Guntur Kaaram: 150 ಕೋಟಿ ರೂ. ಗಡಿ ದಾಟಿದ 'ಗುಂಟೂರು ಖಾರಂ'; ಮಹೇಶ್‌ ಬಾಬು ಸಿನಿಮಾದ ಗಳಿಸಿದ್ದೆಷ್ಟು? - Vistara News

South Cinema

Guntur Kaaram: 150 ಕೋಟಿ ರೂ. ಗಡಿ ದಾಟಿದ ‘ಗುಂಟೂರು ಖಾರಂ’; ಮಹೇಶ್‌ ಬಾಬು ಸಿನಿಮಾದ ಗಳಿಸಿದ್ದೆಷ್ಟು?

Guntur Kaaram: ಬಹು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್‌ ಬಾಬು ನಟನೆಯ ‘ಗುಂಟೂರು ಖಾರಂ’ ತೆಲುಗು ಚಿತ್ರಕ್ಕೆ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ನೆಗೆಟಿವ್‌ ಪ್ರತಿಕ್ರಿಯೆಯ ನಡುವೆಯೂ ಚಿತ್ರ ಇದೀಗ ಬಾಕ್ಸ್‌ ಆಫೀಸ್‌ನಲ್ಲಿ 164 ಕೋಟಿ ರೂ. ಕಲೆಕ್ಷನ್‌ ಮಾಡಿದೆ.

VISTARANEWS.COM


on

gunturu kaaram
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಬಹು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್‌ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ (Guntur Kaaram) ತೆಲುಗು ಚಿತ್ರಕ್ಕೆ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ನೆಗೆಟಿವ್‌ ಪ್ರತಿಕ್ರಿಯೆಯ ನಡುವೆಯೂ ಚಿತ್ರ ಇದೀಗ ಬಾಕ್ಸ್‌ ಆಫೀಸ್‌ನಲ್ಲಿ 150 ಕೋಟಿ ರೂ. ಗಡಿ ದಾಟಲು ಯಶಸ್ವಿಯಾಗಿದೆ. ಸದ್ಯ ಇದು ಜಾಗತಿಕವಾಗಿ ಸುಮಾರು 164 ಕೋಟಿ ರೂ. ಕಲೆಕ್ಷನ್‌ ಮಾಡಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಬ್ಲಾಕ್‌ ಬ್ಲಸ್ಟರ್‌ ಎಂದ ಚಿತ್ರತಂಡ

‘ಗುಂಟೂರು ಖಾರಂ’ ಚಿತ್ರವನ್ನು ಸಂಕ್ರಾಂತಿ ಬ್ಲಾಕ್‌ ಬ್ಲಸ್ಟರ್‌ ಎಂದು ಸಿನಿಮಾ ತಂಡ ಕರೆದುಕೊಂಡಿದೆ. ಈಗಾಗಲೇ ಬಜೆಟ್‌ ಪೈಕಿ ಶೇ. 56ರಷ್ಟು ಮರಳಿ ಬಂದಿದೆ ಎಂದು ಮೂಲಗಳು ತಿಳಿಸಿವೆ. ತ್ರಿವಿಕ್ರಮ್‌ ಆ್ಯಕ್ಷನ್‌ ಕಟ್‌ ಹೇಳಿರುವ ಈ ಸಿನಿಮಾದ ಮೂಲಕ ಮಹೇಶ್‌ ಬಾಬು ಮತ್ತು ಕನ್ನಡತಿ ಶ್ರೀಲೀಲಾ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಮೊದಲ ದಿನ (ಜನವರಿ 12) ಭಾರತದಲ್ಲಿ ಸುಮಾರು 50 ಕೋಟಿ ರೂ. ಕಲೆಕ್ಷನ್‌ ಮಾಡಿದ ʼಗುಂಟೂರು ಖಾರಂʼನ ಎರಡು ಮತ್ತು ಮೂರನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ ಕಂಡು ಬಂದಿತ್ತು. ಶನಿವಾರ ಚಿತ್ರ ಕಲೆಕ್ಟ್‌ ಮಾಡಿದ್ದು ಕೇವಲ 13.55 ಕೋಟಿ ರೂ. ಇನ್ನು ಭಾನುವಾರ 14.25 ಕೋಟಿ ರೂ. ಗಳಿಸಿದರೆ, ಸಂಕ್ರಾಂತಿ ಹಿನ್ನಲೆಯಲ್ಲಿ ಸೋಮವಾರ 14 ಕೋಟಿ ರೂ. ತನ್ನದಾಗಿಸಿಕೊಂಡಿದೆ. ಕಥೆಯಲ್ಲಿ ಹೊಸತನವಿಲ್ಲ ಎನ್ನುವುದು ಬಹುತೇಕ ವೀಕ್ಷಕರ ಅಭಿಪ್ರಾಯ. ಅದಾಗ್ಯೂ ಮಹೇಶ್‌ ಬಾಬು ಅಭಿಮಾನಿಗಳಿಗೆ ಚಿತ್ರ ಇಷ್ಟವಾಗಿದೆ.

ಮ್ಯಾಜಿಕ್‌ ಸೃಷ್ಟಿಸಿದ ‘ಹನುಮಾನ್‌’

ಇತ್ತ ಜನವರಿ 12ರಂದೇ ಬಿಡುಗಡೆಯಾದ ಟಾಲಿವುಡ್‌ನ ಪ್ಯಾನ್‌ ಇಂಡಿಯಾ ಸಿನಿಮಾ ‘ಹನುಮಾನ್’ (HanuMan)ಗೆ ಪಾಸಿಟಿವ್‌ ಪ್ರತಿಕ್ರಿಯೆ ಲಭ್ಯವಾಗುತ್ತಿದ್ದು, ಭರ್ಜರಿ ಕಲೆಕ್ಷನ್‌ ಮಾಡುತ್ತಿದೆ. ಪ್ರಶಾಂತ್ ವರ್ಮ ನಿರ್ದೇಶನದಲ್ಲಿ ತೇಜ ಸಜ್ಜಾ ಹಾಗೂ ಅಮೃತಾ ಅಯ್ಯರ್ ನಟಿಸಿರುವ ಈ ಕಡಿಮೆ ಬಜೆಟ್‌ನ ಸಿನಿಮಾ ಬಗ್ಗೆಯೇ ಈಗ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಇದೀಗ ಚಿತ್ರದ ಒಟ್ಟು ಕಲೆಕ್ಷನ್​ 55.15 ಕೋಟಿ ರೂ. ದಾಟಿದೆ. ಶುಕ್ರವಾರ (ಜನವರಿ 12) ಈ ಚಿತ್ರ 8.05 ಕೋಟಿ ರೂ., ಶನಿವಾರ 12.45 ಕೋಟಿ ರೂ., ಭಾನುವಾರ 16 ಕೋಟಿ ರೂ. ಮತ್ತು ಸೋಮವಾರ 14.5 ಕೋಟಿ ರೂ. ಬಾಚಿಕೊಂಡಿದೆ.

ಇದನ್ನೂ ಓದಿ: Box Office War: ಬಾಕ್ಸ್‌ ಆಫೀಸ್‌ನಲ್ಲಿ ಸ್ಟಾರ್‌ ವಾರ್‌; ಮಹೇಶ್‌ ಬಾಬು, ಧನುಷ್‌ ಚಿತ್ರಗಳು ಗಳಿಸಿದ್ದೆಷ್ಟು?

ʼಕ್ಯಾಪ್ಟನ್‌ ಮಿಲ್ಲರ್‌ʼ ಕಲೆಕ್ಷನ್‌ ಎಷ್ಟು?

ಜನವರಿ 12ರಂದು ತಮಿಳಿನ ಸ್ಟಾರ್‌ ನಟ ಧನುಷ್‌ ಮತ್ತು ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಭಿನಯದ ʼಕ್ಯಾಪ್ಟನ್‌ ಮಿಲ್ಲರ್‌ʼ ಸಿನಿಮಾ ಕೂಡ ರಿಲೀಸ್‌ ಆಗಿದೆ. ಈ ಚಿತ್ರಕ್ಕೂ ಮಿಶ್ರ ಪ್ರತಿಕ್ರಿಯೆ ವ್ಯಕ್ರವಾಗುತ್ತಿದ್ದು, ಬಾಕ್ಸ್‌ ಆಫೀಸ್‌ನಲ್ಲಿ ಗಳಿಕೆ ಕುಂಟುತ್ತ ಸಾಗಿದೆ. ತೆರೆಕಂಡ ಮೊದಲ ದಿನ ಸುಮಾರು 8.65 ಕೋಟಿ ರೂ. ಗಳಿಸಿದ್ದ ʼಕ್ಯಾಪ್ಟನ್‌ ಮಿಲ್ಲರ್‌ʼ ಎರಡನೇ ದಿನ ಕಲೆಕ್ಟ್‌ ಮಾಡಿದ್ದು 6.75 ಕೋಟಿ ರೂ. ಭಾನುವಾರ 7.25 ಕೋಟಿ ರೂ. ಗಳಿಸಲಷ್ಟೆ ಯಶಸ್ವಿಯಾಗಿದೆ. ಸೋಮವಾರ ಗಳಿಸಿದ್ದು 6 ಕೋಟಿ ರೂ. ಹೀಗೆ ಒಟ್ಟು 31 ಕೋಟಿ ರೂ. ಕಲೆಕ್ಟ್‌ ಮಾಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kalki 2898 AD: ಪ್ರಭಾಸ್‌-ದೀಪಿಕಾ ಜೋಡಿಯ ʼಕಲ್ಕಿʼ ಚಿತ್ರದ ಟ್ರೈಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Kalki 2898 AD: ಈ ವರ್ಷದ ಬಹು ನಿರೀಕ್ಷಿತ ಚಿತ್ರ ʼಕಲ್ಕಿ 2898 ಎಡಿʼ ಪ್ಯಾನ್‌ ಇಂಡಿಯಾ ಚಿತ್ರವಾಗಿ ಜೂನ್‌ 27ರಂದು ತೆರೆಗೆ ಬರಲಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಚಿತ್ರ ಮುಖ್ಯ ಪಾತ್ರದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌, ಕಮಲ್‌ ಹಾಸನ್‌ ಮುಂತಾದ ಘಟಾನುಘಟಿಗಳು ಅಭಿನಯಿಸುತ್ತಿದ್ದಾರೆ. ಇದೀಗ ಚಿತ್ರತಂಡ ಟ್ರೈಲರ್‌ ರಿಲೀಸ್‌ ದಿನಾಂಕವನ್ನು ಘೋಷಿಸಿದೆ.

VISTARANEWS.COM


on

Kalki 2898 AD
Koo

ಹೈದರಾಬಾದ್‌: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 ADಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಜೂನ್‌ 27ರಂದು ತೆರೆಗೆ ಬರಲಿರುವ ಈ ಸಿನಿಮಾ ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ‌, ಕನ್ನಡತಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇತ್ತೀಚೆಗೆ ಚಿತ್ರದಲ್ಲಿ ವಿಶೇಷ ಪಾತ್ರ ಎನಿಕೊಂಡಿರುವ ಬುಜ್ಜಿ (ಕಾರು)ಯನ್ನು ಪರಿಚಯಿಸಿ ಇನ್ನಷ್ಟು ನಿರೀಕ್ಷೆ ಹೆಚ್ಚಿಸಿದ್ದ ಚಿತ್ರತಂಡ ಇದೀಗ ಟ್ರೈಲರ್‌ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.

ಟ್ರೈಲರ್‌ ಯಾವಾಗ ರಿಲೀಸ್‌?

ಜೂನ್‌ 10ರಂದು ʼಕಲ್ಕಿ 2898 ಎಡಿʼ ಟ್ರೈಲರ್‌ ರಿಲೀಸ್‌ ಆಗಲಿದೆ. ಹೊಸ ಪೋಸ್ಟರ್‌ ರಿಲೀಸ್‌ ಮಾಡಿರುವ ಚಿತ್ರತಂಡ ಆ ಮೂಲಕ ಟ್ರೈಲರ್‌ ರಿಲೀಸ್‌ ದಿನಾಂಕವನ್ನು ಘೋಷಿಸಿದೆ. ಪೋಸ್ಟರ್‌ನಲ್ಲಿ ಗುಡ್ಡದ ಮೇಲೆ ಪ್ರಭಾಸ್‌ ನಿಂತಿರುವ ಚಿತ್ರ ಕಂಡು ಬಂದಿದ್ದು, ‘ಎಲ್ಲವೂ ಬದಲಾಗುವ ಸಮಯ ಬಂದಿದೆ’ ಎಂದು ಬರೆಯಲಾಗಿದೆ. ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವೈಜಯಂತಿ ಮೂವೀಸ್‌ ಅದ್ಧೂರಿಯಾಗಿ ಚಿತ್ರವನ್ನು ನಿರ್ಮಿಸುತ್ತಿದೆ.

ಗಮನ ಸೆಳೆದ ಬುಜ್ಜಿ ಕಾರು

ಇತ್ತೀಚೆಗೆ ಬಿಡುಗಡೆಯಾದ ಬುಜ್ಜಿ ಕಾರಿನ ಟೀಸರ್‌ ಗಮನ ಸೆಳೆದಿದೆ. ಜತೆಗೆ ಚಿತ್ರದಲ್ಲಿ ಪ್ರಭಾಸ್‌ ಓಡಿಸಲಿರುವ ಈ ಕಾರನ್ನು ಇದೀಗ ಚಿತ್ರದ ಪ್ರಚಾರಕ್ಕೆ ಬಳಸಲಾಗುತ್ತಿದೆ. ವಿಶೇಷವಾಗಿ ತಯಾರಿಸಿದ ಈ ಕಾರನ್ನು ಈಗಾಗಲೇ ಸೆಲೆಬ್ರಿಟಿಗಳು ಡ್ರೈವ್‌ ಮಾಡಿದ್ದಾರೆ.

ಕುತೂಹಲ ಮೂಡಿಸಿದ ಅಮಿತಾಭ್‌

ಈ ಸಿನಿಮಾದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕೆಲವು ದಿನಗಳ ಹಿಂದೆ ಚಿತ್ರತಂಡ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ರಿವೀಲ್ ಮಾಡಿತ್ತು. ಬಿಗ್ ಬಿ ಅಶ್ವತ್ಥಾಮನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರದ ಟೀಸರ್‌ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಗುಹೆಯೊಂದರಲ್ಲಿ ಮಗುವೊಂದು ನೀನು ಯಾರು? ಎಂದು ಕೇಳಿದಾಗ ʻʻಪ್ರಾಚೀನ ಕಾಲದಿಂದಲೂ ನಾನು ಕಲ್ಕಿಯ ಅವತಾರದ ಆಗಮನಕ್ಕಾಗಿ ಕಾಯುತ್ತಿದ್ದೇನೆ. ನಾನು ಗುರು ದ್ರೋಣರ ಮಗ ಅಶ್ವತ್ಥಾಮʼʼ ಎಂದು ಅಮಿತಾಭ್‌ ಹೇಳುವ ಮೂಲಕ ಈ ಸಿನಿಮಾದ ಕಥೆ ಪುರಾಣ ಕಾಲದಿಂದ ಭವಿಷ್ಯದತ್ತ ಸಾಗುತ್ತದೆ ಎನ್ನುವ ಸುಳಿವು ಲಭಿಸಿತ್ತು. ಭಾರತ ಚಿತ್ರರಂಗದ ಮಟ್ಟಿಗೆ ಇಂತಹ ಪ್ರಯೋಗ ಬಹಳ ಅಪರೂಪ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ದೇಶಕ ಅಶ್ವಿನ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

ಇದನ್ನೂ ಓದಿ: Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ, ಕಮಲ್‌ ಹಾಸನ್‌ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮತ್ತೊಂದು ವಿಶೇಷ ಎಂದರೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿರುವ ಈ‌ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆಯೇ ಧ್ವನಿ ನೀಡಲಿದ್ದಾರೆ. ಜತೆಗೆ ಹಿಂದಿಯಲ್ಲಿಯೂ ಅವರು ಡಬ್‌ ಮಾಡಲಿದ್ದಾರೆ.

Continue Reading

ರಾಜಕೀಯ

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

ಮೊದಲ ಎರಡು ಮದುವೆ ವಿಫಲವಾದ ಬಳಿಕ ನಟ-ರಾಜಕಾರಣಿ ಪವನ್ ಕಲ್ಯಾಣ್ 2013ರಲ್ಲಿ ಅನ್ನಾ ಲೆಜ್ನೆವಾ ಅವರನ್ನು ವಿವಾಹವಾದರು. ಅನ್ನಾ ಅವರಿಗೂ ಈ ಹಿಂದೆ ವಿವಾಹವಾಗಿ ಮಗಳನ್ನು ಹೊಂದಿದ್ದರು. ಈ ಮಗುವನ್ನು ಪವನ್ ದತ್ತು ಪಡೆದಿದ್ದಾರೆ. ಇವತ್ತು ಚುನಾವಣೆ ಗೆದ್ದು ಬಂದ ಪವನ್ ಗೆ ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದಾರೆ.

VISTARANEWS.COM


on

By

Anna Lezhneva
Koo

ಲೋಕಸಭಾ ಚುನಾವಣೆ-2024ರಲ್ಲಿ (Loksabha election-2024) ಆಂಧ್ರಪ್ರದೇಶದಲ್ಲಿ (andrapradesh) ಭರ್ಜರಿ ಗೆಲುವು ಸಾಧಿಸಿ ಮನೆಗೆ ಬಂದ ತೆಲುಗು ನಟ (Telugu actor), ರಾಜಕಾರಣಿ (politician) ಪವನ್ ಕಲ್ಯಾಣ್ (Pawan Kalyan) ಅವರನ್ನು ಪತ್ನಿ (wife) ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (viral news) ಆಗಿದೆ. ಈ ನಡುವೆ ಅವರ ಬಗ್ಗೆ ತಿಳಿದುಕೊಳ್ಳುವ ಕುತೂಹಲವೂ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಆಂಧ್ರಪ್ರದೇಶ ರಾಜ್ಯ ಚುನಾವಣೆಯಲ್ಲಿ ಜನಸೇನಾ ಪಕ್ಷದ (ಜೆಎಸ್‌ಪಿ) ನಾಯಕ ತೆಲುಗು ನಟ- ರಾಜಕಾರಣಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವು ಅವರ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರಲ್ಲಿ ಹರ್ಷ ಮೂಡಿಸಿದೆ. ಫಲಿತಾಂಶದ ಅನಂತರ ಪವನ್ ಮನೆಗೆ ಮರಳಿದ್ದು, ಅವರನ್ನು ಅವರ ಪತ್ನಿ ಅನ್ನಾ ಲೆಜ್ನೆವಾ ಸ್ವಾಗತಿಸಿದರು. ರಾಜಕೀಯ ಪಯಣದುದ್ದಕ್ಕೂ ಪವನ್ ಜೊತೆಯಾಗಿ ನಿಂತಿರುವ ಅನ್ನಾ ಅವರು ಪವನ್ ಅವರನ್ನು ಸ್ವಾಗತಿಸಿದ ಕ್ಷಣವನ್ನು ಸೆರೆಹಿಡಿಯಲಾಗಿದೆ ಮತ್ತು ಅವರ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಅನ್ನಾ ಲೆಜ್ನೆವಾ ಯಾರು?

ರಷ್ಯಾದ ರೂಪದರ್ಶಿ ಮತ್ತು ನಟಿಯಾಗಿರುವ ಅನ್ನಾ ಲೆಜ್ನೆವಾ ಅವರು 2011ರ ತೀನ್ ಮಾ ಚಿತ್ರದ ಚಿತ್ರೀಕರಣದಲ್ಲಿದ್ದಾಗ ಮೊದಲ ಬಾರಿಗೆ ಪವನ್ ಅವರನ್ನು ಭೇಟಿಯಾಗಿದ್ದರು. ಶೀಘ್ರದಲ್ಲೇ ಅವರು ಪ್ರೀತಿಸುವುದಾಗಿ ಪ್ರಕಟಿಸಿ 2013ರ ಸೆಪ್ಟೆಂಬರ್ 30ರಂದು ಮದುವೆಯಾದರು. ಇದಕ್ಕೂ ಮೊದಲು ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿದರು. ಪವನ್ ಕಲ್ಯಾಣ್ ಅವರ ಮೂರನೇ ಪತ್ನಿ ಅನ್ನಾ.

ಪವನ್ ಕಲ್ಯಾಣ್ ಅವರ ಹಿಂದಿನ ಮದುವೆಗಳು

ʼಗಬ್ಬರ್ ಸಿಂಗ್ʼ ಪವನ್ ಮೊದಲ ಬಾರಿಗೆ 1997ರಲ್ಲಿ 19 ವರ್ಷದ ಹುಡುಗಿ ನಂದಿನಿಯನ್ನು ವಿವಾಹವಾದರು. 2001ರಲ್ಲಿ ಪವನ್ ನಟಿ ರೇಣು ದೇಸಾಯಿ ಅವರೊಂದಿಗೆ ವಾಸ ಮಾಡಲು ತೊಡಗಿದರು. ಅವರಿಬ್ಬರಿಗೆ ಗಂಡು ಮಗುವಾಗಿತ್ತು. ಪವನ್ ತನ್ನ ಮೊದಲ ಹೆಂಡತಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡದ ಕಾರಣ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಯಿತು. ಅನಂತರ ನ್ಯಾಯಾಲಯವು 2008ರಲ್ಲಿ ಅವರಿಗೆ ವಿಚ್ಛೇದನವನ್ನು ನೀಡಿತು. ಅವರ ಎರಡನೇ ಮದುವೆಯು 2009ರಲ್ಲಿ ನಡೆಯಿತು. ಬಳಿಕ ಪವನ್ ಮತ್ತು ರೇಣು ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದರು. ದುರದೃಷ್ಟವಶಾತ್ ಇವರಿಬ್ಬರ ವೈವಾಹಿಕ ಜೀವನ 2012 ರಲ್ಲಿ ವಿಚ್ಛೇದನದ ಮೂಲಕ ಕೊನೆಯಾಯಿತು.


ಪವನ್ ಕಲ್ಯಾಣ್ ಮತ್ತು ಅನ್ನಾ ಲೆಜ್ನೆವಾ

ಅನ್ನಾ ಮತ್ತು ಪವನ್ ದಂಪತಿ 2017ರಲ್ಲಿ ಮಾರ್ಕ್ ಶಂಕರ್ ಪವನೋವಿಚ್ ಎಂಬ ಗಂಡು ಮಗುವಿಗೆ ಪೋಷಕರಾದರು. ಅನ್ನಾ ಅವರ ಮೊದಲ ಮದುವೆ ವಿಫಲವಾಗಿ ಹೆಣ್ಣು ಮಗುವಿನ ತಾಯಿಯಾಗಿದ್ದರು. ಈ ಮಗು ಪೋಲೆನಾ ಅಂಜನಾ ಪವನ್ನೋವಾಳನ್ನು ಪವನ್ ತನ್ನ ಸ್ವಂತ ಮಗಳಂತೆ ಸ್ವೀಕರಿಸಿದ್ದಾರೆ. ಈಗ ಇವರು ಮೂವರು ಮಕ್ಕಳ ಪೋಷಕರಾಗಿದ್ದಾರೆ.

ವಿಚ್ಛೇದನದ ವದಂತಿ

ಕಳೆದ ವರ್ಷ ಅನ್ನಾ ಮತ್ತು ಪವನ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಇತ್ತು. ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿತ್ತು. ತೆಲುಗು ತಾರೆ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಅನ್ನಾ ಲೆಜ್ನೆವಾ ಹಾಜರಾಗದಿದ್ದಾಗ ಈ ಗುಲ್ಲು ಹಬ್ಬಿತ್ತು. ರಾಮ್ ಚರಣ್ ಮತ್ತು ಉಪಾಸನಾ ಅವರ ಮಗಳು ಕ್ಲಿನ್ ಕಾರಾ ಕೊನಿಡೆಲಾ ಅವರ ತೊಟ್ಟಿಲು ಸಮಾರಂಭವನ್ನು ಇವರು ತಪ್ಪಿಸಿಕೊಂಡರು. ಇದರಿಂದ ಅವರ ಪ್ರತ್ಯೇಕತೆಯ ವದಂತಿಗಳಿಗೆ ಉತ್ತೇಜನ ಸಿಕ್ಕಿತು. ಆದರೂ ಇತ್ತೀಚಿನ ವಿಡಿಯೋ ಗಳು ಈ ವದಂತಿಗಳನ್ನು ತಳ್ಳಿ ಹಾಕುವಂತೆ ಮಾಡಿದೆ.

ಇದನ್ನೂ ಓದಿ: Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

ಆಂಧ್ರಪ್ರದೇಶದ ರಾಜ್ಯ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಗೆದ್ದ ಅನಂತರ ಅನ್ನಾ ಲೆಜ್ನೇವಾ ಮತ್ತು ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ಅವರ ಪುತ್ರ ಅಕಿರಾ ನಂದನ್ ಸೇರಿದಂತೆ ಪವನ್ ಕಲ್ಯಾಣ್ ಅವರ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.

Continue Reading

ಟಾಲಿವುಡ್

Venu Swamy: ನನ್ನ ಹೇಳಿಕೆ ಸುಳ್ಳಾಯ್ತು, ಟಿಡಿಪಿ ಪಕ್ಷ ಗೆದ್ದಿತು; ಇನ್ನೆಂದೂ ಭವಿಷ್ಯ ನುಡಿಯಲಾರೆ ಎಂದ ಖ್ಯಾತ ಜ್ಯೋತಿಷಿ!

Venu Swamy: ಇದೀಗ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದಾರೆ. ತೆಲುಗು ಚಿತ್ರರಂಗದವರ (Tollywood), ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

VISTARANEWS.COM


on

Venu Swamy Wrong Prediction on Jagan in AP Polls
Koo

ಬೆಂಗಳೂರು: ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿದೆ. ಜಗನ್​ ಅವರ ವೈಸಿಪಿ ಪಕ್ಷ ಹೀನಾಯ ಸೋಲು ಕಂಡಿದ್ದು ಟಿಡಿಪಿ ಪಕ್ಷ ಭಾರಿ ವಿಜಯ ದಾಖಲಿಸಿದೆ. ಇದೀಗ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದಾರೆ. ತೆಲುಗು ಚಿತ್ರರಂಗದವರ (Tollywood), ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ, ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ʻʻಜಗನ್ ಮತ್ತೆ ಗೆಲ್ಲುತ್ತಾರೆ ಎಂದಿದ್ದೆ. ನಾನು ಕಲಿತ ವಿದ್ಯೆಗಳ ಆಧಾರದಲ್ಲಿ ಈ ಭವಿಷ್ಯವನ್ನು ನಾನು ನುಡಿದಿದ್ದೆ. ನನ್ನ ಭವಿಷ್ಯದಲ್ಲಿ ಮೊದಲನೆಯದು ನಿಜವಾಗಿದೆ. ಮೋದಿಯವರ ಫ್ರಭಾವ ತಗ್ಗಿರುವುದು ಫಲಿತಾಂಶದಿಂದ ಗೊತ್ತಾಗುತ್ತಿದೆ. ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ. ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ನಾನು ಆಂಧ್ರ ರಾಜಕೀಯದ ಬಗ್ಗೆ ಹೇಳಿರುವ ಭವಿಷ್ಯ ತಪ್ಪಾಗಿರುವ ಕಾರಣ, ಇಂದಿನಿಂದ ರಾಜಕೀಯ ಹಾಗೂ ಸಿನಿಮಾ ವ್ಯಕ್ತಿಗಳ ಬಗ್ಗೆ ಎಲ್ಲಿಯೂ ಭವಿಷ್ಯ ನುಡಿಯುವುದಿಲ್ಲʼʼ ಎಂದು ನಿರ್ಧಾರ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Kakolu Venugopalaswamy Temple: ಏ.11ರಿಂದ ಕಾಕೋಳು ವೇಣುಗೋಪಾಲಸ್ವಾಮಿ 91ನೇ ಬ್ರಹ್ಮರಥೋತ್ಸವ

ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

ಆಂಧ್ರಪ್ರದೇಶ ಪ್ರಮುಖ ಅಭ್ಯರ್ಥಿಗಳು

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (ವೈಎಸ್‌ಆರ್‌ಸಿಪಿ), ಎನ್. ಚಂದ್ರಬಾಬು ನಾಯ್ಡು (ಟಿಡಿಪಿ), ಪವನ್ ಕಲ್ಯಾಣ್ (ಜೆಎಸ್‌ಪಿ), ಕಿಲ್ಲಿ ಕೃಪಾರಾಣಿ (ಕಾಂಗ್ರೆಸ್), ಧರ್ಮನಾ ಪ್ರಸಾದ ರಾವ್ (ವೈಎಸ್‌ಆರ್‌ಸಿಪಿ), ಧರ್ಮನಾ ಕೃಷ್ಣ ದಾಸ್ (ವೈಎಸ್‌ಆರ್‌ಸಿಪಿ), ಪಾಮುಲಾ ಪುಷ್ಪ ಶ್ರೀವಾಣಿ ( ವೈಎಸ್‌ಆರ್‌ಸಿಪಿ), ನಲ್ಲಮಿಲ್ಲಿ ರಾಮಕೃಷ್ಣ ರೆಡ್ಡಿ (ಬಿಜೆಪಿ), ರಘು ರಾಮ ಕೃಷ್ಣರಾಜು (ಟಿಡಿಪಿ), ಚಿಂತಾಮನೇನಿ ಪ್ರಭಾಕರ್ (ಟಿಡಿಪಿ), ವೈಎಸ್ ಚೌಧರಿ (ಬಿಜೆಪಿ), ನಾದೆಂಡ್ಲ ಮನೋಹರ್ (ಜೆಎಸ್‌ಪಿ), ಕನ್ನಾ ಲಕ್ಷ್ಮೀನಾರಾಯಣ (ಟಿಡಿಪಿ), ಅದಾಲ ಪ್ರಭಾಕರ ರೆಡ್ಡಿ (ವೈಎಸ್‌ಆರ್‌ಸಿಪಿ), ಅಮ್ಜತ್ ಬಾಷಾ ಶೇಕ್ ಬೇಪಾರಿ (ವೈಎಸ್‌ಆರ್‌ಸಿಪಿ), ನಂದಮೂರಿ ಬಾಲಕೃಷ್ಣ (ಟಿಡಿಪಿ), ನಲ್ಲಾರಿ ಕಿಶೋರ್ ಕುಮಾರ್ ರೆಡ್ಡಿ (ಟಿಡಿಪಿ), ನಾರಾ ಲೋಕೇಶ್ (ಟಿಡಿಪಿ) ಮತ್ತಿತರರು ಆಂಧ್ರಪ್ರದೇಶದ ವಿಧಾನಸಭಾ ಕಣದಲ್ಲಿರುವ ಕೆಲವು ಪ್ರಮುಖ ಅಭ್ಯರ್ಥಿಗಳು.

Continue Reading

Lok Sabha Election 2024

Actor Chetan Ahimsa: ಮತ್ತೆ ಮೋದಿಯೇ ಪ್ರಧಾನಿ, ಆದರೆ ಬಿಜೆಪಿಗಿದು ಪಾಠ ಎಂದ ನಟ ಚೇತನ್!

Actor Chetan Ahimsa: ನಿರೀಕ್ಷೆಯಂತೆ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆದರೆ, ಸಕಾರಾತ್ಮಕವಾಗಿ, ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್‌ಡಿಎ ಅಗತ್ಯವಿದೆ. ಬಿಜೆಪಿಗೆ ಇದೊಂದು ದೊಡ್ಡ ಪಾಠ. ಇದರರ್ಥ ಬಿಜೆಪಿ ಹಿಂದುತ್ವ ಮತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯಂತಹ ಒಕ್ಕೂಟ ವಿರೋಧಿ ನೀತಿಗಳನ್ನು ಅಷ್ಟು ಸುಲಭವಾಗಿ ಜಾರಿಗೆ ತರುವುದಿಲ್ಲ ಎಂದು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ನಟ ಚೇತನ್ ಬರೆದುಕೊಂಡಿದ್ದಾರೆ.

VISTARANEWS.COM


on

Actor Chetan Ahimsa says NDA is needed for BJP to come to power
Koo

ಬೆಂಗಳೂರು: ನಿರೀಕ್ಷೆಯಂತೆ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆದರೆ, ಸಕಾರಾತ್ಮಕವಾಗಿ ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್‌ಡಿಎ ಅಗತ್ಯವಿದೆ. ಇದು ಒಳ್ಳೆಯ ಬೆಳವಣಿಗೆ ಎಂದು ಎಕ್ಸ್‌ ಮೂಲಕ ನಟ ಚೇತನ್‌ ಅವರು ಹೇಳಿಕೊಂಡಿದ್ದಾರೆ.

“ಪ್ರಧಾನಿ ಮೋದಿ ಮೂರನೇ ಬಾರಿ ಅಧಿಕಾರ ಮುಂದುವರಿಸಬಹುದು. ಆದರೆ ಬಿಜೆಪಿಗೆ ಇದೊಂದು ದೊಡ್ಡ ಪಾಠ. ಇದರರ್ಥ ಬಿಜೆಪಿ ಹಿಂದುತ್ವ ಮತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯಂತಹ ಒಕ್ಕೂಟ ವಿರೋಧಿ ನೀತಿಗಳನ್ನು ಅಷ್ಟು ಸುಲಭವಾಗಿ ಜಾರಿಗೆ ತರುವುದಿಲ್ಲ. ಇದು ಒಳ್ಳೆಯದೇ. ಇದು ಮೋದಿಯವರ ವಿಜಯವಲ್ಲ, ಪ್ರಜಾಪ್ರಭುತ್ವದ ವಿಜಯ” ಎಂದು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಚೇತನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ವಿಜಯ್‌ ರಾಘವೇಂದ್ರ “ಗ್ರೇ ಗೇಮ್ಸ್” ಸಿನಿಮಾ ಗೆಲುವು

ಸರ್ಕಾರ ರಚನೆಗೆ 272 ಸ್ಥಾನಗಳು ಸರಳ ಬಹುಮತವಾಗಿದೆ. ಎನ್‌ಡಿಎ ಮೈತ್ರಕೂಟ 296 ಸ್ಥಾನಗಳಲ್ಲಿ ಗೆಲುವುದು ಖಚಿತವಾಗಿದ್ದು ಸರ್ಕಾರ ರಚಿಸುವ ಸಾಧ್ಯತೆ ಇದೆ. ಆದರೂ 228 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಇಂಡಿಯಾ ಮೈತ್ರಿಕೂಟ ಎನ್‌ಡಿಎ ಹೊರಗಿಟ್ಟು ಸರ್ಕಾರ ರಚಿಸುವ ಲೆಕ್ಕಾಚಾರದಲ್ಲಿದೆ.

ಬಿಜೆಪಿ ಸಂವಿಧಾನ ಬದಲಿಸಲ್ಲ; ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಮ್ಮಿ ಇಲ್ಲ ಎಂದಿದ್ದ ನಟ ಚೇತನ್!

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ವಿರೋಧ ಪಕ್ಷಗಳ ಗುಮ್ಮ, ಆ ಆರೋಪಗಳನ್ನು ನಾನೂ ಒಪ್ಪಲ್ಲ. ಕಾಂಗ್ರೆಸ್ ಕೂಡ ಸಂವಿಧಾನ ವಿರೋಧಿಯಾಗಿದ್ದು, ಸಂವಿಧಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ. ಇನ್ನು ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಡಿಮೆಯಿಲ್ಲ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ (Actor Chetan Ahimsa) ಹೇಳಿದ್ದರು.

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ಬಿಜೆಪಿ ವಿರೋಧಿ ಪಕ್ಷಗಳ ಗುಮ್ಮ. ಅದನ್ನು ನಾನೂ ಒಪ್ಪಲ್ಲ. ಬಿಜೆಪಿ ಎಷ್ಟೋ ವಿಚಾರದಲ್ಲಿ ಸಂವಿಧಾನ ವಿರೋಧಿ ಇದೆ, ಅದೇ ರೀತಿ ಕಾಂಗ್ರೆಸ್ ಕೂಡ. ಆದರೆ, ಸಂವಿಧಾನ ಉಳಿಸುತ್ತಿರುವವರು ನಮ್ಮಂತಹ ಸಮಾನತವಾದಿಗಳು. ಸಂವಿದಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದ್ದರು.

Continue Reading
Advertisement
French Open 2024
ಕ್ರೀಡೆ22 mins ago

French Open 2024: ಸೆಮಿಫೈನಲ್​ ಪ್ರವೇಶಿಸಿದ ಬೋಪಣ್ಣ-ಮ್ಯಾಥ್ಯೂ ಜೋಡಿ

Minister Of Parliament
Latest46 mins ago

Minister Of Parliament: ನೀವು ಮತ ಹಾಕಿ ಕಳುಹಿಸಿರುವ ಸಂಸದರಿಗೆ ಎಷ್ಟು ಸಂಬಳ ಸಿಗುತ್ತದೆ ಗೊತ್ತೇ?

Uttarakhand Trekking Tragedy
ಪ್ರಮುಖ ಸುದ್ದಿ47 mins ago

Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ

India Bloc Meeting
ದೇಶ55 mins ago

India Bloc Meeting: ಆಡಳಿತದ ಆಸೆ ಕೈಬಿಟ್ಟ ಇಂಡಿಯಾ ಒಕ್ಕೂಟ; ಒಗ್ಗಟ್ಟಿಗಾಗಿ ಸಭೆ, ಬಲಿಷ್ಠ ಪ್ರತಿಪಕ್ಷದ ಗುರಿ!

India vs Ireland
ಕ್ರೀಡೆ1 hour ago

India vs Ireland: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಭಾರತ; ರೋಹಿತ್​ ಜತೆ ಕೊಹ್ಲಿ ಇನಿಂಗ್ಸ್​ ಆರಂಭ

Water Supply Cut
ಕರ್ನಾಟಕ1 hour ago

Water Supply Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಕಾವೇರಿ ನೀರು ಪೂರೈಕೆಯಿಲ್ಲ!

Lowest Margin of Wins
ದೇಶ2 hours ago

Lowest Margin of Wins: ಕೇವಲ 48 ಮತ ಅಂತರದ ಗೆಲುವು! ಕಡಿಮೆ ಅಂತರದಿಂದ ಗೆದ್ದವರ ಪಟ್ಟಿ ಇಲ್ಲಿದೆ

Rahul Dravid
ಕ್ರೀಡೆ2 hours ago

Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Drowned in Water young man drowned in tungabhadra river and died
ಕರ್ನಾಟಕ2 hours ago

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Operation London Cafe movie will be released very soon
ಕರ್ನಾಟಕ2 hours ago

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌