Koffee With Karan 8: ಕಾಫಿ ಅವಾರ್ಡ್‌ಗಳನ್ನು ಘೋಷಿಸಿದ ಕರಣ್‌ ಜೋಹರ್‌; ಯಾರಿಗೆ ಯಾವ ಪ್ರಶಸ್ತಿ? - Vistara News

ಬಾಲಿವುಡ್

Koffee With Karan 8: ಕಾಫಿ ಅವಾರ್ಡ್‌ಗಳನ್ನು ಘೋಷಿಸಿದ ಕರಣ್‌ ಜೋಹರ್‌; ಯಾರಿಗೆ ಯಾವ ಪ್ರಶಸ್ತಿ?

Koffee With Karan 8: ಹಿಂದಿಯ ಜನಪ್ರಿಯ ಟಾಕ್‌ ಶೋ ಕಾಫಿ ವಿತ್‌ ಕರಣ್‌ ಫಿನಾಲೆ ಹಂತಕ್ಕೆ ತಲುಪಿದೆ. ಈ ವೇಳೆ ನಿರೂಪಕ ಕರಣ್‌ ಜೋಹರ್‌ ಕಾಫಿ ಅವಾರ್ಡ್‌ಗಳನ್ನು ಘೋಷಿಸಿದ್ದಾರೆ. ಯಾರು ಯಾವ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

karan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಹಿಂದಿಯ ಜನಪ್ರಿಯ ಟಾಕ್‌ ಶೋ ಕಾಫಿ ವಿತ್‌ ಕರಣ್‌ ಸೀಸನ್‌ 8 (Koffee With Karan 8)ರ ಫಿನಾಲೆ ಅದ್ಧೂರಿಯಾಗಿ ನೆರವೇರಿದೆ. ಈ ವೇಳೆ ಕಾಫಿ ಅವಾರ್ಡ್‌ಗಳನ್ನು (Koffee Awards) ಘೋಷಿಸಲಾಯಿತು. ಈ ಬಗ್ಗೆ ಕಾರ್ಯಕ್ರಮದ ನಿರೂಪಕ ಕರಣ್ ಜೋಹರ್ (Karan Johar) ಮಾತನಾಡಿ, “ಗೋಲ್ಡನ್ ಗ್ಲೋಬ್ಸ್ ಮತ್ತು ಎಮ್ಮಿಸ್ ಪ್ರಶಸ್ತಿಗಳಂತೆಯೇ ನಾವು ಕಾಫಿ ಅವಾರ್ಡ್‌ ನೀಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹ ಇರಲಿʼʼ ಎಂದು ಹೇಳಿದ್ದಾರೆ. ತೀರ್ಪುಗಾರರಾಗಿ ಕರಣ್ ಜೋಹರ್ ಜತೆ ಹಾಸ್ಯನಟರಾದ ತನ್ಮಯ್ ಭಟ್, ದಾನಿಶ್ ಸೇಠ್, ಸುಮುಖಿ ಸುರೇಶ್ ಮತ್ತು ಕುಶಾ ಕಪಿಲಾ ಸಹಕರಿಸಿದ್ದಾರೆ.

ಪ್ರಶಸ್ತಿ ವಿವರ

ಸ್ಪೆಷಲ್‌ ಜ್ಯೂರಿ ಅವಾರ್ಡ್‌ ಪಡೆದ ರಣವೀರ್‌-ದೀಪಿಕಾ

ಈ ಸೀಸನ್‌ನ ಆರಂಭಿಕ ಸಂಚಿಕೆಯಲ್ಲಿ ಭಾಗವಹಿಸಿದ್ದ ತಾರಾ ಜೋಡಿ ರಣವೀರ್‌ ಸಿಂಗ್‌ ಮತ್ತು ದೀಪಿಕಾ ಪಡುಕೋಣೆ ಸ್ಪೆಷಲ್‌ ಜ್ಯೂರಿ ಅವಾರ್ಡ್‌ ಪಡೆದುಕೊಂಡಿದ್ದಾರೆ. ಅವರು ಕರಣ್‌ ಜೋಹರ್‌ ಜತೆ ಮಾತನಾಡುತ್ತ ತಮ್ಮ ಜೀವನದ ರಹಸ್ಯಗಳನ್ನು ತೆರೆದಿಟ್ಟಿದ್ದರು. ರಹಸ್ಯವಾಗಿ ನಡೆದ ನಿಶ್ಚಿತಾರ್ಥ, ಡೇಟಿಂಗ್ ಅನುಭವ, ಖಿನ್ನತೆಯಿಂದ ಬಳಲಿದ್ದ ದೀಪಿಕಾ ಅವರ ಅನುಭವ ಹೀಗೆ ಅವರು ಮುಕ್ತವಾಗಿ ಮಾತನಾಡಿದ್ದರು. ಅಲ್ಲದೆ 5ನೇ ವಿವಾಹ ವಾಷಿಕೋತ್ಸವ ಆಚರಿಸಿಕೊಂಡ ಅವರು ತಮ್ಮ ಮದುವೆಯ ವಿವಾಹದ ವಿಡಿಯೊವನ್ನು ಮೊದಲ ಬಾರಿ ಹಂಚಿಕೊಂಡಿದ್ದರು. ಈ ಎಲ್ಲ ಕಾರಣಗಳಿಂದ ಈ ಜೋಡಿ ವಿಶೇಷ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಬೆಸ್ಟ್‌ ಪರ್ಫಾಮೆನ್ಸ್‌ (ಮೇಲ್‌)-ಸೈಫ್‌ ಆಲಿ ಖಾನ್‌

ನಟ ಸೈಫ್‌ ಆಲಿ ಖಾನ್‌ ತಮ್ಮ ತಾಯಿ, ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ಜತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಉತ್ತರಾಧಿಕಾರದ ಜಗಳಗಳ ಬಗ್ಗೆ ಅವರು ಹೇಳಿದ ಹಾಸ್ಯ ಮಾಡಿದ್ದರು. ಅಲ್ಲದೆ ಅವರ ಚಲನಚಿತ್ರಗಳು, ಬಾಕ್ಸ್‌ ಆಫೀಸ್‌ ಸೋಲು ಮುಂತಾದವುಗಳ ಬಗ್ಗೆ ಮಾತನಾಡಿದ್ದರು. ಹೀಗಾಗಿ ಸೈಫ್‌ ಆಲಿ ಖಾನ್‌ ಬೆಸ್ಟ್‌ ಪರ್ಫಾಮೆನ್ಸ್‌ (ಮೇಲ್‌) ಪ್ರಶಸ್ತಿಗೆ ಭಾಜನರಾದರು.

ಬೆಸ್ಟ್‌ ಪರ್ಫಾಮೆನ್ಸ್‌ (ಫಿಮೇಲ್‌)-ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆಯ ಮುಕ್ತ ಮಾತು ಗಮನ ಸೆಳೆದಿತ್ತು. ಅವರು ತಮ್ಮ ಡೇಟಿಂಗ್‌ ವಿಚಾರ, ಮದುವೆಯ ರಹಸ್ಯ, ಖಿನ್ನತೆಯಿಂದ ಬಳಲಿದ್ದ ದಿನಗಳು ಮುಂತಾದ ವಿಷಯಗಳ ಬಗ್ಗೆ ಯಾವುದೇ ಮುಚ್ಚುಮರೆ ಇಲ್ಲದೆ ಮುಕ್ತವಾಗಿ ಮಾತನಾಡಿದ್ದರು. ಇದು ಪ್ರೇಕ್ಷಕರ ಜತೆಗೆ ತೀರ್ಪುಗಾರರ ಮನಸ್ಸನ್ನು ಗೆದ್ದಿತ್ತು.

ʼಕಾಫಿ ಬರ್ನ್‌ʼ ಗೆದ್ದ ವರುಣ್‌ ಧವನ್‌

ಕರಣ್‌ ಜೋಹರ್‌ ಅವರ ʼಸ್ಟೂಡೆಂಟ್‌ ಆಫ್‌ ದಿ ಇಯರ್‌ʼ ಚಿತ್ರದ ಮೂಲಕ ಬಾಲಿವುಡ್‌ ಪ್ರವೇಶಿಸಿದ ವರುಣ್‌ ಧವನ್‌, ಈ ಸೀಸನ್‌ನಲ್ಲಿ ಲವಲವಿಕೆಯಿಂದಲೇ ಪಾಲ್ಗೊಂಡರು. ಹಲವು ಪ್ರಶ್ನೆಗಳಿಗೆ ಹಾಸ್ಯದ ಮೂಲಕ ಉತ್ತರಿಸಿದ್ದ ಅವರು ʼಕಾಫಿ ಬರ್ನ್‌ʼ ಪ್ರಶಸ್ತಿ ಗೆದ್ದುಕೊಂಡರು.

ಇದನ್ನೂ ಓದಿ: Saif Ali Khan: ನಟಿ ಕರೀನಾ ಕಪೂರ್ ಅತ್ತೆಗೆ ಕ್ಯಾನ್ಸರ್

ಮೋಸ್ಟ್‌ ಫನ್‌ ಎಪಿಸೋಡ್‌ ಪ್ರಶಸ್ತಿ ಪಡೆದ ಕಾಜೋಲ್‌-ರಾಣಿ

ಬಾಲಿವುಡ್‌ ಪ್ರವೇಶಿಸಿ ದಶಕಗಳು ಕಳೆದರೂ ಇನ್ನೂ ಬೇಡಿಕೆಯಲ್ಲಿರುವ ನಟಿಯರ ಪೈಕಿ ಕಾಜೋಲ್‌ ಮತ್ತು ರಾಣಿ ಮುಖರ್ಜಿ ಪ್ರಮುಖರು. ಇವರಿಬ್ಬರು ಜತೆಗೆ ಭಾಗವಹಿಸಿದ್ದರು. 1998ರಲ್ಲಿ ತೆರೆಕಂಡ ಬಾಲಿವುಡ್‌ನ ʼಕುಚ್‌ ಕುಚ್‌ ಹೋತಾ ಹೈʼ ಚಿತ್ರದಲ್ಲಿ ಒಟ್ಟಾಗಿ ಅಭಿನಯಿಸಿದ್ದ ಅವರು ಉತ್ಸಾಹದಿಂದಲೇ ಪಾಲ್ಗೊಂಡರು. ನಗುವಿನಿಂದ ಕೂಡಿದ ಎಪಿಸೋಡ್‌ ಅದಾಗಿತ್ತು. ಹೀಗಾಗಿ ತೀರ್ಪುಗಾರರು ಅವರನ್ನು ನಿಜವಾದ ರಾಣಿಯರು ಎಂದು ಕರೆದು ಮೋಸ್ಟ್‌ ಫನ್‌ ಎಪಿಸೋಡ್‌ ಪ್ರಶಸ್ತಿ ಘೋಷಿಸಿದ್ದಾರೆ.

ʼಬೆಸ್ಟ್‌ ರ‍್ಯಾಪಿಡ್ ಫೈರ್‌ʼ ಗೆದ್ದ ಅನನ್ಯಾ ಪಾಂಡೆ

ಆದಿತ್ಯ ರಾಯ್ ಕಪೂರ್ ಅವರೊಂದಿಗಿನ ಸಂಬಂಧದ ಬಗ್ಗೆ ನಟಿ ಅನನ್ಯಾ ಪಾಂಡೆ ಅವರ ಉತ್ತರ ಬೆಸ್ಟ್‌ ರ‍್ಯಾಪಿಡ್ ಫೈರ್‌ ಪ್ರಶಸ್ತಿ ತಂದು ಕೊಟ್ಟಿತು. “ನಾನು ಅನನ್ಯಾ ಕೋಯ್ ಕಪೂರ್‌ ಎನಿಸುತ್ತಿದೆʼʼ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದರು.

ಇದನ್ನೂ ಓದಿ: Saif Ali Khan: ನಟಿ ಕರೀನಾ ಕಪೂರ್ ಅತ್ತೆಗೆ ಕ್ಯಾನ್ಸರ್

ಇಸ್ಟಾಗ್ರಾಮ್‌ ಖಾತೆಯಲ್ಲಿ ಕಾರ್ಯಕ್ರಮದ ಪ್ರೋಮೊ ಹಂಚಿಕೊಂಡಿರುವ ಕರಣ್‌ ಜೋಹರ್‌, “ಈ ಸೀಸನ್ ಉತ್ತಮವಾಗಿ ಮೂಡಿ ಬಂದಿದೆ. ಹೊಸ ಎಪಿಸೋಡ್‌ ಗುರುವಾರ (ಜನವರಿ 18) ಪ್ರಸಾರವಾಗಲಿದೆʼʼ ಎಂದು ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Maharaj Movie: `ಮಹಾರಾಜ್’ ಚಲನಚಿತ್ರ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Maharaj Movie: ಹಿಂದೂ ಸಂತರು ಮತ್ತು ಸಂಪ್ರದಾಯಗಳ ತೇಜೋವಧೆ ಮಾಡುವ `ಮಹಾರಾಜ್’ ಚಲನಚಿತ್ರವನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ, ಪುಣೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬುಧವಾರ ಆಂದೋಲನ ನಡೆಸಲಾಯಿತು.

VISTARANEWS.COM


on

Hindu Jana Jagruti Samiti demands immediate ban on Maharaj movie
Koo

ಪುಣೆ: ಹಿಂದೂ ಸಂತರು ಮತ್ತು ಸಂಪ್ರದಾಯಗಳ ತೇಜೋವಧೆ ಮಾಡುವ `ಮಹಾರಾಜ್’ ಚಲನಚಿತ್ರವನ್ನು (Maharaj Movie) ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬುಧವಾರ ಆಂದೋಲನ ನಡೆಸಲಾಯಿತು.

ಭಾರತವು ಸಾಧು-ಸಂತರ ಭೂಮಿಯಾಗಿದೆ. ಸಂತರು ಜಗತ್ತಿನಾದ್ಯಂತ ಸಂಚರಿಸಿ, ಭಾರತೀಯ ಸಂಸ್ಕೃತಿ, ಧರ್ಮ, ಜ್ಞಾನ, ಕಲೆ, ಸಭ್ಯತೆ, ಸದಾಚಾರ ಹಾಗೂ ಭಗವದ್ ಭಕ್ತಿ ಕಲಿಸಿ ಸಮಾಜಕ್ಕೆ ಆದರ್ಶ ಜೀವನವನ್ನು ನಡೆಸಲು ಪ್ರೋತ್ಸಾಹಿಸುತ್ತಿದ್ದಾರೆ. ಹೀಗಿರುವಾಗ ನಟ ಆಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ನಟಿಸಿರುವ ಯಶ್‌ ರಾಜ್ ಫಿಲ್ಮ್ಸ್ ನಿರ್ಮಾಣದ ‘ಮಹಾರಾಜ್” ಚಲನಚಿತ್ರನಲ್ಲಿ ಸಾಧುಸಂತರನ್ನು ದುರಾಚಾರಿಗಳು, ಗೂಂಡಾಗಳೆಂದು ಬಿಂಬಿಸಿ ಅವರ ತೇಜೋವಧೆ ಮಾಡಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯು ಆರೋಪಿಸಿದ್ದು,. ಈ ಹಿನ್ನಲೆಯಲ್ಲಿ ಈ ಚಲನಚಿತ್ರವನ್ನು ಕೂಡಲೇ ನಿಷೇಧಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಗ್ರಹಿಸಲಾಯಿತು.

ಇದನ್ನೂ ಓದಿ: Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

ಪುಣೆಯ ಕೊಥರೂಡ ಎಂಬಲ್ಲಿನ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿಯ ಸಮೀಪ ಬುಧವಾರ ಆಂದೋಲನ ನಡೆಸಿ ಒತ್ತಾಯಿಸಲಾಯಿತು. ಆಂದೋಲನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಪರಾಗ ಗೋಖಲೆ ಅವರ ನೇತೃತ್ವದಲ್ಲಿ ಸಮವಿಚಾರಿ ಸಂಘಟನೆಗಳೂ ಪಾಲ್ಗೊಂಡಿದ್ದವು.

ಇದನ್ನೂ ಓದಿ: Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

ಈ ಚಲನಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಲಾಗಿದೆ. ಕೇಂದ್ರ ಸರ್ಕಾರವು ಕೂಡಲೇ ಈ ಚಲಚಿತ್ರವನ್ನು ನಿಷೇಧಿಸಬೇಕು. ಅಲ್ಲದೆ, ದೇವತೆ, ಧರ್ಮ, ಸಂತರ ಅವಹೇಳನ ತಡೆಯಲು ದೇಶಾದ್ಯಂತ ‘ಧರ್ಮನಿಂದನೆ ತಡೆ ಕಾನೂನು’ಜಾರಿಗೊಳಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಗ್ರಹಿಸಲಾಯಿತು.

Continue Reading

ಬಾಲಿವುಡ್

Kiran Bedi: ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಯೋಪಿಕ್ ಅನೌನ್ಸ್‌: ಕುಶಾಲ್ ಚಾವ್ಲಾ ಆ್ಯಕ್ಷನ್‌ ಕಟ್‌!

Kiran Bedi: ಈ ಬಯೋಪಿಕ್‌ (Kiran Bedi) ಸಿನಿಮಾ ನಮ್ಮ ಭಾರತದ ಮೊಟ್ಟಮೊದಲ ಮಹಿಳಾ ಐಪಿಎಸ್ (Indias first IPS officer) ಆಗಿರುವ ( BEDI: The Name You Know. The Story You Don’t) ಕಿರಣ್‌ ಬೇಡಿ ಕುರಿತಾಗಿ ಇದೆ. ಕುಶಾಲ್ ಚಾವ್ಲಾ ಅವರು ಬರೆದು ನಿರ್ದೇಶಿಸಿದ ಈ ಸಿನಿಮಾ ಬೇಡಿ ಅವರ ವೃತ್ತಿಜೀವನ ಕುರಿತು ಇದೆ.

VISTARANEWS.COM


on

Kiran Bedi announces her biopic by director Kushaal Chawla
Koo

ಬೆಂಗಳೂರು: ಡ್ರೀಮ್ ಸ್ಲೇಟ್ ಪಿಕ್ಚರ್ಸ್ ಅಧಿಕೃತವಾಗಿ ಬಹು ನಿರೀಕ್ಷಿತ ಬಯೋಪಿಕ್ ‘ಬೇಡಿ: ದಿ ನೇಮ್ ಯು ನೋ. ದ ಸ್ಟೋರಿ ಯು ಡೋಂಟ್’ ಸಿನಿಮಾ ಘೋಷಿಸಿದೆ. ಈ ಬಯೋಪಿಕ್‌ (Kiran Bedi) ಸಿನಿಮಾ ನಮ್ಮ ಭಾರತದ ಮೊಟ್ಟಮೊದಲ ಮಹಿಳಾ ಐಪಿಎಸ್ (Indias first IPS officer) ಆಗಿರುವ ( BEDI: The Name You Know. The Story You Don’t) ಕಿರಣ್‌ ಬೇಡಿ ಕುರಿತಾಗಿ ಇದೆ. ಕುಶಾಲ್ ಚಾವ್ಲಾ ಅವರು ಬರೆದು ನಿರ್ದೇಶಿಸಿದ ಈ ಸಿನಿಮಾ ಬೇಡಿ ಅವರ ವೃತ್ತಿಜೀವನ ಕುರಿತು ಇದೆ.

ಈ ಬಗ್ಗೆ ಕಿರಣ್ ಬೇಡಿ ಮಾತನಾಡಿ ʻʻಈ ಕಥೆ ಕೇವಲ ನನ್ನ ಕಥೆಯಲ್ಲ. ಇದು ಭಾರತೀಯ ಮಹಿಳೆಯ ಕಥೆ-ಭಾರತದಲ್ಲಿ ಬೆಳೆದ, ಭಾರತದಲ್ಲಿ ಅಧ್ಯಯನ ಮಾಡಿದ, ಭಾರತೀಯ ಪೋಷಕರಿಂದ ಬೆಳೆದ ಮತ್ತು ತನ್ನ ವೃತ್ತಿಜೀವನದುದ್ದಕ್ಕೂ ಭಾರತದ ಜನರಿಗಾಗಿ ಕೆಲಸ ಮಾಡಿದ ಭಾರತೀಯ ಮಹಿಳೆಯ ಕಥೆ. ನಾವು ಈ ಚಿತ್ರವನ್ನು 50ನೇ ಅಂತಾರಾಷ್ಟ್ರೀಯ ಮಹಿಳಾ ವರ್ಷದಲ್ಲಿ ಬಿಡುಗಡೆ ಮಾಡುವ ಗುರಿ ಹೊಂದಿದ್ದೇವೆ, ಇದು ನಮ್ಮ ಶ್ರೇಷ್ಠ ರಾಷ್ಟ್ರವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಭಾರತೀಯ ಮಹಿಳೆಯ ಕಥೆಯಾಗಿದೆʼʼಎಂದರು.

ಕುಶಾಲ್ ಚಾವ್ಲಾ ಮಾತನಾಡಿ ʻʻಈ ಚಿತ್ರವು ಪ್ರೀತಿಯ ಶ್ರಮ. ನಾಲ್ಕು ವರ್ಷಗಳ ಕಾಲ ಸಂಶೋಧನೆಯಲ್ಲಿ ತೊಡಗಿ ಮಾಡಿರುವ ಸಿನಿಮಾ. ಡಾ.ಕಿರಣ್ ಬೇಡಿಯವರ ಜೀವನದ ಕುರಿತು ಸಿನಿಮಾ ಮಾಡಿ ನಿರ್ದೇಶಿಸಿರುವುದು ನನ್ನ ಸೌಭಾಗ್ಯ. ಅವರು ನನಗೆ ಸ್ಫೂರ್ತಿಯಾಗಿದ್ದಾರೆ. ಈ ಚಿತ್ರವನ್ನು ನಿರ್ದೇಶಿಸುತ್ತಿರುವುದು, ಹಾಗೇ ಅವರ ವಿಶ್ವಾಸವನ್ನು ಗಳಿಸಿರುವುದು ನನಗೆ ಆಶೀರ್ವಾದವಾಗಿದೆʼʼ ಎಂದರು.

ಇದನ್ನೂ ಓದಿ: ರಾಜ ಮಾರ್ಗ ಅಂಕಣ | ಕಿರಣ್ ಬೇಡಿ ಎಂಬ ಕ್ರಾಂತಿಯ ಕಿಡಿ, 73 ವರ್ಷದ ಆಕೆ ಇಂದಿಗೂ ದೇಶದ ಯೂತ್‌ ಐಕಾನ್‌!

ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಜೀವನಾಧಾರಿತ ಬೇಡಿಯ ಮೋಷನ್ ಪೋಸ್ಟರ್ ಈಗಾಗಲೇ ಚಿತ್ರತಂಡ ಬಿಡುಗಡೆ ಮಾಡಿದೆ. ಈ ಚಿತ್ರವನ್ನು ಡ್ರೀಮ್ ಸ್ಲೇಟ್ ಪಿಕ್ಚರ್ಸ್ ಅಡಿಯಲ್ಲಿ ಗೌರವ್ ಚಾವ್ಲಾ ನಿರ್ಮಿಸಿದ್ದಾರೆ. ಇನ್ನು ಸಿನಿಮಾ ರಿಲೀಸ್‌ ಡೇಟ್‌ ಘೋಷಣೆ ಆಗಿಲ್ಲ.

ಭಾರತದ ವಿವಿಧ ಭಾಷೆಗಳಲ್ಲಿ ಕಿರಣ್‌ ಬೇಡಿ ಹೆಸರಲ್ಲಿ ಬಂದಿರುವ ಪೊಲೀಸ್ ಸಿನೆಮಾಗಳು ಬೇರೆ ಯಾರ ಹೆಸರಲ್ಲಿ ಕೂಡ ಬಂದಿರುವ ಉದಾಹರಣೆ ಇಲ್ಲ. ಇಡೀ ದೇಶದ ಯೂತ್‌ ಐಕಾನ್‌ ಆಗಿದ್ದಾರೆ ಕಿರಣ್‌. ಹೆಣ್ಮಕ್ಕಳ ಪಾಲಿಗಂತೂ ಆತ್ಮವಿಶ್ವಾಸದ ಪ್ರತೀಕ. ಯಾವುದೇ ಮಹಿಳಾ ಚರ್ಚೆ ಆಕೆಯ ಹೆಸರೆತ್ತದೆ ಮುಕ್ತಾಯವಾಗುವುದು ಸಾಧ್ಯವೇ ಇಲ್ಲ.

ಕಿರಣ್ ಬೇಡಿ ಮಾಡಿದ ಈ ಜೈಲು ಸುಧಾರಣೆಯ ಕ್ರಮಗಳು ಜಗತ್ತಿನಲ್ಲಿಯೇ ವಿನೂತನ ಆಗಿದ್ದವು. ಅದರಿಂದ ದೇಶದ, ವಿದೇಶದ ಮಾಧ್ಯಮಗಳು ಆಕೆಯ ಬಗ್ಗೆ, ತಿಹಾರ್ ಜೈಲಿನ ಸುಧಾರಣ ಕ್ರಮಗಳ ಬಗ್ಗೆ ಲೀಡ್ ಲೇಖನ ಬರೆದವು. ಆಗ ಭಾರೀ ಇಂಪ್ರೆಸ್ ಆದ ಅಮೆರಿಕಾದ ಆಗಿನ ಅಧ್ಯಕ್ಷ ಬಿಲ್ ಕ್ಲಿಂಟನ್ ಆಕೆಗೆ ಪತ್ರ ಬರೆದು ಶುಭಾಶಯ ಹೇಳಿದರು. ಮತ್ತು ಅವರ ಜೊತೆ ಒಮ್ಮೆ ಊಟ ಮಾಡಬೇಕು ಅಂತ ಆಸೆ ವ್ಯಕ್ತ ಪಡಿಸಿದರು! ಆಕೆಗೆ ಜಾಗತಿಕ ಮಟ್ಟದ ‘ಮ್ಯಾಗ್ಸೆಸೆ ಪ್ರಶಸ್ತಿ’ಯು ದೊರೆಯಿತು. ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿತು. ಮುಂದೆ ನಿವೃತ್ತರಾದ ನಂತರ ಅವರು ಪಾಂಡಿಚೇರಿಯ ಮೊದಲ ಮಹಿಳಾ ಗವರ್ನರ್ ಆಗಿ ಸೇವೆ ಸಲ್ಲಿಸಿದರು

Continue Reading

ಬಾಲಿವುಡ್

Aamir Khan: 200 ಕ್ಕೂ ಹೆಚ್ಚು ಅತಿಥಿಗಳೊಂದಿಗೆ ತಾಯಿಯ ಜನುಮದಿನ ಸೆಲೆಬ್ರೆಟ್‌ ಮಾಡಲಿದ್ದಾರೆ ಆಮೀರ್‌!

Aamir Khan : ಆಮೀರ್ ಕಳೆದ ವರ್ಷ ತಾಯಿ ಜೀನತ್‌ ಚಿಕಿತ್ಸೆ ಪಡೆಯುತ್ತಿದ್ದರಿಂದ ಚೆನ್ನೈಗೆ ತೆರಳಿದ್ದರು ಎಂದು ವರದಿಯಾಗಿದೆ. ಜೀನತ್ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯಕೀಯ ಕೇಂದ್ರದ ಸಮೀಪವಿರುವ ಹೋಟೆಲ್‌ನಲ್ಲಿ ಆಮೀರ್ ತಂಗಿದ್ದರು. ಇನ್ನು 2023ರಲ್ಲಿ ಜೀನತ್ ಅವರ 89ನೇ ಹುಟ್ಟುಹಬ್ಬವನ್ನು ಆಚರಿಸಲು ಆಮೀರ್ ಮತ್ತು ಅವರ ಕುಟುಂಬ ಸದಸ್ಯರು ಒಟ್ಟಾಗಿ ಪಾರ್ಟಿ ಮಾಡಿದ್ದರು. ಮುಂಬೈನ ಮನೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಂಜಾಬಿ ಗಾಯಕಿ ಪ್ರತಿಭಾ ಸಿಂಗ್ ಬಾಘೆಲ್ ಅವರು ಈ ಹಿಂದೆ ಪಾರ್ಟಿಯ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು.

VISTARANEWS.COM


on

Aamir Khan to fly in over 200 relatives and friends for mom Zeenat's grand 90th birthday
Koo

ಬೆಂಗಳೂರು: ನಟ ಆಮೀರ್ ಖಾನ್ (Aamir Khan) ತಾಯಿ ಜೀನತ್ ಹುಸೇನ್ ಅವರ 90ನೇ ಹುಟ್ಟುಹಬ್ಬವನ್ನು 200 ಕ್ಕೂ ಹೆಚ್ಚು ಅತಿಥಿಗಳೊಂದಿಗೆ ಆಚರಿಸಲು ಸಿದ್ಧವಾಗಿದ್ದಾರೆ ಎಂದು ವರದಿಯಾಗಿದೆ. ಆಚರಣೆಯಲ್ಲಿ ಬನಾರಸ್, ಬೆಂಗಳೂರು, ಲಕ್ನೋ, ಮೈಸೂರು ಮತ್ತು ಇತರ ನಗರಗಳಿಂದ ಸಂಬಂಧಿಕರು (Zeenat’s grand 90th birthday ) ಸೇರಲಿದ್ದಾರೆ ಎಂದು ವರದಿಯಾಗಿದೆ. ಕಳೆದ ಒಂದು ವರ್ಷದಿಂದ ಆಮೀರ್‌ ತಾಯಿ ಅಸ್ವಸ್ಥಳಾಗಿದ್ದರು. ಈಗ ಜೀನತ್‌ ಅವರು ಚೇತರಿಸಿಕೊಂಡಿದ್ದ ಕಾರಣ ಆಮೀರ್‌ ಅದ್ಧೂರಿಯಾಗಿ ಸೆಲೆಬ್ರೆಟ್‌ ಮಾಡಬೇಕೆಂದಿದ್ದಾರೆ ಎನ್ನಲಾಗಿದೆ.

“ಜೂನ್ 13 ರಂದು ಆಮೀರ್ ಖಾನ್ ಅಮ್ಮನ ಜನುಮದಿನದ ಅಂಗವಾಗಿ ವಿವಿಧ ನಗರಗಳಿಂದ 200ಕ್ಕೂ ಹೆಚ್ಚು ಕುಟುಂಬ ಸದಸ್ಯರು ಮತ್ತು ಸ್ನೇಹಿತರನ್ನು ಆಹ್ವಾನಿಸಿದ್ದಾರೆ. ಒಂದು ವರ್ಷದಿಂದ ಆಮೀರ್‌ ತಾಯಿ ಅಸ್ವಸ್ಥಳಾಗಿದ್ದರು. ಈಗ ಅವರು ಚೇತರಿಸಿಕೊಂಡು ಆರೋಗ್ಯವಾಗಿದ್ದಾರೆ. ಹೀಗಾಗಿ ಆಮೀರ್‌ ಗೆಟ್-ಟುಗೆದರ್ ಮಾಡಲು ಬಯಸಿದ್ದರು. ಈ ವಿಶೇಷ ದಿನವನ್ನು ಆಚರಿಸಲು ಬನಾರಸ್, ಬೆಂಗಳೂರು, ಲಕ್ನೋ, ಮೈಸೂರು ಮತ್ತು ಇತರ ನಗರಗಳಿಂದ ಜನರು ಬರುತ್ತಿದ್ದಾರೆʼʼ ಎಂದು ವರದಿಯಾಗಿದೆ.

ಆಮೀರ್ ಕಳೆದ ವರ್ಷ ತಾಯಿ ಜೀನತ್‌ ಚಿಕಿತ್ಸೆ ಪಡೆಯುತ್ತಿದ್ದರಿಂದ ಚೆನ್ನೈಗೆ ತೆರಳಿದ್ದರು ಎಂದು ವರದಿಯಾಗಿದೆ. ಜೀನತ್ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯಕೀಯ ಕೇಂದ್ರದ ಸಮೀಪವಿರುವ ಹೋಟೆಲ್‌ನಲ್ಲಿ ಆಮೀರ್ ತಂಗಿದ್ದರು. ಇನ್ನು 2023ರಲ್ಲಿ ಜೀನತ್ ಅವರ 89ನೇ ಹುಟ್ಟುಹಬ್ಬವನ್ನು ಆಚರಿಸಲು ಆಮೀರ್ ಮತ್ತು ಅವರ ಕುಟುಂಬ ಸದಸ್ಯರು ಒಟ್ಟಾಗಿ ಪಾರ್ಟಿ ಮಾಡಿದ್ದರು. ಮುಂಬೈನ ಮನೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಂಜಾಬಿ ಗಾಯಕಿ ಪ್ರತಿಭಾ ಸಿಂಗ್ ಬಾಘೆಲ್ ಅವರು ಈ ಹಿಂದೆ ಪಾರ್ಟಿಯ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: Aamir Khan: ವಡೋದರಾದಲ್ಲಿ ‘ಸಿತಾರೆ ಜಮೀನ್ ಪರ್’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾದ ಆಮೀರ್‌ ಖಾನ್‌!

`ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಸೋತ ಬಳಿಕ ಆಮೀರ್‌ ಖಾನ್‌ (Aamir Khan) ಮುಂದಿನ ಪ್ರಾಜೆಕ್ಟ್‌ ಘೋಷಿಸಿದ್ದರು. ಅದುವೇ ‘ಸಿತಾರೆ ಜಮೀನ್ ಪರ್’. 2007ರಲ್ಲಿ ದರ್ಶೀಲ್ ಸಫಾರಿ ಮತ್ತು ಆಮೀರ್ ಖಾನ್ (Aamir Khan) ನಟನೆಯ ‘ತಾರೆ ಜಮೀನ್ ಪರ್’ (Taare Zameen Par) ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಆಮೀರ್ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ಡಿಸ್ಲೆಕ್ಸಿಯಾದಿಂದ ಬಳಲುತ್ತಿರುವ ಚಿಕ್ಕ ಹುಡುಗನ ಕುರಿತಾಗಿ ಈ ಸಿನಿಮಾ ಇತ್ತು. ಅಮೋಲ್ ಗುಪ್ತೆ ಬರೆದ ಈ ಚಿತ್ರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆಯಿತು. ಇದೀಗ ಆಮೀರ್ ಖಾನ್ ದೆಹಲಿಯಲ್ಲಿ ಚಿತ್ರೀಕರಣದ ನಂತರ, ಗುಜರಾತ್‌ನ ವಡೋದರದಲ್ಲಿ ಸಿನಿಮಾ ಚಿತ್ರೀಕರಣ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿತಾರೆ ಜಮೀನ್ ಪರ್ ಚಿತ್ರದ ಬ್ಯಾಕ್-ಟು-ಬ್ಯಾಕ್ ಚಿತ್ರೀಕರಣದಲ್ಲಿ ಆಮೀರ್ ಖಾನ್ ನಿರತರಾಗಿದ್ದಾರೆ. ದೆಹಲಿಯಲ್ಲಿ ಚಿತ್ರೀಕರಣ ಮುಗಿಸಿದ ನಂತರ, ಅವರು ಈಗ ಬರೋಡದಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಸೂಪರ್‌ಸ್ಟಾರ್ ಬಿಸಿಲಿನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ.” ಸಿತಾರೆ ಜಮೀನ್ ಪರ್ ಚಿತ್ರವನ್ನು ಆರ್ ಎಸ್ ಪ್ರಸನ್ನ ಅವರು ನಿರ್ದೇಶಿಸಲಿದ್ದಾರೆ. ಚಿತ್ರದಲ್ಲಿ ಜೆನಿಲಿಯಾ ಡಿಸೋಜಾ ಮತ್ತು ದರ್ಶೀಲ್ ಸಫಾರಿ ಕೂಡ ನಟಿಸಿದ್ದಾರೆ.

Continue Reading

ಸಿನಿಮಾ

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Shatrughan Sinha: ʼದಬಾಂಗ್‌ʼ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ ಸೋನಾಕ್ಷಿ ಸಿನ್ಹಾ ಸದ್ಯ ಹಸೆಮಣೆಗೇರುವ ಸಿದ್ಧತೆಯಲ್ಲಿದ್ದಾರೆ. ತಮ್ಮ ಬಾಯ್‌ಫ್ರೆಂಡ್‌, ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಈ ಮಧ್ಯೆ ಮಗಳ ಮದುವೆ ಬಗ್ಗೆ ಮಾತನಾಡಿರುವ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ, ತಮಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಆಮಂತ್ರಿಸಿದರೆ ಖಂಡಿತವಾಗಿಯೂ ತೆರಳುವುದಾಗಿ ಹೇಳಿದ್ದಾರೆ.

VISTARANEWS.COM


on

Shatrughan Sinha
Koo

ಮುಂಬೈ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ತಮ್ಮ ಬಾಯ್‌ಫ್ರೆಂಡ್‌, ನಟ ಜಹೀರ್ ಇಕ್ಬಾಲ್ (Zaheer Iqbal) ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಜೋಡಿ ಎಲ್ಲಿಯೂ ತಮ್ಮ ಮದುವೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಈ ಮಧ್ಯೆ ಮಗಳ ಮದುವೆ ಬಗ್ಗೆ ಮಾತನಾಡಿರುವ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ (Shatrughan Sinha) ಅವರು, ʼʼಮದುವೆ ಬಗ್ಗೆ ಸೋನಾಕ್ಷಿ ತಮ್ಮ ಬಳಿ ಏನನ್ನೂ ಹೇಳಿಕೊಂಡಿಲ್ಲ. ಇಂದಿನ ಕಾಲದ ಮಕ್ಕಳು ಮದುವೆಗೆ ಒಪ್ಪಿಗೆ ಕೇಳುವುದಿಲ್ಲ. ಬದಲಿಗೆ ತಮ್ಮ ನಿರ್ಧಾರದ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡುತ್ತಾರೆ. ಒಂದು ವೇಳೆ ಅವಳು ಆಮಂತ್ರಿಸಿದರೆ ಖಂಡಿತವಾಗಿಯೂ ತೆರಳಿ ಆಶೀರ್ವದಿಸುತ್ತೇನೆʼʼ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ʼʼನಾನೀಗ ದೆಹಲಿಯಲ್ಲಿದ್ದೇನೆ. ಚುನಾವಣಾ ಫಲಿತಾಂಶದ ನಂತರ ನಾನು ಇಲ್ಲಿಗೆ ಬಂದೆ. ನನ್ನ ಮಗಳ ಬಗ್ಗೆ, ಅವಳ ಯೋಜನೆಗಳ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳು ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಏನು ವರದಿ ಆಗಿದೆಯೋ ನನಗೂ ಅಷ್ಟೇ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಪತ್ನಿ ಇಬ್ಬರೂ ಹೋಗಿ ಆಶೀರ್ವಾದ ಮಾಡುತ್ತೇವೆ. ಅವಳ ಸಂತೋಷವನ್ನು ಎಂದಿಗೂ ನಾವು ಬಯಸುತ್ತೇವೆʼʼ ಎಂದು ಪ್ರತಿಕ್ರಿಯಿಸಿದ್ದಾರೆ.

ಸೋನಾಕ್ಷಿ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ ಎಂದೂ ಶತ್ರುಘ್ನ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼನಮ್ಮ ಮಗಳ ನಿರ್ಧಾರ ಯಾವತ್ತೂ ಸರಿಯಾಗಿರುತ್ತದೆ ಎನ್ನುವ ವಿಶ್ವಾಸವಿದೆ. ಅವಳು ಎಂದಿಗೂ ಸಂವಿಧಾನೇತರ ಅಥವಾ ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಅವಳು ಪ್ರಬುದ್ಧೆಯಾಗಿದ್ದು, ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದ್ದಾಳೆ. ನನ್ನ ಮಗಳ ಮದುವೆಯಲ್ಲಿ ಡ್ಯಾನ್ಸ್ ಮಾಡಲು ಇಷ್ಟಪಡುತ್ತೇನೆʼʼ ಎಂದು ಅವರು ತಿಳಿಸಿದ್ದಾರೆ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದೂ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಸೋನಾಕ್ಷಿ 2010ರಲ್ಲಿ ಸಲ್ಮಾನ್‌ ಖಾನ್‌ ಅಭಿನಯದ ʻದಬಾಂಗ್‌ʼ ಸಿನಿಮಾ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ. ಇತ್ತೀಚೆಗೆ ತೆರೆಕಂಡ ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.

ಇದನ್ನೂ ಓದಿ: Sonakshi Sinha : ಪ್ರೀತಿಯಲ್ಲಿ ಬಿದ್ದ ಸೋನಾಕ್ಷಿ, ಲವ್‌ ಯು ಎಂದು ಪೋಸ್ಟ್‌ ಹಾಕಿದ ಬಾಯ್‌ಫ್ರೆಂಡ್‌ ಯಾರು ನೋಡಿ!

ಈ ಹಿಂದೆ ಬಿಜೆಪಿಯಲ್ಲಿದ್ದ ಶತ್ರುಘ್ನ ಸಿನ್ಹಾ ಕೆಲವು ವರ್ಷಗಳ ಹಿಂದೆ ಹೊರ ಬಂದಿದ್ದರು. ಈ ಲೋಕಸಭಾ ಚುನಾವಣೆಯಲ್ಲಿ ಅವರು ಪಶ್ಚಿಮ ಬಂಗಾಳದ ಅಸೋಲ್‌ ಕ್ಷೇತ್ರದಿಂದ ಟಿಎಂಸಿಯಿಂದ ಸ್ಪರ್ಧಿಸಿ ಜಯ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುರೇಂದ್ರಜೀತ್ ಸಿಂಗ್ ಅಹ್ಲುವಾಲಿಯಾ ವಿರುದ್ಧ 59,564 ಮತಗಳ ಅಂತರದಿಂದ ಗೆದ್ದಿದ್ದಾರೆ.

Continue Reading
Advertisement
Hassan Ali
ದೇಶ4 hours ago

Hassan Ali: ರಿಯಾಸಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ; ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದಿದ್ದೇಕೆ?

IND vs USA
ಪ್ರಮುಖ ಸುದ್ದಿ4 hours ago

IND vs USA: ಅರ್ಶದೀಪ್​ ಮಾರಕ ದಾಳಿಗೆ ಪತರುಗುಟ್ಟಿದ ಅಮೆರಿಕ; ಟೀಮ್​ ಇಂಡಿಯಾ ಸೂಪರ್​-8 ಪ್ರವೇಶ

disqualification for hanawala Gram Panchayat Vice President and Cancellation of membership ordered
ಕರ್ನಾಟಕ5 hours ago

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Court Order
ದೇಶ5 hours ago

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

Virat Kohli
ಕ್ರೀಡೆ6 hours ago

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Mumbai
ಪ್ರಮುಖ ಸುದ್ದಿ6 hours ago

300 ಕೋಟಿ ರೂ. ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ಕೊಟ್ಟು ಮಾವನನ್ನೇ ಕೊಲ್ಲಿಸಿದ ದುಷ್ಟ ಸೊಸೆ!

ICC T20 Rankings
ಕ್ರೀಡೆ7 hours ago

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

Rain News
ಪ್ರಮುಖ ಸುದ್ದಿ7 hours ago

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Chellagurki Shri Yerrithathanavara Maharathotsava in Ballari
ಧಾರ್ಮಿಕ7 hours ago

Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

Narendra Modi
ದೇಶ7 hours ago

Narendra Modi: ಆಂಧ್ರದಲ್ಲಿ ಮೆಗಾ ಸ್ಟಾರ್‌, ಪವರ್‌ ಸ್ಟಾರ್‌ ಜತೆ ‘ಪೊಲಿಟಿಕಲ್‌ ಸ್ಟಾರ್’‌ ಮೋದಿ; Video ನೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌