Killer CEO : ಸುಚನಾ ಸೇಠ್‌ ಬಂಧನವೇ ರೋಚಕ; ಪೊಲೀಸರ ಕೈಹಿಡಿದ ಕೊಂಕಣಿ - Vistara News

ಕರ್ನಾಟಕ

Killer CEO : ಸುಚನಾ ಸೇಠ್‌ ಬಂಧನವೇ ರೋಚಕ; ಪೊಲೀಸರ ಕೈಹಿಡಿದ ಕೊಂಕಣಿ

Killer CEO : ತಾಯಿಯಿಂದಲೇ ಮಗು ಹತ್ಯೆಯಾದ ಪ್ರಕರಣಕ್ಕೆ (Mother Kills 4 Year Old Son) ಸಂಬಂಧಿಸಿದ್ದಂತೆ ಹಂತಕಿ ಸಿಕ್ಕಿಬಿದ್ದಿದ್ದೆ (Goa Murder Case) ರೋಚಕವಾಗಿದೆ.

VISTARANEWS.COM


on

Suchana Seth was arrested by the police
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗೋವಾದಲ್ಲಿ ತಾಯಿಯಿಂದಲೇ ಮಗನ (Goa Murder Case) ಹತ್ಯೆ ಪ್ರಕರಣಕ್ಕೆ (Mother Kills 4 Year Old Son) ಸಂಬಂಧಿಸಿದ್ದಂತೆ ಹಂತಕಿ ಸುಚನಾ ಸೇಠ್‌ಳನ್ನು (Suchana seth) ಪೊಲೀಸರು ಬಂಧನ ಮಾಡಿದ್ದೇ ರೋಚಕವಾಗಿದೆ. ಹೊಟೇಲ್ ಸಿಬ್ಬಂದಿಯ ಸಮಯಪ್ರಜ್ಞೆ ಒಂದು ಕಡೆಯಾದರೆ ಕಾರು ಚಾಲಕನ ಪಾತ್ರವು ಹಂತಕಿ ಸೆರೆಯಾಗಲು ಕಾರಣವಾಗಿದೆ.

ಹೋಟೆಲ್‌ನಲ್ಲಿದ್ದ ಸುಚನಾ ಸೇಠ್ ಮಗ ಚಿನ್ಮಯ್‌ (chinmay) ಕೊಂದು ಬಳಿಕ ಸೂಟ್ ಕೇಸ್‌ನಲ್ಲಿ ಶವವನ್ನು ತುಂಬಿಕೊಂಡು ಕಾರಲ್ಲಿ ಹೊರಟಿದ್ದಳು. ಆದರೆ ರೂಮು ಕ್ಲೀನ್‌ ಮಾಡಲು ಹೋದ ಸಿಬ್ಬಂದಿಗೆ ರಕ್ತದ ಕಲೆಗಳು ಅನುಮಾನ ಮೂಡಿಸಿದ್ದವು. ಹೀಗಾಗಿ ಸ್ಥಳೀಯ ಪೊಲೀಸರಿಗೆ ಹೋಟೆಲ್‌ ಸಿಬ್ಬಂದಿ ಮಾಹಿತಿ ನೀಡಿದ್ದರು. ಇದರ ಆಧಾರದ ಮೇಲೆ ಸುಚನಾ ಸೇಠ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಈ ಮೊದಲೇ ಮಗನನ್ನು ಕೊಲೆ ಮಾಡುವ ಉದ್ದೇಶವನ್ನು ಹೊಂದಿದ್ದಳು ಎಂಬುದಕ್ಕೆ ಪುಷ್ಟಿಯು ಸಿಕ್ಕಿತ್ತು. ಸುಚನಾ ಸೇಠ್‌ ಹೋಟೆಲ್‌ಗೆ ನೀಡಿದ ವಿಳಾಸವು ನಕಲಿ ಎಂದು ತಿಳಿದು ಬಂದಿತ್ತು.

ಕೊಂಕಣಿ ಮಾತಾಡಿ ಕಾರು ಚಾಲಕನ ವಿಶ್ವಾಸ ಗಳಿಸಿದ ಪೊಲೀಸರು

ಹೋಟೆಲ್‌ ಸಿಬ್ಬಂದಿ ನೀಡಿದ ಮಾಹಿತಿ ಆಧರಿಸಿ ಕಲ್ಲಂಗೋಟ್ ಪೊಲೀಸರು ಇನ್ನೋವಾ ಕಾರು ಚಾಲಕನ ಸಂಪರ್ಕಿಸಿದ್ದರು. ನೀವು ಕಾರಿನಲ್ಲಿ ಕರೆದುಹೋಗುತ್ತಿರುವ ಮಹಿಳೆ ಬಗ್ಗೆ ಸಂಶಯವಿದೆ ಎಂದಿದ್ದರು. ಸುಚನಾ ಸೇಠ್‌ಗೆ ಹಿಂದಿ ಹಾಗು ಇಂಗ್ಲೀಷ್ ಹೊರತುಪಡಿಸಿ ಬೇರೆ ಯಾವುದೇ ಭಾಷೆ ಬರುತ್ತಿರಲಿಲ್ಲ. ಹೀಗಾಗಿ ಪೊಲೀಸರು ಕಾರು ಚಾಲಕನೊಂದಿಗೆ ಕೊಂಕಣಿಯಲ್ಲಿ‌ ಮಾತು ಆರಂಭಿಸಿ ಪ್ರಕರಣದ ಗಂಭೀರತೆಯನ್ನು ಅರ್ಥ ಮಾಡಿಸಿ, ವಿಶ್ವಾಸಕ್ಕೆ ತೆಗೆದುಕೊಂಡಿದ್ದರು.

ಸುಚನಾ ಸೇಠ್‌ಗೆ ಅನುಮಾನ ಬರದಂತೆ ಚಾಲಕ ರಾಯ್ ಜಾನ್‌ ಜತೆಗೆ ಇನ್‌ಸ್ಪೆಕ್ಟರ್‌ ಪರೇಶ್ ನಾಯ್ಕ್ ಸ್ನೇಹಿತನ ರೀತಿಯಲ್ಲೆ ಮಾತನಾಡುತ್ತಿದ್ದರು. ಸುಚನಾಗೆ ಸೇಠ್‌ಗೆ ಕೊಂಕಣಿ ಅರ್ಥವಾಗುತ್ತಿರಲಿಲ್ಲ. ಹೀಗಾಗಿ ಚಾಲಕ ರಾಯ್‌ಗೆ ಕೊಂಕಣಿಯಲ್ಲೆ ಹತ್ತಿರದ ಪೊಲೀಸ್ ಠಾಣೆಗೆ ಹೋಗುವಂತೆ ಸೂಚಿಸಿದ್ದರು. ರಾಯ್‌ಜಾನ್‌ ಸುಲಭವಾಗಿ ಪೊಲೀಸ್ ಠಾಣೆಗೆ ತಲುಪಿದ್ದ. ಹೀಗಾಗಿ ಸುಚನಾ ಸೇಠ್‌ ಸ್ಕೂಟ್‌ಕೇಸ್‌ ಸಮೇತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು. ಸದ್ಯ ಮಂಗಳವಾರ ಆರೋಪಿ ಸುಚನಾ ಸೇಠ್‌ಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ಕಲ್ಲಂಗೋಟ್ ಪೊಲೀಸರು ಆರು ದಿನಗಳ ಕಾಲ ವಶಕ್ಕೆ ಪಡೆದು, ತೀವ್ರ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Killer CEO: ಎತ್ತಿ ಆಡಿಸಿದ ತೋಳಲ್ಲಿ ಮಗು ಚಿನ್ಮಯ್‌ ಅಂತ್ಯಕ್ರಿಯೆ; ಈ ನೋವು ಮತ್ತಾವ ತಂದೆಗೂ ಬೇಡ

ಮಗುವನ್ನೇ ಕೊಂದ ಬುದ್ಧಿವಂತೆ; ಭೀಕರ ಕ್ರೌರ್ಯದ ಬೆಚ್ಚಿಬೀಳಿಸುವ ಕಥೆ!

ಬೆಂಗಳೂರು: ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ನಾಲ್ಕು ವರ್ಷದ ಮಗುವನ್ನು ಕೊಂದು ಹಾಕಿದ ಧೂರ್ತ ಮಹಿಳೆ ಸುಚನಾ ಸೇಠ್‌ (39) ವಿದ್ಯಾವಂತರೆಲ್ಲರೂ ವಿವೇಕಿಗಳಾಗಿರಬೇಕಾಗಿಲ್ಲ ಎಂಬ ಮಾತಿಗೆ ಅತ್ಯಂತ ಸೂಕ್ತ ನಿದರ್ಶನ. ಜಗತ್ತಿನ ಅತ್ಯಂತ ನವೀನ ಜ್ಞಾನಶಾಖೆಯಾಗಿರುವ ಕೃತಕ ಬುದ್ಧಿಮತ್ತೆಯನ್ನು (Artificial Intelligence) ಅರೆದು ಕುಡಿದಂತಿರುವ ಸುಚನಾ ಸೇಠ್‌ಳ (Suchana Seth) ಬುದ್ಧಿಯೇ ನೆಟ್ಟಗಿರಲಿಲ್ಲ!

ಬೆಂಗಳೂರಿನಲ್ಲಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್‌ಅಪ್ ಮೈಂಡ್‌ಫುಲ್ ಎಐ ಲ್ಯಾಬ್ಸ್‌ನ (Mindful AI Labs) ಸಹ-ಸ್ಥಾಪಕಿ ಹಾಗೂ ಸಿಇಒ ಆಗಿರುವ ಸುಚನಾ ಸೇಠ್ ಅತ್ಯಂತ ಪ್ರಭಾವಿ ಮಹಿಳೆ. ಅಪ್ರತಿಮ ಪ್ರತಿಭಾವಂತೆ. ಆದರೇನು ಮಾಡೋಣ? ಮಗುವನ್ನೇ ಕೊಲ್ಲುವ ಕ್ರೌರ್ಯವನ್ನು ಮೆರೆದಿದ್ದಾಳೆ.

ಇದನ್ನೂ ಓದಿ: Killer CEO: ಸಿಇಒ ಮಗನ ಕೊಲೆ ಪೂರ್ವಯೋಜಿತ; ಆಕೆಯ ಕಂಪನಿಗೆ ಕಚೇರಿಯೇ ಇರಲಿಲ್ಲ!

ಹಾಗಿದ್ದರೆ ಈ ಸುಚನಾ ಸೇಠ್‌ ಯಾರು? ಆಕೆ ಕೃತಕ ಬುದ್ಧಿಮತ್ತೆಯ ಶಕ್ತಿ ಎಷ್ಟು?

  1. 1. ಸುಚನಾ ಸೇಠ್‌ ಮೈಂಡ್‌ ಎಐ ಲ್ಯಾಬ್‌ ಎಂಬ ಕೃತಕ ಬುದ್ಧಿಮತ್ತೆ ಕುರಿತ ಕಂಪನಿಯ ಸಹ ಸ್ಥಾಪಕಿ ಮತ್ತು ಸಿಇಒ
  2. 2. ಎಐ ಎಥಿಕ್ಸ್‌ (ಕೃತಕ ಬುದ್ಧಿಮತ್ತೆ ನೈತಿಕ ಬಳಕೆ) ವಿಚಾರದಲ್ಲಿ 2021ರಲ್ಲಿ ಗುರುತಿಸಲಾದ 100‌ ಪ್ರತಿಭಾನ್ವಿತ ಮಹಿಳೆಯರಲ್ಲಿ ಒಬ್ಬರು.
  3. 3.ಡೇಟಾ ಸೈನ್ಸ್‌ ಮಾನಿಟರಿಂಗ್‌ ವಿಭಾಗದಲ್ಲಿ 12 ವರ್ಷ ಅನುಭವ ಇರುವ ಡೇಟಾ ಸೈಂಟಿಸ್ಟ್‌.
  4. 4. ಡೇಟಾ ಎಂಡ್‌ ಸೊಸೈಟಿಯಲ್ಲಿ ಮೋಝಿಲ್ಲಾ ಫೆಲೋ ಆಗಿ ಕೆಲಸ ಮಾಡಿದ್ದರು.
  5. 5. ಹಾರ್ವರ್ಡ್‌ ವಿವಿಯ ಬರ್ಕ್‌ಮನ್‌ ಕ್ಲೀನ್‌ ಸೆಂಟರ್‌ನಲ್ಲಿ ಫೆಲೋ ಆಗಿದ್ದರು.
  6. 6. ರಾಮನ್‌ ರಿಸರ್ಚ್‌ ಇನ್‌ಸ್ಟಿಟ್ಯೂಷನ್‌ನಲ್ಲಿ ಸಂಶೋಧನಾ ಫೆಲೋ ಆಗಿದ್ದರು.
  7. 7. ಕೃತಕ ಭಾಷಾ ಸಂಸ್ಕರಣೆ, ಮೆಷಿನ್‌ ಲರ್ನಿಂಗ್‌, ಟೆಕ್ಸ್ಟ್‌ ಮೈನಿಂಗ್‌, ನ್ಯಾಚುರಲ್‌ ಲಾಂಗ್ವೇಜ್‌ ವಿಚಾರದಲ್ಲಿ ಅಮೆರಿಕದಿಂದ ನಾಲ್ಕು ಪೇಟೆಂಟ್‌ಗಳನ್ನು ಹೊಂದಿದ್ದಾರೆ.
  8. 8. 2020ರಲ್ಲಿ ಅವರು ಮೈಂಡ್‌ ಫುಲ್‌ ಎಐ ಲ್ಯಾಬ್‌ ಸ್ಥಾಪನೆ ಮಾಡಿದ್ದರು. ಇದು ಎಐ ನೈತಿಕತೆ, ಪ್ರೊಟೊಟೈಪಿಂಗ್‌, ಮೆಷಿನ್‌ ಲರ್ನಿಂಗ್‌ ಸಿಸ್ಟಮ್‌ಗಳನ್ನು ಸ್ಥಾಪಿಸುವ ಕೆಲಸವನ್ನು ಮಾಡುತ್ತದೆ.
  9. 9. ಕೋಡಿಂಗ್‌ ವಿಭಾಗದಲ್ಲಿ ಮಹಿಳೆಯರು ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಆಕೆ ಹಲವಾರು ಡೇಟಾ ಸೈನ್ಸ್‌ ವರ್ಕ್‌ ಶಾಪ್‌ಗಳನ್ನು ನಡೆಸಿದ್ದಾರೆ.
  10. 10. ಅವರು ಪಾಲಿಮರ್‌ ಫಿಸಿಕ್ಸ್‌ನ ಸಮಸ್ಯೆಗಳಿಗೆ ಮೆಕ್ಯಾನಿಕ್ಸ್‌ ಮೂಲಕ ಪರಿಹಾರ ಕಂಡುಕೊಂಡಿದ್ದರು.
Suchana Mind ful

ಇದನ್ನೂ ಓದಿ: Killer CEO : ಗಂಡನ ಮೇಲಿನ ಸಿಟ್ಟಿಗೆ ಮಗುವನ್ನೇ ಬಲಿ ಕೊಟ್ಟಳಾ ಹಂತಕಿ ಸಿಇಒ?; ಏನಿದು ಕೌಟುಂಬಿಕ ಕಲಹ

ಸುಚನಾ ಸೇಠ್‌ ವೈಯಕ್ತಿಕ ಬದುಕು

  1. 1. ಸುಚನಾ ಸೇಠ್‌ ಮೂಲತಃ ಪಶ್ಚಿಮ ಬಂಗಾಳದವರು.. ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ.
  2. 2. ಸುಚನಾ ಸೇಠ್‌ ಗಂಡ ವೆಂಕಟರಮಣ್‌ ಮೂಲತಃ ಕೇರಳದವರು. ವೃತ್ತಿಯಲ್ಲಿ ಓರ್ವ ಟೆಕ್ಕಿ.
  3. 3. ಸುಚನಾ ಮತ್ತು ವೆಂಕಟರಮಣ್‌ಗೆ 2010ರಲ್ಲಿ ಮದುವೆಯಾಗಿದ್ದು, 2019ರಲ್ಲಿ ಮಗು ಹುಟ್ಟಿತ್ತು.
  4. 4. 2020ರಲ್ಲಿ ದಂಪತಿ ನಡುವೆ ಬಿರುಕು ಮೂಡಿ ಕೋರ್ಟ್‌ ವಿಚ್ಛೇದನ ನೀಡಿತ್ತು. ಮಗುವನ್ನು ತಾಯಿ ಜತೆಗೆ ಇರಲು ಅನುಮತಿ ನೀಡಿದ್ದ ಕೋರ್ಟ್‌ ಪ್ರತಿ ಭಾನುವಾರ ತಂದೆಗೆ ಮಗುವನ್ನು ಭೇಟಿ ನೀಡಲು ಅವಕಾಶ ನೀಡಬೇಕು ಎಂದು ಸೂಚಿಸಿತ್ತು.
  5. 5. ವಿಚ್ಛೇದನ ಪಡೆದ ವೆಂಕಟರಮಣ್‌ ಈಗ ಇಂಡೋನೇಷ್ಯಾದ ಜಕಾರ್ತದಲ್ಲಿದ್ದಾರೆ.
  6. 6. ವಿಚ್ಛೇದಿತ ಗಂಡ ಪ್ರತಿ ವಾರ ಬಂದು ಮಗನ ಜತೆಗೆ ಮಾತನಾಡುವುದು ಸುಚನಾಗೆ ಇಷ್ಟವಿರಲಿಲ್ಲ. ಈ ವಿಷಯದಲ್ಲಿ ಹಲವಾರು ಬಾರಿ ಜಗಳವಾಗಿತ್ತು. ಅಂತಿಮವಾಗಿ ಮಗನೇ ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಳಾ ಈ ಹಂತಕಿ!?
Suchana seth family
ಸುಚನಾ ಸೇಠ್‌, ವೆಂಕಟರಮಣ ಮತ್ತು ಮಗು

ಮಗುವಿನ ಕೊಲೆ ಪ್ರಕರಣ: ಏನೇನು ನಡೆಯಿತು? ಕೊಂದಿದ್ದು ಹೇಗೆ?

  1. 1. ಸುಚನಾ ಸೇಠ್‌ ಜನವರಿ 6ರಂದು ಉತ್ತರ ಗೋವಾದ ಕಾಂಡೋಲಿಮ್‌ನಲ್ಲಿರುವ ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ಪ್ರವೇಶ ಪಡೆಯುತ್ತಾರೆ. ಹಾಗೆ ಒಳಗೆ ಹೋಗುವಾಗ ಆಕೆಯ ಕೈಯಲ್ಲಿದ್ದದ್ದು ಒಂದು ಬ್ಯಾಗ್‌ ಮತ್ತು ಪುಟ್ಟ ನಾಲ್ಕು ವರ್ಷದ ಮಗ.
  2. 2. ಅಲ್ಲಿ ಎರಡು ದಿನ ಕಳೆದ ಸುಚನಾ ಅಪಾರ್ಟ್‌ಮೆಂಟ್‌ ಸಿಬ್ಬಂದಿಗೆ ಒಂದು ಬೇಡಿಕೆ ಸಲ್ಲಿಸುತ್ತಾರೆ: ನಾನು ಒಂದು ಕೆಲಸಕ್ಕಾಗಿ ಬೆಂಗಳೂರಿಗೆ ಹೋಗಬೇಕಾಗಿದೆ. ನನಗೆ ಒಂದು ಟ್ಯಾಕ್ಸಿ ಅರೇಂಜ್‌ ಮಾಡಿಕೊಡಿ.
  3. 3 ಆಗ ಅಲ್ಲಿನ ಸಿಬ್ಬಂದಿ, ಟ್ಯಾಕ್ಸಿ ಯಾಕೆ ಮೇಡಂ, ಅದು ತುಂಬಾ ಕಾಸ್ಟ್ಲೀ. ಅದಕ್ಕಿಂತ ವಿಮಾನವೇ ಒಳ್ಳೆಯದು, ಕಡಿಮೆ ದುಡ್ಡಿನಲ್ಲಿ ಆಗುತ್ತದೆ ಮತ್ತು ಬೇಗನೆ ತಲುಪುತ್ತದೆ ಎಂದು ಹೇಳಿದ್ದರು. ಆದರೆ, ನನಗೆ ಟ್ಯಾಕ್ಸಿನೇ ಬೇಕು ಎಂದು ಸುಚನಾ ಹಠ ಹಿಡಿದಿದ್ದರು.
  4. 4. ಅಂತಿಮವಾಗಿ ಜನವರಿ 8ರಂದು ಟ್ಯಾಕ್ಸಿಯನ್ನು ಬುಕ್‌ ಮಾಡಿ ಕೊಡಲಾಯಿತು. ಮುಂಜಾನೆ ಅವರು ಅಲ್ಲಿಂದ ಟ್ಯಾಕ್ಸಿ ಹತ್ತಿ ಹೊರಟಿದ್ದಾರೆ.
  5. 5. ಟ್ಯಾಕ್ಸಿ ಹೊರಟು ಹೋದ ಬಳಿಕ ಅಪಾರ್ಟ್‌ಮೆಂಟ್‌ನ ಸಿಬ್ಬಂದಿ ಸುಚನಾ ಅವರು ತಂಗಿದ್ದ ಕೋಣೆಯನ್ನು ಕ್ಲೀನ್‌ ಮಾಡಲು ಹೋಗುತ್ತಾರೆ. ಅಲ್ಲಿನ ಟವೆಲ್‌ನಲ್ಲಿ ರಕ್ತದ ಕಲೆಗಳು ಗೋಚರಿಸುತ್ತವೆ. ಆಗ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುತ್ತಾರೆ.
  6. 6. ಈ ನಡುವೆ, ಸುಚನಾ ಸೇಠ್‌ ಜತೆಗೆ ಬಂದಿದ್ದ ನಾಲ್ಕು ವರ್ಷದ ಮಗು ಮರಳಿ ಹೋಗುವಾಗ ಇರಲಿಲ್ಲ ಎನ್ನುವುದು ಸಿಬ್ಬಂದಿಗೆ ನೆನಪಾಗುತ್ತದೆ. ಜತೆಗೆ ಆಕೆ ಒಂದು ಭಾರವಾದ ಸೂಟ್‌ ಕೇಸನ್ನು ಎತ್ತಿಕೊಂಡು ಹೋಗಿದ್ದರು ಎಂದು ಪೊಲೀಸರಿಗೆ ತಿಳಿಸುತ್ತಾರೆ.
  7. 7. ಪೊಲೀಸರು ಚಾಲಕನಿಗೆ ಕರೆ ಮಾಡಿ ಸುಚನಾ ಅವರಿಗೆ ಫೋನ್‌ ಕೊಡುವಂತೆ ಕೇಳುತ್ತಾರೆ. ಫೋನ್‌ನಲ್ಲಿ ರಕ್ತದ ಕಲೆ, ಮತ್ತು ಮಗು ಇಲ್ಲದಿರುವ ಬಗ್ಗೆ ಕೇಳುತ್ತಾರೆ.
  8. 8. ಆಗ ಸುಚನಾ ಅವರು ಟವೆಲ್‌ನಲ್ಲಿದ್ದದ್ದು ಋತುಸ್ರಾವಕ್ಕೆ ಸಂಬಂಧಿಸಿದ್ದು ಎನ್ನುತ್ತಾರೆ. ಮಗನನ್ನು ದಕ್ಷಿಣ ಗೋವಾದ ಮರ್ಗೋವಾ ಪಟ್ಟಣದಲ್ಲಿರುವ‌ ಸ್ನೇಹಿತರ ಮನೆಯಲ್ಲಿ ಬಿಟ್ಟಿದ್ದಾಗಿ ಹೇಳುತ್ತಾರೆ. ಮತ್ತು ನಂಬರ್‌ ಕೂಡಾ ಕೊಡುತ್ತಾರೆ. ಆದರೆ, ಅದು ಫೇಕ್‌ ನಂಬರ್‌ ಎನ್ನುವುದು ಪರಿಶೀಲಿಸಿದಾಗ ಗೊತ್ತಾಗುತ್ತದೆ!
  9. 9. ಪೊಲೀಸರು ಕೂಡಲೇ ಟ್ಯಾಕ್ಸಿ ಚಾಲಕನಿಗೆ ಕರೆ ಮಾಡಿ ಕೊಂಕಣಿಯಲ್ಲಿ ಮಾತನಾಡಿ, ಟ್ಯಾಕ್ಸಿಯನ್ನು ಸಮೀಪದ ಪೊಲೀಸ್‌ ಠಾಣೆಗೆ ಕರೆದೊಯ್ಯುವಂತೆ ಸೂಚಿಸುತ್ತಾರೆ. ಅವನು ಚಿತ್ರದುರ್ಗದ ಐಮಂಗಲ ಪೊಲೀಸ್‌ ಠಾಣೆಯ ಮುಂದೆ ಟ್ಯಾಕ್ಸಿ ನಿಲ್ಲಿಸುತ್ತಾನೆ.
  10. 10. ಐಮಂಗಲ ಪೊಲೀಸರು ಕಾರನ್ನು ಪರಿಶೀಲಿಸಿದಾಗ ಬ್ಯಾಗ್‌ನಲ್ಲಿ ಮಗುವಿನ ಶವ ಪತ್ತೆಯಾಗುತ್ತದೆ, ಪೊಲೀಸರು ಆಕೆಯನ್ನು ವಶಕ್ಕೆ ಪಡೆಯುತ್ತಾರೆ.
Suchana seth arrested

ಸುಚನಾ ಸೇಠ್‌ ಬಂಧನದ ಕ್ಷಣ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Foreign Investment: ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಜಪಾನ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ರೋಡ್‌ಶೋದಲ್ಲಿ ಜಪಾನಿನ 150 ಕ್ಕೂ ಹೆಚ್ಚು ಕಂಪನಿಗಳಿಗೆ ರಾಜ್ಯದಲ್ಲಿನ ಬಂಡವಾಳ ಹೂಡಿಕೆಯ ಅವಕಾಶಗಳ ಪರಿಚಯ ಮಾಡಿಕೊಟ್ಟಿತು. ನಿಯೋಗದ ನೇತೃತ್ವ ವಹಿಸಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌, ರಾಜ್ಯದಲ್ಲಿನ ಸದೃಢ ಕೈಗಾರಿಕಾ ಪರಿಸರ ವ್ಯವಸ್ಥೆ, ಉದ್ಯಮಕ್ಕೆ ಅನುಕೂಲಕರ ವಾತಾವರಣ ಮತ್ತು ಸರ್ಕಾರದ ಪ್ರಗತಿಪರ ನೀತಿಗಳನ್ನು ಮನದಟ್ಟು ಮಾಡಿಕೊಟ್ಟರು.

VISTARANEWS.COM


on

minister mb patil visit japan and discuss about investment in Karnataka
Koo

ಟೋಕಿಯೊ: ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಜಪಾನ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ರೋಡ್‌ಶೋದಲ್ಲಿ ಜಪಾನಿನ 150ಕ್ಕೂ ಹೆಚ್ಚು ಕಂಪನಿಗಳಿಗೆ ರಾಜ್ಯದಲ್ಲಿನ ಬಂಡವಾಳ ಹೂಡಿಕೆಯ (Foreign Investment) ಅವಕಾಶಗಳ ಪರಿಚಯ ಮಾಡಿಕೊಟ್ಟಿತು.

ಕರ್ನಾಟಕ ಸರ್ಕಾರದ ಉನ್ನತ ಮಟ್ಟದ ನಿಯೋಗವು ಜಪಾನ್‌ ಭೇಟಿಯ ಎರಡನೇ ದಿನ ಪರಿಸರ ಸಂರಕ್ಷಣೆ ಉಪಕರಣ ತಯಾರಿಸುವ ಬಹುರಾಷ್ಟ್ರೀಯ ಕಂಪನಿ ಡೈಕಿ ಆ್ಯಕ್ಸಿಸ್‌, ಕೈಗಾರಿಕಾ ಯಂತ್ರೋಪಕರಣ ತಯಾರಿಸುವ ಸುಮಿಟೊಮೊ ಹೆವಿ ಇಂಡಸ್ಟ್ರೀಸ್‌ (ಎಸ್‌ಎಚ್‌ಐ), ಸೆಮಿಕಂಡಕ್ಟರ್‌ ಪರಿಕರ ತಯಾರಿಸುವ ರೆನೆಸಸ್‌ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ ಕಂಪನಿ ಹಾಗೂ ಜಪಾನ್‌ ಸರ್ಕಾರದ ಸಣ್ಣ ಕೈಗಾರಿಕೆಗಳ ಸಂಘಟನೆ ʼಎಸ್‌ಎಂಆರ್‌ಜೆʼ ಮುಖ್ಯಸ್ಥರ ಜತೆ ಸಮಾಲೋಚನೆ ನಡೆಸಿತು.

ಈ ಸಭೆಗಳಲ್ಲಿನ ಮಾತುಕತೆಗಳು ರಾಜ್ಯದಲ್ಲಿನ ಬಂಡವಾಳ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸಲು ಮತ್ತು ಕರ್ನಾಟಕ ಮತ್ತು ಜಪಾನ್ ನಡುವಣ ಕೈಗಾರಿಕಾ ಸಹಯೋಗ ಬಲಪಡಿಸುವ ಬಗ್ಗೆ ಕೇಂದ್ರೀಕೃತಗೊಂಡಿದ್ದವು.

ಇದನ್ನೂ ಓದಿ: Bengaluru Power Cut: ಜೂ.27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ನಿಯೋಗದ ನೇತೃತ್ವ ವಹಿಸಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಅವರು, ರಾಜ್ಯದಲ್ಲಿನ ಸದೃಢ ಕೈಗಾರಿಕಾ ಪರಿಸರ ವ್ಯವಸ್ಥೆ, ಉದ್ಯಮಕ್ಕೆ ಅನುಕೂಲಕರ ವಾತಾವರಣ ಮತ್ತು ಸರ್ಕಾರದ ಪ್ರಗತಿಪರ ನೀತಿಗಳನ್ನು ಮನದಟ್ಟು ಮಾಡಿಕೊಟ್ಟರು.

ಡೈಕಿ ಆ್ಯಕ್ಸಿಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ನ ನಿರ್ದೇಶಕ ರಿಯೊ ರಿಯೊಟಾ ವಾಜಾ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಸುಸ್ಥಿರ ಬೆಳವಣಿಗೆ, ನೀರಿನ ಉಳಿತಾಯ, ಕೊಳಚೆ ನೀರು ನಿರ್ವಹಣಾ ಘಟಕ (ಎಸ್‌ಟಿಪಿ) ಸ್ಥಾಪಿಸುವ ಕುರಿತು ಮಾತುಕತೆ ನಡೆಸಿದರು. ಡೈಕಿ ಆ್ಯಕ್ಸಿಸ್‌ 100 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದಲ್ಲಿ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪಿಸುವ ಒಪ್ಪಂದಕ್ಕೆ ಈ ಸಭೆಯಲ್ಲಿ ಸಹಿ ಹಾಕಲಾಯಿತು.

ರೆನೆಸಸ್‌ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ನ ಸಿಇಒ ಚಾರ್ಲ್ಸ್‌ಕವಾಶಿಮಾ ಅವರನ್ನು ಭೇಟಿ ಮಾಡಿದ ನಿಯೋಗವು ವಿದೇಶಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳು ಮತ್ತು ಸವಾಲುಗಳನ್ನು ಚರ್ಚಿಸಿತು.

ಸುಮಿಟೊಮೊ ಹೆವಿ ಇಂಡಸ್ಟ್ರೀಸ್‌ನ (ಎಸ್‌ಎಚ್‌ಐ) ಚೇರ್ಮನ್‌ ಆಫ್‌ ರಿಪ್ರೆಸೆಂಟೇಟಿವ್‌ ಡೈರೆಕ್ಟರ್‌ ತೆತ್ಸುಯ ಒಕಾಮುರ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ತೋಷಿಹರು ತನಾಕಾ ಅವರನ್ನು ರಾಜ್ಯದ ನಿಯೋಗವು ಭೇಟಿಯಾಗಿತ್ತು. ರಾಜ್ಯದಲ್ಲಿ ಕಂಪನಿಯ ವಹಿವಾಟಿನ ವಿಸ್ತರಣೆಗೆ ಅಗತ್ಯ ಬೆಂಬಲ ನೀಡುವುದಾಗಿ ನಿಯೋಗವು ಭರವಸೆ ನೀಡಿತು. 2024 ರ ಅಂತ್ಯದ ವೇಳೆಗೆ ಎಸ್‌ಎಚ್‌ಐ ಬೆಂಗಳೂರಿನಲ್ಲಿ ತನ್ನ ಪ್ರಧಾನ ಕಚೇರಿ ಆರಂಭಿಸಲಿದೆ.

ಜಪಾನ್‌ ಸರ್ಕಾರದ ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಮತ್ತು ಪ್ರಾದೇಶಿಕ ಆವಿಷ್ಕಾರ ಸಂಸ್ಥೆಯ (ಎಸ್‌ಎಂಆರ್‌ಜೆ) ಕಾರ್ಯನಿರ್ವಾಹಕ ಉಪಾಧ್ಯಕ್ಷ ತೊಮೊಹಿರೊ ಕನೆಕೊ ಅವರ ಜತೆ ನಿಯೋಗವು ಸಮಾಲೋಚನೆ ನಡೆಸಿತು.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ವಾಹನ ಬಿಡಿಭಾಗ, ಎಲೆಕ್ಟ್ರಾನಿಕ್ಸ್ , ವೈಮಾಂತರಿಕ್ಷ ಹಾಗೂ ರಕ್ಷಣೆ, ಆಹಾರ ಸಂಸ್ಕರಣೆ, ಭಾರಿ ಯಂತ್ರೋಪಕರಣ ತಯಾರಿಕೆ ಕ್ಷೇತ್ರಗಳಲ್ಲಿ ತಮ್ಮ ವಹಿವಾಟು ವಿಸ್ತರಿಸಲು ʼಎಸ್‌ಎಂಆರ್‌ಜೆʼಗೆ ಅಗತ್ಯ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಸಚಿವರು ಭರವಸೆ ನೀಡಿದರು. ಜಪಾನಿನ 26,000 ʼಎಸ್‌ಎಂಇʼಗಳ ಸಹಯೋಗದಲ್ಲಿ ಕರ್ನಾಟಕದ ʼಎಸ್‌ಎಂಇʼಗಳ ಬೆಳವಣಿಗೆ ಉತ್ತೇಜಿಸಲು ನೆರವಾಗುವ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಇದನ್ನೂ ಓದಿ: CM Siddaramaiah: ಅಲೆಮಾರಿ ಕುರಿಗಾಹಿಗಳ ಮೇಲಿನ ದೌರ್ಜನ್ಯ ತಡೆಯಲು ಕಾಯ್ದೆ; ಸಿದ್ದರಾಮಯ್ಯ

ಈ ವೇಳೆ ಜಪಾನ್‌ ಮತ್ತು ಭಾರತದ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ (ಎಸ್‌ಎಂಇ) ಮುಖ್ಯಸ್ಥರ ಸಭೆಯನ್ನು ಆಗಸ್ಟ್‌ನಲ್ಲಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಕರ್ನಾಟಕದಲ್ಲಿ ಜಪಾನಿನ ʼಎಸ್‌ಎಂಇʼಗಳು ತಮ್ಮ ವಹಿವಾಟು ವಿಸ್ತರಿಸಲು ನಿಯೋಗವು ಆಹ್ವಾನ ನೀಡಿತು.

ಸೆಮಿಕಂಡಕ್ಟರ್‌ ಪರಿಕರಗಳನ್ನು ತಯಾರಿಸುವ ಬಹುರಾಷ್ಟ್ರೀಯ ಕಂಪನಿ ರೆನೆಸಸ್‌ ಎಲೆಕ್ಟ್ರಾನಿಕ್ಸ್‌ ಕಾರ್ಪೊರೇಷನ್‌ನ ಹಿರಿಯ ನಿರ್ದೇಶಕ ಷೊ ಒಜಾಕಿ ಅವರನ್ನು ನಿಯೋಗವು ಭೇಟಿಯಾಗಿತ್ತು. ಎಲೆಕ್ಟ್ರಾನಿಕ್ಸ್‌ ವಲಯಕ್ಕೆ ದೇಶದಲ್ಲಿಯೇ ಗರಿಷ್ಠ ಪ್ರಮಾಣದ ಸಬ್ಸಿಡಿ ನೀಡುತ್ತಿರುವ ಕರ್ನಾಟಕದಲ್ಲಿನ ಎಲೆಕ್ಟ್ರಾನಿಕ್ಸ್‌ ಸಿಸ್ಟಮ್‌ ಡಿಸೈನ್‌ ಮತ್ತು ತಯಾರಿಕಾ (ಇಎಸ್‌ಡಿಎಂ) ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಿಯೋಗವು ಮನವಿ ಮಾಡಿಕೊಂಡಿತು.

ಕರ್ನಾಟಕದ ನಿಯೋಗವು ಟೋಕಿಯೋದಲ್ಲಿನ ಕನ್ನಡ ಸಂಘದ ಪ್ರತಿನಿಧಿಗಳ ಜತೆ ಬೆಳಗಿನ ಉಪಾಹಾರದ ಸಂದರ್ಭದಲ್ಲಿ ಸಭೆ ನಡೆಸಿತು.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.

Continue Reading

ಕೊಡಗು

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Kodagu News: ಕಳೆದುಕೊಂಡಿದ್ದ 3 ಚಿನ್ನದ ನಾಣ್ಯಗಳನ್ನು ಮರಳಿ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಮಡಿಕೇರಿ ಸಂಚಾರಿ ಠಾಣೆಯ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

VISTARANEWS.COM


on

Kodagu News
Koo

ಕೊಡಗು: ಕಳೆದುಕೊಂಡಿದ್ದ 3 ಚಿನ್ನದ ನಾಣ್ಯಗಳನ್ನು ಮರಳಿ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಮಡಿಕೇರಿ ಸಂಚಾರ ಠಾಣೆಯ ಪೊಲೀಸರು ಪ್ರಾಮಾಣಿಕತೆ (Kodagu News) ಮೆರೆದಿದ್ದು, ಪೊಲೀಸರ ಕಾರ್ಯ ವೈಖರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ನಗರದ ಅಜ್ಜಮಾಡ ದೇವಯ್ಯ ವೃತ್ತದ ಸಮೀಪದ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಬೀಳಿಸಿಕೊಂಡು ಹೋಗಿದ್ದ ಮೂರು ಚಿನ್ನದ ನಾಣ್ಯಗಳು ಸಂಚಾರ ಠಾಣೆಯ ಪೇದೆ ನಾಗರಾಜ್ ಅವರಿಗೆ ಸಿಕ್ಕಿತ್ತು. ಕೂಡಲೇ ಅವರು ಅವುಗಳನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ, ವಿಷಯವನ್ನು ಅಧಿಕಾರಿ ಹಾಗೂ ಸಿಬ್ಬಂದಿಗೆ ತಿಳಿಸಿದ್ದಾರೆ. ಬಳಿಕ ಚಿನ್ನದ ನಾಣ್ಯಗಳ ವಾರಸುದಾರರ ಹುಡುಕಾಟಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Transfer Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ; ಜು.9ರವರೆಗೆ ಅವಕಾಶ

ಇದನ್ನು ಗಮನಿಸಿದ ನಾಣ್ಯ ಕಳೆದುಕೊಂಡ ಮಡಿಕೇರಿಯ ಜ್ಯುವೆಲ್ಲರಿ ಅಂಗಡಿಯೊಂದರ ಮಾಲೀಕ ಬಿ.ಸಿ. ಮೋಹನ್ ಅವರು ಠಾಣೆಗೆ ತೆರಳಿ ವಿಚಾರಿಸಿದ್ದಾರೆ. ದೃಢೀಕರಿಸಿದ ನಂತರ ಮಾಲೀಕ ಮೋಹನ್‌ ಅವರು ಕಳೆದುಕೊಂಡಿದ್ದ ಅಂದಾಜು 45 ಸಾವಿರ ಮೌಲ್ಯದ ಚಿನ್ನದ ನಾಣ್ಯಗಳನ್ನು ಠಾಣಾಧಿಕಾರಿ ಶ್ರೀಧರ್ ಹಿಂದಿರುಗಿಸಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

Continue Reading

ಪ್ರಮುಖ ಸುದ್ದಿ

Milk Price: ನಂದಿನಿ ಹಾಲಿನ ಹೊಸ ದರ ಹೇಗಿದೆ; ಯಾವುದಕ್ಕೆ ಎಷ್ಟು ಹೆಚ್ಚಳ?

Milk Price: ನಂದಿನಿ ಹಾಲಿನ ಲೀಟರ್‌ಗೆ 2 ರೂ. ಏರಿಕೆ ಮಾಡಲಾಗಿದ್ದು, ಒಂದು ಲೀಟರ್‌ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ. ಹಾಲಿನ‌ ಪರಿಷ್ಕೃತ ದರ ಪಟ್ಟಿ ಇಲ್ಲಿ ನೀಡಲಾಗಿದೆ.

VISTARANEWS.COM


on

Milk Price
Koo

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆನ್ನಲ್ಲೇ ನಂದಿನಿ ಹಾಲಿನ ದರವೂ ಏರಿಕೆಯಾಗಿದೆ. ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಹಾಲಿನ ದರಗಳನ್ನು (Nandini milk Price Hike) ಏರಿಸಿ ಆದೇಶ ಹೊರಡಿಸಿತ್ತು. ನಾಳೆಯಿಂದಲೇ ಪರಿಷ್ಕೃತ ಹಾಲಿನ ದರ (Milk Price) ಜಾರಿಯಾಗಲಿದ್ದು, ಯಾವ ಪ್ಯಾಕೆಟ್‌ಗೆ ಎಷ್ಟು ದರ ಏರಿಕೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ನಂದಿನಿ ಹಾಲಿನ ಲೀಟರ್‌ಗೆ 2 ರೂ. ಏರಿಕೆ ಮಾಡಲಾಗಿದ್ದು, ಒಂದು ಲೀಟರ್‌ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ. ಇಷ್ಟು ದಿನ 1000 ಮಿ.ಲೀ. ಹಾಲು 42 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ನಾಳೆಯಿಂದ 50 ಮಿ.ಲೀ. ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ, ಅದರ ದರ 2 ರೂ.ಗಳನ್ನು ಸೇರಿಸಿ ಮಾರಾಟ ಮಾಡಲಾಗುತ್ತದೆ.

ಹಾಲಿನ‌ ಪರಿಷ್ಕೃತ ದರ ಪಟ್ಟಿ

  • ಟೋನ್ಡ್‌ ಹಾಲಿನ ಬೆಲೆ 500 ಮಿ.ಮೀಗೆ 22 ರೂ. ಇದ್ದದ್ದು 24 ರೂ. ಆಗಲಿದೆ. 1 ಲೀ. 42ರಿಂದ 44ಕ್ಕೆ ಏರಿಕೆ.
  • ಹೋಮೋಜಿನೈಸ್ಟ್ ಟೋನ್ಡ್‌ ಹಾಲು ಅರ್ಧ ಲೀ. 22 ರೂ.ನಿಂದ 24ಕ್ಕೆ ಏರಿಕೆ, ಒಂದು ಲೀ. ಹಾಲಿನ ದರ 43ರಿಂದ 45 ರೂ. ಏರಿಕೆ
  • ಹೋಮೋಜಿನೈಸ್ಟ್ ಹಸುವಿನ ಹಾಲು ಅರ್ಧ ಲೀ. 24ರಿಂದ 26 ರೂ.ಗೆ ಏರಿಕೆ, 1 ಲೀ. ಹಾಲು 46ರಿಂದ 48ರೂ.ಕ್ಕೆ ಏರಿಕೆ.
  • ಸ್ಪೆಷಲ್ ಅರ್ಧ ಲೀಟರ್ ಹಾಲು 25ರಿಂದ 27 ರೂ.ಗೆ ಏರಿಕೆ, 1 ಲೀಟಲ್ 48 ರಿಂದ 50 ರೂ.
  • ಶುಭಂ ಹಾಲು ಅರ್ಧ ಲೀ.ಗೆ 25 ಇದ್ದದ್ದು 27 ರೂ. ಏರಿಕೆ. 1 ಲೀಟರ್ ಬೆಲೆ 48 ರಿಂದ 50 ರೂ.ಗೆ ಏರಿಕೆ.
  • ಸಮೃದ್ಧಿ ಹಾಲು ಅರ್ಧ ಲೀ.ಗೆ 26ರಿಂದ 28 ರೂ., 1 ಲೀ.ಗೆ 51 ರಿಂದ 53ಕ್ಕೆ ಹೆಚ್ಚಳ.
  • ಹೋಮೋಜಿನೈನ್ಸ್ ಶುಭಂ ಹಾಲಿನ ಅರ್ಧ ಲೀಟರ್ ಬೆಲೆ 25ರಿಂದ 27 ರೂ., 1 ಲೀಟರ್ ಬೆಲೆ 49 ರಿಂದ 51ಕ್ಕೆ ಹೆಚ್ಚಳ.
  • ಸಂತೃಪ್ತಿ ಹಾಲಿನ ಬೆಲೆ ಅರ್ಧ ಲೀಟರ್ 28ರಿಂದ 30 ರೂ.ಗೆ, 1 ಲೀಟರ್ ಬೆಲೆ 55 ರಿಂದ 57ಕ್ಕೆ ಹೆಚ್ಚಳ.
  • ಶುಭಂ ಗೋಲ್ಡ್ ಹಾಲು ಅರ್ಧ ಲೀ.ಗೆ 26ರಿಂದ 28ಕ್ಕೆ ಏರಿಕೆ., 1 ಲೀಟ‌ರ್ ಹಾಲಿನ ಬೆಲೆ 49ರಿಂದ 51ಗೆ ಏರಿಕೆ.
  • ಡಬಲ್ ಟೋನ್ಡ್‌ ಹಾಲಿನ ಬೆಲೆ ಅರ್ಧ ಲೀಟರ್‌ಗೆ 21 ರೂ.ನಿಂದ 23ಕ್ಕೆ, 1 ಲೀಟರ್ ಬೆಲೆ 41 ರೂ.ರಿಂದ 43ಕ್ಕೆ ಏರಿಕೆ.

Milk Price: ಹಾಲಿನ ಬೆಲೆ ಏರಿಕೆ ಮಾಡಿಲ್ಲ, ಹೆಚ್ಚುವರಿ 50 ಎಂ.ಎಲ್‌.ಗೆ 2 ರೂ. ದರ ನಿಗದಿ: ಸಿಎಂ ಸಮರ್ಥನೆ

Milk Price

ಬೆಂಗಳೂರು: ನಂದಿನಿ ಹಾಲಿನ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಮಿ.ಲೀ. ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂ. ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ (Milk Price) ಏರಿಕೆ ಮಾಡಿಲ್ಲ ಎಂದು ಹೇಳುವ ಮೂಲಕ ಬೆಲೆ ಏರಿಕೆಯನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಹಾಲಿನ ಬೆಲೆ ಏರಿಕೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಇನ್ನು ಮುಂದೆ ಅರ್ಧಲೀಟರ್‌ ಹಾಲಿನ ಪ್ಯಾಕೇಟ್‌ನಲ್ಲಿ 550 ಮಿ.ಲೀ. ಹಾಲು ಹಾಗೂ ಲೀಟರ್‌ ಪ್ಯಾಕೇಟ್‌ನಲ್ಲಿ 1,050 ಮಿ.ಲೀ. ಹಾಲು ಸಿಗಲಿದೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Milk Price: ಜನರ ಬದುಕಿನೊಂದಿಗೆ ಕಾಂಗ್ರೆಸ್‌ ಸರ್ಕಾರ ಚೆಲ್ಲಾಟ; ಹಾಲಿನ ದರ ಏರಿಕೆಗೆ ವಿಜಯೇಂದ್ರ ಆಕ್ರೋಶ

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟ್‌ಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ ಎಂದು ಹೇಳಿದ್ದಾರೆ.

ಈವರೆಗೆ 1,000 ಮಿ.ಲೀ ಹಾಲಿಗೆ 42 ರೂ. ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ 44 ರೂ. ಹಾಗೂ 24 ರೂ. ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶವನ್ನು ಹೊಂದಿದೆ.

ಈಗಾಗಲೇ ಗರಿಷ್ಠ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ.

ಇದನ್ನೂ ಓದಿ | Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್‌ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ 3 ರೂ. ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು. ಜತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ. ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

Continue Reading

ಬೆಂಗಳೂರು

Bengaluru Power Cut: ಜೂ.27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: 66/11 ಕೆ.ವಿ ಯೆಲ್ಲಾರ್ ಬಂಡೆ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂ.27 ರಂದು ಗುರುವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

VISTARANEWS.COM


on

Bengaluru Power Cut power outage in many parts of Bengaluru On June 27
Koo

ಬೆಂಗಳೂರು: 66/11 ಕೆ.ವಿ ಯೆಲ್ಲಾರ್ ಬಂಡೆ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಜೂ.27 ರಂದು ಗುರುವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

ಯೆಲ್ಲಾರ್ ಬಂಡೆ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಎ.ಕೆ. ಆಶ್ರಮ ರಸ್ತೆ, ದೇವೇಗೌಡ ರಸ್ತೆ, ಆರ್.ಟಿ. ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರಿಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯು.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿ ನಗರ,

ಬಿ.ಇ.ಎಲ್. ಕಾರ್ಪೊರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶೀರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ಟ್ರಿ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಎಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading
Advertisement
Women's Asia Cup
ಪ್ರಮುಖ ಸುದ್ದಿ6 hours ago

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

minister mb patil visit japan and discuss about investment in Karnataka
ಕರ್ನಾಟಕ6 hours ago

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Arvind Kejriwal
ಪ್ರಮುಖ ಸುದ್ದಿ6 hours ago

Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Kodagu News
ಕೊಡಗು6 hours ago

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Lok Sabha Speaker
ಪ್ರಮುಖ ಸುದ್ದಿ6 hours ago

Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

Rahul Gandhi
ಪ್ರಮುಖ ಸುದ್ದಿ7 hours ago

Rahul Gandhi : ಲೋಕ ಸಭೆಯಲ್ಲಿ ಪ್ರತಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

Ayodhya Ram Mandir
ಪ್ರಮುಖ ಸುದ್ದಿ8 hours ago

Ayodhya Ram Mandir : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ‘ಟೆಂಪಲ್ ಮ್ಯೂಸಿಯಮ್​’; ಯೋಗಿ ಸಂಪುಟದ ಸಮ್ಮತಿ

Milk Price
ಪ್ರಮುಖ ಸುದ್ದಿ8 hours ago

Milk Price: ನಂದಿನಿ ಹಾಲಿನ ಹೊಸ ದರ ಹೇಗಿದೆ; ಯಾವುದಕ್ಕೆ ಎಷ್ಟು ಹೆಚ್ಚಳ?

Ayodhya Ram Mandir:
ಪ್ರಮುಖ ಸುದ್ದಿ8 hours ago

Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

Bengaluru Power Cut power outage in many parts of Bengaluru On June 27
ಬೆಂಗಳೂರು8 hours ago

Bengaluru Power Cut: ಜೂ.27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 day ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌