Chikkaballapur News : ಗಂಡ ಚೆನ್ನಾಗಿ ನೋಡಿಕೊಳ್ಳಲ್ಲ ಎಂದು ಕೆರೆಗೆ ಹಾರಿ ಕಾಲು ಮುರಿದುಕೊಂಡಳು - Vistara News

ಕರ್ನಾಟಕ

Chikkaballapur News : ಗಂಡ ಚೆನ್ನಾಗಿ ನೋಡಿಕೊಳ್ಳಲ್ಲ ಎಂದು ಕೆರೆಗೆ ಹಾರಿ ಕಾಲು ಮುರಿದುಕೊಂಡಳು

Self Harming : ಪತಿ ನನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿ ಮಹಿಳೆಯೊಬ್ಬರು ಸಂಕ್ರಾಂತಿ ಹಬ್ಬದ ದಿನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

VISTARANEWS.COM


on

anusuya How drowned in lake
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಕೆರೆಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರ ನಗರದ ಕಂದವಾರ ಕೆರೆಯಲ್ಲಿ (Chikkaballapur News) ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಗೂಳ್ಯ ಗ್ರಾಮದ ನಿವಾಸಿ ಅನಸೂಯಮ್ಮ ಆತ್ಮಹತ್ಯೆಗೆ ಯತ್ನಿಸಿದವರು.

ಪತಿ ನನ್ನ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ನೊಂದು ಅನಸೂಯಮ್ಮ ಸಂಕ್ರಾಂತ್ರಿ ಹಬ್ಬದ ದಿನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇತ್ತ ಕೆರೆಗೆ ಹಾರಿದವಳನ್ನು ಅಲ್ಲಿದ್ದವರು ಕೂಡಲೇ ರಕ್ಷಿಸಿದ್ದಾರೆ. ಅನಸೂಯ ಕೆರೆಗೆ ಹಾರುವಾಗ ಕಲ್ಲಿನ‌ ಮೇಲೆ ಬಿದ್ದಿದ್ದಾರೆ. ಪರಿಣಾಮ ಬಲಗಾಲಿನ ಮೂಳೆಯೇ ಮುರಿದುಹೋಗಿದೆ.

husband doesn't take good care of me wife jumped into the lake
ಆತ್ಮಹತ್ಯೆಗೆ ಯತ್ನಿಸಲು ಹೋಗಿ ಕಾಲು ಮುರಿದುಕೊಂಡ ಅನಸೂಯ

ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ಅನುಸೂಯ ಗಂಭೀರ ಗಾಯಗೊಂಡಿದ್ದು, ಆಕೆಯನ್ನು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲಿಸಿಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಚಿಕ್ಕಬಳ್ಳಾಪುರ ‌ನಗರ ಪೊಲೀಸರು, ಅಗ್ನಿಶಾಮಕ ದಳದವರು ಸಂಬಂಧಿಕರಿಗೆ ಮಹಿಳೆಯನ್ನು ಒಪ್ಪಿಸಿದ್ದಾರೆ.

ಇದನ್ನೂ ಓದಿ:Karnataka Weather : ಕೈ ಕಟ್ಟಿ ಕೂರುವಂತೆ ಮಾಡ್ತಿದೆ ತಂಪು ಗಾಳಿ; ಈ ವಾರ ಹೇಗಿರಲಿದೆ ವಾತಾವರಣ

Love Jihad: ಹಿಂದೂ ಬಾಲಕಿ ಜೊತೆ ಮುಸ್ಲಿಂ ಯುವಕ ಪರಾರಿ; ಲವ್‌ ಜಿಹಾದ್‌ ಆರೋಪ, ಪ್ರತಿಭಟನೆ

ಮಂಡ್ಯ : ಮಂಡ್ಯದಲ್ಲಿ ಲವ್ ಜಿಹಾದ್ (Love Jihad) ನಡೆಸಲಾಗುತ್ತಿದೆ ಎಂದು ರೊಚ್ಚಿಗೆದ್ದಿರುವ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮಂಡ್ಯದ (Mandya news) ಕೆ.ಆರ್.ಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿತ್ತು.

ಕೆ.ಆರ್.ಪೇಟೆ ಪಟ್ಟಣದ 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿಯ ಜತೆ ಪಟ್ಟಣದ 19 ವರ್ಷದ ಯುವಕ ಸೈಯದ್ ತಬ್ರೀಜ್ ಎಂಬಾತ ಸಲಿಗೆ ಬೆಳೆಸಿಕೊಂಡಿದ್ದ. ಪ್ರೀತಿಯ ಹೆಸರಿನಲ್ಲಿ ಈತ ಲವ್ ಜಿಹಾದ್ ನಡೆಸುತ್ತಿದ್ದಾನೆ ಎಂಬುದು ಹಿಂದೂ ಸಂಘಟನೆಗಳು ಆರೋಪವಾಗಿದೆ.

ಹಿಂದೂ ಬಾಲಕಿಯನ್ನು ಪ್ರೀತಿಯ ಹೆಸರಲ್ಲಿ ಪುಸಲಾಯಿಸಿ ಕರೆದೊಯ್ದಿರುವ ಯುವಕನೂ ಅಪ್ರಾಪ್ತ ವಯಸ್ಕನೇ ಆಗಿದ್ದಾನೆ. ಬಾಲಕಿ ಪೋಷಕರಿಂದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಾಗಿದೆ. ದೂರಿನ ಬಳಿಕ ಪಟ್ಟಣ ಪೊಲೀಸರು‌ ಬಾಲಕಿ ಹಾಗೂ ಯುವಕನನ್ನು ಪತ್ತೆ ಹಚ್ಚಿ ಕರೆ ತಂದಿದ್ದಾರೆ.

ಇದಾದ ಬಳಿಕ ಹಿಂದೂ ಸಂಘಟನೆಗಳಿಂದ ಠಾಣೆ ಮುಂದೆ ಪ್ರತಿಭಟನೆ‌ ನಡೆದಿದೆ. ಈ ಪ್ರಕರಣದ ಹಿಂದೆ ಅನ್ಯ ಕೋಮಿನವರು ಲವ್ ಜಿಹಾದ್‌ಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಪಟ್ಟಣದಲ್ಲೂ ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರ ಟಾರ್ಗೆಟ್ ಆಗುತ್ತಿದೆ. ಪ್ರಕರಣವನ್ನು NIAಗೆ ವಹಿಸುವಂತೆ ಹಿಂದೂ ಸಂಘಟನೆಗಳಿಂದ ಒತ್ತಾಯ ಬಂದಿದೆ. ಬಾಲಕಿಯನ್ನು ಕರೆದೊಯ್ದ ಅಪ್ರಾಪ್ತ ಬಾಲಕನ ವಿರುದ್ಧ ಪೊಲೀಸರಿಂದ ಪೋಸ್ಕೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Elephant Attack : ಕಾಫಿ ಗಿಡದ ಮರೆಯಲ್ಲಿ ನಿಂತು ಇಟಿಎಫ್‌ ಸಿಬ್ಬಂದಿಯನ್ನು ಅಟ್ಟಾಡಿಸಿದ ಒಂಟಿಸಲಗ

ಹಿಂದೂ ಜಾಗರಣ ವೇದಿಕೆ ಸಂಚಾಲಕನ ಮೇಲೆ ಹಲ್ಲೆ

ಶಿವಮೊಗ್ಗ: ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕನ ಮೇಲೆ ಯುವಕರಿಂದ ಹಲ್ಲೆ ನಡೆದಿದೆ. ನಡುರಸ್ತೆಯಲ್ಲಿ ಅಡ್ಡಗಟ್ಟಿ ಯುವಕರಿಂದ ಹಲ್ಲೆ ನಡೆದಿದ್ದು, ಹಲ್ಲೆ ಮಾಡಿದ ದೃಶ್ಯ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕ ಶಿವಕುಮಾರ್ ಮೇಲೆ ಶಿವಮೊಗ್ಗ ನಗರದ ತೀರ್ಥಹಳ್ಳಿ ಮುಖ್ಯರಸ್ತೆಯ ವಿಜಯ ಮೋಟಾರ್ಸ್ ಮುಂಭಾಗದ ರಸ್ತೆಯಲ್ಲಿ ಹಲ್ಲೆ ನಡೆದಿದೆ. ಏರ್ಪೋರ್ಟ್‌ನನಲ್ಲಿ ಟ್ಯಾಕ್ಸಿ ಡ್ರೈವಿಂಗ್ ಕೆಲಸ ಮಾಡುತ್ತಿರುವ ಸಂತೆಕಡೂರು ಗ್ರಾಮದ ಶಿವಕುಮಾರ್, ಸರ್ಕಾರಿ ಬಸ್ ನಿಲ್ದಾಣಕ್ಕೆ ಪ್ಯಾಸೆಂಜರ್ ಡ್ರಾಪ್ ಮಾಡಿ ಹೋಗುವಾಗ ಹಲ್ಲೆ ನಡೆಸಲಾಗಿದೆ.

ಸ್ಕೂಟಿ ಹಾಗೂ ಬೈಕಿನಲ್ಲಿ ಬಂದ 4 ಜನ ಯುವಕರಿಂದ ಹಲ್ಲೆ ನಡೆದಿದ್ದು, ಅವಾಚ್ಯವಾಗಿ ನಿಂದಿಸಿ, ದಾಳಿ ಮಾಡಲಾಗಿದೆ. ನಿನ್ನ ಗಾಡಿ ನಂಬರ್ ನೋಡಿಕೊಂಡಿದ್ದೇವೆ, ಜೀವ ಸಹಿತ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿದೆ. ನಡುರಸ್ತೆಯಲ್ಲಿ ಹಲ್ಲೆ ಮಾಡುತ್ತಿರುವುದನ್ನು ಸ್ಥಳೀಯರು ತಡೆದಿದ್ದು, ಗಾಯಗೊಂಡ ಶಿವಕುಮಾರ್‌ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಿಂದೂ ಜಾಗರಣ ವೇದಿಕೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಶಿವಕುಮಾರ್, ಪಾರ್ಕ್‌ನಲ್ಲಿ ಕುಳಿತ ಮುಸ್ಲಿಂ ಯುವಕ-ಹಿಂದೂ ಯುವತಿಯರ ಬಗ್ಗೆ ಮಾಹಿತಿ ನೀಡುತ್ತಿದ್ದ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ವಿಚಾರ ತಿಳಿಸುತ್ತಿದ್ದ. ಇದೇ ಕಾರಣಕ್ಕೆ ಯುವಕರ ಗುಂಪು ಫಾಲೋ ಮಾಡಿ ಹಲ್ಲೆ ಮಾಡಿರುವ ಶಂಕೆ ಇದೆ. ವೈಯಕ್ತಿಕ ಕಾರಣಗಳಿರುವ ಸಾಧ್ಯತೆ ಹಿನ್ನೆಲೆಯೂ ಪೊಲೀಸರಿಂದ ತನಿಖೆಯಾಗುತ್ತಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Water Supply Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾವೇರಿ ನೀರು ಪೂರೈಕೆಯಿಲ್ಲ!

Water Supply Cut: ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಜೂನ್‌ 6 ಮತ್ತು 7ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

VISTARANEWS.COM


on

Water Supply Cut
Koo

ಬೆಂಗಳೂರು: ಕಾವೇರಿ ನೀರು ಸರಬರಾಜು ಯೋಜನೆಯ (Cauvery water) 5ನೇ ಹಂತದ ಅನುಷ್ಠಾನದ ಹಿನ್ನೆಲೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ವಿವಿಧ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ನಗರದ ಬಹುತೇಕ ಕಡೆ ಜೂನ್‌ 6 ಮತ್ತು 7ರಂದು ಕಾವೇರಿ ನೀರಿನ (Water Supply Cut) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಬಗ್ಗೆ ಬೆಂಗಳೂರು ಜಲಮಂಡಳಿ ಸುತ್ತೋಲೆ ಹೊರಡಿಸಿದ್ದು, ಕಾಮಗಾರಿ ಹಿನ್ನೆಲೆಯಲ್ಲಿ ಕಾವೇರಿ 1, 2 ಮತ್ತು 3 ನೇ ಹಂತಗಳ ನೀರು ಸರಬರಾಜು ಘಟಕಗಳನ್ನು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಹಾಗೂ ಕಾವೇರಿ ನಾಲ್ಕನೇ ಹಂತ, 1 ಮತ್ತು 2ನೇ ಹಂತ ನೀರು ಸರಬರಾಜು ಘಟಕಗಳನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸ್ಥಗಿತಗೊಳಿಸಲಾಗುತ್ತದೆ. ಹೀಗಾಗಿ ಜೂನ್ 6 ಮತ್ತು ಜೂನ್ 7ರಂದು ಎರಡು ದಿನಗಳ ಕಾಲ ಬೆಂಗಳೂರು ನೀರು ನಗರದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

ಈ ಮೊದಲು ಜೂನ್ 4 ರಂದು ಕಾಮಗಾರಿ ಕೈಗೊಳ್ಳಲು ಸಿದ್ಧತೆ ನಡೆಸಲಾಗಿತ್ತು, ಆದರೆ ಕಾರಣಾಂತರಗಳಿಂದ ಇದನ್ನು ಜೂನ್ 6ಕ್ಕೆ ಮುಂದೂಡಲಾಗಿದೆ. ಹೀಗಾಗಿ ಜೂನ್ 6 ಮತ್ತು 7ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವ ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಜಲಮಂಡಳಿ ಮಂಡಳಿ ಕೋರಿದೆ.

ನಾಳೆಯಿಂದ ದೇಶಾದ್ಯಂತ ಕೆಲ ರೈಲುಗಳ ಸಂಚಾರದಲ್ಲಿ ಮಾರ್ಗ, ಸಮಯ ಬದಲಾವಣೆ

Train services

ಬೆಂಗಳೂರು: ಸೇಲಂ ವಿಭಾಗದಲ್ಲಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವುದರಿಂದ ಕೆಲ ರೈಲುಗಳ ಮಾರ್ಗ ಬದಲಾವಣೆ (Train services) ಮಾಡಲು ದಕ್ಷಿಣ ರೈಲ್ವೆಯು ಸೂಚಿಸಿದೆ. ಹೀಗಾಗಿ ಜೂನ್ 05, 06 ಮತ್ತು 13 ರಂದು ಎರ್ನಾಕುಲಂನಿಂದ ಹೊರಡುವ ರೈಲು (ರೈಲು ಸಂಖ್ಯೆ 12678) ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.

ಇನ್ನೂ ಜೂನ್ 05, 06 ಮತ್ತು 13 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12677 ಕೆಎಸ್ಆರ್ ಬೆಂಗಳೂರು-ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಮತ್ತು ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.

ಜೂನ್ 05, 12 ಮತ್ತು 19 ರಂದು ಎಸ್ಎಂವಿಟಿ ಬೆಂಗಳೂರಿನಿಂದ ಸಂಚರಿಸುವ ರೈಲು ಸಂಖ್ಯೆ 06084 ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 20 ನಿಮಿಷ ನಿಯಂತ್ರಿಸಲಾಗುತ್ತದೆ.

ಇದನ್ನೂ ಓದಿ: NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ರೈಲುಗಳ ಮರು ವೇಳಾಪಟ್ಟಿ:

ಕನ ಸೊಲಿಮ್ – ಮಜೊರ್ಡಾ ನಿಲ್ದಾಣಗಳ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ರೈಲುಗಳನ್ನು ಮರು ನಿಗದಿಪಡಿಸಲಾಗುವುದು.

1.ರೈಲು ಸಂಖ್ಯೆ 12779 ವಾಸ್ಕೋ-ಡ-ಗಾಮಾ – ಹಜರತ್ ನಿಜಾಮುದ್ದೀನ್ ಎಕ್‌ಪ್ರೆಸ್‌ ಜೂನ್ 10ರಂದು ವಾಸ್ಕೋ-ಡ-ಗಾಮಾದಿಂದ 2 ಗಂಟೆ (120 ನಿಮಿಷ) ತಡವಾಗಿ ಹೊರಡಲಿದೆ.

2.ರೈಲು ಸಂಖ್ಯೆ 18048 ವಾಸ್ಕೋ-ಡ-ಗಾಮಾ – ಹೌಸ್‌ನಗರ ಎಕ್ಸ್ ಪ್ರೆಸ್ ಜೂನ್ 09ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ವಾಸ್ಕೋ-ಡ-ಗಾಮಾದಲ್ಲಿ 1 ಗಂಟೆ 30 ನಿಮಿಷ (90 ನಿಮಿಷಗಳ) ತಡವಾಗಿ ಹೊರಡಲಿದೆ. ಜತೆಗೆ ಮಾರ್ಗದಲ್ಲಿ 1 ಗಂಟೆ 45 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Drowned in Water: ಹಂಪಿಯ ಸ್ನಾನಘಟ್ಟದ ಬಳಿ ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದವನನ್ನು ರಕ್ಷಿಸಲು ಹೋಗಿದ್ದ ಯುವಕ ಮುಳುಗಿ ಮೃತಪಟ್ಟಿದ್ದಾನೆ. ಮೈಸೂರು ಜಿಲ್ಲೆಯ ಹೊಳೇನರಸಿಪುರ ತಾಲೂಕಿನ ವಿಜಯಪುರದ ಸಂಜು (24) ಮೃತ ದುರ್ದೈವಿ. ಮೈಸೂರಿನಿಂದ ಹಂಪಿಗೆ ಬಂದಿದ್ದ 12 ಜನರ ಕುಟುಂಬ ಸದಸ್ಯರು, ವಿರೂಪಾಕ್ಷೇಶ್ವರ ಗುಡಿ ಸಮೀಪದಲ್ಲಿ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ.

VISTARANEWS.COM


on

Drowned in Water young man drowned in tungabhadra river and died
Koo

ವಿಜಯನಗರ (ಹೊಸಪೇಟೆ): ಹಂಪಿಯ ಸ್ನಾನಘಟ್ಟದ ಬಳಿ ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದವನನ್ನು ರಕ್ಷಿಸಲು ಹೋಗಿದ್ದ ಯುವಕ ಮುಳುಗಿ (Drowned in Water) ಮೃತಪಟ್ಟಿರುವ ಘಟನೆ ಜರುಗಿದೆ.

ಮೈಸೂರು ಜಿಲ್ಲೆಯ ಹೊಳೇನರಸಿಪುರ ತಾಲೂಕಿನ ವಿಜಯಪುರದ ಸಂಜು (24) ಮೃತ ದುರ್ದೈವಿ. ಮೈಸೂರಿನಿಂದ ಹಂಪಿಗೆ ಬಂದಿದ್ದ 12 ಜನರ ಕುಟುಂಬ ಸದಸ್ಯರು, ವಿರೂಪಾಕ್ಷೇಶ್ವರ ಗುಡಿ ಸಮೀಪದಲ್ಲಿ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಮನ್ವಿತ್ ಎಂಬಾತ ಕಾಲು ಜಾರಿ ನದಿಗೆ ಬಿದ್ದಿದ್ದು, ಈತನನ್ನು ರಕ್ಷಿಸಲು ಹೋದ ಸಂಜು ಕೂಡ ಮುಳುಗಿದ್ದಾನೆ. ಇಬ್ಬರಿಗೂ ಈಜು ಬರುತ್ತಿರಲಿಲ್ಲ. ಈ ವೇಳೆ ಸ್ಥಳೀಯರಾದ ಮರಿಸ್ವಾಮಿ ಮತ್ತು ವೆಂಕಟೇಶ್ ಎಂಬುವವರು ಇಬ್ಬರನ್ನೂ ನೀರಿನಿಂದ ರಕ್ಷಣೆ ಮಾಡಿ ಹೊರತಂದರು.

ಇದನ್ನೂ ಓದಿ: SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

ಮೊದಲು ನದಿಗೆ ಬಿದ್ದಿದ್ದ ಮನ್ವಿತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಂಜುನನ್ನು ಕಮಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದ ವೇಳೆ ಮೃತಪಟ್ಟಿರುವ ಕುರಿತು ವೈದ್ಯರು ಖಚಿತಪಡಿಸಿದ್ದಾರೆ. ಈ ಕುರಿತು ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

ಬೆಂಗಳೂರು: ಉತ್ತರಾಖಂಡದ ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನಕ್ಕೆ (Uttarkashi Trekking Tragedy) ಸಿಲುಕಿ ಕರ್ನಾಟಕದ ನಾಲ್ವರು ಸೇರಿ 9 ಚಾರಣಿಗರು ಮೃತಪಟ್ಟಿರುವ ಘಟನೆ ನಡೆದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಚಾರಣಿಗರು, ಟೂರ್‌ ಗೈಡ್‌ಗಳು ಸೇರಿ 22 ಮಂದಿ ತಂಡವೊಂದು ಉತ್ತರಕಾಶಿಯ ಎತ್ತರದ ಸಹಸ್ತ್ರ ತಾಲ್‌ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದ ಅಪಾಯಕ್ಕೆ ಸಿಲುಕಿತ್ತು. ಚಾರಣದಿಂದ ಹಿಂತಿರುಗುವಾಗ ಅಪಾಯಕ್ಕೆ ಸಿಲುಕಿದ್ದ 13 ಮಂದಿ ಪೈಕಿ 9 ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ಬೆಂಗಳೂರಿನ ಸುಜಾತ (52), ಪದ್ಮನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61) ಆಶಾ ಸುಧಾಕರ್ (72)‌, ಪದ್ಮನಾಭನ್‌ ಕೆಪಿಎಸ್‌ (50), ವಿನಾಯಕ್‌ ಎಂದು ಗುರುತಿಸಲಾಗಿದೆ. ಇನ್ನು ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್‌, ಸ್ಮೃತಿ, ಸೀನಾ ಸೇರಿ ಹಲವರನ್ನು ರಕ್ಷಣೆ ಮಾಡಲಾಗಿದೆ.

ಮೇ 29ರಂದು ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಹಾಗೂ ಮೂವರು ಟೂರ್‌ ಗೈಡ್‌ಗಳು ಸೇರಿ 22 ಮಂದಿ ಸಹಸ್ತ್ರ ತಾಲ್‌ಗೆ ಚಾರಣಕ್ಕೆ ತೆರಳಿದ್ದರು. ಸಹಸ್ತ್ರ ತಾಲ್‌ನಿಂದ ಬೇಸ್‌ ಕ್ಯಾಂಪ್‌ಗೆ ಮರಳುತ್ತಿದ್ದಾಗ ಪ್ರತಿಕೂಲ ಹವಾಮಾನಕ್ಕೆ ಚಾರಣಿಗರು ಸಿಲುಕಿದ್ದಾರರೆ. ಈ ವೇಳೆ ಎರಡು ವಾಹನದಲ್ಲಿ 8 ಮಂದಿ ಬೇಸ್‌ ಕ್ಯಾಂಪ್‌ಗೆ ಮರಳಿದ್ದು, 13 ಮಂದಿ ಅಪಾಯದಲ್ಲಿ ಸಿಲುಕಿದ್ದರು. ಈ ಪೈಕಿ 9 ಮಂದಿ ಮೃತಪಟ್ಟಿದ್ದು, ಇನ್ನುಳಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ.

ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ. ಪ್ರಸ್ತುತ ಕೆಲವರು ಈಗ ಕೊಹ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಿದೆ. ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

ಈ ಬಗ್ಗೆ ಸಚಿವ ಕೃಷ್ಣ ಬೈರೆಗೌಡ ಪ್ರತಿಕ್ರಿಯಿಸಿ, ಉತ್ತರಾಖಂಡ್‌ನಲ್ಲಿ ರಾಜ್ಯದ ಟ್ರೆಕ್ಕಿಂಗ್ ಟೀಂ ಸಿಲುಕಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಲಾಗಿದೆ. ರಕ್ಷಣೆ ಸಂಬಂಧ ಉತ್ತರಾಖಂಡ ಸರ್ಕಾರದ ಜೊತೆ ಮಾತನಾಡಲಾಗಿದೆ. ಖುದ್ದು ತೆರಳಿ ಕಾರ್ಯಚರಣೆ ನೋಡಿಕೊಳ್ಳಿ ಎಂದು ಸೂಚಿಸಿದ್ದರಿಂದ ಡೆಹ್ರಾಡೂನ್‌ಗೆ ಹೊರಟಿರುವುದಾಗಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Kannada New Movie: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ʼಆಪರೇಷನ್ ಲಂಡನ್ ಕೆಫೆʼ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

VISTARANEWS.COM


on

Operation London Cafe movie will be released very soon
Koo

ಬೆಂಗಳೂರು: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ‘ಆಪರೇಷನ್ ಲಂಡನ್ ಕೆಫೆ’ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು (Kannada New Movie) ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

ಕವೀಶ್ ಮತ್ತು ಮೇಘಾ ಶೆಟ್ಟಿ ಜತೆಯಲ್ಲಿ ಮರಾಠಿಯ ಶಿವಾನಿ ಸುರ್ವೆ. ವಿರಾಟ್ ಮಡಕೆ ಪ್ರಸಾದ್ ಕಾಂಡೇಕರ್ ಹಾಗೂ ಕನ್ನಡದ ಅರ್ಜುನ್ ಕಾಪಿಕಾಡ್, ಬಿ ಸುರೇಶ್, ಕೃಷ್ಣ ಹೆಬ್ಬಾಳೆ, ಧರ್ಮೇಂದ್ರ ಅರಸ್, ನೀನಾಸಂ ಅಶ್ವತ್ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಯುವ ಸಂಗೀತ ನಿರ್ದೇಶಕ ಪ್ರಾನ್ಶು ಝಾ ಸಂಗೀತವಿರುವ ಈ ಚಿತ್ರಕ್ಕೆ ಛಾಯಾಗ್ರಾಹಕ ಸುಂದರನಾಥ ಸುವರ್ಣ ಅವರ ಜತೆಯಲ್ಲಿ ದೀರ್ಘ ಕಾಲ ಕೆಲಸ ಮಾಡಿದ ಅನುಭವವಿರುವ ಡಿ. ನಾಗಾರ್ಜುನ್ ಛಾಯಾಗ್ರಹಣವಿದೆ.

ಇದನ್ನೂ ಓದಿ: Virat Kohli: ಬೌಂಡರಿ ಮೂಲಕ ವಿಶ್ವ ದಾಖಲೆ ಬರೆಯಲು ಸಜ್ಜಾದ ಕಿಂಗ್​ ಕೊಹ್ಲಿ

ಕಲಾ ನಿರ್ದೇಶಕ ವರದರಾಜ್ ಕಾಮತ್, ಕೆ. ಎಂ. ಪ್ರಕಾಶ್ ಸಂಕಲನದ ಜತೆಯಲ್ಲಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯ ಮತ್ತು ವಿಕ್ರಂ ಮೊರ್, ಅರ್ಜುನ್ ಮತ್ತು ಮಾಸ್ ಮಾದ ವಿಶೇಷವಾಗಿ ಸಂಯೋಜಿಸಿದ ಸಾಹಸವಿದೆ.

ಇದನ್ನೂ ಓದಿ: R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವನ್ನು ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

Continue Reading

ಕರ್ನಾಟಕ

HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

HD Kumaraswamy: ಎನ್‌ಡಿಎ ಸಭೆಯ ಬಳಿಕ ಬೆಂಗಳೂರಿಗೆ ತೆರಳುವ ಮೊದಲು ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರು. “ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಿತು. ನರೇಂದ್ರ ಮೋದಿ ಅವರ ಬಳಿ ಯಾವುದೇ ಬೇಡಿಕೆ ಇಟ್ಟಿಲ್ಲ. ಹಾಗೊಂದು ವೇಳೆ, ನರೇಂದ್ರ ಮೋದಿ ಅವರು ಬಯಸಿದರೆ ನಾನು ಸಚಿವನಾಗಿ ಕಾರ್ಯನಿರ್ವಹಿಸಲು ಸಿದ್ಧನಿದ್ದೇನೆ” ಎಂಬುದಾಗಿ ಮನದ ಆಸೆಯನ್ನು ಬಿಚ್ಚಿಟ್ಟಿದ್ದಾರೆ.

VISTARANEWS.COM


on

HD Kumaraswamy
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಳಿಕ ನವದೆಹಲಿಯಲ್ಲಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಮಿತ್ರಪಕ್ಷಗಳ (NDA Meeting) ಸಭೆ ನಡೆದಿದೆ. ಸಭೆಯಲ್ಲಿ ಭಾಗವಹಿಸಿದ ಎಲ್ಲ ಪಕ್ಷಗಳ ನಾಯಕರು ನರೇಂದ್ರ ಮೋದಿ (Narendra Modi) ಅವರನ್ನು ಪ್ರಧಾನಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ. ಒಂದು ಸಾಲಿನ ನಿರ್ಣಯಕ್ಕೂ ಅಂಗೀಕಾರ ಹಾಕಿದ್ದಾರೆ. ಇದರೊಂದಿಗೆ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗುವುದು ಖಚಿತವಾಗಿದೆ. ಇದರ ಬೆನ್ನಲ್ಲೇ, “ನಾನೂ ಮಂತ್ರಿಯಾಗಲು ರೆಡಿ” ಎಂಬುದಾಗಿ ಎನ್‌ಡಿಎ ಸಭೆಯ ಬಳಿಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರು ಮನದಾಸೆಯನ್ನು ಬಿಚ್ಚಿಟ್ಟಿದ್ದಾರೆ.

ಎನ್‌ಡಿಎ ಸಭೆಯ ಬಳಿಕ ಬೆಂಗಳೂರಿಗೆ ತೆರಳುವ ಮೊದಲು ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರು. “ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಿತು. ನರೇಂದ್ರ ಮೋದಿ ಅವರ ಬಳಿ ಯಾವುದೇ ಬೇಡಿಕೆ ಇಟ್ಟಿಲ್ಲ. ಹಾಗೊಂದು ವೇಳೆ, ನರೇಂದ್ರ ಮೋದಿ ಅವರು ಬಯಸಿದರೆ ನಾನು ಸಚಿವನಾಗಿ ಕಾರ್ಯನಿರ್ವಹಿಸಲು ಸಿದ್ಧನಿದ್ದೇನೆ” ಎಂಬುದಾಗಿ ಅವರು ಹೇಳಿದರು. ಕರ್ನಾಟಕದಲ್ಲಿ ಜೆಡಿಎಸ್‌ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೈತ್ರಿ ಮಾಡಿಕೊಂಡಿರುವುದರಿಂದ ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಕೂಡ ಸಹಕಾರಿಯಾಗಿದೆ. ಹಾಗಾಗಿ, ಕುಮಾರಸ್ವಾಮಿ ಅವರಿಗೆ ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.

ಮೋದಿಗೆ ಎಲ್ಲರ ಬೆಂಬಲ

ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಎಲ್ಲ ಪಕ್ಷಗಳ ನಾಯಕರು ನರೇಂದ್ರ ಮೋದಿ ಅವರಿಗೆ ಬೆಂಬಲ ಸೂಚಿಸಿದರು. ಮೈತ್ರಿಕೂಟದ ಸರ್ಕಾರ ರಚನೆಗೆ ಕುರಿತು ತೆಗೆದುಕೊಂಡ ಒಂದು ಸಾಲಿನ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಿದರು. ಖಾತೆ ಹಂಚಿಕೆ, ಯಾವ ಖಾತೆ ಯಾರಿಗೆ ನೀಡಬೇಕು ಎಂಬುದರ ಕುರಿತು ಆಮೇಲೆ ನೋಡಿಕೊಳ್ಳೋಣ. ಮೊದಲು ಸರ್ಕಾರ ರಚನೆಯಾಗಲಿ ಎಂಬುದಾಗಿ ಎಲ್ಲ ನಾಯಕರು ಮೋದಿ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ತೆಗೆದುಕೊಂಡ ನಿರ್ಣಯ

‌ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ನರೇಂದ್ರ ಮೋದಿ ಅವರ ನಿವಾಸದಲ್ಲಿ ಸಭೆ ನಡೆಯಿತು. ತೆಲುಗುದೇಶಂ ಪಕ್ಷದ (TDP), ಸಂಯುಕ್ತ ಜನತಾದಳದ ನಿತೀಶ್‌ ಕುಮಾರ್‌, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌, ಆರ್‌ಎಲ್‌ಡಿಯ ಜಯಂತ್‌ ಚೌಧರಿ, ಜನಸೇನಾ ಪಕ್ಷದ ಪವನ್‌ ಕಲ್ಯಾಣ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಎಲ್ಲರೂ ಒಗ್ಗೂಡಿ ಸರ್ಕಾರ ರಚಿಸುವುದು, ಒಗ್ಗಟ್ಟಿನಿಂದ ಇರುವುದು ಸೇರಿ ಹಲವು ವಿಷಯಗಳ ಕುರಿತು ಚರ್ಚೆಯಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Narendra Modi: ಜೂನ್‌ 8 ಅಲ್ಲ, ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ!

Continue Reading
Advertisement
Minister Of Parliament
Latest22 mins ago

Minister Of Parliament: ನೀವು ಮತ ಹಾಕಿ ಕಳುಹಿಸಿರುವ ಸಂಸದರಿಗೆ ಎಷ್ಟು ಸಂಬಳ ಸಿಗುತ್ತದೆ ಗೊತ್ತೇ?

Uttarakhand Trekking Tragedy
ಪ್ರಮುಖ ಸುದ್ದಿ23 mins ago

Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ

India Bloc Meeting
ದೇಶ32 mins ago

India Bloc Meeting: ಆಡಳಿತದ ಆಸೆ ಕೈಬಿಟ್ಟ ಇಂಡಿಯಾ ಒಕ್ಕೂಟ; ಒಗ್ಗಟ್ಟಿಗಾಗಿ ಸಭೆ, ಬಲಿಷ್ಠ ಪ್ರತಿಪಕ್ಷದ ಗುರಿ!

India vs Ireland
ಕ್ರೀಡೆ54 mins ago

India vs Ireland: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಭಾರತ; ರೋಹಿತ್​ ಜತೆ ಕೊಹ್ಲಿ ಇನಿಂಗ್ಸ್​ ಆರಂಭ

Water Supply Cut
ಕರ್ನಾಟಕ59 mins ago

Water Supply Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾವೇರಿ ನೀರು ಪೂರೈಕೆಯಿಲ್ಲ!

Lowest Margin of Wins
ದೇಶ1 hour ago

Lowest Margin of Wins: ಕೇವಲ 48 ಮತ ಅಂತರದ ಗೆಲುವು! ಕಡಿಮೆ ಅಂತರದಿಂದ ಗೆದ್ದವರ ಪಟ್ಟಿ ಇಲ್ಲಿದೆ

Rahul Dravid
ಕ್ರೀಡೆ1 hour ago

Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Drowned in Water young man drowned in tungabhadra river and died
ಕರ್ನಾಟಕ2 hours ago

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Operation London Cafe movie will be released very soon
ಕರ್ನಾಟಕ2 hours ago

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Lok Sabha Election 2024
ರಾಜಕೀಯ2 hours ago

Lok Sabha Election 2024: ಹಿಂದೂಗಳಿಗೆ ಬುದ್ಧಿ ಇದ್ದಿದ್ದರೆ ಬಿಜೆಪಿ ಇಷ್ಟು ಹಿನ್ನಡೆ ಕಾಣುತ್ತಿರಲಿಲ್ಲ! ವಿಡಿಯೊ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌