Mutual fund : ಈಕ್ವಿಟಿ ಮ್ಯೂಚುವಲ್‌ ಫಂಡ್‌ಗಳಲ್ಲಿನ 11 ಕೆಟಗರಿಗಳ ವಿಶೇಷವೇನು? - Vistara News

ಮನಿ-ಗೈಡ್

Mutual fund : ಈಕ್ವಿಟಿ ಮ್ಯೂಚುವಲ್‌ ಫಂಡ್‌ಗಳಲ್ಲಿನ 11 ಕೆಟಗರಿಗಳ ವಿಶೇಷವೇನು?

ಈಕ್ವಿಟಿ ಮ್ಯೂಚುವಲ್‌ ಫಂಡ್‌ಗಳಲ್ಲಿನ 11 ಕೆಟಗರಿಗಳಲ್ಲಿ ಹೂಡಿಕೆದಾರರಿಗೆ ( Mutual fund ) ಅವುಗಳದ್ದೇ ಆದ ಲಾಭ ಸಿಗುತ್ತದೆ. ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

cash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈಕ್ವಿಟಿ ಮ್ಯೂಚುವಲ್‌ ಫಂಡ್‌ ಯೋಜನೆಗಳ 11 ಕೆಟಗರಿಗಳು ಹಾಗೂ ಅವುಗಳ ವಿಶೇಷತೆಗಳ ಬಗ್ಗೆ ಈ ಅಧ್ಯಾಯದಲ್ಲಿ ತಿಳಿಯೋಣ. ಹಾಗಾದರೆ ಹನ್ನೊಂದು ಈಕ್ವಿಟಿ ಮ್ಯೂಚುವಲ್‌ ಫಂಡ್‌ ಕೆಟಗರಿಗಳು ( Mutual fund ) ಯಾವುದು ಎನ್ನುತ್ತೀರಾ. ಅವುಗಳೆಂದರೆ- ಮಲ್ಟಿ-ಕ್ಯಾಪ್‌, ಲಾರ್ಜ್-ಕ್ಯಾಪ್‌, ಲಾರ್ಜ್‌ ಆಂಡ್‌ ಮಿಡ್-ಕ್ಯಾಪ್‌, ಮಿಡ್-ಕ್ಯಾಪ್‌, ಸ್ಮಾಲ್-ಕ್ಯಾಪ್‌, ಡಿವಿಡೆಂಡ್‌ ಯೀಲ್ಡ್‌, ವಾಲ್ಯೂ/ ಕಾಂಟ್ರಾರಿಯನ್‌, ಫೋಕಸ್ಡ್‌, ಸೆಕ್ಟರಲ್/ಥೀಮ್ಯಾಟಿಕ್‌, ಇಎಲ್‌ಎಸ್‌ಎಸ್‌, ಫ್ಲೆಕ್ಸಿ-ಕ್ಯಾಪ್‌.

ಮಲ್ಟಿ-ಕ್ಯಾಪ್‌ : ಮಲ್ಟಿ ಕ್ಯಾಪ್‌ ಮ್ಯೂಚುವಲ್‌ ಫಂಡ್‌ ಕೆಟಗರಿಯ ಯೋಜನೆಯ ವಿಶೇಷತೆ ಏನೆಂದರೆ, ಹೂಡಿಕೆಯ ಒಟ್ಟು ಮೌಲ್ಯದಲ್ಲಿ 65% ಅನ್ನು ಈಕ್ವಿಟಿ ಮತ್ತು ಸಂಬಂಧಿತ ಸಾಧನಗಳಲ್ಲಿ ಹೂಡಿಕೆ ಮಾಡಲಾಗುವುದು. ಲಾರ್ಜ್-ಮಿಡ್‌ ಮತ್ತು ಸ್ಮಾಲ್-ಕ್ಯಾಪ್‌ ಸ್ಟಾಕ್ಸ್‌ಗಳಲ್ಲಿ ತಲಾ 25% ಹೂಡಿಕೆ ಮಾಡಲಾಗುವುದು.

ಲಾರ್ಜ್-ಕ್ಯಾಪ್:‌ ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ ಕೆಟಗರಿಯ ಯೋಜನೆಗಳಲ್ಲಿ ಒಟ್ಟು ಆಸ್ತಿಯ ಕನಿಷ್ಠ 80% ಪಾಲನ್ನು ಲಾರ್ಜ್-ಕ್ಯಾಪ್‌ ಈಕ್ವಿಟಿ ಮತ್ತು ಸಂಬಂಧಿತ ಸಾಧನಗಳಲ್ಲಿ ಹೂಡಿಕೆ ಮಾಡಲಾಗುವುದು. ಲಾರ್ಜ್‌ ಕ್ಯಾಪ್‌ ಸ್ಟಾಕ್ಸ್‌ಗಳಲ್ಲಿ ಹೆಚ್ಚಾಗಿ ಹೂಡಿಕೆ ಮಾಡಲಾಗುತ್ತದೆ.

ಲಾರ್ಜ್-‌ ಆಂಡ್‌ ಮಿಡ್-ಕ್ಯಾಪ್‌ : ಒಟ್ಟು ಹೂಡಿಕೆಯಲ್ಲಿ 35% ಅನ್ನು ಲಾರ್ಜ್‌ ಮತ್ತು ಮಿಡ್‌ ಕ್ಯಾಪ್‌ ಷೇರುಗಳಲ್ಲಿ ಮತ್ತು ಸಂಬಂಧಿತ ಷೇರುಗಳಲ್ಲಿ ಹೂಡಿಕೆ ಮಾಡಲಾಗುವುದು.

ಮಿಡ್-ಕ್ಯಾಪ್:‌ ಒಟ್ಟು ಆಸ್ತಿಯಲ್ಲಿ 65% ಅನ್ನು ಮಿಡ್-ಕ್ಯಾಪ್‌ ಈಕ್ವಿಟಿ ಮತ್ತು ಸಂಬಂಧಿತ ಸಾಧನಗಳಲ್ಲಿ ಹೂಡಿಕೆ ಮಾಡಬೇಕು. ಇಲ್ಲಿ ಹೆಚ್ಚಾಗಿ ಮಿಡ್‌ ಕ್ಯಾಪ್‌ ಸ್ಟಾಕ್ಸ್‌ಗಳಲ್ಲಿಯೇ ಹೂಡಿಕೆ ಮಾಡಲಾಗುವುದು.

ಸ್ಮಾಲ್-ಕ್ಯಾಪ್‌ : ಒಟ್ಟು ಹೂಡಿಕೆಯಲ್ಲಿ ಸ್ಮಾಲ್‌ -ಕ್ಯಾಪ್‌ ಈಕ್ವಿಟಿ ಮತ್ತು ಸಂಬಂಧಿತ ಸಾಧನಗಳಲ್ಲಿ 65% ಹೂಡಿಕೆಯನ್ನು ಮಾಡಬೇಕು. ಸ್ಮಾಲ್-ಕ್ಯಾಪ್‌ ಸ್ಟಾಕ್ಸ್‌ಗಳಲ್ಲಿ ಇನ್ವೆಸ್ಟ್‌ ಮಾಡುತ್ತಾರೆ.

ಡಿವಿಡೆಂಡ್‌ ಯೀಲ್ಡ್‌ : ಒಟ್ಟು ಹೂಡಿಕೆಯಲ್ಲಿ 65% ಅನ್ನು ಡಿವಿಡೆಂಡ್‌ ಯೀಲ್ಡಿಂಗ್‌ ಷೇರುಗಳಲ್ಲಿ ಹೂಡಿಕೆ ಮಾಡುತ್ತಾರೆ. ಡಿವಿಡೆಂಡ್‌ ತರುವ ಸ್ಟಾಕ್ಸ್‌ಗಳಲ್ಲಿಯೇ ಹೆಚ್ಚು ಹೂಡಿಕೆ ಮಾಡುತ್ತಾರೆ.

ವಾಲ್ಯೂ/ ಕಾಂಟ್ರಾ: ಒಟ್ಟು ಹೂಡಿಕೆಯಲ್ಲಿ 65% ಭಾಗವನ್ನು ವಾಲ್ಯೂ ಸ್ಟಾಕ್ಸ್‌ ಅಥವಾ ಕಾಂಟ್ರಾರಿಯನ್‌ ಷೇರುಗಳಲ್ಲಿ ಹೂಡಿಕೆ ಮಾಡುತ್ತಾರೆ. ವಾಲ್ಯೂ ಸ್ಟಾಕ್ಸ್‌ಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಲಾಗುತ್ತದೆ.

ಫೋಕಸ್ಡ್‌ : ಒಟ್ಟು ಆಸ್ತಿಯಲ್ಲಿ 65% ಅನ್ನು ಗರಿಷ್ಠ 30 ಸ್ಟಾಕ್ಸ್‌ಗಳಲ್ಲಿ ಹೂಡಿಕೆ ಮಾಡಲಾಗುವುದು. ಲಾರ್ಜ್‌, ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಫಂಡ್‌ಗಳಲ್ಲಿ ಹೂಡಿಕೆಯ ಮಿಶ್ರಣವನ್ನು ಇಲ್ಲಿ ಕಾಣಬಹುದು.

ಇದನ್ನೂ ಓದಿ: Mutual fund : 2,500ಕ್ಕೂ ಹೆಚ್ಚು ಮ್ಯೂಚುವಲ್‌ ಫಂಡ್‌ ಸ್ಕೀಮ್‌ಗಳಲ್ಲಿ ಆಯ್ಕೆ ಮಾಡಿಕೊಳ್ಳುವುದು ಹೇಗೆ?

ಇಎಲ್‌ಎಸ್‌ಎಸ್‌ : ನಿರ್ದಿಷ್ಟ ಈಕ್ವಿಟಿ ಮತ್ತು ಸಂಬಂಧಿತ ಹೂಡಿಕೆಯ ಸಾಧನಗಳಲ್ಲಿ 80% ಹೂಡಿಕೆಯನ್ನು ಇಲ್ಲಿ ಕಾಣಬಹುದು. ಈ ಸ್ಕೀಮ್‌ನಲ್ಲಿ ಮೂರು ವರ್ಷಗಳ ಲಾಕ್‌ ಇನ್‌ ಅವಧಿ ಇರುತ್ತದೆ. ಸೆಕ್ಷನ್‌ 80 ಸಿ ಅಡಿಯಲ್ಲಿ ಡಿಡಕ್ಷನ್‌ ಸೌಲಭ್ಯ ಸಿಗುತ್ತದೆ.

ಫ್ಲೆಕ್ಸಿ ಕ್ಯಾಪ್:‌ ಫ್ಲೆಕ್ಸಿ ಕ್ಯಾಪ್‌ ಮ್ಯೂಚುವಲ್‌ ಫಂಡ್‌ ಯೋಜನೆಗಳಲ್ಲಿ ಒಟ್ಟು ಹೂಡಿಕೆಯಲ್ಲಿ 65% ಪಾಲನ್ನು ಈಕ್ವಿಟಿ ಮತ್ತು ಸಂಬಂಧಿತ ಆಸ್ತಿಗಳಲ್ಲಿ ಹೂಡಿಕೆ ಮಾಡುತ್ತಾರೆ. ಲಾರ್ಜ್‌, ಮಿಡ್‌, ಸ್ಮಾಲ್‌ ಕ್ಯಾಪ್‌ ಷೇರುಗಳಲ್ಲಿ ಹೆಚ್ಚಿನ ಹೂಡಿಕೆ ಸಾಮಾನ್ಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Money Guide: ಪಡಿತರ ಚೀಟಿ ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪಡಿತರ ಚೀಟಿ (Ration Card) ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಜತೆಗೆ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪ್ಯಾನ್ ಕಾರ್ಡ್‌, ಚಾಲಕರ ಪರವಾನಗಿ ಇತ್ಯಾದಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಇದನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ‌ ವಿತರಿಸುತ್ತದೆ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ (Money Guide).

ಅಗತ್ಯ ದಾಖಲೆಗಳು

ಗ್ರಾಮಾಂತರ ಪ್ರದೇಶ

  • ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
  • ಈಗ ವಾಸ ಮಾಡುತ್ತಿರುವ ಮನೆ ವಿಳಾಸ
  • ಮನೆಯ ಆಸ್ತಿ ಸಂಖ್ಯೆ ವಿವರ
  • ಮನೆಯ ವಿದ್ಯುತ್‌ ಸಂಪರ್ಕದ ಬಿಲ್‌ ಪ್ರತಿ
  • ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.

ನಗರ / ಪಟ್ಟಣ ಪ್ರದೇಶ

  • ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
  • ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ (ಇದನ್ನು ಸುಲಭವಾಗಿ ತಿಳಿಯಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯವರನ್ನು ಸಂಪರ್ಕಿಸಿ, ಇಲ್ಲವೇ ನಿಮ್ಮ ನೆರೆಹೊರೆಯವರಲ್ಲಿ ಈಗಾಗಲೇ ಲಭ್ಯವಿರುವ ಪಡಿತರ ಚೀಟಿಯನ್ನು ನೋಡಿ ತಿಳಿಯಿರಿ)
  • ನಿಮ್ಮ ಮನೆಯ ವಿದ್ಯುತ್ ಬಿಲ್
  • ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್‌ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ
  • ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
  • ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
  • ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ
  • ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ

ಅರ್ಜಿ ಸಲ್ಲಿಸುವುದು ಹೇಗೆ?

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಇ-ಸರ್ವಿಸ್‌ (ಇ-ಸೇವೆ) ಮೇಲೆ ಕ್ಲಿಕ್‌ ಮಾಡಬೇಕು. ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ. ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್‌ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ. ಅಲ್ಲಿ ಎಪಿಎಲ್‌ ಹಾಗೂ ಬಿಪಿಎಲ್‌ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್‌ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.

ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

Continue Reading

ಮನಿ ಗೈಡ್

Retirement Plan: ನಿವೃತ್ತಿ ನಂತರ ನೆಮ್ಮದಿ ಜೀವನ ನಡೆಸಬೇಕೆ? ಈ 5 ಯೋಜನೆಗಳನ್ನು ಮರೆಯಬೇಡಿ

ನಿವೃತ್ತಿಗಾಗಿ ಯೋಜಿಸುತ್ತಿದ್ದರೆ ಮತ್ತು ಪ್ರತಿ ತಿಂಗಳು ಪಿಂಚಣಿ ಪಡೆಯಲು ಬಯಸಿದರೆ ಉತ್ತಮ ಆದಾಯವನ್ನು ನೀಡುವ ಯೋಜನೆಗಳಲ್ಲಿ (Retirement Plan) ಹೂಡಿಕೆ ಮಾಡುವುದು ಒಳ್ಳೆಯದು. ಐದು ನಿವೃತ್ತಿ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Retirement Plan
Koo

ಉದ್ಯೋಗ (job) ಆರಂಭಿಸುವಾಗಲೇ ನಿವೃತ್ತಿ ಯೋಜನೆಯನ್ನು (Retirement Plan) ರೂಪಿಸಬೇಕು. ಇಲ್ಲವಾದರೆ ವಯಸ್ಸು ಜಾರಿದ್ದು ಗೊತ್ತೇ ಆಗುವುದಿಲ್ಲ. ನಿವೃತ್ತಿ ಸಮೀಪಿಸಿದಾಗ ಕೈಯಲ್ಲಿ ಬಿಡಿಗಾಸೂ ಇಲ್ಲದೆ ಕಷ್ಟ ಪಡಬೇಕಾಗಬಹುದು. ಇಲ್ಲವಾದರೆ ಅವರಿವರ ಮುಂದೆ ಕೈಚಾಚಿಕೊಂಡು ನಿಲ್ಲುವಂತಹ ಸಂದರ್ಭ ಬರಬಹುದು.

ನಿವೃತ್ತಿಗಾಗಿ ಯೋಜಿಸುತ್ತಿದ್ದರೆ ಮತ್ತು ಪ್ರತಿ ತಿಂಗಳು ಪಿಂಚಣಿ (pension ) ಪಡೆಯಲು ಬಯಸಿದರೆ ಉತ್ತಮ ಆದಾಯವನ್ನು (regular income) ನೀಡುವ ಯೋಜನೆಗಳಲ್ಲಿ ಹೂಡಿಕೆ (investment) ಮಾಡುವುದು ಒಳ್ಳೆಯದು. ನಿಯಮಿತ ಆದಾಯದ ಮೂಲವನ್ನು ನಮ್ಮನು ಸುರಕ್ಷಿತಗೊಳಿಸುತ್ತದೆ ಮತ್ತು ಆರಾಮದಾಯಕ ವೃದ್ಧಾಪ್ಯವನ್ನು ಖಚಿತಪಡಿಸಿಕೊಳ್ಳಲು ಗಮನಾರ್ಹವಾದ ಒಟ್ಟು ಮೊತ್ತವನ್ನು ಸಂಗ್ರಹಿಸುತ್ತದೆ. ಒಂದು ದೊಡ್ಡ ಮೊತ್ತವು ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಆದರೆ ಮಾಸಿಕ ಆದಾಯವು ದೈನಂದಿನ ಖರ್ಚುಗಳನ್ನು ಒಳಗೊಂಡಿರುತ್ತದೆ.

ವಿಶ್ವಾಸಾರ್ಹ ಮಾಸಿಕ ಪಿಂಚಣಿಯನ್ನು ನೀಡುವ ಐದು ಯೋಜನೆಗಳು ಇಲ್ಲಿವೆ. ಇದರಲ್ಲಿ ಹೂಡಿಕೆ ಮಾಡಿದರೆ ನಿವೃತ್ತಿ ಬಳಿಕ ಯಾರನ್ನೂ ಅವಲಂಬಿಸಬೇಕಿಲ್ಲ.

1. ಅಟಲ್ ಪಿಂಚಣಿ ಯೋಜನೆ

ತೆರಿಗೆದಾರರಲ್ಲದಿದ್ದರೆ ಅಟಲ್ ಪಿಂಚಣಿ ಯೋಜನೆ ಮೂಲಕ ನಿಮ್ಮ ವೃದ್ಧಾಪ್ಯದಲ್ಲಿ ನಿಯಮಿತ ಆದಾಯಕ್ಕೆ ವ್ಯವಸ್ಥೆ ಮಾಡಬಹುದು. ಈ ಯೋಜನೆಯು 18ರಿಂದ 40 ವರ್ಷ ವಯಸ್ಸಿನ ವ್ಯಕ್ತಿಗಳಿಗೆ ಲಭ್ಯವಿರುತ್ತದೆ. ಭಾಗವಹಿಸುವವರು 60 ವರ್ಷವನ್ನು ತಲುಪುವವರೆಗೆ ಸಣ್ಣ ಮಾಸಿಕ ಕೊಡುಗೆಗಳನ್ನು ನೀಡಬೇಕು. ಅನಂತರ ಅವರು ತಮ್ಮ ಕೊಡುಗೆಗಳ ಆಧಾರದ ಮೇಲೆ 1,000 ರಿಂದ ರೂ 5,000 ರವರೆಗಿನ ಮಾಸಿಕ ಪಿಂಚಣಿಯನ್ನು ಪಡೆಯುತ್ತಾರೆ.

2. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS)

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯು ಮಾಸಿಕ ಪಿಂಚಣಿ ಪಡೆಯಲು ಮತ್ತೊಂದು ಕಾರ್ಯಸಾಧ್ಯವಾದ ಆಯ್ಕೆಯಾಗಿದೆ. 18 ರಿಂದ 70 ವರ್ಷ ವಯಸ್ಸಿನ ಯಾವುದೇ ಭಾರತೀಯ ನಾಗರಿಕರು ನೋಂದಾಯಿಸಿಕೊಳ್ಳಬಹುದು. NPS 60 ವರ್ಷ ವಯಸ್ಸಿನವರೆಗೆ ಹೂಡಿಕೆಯ ಅಗತ್ಯವಿರುವ ಮಾರುಕಟ್ಟೆ-ಸಂಯೋಜಿತ ಸರ್ಕಾರಿ ಯೋಜನೆಯಾಗಿದೆ. ತುರ್ತು ಸಂದರ್ಭದಲ್ಲಿ ನಿಮ್ಮ ಕೊಡುಗೆಗಳ ಶೇ. 60ರಷ್ಟನ್ನು ಹಿಂಪಡೆಯಬಹುದು, ಶೇ. 40 ಪಿಂಚಣಿಗೆ ನಿಗದಿಪಡಿಸಲಾಗಿದೆ. ಇದು ನಿಮ್ಮ ಪಿಂಚಣಿ ಮೊತ್ತವನ್ನು ನಿರ್ಧರಿಸುತ್ತದೆ. ವರ್ಷಾಶನವು ದೊಡ್ಡದಾಗಿದ್ದರೆ ಪಿಂಚಣಿ ಮೊತ್ತವೂ ಹೆಚ್ಚಾಗುತ್ತದೆ.


3. ವ್ಯವಸ್ಥಿತ ಹಿಂತೆಗೆದುಕೊಳ್ಳುವ ಯೋಜನೆ (SWP)

ವ್ಯವಸ್ಥಿತ ಹಿಂತೆಗೆದುಕೊಳ್ಳುವ ಯೋಜನೆಯು ಹೂಡಿಕೆದಾರರಿಗೆ ಮ್ಯೂಚುಯಲ್ ಫಂಡ್ ಯೋಜನೆಯಿಂದ ನಿಗದಿತ ಮಾಸಿಕ ಮೊತ್ತವನ್ನು ಪಡೆಯಲು ಅನುಮತಿಸುತ್ತದೆ. ಇದರಿಂದ ಲಾಭ ಪಡೆಯಲು ನಿಮ್ಮ ಕೆಲಸದ ವರ್ಷಗಳಲ್ಲಿ ವ್ಯವಸ್ಥಿತ ಹೂಡಿಕೆ ಯೋಜನೆ (SIP) ಅಥವಾ ಇತರ ಯೋಜನೆಗಳ ಮೂಲಕ ನೀವು ಗಣನೀಯ ಪ್ರಮಾಣದ ಹಣವನ್ನು ಹೂಡಿಕೆ ಮಾಡಿರಬೇಕು. ನೀವು SWP ಗಾಗಿ ನಿಮ್ಮ ನಿವೃತ್ತಿ ನಿಧಿಯನ್ನು ಬಳಸಬಹುದು, ಅಲ್ಲಿ ನೀವು ಮ್ಯೂಚುಯಲ್ ಫಂಡ್ ಘಟಕಗಳನ್ನು ಮಾರಾಟ ಮಾಡುವ ಮೂಲಕ ಮಾಸಿಕ ಪಾವತಿಗಳನ್ನು ಸ್ವೀಕರಿಸುತ್ತೀರಿ. ನಿಧಿಯು ಖಾಲಿಯಾದ ಅನಂತರ SWP ನಿಲ್ಲುತ್ತದೆ. ನೀವು ವಾಪಸಾತಿ ಆವರ್ತನವನ್ನು ನಿರ್ದಿಷ್ಟಪಡಿಸಬೇಕು ಮತ್ತು SWP ಅನ್ನು ಸಕ್ರಿಯಗೊಳಿಸಲು ಅಗತ್ಯ ವಿವರಗಳನ್ನು ಒದಗಿಸಬೇಕು.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

4. ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO)

ಸಂಬಳ ಪಡೆಯುವ ಉದ್ಯೋಗಿಯಾಗಿದ್ದರೆ ಮತ್ತು ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆಗೆ (ಇಪಿಎಫ್‌ಒ) ಕೊಡುಗೆ ನೀಡುತ್ತಿದ್ದರೆ ನೀವು ಉದ್ಯೋಗಿ ಪಿಂಚಣಿ ಯೋಜನೆ (ಇಪಿಎಸ್) ಬಗ್ಗೆ ತಿಳಿದಿರಬಹುದು. ಈ ಯೋಜನೆಯು ಖಾಸಗಿ ವಲಯದ ಉದ್ಯೋಗಿಗಳಿಗೆ ನಿವೃತ್ತಿಯ ಅನಂತರ ಸಾಮಾಜಿಕ ಭದ್ರತೆಯನ್ನು ಒದಗಿಸುತ್ತದೆ. EPFO ನಿಂದ ಪಿಂಚಣಿ ಪಡೆಯಲು ಅರ್ಹರಾಗಲು, ನೀವು ಕನಿಷ್ಠ 10 ವರ್ಷಗಳ ಕಾಲ EPS ಗೆ ಕೊಡುಗೆ ನೀಡಿರಬೇಕು. ಪಿಂಚಣಿ ಮೊತ್ತವು ನಿಮ್ಮ ಕೊಡುಗೆಗಳನ್ನು ಅವಲಂಬಿಸಿರುತ್ತದೆ ಮತ್ತು ನಿವೃತ್ತಿಯ ನಂತರ ಲಭ್ಯವಿರುತ್ತದೆ.

5. ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (POMIS)

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯು ಮಾಸಿಕ ಆದಾಯವನ್ನು ಗಳಿಸಲು ಸರ್ಕಾರ-ಖಾತ್ರಿಪಡಿಸಿದ ಠೇವಣಿ ಆಯ್ಕೆಯನ್ನು ನೀಡುತ್ತದೆ. ನೀವು ಏಕ ಅಥವಾ ಜಂಟಿ ಖಾತೆಗಳನ್ನು ತೆರೆಯಬಹುದು, ಏಕ ಖಾತೆಗಳಿಗೆ ಗರಿಷ್ಠ 9 ಲಕ್ಷ ರೂ. ಮತ್ತು ಜಂಟಿ ಖಾತೆಗಳಿಗೆ 15 ಲಕ್ಷ ರೂ. ಠೇವಣಿ ಅವಧಿಯು ಐದು ವರ್ಷಗಳು ಮತ್ತು ನಿಮ್ಮ ಅಸಲು ಮೊತ್ತದ ಸುರಕ್ಷತೆಯನ್ನು ಖಾತರಿಪಡಿಸುವ ಮೂಲಕ ನೀವು ಬಡ್ಡಿಯನ್ನು ಗಳಿಸುತ್ತೀರಿ. ಪ್ರಸ್ತುತ ಶೇ.7.4 ಬಡ್ಡಿದರದಲ್ಲಿ ಜಂಟಿ ಖಾತೆಯು ತಿಂಗಳಿಗೆ 9,250 ರೂ. ವರೆಗೆ ಗಳಿಸಬಹುದು. ಐದು ವರ್ಷಗಳ ಅನಂತರ ನೀವು ಹೊಸ ಖಾತೆಯನ್ನು ತೆರೆಯುವ ಮೂಲಕ ಯೋಜನೆಯನ್ನು ನವೀಕರಿಸಬಹುದು.

Continue Reading

ಮನಿ ಗೈಡ್

Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

ಬಾಲ ಜೀವನ್ ವಿಮಾ ಯೋಜನೆಯು ಭಾರತೀಯ ಅಂಚೆ ಕಚೇರಿಯು ಮಕ್ಕಳಿಗಾಗಿ ನೀಡುವ ಜೀವ ವಿಮಾ (Bal Jeevan Bima) ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ, ಪೋಷಕರು ಪೋಸ್ಟ್ ಆಫೀಸ್ ಖಾತೆಯಲ್ಲಿ ದಿನಕ್ಕೆ 6 ರೂ. ನಷ್ಟು ಕಡಿಮೆ ಹಣವನ್ನು ಠೇವಣಿ ಮಾಡಬಹುದು

VISTARANEWS.COM


on

By

Bal Jeevan Bima
Koo

ಮಗುವಿನ ಜನನದ (child birth) ಅನಂತರ ಅನೇಕ ಪೋಷಕರು ತಮ್ಮ ಮಗುವಿನ ಭವಿಷ್ಯಕ್ಕಾಗಿ ವಿವಿಧ ಯೋಜನೆಯಲ್ಲಿ (insurance scheme) ಹೂಡಿಕೆಯನ್ನು ಮಾಡಲು ಪ್ರಾರಂಭಿಸುತ್ತಾರೆ. ಇದಕ್ಕಾಗಿ ಹೂಡಿಕೆಯ (Bal Jeevan Bima) ವಿವಿಧ ಮಾರ್ಗಗಳನ್ನು ಅನ್ವೇಷಿಸುತ್ತಾರೆ. ಹೆಣ್ಣು ಮಕ್ಕಳಿಗಾಗಿ (girl child) ಹಲವು ಉಳಿತಾಯ ಯೋಜನೆಗಳಿವೆ. ಅಂತೆಯೇ ಎಲ್ಲ ಮಕ್ಕಳಿಗೂ ಪ್ರಯೋಜನವಾಗುವ ಕೆಲವು ಯೋಜನೆಗಳಿವೆ. ಅದರಲ್ಲಿ ಅಂಚೆ ಕಚೇರಿಯಲ್ಲಿ ಸಿಗುವ ಬಾಲ ಜೀವನ್ ವಿಮಾ ಯೋಜನೆಯೂ ಒಂದು. ಇದು ಮಕ್ಕಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಜೀವ ವಿಮಾ ಯೋಜನೆಯಾಗಿದೆ.

ಬಾಲ ಜೀವನ್ ವಿಮಾ ಯೋಜನೆಯು ಭಾರತೀಯ ಅಂಚೆ ಕಚೇರಿಯು ಮಕ್ಕಳಿಗಾಗಿ ನೀಡುವ ಜೀವ ವಿಮಾ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ, ಪೋಷಕರು ಪೋಸ್ಟ್ ಆಫೀಸ್ ಖಾತೆಯಲ್ಲಿ ದಿನಕ್ಕೆ 6 ರೂ. ನಷ್ಟು ಕಡಿಮೆ ಹಣವನ್ನು ಠೇವಣಿ ಮಾಡಬಹುದು. ಮಗುವಿನ ಅಕಾಲಿಕ ಅಥವಾ ದುರದೃಷ್ಟಕರ ಮರಣದ ಸಂದರ್ಭದಲ್ಲಿ ನಾಮನಿರ್ದೇಶಿತ ಫಲಾನುಭವಿಗೆ ಒಟ್ಟು 1 ಲಕ್ಷ ರೂ. ಪರಿಹಾರ ವಿಮೆ ದೊರೆಯುವುದು. ಶಿಕ್ಷಣ ಶುಲ್ಕ ಕಟ್ಟುವ ಸಂದರ್ಭದಲ್ಲೂ ಇದು ನೆರವಾಗುತ್ತದೆ. ಪಾಲಿಸಿ ಅವಧಿ ಮುಗಿದ ಬಳಿಕವೂ 1 ಲಕ್ಷ ರೂ. ಸಿಗುತ್ತದೆ. ಪೋಷಕರು ಗರಿಷ್ಠ ಇಬ್ಬರು ಮಕ್ಕಳಿಗೆ ಈ ವಿಮೆ ಮಾಡಿಸಬಹುದು.

ಬಾಲ ಜೀವನ್ ವಿಮಾ ಯೋಜನೆಯು 5ರಿಂದ 20 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲಾಗುತ್ತದೆ. 20 ವರ್ಷ ವಯಸ್ಸಿನವರೆಗೆ ಇದು ಅವರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಈ ಯೋಜನೆಯ ಗಮನಾರ್ಹ ವೈಶಿಷ್ಟ್ಯವೆಂದರೆ ಕೈಗೆಟುಕುವಿಕೆ ದರದಲ್ಲಿ ಇದನ್ನು ಪ್ರಾರಂಭಿಸಬಹುದು. ತ್ರೈಮಾಸಿಕ, ಅರ್ಧ ವಾರ್ಷಿಕ ಮತ್ತು ವಾರ್ಷಿಕವಾಗಿ ಪ್ರೀಮಿಯಂ ಕಟ್ಟಬಹುದು.

ಏನು ಲಾಭ?

ಪ್ರತಿನಿತ್ಯ 6 ರೂ. ನಂತೆ ಹೂಡಿಕೆ ಮಾಡಿ ಇದನ್ನು ಪ್ರಾರಂಭಿಸಬಹುದು. 20 ವರ್ಷಕ್ಕಿಂತ ಮೊದಲು ವಿಮೆ ಮಾಡಲಾದ ಮಗುವಿನ ಯಾವುದೇ ಕಾರಣದಿಂದ ಮೃತಪಟ್ಟರೆ 1 ಲಕ್ಷ ರೂ. ವರೆಗೆ ವಿಮಾ ರಕ್ಷಣೆಯನ್ನು ಭರವಸೆ ನೀಡುತ್ತದೆ. ಮಗುವು 20 ವರ್ಷಗಳ ವಯಸ್ಸಿನ ಮಿತಿಯನ್ನು ದಾಟಿದ ಅನಂತರವೂ ಈ ಪ್ರಯೋಜನ ಪಡೆಯಬಹುದು. ಅದರ ಅನಂತರ ವಿಮೆ ಪಾವತಿಗೆ ಯಾವುದೇ ನಿಬಂಧನೆ ಇಲ್ಲ.

ಇದು ಮಗುವಿನ ಶಿಕ್ಷಣ ಅಥವಾ ಇತರ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದ ವೆಚ್ಚಗಳನ್ನು ಭರಿಸಲು ಸಹಾಯ ಮಾಡುತ್ತದೆ.

ಮಕ್ಕಳಲ್ಲಿ ಉಳಿತಾಯ ಮತ್ತು ಆರ್ಥಿಕ ಶಿಸ್ತನ್ನು ಉತ್ತೇಜಿಸಲು ಇದು ಸಹಾಯ ಮಾಡುತ್ತದೆ. ಖಾತೆಗೆ ನಿಯಮಿತ ಠೇವಣಿಗಳನ್ನು ಮಾಡುವ ಮೂಲಕ ಮಕ್ಕಳು ಚಿಕ್ಕ ವಯಸ್ಸಿನಲ್ಲೇ ಉಳಿತಾಯ ಮತ್ತು ಆರ್ಥಿಕ ಯೋಜನೆಗಳ ಮಹತ್ವವನ್ನು ಕಲಿಯುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ?

ಬಾಲ ಜೀವನ್ ವಿಮಾ ಯೋಜನೆಗೆ ಅರ್ಜಿ ಸಲ್ಲಿಸಲು ಪೋಷಕರು ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ. ಫಾರ್ಮ್‌ ನಲ್ಲಿ ಹೆಸರು, ವಯಸ್ಸು ಮತ್ತು ವಿಳಾಸದಂತಹ ಮಗುವಿನ ಬಗ್ಗೆ ವಿವರಗಳು ಮತ್ತು ನಾಮನಿರ್ದೇಶಿತ ಫಲಾನುಭವಿಯ ವಿವರಗಳನ್ನು ಸಲ್ಲಿಸಬೇಕು. ಅರ್ಜಿದಾರರು ಗುರುತಿನ ಮತ್ತು ವಿಳಾಸದ ಪುರಾವೆಯನ್ನು ಸಹ ಒದಗಿಸಬೇಕಾಗುತ್ತದೆ.


ನಿಯಮ ಏನಿದೆ?

ಈ ಯೋಜನೆಯು ಪಾಲಿಸಿದಾರರ ಮಕ್ಕಳಿಗೆ ಜೀವ ವಿಮಾ ರಕ್ಷಣೆಯನ್ನು ಒದಗಿಸುತ್ತದೆ. ಪಾಲಿಸಿದಾರರ (ಪೋಷಕರ) ಗರಿಷ್ಠ ಇಬ್ಬರು 5 ರಿಂದ 20 ವರ್ಷದೊಳಗಿನ ಮಕ್ಕಳು ಅರ್ಹರಾಗಿರುತ್ತಾರೆ.
ಗರಿಷ್ಠ ವಿಮಾ ಮೊತ್ತ 1 ಲಕ್ಷ ರೂ. ಅಥವಾ ಪೋಷಕರ ವಿಮಾ ಮೊತ್ತಕ್ಕೆ ಸಮ. ಯಾವುದು ಕಡಿಮೆಯೋ ಅದು. ಪಾಲಿಸಿದಾರರ (ಪೋಷಕರು) 45 ವರ್ಷಕ್ಕಿಂತ ಮೇಲ್ಪಟ್ಟಿರಬಾರದು.
ಪಾಲಿಸಿದಾರರ (ಪೋಷಕರ) ಮರಣದ ಬಳಿಕ ಮಕ್ಕಳ ಪಾಲಿಸಿಗೆ ಯಾವುದೇ ಪ್ರೀಮಿಯಂ ಪಾವತಿಸಬೇಕಾಗಿಲ್ಲ. ಪೂರ್ಣ ವಿಮಾ ಮೊತ್ತ ಮತ್ತು ಸಂಚಿತ ಬೋನಸ್ ಅನ್ನು ಅವಧಿಯ ಪೂರ್ಣಗೊಂಡ ಅನಂತರ ಪಾವತಿಸಲಾಗುತ್ತದೆ
ಮಕ್ಕಳ ಪಾಲಿಸಿಯ ಪಾವತಿಗೆ ಪಾಲಿಸಿದಾರರು (ಪೋಷಕರು) ಜವಾಬ್ದಾರರಾಗಿರುತ್ತಾರೆ. ಯಾವುದೇ ಸಾಲವನ್ನು ಸ್ವೀಕರಿಸಲಾಗುವುದಿಲ್ಲ
5 ವರ್ಷಗಳ ಕಾಲ ನಿರಂತರವಾಗಿ ಪ್ರೀಮಿಯಂ ಪಾವತಿಸಿದರೆ ಅದನ್ನು ಪಾವತಿಸುವ ಸೌಲಭ್ಯವಿದೆ. ಪಾಲಿಸಿಯನ್ನು ಮಧ್ಯೆ ನಿಲ್ಲಿಸುವ ಸೌಲಭ್ಯವಿಲ್ಲ. ಅರ್ಜಿ ಸಲ್ಲಿಸಲು ಮಗುವಿನ ವೈದ್ಯಕೀಯ ಪರೀಕ್ಷೆ ಅಗತ್ಯವಿಲ್ಲ. ಆದರೂ ಮಗು ಆರೋಗ್ಯವಾಗಿರಬೇಕು. ಪ್ರಸ್ತಾಪವನ್ನು ಸ್ವೀಕರಿಸಿದ ದಿನದಿಂದ ರಿಸ್ಕ್ ಕವರ್ ಪ್ರಾರಂಭವಾಗುತ್ತದೆ. ಬೋನಸ್ ದರವು ಪ್ರತಿ ವರ್ಷಕ್ಕೆ 1000 ರೂ. ಗೆ 48 ರೂ. ಆಗಿರುತ್ತದೆ.

ಇದನ್ನೂ ಓದಿ: Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

ಯಾರು ಅರ್ಜಿ ಸಲ್ಲಿಸಬಹುದು?

ಬಾಲ ಜೀವನ್ ವಿಮಾ ಯೋಜನೆಯು 5 ರಿಂದ 20 ವರ್ಷದೊಳಗಿನ ಮಕ್ಕಳಿಗಾಗಿ. ಹೀಗಾಗಿ ಅರ್ಜಿ ನೀಡುವ ಸಮಯದಲ್ಲಿ ಮಗುವಿನ ವಯಸ್ಸನ್ನು ಪರಿಗಣಿಸಲಾಗುತ್ತದೆ ಮತ್ತು ಮಗುವಿಗೆ 20 ವರ್ಷ ತುಂಬುವವರೆಗೆ ವಿಮಾ ರಕ್ಷಣೆಯನ್ನು ಒದಗಿಸಲಾಗುತ್ತದೆ.

ಪೋಷಕರು ತಮ್ಮ 10 ವರ್ಷದ ಮಗುವಿಗೆ ಬಾಲ ಜೀವನ್ ವಿಮಾ ಯೋಜನೆಗೆ ಸೇರಿಸಲು ಬಯಸಿದರೆ ಪೋಷಕರು ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದಿನಕ್ಕೆ 6 ರೂ.ಗಳ ಠೇವಣಿಗಳನ್ನು ಮಾಡಲು ಪ್ರಾರಂಭಿಸಬಹುದು.

Continue Reading

ಮನಿ-ಗೈಡ್

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Money Guide: ದೇಶದ ಜನರಲ್ಲಿನ ಉಳಿತಾಯ ಪ್ರವೃತ್ತಿಯನ್ನು ಉತ್ತೇಜಿಸಲು ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಕೂಡ ಒಂದು. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಇಂತಹ ಅತ್ಯುತ್ತಮ ಯೋಜನೆ ಜಾರಿಗೆ ಬಂದು ಇಂದಿಗೆ 15 ವರ್ಷ ಪೂರ್ಣಗೊಂಡಿದೆ. ಈ ಯೋಜನೆ ಕುರಿತಾದ ಕೆಲವು ಆಸಕ್ತಿದಾಯಕ ಸಂಗತಿಗಳ ವಿವರ ಇಲ್ಲಿದೆ

VISTARANEWS.COM


on

Money Guide
Koo

ಬೆಂಗಳೂರು: ದೇಶದ ಜನರಲ್ಲಿನ ಉಳಿತಾಯ ಪ್ರವೃತ್ತಿಯನ್ನು ಉತ್ತೇಜಿಸಲು ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಕೂಡ ಒಂದು. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಇಂತಹ ಅತ್ಯುತ್ತಮ ಯೋಜನೆ ಜಾರಿಗೆ ಬಂದು ಇಂದಿಗೆ 15 ವರ್ಷ ಪೂರ್ಣಗೊಂಡಿದೆ. 2009ರ ಮೇ 1ರಂದು ಈ ಯೋಜನೆಯನ್ನು ದೇಶದಲ್ಲಿ ಜಾರಿಗೊಳಿಸಲಾಯಿತು. ಈ ಯೋಜನೆ ಕುರಿತಾದ ಕೆಲವು ಆಸಕ್ತಿದಾಯಕ ಸಂಗತಿಗಳ ವಿವರ ಇಲ್ಲಿದೆ (Money Guide).

ಭಾರತ ಸರ್ಕಾರ 2004ರ ಜನವರಿ 1ರಂದು ಎನ್‌ಪಿಎಸ್‌ ಅನ್ನು ಪರಿಚಯಿಸಿತು ಮತ್ತು ಐದು ವರ್ಷಗಳ ನಂತರ (2009) ಅದನ್ನು ಸಾರ್ವಜನಿಕರಿಗಾಗಿ ಮುಕ್ತಗೊಳಿಸಲಾಯಿತು. ಈ ಯೋಜನೆಯು ಭಾರತದ ನಾಗರಿಕರಿಗೆ ವೃದ್ಧಾಪ್ಯದ ಭದ್ರತೆಯಾಗಿ ಪಿಂಚಣಿ ಮತ್ತು ಹೂಡಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ನಿಯಂತ್ರಿಸುತ್ತದೆ.

ಯಾರೆಲ್ಲ ಅರ್ಹರು?

ಭಾರತೀಯ ಮತ್ತು ಆನಿವಾಸಿ ಭಾರತೀಯ ನಾಗರಿಕರು ಈ ಯೋಜನೆಯಲ್ಲಿ ಹೀಡಿಕೆ ಮಾಡಬಹುದಾಗಿದೆ. 18ರಿಂದ 70 ವರ್ಷದವರು ಈ ಯೋಜನೆಗೆ ಅರ್ಹರು. ವೃದ್ಧಾಪ್ಯ ಆದಾಯವನ್ನು ಒದಗಿಸುವುದು, ದೀರ್ಘಾವಧಿಯಲ್ಲಿ ಮಾರುಕಟ್ಟೆ ಆಧಾರಿತ ಆದಾಯ ನೀಡುವುದು ಮತ್ತು ಎಲ್ಲ ನಾಗರಿಕರಿಗೆ ವೃದ್ಧಾಪ್ಯ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸುವುದು ಕೂಡ ಈ ಯೋಜನೆಯ ಉದ್ದೇಶ.

ಎನ್‌ಆರ್‌ಐ ಕೂಡ ಹೂಡಿಕೆ ಮಾಡಬಹುದೆ?

ವಿಶೇಷ ಎಂದರೆ ಆನಿವಾಸಿ ಭಾರತೀಯರು ಕೂಡ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಅದಾಗ್ಯೂ ಆರ್‌ಬಿಐ ಮತ್ತು ಫೆಮಾ ಸೂಚಿಸುವ ಷರತ್ತುಗಳು ಅನ್ವಯವಾಗುತ್ತವೆ. ಇನ್ನು ಒಸಿಐ (ಓವರ್‌ಸೀಸ್‌ ಸಿಟಿಜನ್ಸ್ ಆಫ್ ಇಂಡಿಯಾ) ಮತ್ತು ಪಿಐಒ (ಪರ್ಸನ್ ಆಫ್ ಇಂಡಿಯನ್ ಒರಿಜಿನ್) ಕಾರ್ಡ್ ಹೊಂದಿರುವವರು ಈ ಯೋಜನೆಗೆ ಅರ್ಹರಲ್ಲ.

ಎನ್‌ಪಿಎಸ್‌ ಖಾತೆ ತೆರೆಯುವುದು ಹೇಗೆ?

ಆಫ್‌ಲೈನ್‌

  • ನಿಮ್ಮ ಮನೆ ಹತ್ತಿರದ ಪಿಒಪಿ (PoP) ಅಥವಾ ಪೋಸ್ಟ್‌ ಆಫೀಸ್‌ಗೆ ತೆರಳಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಒದಗಿಸಿ.
  • ಟೈರ್‌ 1 ಖಾತೆಗೆ ಕನಿಷ್ಠ 500 ರೂ. ಹೂಡಿಕೆ ಮಾಡಿ.
  • ಅಪ್ಲಿಕೇಷನ್‌ ಫಾರಂ ಸಲ್ಲಿಸಿ.

ಆನ್‌ಲೈನ್‌

  • ಇಲ್ಲಿ ಕ್ಲಿಕ್‌ ಮಾಡಿ
  • ಹೆಸರು ನೋಂದಾಯಿಸಿ.
  • ಮೊಬೈಲ್‌ ನಂಬರ್‌, ಪ್ಯಾನ್‌ ಕಾರ್ಡ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ.
  • ಮೊಬೈಲ್‌ಗೆ ಬಂದ ಒಟಿಪಿ ನಮೂದಿಸಿ.
  • ಅಗತ್ಯ ವಿವರಗಳನ್ನು ಭರ್ತಿ ಮಾಡಿ. ಈಗ ನಿಮಗೆ PRAN (Permanent Retirement Account Number) ಸಂಖ್ಯೆ ದೊರೆಯುತ್ತದೆ. ಇದನ್ನು ಬಳಸಿ ಲಾಗಿನ್‌ ಆಗಬಹುದು.

ಯಾವೆಲ್ಲ ದಾಖಲೆ ಅಗತ್ಯ?

  • ಇತ್ತೀಚಿನ ಭಾವಚಿತ್ರ
  • ಪ್ಯಾನ್‌ ಕಾರ್ಡ್‌
  • ವಿಳಾಸದ ಪುರಾವೆ
  • ಬ್ಯಾಂಕ್‌ ಅಕೌಂಟ್‌ ವಿವರ

ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ವಿನಾಯಿತಿ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಗರಿಷ್ಠ 1.5 ಲಕ್ಷ ರೂಪಾಯಿವರೆಗಿನ ಹೂಡಿಕೆಗೆ ತೆರಿಗೆ ವಿನಾಯಿತಿ ಪಡೆಯಬಹುದು.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading
Advertisement
RCB vs CSK
ಕ್ರೀಡೆ11 mins ago

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

Anjali Murder Case
ಕರ್ನಾಟಕ24 mins ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

Narendra Modi
ದೇಶ47 mins ago

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

RCB vs CSK
ಕರ್ನಾಟಕ1 hour ago

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

Bank of Bhagyalakshmi movie poster released
ಸಿನಿಮಾ1 hour ago

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Priyanka Vadra
ಪ್ರಮುಖ ಸುದ್ದಿ2 hours ago

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Kangana Ranaut
ದೇಶ3 hours ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

RCB vs CSK
ಕ್ರೀಡೆ3 hours ago

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

Lorry Accident
ಕರ್ನಾಟಕ3 hours ago

Lorry Accident: ಕಾರ್ಕಳದಲ್ಲಿ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರ ಸಾವು

RCB vs CSK
ಕ್ರೀಡೆ3 hours ago

RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌