National Youth Day 2024: ಜಗತ್ತಿನಲ್ಲಿ ಸ್ಥಿರವಾಗಿ ಉಳಿಯುವುದೆಂದರೆ ಬದಲಾವಣೆ ಮಾತ್ರ ಎಂದಿದ್ದ ವಿವೇಕಾನಂದರು! - Vistara News

ದೇಶ

National Youth Day 2024: ಜಗತ್ತಿನಲ್ಲಿ ಸ್ಥಿರವಾಗಿ ಉಳಿಯುವುದೆಂದರೆ ಬದಲಾವಣೆ ಮಾತ್ರ ಎಂದಿದ್ದ ವಿವೇಕಾನಂದರು!

ಜನವರಿ 12ರ ವಿವೇಕ ಜಯಂತಿಯ (National Youth Day 2024) ಸಂದರ್ಭವನ್ನು ರಾಷ್ಟ್ರೀಯ ಯುವ ದಿನವೆಂದು ಭಾರತ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ, ಯುವಕರನ್ನು ಸ್ಫೂರ್ತಗೊಳಿಸುವಂಥ ವಿವೇಕಾನಂದರ ವಿಚಾರಧಾರೆಯ ಬಗೆಗೊಂದು ಚಿಂತನೆ ಇಲ್ಲಿದೆ.

VISTARANEWS.COM


on

National Youth Day 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಲಕಾ ಕೆ, ಮೈಸೂರು
ಜಗತ್ತಿನಲ್ಲಿ ಸ್ಥಿರವಾಗಿ (National Youth Day 2024) ಉಳಿಯುವುದೆಂದರೆ ಬದಲಾವಣೆ ಮಾತ್ರ ಎಂಬ ಮಾತಿದೆ. ಪ್ರತೀಕ್ಷಣಕ್ಕೆ ಬದಲಾಗುತ್ತಿರುವ ಈ ಜಗತ್ತಿನಲ್ಲಿ ಒಂದು ಶತಮಾನದ ಹಿಂದೆ ಬಾಳಿಬದುಕಿದ್ದ ಮಹಾತ್ಮರೊಬ್ಬರ ಮಾತುಗಳು ಇಂದಿಗೂ ಪ್ರಸ್ತುತ ಎಂದರೆ ಸುಮ್ಮನೆ ಅಲ್ಲ. ಅದರಲ್ಲೂ ಯುವಕರಿಗಾಗಿ ಅವರು ಇರಿಸಿದ್ದ ಆಶೋತ್ತರಗಳು ಮತ್ತು ತತ್ವಾದರ್ಶಗಳು ಇಂದಿಗೆ ಮಾತ್ರವಲ್ಲ, ಭವಿಷ್ಯದ ಪೀಳಿಗೆಗಳಿಗೂ ಸಮಕಾಲೀನ ಆಗಬಲ್ಲವು ಎಂದರೆ ಅವರ ಚಿಂತನೆಗಳ ಪ್ರಖರತೆ ಏನೆಂಬುದನ್ನು ಅರಿಯಬೇಕು ನಾವು.

Swami vivekananda

ಜನವರಿ 12ರ ವಿವೇಕ ಜಯಂತಿಯ ಸಂದರ್ಭವನ್ನು ರಾಷ್ಟ್ರೀಯ ಯುವ ದಿನವೆಂದು ಭಾರತ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ, ಯುವಕರನ್ನು ಸ್ಫೂರ್ತಗೊಳಿಸುವಂಥ ವಿವೇಕಾನಂದರ ವಿಚಾರಧಾರೆಯ ಬಗೆಗೊಂದು ಚಿಂತನೆ.
“ಏಳಿ, ಜಾಗ್ರತರಾಗಿ. ಗುರಿಯನ್ನು ಸೇರುವವರೆಗೆ ನಿಲ್ಲಬೇಡಿ”, ʻನಿನ್ನ ಬಾಳಿನ ಶಿಲ್ಪಿ ನೀನೆʼ, ʻಶಕ್ತಿಯೇ ಜೀವನ ದೌರ್ಬಲ್ಯವೇ ಮರಣʼ ಮುಂತಾದ ಮಾತುಗಳು ಇಂದಿಗೂ ಅಲ್ಲಲ್ಲಿ ಘೋಷಣೆಗಳಂತೆ ಕೇಳಿಬರುತ್ತವೆ. ಆದರೆ ಹೀಗೆ ಹೇಳಿ-ಕೇಳಿ ಮಾಡುವಾಗ ಇವುಗಳನ್ನು ಮೂಲದಲ್ಲಿ ಹೇಳಿದವರಾರು ಎಂಬ ಬಗ್ಗೆ, ಹೇಳಿದ ಸ್ವಾಮಿ ವಿವೇಕಾನಂದರ ಬಗ್ಗೆ ಯೋಚಿಸುವುದು ಅಪರೂಪ. “ಫುಟ್ಬಾಲ್‌ ಆಡಿ ಬಲಿಷ್ಠವಾದ ಸ್ನಾಯುಗಳನ್ನು ಪಡೆದಿರೆಂದರೆ ನಿಮಗೆ ಭಗವದ್ಗೀತೆ ಸ್ಪಷ್ಟವಾಗಿ ಅರ್ಥವಾಗುವುದು” ಎನ್ನುತ್ತಾ, ಧರ್ಮಪ್ರಜ್ಞೆ ಎನ್ನುವುದು ಆಡುಂಬೊಲದಷ್ಟೇ ಆಪ್ತ, ಅಗತ್ಯ ಎಂದು ಯುವಕರಿಗೆ ಶತಮಾನದ ಹಿಂದೆಯೇ ತಿಳಿಹೇಳಿದವರು. ದೇಶವೊಂದರ ಮುನ್ನಡೆಗೆ ಅಲ್ಲಿನ ಯುವ ಶಕ್ತಿಯು ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಸ್ತರದಲ್ಲಿ ಉನ್ನತಿ ಹೊಂದಬೇಕು. ಆಗ ಮಾತ್ರವೇ ಆಧುನಿಕ ಭಾರತದ ನಿರ್ಮಾಣಕ್ಕೆ ಅಗತ್ಯವಾದಂಥ ಇಚ್ಛಾಶಕ್ತಿಯನ್ನು ಸಿದ್ಧಪಡಿಸಲು ಸಾಧ್ಯ ಎಂಬ ದೂರದರ್ಶಿತ್ವವನ್ನು ಆಗಲೇ ಹೊಂದಿದ್ದವರು.

ನರೇಂದ್ರನೆಂಬ ಬಾಲಕ

ನರೇಂದ್ರನೆಂಬ ಕುತೂಹಲಿ ಎಳೆಯ ಬಾಲನೊಬ್ಬ ಮುಂದೊಂದು ದಿನ ಆಧ್ಯಾತ್ಮದ ಪ್ರಭೆಯಾಗಿ ವಿಶ್ವವನ್ನೇ ಬೆಳಗಿದ್ದೀಗ ಇತಿಹಾಸ. ಆದರೆ ಅವರ ಬಗ್ಗೆ ಅದಷ್ಟನ್ನೇ ಗ್ರಹಿಸಿದರೆ, ಅರಿವು ಅಪೂರ್ಣವಾಗುತ್ತದೆ. ಎಳವೆಯ ಕುತೂಹಲ, ಯೌವನದ ಉತ್ಸಾಹ, ವಾರ್ಧಕ್ಯದ ಅನುಭವ, ಯೋಧನ ಕೆಚ್ಚು, ಮಾತೆಯ ಮಮತೆ, ಪ್ರಕಾಂಡ ಪಾಂಡಿತ್ಯ, ಪ್ರಚಂಡ ವಾಕ್ಚಾತುರ್ಯ, ಸಾಮಾಜಿಕ ಕಾಳಜಿ, ಆಧ್ಯಾತ್ಮಿಕ ಹಸಿವು, ಅಪಾರ ಕರುಣೆ, ವಿಶಾಲ ಮನಸ್ಸು… ಹೀಗೆ ಹತ್ತಾರು ಸಾಧ್ಯತೆಗಳು ವಿವೇಕಾನಂದರಲ್ಲಿ ಮೇಳೈಸಿದ್ದವು. ಧರ್ಮದ ಬಗ್ಗೆ ಇದ್ದಷ್ಟೇ ಪ್ರೀತಿ ಅವರಿಗೆ ವಿಜ್ಞಾನದ ಬಗ್ಗೆಯೂ ಇತ್ತು; ಪ್ರಾಚೀನ ಸಂಗತಿಗಳ ಬಗ್ಗೆ ಇದ್ದಷ್ಟೇ ಆಸಕ್ತಿ ಆಧುನಿಕ ವಿಷಯಗಳ ಮೇಲೂ ಇತ್ತು. ಇಂಥ ಬಹುಮುಖಿ ವ್ಯಕ್ತಿತ್ವವು ಅಂದಿನಿಂದ ಇಂದಿನವರೆಗೂ ಅಸಂಖ್ಯಾತ ಯುವಕರನ್ನು ಪ್ರಭಾವಿಸಿದ್ದು ಹೌದು.
ʻಆತ್ಮವಿ‍ಶ್ವಾಸವಿರುವ ಕೆಲವು ಯುವಕರನ್ನು ಕೊಡಿ, ಪ್ರಪಂಚವನ್ನೇ ಗೆಲ್ಲುತ್ತೇನೆʼ ಎಂಬ ದೃಢನುಡಿ ಅವರದ್ದಾಗಿತ್ತು. ಅಂದಿನ ದಿನಗಳಲ್ಲಿ ದೇಶವನ್ನು ಶಿಥಿಲಗೊಳಿಸಿದ್ದ ಬಡತನ, ಅನಕ್ಷರತೆ, ಮೂಢನಂಬಿಕೆಯಂಥ ಸಮಸ್ಯೆಗಳ ಮೂಲೋತ್ಪಾಟನೆ ಯುವಕರಿಂದ ಸಾಧ್ಯ ಎಂದು ಬಲವಾಗಿ ಅವರು ನಂಬಿದ್ದರು. “ಬಡವರ, ಅಮಾಯಕರ, ದೀನದಲಿತರ ಪರವಾದ ಈ ಸಹಾನುಭೂತಿಯನ್ನು, ಈ ಹೋರಾಟವನ್ನು ನಿಮಗೆ ಬಿಟ್ಟುಕೊಡುತ್ತಿದ್ದೇನೆ. ಪ್ರತಿದಿನ ಕೆಳಗೆ ಕುಸಿಯುತ್ತಲೇ ಇರುವ ಜನರ ಉದ್ಧಾರಕ್ಕೆ ನಿಮ್ಮ ಇಡೀ ಜೀವನವನ್ನು ಮುಡಿಪಾಗಿಡುವ ಪ್ರತಿಜ್ಞೆಯನ್ನು ಕೈಗೊಳ್ಳಿ…ಇತರರಿಗೆ ಮೋಕ್ಷ ಸಂಪಾದಿಸಲು ನೀವೇ ನರಕಕ್ಕೆ ಹೋಗಿ” ಎನ್ನುವ ಮೂಲಕ ಯುವಕರ ಮೇಲೆ ಬಹುದೊಡ್ಡ ಹೊಣೆಯನ್ನು ಅವರು ಹೊರಿಸಿದ್ದರು. ಆದರೆ ಅವೆಲ್ಲ ಅಂದಿನ ದಿನಗಳಿಗಾಯಿತು, ಇಂದಿಗೇನು ಎನ್ನುವ ಪ್ರಶ್ನೆ ಬರಬಹುದು!

ಚಿಂತನೆಗಳು ಇಂದೇಕೆ ಪ್ರಸ್ತುತ?

ಯುವಕರು ತಮ್ಮನ್ನು ತಾವು ಅರಿತುಕೊಳ್ಳುವ ಬಗ್ಗೆ ಅವರ ನಿಲುವು ಸ್ಪಷ್ಟವಾಗಿತ್ತು. “ಯಾವನು ಅಹೋರಾತ್ರಿ ತಾನು ಯಾವ ಕೆಲಸಕ್ಕೂ ಬಾರದವನು ಎಂದು ಭಾವಿಸುವನೋ, ಅವನಿಂದ ಜಗತ್ತಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಒಬ್ಬಾತ ತಾನು ನೀಚ, ದುಃಖಿ, ಶೂನ್ಯನೆಂದು ಎಣಿಸಿದರೆ, ಅವನು ಹಾಗೆಯೇ ಆಗುವುದಲ್ಲಿ ಸಂದೇಹವಿಲ್ಲ. ಮೊದಲು ನಿಮ್ಮಲ್ಲಿ ನಿಮಗೆ ಶ್ರದ್ಧೆ ಇರಲಿ. ಆತ್ಮವಿಶ್ವಾಸದಲ್ಲಿ ನಂಬಿಕೆ ಇರಲಿ. ನಿಮ್ಮ ಬಗ್ಗೆ ಮನಃಪೂರ್ವಕವಾಗಿ ಒಳಿತನ್ನೇ ಭಾವಿಸಿದರೆ ಅಂತೆಯೇ ಆಗುತ್ತೀರಿ” ಎಂಬ ಅವರ ಮಾತುಗಳು ಇಂದಿನ ದಿನಕ್ಕೆ ಹೇಗೆ ಸಲ್ಲುತ್ತವೆ? ಹೆತ್ತವರ ಒತ್ತಾಸೆ, ಮಿತ್ರರ ಒತ್ತಡ, ಸಾಮಾಜಿಕ ಗೋಜಲುಗಳು, ಸಂತೆಯಲ್ಲೂ ಒಂಟಿಯಾಗುತ್ತಿರುವ ಇಂದಿನ ಯುವ ಜನತೆಗೆ ಇದು ಏನನ್ನು ಹೇಳಬಲ್ಲದು? ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮನ್ನು ತಾವು ಬಿಂಬಿಸಿಕೊಳ್ಳುತ್ತಿರುವುದೇ ಸತ್ಯವಲ್ಲ, ಅಲ್ಲಿ ಬರುವ ಅಭಿಪ್ರಾಯಗಳೇ ಅಂತಿಮವೂ ಅಲ್ಲ, ಅದರ ಹೊರತಾಗಿ ತಮಗೊಂದು ಅಸ್ತಿತ್ವವಿದೆ ಎಂಬುದರತ್ತ ಬೆರಳು ತೋರುತ್ತಿದೆಯಲ್ಲ.

ಶಿಕ್ಷಣದಲ್ಲಿ ಪ್ರತಿಯೊಂದಕ್ಕೂ ಸ್ಪೆಶಲೈಸ್‌ ಆಗುವಂಥ ಕಾಲವಿದು. ಎಡಗಿವಿಯ ವೈದ್ಯರು ಬಲಗಿವಿ ನೋಡುವುದಿಲ್ಲ ಎಂಬುದು ಕುಹಕದ ಮಾತಾದರೂ, ವ್ಯಾಸಂಗವನ್ನು ಒಟ್ಟಂದದಲ್ಲಿ ನೋಡುವ ಸಮಗ್ರ ದೃಷ್ಟಿಕೋನ ಕಡಿಮೆಯಾಗುತ್ತಿದೆ. ಆದರೆ ಶಿಕ್ಷಣವೆಂದರೆ ಕೇವಲ ಪುಸ್ತಕದ ಚರಟವಲ್ಲ ಎಂಬುದು ವಿವೇಕಾನಂದರ ಅಭಿಪ್ರಾಯವಾಗಿತ್ತು. ವಿಜ್ಞಾನ, ತತ್ವಜ್ಞಾನ, ಸಮಾಜಶಾಸ್ತ್ರ, ಕಲೆ, ಸಂಸ್ಕೃತಿ, ದೇಶಪ್ರೇಮ, ಆತ್ಮಾಭಿಮಾನ ಮುಂತಾದ ಎಲ್ಲದರ ಅರಿವೂ ವಿದ್ಯಾರ್ಥಿಗಳಿಗೆ ದೊರೆಯುವಂತಾಗಬೇಕು ಎಂಬುದು ಅವರ ಇಂಗಿತ. “ಕೇವಲ ಪರೀಕ್ಷೆ ಪಾಸು ಮಾಡಿ ಚೆನ್ನಾಗಿ ಮಾತಾಡಿಬಿಟ್ಟರೆ ನಿಮ್ಮ ಪಾಲಿಗೆ ಶಿಕ್ಷಿತರಾದಂತಾಯಿತು! ಯಾವ ವಿದ್ಯೆಯ ಅಭಿವೃದ್ಧಿಯಿಂದ ಇತರ ಸಾಧಾರಣರನ್ನು ಜೀವನ ಸಂಗ್ರಾಮದಲ್ಲಿ ಸಮರ್ಥರನ್ನಾಗಿ ಮಾಡುವುದಕ್ಕಾಗುವುದಿಲ್ಲವೋ, ಯಾವುದು ಮನುಷ್ಯನಿಗೆ ಚಾರಿತ್ರ್ಯಬಲ, ಪರಸೇವಾತತ್ಪರತೆ, ಸಿಂಹ ಸಾಹಸಿಕತೆಯನ್ನು ಒದಗಿಸುವುದಿಲ್ಲವೋ, ಅದು ವಿದ್ಯೆಯೇನು?” ಎಂದು ಪ್ರಶ್ನಿಸಿದ್ದ ಅವರು, ಎಲ್ಲಾ ವಿದ್ಯಾಭ್ಯಾಸ, ತರಬೇತಿಗಳ ಗುರಿ ಪುರುಷಸಿಂಹರನ್ನು ನಿರ್ಮಾಣ ಮಾಡುವುದು ಎಂದು ಸಾರಿದ್ದರು.

ತತ್ವಜ್ಞಾನ, ಅಧ್ಯಾತ್ಮ ಹಾಗೂ ವಿಜ್ಞಾನ ಪೂರಕ

ಎಲ್ಲಕ್ಕಿಂತ ಮಹತ್ವದ್ದೆಂಬದರೆ ತತ್ವಜ್ಞಾನ, ಅಧ್ಯಾತ್ಮ ಹಾಗೂ ವಿಜ್ಞಾನ ಒಂದಕ್ಕೊಂದು ಭಿನ್ನ ಶಾಸ್ತ್ರಗಳಲ್ಲ; ಪೂರಕವಾದವು ಎಂಬ ಅವರ ನಿಲುವು. ವಿಜ್ಞಾನದ ವಿದ್ಯಾರ್ಥಿಗಳು ತತ್ವಜ್ಞಾನ, ಧರ್ಮ ಮತ್ತು ಅಧ್ಯಾತ್ಮವನ್ನೂ ಅಧ್ಯಯನ ಮಾಡಬೇಕೆಂಬುದು ಅವರ ಅಭಿಪ್ರಾಯವಾಗಿತ್ತು. ಜ್ಞಾನಾರ್ಜನೆ ಮತ್ತು ಧನಾರ್ಜನೆ ಎರಡೂ ಬದುಕಿನ ಅಗತ್ಯಗಳು. ಜೀವನದ ಅಗತ್ಯಗಳನ್ನು ದಾಟಿದ ಮೇಲಷ್ಟೇ ಆಧ್ಯಾತ್ಮದೆಡೆಗೆ ಮನಸ್ಸು ತಿರುಗಿಸುವುದಕ್ಕೆ ಸಾಧ್ಯ ಎಂದೇ ಅವರು ಪ್ರತಿಪಾದಿಸಿದ್ದು ಇಂದಿಗೂ ವಿಶೇಷವೆನಿಸುತ್ತದೆ. ಹಣ ಮಾಡುವತ್ತಲೇ ಚಿತ್ತ ನೆಟ್ಟು, ಬದುಕಿನ ಉಳಿದೆಲ್ಲ ಸತ್ವಗಳನ್ನು ಗೌಣವಾಗಿಸಿಕೊಳ್ಳುತ್ತಿರುವ ಇಂದಿನ ಯುವಜನಕ್ಕೆ ಇದರಲ್ಲಿರುವ ಸಾರ ಅರ್ಥಪೂರ್ಣ. ಐಹಿಕ ಮತ್ತು ಆಧ್ಯಾತ್ಮಿಕ ಅಗತ್ಯಗಳ ಬೆಸುಗೆಯನ್ನು ತಿಳಿಸಿ, ಬದುಕಿಗೆ ಪರಿಪೂರ್ಣತೆಯನ್ನು ಒದಗಿಸುವ ಬಗ್ಗೆ ಅವರ ಈ ಚಿಂತನೆಗಳು ಯುವಕರಿಗೆ ಮಾತ್ರವಲ್ಲ, ಎಲ್ಲರಿಗೂ ಮನನೀಯ.
ಧೈರ್ಯ, ಸಾಹಸ ಮತ್ತು ನಿರ್ಭಯರಾಗಿ ಬದುಕುವ ಬಗ್ಗೆ ಅವರು ಯುವಜನತೆಗೆ ನೀಡಿದ ಸಂದೇಶಗಳಂತೂ ಇಂದಿಗೂ ರೋಮಾಂಚನ ಹುಟ್ಟಿಸುತ್ತವೆ. “ನಮ್ಮ ದೇಶಕ್ಕೆ ಇಂದು ಬೇಕಾಗಿರುವುದು ಕಬ್ಬಿಣದಂಥ ಮಾಂಸಖಂಡಗಳು, ಉಕ್ಕಿನಂಥ ನರಗಳು, ಯಾವುದನ್ನೂ ಲೆಕ್ಕಿಸದೆ ವಿಶ್ವದ ರಹಸ್ಯತಮ ಸತ್ಯಗಳನ್ನು ಭೇದಿಸಿ, ಸಾಧ್ಯವಾದರೆ ಕಡಲಿನ ಆಳಕ್ಕಾದರೂ ಹೋಗಿ ಮೃತ್ಯುವಿನೊಂದಿಗೆ ಹೋರಾಡಿ ಗುರಿಯನ್ನು ಸಾಧಿಸಬಲ್ಲ ಅದಮ್ಯ ಪ್ರಚಂಡ ಇಚ್ಛಾಶಕ್ತಿ. ಏಳಿ, ಜಾಗೃತರಾಗಿ… ನಿರ್ಭೀತರಾಗಿ, ಅಂಜಬೇಡಿ. ನಮ್ಮ ದೇಶಕ್ಕೆ ಅದ್ಭುತ ತ್ಯಾಗ ಬೇಕಾಗಿದೆ. ಯುವಕರು ಮಾತ್ರ ಇದನ್ನು ಮಾಡಬಲ್ಲರು” ಎಂದು ಅವರು ನೀಡಿದ್ದ ಕರೆ ಇಂದಿಗೂ, ಎಂದೆಂದಿಗೂ ಹೃದಯಸ್ಪರ್ಶಿಯಾದದ್ದು. ಪ್ರತೀ ಹೆಜ್ಜೆಯಲ್ಲಿ ಗೊಂದಲ, ಅಂಜಿಕೆ, ಅನಿಶ್ಚಿತತೆ, ಅಪನಂಬಿಕೆಯಿಂದ ಬಳಲುತ್ತಿರುವ ಇಂದಿನ ಯುವಜನಾಂಗಕ್ಕೆ ಈ ಸಂದೇಶಗಳು ಮೇಲ್ಪಂಕ್ತಿ ಹಾಕಬಲ್ಲವು.

Vivekananda

ಸಮರ್ಥರು ದೇಶಕ್ಕೆ ಬೇಕು

ದೇಶವೊಂದನ್ನು ರೂಪಿಸಬಲ್ಲಂಥ ಯುವಶಕ್ತಿ ಹೇಗಿರಬೇಕು ಎನ್ನುವ ಬಗ್ಗೆ ಅತ್ಯಂತ ನಿಶ್ಚಿತವಾದ ಮತ್ತು ಪ್ರಖರವಾದ ಚಿಂತನೆಗಳು ವಿವೇಕಾನಂದರದ್ದಾಗಿದ್ದವು. ಸವಾಲುಗಳಿಗೆ ಕುಗ್ಗದೆ, ಹೊಸತನದತ್ತ ತುಡಿಯುವ ಸಮರ್ಥರು ಈ ದೇಶಕ್ಕೆ ಬೇಕು ಎಂದು ಹೇಳಿದ್ದರು. ಮಾತ್ರವಲ್ಲ, “ನಿಮ್ಮಂಥ ಯುವಕರಿಗಾಗಿ ನಾನು ಸಾವಿರ ಸಲ ಬೇಕಾದರೂ ಹುಟ್ಟಿ ಬಂದೇನು. ಈ ಕಾಯ ಅಳಿದರೇನು, ನಿಮ್ಮೆಲ್ಲರಲ್ಲಿ ಸೂಕ್ಷ್ಮ ರೂಪದಲ್ಲಿದ್ದು ಸಾಧಿಸಬೇಕಾದ್ದನ್ನು ಸಾಧಿಸುವವರೆಗೆ ನಿಲ್ಲುವುದಿಲ್ಲ” ಎಂದಿದ್ದ ಅವರು ವಿಶಾಲ ಚಿಂತನೆ ಮತ್ತು ಸಂಕಲ್ಪ ಶಕ್ತಿಗಳ ಎರಕದಂತಿದ್ದರು. ಯುವಕರಿಗೆ ಹೆಚ್ಚು ಆದರ್ಶಗಳಿಲ್ಲದ ಇಂದಿನ ಯುಗದಲ್ಲಿ, ಬದುಕಿನ ಯಾವುದೇ ವಿಷಯದಲ್ಲಿ ಸ್ಫೂರ್ತರಾಗಬಲ್ಲಂಥ ಮೇರು ವ್ಯಕ್ತಿ ವಿವೇಕಾನಂದರು.

ಇದನ್ನೂ ಓದಿ: National Youth Day: ಜ.12ರಂದು ರಾಷ್ಟ್ರೀಯ ಯುವ ದಿನ ಆಚರಿಸುವುದೇಕೆ? ಇದರ ಉದ್ದೇಶ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Prashant Kishor: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಮೊದಲ 5 ಹಂತಗಳ ಮತದಾನ ಮುಗಿದಿದೆ. ಇನ್ನು ಎರಡು ಹಂತಗಳ ಮತದಾನ ಬಾಕಿ ಇದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ. ಆದಾಗ್ಯೂ ಅವರು ರಾಜ್ಯವಾರು ಫಲಿತಾಂಶಗಳನ್ನು ಊಹಿಸಲು ನಿರಾಕರಿಸಿದ್ದಾರೆ.

ಮೋದಿ ಬ್ರ್ಯಾಂಡ್‌ ಕುಸಿತ

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Continue Reading

ದೇಶ

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

Crime News: ಮಹಾರಾಷ್ಟ್ರದಲ್ಲಿ ಸ್ಪೋರ್ಟ್ಸ್‌ ಕಾರು ಓಡಿಸಿ ಇಬ್ಬರ ಸಾವಿನ ಕಾರಣನಾದ ಅಪ್ರಾಪ್ತ ವಯಸ್ಕನಿಗೆ ಜಾಮೀನು ಸಿಕ್ಕ ವಿಚಾರ ಸೋಮವಾರ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಇದೀಗ ಕಾರು ಚಲಾಯಿಸಿ ಅಪಘಾತ ನಡೆಸಿದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಅಪ್ರಾಪ್ತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದು ಮತ್ತು ಅವರಿಗೆ ಮಾದಕ ವಸ್ತುಗಳನ್ನು ಒದಗಿಸುವ ಕಾರಣ ನೀಡಿ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತರಿಗೆ ಮದ್ಯ ನೀಡಿದ ಬಾರ್‌ ಮಾಲೀಕನ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Crime News
Koo

ಮುಂಬೈ: ಮಹಾರಾಷ್ಟ್ರದಲ್ಲಿ ಸ್ಪೋರ್ಟ್ಸ್‌ ಕಾರು ಓಡಿಸಿ ಇಬ್ಬರ ಸಾವಿನ ಕಾರಣನಾದ ಅಪ್ರಾಪ್ತ ವಯಸ್ಕನಿಗೆ ಜಾಮೀನು ಸಿಕ್ಕ ವಿಚಾರ ಸೋಮವಾರ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಜತೆಗೆ ಕೋರ್ಟ್‌ನ ತೀರ್ಪಿಗೆ ಟೀಕೆಯೂ ವ್ಯಕ್ತವಾಗಿತ್ತು. ಇದೀಗ ಕಾರು ಚಲಾಯಿಸಿ ಅಪಘಾತ ನಡೆಸಿದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಪುಣೆಯ ಕಲ್ಯಾಣಿ ನಗರದಲ್ಲಿ ಭಾನುವಾರ ಮುಂಜಾನೆ ಅಪಘಾತ ನಡೆದು ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೃತಪಟ್ಟಿದ್ದರು (Crime News).

17 ವರ್ಷದ ವೇದಾಂತ್‌ ಅಗರ್‌ವಾಲ್‌ ಐಷಾರಾಮಿ ಪೋರ್ಷೆ ಕಾರನ್ನು ಗಂಟೆಗೆ 200 ಕಿ.ಮೀ. ವೇಗದಲ್ಲಿ ಓಡಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಧ್ಯಪ್ರದೇಶದ ಎಂಜಿನಿಯರ್‌ಗಳಾದ 24 ವರ್ಷದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಪುಣೆ ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ಘಟನೆ ಬಗ್ಗೆ ಮಾಹಿತಿ ನೀಡಿ, ʼʼಸ್ಥಳೀಯ ಪಬ್‌ ಒಂದರಲ್ಲಿ ವೇದಾಂತ್‌ ಅಗರ್‌ವಾಲ್‌ ಮತ್ತು ಆತನ ಸ್ನೇಹಿತರು ಪಾರ್ಟಿ ಮಾಡಿ ಮದ್ಯ ಸೇವಿಸಿದ್ದರು. ಮಹಾರಾಷ್ಟ್ರದಲ್ಲಿ 25 ವರ್ಷಕ್ಕಿಂತ ಕೆಳಗಿನವರು ಮದ್ಯ ಸೇವಿಸುವುದು ನಿಷಿದ್ಧ. ಹೀಗಾಗಿ ಅಪ್ರಾಪ್ತರಿಗೆ ಮದ್ಯ ನೀಡಿದ ಬಾರ್‌ ಮಾಲೀಕನ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆʼʼ ಎಂದು ತಿಳಿಸಿದ್ದಾರೆ.

15 ಗಂಟೆಯೊಳಗೆ ಜಾಮೀನು

ವೇದಾಂತ್‌ ಅಗರ್‌ವಾಲ್‌ ಚಲಾಯಿಸುತ್ತಿದ್ದ ಕಾರಿನಲ್ಲಿ ಒಟ್ಟು ಮೂವರಿದ್ದರು. ಅಪಘಾತಕ್ಕೀಡಾಗುತ್ತಿದ್ದಂತೆ ಸ್ಥಳೀಯರೆಲ್ಲ ಒಟ್ಟುಗೂಡಿ ಸೆರೆ ಹಿಡಿದು ಥಳಿಸಿ ಅವರನ್ನು ಪೊಲೀಸರಿಗೆ ಒಪ್ಪಿಸಿದ್ದರು. ಈ ಪೈಕಿ ಓರ್ವ ತಪ್ಪಿಸಿಕೊಂಡಿದ್ದ. ಆದರೆ ದುರಂತ ಎಂದರೆ ವೇದಾಂತ್‌ ಅಗರ್‌ವಾಲ್‌ನ ಬಂಧನವಾದ ಕೇವಲ 15 ಗಂಟೆಗಳಲ್ಲೇ ಬಾಲಾಪರಾಧಿ ನ್ಯಾಯ ಮಂಡಳಿಯು ಆತನಿಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಅಪರಾಧಿ ಯೆರವಾಡಾದ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು, ಕುಡಿತದ ಅಭ್ಯಾಸಕ್ಕೆ ಚಿಕಿತ್ಸೆ ಪಡೆಯಬೇಕು ಮತ್ತು ಮನೋವೈದ್ಯಕೀಯ ಮೌಲ್ಯಮಾಪನ ಹಾಗೂ ಚಿಕಿತ್ಸೆಗೆ ಒಳಗಾಗಬೇಕು ಎಂಬ ಷರತ್ತು ವಿಧಿಸಿತ್ತು. ಈ ತೀರ್ಪಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಜಾಮೀನು ನಿರ್ಧಾರವನ್ನು ಪುಣೆ ಪೊಲೀಸರೂ ವಿರೋಧಿಸಿದ್ದು, ವೇದಾಂತ್‌ ಅಗರ್‌ವಾಲ್‌ನನ್ನು ವಿಚಾರಣೆಗೆ ಒಳಪಡಿಸಲು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. “ಈ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಐಪಿಸಿಯ ಸೆಕ್ಷನ್ 304ರ ಅಡಿಯಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಇದು ಜಾಮೀನು ರಹಿತ ಸೆಕ್ಷನ್ ಆಗಿದ್ದು, ಇದು ಘೋರ ಅಪರಾಧ” ಎಂದು ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ತಿಳಿಸಿದ್ದಾರೆ.

ಇದೀಗ ಪುಣೆ ಪೊಲೀಸರು ಬಾಲಕನ ತಂದೆ, ಸ್ಥಳೀಯ ಪ್ರಮುಖ ಬಿಲ್ಡರ್ ವಿಶಾಲ್‌ ಅಗರ್‌ವಾಲ್‌ನನ್ನು ಬಂಧಿಸಿದ್ದಾರೆ. ಅಪ್ರಾಪ್ತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದು ಮತ್ತು ಅವರಿಗೆ ಮಾದಕ ವಸ್ತುಗಳನ್ನು ಒದಗಿಸುವ ಕಾರಣ ನೀಡಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಶ್ರೀಮಂತನ ಮಗನಿಗೆ 15 ಗಂಟೆಯೊಳಗೆ ಜಾಮೀನು! ಪ್ರಬಂಧ ಬರೆಯುವ ಶಿಕ್ಷೆ!

Continue Reading

ಪ್ರಮುಖ ಸುದ್ದಿ

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Corona Virus: ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

VISTARANEWS.COM


on

corona virus wave in singapore
Koo

ಬೆಂಗಳೂರು: ಸಿಂಗಾಪುರದಲ್ಲಿ (Singapore) ಹೊಸ ಕೋವಿಡ್‌- 19 (Covid 19 wave) ಅಲೆ ಪತ್ತೆಯಾಗಿದೆ. ಒಂದೇ ವಾರದಲ್ಲಿ ಕೊರೊನಾ ವೈರಸ್‌ (Corona Virus) ಕೇಸುಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮತ್ತೆ ಮಾಸ್ಕ್‌ (Mask) ಧರಿಸಲು ಸಲಹೆ ನೀಡಲಾಗಿದೆ. ರಾಜ್ಯದಲ್ಲೂ ಆರೋಗ್ಯ ಇಲಾಖೆ (Health department) ಅಲರ್ಟ್‌ ಆಗಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದೆ.

ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

ಸಿಂಗಾಪುರದಿಂದ ಬೆಂಗಳೂರು ಹಾಗೂ ಮುಂಬಯಿಗೆ ಆಗಮಿಸುವ ವಿಮಾನಯಾನಿಗಳ ಸಂಖ್ಯೆ ಹೆಚ್ಚು ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಆಯ್ದ ಯಾನಿಗಳ ಆರೋಗ್ಯ ತಪಾಸಣೆ, ಮಾಸ್ಕ್‌ ಧಾರಣೆ ಸೇರಿದಂತೆ ಹಲವು ಕ್ರಮಗಳ ಬಗೆಗೆ ಚರ್ಚಿಸಲಾಗುತ್ತಿದೆ.

ಸಿಂಗಾಪುರದಲ್ಲಿ ಏನಾಗಿದೆ?

ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್, ಸಾರ್ವಜನಿಕ ತಾಣಗಳಲ್ಲಿ ಮುಖವಾಡಗಳನ್ನು ಧರಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ ನಿರ್ಬಂಧಗಳ ಕುರಿತು ಮಾತನಾಡಿದ ಸಚಿವ ಓಂಗ್, ಸದ್ಯಕ್ಕೆ ಯಾವುದೇ ರೀತಿಯ ಸಾಮಾಜಿಕ ನಿರ್ಬಂಧಗಳ ಯೋಚನೆಯಿಲ್ಲ ಎಂದಿದ್ದಾರೆ. ಏಕೆಂದರೆ ಸಿಂಗಾಪುರದಲ್ಲಿ ಕೋವಿಡ್ -19 ಅನ್ನು ಸ್ಥಳೀಯ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ.

ಕೋವಿಡ್‌ನ ಹೊಸ ಅಲೆಯ ಪಥವನ್ನು ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ಹೇಳಿದೆ. ಸಚಿವಾಲಯದ ಪ್ರಕಾರ, ಕೋವಿಡ್ -19 ಪ್ರಕರಣಗಳ ಅಂದಾಜು ಸಂಖ್ಯೆಯು ಹಿಂದಿನ ವಾರದಲ್ಲಿದ್ದ 13,700ರಿಂದ 25,900ಕ್ಕೆ ದ್ವಿಗುಣಗೊಂಡಿದೆ. ಅದೇ ಅವಧಿಯಲ್ಲಿ ಸರಾಸರಿ ದೈನಂದಿನ ಕೋವಿಡ್ -19 ಆಸ್ಪತ್ರೆಗೆ ದಾಖಲು ಕೇಸ್‌ಗಳು 181ರಿಂದ ಸರಿಸುಮಾರು 250ಕ್ಕೆ ಏರಿದೆ ಎಂದು ಸಚಿವಾಲಯ ವರದಿ ಮಾಡಿದೆ.

ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಸಂರಕ್ಷಿಸಲು, ಸಾರ್ವಜನಿಕ ಆಸ್ಪತ್ರೆಗಳಿಗೆ ತುರ್ತು-ಅಲ್ಲದ ಶಸ್ತ್ರಚಿಕಿತ್ಸೆಗಳನ್ನು ಕಡಿಮೆ ಮಾಡಲು ಮತ್ತು ಸೂಕ್ತವಾದ ರೋಗಿಗಳನ್ನು ಆರೈಕೆ ಸೌಲಭ್ಯಗಳಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. “ನಾವು ಅಲೆಯ ಆರಂಭಿಕ ಭಾಗದಲ್ಲಿದ್ದೇವೆ. ಪ್ರಮಾಣ ಸ್ಥಿರವಾಗಿ ಏರುತ್ತಿದೆ” ಎಂದು ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಹೇಳಿದ್ದಾರೆ.

ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ನವದೆಹಲಿ: ಕೊರೋನಾ ವೈರಸ್‌(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಪಡೆದಿರುವ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

BHU ಅಧ್ಯಯನ ವರದಿಯಲ್ಲಿ ಬಹಿರಂಗ

ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading

ದೇಶ

ISIS Terrorists: ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದ ಐಸಿಸ್ ಉಗ್ರರು; ಸೆರೆ ಸಿಕ್ಕಿದ್ದು ಹೇಗೆ?

ISIS Terrorists: ಚೆನ್ನೈ ಮೂಲಕ ದೇಶದೊಳಗೆ ಐಸಿಸ್‌ ಉಗ್ರರು ಲಗ್ಗೆ ಇಟ್ಟಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ATSಗೆ ಮಾಹಿತಿ ಸಿಕ್ಕಿತ್ತು. ಇದಾದ ಬಳಿಕ ATS ಎಲ್ಲಾ ರೈಲು, ವಿಮಾನ ಹಾಗೂ ರಸ್ತೆ ಮಾರ್ಗಗಳ ಮೇಲೆ ತೀವ್ರ ನಿಗಾ ಇರಿಸಿತ್ತು. ಚೆನ್ನೈನಿಂದ ಅಹಮದಾಬಾದ್‌ಗೆ ಇಂಡಿಗೋ 6E 848 ವಿಮಾನದಲ್ಲಿ ಬರುತ್ತಿರುವುದು ಖಚಿತಗೊಳ್ಳುತ್ತಿದ್ದಂತೆ ATS ಸಿಬ್ಬಂದಿ ಅಲರ್ಟ್‌ ಆಗಿದ್ದರು. ಅಹಮದಾಬಾದ್‌ನಲ್ಲಿ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ನಾಲ್ವರನ್ನೂ ಹೆಡೆಮುರಿಕಟ್ಟುವಲ್ಲಿ ATS ಯಶಸ್ವಿಯಾಯ್ತು.

VISTARANEWS.COM


on

ISIS Terrorists
Koo

ಅಹಮದಾಬಾದ್: ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳವು (ATS) ಸರ್ದಾರ್‌ ವಲ್ಲಭಭಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Ahmedabad Airport) ಶ್ರೀಲಂಕಾದ ನಾಲ್ವರು ಉಗ್ರರನ್ನು (ISIS Terrorists) ಬಂಧಿಸಿದ್ದು, ನಾಲ್ವರೂ ತಮ್ಮ ಹ್ಯಾಂಡ್ಲರ್‌ಗಾಗಿ ಕಾಯುತ್ತಿರುವಾಗಲೇ ಅವರನ್ನು ಬಲೆಗೆ ಹಾಕಿದ್ದಾರೆ. ನಾಲ್ವರನ್ನೂ ವಿಚಾರಣೆಗೊಳಪಡಿಸಲಾಗಿದ್ದು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಈ ನಾಲ್ವರನ್ನು ಚೆನ್ನೈ ಮೂಲಕ ಶ್ರೀಲಂಕಾದಿಂದ ಭಾರತಕ್ಕೆ ಕಳುಹಿಸಲಾಗಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುವ ಉದ್ದೇಶ ಇವರದ್ದಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉಗ್ರರು ಸೆರೆ ಸಿಕ್ಕಿದ್ದು ಹೇಗೆ?

ಚೆನ್ನೈ ಮೂಲಕ ದೇಶದೊಳಗೆ ಐಸಿಸ್‌ ಉಗ್ರರು ಲಗ್ಗೆ ಇಟ್ಟಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ATSಗೆ ಮಾಹಿತಿ ಸಿಕ್ಕಿತ್ತು. ಇದಾದ ಬಳಿಕ ATS ಎಲ್ಲಾ ರೈಲು, ವಿಮಾನ ಹಾಗೂ ರಸ್ತೆ ಮಾರ್ಗಗಳ ಮೇಲೆ ತೀವ್ರ ನಿಗಾ ಇರಿಸಿತ್ತು. ಚೆನ್ನೈನಿಂದ ಅಹಮದಾಬಾದ್‌ಗೆ ಇಂಡಿಗೋ 6E 848 ವಿಮಾನದಲ್ಲಿ ಬರುತ್ತಿರುವುದು ಖಚಿತಗೊಳ್ಳುತ್ತಿದ್ದಂತೆ ATS ಸಿಬ್ಬಂದಿ ಅಲರ್ಟ್‌ ಆಗಿದ್ದರು. ಅಹಮದಾಬಾದ್‌ನಲ್ಲಿ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ನಾಲ್ವರನ್ನೂ ಹೆಡೆಮುರಿಕಟ್ಟುವಲ್ಲಿ ATS ಯಶಸ್ವಿಯಾಯ್ತು. ನಾಲ್ವರನ್ನು ವಿಚಾರಣೆಗೊಳಪಡಿಸಿದಾಗ ಅಹಮದಾಬಾದ್‌ನ ಚೊಟ್ಟಾ ಚಿಲೋಡಾ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿರುವ ಬಗ್ಗೆ ಬಾಯ್ಬಿಟ್ಟಿದ್ದಾರೆ. ಇದೀಗ ಅವುಗಳನ್ನೂ ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈ ನಾಲ್ವರು ಭಾರತಕ್ಕೆ ತಲುಪಲು ಸಹಾಯ ಮಾಡಿದ್ದವರ ಬೆನ್ನು ಹತ್ತಿ ATS ಕಾರ್ಯಾಚರಣೆ ಶುರು ಮಾಡಿದೆ.

36 ಗಂಟೆಗಳ ಸುದೀರ್ಘ ಕಾರ್ಯಾಚರಣೆ

ಗುಜರಾತ್‌ ಡಿಜಿಪಿ ವಿಕಾಸ್‌ ಸಹಯ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಶ್ರೀಲಂಕಾ ಮೂಲದ ಉಗ್ರರು ಮೊಹಮ್ಮದ್‌ ನುಸ್ರತ್‌, ಮೊಹಮ್ಮದ್‌ ಫರಿಶ್‌, ಮೊಹಮ್ಮದ್‌ ನಸ್ರನ್‌ ಮತ್ತು ಮೊಹಮ್ಮದ್‌ ರಶೀದ್‌ ಐಸಿಸ್‌ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಇವರಿಗೆ ಮೇ 19ರಂದು ಭಾರತಕ್ಕೆ ತೆರಳಲು ಸೂಚನೆ ನೀಡಲಾಗಿದೆ ಎಂಬ ಬಗ್ಗೆ ATS ಡೆಪ್ಯೂಟಿ ಎಸ್‌ಪಿ ಹರ್ಷ್‌ ಉಪಾಧ್ಯಾಯ ಅವರಿಗೆ ಮಾಹಿತಿ ಲಭಿಸಿತ್ತು. ಹೀಗಾಗಿ ಕಾರ್ಯಪ್ರವೃತರಾಗಿದ್ದ ATSಅಧಿಕಾರಿಗಳು 36ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಡೆಸಿ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು

ಇನ್ನು ವಿಚಾರಣೆ ವೇಳೆ ಉಗ್ರರು ಸ್ಫೋಟಕ ವಿಚಾರವೊಂದನ್ನು ಬಾಯ್ಬಿಟ್ಟಿದ್ದಾರೆ. ಲೋಕಸಭಾ ಚುನಾವಣೆಯನ್ನೇ ಗುರಿಯನ್ನಾಗಿಸಿ ಭಾರತಕ್ಕೆ ಕಾಲಿಟ್ಟಿದ್ದ ಈ ಉಗ್ರರು ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದರು ಎನ್ನಲಾಗಿದೆ. ಈ ನಾಲ್ವರು ಕೊಲಂಬೋ ಮೂಲದವರಾಗಿದ್ದು, ತಮಿಳು ಮಾತನಾಡುತ್ತಾರೆ. ಅವರ ಬ್ಯಾಗ್‌ಗಳಿಂದ ಐಸಿಸ್‌ ಧ್ವಜ, ಮೊಬೈಲ್‌ ಫೋನ್‌ಗಳು, ಪಾಸ್‌ಪೋರ್ಟ್‌ಗಳನ್ನು ಎಟಿಎಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಈ ನಾಲ್ವರು ಪಾಕಿಸ್ತಾನ ಮೂಲದ ಅಬು ಜೊತೆ ಸಂಪರ್ಕ ಹೊಂದಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಇದನ್ನೂ ಓದಿ:MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Continue Reading
Advertisement
Prashant Kishor
Lok Sabha Election 20243 mins ago

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Cannes 2024 Sonam Kapoor dubs this outfit the best at Cannes this year
ಬಾಲಿವುಡ್22 mins ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ40 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್46 mins ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್48 mins ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ1 hour ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ1 hour ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Star Kids with Sanskrit Names From Yami Gautam to Priyanka Chopra
ಬಾಲಿವುಡ್1 hour ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Rohit Sharma
ಕ್ರೀಡೆ1 hour ago

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

corona virus wave in singapore
ಪ್ರಮುಖ ಸುದ್ದಿ2 hours ago

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌