Ayodhya Ram Mandir: ಅಯೋಧ್ಯೆಗೆ ಬಂತು ವಿಶೇಷ ಡೋಲು; ಏನಿದರ ವಿಶೇಷ? - Vistara News

ದೇಶ

Ayodhya Ram Mandir: ಅಯೋಧ್ಯೆಗೆ ಬಂತು ವಿಶೇಷ ಡೋಲು; ಏನಿದರ ವಿಶೇಷ?

Ayodhya Aam Aandir: ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಆರಂಭವಾಗಿದೆ. ಇದಕ್ಕಾಗಿ ಭರದ ಸಿದ್ಧತೆ ನಡೆಸಲಾಗುತ್ತಿದೆ. ರಾಮ ಮಂದಿರದಲ್ಲಿ ಅಳವಡಿಸಲು ಗುಜರಾತ್‌ನಿಂದ ತರಲಾದ ವಿಶೇಷ ಡೋಲು ಇದೀಗ ಗಮನ ಸೆಳೆಯುತ್ತಿದೆ.

VISTARANEWS.COM


on

pran prathishta
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರ (Ayodhya Aam Aandir) ಲೋಕಾರ್ಪಣೆ, ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೆ (Pran Pratishtha) ದಿನ ಗಣನೆ ಆರಂಭವಾಗಿದೆ. ಜನವರಿ 22ರಂದು ಈ ಐತಿಹಾಸಿಕ ಸಮಾರಂಭ ನಡೆಯಲಿದ್ದು, ಭರದ ಸಿದ್ದತೆ ನಡೆಯುತ್ತಿದೆ. ಇಗೀಗ ಸುಮಾರು 500 ಕೆ.ಜಿ. ಭಾರದ ‘ನಗಾಢ’ (Nagada-ಡೋಲು)ವನ್ನು ಗುಜರಾತ್‌ನಿಂದ ವಿಶೇಷ ರಥದ ಮೂಲಕ ಅಯೋಧ್ಯೆಗೆ ತರಲಾಗಿದೆ.

ಡೋಲಿನ ವೈಶಿಷ್ಟ್ಯ

ಈ ವಿಶೇಷ ಡೋಲನ್ನು ಗುಜರಾತ್‌ನ ಕರ್ಣಾವತಿಯ ದರಿಯಾಪುರ್‌ನಲ್ಲಿರುವ ದಬ್ಗರ್ ಸಮುದಾಯದವರು ಸಿದ್ಧಪಡಿಸಿದ್ದಾರೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ರಾಮ ಮಂದಿರದ ಆವರಣದಲ್ಲಿ ಇದನ್ನು ಅಳವಡಿಸಲಾಗುವುದು ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಮಳೆ ಮತ್ತು ಬಿಸಿಲಿನಿಂದ ಹಾನಿಗೊಳಗಾಗದಂತೆ ಈ ಡೋಲನ್ನು ತಯಾರಿಸಲಾಗಿದೆ. ಇದಕ್ಕೆ ಚಿನ್ನ ಮತ್ತು ಬೆಳ್ಳಿಯ ಕೋಟಿಂಗ್‌ ನೀಡಲಾಗಿದೆ. ಕಬ್ಬಿಣ ಮತ್ತು ತಾಮ್ರವನ್ನು ಬಳಿಸಿ ಮಾಡಲಾದ ಈ ಡೋಲಿನ ಶಬ್ದ ಮೈಲುಗಟ್ಟಲೆ ದೂರಕ್ಕೆ ಕೇಳಿಸಲಿದೆ. ಈ ಹಿಂದೆ ಗುಜರಾತ್‌ ವಿಶ್ವ ಹಿಂದೂ ಪರಿಷತ್‌ನ ನಾಯಕರು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಪತ್ರ ಬರೆದು ಈ ಡೋಲನ್ನು ಸ್ವೀಕರಿಸುವಂತೆ ಮನವಿ ಸಲ್ಲಿಸಿದ್ದರು.

ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಜನವರಿ 5ರಂದು ಈ 56 ಇಂಚಿನ ಬೃಹತ್‌ ಡೋಲು ಹೊತ್ತು ಸಾಗುವ ವಿಶೇಷ ರಥಕ್ಕೆ ಚಾಲನೆ ನೀಡಿದ್ದರು. ಈ ವಿಶೇಷ ‘ನಗಾಢ’ ಜತೆಗೆ ಗುಜರಾತ್‌ನ ಅಹಮದಾಬಾದ್‌ನಿಂದ 4,600 ಕೆ.ಜಿ. ತೂಕದ ಧ್ವಜ ದಂಡ್ (ಧ್ವಜ ಸ್ತಂಭ) ಸಹ ಜನವರಿ 8ರಂದು ಅಯೋಧ್ಯೆಗೆ ತಲುಪಿದೆ. ಈ ಹಿತ್ತಾಳೆ ಕಂಬವು 44 ಅಡಿ ಉದ್ದವಿದ್ದು, ಇದನ್ನು ದೇವಾಲಯದ ಮುಖ್ಯ ಗೋಪುರದಲ್ಲಿ ಸ್ಥಾಪಿಸಲಾಗುವುದು. ಇದಲ್ಲದೆ ಅಷ್ಟಧಾತು(ಎಂಟು ಲೋಹಗಳು)ವಿನಿಂದ ಮಾಡಿದ ವಿಶಿಷ್ಟ ದೇವಾಲಯದ ಗಂಟೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಿಂದ ಅಯೋಧ್ಯೆಗೆ ಆಗಮಿಸಿದೆ. ಈ ಗಂಟೆ ಸುಮಾರು 2,400 ಕೆ.ಜಿ ತೂಕವಿದೆ. ಸುಮಾರು 30 ಕಾರ್ಮಿಕರ ತಂಡವು ಇದನ್ನು ತಯಾರಿಸಿದೆ.

108 ಅಡಿ ಉದ್ದದ ಅಗರಬತ್ತಿ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ದೈವಿಕ ಪರಿಮಳವನ್ನು ತುಂಬಲು ಗುಜರಾತ್‌ನ ವಡೋದರಾದಲ್ಲಿ ತಯಾರಿಸಲಾದ ಬರೋಬ್ಬರಿ 108 ಅಡಿ ಉದ್ದದ ಅಗರಬತ್ತಿ ಈಗಾಗಲೇ ಉತ್ತರಪ್ರದೇಶ ತಲುಪಿದೆ. ಇದು 3,610 ಕಿಲೋಗ್ರಾಂ ತೂಕವಿದೆ. ವಡೋದರಾದ ತರ್ಸಾಲಿ ಪ್ರದೇಶದ ನಿವಾಸಿ ವಿಹಾಭಾಯ್ ಭರ್ವಾಡ್ (Vihabhai Bharwad) ಏಕಾಂಗಿಯಾಗಿ ಆರು ತಿಂಗಳಿನಿಂದ ತಮ್ಮ ಮನೆಯ ಹೊರಗೆ ಈ ಅಗರಬತ್ತಿಯನ್ನು ತಯಾರಿಸಿದ್ದಾರೆ. ಸಾವಯವ ವಸ್ತುಗಳನ್ನು ಬಳಸಿ ಈ 108 ಅಡಿ ಉದ್ದದ ಅಗರಬತ್ತಿ ತಯಾರಿಸಿರುವುದು ವಿಶೇಷ. ಇದಕ್ಕಾಗಿ 3,000 ಕೆಜಿ ಗಿರ್ ಹಸುವಿನ ಸೆಗಣಿ, 91 ಕೆಜಿ ಗಿರ್ ಹಸುವಿನ ತುಪ್ಪ, 280 ಕೆಜಿ ದೇವದಾರ್ ಮರದ ಭಾಗ, 370 ಕೆಜಿ ಕೊಬ್ಬರಿ ಪುಡಿ ಮತ್ತಿತರ ವಸ್ತುಗಳನ್ನು ಬಳಸಲಾಗಿದೆ. ಒಮ್ಮೆ ಈ ಅಗರಬತ್ತಿಯನ್ನು ಬೆಳಗಿದರೆ ಅದು ನಿರಂತರ 45 ದಿನಗಳವರೆಗೆ ಉರಿಯುತ್ತಲೇ ಇರಲಿದೆ.

ತಯಾರಾಗಲಿದೆ 45 ಟನ್‌ ಲಡ್ಡು

ಇದಲ್ಲದೆ ಪ್ರಾಣ ಪ್ರತಿಷ್ಠೆ ದಿನದಂದು ಗಣ್ಯರು ಮತ್ತು ಭಕ್ತರಿಗೆ ಪ್ರಸಾದ ಹಂಚಲೂ ಸಿದ್ಧತೆ ನಡೆಲಾಗಿದೆ. ಪ್ರಸಾದ ತಯಾರಿಸಲು ವಾರಾಣಸಿ ಮತ್ತು ಗುಜರಾತ್‌ನ ಬಾಣಸಿಗರ ಗುಂಪು ಅಯೋಧ್ಯೆಗೆ ಆಗಮಿಸಿದೆ. ಇವರು ಶುದ್ಧ ದೇಸಿ ತುಪ್ಪದಿಂದ 45 ಟನ್ ಲಡ್ಡುಗಳನ್ನು ತಯಾರಿಸಲಿದ್ದಾರೆ. ಇದನ್ನು ಸಮಾರಂಭದಲ್ಲಿ ಭಗವಾನ್ ರಾಮನಿಗೆ ಅರ್ಪಿಸಿ ಬಳಿಕ ಪ್ರಸಾದದ ರೂಪದಲ್ಲಿ ಹಂಚಲಾಗುತ್ತದೆ. ಒಂದು ಹನಿಯೂ ನೀರು ಉಪಯೋಗಿಸದೆ ಈ ಲಾಡು ತಯಾರಿಸಲಾಗುತ್ತಿದ್ದು, ಇದು ಸುಮಾರು 6 ತಿಂಗಳು ಕೆಡುವುದಿಲ್ಲ ಎನ್ನಲಾಗಿದೆ. ಈಗ ಪ್ರತಿ ದಿನ ಸುಮಾರು 1,200 ಕೆ.ಜಿ. ಲಾಡು ತಯಾರಿಸಲು ಆರಂಭಿಸಲಾಗಿದೆ.

ನ್ಯೂಯಾರ್ಕ್‌ನಲ್ಲಿ ಲೈವ್‌ ಟೆಲಿಕಾಸ್ಟ್‌

ರಾಮಮಂದಿರದ ಉದ್ಘಾಟನೆಯ ಕಾರ್ಯಕ್ರಮವನ್ನು ದೇಶಾದ್ಯಂತ ಬೂತ್‌ ಮಟ್ಟದಲ್ಲೂ ಲೈವ್‌ ಟೆಲಿಕಾಸ್ಟ್‌ಗೆ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಲೈವ್‌ ಟೆಲಿಕಾಸ್ಟ್‌ ಇರಲಿದೆ ಎಂದು ತಿಳಿದುಬಂದಿದೆ. ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಪ್ರತಿಷ್ಠಿತ ಟೈಮ್ಸ್‌ ಸ್ಕ್ವೇರ್‌ನಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಲೈವ್‌ ಟೆಲಿಕಾಸ್ಟ್‌ ಆಗಲಿದೆ. ಬೃಹತ್‌ ಪರದೆಯ ಮೇಲೆ ರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮವನ್ನು ಅಮೆರಿಕದಲ್ಲಿ ನೆಲೆಸಿರುವ ರಾಮನ ಭಕ್ತರು ಕಣ್ತುಂಬಿಕೊಳ್ಳಲಿದ್ದಾರೆ. ಪ್ರಾಣ ಪ್ರತಿಷ್ಠಾಪನೆ ಬಳಿಕ ನರೇಂದ್ರ ಮೋದಿ ಮಾತನಾಡಲಿದ್ದು, ಇದರ ನೇರ ಪ್ರಸಾರಕ್ಕೂ ವ್ಯವಸ್ಥೆ ಮಾಡಲಾಗಿದೆ. 

ಇದನ್ನೂ ಓದಿ: Ayodhya Ram Mandir: ನಮ್ಮ ಮತ್ತು ಶಂಕರಾಚಾರ್ಯರ ನಡುವೆ ಭಿನ್ನಮತವಿಲ್ಲ ಎಂದ ವಿಹಿಂಪ

ಕಾಂಗ್ರೆಸ್‌ ವಿರುದ್ಧ ಬಿಜೆಪಿ ಟೀಕೆ

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್‌ ತಿಳಿಸಿದ್ದು, ಬಿಜೆಪಿ ಈ ನಡೆಯನ್ನು ತೀವ್ರವಾಗಿ ಟೀಕಿಸಿದೆ. ಬಿಜೆಪಿ ರಾಮ ಮಂದಿರವನ್ನು ರಾಜಕೀಯವಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಇತ್ತ ಕಮಲ ಪಡೆ ವಾಗ್ದಾಳಿ ನಡೆಸಿ, ಕಾಂಗ್ರೆಸ್‌ನ ಹಿಂದೂ ವಿರೋಧಿ ನಿಲುವು ಈ ಮೂಲಕ ಮತ್ತೊಮ್ಮೆ ಪ್ರಕಟಕೊಂಡಿದೆ ಎಂದು ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

NIA Arrest: ಸಯ್ಯದ್‌ ಸಲೀಂ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಲ್ಲಿ ಈತನ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ನಾರ್ಕೋ ಭಯೋತ್ಪಾದನೆ ನಿಗ್ರಹಿಸುವಲ್ಲಿ ಪಣತೊಟ್ಟಿರುವ ಎನ್‌ಐಎಗೆ ಇದು ಬಹುದೊಡ್ಡ ಮಟ್ಟದ ಯಶಸ್ಸು ಎಂದು ಹೇಳಲಾಗಿದೆ. ಈತ ಗಡಿ ಭಾಗದಲ್ಲಿ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

VISTARANEWS.COM


on

NIA Arrest
Koo

ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಲಷ್ಕರ್‌ ಎ ತೊಯ್ಬಾ (LeT) ಮತ್ತು ಹಿಜ್ಬುಲ್‌ ಮುಜಾಹಿದ್ದೀನ್‌(HM) ಸಂಘಟನೆ ಜೊತೆಗೆ ನಂಟು ಹೊಂದಿದ್ದ ಪ್ರಮುಖ ಆರೋಪಿಯನ್ನು ಎನ್‌ಐಎ(NIA Arrest) ಅರೆಸ್ಟ್‌ ಮಾಡಿದೆ. ನಾರ್ಕೋ-ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಯ್ಯದ್‌ ಸಲೀಂ ಜಹಾಂಗೀರ್‌ ಅಂದ್ರಾಬಿ ಅಲಿಯಾಸ್‌ ಸಲೀಂ ಅಂದ್ರಾಬಿ ಕಳೆದ ನಾಲ್ಕೈದು ವರ್ಷಗಳಿಂದ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಸಯ್ಯದ್‌ ಸಲೀಂ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಲ್ಲಿ ಈತನ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ನಾರ್ಕೋ ಭಯೋತ್ಪಾದನೆ ನಿಗ್ರಹಿಸುವಲ್ಲಿ ಪಣತೊಟ್ಟಿರುವ ಎನ್‌ಐಎಗೆ ಇದು ಬಹುದೊಡ್ಡ ಮಟ್ಟದ ಯಶಸ್ಸು ಎಂದು ಹೇಳಲಾಗಿದೆ. ಈತ ಗಡಿ ಭಾಗದಲ್ಲಿ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಗ್ರೇಟರ್ ಕಾಶ್ಮೀರ ವೆಬ್‌ಸೈಟ್‌ನ ಪ್ರಕಾರ, ಜೂನ್ 26, 2020 ರಂದು ಸ್ಥಳೀಯ ಪೊಲೀಸರಿಂದ ಪ್ರಕರಣದ ತನಿಖೆಯನ್ನು ಕೇಂದ್ರೀಯ ಸಂಸ್ಥೆ ವಹಿಸಿಕೊಂಡಿತ್ತು. ಎನ್‌ಐಎ ತನ್ನ ತನಿಖೆಯ ಸಮಯದಲ್ಲಿ, ಭಾನುವಾರ ಬಂಧಿತ ಆರೋಪಿ ಅಂದ್ರಾಬಿ ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಇತರ ಭಾಗಗಳಲ್ಲಿ ಮಾದಕ ದ್ರವ್ಯಗಳನ್ನು ಸಂಗ್ರಹಿಸಲು ಮತ್ತು ಮಾರಾಟ ಮಾಡುವ ಜಾಲದಲ್ಲಿ ಭಾಗಿಯಾಗಿದ್ದ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಮೋಮಿನ್ ಪೀರ್ ಎಂಬಾತನನ್ನು ಬಂಧಿಸಿದ ಹಂದ್ವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆತನನ್ನು ಬಂಧಿಸಿದ ಪೊಲೀಸರು ₹20 ಲಕ್ಷ ನಗದು ಹಾಗೂ 2 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ, NIA ಪ್ರಕರಣದಲ್ಲಿ ಒಟ್ಟು 15 ಆರೋಪಿಗಳನ್ನು ಚಾರ್ಜ್ ಶೀಟ್ ಮಾಡಿದೆ. ಈ ಚಾರ್ಜ್ ಶೀಟ್‌ಗಳನ್ನು ಡಿಸೆಂಬರ್ 2020 ಮತ್ತು ಫೆಬ್ರವರಿ 2023 ರ ನಡುವೆ ಸಲ್ಲಿಸಲಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಕೇರಳದಲ್ಲಿ ಉಗ್ರ ಸಂಘಟನೆಗಳಿಗೆ ಯುವಕರನ್ನು ನೇಮಕಾತಿ ಮಾಡುತ್ತಿದ್ದ ಆರೋಪದಲ್ಲಿ ಕುಖ್ಯಾತ ಮಾವೋವಾದಿ ಸಂಜಯ್‌ ದೀಪಕ್‌ ರಾವ್‌(Sanjay Deepak Rao) ವಿರುದ್ಧ ಎನ್‌ಐಎ(NIA Charge sheet) ಚಾರ್ಜ್‌ ಶೀಟ್‌ ದಾಖಲಿಸಿತ್ತು.. ಸಿಪಿಐ (ಮಾವೋವಾದಿ)ಯ ಪಶ್ಚಿಮ ಘಟ್ಟಗಳ ವಿಶೇಷ ವಲಯ ಸಮಿತಿಯ (ಡಬ್ಲ್ಯುಜಿಎಸ್‌ಝಡ್‌ಸಿ) ಕೇಂದ್ರ ಸಮಿತಿ ಸದಸ್ಯ ಸಂಜಯ್ ದೀಪಕ್ ರಾವ್ ವಿರುದ್ಧ ಎನ್‌ಐಎ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಐಪಿಸಿ ಮತ್ತು ಯುಎ (ಪಿ) ಕಾಯ್ದೆ ಯುಎಪಿಎಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಎರ್ನಾಕುಲಂನ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಎನ್‌ಐಎ ಈ ಚಾರ್ಜ್‌ಶೀಟ್‌ ದಾಖಲಿಸಿದೆ.

ಸಿಪಿಐ (ಮಾವೋವಾದಿ) ಪಶ್ಚಿಮ ಘಟ್ಟದ ​​ವಿಶೇಷ ವಲಯ ಸಮಿತಿಯ (ಡಬ್ಲ್ಯುಜಿಎಸ್‌ಝಡ್‌ಸಿ) ಕೇಂದ್ರ ಸಮಿತಿ ಸದಸ್ಯ ಸಂಜಯ್ ದೀಪಕ್ ರಾವ್ ಅಲಿಯಾಸ್‌ ವಿಕಾಸ್, ಸಿಪಿಐನ ಮುಂಚೂಣಿ ಸಂಘಟನೆಯಾದ ಕ್ರಾಂತಿಕಾರಿ ಲೇಖಕಿಯರ ಸಂಘದ ಸದಸ್ಯರಾದ ಪಿನಾಕಾ ಪಾಣಿ ಅಲಿಯಾಸ್‌ ಪಾಣಿ ಮತ್ತು ವರಲಕ್ಷ್ಮಿ ಆರೋಪಿಗಳು ಎಂದು ತನಿಖೆಯಿಂದ ತಿಳಿದುಬಂದಿದೆ. ಆಂಧ್ರಪ್ರದೇಶದಲ್ಲಿ (ಮಾವೋವಾದಿ), ವಯನಾಡಿನ ಶ್ರೀಕಾಂತ್ ಮತ್ತು ಆಂಧ್ರಪ್ರದೇಶದ ಆಂಜನೇಯಲು ಅಕಾ ಸುಧಾಕರ್ ಮುಂತಾದವರು ಚೈತನ್ಯ ಅಕಾ ಸೂರ್ಯನನ್ನು ನಿಷೇಧಿತ ಭಯೋತ್ಪಾದಕ ಸಂಘಟನೆ ಸಿಪಿಐ (ಮಾವೋವಾದಿ)ಗೆ ಸೇರ್ಪಡೆಗೊಳ್ಳಲು ಪ್ರೇರೇಪಿಸಿದ್ದಾರೆ ಎಂಬುದನ್ನು ಎನ್‌ಐಎ ಹೇಳಿದೆ. ನೇಮಕಾತಿಯ ನಂತರ, ಭಾರತದ ಒಕ್ಕೂಟದ ಭದ್ರತೆ, ಏಕತೆ, ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ಆತನಿಗೆ ತರಬೇತಿ ನೀಡಲಾಯಿತು.

ಇದನ್ನೂ ಓದಿ:Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Continue Reading

ದೇಶ

Mobile Tariffs: ಜಿಯೋ, ಏರ್‌ಟೆಲ್‌, VI ರಿಚಾರ್ಜ್‌ ಶುಲ್ಕ ಕಡಿಮೆ ಮಾಡಲಿದ್ದಾರಾ ಮೋದಿ? ಇಲ್ಲಿದೆ ಕೇಂದ್ರದ ಸ್ಪಷ್ಟನೆ

Mobile Tariffs: ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ. ಈಗ ರಿಲಯನ್ಸ್‌ ಜಿಯೋ ಪ್ಲಾನ್‌ಗಳ ಬೆಲೆಯನ್ನು ಶೇ.20ರಷ್ಟು ಏರಿಕೆ ಮಾಡಿದ್ದು, ಕೋಟ್ಯಂತರ ಗ್ರಾಹಕರಿಗೆ ಹೊರೆಯಾಗುತ್ತಿದೆ. ಏರ್‌ಟೆಲ್‌, ವೋಡಾಫೋನ್-ಐಡಿಯಾ ಸಂಸ್ಥೆಗಳು ಕೂಡ ಬೆಲೆಯೇರಿಕೆ ಮಾಡಿವೆ.

VISTARANEWS.COM


on

Mobile Tariffs
Koo

ನವದೆಹಲಿ: ದೇಶದ ಟೆಲಿಕಾಂ ಕಂಪನಿಗಳು ಕಳೆದ ಕೆಲ ದಿನಗಳಿಂದ ಗ್ರಾಹಕರಿಗೆ ಬೆಲೆಯೇರಿಕೆಯ ಬಿಸಿ ಮುಟ್ಟಿಸಿವೆ. ರಿಲಯನ್ಸ್‌ ಜಿಯೋ (Reliance Jio) ಹಾಗೂ ಏರ್‌ಟೆಲ್‌ (Airtel) ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿದ ಬೆನ್ನಲ್ಲೇ ವೋಡಾಫೋನ್‌ ಐಡಿಯಾ (Vodafone Idea) ಸಂಸ್ಥೆಯೂ ಬೆಲೆಯೇರಿಕೆ ಮಾಡಿದೆ. ಹಾಗಾಗಿ, ಕೇಂದ್ರ ಸರ್ಕಾರವು (Central Government) ಮಧ್ಯಪ್ರವೇಶಿಸಿ, ರಿಚಾರ್ಜ್‌ ಶುಲ್ಕವನ್ನು ಕಡಿಮೆ ಮಾಡಬೇಕು ಎಂಬ ಆಗ್ರಹ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಮಹತ್ವದ ಸ್ಪಷ್ಟನೆ ನೀಡಿದೆ. ಯಾವುದೇ ಕಾರಣಕ್ಕೂ ಖಾಸಗಿ ಟೆಲಿಕಾಂ ಕಂಪನಿಗಳ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿದೆ.

“ಖಾಸಗಿ ಕಂಪನಿಗಳ ಬೆಲೆಯೇರಿಕೆ ವಿಷಯದಲ್ಲಿ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಲು ಆಗುವುದಿಲ್ಲ. ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ (TRAI) ನಿಯಮಗಳ ಅನ್ವಯವೇ ಖಾಸಗಿ ಟೆಲಿಕಾಂ ಕಂಪನಿಗಳು ಬೆಲೆಯೇರಿಕೆ ಸೇರಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ. ಹಾಗಾಗಿ, ಇಂತಹ ವಿಷಯದಲ್ಲಿ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಲು ಆಗುವುದಿಲ್ಲ” ಎಂದು ಕೇಂದ್ರ ಸರ್ಕಾರವು ಪ್ರಕಟಣೆ ತಿಳಿಸಿದೆ. ಮೂರೂ ಟೆಲಿಕಾಂ ಕಂಪನಿಗಳು ಬೆಲೆಯೇರಿಕೆ ಮಾಡಿದ ಕಾರಣ ಸರ್ಕಾರವು ಬೆಲೆ ಇಳಿಸಬೇಕು ಎಂಬುದಾಗಿ ಜನ ಆಗ್ರಹಿಸಿದ್ದರು.

ತಿಂಗಳ ಪ್ಲಾನ್‌ಗೆ ಇಷ್ಟಾಗಲಿದೆ ಹೊರೆ

28 ದಿನಗಳವರೆಗೆ 2 ಜಿಬಿ ಡೇಟಾ (ಪ್ರತಿದಿನ ಅಲ್ಲ), ಅನ್‌ಲಿಮಿಟೆಡ್‌ ಕರೆಗಳು ಇರುವ 155 ಪ್ಲಾನ್‌ಗೆ ಇನ್ನು 189 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ಪ್ರತಿದಿನ 1 ಜಿಬಿ ಇಂಟರ್‌ನೆಟ್‌ ಪ್ಲಾನ್‌ಗೆ 28 ದಿನಗಳಿಗೆ 209 ರೂ. ಬದಲು 249 ರೂ., ನಿತ್ಯ 1.5 ಜಿಬಿ ಪ್ಲಾನ್‌ಗೆ 239 ರೂ. ಬದಲು 299 ರೂ., 2 ಜಿಬಿ ಪ್ಲಾನ್‌ಗೆ 299 ರೂ. ಬದಲು 349 ರೂ., 2.5 ಜಿಬಿಗೆ 349 ರೂ. ಬದಲು 399 ರೂ., 3 ಜಿಬಿಗೆ 399 ರೂ. ಬದಲು 449 ರೂ. ಪಾವತಿಸಬೇಕಾಗುತ್ತದೆ.

2 ಹಾಗೂ 3 ತಿಂಗಳ ಪ್ಲಾನ್‌

ಎರಡು ಹಾಗೂ ಮೂರು ತಿಂಗಳ ಪ್ಲಾನ್‌ಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಪ್ರತಿ ದಿನ 1.5 ಜಿಬಿ ಇಂಟರ್‌ನೆಟ್‌, ಅನ್‌ಲಿಮಿಟೆಡ್‌ ಕರೆಗಳಿಗೆ ಇನ್ನು 479 ರೂ. ಬದಲು 579 ರೂ., 2 ಜಿಬಿಗೆ 533 ರೂ. ಬದಲು 629, 3 ತಿಂಗಳು ಅನ್‌ಲಿಮಿಟೆಡ್‌ ಕರೆ, 6 ಜಿಬಿ ಇಂಟರ್‌ನೆಟ್‌ (ಪ್ರತಿದಿನ ಅಲ್ಲ) ಪ್ಲಾನ್‌ಗೆ 395 ರೂ. ಬದಲಾಗಿ 479 ರೂ. ಪಾವತಿಸಬೇಕಾಗುತ್ತದೆ. ಮೂರು ತಿಂಗಳು ಪ್ರತಿ ದಿನ 1.5 ಜಿಬಿ ಅಂತರ್ಜಾಲ, ಅನ್‌ಲಿಮಿಟೆಡ್‌ ಕಾಲ್ಸ್‌ ಪ್ಲಾನ್‌ಗೆ 666 ರೂ. ಬದಲಾಗಿ 799 ರೂ. 2 ಜಿಬಿಗೆ 719 ರೂ. ಬದಲು 859 ರೂ., 3 ಜಿಬಿಗೆ 999 ರೂ. ಬದಲಾಗಿ 1,199 ರೂ. ತೆರಬೇಕಾಗಿದೆ.

ವಾರ್ಷಿಕ ಹಾಗೂ ಡೇಟಾ ಆ್ಯಡ್‌ ಆನ್‌ಗೆ ಎಷ್ಟು ಏರಿಕೆ

336 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು, 24 ಜಿಬಿ ಡೇಟಾ (ಪ್ರತಿದಿನ ಅಲ್ಲ) ಪ್ಲಾನ್‌ಗೆ 1,559 ರೂ. ಬದಲು 1,899 ರೂ., ಒಂದು ವರ್ಷಕ್ಕೆ ನಿತ್ಯ 2.5 ಜಿಬಿ ಪ್ಲಾನ್‌ಗೆ 2,999 ರೂ. ಬದಲು 3,599 ರೂ. ಪಾವತಿಸಬೇಕಾಗುತ್ತದೆ. ಡೇಟಾ ಆ್ಯಡ್‌ ಆನ್‌ ಪ್ಲಾನ್‌ಗಳನ್ನೂ ಬಿಟ್ಟಿಲ್ಲ. 1 ಜಿಬಿ ಡೇಟಾಗೆ 15 ರೂ.ನಿಂದ 19 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು 2 ಜಿಬಿ ಡೇಟಾಗೆ 25 ರೂ.ನಿಂದ 29 ರೂ., 6 ಜಿಬಿ ಡೇಟಾಗೆ 61 ರೂ.ನಿಂದ 69 ರೂ.ಗೆ ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ.

ಏರ್‌ಟೆಲ್‌ ಮೊಬೈಲ್‌ ರಿಚಾರ್ಜ್‌ ದರಪಟ್ಟಿ ಇಲ್ಲಿದೆ

ಡೇಟಾ
ಅವಧಿ ಹಿಂದಿನ ದರ ಹೊಸ ದರ
ವಾಯಿಸ್‌ ಕಾಲ್‌ ಪ್ಲಾನ್‌
2 GB
28179199
8 GB 84455509
ಡೈಲಿ ಡೇಟಾ ಪ್ಲಾನ್‌
1.5 ಜಿಬಿ28299349
2.5 ಜಿಬಿ, 28, 359, 409
3 ಜಿಬಿ, 28, 399, 449
Add- On ಪ್ಲಾನ್‌
111922
212933

ವೋಡಾಫೋನ್-ಐಡಿಯಾ ಬೆಲೆ ಇಷ್ಟಿದೆ

ಜುಲೈ 4ರಿಂದ ವೋಡಾಫೋನ್‌ ಐಡಿಯಾ ಶುಲ್ಕಗಳನ್ನು ಶೇ. 10ರಷ್ಟು ಹಾಗೂ ಶೇ.23ರಷ್ಟು ಏರಿಕೆ ಮಾಡಿದೆ. 28 ದಿನಗಳ ಪ್ಲಾನ್‌ಗೆ 179 ರೂ. ಬದಲಾಗಿ 199 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, 84 ದಿನಗಳವರೆಗೆ 1.5 ಜಿಬಿ ಪ್ಲಾನ್‌ಗೆ 719ರ ಬದಲಾಗಿ 859 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ವಾರ್ಷಿಕ ಯೋಜನೆಯ ಮೊತ್ತವನ್ನು 2,899 ರೂ.ನಿಂದ 3,499 ರೂ.ಗೆ ಏರಿಕೆ ಮಾಡಿದೆ. ಆದರೆ, 365 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು ಹಾಗೂ 24 ಜಿಬಿ (ಪ್ರತಿದಿನ ಅಲ್ಲ) ಇಂಟರ್‌ನೆಟ್‌ ಪ್ಲಾನ್‌ ಬೆಲೆಯೇರಿಕೆ ಮಾಡಿಲ್ಲ. ಅದು ಮೊದಲಿನಂತೆ ಶೇ.1,799 ರೂ. ಇರಲಿದೆ.

ಇದನ್ನೂ ಓದಿ: Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Continue Reading

ದೇಶ

Puri Jagannath Yatra: ಪುರಿ ಜಗನ್ನಾಥನ ಅದ್ದೂರಿ ರಥಯಾತ್ರೆ; ರಾಷ್ಟ್ರಪತಿ ಮುರ್ಮು ಉಪಸ್ಥಿತಿ

Puri Jagannath Yatra: ಪ್ರಸಿದ್ಧ ಜಗನ್ನಾಥ ದೇಗುಲದ ವಾರ್ಷಿಕ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದು,, ಅವರು ಲಕ್ಷಾಂತರ ಭಕ್ತರೊಂದಿಗೆ ಈ ರಥಯಾತ್ರೆಯನ್ನು ವೀಕ್ಷಿಸಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಶೇಷ ವ್ಯವಸ್ಥೆ ಮಾಡಿದ್ದು, ಸಾಮಾನ್ಯವಾಗಿ ಒಂದೇ ದಿನದಲ್ಲಿ ನಡೆಯುವ ಯಾತ್ರೆಯನ್ನು ಸುಗಮವಾಗಿ ನಡೆಸಲು ಒಡಿಶಾ ಸರ್ಕಾರ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Puri Jagannath Yatra
Koo

ಭುವನೇಶ್ವರ: ಜಗತ್ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಎರಡು ದಿನ ವಾರ್ಷಿಕ ರಥಯಾತ್ರೆ (Puri Jagannath Yatra) ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಬರೋಬ್ಬರಿ 53 ವರ್ಷಗಳ ನಂತರ ಜಗತ್ಪ್ರಸಿದ್ಧ ಜಗನ್ನಾಥನ ವಾರ್ಷಿಕ ರಥಯಾತ್ರೆ ನಡೆಯುತ್ತಿದೆ.

ಇನ್ನು ಪ್ರಸಿದ್ಧ ಜಗನ್ನಾಥ ದೇಗುಲದ ವಾರ್ಷಿಕ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದು,, ಅವರು ಲಕ್ಷಾಂತರ ಭಕ್ತರೊಂದಿಗೆ ಈ ರಥಯಾತ್ರೆಯನ್ನು ವೀಕ್ಷಿಸಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಶೇಷ ವ್ಯವಸ್ಥೆ ಮಾಡಿದ್ದು, ಸಾಮಾನ್ಯವಾಗಿ ಒಂದೇ ದಿನದಲ್ಲಿ ನಡೆಯುವ ಯಾತ್ರೆಯನ್ನು ಸುಗಮವಾಗಿ ನಡೆಸಲು ಒಡಿಶಾ ಸರ್ಕಾರ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಗನ್ನಾಥ ದೇವಾಲಯದ ಮೂರು ದೇವರುಗಳಾದ ಜಗನ್ನಾಥ, ಬಲರಾಮ್ ಮತ್ತು ಸುಭದ್ರಾ ಮೂರು ವಿಭಿನ್ನ ರಥಗಳಲ್ಲಿ ಸವಾರಿ ಮಾಡುತ್ತಾರೆ. ಈ ಕಾರಣಕ್ಕಾಗಿ ರಥಯಾತ್ರೆಯನ್ನು ರಥೋತ್ಸವ ಎಂದು ಕರೆಯುತ್ತಾರೆ. ಅವರ ವಿಭಿನ್ನ ರಥಗಳನ್ನು ನಂದಿಘೋಷ, ತಾಳಧ್ವಜ ಮತ್ತು ದೇವದಳನ ಎಂದು ಕರೆಯಲಾಗುತ್ತದೆ. ಭಗವಾನ್ ಜಗನ್ನಾಥನ ನಂದಿಘೋಷ ರಥವು ಹದಿನೆಂಟು ಚಕ್ರಗಳನ್ನು ಹೊಂದಿದೆ. ಭಗವಾನ್ ಬಲರಾಮನ ತಾಳಧ್ವಜ ರಥವು ಹದಿನಾರು ಚಕ್ರಗಳನ್ನು ಹೊಂದಿದೆ ಮತ್ತು ಸುಭದ್ರೆಯ ಪದ್ಮಧ್ವಜ ರಥವು ಹದಿನಾಲ್ಕು ಚಕ್ರಗಳನ್ನು ಹೊಂದಿದೆ.

ಗ್ರಹಗಳು ಮತ್ತು ನಕ್ಷತ್ರಪುಂಜಗಳ ಲೆಕ್ಕಾಚಾರದ ಪ್ರಕಾರ, ಈ ವರ್ಷ ಎರಡು ದಿನಗಳ ರಥಯಾತ್ರೆಗಳನ್ನು ಆಯೋಜಿಸಲಾಗಿದೆ ಎಂದು ತಜ್ಞರು ಹೇಳುತ್ತಾರೆ, ಆದರೆ ಈ ಹಿಂದೆ 1971 ರಲ್ಲಿ ಎರಡು ದಿನಗಳ ರಥಯಾತ್ರೆಯನ್ನು ಆಯೋಜಿಸಲಾಗಿತ್ತು. ಸಂಪ್ರದಾಯಕ್ಕೆ ಹೊರತಾಗಿ, ಮೂರು ಸಹೋದರ-ಸಹೋದರಿ ದೇವತೆಗಳಾದ ಭಗವಾನ್ ಶ್ರೀಕೃಷ್ಣ, ದೇವಿ ಸುಭದ್ರ ಮತ್ತು ಭಗವಾನ್ ಬಲಭದ್ರ ದೇವರಿಗೆ ಸಹ ಇಂದು ಭಾನುವಾರದಂದು ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಗಿದೆ.

ಇದನ್ನೂ ಓದಿ: Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Continue Reading

ದೇಶ

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Mahua Moitra: ಮಹುವಾ ಮೊಯಿತ್ರಾ ಅವರ ಪೋಸ್ಟ್‌ ವೈರಲ್‌ ಆಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಎಂಸಿ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ದೆಹಲಿ ಪೊಲೀಸರಿಗೆ ಸೂಚಿಸಲಾಗಿತ್ತು.

VISTARANEWS.COM


on

Mahua Moitra
Koo

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (NCW Chief) ಅಧ್ಯಕ್ಷೆ ರೇಖಾ ಶರ್ಮಾ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಜುಲೈ 1ರಂದು ಜಾರಿಗೆ ಬಂದ ಹೊಸ ಕಾನೂನುಗಳ ಪೈಕಿ ಒಂದಾದ ಭಾರತೀಯ ನ್ಯಾಯ ಸಂಹಿತೆ (BNS) ಅನ್ವಯ ಮಹುವಾ ಮೊಯಿತ್ರಾ ಅವರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಮಹುವಾ ಮೊಯಿತ್ರಾ ಹೇಳಿದ್ದೇನು?

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 121 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ರೇಖಾ ಶರ್ಮಾ ಅವರು ಹತ್ರಾಸ್‌ಗೆ ಭೇಟಿ ನೀಡಿದ ವಿಡಿಯೊವನ್ನು ಮಹುವಾ ಮೊಯಿತ್ರಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, “ತಮ್ಮ ಬಾಸ್‌ನ ಪೈಜಾಮಾ ಹಿಡಿದುಕೊಳ್ಳುವುದರಲ್ಲಿಯೇ ಇವರು ನಿರತರಾಗಿದ್ದಾರೆ” ಎಂಬುದಾಗಿ ಟಿಎಂಸಿ ಸಂಸದೆ ಬರೆದುಕೊಂಡಿದ್ದರು.

ಮಹುವಾ ಮೊಯಿತ್ರಾ ಅವರ ಪೋಸ್ಟ್‌ ವೈರಲ್‌ ಆಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಎಂಸಿ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ದೆಹಲಿ ಪೊಲೀಸರಿಗೆ ಸೂಚಿಸಲಾಗಿತ್ತು. ಅಲ್ಲದೆ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೂ ರಾಷ್ಟ್ರೀಯ ಮಹಿಳಾ ಆಯೋಗವು ಪತ್ರ ಬರೆದು, ಮಹುವಾ ಮೊಯಿತ್ರಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಮನವಿ ಮಾಡಿತ್ತು. ಈಗ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ವಿವಾದಗಳಿಗೂ ಮಹುವಾ ಮೊಯಿತ್ರಾ ಅವರಿಗೂ ಎಲ್ಲಿಲ್ಲದ ನಂಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ಗುರಿಯಾಗಿಸಿಕೊಂಡು ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಬಿಜೆಪಿಯ ನಿಶಿಕಾಂತ್‌ ದುಬೆ ಆರೋಪ ಮಾಡಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಇದರ ಕುರಿತು ತನಿಖೆ ಕೂಡ ನಡೆಸಲಾಗಿತ್ತು. “ಉದ್ಯಮಿ ದರ್ಶನ್‌ ಹಿರಾನಂದನಿ ಅವರಿಗೆ ಸಂಸತ್‌ ಐಡಿ ಹಾಗೂ ಪಾಸ್‌ವರ್ಡ್‌ ಕೊಟ್ಟಿದ್ದು ನಿಜ. ಆದರೆ, ಹಣ ಪಡೆದು ಪ್ರಶ್ನೆ ಕೇಳುವ ದಿಸೆಯಲ್ಲಿ ಐಡಿ, ಪಾಸ್‌ವರ್ಡ್‌ ಕೊಟ್ಟಿಲ್ಲ” ಎಂಬುದಾಗಿ ಮಹುವಾ ಮೊಯಿತ್ರಾ ಅವರು ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading
Advertisement
NIA Arrest
ದೇಶ2 mins ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು4 mins ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Viral News
ವೈರಲ್ ನ್ಯೂಸ್30 mins ago

Viral News: ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ. ದಂಡ; ಕಂಡು ಹಿಡಿಯೋದು ಹೇಗೆ?

Bengaluru News Physical Abuse
ಬೆಂಗಳೂರು38 mins ago

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Dengue Cases
ಕರ್ನಾಟಕ46 mins ago

Dengue Cases: ರಾಜ್ಯದಲ್ಲಿ ಭಾನುವಾರ 159 ಮಂದಿಗೆ ಡೆಂಗ್ಯೂ ದೃಢ; ಬೆಂಗಳೂರಲ್ಲೇ ಅತಿ ಹೆಚ್ಚು!

Sonakshi Sinha
ಸಿನಿಮಾ56 mins ago

Sonakshi Sinha: ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ವದಂತಿಕೋರರಿಗೆ ನಟಿ ಸೋನಾಕ್ಷಿ ಪ್ರಶ್ನೆ!

Dengue Scare
ಬೆಂಗಳೂರು1 hour ago

Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

Press Club of Bangalore
ಬೆಂಗಳೂರು2 hours ago

Press Club of Bangalore: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರಾಗಿ ಆರ್. ಶ್ರೀಧರ್ ಮರು ಆಯ್ಕೆ; ನೂತನ ಪದಾಧಿಕಾರಿಗಳ ಪಟ್ಟಿ ಇಲ್ಲಿದೆ

Foods For Hormone Balance
ಆರೋಗ್ಯ2 hours ago

Foods For Hormone Balance: ಮಹಿಳೆಯರೇ, ಹಾರ್ಮೋನಿನ ಸಮತೋಲನಕ್ಕಾಗಿ ಈ ಆಹಾರಗಳನ್ನು ಮರೆಯದೇ ಸೇವಿಸಿ

ZIM vs IND
ಪ್ರಮುಖ ಸುದ್ದಿ2 hours ago

ZIM vs IND : ಭಾರತ ತಂಡಕ್ಕೆ 100 ರನ್​ ಭರ್ಜರಿ ಜಯ, ಜಿಂಬಾಬ್ವೆ ವಿರುದ್ಧ ಸರಣಿಯಲ್ಲಿ 1-1 ಸಮಬಲ ಸಾಧನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ4 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ5 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ15 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌