Koppala News: ಗಂಗಾವತಿಯಲ್ಲಿ ಸಿಂಗಾಪುರ ಮಾದರಿಯಲ್ಲಿ ರಸ್ತೆಗಳ ಅಭಿವೃದ್ಧಿ: ಶಾಸಕ ಜಿ. ಜನಾರ್ದನ ರೆಡ್ಡಿ - Vistara News

ಕೊಪ್ಪಳ

Koppala News: ಗಂಗಾವತಿಯಲ್ಲಿ ಸಿಂಗಾಪುರ ಮಾದರಿಯಲ್ಲಿ ರಸ್ತೆಗಳ ಅಭಿವೃದ್ಧಿ: ಶಾಸಕ ಜಿ. ಜನಾರ್ದನ ರೆಡ್ಡಿ

Koppala News: ಗಂಗಾವತಿ ನಗರದ ಇಂದಿರಾ ವೃತ್ತದಲ್ಲಿರುವ ರಿಲಯನ್ಸ್ ಪೆಟ್ರೋಲ್ ಬಂಕ್ ಮುಂದೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ನಿಗಮದಿಂದ ಮಂಜೂರಾದ 20 ಕೋಟಿ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ. ಜನಾರ್ದನ ರೆಡ್ಡಿ ಚಾಲನೆ ನೀಡಿದರು.

VISTARANEWS.COM


on

MLA G. Janardhana Reddy drives for road development work in Gangavathi
ಗಂಗಾವತಿ ನಗರದ ಇಂದಿರಾ ವೃತ್ತದಲ್ಲಿರುವ ರಿಲಯನ್ಸ್ ಪೆಟ್ರೋಲ್ ಬಂಕ್ ಮುಂದೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ. ಜನಾರ್ದನ ರೆಡ್ಡಿ ಚಾಲನೆ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಂಗಾವತಿ: ನಗರ ಸೇರಿದಂತೆ ಗಂಗಾವತಿ ವಿಧಾನಸಭಾ ಕ್ಷೇತ್ರವನ್ನು (Gangavathi Assembly Constituency) ಸಂಪೂರ್ಣ ಅಭಿವೃದ್ಧಿ ಪಡಿಸುವ ಯೋಜನೆ ರೂಪಿಸಲಾಗಿದ್ದು, ಇದರ ಮೊದಲ ಭಾಗವಾಗಿ ಗಂಗಾವತಿ ನಗರದ ರಸ್ತೆಗಳನ್ನು ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಹೇಳಿದರು.

ನಗರದ ಇಂದಿರಾ ವೃತ್ತದಲ್ಲಿರುವ ರಿಲಯನ್ಸ್ ಪೆಟ್ರೋಲ್ ಬಂಕ್ ಮುಂದೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ನಿಗಮದಿಂದ ಮಂಜೂರಾದ 20 ಕೋಟಿ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಬಳಿಕ ಅವರು ಮಾತನಾಡಿದರು.

ಇದನ್ನೂ ಓದಿ: Retail Inflation: 4 ತಿಂಗಳ ಗರಿಷ್ಠ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ! ಡಿಸೆಂಬರ್ ತಿಂಗಳಲ್ಲಿ ಶೇ.5.9ಕ್ಕೆ ಏರಿಕೆ

ನಗರದಲ್ಲಿ ಪ್ರಮುಖ 18 ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದೆ. ಇವುಗಳ ಅಭಿವೃದ್ಧಿಗಾಗಿ ಈಗಾಗಲೆ ನಗರಸಭೆಯಿಂದ ಐನ್ನೂರು ಕೋಟಿ ರೂಪಾಯಿ ಮೊತ್ತದ ಪ್ರಸ್ತಾವನೆ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದೆ. ಅಲ್ಲಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.

ಅನುದಾನ ಮಂಜೂರಾದ ಕೂಡಲೆ ಕಾಮಗಾರಿ ಹಂತಹಂತವಾಗಿ ಕೈಗೊಳ್ಳಲಾಗುವುದು. ಸದ್ಯಕ್ಕೆ 20 ಕೋಟಿ ರೂಪಾಯಿ ಮೊತ್ತದಲ್ಲಿ ನಗರದ ರಾಣಾ ಪ್ರತಾಪ್‌ಸಿಂಗ್ ವೃತ್ತದಿಂದ ಜುಲಾಯಿನಗರ, ಬೈಪಾಸ್, ಕನಕದಾಸ ವೃತ್ತದ ಮೂಲಕ ನೀಲಕಂಠೇಶ್ವರ ವೃತ್ತದವರೆಗೆ ರಸ್ತೆ ಅಭಿವೃದ್ಧಿ ಮಾಡಲಾಗುವುದು.

ಇದನ್ನೂ ಓದಿ: Communication Skill : ಬಿಸಿನೆಸ್‌ ಜಗತ್ತಿನಲ್ಲಿ ನೀವು ಎಂದಿಗೂ ಕೋಪಗೊಳ್ಳದಿರಿ

ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ ಬಳಿಕ, ಓಣಿ, ಒಳ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು. ವಾಹನಗಳ ದಟ್ಟಣೆ ತಪ್ಪಿಸುವ ಉದ್ದೇಶಕ್ಕೆ ನಗರಕ್ಕೆ ಬೈಪಾಸ್ ಮತ್ತು ರಿಂಗ್ ರೋಡ್ ನಿರ್ಮಾಣ ಮಾಡುವ ಯೋಜನೆಯಿದೆ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಪ್ಪಳ

Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಪಾದಯಾತ್ರೆಯನ್ನು ಕೈಗೊಂಡಿದ್ದ ಭಕ್ತರ ಮೇಲೆ ಹಿಂಬದಿಯಿಂದ ಬಂದ ಲಾರಿಯೊಂದು (Road Accident) ಹರಿದಿದೆ. ಪರಿಣಾಮ ಓರ್ವ ಭಕ್ತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Huligemma Temple Road Accident
Koo

ಕೊಪ್ಪಳ: ಹುಲಿಗೆಮ್ಮ ದೇವಿ ಜಾತ್ರೆ (Huligemma Temple) ನಿಮಿತ್ತ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಲಾರಿಯೊಂದು (Lorry Hit) ಹರಿದಿದೆ. ಪಾದಯಾತ್ರೆ ಹೊರಟಿದ್ದವರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ರಭಸಕ್ಕೆ ಓರ್ವ ಭಕ್ತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಕೊಪ್ಪಳ ತಾಲೂಕಿನ ಕೆರಳ್ಳಿ ಫ್ಲೈಓವರ್ ಬಳಿ ಘಟನೆ ನಡೆದಿದೆ. ಯಮನೂರಪ್ಪ ಸಣ್ಣಮನಿ (34) ಮೃತ ದುರ್ದೈವಿ. ಯಮನೂರಪ್ಪ ಬಾಗಲಕೋಟಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿ ಆಗಿದ್ದಾರೆ. ಯಮನೂರಪ್ಪ ಹಾಗೂ ಮಹಾಂತೇಶ್‌ ಹುಲಿಗೆಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ದೇವಸ್ಥಾನಕ್ಕೆ ಹೊರಟ್ಟಿದ್ದರು.

ಈ ವೇಳೆ ಹಿಂಬದಿಯಿಂದ ಬಂದ ಲಾರಿಯು ಪಾದಯಾತ್ರಿಗಳಿಗೆ ಡಿಕ್ಕಿ ಹೊಡೆದಿದೆ. ಯಮನೂರಪ್ಪ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟರೆ, ಮಹಾಂತೇಶ್‌ ಫ್ಲೈಓವರ್‌ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಬಿದ್ದ ರಭಸಕ್ಕೆ ಅವರ ಕಾಲಿನ ಪಾದವೇ ತುಂಡಾಗಿ ಬಿದ್ದಿತ್ತು. ಸದ್ಯ ಸಾವು- ಬದುಕಿನ ಮಧ್ಯೆ ಹೋರಾಡುತ್ತಿರುವ ಗಾಯಾಳು ಮಹಾಂತೇಶ್‌ನನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

ಬಿಸಿ ಗಾಳಿ ಶಾಖಕ್ಕೆ ತತ್ತರಿಸಿದ ಬಿಹಾರ; ಎರಡೇ ಗಂಟೆಗಳಲ್ಲಿ 16 ಮಂದಿ ಸಾವು

ಪಾಟ್ನಾ: ಬಿಹಾರ(Bihar)ದಲ್ಲಿ ಬಿಸಿ ಗಾಳಿ(Heat Wave) ಶಾಖಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇದೀಗ ಇದರ ಪರಿಣಾಮವಾಗಿ ಕೇವಲ ಎರಡೇ ಗಂಟೆಗಳಲ್ಲಿ ಬಿಸಿಗಾಳಿ ಶಾಖಕ್ಕೆ ಬರೋಬ್ಬರಿ 16 ಜನ ಬಲಿಯಾಗಿದ್ದಾರೆ. ಔರಂಗಾಬಾದ್‌ ಜಿಲ್ಲಾಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನಗರದ ಉಷ್ಣಾಂಶ 48.2 ಡಿಗ್ರಿಗೆ ಏರಿಕೆ ಆಗಿದೆ. ಇದು ಬಿಹಾರದಲ್ಲೇ ಅತಿ ಹೆಚ್ಚ ಉಷ್ಣಾಂಶ ಹೊಂದಿರುವ ನಗರವಾಗಿದೆ.

ಈ ಕುರಿತು ಔರಂಗಾಬಾದ್‌ ಜಿಲ್ಲಾಸ್ಪತ್ರೆ ವೈದ್ಯರು ಪ್ರತಿಕ್ರಿಯಿಸಿದ್ದು, ತೀವ್ರ ಬಿಸಿ ಗಾಳಿಗೆ ತುತ್ತಾಗಿ ಅಸ್ವಸ್ಥಗೊಂಡಿರುವ 35 ಕ್ಕೂ ಅಧಿಕ ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ದುರಾದೃಷ್ಟವಶಾತ್‌ 16ಕ್ಕೂ ಅಧಿಕ ಜನ ಬಿಸಿಗಾಳಿ ಶಾಖಕ್ಕೆ ಬಲಿಯಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ನಮ್ಮ ಸಾಕಷ್ಟು ತಜ್ಞ ವೈದ್ಯರಿದ್ದಾರೆ. ಔಷಧ, ಐಸ್‌ ಪ್ಯಾಕ್‌ ಮತ್ತು ಅನೇಕ ಕೂಲರ್‌ಗಳ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಸಿಗಾಳಿ ಸಮಸ್ಯೆಯಿಂದಾಗಿ ಮುಂಜಾಗೃತಾ ಕ್ರಮವಾಗಿ ಬಿಹಾರ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳನ್ನು ಜೂ.8ರವರೆಗೆ ತಾತ್ಕಾಲಿಕವಾಗಿ ಮುಚ್ಚಿದೆ. ಕೆಲವು ದಿನಗಳಿಂದ ಶಾಲೆಗಳಲ್ಲಿ ಬಿಸಿ ಗಾಳಿ ಶಾಖಕ್ಕೆ ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿ ಬೀಳುತ್ತಿರುವ ಘಟನೆ ವರದಿ ಆಗಿತ್ತು. ಇದರ ಬೆನ್ನಲ್ಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಬಿಹಾರದ ಶೇಖ್‌ಪುರದ ಹಲವಾರು ಶಾಲಾ ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯವಾಗಿ ಮಂಗಳವಾರ ಗರಿಷ್ಠ ತಾಪಮಾನ 42.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಕ್ಕಳು ಪ್ರಜ್ಞೆ ತಪ್ಪಿರುವ ವೀಡಿಯೊಗಳು ವೈರಲ್ ಆಗಿದ್ದು, ಶಾಲೆಯ ವಿದ್ಯಾರ್ಥಿಗಳು ತುಂಬಾ ದಣಿದಿದ್ದಾರೆ ಎಂದು ಕಂಡುಬಂದಿದೆ. ಶಿಕ್ಷಕರು ಅವರಿಗೆ ನೀರು ಒದಗಿಸುವ ಮೂಲಕ ಮತ್ತು ಅವರಿಗೆ ಗಾಳಿ ಬೀಸುವ ಮೂಲಕ ಸಹಾಯ ಮಾಡಲು ಪ್ರಯತ್ನಿಸಿದರು. ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರಿಗೆ ಸಲೈನ್ ಚುಚ್ಚುಮದ್ದು ನೀಡಲಾಗಿದೆ. ಇನ್ನು ವಿದ್ಯಾರ್ಥಿಗಳು ಮಾತ್ರವಲ್ಲದೇ ಶಿಕ್ಷಕರೂ ಬಿಸಿಗಾಳಿಯ ತಾಪಮಾನಕ್ಕೆ ಪ್ರಜ್ಞೆ ತಪ್ಪಿ ಬೀಳುತ್ತಿರುವ ಘಟನೆಯೂ ವರದಿ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿಂದು ಭಾರಿ ಮಳೆಗೆ ಗುಡುಗು, ಮಿಂಚು ಸಾಥ್‌

Rain News : ರಾಜ್ಯಾದ್ಯಂತ ರಭಸವಾಗಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮಂಡ್ಯ, ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಬಹುಶಃ ಒಣಹವೆ ಇರಲಿದೆ.

ಉತ್ತರಒಳನಾಡಿನ ಬೆಳಗಾವಿ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

ಮಳೆಗಾಲ ಮತ್ತು ಕಾಡು! ಪ್ರಕೃತಿ ಪ್ರಿಯರ ಅತ್ಯಂತ ಇಷ್ಟದ ಕಾಂಬಿನೇಷನ್‌ ಇದು. ಮಳೆಗಾಲದಲ್ಲೊಮ್ಮೆ ಕಾಡಿಗೆ ಕರೆದರೆ ಯಾವ ಪ್ರಕೃತಿಪ್ರೇಮಿ ಬೇಡ ಅನ್ನಲಾರ ಹೇಳಿ? ವನ್ಯಜೀವಿ ಪ್ರಿಯರ, ಪ್ರಕೃತಿಪ್ರಿಯರ ಈ ಆಸೆಗೆ ತಣ್ಣೀರೆರಚುವಂತೆ ಮಳೆಗಾಲ ಬಂದ ತಕ್ಷಣ ರಾಷ್ಟ್ರೀಯ ಉದ್ಯಾನ/ವನ್ಯಜೀವಿಧಾಮಗಳೆಲ್ಲ ಬಾಗಿಲು ಮುಚ್ಚುತ್ತವೆ. ಕಾಡಿನ ಮದ್ಯದಲ್ಲಿ ಸಫಾರಿ ಹೋಗಲು, ವನ್ಯಜೀವಿಗಳ ಬೆನ್ನು ಹತ್ತಲು ಯಾರಿಗೂ ಆಸ್ಪದವಿಲ್ಲ. ಆದರೂ, ಪ್ರಕೃತಿ ಪ್ರಿಯರೆಲ್ಲ ಇಂತಹ ರಾಷ್ಟ್ರೀಯ ಉದ್ಯಾನ/ ವನ್ಯಜೀವಿಧಾಮಗಳು ಮುಚ್ಚಿಕೊಳ್ಳುವ ಕೆಲವೇ ದಿನಗಳ ಮುಂಚಿತವಾಗಿ ಅಲ್ಲಿಗೆ ಭೇಟಿ ಕೊಡಬೇಕು. ಮಳೆಗಾಲ ಈಗಷ್ಟೇ ಶುರುವಾದ ವನ್ಯಜೀವಿಧಾಮದಲ್ಲಿ ತಿರುಗಾಡಿ ಬರುವುದೇ ಹಬ್ಬ. ಒಂದೆರಡು ಮಳೆ ಸುರಿದು ಕಾಡೆಲ್ಲ ಕಳೆಕಳೆಯಾಗಿ ಹಸಿರಾಗಿ ಚಿಗಿತುಕೊಂಡು ಅದ್ಭುತ ದೃಶ್ಯಗಳನ್ನು ನಿಮಗೆ ನೀಡುವ ಜೊತೆಗೆ ರೋಮಾಂಚಕ ಅನುಭವಗಳನ್ನು ನೀಡುತ್ತವೆ. ಬನ್ನಿ, ಯಾವೆಲ್ಲ ರಾಷ್ಟ್ರೀಯ ಉದ್ಯಾನಗಳನ್ನು ಮಳೆಗಾಲಕ್ಕೆ ಸ್ವಲ್ಪವೇ ಮುನ್ನ ನೀವು ನೋಡುವುದೇ ಒಂದು ಅನುಭವ (wildlife sanctuaries) ಎಂಬುದನ್ನು ತಿಳಿಯೋಣ ಬನ್ನಿ.

Jim Corbett National Park, Uttarakhand

ಜಿಮ್‌ ಕಾರ್ಬೆಟ್‌ ರಾಷ್ಟ್ರೀಯ ಉದ್ಯಾನ, ಉತ್ತರಾಖಂಡ

ಉತ್ತರಾಖಂಡದ ಬಹು ಪ್ರಸಿದ್ಧ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಹಳೆಯ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳನ್ನು ಕಾಣಲು ಇದು ಪ್ರಶಸ್ತ ಜಾಗ. ಜೂನ್‌ ಮದ್ಯದಲ್ಲಿ ಇದು ಮುಚ್ಚಿದರೆ ಮತ್ತೆ ತೆರೆಯುವುದು ಅಕ್ಟೋಬರ್‌ನಲ್ಲಿಯೇ. ಆದರೆ, ಜೂನ್‌ ಆರಂಭದಲ್ಲಿ ಈ ಕಾಡು ನೋಡುವುದು ಬಲು ಸೊಗಸು.

Ranthambore National Park, Rajasthan

ರಣಥಂಬೋರ್‌ ರಾಷ್ಟ್ರೀಯ ಉದ್ಯಾನ, ರಾಜಸ್ಥಾನ

ಭಾರತದ ದೊಡ್ಡ ರಾಷ್ಟ್ರೀಯ ಉದ್ಯಾನಗಳ ಪೈಕಿ ಇದೂ ಒಂದು. ಹುಲಿಗಳನ್ನು ನೋಡಬೇಕೆಂದು ಬಯಸುವ ಪ್ರತಿ ವನ್ಯಜೀವಿ ಪ್ರೇಮಿ ಹಾಗೂ ವನ್ಯಜೀವಿ ಛಾಯಾಗ್ರಾಹಕರು ಈ ರಾಷ್ಟ್ರೀಯ ಉದ್ಯಾನಕ್ಕೆ ಬೇಟಿ ಕೊಡಲು ಬಯಸುವುದು ಸಾಮಾನ್ಯ. ಇದು ಜೂನ್‌ 30ರ ವೇಳೆಗೆ ಮುಚ್ಚುವ ಕಾರಣ ಅದಕ್ಕೂ ಮೊದಲು ಬೇಟಿ ಕೊಟ್ಟರೆ ಅಪರೂಪದ ಅನುಭವಗಳು ನಿಮ್ಮದಾಗಬಹುದು.

Bandhavgarh National Park, Madhya Pradesh

ಬಾಂಧವಗಢ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಹುಲಿಯನ್ನು ನೋಡಲು ಬಯಸುವ ಪ್ರತಿಯೊಬ್ಬ ವನ್ಯಜೀವಿ ಪ್ರಿಯರಿಗೂ ತಿಳಿದ ವನ್ಯಜೀವಿಧಾಮ ಇದು. ಇಲ್ಲಿ ಹುಲಿ ದರ್ಶನದ ಸಾಧ್ಯತೆ ಹೆಚ್ಚು. ಈಗಷ್ಟೇ ಮಳೆಬಿದ್ದ ಕಾಡು ಹಸಿರಾಗಿ ಕಂಗೊಳಿಸುವ ಸಂದರ್ಭ ಮಧ್ಯದಲ್ಲಿ ಆಕಳಿಸುತ್ತಾ ಕುಳಿತ ಹುಲಿಯನ್ನೊಮ್ಮೆ ಕಲ್ಪಿಸಿ ನೋಡಿ. ರೋಮಾಂಚಿತಗೊಳ್ಳುವುದಿಲ್ಲವೇ ಹೇಳಿ! ಜುಲೈನಿಂದ ಅಕ್ಟೋಬರ್‌ವರೆಗೆ ಈದು ಮುಚ್ಚಿರುವ ಕಾರಣ ಜೂನ್‌ನಲ್ಲಿ ಭೇಟಿಕೊಡಲು ಸುಸಮಯ.

Kanha National Park, Madhya Pradesh

ಕನ್ಹಾ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಇದೂ ಕೂಡಾ ಹುಲಿಗಳಿಗೆ ಬಲುಪ್ರಸಿದ್ಧವಾದ ರಾಷ್ಟ್ರೀಯ ಉದ್ಯಾನ. ಮಳೆಗಾಲ ಆರಂಭವಾದ ತಕ್ಷಣ ಕಾಣಲು ಇದು ಬಲು ಚಂದ. ಜೂನ್‌ 30ರಿಂದ ಅಕ್ಟೋಬರ್‌ 15ರವರೆಗೆ ಇದು ಮುಚ್ಚಿರುತ್ತದೆ.

Pench National Park, Madhya Pradesh and Maharashtra

ಪೆಂಚ್‌ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ

ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಗಡಿಯಲ್ಲಿರುವ ಈ ರಾಷ್ಟ್ರೀಯ ಉದ್ಯಾನ ಅತ್ಯಂತ ಸುಂದರವಾದ ಕಾಡುಗಳಲ್ಲಿ ಒಂದು. ರುಡ್ಯಾರ್ಡ್‌ ಕಿಪ್ಲಿಂಗ್‌ ಅವರ ದಿ ಜಂಗಲ್‌ ಬುಕ್‌ ಇದೇ ಕಾಡಿನಿಂದ ಸ್ಪೂರ್ತಿಗೊಂಡು ರಚಿತವಾದ ಕತೆ. ಹೆಚ್ಚು ಹುಲಿಗಳಿರುವ ಈ ಕಾಡು ಜೂನ್‌ 16ರಿಂದ ಸೆಪ್ಟೆಂಬರ್‌ವರೆಗೆ ಪ್ರವಾಸಿಗರಿಗೆ ಮುಚ್ಚಿರುತ್ತದೆ.

Nagarhole National Park, Karnataka

ನಾಗರಹೊಳೆ ರಾಷ್ಟ್ರೀಯ ಉದ್ಯಾನ, ಕರ್ನಾಟಕ

ನಮ್ಮ ಕರ್ನಾಟಕದ ನಾಗರಹೊಳೆ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಸುಂದರವಾದ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳ ಜೊತೆಗೆ ಆನೆ, ಚಿರತೆ, ಜಿಂಕೆ, ಕಾಡಮ್ಮೆಗಳೂ ಸೇರಿದಂತೆ ಅನೇಕ ಪ್ರಾಣಿಗಳ ಸಂತಿತಿ ಇಲ್ಲಿ ವಿಪುಲವಾಗಿದೆ. ಮಳೆ ಈಗಷ್ಟೇ ಬರಲು ಆರಂಭವಾಗುವ ಸಂದರ್ಭ ಇದು ರಮ್ಯವಾಗಿ ಕಾಣುತ್ತದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಇದು ಮುಚ್ಚಿರುತ್ತದೆ. ಅಕ್ಟೋಬರ್‌ ತಿಂಗಳಲ್ಲೂ ಇದು ಅದ್ಭುತವಾಗಿ ಕಾಣುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

Karnataka Weather Forecast : ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯು (rain News) ತಗ್ಗಿದ್ದು, ಜೂನ್‌ ಮೊದಲ ವಾರದಿಂದ ಮಳೆಯು ಅಬ್ಬರಿಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರ ಕಾಲ ಮಳೆಯು (Rain News) ಆರ್ಭಟಿಸಲಿದೆ. ಮೇ 31ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಇನ್ನೂ ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗಾಳಿ ವೇಗವು 30-40 kmph ಬೀಸಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮೇಲ್ಮೈ ಮಾರುತಗಳು 40-50 ಕಿ.ಮೀ ವರೆಗೆ ಎಲ್ಲಾ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 72 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ. ಆದರೆ ಆ ನಂತರ ರಾಜ್ಯಾದ್ಯಂತ 2-3 ಡಿ.ಸೆ ನಷ್ಟು ಕ್ರಮೇಣ ಕುಸಿಯಲಿದೆ.

ಬೆಂಗಳೂರಲ್ಲಿ ಪ್ರಬಲ ಗಾಳಿ

ಬೆಂಗಳೂರು ನಗರ ಮತ್ತು ಸುತ್ತಮುತ್ತದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಮೇಲ್ಮೈ ಗಾಳಿಯು ಪ್ರಬಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ಚಳಿಗಾಲದಲ್ಲಿ ಮಾತ್ರವಲ್ಲ, ಬೇಸಿಗೆಯಲ್ಲೂ ಮೂಗಿನಲ್ಲಿ ರಕ್ತಸ್ರಾವ ಆಗುವುದು ಸಾಮಾನ್ಯ. ಆದರೆ ಹಾಗೇಕಾಗುತ್ತದೆ? ಹಾಗೆ ಆಗದಂತೆ ತಡೆಯುವುದಕ್ಕೆ ಸಾಧ್ಯವಿಲ್ಲವೇ- ಈ ಎಲ್ಲ ಮಾಹಿತಿಗಳ ಜೊತೆಗೆ ಅದನ್ನು ತಡೆಯುವ ಸರಳ (Nosebleeds In Summer) ಉಪಾಯಗಳು ಇಲ್ಲಿವೆ. ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು. ಮೂಗಿನಲ್ಲಿ ರಕ್ತ ಸೋರುವುದಕ್ಕೆ ಕಾರಣಗಳನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಒಣಗಿದ ಬಿಸಿ ಹವೆಯಿಂದಾಗಿ ಮೂಗಿನ ಒಳ ಭಾಗದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಒಡೆದಾಗ ಉಂಟಾಗುವ ಸಮಸ್ಯೆಯಿದು. ಕೆಲವೊಮ್ಮೆ ಸೋಂಕಿನಿಂದಲೂ ಈ ಸಮಸ್ಯೆ ಕಾಣಬಹುದು. ಅತಿಯಾಗಿ ರಕ್ತಸ್ರಾವ ಆಗುತ್ತಿದ್ದರೆ, ಬೇರೆಯದೇ ಸಮಸ್ಯೆಯನ್ನಿದು ಸೂಚಿಸಬಹುದು. ಆದರೆ ಬೇಸಿಗೆಯ ಕಾರಣದಿಂದಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ, ಕೆಲವು ಮನೆಮದ್ದುಗಳು ಇದಕ್ಕೆ ಉಪಶಮನ ನೀಡುತ್ತವೆ.

drink Water night

ನೀರು ಕುಡಿಯಿರಿ

ಇದಕ್ಕಿರುವ ಅತ್ಯಂತ ಸರಳವಾದ ಮದ್ದೆಂದರೆ ನೀರು ಕುಡಿಯುವುದು. ಹೆಚ್ಚಿನ ನೀರು ದೇಹ ಸೇರಿದಂತೆ ಕೋಶಗಳಲ್ಲಿರುವ ಶುಷ್ಕತೆ ಕಡಿಮೆಯಾಗುತ್ತದೆ. ಇದರಿಂದ ಮೂಗಿನಲ್ಲಿರುವ ಮ್ಯೂಕಸ್‌ ಕೋಶಗಳು ಸಹ ತಮ್ಮ ತೇವವನ್ನು ಕಾಪಿಟ್ಟುಕೊಳ್ಳುವುದಕ್ಕೆ ಸಹಾಯವಾಗುತ್ತದೆ. ಅಂದರೆ, ಒಣ ಹವೆಯ ಪ್ರತಿಕೂಲ ಪರಿಣಾಮ ಬೀರದಂತೆ ತಡೆಯುವುದಕ್ಕೆ ಇದು ಸುಲಭದ ಉಪಾಯ.

ಹ್ಯುಮಿಡಿಫಯರ್‌

ಬೇಸಿಗೆಯ ನೆವದಿಂದ ಎಷ್ಟೋ ಬಾರಿ ಅತಿಯಾಗಿ ಫ್ಯಾನ್‌ ಅಥವಾ ಎಸಿ ಬಳಸುತ್ತೇವೆ. ಇದರಿಂದ ಮನೆಯ ಅಥವಾ ಕಚೇರಿಯ ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ನೈಸರ್ಗಿಕವಾದ ಬಿಸಿ ಗಾಳಿಯ ಜೊತೆಗೆ ಇದೂ ಸಹ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ವಾತಾವರಣದ ತೇವಾಂಶವನ್ನು ಹೆಚ್ಚಿಸುವಂಥ ಹ್ಯುಮಿಡಿಫಯರ್‌ ಬಳಸುವುದು ಇನ್ನೊಂದು ಮಾರ್ಗ. ಇದರಿಂದ ಮೂಗಿನ ಅಂಗಾಂಶಗಳು ಹಾನಿಗೊಳ್ಳುವುದನ್ನು ತಡೆಯಬಹುದು.

Moisturizer

ಮಾಯಿಶ್ಚರೈಸರ್‌ ಬಳಕೆ

ಮೂಗಿನ ಒಳ ಭಾಗ ಒಣಗಿ ಬಿರಿಯದಂತೆ ತಡೆಯಲು ಮಾಯಿಶ್ಚರೈಸರ್‌ ಬಳಕೆ ಮಾಡುವುದು ಉಪಯುಕ್ತ. ಇದಕ್ಕಾಗಿ ಇರುವ ಜೆಲ್‌ ಇಲ್ಲವೇ ಸ್ಟ್ರೇ ಬಳಸಬಹುದು. ಸಾಲೈನ್‌ ಸ್ಪ್ರೇ ಬಳಕೆಯೂ ಉಪಯುಕ್ತವಾದೀತು. ಇವನ್ನೆಲ್ಲ ಹೊಸದಾಗಿ ಖರೀದಿಸಿ ತರುವಷ್ಟು ವ್ಯವಧಾನ ಇಲ್ಲದಿದ್ದರೆ, ಸರಳವಾಗಿ ಕೊಬ್ಬರಿ ಎಣ್ಣೆಯನ್ನು ಮೂಗಿನ ಒಳಭಾಗದ ಅಂಗಾಂಶಗಳಿಗೆ ಹೆಚ್ಚಿ. ಇದು ಪರಿಣಾಮಕಾರಿಯಾಗಿ ತೇವವನ್ನು ಹಿಡಿದಿಡುತ್ತದೆ.

ಮುಚ್ಚಿಕೊಳ್ಳಿ

ತೀವ್ರ ತಾಪದ ಹೊತ್ತಿನಲ್ಲಿ ಮನೆಯಿಂದ ಹೊರಗೆ ಹೋಗುವಾಗ ಮುಖಕ್ಕೆ ಮಾಸ್ಕ್‌ ಹಾಕುವುದು ಸಹಾಯಕ. ಇದರಿಂದ ಒಣ ಹವೆಯನ್ನು ಉಸಿರಾಡುವುದು ಸ್ವಲ್ಪ ಮಟ್ಟಿಗಾದರೂ ತಪ್ಪಿಸಬಹುದು. ತಿಳಿ ಬಣ್ಣದ ದೊಡ್ಡ ಹ್ಯಾಟ್‌ ಧರಿಸುವುದರಿಂದ ಮುಖದ ಮೇಲೆ ಬಿಸಿಲು ನೇರವಾಗಿ ಬೀಳದಂತೆ ಮಾಡಬಹುದು. ಈ ಕ್ರಮಗಳೆಲ್ಲ ಸಣ್ಣವೇ ಆದರೂ, ಒಟ್ಟಾರೆಯಾಗಿ ಸಮಸ್ಯೆಯನ್ನು ದೂರ ಮಾಡುವಲ್ಲಿ ನೆರವಾಗುತ್ತವೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಮಾಡಬೇಡಿ

ಮೂಗನ್ನು ಶುಚಿಗೊಳಿಸುವ ನೆವದಲ್ಲಿ ನಾಸಿಕದ ಮೇಲೆ ಯಾವುದೇ ರೀತಿಯಲ್ಲೂ ತೀರಾ ಒತ್ತಡ ಹಾಕಬೇಡಿ. ಈಗಾಗಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರಂತೂ ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಿ. ಮೂಗಿನ ಮೇಲೆ ಒತ್ತಡ ಹಾಕಿದರೆ ಬಿರಿದ ಕೋಶಗಳು ದುರಸ್ತಿಯಾಗುವುದು ನಿಧಾನವಾಗುತ್ತದೆ ಅಥವಾ ಇನ್ನಷ್ಟು ಬಿರಿದು ಸಮಸ್ಯೆಯನ್ನೇ ಸೃಷ್ಟಿಸುತ್ತವೆ. ಅಲರ್ಜಿಗಳನ್ನು ಹತ್ತಿಕ್ಕಿ. ದಿನವಿಡೀ ಜೋರಾಗಿ ಸೀನುತ್ತಲೇ ಇದ್ದರೆ, ಮೂಗು ಸೋರುವಾಗ ರಕ್ತಸ್ರಾವ ಆಗುವುದು ಖಚಿತ.

Winter transitions to summer

ಆಹಾರ

ಆರೋಗ್ಯಕರವಾದ ಆಹಾರವನ್ನು ಕಡ್ಡಾಯವಾಗಿ ಪಾಲಿಸಿ. ಸೆಕೆಯ ನೆವವೊಡ್ಡಿ ಅತಿಯಾದ ತಣ್ಣಗಿನ ಪೇಯಗಳನ್ನು ಕುಡಿಯುವುದು, ಐಸ್‌ಕ್ರೀಮ್‌ ಮೆಲ್ಲುವುದು- ಇವೆಲ್ಲ ಮೂಗಿನ ಸಮಸ್ಯೆಗಳನ್ನು ಹೆಚ್ಚಿಸಬಹುದು; ಗಂಟಲಿನ ಸೋಂಕಿಗೆ, ಶೀತ-ನೆಗಡಿಗೆ ಕಾರಣವಾಗಬಹುದು. ವಿಟಮಿನ್‌ ಸಿ ಹೆಚ್ಚಿರುವ ಆಹಾರವನ್ನು ವಿಫುಲವಾಗಿ ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Veer Savarkar: ವೀರ ಸಾವರ್ಕರ್‌ ಅವಹೇಳನ ಮಾಡಿದ ಆರೋಪಿ ಹುಸೇನಸಾಬ ಬಂಧನ

Veer Savarkar: ಕುಷ್ಟಗಿ ತಾಲೂಕಿನ ದೋಟಿಹಾಳದ ಹುಸೇನಸಾಬ ಕೊಳ್ಳಿ ಎಂಬಾತನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಈತ ಫೇಸ್‌ಬುಕ್ ಖಾತೆಯಲ್ಲಿ, ಸಾವರ್ಕರ್‌ ಫೋಟೋ ಹಾಕಿ, “ಸಾವರ್ಕರ್ ದೇಶದ ಮೊದಲ ಟೆರರಿಸ್ಟ್” ಎಂದು ಬರೆದಿದ್ದ. ʼರಣಹೇಡಿ ಸಾವರ್ಕರ್‌ʼ ಎಂದೂ ಬರೆದಿದ್ದಾನೆ.

VISTARANEWS.COM


on

veer savarkar derogatory post
Koo

ಕೊಪ್ಪಳ: ಸಾಮಾಜಿಕ ಜಾಲತಾಣದಲ್ಲಿ (Social media) ವೀರ ಸಾವರ್ಕರ್‌ (Veer Savarkar) ವಿರುದ್ಧ ಅವಹೇಳನಕಾರಿ ಪೋಸ್ಟ್ (Derogatory post) ಹಾಕಿದ ಹಿನ್ನೆಲೆಯಲ್ಲಿ ಹುಸೇನಸಾಬ ಕೊಳ್ಳಿ ಎಂಬಾತನನ್ನು ಬಂಧಿಸಲಾಗಿದೆ. ಈತ ಕೊಪ್ಪಳದವನಾಗಿದ್ದು, ಕೊಪ್ಪಳ (Koppala news) ಜಿಲ್ಲೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಷ್ಟಗಿ ತಾಲೂಕಿನ ದೋಟಿಹಾಳದ ಹುಸೇನಸಾಬ ಕೊಳ್ಳಿ ಎಂಬಾತನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಈತ ಫೇಸ್‌ಬುಕ್ ಖಾತೆಯಲ್ಲಿ, ಸಾವರ್ಕರ್‌ ಫೋಟೋ ಹಾಕಿ, “ಸಾವರ್ಕರ್ ದೇಶದ ಮೊದಲ ಟೆರರಿಸ್ಟ್” ಎಂದು ಬರೆದಿದ್ದ. ʼರಣಹೇಡಿ ಸಾವರ್ಕರ್‌ʼ ಎಂದೂ ಬರೆದಿದ್ದಾನೆ.

ಈತ ತನ್ನ ಎಫ್‌ಬಿ ಖಾತೆಯ ಹೆಸರನ್ನು ʼಟಿಪ್ಪು ಟಿಪ್ಪುʼ ಎಂದು ಇಟ್ಟುಕೊಂಡಿದ್ದಾನೆ. ಹಲವು ಕೋಮು ಭಾವನೆ ಕೆರಳಿಸುವ ಪೋಸ್ಟ್‌ಗಳನ್ನು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವ ದೋಟಿಹಾಳದಲ್ಲಿ ಕೋಮುಭಾವನೆ ಕೆರಳಿಸುವ ದುರುದ್ದೇಶದಿಂದ ಇದರ ಹಿಂದಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪ್ರಶ್ನಿಸಲಾಗುತ್ತಿದೆ.

ಬೆಳ್ಳೂರು ಪ್ರಕರಣದಲ್ಲಿ ದೂರು ದಾಖಲಿಸದ ಪಿಎಸ್‌ಐ ಸಸ್ಪೆಂಡ್

ಮಂಡ್ಯ: ಮಂಡ್ಯ ಜಿಲ್ಲೆಯ (Mandya news) ಬೆಳ್ಳೂರು (Belluru Assault case) ಪಟ್ಟಣದಲ್ಲಿ ಹಿಂದೂ ಯುವಕನ (Hindu youth) ಮೇಲೆ ಅನ್ಯ ಕೋಮಿನ ಪುಂಡರು ಹಲ್ಲೆ ನಡೆಸಿದ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರಾಕರಿಸಿದ್ದ ಪಿಎಸ್‌ಐ ಅನ್ನು ಅಮಾನತು (Suspend) ಮಾಡಲಾಗಿದೆ. ಕರ್ತವ್ಯ ಲೋಪ ಕಾರಣ ನೀಡಿ ಬೆಳ್ಳೂರು ಠಾಣೆ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಅಮಾನತು ಮಾಡಿ ಮಂಡ್ಯ ಎಸ್‌ಪಿ ಎನ್. ಯತೀಶ್ ಆದೇಶ ಹೊರಡಿಸಿದ್ದಾರೆ.

ಬೆಳ್ಳೂರು ಗ್ರಾಮಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು. ಕಡೆಗೆ ಪ್ರಕರಣದ ಗಂಭೀರತೆ ಅರಿತು ಪೊಲೀಸರು ದೂರು ಪಡೆದಿದ್ದರು. ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿಂದೆ ದೂರು ಸ್ವೀಕರಿಸದ ಪಿಎಸ್‌ಐ ವಿರುದ್ಧವೂ ಕಂಪ್ಲೆಂಟ್ ದಾಖಲಾಗಿದೆ. ದೂರಿನ ಬೆನ್ನಲ್ಲೇ ಪಿಎಸ್‌ಐ ಅಮಾನತು ಮಾಡಿ ಎಸ್‌ಪಿ ಯತೀಶ್ ಆದೇಶ ನೀಡಿದ್ದಾರೆ.

ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ. ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.‌

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ (ಮೇ 27) ಸಂಜೆ ಅಭಿಲಾಷ್​ ಎಂಬ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದರು. ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದ ಅಭಿಲಾಷ್​ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿತ್ತು. ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಗಂಭೀರವಾಗಿ ಪೆಟ್ಟು ತಿಂದಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಪಾಯಕಾರಿ ರೀತಿಯಲ್ಲಿ ವಾಹನ ಓಡಿಸಿದ್ದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಮಿತಿ ಮೀರಿದ ವೇಗದಲ್ಲಿ ಕಾರು ಓಡಿಸದಂತೆ ಆ ಗುಂಪಿಗೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರ ಗುಂಪಿ ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಸೋಮವಾರ ಸಂಜೆ ಹಲ್ಲೆ ಮಾಡಿದ್ದರು.

ದೊಡ್ಡ ಗುಂಪು ಹಲ್ಲೆ ಮಾಡಿದ್ದ ಅಭಿಲಾಷ್​ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಅವರ ಆಪ್ತರು ಹೇಳಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸುದ್ದಿಯಾದ ಬಳಿಕ ಬೆಳ್ಳೂರು ಪಟ್ಟಣದಲ್ಲಿ ಆತಂಕ ಮನೆ ಮಾಡಿತ್ತು. ಗಲಾಟೆ ಸಂಭವಿಸುವ ಸಾಧ್ಯತೆಗಳನ್ನು ಮನಗಂಡಿರುವ ಪೊಲೀಸರು ಬೆಳ್ಳೂರು ಪಟ್ಟಣ ಹಾಗೂ ಬಿಜಿಎಸ್ ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದಾರೆ.

ಇದನ್ನೂ ಓದಿ | Physical Abuse: 7ನೇ ಕ್ಲಾಸ್‌ ಹುಡುಗಿ 3 ತಿಂಗಳ ಗರ್ಭಿಣಿ! ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅರೆಸ್ಟ್‌

Continue Reading
Advertisement
Kannada Serials TRP Colors Kannada serials not in top 5 Shravani Subramanya is back on track
ಕಿರುತೆರೆ27 seconds ago

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

theft Case
ಕ್ರೈಂ3 mins ago

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

bhavani revanna sit notice
ಕ್ರೈಂ6 mins ago

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Gold Smuggling
ದೇಶ12 mins ago

Gold Smuggling: ಗುದನಾಳದಲ್ಲಿ 1ಕೆಜಿ ಚಿನ್ನ; ಕೇರಳದಲ್ಲಿ ಗಗನಸಖಿ ಅರೆಸ್ಟ್‌

prajwal Revanna Case
ಪ್ರಮುಖ ಸುದ್ದಿ12 mins ago

Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

India women’s squad
ಕ್ರೀಡೆ20 mins ago

India women’s squad: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ; ತಂಡಕ್ಕೆ ಮರಳಿದ ಪ್ರಿಯಾ ಪೂನಿಯಾ

Maharaja trailer released Vijay Sethupathi has a secret
ಟಾಲಿವುಡ್22 mins ago

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರದ ʻಮಹಾರಾಜʼ ಟ್ರೈಲರ್‌ ಔಟ್‌: ಫ್ಯಾನ್ಸ್‌ ಫಿದಾ!

Huligemma Temple Road Accident
ಕೊಪ್ಪಳ40 mins ago

Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

Viral Video
ವೈರಲ್ ನ್ಯೂಸ್51 mins ago

Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

back benchers Movie Kannada song
ಸ್ಯಾಂಡಲ್ ವುಡ್56 mins ago

Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ22 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌