Swathi Mutthina Male Haniye: ಬದುಕು, ಬವಣೆ, ನೋವು ನಲಿವಿನ ನವಿರಾದ ದೃಶ್ಯಕಾವ್ಯ! - Vistara News

South Cinema

Swathi Mutthina Male Haniye: ಬದುಕು, ಬವಣೆ, ನೋವು ನಲಿವಿನ ನವಿರಾದ ದೃಶ್ಯಕಾವ್ಯ!

Swathi Mutthina Male Haniye: ಹೆಣ್ಣು ಗಂಡಿನ ಸಂಬಂಧದ ಕುರಿತಾದ ಕೆಲ ಸೂಕ್ಷ್ಮವಿಷಯಗಳನ್ನು ನಿರ್ದೇಶಕರು ನಾಜೂಕಾಗಿ ನೋಡುಗರಿಗೆ ಯಾವುದೇ ರೀತಿಯ ಮುಜುಗರ ಎನಿಸದಂತೆ ತೆರೆಗೆ ತಂದಿದ್ದಾರೆ. ಸಾವು, ಕೆರೆದಂಡೆ, ಬೀದಿ ನಾಯಿ ಎಲ್ಲವೂ ಒಂದೊಂದು ರೀತಿಯ ರೂಪಕವಾಗಿ ಬಳಸಿ ಮಾತುಗಳಲ್ಲಿ ಹೆಣೆದಿದ್ದಾರೆ.

VISTARANEWS.COM


on

Swathi Mutthina Male Haniye Review
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

-ಶಿವರಾಜ್ ಡಿ.ಎನ್.ಎಸ್

ಸ್ವಾತಿ ಮುತ್ತಿನ ಮಳೆಹನಿಯೇ. ಕಾದಂಬರಿ, ಕಥೆ ಅಷ್ಟೆಯಲ್ಲ ಒಂದು ಕವಿತೆಯೂ ಸಿನಿಮಾವಾಗಬಲ್ಲದು ಎನ್ನುವುದೇ ಅಚ್ಚರಿ! ಶ್ರೇಷ್ಠ ಕವಿ-ಬರಹಗಾರ, ಜಗತ್ತಿನ ಸರ್ವಶ್ರೇಷ್ಠ ನಾಟಕಕಾರ ‘ವಿಲಿಯಂ ಷೇಕ್ಸ್‌ಪಿಯರ್’ ಅನಾದಿಕಾಲದಲ್ಲೆ ಹೇಳಿದ್ದರು ಎನ್ನಲಾಗುವ ಒಂದು ಮಾತಿದೆ, ಪುರುಷರಲ್ಲಿ ಯಾವುದೇ ‘ಶಕ್ತಿ’ ಇಲ್ಲದಿರುವಾಗಲೂ ಮಹಿಳೆಯರು ಮನಸೋಲಬಲ್ಲರು ಅನ್ನುವಂಥದ್ದು. ಈ ಸಿನಿಮಾ ನೋಡುವಾಗ ಆ ಮಾತು ನೆನಪಾಯ್ತು.

ಮನುಷ್ಯರಾಗಿ ಹುಟ್ಟಿರುವ ನಾವೆಲ್ಲ ಅಪ್ಪ ಅಮ್ಮ ಗಂಡ ಹೆಂಡತಿ ಮಕ್ಕಳು ಮರಿ ಗೆಳೆಯ ಗೆಳತಿ ಹೀಗೆ ಅನೇಕ ಭಾವನಾತ್ಮಕ ಸಂಬಂಧದೊಂದಿಗೆ ಸಮಾಜದಲ್ಲಿ ಬದುಕಿ ಬಾಳಿ ಒಂದು ದಿನ ಸಾಯುತ್ತೇವೆ. ಮನುಷ್ಯನಿಗೆ ತಾನು ಹೇಗೆ ಯಾವಾಗ ಸಾಯುತ್ತೇನೆ, ಸತ್ತಮೇಲೆ ಅವನ ದೇಹ ಏನಾಗುತ್ತದೆ ಅನ್ನೋ ಸಂಗತಿಗಳು ನಿಗೂಢ. ಆದರೆ ಅದೇ ಮನುಷ್ಯರಿಗೆ ತಾವು ಹೇಗೆ ಯಾವಾಗ ಸಾಯ್ತೇವೆ ಅನ್ನೋದು ಗೊತ್ತಾದಾಗ ಅದೂ ಕೇವಲ ಬೆರಳೆಣಿಕೆ ದಿನದೊಳಗೆ ಅನ್ನುವಾಗ ಆಗುವ ನೋವಿದೆಯಲ್ಲ, ಅದು ವರ್ಣನೆಗೆ ನಿಲುಕದ್ದು. ಆದರೆ ಅಂತಹ ದೃಶ್ಯಗಳು ಈ ಚಿತ್ರ ನೋಡುವಾಗ ಚಿಂತನೆಗೆ ಒಳಪಡುವಂತೆ ಮಾಡುತ್ತದೆ. ಅಷ್ಟೆ ಅಲ್ಲದೆ ಹೆಣ್ಣು ಗಂಡಿನ ಸಂಬಂಧದ ಕುರಿತಾದ ಕೆಲ ಸೂಕ್ಷ್ಮವಿಷಯಗಳನ್ನು ನಿರ್ದೇಶಕರು ನಾಜೂಕಾಗಿ ನೋಡುಗರಿಗೆ ಯಾವುದೇ ರೀತಿಯ ಮುಜುಗರ ಎನಿಸದಂತೆ ತೆರೆಗೆ ಎಳೆದಿದ್ದಾರೆ. ಸಾವು, ಕೆರೆದಂಡೆ, ಬೀದಿ ನಾಯಿ ಎಲ್ಲವೂ ಒಂದೊಂದು ರೀತಿಯ ರೂಪಕವಾಗಿ ಬಳಸಿ ಮಾತುಗಳಲ್ಲಿ ಹೆಣೆದಿದ್ದಾರೆ. ಗಂಡು ಹೆಣ್ಣಿನ ಸಂಬಂಧದ ಕುರಿತು ಹೇಳುವಾಗ ಸರಿ ತಪ್ಪು ಎನ್ನುವ ಯಾವುದೇ ರೀತಿಯ ತೀರ್ಪು ನೀಡದೆ ಸೂಕ್ಷ್ಮವಾಗಿ ಪ್ರಬುದ್ಧತೆಯಿಂದ ನಿಭಾಯಿಸಿದ್ದಾರೆ.

ಇದನ್ನೂ ಓದಿ: Raj B Shetty | ʻಸ್ವಾತಿ ಮುತ್ತಿನ ಮಳೆ ಹನಿಯೇʼ ಫಸ್ಟ್‌ ಪೋಸ್ಟರ್‌ ರಿವೀಲ್‌!

ಚಿತ್ರದ ಮಖ್ಯಪಾತ್ರವಾಗಿರುವ ‘ಪ್ರೇರಣಾ’ ‘ಆಸರೆ’ ಎನ್ನುವ ಆರೋಗ್ಯ ಕೇಂದ್ರದಲ್ಲಿ ಕೌನ್ಸೆಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೋ ಕಾಯಿಲೆಗೆ ತುತ್ತಾಗಿ ಬದುಕಿನ ಕೊನೆಯ ಹಂತ ತಲುಪಿ ಅಲ್ಲಿ ದಾಖಲಾಗಿರುವವರು ದಾಖಲಾಗುವವರು ಬದುಕುವುದಿಲ್ಲ ಎಂದು ತಿಳಿದಿದ್ದರೂ ಅವರಲ್ಲಿ ಮನೋಧೈರ್ಯ ತುಂಬುವ ಕಾಯಕ ಅವರದ್ದು. ಆದರೆ ಮದುವೆಯಾಗಿರುವ ಆಕೆಯ ವೈಯಕ್ತಿಕ ಜೀವನವೇ ಸುಖ ದುಃಖ ಹರ್ಷೋದ್ಗಾರವಿಲ್ಲದೆ ಒಂದು ರೀತಿಯ ಮೂಕಿಚಿತ್ರದ ನಾಯಕಿಯಂತಾಗಿ ಬದುಕಿದ್ದಾಳೆ. ಹೀಗಿರುವಾಗ ಆಸರೆ ಆರೋಗ್ಯ ಕೇಂದ್ರಕ್ಕೆ ತನ್ನ ಜೀವನದ ಕೊನೆಯ ಹಂತ ತಲುಪಿರುವ ಅನಿಕೇತ್ ಬರುತ್ತಾನೆ. ನಂತರ ‘ಪ್ರೇರಣಾ’ಳಲ್ಲಿ ಜೀವನದಲ್ಲಿ ಆಗುವ ಬದಲಾವಣೆಗಳೇನು, ಅನಿಕೇತ್ ಏನಾಗುತ್ತಾನೆ, ಅಲ್ಲಿರುವ ಅನೇಕ ರೋಗಿಗಳ ಕತೆಗಳೇನು ಎನ್ನುವುದೆಲ್ಲ ಚಿತ್ರದಲ್ಲಿದೆ. ಇದೊಂದು ಕಾವ್ಯಾತ್ಮಕ ಸಿನಿಮಾವಾಗಿದ್ದು, ಮೌನವು ಮಾತಾಡುತ್ತದೆ. ಮಳೆಹನಿ, ಹೂವು, ಕೆರೆದಂಡೆ, ಮಂಜಾನೆ – ಮುಸ್ಸಂಜೆಗಳೆಲ್ಲ ವಿಶೇಷವಾಗಿ ಕಾಣುತ್ತವೆ.

ಇದನ್ನೂ ಓದಿ: Raj B Shetty | ʻಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾದ ರಾಜ್ ಬಿ ಶೆಟ್ಟಿ ಲುಕ್ ರಿವೀಲ್‌!

ಚಿತ್ರಕ್ಕೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯ ಹಾಗೂ ರವಿ ರೈ ಕಳಸ, ವಚನ ಶೆಟ್ಟಿ ನಿರ್ಮಾಣಮಾಡಿದ್ದು, ರಾಜ್ ಬಿ ಶೆಟ್ಟಿ ಅವರು ಬರೆದು ನಿರ್ದೇಶನ ಮಾಡುವುದರ ಜತೆಗೆ ಅನಿಕೇತ್ ಎನ್ನುವ ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ. ಪ್ರೇರಣಾ ಪಾತ್ರದಲ್ಲಿ ಸಿರಿ ರವಿಕುಮಾರ್, ಡಾಕ್ಟರ್ ಮನಮೋಹನ್ ಪಾತ್ರದಲ್ಲಿ ಬಾಲಾಜಿ ಮನೋಹರ್, ಪ್ರೇರಣಾಳ ಗಂಡನ ಪಾತ್ರದಲ್ಲಿ ಸೂರ್ಯ ವಸಿಷ್ಠ, ಅಮ್ಮನ ಪಾತ್ರದಲ್ಲಿ ರೇಖಾ ಕೂಡ್ಲಿಗಿ ಮಾಡಿದ್ದಾರೆ. ಸ್ನೇಹಾ ಶರ್ಮಾ, ಜೆಪಿ ತುಮ್ಮಿನಾಡ್, ಗೋಪಾಲಕೃಷ್ಣ ದೇಶಪಾಂಡೆ, ಸಂಧ್ಯಾ ಅರಕೆರೆ ಮುಂತಾದ ಕಲಾವಿದರೆಲ್ಲರೂ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಚಿತ್ರಕ್ಕ ಪ್ರವೀಣ್ ಶ್ರೀಯಾನ್ ಅವರ ಛಾಯಗ್ರಹಣವಿದ್ದು, ಮಿಧುನ್ ಮುಕುಂದನ್ ಅವರ ಸಂಗೀತವಿದೆ. ಪೃಥ್ವಿಯವರ ಸಾಹಿತ್ಯ, ಮಾಧುರಿ ಶೇಷಾದ್ರಿ ಅವರ ಧ್ವನಿಯಲ್ಲಿ ಮೂಡಿಬಂದಿರುವ ‘ಮೆಲ್ಲಗೆ ಧ್ಯಾನಿಸು ಚಂದವೇ ಪ್ರೀತಿಸು’ ಹಾಡು ಧ್ಯಾನಿಸಿದರೆ ಎದೆಗಿಳಿದುಳಿದುಬಿಡುತ್ತದೆ‌.

ಸುಮಧುರ ಸಂಗೀತ ಆಲಾಪ, ಧ್ವನಿ , ದೃಶ್ಯ ಎಲ್ಲವೂ ವಾವ್ ಅನಿಸಿಕೊಳ್ಳುತ್ತವೆ. ಇದು ಕೇವಲ ಮನರಂಜನೆಯ ಸಿನಿಮಾವಲ್ಲ, ಪ್ರೀತಿಪೂರ್ವಕ ಬದುಕು ಬವಣೆ ನೋವು ನಲಿವಿನ ನವಿರಾದ ದೃಶ್ಯಕಾವ್ಯ. ಕೊಂಚ ತಾಳ್ಮೆ ಬೇಡುತ್ತದೆ. ಆದರೆ ಕನೆಕ್ಟ್ ಆದರೆ ಖಂಡಿತ ಹೃದಯ ಸ್ಪರ್ಶಿಸುತ್ತದೆ. ಸದ್ಯ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿದೆ. ಆಸಕ್ತರೇ ಗಮನಿಸಿ. ಮೆಲ್ಲಗೆ ಧ್ಯಾನಿಸಿ ಚಂದವ ಪ್ರೀತಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

Kalki 2898 AD: ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯದ ಈ ಚಿತ್ರ ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 300.6 ಕೋಟಿ ರೂ. ಗಳಿಸಿದೆ. ವರದಿಗಳ ಪ್ರಕಾರ, ಕಲ್ಕಿ 2898 AD ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂ. ಮೀರಿದೆ.ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.

VISTARANEWS.COM


on

Kalki 2898 AD Prabhas Film Hits Jackpot 500 Cr WW In Opening
Koo

ಬೆಂಗಳೂರು: ಕಲ್ಕಿ 2898 AD (Kalki 2898 AD) ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ನಾಗ್ ಅಶ್ವಿನ್ ಅವರ ಕಲ್ಕಿ 2898 AD ಜೂನ್ 27 ರಂದು ಬಿಡುಗಡೆಯಾಯಿತು. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯದ ಈ ಚಿತ್ರ ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 300.6 ಕೋಟಿ ರೂ. ಗಳಿಸಿದೆ. ವರದಿಗಳ ಪ್ರಕಾರ, ಕಲ್ಕಿ 2898 AD ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂ. ಮೀರಿದೆ.ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.

ಕಲ್ಕಿ 2898 AD ತನ್ನ ಆರಂಭಿಕ ದಿನದಲ್ಲಿ 95.3 ಕೋಟಿ ರೂ. ಮತ್ತು ಶುಕ್ರವಾರ 57.6 ಕೋಟಿ ರೂ. ಭಾರತದಲ್ಲಿ ಗಳಿಸಿತು. ಶನಿವಾರ 67.1 ಕೋಟಿ ರೂ. ಮತ್ತು ಭಾನುವಾರ 83.2 ಕೋಟಿ ರೂ. ಗಳಿಸಿದ ಈ ಚಿತ್ರ ಕಲೆಕ್ಷನ್‌ನಲ್ಲಿ ಏರಿಕೆ ಕಂಡಿದೆ. ಚಿತ್ರದ ಒಟ್ಟು ಮೊತ್ತ 300.6 ಕೋಟಿ ರೂ. ಆಗಿದೆ. ವಿಶ್ವಾದ್ಯಂತ ಮೂರು ದಿನಗಳಲ್ಲಿ ಚಿತ್ರ 415 ಕೋಟಿ ಗಳಿಸಿದೆ. ವಾರದ ದಿನಗಳಲ್ಲೂ ಚಿತ್ರ ತನ್ನ ಯಶಸ್ವಿ ಪ್ರದರ್ಶನವನ್ನು ಉಳಿಸಿಕೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಕಲ್ಕಿ 2898 AD ಎಲ್ಲಾ ದಕ್ಷಿಣ ಭಾರತದ ಭಾಷೆಗಳಲ್ಲಿ ಮತ್ತು ಹಿಂದಿಯಲ್ಲಿ 2D ಮತ್ತು 3D ನಲ್ಲಿ ಬಿಡುಗಡೆಯಾಯಿತು.

ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

ಇದನ್ನೂ ಓದಿ: Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

Continue Reading

ಕಾಲಿವುಡ್

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

Jayam Ravi: ಜಯಂ ರವಿ ಅವರು ಮಣಿರತ್ನಂ ಅವರ ಪೊನ್ನಿಯನ್ ಸೆಲ್ವನ್ – 1 ಮತ್ತು 2 ರಲ್ಲಿ ಚೋಳ ಚಕ್ರವರ್ತಿ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ನಟನೆಗೆ ಮೊದಲು, ಜಯಂ ಅವರು ಕಮಲ್ ಹಾಸನ್ ನಟಿಸಿದ ಆಳವಂದನ್ (2001) ನಲ್ಲಿ ಸುರೇಶ್ ಕೃಷ್ಣ ಅವರಿಗೆ ಸಹಾಯಕ ನಿರ್ದೇಶಕರಾಗಿದ್ದರು.

VISTARANEWS.COM


on

Jayam Ravi married to superstar rajinikanth daughter
Koo

ತಮಿಳು ಸ್ಟಾರ್‌ ಜಯಂ ರವಿ ಮತ್ತು ಪತ್ನಿ ಆರತಿ ದಂಪತಿ ವಿಚ್ಛೇದನ ಪಡೆಯಲಿದ್ದಾರೆ ಎಂದು ವರದಿಯಾಗಿದೆ (Jayam Ravi’s wife Aarti Ravi). ಇತ್ತಿಚೆಗೆ ರವಿ ಹಾಗೂ ಆರತಿ ಅವರು ಫ್ಯಾಮಿಲಿ ಫೋಟೊಗಳನ್ನು ಇನ್‌ಸ್ಟಾದಲ್ಲಿ ಡಿಲೀಟ್‌ ಮಾಡಿದ್ದರು. ಹೀಗಾಗಿ ಜೋಡಿ ಬೇರ್ಪಟ್ಟಿದೆ ಎಂದು ವರದಿಯಾಗಿದೆ. ಆರತಿಯನ್ನು ಮದುವೆಯಾಗದೇ ಇದ್ದಿದ್ದರೆ ಜಯಂ ರವಿ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮಗಳನ್ನು ಮದುವೆಯಾಗುತ್ತಿದ್ದರು ಎಂದು ಖ್ಯಾತ ಪತ್ರಕರ್ತೆ ಸಬಿತಾ ಜೋಸೆಫ್ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಆರತಿ ರವಿ ಅವರು ಜಯಂ ರವಿ ಅವರೊಂದಿಗಿನ ಎಲ್ಲಾ ಫೋಟೋಗಳನ್ನು ಡಿಲಿಟ್‌ ಮಾಡಿದ್ದಾರೆ. ಜಯಂ ರವಿ ಅವರು 2009ರಲ್ಲಿ ನಿರ್ಮಾಪಕಿ ಸುಜಾತಾ ವಿಜಯಕುಮಾರ್ ಅವರ ಮಗಳು ಆರತಿಯನ್ನು ವಿವಾಹವಾದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ . ಮಗ ಆರವ್‌ ಇತ್ತೇಚೆಗೆ ಟಿಕ್‌ ಟಿಕ್‌ ಸಿನಿಮಾದಲ್ಲಿ ನಟಿಸಿದ್ದ. ಇಬ್ಬರೂ ಮುದ್ದಾದ ಜೋಡಿ ಎಂದೇ ಗುರುತಿಸಿಕೊಂಡಿತ್ತು. ಇದೀಗ ಇಬ್ಬರೂ ಒಂದು ವರ್ಷಗಳಿಂದ ದೂರ ಇದ್ದಾರೆ ಎನ್ನಲಾಗಿದೆ.

ಆರತಿಯನ್ನು ಮದುವೆಯಾಗದೇ ಇದ್ದಿದ್ದರೆ ಜಯಂ ರವಿ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮಗಳನ್ನು ಮದುವೆಯಾಗುತ್ತಿದ್ದರು ಎಂದು ಖ್ಯಾತ ಪತ್ರಕರ್ತೆ ಸಬಿತಾ ಜೋಸೆಫ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜಯಂ ರವಿ ಹಾಗೂ ಆರತಿ ಪ್ರೀತಿಗೆ ನಟಿ ಖುಷ್ಪು ಕಾರಣ. ಆ ಸಮಯದಲ್ಲಿ ರಜನಿಕಾಂತ್ ಅವರ ಮಗಳು ಜಯಂ ರವಿ ಅವರನ್ನು ಮದುವೆಯಾಗಲು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ. ಜಯಂ ರವಿ ಆರತಿಯನ್ನು ಪ್ರೀತಿಸುತ್ತಿದ್ದ ಕಾರಣ, ಆರತಿಯ ತಾಯಿ ಇಬ್ಬರಿಗೂ ಮದುವೆ ಮಾಡುವ ಆತುರದಲ್ಲಿದ್ದರು. ತಕ್ಷಣ ಮದುವೆ ಮಾಡಿಸಿಬಿಟ್ಟರು ಎಂದು ವರದಿಯಾಗಿದೆ.

ಇದನ್ನೂ ಓದಿ: Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

ಜಯಂ ರವಿ ಅವರು ಮಣಿರತ್ನಂ ಅವರ ಪೊನ್ನಿಯನ್ ಸೆಲ್ವನ್ – 1 ಮತ್ತು 2 ರಲ್ಲಿ ಚೋಳ ಚಕ್ರವರ್ತಿ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ನಟನೆಗೆ ಮೊದಲು, ಜಯಂ ಅವರು ಕಮಲ್ ಹಾಸನ್ ನಟಿಸಿದ ಆಳವಂದನ್ (2001) ನಲ್ಲಿ ಸುರೇಶ್ ಕೃಷ್ಣ ಅವರಿಗೆ ಸಹಾಯಕ ನಿರ್ದೇಶಕರಾಗಿದ್ದರು.

ಇದಕ್ಕೂ ಮೊದಲು ಜಯಂ ರವಿ ಅವರು ʼಜೀನಿʼ (Genie) ಚಿತ್ರದಲ್ಲಿ ಮಿಂಚಿದ್ದರು. ಅರ್ಜುನನ್ ಜೂನಿಯರ್ ( ʼಜೀನಿʼ ಫ್ಯಾಂಟಸಿ ಸಿನಿಮಾ. ಇದೇ ಮೊದಲ ಬಾರಿಗೆ ಜಯಂ ರವಿ ಫ್ಯಾಂಟಸಿ ಕಥೆಯಲ್ಲಿ ಬಣ್ಣ ಹಚ್ಚಿದ್ದರು. ಹೀಗಾಗಿ ಫಸ್ಟ್ ಲುಕ್ ಕೂಡ ವಿಭಿನ್ನವಾಗಿತ್ತು. ಸರಪಣಿಯಲ್ಲಿ ಬಂಧಿಯಾಗಿರುವ ಜಯಂ ರವಿ, ಜುಟ್ಟು ಕಟ್ಟಿ ಸ್ಟೈಲೀಶ್ ಲುಕ್‌ನಲ್ಲಿ ಮಿಂಚಿದ್ದರು.

ಇದೀಗ ಸೌತ್‌ನಲ್ಲಿ ಸಮಂತಾ ನಾಗಚೈತನ್ಯ ಜೋಡಿ ಬೇರೆಯಾಗಿಯೇ ಅಭಿಮಾನಿಗಳು ಬೇಸರದಲ್ಲಿದ್ದರು. ಇದಾದ ಬಳಿಕ ಧನುಷ್‌ ಹಾಗೂ ಐಶ್ವರ್ಯಾ, ಸಂಗೀತ ನಿರ್ದೇಶಕ ಜೀವಿ ಪ್ರಕಾಶ್‌ ಕೂಡ ಬೇರೆಯಾದರು. ಸ್ಯಾಂಡಲ್‌ವುಡ್‌ನಲ್ಲಿ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಬೇರ್ಪಟ್ಟರು.

Continue Reading

ಟಾಲಿವುಡ್

Kamal Haasan: ನನ್ನ ಪಾತ್ರ ಚಿಕ್ಕದಿರಬಹುದು ಆದರೆ ಇದು ಆರಂಭವಷ್ಟೇ ಎಂದು ಕಲ್ಕಿ ಭಾಗ- 2ರ ಸುಳಿವು ಕೊಟ್ಟ ಕಮಲ್‌ ಹಾಸನ್‌!

Kamal Haasan: ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ನಟ ಮಾತನಾಡಿ, “ಕಲ್ಕಿಯಲ್ಲಿ, ನಾನು ಕೆಲವೇ ನಿಮಿಷಗಳ ಕಾಲ ಕಾಣಿಸಿಕೊಳ್ಳುವ ಸಣ್ಣ ಪಾತ್ರವನ್ನು ನಿರ್ವಹಿಸಿದ್ದೇನೆ. ಚಿತ್ರದಲ್ಲಿ ನನ್ನ ನಿಜವಾದ ಭಾಗ ಪ್ರಾರಂಭವಾಗುವುದು ಎರಡನೇ ಪಾರ್ಟ್‌ನಲ್ಲಿ. ಈ ಚಿತ್ರವನ್ನು ನಾನು ಕೂಡ ಒಬ್ಬ ಅಭಿಮಾನಿಯಾಗಿ ನೋಡಿದೆʼʼಎಂದು ಹೇಳಿದರು.

VISTARANEWS.COM


on

Kamal Haasan on limited screen time in 'Kalki 2898 AD
Koo

ಬೆಂಗಳೂರು: 2024ರ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898ಎಡಿ (Kalki 2898 AD) ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತೀ ದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೇ ಚಿತ್ರದ ಮುಂದಿನ ಸರಣಿ ಶೀಘ್ರದಲ್ಲೇ ತೆರೆ ಕಾಣುವ ನಿರೀಕ್ಷೆಯನ್ನು ಮೂಡಿಸಿದೆ. ಕಮಲ್ ಹಾಸನ್ (Kamal Haasan) ಅವರು ತನ್ನ ಪಾತ್ರ ಮತ್ತು ಚಿತ್ರದ ಬಗ್ಗೆ ಕೆಲವು ಆಸಕ್ತಿದಾಯಕ ವಿಷಯಗಳನ್ನು ಮಾಧ್ಯಮಗಳ ಜತೆ ಹಂಚಿಕೊಂಡಿದ್ದಾರೆ.

ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ನಟ ಮಾತನಾಡಿ, “ಕಲ್ಕಿಯಲ್ಲಿ, ನಾನು ಕೆಲವೇ ನಿಮಿಷಗಳ ಕಾಲ ಕಾಣಿಸಿಕೊಳ್ಳುವ ಸಣ್ಣ ಪಾತ್ರವನ್ನು ನಿರ್ವಹಿಸಿದ್ದೇನೆ. ಚಿತ್ರದಲ್ಲಿ ನನ್ನ ನಿಜವಾದ ಭಾಗ ಪ್ರಾರಂಭವಾಗುವುದು ಎರಡನೇ ಪಾರ್ಟ್‌ನಲ್ಲಿ. ಈ ಚಿತ್ರವನ್ನು ನಾನು ಕೂಡ ಒಬ್ಬ ಅಭಿಮಾನಿಯಾಗಿ ನೋಡಿದೆʼʼಎಂದು ಹೇಳಿದರು.

“ಭಾರತೀಯ ಸಿನಿಮಾ ಜಾಗತಿಕ ಮನರಂಜನೆಯತ್ತ ಸಾಗುತ್ತಿದೆ ಎಂಬುದಕ್ಕೆ ನಾವು ಅನೇಕ ಸೂಚಕಗಳನ್ನು ನೋಡುತ್ತಿದ್ದೇವೆ. ಅವುಗಳಲ್ಲಿ ಕಲ್ಕಿ 2898 AD ಒಂದು. ನಾಗ್ ಅಶ್ವಿನ್ ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪುರಾಣದ ವಿಷಯವನ್ನು ಎಚ್ಚರಿಕೆಯಿಂದ ನಿರ್ವಹಿಸಿದ್ದಾರೆ. ಪ್ರಪಂಚದಾದ್ಯಂತ, ಜಪಾನ್, ಚೀನಾ, ಮತ್ತು ಗ್ರೀಕ್ ನಾಗರೀಕತೆಗಳು ಭಾರತೀಯ ಕಥಾ ಪರಂಪರೆಯ ಹತ್ತಿರ ಬರಬಹುದು. ಅಶ್ವಿನ್ ಅದರಿಂದ ಕಥೆಗಳನ್ನು ಆರಿಸಿಕೊಂಡರುʼʼಎಂದರು.

“ಯಾರಾದರೂ ನನ್ನ ಬಳಿ ಬಂದು ಯಾಸ್ಕಿನ್‌ನ ವಯಸ್ಸನ್ನು ಕೇಳಿದರೆ, ನಾನು ಧೈರ್ಯದಿಂದ ಹೇಳುತ್ತೇನೆ, ‘ಊಹಿಸಿ, ಅದು ನಿಮ್ಮ ಆಯ್ಕೆ’. ಎಂದು. ಬಹುಶಃ ಅವರಿಗೆ 180 ವರ್ಷ. ನಾನು ಕಲ್ಕಿ 2898 AD ಯಲ್ಲಿ ಬಹಳ ಚಿಕ್ಕ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ, ಆದರೆ ಇದು ನನಗೆ ಕುತೂಹಲ ಮೂಡಿಸಿದ ಮುಂದಿನ ಭಾಗವಾಗಿದೆ. ಈ ಭಾಗದಲ್ಲಿ ಸೀಮಿತ ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇನೆʼʼಎಂದರು.

ಇದನ್ನೂ ಓದಿ: Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

ಕಲ್ಕಿ 2898ಎಡಿ ದೊಡ್ಡ ಪರದೆಯ ಮೇಲೆ ದಾಖಲೆಯನ್ನೇ ಬರೆದಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿದಂತೆ ಬಹುದೊಡ್ಡ ತಾರಾ ಬಳಗವನ್ನೇ ಹೊಂದಿದ್ದು, ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಗಳಿಸಿದೆ.ಚಿತ್ರದ ಮುಂದುವರಿದ ಭಾಗ ಶೀಘ್ರದಲ್ಲೇ ತೆರೆ ಕಾಣಲಿದೆ ಎಂಬ ಸಂದೇಶದೊಂದಿಗೆ ಕಲ್ಕಿ 2898ಎಡಿ ಚಲನಚಿತ್ರವು ಮುಕ್ತಾಯಗೊಂಡಿರುವುದರಿಂದ 2898ಎಡಿ ಚಿತ್ರ ಭಾಗ 2 ಸಾಕಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಕಮಲ್ ಹಾಸನ್ ನಿರ್ವಹಿಸಿರುವ ಅಸಾಧಾರಣ ಪಾತ್ರ ಯಾಸ್ಕಿನ್ ನ ಅಪಾಯಕಾರಿ ಕಾರ್ಯಾಚರಣೆಯೊಂದಿಗೆ ‘ಕಲ್ಕಿ 2898ಎಡಿ ಭಾಗ 2 ಪ್ರಾರಂಭವಾಗುವ ನಿರೀಕ್ಷೆ ಇದೆ. ಚಿತ್ರದ ಮೊದಲ ಭಾಗದಲ್ಲಿ ಕಮಲ್ ಹಾಸನ್ ಅವರ ಚಿಕ್ಕ ಪಾತ್ರವನ್ನು ಮಾತ್ರ ತೋರಿಸಲಾಗಿದೆ. ಅಮಿತಾಬ್ ಬಚ್ಚನ್ ಅಶ್ವತ್ಥಾಮನ ಪಾತ್ರದಲ್ಲಿ, ಪ್ರಭಾಸ್ ಭೈರವ ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಯಾಸ್ಕಿನ್ ಅವರನ್ನು ಹೇಗೆ ಎದುರಿಸಲು ಯೋಜಿಸುತ್ತಾರೆ ಎಂಬುದರ ಸುತ್ತ ಕಥೆ ಕೇಂದ್ರೀಕೃತವಾಗಿದೆ.

ಕಲ್ಕಿ 2898ಎಡಿ ಭಾಗ 2 ಚಿತ್ರ ನಿರ್ಮಾಣಕ್ಕೆ ಮೂರು ವರ್ಷಗಳು ಬೇಕಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಭಾಸ್ ಈ ವಿಭಾಗವನ್ನು ಎರಡು ಭಾಗಗಳಾಗಿ ವಿಂಗಡಿಸುವ ಬಗ್ಗೆ ಸುಳಿವು ನೀಡಿದ್ದಾರೆ. ವಿವಿಧ ಸಂದರ್ಶನಗಳಲ್ಲಿ ತಮ್ಮ ಮುಂದಿನ ಸರಣಿಯ ಬಗ್ಗೆ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಸುಮಾರು ಮೂರು ವರ್ಷಗಳಲ್ಲಿ ಎರಡನೇ ಕಂತನ್ನು ಅಭಿಮಾನಿಗಳು ಎದುರು ನೋಡಬಹುದು ಎಂದು ನಾಗ್ ಅಶ್ವಿನ್ ಕೂಡ ಖಚಿತಪಡಿಸಿದ್ದಾರೆ.

ಭವ್ಯವಾದ ವೈಜ್ಞಾನಿಕ ಮಹಾಕಾವ್ಯ ‘ಕಲ್ಕಿ 2898ಎಡಿ’ ಚಿತ್ರಮಂದಿರಗಳಿಗೆ ಆಗಮಿಸಿದ್ದು, ಹಿಂದೂ ಧರ್ಮಗ್ರಂಥಗಳಿಂದ ಪ್ರೇರಿತವಾಗಿದೆ. ದುಷ್ಟ ಶಕ್ತಿಗಳ ವಿರುದ್ಧ ಹೋರಾಡಲು ದೈವಿಕ ಜೀವಿಗಳ ಮೂಲವನ್ನು ವಿವರಿಸುವ ಈ ಚಿತ್ರವೂ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವ ಕಥಾಹಂದರ, ಉಸಿರುಕಟ್ಟುವ ದೃಶ್ಯವಳಿಗಳು ಮತ್ತು ವಿಶಿಷ್ಟ ಪರಿಕಲ್ಪನೆ ಮಂತ್ರಮುಗ್ಧರನ್ನಾಗಿಸುತ್ತದೆ. ಇದು ಭಾರತೀಯ ಚಿತ್ರರಂಗದಲ್ಲಿ ಒಂದು ಅದ್ಭುತ ಸಾಧನೆಯನ್ನು ಸೂಚಿಸುತ್ತದೆ.

ಈ ಚಿತ್ರವು ಭಾರತದ ‘ಅವೆಂಜರ್ಸ್ ಕ್ಷಣ’. ವೈಜ್ಞಾನಿಕ, ಕಾಲ್ಪನಿಕ ಮತ್ತು ಪುರಾಣದ ಅಂಶಗಳನ್ನು ಅದ್ಭುತವಾಗಿ ಸಂಯೋಜಿಸುತ್ತದೆ. ಚಿತ್ರದ ಸುತ್ತ ಹೆಚ್ಚಿನ ನಿರೀಕ್ಷೆಗಳಿವೆ ಎಂದು ರಾಣಾ ದಗ್ಗುಬಾಟಿ ಅಭಿಪ್ರಾಯ ಪಟ್ಟಿದ್ದಾರೆ.

Continue Reading

ಟಾಲಿವುಡ್

Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

Kalki 2898 AD: ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

VISTARANEWS.COM


on

Koo

ಬೆಂಗಳೂರು: ನಾಗ್ ಅಶ್ವಿನ್ ಅವರ ಕಲ್ಕಿ 2898 AD ಜೂನ್ 27 ರಂದು (Kalki 2898 AD) ಬಿಡುಗಡೆಯಾಯಿತು. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ನಟಿಸಿದ ಈ ಚಿತ್ರ ಮೂರು ದಿನಗಳಲ್ಲಿ ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 220 ಕೋಟಿ ರೂ. ಗಳಿಕೆ ಕಂಡಿದೆ ಎಂದು ವರದಿಯಾಗಿದೆ.

ಕಲ್ಕಿ 2898 AD ತನ್ನ ಆರಂಭಿಕ ದಿನದಲ್ಲಿ 95.3 ಕೋಟಿ ರೂ. ಮತ್ತು ಎರಡನೇ ದಿನ 57.6 ಕೋಟಿ ರೂ. ಭಾರತದಲ್ಲಿ ಗಳಿಕೆ ಕಂಡಿತ್ತು. ನಿನ್ನೆ ಅಂದರೆ ಮೂರನೇ ದಿನ 67.1 ಕೋಟಿ ರೂ. ಗಳಿಸಿ, ಒಟ್ಟು 220 ಕೋಟಿ ವರೆಗೆ ಕಲೆಕ್ಷನ್‌ನಲ್ಲಿ ಏರಿಕೆ ಕಂಡಿದೆ. ಈ ಚಿತ್ರವು ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಎರಡು ದಿನಗಳಲ್ಲಿ 298.5 ಕೋಟಿ ರೂ. ಗಳಿಸಿದೆ. ಭಾನುವಾರದಂದು (ಇಂದು) ಚಿತ್ರ ಯಾವ ರೀತಿ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಕಲ್ಕಿ 2898 AD ಎಲ್ಲಾ ದಕ್ಷಿಣ ಭಾರತದ ಭಾಷೆಗಳಲ್ಲಿ ಮತ್ತು ಹಿಂದಿಯಲ್ಲಿ 2D ಮತ್ತು 3D ನಲ್ಲಿ ಬಿಡುಗಡೆಯಾಗಿದೆ.

ಭಾರತದಲ್ಲಿ ಕೇವಲ ಮೂರು ದಿನಕ್ಕೆ 200 ಕೋಟಿ ಕಲೆಕ್ಷನ್ ಅನ್ನು ದಾಟಿದೆ. ಭಾರತದಲ್ಲಿ ಮೂರು ದಿನದಲ್ಲಿ ‘ಕಲ್ಕಿ’ ಸಿನಿಮಾ ಸುಮಾರು 225 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದ ಕಮಲ್, “ಭಾರತೀಯ ಸಿನಿಮಾ ಜಾಗತಿಕವಾಗಿ ಮನರಂಜನೆ ನೀಡುತ್ತಿದೆ. ಅವುಗಳಲ್ಲಿ ಕಲ್ಕಿ 2898 ಎಡಿ ಸಿನಿಮಾ ಕೂಡ. ನಾಗ್ ಅಶ್ವಿನ್ ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪುರಾಣದ ವಿಷಯವನ್ನು ಎಚ್ಚರಿಕೆಯಿಂದ ನಿಭಾಯಿಸಿದ್ದಾರೆ. ಪ್ರಪಂಚದಾದ್ಯಂತ, ಜಪಾನ್, ಚೀನಾ ಮತ್ತು ಗ್ರೀಕ್ ನಾಗರಿಕತೆಗಳು ಮಾತ್ರ ಭಾರತೀಯ ಪರಂಪರೆಯ ಕಥಾಹಂದರದ ಹತ್ತಿರ ಬರಬಹುದು. ಅಶ್ವಿನ್ ಅದರಲ್ಲಿ ಕಥೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಮತ್ತು ಎಲ್ಲರನ್ನು ಒಟ್ಟಿಗೆ ಸೇರಿಸುವ ಮೂಲಕ ಹೆಚ್ಚು ತಾಳ್ಮೆಯಿಂದ ನಿಭಾಯಿಸಿದ್ದಾರೆʼʼಎಂದರು.

ಇದನ್ನೂ ಓದಿ: Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!


ಚಿತ್ರದಲ್ಲಿ ಪ್ರಭಾಸ್ ಭೈರವನಾಗಿ, ದೀಪಿಕಾ SUM-80 ಆಗಿ, ಅಮಿತಾಭ್‌ ಅಶ್ವತ್ಥಾಮನಾಗಿ ಮತ್ತು ಕಮಲ್ ಸುಪ್ರೀಂ ಯಾಸ್ಕಿನ್ ಆಗಿ ನಟಿಸಿದ್ದಾರೆ. ಚಿತ್ರದಲ್ಲಿ ದಿಶಾ ಪಟಾನಿ ರಾಕ್ಸಿಯಾಗಿ ನಟಿಸಿದ್ದಾರೆ. ವಿಜಯ್ ದೇವರಕೊಂಡ, ಮೃಣಾಲ್ ಠಾಕೂರ್, ದುಲ್ಕರ್ ಸಲ್ಮಾನ್, ಫರಿಯಾ ಅಬ್ದುಲ್ಲಾ ಮತ್ತು ಇತರರು ಅತಿಥಿ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

Continue Reading
Advertisement
Actor Darshan grandmother came running distant town to see and not punish him
ಸ್ಯಾಂಡಲ್ ವುಡ್14 mins ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ15 mins ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ19 mins ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ30 mins ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ33 mins ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

hassan murder case
ಕ್ರೈಂ42 mins ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Golden Star Ganesh Birthday Not Celebrating His Birthday This Year
ಸ್ಯಾಂಡಲ್ ವುಡ್42 mins ago

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ICC Team of the Tournament
ಪ್ರಮುಖ ಸುದ್ದಿ45 mins ago

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

Job Alert
ಉದ್ಯೋಗ1 hour ago

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

murder case
ಬೆಂಗಳೂರು1 hour ago

Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು24 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌