Encounter in UP: ವಾರದ ಅಂತರದಲ್ಲಿ ಯೋಗಿ ನಾಡಲ್ಲಿ ಮತ್ತೊಂದು ಎನ್‌ಕೌಂಟರ್‌; ಕೊಲೆ ಆರೋಪಿ ಫಿನಿಶ್‌ - Vistara News

ಕ್ರೈಂ

Encounter in UP: ವಾರದ ಅಂತರದಲ್ಲಿ ಯೋಗಿ ನಾಡಲ್ಲಿ ಮತ್ತೊಂದು ಎನ್‌ಕೌಂಟರ್‌; ಕೊಲೆ ಆರೋಪಿ ಫಿನಿಶ್‌

Encounter in UP: ವಾರದ ಅಂತರದಲ್ಲಿ ಉತ್ತರ ಪ್ರದೇಶದಲ್ಲಿ ಎನ್‌ ಕೌಂಟರ್‌ ನಡೆದಿದೆ. ಕೊಲೆ ಆರೋಪಿ ಪೊಲೀಸ್‌ ಗುಂಡಿಗೆ ಬಲಿಯಾಗಿದ್ದಾನೆ.

VISTARANEWS.COM


on

shoot out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಗುರುವಾರ (ಜನವರಿ 11) ಮುಂಜಾನೆ ಗುಂಡಿನ ಮೊರೆತದ ಸದ್ದು ಕೇಳಿ ಬಂದಿದೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ಕೊಲೆ ಅಪರಾಧಿ ಸಾವನ್ನಪ್ಪಿದ್ದು, ಆತನ ಸಹಚರ ಗಾಯಗೊಂಡಿದ್ದಾನೆ. ಮೃತನನ್ನು ಇಜ್ಹಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಆರೋಪಿಯ ಹೆಸರು ತಾಲಿಬ್ ಎಂದು ಪೊಲೀಸರು ತಿಳಿಸಿದ್ದಾರೆ. (Encounter in UP).

ಕನೌಜ್‌ ಜಿಲ್ಲೆಯ ಸಂಧನ್ ಪಟ್ಟಣದಲ್ಲಿ ಆಭರಣ ಅಂಗಡಿ ನಡೆಸುತ್ತಿದ್ದ ಮೊಹಮ್ಮದ್ ಅಯಾಜ್ (32) ಎಂಬಾತನನ್ನು ಜನವರಿ 5ರಂದು ಈ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಅಂಗಡಿಯನ್ನು ಮುಚ್ಚಿ ಮನೆಗೆ ಹಿಂದಿರುಗುತ್ತಿದ್ದ ಮೊಹಮ್ಮದ್ ಅಯಾಜ್ ಮೇಲೆ ದಾಳಿ ನಡೆಸಿ ಸುಮಾರು 35 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದರು ಎಂದು ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. ಈ ದುಷ್ಕರ್ಮಿಗಳನ್ನು ಬಂಧಿಸಲು ತೆರಳಿದ ವೇಳೆ ಎನ್‌ಕೌಂಟರ್‌ ನಡೆದಿದೆ. ಬಂಧಿತರಿಂದ 20 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ವಾಹನ ತಪಾಸಣೆಯ ಸಮಯದಲ್ಲಿ ಇಬ್ಬರು ಅಪರಾಧಿಗಳು ಪರಾರಿಯಾಗಲು ಪ್ರಯತ್ನಿಸಿದಾಗ ಪೊಲೀಸ್ ತಂಡ ಗುಂಡು ಹಾರಿಸಿತ್ತು. ಘಟನೆಯಲ್ಲಿ ಕಾನ್ಸ್‌ಟೇಬಲ್‌ಗಳಾದ ಅಮನ್ ಸಿಂಗ್ ಮತ್ತು ವಿನಯ್ ಕುಮಾರ್ ಗಾಯಗೊಂಡಿದ್ದಾರೆ ಎಂದು ಪ್ರಶಾಂತ್ ಕುಮಾರ್ ವಿವರಿಸಿದ್ದಾರೆ. ಗಾಯಗೊಂಡಿದ್ದ ಇಜ್ಹಾರ್ ಆಸ್ಪತ್ರೆಗೆ ತಲುಪುವ ಮೊದಲೇ ಸಾವನ್ನಪ್ಪಿದ್ದರೆ, ತಾಲಿಬ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಬಲಿ!

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗ್ಯಾಂಗ್‌ಸ್ಟರ್‌, ಶಾರ್ಪ್‌ ಶೂಟರ್‌ ವಿನೋದ್‌ ಕುಮಾರ್‌ ಉಪಾಧ್ಯಾಯ ಬಲಿಯಾದ ವಾರದ ಬಳಿಕ ಮತ್ತೆ ಈ ಘಟನೆ ವರದಿಯಾಗಿದೆ. ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (UP STF) ಜನವರಿ 5ರ ಮುಂಜಾನೆ ನಡೆಸಿದ ದಾಳಿಯಿಂದ ವಿನೋದ್‌ ಕುಮಾರ್‌ ಸಾವನ್ನಪ್ಪಿದ್ದ. ಸುಲ್ತಾನ್‌ಪುರದ ದೆಹತ್ ಕೊಟ್ವಾಲಿ ಪ್ರದೇಶದ ಎಸ್‌ಟಿಎಫ್‌ ಪ್ರಧಾನ ಕಚೇರಿಯ ಡಿವೈಎಸ್ಪಿ ದೀಪಕ್ ಕುಮಾರ್ ಸಿಂಗ್ ನೇತೃತ್ವದ ತಂಡ ಈ ಎನ್‌ಕೌಂಟರ್‌ ನಡೆಸಿತ್ತು.

ವಿನೋದ್‌ ಕುಮಾರ್‌ ವಿರುದ್ಧ ಲಕ್ನೋ ಮತ್ತು ಗೋರಖ್‌ಪುರ ಸೇರಿದಂತೆ ಉತ್ತರ ಪ್ರದೇಶದಾದ್ಯಂತ ಅಪಹರಣ, ದರೋಡೆ, ಸುಲಿಗೆಯ ಅನೇಕ ಪ್ರಕರಣಗಳು ದಾಖಲಾಗಿವೆ. ಆತನನ್ನು ಬಂಧಿಸುವವರಿಗೆ ಗೋರಖ್‌ಪುರ ಪೊಲೀಸರು 1 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದರು. ಈತ ಗೋರಖ್‌ಪುರ, ಬಸ್ತಿ, ಸಂತ ಕಬೀರ್ ನಗರ ಮತ್ತು ಲಕ್ನೋದಲ್ಲಿ ಆತ ಹಲವು ಕೊಲೆಗಳನ್ನು ನಡೆಸಿದ್ದ. ಇದಲ್ಲದೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ಷೇತ್ರವಾದ ಗೋರಖ್‌ಪುರದ ಗೋರಖನಾಥ್ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಅಲ್ಲದೆ ವಿನೋದ್ ಕುಮಾರ್‌ ಹೆಸರಿನಲ್ಲಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಇನ್ನೂ 31 ಪ್ರಕರಣಗಳಿದ್ದವು.

ಇದನ್ನೂ ಓದಿ: Encounter in UP: ಯೋಗಿ ನಾಡಿನಲ್ಲಿ ಮತ್ತೊಂದು ಎನ್‌ಕೌಂಟರ್‌, ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಬಲಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Physical Abuse: ಅಪ್ರಾಪ್ತ ಮಗಳನ್ನು ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

Physical Abuse: ಮಂಡ್ಯ ನಗರದ ಗುತ್ತಲಿನಲ್ಲಿ ಈ ಘಟನೆ ನಡೆದಿದೆ. ಮುನೀರ್ ತನ್ನ ಅಪ್ರಾಪ್ತ ಮಗಳನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿ ಗರ್ಭ ಧರಿಸುವಂತೆ ಮಾಡಿದ್ದಾನೆ. ಗರ್ಭಿಣಿಯಾದ ಬಾಲಕಿ ನಿನ್ನೆ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಇದನ್ನು ಕೇಳಿ ಕೆರಳಿ ಕೆಂಡವಾದ ಗ್ರಾಮಸ್ಥರು ಮುನೀರ್‌ಗೆ ನಡು ರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

VISTARANEWS.COM


on

physical abuse mandya
Koo

ಮಂಡ್ಯ: ಅಪ್ರಾಪ್ತ ವಯಸ್ಸಿನ ಮಗಳನ್ನು ಅಪ್ಪನೇ ಗರ್ಭಿಣಿ (Physical abuse) ಮಾಡಿರುವ ಆರೋಪ ಮಂಡ್ಯ (Mandya news) ಗುತ್ತಲಿನ ಮುನೀರ್‌ ಎಂಬಾತನ ಮೇಲೆ ಬಂದಿದೆ. ಈ ಕೃತ್ಯದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮುನೀರ್‌ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಡ್ಯ ನಗರದ ಗುತ್ತಲಿನಲ್ಲಿ ಈ ಘಟನೆ ನಡೆದಿದೆ. ಮುನೀರ್ ತನ್ನ ಅಪ್ರಾಪ್ತ ಮಗಳನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿ ಗರ್ಭ ಧರಿಸುವಂತೆ ಮಾಡಿದ್ದಾನೆ. ಗರ್ಭಿಣಿಯಾದ ಬಾಲಕಿ ನಿನ್ನೆ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಇದನ್ನು ಕೇಳಿ ಕೆರಳಿ ಕೆಂಡವಾದ ಗ್ರಾಮಸ್ಥರು ಮುನೀರ್‌ಗೆ ನಡು ರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಮುನೀರ್‌ನನ್ನು ಪ್ರಶ್ನಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರ ತಿಳಿದ ಮಂಡ್ಯ ಈಸ್ಟ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸಾರ್ವಜನಿಕರ ಕೈಯಿಂದ ಆರೋಪಿ ಮುನೀರ್‌ನನ್ನು ಬಿಡಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ. ಮಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.

ಇಸ್ಪೀಟ್‌ ಅಡ್ಡೆ ಮೇಲೆ ದಾಳಿ; 11 ಜನ ಆರೋಪಿಗಳ ಬಂಧನ

ಶಿರಾ: ಇಸ್ಪೀಟ್‌ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, 11 ಆರೋಪಿಗಳನ್ನು ಬಂಧಿಸಿ, 1,06,180 ರೂ. ನಗದು, 13 ಮೊಬೈಲ್ ಹಾಗೂ 7 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮಾಗೋಡು ಕೆರೆ ಬಳಿಯ ದೊಡ್ಡನಹಳ್ಳಿ ಗ್ರಾಮದ ಸಮೀಪದಲ್ಲಿ ಭಾನುವಾರ (Gambling Case) ಈ ಘಟನೆ ನಡೆದಿದೆ.

ಖಚಿತ ಮಾಹಿತಿಯ ಮೇರೆಗೆ ತುಮಕೂರು ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿ, ಇಸ್ಪೀಟ್‌ ಜೂಜಾಟದಲ್ಲಿ ತೊಡಗಿದ್ದ 11 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 1,06,180 ರೂ. ನಗದು, 13 ಮೊಬೈಲ್‌ಗಳು ಹಾಗೂ ಏಳು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತುಮಕೂರು ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ಹಾಗೂ ಸಿಬ್ಬಂದಿ ನಡೆಸಿದ ಈ ದಾಳಿಗೆ ಶಿರಾ ತಾಲೂಕಿನ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Continue Reading

ಪ್ರಮುಖ ಸುದ್ದಿ

Suraj Revanna Case: ತಮ್ಮನಿಗೆ ಮೂರು ಸಲ; ಈಗ ಅಣ್ಣನಿಗೂ ಪುರುಷತ್ವ ಪರೀಕ್ಷೆ! ಇದೇ ಬೇರೆ ಥರ!

Suraj Revanna Case: ಸೂರಜ್‌ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತನ ವಿಚಾರಣೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ಪೊಲೀಸರು ನಡೆಸಿದ್ದಾರೆ. ಮುಂದುವರಿದ ಭಾಗವಾಗಿ, ಇಂದು ಸೂರಜ್ ರೇವಣ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಸಂತ್ರಸ್ತನ ಮೇಲೆ ಲೈಂಗಿಕ ಆಕ್ರಮಣ ನಡೆಸಿರುವ ಸಾಧ್ಯತೆಗಳನ್ನು ಶೋಧಿಸಲಾಗುತ್ತದೆ. ಈ ಪ್ರಕರಣ ಸ್ವಲ್ಪ ಭಿನ್ನವಾಗಿದ್ದು, ಆರೋಪಿ ಪುರುಷರ ಜೊತೆಗೆ ಲೈಂಗಿಕ ಕ್ರಿಯೆ ನಡೆಸಬಲ್ಲನೇ ಎಂಬುದನ್ನು ಪರೀಕ್ಷಿಸಲಾಗುತ್ತದೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (physical abuse) ಪ್ರಕರಣಗಳಲ್ಲಿ ತಮ್ಮ ಪ್ರಜ್ವಲ್‌ ರೇವಣ್ಣಗೆ (Prajwal Revanna Case) ಮಾಡಲಾಗಿದ್ದ ಪುರುಷತ್ವ ಪರೀಕ್ಷೆಯನ್ನು (Medical Test) ಇದೀಗ ಅಣ್ಣ ಸೂರಜ್‌ ರೇವಣ್ಣಗೂ (Suraj Revanna Case) ಮಾಡಲು ತನಿಖಾ ತಂಡ ಮುಂದಾಗಿದೆ. ಬೆದರಿಕೆಯೊಡ್ಡಿ ಸಲಿಂಗಕಾಮ, ಅಸಹಜ ಲೈಂಗಿಕ ಕ್ರಿಯೆಯ ಆರೋಪ ಸೂರಜ್‌ ರೇವಣ್ಣ ಮೇಲಿದೆ.

ಸೂರಜ್ ರೇವಣ್ಣ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ‌ ದೌರ್ಜನ್ಯ ಪ್ರಕರಣದಲ್ಲಿ, ಸೂರಜ್ ರೇವಣ್ಣಗೆ ಇಂದು ವೈದ್ಯಕೀಯ ಪರೀಕ್ಷೆ ಮಾಡಿಸುವ ಸಾಧ್ಯತೆ ಇದೆ. ಬೌರಿಂಗ್ ಆಸ್ಪತ್ರೆಯಲ್ಲಿ ಇಂದು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸೂರಜ್‌ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತನ ವಿಚಾರಣೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ಪೊಲೀಸರು ನಡೆಸಿದ್ದಾರೆ. ಮುಂದುವರಿದ ಭಾಗವಾಗಿ, ಇಂದು ಸೂರಜ್ ರೇವಣ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಸಂತ್ರಸ್ತನ ಮೇಲೆ ಲೈಂಗಿಕ ಆಕ್ರಮಣ ನಡೆಸಿರುವ ಸಾಧ್ಯತೆಗಳನ್ನು ಶೋಧಿಸಲಾಗುತ್ತದೆ.

ಈ ಪ್ರಕರಣ ಸ್ವಲ್ಪ ಭಿನ್ನವಾಗಿದ್ದು, ಆರೋಪಿ ಪುರುಷರ ಜೊತೆಗೆ ಲೈಂಗಿಕ ಕ್ರಿಯೆ ನಡೆಸಬಲ್ಲನೇ ಎಂಬುದನ್ನು ಪರೀಕ್ಷಿಸಲಾಗುತ್ತದೆ. ಸೂರಜ್‌ ಮೇಲೆ ಬಂದಿರುವ ಆರೋಪ ಬೆದರಿಕೆ ಹಾಕಿ ಸಲಿಂಗಕಾಮ ಎಸಗಿದ್ದಾಗಿರುವುದರಿಂದ, ಆರೋಪಿಗೆ ಸಲಿಂಗಕಾಮ ಸಹಜವಾದುದೇ ಎಂದು ಪರೀಕ್ಷಿಸಲು ಕೆಲವು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಹೀಗಾಗಿ ಇದು ಅಣ್ಣ ಪ್ರಜ್ವಲ್‌ಗೆ ನಡೆಸಿದ ಪರೀಕ್ಷೆಗಳಿಗಿಂತ ಸ್ವಲ್ಪ ಭಿನ್ನ. ಪ್ರಜ್ವಲ್‌ ಪ್ರಕರಣದಲ್ಲಿ ಸಂತ್ರಸ್ತರು ಮಹಿಳೆಯರಾಗಿದ್ದರು.

ಐಪಿಸಿ ಸೆಕ್ಷನ್ 377 ಹಾಕಿರುವ ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆ ಬಹಳ ಮುಖ್ಯವಾಗಿದೆ. ಇಲ್ಲಿ ಸಂತ್ರಸ್ತ ಹಾಗೂ ಆರೋಪಿ ಇಬ್ಬರ ವೈದ್ಯಕೀಯ ಪರೀಕ್ಷೆಯೂ ಮುಖ್ಯವಾಗಿದೆ. ಸಂತ್ರಸ್ತ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾನೆ. ಆರೋಪಿ ಸೂರಜ್ ರೇವಣ್ಣ ಸದ್ಯ ಸಿಐಡಿ ಕಸ್ಟಡಿಯಲ್ಲಿ ಇದ್ದಾರೆ.

ತಮ್ಮ ಪ್ರಜ್ವಲ್‌ ರೇವಣ್ಣಗೆ ಮೂರು ಸಲ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಮೂರು ಬೇರೆ ಬೇರೆ ಪ್ರಕರಣಗಳಲ್ಲಿ ಈ ಪರೀಕ್ಷೆ ನಡೆಸಲಾಗಿದ್ದು, “ಪದೇ ಪದೆ ಖಾಸಗಿ ಅಂಗವನ್ನು ತೋರಿಸಲು ಮುಜುಗರವಾಗುತ್ತದೆ” ಎಂದು ನ್ಯಾಯಾಧೀಶರ ಮುಂದೆ ಪ್ರಜ್ವಲ್‌ ಅಲವತ್ತುಕೊಂಡಿದ್ದರು. ಇದೀಗ ಅಣ್ಣನೂ ಈ ಪರೀಕ್ಷೆಗೆ ಗುರಿಯಾಗಬೇಕಿದೆ. ಸೂರಜ್‌ ಎಷ್ಟು ಬಾರಿ ಪರೀಕ್ಷೆಗೊಳಗಾಗಲಿದ್ದಾನೆ ಎಂದು ನೋಡಬೇಕಿದೆ.

ನಾಪತ್ತೆಯಾದ ಸೂರಜ್‌ ಆಪ್ತನ ವಿರುದ್ಧವೂ ದೂರು ನೀಡಿರುವ ಸಂತ್ರಸ್ತ!

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ.ಸೂರಜ್‌ ರೇವಣ್ಣ (Suraj Revanna Case) ಆಪ್ತ, ನಾಪತ್ತೆಯಾಗಿರುವ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ. ನನಗೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ ಬಳಿ ಹೇಳಿದ್ದೆ, ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ಸೂರಜ್‌ ಆಪ್ತ ಶಿವಕುಮಾರ್ ಹೆಸರು ಸೇರ್ಪಡೆ ಮಾಡಲಾಗಿದೆ. ಶಿವಕುಮಾರ್ ಹೊಳೆನರಸೀಪುರ ತಾಲೂಕಿನ ಹನುಮನಹಳ್ಳಿ ಗ್ರಾಮದವನು. ಸೂರಜ್‌ ರೇವಣ್ಣ ವಿರುದ್ಧ ಸಂತ್ರಸ್ತ ದೂರು ನೀಡಿದ ಬಳಿಕ, ಸಂತ್ರಸ್ತನ ವಿರುದ್ಧ ದೂರು ಶಿವಕುಮಾರ್ ನಾಪತ್ತೆಯಾಗಿದ್ದಾನೆ.

ಸೂರಜ್‌ಗೆ 5 ಕೋಟಿ ರೂ. ನೀಡುವಂತೆ ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ ಎಂದು ಸಂತ್ರಸ್ತನ ವಿರುದ್ಧ ಶಿವಕುಮಾರ್ ದೂರು ನೀಡಿದ್ದ. ಬಳಿಕ ಶಿವಕುಮಾರ್‌ ಹಾಗೂ ಸಂತ್ರಸ್ತ ಇಬ್ಬರೂ ಸೇರಿ ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದವು. ಇದಾದ ನಂತರ ಶಿವಕುಮಾರ್‌ ನಾಪತ್ತೆಯಾಗಿದ್ದಾನೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

Continue Reading

ಕ್ರೈಂ

Actor Darshan: ಸಿಗದೇ ಹೋದ ರೇಣುಕಾ ಸ್ವಾಮಿ ಮೊಬೈಲ್, ಹೊಸ ಸಿಮ್‌ ಖರೀದಿಸಿದ ಪೊಲೀಸರು

Actor Darshan: ಬೆಂಗಳೂರು ಪೊಲೀಸರು, ಹೊಸ ಆಯಾಮದಲ್ಲಿ ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಇದೀಗ ಮೃತ ರೇಣುಕ ಸ್ವಾಮಿ ಹೆಸರಿನಲ್ಲಿ ಹೊಸ ಸಿಮ್ ಕಾರ್ಡ್ ಖರೀದಿಸಿರುವ ಪೊಲೀಸರು, ಮೊಬೈಲ್ ಮಾಹಿತಿ ರೀ ಆಕ್ಸೆಸ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Renuka swamy Murder case actor darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕ ಸ್ವಾಮಿ ಹತ್ಯೆ (Renuka Swamy Murdr) ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ (Actor Darshan) ಸೇರಿ 17 ಆರೋಪಿಗಳಿಂದ, ಎರಡು ಮೊಬೈಲ್‌ಗಳು ಇನ್ನೂ ಸೀಜ್‌ ಆಗಬೇಕಿದೆ. ಆದರೆ ಆರೋಪಿಗಳು ನೀಡಿದ ಮಾಹಿತಿಯಂತೆ ಅವರು ಇವುಗಳನ್ನು ರಾಜಕಾಲುವೆಯಲ್ಲಿ ಎಸೆದಿದ್ದು, ಇವುಗಳಿಗಾಗಿ ಎಷ್ಟೇ ಹುಡುಕಾಡಿದರೂ ಸಿಕ್ಕಿಲ್ಲ. ರೇಣುಕಾ ಸ್ವಾಮಿ ಮೊಬೈಲ್‌ ಕೇಸಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳನ್ನು ಹೊಂದಿದ್ದು, ಇವುಗಳನ್ನು ಪಡೆಯಲು ಪೊಲೀಸರು ಮತ್ತೊಂದು ದಾರಿ ಹಿಡಿದಿದ್ದಾರೆ.

ಬೆಂಗಳೂರು ಪೊಲೀಸರು, ಹೊಸ ಆಯಾಮದಲ್ಲಿ ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಇದೀಗ ಮೃತ ರೇಣುಕ ಸ್ವಾಮಿ ಹೆಸರಿನಲ್ಲಿ ಹೊಸ ಸಿಮ್ ಕಾರ್ಡ್ ಖರೀದಿಸಿರುವ ಪೊಲೀಸರು, ಮೊಬೈಲ್ ಮಾಹಿತಿ ರೀ ಆಕ್ಸೆಸ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕ ಸ್ವಾಮಿ ಮೊಬೈಲ್ ಫೋನ್ ಅನ್ನು ಆರೋಪಿಗಳು ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಸುಮ್ಮನಹಳ್ಳಿ ಜಂಕ್ಷನ್ ಸಮೀಪವಿರುವ ರಾಜಕಾಲುವೆಗೆ ಎಸೆದಿದ್ದರು. ಹೀಗಾಗಿ ಅದರಲ್ಲಿದ್ದ ಡಾಟಾ ನಿಷ್ಕ್ರಿಯವಾಗಿತ್ತು. ಆದ್ದರಿಂದ ಕೋರ್ಟ್ ಅನುಮತಿ ಪಡೆದು ಹೊಸ ಸಿಮ್ ಕಾರ್ಡ್ ಖರೀದಿಸಿರುವ ಪೊಲೀಸರು, ರಿ-ಆಕ್ಸೆಸ್ ಮಾಡಿ ಅದರಲ್ಲಿರುವ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ವೇಳೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಮೊಬೈಲ್‌ಗಳನ್ನು ನ್ಯಾಯಾಲಯದ ಅನುಮತಿ ಮೇರೆಗೆ ಅನ್‌ಸೀಲ್ ಮಾಡಿ, ಯಾರಿಗೆಲ್ಲಾ ಕರೆ ಮಾಡಲಾಗಿತ್ತು ಎಂದು ಪರಿಶೀಲಿಸುತ್ತಿದ್ದಾರೆ.

ಭದ್ರತಾ ದೃಷ್ಟಿಯಿಂದಾಗಿ ದರ್ಶನ್‌ಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಜೈಲಿನ ಸೆಕ್ಯೂರಿಟಿ ರೂಂ. ನಂ. 3ರಲ್ಲಿ ದರ್ಶನ್ ಹಾಗೂ ಮತ್ತೊಬ್ಬ ಆರೋಪಿ ವಿನಯ್ ಸಹಖೈದಿಗಳಾಗಿ ಜೈಲುವಾಸ
ಅನುಭವಿಸುತ್ತಿದ್ದಾರೆ. ಶನಿವಾರ ರಾತ್ರಿ ದರ್ಶನ್‌ಗೆ ಜೈಲಿನ ಮೆನುವಿನಂತೆ ಮುದ್ದೆ, ಚಪಾತಿ, ಅನ್ನ ಸಾಂಬಾರ್, ಮಜ್ಜಿಗೆ ನೀಡಲಾಗಿದೆ. ದಿನದ ಮೂರು ಹೊತ್ತು ಮಾಂಸಾಹಾರ ಸೇವನೆ ಮಾಡುತ್ತಿದ್ದ ದರ್ಶನ್‌ಗೆ ಇದೀಗ ಜೈಲೂಟ ಸರಿಯಾಗಿ ಸೇರುತ್ತಿಲ್ಲ. ಹೀಗಾಗಿ ಚಪಾತಿ ಮಾತ್ರ ತಿಂದು ಮಜ್ಜಿಗೆ ಕುಡಿದಿರುವ ದರ್ಶನ್, ಜೈಲು ಸಿಬ್ಬಂದಿ ಕೊಟ್ಟ ಅನ್ನ ಬೇಡ ಎಂದಿದ್ದರು ಎನ್ನಲಾಗಿದೆ.

ಕೊಲೆ ಆರೋಪಿಗಳು ಈಗಾಗಲೇ ಒಳಸಂಚಿನಲ್ಲಿ ಭಾಗಿಯಾಗಿದ್ದಾರೆ. ಎಲ್ಲರನ್ನೂ ಒಂದೇ ಜೈಲಿನಲ್ಲಿ ಇರಿಸಿದರೆ ಸಾಕ್ಷಿ ನಾಶಕ್ಕೆ ಸಂಚು ರೂಪಿಸುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪ್ರತ್ಯೇಕವಾಗಿ ರಾಜ್ಯದ ವಿವಿಧ ಜೈಲುಗಳಲ್ಲಿ ಇರಿಸಲು ನಿರ್ದೇಶಿಸುವಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅದರಂತೆ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಿ ನಾಲ್ಕು ಕೈದಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಸೂಚನೆ ನೀಡಿದೆ.

ಇದನ್ನೂ ಓದಿ: Renuka Swamy Murder: ರೇಣುಕಾ ಸ್ವಾಮಿ ಮನೆಗೆ ಗೃಹ ಸಚಿವ ಪರಮೇಶ್ವರ್‌, ಪ್ರತಿಪಕ್ಷ ನಾಯಕ ವಿಜಯೇಂದ್ರ ಭೇಟಿ

Continue Reading

ತುಮಕೂರು

Gambling Case: ಇಸ್ಪೀಟ್‌ ಅಡ್ಡೆ ಮೇಲೆ ದಾಳಿ; 11 ಜನ ಆರೋಪಿಗಳ ಬಂಧನ

Gambling Case: ಇಸ್ಪೀಟ್‌ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, 11 ಜನ ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ 1,06,180 ರೂ ನಗದು, 13 ಮೊಬೈಲ್ ಹಾಗೂ 7 ಬೈಕ್‌ಗಳನ್ನು ವಶಪಡಿಸಿಕೊಂಡಿರುವ ಘಟನೆ ಶಿರಾ ತಾಲೂಕಿನ ಮಾಗೋಡು ಕೆರೆ ಬಳಿಯ ದೊಡ್ಡನಹಳ್ಳಿ ಗ್ರಾಮದ ಸಮೀಪ ಭಾನುವಾರ ನಡೆದಿದೆ.

VISTARANEWS.COM


on

Police raid on Ispeet gambling 11 accused arrested
Koo

ಶಿರಾ: ಇಸ್ಪೀಟ್‌ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, 11 ಆರೋಪಿಗಳನ್ನು ಬಂಧಿಸಿ, 1,06,180 ರೂ. ನಗದು, 13 ಮೊಬೈಲ್ ಹಾಗೂ 7 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮಾಗೋಡು ಕೆರೆ ಬಳಿಯ ದೊಡ್ಡನಹಳ್ಳಿ ಗ್ರಾಮದ ಸಮೀಪದಲ್ಲಿ ಭಾನುವಾರ (Gambling Case) ಈ ಘಟನೆ ನಡೆದಿದೆ.

ಖಚಿತ ಮಾಹಿತಿಯ ಮೇರೆಗೆ ತುಮಕೂರು ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿ, ಇಸ್ಪೀಟ್‌ ಜೂಜಾಟದಲ್ಲಿ ತೊಡಗಿದ್ದ 11 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 1,06,180 ರೂ. ನಗದು, 13 ಮೊಬೈಲ್‌ಗಳು ಹಾಗೂ ಏಳು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ತುಮಕೂರು ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ಹಾಗೂ ಸಿಬ್ಬಂದಿ ನಡೆಸಿದ ಈ ದಾಳಿಗೆ ಶಿರಾ ತಾಲೂಕಿನ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
LeT Associate killed
ದೇಶ45 seconds ago

LeT Associate killed: ಪ್ರಚೋದನಕಾರಿ ಧರ್ಮ ಪ್ರಚಾರಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

Udhayanidhi Stalin
ಕರ್ನಾಟಕ28 mins ago

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

AFG vs BAN
ಕ್ರೀಡೆ31 mins ago

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

Mamata Banerjee
ದೇಶ57 mins ago

Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

physical abuse mandya
ಕ್ರೈಂ1 hour ago

Physical Abuse: ಅಪ್ರಾಪ್ತ ಮಗಳನ್ನು ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

Paris Olympics 2024
ಕ್ರೀಡೆ2 hours ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕರ್ನಾಟಕದ ಅದಿತಿ ಅಶೋಕ್

Hunger Strike
ದೇಶ2 hours ago

Hunger Strike: ಉಪವಾಸ ಸತ್ಯಾಗ್ರಹ ಮಾಡ್ತಿದ್ದ ದಿಲ್ಲಿ ಸಚಿವೆ ಆಸ್ಪತ್ರೆಗೆ ದಾಖಲು

Suraj Revanna Case
ಪ್ರಮುಖ ಸುದ್ದಿ2 hours ago

Suraj Revanna Case: ತಮ್ಮನಿಗೆ ಮೂರು ಸಲ; ಈಗ ಅಣ್ಣನಿಗೂ ಪುರುಷತ್ವ ಪರೀಕ್ಷೆ! ಇದೇ ಬೇರೆ ಥರ!

Job Alert
ಉದ್ಯೋಗ2 hours ago

Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

Rohit Sharma
ಕ್ರೀಡೆ2 hours ago

Rohit Sharma: ಬಾಬರ್​ ಅಜಂ ದಾಖಲೆ ಸರಿಗಟ್ಟಿದ ರೋಹಿತ್​ ಶರ್ಮ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌