Business Guide : ನಿರಂತರ ಪರಿಶ್ರಮ, ಕಲಿಕೆ, ಹೊಸ ಆಲೋಚನೆಯೇ ಸೇಲ್ಸ್‌ ಸಕ್ಸಸ್‌ ಮಂತ್ರ - Vistara News

ಮನಿ-ಗೈಡ್

Business Guide : ನಿರಂತರ ಪರಿಶ್ರಮ, ಕಲಿಕೆ, ಹೊಸ ಆಲೋಚನೆಯೇ ಸೇಲ್ಸ್‌ ಸಕ್ಸಸ್‌ ಮಂತ್ರ

ಬಿಸಿನೆಸ್‌ ಜಗತ್ತಿನಲ್ಲಿ ಯಶಸ್ಸಿಗೆ ಯಾವುದೇ ಅಡ್ಡ ದಾರಿಗಳಿಲ್ಲ. ನಿರಂತರ ಶ್ರಮ, ( Business Guide ) ಕಲಿಕೆ, ಹೊಸ ಬಗೆಯ ಆಲೋಚನೆ ಇಲ್ಲಿ ಅತ್ಯಂತ ಮುಖ್ಯ. ವಿವರ ಇಲ್ಲಿದೆ.

VISTARANEWS.COM


on

business plan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಯಾಲ್ಟಿ ಬ್ರೋಕರ್ ಶೈಲೇಂದ್ರ ಅವರ ಬಿಸಿನೆಸ್‌ ಸಕ್ಸಸ್‌ ಸ್ಟೋರಿ ರೋಚಕ. ಕೇವಲ ಮೂರೇ ದಿನಗಳಲ್ಲಿ ಅವರು 30 ಕೋಟಿ ರೂ. ಬೆಲೆ ಬಾಳುವ ಪ್ರಾಪರ್ಟಿಯನ್ನು ಮಾರಿದ್ದರು. ಈ ಡೀಲ್‌ನಲ್ಲಿ ಲಕ್ಷಾಂತರ ರೂ. ಕಮೀಶನ್‌ ಪಡೆದಿದ್ದರು. ಆದರೆ ಈ ಮೂರು ದಿನಗಳ ಹಿಂದೆ ದಶಕಗಳ ‌ಅನುಭವದ ಜರ್ನಿ ಇತ್ತು. ಕಳೆದ ಕೆಲವು ವರ್ಷಗಳಿಂದ ಬಿಸಿನೆಸ್‌ ಟ್ರೈನಿಂಗ್‌ ಕೋರ್ಸ್‌ಗಳನ್ನು ಅವರು ಪಡೆದುಕೊಂಡಿದ್ದರು. ( Business Guide ) ಒಂದು ಸಾಮಾನ್ಯ ಬಡ ಕುಟುಂಬದ ಹಿನ್ನೆಲೆ ಅವರಿಗಿತ್ತು. ಕುಟುಂಬದ ಸದಸ್ಯರು ಒಂದೇ ಸೈಕಲನ್ನು ಬಳಸಬೇಕಾಗುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಈಗ ಅವರು ಒಟ್ಟು ಆರು ವಿಧದ ಕಾರುಗಳ ಒಡೆಯ. ನಿರಂತರವಾದ ಪರಿಶ್ರಮ, ಸತತ ಕಲಿಕೆ ಮತ್ತು ಬದ್ಧತೆಯಿಂದ ಈ ಎತ್ತರಕ್ಕೆ ಅವರು ಏರಿದ್ದಾರೆ.

ಬಿಸಿನೆಸ್‌ ತರಬೇತುದಾರ ಭೂಪೇಂದ್ರ ಸಿಂಗ್‌ ರಾಥೋರ್‌ ಅವರ ಡಿಸ್ಕವರ್‌ ಯುವರ್‌ ವಿಶನ್‌ ಎಂಬ ಕೋರ್ಸ್‌ ಅನ್ನು ಶೈಲೇಂದ್ರ ಆಗಿಂದಾಗ್ಗೆ ಪಡೆಯುತ್ತಿದ್ದರು. ಬಿಸಿನೆಸ್‌ ಟೈಕೂನ್‌ ಮಾನ್ಯುಫಾಕ್ಚರಿಂಗ್‌ ಪ್ರೊಸೆಸ್‌ ಎಂಬ ಮತ್ತೊಂದು ಕೋರ್ಸಿಗೂ ಸೇರಿದ್ದರು. ಇದು ಅವರ ಆಲೋಚನೆಯ ಪ್ರಕ್ರಿಯೆಯನ್ನೇ ಬದಲಿಸಿತು. ಯೋಚಿಸುವ ಧಾಟಿ ಮತ್ತು ಜೀವನ ಶೈಲಿಯನ್ನೇ ಬದಲಿಸಿದರು. ಜವಾಬ್ದಾರಿಯನ್ನು ಹೊತ್ತುಕೊಂಡರು. ತಮ್ಮ ಪ್ರಮಾದಗಳಿಗೆ ಜಗತ್ತನ್ನು ದೂರುವುದನ್ನು ನಿಲ್ಲಿಸಿದರು. ಪ್ರೇರಣಾದಾಯಿ ಜನರ ಜತೆಗೆ ಬೆರೆತರು. ದಿನ ನಿತ್ಯದ ಬದುಕಿನಲ್ಲಿ ಸೇಲ್ಸ್‌ ಒಂದಾಯಿತು.

ಶೈಲೇಂದ್ರ ಅವರು ಶೌರ್ಯ ಇನ್ಫೋಟೆಕ್‌ ಎಂಬ ಕಂಪನಿಯ ಮಾಲೀಕರೂ ಹೌದು. ಥಿಂಕಿಂಗ್‌ ಬಿಗ್‌ (ದೊಡ್ಡದಾಗಿ ಆಲೋಚಿಸು) ಎಂಬುದೇ ಅವರ ಮೊದಲ ದೊಡ್ಡ ಹವ್ಯಾಸವಾಗಿತ್ತು. ನಿರೀಕ್ಷೆಗೂ ಮೀರಿ ಬದಲಾದರು. ತರಬೇತಿಯ ಕ್ಲಾಸ್‌ಗಳು ಬೆಳಗ್ಗೆ 5ರಿಂದ ಶುರುವಾಗುತ್ತಿದ್ದರೆ, ಶೈಲೇಂದ್ರ ಅವರು ನಾಲ್ಕಕ್ಕೇ ತಯಾರಾಗುತ್ತಿದ್ದರು. ಬೆಳಗ್ಗೆ 4ರಿಂದ 5ರ ತನಕ ಫೇಸ್‌ ಬುಕ್‌ ಲೈವ್‌ ನಲ್ಲೂ ಭಾಗವಹಿಸುತ್ತಿದ್ದರು. ಕ್ರಮೇಣ ಜನರು ಅವರತ್ತ ಆಕರ್ಷಿತರಾದರು. ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಅನೇಕ ವಿಡಿಯೊಗಳನ್ನು ರೆಕಾರ್ಡ್‌ ಮಾಡಿ ಅಪ್‌ಲೋಡ್‌ ಮಾಡಿದರು. ಜನರಿಗೆ ಒಳ್ಳೆಯ ಮನೆಗಳನ್ನು ಖರೀದಿಸಲು ಸಹಕರಿಸಿದರು. ಇದು ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಜನರಿಗೆ ಲಾಭವಾಗತೊಡಗಿದಂತೆ ಅವರನ್ನು ಇತರರಿಗೆ ಶಿಫಾರಸು ಮಾಡಲು ಶುರು ಮಾಡಿದರು. ತಮ್ಮ ಐಡಿಯಾಗಳನ್ನು ಮತ್ತು ಕೌಶಲಗಳನ್ನು ಹರಿತಗೊಳಿಸಿದರು.

ಇದನ್ನೂ ಓದಿ: Divya Ayodhya: ರಾಮಮಂದಿರ ಯಾತ್ರಿಕರಿಗಾಗಿ ಬಂತು ಆ್ಯಪ್; ಆಲ್‌ ಇನ್‌ ಒನ್‌ ಗೈಡ್‌ನಲ್ಲೇನಿದೆ?

ದೊಡ್ಡದಾಗಿ ಆಲೋಚಿಸಿ, ಸಣ್ಣದಾಗಿ ಚಿಂತಿಸದಿರಿ. ಯಾವಾಗಲೂ ಉತ್ತಮ ಜನರೊಂದಿಗೆ, ಸಾಧಕರೊಂದಿಗೆ ತುಲನೆ ಮಾಡಿರಿ ಎಂಬ ಮಾತನ್ನು ಶೈಲೇಂದ್ರ ಶಿರಸಾ ವಹಿಸಿದರು. ಪ್ರಮುಖ ನಗರಗಳಲ್ಲಿ ನಡೆಯುವ ಪ್ರಾಪರ್ಟಿ ಸೆಮಿನಾರ್‌ ಗಳಲ್ಲಿ ಭಾಗವಹಿಸಿದರು. ಇದು ಅವರ ಚಿಂತನೆಯ ಪ್ರಕ್ರಿಯೆಯನ್ನೇ ಬದಲಿಸಿತು. ಈ ಸಕ್ಸಸ್‌ ಸ್ಟೋರಿಯ ತಾತ್ಪರ್ಯ ಏನೆಂದರೆ, ಪವರ್‌ ಫುಲ್‌ ಹವ್ಯಾಸಗಳನ್ನು ಬೆಳೆಸಿಕೊಳ್ಳಿ. ಪ್ರತಿ ದಿನ ಬೆಳಗ್ಗೆ ಬೇಗ ಏಳುವುದರಿಂದ ಶುರುವಾಗಿ, ಪ್ರತಿ ದಿನ ಏನನ್ನಾದರೂ ಕಲಿಯುವ ತನಕ ಶಕ್ತಿಯುವ ಹವ್ಯಾಸಗಳನ್ನು ನಿಮ್ಮದಾಗಿಸಿ. ಪ್ರತಿ ದಿನವೂ ಸಕಾರಾತ್ಮಕ ಬದಲಾವಣೆಯನ್ನು ಹೊಂದಿರಿ ಎನ್ನುತ್ತಾರೆ ಭೂಪೇಂದ್ರ ಸಿಂಗ್.‌ ಪಬ್ಲಿಕ್‌ ಸ್ಪೀಕಿಂಗ್‌, ಸೇಲ್ಸ್‌, ರಿಲೇಶನ್‌ ಶಿಪ್‌ ಬಿಲ್ಡಿಂಗ್‌ ಮತ್ತು ಇತರ ಕೌಶಲಗಳು ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ವೇತನದ ಜತೆಗೆ ಮಾಸಿಕವಾಗಿ 9,250 ರೂ. ಆದಾಯ ಬೇಕೆ? ಈ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: ಮಾಸಿಕ ಸಂಬಳವೊಂದನ್ನೇ ಆಶ್ರಯಿಸಿರುವ ಮಧ್ಯಮ ವರ್ಗದ ಜನರಿಗೆ ಅನಾರೋಗ್ಯ, ಅಪಘಾತದಂತಹ ಅನಿರೀಕ್ಷಿತ ಆಘಾತ ಮಾನಸಿಕ ಒತ್ತಡಕ್ಕೆ ಕಾರಣವಾಗಬಲ್ಲದು. ಹೀಗಾಗಿ ಇಂತಹ ಪರಿಸ್ಥಿತಿಯನ್ನು ಯಾವುದೇ ಗೊಂದಲಗಳಿಲ್ಲದೆ ದಾಟಬೇಕು ಎಂದಾದರೆ ಮಾಸಿಕ ವೇತನದ ಜತೆಗೆ ಇನ್ನೊಂದಷ್ಟು ಆದಾಯವೂ ಇರಬೇಕಾಗುತ್ತದೆ. ನೀವೂ ಇಂತಹ ಆದಾಯ ನಿರೀಕ್ಷಿಸುತ್ತಿದ್ದೀರಾ? ಹಾಗಾದರೆ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ ನಿಮ್ಮ ನೆರವಿಗೆ ಬರುತ್ತದೆ. ಏನಿದು ಯೋಜನೆ? ಯಾರೆಲ್ಲ ಅರ್ಹರು? ನಿಮ್ಮ ಎಲ್ಲ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ದಿನ ಕಳೆದಂತೆ ಜೀವನ ವೆಚ್ಚವೂ ಅಧಿಕವಾಗುತ್ತಿದೆ. ಮಾಸಿಕ ಸಂಬಳವೊಂದನ್ನೇ ಆಶ್ರಯಿಸಿರುವ ಮಧ್ಯಮ ವರ್ಗದ ಜನರಿಗೆ ಅನಾರೋಗ್ಯ, ಅಪಘಾತದಂತಹ ಅನಿರೀಕ್ಷಿತ ಆಘಾತ ಮಾನಸಿಕ ಒತ್ತಡಕ್ಕೆ ಕಾರಣವಾಗಬಲ್ಲದು. ಹೀಗಾಗಿ ಇಂತಹ ಪರಿಸ್ಥಿತಿಯನ್ನು ಯಾವುದೇ ಗೊಂದಲಗಳಿಲ್ಲದೆ ದಾಟಬೇಕು ಎಂದಾದರೆ ಮಾಸಿಕ ವೇತನದ ಜತೆಗೆ ಇನ್ನೊಂದಷ್ಟು ಆದಾಯವೂ ಇರಬೇಕಾಗುತ್ತದೆ. ಇದಕ್ಕಾಗಿ ಎಲ್ಲರಿಗೂ ಪಾರ್ಟ್‌ ಟೈಂ ಜಾಬ್‌ ಮಾಡಲು ಸಾಧ್ಯವಿಲ್ಲ. ಇಂತಹವರಿಗಾಗಿ ನೆರವಾಗುವ ಯೋಜನೆಯೇ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (Post Office Monthly Income Scheme). ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ? ಇದಕ್ಕೆ ಯಾರೆಲ್ಲ ಅರ್ಹರು? ನೀವು ಇದರಲ್ಲಿ ಖಾತೆ ತೆರೆಯಬೇಕಾದರೆ ಏನು ಮಾಡಬೇಕು? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ (Money Guide).

ಏನಿದು ಯೋಜನೆ?

ಇದರಲ್ಲಿ ಏಕಾಂಗಿಯಾಗಿ ಅಥವಾ ತಮ್ಮ ಸಂಗಾತಿಯೊಂದಿಗೆ ಜಂಟಿಯಾಗಿ ಖಾತೆಗಳನ್ನು ತೆರೆಯಬಹುದು. ವೈಯಕ್ತಿಕ ಖಾತೆಯಲ್ಲಿ ಗರಿಷ್ಠ 9 ಲಕ್ಷ ರೂ. ಮತ್ತು ಜಂಟಿ ಖಾತೆಯಲ್ಲಿ 15 ಲಕ್ಷ ರೂ.ವರೆಗೆ ಠೇವಣಿ ಇಡಬಹುದು. ಕನಿಷ್ಠ ಠೇವಣಿ ಅವಧಿ ಐದು ವರ್ಷ. ಈ ಠೇವಣಿಯ ಮೇಲೆ ಗಳಿಸಿದ ಬಡ್ಡಿಯು ಮಾಸಿಕ ಆದಾಯದ ರೂಪದಲ್ಲಿ ನಿಮಗೆ ಲಭಿಸುತ್ತದೆ. ಜಂಟಿ ಖಾತೆದಾರರು 15 ಲಕ್ಷ ರೂ.ಗಳನ್ನು ಠೇವಣಿ ಮಾಡುವ ಮೂಲಕ ಮಾಸಿಕ 9,250 ರೂ.ಗಳವರೆಗೆ ಗಳಿಸಬಹುದು. ಇನ್ನು 9 ಲಕ್ಷ ರೂ.ಗಳ ಠೇವಣಿ ಹೂಡುವವರು ಮಾಸಿಕ 5,500 ರೂ. ಪಡೆದುಕೊಳ್ಳಲಿದ್ದಾರೆ. ಸರ್ಕಾರಿ ಬೆಂಬಲಿತ ಯೋಜನೆ ಇದಾಗಿರುವುದರಿಂದ ಇದರಲ್ಲಿನ ಹೂಡಿಕೆ ಸುರಕ್ಷಿತ.

ಪಿಒಎಂಐಎಸ್‌ ವೈಶಿಷ್ಟ್ಯ

  • ಕನಿಷ್ಠ 1,000 ರೂ. ಹೂಡಿಕೆ ಮೂಲಕ ಖಾತೆ ತೆರೆಯಬಹುದು.
  • ಗರಿಷ್ಠ ಹೂಡಿಕೆ ಸಿಂಗಲ್‌ ಅಕೌಂಟ್‌ಗೆ 9 ಲಕ್ಷ ರೂ. ಮತ್ತು ಜಾಯಿಂಟ್‌ ಅಕೌಂಟ್‌ಗೆ 15 ಲಕ್ಷ ರೂ.
  • ಠೇವಣಿಯ ಅವಧಿ 5 ವರ್ಷ.
  • ಗರಿಷ್ಠ ಮೊತ್ತದ ಮಿತಿಗೆ ಒಳಪಟ್ಟು ಈ ಯೋಜನೆಯಡಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ನಿರ್ವಹಿಸಬಹುದು.
  • ಒಂದು ವರ್ಷದ ನಂತರ ಖಾತೆಯನ್ನು ಅಕಾಲಿಕವಾಗಿ ಮುಚ್ಚಬಹುದು. 3 ವರ್ಷಗಳ ಅವಧಿ ಮುಗಿದ ನಂತರ ಖಾತೆಯನ್ನು ಮುಚ್ಚಿದರೆ ಠೇವಣಿಯ ಮೊತ್ತದಿಂದ ಶೇ. 1ರಷ್ಟು ಕಡಿತಗೊಳಿಸಲಾಗುತ್ತದೆ.
  • ಸದ್ಯ ಈ ಯೋಜನೆಯಲ್ಲಿ 7.4% ಬಡ್ಡಿ ರ ಲಭ್ಯ.

ಯಾರೆಲ್ಲ ತೆರೆಯಬಹುದು?

  • ವಯಸ್ಕರು (ಸಿಂಗಲ್‌ ಅಥವಾ ಜಾಯಿಂಟ್‌ ಅಕೌಂಟ್‌).
  • ಗರಿಷ್ಠ ಮೂರು ವ್ಯಕ್ತಿಗಳೊಂದಿಗೆ ಜಂಟಿಯಾಗಿ ಖಾತೆ ಹೊಂದಬಹುದು.
  • ಅಪ್ರಾಪ್ತ ವಯಸ್ಕ / ಮಾನಸಿಕ ಅಸ್ವಸ್ಥರ ಪರವಾಗಿ ಪೋಷಕರು ಖಾತೆ ತೆರೆಯಬಹುದು.
  • ಜಂಟಿ ಖಾತೆಯಲ್ಲಿನ ಎಲ್ಲರಿಗೂ ಹಣವನ್ನು ಸಮಾನವಾಗಿ ಹಂಚಲಾಗುತ್ತದೆ.

ಇದನ್ನು ಗಮನಿಸಿ

  • ಖಾತೆ ತೆರೆದ ದಿನಾಂಕದಿಂದ ಒಂದು ತಿಂಗಳು ಪೂರ್ಣಗೊಂಡ ನಂತರ ಮತ್ತು ಅವಧಿ ಮುಗಿಯುವ (Maturity) ತನಕ ಬಡ್ಡಿಯನ್ನು ಪಾವತಿಸಲಾಗುತ್ತದೆ.
  • ಠೇವಣಿ ಇಟ್ಟ 1 ವರ್ಷದೊಳಗೆ ಹಿಂಪಡೆಯಲು ಸಾಧ್ಯವಿಲ್ಲ.
  • ಸಂಬಂಧಪಟ್ಟ ಅಂಚೆ ಕಚೇರಿಯಲ್ಲಿ ಪಾಸ್‌ಬುಕ್‌ನೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಸಲ್ಲಿಸುವ ಮೂಲಕ ಖಾತೆ ತೆರೆದ ದಿನಾಂಕದಿಂದ 5 ವರ್ಷಗಳ ನಂತರ ಕ್ಲೋಸ್‌ ಮಾಡಬಹುದು.
  • ಒಂದು ವೇಳೆ ಖಾತೆದಾರನು ಅವಧಿ ಮುಕ್ತಾಯದ ಮುನ್ನವೇ ಮರಣ ಹೊಂದಿದರೆ, ಖಾತೆಯನ್ನು ಮುಚ್ಚಬಹುದು ಮತ್ತು ಮೊತ್ತವನ್ನು ನಾಮಿನಿಗೆ ಮರುಪಾವತಿಸಲಾಗುತ್ತದೆ.

ಯಾವೆಲ್ಲ ದಾಖಲೆಗಳು ಬೇಕು?

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಗೆ ನೋಂದಾಯಿಸಲು ವಿಳಾಸದ ಪುರಾವೆ, ಫೋಟೊ ಇರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್‌ ಗಾತ್ರದ ಫೋಟೊಗಳೊಂದಿಗೆ ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ.

ಇದನ್ನೂ ಓದಿ: EPF Death Claim: ಆಧಾರ್ ದೃಢೀಕರಣ ಇಲ್ಲದೇ ಇದ್ದರೂ ಇಪಿಎಫ್‌ಒ ಡೆತ್ ಕ್ಲೈಮ್ ಸಾಧ್ಯವೆ? ಇಲ್ಲಿದೆ ಮಾಹಿತಿ

Continue Reading

ಮನಿ-ಗೈಡ್

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

ಮೂರು ಗಂಟೆಗಳ ಒಳಗೆ ಆಸ್ಪತ್ರಗಳಲ್ಲಿ ನಗದು ರಹಿತ ಆರೋಗ್ಯ ವಿಮಾ (Health Insurance) ಕ್ಲೈಮ್ ಗಳನ್ನು ಸಲ್ಲಿಸಬೇಕು ಎಂದು ಐಆರ್ ಡಿಐಎ ಸೂಚಿಸಿದೆ. ಹಿಂದಿನ 55 ಆದೇಶಗಳನ್ನು ರದ್ದುಗೊಳಿಸಿ ಒಂದು ಸಮಗ್ರ ಆದೇಶವನ್ನು ಹೊರಡಿಸಲಾಗಿದೆ. ಇದರಲ್ಲಿ ಮಾಡಿರುವ ಬದಲಾವಣೆಗಳು ಇಂತಿವೆ.

VISTARANEWS.COM


on

By

health-insurence
Koo

ಬೆಂಗಳೂರು: ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (IRDAI) ಆರೋಗ್ಯ ವಿಮಾ ಪಾಲಿಸಿಗಳ (Health Insurance) ಮಾನದಂಡಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಿದೆ. 55 ಸುತ್ತೋಲೆಗಳನ್ನು ರದ್ದುಗೊಳಿಸಿ ಆರೋಗ್ಯ ವಿಮಾ ಉತ್ಪನ್ನಗಳ ಕುರಿತು ಸಮಗ್ರವಾಗಿ ಒಂದು ಸುತ್ತೋಲೆ ಪ್ರಕಟಿಸಿದೆ. ಪ್ರಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ (hospital discharge) ವಿನಂತಿ ಸ್ವೀಕರಿಸಿದ ಕ್ಯಾಶ್​ಲೆಸ್​ ಕ್ಲೈಮ್ ಗಳನ್ನು ಮೂರು ಗಂಟೆಗಳ ಒಳಗೆ ಇತ್ಯರ್ಥಗೊಳಿಸಬೇಕು ಐಆರ್ ಡಿಎಐ ಸೂಚಿಸಿದೆ.

ಯಾವುದೇ ಸಂದರ್ಭದಲ್ಲಿ ಪಾಲಿಸಿದಾರರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಹೆಚ್ಚು ಕಾಯುವಂತೆ ಮಾಡಬಾರದು. ಮೂರು ಗಂಟೆಗಳಿಗಿಂತ ಹೆಚ್ಚು ವಿಳಂಬವಾದರೆ ಆಸ್ಪತ್ರೆಯಿಂದ ವಿಧಿಸಲಾದ ಹೆಚ್ಚುವರಿ ಮೊತ್ತವನ್ನು ವಿಮಾದಾರರು ಭರಿಸಬೇಕಾಗುತ್ತೆ ಎಂದು ಕಂಪನಿ ತಿಳಿಸಿದೆ. ತುರ್ತು ಸಂದರ್ಭಗಳಲ್ಲಿ ಬರುವ ನಗದು ರಹಿತ ವಿನಂತಿಯನ್ನು ವಿಮಾದಾರರು ತಕ್ಷಣವೇ ನಿರ್ಧರಿಸಬೇಕು ಎಂದು ಐಆರ್ ಡಿ ಎಐ ಹೇಳಿದೆ.

2024ರ ಜುಲೈ 31ರೊಳಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ವಿಮಾದಾರರಿಗೆ ಆದೇಶಿಸಿರುವ ಐಆರ್ ಡಿಎಐ ನಗದು ಕ್ಯಾಶ್​ಲೆಸ್​​ ವಿನಂತಿಗಳನ್ನು ಸ್ವೀಕರಿಸಲು ವಿಮಾದಾರರು ಆಸ್ಪತ್ರೆಯಲ್ಲಿ ಹೆಲ್ಪ್​ ಡೆಸ್ಕ್‌ಗಳನ್ನು ಸಹ ವ್ಯವಸ್ಥೆಗೊಳಿಸಬಹುದು ಎಂದು ಹೇಳಿದೆ.


ಇತರ ಕೆಲವು ಬದಲಾವಣೆಗಳು ?

ಲಭ್ಯವಿರುವ ಉತ್ಪನ್ನಗಳ ಮೂಲಕ ಪಾಲಿಸಿದಾರರಿಗೆ ವಿಮಾ ಕಂಪನಿಗಳು ವ್ಯಾಪಕ ಆಯ್ಕೆಗಳನ್ನು ಒದಗಿಸಬೇಕು ಎಂದು ಐಆರ್ ಡಿಎಐ ಹೇಳಿದೆ. ಅದೇ ಉದ್ದೇಶವನ್ನು ಪೂರೈಸಲು, ವಿಮಾದಾರರು ಎಲ್ಲಾ ವಯಸ್ಸಿನವರು, ಪ್ರದೇಶಗಳು, ಔದ್ಯೋಗಿಕ ವಿಭಾಗಗಳು, ವೈದ್ಯಕೀಯ ಪರಿಸ್ಥಿತಿಗಳು/ ಚಿಕಿತ್ಸೆಗಳು, ಎಲ್ಲಾ ರೀತಿಯ ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆ ಒದಗಿಸುವವರಿಗೆ ವೈವಿಧ್ಯಮಯ ವಿಮಾ ಉತ್ಪನ್ನಗಳನ್ನು ಒದಗಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: Health Insurance Benefits : ಉದ್ಯೋಗಿಗಳ ಆರೋಗ್ಯ ವಿಮೆ ಏಕೆ ಮಹತ್ವಪೂರ್ಣ? ಇಲ್ಲಿದೆ ಡಿಟೇಲ್ಸ್

ಹಲವು ಆರೋಗ್ಯ ವಿಮಾ ಪಾಲಿಸಿಗಳನ್ನು ಹೊಂದಿರುವ ಪಾಲಿಸಿದಾರನು ಸ್ವೀಕಾರಾರ್ಹ ಕ್ಲೈಮ್ ಮೊತ್ತವನ್ನು ಪಡೆಯುವ ಪಾಲಿಸಿ ಆಯ್ಕೆಯನ್ನು ಹೊಸ ಸುತ್ತೋಲೆಯಲ್ಲಿ ಪಡೆಯುತ್ತಾನೆ. ವಿಮಾದಾರರು ಪ್ರತಿ ಪಾಲಿಸಿ ಡಾಕ್ಯುಮೆಂಟ್ ಜೊತೆಗೆ ಗ್ರಾಹಕರ ಮಾಹಿತಿ ಶೀಟ್​​ (CIS) ಒದಗಿಸಬೇಕಾಗುತ್ತದೆ. ಪಾಲಿಸಿ ಅವಧಿಯಲ್ಲಿ ಯಾವುದೇ ಕ್ಲೈಮ್‌ಗಳು ಮಾಡದಿದ್ದರೆ ವಿಮಾ ಮೊತ್ತವನ್ನು ಹೆಚ್ಚಿಸುವ ಅಥವಾ ಪ್ರೀಮಿಯಂ ಮೊತ್ತವನ್ನು ರಿಯಾಯಿತಿ ಮಾಡಬೇಕಾಗುತ್ತದೆ.

ಒಂದು ವೇಳೆ ಪಾಲಿಸಿದಾರರು, ಚಾಲ್ತಿಯಲ್ಲಿರು ಪಾಲಿಸಿಯನ್ನು ಯಾವುದೇ ಸಮಯದಲ್ಲಿ ರದ್ದುಮಾಡಲು ಬಯಸಿದರೆ ಅವಧಿ ಪ್ರೀಮಿಯಂ/ ಅನುಪಾತದ ಪ್ರೀಮಿಯಂನ ಮರುಪಾವತಿ ಮಾಡಬೇಕಾಗುತ್ತದೆ.

ರೋಗಿಯನ್ನು ದಾಖಲಿಸುವ ಮೊದಲು ವಿಮಾ ಕಂಪನಿಯು ಆಸ್ಪತ್ರೆಯ ಟಿಪಿಎ ಡೆಸ್ಕ್‌ಗೆ ಪೂರ್ವ-ಅನುಮೋದನೆಯನ್ನು ಒದಗಿಸಿದ ಮೇಲೂ ಶೇ.43ರಷ್ಟು ವಿಮಾ ಪಾಲಿಸಿದಾರರು ತಮ್ಮ “ಆರೋಗ್ಯ ವಿಮೆ” ಕ್ಲೈಮ್‌ಗಳನ್ನು ಪಡೆಯಲು ತೊಂದರೆಗಳನ್ನು ಎದುರಿಸಿದ್ದಾರೆ ಎಂದು ಸಮೀಕ್ಷೆಯೊಂದರಲ್ಲಿ ತಿಳಿದು ಬಂದಿದೆ. ಕೆಲವು ಪ್ರಕರಣಗಳಲ್ಲಿ, ರೋಗಿಯು ಡಿಸ್ಚಾರ್ಜ್‌ಗೆ ಸಿದ್ಧವಾದ ಅನಂತರ 10- 12 ಗಂಟೆಗಳ ಬಳಿಕ ಕ್ಲೇಮ್​ ನೀಡಲಾಗಿದೆ.

Continue Reading

ಮನಿ-ಗೈಡ್

Money Guide: ಹಣ ಪಾವತಿ ಅಂಗಳಕ್ಕೆ ಕಾಲಿಡಲು ಅದಾನಿ ಗ್ರೂಪ್‌ ಸಜ್ಜು; ಗೂಗಲ್‌ ಪೇ, ಫೋನ್‌ ಪೇಗೆ ಪ್ರಬಲ ಪೈಪೋಟಿ?

Money Guide: ಭಾರತದ ಉದ್ಯಮಿ, ವಿಶ್ವದ ಸಿರಿವಂತರ ಪೈಕಿ ಒಬ್ಬರೆನಿಸಿಕೊಂಡಿರುವ ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್ ಇದೀಗ ಯುಪಿಐ ಮತ್ತು ಕ್ರೆಡಿಟ್ ಕಾರ್ಡ್ ವ್ಯವಹಾರಕ್ಕೆ ಪ್ರವೇಶಿಸಲು ತಯಾರಾಗಿದೆ. ಅದಾನಿ ಒನ್‌ ಅಪ್ಲಿಕೇಷನ್‌ ಮೂಲಕ ಸೇವೆ ಲಭಿಸಲಿದೆ ಎನ್ನಲಾಗಿದೆ. ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಭಾರತದಲ್ಲಿ ಡಿಜಿಟಲ್‌ ಪೇಮೆಂಟ್‌ (Digital Payments) ವಿಧಾನ ಜನಪ್ರಿಯವಾಗಿದೆ. ಮಾಲ್‌ಗಳಿಂದ ಹಿಡಿದು ತಳ್ಳುಗಾಡಿಯವರೆಗೆ ಯುನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ (UPI) ಮೂಲಕ ವ್ಯವಹಾರ ನಡೆಸಲಾಗುತ್ತದೆ. ಗೂಗಲ್ ಪೇ, ಫೋನ್ ಪೇ, ಅಮೆಜಾನ್ ಪೇ ಹಾಗೂ ಇತರ ಪಾವತಿ ವ್ಯವಸ್ಥೆಗಳು ಭಾರತದಲ್ಲಿ ಯುಪಿಐ ಪಾವತಿ ವ್ಯವಸ್ಥೆಯ ಬಳಕೆಯನ್ನು ವ್ಯಾಪಕಗೊಳಿಸಿವೆ. ಜತೆಗೆ ಕ್ರೆಡಿಟ್‌ ಕಾರ್ಡ್‌ ಬಳಕೆಯೂ ಅಧಿಕವಾಗಿದೆ. ಇದೀಗ ಈ ಎಲ್ಲ ಕಂಪನಿಗಳಿಗೆ ತೀವ್ರ ಸ್ಪರ್ಧೆ ಒಡ್ಡಲು ಭಾರತದ ಮತ್ತೊಂದು ದೈತ್ಯ ಕಂಪನಿಯೊಂದು ಮುಂದಾಗಿದೆ. ಹೌದು, ಭಾರತದ ಉದ್ಯಮಿ, ವಿಶ್ವದ ಸಿರಿವಂತರ ಪೈಕಿ ಒಬ್ಬರೆನಿಸಿಕೊಂಡಿರುವ ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್ (Adani Group) ಇದೀಗ ಯುಪಿಐ ಮತ್ತು ಕ್ರೆಡಿಟ್ ಕಾರ್ಡ್ ವ್ಯವಹಾರಕ್ಕೆ ಪ್ರವೇಶಿಸಲು ತಯಾರಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಭಾರತದಲ್ಲಿ ಈಗಾಗಲೇ ಯುಪಿಐ ಮತ್ತು ಕ್ರೆಡಿಟ್ ಕಾರ್ಡ್ ಕ್ಷೇತ್ರದಲ್ಲಿ ನೆಲೆಯೂರಿರುವ ಗೂಗಲ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ಗೆ ಪ್ರತಿಸ್ಪರ್ಧಿಯಾಗಿ ಅದಾನಿ ಗ್ರೂಪ್ ಇ-ಕಾಮರ್ಸ್ ಮತ್ತು ಪಾವತಿ ಕ್ಷೇತ್ರವನ್ನು ಪ್ರವೇಶಿಸುವ ಪ್ರಯತ್ನದಲ್ಲಿದೆ ಎಂದು ಫೈನಾನ್ಶಿಯಲ್‌ ಟೈಮ್ಸ್‌ ವರದಿ ಮಾಡಿದೆ.

ಭಾರತದಲ್ಲಿ ವ್ಯಾಪಕವಾಗಿ ಬಳಸಲಾಗುವ ಹಣ ಪಾವತಿ ವಿಧಾನವಾದ ಯುಪಿಐ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಪರವಾನಗಿ ಪಡೆಯಲು ಕಂಪನಿಯು ಈಗಾಗಲೇ ಕೆಲಸ ಆರಂಭಿಸಿದೆ. ಮಾತ್ರವಲ್ಲ ಅದಾನಿ ಕ್ರೆಡಿಟ್ ಕಾರ್ಡ್‌ ಯೋಜನೆಗಳನ್ನು ಅಂತಿಮಗೊಳಿಸಲು ಬ್ಯಾಂಕ್‌ಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಸರ್ಕಾರದ ಬೆಂಬಲದೊಂದಿಗೆ ಭಾರತದಲ್ಲಿ ವೇಗವಾಗಿ ವಿಸ್ತರಿಸುತ್ತಿರುವ ಸಾರ್ವಜನಿಕ ಇ-ಕಾಮರ್ಸ್ ನೆಟ್‌ವರ್ಕ್‌ ಓಪನ್ ನೆಟ್‌ವರ್ಕ್‌ ಫಾರ್ ಡಿಜಿಟಲ್ ಕಾಮರ್ಸ್ (Open Network for Digital Commerce) ಮೂಲಕ ಆನ್‌ಲೈನ್‌ ಶಾಪಿಂಗ್ ಸೇವೆ ಒದಗಿಸಲು ಚಿಂತನೆ ನಡೆಸಲಾಗಿದೆ.

ಅದಾನಿ ಒನ್ ಅಪ್ಲಿಕೇಷನ್‌ ಮೂಲಕ ಸೇವೆ

ಒಂದು ವೇಳೆ ಅನುಮತಿ ದೊರೆತರೆ ಕಂಪನಿಯ ಅದಾನಿ ಒನ್‌ (Adani One) ಅಪ್ಲಿಕೇಷನ್‌ ಮೂಲಕ ಸೇವೆ ಲಭಿಸಲಿದೆ. ಅದಾನಿ ಒನ್ ಅಪ್ಲಿಕೇಶನ್ ಅನ್ನು 2022ರಲ್ಲಿ ಪ್ರಾರಂಭಿಸಲಾಗಿದ್ದು, ಇದು ಪ್ರಸ್ತುತ ಹೋಟೆಲ್ ಮತ್ತು ಫ್ಲೈಟ್ ಬುಕಿಂಗ್‌ನಂತಹ ಪ್ರವಾಸೋದ್ಯಮ ಸೇವೆಗಳನ್ನು ಒದಗಿಸುತ್ತದೆ. ಈಗಾಗಲೇ ಅದಾನಿ ಗ್ರೂಪ್ ಬಂದರು, ವಿಮಾನ ನಿಲ್ದಾಣಗಳು ಮತ್ತು ವಿದ್ಯುತ್ ಸ್ಥಾವರಗಳನ್ನು ಹೊಂದಿದ್ದು, ಇದರಲ್ಲಿನ ಗ್ರಾಹಕರನ್ನು ಸುಲಭವಾಗಿ ಸೆಳೆಯಬಹುದು ಎನ್ನುವ ಲೆಕ್ಕಾಚಾರವಿದೆ. ʼʼಸದ್ಯ ಏಷ್ಯಾದ ಎರಡನೇ ಶ್ರೀಮಂತ ವ್ಯಕ್ತಿಯಾಗಿರುವ ಅದಾನಿ ಗ್ರೂಪ್‌ನ ಸ್ಥಾಪಕ ಗೌತಮ್ ಅದಾನಿ ಅವರು ಶೀಘ್ರದಲ್ಲಿಯೇ ಡಿಜಿಟಲ್‌ ಪಾವತಿ ರಂಗಕ್ಕೆ ಪ್ರವೇಶಿಸಲು ಯೋಜನೆ ಹಾಕಿಕೊಂಡಿದ್ದಾರೆʼʼ ಎಂದು ಮೂಲಗಳು ಮಾಹಿತಿ ನೀಡಿವೆ.

ತೀವ್ರ ಸ್ಪರ್ಧೆ

ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಸದ್ಯ ಡಿಜಿಟಲ್‌ ಪಾವತಿ ಕ್ಷೇತ್ರದಲ್ಲಿ ಗೂಗಲ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ ಪ್ರಬಲ ಶಕ್ತಿಯಾಗಿ ಗುರುತಿಸಿಕೊಂಡಿವೆ. ಇದೀಗ ಯುಪಿಐ, ಕ್ರೆಡಿಟ್ ಕಾರ್ಡ್ ಸೇವೆ ಆರಂಭಿಸುವ ಮೂಲಕ ಅದಾನಿ ಗ್ರೂಪ್‌ ಇ-ಕಾಮರ್ಸ್ ಮತ್ತು ಪಾವತಿ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧೆ ಒಡ್ಡುವ ಸಾಧ್ಯತೆ ಇದೆ. ಯಾವ ರೀತಿ ಕಾರ್ಯ ನಿರ್ವಹಿಸಲಿದೆ ಎನ್ನುವ ಬಗ್ಗೆ ಶೀಘ್ರದಲ್ಲೇ ಮಾಹಿತಿ ಹೊರ ಬೀಳಲಿದೆ. ಒಟ್ಟಿನಲ್ಲಿ ಈ ಸುದ್ದಿ ತೀವ್ರ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

Continue Reading

ಮನಿ-ಗೈಡ್

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

Money Guide: ನಿಮ್ಮ ಪ್ಯಾನ್‌ ನಂಬರ್‌ ಇನ್ನೂ ಆಧಾರ್‌ನೊಂದಿಗೆ ಲಿಂಕ್‌ ಆಗಿಲ್ಲವೆ? ಹಾಗಾದರೆ ಮೇ 31ರೊಳಗೆ ಮಾಡಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ನಿಮ್ಮ ಪ್ಯಾನ್‌ ನಂಬರ್‌ (Permanent Account Number) ಅನ್ನು ಆಧಾರ್‌ (Aadhaar)ನೊಂದಿಗೆ ಇನ್ನೂ ಲಿಂಕ್‌ ಮಾಡಿಲ್ಲವೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ (Income tax) ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ನಿಮ್ಮ ಗೊಂದಲಕ್ಕೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಹೀಗೆ ಲಿಂಕ್‌ ಮಾಡಿ

ಪ್ಯಾನ್‌ ಮತ್ತು ಆಧಾರ್‌ ಅನ್ನು ಹಲವು ವಿಧಗಳ ಮೂಲಕ ಲಿಂಕ್‌ ಮಾಡಬಹುದು. ಮೊದಲೇ ಹೇಳಿದಂತೆ ಇದಕ್ಕಾಗಿ ಆನ್‌ಲೈನ್‌ ಮತ್ತು ಆಫ್‌ಲೈನ್‌ ಮಾರ್ಗಗಳನ್ನು ಬಳಸಬಹುದು.

ಇನ್‌ಕಂ ಟ್ಯಾಕ್ಸ್‌ ಡಿಪಾರ್ಟ್‌ಮೆಂಟ್‌ ಪೋರ್ಟಲ್‌ ಮೂಲಕ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳಲಿದ್ದು, ಅಲ್ಲಿ ಪ್ಯಾನ್‌, ಆಧಾರ್‌ ನಂಬರ್‌ ನಮೂದಿಸಿ. ಜತೆಗೆ ಇತರ ಅಗತ್ಯ ಮಾಹಿತಿಯನ್ನು ನೀಡಿ.

ಎಸ್‌ಎಂಎಸ್‌ ಮೂಲಕ

  • UIDPAN 10-ಅಂಕಿಗಳ ಪ್ಯಾನ್‌ ಕಾರ್ಡ್‌ ನಂಬರ್‌, 12-ಅಂಕಿಗಳ ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಒಂದು ಸ್ಪೇಸ್‌ ಕೊಟ್ಟು 567678 ಅಥವಾ 56161ಗೆ ಎಸ್‌ಎಂಎಸ್‌ ಕಳುಹಿಸಿ.
  • ಬಳಿಕ ಪ್ಯಾನ್-ಆಧಾರ್ ಲಿಂಕ್ ಸ್ಥಿತಿಯನ್ನು ಎಸ್ಎಂಎಸ್ ನಿಮಗೆ ತಿಳಿಸಲಾಗುತ್ತದೆ. ಗಮನಿಸಿ ಜನ್ಮ ದಿನಾಂಕವು ಎರಡೂ ದಾಖಲೆಗಳಲ್ಲಿ ಹೊಂದಿಕೆಯಾದರೆ ಮಾತ್ರ ಆಧಾರ್ ಮತ್ತು ಪ್ಯಾನ್ ಅನ್ನು ಲಿಂಕ್ ಮಾಡಲಾಗುತ್ತದೆ.

ಆಧಾರ್-ಪ್ಯಾನ್‌ ಲಿಂಕ್‌ ಆಗಿದ್ಯಾ ಎನ್ನುವುದನ್ನು ಪರಿಶೀಲಿಸುವ ವಿಧಾನ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar Status’ ಆಪ್ಶನ್‌ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್‌ ಮತ್ತು ಆಧಾರ್‌ ನಂಬರ್‌ ನಮೂದಿಸಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ ‘View Link Aadhaar Status’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಆಗ ಒಂದು ವೇಳೆ ಲಿಂಕ್‌ ಆಗಿದ್ದರೆ ನಿಮ್ಮ ಪ್ಯಾನ್‌ (ಪ್ಯಾನ್‌ ನಂಬರ್‌) ಆಧಾರ್‌ ನಂಬರ್‌ (ಆಧಾರ್‌ ನಂಬರ್‌ನ ಅಂಕಿ)ನೊಂದಿಗೆ ಲಿಂಕ್‌ ಆಗಿದೆ ಎನ್ನುವ ಸಂದೇಶ ಮೂಡುತ್ತದೆ.

ಕಡ್ಡಾಯ ಯಾಕೆ?

ನಕಲಿ ಪ್ಯಾನ್‌ ಕಾರ್ಡ್‌ಗಳನ್ನು ತಡೆಗಟ್ಟಲು, ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಜಾರಿಗೆ ತರುವ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯು ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡುವುದನ್ನು ಕಡ್ಡಾಯಗೊಳಿಸಿದೆ. ಹೀಗಾಗಿ ಇದುವರೆಗೆ ಲಿಂಕ್‌ ಮಾಡದಿದ್ದರೆ ಕೂಡಲೇ ಮಾಡಿಸಿ. ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಲು ಅಂತಿಮ ದಿನಾಂಕದವರೆಗೆ ಕಾಯುವ ಬದಲು ಕೂಡಲೇ ಲಿಂಕ್‌ ಮಾಡಿ ಎಂದು ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

Continue Reading
Advertisement
Jairam Ramesh
ದೇಶ12 mins ago

Jairam Ramesh: 150 ಡಿಸಿಗಳಿಗೆ ಅಮಿತ್‌ ಶಾ ಕರೆ; ಜೈರಾಮ್‌ ರಮೇಶ್‌ ಆರೋಪಕ್ಕೆ ಇಸಿ ಪ್ರತಿಕ್ರಿಯೆ- ಏನಿದು ವಿವಾದ?

Assembly Election Results 2024
ದೇಶ15 mins ago

Assembly Election Results 2024: ಸಿಕ್ಕಿಂ ಮತ್ತೆ ಎಸ್‌ಕೆಎಂ ತೆಕ್ಕೆಗೆ; 32 ಸ್ಥಾನಗಳ ಪೈಕಿ 31 ಕಡೆ ಗೆಲುವು

Bhavya Narasimhamurthy
ದೇಶ19 mins ago

Bhavya Narasimhamurthy: ಕಾಂಗ್ರೆಸ್‌ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಈಗ ಸೇನಾಧಿಕಾರಿ!

Lok Sabha Election
ಕಲಬುರಗಿ22 mins ago

Lok Sabha Election: ಕಲಬುರಗಿ ಲೋಕಸಭೆ ಕ್ಷೇತ್ರ: ಖರ್ಗೆ ಅಳಿಯ Vs ಜಾಧವ್;‌ ಯಾರಿಗೆ ಗೆಲುವಿನ ಸಿಹಿ?

Kannada New Movie chef chidambara Trailer out
ಸ್ಯಾಂಡಲ್ ವುಡ್39 mins ago

Kannada New Movie: ‘ಶೆಫ್​ ಚಿದಂಬರ’ ಸಿನಿಮಾ ಟ್ರೈಲರ್‌​ ಅನಾವರಣ ಮಾಡಿ ಹಾರೈಸಿದ ರಮೇಶ್ ಅರವಿಂದ್!

Virat Kohli
ಕ್ರೀಡೆ49 mins ago

Virat Kohli: ಸಿಕ್ಸ್​ ಪ್ಯಾಕ್​ ತೋರಿಸಿ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

CET Ranking
ಬೆಂಗಳೂರು49 mins ago

CET Ranking : 3 ಸಾವಿರ ಅಭ್ಯರ್ಥಿಗಳಿಗೆ ಸಿಕ್ಕಿಲ್ಲ ಸಿಇಟಿ ರ‍್ಯಾಂಕ್‌! ಮುಂದೇನು ಮಾಡ್ಬೇಕು?

Valmiki Corporation Scam
ಕರ್ನಾಟಕ51 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ವರ್ಗಾವಣೆಯಾದ ಹಣ ಹಿಂಪಡೆಯಲು ಸರ್ಕಾರ ಕಸರತ್ತು

Assembly election 2024
ದೇಶ1 hour ago

Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ, ಸಿಕ್ಕಿಂನಲ್ಲಿ SKMಗೆ ಪ್ರಚಂಡ ಗೆಲುವು

MLC Election
ಕರ್ನಾಟಕ2 hours ago

MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು23 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌