Wheat Crop: 3.4 ಕೋಟಿ ಹೆಕ್ಟೇರ್ ಪ್ರದೇಶಕ್ಕೆ ವ್ಯಾಪಿಸಿದ ಗೋಧಿ ಬೆಳೆ; ಇಳಿಯುತ್ತಾ ಬೆಲೆ? - Vistara News

ಕೃಷಿ

Wheat Crop: 3.4 ಕೋಟಿ ಹೆಕ್ಟೇರ್ ಪ್ರದೇಶಕ್ಕೆ ವ್ಯಾಪಿಸಿದ ಗೋಧಿ ಬೆಳೆ; ಇಳಿಯುತ್ತಾ ಬೆಲೆ?

Wheat Crop: ಈ ಋತುವಿನಲ್ಲಿ ಭಾರತದಲ್ಲಿ ದಾಖಲೆಯ ಪ್ರಮಾಣದ ಪ್ರದೇಶದಲ್ಲಿ ಗೋಧಿ ಬೆಳೆಯಲಾಗಿದೆ. ಇದರಿಂದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

VISTARANEWS.COM


on

wheat crop
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಈ ಋತುವಿನಲ್ಲಿ ಗೋಧಿ ಉತ್ಪಾದನೆ (Wheat Crop) ದಾಖಲೆಯ ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ. ಗೋಧಿ ಬಿತ್ತನೆ ಪ್ರದೇಶವು ಗಣನೀಯವಾಗಿ ವಿಸ್ತರಿಸಿದೆ ಮತ್ತು ಪ್ರಮುಖ ಉತ್ಪಾದಕ ರಾಜ್ಯಗಳಲ್ಲಿನ ಶೀತ ಹವಾಮಾನವು ಇಳುವರಿಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಗೋಧಿ ಬೆಳೆಯುವ ಪ್ರದೇಶವು 3.4 ಕೋಟಿ ಹೆಕ್ಟೇರ್ (34 million hectares) ಪ್ರದೇಶಕ್ಕೆ ವ್ಯಾಪಿಸಿದೆ. ಇದು ಮೂರು ವರ್ಷಗಳಲ್ಲೇ ಗರಿಷ್ಠ. ದೇಶದ ಪ್ರಮುಖ ಗೋಧಿ ಉತ್ಪಾದಕ ರಾಜ್ಯಗಳಾದ ಮಧ್ಯಪ್ರದೇಶ, ಪಂಜಾಬ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಬಿತ್ತನೆ ಬಹುತೇಕ ಪೂರ್ಣಗೊಂಡಿದೆ. ನವೆಂಬರ್‌ನಲ್ಲಿ ಬಿತ್ತನೆ ಮಾಡಲಾಗುತ್ತದೆ ಮತ್ತು ಮಾರ್ಚ್‌ನಲ್ಲಿ ಕೊಯ್ಲು ಮಾಡಲಾಗುತ್ತದೆ.

ಬೆಲೆ ಇಳಿಕೆ ಸಾಧ್ಯತೆ

ʼʼಹೆಚ್ಚಿನ ಗೋಧಿ ಉತ್ಪಾದನೆಯು ಬೆಲೆ ಇಳಿಕೆಗೆ ಸಹಾಯ ಮಾಡಲಿದೆʼʼ ಎಂದು ಕೃಷಿ ಸಚಿವ ಅರ್ಜುನ್ ಮುಂಡಾ ತಿಳಿಸಿದ್ದಾರೆ. “ಈ ವರ್ಷ ಗೋಧಿಯನ್ನು ಹೆಚ್ಚಿನ ಪ್ರದೇಶದಲ್ಲಿ ಬೆಳೆಯಲಾಗಿದೆ ಮತ್ತು ಉತ್ತಮ ಇಳುವರಿಯನ್ನು ನಿರೀಕ್ಷಿಸುತ್ತಿದ್ದೇವೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿದ್ದರೆ 2023-24ರ ಸಾಲಿನಲ್ಲಿ ದೇಶವು ದಾಖಲೆಯ 114 ಮಿಲಿಯನ್ ಟನ್‌ ಗೋಧಿಯನ್ನು ಉತ್ಪಾದಿಸಲಿದೆ ಎಂದು ಭಾರತೀಯ ಆಹಾರ ನಿಗಮದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಕೆ.ಕೆ.ಮೀನಾ ಇತ್ತೀಚೆಗೆ ತಿಳಿಸಿದ್ದರು. ಬಿಸಿಗಾಳಿ ಹಾವಳಿಯಿಂದಾಗಿ ಉತ್ಪಾದನೆ ಕುಸಿತವಾಗಿದ್ದರಿಂದ ದೇಶವು 2022ರಲ್ಲಿ ಗೋಧಿ ರಫ್ತು ನಿಷೇಧಿಸಿತ್ತು. 2022-23ರಲ್ಲಿ ಉತ್ಪಾದನೆಯು 100 ಮಿಲಿಯನ್ ಟನ್ ಆಗಿತ್ತು. ಹಿಂದಿನ ವರ್ಷದ 107.7 ಮಿಲಿಯನ್ ಟನ್‌ ಉತ್ಪಾದನೆಗೆ ಹೋಲಿಸಿದರೆ ಕುಸಿತ ಕಂಡು ಬಂದಿತ್ತು.

ಕಳೆದ ಎರಡು ವರ್ಷಗಳಲ್ಲಿ ಉಂಟಾದ ಹವಾಮಾನ ವೈಪರೀತ್ಯ ಗೋಧಿ ಬೆಳೆ ಮೇಲೆ ದುಷ್ಪರಿಣಾಮ ಬೀರಿದ್ದು, ಇದು ವಾರ್ಷಿಕ ಸರಾಸರಿ ಶೇ. 20ರಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ಏರುತ್ತಿರುವ ಬೆಲೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡ ಕೇಂದ್ರ ಸರ್ಕಾರವು ಸುಮಾರು 6 ಮಿಲಿಯನ್ ಟನ್ ಗೋಧಿಯನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದರಿಂದ ಸರ್ಕಾರಿ ಸ್ವಾಮ್ಯದ ಉಗ್ರಾಣಗಳಲ್ಲಿ ಗೋಧಿ ದಾಸ್ತಾನು 19 ಮಿಲಿಯನ್ ಮೆಟ್ರಿಕ್ ಟನ್‌ಗೆ ಇಳಿದಿದೆ. ಇದು ಏಳು ವರ್ಷಗಳಲ್ಲಿ ಕನಿಷ್ಠವಾಗಿದೆ.

ಹೊಸ ತಳಿಯತ್ತ ಮುಖ ಮಾಡಿದ ಕೃಷಿಕರು

ಹವಾಮಾನ ಬಿಕ್ಕಟ್ಟಿನ ಪರಿಣಾಮಗಳನ್ನು ಎದುರಿಸಲು ಕೃಷಿಕರೂ ಕ್ರಮ ಕೈಗೊಂಡಿದ್ದಾರೆ. ಗೋಧಿ ಬೆಳೆಯುವ ಪ್ರಮುಖ ರಾಜ್ಯಗಳಲ್ಲಿನ ಕೃಷಿಕರು ಈ ಋತುವಿನಲ್ಲಿ ಬಿಸಿ ಸಹಿಸಿಕೊಳ್ಳುವ ಗೋಧಿ ಪ್ರಭೇದಗಳ ಮೊರೆ ಹೋಗಿದ್ದಾರೆ. ಬದಲಾಗುತ್ತಿರುವ ಹವಾಮಾನಗಳ ಬಗ್ಗೆ ಹೆಚ್ಚುತ್ತಿರುವ ಜಾಗೃತಿಯೇ ಇದಕ್ಕೆ ಕಾರಣ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಇದನ್ನೂ ಓದಿ: Wheat Stock: ಜನರಿಗೆ ಮೋದಿ ಮತ್ತೊಂದು ಸಿಹಿ ಸುದ್ದಿ; ಗೋಧಿ ಬೆಲೆ ಇಳಿಕೆಗೆ ಮಹತ್ವದ ಕ್ರಮ

“ಪಂಜಾಬ್ ಮತ್ತು ಹರಿಯಾಣಗಳಲ್ಲಿ ಈ ವರ್ಷ ಶೇ. 80ರಷ್ಟು ಪ್ರದೇಶಗಳಲ್ಲಿ ಹವಾಮಾನ ಪರಿಸ್ಥಿತಿಗಳನ್ನು ಎದುರಿಸಲು ಶಕ್ತವಾಗಿರುವ ಮತ್ತು ಜೈವಿಕ ಬಲವರ್ಧಿತ ಗೋಧಿ ಪ್ರಭೇದವನ್ನು ಬಿತ್ತನೆ ಮಾಡಲಾಗಿದೆʼʼ ಎಂದು ಭಾರತೀಯ ಗೋಧಿ ಮತ್ತು ಬಾರ್ಲಿ ಸಂಶೋಧನಾ ಸಂಸ್ಥೆಯ (ಐಐಬಿಆರ್) ನಿರ್ದೇಶಕ ಜ್ಞಾನೇಂದ್ರ ಸಿಂಗ್ ತಿಳಿಸಿದ್ದಾರೆ. ʼʼಉತ್ತರ ಭಾರತದ ಕೆಲವು ಭಾಗಗಳಲ್ಲಿ ಈಗ ಶೀತಗಾಳಿ ಬೀಸುತ್ತಿರುವುದು ಇಳುವರಿಯನ್ನು ಹೆಚ್ಚಿಸಲು ಸಹಾಯ ಮಾಡಲಿದೆʼʼ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

ಕಳೆದೊಂದು ವಾರದಿಂದ (Arecanut Price) ಅಡಿಕೆ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಹಾಗಂತ ಅಡಿಕೆ ತೋಟದ ಉಪ ಬೆಳೆಗಳ ಧಾರಣೆ ಏರುತ್ತಿದೆ. ಈ ಕುರಿತ ನಿಖರ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

arecanut price
Koo

| ಅರವಿಂದ ಸಿಗದಾಳ್, ಮೇಲುಕೊಪ್ಪ

ಕಳೆದ ತಿಂಗಳು ಏರಿಕೆ ಗ್ರಾಫ್ (Arecanut Price) ಕಂಡು ರೈತರಲ್ಲಿ ಸಂತಸ ಮೂಡಿಸಿದ ಶಿವಮೊಗ್ಗ ಅಡಿಕೆ ಧಾರಣೆ, ಮೇ ತಿಂಗಳಿನ ಪ್ರಾರಂಭದಲ್ಲಿ ಮತ್ತೊಂದು ಸಣ್ಣ ಮೊತ್ತದ ಏರಿಕೆ ದಾಖಲಿಸಿ, ಕಳೆದೊಂದು ವಾರದಿಂದ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಆದರೆ
ಕಳೆದ ವಾರ ಅಂದರೆ 14.05.2024ರಂದು ಗರಿಷ್ಠ ₹ 54,596 ದಾಖಲಿಸಿದ್ದ ರಾಶಿ ಇಡಿ ಧಾರಣೆ, ದಿನ ದಿನವೂ ಇಳಿಯುತ್ತ, ಇವತ್ತು ₹ 53,009 ಬಂದು ನಿಂತಿದೆ. ಸರಿ ಸುಮಾರು ₹ 1,500 ದರ ‘ಅಡಿಕೆ ರಾಶಿ ಇಡಿ’ಯಲ್ಲಿ ಕೊರತೆ ಕಾಣಿಸಿದೆ.

ಅಡಿಕೆ ರಾಶಿ ಇಡಿಯಲ್ಲಿ ₹1,500 ಇಳಿಮುಖವಾಗಿದ್ದರೆ, ಅಡಿಕೆ ಬೆಟ್ಟೆ ಧಾರಣೆಯಲ್ಲಿ ಕೇವಲ ₹.500 ಮಾತ್ರ ಇಳಿಕೆಯಾಗಿದ್ದು, ಆಲ್‌ಮೋಸ್ಟ್ ಸ್ಥಿರತೆಯನ್ನೇ ಉಳಿಸಿಕೊಂಡಿದೆ. ಇದೇ ಸಮಯದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿರುವ ಆವಕವೂ (ಪೂರೈಕೆ) ಗಣನೀಯವಾಗಿ ಅತ್ತ-ಇತ್ತ ಆಗುತ್ತಿರುವುದು ಕಂಡು ಬಂದಿದೆ. ಅಡಿಕೆ ಆವಕ ಏರಿಳಿಕೆ ಆಗುತ್ತಿದ್ದರೂ, ಅಡಿಕೆ ಧಾರಣೆ ಮಾತ್ರ ಇಳಿಯುತ್ತಿರುವುದು ಒಂದು ವಿಶೇಷ.

ಶಿವಮೊಗ್ಗ APMC ದಾಖಲೆಗಳ ಪ್ರಕಾರ ಹೆಚ್ಚು ವ್ಯಾಪಾರವಾಗುವ ‘ರಾಶಿ ಇಡಿ ಅಡಿಕೆ’ ಆವಕದ ‘ಏರಿಳಿಕೆ’ ಹೀಗಿದೆ:
ದಿನಾಂಕ 14.05.2024 – 15,921 ಕ್ವಿಂಟಾಲ್
ದಿನಾಂಕ 15.05.2024 – 5,435 ಕ್ವಿಂಟಾಲ್
ದಿನಾಂಕ 16.05.2024 – 14,464ಕ್ವಿಂಟಾಲ್
ದಿನಾಂಕ 20.05.2024 – 3231 ಕ್ವಿಂಟಾಲ್
ದಿನಾಂಕ 21.05.2024 – 11,538 ಕ್ವಿಂಟಾಲ್
ರಾಶಿ ಇಡಿ ಧಾರಣೆ 53,009ಕ್ಕೆ ಇಳಿಕೆಯಾದಾಗ, ಗೊರಬಲು ಅಡಿಕೆ ₹.38,800 ಸನಿಹದಲ್ಲಿದೆ.

ಸಿಪ್ಪೆ ಗೋಟು ದರ ಏರಿಕೆ

ಈ ಎಲ್ಲ ವೆರೈಟಿಗಳ ಧಾರಣೆಯ ಇಳಿಕೆ ಕಾಣುತ್ತಿರುವಾಗ, ಸಿಪ್ಪೆ ಗೋಟು ದರ ಮಾತ್ರ ಸಣ್ಣ ಮಟ್ಟದ ಏರಿಕೆಯನ್ನು ದಾಖಲಿಸಿದೆ. APMC ಮಂಡಿ ಮತ್ತು ಸೊಸೈಟಿಗಳಲ್ಲಿ ಸಿಪ್ಪೆ ಗೋಟು ಅಡಿಕೆ ವ್ಯವಹಾರ ಬಹಳ ಕಮ್ಮಿ ಮತ್ತು ನಗದು ಮಾರುಕಟ್ಟೆಯಲ್ಲೇ ಹೆಚ್ಚಾಗಿ ಸಿಪ್ಪೆ ಗೋಟು ಅಡಿಕೆ ವ್ಯಾಪಾರ ಕಾಣುವುದು.

ಪ್ರತೀ ವರ್ಷವೂ ನಗದು ಮಾರುಕಟ್ಟೆಯಲ್ಲಿ ಮೇ 15 ರ ನಂತರ ಸಿಪ್ಪೆ ಗೋಟು ಅಡಿಕೆ ಚೇತರಿಕೆ ಕಾಣುವುದು ಎಂದು ನಂಬಿಕೆ ಮತ್ತು ವಾಡಿಕೆಯಾಗಿದೆ. ಅದರಂತೆ ಮೇ 15 ರಿಂದ ಸಿಪ್ಪೆ ಗೋಟು ಅಡಿಕೆ ಏರಿಕೆಯೊಂದಿಗೆ ₹.19,000 ದಲ್ಲಿ ವ್ಯಾಪಾರ ನೆಡೆಯುತ್ತಿದೆ ಎಂದು ವರದಿಯಾಗಿದೆ. (ಸಿಪ್ಪೆ ಗೋಟಿನ ಅಡಿಕೆಗೆ ಬಿಲ್ಲ ಇರುವುದಿಲ್ಲ. ಅಧಿಕೃತವಾಗಿ APMC ಯಲ್ಲಿ ಇದರ ವ್ಯವಹಾರ ಕಡಿಮೆ ಇರುವುದರಿಂದ, ವ್ಯಾಪಾರಸ್ತರು/ಏಜಂಟರು ನೇರವಾಗಿ ರೈತರ ಅಂಗಳದಲ್ಲೇ ಖರೀಧಿ ಮಾಡುವುದರಿಂದ ವ್ಯಾವಹಾರಿಕ ದಾಖಲೆಗಳು ಎಲ್ಲಾ ಕಡೆ ಇರುವುದು ಕಮ್ಮಿ.)
ಸಿಪ್ಪೆ ಗೋಟು ದರ ಇನ್ನಷ್ಟು ಏರುವ ನಿರೀಕ್ಷೆಯಿದ್ದು, ಸದ್ಯದಲ್ಲೇ ಓಪನ್ ನಗದು ಮಾರುಕಟ್ಟೆಯಲ್ಲಿ ₹.20,000 ದಾಟುವ ನಿರೀಕ್ಷೆ ರೈತರದು.

ಅಡಿಕೆ ಬೆಳೆಗಾರರ ನಿರೀಕ್ಷೆ ಮತ್ತು ಅಭಿಪ್ರಾಯ ಪ್ರಕಾರ, ಎಲ್ಲಾ ವೆರೈಟಿ ಅಡಿಕೆಗಳ (ಹಸ, ಬೆಟ್ಟೆ, ಇಡಿ, ಗೊರಬಲು, ಸಿಪ್ಪೆ ಗೋಟು) ಧಾರಣೆಗಳು ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಮೇಲೆ, ವ್ಯಾಪಾರ ವಹಿವಾಟು ತೀವ್ರತೆ ಪಡೆದು, ಧಾರಣೆ ಗ್ರಾಫ್ ಮೇಲ್ಮುಖವಾಗಲಿದೆ ಎಂದು ಅಂದಾಜಿಸಲಾಗುತ್ತಿದೆ.

ಉಪ ಬೆಳೆ ಧಾರಣೆ ಏರಿಕೆ

ಅಡಿಕೆ ಬೆಲೇ ಏರಿಳಿತವಾಗುವ ಸಮಯದಲ್ಲಿ, ಅಡಿಕೆಯ ತೋಟದಲ್ಲಿನ ಉಪ ಬೆಳೆಯಾದ ಕಾಳು ಮೆಣಸು ಧಾರಣೆ ಗಣನೀಯವಾಗಿ ಏರುತ್ತಿದ್ದು, ಕಳೆದ ವಾರ ₹.56,500 (ಕ್ವಿಂಟಾಲಿಗೆ) ಇದ್ದ ದರ, ಇವತ್ತು ₹.60,000 ದಾಟಿದೆ. ವಿಯಟ್ಣಾಮ್‌ನಲ್ಲಿ ಕಾಳು ಮೆಣಸು ಬೆಳೆ ತೀವ್ರ ಕುಸಿತ ಕಂಡ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದು, ಭಾರತದ ಕಾಳು ಮೆಣಸಿಗೆ ಜಾಕ್ ಪಾಟ್ ಧಾರಣೆ ಸಿಗಲಿದೆ ಎಂದು ಜಾಲತಾಣಗಳಲ್ಲಿ ಚರ್ಚೆ ಆಗುತ್ತಿದೆ. ಬಹುಶಃ ಎಲ್ಲ ಧಾರಣೆಗಳ ಗಣನೀಯ ಏರಿಳಿತಗಳಿಗೂ ಚಾಲನೆ ಸಿಗುವುದು ಜೂನ್ ನಾಲ್ಕರ ನಂತರ? ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್ಕಿ ಬಾರ್ ₹ 60,000 ಪಾರ್’ ಆಗಲಿದೆಯಾ? ಕಾದು ನೋಡಬೇಕು!

ಇದನ್ನೂ ಓದಿ: Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Continue Reading

ತುಮಕೂರು

Tumkur News: ಮೇವು ಬ್ಯಾಂಕ್ ಸದುಪಯೋಗಪಡಿಸಿಕೊಳ್ಳಿ: ತಹಸೀಲ್ದಾರ್ ಮಂಜುನಾಥ್

Tumkur News: ಕೊರಟಗೆರೆ ತಾಲೂಕು ಸಂಪೂರ್ಣ ಮಳೆ ಆಶ್ರಿತ ಒಣ ಪ್ರದೇಶವಾಗಿದ್ದು ಸರ್ಕಾರದಿಂದ ಬರ ಪೀಡಿತ ತಾಲೂಕು ಎಂದು ಘೋಷಣೆಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ ಇದರಿಂದ ರೈತರು ಜಾನುವಾರುಗಳಿಗೆ ಮೇವು ಒದಗಿಸಲು ಸಂಕಷ್ಟ ಪಡುತ್ತಿದ್ದಾರೆ. ಆದ್ದರಿಂದ ತಾಲೂಕಿನ ಕಸಬಾ ಹೋಬಳಿಯಲ್ಲಿ ಮೇವು ಬ್ಯಾಂಕ್‌ನ್ನು ತೆರೆಯಲಾಗಿದೆ ತಹಸೀಲ್ದಾರ್ ಮಂಜುನಾಥ್ ತಿಳಿಸಿದ್ದಾರೆ.

VISTARANEWS.COM


on

Fodder Bank inauguration at kasaba
Koo

ಕೊರಟಗೆರೆ: ತುಮಕೂರು ಜಿಲ್ಲೆಯಲ್ಲಿ ಕೊರಟಗೆರೆ ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಸಬಾ ಹೋಬಳಿಯಲ್ಲಿ ಮೇವು ಬ್ಯಾಂಕ್‌ ಅನ್ನು ತೆರೆಯಲಾಗಿದೆ ಎಂದು ತಹಸೀಲ್ದಾರ್ ಮಂಜುನಾಥ್ (Tumkur News) ತಿಳಿಸಿದರು.

ಪಟ್ಟಣದ ಬೈಲಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಮೂರನೇ ಮೇವು ಬ್ಯಾಂಕ್ ಉದ್ಘಾಟಿಸಿ ಮಾತನಾಡಿದ ಅವರು, ಕೊರಟಗೆರೆ ತಾಲೂಕು ಸಂಪೂರ್ಣ ಮಳೆ ಆಶ್ರಿತ ಒಣ ಪ್ರದೇಶವಾಗಿದ್ದು, ಸರ್ಕಾರದಿಂದ ಬರ ಪೀಡಿತ ತಾಲೂಕು ಎಂದು ಘೋಷಣೆಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ ಇದರಿಂದ ರೈತರು ಜಾನುವಾರುಗಳಿಗೆ ಮೇವು ಒದಗಿಸಲು ಸಂಕಷ್ಟ ಪಡುತ್ತಿದ್ದಾರೆ. ಆದ್ದರಿಂದ ತಾಲೂಕಿನ ಕಸಬಾ ಹೋಬಳಿಯ ಮೇವು ಬ್ಯಾಂಕ್‌ ಅನ್ನು ತೆರೆಯಲಾಗಿದೆ ಎಂದರು.

ಇದನ್ನೂ ಓದಿ: UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಮೇವು ಬ್ಯಾಂಕ್ ತೆರೆಯಲಾಗಿದೆ. ಈಗಾಗಲೇ ತಾಲೂಕಿನ ಹೊಳವನಹಳ್ಳಿ ಹಾಗೂ ಬುಕ್ಕಾಪಟ್ಟಣಗಳಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಿದ್ದು ರೈತರ ಮನವಿ ಹಿನ್ನಲೆಯಲ್ಲಿ ಕಸಬಾ ಹೋಬಳಿ ರೈತರಿಗೆ ಅನುಕೂಲವಾಗುವಂತೆ ಮೇವು ಬ್ಯಾಂಕ್ ತೆರೆಯಲಾಗಿದೆ, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ತಮ್ಮ ಪಹಣಿಯೊಂದಿಗೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಬೇಕು ಇದರಿಂದ ಸರ್ಕಾರದ ಯೋಜನೆಯ ಅನುದಾನಗಳನ್ನು ರೈತರ ಖಾತೆಗಳಿಗೆ ನೇರವಾಗಿ ಹಣ ಸಂದಾಯಿಸಲು ಅನುಕೂಲವಾಗುತ್ತದೆ ಎಂದರು.

ಪಶು ಇಲಾಖಾ ಸಹಾಯಕ ನಿರ್ದೇಶಕ ನಾಗಭೂಷಣ್ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲದ ಹಿನ್ನಲೆಯಲ್ಲಿ ಮೇವು ಇಲ್ಲದೆ ರೈತರು ಪರದಾಡುತ್ತಿದ್ದು, ಇದನ್ನು ಮನಗೊಂಡ ಸರ್ಕಾರ ಮೇವು ಬ್ಯಾಂಕ್‌ಗಳನ್ನು ತೆರೆಯಲು ಆದೇಶಿಸಿದೆ, ಈಗಾಗಲೇ ಮಳೆ ಪ್ರಾರಂಭವಾಗಿದ್ದರೂ ಇನ್ನು ಕೆಲವು ದಿನಗಳ ಕಾಲ ಮೇವಿಗೆ ಅಭಾವವಿರುತ್ತದೆ, ಅದರಲ್ಲೂ ಕೊರಟಗೆರೆ ತಾಲೂಕಿನಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿಯೇ ಅತಿ ಕಡಿಮೆ ಮಳೆಯಾಗಿದೆ, ಅದಕ್ಕಾಗಿ ಕಸಬಾ ಹೋಬಳಿಯ ಮೂರನೇ ಮೇವು ಬ್ಯಾಂಕ್ ತೆರೆದಿದ್ದು, ರೈತರು ಶಾಂತಿಯಿಂದ ಮೇವನ್ನು ಪಡೆಯಬೇಕು, ಪ್ರತಿಯೊಬ್ಬ ಜಾನುವಾರು ಹೊಂದಿರುವ ರೈತರಿಗೆ ಮೇವು ತಲುಪಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಇದನ್ನೂ ಓದಿ: Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

ಈ ಸಂದರ್ಭದಲ್ಲಿ ಪಶು ಇಲಾಖೆಯ ಡಾ.ಮಂಜನಾಥ್, ಡಾ.ಚಂದ್ರಶೇಖರ್, ಕಂದಾಯ ಇಲಾಖೆಯ ಕಸಬಾ ಆರ್.ಐ ಬಸವರಾಜು, ವಿ.ಎ.ಗಳಾದ ಮೋಹನ್‌ಕುಮಾರ್, ಪವನ್ ಕುಮಾರ್, ಗುರುಶಂಕರ್, ಮೀನಾಕುಮಾರಿ ಹಾಗೂ ಕಂದಾಯ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಯಾದಗಿರಿ

Yadgiri News: ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ: ಡಿಸಿ

Yadgiri News: ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೇ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಂಡರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಖಡಕ್ ಸೂಚನೆ ನೀಡಿದ್ದಾರೆ.

VISTARANEWS.COM


on

Legal action if drought relief money is credited to farmers loans says Dr Sushila
Koo

ಯಾದಗಿರಿ: ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ (Drought) ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೇ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಂಡರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಖಡಕ್ ಸೂಚನೆ (Yadgiri News) ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ರೈತರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಏನಾದರೂ ತಾಂತ್ರಿಕ ದೋಷಗಳಿದ್ದರೆ ತಿಳುವಳಿಕೆ ಮೂಡಿಸಿ ಇತ್ಯರ್ಥ ಪಡಿಸಬೇಕು. ಬ್ಯಾಂಕುಗಳ ವಿರುದ್ಧ ಸಾರ್ವಜನಿಕರಿಂದ ದೂರು ಬರದಂತೆ ಕಾರ್ಯನಿರ್ವಹಿಸಿ ಎಂದು ಸೂಚಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಯಾದಗಿರಿ ಜಿಲ್ಲೆಯನ್ನು 2023-24 ನೇ ಸಾಲಿನಲ್ಲಿ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅದರಂತೆ ಸರ್ಕಾರದಿಂದ ಬರ ಪರಿಹಾರದ ಮೊತ್ತವನ್ನು ರೈತರಿಗೆ ಪರಿಹಾರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದ್ದು, ಆದರೆ ಕೆಲ ರೈತರು ಬ್ಯಾಂಕ್ ಅಧಿಕಾರಿಗಳು ಸದರಿ ಪರಿಹಾರದ ಮೊತ್ತವನ್ನು ಸಾಲ ರೂಪದಲ್ಲಿ ಕಡಿತಗೊಳಿಸುತ್ತಿರುವುದಾಗಿ ತಿಳಿಸಿರುತ್ತಾರೆ. ಇಂತಹ ಸಮಸ್ಯೆಗಳಿಗೆ ಅಧಿಕಾರಿಗಳು ಅವಕಾಶ ಕೊಡಬಾರದು.

ಈ ನಿಟ್ಟಿನಲ್ಲಿ ಪ್ರಕೃತಿ ವಿಕೋಪದಡಿ ಸಂದಾಯವಾಗುವ ಹಣವನ್ನು ರೈತರ ಸಾಲದ ಖಾತೆಗೆ ಜಮಾ ಮಾಡುವಂತಿಲ್ಲ ಎಂದು ಸ್ಪಷ್ಟವಾದ ಸರ್ಕಾರದ ನಿರ್ದೇಶನವಿರುತ್ತದೆ. ಈ ರೀತಿ ಮಾಡಿದಲ್ಲಿ ತಾವುಗಳು ಸರ್ಕಾರದ ನಿರ್ದೇಶನ ಉಲ್ಲಂಘಿಸಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಇಲ್ಲವಾದಲ್ಲಿ ತಪ್ಪು ಮಾಡುವ ಬ್ಯಾಂಕ್‌ಗಳ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಡೇ-ನಲ್ಮ್‌ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳು ಬ್ಯಾಂಕ್‌ಗಳಲ್ಲಿ ಖಾತೆ ತೆರೆಯಲು ನೋಂದಣಿ ಪ್ರಮಾಣ ಪತ್ರ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಸ್ವ- ಸಹಾಯ ಸಂಘಗಳ ಖಾತೆ ತೆರೆಯಲು ಅವಕಾಶ ಕಲ್ಪಿಸಿ ಕೊಡುವಂತೆ ನಿರ್ದೇಶಿಸಿದರು.

ಪಿ.ಎಂ ಸ್ವನಿಧಿ ಯೋಜನೆಯಡಿಯಲ್ಲಿ ಸಾಲ ನೀಡುವಾಗ ಫಲಾನುಭವಿಗಳಿಗೆ ಯಾವುದೇ ಸ್ಟ್ಯಾಂಪ್ ಶುಲ್ಕ ವಿಧಿಸತಕ್ಕದ್ದಲ್ಲ ಎಂದು ಇದೇ ವೇಳೆ ಸೂಚಿಸಿದರು.

ಇದನ್ನೂ ಓದಿ: Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ, ಲೀಡ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಲೋಕೇಶ್, ಎಸ್‌ಬಿಐ ಪ್ರಾದೇಶಿಕ ಕಛೇರಿಯ ಮುಖ್ಯ ವ್ಯವಸ್ಥಾಪಕ ಲೋಯಿಸ್ ಸಿ.ಎಂ, ಕೆ.ಜಿ.ಬಿ ಕರ್ನಾಟಕ ಗ್ರಾಮೀಣ ಪ್ರಾದೇಶಿಕ ವ್ಯವಸ್ಥಾಪಕ ಗುರುಪ್ರಸಾದ್ ಸ್ವಾಮಿ, ಕೆ.ಜಿ.ಬಿ ಕರ್ನಾಟಕ ರಿಜಿನಲ್ ಆಫೀಸರ್ (ಸಿ.ಎಂ. ಕ್ರೆಡಿಟ್) ಸುಬೇದಾರ್, ಲೀಡ್ ಬ್ಯಾಂಕ್‌ನ ಸಿಬ್ಬಂದಿಗಳಾದ ಕುಮಾರಸ್ವಾಮಿ, ಅಮೀರ್ ಪಟೇಲ್ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ವಿವಿಧ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಧಾರವಾಡ ಮಾವಿನ ಮೇಳದಲ್ಲಿ 2.7 ಲಕ್ಷ ರೂ. ಮೌಲ್ಯದ ಮಾವು ಎಲ್ಲರ ಗಮನ ಸೆಳೆಯಿತು. ವಿಶ್ವದ ಮಾವಿನ ತಳಿಗಳಲ್ಲಿಯೇ ಅತೀ ದುಬಾರಿಯಾದ ಮೀಯಾಝಾಕಿ ತಳಿಯ ಮಾವು (Miyazaki Mango) ಅನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದೆ. ಧಾರವಾಡದ ಪ್ರಮೋದ ಗಾಂವ್ಕರ್ ಎಂಬವರು ತಮ್ಮ ತೋಟದಲ್ಲಿ ಈ ಮಾವನ್ನು ಬೆಳೆದಿದ್ದಾರೆ.

VISTARANEWS.COM


on

Miyazaki Mango
Koo

ಧಾರವಾಡ: ಮಾವಿಗೆ ʼಹಣ್ಣುಗಳ ರಾಜʼ ಎನ್ನುವುದು ಸುಮ್ಮನೇ ಅಲ್ಲ. ಇದು ಯಾವತ್ತೂ ದುಬಾರಿಯೇ. ಆದರೆ ಧಾರವಾಡದಲ್ಲಿ (Dharwad news) ನಡೆಯುತ್ತಿರುವ ಮಾವು ಮೇಳದಲ್ಲಿ, ವಿಶ್ವದಲ್ಲಿಯೇ ಅತಿ ದುಬಾರಿಯಾದ ಮಾವಿನ ಹಣ್ಣು ಕಂಡುಬಂತು. ಜನ ಇದನ್ನು ನೋಡಿ (Miyazaki Mango) ನಿಬ್ಬೆರಗಾದರು.

ಧಾರವಾಡ ಮಾವಿನ ಮೇಳದಲ್ಲಿ 2.7 ಲಕ್ಷ ರೂ. ಮೌಲ್ಯದ ಮಾವು ಎಲ್ಲರ ಗಮನ ಸೆಳೆಯಿತು. ವಿಶ್ವದ ಮಾವಿನ ತಳಿಗಳಲ್ಲಿಯೇ ಅತೀ ದುಬಾರಿಯಾದ ಮೀಯಾಝಾಕಿ ತಳಿಯ ಮಾವು (Miyazaki Mango) ಅನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದೆ. ಧಾರವಾಡದ ಪ್ರಮೋದ ಗಾಂವ್ಕರ್ ಎಂಬವರು ತಮ್ಮ ತೋಟದಲ್ಲಿ ಈ ಮಾವನ್ನು ಬೆಳೆದಿದ್ದಾರೆ.

ಧಾರವಾಡದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಾವಿನ ಮೇಳದಲ್ಲಿ ಜಪಾನ್ ಮೂಲದ ಈ ವಿಶೇಷ ಮಾವಿನ ತಳಿ ನೋಡಿ ಜನ ಚಕಿತರಾದರು. ಮೀಯಾಝಾಕಿ ಹಣ್ಣಿನ ಪ್ರತಿ ಕೆಜಿಗೆ ಸುಮಾರು 2.7 ಲಕ್ಷ ರೂಪಾಯಿ ಬೆಲೆ ಇದೆ. ಕೇವಲ ಒಂದೇ ಒಂದು ಹಣ್ಣಿಗೆ ಸುಮಾರು 10 ಸಾವಿರ ರೂಪಾಯಿ ಬೆಲೆಬಾಳುತ್ತದೆ. ಈ ಮಾವನ್ನು ನೋಡಲೆಂದೇ ಮೇಳಕ್ಕೆ ವಿದ್ಯಾರ್ಥಿಗಳು, ಸಾರ್ವಜನಿಕರು ಆಗಮಿಸುತ್ತಿದ್ದಾರೆ.

Miyazaki Mango

ಮೀಯಾಝಾಕಿ ಪ್ರಭೇದವು ಮೂಲತಃ ಜಪಾನಿನ ತಳಿಯಾಗಿದೆ. ಅದರ ವಿಶಿಷ್ಟ ಸುವಾಸನೆ ಮತ್ತು ಔಷಧೀಯ ಮೌಲ್ಯಕ್ಕಾಗಿ ಇದು ವಿದೇಶಗಳಲ್ಲಿ ಭಾರಿ ಬೇಡಿಕೆಯನ್ನು ಹೊಂದಿದೆ. ಇವು ಚೆನ್ನಾಗಿ ಹಣ್ಣಾದಾಗ ಗಾಢ ಕೆಂಪು ಬಣ್ಣಕ್ಕೆ ತಿರುಗುತ್ತವೆ. ಜಪಾನಿಯರ ಪ್ರಕಾರ, ವಿಶ್ವದ ಅತ್ಯಂತ ದುಬಾರಿ ಮಾವಿನ ಮೂಲ ಹೆಸರು “ತೈಯೊ ನೋ ತಮಾಗೊ” (Taiyo no Tamago) ಅಥವಾ ಸೂರ್ಯನ ಮೊಟ್ಟೆ (Egg of the Sun).

ಇದಕ್ಕೆ ಹೆಸರಾಂತ ಜಪಾನಿನ ವಿಜ್ಞಾನಿ ಯಮಶಿತಾ ಮೀಯಾಝಾಕಿ ಅವರ ಹೆಸರನ್ನು ಇಡಲಾಗಿದೆ. ಇದರ ಅಭಿವೃದ್ಧಿ ಮತ್ತು ಕೃಷಿಗೆ ಅವರು ಗಮನಾರ್ಹವಾಗಿ ಕೊಡುಗೆ ನೀಡಿದ್ದರು. ಮೀಯಾಝಾಕಿ ಪ್ರಿಫೆಕ್ಚರ್‌ನಲ್ಲಿ ಇದರ ಕೃಷಿ ಮಾಡಲಾಗುತ್ತಿದೆ. ಹೀಗಾಗಿ ಜಗತ್ತು ಈ ರುಚಿಕರವಾದ ಮಾವಿನಹಣ್ಣುಗಳನ್ನು “ಮೀಯಾಝಾಕಿ” ಎಂದು ಕರೆಯಲು ಪ್ರಾರಂಭಿಸಿತು.

70 ರ ದಶಕದ ಕೊನೆಯಲ್ಲಿ ಮತ್ತು 80 ರ ದಶಕದ ಆರಂಭದಲ್ಲಿ ಈ ಮಿಯಾಜಾಕಿ ಮಾವಿನ ಉತ್ಪಾದನೆಯು ಮಿಯಾಜಾಕಿಯಲ್ಲಿ ಆರಂಭಿಸಲಾಯಿತು. ಈ ನಗರದ ಬೆಚ್ಚನೆಯ ವಾತಾವರಣ, ಅದರ ದೀರ್ಘಾವಧಿಯ ಸೂರ್ಯನ ಬೆಳಕು ಮತ್ತು ಹೇರಳವಾದ ಮಳೆಯಿಂದಾಗಿ ರೈತರು ಮಾವು ಕೃಷಿಗೆ ಆಕರ್ಷಣೆಗೊಳ್ಳಲು ಕಾರಣವಾಯಿತು. ಏಪ್ರಿಲ್ ಮತ್ತು ಆಗಸ್ಟ್ ನಡುವೆ ಈ ಮಾವಿನ ಸುಗ್ಗಿ ನಡೆಯುತ್ತದೆ.

ಇತ್ತೀಚೆಗೆ ಭಾರತದಲ್ಲೂ ಕೆಲವರು ಕೃಷಿಕರು ಇದನ್ನು ಬೆಳೆಯಲು ಯತ್ನಿಸುತ್ತಿದ್ದಾರೆ. ಆದರೆ ಇದು ಅತ್ಯಂತ ದುಬಾರಿಯಾದ ಆರೈಕೆ, ಒಳಸುರಿಗಳ ಪೂರೈಕೆಯನ್ನು ಬೇಡುತ್ತದೆ. ಈ ಮಾವಿನಹಣ್ಣುಗಳು ವ್ಯಾಪಕ ರೋಗ ನಿರೋಧಕ ಶಕ್ತಿಯನ್ನು ಹೊಂದಿವೆ. ಬೀಟಾ-ಕ್ಯಾರೋಟಿನ್ ಮತ್ತು ಫೋಲಿಕ್ ಆಮ್ಲವನ್ನು ಒಳಗೊಂಡಿವೆ. ಇದು ಕಣ್ಣಿನ ಆರೋಗ್ಯಕ್ಕೆ ಹೆಚ್ಚು ಉಪಯೋಗಕಾರಿಯಾಗಿದೆ. ದೃಷ್ಟಿ ಹೀನತೆಯನ್ನು ತಪ್ಪಿಸುವಲ್ಲಿ ಈ ಮಾವು ಪರಿಣಾಮಕಾರಿಯಾಗಿದೆ ಎಂದು ಹೇಳಲಾಗುತ್ತಿದೆ. ಮಿಯಾಜಾಕಿ ಮಾವನ್ನು ಭಾರತ, ಬಾಂಗ್ಲಾದೇಶ, ಥಾಯ್ಲೆಂಡ್ ಮತ್ತು ಫಿಲಿಪ್ಪಿನ್ಸ್‌ ರಾಷ್ಟ್ರಗಳಲ್ಲಿ ಕೆಲವೆಡೆ ಬೆಳೆಯಲಾಗುತ್ತದೆ. ಭಾರತದಲ್ಲಿ ಪಶ್ಚಿಮ ಬಂಗಾಳ ಮಾತ್ರವಲ್ಲದೇ, ಮಧ್ಯಪ್ರದೇಶದ ಜಬಲ್ಪುರ ನಗರದಲ್ಲಿ ಬೆಳೆಯಲಾಗಿದೆ ಎಂದು ಮಾಧ್ಯಮಗಳ ವರದಿಗಳು ಹೇಳುತ್ತವೆ.

ಇದನ್ನೂ ಓದಿ: Mango Season: ಮಾರುಕಟ್ಟೆಗೆ ಬಂತು ಉತ್ತರ ಕನ್ನಡದ ಪ್ರಸಿದ್ಧ ಕರಿಈಶಾಡು ಮಾವು; ಡಜನ್‌ಗೆ 700 ರೂ.!

Continue Reading
Advertisement
Cylinder Blast at Belgavi
ಬೆಳಗಾವಿ19 mins ago

Cylinder Blast : ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ವೃದ್ಧ ದಂಪತಿ ವಾರದ ನಂತರ ಸಾವು

lok sabha election 2024 jaishankar rahul sonia murmu
ಪ್ರಮುಖ ಸುದ್ದಿ42 mins ago

Lok Sabha Election: ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ಸೋನಿಯಾ, ರಾಹುಲ್;‌ ಮತಕ್ಕಾಗಿ ಸರ್ಟಿಫಿಕೇಟ್ ಪಡೆದ ಜೈಶಂಕರ್‌!

Konark Tourist Destination
ಪ್ರವಾಸ43 mins ago

Konark Tourist Destination: ರಜೆಯಲ್ಲಿ ಕೋನಾರ್ಕ್‌ಗೆ ಹೋದಾಗ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಲು ಮರೆಯಬೇಡಿ

Karthi next film Suriya to produce Meiyazhagan
ಕಾಲಿವುಡ್52 mins ago

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

IPL 2024
ಕ್ರೀಡೆ52 mins ago

IPL 2024: ಐಪಿಎಲ್​ ಟ್ರೋಫಿಯಲ್ಲಿರುವ ಸಂಸ್ಕೃತ ಶ್ಲೋಕದ ಮೂಲ ಸಾರವೇನು?

Best Tourist Places In Tamilnadu
ಪ್ರವಾಸ1 hour ago

Best Tourist Places In Tamilnadu: ಈ ಸುಂದರ ದೇವಾಲಯಗಳ ದರ್ಶನಕ್ಕಾದರೂ ತಮಿಳುನಾಡಿಗೆ ಹೋಗಲೇಬೇಕು!

rave party culprit with jagan mohan reddy
ಪ್ರಮುಖ ಸುದ್ದಿ1 hour ago

Rave Party: ರೇವ್‌ ಪಾರ್ಟಿ ಆರೋಪಿಗೆ ಆಂಧ್ರ ಸಿಎಂ ಜಗನ್‌ ಜೊತೆ ಸ್ನೇಹ!

IPL 2024 Prize money
ಕ್ರೀಡೆ2 hours ago

IPL 2024 Prize money: ಐಪಿಎಲ್​ ವಿನ್ನರ್​ಗೆ ಸಿಗುವ ಬಹುಮಾನ ಮೊತ್ತವೆಷ್ಟು? 4ನೇ ಸ್ಥಾನಿ ಆರ್​ಸಿಬಿಗೆ ಸಿಕ್ಕ ಹಣವೆಷ್ಟು?

South Indian Monsoon Destinations
ಪ್ರವಾಸ2 hours ago

South Indian Monsoon Destinations: ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!

Kiccha Sudeep Max cinema Pre climax Photo leak
ಸ್ಯಾಂಡಲ್ ವುಡ್2 hours ago

Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌