Ayodhya Ram Mandir: ರಾಮ ಮಂದಿರ ಅಪೂರ್ಣ, ಪ್ರಾಣ ಪ್ರತಿಷ್ಠೆ ಶಾಸ್ತ್ರವಿರುದ್ಧ, ನಾಲ್ಕೂ ಶಂಕರಾಚಾರ್ಯರು ಭಾಗವಹಿಸುವುದಿಲ್ಲ: ಪುರಿ ಶಂಕರಾಚಾರ್ಯ - Vistara News

ದೇಶ

Ayodhya Ram Mandir: ರಾಮ ಮಂದಿರ ಅಪೂರ್ಣ, ಪ್ರಾಣ ಪ್ರತಿಷ್ಠೆ ಶಾಸ್ತ್ರವಿರುದ್ಧ, ನಾಲ್ಕೂ ಶಂಕರಾಚಾರ್ಯರು ಭಾಗವಹಿಸುವುದಿಲ್ಲ: ಪುರಿ ಶಂಕರಾಚಾರ್ಯ

ಹಿಂದೂ ಧರ್ಮದ ನಾಲ್ಕು ಶಂಕರಾಚಾರ್ಯರಲ್ಲಿ ಯಾರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಜ್ಯೋತಿರ್ಮಠದ ಪೀಠಾಧೀಶ ಶ್ರೀ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಹೇಳಿದ್ದಾರೆ.

VISTARANEWS.COM


on

jyotirmat sri puri sri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಅಯೋಧ್ಯೆಯ ರಾಮ ಮಂದಿರ (Ayodhya Ram Mandir) ಇನ್ನೂ ಪೂರ್ಣಗೊಂಡಿಲ್ಲ. ಅಪೂರ್ಣವಾಗಿರುವ ಮಂದಿರದಲ್ಲಿ (Ayodhya Ram Temple) ಪ್ರಾಣ ಪ್ರತಿಷ್ಠಾಪನೆ ಮಾಡುವುದು ಶಾಸ್ತ್ರಕ್ಕೆ ವಿರುದ್ಧ ಎಂದು ಉತ್ತರಾಖಂಡದ ಜ್ಯೋತಿರ್ಮಠದ ಪೀಠಾಧೀಶ ಶಂಕರಾಚಾರ್ಯ ಶ್ರೀ ಅವಿಮುಕ್ತೇಶ್ವರಾನಂದ ಸರಸ್ವತಿ (Avimukteshwaranand Saraswati of Jyotir Mutt) ಅವರು ಹೇಳಿದ್ದಾರೆ.

ಹಿಂದೂ ಧರ್ಮದ ನಾಲ್ಕು ಶಂಕರಾಚಾರ್ಯರಲ್ಲಿ (Shankaracharya) ಯಾರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಪುರಿಯ ಗೋವರ್ಧನ ಮಠದ ಮಠಾಧೀಶರು ಇದೇ ರೀತಿ ಹೇಳಿರುವ ಒಂದು ದಿನದಲ್ಲಿ ಜ್ಯೋತಿರ್ಮಠಾಧೀಶರ ಈ ಹೇಳಿಕೆ ಬಂದಿದೆ. ನಿನ್ನೆ, ಜನವರಿ 22ರ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆಗೆ ಹಾಜರಾಗಲು ಪುರಿಯ ಗೋವರ್ಧನ ಮಠದ ಮಠಾಧೀಶರು ನಿರಾಕರಿಸಿದ್ದರು.

ಈ ಸಮಾರಂಭವನ್ನು ಪವಿತ್ರ ಹಿಂದೂ ಧರ್ಮಗ್ರಂಥಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದೆ. ದೇವಾಲಯದ ನಿರ್ಮಾಣವು ಅಪೂರ್ಣವಾಗಿರುವುದರಿಂದ ಇದು ಶಾಸ್ತ್ರಗಳಿಗೆ ವಿರುದ್ಧವಾಗುತ್ತದೆ ಎಂದು ಮಠದ ಅಧಿಕೃತ ಸೋಶಿಯಲ್‌ ಮೀಡಿಯಾ ʼಎಕ್ಸ್‌ʼನ ಖಾತೆಯಲ್ಲಿ ವೀಡಿಯೊ ಮೂಲಕ ಅವರು ಹೇಳಿದ್ದಾರೆ.

ನಾಲ್ಕು ಜ್ಯೋತಿರ್ಮಠಗಳು 8ನೇ ಶತಮಾನದ ಹಿಂದೂ ಆಚಾರ್ಯ ಆದಿಶಂಕರರಿಂದ ಸ್ಥಾಪಿಸಲ್ಪಟ್ಟವುಗಳಾಗಿವೆ. ಹಿಂದೂ ಧರ್ಮದ ಅದ್ವೈತ ವೇದಾಂತ ಸಂಪ್ರದಾಯದ ಪ್ರಮುಖ ಭಾಗವಾಗಿ ಈ ನಾಲ್ಕು ಮಠಗಳಿವೆ. ಈಗಾಗಲೇ ಉತ್ತರಾಖಂಡದ ಜೋಶಿಮಠದ ಜ್ಯೋತಿರ್ಮಠ, ಪುರಿಯ ಗೋವರ್ಧನ ಮಠದ ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೆರಡು ಮಠಗಳೆಂದರೆ ಕರ್ನಾಟಕದ ಶೃಂಗೇರಿಯ ಶ್ರೀ ಶಾರದಾ ಪೀಠ, ಗುಜರಾತಿನ ದ್ವಾರಕಾ ಶಾರದಾ ಪೀಠ. ಈ ಮಠಗಳು ಹಾಗೂ ಪರಂಪರೆಯು ಶ್ರೀ ಆದಿಶಂಕರರ ಚಿಂತನೆಯಿಂದ ಪ್ರಭಾವಿತವಾಗಿವೆ. ಶೈವ ಹಿನ್ನೆಲೆಯಿದ್ದರೂ ಈ ಮಠಗಳು ರಾಮ, ಕೃಷ್ಣ ಮುಂತಾದ ವಿಷ್ಣುವಿನ ಅವತಾರಗಳನ್ನೂ ಆರಾಧಿಸುತ್ತವೆ.

ಜ್ಯೋತಿರ್ಮಠದ 46ನೇ ಶಂಕರಾಚಾರ್ಯರಾದ ಶ್ರೀ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ತಮ್ಮ ವೀಡಿಯೊದಲ್ಲಿ, “ನಾಲ್ಕು ಶಂಕರಾಚಾರ್ಯರ ನಿರ್ಧಾರವನ್ನು ʼಮೋದಿ ವಿರೋಧಿʼ ಎಂದು ಅರ್ಥೈಸಬಾರದು ಎಂದಿದ್ದಾರೆ. ತಾವು ಶಾಸ್ತ್ರ ವಿರೋಧಿ ಆಗಲು ಬಯಸದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

“ನಾವು ಹೋಗದಿರಲು ಕಾರಣವೇನು? ಯಾವುದೇ ದ್ವೇಷದಿಂದಲ್ಲ. ಆದರೆ ಶಾಸ್ತ್ರ-ವಿಧಿಯನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳುವುದು ಶಂಕರಾಚಾರ್ಯರ ಕರ್ತವ್ಯವಾಗಿದೆ. ಇಲ್ಲಿ ಶಾಸ್ತ್ರ-ವಿಧಿಯನ್ನು ಕಡೆಗಣಿಸಲಾಗುತ್ತಿದೆ. ದೇವಾಲಯವು ಇನ್ನೂ ಅಪೂರ್ಣವಾಗಿರುವಾಗ ಪ್ರಾಣ ಪ್ರತಿಷ್ಠಾ (ಅಭಿಷೇಕ) ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಮತ್ತು ನಾವು ಇದನ್ನು ಹೇಳಿದರೆ, ನಮ್ಮನ್ನು ʼಮೋದಿ ವಿರೋಧಿ’ ಎಂದು ಕರೆಯಲಾಗುತ್ತದೆ. ಇಲ್ಲಿ ಮೋದಿ ವಿರೋಧಿ ಎಂದರೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಪುರಿಯ ಗೋವರ್ಧನ ಮಠದ ಮುಖ್ಯಸ್ಥ ನಿಶ್ಚಲಾನಂದ ಸರಸ್ವತಿ (Swami Shree Nishchalanand Saraswati) ಅವರು “ತಮ್ಮ ಸ್ಥಾನದ ಘನತೆಯ ಬಗ್ಗೆ ಜಾಗೃತರಾಗಿರುವ ಕಾರಣ” ಸಮಾರಂಭದಿಂದ ಹೊರಗುಳಿಯುವುದಾಗಿ ಘೋಷಿಸಿದ ದಿನಗಳ ನಂತರ ಪುರಿ ಶ್ರೀಗಳ ಈ ಹೇಳಿಕೆ ಬಂದಿವೆ. “ನಾನು ಅಲ್ಲಿ ಹೋಗಿ ಏನು ಮಾಡಬೇಕು? ಮೋದಿಜಿ ಉದ್ಘಾಟಿಸಿ ಮೂರ್ತಿ ಮುಟ್ಟಿಸುವಾಗ ನಾನು ಅಲ್ಲಿ ನಿಂತು ಚಪ್ಪಾಳೆ ತಟ್ಟಬೇಕೆ? ನನಗೆ ಸ್ಥಾನಮಾನ ಬೇಡ. ನಾನು ಈಗಾಗಲೇ ದೊಡ್ಡ ಸ್ಥಾನ ಹೊಂದಿದ್ದೇನೆ. ನನಗೆ ಸ್ಥಾನಮಾನ ಅಗತ್ಯವಿಲ್ಲ. ಆದರೆ ಶಂಕರಾಚಾರ್ಯರು ಅಲ್ಲಿ ಹೋಗಿ ಏನು ಮಾಡಬೇಕು?” ಎಂದು ನಾಗಾಲ್ಯಾಂಡ್ ಕಾಂಗ್ರೆಸ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಗೋವರ್ಧನ ಮಠದ ಶ್ರೀಗಳು ಪ್ರಶ್ನಿಸಿದ್ದಾರೆ.

“ಮೋದಿ ಅವರು ಧಾರ್ಮಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ” ಎಂದು ಆರೋಪಿಸಿದ ಗೋವರ್ಧನ ಮಠದ ಶ್ರೀಗಳು, “ಆದರೆ ಅಯೋಧ್ಯೆಯ ಬಗ್ಗೆ ತಮಗೆ ಯಾವುದೇ ದ್ವೇಷವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. “ಇದು ಅಹಂಕಾರವಲ್ಲ. ಆದರೆ ನನ್ನ ಸ್ಥಾನದ ಘನತೆಯ ಬಗ್ಗೆ ನನಗೆ ಅರಿವಿದೆ. ಅದಕ್ಕಾಗಿಯೇ ನಾನು ಹೋಗುತ್ತಿಲ್ಲ. ನಾನು ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಹೋಗಬಹುದು ಎಂದು ನನಗೆ ಆಮಂತ್ರಣ ಬಂದಿದೆ. ನಾನು ಒಬ್ಬನೇ ವ್ಯಕ್ತಿಯನ್ನು ಏಕೆ ಕರೆದುಕೊಂಡು ಹೋಗಬೇಕು?” ಎಂದು ಅವರು ಕೇಳಿದ್ದಾರೆ.

ಅಯೋಧ್ಯೆ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಗಾಗಿ ಸ್ಥಾಪಿಸಲಾದ ಟ್ರಸ್ಟ್‌ನ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಮ್ಮ ಒಂದು ಹೇಳಿಕೆಯಲ್ಲಿ “ರಾಮ ಮಂದಿರವು ವೈಷ್ಣವ ಪಂಥವಾದ ರಮಾನಂದ ಸಂಪ್ರದಾಯಕ್ಕೆ ಸೇರಿದ್ದು. ಸನ್ಯಾಸಿಗಳಿಗೆ, ಶೈವ ಅಥವಾ ಶಕ್ತಿ ಪಂಥಗಳಿಗೆ ಸೇರಿದ್ದಲ್ಲ” ಎಂದು ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಅವಿಮುಕ್ತಾನಂದರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮ್ಮ ನಿರ್ಧಾರ ಈಗ ಬಹಿರಂಗಪಡಿಸುತ್ತೇವೆ. ಚಂಪತ್ ರೈ ಅವರು ಇಲ್ಲಿ ಶಂಕರಾಚಾರ್ಯರು ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಯಾಕೆಂದರೆ ಇದು ರಮಾನಂದ ಸಂಪ್ರದಾಯಕ್ಕೆ ಸೇರಿದೆ ಎಂದಿದ್ದಾರೆ. ಈ ದೇವಾಲಯ ರಮಾನಂದ ಪಂಗಡಕ್ಕೆ ಸೇರಿದ್ದರೆ, ಚಂಪತ್ ರೈ ಅಲ್ಲಿ ಏಕಿದ್ದಾರೆ? ನೃಪೇಂದ್ರ ಮಿಶ್ರಾ (ದೇವಾಲಯ ನಿರ್ಮಾಣ ಸಮಿತಿಯ ಅಧ್ಯಕ್ಷ) ಏಕೆ ಇದ್ದಾರೆ? ರಾಜಾ ಸಾಹಬ್ (ಬಿಮ್ಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ, ಹಿಂದಿನ ಅಯೋಧ್ಯೆಯ ರಾಜಮನೆತನ ಮತ್ತು ದೇವಾಲಯದ ಟ್ರಸ್ಟಿ) ಏಕೆ ಅಲ್ಲಿದ್ದಾರೆ? ಇವರು ರಾಜೀನಾಮೆ ನೀಡಬೇಕು ಮತ್ತು ಪ್ರಾಣ ಪ್ರತಿಷ್ಠೆಯ ಮೊದಲು ರಮಾನಂದ ಸಂಪ್ರದಾಯಕ್ಕೆ ದೇವಸ್ಥಾನವನ್ನು ಹಸ್ತಾಂತರಿಸಬೇಕು” ಎಂದು ಅವರು ಹೇಳಿದ್ದಾರೆ.

ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಪ್ರಕಾರ, ಧಾರ್ಮಿಕ ವ್ಯಕ್ತಿಗಳನ್ನು ಉದ್ದೇಶಪೂರ್ವಕವಾಗಿ ಬದಿಗಿಟ್ಟು, ಈ ಕಾರ್ಯಕ್ರಮವನ್ನು ರಾಜಕೀಯಗೊಳಿಸಲಾಗಿದೆ. “ಅವರು ದೇಣಿಗೆ ತೆಗೆದುಕೊಳ್ಳುವಾಗ ದೇವಾಲಯವು ರಮಾನಂದ ಸಂಪ್ರದಾಯಕ್ಕೆ ಸೇರಿದ್ದು ಎಂದು ಏಕೆ ಘೋಷಿಸಲಿಲ್ಲ? ಆ ಸಮಯದಲ್ಲಿ ನೀವು ದೇಶಾದ್ಯಂತ ಇರುವ ಸನಾತನ ಧರ್ಮಿಗಳಿಂದ ದೇಣಿಗೆ ತೆಗೆದುಕೊಂಡಿದ್ದೀರಿ. ನೀವು ನಮ್ಮಿಂದಲೂ ದೇಣಿಗೆ ತೆಗೆದುಕೊಂಡಿದ್ದೀರಿ. ದೇವಾಲಯವು ಶಂಕರಾಚಾರ್ಯರಿಗೆ ಸೇರದಿರುವಾಗ, ನೀವು ನಮ್ಮಿಂದ ದೇಣಿಗೆಯನ್ನು ಏಕೆ ಸ್ವೀಕರಿಸಿದ್ದೀರಿ?” ಎಂದು ಅವರು ಪ್ರಶ್ನಿಸಿದ್ದಾರೆ.

“ಹಿಂದೆ ನಿರ್ಮೋಹಿ ಅಖಾಡದವರು ಅಲ್ಲಿ ಪೂಜೆ ಮಾಡುತ್ತಿದ್ದರು. ಆ ಜವಾಬ್ದಾರಿಯನ್ನು ಅವರಿಗೇ ನೀಡಬೇಕು. ನೀವು ಹೆಚ್ಚಿನ ಅರ್ಚಕರನ್ನು ಏಕೆ ನೇಮಿಸಿಕೊಳ್ಳುತ್ತಿದ್ದೀರಿ? ನೀವು ಪೂಜೆಯನ್ನು ನಿರ್ಮೋಹಿ ಅಖಾಡಕ್ಕೆ ಮತ್ತು ದೇವಾಲಯದ ವ್ಯವಸ್ಥೆಯನ್ನು ರಮಾನಂದ ಸಂಪ್ರದಾಯಕ್ಕೆ ಒಪ್ಪಿಸಿ. ಅದನ್ನು ನಾವು ಒಪ್ಪುತ್ತೇವೆ. ನಾಲ್ಕೂ ಶಂಕರಾಚಾರ್ಯರಿಗೆ ಇದರಿಂದ) ಸಂತೋಷವಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: Ram Janmabhoomi: ಅಯೋಧ್ಯೆ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಖರ್ಗೆ ಹೋಗದಿರುವುದೇ ಸರಿ: ಸಿಎಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ತಂತ್ರಜ್ಞಾನ ಜತೆಗೆ ಮಾನವ ಕೇಂದ್ರಿತ ಏಳಿಗೆಗೆ ಭಾರತ ಆದ್ಯತೆ; ಇಟಲಿ ಜಿ7 ಸಭೆಯಲ್ಲಿ ಮೋದಿ

Narendra Modi: ಜಿ-7 ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಸೈಬರ್‌ ಭದ್ರತೆ, ಗ್ಲೋಬಲ್‌ ಸೌತ್‌, ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಶೃಂಗಸಭೆ, ವಿಕಸಿತ ಭಾರತದ ಗುರಿ, ಇಂಧನದ ಸದ್ಬಳಕೆ, ಪರಿಸರ ಜಾಗೃತಿ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಹಾಗೆಯೇ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ, ಫಲಿತಾಂಶವನ್ನೂ ಮೋದಿ ಸ್ಮರಿಸಿದರು. ಅವರ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ.

VISTARANEWS.COM


on

Narendra Modi
Koo

ರೋಮ್: ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ವಿದೇಶಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಿ-7 ಶೃಂಗಸಭೆಯಲ್ಲಿ (G7 Summit Italy) ಪಾಲ್ಗೊಂಡರು. ಇದೇ ವೇಳೆ ಮಾತನಾಡಿದ ಅವರು, “ತಂತ್ರಜ್ಞಾನದ ಅಳವಡಿಕೆ ಜತೆಗೆ ಮಾನವ ಕೇಂದ್ರಿತವಾಗಿಯೇ ಏಳಿಗೆ ಹೊಂದಲು ಭಾರತ ಆದ್ಯತೆ ನೀಡುತ್ತಿದೆ. ಜಾಗತಿಕವಾಗಿ ತಂತ್ರಜ್ಞಾನದ ಜತೆಗೇ ಮಾನವ ಕೇಂದ್ರಿತ ಅಭಿವೃದ್ಧಿಯು ಪ್ರಮುಖ ವಿಷಯವಾಗಬೇಕಿದೆ” ಎಂದು ಪ್ರತಿಪಾದಿಸಿದರು.

“ತಂತ್ರಜ್ಞಾನವನ್ನು ಸೃಜನಶೀಲತೆಯ ಸೃಷ್ಟಿಗಾಗಿ, ಅಭಿವೃದ್ಧಿಗಾಗಿ, ಏಳಿಗೆಗಾಗಿ ಬಳಸಬೇಕೇ ಹೊರತು, ವಿನಾಶಕ್ಕಾಗಿ ಅದನ್ನು ಬಳಸಬಾರದು. ಜಗತ್ತಿನಾದ್ಯಂತ ಬೇರೂರಿರುವ ಸಾಮಾಜಿಕ ಅಸಮಾನತೆಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ಇಂದು ತಂತ್ರಜ್ಞಾನವನ್ನು ಬಳಸಬೇಕಾಗಿದೆ. ಭಾರತವು, ಇಂತಹ ಪ್ರಯತ್ನ ಮಾಡುತ್ತಿದೆ. ಕೃತಕ ಬುದ್ಧಿಮತ್ತೆ ಸೇರಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಏಳಿಗೆಯತ್ತ ಮುಂದೆ ಸಾಗುತ್ತಿದೆ. ಎಲ್ಲರಿಗೂ ಕೃತಕ ಬುದ್ಧಿಮತ್ತೆ (AI For All) ಎಂಬ ತತ್ವದೊಂದಿಗೆ, ಕೃತಕ ಬುದ್ಧಿಮತ್ತೆ ಬಳಕೆಗೆ ರಾಷ್ಟ್ರೀಯ ಸ್ಟ್ರ್ಯಾಟಜಿಯೊಂದಿಗೆ ಮುನ್ನಡೆಯುತ್ತಿದೆ” ಎಂದು ತಿಳಿಸಿದರು.

ಚುನಾವಣೆ ಗೆಲುವಿನ ಪ್ರಸ್ತಾಪ

ಕಳೆದ ಲೋಕಸಭೆ ಚುನಾವಣೆ ಕುರಿತು ಕೂಡ ನರೇಂದ್ರ ಮೋದಿ ಮಾತನಾಡಿದರು. “ಇತ್ತೀಚೆಗೆ ಭಾರತದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲೂ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಯಿತು. ತಂತ್ರಜ್ಞಾನದ ಸಹಾಯದಿಂದ ಪಾರದರ್ಶಕವಾಗಿ ಚುನಾವಣೆ ನಡೆಸಲಾಯಿತು. ಜಗತ್ತಿನ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ನಡೆದ ಚುನಾವಣೆ ಫಲಿತಾಂಶವನ್ನು ಕೆಲವೇ ಗಂಟೆಗಳಲ್ಲಿ ಪ್ರಕಟಿಸಲಾಯಿತು. ನಮ್ಮ ದೇಶದ ಜನ ನನಗೆ ಮೂರನೇ ಬಾರಿಗೆ ಸೇವೆ ಮಾಡಲು ಅವಕಾಶ ಕೊಟ್ಟಿರುವುದಕ್ಕೆ ನಾನು ಧನ್ಯನಾಗಿದ್ದೇನೆ” ಎಂದು ಹೇಳಿದರು.

“ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ಕಳೆದ ಆರು ದಶಕಗಳಲ್ಲಿಯೇ ಮೊದಲ ಬಾರಿಗೆ ನಮ್ಮ ದೇಶದ ಜನ ಸತತ ಮೂರನೇ ಬಾರಿಗೆ ಆಯ್ಕೆ ಮಾಡಿದ್ದಾರೆ. ಭಾರತದ ಮತದಾರರು ನೀಡಿದ ಜಯವು ಪ್ರಜಾಪ್ರಭುತ್ವದ ಜಯವಾಗಿದೆ” ಎಂದು ಹೇಳಿದರು. ಸೈಬರ್‌ ಭದ್ರತೆ, ಗ್ಲೋಬಲ್‌ ಸೌತ್‌, ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಶೃಂಗಸಭೆ, ವಿಕಸಿತ ಭಾರತದ ಗುರಿ, ಇಂಧನದ ಸದ್ಬಳಕೆ, ಪರಿಸರ ಜಾಗೃತಿ ಸೇರಿ ಹಲವು ವಿಷಯಗಳನ್ನು ಮೋದಿ ಪ್ರಸ್ತಾಪಿಸಿದರು.

ಇದನ್ನೂ ಓದಿ: Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Continue Reading

ದೇಶ

India’s Aamras : ಮಾವಿನಹಣ್ಣಿನ ಖಾದ್ಯಗಳ ಟಾಪ್‌ ಟೆನ್‌ ಪಟ್ಟಿಯಲ್ಲಿ ಭಾರತದ ಆಮ್‌ರಸ್‌ ವಿಶ್ವದಲ್ಲೇ ನಂಬರ್‌ ಒನ್!

ಇದು ಮಾವಿನಹಣ್ಣಿನ ಕಾಲ ಎಂಬ ಪ್ರೀತಿಯು ಅದಕ್ಕಾಗಿ ಕಾಯುವಂತೆ ಮಾಡುತ್ತದೆ. ಸೆಖೆಗಾಲದಲ್ಲಿ ಮಾವಿನಹಣ್ಣಿಗಾಗಿ ಕಾಯುವುದು, ಮಾವಿನಹಣ್ಣಿನಲ್ಲಿ ಬಗೆಬಗೆಯ ಭಕ್ಷ್ಯಗಳನ್ನು ತಯಾರಿಸುವುದು, ಇನ್ನೂ ಕೆಲವು ತಿಂಗಳುಗಳಿಗಾಗಿ ಮಾವಿನ ಹಣ್ಣಿನಿಂದ ಕೆಲವೊಂದು ಖಾದ್ಯಗಳನ್ನು ತಯಾರಿಸಿ ಇಡುವುದು ಎಲ್ಲವೂ ಪ್ರತಿ ಮನೆಯಲ್ಲೂ ಸಂಭ್ರಮವೇ. ಇಂತಹ ಪಾಕಪ್ರವೀಣರಾದ ನಮ್ಮ ಹಿರಿಮೆಗೆ ಇನ್ನೊಂದು ಗರಿ (India’s aamras)  ದೊರೆತಿದೆ.

VISTARANEWS.COM


on

Aamras
Koo

ಭಾರತೀಯರಿಗೆ ಮಾವಿನಹಣ್ಣಿನ ಕಾಲ ಎಂದರೆ ಪರ್ವಕಾಲ. ಎಷ್ಟೇ ಸೆಖೆ ಇರಲಿ, ಬೇಸಿಗೆಯ ಬಿಸಿಯಿಂದ ಮೈಯೆಲ್ಲ ಸುಡುತ್ತಿರಲಿ, ಇದು ಮಾವಿನಹಣ್ಣಿನ ಕಾಲ ಎಂಬ ಪ್ರೀತಿಯು ಅದಕ್ಕಾಗಿ ಕಾಯುವಂತೆ ಮಾಡುತ್ತದೆ. ಸೆಖೆಗಾಲದಲ್ಲಿ ಮಾವಿನಹಣ್ಣಿಗಾಗಿ ಕಾಯುವುದು, ಮಾವಿನಹಣ್ಣಿನಲ್ಲಿ ಬಗೆಬಗೆಯ ಭಕ್ಷ್ಯಗಳನ್ನು ತಯಾರಿಸುವುದು, ಇನ್ನೂ ಕೆಲವು ತಿಂಗಳುಗಳಿಗಾಗಿ ಮಾವಿನ ಹಣ್ಣಿನಿಂದ ಕೆಲವೊಂದು ಖಾದ್ಯಗಳನ್ನು ತಯಾರಿಸಿ ಇಡುವುದು ಎಲ್ಲವೂ ಪ್ರತಿ ಮನೆಯಲ್ಲೂ ಸಂಭ್ರಮವೇ. ಭಾರತದಲ್ಲಿ ಹಣ್ಣುಗಳ ರಾಜನಾಗಿ ಮೆರೆಯುವ ಈ ಮಾವಿನಹಣ್ಣು ತನ್ನ ವಿಶೇಷವಾದ ರುಚಿಯಿಂದ ತನ್ನತ್ತ ಪ್ರತಿಯೊಬ್ಬರನ್ನೂ ಸೆಳೆಯುತ್ತದೆ. ಅದರಲ್ಲೂ ನಾವು ಭಾರತೀಯರು ಮಾವಿನಹಣ್ಣಿನ ಬಗೆಬಗೆಯ ಭಕ್ಷ್ಯಗಳನ್ನು ಮಾಡಿ ತಿನ್ನುವುದರಲ್ಲಿ ಸಿದ್ಧಹಸ್ತರು. ಇಂತಹ ಪಾಕಪ್ರವೀಣರಾದ ನಮ್ಮ ಹಿರಿಮೆಗೆ ಇನ್ನೊಂದು ಗರಿ (India’s aamras) ದೊರೆತಿದೆ.

Aamras Or aam ras

ಇದಕ್ಕಿದೆ ಗತಕಾಲದ ಇತಿಹಾಸ

ಮಾವಿನ ಹಣ್ಣಿನ ಆಮ್‌ರಸ್‌ ಎಂಬುದಕ್ಕೆ ಗತಕಾಲದ ಇತಿಹಾಸವಿದೆ. ತಂಪಾದ ಆಮ್‌ರಸ್‌ ಹೆಸರು ಹೇಳಿದರೆ ಸಾಕು ಬಾಯಲ್ಲಿ ನೀರು ಜಿನುಗೀತು. ಇಂತಹ ಆಮ್‌ರಸ್‌ಗೀಗ ಪ್ರಪಂಚದಲ್ಲೇ ನಂಬರ್‌ ವನ್‌ ಸ್ಥಾನ ದೊರೆತಿದೆ.
ಹೌದು. 2024ರ ಜೂನ್‌ ತಿಂಗಳ ಟೇಸ್ಟ್‌ ಅಟ್ಲಾಸ್‌ ಸ್ಪರ್ಧೆಯಲ್ಲಿ ವಿಶ್ವದ ಟಾಪ್‌ 10 ಮಾವಿನ ಹಣ್ಣಿನ ಭಕ್ಷ್ಯಗಳ ಪೈಕಿ ಭಾರತದ ಆಮ್‌ರಸ್‌ಗೆ ಮೊದಲೇ ಸ್ಥಾನ ದೊರೆತಿದೆ.
ಮಹಾರಾಷ್ಟ್ರ ಹಾಗೂ ಗುಜರಾತ್‌ ರಾಜ್ಯಗಳಲ್ಲಿ ಅತ್ಯಂತ ಪ್ರಸಿದ್ಧವಾದ ಆಮ್‌ರಸ್‌ ಎಂಬ ಮಾವಿನಹಣ್ಣಿನ ತಿನಿಸು ಬಹಳ ಸರಳವಾದ ಆರದೆ, ಅಮೋಘ ರುಚಿಯ ಮಾವಿನಹಣ್ಣಿನ ಭಕ್ಷ್ಯ. ಮಾವಿನಹಣ್ಣಿನ ಕಾಲದಲ್ಲಿ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಇದನ್ನು ಮಾಡುವ ಜೊತೆಗೆ ಬೆಳಗಿನ ಪೂರಿಯ ಜೊತೆಗೂ ಸೈಡ್‌ ಡಿಶ್‌ ಆಗಿ ತಿನ್ನುತ್ತಾರೆ. ಮಾವಿನ ಹಣ್ಣಿನ ಪಲ್ಪ್‌ ತೆಗೆದು ಅದಕ್ಕೆ ಕೇಸರಿ, ಒಣಶುಠಿ ಪುಡಿ, ಏಲಕ್ಕಿ ಹಾಗೂ ಸಕ್ಕರೆ ಸೇರಿಸಿ ಮಾಡುವ ಸರಳವಾದ ಆಮ್‌ರಸ್‌ ಬಹಳ ರುಚಿಕರ. ಆಲ್ಫೋನ್ಸೋ, ಕೇಸರ್‌ ಮತ್ತಿತರ ಮಾವಿನಹಣ್ಣಿನಲ್ಲಿ ಈ ಆಮ್‌ರಸ್‌ ಮಾಡಿದರೆ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಎಂದರೆ ತಪ್ಪಾಗದು. ಅಷ್ಟು ರುಚಿಕರ. ಇಂತಹ ಆಮ್‌ರಸ್‌ ವಿಶ್ವದಲ್ಲೇ ಮೊದಲ ಸ್ಥಾನ ಗಳಿಸಿದ್ದರಲ್ಲಿ ಅಚ್ಚರಿಯೇನಿಲ್ಲ.

Mango Chutney

ಮಾವಿನಕಾಯಿಯ ಚಟ್ನಿಗೂ ಸ್ಥಾನ

ಮಾವಿನಕಾಯಿಯ ಚಟ್ನಿಯೂ ಟೇಸ್ಟ್‌ ಅಟ್ಲಾಸ್‌ನ ಈ ಸ್ಪರ್ಧೆಯಲ್ಲಿ ಐದನೇ ಸ್ಥಾನ ಪಡೆದಿದೆ. ವಿಶ್ವದ ಅತ್ಯಂತ ರುಚಿಕರ ಡಿಪ್‌ಗಳ ಪೈಕಿ ಮಾವಿನಹಣ್ಣಿನ ಚಟ್ನಿ ಐದನೇ ಸ್ಥಾನ ಪಡೆದಿದ್ದು ವಿಶೇಷ. ಮಾವಿನಹಣ್ಣು, ಬೆಳ್ಳುಳ್ಳಿ, ಕೆಂಪು ಮೆಣಸಿನಕಾಯಿ, ಜೀರಿಗೆ, ಕೊತ್ತಂಬರಿ, ಅರಿಶಿನ, ಲವಂಗ, ಚಕ್ಕೆ, ಏಲಕ್ಕಿ, ಸಕ್ಕರೆ ಹಾಗೂ ವಿನೆಗರ್‌ ಸೇರಿಸಿ ಈ ಚಟ್ನಿಯನ್ನು ಮಾಡಲಾಗುತ್ತದೆಯಂತೆ. ಈ ವಿಶೇಷ ಬಗೆಯ ಚಟ್ನಿಗೆ ವಿಶೇಷ ಸ್ಥಾನ ಲಭಿಸಿದೆ.
ಇನ್ನುಳಿದಂತೆ, ಟಾಪ್‌ ಟೆನ್‌ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಥಾಯ್ಲೆಂಡಿನ ಮ್ಯಾಂಗೋ ಸ್ಟಿಕಿ ರೈಸ್‌, ಮೂರನೇ ಸ್ಥಾನದಲ್ಲಿ ಸೋರ್ಬೆಟಿಸ್‌, ನಾಲ್ಕನೇ ಸ್ಥಾನದಲ್ಲಿ ಇಂಡೋನೇಷ್ಯಾದ ರುಜಕ್‌, ಐದನೇ ಸ್ಥಾನದಲ್ಲಿ ಮಾವಿನಹಣ್ಣಿನ ಚಟ್ನಿ ಇವೆ. ನಂತರದ ಸ್ಥಾನಗಳಲ್ಲಿ ಹಾಂಗ್‌ಕಾಂಗ್‌ನ ಮ್ಯಾಂಗೋ ಪೊಮೇಲೋ ಸಾಗೋ, ಚೈನಾದ ಮಂಗುವೋ ಬುಡಿಂಗ್‌, ಇಂಡೋನೇಷ್ಯಾದ ರುಜಕ್‌ ಸಿಂಗುರ್, ಚೈನಾದ ಬಾವೋಬಿಂಗ್‌, ಥಾಯ್ಲೆಂಡಿನ ಮಾಮುಂಗ್‌ ನಾಮ್‌ ಪ್ಲಾವಾನ್‌ ಟಾಪ್‌ ಟೆನ್‌ ಪಟ್ಟಿಯಲ್ಲಿ ಸ್ಥಾನ ಗಳಿಸಿವೆ. ಮಾವಿನಹಣ್ಣಿನ ವಿಶೇಷಚವಾದ ಚಟ್ನಿಯೂ ಕೂಡಾ ಈ ಪಟ್ಟುಯಲ್ಲಿ ಐದನೇ ಸ್ಥಾನ ಗಳಿಸಿರುವುದು ವಿಶೇಷ.

Continue Reading

ದೇಶ

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ ಘೋಷಿಸಿದೆ.

VISTARANEWS.COM


on

Toyota Technical Education Programme started at Bareilly Government Polytechnic by TKM
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ (Toyota Kirloskar Motor) ಘೋಷಿಸಿದೆ.

ಸ್ಥಳೀಯ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಸಮುದಾಯಗಳನ್ನು ಸಬಲೀಕರಣಗೊಳಿಸಲು, ಟಿಕೆಎಂ ತನ್ನ ಪ್ರಮುಖ ಕಾರ್ಯಕ್ರಮಗಳಾದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಮತ್ತು ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಯೊಂದಿಗೆ ಮುಂಚೂಣಿಯಲ್ಲಿದೆ. ಒಂದು ದಶಕಕ್ಕೂ ಹೆಚ್ಚು ಕಾಲದಿಂದ, ಈ ಕಾರ್ಯಕ್ರಮಗಳು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ತರಬೇತಿಯನ್ನು ಒದಗಿಸುವತ್ತ ಗಮನ ಹರಿಸಿವೆ. ‘ಸ್ಕಿಲ್ ಇಂಡಿಯಾ’ ಅಭಿಯಾನಕ್ಕೆ ಗಮನಾರ್ಹ ಕೊಡುಗೆ ನೀಡಿವೆ.

ಇದನ್ನೂ ಓದಿ: Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು 2023 ರ ಜುಲೈ 29 ಮತ್ತು 30 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದ 3 ನೇ ವಾರ್ಷಿಕೋತ್ಸವದ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸಂವಹನ ನಡೆಸುವ ಗೌರವವನ್ನು ಪಡೆದ ಟಿಟಿಟಿಐ ಹಳೆಯ ವಿದ್ಯಾರ್ಥಿ ಮತ್ತು 2022 ರ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಮೆಕಾಟ್ರಾನಿಕ್ಸ್ ಕಂಚಿನ ಪದಕ ವಿಜೇತ ಅಖಿಲೇಶ್ ನರಸಿಂಹ ಮೂರ್ತಿ ಒಂದು ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ.

ಟಿ-ಟಿಇಪಿ ಒಂದು ಸಮಗ್ರ ವರ್ಷ ವಿಡೀ ನಡೆಯುವ ಕಾರ್ಯಕ್ರಮವಾಗಿದೆ. ಇದು ಆನ್-ದಿ-ಜಾಬ್ ಟ್ರೈನಿಂಗ್ (ಒಜೆಟಿ) ಅನ್ನು ಒಳಗೊಂಡಿದೆ ಮತ್ತು ಅಂತಿಮ ವರ್ಷದ ಐಟಿಐ / ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಅನುಗುಣವಾಗಿದೆ. ಈ ಕಾರ್ಯಕ್ರಮದ ಪ್ರಮುಖ ಲಕ್ಷಣಗಳಲ್ಲಿ ಟೊಯೊಟಾದಿಂದ ಟಿ-ಟಿಇಪಿಯ ಪ್ರಮುಖ ತರಬೇತುದಾರರಿಗೆ ವಿಶೇಷ ತರಬೇತಿ, ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಟೊಯೊಟಾ ಡೀಲರ್ ಶಿಪ್‌ಗಳಲ್ಲಿ ಪ್ರಾಯೋಗಿಕ ಕೌಶಲ್ಯ ಅಭಿವೃದ್ಧಿ ಮತ್ತು ಭಾರತೀಯ ವಾಹನ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ತಂತ್ರಜ್ಞಾನಗಳ ತಾಂತ್ರಿಕ ಜ್ಞಾನವನ್ನು ನೀಡಲು ವಿನ್ಯಾಸಗೊಳಿಸಲಾದ ಪಠ್ಯಕ್ರಮ ಸೇರಿವೆ. ಕಳೆದ ವರ್ಷ ಆರ್ಥಿಕವಾಗಿ ಸವಾಲಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಅಧ್ಯಯನವನ್ನು ಮುಂದುವರಿಸಲು ಸಹಾಯ ಮಾಡಲು ಟಿಕೆಎಂ ಸ್ಟಾರ್ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ, 13 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಟಿ-ಟಿಇಪಿ ಮೂಲಕ ತರಬೇತಿ ಪಡೆದಿದ್ದಾರೆ. 70% ಕ್ಕೂ ಹೆಚ್ಚು ಜನರು ದೇಶಾದ್ಯಂತ ವಿವಿಧ ಆಟೋಮೊಬೈಲ್ ಕಂಪನಿಗಳು ಮತ್ತು ಅವುಗಳ ಡೀಲರ್‌ಶಿಪ್‌ಗಳಲ್ಲಿ ಉದ್ಯೋಗವನ್ನು ಪಡೆದಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉತ್ತರ ಪ್ರದೇಶ ಸರ್ಕಾರದ ವಿಧಾನ ಪರಿಷತ್ ಸದಸ್ಯ ಡಿ.ಸಿ. ವರ್ಮಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಅಭಿವೃದ್ಧಿ ಹೊಂದಲು ಅಗತ್ಯವಾದ ಕೌಶಲ್ಯಗಳೊಂದಿಗೆ ನಮ್ಮ ಯುವಕರನ್ನು ಸಬಲೀಕರಣಗೊಳಿಸುವ ಟಿಕೆಎಂನ ಬದ್ಧತೆಯನ್ನು ನಾವು ಶ್ಲಾಘಿಸುತ್ತೇವೆ. ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ನಂತಹ ಉಪಕ್ರಮಗಳು ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ನಮ್ಮ ಧ್ಯೇಯದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗಿವೆ. ವಿಶೇಷವಾಗಿ ಗ್ರಾಮೀಣ ಮತ್ತು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಟಿ-ಟಿಇಪಿ ಮತ್ತು ಸ್ಟಾರ್ ವಿದ್ಯಾರ್ಥಿವೇತನ ಬೆಂಬಲವು ವಿದ್ಯಾರ್ಥಿಗಳಿಗೆ ಟೊಯೊಟಾದ ಮೌಲ್ಯಗಳು, ಉತ್ತಮ ಅಭ್ಯಾಸಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ.

ಆ ಮೂಲಕ ಅವರ ಒಟ್ಟಾರೆ ಕೌಶಲ್ಯ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ. ಹೆಚ್ಚುವರಿಯಾಗಿ ಟೊಯೊಟಾದಂತಹ ಉದ್ಯಮ ಪಾಲುದಾರರ ಸಹಯೋಗದ ಪ್ರಯತ್ನಗಳು ಉತ್ತರ ಪ್ರದೇಶದ ವಿದ್ಯಾರ್ಥಿಗಳಲ್ಲಿ ವಿಶ್ವದರ್ಜೆಯ ಕಾರ್ಯಪಡೆಯ ಲಭ್ಯತೆಯನ್ನು ಹೆಚ್ಚಿಸುತ್ತದೆ, ಅವರ ವೃತ್ತಿಜೀವನದ ಆಕಾಂಕ್ಷೆಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ವಾಹನ ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಈ ವೇಳೆ ಕಾರ್ಪೊರೇಟ್ ವ್ಯವಹಾರ ಮತ್ತು ಆಡಳಿತದ ಕಂಟ್ರಿ ಹೆಡ್ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ವಿಕ್ರಮ್ ಗುಲಾಟಿ ಮಾತನಾಡಿ, ಟಿಕೆಎಂನಲ್ಲಿ ಯುವ ಪ್ರತಿಭೆಗಳಿಗೆ ಸುಧಾರಿತ ತಾಂತ್ರಿಕ ಕೌಶಲ್ಯ ಮತ್ತು ಜ್ಞಾನವನ್ನು ಪಡೆಯಲು ಅವಕಾಶಗಳನ್ನು ಸೃಷ್ಟಿಸುವಲ್ಲಿ ತಾಂತ್ರಿಕ ತರಬೇತಿಯ ಪರಿವರ್ತಕ ಶಕ್ತಿಯನ್ನು ನಾವು ಗುರುತಿಸುತ್ತೇವೆ. ನಮ್ಮ ಟಿ-ಟಿಇಪಿ ಸೌಕರ್ಯ ಮತ್ತು ಸ್ಟಾರ್ ಕಾರ್ಯಕ್ರಮವು ಆಟೋಮೋಟಿವ್ ಉದ್ಯಮಕ್ಕೆ ನುರಿತ ಕಾರ್ಯಪಡೆಯನ್ನು ಬೆಳೆಸುವ ನಮ್ಮ ಬದ್ಧತೆಗೆ ಉದಾಹರಣೆಯಾಗಿದೆ. ಅದೇ ಸಮಯದಲ್ಲಿ ವಿಶಾಲವಾದ ‘ಸ್ಕಿಲ್ ಇಂಡಿಯಾ’ ಮಿಷನ್ ಅನ್ನು ಬೆಂಬಲಿಸುತ್ತದೆ, ಅಂತಿಮವಾಗಿ ನಮ್ಮ ಸಮುದಾಯಗಳಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗುತ್ತದೆ.

ಟಿ-ಟಿಇಪಿ ಉಪಕ್ರಮದ ಭಾಗವಾಗಿರುವ ಸ್ಟಾರ್ ಕಾರ್ಯಕ್ರಮವು ಅರ್ಹ ವಿದ್ಯಾರ್ಥಿಗಳನ್ನು, ವಿಶೇಷವಾಗಿ ಆರ್ಥಿಕವಾಗಿ ಸವಾಲಿನ ಹಿನ್ನೆಲೆಯಿಂದ ಬಂದವರನ್ನು ವಿದ್ಯಾರ್ಥಿವೇತನವನ್ನು ಒದಗಿಸುವ ಮೂಲಕ ಮತ್ತು ಆಟೋಮೋಟಿವ್ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನಕ್ಕಾಗಿ ಅಗತ್ಯ ಕೌಶಲ್ಯಗಳು ಮತ್ತು ಜ್ಞಾನದೊಂದಿಗೆ ಸಜ್ಜುಗೊಳಿಸುವ ಮೂಲಕ ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಪ್ರತಿಭೆಗಳನ್ನು ಪೋಷಿಸಲು, ವಿದ್ಯಾರ್ಥಿಗಳು ತಮ್ಮ ಪೂರ್ಣ ಸಾಮರ್ಥ್ಯವನ್ನು ತಲುಪಲು ಮತ್ತು ವಾಹನ ಉದ್ಯಮ ಮತ್ತು ನಮ್ಮ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಲು ನಾವು ಸಮರ್ಪಿತರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

ಕಾರ್ಯಕ್ರಮದಲಲ್ಲಿ ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನರೇಂದ್ರ ಕುಮಾರ್, ವಾಣಿಜ್ಯ ಟೊಯೊಟಾದ ನಿರ್ದೇಶಕ ಶಿವಂ ಗುಪ್ತಾ ಮಾತನಾಡಿದರು.

Continue Reading

ದೇಶ

ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು ಕೊಂದ ಟ್ರಕ್‌ ಡ್ರೈವರ್;‌ ಭೀಕರ ವಿಡಿಯೊ ಇಲ್ಲಿದೆ

ಬಾಲಕಿಯು ತಾಯಿ ಜತೆ ರೈಸ್‌ ಮಿಲ್‌ ಒಂದರ ಬಳಿ ಮಲಗಿದ್ದರು. ಬಾಲಕಿಯ ತಾಯಿಯು ರೈಸ್‌ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಲ್ಲ ಕಾರ್ಮಿಕರು ಮಿಲ್‌ ಬಳಿಯೇ ಮಲಗಿದ್ದರು. ಇದೇ ವೇಳೆ, ಕಾಮುಕ ಟ್ರಕ್‌ ಚಾಲಕನು ಯಾರಿಗೂ ಎಚ್ಚರವಾಗದಂತೆ ಬಾಲಕಿಯನ್ನು ಹೊತ್ತುಕೊಂಡು ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆತ, ಕೃತ್ಯ ಬಯಲಾಗುವ ಭಯದಲ್ಲಿ ಆಕೆಯನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Truck Driver
ಮಲಗಿದ್ದ ಬಾಲಕಿಯನ್ನು ಹೊತ್ತೊಯ್ಯುತ್ತಿರುವ ಕಟುಕ ಡ್ರೈವರ್.
Koo

ಹೈದರಾಬಾದ್:‌ ತೆಲಂಗಾಣದಲ್ಲಿ ಟ್ರಕ್‌ ಚಾಲಕನೊಬ್ಬ 6 ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲೆ ಮಾಡಿದ್ದಾನೆ. ತೆಲಂಗಾಣದ (Telangana) ಪೆದ್ದಪಲ್ಲಿ ಜಿಲ್ಲೆಯಲ್ಲಿ ಗುರುವಾರ (ಜೂನ್‌ 13) ರಾತ್ರಿ ಭೀಕರ ಕೃತ್ಯ ನಡೆದಿದೆ. ಕಂದಮ್ಮನನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯನ್ನು ಕೊಂದು ನಿರ್ಜನ ಪ್ರದೇಶದಲ್ಲಿ ಎಸೆದ ದುರುಳನನ್ನು ಬಲರಾಮ್‌ ಎಂದು ಗುರುತಿಸಲಾಗಿದೆ. ಈತನು ಉತ್ತರ ಪ್ರದೇಶದವನಾಗಿದ್ದು, ಟ್ರಕ್‌ ಚಾಲಕನಾಗಿ (Truck Driver) ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

ಬಾಲಕಿಯು ತಾಯಿ ಜತೆ ರೈಸ್‌ ಮಿಲ್‌ ಒಂದರ ಬಳಿ ಮಲಗಿದ್ದರು. ಬಾಲಕಿಯ ತಾಯಿಯು ರೈಸ್‌ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಲ್ಲ ಕಾರ್ಮಿಕರು ಮಿಲ್‌ ಬಳಿಯೇ ಮಲಗಿದ್ದರು. ಇದೇ ವೇಳೆ, ಕಾಮುಕ ಟ್ರಕ್‌ ಚಾಲಕನು ಯಾರಿಗೂ ಎಚ್ಚರವಾಗದಂತೆ ಬಾಲಕಿಯನ್ನು ಹೊತ್ತುಕೊಂಡು ಹೋಗಿದ್ದಾನೆ. ಬಾಲಕಿ ಕೂಡ ನಿದ್ದೆಯಲ್ಲಿದ್ದ ಕಾರಣ ಆಕೆ ಕಿರುಚಾಡಿಲ್ಲ. ಮೆಲ್ಲಗೆ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತುಕೊಂಡು ಹೋದ ಆತ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ.

ಮಧ್ಯರಾತ್ರಿ ಬಾಲಕಿಯ ತಾಯಿಗೆ ಎಚ್ಚರವಾಗಿದೆ. ಪಕ್ಕದಲ್ಲಿ ಮಲಗಿದ್ದ ಮಗಳು ಕಾಣಿಸದಿದ್ದಾಗ ಎಲ್ಲ ಕಾರ್ಮಿಕರನ್ನು ಎಬ್ಬಿಸಿದ್ದಾರೆ. ಕೂಡಲೇ ಎಲ್ಲ ಕಾರ್ಮಿಕರು ತಡ ರಾತ್ರಿಯೇ ಬಾಲಕಿಗಾಗಿ ಶೋಧ ನಡೆಸಿದ್ದಾರೆ. ಆಗ ನಿರ್ಜನ ಪ್ರದೇಶದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಇನ್ನಷ್ಟು ಕಾರ್ಮಿಕರು ಜತೆಗೂಡಿ ರಾತ್ರಿ ದುಷ್ಟನ ಶೋಧಕ್ಕಾಗಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆಗ ಟ್ರಕ್‌ ಚಾಲಕನು ಕಾರ್ಮಿಕರ ಕೈಗೆ ಸಿಕ್ಕಿದ್ದಾನೆ. ಆತನಿಗೆ ಧರ್ಮದೇಟು ಕೊಟ್ಟ ಕಾರ್ಮಿಕರು, ಮನಸೋಇಚ್ಛೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬಲರಾಮ್‌ ಬಾಲಕಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಲರಾಮ್‌ನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಮಧ್ಯಪ್ರದೇಶದಲ್ಲಿ 21ವರ್ಷದ ಯುವಕನೊಬ್ಬ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸೆದು, ಕೊಲೆ ಮಾಡಿದ್ದ. ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದ. ಬಳಿಕ ಉಸಿರುಗಟ್ಟಿಸಿ ಕೊಂದಿದ್ದ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು.

ಇದನ್ನೂ ಓದಿ: Rape Case: 14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

Continue Reading
Advertisement
Euro 2024
ಪ್ರಮುಖ ಸುದ್ದಿ16 mins ago

Euro 2024 : ಸ್ಕಾಟ್ಲೆಂಡ್​ ವಿರುದ್ಧ ಜರ್ಮನಿಗೆ 5-1 ಗೋಲ್​ಗಳ ಭರ್ಜರಿ ವಿಜಯ

Head Shave
Latest26 mins ago

Head Shave: ಪೋಷಕರು ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ದಲಿತ ಹುಡುಗನ ತಲೆ ಬೋಳಿಸಿದರು!

Accident Case
Latest57 mins ago

Accident Case: ಕಾರು ಡಿಕ್ಕಿ ರಭಸಕ್ಕೆ ಹತ್ತಾರು ಅಡಿ ದೂರ ಹಾರಿ ಬಿದ್ದ ಮಹಿಳೆ; ಭಯಾನಕ ವಿಡಿಯೊ

karnataka weather forecast
ಮಳೆ60 mins ago

Karnataka Weather : ಬೆಂಗಳೂರಲ್ಲಿ ವೀಕೆಂಡ್‌ಗೆ ಬ್ರೇಕ್‌ ಕೊಟ್ಟ ವರುಣ! ಈ 3 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

Life Insurance
ಮನಿ-ಗೈಡ್1 hour ago

Life Insurance: ಜೀವ ವಿಮೆ ನಿಯಮಗಳಲ್ಲಿ ಹಲವು ಬದಲಾವಣೆ; ಐಆರ್‌ಡಿಎಐಯಿಂದ ಗ್ರಾಹಕಸ್ನೇಹಿ ಕ್ರಮ

Betel leaves health benefits
ಆರೋಗ್ಯ1 hour ago

Betel Leaves Health Benefits: ರಾತ್ರಿ ಊಟದ ಬಳಿಕ ವೀಳ್ಯದೆಲೆ ಸೇವನೆ ಆರೋಗ್ಯಕ್ಕೆ ಉತ್ತಮ

Narendra Modi
ದೇಶ1 hour ago

Narendra Modi: ತಂತ್ರಜ್ಞಾನ ಜತೆಗೆ ಮಾನವ ಕೇಂದ್ರಿತ ಏಳಿಗೆಗೆ ಭಾರತ ಆದ್ಯತೆ; ಇಟಲಿ ಜಿ7 ಸಭೆಯಲ್ಲಿ ಮೋದಿ

Teachers Transfer 2024
ಕರ್ನಾಟಕ2 hours ago

Teachers Transfer 2024: ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಇಂದು ಪ್ರಕಟ ಸಾಧ್ಯತೆ

Aamras
ದೇಶ2 hours ago

India’s Aamras : ಮಾವಿನಹಣ್ಣಿನ ಖಾದ್ಯಗಳ ಟಾಪ್‌ ಟೆನ್‌ ಪಟ್ಟಿಯಲ್ಲಿ ಭಾರತದ ಆಮ್‌ರಸ್‌ ವಿಶ್ವದಲ್ಲೇ ನಂಬರ್‌ ಒನ್!

International Yoga Day 2024
ಆರೋಗ್ಯ2 hours ago

International Yoga Day 2024: ಧ್ಯಾನ ಎಂದರೇನು? ಇದರಿಂದ ಏನೇನು ಪ್ರಯೋಜನ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ13 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು14 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು15 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ16 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌