Ranji Trophy : ಕರ್ನಾಟಕ ತಂಡಕ್ಕೆ 6 ರನ್​ಗಳ ಆಘಾತಕಾರಿ ಸೋಲು - Vistara News

ಕ್ರಿಕೆಟ್

Ranji Trophy : ಕರ್ನಾಟಕ ತಂಡಕ್ಕೆ 6 ರನ್​ಗಳ ಆಘಾತಕಾರಿ ಸೋಲು

Ranji Trophy :109 ರನ್​ಗಳ ಗೆಲುವಿನ ಗುರಿ ಪಡೆದಿದ್ದ ಕರ್ನಾಟಕ 103 ರನ್​ಗಳಿಗೆ ಸರ್ವಪತನ ಕಾಣುವ ಮೂಲಕ ಸೋಲೊಪ್ಪಿಕೊಂಡಿತು.

VISTARANEWS.COM


on

Ranji Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಸ್ತಾರ ನ್ಯೂಸ್​​​ ಬೆಂಗಳೂರು

ರಣಜಿ ಟ್ರೋಫಿ (Ranji Trophy) ಎಲೈಟ್​ ಸಿ ಗುಂಪಿನ ಪಂದ್ಯದಲ್ಲಿ ಮಯಾಂಕ್​ ಅಗರ್ವಾಲ್​ ನೇತೃತ್ವದ ಕರ್ನಾಟಕ ತಂಡ ಆಘಾತಕಾರಿ ಸೋಲು ಅನುಭವಿಸಿದೆ. ಗೆಲ್ಲುವ ಪಂದ್ಯದಲ್ಲಿ ಹೀನಾಯ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿದೆ. ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದ ನಾಲ್ಕನೇ ದಿನ ಕರ್ನಾಟಕ ತಂಡದ ಗೆಲುವಿಗೆ 109 ರನ್​ಗಳು ಬೇಕಾಗಿದ್ದವು. ಆದರೆ, 103 ರನ್​ಗಳಿಗೆ ಆಲ್​ಔಟ್ ಆಗುವ ಮೂಲಕ ಹೀನಾಯ ಸೋಲಿಗೆ ಒಳಗಾಗಿದೆ.

ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ತಂಡದ ಒಂದು ಹಂತದಲ್ಲಿ ಮೊದಲ ವಿಕೆಟ್​ಗೆ 50 ರನ್ ಬಾರಿಸಿತ್ತು. ಈ ಹಂತದಲ್ಲಿ ಗೆಲುವು ಮಯಾಂಕ್​ ಅಗರ್ವಾಲ್​ ನೇತೃತ್ವದ ತಂಡದ ಕೈಯಲ್ಲಿತ್ತು. ಆದರೆ, ಗುಜರಾತ್​ನ ಸ್ಪಿನ್ನರ್ ಸಿದ್ಧಾರ್ಥ್​ ದೇಸಾಯಿ ದಾಳಿಗೆ ನಲುಗಿದ ಕರ್ನಾಟಕ ಉಳಿದ 10 ವಿಕೆಟ್​ಗಳನ್ನು 53 ರನ್​ ಗಳಿಸುವಷ್ಟರಲ್ಲಿ ಕಳೆದುಕೊಳ್ಳುವ ಮೂಲಕ ಆಘಾತಕ್ಕೆ ಒಳಗಾಯಿತು.

ಇನ್ನೇನು ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಗೆದ್ದೇ ಬಿಟ್ಟಿತು ಎನ್ನುವ ಪಂದ್ಯದಲ್ಲಿ ಸೋತು ಅವಮಾನಕ್ಕೆ ಒಳಗಾಗಿದೆ. ಒಂದು ಹಂತದಲ್ಲಿ ಎಲ್ಲವೂ ಕನ್ನಡಿಗರ ಪರವಾಗಿ ಸಾಗಿತ್ತು. ಆ ಮೂಲಕ ಗುಜರಾತ್ ತಂಡ ಸತತ ಎರಡು ಗೆಲುವುಗಳೊಂದಿಗೆ ರಣಜಿ ಟ್ರೋಫಿ 2023-24ರ ಸಿ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ 7 ವಿಕೆಟ್‌ ಪಡೆದು ಸಿದ್ದಾರ್ಥ್​ ದೇಸಾಯಿ ಮಿಂಚಿದರು. ಗೆಲುವಿಗೆ 110 ರನ್‌ಗಳ ರನ್‌ಗಳ ಅತ್ಯಲ್ಪ ಹಾಗೂ ಸುಲಭ ಗುರಿ ಪಡೆದ ಕರ್ನಾಟಕ ಕೇವಲ 103 ರನ್‌ಗಳಿಗೆ ಆಲೌಟ್‌ ಆಗಿದ್ದು ಹೋರಾಟದ ಕೊರತೆಯನ್ನು ಎತ್ತಿ ತೋರಿಸಿತು.

ಇದನ್ನೂ ಓದಿ : Rohit Sharma : ಎಂಸ್ ಧೋನಿ ದಾಖಲೆ ಸರಿಗಟ್ಟಿದ ಕ್ಯಾಪ್ಟನ್ ರೋಹಿತ್ ಶರ್ಮಾ

ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ ಆಡಿದ ಗುಜರಾತ್‌, ಕ್ಷಿತಿಜ್‌ ಕುಮಾರ್‌ ಮತ್ತು ಉಮಾಂಕ್‌ ಕುಮಾರ್‌ ಅರ್ಧಶತಕದ ಹೊರತಾಗಿಯೂ 264 ರನ್‌ಗಳಿಗೆ ಆಲೌಟ್‌ ಆಯ್ತು. ಕರ್ನಾಟಕ ಪರ ಕೌಶಿಲ್‌ 4 ವಿಕೆಟ್‌ ಪಡೆದರು. ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್‌ ಆಡಿದ ಕರ್ನಾಟಕ, ಭರ್ಜರಿ 374 ರನ್‌ ಕಲೆ ಹಾಕಿ ಭಾರಿ ಮುನ್ನಡೆ ಸಾಧಿಸಿತು. ಮೊದಲ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶೂನ್ಯಕ್ಕೆ ಔಟಾಗಿದ್ದ ನಾಯಕ ಮಯಾಂಕ್‌ ಅಗರ್ವಾಲ್‌ (109), ಆಕರ್ಷಕ ಶತಕ ಸಿಡಿಸಿದರು. ಮನೀಶ್ ಪಾಂಡೆ 88 ರನ್‌ ಕೊಡುಗೆ ನೀಡಿದ್ದರು. 110 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಗುಜರಾತ್‌ ಮತ್ತೆ ವೈಫಲ್ಯ ಕಂಡಿತು. ಮನನ್‌ ಮತ್ತು ಉಮಾಂಗ್‌ ಕುಮಾರ್‌ ತಲಾ ಅರ್ಧಶತಕದ ನೆರವಿಂದ ಅಂತಿಮವಾಗಿ 219 ರನ್‌ ಗಳಿಸಿ ಆಲೌಟ್‌ ಆಯ್ತು. ಆ ಮೂಲಕ 109 ರನ್‌ಗಳ ಅಲ್ಪ ಮುನ್ನಡೆ ಸಾಧಿಸಿತು.

ಕುಸಿದ ಕರ್ನಾಟಕ

ಸುಲಭ ಗುರಿ ಪಡೆದ ಕರ್ನಾಟಕ ಕೆಲವೇ ನಿಮಿಷಗಳಲ್ಲಿ ಗೆಲುವಿನ ನಗೆ ಬೀರುವ ವಿಶ್ವಾಸದಲ್ಲಿತ್ತು. ನಾಯಕ ಅಗರ್ವಾಲ್‌ ಮತ್ತು ದೇವದತ್‌ ಪಡಿಕಲ್‌ ಮೊದಲ ವಿಕೆಟ್‌ಗೆ 50 ರನ್‌ಗಳ ಜೊತೆಯಾಟವಾಡಿದರು. 19 ರನ್‌ ಗಳಿಸಿದ್ದ ಮಯಾಂಕ್‌ ಮತ್ತು 31 ರನ್ ಗಳಿಸಿ ಪಡಿಕಲ್‌ ಔಟಾಗುತ್ತಿದ್ದಂತೆಯೇ ಏಕಾಏಕಿ ತಂಡದ ಬ್ಯಾಟಿಂಗ್ ಬಲ ಕುಸಿಯಿತು.

ಸಿದ್ಧಾರ್ಥ್‌ ದೇಸಾಯಿ ಮಾರಕ ದಾಳಿಗೆ ಕರ್ನಾಟಕ ತಂಡದ ವಿಕೆಟ್‌ಗಳು ಉದುರಿದವು. ಶುಭಾಂಗ್‌ ಹೆಗ್ಡೆ 27 ರನ್ ಗಳಿಸಿದ್ದನ್ನು ಹೊರತುಪಡಿಸಿದರೆ ಬೇರೆ ಯಾರಿಂದಲೂ ಎರಡಂಕಿ ರನ್‌ ಕಲೆಹಾಕಲು ಸಾಧ್ಯವಾಗಲಿಲ್ಲ. ಕೊನೆಯವರಾಗಿ ಔಟಾದ ಬೌಲರ್‌ ಪ್ರಸಿದ್ಧ ಕೃಷ್ಣ, 1 ಸಿಕ್ಸರ್‌ ಸಹಿತ 7 ರನ್‌ ಗಳಿಸಿದರು. ತಂಡವನ್ನು ಗೆಲುವಿನ ದಡ ಸೇರಿಸುತ್ತಾರೆ ಎನ್ನುವಷ್ಟರಲ್ಲಿ ಬೌಲ್ಡ್ ಅದರು.

ಈ ಸೋಲಿನ ಬಳಿಕ ಕರ್ನಾಟಕ ತಂಡವು ಸಿ ಗುಂಪಿನ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕಿಳಿದಿದೆ. ಸತತ ಎರಡು ಗೆಲವು ಸಾಧಿಸಿದ ಗುಜರಾತ್‌ ಅಗ್ರಸ್ಥಾನಕ್ಕೆ ಬಡ್ತಿ ಪಡೆದಿದೆ. ಕರ್ನಾಟಕ ತಂಡವು ಮುಂದೆ ಜನವರಿ 19ರಿಂದ ಆರಂಭವಾಗಲಿರುವ ಪಂದ್ಯದಲ್ಲಿ ಗೋವಾ ತಂಡವನ್ನು ಎದುರಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Pakistan Cricket Team: ಪಾಕ್​ ಮಾಧ್ಯಮ ವರದಿಗಳ ಪ್ರಕಾರ ಮಾಜಿ ಆಟಗಾರರು ಹಾಗೂ ಪಿಸಿಬಿ ಸದಸ್ಯರು ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Pakistan Cricket Team
Koo

ಇಸ್ಲಾಮಾಬಾದ್‌: ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ(T20 World Cup 2024) ಕಳಪೆ ಪ್ರದರ್ಶನ ತೋರುವ ಮೂಲಕ ಟೂರ್ನಿಯಿಂದ ಹೊರಬಿದ್ದು ಆಘಾತ ಕಂಡಿರುವ ಪಾಕಿಸ್ತಾನ ತಂಡದ(Pakistan Cricket Team) ಆಟಗಾರರಿಗೆ ಮತ್ತೊಂದು ಶಾಕ್​ ಎದುರಾಗಿದೆ. ಆಟಗಾರರ ವಾರ್ಷಿಕ ಸಂಭಾವನೆಯಲ್ಲಿ ಕಡಿತ ಮಾಡಲು ಪಾಕ್​ ಕ್ರಿಕೆಟ್​ ಮಂಡಳಿ(PCB) ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕ 5ಕ್ಕೆ ಏರಿಕೆಯಾಯಿತು. ಇದರಿಂದಾಗಿ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ. ಟೂರ್ನಿಯಿಂದ ಹೊರಬಿದ್ದ ಪಾಕ್​ ತಂಡದ ವಿರುದ್ಧ ಮಾಜಿ ಆಟಗಾರರು ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ. ಈ ರೀತಿ ಪ್ರದರ್ಶನ ತೋರುದಕ್ಕಿಂತ ಟೂರ್ನಿಯಲ್ಲಿ ಪಾಲ್ಗೊಳ್ಳದೇ ಇದ್ದಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

ಪಾಕ್​ ಮಾಧ್ಯಮ ವರದಿಗಳ ಪ್ರಕಾರ ಮಾಜಿ ಆಟಗಾರರು ಹಾಗೂ ಪಿಸಿಬಿ ಸದಸ್ಯರು ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಪಾಕ್​ ಕ್ರಿಕೆಟ್​ ಮಂಡಳಿ ಕೂಡ ಈ ವಿಚಾರವನ್ನು ಗಂಭಿರವಾಗಿ ಪರಿಗಣಿಸಿದ್ದು ಉನ್ನತ ಮಟ್ಟದ ಸಭೆ ನಡೆಸಿ ಆಟಗಾರರ ಕೇಂದ್ರೀಯ ಗುತ್ತಿಗೆಯನ್ನು ಮರು ಪರಿಶೀಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ Pakistan Cricket Board: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ ಜಾರಿಗೆ ತಂದ ಪಾಕ್​ ಕ್ರಿಕೆಟ್​ ಮಂಡಳಿ

ವೇತನ ಮಾತ್ರವಲ್ಲದೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನಿಯಮವನ್ನು ಜಾರಿಗೆ ತೆರಲಿದೆ ಎಂದು ತಿಳಿದುಬಂದಿದೆ. ಈ ನಿಯಮದ ಪ್ರಕಾರ ದೇಶಿ ಕ್ರಿಕೆಟ್‌ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಎಲ್ಲ ಪಾಕ್​ ಆಟಗಾರರು ವರ್ಷವೊಂದರಲ್ಲಿ ಪಾಕಿಸ್ತಾನ ಸೂಪರ್‌ ಲೀಗ್‌ (ಪಿಎಸ್‌ಎಲ್‌) ಹೊರತುಪಡಿಸಿ, ವಿದೇಶಗಳಲ್ಲಿ ನಡೆಯುವ ಎರಡು ಟಿ20 ಲೀಗ್‌ಗಳಲ್ಲಿ ಮಾತ್ರ ಭಾಗವಹಿಸಬಹುದಾಗಿದೆ.

ಪಾಕ್​ ತಂಡದ ವಿರುದ್ಧ ದೇಶದ್ರೋಹದ ಕೇಸ್‌


ನಿರಾಸದಾಯಕ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡದ ವಿರುದ್ಧ ಪಾಕ್‌ನ ಗುಜ್ರಾನ್ವಾಲಾ ನಗರದ ವಕೀಲರೊಬ್ಬರು ದೇಶದ್ರೋಹ ಕೇಸ್‌ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಕೇಸ್‌ನ ಬಗ್ಗೆ ಜೂನ್​ 21ಕ್ಕೆ ಮುನ್ನ ವರದಿ ಸಲ್ಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ ಎಂದು ತಿಳಿದುಬಂದಿದೆ. ಪಾಕ್‌ ತಂಡದ ಕಳಪೆ ಪ್ರದರ್ಶನದಿಂದ ಹಣ ವ್ಯರ್ಥವಾಗುತ್ತಿದೆ ಮತ್ತು ರಾಷ್ಟ್ರದ ನಂಬಿಕೆಗೆ ದ್ರೋಹ ಉಂಟಾಗಿದೆ. ಆಟಗಾರರು ದೇಶದ ಬಗ್ಗೆ ಗೌರವಕ್ಕಿಂತ ಆರ್ಥಿಕ ಲಾಭಕ್ಕೆ ಆದ್ಯತೆ ನೀಡಿದ್ದಾರೆ ಎಂದು ಅರ್ಜಿದಾರ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಗಿ ವರದಿಯಾಗಿದೆ.

Continue Reading

ಕ್ರೀಡೆ

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

David Wiese Retirement: ಡೇವಿಡ್ ವೈಸ್ ಅವರು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಆರಂಭಿಸಿದ್ದು ದಕ್ಷಿಣ ಆಫ್ರಿಕಾ ತಂಡದ ಪರ ಆಡುವ ಮೂಲಕ. 2021ರಲ್ಲಿ ನಮೀಬಿಯಾ ತಂಡ ಸೇರಿದ್ದರು. ಒಟ್ಟು 5 ವರ್ಷಗಳ ಕಾಲ ನಮೀಬಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. 2021ರ ಟಿ20 ವಿಶ್ವಕಪ್‌ನಲ್ಲಿ ಆಡುವ ಮೂಲಕ ನಮೀಬಿಯಾ ತಂಡದ ಪರ ಪಾದಾರ್ಪಣೆ ಮಾಡಿದ್ದರು.

VISTARANEWS.COM


on

David Wiese Retirement
Koo

ನ್ಯೂಯಾರ್ಕ್​: ನಮೀಬಿಯಾ(Namibia allrounder David Wiese) ತಂಡದ ಅನುಭವಿ ಆಟಗಾರ ಡೇವಿಡ್ ವೈಸ್(David Wiese) ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ(David Wiese Retirement) ಹೇಳಿದ್ದಾರೆ. ಶನಿವಾರ ರಾತ್ರಿ ನಡೆದ ಇಂಗ್ಲೆಂಡ್​ ವಿರುದ್ಧದ ಟಿ20 ವಿಶ್ವಕಪ್​ನ ಅಂತಿಮ ಲೀಗ್​ ಪಂದ್ಯದಲ್ಲಿ ಆಡಿದ ಬಳಿಕ ಡೇವಿಡ್ ವೈಸ್ ತಮ್ಮ ನಿವೃತ್ತಿ ಘೋಷಿಸಿದರು.

ಡೇವಿಡ್ ವೈಸ್ ಅವರು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಆರಂಭಿಸಿದ್ದು ದಕ್ಷಿಣ ಆಫ್ರಿಕಾ ತಂಡದ ಪರ ಆಡುವ ಮೂಲಕ. 2021ರಲ್ಲಿ ನಮೀಬಿಯಾ ತಂಡ ಸೇರಿದ್ದರು. ಒಟ್ಟು 5 ವರ್ಷಗಳ ಕಾಲ ನಮೀಬಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. 2021ರ ಟಿ20 ವಿಶ್ವಕಪ್‌ನಲ್ಲಿ ಆಡುವ ಮೂಲಕ ನಮೀಬಿಯಾ ತಂಡದ ಪರ ಪಾದಾರ್ಪಣೆ ಮಾಡಿದ್ದರು.

ಆಲ್​ರೌಂಡರ್​ ಆಗಿರುವ ವೈಸ್​ ಅವರು ನಮೀಬಿಯಾ ಪರ 34 ಟಿ20 ಪಂದ್ಯಗಳನ್ನು ಆಡಿ 532 ರನ್ ಗಳಿಸಿದ್ದಾರೆ. ಬೌಲಿಂಗ್​ನಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ಅವರು 35 ವಿಕೆಟ್​ ಕಿತ್ತಿದ್ದಾರೆ. ಒಂಬತ್ತು ಏಕದಿನ ಪಂದ್ಯಗಳನ್ನು ಆಡಿ 228 ರನ್ ಗಳಿಸಿದ್ದಾರೆ. ಆರು ವಿಕೆಟ್​ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾ ತಂಡದ ಪರ ಆಡಿ ಒಟ್ಟಾರೆಯಾಗಿ, ಅವರು 54 ಟಿ20 ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಇದನ್ನೂ ಓದಿ SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

“ನನಗೆ ಈಗ 39 ವರ್ಷ, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇನ್ನು ಮುಂದುವರಿಯಲು ಇದು ಸೂಕ್ತ ಸಯಯವಲ್ಲ ಎಂದು ತಿಳಿದಿದೆ. ಹೀಗಾಗಿ ನಾನು ಕ್ರಿಕೆಟ್​ನಿಂದ ನಿವೃತ್ತಿಯಾಗುತ್ತಿದ್ದೇನೆ. 2 ದೇಶಗಳನ್ನು ಪ್ರತಿನಿಧಿಸಲು ನನಗೆ ಅವಕಾಶ ಮಾಡಿಕೊಟ್ಟ ಎಲ್ಲ ಸಿಬ್ಬಂದಿ ಮತ್ತು ಸಹ ಆಟಗಾರರಿಗೆ ಧನ್ಯವಾದಗಳು” ಎಂದು ವೈಸ್ ಹೇಳಿದರು.

ಪಂದ್ಯ ಗೆದ್ದ ಇಂಗ್ಲೆಂಡ್​


ಶನಿವಾರ ರಾತ್ರಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಇಂಗ್ಲೆಂಡ್​ ತಂಡ ನಮೀಬಿಯಾ ವಿರುದ್ಧ ಡಕ್​ವರ್ತ್​ ಲೂಯಿಸ್​ ನಿಯಮದನ್ವಯ 41 ರನ್​ ಅಂತರದಿಂದ ಗೆದ್ದು ಬೀಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 10 ಓವರ್ ಗಳಲ್ಲಿ 122 ರನ್ ಗಳಿಸಿದರೆ, ನಮೀಬಿಯಾ ತಂಡವು 84 ರನ್ ಮಾತ್ರ ಗಳಿಸಿ ಸೋಲು ಕಂಡಿತು. ಇಂದು ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಸ್ಕಾಟ್ಲೆಂಡ್​ ವಿರುದ್ಧ 5 ವಿಕೆಟ್​ ಅಂತರದ ಗೆಲುವು ಸಾಧಿಸಿದ ಪರಿಣಾಮ ಇಂಗ್ಲೆಂಡ್​ ಸೂಪರ್​-8 ಹಂತಕ್ಕೇರಿತು.

Continue Reading

ಕ್ರೀಡೆ

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

SCO vs AUS: ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

VISTARANEWS.COM


on

SCO vs AUS
Koo

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯಾ): ಸೂಪರ್​-8 ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಸ್ಕಾಟ್ಲೆಂಡ್(SCO vs AUS)​ ತಂಡ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

ಇಲ್ಲಿನ ಸೇಂಟ್‌ ಲೂಸಿಯಾದ ಡ್ಯಾರೆನ್​ ಶಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 180 ರನ್​ಗಳ ಬೃಹತ್​ ಮೊತ್ತ ಪೇರಿಸಿತು. ಈ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 19.4 ಓವರ್​ಗಳಲ್ಲಿ 5 ವಿಕೆಟ್​ಗೆ 186 ರನ್​ ಬಾರಿಸಿ ಗೆಲುವು ದಾಖಲಿಸಿತು. ಆಸೀಸ್​ ಬ್ಯಾಟಿಂಗ್​ ಸರದಿಯಲ್ಲಿ ಆರಂಭಿಕ ಆಟಗಾರ ಟ್ರಾವಿಸ್​ ಹೆಡ್​(68) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್​ ಮಾರ್ಕಸ್​ ಸ್ಟೋಯಿನಿಸ್​(59) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಟಿಮ್​ ಡೇವಿಡ್​ ಅಜೇಯ 24 ರನ್​ ಬಾರಿಸಿದರು. ಡೇವಿಡ್​ ವಾರ್ನರ್​(1) ಮತ್ತು ನಾಯಕ ಮಿಚೆಲ್​ ಮಾರ್ಷ್(8) ಮತ್ತೆ ವಿಫಲರಾದರು.​

ಪಂದ್ಯದ ತಿರುವು


17 ಓವರ್​ ತನಕ ಪಂದ್ಯ ಸ್ಕಾಟ್ಲೆಂಡ್ ತಂಡದ ಪರ ಇತ್ತು. ಆದರೆ 18ನೇ ಓವರ್​ನಲ್ಲಿ ಪಂದ್ಯದ ಚಿತ್ರಣವೇ ಬದಲಾಯಿತು. ಬ್ರಾಡ್ ವೀಲ್ ಓವರ್​ನಲ್ಲಿ ಕ್ಯಾಮರೂನ್​ ಗ್ರೀನ್​ ಹ್ಯಾಟ್ರಿಕ್​ ಬೌಂಡರಿ ಬಾರಿಸಿ ಒಟ್ಟು 13 ರನ್​ ಕಸಿದರು. ಇದಕ್ಕೂ ಮುನ್ನ 2 ಓವರ್​ ನಡೆಸಿ ಒಂದು ಮೇಡನ್​ ಸಹಿತ ವಿಕೆಟ್ ಕಿತ್ತಿದ್ದ ಬ್ರಾಡ್ ವೀಲ್ ಈ ಓವರ್​ನಲ್ಲಿ ದುಬಾರಿಯಾದರು. ಇದು ಸ್ಕಾಟ್ಲೆಂಡ್​ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಒಂದೊಮ್ಮೆ ಈ ಓವರ್​ ಕಂಟ್ರೋಲ್​ ಆಗುತ್ತಿದ್ದರೆ ಸ್ಕಾಟ್ಲೆಂಡ್​ಗೆ ಗೆಲುವಿನ ಅವಕಾಶ ಇರುತ್ತಿತ್ತು.

ಇದನ್ನೂ ಓದಿ T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ಬಿರುಸಿನ ಆಟಕ್ಕೆ ಒತ್ತು ನೀಡಿ ದೊಡ್ಡ ಮೊತ್ತವನ್ನು ಕಲೆಹಾಕಿತು. ಆರಂಭಿಕ ಆಟಗಾರ ಜಾರ್ಜ್ ಮುನ್ಸಿ ಆರಂಭದಿಂದಲೇ ಆಸೀಸ್​ ಬೌಲರ್​ಗಳ ಮೇಲೆರಗಿ ಮೂರು ಸಿಕ್ಸರ್ ಮತ್ತು 2 ಸಿಕ್ಸರ್​ ನೆರವಿನಿಂದ 35 ರನ್​ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ವಿಕೆಟ್​ ಪತನದ ಬಳಿಕ ಬಂದ ಬ್ರಾಂಡನ್ ಮೆಕ್‌ಮುಲ್ಲೆನ್ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ ಗಮನಸೆಳೆದರು. ಕೇವಲ 34 ಎಸೆತಗಳಿಂದ 60 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇವರ ಈ ಸೊಗಸಾದ ಬ್ಯಾಟಿಂಗ್​ ವೇಳೆ ಬರೋಬ್ಬರಿ 6 ಸಿಕ್ಸರ್​ ಮತ್ತು 2 ಬೌಂಡರಿ ಸಿಡಿಯಿತು. ಇವರಿಗೆ ಮತ್ತೊಂದು ತುದಿಯಲ್ಲಿ ನಾಯಕ ರಿಚಿ ಬೆರಿಂಗ್ಟನ್ ಕೂಡ ಉತ್ತಮ ಸಾಥ್​ ನೀಡಿದರು. ಬೆರಿಂಗ್ಟನ್ 31 ಎಸೆತಗಳಿಂದ 42 ರನ್​ ಬಾರಿಸಿ ಅಜೇಯರಾಗಿ ಉಳಿದರು. ಆದರೆ ಪಂದ್ಯ ಸೋತ ಕಾರಣ ಇವರ ಬ್ಯಾಟಿಂಗ್​ ಸಾಹಸ ವ್ಯರ್ಥಗೊಂಡಿತು. ಆಸೀಸ್​ ಪರ ಗ್ಲೆನ್​ ಮ್ಯಾಕ್ಸ್​ವೆಲ್​ 44 ರನ್​ ವೆಚ್ಚದಲ್ಲಿ 2 ವಿಕೆಟ್​ ಕಿತ್ತರು.

Continue Reading

ಕ್ರೀಡೆ

INDW vs SAW: ಶುಭಾರಂಭದ ನಿರೀಕ್ಷೆಯಲ್ಲಿ ಹರ್ಮನ್​ಪ್ರೀತ್​ ಬಳಗ; ಇಂದು ಮೊದಲ ಏಕದಿನ

INDW vs SAW: ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಇವರು ತಂಡಕ್ಕೆ ಆಸರೆಯಾಗಬಲ್ಲರು.

VISTARANEWS.COM


on

INDW vs SAW
Koo

ಬೆಂಗಳೂರು: ಆತಿಥೇಯ ಭಾರತ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕಾ(INDW vs SAW) ಮಹಿಳಾ ಕ್ರಿಕೆಟ್​​ ಸರಣಿಗೆ ಇಂದು(ಭಾನುವಾರ) ಚಾಲನೆ ಸಿಗಲಿದೆ. ಏಕದಿನ ಪಂದ್ಯ ಆಡುವ ಮೂಲಕ ಸರಣಿ ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭಗೊಳ್ಳಲಿದೆ. ಪಂದ್ಯಕ್ಕೆ ಮಳೆ ಭೀತಿ ಕೂಡ ಎದುರಾಗಿದೆ.

ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಭಾರತ ತಂಡ ವರ್ಷಾರಂಭದಲ್ಲಿ ಆಸ್ಟ್ರೇಲಿಯಾ ಎದುರಿನ ಏಕದಿನ ಹಾಗೂ ಟಿ20 ಸರಣಿಯಲ್ಲಿ ಕಳಪೆ ಪ್ರದರ್ಶನ ತೋರುವ ಮೂಲಕ ಸೋಲು ಕಂಡಿತ್ತು. ಇದೇ ವರ್ಷ ಟಿ20 ವಿಶ್ವಕಪ್​ ಟೂರ್ನಿಯೂ ಇರುವ ಕಾರಣ ಭಾರತ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಬೇಕಿದೆ. ಜತೆಗೆ ಯುವ ಆಟಗಾರ್ತಿಯರು ಸಿಕ್ಕ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕಿದೆ.

ಉಪನಾಯಕಿ ಸ್ಮೃತಿ ಮಂಧನಾ-ಶಫಾಲಿ ವರ್ಮ ಜೋಡಿ ಕಳೆದ ಕೆಲ ವರ್ಷಗಳಿಂದ ನಿರೀಕ್ಷಿತ ಆರಂಭ ಒದಗಿಸುತ್ತಿಲ್ಲ. ದೇಶೀಯ ಕ್ರಿಕೆಟ್​ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿದ್ದ ಅಗ್ರ ಕ್ರಮಾಂಕದ ಬ್ಯಾಟರ್ ಪ್ರಿಯಾ ಪೂನಿಯಾ ಏಕದಿನ ಮತ್ತು ಟೆಸ್ಟ್‌ ತಂಡಕ್ಕೆ ಮರಳಿದ್ದಾರೆ. ಇವರಿಗೆ ಇಂದಿನ ಪಂದ್ಯದಲ್ಲಿ ಸ್ಥಾನ ಸಿಗುವುದು ಅನುಮಾನ. ಶಫಾಲಿ ಬ್ಯಾಟಿಂಗ್​ ವೈಫಲ್ಯ ಕಂಡರೆ ಮುಂದಿನ ಪಂದ್ಯದಲ್ಲಿ ಇವರು ಬೆಂಚ್​ ಕಾಯಬೇಕಾದೀತು. ಆಗ ಇವರ ಸ್ಥಾನದಲ್ಲಿ ಪ್ರಿಯಾ ಆಡಬಹುದು.

ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಇವರು ತಂಡಕ್ಕೆ ಆಸರೆಯಾಗಬಲ್ಲರು. ನಾಯಕಿ ಹರ್ಮನ್​ಪ್ರೀತ್​ ತಮ್ಮ ಬ್ಯಾಟಿಂಗ್​ ವೈಫಲ್ಯದಿಂದ ಹೊರಬರಬೇಕಿದೆ. ಇತ್ತೀಚೆಗೆ ಆಡಿದ ಎಲ್ಲ ಸರಣಿಯಲ್ಲೂ ಅವರು ರನ್​ ಬರ ಎದುರಿಸಿದ್ದರು. ಕರ್ನಾಟಕದ ಶ್ರೇಯಾಂಕಾ ಪಾಟೀಲ್‌ ಮೇಲೆ ಭಾರೀ ಭರವಸೆ ಇಡಲಾಗಿದೆ. ಅವರಿಗೆ ಇದು ತವರಿನ ಮೈದಾನವೂ ಹೌದು.

ಇದನ್ನೂ ಓದಿ INDW vs SAW: ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಭಾರತ ಮಹಿಳಾ ತಂಡ; ಕನ್ನಡದಲ್ಲೇ ತಂಡದ ಸಿದ್ಧತೆ ವಿವರಿಸಿದ ಶ್ರೇಯಾಂಕಾ

ಕೆಲ ದಿನಗಳ ಹಿಂದೆ ಪಂದ್ಯ ಸಿದ್ಧತೆ ಬಗ್ಗೆ ಕನ್ನಡದಲ್ಲೇ ಮಾತನಾಡಿದ್ದ ಶ್ರೇಯಾಂಕ, ‘ಎಲ್ಲರಿಗೂ ನಮಸ್ಕಾರ, ನಾವು ಬೆಂಗಳೂರಿನಲ್ಲಿದ್ದೇವೆ. ಇಲ್ಲಿನ ವಾತಾವರಣ ತುಂಬಾ ಹಿತ ನೀಡಿದೆ. ಮೊದಲ ಅಭ್ಯಾಸ ಅವಧಿಯನ್ನು ಅತ್ಯಂತ ಯಶಸ್ವಿಯಾಗಿ ಮುಗಿಸಿದ್ದೇವೆ. ಎಲ್ಲರು ತುಂಬಾ ಎನರ್ಜಿಯಿಂದ ಅಭ್ಯಾಸ ನಡೆಸಿದೆವು. ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಆಡಲು ಕಾತರಗೊಂಡಿದ್ದೇವೆ. ಇಲ್ಲಿ ನಡೆದ ಡಬ್ಲ್ಯುಪಿಎಲ್​ ಪಂದ್ಯಾವಳಿಯ ವೇಳೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬಂದು ಸ್ಟೇಡಿಯಂ ತುಂಬಿ ಹೋಗಿತ್ತು. ಇದೀಗ ಏಕದಿನ ಸರಣಿಗೂ ಅದೇ ರೀತಿ ಸ್ಟೇಡಿಯಂಗೆ ಬಂದು ಟೀಮ್​ ಇಂಡಿಯಾಕ್ಕೆ ಸಪೋರ್ಟ್​ ಮಾಡಿ’ ಎಂದು ಕೇಳಿಕೊಂಡಿದ್ದರು.

ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ವಾರ್ಟ್‌ ಅಮೋಘ ಫಾರ್ಮ್ ನಲ್ಲಿದ್ದಾರೆ. ಕಳೆದ 5 ಇನ್ನಿಂಗ್ಸ್‌ಗಳಲ್ಲಿ ಮೂರು ಶತಕ ಬಾರಿಸಿದ ಸಾಧನೆ ಮಾಡಿದ್ದರು. ಹೀಗಾಗಿ ಇವರನ್ನು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ಇರದಂತೆ ಭಾರತೀಯ ಬೌಲರ್​ಗಳು ನೋಡಿಕೊಳ್ಳಬೇಕು. ಮರಿಜಾನ್‌ ಕಾಪ್‌, ಅಯಬೊಂಗಾ ಖಾಕಾ, ನಾಡಿನ್‌ ಡಿ ಕ್ಲರ್ಕ್‌ ಕೂಡ ಉತ್ತಮ ಫಾರ್ಮ್​ನಲ್ಲಿದ್ದಾರೆ. ಈ ಬಾರಿಯ ಡಬ್ಲ್ಯುಪಿಎಲ್​ ಟೂರ್ನಿಯಲ್ಲೂ ಇವರೆಲ್ಲ ಶ್ರೇಷ್ಠ ಪ್ರದರ್ಶನ ತೋರಿದ್ದರು. ಬೆಂಗಳೂರಿನಲ್ಲಿ ಆಡಿದ ಅನುಭವ ಕೂಡ ಇವರಿಗಿದೆ. ಹೀಗಾಗಿ ಇವರಿಗೆ ಇಲ್ಲಿನ ಪಿಚ್​ಗೆ ಹೊಂದಿಕೊಳ್ಳಲು ಅಷ್ಟು ಕಷ್ಟವಾಗದು. ಒಟ್ಟಾರೆ ಪಂದ್ಯವನ್ನು ಜಿದ್ದಾಜಿದ್ದಿನಿಂದ ನಿರೀಕ್ಷಿಸಬಹುದು.

Continue Reading
Advertisement
murder Case
ಬೆಂಗಳೂರು ಗ್ರಾಮಾಂತರ1 min ago

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

R Ashok
ಕರ್ನಾಟಕ6 mins ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Viral News
ವೈರಲ್ ನ್ಯೂಸ್25 mins ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Chandan Shetty Students Party Video Song Vidyarthi Vidyarthiniyare Movie
ಸ್ಯಾಂಡಲ್ ವುಡ್38 mins ago

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Vijayanagara News
ವಿಜಯನಗರ51 mins ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Pakistan Cricket Team
ಕ್ರಿಕೆಟ್57 mins ago

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Madrasa
ದೇಶ1 hour ago

Madrasa: ಬಕ್ರೀದ್‌ ಹಿನ್ನೆಲೆ ಮದರಸಾದಲ್ಲೇ ಗೋವುಗಳ ಬಲಿ; ನೂರಾರು ಹಿಂದುಗಳಿಂದ ದಾಳಿ, ಸೆಕ್ಷನ್‌ 144 ಜಾರಿ!

Actor Darshan teacher Addanda Cariappa sad on arrested darshan
ಸಿನಿಮಾ1 hour ago

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Shivraj Chouhan
ವೈರಲ್ ನ್ಯೂಸ್1 hour ago

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Electric shock
ಚಿಕ್ಕಮಗಳೂರು2 hours ago

Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ51 mins ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ23 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌