ್ನು ಅದು ತನ್ನ ವರದಿಯಲ್ಲಿ ಬಹಿರಂಗ ಪಡಿಸಿದೆ ಕೂಡ. ಸಮಾವೇಶದ ಕುರಿತು ಆಕರ್ಷಕವಾಗಿ ಸಿದ್ಧಪಡಿಸಲಾದ ಈ ವರದಿಯ ಕೊನೆಯಲ್ಲಿ ಏನೆಂದು ಬರೆಯಲಾಗಿದೆ ಗೊತ್ತೇ, THE MEET WAS PARTLY SUPPORTED BY BOTH ENDS, NETHERLANDS & SWALLOWS, SWEDEN ಹೀಗೆ ವಿದೇಶಿ ಹಣದಲ್ಲಿ ನಡೆಯುವ ಸಂಘಟನೆಗಳ ಪ್ರತಿನಿಧಿಗಳು, ವಿದೇಶಿ ನೆರವಿನಲ್ಲಿಯೇ ಚಿಂತನೆ ನಡೆಸಿ, ಪಶ್ಚಿಮಘಟ್ಟದ ಉಳಿವಿಗಾಗಿ ತೆಗೆದುಕೊಂಡ ಕ್ರಮ ಈಗ ಪಶ್ಚಿಮಘಟ್ಟದ ತಪ್ಪಲಿನ ಜನರ ಭೀತಿಗೆ ಕಾರಣವಾಗಿದೆ.

ಇದನ್ನೂ ಓದಿ | Kasturirangan Report | ಪರಿಸರ ಸೂಕ್ಷ್ಮ ಪ್ರದೇಶ; ಮತ್ತೊಂದು ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

Cyber Crime: ಮಹತ್ವದ ಕಾರ್ಯಾಚರಣೆಯಲ್ಲಿ ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ ತಂಡ ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದೆ. ಸದ್ಯ ವಂಚಕ ಜಾಲಕ್ಕೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Cyber Crime
Koo

ಬೆಂಗಳೂರು: ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ (Cyber Crime) ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದೆ. ಸದ್ಯ ವಂಚಕ ಜಾಲಕ್ಕೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವಿಶಾಖಪಟ್ಟಣಂ ಮೂಲದ ಈತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ವಂಚಕರ ಜಾಲ ನಕಲಿ ದಾಖಲೆ ನೀಡಿ ಏಜೆಂಟ್‌ಗಳ ಮೂಲಕ ವಿವಿಧ ಕಂಪನಿಗಳ ಸಿಮ್ ಖರೀದಿ ಮಾಡುತ್ತಿತ್ತು. ಬೆಂಗಳೂರು, ಚೆನ್ನೈ, ವಿಶಾಖಪಟ್ಟಣ ಸೇರಿ ದೇಶದ ಬೇರೆ ಬೇರೆ ಮಹಾನಗರಗಳಿಂದ ಸಿಮ್ ಖರೀದಿಸಿ ನಂತರ ಆಕ್ಟೀವ್ ಮಾಡಿ ವಿಯೆಟ್ನಾಂ ಹಾಗೂ ಕಾಂಬೋಡಿಯಾಕ್ಕೆ ಕೊರಿಯರ್ ಮೂಲಕ ಕಳುಹಿಸಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಚೆನ್ನೈನಿಂದ ಬೆಂಗಳೂರಿಗೆ ಬಳಿಕ ಬೆಂಗಳೂರಿಂದ ವಿಯೆಟ್ನಾಂಗೆ ಸಿಮ್ ರವಾನಿಯಾಗುತ್ತಿತ್ತು. ಜತೆಗೆ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಬಂದು ಇಲ್ಲಿಂದ ಕಾಂಬೋಡಿಯಾಗೆ ಸಿಮ್ ಕಳುಹಿಸಲಾಗುತ್ತಿತ್ತು. ಭಾರತದಿಂದ ಕೊರಿಯರ್ ಮೂಲಕ ವಿದೇಶಕ್ಕೆ ಹೋದ ಸಿಮ್‌ಗಳಿಂದ ವಾಟ್ಸಾಪ್‌ ಓಪನ್‌ ಮಾಡಿಕೊಳ್ಳುತ್ತಿದ್ದ ವಂಚಕರು ಬಳಿಕ ಬಲೆ ಬೀಸುತ್ತಿದ್ದರು. ಭಾರತೀಯ ನಂಬರ್‌ಗಳೇ ಇವರ ಟಾರ್ಗೆಟ್‌. ದೇಶದ ಬೇರೆ ಬೇರೆ ಭಾಗದ ಜನರನ್ನು ಸೋಷಿಯಲ್ ಮೀಡಿಯಾ ಮೂಲಕ ಸಂಪರ್ಕಿಸಿ ವಂಚನೆ ನಡೆಸುತ್ತಿತ್ತು.

ವಂಚನೆ ಹೇಗೆ?

ವಾಟ್ಸಾಪ್‌ನಲ್ಲಿ ಷೇರು ಮಾರ್ಕೆಟ್ ಹೂಡಿಕೆ, ಮನೆಯಲ್ಲಿ ಕೂತು ಮಾಡಬಹುದುದಾದ ಪಾರ್ಟ್ ಟೈಂ ಜಾಬ್ ಆಫರ್ ನೀಡುವ ಮೂಲಕ ವಂಚಕರು ಗ್ರಾಹಕರನ್ನು ನಂಬಿಸುತ್ತಿದ್ದರು. ಆರೋಪಿಗಳು ಕಳುಹಿಸುವ ಜಾಹೀರಾತು ನಂಬಿ ಲಿಂಕ್ ಒಪನ್ ಮಾಡಿದರೆ, ಓಟಿಪಿ ಶೇರ್ ಮಾಡಿದರೆ ಸಾಕು ವಂಚಕರು ಹಣ ಎಗರಿಸುತ್ತಿದ್ದರು. ಸದ್ಯ ವಂಚಕ ಜಾಲಕ್ಕೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಈಶಾನ್ಯ ಸೈಬರ್ ಕ್ರೈಂ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ | Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಬೆನ್ನಲ್ಲೇ ನಡೆದ ಅಂಜಲಿ ಹತ್ಯೆ ಪ್ರಕರಣ (Anjali Murder Case) ಅವಳಿ ನಗರದ ಜನರನ್ನು ಬೆಚ್ಚಿ ಬೀಳಿಸಿದೆ. ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್‌ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿದ ಬೆನ್ನಲ್ಲೇ ಇದೀಗ ಐಪಿಎಸ್ ಅಧಿಕಾರಿಯ ತಲೆದಂಡವಾಗಿದೆ. ಕಾನೂನು ಸುವ್ಯವಸ್ಥೆ‌ ಕಾಪಾಡುವಲ್ಲಿ ಲೋಪ ಎಸಗಿದ್ದರಿಂದ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅಮಾನತುಗೊಂಡಿದ್ದಾರೆ.

ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗೃಹ ಸಚಿವರು ಹುಬ್ಬಳ್ಳಿ‌ಗೆ ಭೇಟಿ ನೀಡುವ ಮುನ್ನಾ ಅಮಾನತು ಆದೇಶ ಹೊರಬಿದ್ದಿದ್ದು, ಸೋಮವಾರ ಹುಬ್ಬಳ್ಳಿಗೆ ಗೃಹ ಸಚಿವ ಪರಮೇಶ್ವರ್ ಆಗಮಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಕ್ರಮವಾಗಿದೆ. ಇನ್ನು ಈ ಪ್ರಕರಣದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತರ ತಲೆದಂಡವೂ ಆಗಲಿದೆ ಎನ್ನಲಾಗುತ್ತಿದೆ.

Continue Reading

ಐಪಿಎಲ್ 2024

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

IPL 2024: ಶನಿವಾರ ನಡೆದ ಐಪಿಎಲ್‌ 2024 (IPL 2024)ರ ಹೈವೋಲ್ಟೇಜ್‌ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಮಣಿಸಿ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊನೆಗೂ ಹಾಲಿ ಚಾಂಪಿಯನ್‌ ಚೆನ್ನೈಯನ್ನು 27 ರನ್‌ಗಳ ಅಂತರದಿಂದ ಸೋಲಿಸುವುದರೊಂದಿಗೆ ಆರ್‌ಸಿಬಿ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಕಂಡು ಬಂತು.

VISTARANEWS.COM


on

IPL 2024
Koo

ಬೆಂಗಳೂರು: ಆರ್‌ಸಿಬಿ (RCB) ಅಭಿಮಾನಿಗಳು ಗೆಲುವಿನ ನಿಟ್ಟುಸಿರು ಬಿಟ್ಟಿದ್ದಾರೆ. ಶನಿವಾರ ನಡೆದ ಐಪಿಎಲ್‌ 2024 (IPL 2024)ರ ಹೈವೋಲ್ಟೇಜ್‌ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK)​ ತಂಡವನ್ನು ಮಣಿಸಿ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಿದೆ. ಅಭಿಮಾನಿಗಳು ಈ ಪಂದ್ಯವನ್ನು ಅಕ್ಷರಶಃ ಫೈನಲ್‌ ಎಂದೇ ಪರಿಗಣಿಸಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊನೆಗೂ ಹಾಲಿ ಚಾಂಪಿಯನ್‌ ಚೆನ್ನೈಯನ್ನು 27 ರನ್‌ಗಳ ಅಂತರದಿಂದ ಸೋಲಿಸುವುದರೊಂದಿಗೆ ಆರ್‌ಸಿಬಿ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಕಂಡು ಬಂತು.

ಪಂದ್ಯ ಮುಕ್ತಾಯವಾದಾಗ ತಡರಾತ್ರಿಯಾಗಿದ್ದರೂ ಅಭಿಮಾನಿಗಳ ಸಡಗರಕ್ಕೆ ಕೊರತೆ ಇರಲಿಲ್ಲ. ಪುಟ್ಟ ಮಕ್ಕಳು ಸೇರಿದಂತೆ ಆರ್‌ಸಿಬಿ ಫ್ಯಾನ್ಸ್‌ ರಸ್ತೆಯಲ್ಲೇ ಕುಣಿದು ಕುಪ್ಪಳಿಸಿದರು. ಮಕ್ಕಳಂತೂ ಈ ಸಲ ಕಪ್ ನಮ್ದೆ ಎನ್ನುವ ಘೋಷಣೆ ಕೂಗುತ್ತಿರುವುದು ಕಂಡು ಬಂತು. ಚಿನ್ನಸ್ವಾಮಿ ಕ್ರೀಡಾಂಗಣದ ಎದುರಿನ ರಸ್ತೆ ಬ್ಲಾಕ್ ಮಾಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ಇದು ನಿಜವಾದ ಹೊಸ ಅಧ್ಯಾಯ ಎನ್ನುವ ಮಾತು ಎಲ್ಲೆಡೆ ಕೇಳಿ ಬಂದಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿಯದ್ದೇ ಹವಾ

ಇನ್ನು ಸೋಷಿಯಲ್‌ ಮೀಡಿಯಾದಲ್ಲಂತೂ ಆರ್‌ಸಿಬಿ ಹವಾ ಕಂಡು ಬಂದಿದೆ. ಸತತ ಸೋಲಿನ ಬಳಿಕ ಗ್ರೇಟ್‌ ಕಂಬ್ಯಾಕ್‌ ಎಂದೆಲ್ಲ ಫ್ಯಾನ್ಸ್‌ ಹೊಗಳುತ್ತಿದ್ದಾರೆ. ಮೊದಲ 8 ಪಂದ್ಯಗಳ ಪೈಕಿ 1ರಲ್ಲಿ ಮಾತ್ರ ಗೆಲುವು ಒಲಿದಿತ್ತು. ಆದರೆ ಬಳಿಕದ 6 ಪಂದ್ಯಗಳ ಪೈಕಿ 6ರಲ್ಲಿಯೂ ಗೆಲುವು ಸಾಧಿಸಿದ್ದೇವೆ. ಇದು ನಿಜವಾದ ಹೊಸ ಅಧ್ಯಾಯ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ. ನಿಜವಾಗಿಯೂ ಒಂದು ಥ್ರಿಲ್ಲರ್‌ ಸಿನಿಮಾ ನೋಡಿದ ಅನುಭವವಾಯಿತು ಎಂದು ಪಂದ್ಯ ಮುಗಿದ ಬಳಿಕ ರೋಮಾಂಚಿತರಾದ ಆರ್‌ಸಿಬಿಯ ಕಟ್ಟಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. 6 ಸತತ ಗೆಲುವಿನ ಮೂಲಕ ಪ್ಲೇ ಆಫ್‌ ಪ್ರವೇಶಿಸುವುದು ಸುಲಭದ ಮಾತಲ್ಲ. ಅತ್ಯುತ್ತಮ ಪ್ರದರ್ಶನ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

ಮತ್ತೆ ಸದ್ದು ಮಾಡುತ್ತಿದೆ ಈ ಸಲ ಕಪ್‌ ನಮ್ದೆ

ಬ್ಯಾಕ್‌ ಟು ಬ್ಯಾಕ್‌ ಗೆಲುವಿನ ಮೂಲಕ ರಾಯಲ್‌ ಆಗಿಯೇ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಜತೆಗೆ ಈ ಸಲ ಜಪ್‌ ನಮ್ದೆ ಘೋಷ ವಾಕ್ಯ ಮತ್ತೆ ಮೊಳಗತೊಡಗಿದೆ. ಈ ಹಿಂದೆ ಆರ್‌ಸಿಬಿ ಮಹಿಳಾ ತಂಡ ಕಪ್‌ ಜಯಿಸಿತ್ತು. ಇದೀಗ ಪುರುಷರ ತಂಡದ ಸರದಿ ಎಂಬ ಲೆಕ್ಕಾಚಾರವೂ ಶುರುವಾಗಿದೆ.

ಇದನ್ನೂ ಓದಿ: RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

ಹೊರ ಬಿದ್ದ ಚೆನ್ನೈ

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು. ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು.

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. 50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಮರದಡಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ.

ಇದನ್ನೂ ಓದಿ: Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಆರೆಂಜ್‌, ಯೆಲ್ಲೋ ಅಲರ್ಟ್‌

ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯೊಂದಿಗೆ ಗುಡುಗು, ಬಿರುಗಾಳಿಯು ಗಂಟೆಗೆ 30-40 ಕಿ.ಮೀ ಬೀಸಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

ಈ ಅಪರಾಧಗಳ ನಡುವೆ ಎದ್ದು ಕಾಣಿಸುತ್ತಿರುವುದು, ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಹೆಚ್ಚಳ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ಇತ್ತೀಚಿನ ನಿದರ್ಶನಗಳಾಗಿವೆ. ಇನ್ನೂ ಹತ್ತು ಹಲವನ್ನು ಉದಾಹರಿಸಬಹುದು. ರಾಜ್ಯದಲ್ಲಿ ಪೊಲೀಸ್ ಇಲಾಖೆ ಹಿಂದೆಂದೂ ಇಲ್ಲದಷ್ಟು ದುರ್ಬಲವಾದಂತೆ ಕಾಣುತ್ತಿದೆ.

VISTARANEWS.COM


on

Karnataka Police
Koo

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National crime records bureau- NCRB) ಇತ್ತೀಚೆಗಿನ ಅಪರಾಧಗಳ ಅಂಕಿ ಅಂಶವನ್ನು ಪ್ರಕಟಿಸಿದ್ದು, ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳ (crimes) ಸಂಖ್ಯೆ ಮಿತಿ ಮೀರಿ ಹೆಚ್ಚಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಕಳೆದ ಜನವರಿಯಿಂದ ಏಪ್ರಿಲ್‌ವರೆಗೆ ಏರಿಕೆ ಪ್ರಮಾಣದಲ್ಲಿ ಕೊಲೆ (murder), ಅತ್ಯಾಚಾರ (physical abuse), ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು (Pocso) ನಡೆದಿವೆ. 2024ರ ಜನವರಿಯಿಂದ ಏಪ್ರಿಲ್ 30ರವರೆಗೆ ಅಂದರೆ 4 ತಿಂಗಳಲ್ಲಿ ಸುಮಾರು 430 ಕೊಲೆಗಳು (Murder), 198 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 2327 ಮಹಿಳೆಯರ ಮೇಲೆ ದೌರ್ಜನ್ಯ, 1262 ಮಕ್ಕಳ ಮೇಲೆ ದೌರ್ಜನ್ಯ, 7421 ಸೈಬರ್ ಕ್ರೈಂ, 450 ರಾಬರಿಗಳು ಸಂಭವಿಸಿವೆ. ಲೈಂಗಿಕ ದೌರ್ಜನ್ಯ ಹಾಗೂ ಸೈಬರ್ ವಂಚನೆ (cyber crime) ಗಗನಕ್ಕೆ ಏರಿವೆ. ಹಲ್ಲೆ, ಮಾರಣಾಂತಿಕ ಹಲ್ಲೆ ಕೇಸ್‌ಗಳು ಅಧಿಕವಾಗುತ್ತಾ ಸಾಗುತ್ತಿವೆ. ಇದು ಆತಂಕಕ್ಕೆ ಕಾರಣವಾಗಿದೆ.

ಎಂದಿನಂತೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಈ ಅಸ್ತ್ರವನ್ನು ಹಿಡಿದುಕೊಂಡು ಸರ್ಕಾರದ ಮೇಲೆ ದಾಳಿಗೆ ಇಳಿದಿವೆ. “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡೊಂಬೊಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ. ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯಾ?” ಎಂದು ವಿಪಕ್ಷ ನಾಯಕರು ಟೀಕಿಸಿದ್ದಾರೆ. ಜನಸಾಮಾನ್ಯರ ಮನದಲ್ಲಿರುವ ಪ್ರಶ್ನೆಯನ್ನೇ ಅವರು ಕೇಳಿದ್ದಾರೆ ಎನ್ನಬೇಕು. ಈ ಪ್ರಶ್ನೆಯನ್ನು ಕೇಳಿ ಅರ್ಧದಲ್ಲೇ ಕೈಬಿಡಬಾರದು. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವತ್ತ ಪ್ರಯತ್ನಿಸಬೇಕು. ಗೃಹ ಸಚಿವರು, ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಮಾಡಬೇಕು.

ಆದರೆ ಗೃಹ ಸಚಿವರು ಇದನ್ನು ಒಂದು ವಿಷಯವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. “ಒಂದೊಂದು ಘಟನೆಗೂ ಒಂದೊಂದು ಕಾರಣ ಅಂತ ಇರುತ್ತದೆ. ಅವರ (ಪ್ರತಿಪಕ್ಷದ) ಕಾಲದಲ್ಲಿ ಎಷ್ಟು ಮರ್ಡರ್ ಆಗಿತ್ತು ಅಂತೆ ಹೇಳಿದರೆ ಯಾವ ಸರ್ಕಾರದಲ್ಲಿ ಸುರಕ್ಷತೆ ಇತ್ತು ಅನ್ನೋದು ತಿಳಿಯುತ್ತೆ” ಎಂದಿದ್ದಾರೆ. “ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಇವರನ್ನು ಹೇಳ್ಕೊಂಡು, ಕೇಳ್ಕೊಂಡು ಸರ್ಕಾರ ಕಾನೂನು ಸುವ್ಯವಸ್ಥೆ ಮಾಡೋಕೆ ಆಗೊಲ್ಲ. ಏನು ಕ್ರಮ ಬೇಕಾದ್ರೂ ತಗೊಳ್ತೇವೆ” ಎಂದಿದ್ದಾರೆ. ಇದು ಒಬ್ಬರು ಇನ್ನೊಬ್ಬರ ಮೇಲೆ ದೂರು ಹಾಕಿ ಮುಗಿಸಬೇಕಾದ ಸಂಗತಿಯಲ್ಲ. ಯಾರೂ ಇಂಥ ವಿಚಾರಗಳಲ್ಲಿ ಸುಮ್ಮಸುಮ್ಮನೆ ಆರೋಪ ಮಾಡುವುದಿಲ್ಲ. ಮೇಲಾಗಿ, ಇದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಒದಗಿಸಿದ ಅಂಕಿಸಂಖ್ಯೆಗಳನ್ನು ಆಧರಿಸಿದೆ. ಹೀಗಾಗಿ ಆಳುವವರು ಇದನ್ನು ಗಂಭೀರವಾಗಿಯೇ ಪರಿಗಣಿಸಬೇಕಿದೆ.

ಈ ಅಪರಾಧಗಳ ನಡುವೆ ಎದ್ದು ಕಾಣಿಸುತ್ತಿರುವುದು, ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಹೆಚ್ಚಳ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ಇತ್ತೀಚಿನ ನಿದರ್ಶನಗಳಾಗಿವೆ. ಇನ್ನೂ ಹತ್ತು ಹಲವನ್ನು ಉದಾಹರಿಸಬಹುದು. ಹುಬ್ಬಳ್ಳಿಯಲ್ಲಿ ಕೊಲೆ ಮಾಡಿದವನು ಅಂಜಲಿ ಕೊಲೆ ಮಾಡಿದವನು, ತಾನು ನೇಹಾ ಕೊಲೆ ಮಾದರಿಯಲ್ಲಿ ಕೊಲ್ಲುತ್ತೇನೆ ಎಂದು ಮೊದಲೇ ಹೇಳಿಯೇ ಇದನ್ನು ಮಾಡುತ್ತಾನೆ. ಇದನ್ನು ಪೊಲೀಸರ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುವುದಿಲ್ಲ. ಅಂದರೆ ಇಲ್ಲಿ ಪೊಲೀಸರು ಎಷ್ಟು ಕಾರ್ಯಪ್ರವೃತ್ತರಾಗಿದ್ದಾರೆ ಎಂಬ ಅಂದಾಜು ಸಿಗುತ್ತದೆ. ಬಡವರು ಅನ್ಯಾಯಕ್ಕೊಳಗಾದರೆ ಕೇಳುವವರೇ ಇಲ್ಲವೇ? ಇಲ್ಲಿ ಪ್ರಜ್ವಲ್‌ ರೇವಣ್ಣನಂಥ ಪ್ರಭಾವಿ ಅಪರಾಧಿಗಳನ್ನು ರಾಜಕೀಯ ಕಾರಣಗಳಿಗಾಗಿ ಬೆನ್ನು ಹತ್ತಲಾಗುತ್ತದೆ; ಆದರೆ ಶ್ರೀಸಾಮಾನ್ಯರಿಗೆ ಇಲ್ಲಿ ಯಾವ ರಕ್ಷಣೆಯೂ ಇಲ್ಲವೇ? ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ನೂರಾರು ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಹರಿಬಿಡಲಾಗಿದೆ. ನೂರಾರು ಕುಟುಂಬಗಳನ್ನು ಛಿದ್ರಗೊಳಿಸುವಂತಹ ಇಂಥ ಅಪರಾಧಿಗಳ ಮೇಲೆ ಯಾವ ಕ್ರಮವೂ ಇಲ್ಲ! ಬದಲಾಗಿ ಅವರನ್ನು ರಕ್ಷಿಸಲಾಗುತ್ತಿದೆ.

ಇವೆಲ್ಲವೂ ಅಪಾಯಕಾರಿ ಬೆಳವಣಿಗೆ. “ಹೆಣ್ಣು ನಡುರಾತ್ರಿಯಲ್ಲಿ ಒಬ್ಬಳೇ ಓಡಾಡುವಂತಾದರೆ ದೇಶ ಸ್ವತಂತ್ರವಾದುದಕ್ಕೆ ಸಾರ್ಥಕ” ಎಂದು ಗಾಂಧೀಜಿ ಹೇಳಿದ್ದರಂತೆ. ನಡುರಾತ್ರಿಯಲ್ಲಿ ಬೇಡ, ನಡುಹಗಲಿನಲ್ಲಾದರೂ ಸುರಕ್ಷಿತವಾಗಿ ಓಡಾಡುವಂತಾದರೆ ಸಾಕು! ಕಾಲೇಜಿಗೆ ಹೋಗುವುದು, ಮನೆಯಲ್ಲಿರುವುದು ಮುಂತಾದ ಸರಳ ಕ್ರಿಯೆಗಳ ಸಂದರ್ಭದಲ್ಲಿ ಕೂಡ ಪಾತಕಿಗಳು ದಾಳಿ ನಡೆಸುತ್ತಾರೆ ಎಂದರೆ ಏನು ಹೇಳೋಣ? ಬೆಂಗಳೂರಿನ ಬೀದಿಗಳಲ್ಲಿ ರೌಡಿ ಶೀಟರ್‌ಗಳು ಯಾರ ಭಯವಿಲ್ಲದೆ ಗ್ಯಾಂಗ್‌ ಕಟ್ಟಿಕೊಂಡು ಹೊಡೆದಾಡುವುದು, ಸರ ಎಗರಿಸುವುದು, ಹಲ್ಲೆ, ಬೈಕ್‌ ವ್ಹೀಲಿಂಗ್‌ ನಡೆಸುತ್ತಿದ್ದಾರೆ. ಗೃಹ ಇಲಾಖೆ ದುರ್ಬಲವಾದಾಗ, ಪುಂಡರಿಗೆ ರಾಜಕಾರಣಿಗಳೇ ಕುಮ್ಮಕ್ಕು ನೀಡಿದಾಗ ಇಂಥ ಪ್ರವೃತ್ತಿ ಹೆಚ್ಚುತ್ತದೆ. ಇದಕ್ಕೆ ಈಗಲೇ ಕಡಿವಾಣ ಹಾಕದೆ ಹೋದರೆ ಮುಂದಿನ ದಿನಗಳ ದುರ್ಭರವಾಗಲಿವೆ.

ಇದನ್ನೂ ಓದಿ: Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Continue Reading
Advertisement
Kannada New Movie anartha cinema teaser Out
ಸ್ಯಾಂಡಲ್ ವುಡ್17 mins ago

Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

Air india
ದೇಶ21 mins ago

Air India: ಏರ್‌ ಇಂಡಿಯಾ ವಿಮಾನದಲ್ಲಿ ಮತ್ತೆ ಅವಘಡ; ತಪ್ಪಿದ ಭಾರೀ ದುರಂತ; ತುರ್ತು ಭೂ ಸ್ಪರ್ಶ

Aishwarya Rai undergo surgery post her return from Cannes Film Festival
ಬಾಲಿವುಡ್1 hour ago

Aishwarya Rai:   ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಮುಗಿದ ಬಳಿಕ ಐಶ್ವರ್ಯಾ ರೈ ಕೈಗೆ ಶಸ್ತ್ರ ಚಿಕಿತ್ಸೆ

IPL 2024
ಐಪಿಎಲ್ 20241 hour ago

IPL 2024: ಸಿಎಸ್‌ಕೆ ತಂಡವನ್ನು ಸೋಲಿಸಿದ ಆರ್‌ಸಿಬಿ; ಪ್ಲೇ ಆಫ್‌ನಲ್ಲಿ ಯಾರು ಯಾರಿಗೆ ಎದುರಾಳಿ? ಇಲ್ಲಿದೆ ವೇಳಾಪಟ್ಟಿ

viral video
ವೈರಲ್ ನ್ಯೂಸ್1 hour ago

Viral Video: ಛೀ…ಈತನೆಂಥಾ ಕಾಮುಕ! ಸಾರ್ವಜನಿಕ ಸ್ಥಳದಲ್ಲಿ ಈ ಪಾಪಿ ಬಾಲಕಿಗೆ ಮಾಡಿದ್ದೇನು ಗೊತ್ತಾ?

Kalki 2898 AD Keerthy Suresh Lends Her Voice To Bujji Car
ಟಾಲಿವುಡ್1 hour ago

Kalki 2898 AD: ಪ್ರಭಾಸ್‌ ಜೀವನದಲ್ಲಿ ಎಂಟ್ರಿ ಆದ ವ್ಯಕ್ತಿ ಇವರೇನಾ? ಏನದು ʻಬುಜ್ಜಿʼ?

Vijay Sethupathi Starrer Tamil Movie Teaser Released
ಕಾಲಿವುಡ್2 hours ago

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Arvind Kejriwal
ದೇಶ2 hours ago

Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Cyber Crime
ಕ್ರೈಂ2 hours ago

Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

ಸೈಬರ್‌ ಸೇಫ್ಟಿ cyber safety rules
ಅಂಕಣ3 hours ago

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌