Pakistan Airstrike: ಮುಯ್ಯಿಗೆ ಮುಯ್ಯಿ ಎಂದ ಪಾಕ್‌; ಇರಾನ್‌ ಮೇಲೆ ಪ್ರತಿದಾಳಿ - Vistara News

ಪ್ರಮುಖ ಸುದ್ದಿ

Pakistan Airstrike: ಮುಯ್ಯಿಗೆ ಮುಯ್ಯಿ ಎಂದ ಪಾಕ್‌; ಇರಾನ್‌ ಮೇಲೆ ಪ್ರತಿದಾಳಿ

Pakistan Airstrike: ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಇರಾನ್‌ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ದಾಳಿ ನಡೆಸಿದೆ.

VISTARANEWS.COM


on

Pakistan Airstrike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್:‌ ವಾಯುದಾಳಿ ನಡೆಸಿದ ಇರಾನ್‌ ಮೇಲೆ ಪ್ರತಿದಾಳಿ ಮಾಡುವ ಮೂಲಕ ಪಾಕಿಸ್ತಾನವು ಸೇಡು ತೀರಿಸಿಕೊಂಡಿದೆ. ಪಾಕಿಸ್ತಾನದಲ್ಲಿರುವ ಜೈಶ್‌ ಅಲ್‌ ಅದ್ಲ್‌ (Jaish al Adl) ಉಗ್ರ ಸಂಘಟನೆಯ ಎರಡು ನೆಲೆಗಳ ಮೇಲೆ ಇರಾನ್‌ ನಡೆಸಿದ ಕ್ಷಿಪಣಿ ದಾಳಿಗೆ (Iran Attack) ಪ್ರತಿಯಾಗಿ ಪಾಕಿಸ್ತಾನವೂ ವಾಯುದಾಳಿ (Pakistan Airstrike) ಮೂಲಕವೇ ಪ್ರತ್ಯುತ್ತರ ನೀಡಿದೆ. ಇರಾನ್‌ನಲ್ಲಿರುವ ಬಲೂಚಿಸ್ತಾನ ಪ್ರತ್ಯೇಕವಾದಿಗಳ ನೆಲೆಗಳ ಮೇಲೆ ಪಾಕಿಸ್ತಾನವು ಗುರುವಾರ (ಜನವರಿ 18) ವಾಯುದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

“ಪಾಕಿಸ್ತಾನ ಕೂಡ ಇರಾನ್‌ ಮೇಲೆ ವಾಯುದಾಳಿ ನಡೆಸಿದೆ. ಪ್ರತ್ಯೇಕ ಬಲೂಚಿಸ್ತಾನಕ್ಕೆ ಬೇಡಿಕೆ ಇಟ್ಟಿರುವ ಬಂಡುಕೋರರು ಇರಾನ್‌ನಲ್ಲಿ ನೆಲೆಸಿದ್ದು, ಅವರ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ ಎಂದಷ್ಟೇ ಹೇಳಬಲ್ಲೆ” ಎಂದು ಪಾಕಿಸ್ತಾನದ ಗುಪ್ತಚರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕ್ಷಿಪಣಿ ಹಾಗೂ ಡ್ರೋನ್‌ಗಳ ಮೂಲಕ ಇರಾನ್‌ ಮೇಲೆ ಪಾಕಿಸ್ತಾನ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಲ್ಲಿ ಮೂವರು ಮಕ್ಕಳು ಹಾಗೂ ನಾಲ್ವರು ಮಹಿಳೆಯರು ಸೇರಿ ಒಟ್ಟು ಏಳು ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಎರಡು ಉಗ್ರರ ನೆಲೆಗಳ ಮೇಲೆ ಮಾತ್ರ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್‌ ಸ್ಪಷ್ಟಪಡಿಸಿತ್ತು. ಆದರೆ, ಇರಾನ್‌ ಅಮಾಯಕರ ಮೇಲೆ ದಾಳಿ ನಡೆಸಿದೆ ಎಂಬಂತೆ ಬಿಂಬಿಸುತ್ತಿರುವ ಪಾಕಿಸ್ತಾನವು, “ಇರಾನ್‌ ಕ್ಷಿಪಣಿ ದಾಳಿಗೆ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೂವರು ನಾಗರಿಕರು ಗಾಯಗೊಂಡಿದ್ದಾರೆ. ಕ್ಷಿಪಣಿ ದಾಳಿಯ ಪರಿಣಾಮವನ್ನು ಇರಾನ್‌ ಗಂಭೀರವಾಗಿ ಎದುರಿಸಬೇಕಾಗುತ್ತದೆ” ಎಂದು ಗುಟುರು ಹಾಕಿತ್ತು. ಪರಿಣಾಮದ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನವು ಪ್ರತಿದಾಳಿ ಮಾಡಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಇರಾನ್‌ ದಾಳಿ ನಂತರವಾದರೂ ಪಾಕಿಸ್ತಾನಕ್ಕೆ ಬುದ್ಧಿ ಬರಲಿ!

ಹಾಗೆ ನೋಡಿದರೆ, ಜನವರಿಯ ಆರಂಭದಲ್ಲಿ ಇರಾನ್‌ನಲ್ಲಿ ಎರಡು ಆತ್ಮಾಹುತಿ ಬಾಂಬ್‌ ದಾಳಿ ನಡೆದಿದ್ದವು. ಇದರಿಂದ ಇರಾನ್‌ನ 80ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದರು. ದಾಳಿಯನ್ನು ಹೊಣೆಯನ್ನು ಐಸಿಸ್‌ ಹೊತ್ತುಕೊಂಡ ಕಾರಣ ಇರಾಕ್‌ ಹಾಗೂ ಸಿರಿಯಾ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನದ ಮೇಲೂ ಕ್ರಿಪಣಿ ಹಾಗೂ ಡ್ರೋನ್‌ಗಳ ಮೂಲಕ ದಾಳಿ ನಡೆಸಿತ್ತು. ಇದರಿಂದ ಪಾಕಿಸ್ತಾನವು ಜಾಗತಿಕ ಮಟ್ಟದಲ್ಲಿ ಹಿನ್ನಡೆ ಅನುಭವಿಸಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Niveditha Gowda: ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

VISTARANEWS.COM


on

Niveditha Gowda
Koo

ಬೆಂಗಳೂರು: ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ  ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅವರಿಬ್ಬರೂ ಒಂದೇ ಕಾರಿನಲ್ಲಿ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಕೈಕೈ ಹಿಡಿದುಕೊಂಡು ವಾಪಸ್‌ ಹೊರಟಿದ್ದರು. ಸೋಶಿಯಲ್ ಮೀಡಿಯಾಗಳಲ್ಲಿ ಜನಪ್ರಿಯರಾಗಿದ್ದ ಈ ಜೋಡಿಯು ಬೇರ್ಪಡುವುದು ಅವರ ಫಾಲೋಯರ್ಸ್​ಗಳಿಗೆ ಅಚ್ಚರಿಯ ವಿಷಯ. ಹೀಗಾಗಿ ಈ ಕುರಿತು ಬಗೆಬಗೆಯ ಚರ್ಚೆಗಳು ನಡೆಯುತ್ತಿವೆ. ಇವೆಲ್ಲದರ ನಡುವೆ ಸಂಜೆಯ ವೇಳೆಗೆ ನಿವೇದಿತಾ ಅವರು ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ನೀಡಿದ್ದಾರೆ.

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ವಿದೇಶಕ್ಕೆ ಹೋಗುವ ಸಾರ್ಧಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಪೀಠಕ್ಕೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು. ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇದನಕ್ಕೆ ಒಪ್ಪಿಗೆ ಕೊಡುತ್ತಾರೆ.
ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

ಇದನ್ನೂ ಓದಿ: Niveditha Gowda: ಮಗು ವಿಚಾರಕ್ಕೆ ಮುನಿಸು; ಒಂದೇ ಕಾರಲ್ಲಿ ಬಂದು ಡಿವೋರ್ಸ್‌ ಅರ್ಜಿ ಸಲ್ಲಿಸಿದ ಚಂದನ್‌-ನಿವೇದಿತಾ!

ಇದೇ ವರ್ಷ ಮೇ 12ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

Continue Reading

ಸಿನಿಮಾ

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Hamare Baarah: ಹಮಾರೆ ಬಾರಾ ಸಿನಿಮಾ ಬಿಡುಗಡೆ ಮಾಡಬಹುದು ಎಂದು ಬಾಂಬೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

VISTARANEWS.COM


on

Hamare Baarah
Koo

ಮುಂಬೈ: ಇಸ್ಲಾಂ, ಮುಸ್ಲಿಂ ಮಹಿಳೆಯರು, ಮುಸ್ಲಿಂ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಕಥಾಹಂದರ ಹೊಂದಿರುವ, ಆದರೆ, ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಕಾರಣವಾಗಿದ್ದ ಹಮಾರೆ ದೋ (Hamare Baarah) ಸಿನಿಮಾವನ್ನು ಬಿಡುಗಡೆಗೊಳಿಸಲು ಕೊನೆಗೂ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಹಮಾರೆ ದೋ ಸಿನಿಮಾವನ್ನು ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್‌ (Bombay High Court) ಅನುಮತಿ ನೀಡಿದ್ದು, ಅದರಂತೆ ಶುಕ್ರವಾರ (ಜೂನ್‌ 6) ಸಿನಿಮಾ ಬಿಡುಗಡೆಯಾಗಿದೆ.

ಸಿನಿಮಾದಲ್ಲಿ ಒಂದಷ್ಟು ದೃಶ್ಯಗಳನ್ನು, ಸಂಭಾಷಣೆಯನ್ನು ತೆಗೆಯಬೇಕು. ಒಬ್ಬ ಮುಸ್ಲಿಂ ಸದಸ್ಯ ಸೇರಿ ಮೂವರು ಇರುವ ಒಂದು ಸಮಿತಿ ರಚಿಸಲಾಗುತ್ತದೆ. ಆ ಸಮಿತಿಯ ಅಭಿಪ್ರಾಯದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಸಿನಿಮಾವನ್ನು ಬಿಡುಗಡೆ ಮಾಡಬಹುದು ಎಂಬುದಾಗಿ ಬಾಂಬೆ ಹೈಕೋರ್ಟ್‌ ತಿಳಿಸಿತು. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಿನಿಮಾದ ಕತೆ ಏನು?

ಮನ್ಸೂರ್‌ ಅಲಿ ಖಾನ್‌ ಸಂಜಾರಿ ಎಂಬ ಮುಸ್ಲಿಂ ವ್ಯಕ್ತಿಯ ಸುತ್ತಲೂ ನಡೆಯುವ ಕತೆಯನ್ನು ಹೆಣೆಯಲಾಗಿದೆ. ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲ ಪತ್ನಿಯು ಹೆರಿಗೆ ವೇಳೆಯೇ ನಿಧನರಾಗುತ್ತಾರೆ. ಆದರೆ, ಮಕ್ಕಳು ಬೇಕು ಎಂಬ ಕಾರಣಕ್ಕಾಗಿ ಎರಡನೇ ಮದುವೆಯಾಗುವ ಆತನು, ಎರಡನೇ ಪತ್ನಿಯೊಂದಿಗೆ 5 ಮಕ್ಕಳೊಂದಿಗೆ ಪಡೆಯುವ ಆತನು, ಪತ್ನಿಯು 6ನೇ ಬಾರಿ ಗರ್ಭಿಣಿಯಾಗುತ್ತಾರೆ. ಆಗ ವೈದ್ಯರು, ಮಹಿಳೆ ಜೀವಕ್ಕೆ ಕುತ್ತಿದೆ, ಗರ್ಭಪಾತ ಮಾಡಿಸಬೇಕು ಎಂದು ಹೇಳುತ್ತಾರೆ. ಆದರೆ, ಗರ್ಭಪಾತಕ್ಕೆ ಮನ್ಸೂರ್‌ ಅಲಿ ಖಾನ್‌ ಸಂಜಾರಿ ನಿರಾಕರಿಸುತ್ತಾನೆ.

ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲನೇ ಪತ್ನಿಯ ಮಗಳು ಮಲತಾಯಿಯ ಹಕ್ಕುಗಳಿಗಾಗಿ ಹೋರಾಡಲು ಕೋರ್ಟ್‌ ಮೊರೆ ಹೋಗುತ್ತಾಳೆ. ಕೋರ್ಟ್‌ನಲ್ಲಿ ಆಕೆಯ ವಾದ ಏನಿರುತ್ತದೆ? ಪುರುಷ ಪ್ರಧಾನ ಸಮಾಜದ ಕಟ್ಟುಪಾಡುಗಳೇನು? ಮುಸ್ಲಿಂ ಮಹಿಳೆಯರ ಮೇಲೆ ಹೇಗೆ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುತ್ತಾಳೆ. ಕತೆಯಲ್ಲಿ ಮುಂದೇನಾಗುತ್ತದೆ ಎಂಬುದೇ ಕುತೂಹಲವಾಗಿದೆ. ಆದರೆ, ಸಿನಿಮಾಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಮುಸ್ಲಿಂ ಸಂಘಟನೆಗಳು ಕೋರ್ಟ್‌ ಮೊರೆ ಹೋಗಿದ್ದವು.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ಬ್ಯಾನ್‌ ಮಾಡಿದ ಕರ್ನಾಟಕ ಸರ್ಕಾರ

Continue Reading

ಕರ್ನಾಟಕ

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಯ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ.

VISTARANEWS.COM


on

Job News
Koo

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅದರಲ್ಲಿಯೂ ಹೆಚ್ಚಿನ ಯುವ ಜನತೆ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಕಾಂಕ್ಷೆ ಹೊತ್ತಿರುತ್ತಾರೆ. ಅಂತಹವರಿಗೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ (South Eastern Railway Recruitment Cell) ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ (RRC SER Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್‌ 12 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಲೋಕೋ ಪೈಲಟ್‌ – 827 ಮತ್ತು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) – 375 ಹುದ್ದೆಗಳಿವೆ. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜತೆಗೆ ಐಟಿಐ ಪಾಸ್‌ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಇನ್ನು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 42 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 5,200 ರೂ. – 20,200 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಅರ್ಜಿ ಸಲ್ಲಿಸಬೇಕಾದ ಹುದ್ದೆಯನ್ನು ಆಯ್ಕೆ ಮಾಡಿ ಅದರ ಮೇಲೆ ಕ್ಲಿಕ್‌ ಮಾಡಿ (South Eastern Railway Trains Manager (Goods Guard) ಅಥವಾ South Eastern Railway Assistant Loco Pilot (ALP))
  • ಪುಟದ ಕೆಳಗಡೆ ಕಾಣಿಸುವ Apply Now ಬಟನ್‌ ಆಯ್ಕೆ ಮಾಡಿ.
  • ನಿಮ್ಮ ಇಮೇಲ್‌ ಐಡಿ, ಫೋನ್‌ ನಂಬರ್‌ ಬಳಸಿ ಹೆಸರು ನೋಂದಾಯಿಸಿ.
  • ರಿಜಿಸ್ಟರ್‌ ನಂಬರ್‌, ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

T20 World Cup : ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಅಮೆರಿಕ ತಂಡ

T20 World Cup: ಪಾಕಿಸ್ತಾನವನ್ನು 7 ವಿಕೆಟ್ ನಷ್ಟಕ್ಕೆ 159 ರನ್​​ಗಳಿಗೆ ಸೀಮಿತಗೊಳಿಸಿದ ನಂತರ, ಮೊನಾಂಕ್ ಪಟೇಲ್ ನೇತೃತ್ವದ ತಂಡವು ತನ್ನ ಇನ್ನಿಂಗ್ಸ್ ಅನ್ನು 159 ರನ್​ಗಳಿಗೆ ಮುಕ್ತಾಯaಗೊಳಿಸಿತು. ಇದರ ನಂತರ ಸೂಪರ್ ಓವರ್ ನಡೆಯಿತು ಮತ್ತು ಯುಎಸ್ಎ ಪಾಕಿಸ್ತಾನವನ್ನು ಸುಲಭವಾಗಿ ಸೋಲಿಸುವಲ್ಲಿ ಯಶಸ್ವಿಯಾಯಿತು>

VISTARANEWS.COM


on

T20 World Cup
Koo

ನವದೆಹಲಿ: ಐಸಿಸಿ ಟಿ 20 ವಿಶ್ವಕಪ್ (T20 World Cup) 2024 ರ 11 ನೇ ಪಂದ್ಯದಲ್ಲಿ ಯುಎಸ್ಎ ಗುರುವಾರ (ಜೂನ್ 7) ಪಾಕಿಸ್ತಾನ ತಂಡವನ್ನು ಸೂಪರ್​ ಓವರ್​ನಲ್ಲಿ ಸೋಲಿಸಿತು. ಈ ಮೂಲಕ ವಿಶೇಷ ದಾಖಲೆಯೊಂದನ್ನು ಬರೆಯಿತು. ಕಳೆದ ತಿಂಗಳು ಬಾಂಗ್ಲಾದೇಶ ವಿರುದ್ಧದ ಸರಣಿ ಗೆಲುವು ಮತ್ತು ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಕೆನಡಾ ವಿರುದ್ಧದ ಪ್ರಭಾವಶಾಲಿ ವಿಜಯದ ನಂತರ ನಂತರ ಅಮೆರಿಕ ತಂಡ ಮತ್ತೊಂದು ಬಾರಿ ಉತ್ತಮ ಪ್ರದರ್ಶನ ನೀಡಬಹುದು ಎಂದು ಎಂದು ಕ್ರಿಕೆಟ್ ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ, ಪಾಕಿಸ್ತಾನ ತಂಡವನ್ನು ಸೋಲಿಸಬಹುದು ಎಂದು ಯಾರೂ ಅಂದುಕೊಂಡಿರಲಿಲ್ಲ. ಪಾಕ್ ತಂಡವನ್ನು ಕ್ಯಾರೇ ಅನ್ನದೇ ಸುಲಭವಾಗಿ ಜಯ ಗಳಿಸಿತು. ಈ ಮೂಲಕ ಸತತವಾಗಿ ಎರಡು ವಿಜಯವನ್ನು ಪಡೆದು ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿತು.

ಪಾಕಿಸ್ತಾನವನ್ನು 7 ವಿಕೆಟ್ ನಷ್ಟಕ್ಕೆ 159 ರನ್​​ಗಳಿಗೆ ಸೀಮಿತಗೊಳಿಸಿದ ನಂತರ, ಮೊನಾಂಕ್ ಪಟೇಲ್ ನೇತೃತ್ವದ ತಂಡವು ತನ್ನ ಇನ್ನಿಂಗ್ಸ್ ಅನ್ನು 159 ರನ್​ಗಳಿಗೆ ಮುಕ್ತಾಯaಗೊಳಿಸಿತು. ಇದರ ನಂತರ ಸೂಪರ್ ಓವರ್ ನಡೆಯಿತು ಮತ್ತು ಯುಎಸ್ಎ ಪಾಕಿಸ್ತಾನವನ್ನು ಸುಲಭವಾಗಿ ಸೋಲಿಸುವಲ್ಲಿ ಯಶಸ್ವಿಯಾಯಿತು>

ಯುಎಸ್ಎ ಹೆಚ್ಚಿನ ಯಶಸ್ಸಿನ ಮೇಲೆ ಕಣ್ಣಿಟ್ಟಿದೆ

ಪಾಕಿಸ್ತಾನದ ವಿರುದ್ಧದ ಅದ್ಭುತ ಪ್ರದರ್ಶನಕ್ಕಾಗಿ ಯುಎಸ್ಎ ವಿಶ್ವದಾದ್ಯಂತ ಪ್ರಶಂಸೆ ಪಡೆಯುತ್ತಿದ್ದರೂ, ಅವರು ವಿಶ್ರಾಂತಿ ಪಡೆಯಲು ಸಿದ್ಧರಿಲ್ಲ ಆ ತಂಡದ ವೇಗದ ಬೌಲರ್ ಅಲಿ ಖಾನ್, ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿಯತ್ತ ತಂಡವು ಸಂಪೂರ್ಣವಾಗಿ ಗಮನ ಹರಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಭಾರತ ತಂಡಕ್ಕೆ ಎಚ್ಚರಿಕೆಯ ಸಂದೇಶವನ್ನು ರವಾನೆ ಮಾಡಿದೆ.

ಇದನ್ನೂ ಓದಿ: T20 World Cup : ಪಾಕಿಸ್ತಾನ ತಂಡಕ್ಕೆ ಕರಾಳ ದಿನ; ಮಾಜಿ ಆಟಗಾರರಿಂದ ಟೀಕೆ

ಸೂಪರ್ 8 ಹಂತಕ್ಕೆ ಅರ್ಹತೆ ಪಡೆಯಲು ಯುಎಸ್ಎ ಈಗ ಭಾರತ ಮತ್ತು ಐರ್ಲೆಂಡ್ ವಿರುದ್ಧದ ಉಳಿದ ಗುಂಪು ಪಂದ್ಯಗಳಲ್ಲಿ ಗೆಲುವಿನ ಮೇಲೆ ಕಣ್ಣಿಟ್ಟಿದೆ ಎಂದು ಪಾಕಿಸ್ತಾನ ಮೂಲದ ವೇಗಿ ಹೇಳಿದ್ದಾರೆ.

“ಶ್ರೇಷ್ಠ ತಂಡ ಪಾಕಿಸ್ತಾನ ವಿರುದ್ಧ ನಮಗೆ ಉತ್ತಮ ಗೆಲುವು ಸಿಕ್ಕಿದೆ. ನಾವು ಈ ಹಂತಕ್ಕಾಗಿ ಬಹಳ ಸಮಯದಿಂದ ಕಾಯುತ್ತಿದ್ದೇವೆ. ನಾವು ಈ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿದ್ದೇವೆ. ಸೂಪರ್ 8 ಗೆ ಅರ್ಹತೆ ಪಡೆಯುವುದು ನಮ್ಮ ಕೆಲಸವಾಗಿರುವುದರಿಂದ ಆ ಕೆಲಸ ಇನ್ನೂ ಮುಗಿದಿದೆ ಎಂದು ನಾನು ಭಾವಿಸುವುದಿಲ್ಲ. ಆದ್ದರಿಂದ ತಂಡವು ನಿಜವಾಗಿಯೂ ಆತ್ಮವಿಶ್ವಾಸದಲ್ಲಿದೆ. ನಾವು ಈ ವೇಗವನ್ನು ಉಳಿಸಿಕೊಳ್ಳಲಿದ್ದೇವೆ ಮತ್ತು ಭಾರತ ಮತ್ತು ಐರ್ಲೆಂಡ್ ವಿರುದ್ಧ ಗೆಲುವು ಸಾಧಿಸುವ ಭರವಸೆ ಹೊಂದಿದ್ದೇವೆ”ಎಂದು ಅಲಿ ಖಾನ್ ಕ್ರಿಕ್​ಬಜ್​ಗೆ ತಿಳಿಸಿದರು.

ಆಡಿರುವ ಎರಡು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಅಮೆರಿಕ ‘ಎ’ ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾನವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಉಳಿದ ಎರಡು ಪಂದ್ಯಗಳಲ್ಲಿ ಇನ್ನೂ ಒಂದು ಗೆಲುವು ಯುಎಸ್ಎ ಮುಂದಿನ ಹಂತಕ್ಕೆ ಅರ್ಹತೆ ಪಡೆಯಲು ಬಲವಾದ ಸ್ಥಾನದಲ್ಲಿರಿಸುತ್ತದೆ. ಜೂನ್ 12 ರಂದು ನ್ಯೂಯಾರ್ಕ್ನಲ್ಲಿ ನಡೆಯಲಿರುವ ಮುಂದಿನ ಪಂದ್ಯದಲ್ಲಿ ಅವರು ಟೀಮ್ ಇಂಡಿಯಾವನ್ನು ಎದುರಿಸಲಿದ್ದಾರೆ.

Continue Reading
Advertisement
Niveditha Gowda
ಪ್ರಮುಖ ಸುದ್ದಿ12 mins ago

Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Hamare Baarah
ಸಿನಿಮಾ20 mins ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Job News
ಕರ್ನಾಟಕ23 mins ago

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

T20 World Cup
ಪ್ರಮುಖ ಸುದ್ದಿ45 mins ago

T20 World Cup : ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಅಮೆರಿಕ ತಂಡ

All achievements in life are easy if there is Guru's grace says Sri Satyatmatirtha Swamiji
ಮೈಸೂರು51 mins ago

Mysore News: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ; ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

Akasa Air
ದೇಶ55 mins ago

Akasa Air: ಗೋರಖ್​ಪುರದಿಂದ ದೆಹಲಿ ಮತ್ತು ಬೆಂಗಳೂರಿಗೆ ಆಕಾಶ ಏರ್ ನೇರ ವಿಮಾನ

Alliance Candidates Win in MLC South West Constituency Celebration at Ripponpet
ಶಿವಮೊಗ್ಗ1 hour ago

Shivamogga News: ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

A trader lost more than three and a half lakhs by opening a WhatsApp group message
ಕರ್ನಾಟಕ1 hour ago

Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

Nitish Kumar
ದೇಶ1 hour ago

Nitish Kumar: ಮುಂದಿನ ಸಲ ನಿಮ್ಮೆದುರು ಪ್ರತಿಪಕ್ಷಗಳ ಎಲ್ಲರಿಗೂ ಸೋಲು; ನಿತೀಶ್‌ ಮಾತಿಗೆ ನಕ್ಕ ಮೋದಿ!

World Environment Day
Latest1 hour ago

World Environment Day:ವಿಶ್ವ ಪರಿಸರ ದಿನವನ್ನು ವಿಶೇಷವಾಗಿ ಆಚರಿಸಿದ ‘ಕೇಳಚಂದ್ರ ಕಾಫಿ’

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌