R Praggnanandhaa: ವಿಶ್ವ ಚಾಂಪಿಯನ್​ ಮಣಿಸಿ ನಂ.1 ಸ್ಥಾನಕ್ಕೇರಿದ ಭಾರತದ ಪ್ರಗ್ನಾನಂದ - Vistara News

ಕ್ರೀಡೆ

R Praggnanandhaa: ವಿಶ್ವ ಚಾಂಪಿಯನ್​ ಮಣಿಸಿ ನಂ.1 ಸ್ಥಾನಕ್ಕೇರಿದ ಭಾರತದ ಪ್ರಗ್ನಾನಂದ

ಗ್ರ್ಯಾಂಡ್ ಮಾಸ್ಟರ್ ಪ್ರಗ್ನಾನಂದ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಭಾರತದ ಅಗ್ರ ಶ್ರೇಯಾಂಕದ ಚೆಸ್ ಆಟಗಾರನಾಗುವ ಮೂಲಕ ಅನುಭವಿ ವಿಶ್ವನಾಥನ್ ಆನಂದ್(Viswanathan Anand) ಅವರನ್ನು ಹಿಂದಿಕ್ಕಿದ್ದಾರೆ.

VISTARANEWS.COM


on

Praggnanandhaa Beats World Champion Ding Liren
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದ ಉದಯೋನ್ಮುಖ ಚೆಸ್ ತಾರೆ ಆರ್ ಪ್ರಗ್ನಾನಂದ(R Praggnanandhaa) ಅವರು ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್​ನಲ್ಲಿ(Tata Steel Masters tournament) ವಿಶ್ವ ಚಾಂಪಿಯನ್ ಡಿಂಗ್ ಲಿರೆನ್(World Champion Ding Liren) ಅವರನ್ನು ಮಣಿಸುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ. ಗ್ರ್ಯಾಂಡ್ ಮಾಸ್ಟರ್ ಪ್ರಗ್ನಾನಂದ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಭಾರತದ ಅಗ್ರ ಶ್ರೇಯಾಂಕದ ಚೆಸ್ ಆಟಗಾರನಾಗುವ ಮೂಲಕ ಅನುಭವಿ ವಿಶ್ವನಾಥನ್ ಆನಂದ್(Viswanathan Anand) ಅವರನ್ನು ಹಿಂದಿಕ್ಕಿದ್ದಾರೆ.

ಮೊದಲ ಬಾರಿಗೆ ನಂ.1 ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆಗಿ ಹೊರಹೊಮ್ಮಿದ ಪ್ರಗ್ನಾನಂದ ಅವರಿಗೆ ಅದಾನಿ ಗ್ರೂಪ್‌ನ ಅಧ್ಯಕ್ಷರಾದ ಗೌತಮ್ ಅದಾನಿ(Gautam Adani) ಟ್ವಿಟರ್​ ಎಕ್ಸ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

“ನಿಮ್ಮ ಸಾಧನೆಯ ಬಗ್ಗೆ ಅಪಾರ ಹೆಮ್ಮೆ ಇದೆ. ಎಂತಹ ವಿಸ್ಮಯಕಾರಿ ಕ್ಷಣ, ಹಾಲಿ ವಿಶ್ವ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದ ನಿಮ್ಮ ಪರಾಕ್ರಮ ಮಚ್ಚಲೇ ಬೇಕು. ನಿಮ್ಮ ಈ ಗೆಲುವು ನಮ್ಮ ದೇಶಕ್ಕೆ ನಿಜಕ್ಕೂ ಹೆಮ್ಮೆಯ ಕ್ಷಣ” ಎಂದು ಗೌತಮ್ ಅದಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ನನ್ನ ದೇಶವು ಜಾಗತಿಕ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವುದನ್ನು ಖಾತ್ರಿಪಡಿಸಿಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ನಾನು ಆಡಿದಾಗಲೆಲ್ಲಾ, ರಾಷ್ಟ್ರಕ್ಕಾಗಿ ಹೆಚ್ಚಿನ ಪ್ರಶಸ್ತಿಗಳನ್ನು ಗೆಲ್ಲುವುದು ನನ್ನ ಏಕೈಕ ಗುರಿಯಾಗಿದೆ. ನನ್ನ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ಅದಾನಿ ಗ್ರೂಪ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ.” ಎಂದು ಪ್ರಗ್ನಾನಂದ ಹೇಳಿದರು.

ಇದನ್ನೂ ಓದಿ ರಾಜ ಮಾರ್ಗ ಅಂಕಣ : ಪ್ರಜ್ಞಾನಂದ ವಿಶ್ವವಿಜಯಕ್ಕೆ ಇನ್ನೊಂದೇ ಮೆಟ್ಟಿಲು; ಅಮ್ಮನೇ ಅವನ ಪಾಲಿಗೆ ದೇವರು

ಗೆಲುವಿನ ಕುರಿತು ಮಾತನಾಡಿರುವ ಪ್ರಗ್ನಾನಂದ, ಅತ್ಯಂತ ಪ್ರಬಲ ಆಟಗಾರನನ್ನು ಸೋಲಿಸಿದರೆ, ಅದು ಯಾವಾಗಲೂ ವಿಶೇಷವಾಗಿರುತ್ತದೆ. ಏಕೆಂದರೆ ಅವರನ್ನು ಸೋಲಿಸುವುದು ಅಷ್ಟು ಸುಲಭವಲ್ಲ. ಚೆಸ್​ನಲ್ಲಿ ವಿಶ್ವ ಚಾಂಪಿಯನ್ ವಿರುದ್ಧ ಮೊದಲ ಬಾರಿಗೆ ಗೆದ್ದಿರುವುದು ಖುಷಿ ಕೊಟ್ಟಿದೆ. ಇದೇ ಪ್ರದರ್ಶನವನ್ನು ಮುಂದುವರಿಸುವ ನಂಬಿಕೆ ಇದೆ ಎಂದು ಅವರು ಹೇಳಿದರು.

2023ರಲ್ಲಿ ನಡೆದಿದ್ದ ಚೆಸ್​ ವಿಶ್ವಕಪ್ ಫೈನಲ್ ತಲುಪಿದ ವಿಶ್ವದ ಅತ್ಯಂತ ಕಿರಿಯ ಚೆಸ್ ಆಟಗಾರ ಎಂಬ ಹಿರಿಮೆಗೆ ಪ್ರಗ್ನಾನಂದ ಪಾತ್ರರಾಗಿದ್ದರು. ಅಲ್ಲದೆ ವಿಶ್ವನಾಥನ್ ಆನಂದ್ ನಂತರ ವಿಶ್ವಕಪ್ ಫೈನಲ್ ತಲುಪಿದ ಎರಡನೇ ಭಾರತೀಯ ಎನಿಸಿಕೊಂಡಿದ್ದರು. ಫೈನಲ್​ನಲ್ಲಿ ಮ್ಯಾಗ್ನಸ್ ಕಾರ್ಲ್‌ಸೆನ್ ಎದುರು ತೀವ್ರ ಪೈಪೋಟಿ ನಡೆಸಿ ಸೋಲು ಕಂಡು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಇವರ ಈ ಸಾಧನೆಯನ್ನು ಇಡೀ ದೇಶವೇ ಕೊಂಡಾಡಿತ್ತು. 2023ರಲ್ಲಿ ಚೀನದ ಹ್ಯಾಂಗ್‌ಝೌನಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್‌ನಲ್ಲಿ ಪ್ರಗ್ನಾನಂದ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Gautam Gambhir: ಭಾರತ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ(Sourav Ganguly) ಕೂಡ ಗೌತಮ್​ ಗಂಭೀರ್​ ಟೀಮ್​ ಇಂಡಿಯಾದ ಕೋಚ್​ ಆದರೆ ಉತ್ತಮ ಎಂದಿದ್ದಾರೆ. ‘ಗಂಭೀರ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದರೆ, ನನ್ನ ಬೆಂಬಲವಿದೆ. ಅವರು ಈ ಹುದ್ದಗೆ ಸೂಕ್ತ ಅಭ್ಯರ್ಥಿ’ ಎಂದು ಹೇಳುವ ಮೂಲಕ ಗಂಭೀರ್​ ಪರ ಬ್ಯಾಟ್​ ಬೀಸಿದ್ದಾರೆ.

VISTARANEWS.COM


on

Gautam Gambhir
Koo

ಮುಂಬಯಿ: ಟೀಮ್ ಇಂಡಿಯಾದ(Team India) ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ಭಾರತ ತಂಡದ ಕೋಚ್(team india coach) ಆಗಲಿದ್ದಾರೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ ಅಧಿಕಾರ ಸ್ವೀಕರಿಸುವುದು ಖಚಿತ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ವೇಳೆಯೇ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಇದಾದ ಬಳಿಕ ಗಂಭೀರ್ ಅವರ ಮಾರ್ಗದರ್ಶನದಲ್ಲಿ ಕೆಕೆಆರ್​ ಚಾಂಪಿಯನ್​ ಪಟ್ಟ ಕೂಡ ಅಲಂಕರಿಸಿತು. ಇದಾದ ಬಳಿಕವಂತೂ ಕೋಚ್​ ಆಗುವ ಮಾತಿಗೆ ಇನ್ನಷ್ಟು ಪುಷ್ಟಿಸಿಕ್ಕಿತು. ಅಲ್ಲದೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಕೂಡ ಗಂಭೀರ್ ಜತೆ ಬಹಳ ಆತ್ಮೀಯವಾಗಿ ಮಾತುಕತೆ ನಡೆಸಿದ್ದರು. ಇದೀಗ ಇಂಡಿಯಾ ಟುಡೆ ಗಂಭೀರ್​ ಕೋಚ್​ ಆಗುವು ನಿಶ್ಚಿತ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಗಂಭೀರ್​ ಐಪಿಎಲ್​ನಲ್ಲಿ ಮೂರು ಸೀಸನ್​ಗಳಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಇದನ್ನೂ ಓದಿ Gautam Gambhir : ಗೌತಮ್ ಗಂಭೀರ್ ಭಾರತ ತಂಡದ ಮುಂದಿನ ಕೋಚ್​; ಐಪಿಎಲ್​ ಫ್ರಾಂಚೈಸಿ ಮಾಲೀಕರಿಂದ ಬಹಿರಂಗ?

ಗಂಭೀರ್​ ಅವರು ಈ ಬಾರಿಯ ಐಪಿಎಲ್​ ಆರಂಭಕ್ಕೂ ಮುನ್ನವೇ, ತಮ್ಮ ತಂಡದ ನಾಯಕ ಮೇ 26ರಂದು ನಡೆಯುವ ಫೈನಲ್​ ಪಂದ್ಯವ ವೇಳೆ ಟಾಸ್​ಗೆ ಸಿದ್ಧರಾಗಿರಬೇಕು ಎಂದು ಹೇಳಿದ್ದರು. ಅದರಂತೆ ಕೆಕೆಆರ್​ ಫೈನಲ್​ ಪ್ರವೇಶಿಸಿ ಕಪ್​ ಕೂಡ ಗೆದ್ದಿತು. ಗಂಭೀರ್​ ತಂಡವನ್ನು ಸಿದ್ಧಪಡಿಸಿದ ರೀತಿ ಮತ್ತು ಕಪ್​ ಗೆಲ್ಲಲೇ ಬೇಕೆಂದು ಪಣ ತೊಟ್ಟಿದೆಲ್ಲ ಫಲ ನೀಡಿತು. ಅವರ ಈ ಸಾಧನೆ ಮತ್ತು ಹಠವನ್ನು ಸೂಕ್ಷವಾಗಿ ಗಮನಿಸಿದ ಬಿಸಿಸಿಐ ಭಾರತ ತಂಡ ಕೋಚ್​ ಹುದ್ದೆ ನೀಡುವ ಯೋಜನೆಯಲ್ಲಿದೆ. ಇನ್ನೊಂದು ಮೂಲಗಳ ಪ್ರಕಾರ ಗಂಭೀರ್​ ಕೋಚ್​ ಆಗುವ ದೃಷ್ಟಿಯಿಂದಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಎನ್ನಲಾಗಿದೆ.

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಗಂಗೂಲಿ ಕೂಡ ಸಾಥ್​


ಭಾರತ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ(Sourav Ganguly) ಕೂಡ ಗೌತಮ್​ ಗಂಭೀರ್​ ಟೀಮ್​ ಇಂಡಿಯಾದ ಕೋಚ್​ ಆದರೆ ಉತ್ತಮ ಎಂದಿದ್ದಾರೆ. ‘ಗಂಭೀರ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದರೆ, ನನ್ನ ಬೆಂಬಲವಿದೆ. ಅವರು ಈ ಹುದ್ದಗೆ ಸೂಕ್ತ ಅಭ್ಯರ್ಥಿ’ ಎಂದು ಹೇಳುವ ಮೂಲಕ ಗಂಭೀರ್​ ಪರ ಬ್ಯಾಟ್​ ಬೀಸಿದ್ದಾರೆ.

Continue Reading

ಕ್ರೀಡೆ

Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

Cristiano Ronaldo: ಬರೋಬ್ಬರಿ 1,700 ಕೋಟಿ ರೂ. (200 ಮಿಲಿಯನ್‌ ಯೂರೋಸ್‌) ಪಡೆದು ಕ್ರಿಸ್ಟಿಯಾನೊ ರೊನಾಲ್ಡೊ 2 ವರ್ಷಗಳ ಒಪ್ಪಂದ ಪ್ರಕಾರ ಅಲ್ ನಾಸ್ಸರ್ ತಂಡಕ್ಕೆ ಸೇರಿದ್ದರು. ತಂಡದ ಪರ ಇದುವರೆಗೆ ಒಟ್ಟು 35 ಗೋಲು ಬಾರಿಸಿದ್ದಾರೆ. ಆದರೆ ತಂಡವನ್ನು ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ವಿಫಲರಾಗಿದ್ದಾರೆ.

VISTARANEWS.COM


on

Cristiano Ronaldo
Koo

ದುಬೈ: ಪೋರ್ಚುಗಲ್‌ನ ಸೂಪರ್‌ ಸ್ಟಾರ್‌ ಕ್ರಿಸ್ಟಿಯಾನೊ ರೊನಾಲ್ಡೊ(Cristiano Ronaldo) ಅವರು ತಾನು ಪ್ರತಿನಿಧಿಸುವ ಅಲ್​ ನಾಸ್ಸರ್​(Al Nassr) ತಂಡ ಕಿಂಗ್ಸ್ ಕಪ್ ಫೈನಲ್​ನಲ್ಲಿ(King’s Cup final) ಸೋಲು ಕಂಡ ಬೇಸರದಲ್ಲಿ ಮೈದಾನದಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆದಿದೆ. ರೊನಾಲ್ಡೊ ಕಣ್ಣೀರು ಸುರಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​(viral video) ಆಗಿದೆ.

ಮೇ 31, ಶುಕ್ರವಾರ ತಡರಾತ್ರಿ ನಡೆದಿದ್ದ ಕಿಂಗ್ಸ್ ಕಪ್ ಫೈನಲ್‌ನಲ್ಲಿ ಅಲ್ ನಾಸ್ಸರ್ ಮತ್ತು ಅಲ್ ಹಿಲಾಲ್(Al Hilal) ತಂಡಗಳು ಮುಖಾಮುಖಿಯಾಗಿದ್ದವು. ಅತ್ಯಂತ ಜಿದ್ದಾಜಿದ್ದಿನಿಂದ ಸಾಗಿದ ಈ ಪಂದ್ಯ 1-1 ಗೋಲುಗಳಿಂದ ಮುಕ್ತಾಯಕಂಡಿತು. ಹೆಚ್ಚುವರಿ ಸಮಯದ ಆಟದಲ್ಲಿಯೂ ಉಭಯ ತಂಡಗಳಿಂದ ಗೋಲು ಗಳಿಸಲು ಸಾಧ್ಯವಾಗದ ಕಾರಣ ಅಂತಿಮವಾಗಿ ವಿಜೇತರನ್ನು ನಿರ್ಧರಿಸಲು ಪೆನಾಲ್ಟಿ ಶೂಟೌಟ್‌ ಮೊರೆ ಹೋಗಲಾಯಿತು. ಶೂಟೌಟ್​ನಲ್ಲಿ ಅಲ್ ಹಿಲಾಲ್ ತಂಡ 5-4 ಗೋಲುಗಳ ಅಂತರದಿಂದ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿತು.

ತಂಡ ಸೋಲುತ್ತಿದ್ದಂತೆ ಕ್ರಿಸ್ಟಿಯಾನೊ ರೊನಾಲ್ಡೊ ಮೈದಾನದಲ್ಲೇ ಬಿದ್ದು ಅಳತೊಡಗಿದರು. ರೊನಾಲ್ಡೊ ಅವರು ಟರ್ಫ್‌ನ ಮೇಲೆ ಮಲಗಿ ಅಳುತ್ತಿದ್ದ ವೇಳೆ ಸಹ ಆಟಗಾರರು ಮತ್ತು ತಂಡದ ಮಾಲಿಕ ಕೂಡ ಆಗಮಿಸಿ ರೊನಾಲ್ಡೊರನ್ನು ಸಂತೈಸಿದ್ದಾರೆ. ರನ್ನರ್ಸ್-ಅಪ್ ಪದಕ ನೀಡುವ ವೇಳೆಯೂ ರೊನಾಲ್ಡೊ ಕಣ್ಣೀರು ಸುರಿಸುತ್ತಲೇ ಇದ್ದರು. ಈ ದೃಶ್ಯ ಕಂಡು ಅವರ ಅಭಿಮಾನಿಗಳ ಕಣ್ಣಲ್ಲಿಯೂ ನೀರು ಬರುವಂತೆ ಮಾಡಿತು.

ಇದನ್ನೂ ಓದಿ Cristiano Ronaldo: ಅಶ್ಲೀಲ ವರ್ತನೆ ತೋರಿದ ರೊನಾಲ್ಡೊಗೆ ಅಮಾನತು ಶಿಕ್ಷೆ ವಿಧಿಸಿದ ಸೌದಿ ಫುಟ್ಬಾಲ್​ ಫೆಡರೇಷನ್

ಬರೋಬ್ಬರಿ 1,700 ಕೋಟಿ ರೂ. (200 ಮಿಲಿಯನ್‌ ಯೂರೋಸ್‌) ಪಡೆದು ಕ್ರಿಸ್ಟಿಯಾನೊ ರೊನಾಲ್ಡೊ 2 ವರ್ಷಗಳ ಒಪ್ಪಂದ ಪ್ರಕಾರ ಅಲ್ ನಾಸ್ಸರ್ ತಂಡಕ್ಕೆ ಸೇರಿದ್ದರು. ತಂಡದ ಪರ ಇದುವರೆಗೆ ಒಟ್ಟು 35 ಗೋಲು ಬಾರಿಸಿದ್ದಾರೆ. ಆದರೆ ತಂಡವನ್ನು ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ವಿಫಲರಾಗಿದ್ದಾರೆ.

67 ವರ್ಷಗಳ ಇತಿಹಾಸ ಹೊಂದಿರುವ ಅಲ್‌ ನಾಸ್ಸರ್​ ಸೌದಿ ಅರೇಬಿಯದ ಅತ್ಯಂತ ಶ್ರೀಮಂತ ಫ‌ುಟ್‌ಬಾಲ್‌ ಕ್ಲಬ್‌. 9 ಸಲ ಚಾಂಪಿಯನ್ಸ್‌ ಲೀಗ್‌ ಪ್ರಶಸ್ತಿ ಜಯಿಸಿದೆ. 6 ಸಲ ಕಿಂಗ್ಸ್‌ ಕಪ್‌ 3 ಸಲ ಕ್ರೌನ್‌ ಪ್ರಿನ್ಸೆಸ್‌ ಕಪ್‌, 3 ಸಲ ಫೆಡರೇಶನ್‌ ಕಪ್‌,2 ಸಲ ಸೌದಿ ಸೂಪರ್‌ ಕಪ್‌, ಚಾಂಪಿಯನ್‌ ಆಗಿ ಮೂಡಿಬಂದ ಹೆಗ್ಗಳಿಕೆ ಈ ಕ್ಲಬ್‌ನದ್ದು.

Continue Reading

ಕ್ರಿಕೆಟ್

Team India: ವೆಸ್ಟ್​ ಇಂಡೀಸ್​ ಮೈದಾನ ಭಾರತದ ಪಾಲಿಗೆ ಅನ್ ಲಕ್ಕಿ; ಹಿಂದಿನ 2 ವಿಶ್ವಕಪ್ ಟೂರ್ನಿಯ​ ಹಿನ್ನೋಟ ಇಲ್ಲಿದೆ

Team India: ವೆಸ್ಟ್​ ಇಂಡೀಸ್​ನಲ್ಲಿ ನಡೆದ ಇದುವರೆಗಿನ ಐಸಿಸಿ ಟೂರ್ನಿಯಲ್ಲಿ ಭಾರತಕ್ಕೆ ನಿರಾಸೆ ಎದುರಾಗಿದ್ದೆ ಹೆಚ್ಚು. 2007 ಏಕದಿನ ವಿಶ್ವಕಪ್​, 2010 ಟಿ20 ವಿಶ್ವಕಪ್​ನಲ್ಲಿ ಭಾರತ ಅತ್ಯಂತ ಹೀನಾಯವಾಗಿ ಸೋಲು ಕಂಡ ಅವಮಾನಕ್ಕೆ ಸಿಲುಕಿತ್ತು

VISTARANEWS.COM


on

T20 World Cup 2024
Koo

ಬೆಂಗಳೂರು: ಭಾರತ ತಂಡ(Team India) ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಲೀಗ್​ ಪಂದ್ಯವನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ನಾಕೌಟ್​ ಹಂತಕ್ಕೇರಿದರೆ ವೆಸ್ಟ್​ ಇಂಡೀಸ್​ನಲ್ಲಿ(team india in west indies) ಪಂದ್ಯವನ್ನಾಡಬೇಕಿದೆ. ಇದು ಭಾರತಕ್ಕೆ ಚಿಂತೆ ಪಡುವಂತೆ ಮಾಡಿದೆ.

ಹೌದು, ವೆಸ್ಟ್​ ಇಂಡೀಸ್​ನಲ್ಲಿ ನಡೆದ ಇದುವರೆಗಿನ ಐಸಿಸಿ ಟೂರ್ನಿಯಲ್ಲಿ ಭಾರತಕ್ಕೆ ನಿರಾಸೆ ಎದುರಾಗಿದ್ದೆ ಹೆಚ್ಚು. 2007 ಏಕದಿನ ವಿಶ್ವಕಪ್​, 2010 ಟಿ20 ವಿಶ್ವಕಪ್​ನಲ್ಲಿ ಭಾರತ ಅತ್ಯಂತ ಹೀನಾಯವಾಗಿ ಸೋಲು ಕಂಡ ಅವಮಾನಕ್ಕೆ ಸಿಲುಕಿತ್ತು. 2007ರಲ್ಲಿ ದ್ರಾವಿಡ್​ ಸಾರಥ್ಯದಲ್ಲಿ ಕಣಕ್ಕಿಳಿದಿದ್ದ ಭಾರತ ತಂಡ ಬಾಂಗ್ಲಾದೇಶ ವಿರುದ್ಧವೂ ಸೋಲು ಕಂಡು ಗುಂಪು ಹಂತದಿಂದಲೇ ಹೊರಬಿದ್ದಿತ್ತು. 2010ರ ಟಿ20 ವಿಶ್ವಕಪ್​ನಲ್ಲಿಯೂ ಧೋನಿ ಸಾರಥ್ಯದ ಟೀಮ್​ ಇಂಡಿಯಾ ಗುಂಪು ಹಂತದಿಂದಲೇ ನಿರ್ಗಮನ ಕಂಡಿತ್ತು. ಹೀಗಾಗಿ ಕೆರಿಬಿಯನ್​ ದ್ವೀಪ ಭಾರತದ ಪಾಲಿಗೆ ಅದೃಷ್ಟವಲ್ಲ ಎನ್ನಲಡ್ಡಿಯಿಲ್ಲ.

2007ರ ಟಿ20 ವಿಶ್ವ ಕಪ್ (T20 World Cup 2024)​ ಉದ್ಘಾಟನಾ ಆವೃತ್ತಿಯಲ್ಲೇ ಚಾಂಪಿಯನ್​ ಆಗಿ ಭಾರತ ಹೊರಹೊಮ್ಮಿತು. ಇದರ ಬಳಿಕ ಭಾರತ ಮತ್ತೆ ಟಿ20 ಚಾಂಪಿಯನ್​ ಆಗಲೇ ಇಲ್ಲ. ಇದೀಗ 17 ವರ್ಷಗಳ ಬಳಿಕ ಮತ್ತೆ ಚಾಂಪಿಯನ್​ ಆಗುವ ಇರಾದೆಯೊಂದಿಗೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ ಆದರೆ, ತಂಡಕ್ಕೆ ಹಲವು ಸವಾಲು ಕೂಡ ಇದೆ.

ಈ ಕೂಟದಲ್ಲಿ ಭಾರತ ನೀಡುವ ಪ್ರದರ್ಶನದ ಮೇಲೆ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮ ಟಿ20 ಭವಿಷ್ಯ ಅಡಗಿದೆ. ಈ ಕೂಟ ಮುಗಿದ ಮೇಲೆ ಯಾರ್ಯಾರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ಪ್ರಶ್ನೆಗಳೂ ಇವೆ. ಹೀಗಾಗಿ ರೋಹಿತ್​ ಮತ್ತು ಕೊಹ್ಲಿ ಪಾಲಿಗೆ ಇದೊಂದು ಮಹತ್ವದ ಕೂಟ ಎನ್ನಲಡ್ಡಿಯಿಲ್ಲ.

ಇದನ್ನೂ ಓದಿ IND vs PAK T20 World Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ ಗೆಲುವು ಖಚಿತ ಎಂದ ಪಾಕ್​ ಆಟಗಾರ

ನಂ.1 ಆದರೂ ಎಚ್ಚರ ಅಗತ್ಯ


ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿರುವ ಭಾರತ ತಂಡ ಬಲಿಷ್ಠ ಎನ್ನಬಹುದು. ರೋಹಿತ್‌ ಶರ್ಮ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌, ಹಾರ್ದಿಕ್‌ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ತಂಡದ ಪ್ರಮುಖ ಆಟಗಾರರು. ಆದರೆ, ಭಾರತ ಪೂರ್ಣ ಎಚ್ಚರವಾಗಿಯೇ ಪ್ರತೀ ಪಂದ್ಯದಲ್ಲಿ ಕಣಕ್ಕಿಳಿಯಬೇಕು. ಎದುರಾಳಿಯನ್ನು ಒಮ್ಮೆಯೂ ಕಡೆಗಣಿಸುವುದು ಸಾಧ್ಯವೇ ಇಲ್ಲ. ಯಾರು ಯಾರನ್ನು ಕೆಡವಿ ಬೀಳಿಸುತ್ತಾರೆ ಎಂಬುದು ಟಿ20 ಮಾದರಿಯಲ್ಲಿ ಅಂದಾಜಿಸುವುದಕ್ಕೆ ಕಷ್ಟ ಸಾಧ್ಯ. ಇದಕ್ಕೆ ಉತ್ತಮ ನಿದರ್ಶನವೆಂದರೆ ಅಭ್ಯಾಸ ಪಂದ್ಯದಲ್ಲಿ ಅನುಭವಿ ಬಾಂಗ್ಲಾದೇಶಕ್ಕೆ ಕ್ರಿಕೆಟ್​ ಶಿಶು ಅಮೆರಿಕ ಸೋಲುಣಿಸಿದ್ದು. ಆದ್ದರಿಂದ ಭಾರತ ಎಚ್ಚರ ತಪ್ಪಬಾರದು. ಕೆಲವೇ ಓವರ್‌ಗಳಲ್ಲಿ ಪಂದ್ಯದ ಚಿತ್ರಣವೇ ಬದಲಾಗುವುದು ಟಿ20 ಪಂದ್ಯಗಳ ಶಕ್ತಿ.

ಟಿ20 ವಿಶ್ವ ಕಪ್​ನಲ್ಲಿ ಭಾರತ ಸಾಧನೆ

2007ಚಾಂಪಿಯನ್​
20092ನೇ ಸುತ್ತು
20102ನೇ ಸುತ್ತು
20122ನೇ ಸುತ್ತು
2014ರನ್ನರ್​ ಅಪ್​
2016ಸೆಮಿಫೈನಲ್​
20212ನೇ ಸುತ್ತು
2022ಸೆಮಿಫೈನಲ್​
Continue Reading

ಕ್ರೀಡೆ

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Shubman Gill: ಸಾಮಾಜಿಕ ಮಾಧ್ಯಮಗಳ ವರದಿ ಪ್ರಕಾರ ಶುಭಮನ್​ ಗಿಲ್​ ಮತ್ತು ರಿದ್ಧಿಮಾ ಪಂಡಿತ್ ಕೆಲವು ವರ್ಷಗಳಿಂದ ಗುಟ್ಟಾಗಿ ಪ್ರೀತಿಸುತ್ತಿದ್ದರು. ಈ ಜೋಡಿ ಇದೇ ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎಂದು ಹೇಳಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟಿ, ತಾನು ಶುಭ್‌ಮನ್ ಗಿಲ್ ಅವರನ್ನು ಮದುವೆಯಾಗುತ್ತಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Shubman Gill
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​​ ಯುವ ಆಟಗಾರ ಶುಭಮನ್​ ಗಿಲ್(Shubman Gill)​ ಅವರು ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗಿಲ್​ ಮದುವೆಯಾಗುತ್ತಿರುವುದು ಸಾರಾ ತೆಂಡೂಲ್ಕರ್(sara tendulkar)​ ಅಲ್ಲ ಬದಲಾಗಿ ಕಿರುತೆರೆಯ ಸುಂದರಿ ರಿದ್ಧಿಮಾ ಪಂಡಿತ್ ಅವರನ್ನು ವರಿಸಲಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ರಿದ್ಧಿಮಾ ಪಂಡಿತ್(Ridhima Pandit) ಸ್ಪಷ್ಟನೆಯನ್ನು ಕೂಡ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮಗಳ ವರದಿ ಪ್ರಕಾರ ಶುಭಮನ್​ ಗಿಲ್​ ಮತ್ತು ರಿದ್ಧಿಮಾ ಪಂಡಿತ್ ಕೆಲವು ವರ್ಷಗಳಿಂದ ಗುಟ್ಟಾಗಿ ಪ್ರೀತಿಸುತ್ತಿದ್ದರು. ಈ ಜೋಡಿ ಇದೇ ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎಂದು ಹೇಳಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟಿ, ತಾನು ಶುಭ್‌ಮನ್ ಗಿಲ್ ಅವರನ್ನು ಮದುವೆಯಾಗುತ್ತಿಲ್ಲ. ಈ ವದಂತಿಗಳಲ್ಲಿ ಯಾವುದೇ ಸತ್ಯವಿಲ್ಲ. ನನ್ನ ಜೀವನದಲ್ಲಿ ಈ ರೀತಿಯ ಮಹತ್ವದ ಘಟನೆ ನಡೆದರೆ ನಾನೇ ಮುಂದೆ ಬಂದು ಸುದ್ದಿ ಪ್ರಕಟಿಸುತ್ತೇನೆ ಎಂದು ಹೇಳುವ ಮೂಲಕ ಈ ಸುಳ್ಳು ಸುದ್ದಿಯನ್ನು ತಳ್ಳಿಹಾಕಿದ್ದಾರೆ.

ಈ ಜೋಡಿ ಮದುವೆಯಾಗುತ್ತಾರೆ ಎಂಬ ಸುಳ್ಳು ಸುದ್ದಿ ಹಬ್ಬಲು ಕಾರಣವೆಂದರೆ, ಕೆಲ ದಿನಗಳ ಹಿಂದೆ ರಿದ್ಧಿಮಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಮದುವೆಯ ಕುರಿತಾದ ವಿಡಿಯೊವೊಂದನ್ನು ಹಾಕಿದ್ದರು. ಇದೇ ವೇಳೆ ಕೆಲ ನೆಟ್ಟಿಗರು ಗಿಲ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಹೀಗಾಗಿ ಗಿಲ್​ ಮತ್ತು ರಿದ್ಧಿಮಾ ಮದುವೆಯಾಗುತ್ತಾರೆ ಎನ್ನುವ ಸುದ್ದಿ ಹರಡಿತು.

ಇದನ್ನೂ ಓದಿ Shubman Gill: ಶತಕದ ಐಪಿಎಲ್​ ಪಂದ್ಯವನ್ನಾಡಲು ಸಜ್ಜಾದ ಗಿಲ್​; ಸಾಧನೆ ಹೇಗಿದೆ?

ಸಾರಾ ತೆಂಡೂಲ್ಕರ್ ಮತ್ತು ಶುಭಮನ್​ ಗಿಲ್​(Gill And Sara) ಇಬ್ಬರು ಕದ್ದು ಮುಚ್ಚಿ ಡೇಟಿಂಗ್(sara tendulkar and shubman gill relationship)​ ನಡೆಸುತ್ತಿದ್ದಾರೆ, ಇವರಿಬ್ಬರು ಪ್ರೀತಿ ಕೂಡ ಮಾಡುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹಲವು ಬಾರಿ ಕೇಳಿಬಂದಿತ್ತು.  ಆದಾಗ್ಯೂ, ಇಬ್ಬರೂ ವದಂತಿಯನ್ನು ನಿರಾಕರಿಸಿಲ್ಲ ಅಥವಾ ದೃಢಪಡಿಸಿಲ್ಲ. ಪಾಪರಾಜಿಗಳು ಇಬ್ಬರು ಸೆಲೆಬ್ರಿಟಿಗಳನ್ನು ಸಾರ್ವಜನಿಕವಾಗಿ ಸಾಕಷ್ಟು ಬಾರಿ ಪ್ರಶ್ನಿಸಿದ್ದಾರೆ.

ರೆಸ್ಟೋರೆಂಟ್​ನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದ ಸಾರಾ-ಗಿಲ್​

ಏಕದಿನ ವಿಶ್ವಕಪ್​ ಪಂದ್ಯವನ್ನಾಡಲು ಟೀಮ್​ ಇಂಡಿಯಾದ ಆಟಗಾರರು ಮುಂಬೈಗೆ ಬಂದಿದ್ದ ವೇಳೆ ಶುಭಮನ್​ ಗಿಲ್​ ಮತ್ತು ಸಾರಾ ಅವರು ರೆಸ್ಟೋರೆಂಟ್​ನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದರು. ಇಬ್ಬರು ಜತೆಯಾಗಿ ಕಾಣಿಸಿಕೊಂಡ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರೆಸ್ಟೋರೆಂಟ್‌ನಿಂದ ಸಾರಾ ಜತೆಗೆ ಬರುತ್ತಿರುವುದನ್ನು ಪಾಪರಾಜಿಗಳು ಕಂಡ ತಕ್ಷಣ ಶುಭಮನ್​ ಗಿಲ್​ ತನಗೇನು ತಿಳಿಯದವರಂತೆ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಇದೊಂದು ಅಚಾನಕ್ ಮುಖಾಮುಖಿ ಎಂಬಂತೆ ತಮ್ಮ ಪತವನ್ನು ಬದಲಿಸಿ ಒಮ್ಮೆ ಅತ್ತಿಂದಿತ್ತ ಇತ್ತಿಂದತ್ತ ನಡೆದಿದ್ದರು. ಗಿಲ್ ಕ್ರಿಕೆಟ್​ ಆಡುವ ವೇಳೆ ಹೆಚ್ಚಾಗಿ ಸಾರಾ ಕೂಡ ಪ್ರೇಕ್ಷಕರ ಸ್ಟ್ಯಾಂಡ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಅಲ್ಲದೆ ಗಿಲ್​ ಉತ್ತಮವಾಗಿ ಆಡಿದಾಗ ಚಪ್ಪಾಳೆ ತಟ್ಟುತ್ತಾ, ಔಟಾದಾಗ ಸಪ್ಪೆ ಮೋರೆ ಹಾಕಿ ಕುಳಿತ ಹಲವು ಫೋಟೊ ಮತ್ತು ವಿಡಿಯೊ ಈಗಾಗಲೇ ವೈರಲ್​ ಕೂಡ ಆಗಿದೆ.

Continue Reading
Advertisement
Cow Smuggling
ಕ್ರೈಂ13 mins ago

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Gautam Gambhir
ಕ್ರೀಡೆ36 mins ago

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Rameshwaram Cafe food on Anant Ambani, Radhika Merchant
ಸಿನಿಮಾ39 mins ago

Rameshwaram Cafe: ಅನಂತ್ ಅಂಬಾನಿ ಎರಡನೇ ಪ್ರಿ ವೆಡ್ಡಿಂಗ್‌ನಲ್ಲಿ ಮೇನ್‌ ಮೆನು ರಾಮೇಶ್ವರಂ ಕೆಫೆಯ ಪುಡಿ ಇಡ್ಲಿ ಮತ್ತು ಪುಡಿ ದೋಸೆ!

Family Fighting in Belgavi
ಬೆಳಗಾವಿ42 mins ago

Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

Valmiki Corporation Scam
ಕರ್ನಾಟಕ43 mins ago

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಪತ್ನಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

prashant kishor
ಪ್ರಮುಖ ಸುದ್ದಿ45 mins ago

Lok Sabha Election 2024: ಈಗಲೂ ಹೇಳ್ತೇನೆ ಕೇಳಿ, ಬಿಜೆಪಿಯೇ ಗೆಲ್ಲೋದು! ಎಕ್ಸಿಟ್ ಪೋಲ್‌ಗೆ ಮೊದಲು ಪ್ರಶಾಂತ್ ಕಿಶೋರ್ ಫೈನಲ್ ಲೆಕ್ಕಾಚಾರ ಹೀಗಿದೆ!

IndiGo Flight
ದೇಶ48 mins ago

IndiGo Flight: ಮತ್ತೊಂದು ಹುಸಿ ಬಾಂಬ್‌ ಕರೆ; ಮುಂಬೈಯಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್‌

bhavani revanna SIT team
ಪ್ರಮುಖ ಸುದ್ದಿ1 hour ago

Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

Valmiki Corporation Scam
ಪ್ರಮುಖ ಸುದ್ದಿ1 hour ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

Assault Case
ಬೆಳಗಾವಿ2 hours ago

Assault Case : ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌