Chamundi Hills | ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದ ಸಂಭ್ರಮ - Vistara News

ಮೈಸೂರು

Chamundi Hills | ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದ ಸಂಭ್ರಮ

ಚಾಮುಂಡೇಶ್ವರಿ [Chamundi Hills] ತಾಯಿ ದೇವಾಲಯದ ಆವಾರಣವನ್ನು ಸುಂದರವಾಗಿ ಹೂವಿನಿಂದ ಅಲಂಕಾರ ಮಾಡಲಾಗಿದೆ.

VISTARANEWS.COM


on

chamundeshwari mysuru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರಕ್ಕೆ ನಾಡದೇವತೆ ಚಾಮುಂಡೇಶ್ವರಿಗೆ [Chamundi Hills] ಸಿಂಹವಾಹಿನಿ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ಭಕ್ತಿ ಶ್ರದ್ಧೆಯಿಂದ ಪೂಜೆ ಸಲ್ಲಿಸಿದರು.

ಆಷಾಢ ಮಾಸದ ನಾಲ್ಕು ಶುಕ್ರವಾರಗಳಲ್ಲೂ ಚಾಮುಂಡಿ ತಾಯಿಯ ದರ್ಶನ ಮಾಡಿದರೆ ಒಳ್ಳೆಯದಾಗುತ್ತದೆ ಎಂಬ ಕಾರಣಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರುತ್ತಾರೆ.

ಆಷಾಢದ ಕೊನೆಯ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ತಾಯಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಕಮಲ, ಸೇವಂತಿ, ಮಲ್ಲಿಗೆ, ಗುಲಾಬಿ, ಜರ್ಬೆರಾ ಸೇರಿದಂತೆ ಬಗೆ ಬಗೆಯ ಹೂಗಳಿಂದ ಇಡೀ ದೇವಾಲಯವನ್ನು ಭಕ್ತರು ಶೃಂಗಾರಗೊಳಿಸಿದ್ದರು. ಹೂಗಳ ಅಲಾಂಕರದಿಂದ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿಯನ್ನು ಭಕ್ತಾದಿಗಳು ಕಣ್ತುಂಬಿಕೊಂಡರು.

ಬೆಳಗ್ಗೆ 3.30ರಿಂದಲೇ ಅಭಿಷೇಕ ಸೇರಿ ವಿಶೇಷ ಪೂಜೆಗಳು ಆರಂಭವಾದವು. ಚಾಮುಂಡಿ ತಾಯಿ ದರ್ಶನಕ್ಕೆ ರಾತ್ರಿ 9.30ರವರೆಗೆ ಅವಕಾಶ ಮಾಡಿಕೊಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೊಬಸ್ತ್ ಮಾಡಿ, ಭಕ್ತರ ನೂಕು ನುಗ್ಗಲು ತಡೆಯಲು ಕಟ್ಟುನಿಟ್ಟಿನ ಕ್ರಮವನ್ನು ಪೊಲೀಸರು ತೆಗೆದುಕೊಂಡಿದ್ದಾರೆ. ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಮಾಡಿಕೊಡಲಾಗಿದೆ.

ಇದನ್ನೂ ಓದಿ | ಆಷಾಢ ಮಾಸದ ಮೊದಲ ಶುಕ್ರವಾರ; ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ

ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಸುಮಾರು 250 ಬಾಣಸಿಗರಿಂದ ಪ್ರಸಾದ ತಯಾರಿಸಲಾಗಿದೆ. ಬೆಳಗ್ಗೆ 7ರಿಂದ ರಾತ್ರಿ 10 ಗಂಟೆವರೆಗೆ ಅನ್ನದಾಸೋಹ ವ್ಯವಸ್ಥೆ ಇದ್ದು, ಪೊಂಗಲ್, ಉಪ್ಪಿಟ್ಟು, ಕೇಸರಿಬಾತ್, ಅನ್ನ ಸಾಂಬಾರ್ ಮಾಡಲಾಗಿದೆ. ಈ ಬಾರಿ 40 ರಿಂದ 50 ಸಾವಿರ ಭಕ್ತಾದಿಗಳಿಗೆ ಊಟದ ವ್ಯವಸ್ಥೆ ಮಾಡಿಕೊಡಲಾಗಿದೆ.

ಮಾಜಿ ಸಚಿವ ಈಶ್ವರಪ್ಪ ಭೇಟಿ

ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕಣದಿಂದ ಇತ್ತೀಚೆಗಷ್ಟೆ ಪೊಲೀಸರಿಂದ ಕ್ಲೀನ್‌ಚಿಟ್‌ ಪಡೆದ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತ ಆಗಮಿಸಿದ್ದ ಈಶ್ವರಪ್ಪ, ವಿಶೇಷ ಪೂಜೆ ಸಲ್ಲಿಸಿದರು. ದರ್ಶನದ ಬಳಿಕ ದೇವಸ್ಥಾನ ಮುಂಭಾಗದಲ್ಲಿ ಪ್ರಸಾದ ವಿತರಿಸಿದರು.

ಇದನ್ನೂ ಓದಿ | ಆಷಾಢ ಶುಕ್ರವಾರ | ದೇವಿ ಚಾಮುಂಡೇಶ್ವರಿ ದರ್ಶನ ಪಡೆದ ಸಾವಿರಾರು ಭಕ್ತರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Mysore News: ಮೈಸೂರಿನಲ್ಲಿ ಗಾಯಕ ಎಚ್ ಎಸ್ ನಾಗರಾಜ್ ಗೆ ಶ್ರೀ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ

Mysore News: ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ವತಿಯಿಂದ ಮೈಸೂರಿನ ಶ್ರೀವಾಸುದೇವಾಚಾರ್ಯ ಭವನದಲ್ಲಿ ಮೈಸೂರು ವಾಸುದೇವಾಚಾರ್ಯ ಸಂಸ್ಮರಣಾ ಸಂಗೀತ ಉತ್ಸವದ ವಿದ್ವತ್ ಸಭೆ ಜರುಗಿತು. ಈ ವೇಳೆ ವಿದ್ವಾನ್ ಶೃಂಗೇರಿ ನಾಗರಾಜ್ ರಿಗೆ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’, ವಿದ್ವಾನ್ ಎಚ್.ಕೆ.ನರಸಿಂಹಮೂರ್ತಿ ರಿಗೆ ‘ಶ್ರೇಷ್ಠ ಜೀವಮಾನ ಸಾಧನೆ ಪ್ರಶಸ್ತಿ’, ವಿದುಷಿ ಪುಷ್ಪಾ ಶ್ರೀನಿವಾಸ್ ರಿಗೆ ‘ಕರ್ನಾಟಕ ಸಂಗೀತಾಚಾರ್ಯ ಪ್ರಶಸ್ತಿ’ ಯನ್ನು ನೀಡಿ, ಗೌರವಿಸಲಾಯಿತು.

VISTARANEWS.COM


on

Mysore Vasudevacharya Memorial Music utsav Vidwat Sabha and award ceremony
Koo

ಮೈಸೂರು: ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಮಹಾಮಹಿಮರಾದ ಮೈಸೂರು ವಾಸುದೇವಾಚಾರ್ಯರ ಕೊಡುಗೆ ಅನನ್ಯವಾಗಿದೆ ಎಂದು ಶಿವಮೊಗ್ಗದ ಖ್ಯಾತ ಗಾಯಕ ವಿದ್ವಾನ್ ಶೃಂಗೇರಿ ಎಚ್.ಎಸ್. ನಾಗರಾಜ್ (Mysore News) ಹೇಳಿದರು.

ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ವತಿಯಿಂದ ಮೈಸೂರಿನ ಶ್ರೀವಾಸುದೇವಾಚಾರ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಾಸುದೇವಾಚಾರ್ಯ ಸಂಸ್ಮರಣಾ ಸಂಗೀತ ಉತ್ಸವದ ವಿದ್ವತ್ ಸಭೆಯಲ್ಲಿ ಅವರು ಪ್ರತಿಷ್ಠಿತ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.

ಇದನ್ನೂ ಓದಿ: Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

ಮೈಸೂರು ವಾಸುದೇವಾಚಾರ್ಯ ಮನೆ ಮೈಸೂರಿನಲ್ಲಿ ಸಂಗೀತಕ್ಕೆ ಮಹೋನ್ನತ ವೇದಿಕೆಯಾಗಿ ರೂಪುಗೊಂಡಿದೆ. ಅಲ್ಲಿ ಹಾಡಿದವರ ಧನ್ಯತೆಯೇ ವಿಶೇಷವಾಗಿದ್ದು ಎಂದು ಅವರು ಸ್ಮರಿಸಿದರು.

ಪ್ರಶಸ್ತಿ ಪ್ರದಾನ

ವಿದ್ವಾನ್ ಶೃಂಗೇರಿ ನಾಗರಾಜ್ ಅವರಿಗೆ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’, ವಿದ್ವಾನ್ ಎಚ್.ಕೆ. ನರಸಿಂಹಮೂರ್ತಿ ಅವರಿಗೆ ‘ಶ್ರೇಷ್ಠ ಜೀವಮಾನ ಸಾಧನೆ ಪ್ರಶಸ್ತಿ’, ವಿದುಷಿ ಪುಷ್ಪಾ ಶ್ರೀನಿವಾಸ್ ಅವರಿಗೆ ‘ಕರ್ನಾಟಕ ಸಂಗೀತಾಚಾರ್ಯ ಪ್ರಶಸ್ತಿ’ ಯನ್ನು ನೀಡಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ರಮಾ ಬೆಣ್ಣೂರು ಮಾತನಾಡಿ, ವಯೋಲಿನ್ ವಿದ್ವಾಂಸ ಎಚ್.ಕೆ. ನರಸಿಂಹ ಮೂರ್ತಿ ಅವರು ಕಲಾ ಲೋಕಕ್ಕೆ ಅಹರ್ನಿಷಿ ಸೇವೆ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಯುವಕರು ವಯಲಿನ್ ಹಿಡಿದು ಸಾಗುತ್ತಿದ್ದರೆ ಅವರು ಎಚ್.ಕೆ. ಎನ್. ಸ್ಟೂಡೆಂಟ್ ಎಂದು ಧೈರ್ಯವಾಗಿ ಹೇಳಬಹುದು. ಜೀವಮಾನದಲ್ಲಿ ಅವರು ಬಹುತೇಕ ಸಮಯವನ್ನು ಈ ವಾದ್ಯದ ನುಡಿಸಾಣಿಕೆ ಮತ್ತು ಪಾಠಕ್ಕಾಗಿ ಮೀಸಲಿಟ್ಟಿದ್ದಾರೆ. ಅವರಿಗೆ ಜೀವಮಾನದ ಪ್ರಶಸ್ತಿ ನೀಡಿ ಗೌರವಿಸಿರುವುದು ಮಹತ್ತರ ಕಾರ್ಯ ಎಂದು ಶ್ಲಾಘಿಸಿದರು.

ಇದನ್ನೂ ಓದಿ: Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

ಖ್ಯಾತ ಸಂಗೀತ ವಿದ್ವಾಂಸ ಮತ್ತು ಟ್ರಸ್ಟಿ ಡಾ. ರಾ. ನಂದಕುಮಾರ್ ಮಾತನಾಡಿ, ಕನ್ನಡ ನಾಡಿನ ಖ್ಯಾತ, ವಿಖ್ಯಾತ ಸಂಗೀತ ವಿದ್ವಾಂಸರನ್ನು ಒಳಗೊಂಡ ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ (ಕೆಸಿಎಂಸಿ) ಕಳೆದ ಮೂರು ವರ್ಷಗಳಿಂದ ಕಲಾಕ್ಷೇತ್ರದ ಅಭ್ಯುದಯಕ್ಕೆ ಸೇವೆ ಸಲ್ಲಿಸುತ್ತಿದೆ. ಮುಂದೆ ನೂರಾರು ಕಾರ್ಯಾಗಾರ, ಪ್ರಾತ್ಯಕ್ಷಿಕೆ ಹಮ್ಮಿಕೊಂಡು ಯುವ ಸಂಗೀತಗಾರರ ಏಳಿಗೆಗೆ ಶ್ರಮಿಸಲು ಸಂಕಲ್ಪ ಮಾಡಿದೆ. ಸಂಗೀತ ಲೋಕದ ದಿಗ್ಗಜರನ್ನು ಗುರುತಿಸಿ, ಗೌರವಿಸುವ ಸೇವೆಯನ್ನೂ ಟ್ರಸ್ಟ್ ಮಾಡುತ್ತಿದೆ. ಒಟ್ಟಾರೆ ಕರ್ನಾಟಕ ಶಾಸ್ತ್ರೀಯ ಸಂಗೀತದ ಮಹತ್ವ ಕಾಪಾಡಲು ನಮ್ಮ ಕೆಸಿಎಂಸಿ ಟ್ರಸ್ಟ್ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು.

ಹಿರಿಯ ವೀಣಾ ವಿದ್ವಾಂಸ ವಿದ್ವಾನ್ ಡಾ. ರಾ. ವಿಶ್ವೇಶ್ವರನ್ ಮಾತನಾಡಿ, ಸಂಗೀತ ಕ್ಷೇತ್ರದಲ್ಲಿ ಸಿದ್ಧಿ ಪಡೆದ ಅನೇಕರು ಪ್ರಸಿದ್ಧಿಗೆ ಬರಲೇ ಇಲ್ಲ. ಅವರ ಸಾಲಿನಲ್ಲಿ ಮೈಸೂರು ವಾಸುದೇವಾಚಾರ್ಯರೂ ಒಬ್ಬರು. ಮೈಸೂರಿನಲ್ಲಿ ಅವರಿಗೆ ರಾಜಾಶ್ರಯ ಮಾತ್ರ ಇತ್ತು. ಆದರೆ ರಾಷ್ಟ್ರಮಟ್ಟದ ಪ್ರಶಸ್ತಿ, ಪುರಸ್ಕಾರಗಳು ಇನ್ನಷ್ಟು ಮಾನ್ಯವಾಗಬೇಕಿತ್ತು. ಇಂದಿನ ಪೀಳಿಗೆ ಇಂಥ ಮಹಾನ್ ಕಲಾವಿದರ ರಚನೆಗಳನ್ನು ಶ್ರದ್ಧೆಯಿಂದ ಕಲಿತು ಹಾಡಬೇಕು. ಕೆಸಿಎಂಸಿ ಟ್ರಸ್ಟ್ ಈ ನಿಟ್ಟಿನಲ್ಲಿ ಸಾವಿರಾರು ಕೆಲಸಗಳನ್ನು ಮಾಡಲಿ ಎಂದು ಹಾರೈಸುವೆ ಎಂದು ತಿಳಿಸಿದರು.

ರೇವತಿ ಕಾಮತ್ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ

ಇದೇ ವೇಳೆ ಖ್ಯಾತ ವೀಣಾ ವಿದುಷಿ ರೇವತಿ ಕಾಮತ್ ಅವರ ‘ರೇವತಿ ಕಾಮತ್ ಚಾರಿಟಬಲ್ ಟ್ರಸ್ಟ್’ ಅನ್ನು ವಿದ್ವಾನ್ ಆರ್. ವಿಶ್ವೇಶ್ವರನ್ ಅವರು ಉದ್ಘಾಟಿಸಿದರು. ಪರಿಸರ ಸಂರಕ್ಷಣೆ, ಗ್ರಾಮೀಣ ಮಕ್ಕಳ ಶಿಕ್ಷಣ ಅಭಿವೃದ್ಧಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಪೋಷಣೆ ಮತ್ತು ಸಂವರ್ಧನೆಗೆ ಟ್ರಸ್ಟ್ ಸಂಕಲ್ಪ ಮಾಡಿದೆ ಎಂದು ರೇವತಿ ಕಾಮತ್ ತಿಳಿಸಿದರು.

ಈ ಸಂದರ್ಭದಲ್ಲಿ ಕಲಾಕ್ಷೇತ್ರದ ಹಿರಿಯ ಚೇತನ ವಿದ್ವಾನ್ ಡಾ.ರಾ. ವಿಶ್ವೇಶ್ವರನ್, ಲೇಖಕ ಮತ್ತು ಪತ್ರಕರ್ತ ಎ.ಆರ್. ರಘುರಾಮ, ಡಾ.ರಮಾ ಬೆಣ್ಣೂರು, ಭ್ರಮರಾ ಟ್ರಸ್ಟ್‌ನ ಸಂಸ್ಥಾಪಕಿ ಮಾಧುರಿ ತಾತಾಚಾರಿ, ವಿದ್ವಾನ್ ಡಾ.ರಾ.ಸ.ನಂದಕುಮಾರ್ ಮತ್ತು ವೀಣಾ ವಿದ್ವಾಂಸ ಪ್ರಶಾಂತ ಅಯ್ಯಂಗಾರ್, ವಿದ್ವಾನ್ ಆನೂರು ಅನಂತ ಕೃಷ್ಣ ಶರ್ಮ (ಶಿವು) ಮತ್ತು ಪುಸ್ತಕಂ ರಮಾ ಉಪಸ್ಥಿತರಿದ್ದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ಇಂದಿನ ಧಾರಣೆ ಹೀಗಿದೆ

ಇದಕ್ಕೂ ಮುನ್ನ ವಾಸುದೇವಾಚಾರ್ಯರ ಕೃತಿಗಳ ಗೋಷ್ಠಿ ಗಾಯನ, ವಿದುಷಿ ಮೈಸೂರು ರಾಜಲಕ್ಷ್ಮೀ ಅವರ ವೀಣಾವಾದನ ನೂರಾರು ಪ್ರೇಕ್ಷಕರನ್ನು ರಂಜಿಸಿತು.

Continue Reading

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Rain News : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಯಾದಗಿರಿಯಲ್ಲಿ ಗಾಳಿ ಸಹಿತ ಮಳೆಗೆ ವಿದ್ಯುತ್‌ ಕಂಬ ಮುರಿದು ಬಿದ್ದ ಪರಿಣಾಮ ಮೂರು ದಿನದಿಂದ ಕರೆಂಟ್‌ ಕಟ್‌ ಆಗಿದೆ. ಇತ್ತ ಗ್ರಾಮಸ್ಥರು ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌ (Karnataka Weather Forecast) ಮಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಯಾದಗಿರಿ: ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದ್ದರೂ ಮಳೆ ಅವಾಂತರ (Rain News) ಮಾತ್ರ ಕಡಿಮೆ ಆಗುತ್ತಿಲ್ಲ. ಯಾದಗಿರಿಯಲ್ಲಿ ಮಳೆಗೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಪರಿಣಾಮ ಮೂರು ದಿನಗಳಿಂದ ಕರೆಂಟ್‌ ಇಲ್ಲದಂತಾಗಿದೆ.ಇತ್ತ ಮಂಗಳವಾರ ಚಿಕ್ಕಮಗಳೂರಿನಲ್ಲಿ ಭಾರಿ (Karnataka weather Forecast) ಮಳೆಯಾಗುತ್ತಿದೆ.

ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿದಿದೆ. ಕೊಟ್ಟಿಗೆಹಾರ, ಬಾಳೂರು, ಚಾರ್ಮಾಡಿ ಸುತ್ತಮುತ್ತ ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಸವಾರರು ರಸ್ತೆ ಬದಿ ವಾಹನ ನಿಲ್ಲಿಸಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಯಾದಗಿರಿಯಲ್ಲಿ ಮಳೆಗೆ ಪವರ್‌ ಕಟ್‌; ಜನರೇಟರ್ ಮೂಲಕ ಮೊಬೈಲ್‌ಗಳಿಗೆ ಚಾರ್ಜಿಂಗ್‌

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದಿದ್ದು, ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಲಕಲ್, ಮರಮಕಲ್, ನಾಲ್ವಡಗಿ ಗ್ರಾಮಸ್ಥರು ವಿದ್ಯುತ್‌ ಇಲ್ಲದೆ ಪರದಾಡುತ್ತಿದ್ದಾರೆ. ತುರ್ತು ಎಂದಾಗ ಫೋನ್‌ ಮಾಡಲು ಮೊಬೈಲ್‌ನಲ್ಲಿ ಚಾರ್ಜಿಂಗ್‌ ಇಲ್ಲ.

ಹೀಗಾಗಿ ಮೊಬೈಲ್‌ ಚಾರ್ಜಿಂಗ್‌ಗಾಗಿ ಗ್ರಾಮಸ್ಥರು ಸೂಪರ್‌ ಪ್ಲ್ಯಾನ್‌ವೊಂದನ್ನು ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ ಹತ್ತಾರು ಪವರ್ ಬಾಕ್ಸ್ ಇಟ್ಟು ವಿದ್ಯುತ್ ಕನೆಕ್ಷನ್ ಮಾಡಿಕೊಂಡಿದ್ದಾರೆ. ಜನರೇಟರ್ ಮೂಲಕ‌ ಮೊಬೈಲ್ ಜಾರ್ಜ್ ಮಾಡಲು ಪಾಳಿ ವ್ಯವಸ್ಥೆ ಮಾಡಲಾಗಿದೆ. ಮರಮಕಲ್ ಗ್ರಾಮದ ಬಸವೇಶ್ವರ ಮಂದಿರದಲ್ಲಿ ಮೊಬೈಲ್ ಚಾರ್ಜಿಂಗ್‌ ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಮೂರು ದಿನಗಳಿಂದ ವಿದ್ಯುತ್ ಸಮಸ್ಯೆ ತಲೆದೊರಿದ್ದು, ಜನರೇಟರ್ ಮೂಲಕವೇ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಎತ್ತಿನ ಬಂಡಿ, ಬೈಕ್ ಮೇಲೆ ದೂರದಿಂದ ಬಂದು ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬೇಗ ವಿದ್ಯುತ್ ದುರಸ್ತಿ ಮಾಡುವಂತೆ ಒತ್ತಾಯ ಬಂದಿದೆ.

ಇದನ್ನೂ ಓದಿ: Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಎಲ್ಲೆಲ್ಲಿ ಮಳೆ ಅಬ್ಬರ?

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರಮಳೆ/ಗುಡುಗು ಸಹಿತ ಮಳೆಯಾದರೆ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯ ನಿರೀಕ್ಷೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಲ್ಲಿ ಗುಡುಗು, ಮಿಂಚು; ಒಳನಾಡಿನಲ್ಲಿ ಸಾಧಾರಣ ಮಳೆ

Rain News : ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಪ್ರತ್ಯೇಕ ಕಡೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರ ಮತ್ತು ತುಮಕೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇನ್ನೂ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Constable Death : ಹುಬ್ಬಳ್ಳಿಯಲ್ಲಿ ರೈಲಿಗೆ ತಲೆ ಕೊಟ್ಟ ಕಾನ್ಸ್‌ಟೇಬಲ್‌; ಆತ್ಮಹತ್ಯೆಗೆ ಕಾರಣ ಇನ್ನೂ ನಿಗೂಢ

ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ?

ಜಾಹೀರಾತುಗಳನ್ನು ನೋಡಿ ಮರುಳಾಗುವುದು, ಅದನ್ನೇ ಅನುಸರಿಸುವುದು ಹೊಸದೇನಲ್ಲ. ಉದಾಹರಣೆಗೆ ಹೇಳುವುದಾದರೆ, ಯಾವುದೋ ಟೂತ್‌ಪೇಸ್ಟ್‌ ಉಪಯೋಗಿಸಿದರೆ ಹಲ್ಲುಗಳೆಲ್ಲ ಫಳಫಳಿಸಿ, ಉಸಿರು ತಾಜಾ ಆಗುತ್ತದೆ ಎಂದಿದ್ದರೆ, ಅದು ಸತ್ಯ ಎಂದು ಭಾವಿಸಿಯೇ ನಾವು ಉಪಯೋಗಿಸುತ್ತೇವೆ. ಮೌತ್‌ವಾಷ್‌ ಸಹ ಅದೇ ಸಾಲಿಗೆ ಸೇರುವಂಥದ್ದು. ಯಾವುದೇ ಮನೆಯ ಬಾತ್‌ರೂಂಗಳಲ್ಲಿ ಅದೀಗ ಖಾಯಂ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಬಣ್ಣದ ಬಾಟಲಿಗಳ ಮೇಲಿನ ಮೋಹವನ್ನೋ ಅಥವಾ ಜಾಹೀರಾತುಗಳ ಭರವಸೆಯನ್ನೋ ಒಂದೆಡೆ ಇಟ್ಟು, ಮೌತ್‌ವಾಷ್‌ (Mouthwashes) ಬಳಕೆ ಇತಿ-ಮಿತಿಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ.

Mouthwashes

ದುರ್ಗಂಧ ದೂರ

ಬಾಯಿಯ ದುರ್ಗಂಧ ಎಷ್ಟೋ ಸಂದರ್ಭಗಳಲ್ಲಿ ಮುಜುಗರ ತರುವಂತಹದ್ದು. ಸಾಮಾಜಿಕ, ವೈಯಕ್ತಿಕ ಅಥವಾ ವೃತ್ತಿಯ ಸಂದರ್ಭಗಗಳಲ್ಲಿ ಇದನ್ನು ನಿಭಾಯಿಸುವುದು ಕಷ್ಟವಾಗಬಹುದು. ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು, ಜೀರ್ಣಾಂಗಗಳ ಆರೋಗ್ಯ ನಿಭಾಯಿಸುವುದು, ಆಗಾಗ ನೀರು ಕುಡಿಯುವುದು- ಇಂಥವೆಲ್ಲ ಬಾಯಿಯ ದುರ್ಗಂಧ ನಿವಾರಣೆಯಲ್ಲಿ ಮುಖ್ಯವಾದವು. ಜೊತೆಗೆ ಮೌತ್‌ವಾಷ್‌ ಬಳಕೆ ಸಹ ಈ ಸಮಸ್ಯೆಗೆ ಸಮರ್ಥ ಪರಿಹಾರವನ್ನು ಒದಗಿಸಬಲ್ಲದು.

ಒಸಡಿನ ಸಮಸ್ಯೆ ದೂರ

ಕೆಲವು ಮೌತ್‌ವಾಷ್‌ಗಳು ಬ್ಯಾಕ್ಟೀರಿಯ ವಿರೋಧಿ ಸಾಮರ್ಥ್ಯವನ್ನು ಹೊಂದಿರುತ್ತವೆ. ಇಂಥವುಗಳ ನಿಯಮಿತ ಬಳಕೆಯಿಂದ ಒಸಡಿನ ಸೋಂಕುಗಳನ್ನು ಮಟ್ಟ ಹಾಕಬಹುದು. ಪ್ಲೇಕ್‌ಗಳು ನಿರ್ಮಾಣವಾಗಿ ಒಸಡಿನ ಆರೋಗ್ಯಕ್ಕೆ ಸವಾಲೊಡ್ಡುವ ಸಾಧ್ಯತೆ ಇರುತ್ತದೆ. ಇವುಗಳಿಗೂ ಕೆಲವು ಮೌತ್‌ವಾಷ್‌ಗಳು ಪರಿಹಾರ ಒದಗಿಸಬಲ್ಲವು.

Woman using mouthwash after brushing

ಉಪಯೋಗ ಸುಲಭ

ಮನೆಯಲ್ಲಿದ್ದರೂ, ಪ್ರಯಾಣದಲ್ಲಿದ್ದರೂ ಇವುಗಳನ್ನು ಕೊಂಡೊಯ್ಯುವುದು ಮತ್ತು ಬಳಸುವುದು ಸುಲಭ. ಫ್ಲೋಸಿಂಗ್‌ನಂಥ ಕ್ರಮಗಳು ಸಮಯ ಬೇಡುತ್ತವೆ. ಮಾತ್ರವಲ್ಲ, ವಿಮಾನದಲ್ಲಿ, ಟ್ರೇನ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಇದನ್ನು ಮಾಡಲೂ ಸಾಧ್ಯವಿಲ್ಲ. ಆದರೆ ಮೌತ್‌ವಾಷ್‌ ಬಳಕೆಗೆ ಅಂಥ ಯಾವುದೇ ಅಡೆ-ತಡೆಗಳಿಲ್ಲ; ಇದರ ಬಳಕೆ ಅತಿ ಸುಲಭ.

ಹೆಚ್ಚುವರಿ ರಕ್ಷಣೆ

ಫ್ಲೂರೈಡ್‌ ಹೊಂದಿರುವ ಮೌತ್‌ವಾಷ್‌ಗಳು ಬಾಯಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚುವರಿ ರಕ್ಷಣೆಯನ್ನು ಒದಗಿಸುತ್ತವೆ. ದಂತಗಳ ಎನಾಮಲ್‌ ರಕ್ಷಣೆ ಮಾಡಿ, ಒಡಸುಗಳನ್ನು ಸುರಕ್ಷಿತವಾಗಿ ಇರಿಸಿ, ಹಲ್ಲುಗಳ ಬೇರನ್ನು ಭದ್ರ ಮಾಡುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ, ಹಲ್ಲುಗಳು ಹುಳುಕಾಗಿ, ಕುಳಿಯಾಗದಂತೆ ರಕ್ಷಣೆ ನೀಡುತ್ತವೆ. ಒಟ್ಟಾರೆಯಾಗಿ ಬಾಯಿಯ ಆರೋಗ್ಯಕ್ಕೆ ಇದೊಂದು ಒಳ್ಳೆಯ ಆಯ್ಕೆ.

Woman with mouthwash

ಮಿತಿಗಳಿಲ್ಲವೇ?

ಹಾಗೆಂದು ಮೌತ್‌ವಾಷ್‌ ಬಳಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲವೇ? ಅದನ್ನು ಬಳಸಿದಾಗ ಆಗುವುದೆಲ್ಲ ಒಳ್ಳೆಯದು ಎಂದು ತೀರ್ಮಾನಿಸಲು ಸಾಧ್ಯವೇ? ಎಂದು ಕೇಳಿದರೆ, ಹಾಗೇನಿಲ್ಲ. ಅದರಲ್ಲೂ ಸಮಸ್ಯೆಗಳು ಇಲ್ಲದಿಲ್ಲ. ಬಾಯಿಯ ಸರ್ವರೋಗಗಳಿಗೆ ಇದೊಂದೇ ಮದ್ದು ಎಂದು ಖಂಡಿತಕ್ಕೂ ಭಾವಿಸುವಂತಿಲ್ಲ. ಹಾಗಾದರೆ ಮೌತ್‌ವಾಷ್‌ ಬಳಸುವುದರಲ್ಲಿ ಇರುವಂಥ ಸಮಸ್ಯೆಗಳೇನು? ಯಾವುದರ ಬಗ್ಗೆ ಗಮನ ನೀಡಬೇಕು ಇದನ್ನು ಬಳಸುವಾಗ?

ಆಲ್ಕೋಹಾಲ್‌ ಕಿರಿಕಿರಿ

ಬಹಳಷ್ಟು ಮೌತ್‌ವಾಷ್‌ಗಳು ಆಲ್ಕೋಹಾಲ್‌ ಅಂಶವನ್ನು ಹೊಂದಿರುತ್ತವೆ. ಇದು ಬಾಯಿ ಒಣಗಿದಂತೆ ಮಾಡಿ, ಕಿರಿಕಿರಿ ಉಂಟುಮಾಡಬಹುದು. ದೀರ್ಘಕಾಲ ಇಂಥ ಮೌತ್‌ವಾಷ್‌ ಬಳಸುವುದರಿಂದ, ಈ ಸಮಸ್ಯೆಗಳು ಹೆಚ್ಚುತ್ತವೆ. ಹಾಗಾಗಿ ಸೂಕ್ಷ್ಮ ಒಸಡುಗಳು ಇರುವವರಿಗೆ ಮತ್ತು ಗರ್ಭಿಣಿಯರಿಗೆ ಆಲ್ಕೋಹಾಲ್‌ ಇಲ್ಲದಂಥ ಮೌತ್‌ವಾಷ್‌ ಬಳಕೆಯನ್ನು ವೈದ್ಯರು ಶಿಫಾರಸು ಮಾಡುತ್ತಾರೆ.

Female with mouthwash

ಸಮಸ್ಯೆ ತಿಳಿಯದು

ಬಾಯಿಯ ದುರ್ಗಂಧದ ಸಮಸ್ಯೆಗಳನ್ನು ಮೌತ್‌ವಾಷ್‌ಗಳು ತಡೆಯುವುದು ಹೌದಾದರೂ ಅದು ತಾತ್ಕಾಲಿಕ. ಬಾಯಿಯ ದುರ್ಗಂಧಕ್ಕೆ ಮೂಲ ಕಾರಣವೇನು ಎಂಬುದನ್ನು ಹುಡುಕಿ, ಅದನ್ನು ಪರಿಹರಿಸಿಕೊಳ್ಳುವುದು ಮುಖ್ಯ. ಹಲ್ಲುಗಳು ಹುಳುಕಾಗಿವೆಯೇ ಅಥವಾ ಜೀರ್ಣಾಂಗಗಳ ಸಮಸ್ಯೆಯಿಂದ ಹೀಗಾಗುತ್ತಿದೆಯೇ- ಅಂತೂ ಕಾರಣವೇನು ಎಂಬುದನ್ನು ಪತ್ತೆ ಮಾಡುವುದು ಅಗತ್ಯ. ಹಾಗಾಗಿ ಸಮಸ್ಯೆಗಳನ್ನು ಮೌತ್‌ವಾಷ್‌ ತಾತ್ಕಾಲಿಕವಾಗಿ ಮಾತ್ರವೇ ನಿವಾರಣೆ ಮಾಡಬಲ್ಲದು.

ಬಿಡುವಂತಿಲ್ಲ

ಮೌತ್‌ವಾಷ್‌ಗಳ ಬಳಕೆಯ ನೆವದಿಂದ ನಿತ್ಯದ ಸ್ವಚ್ಛತೆಯ ಅಭ್ಯಾಸಗಳನ್ನು ಬಿಡುವಂತಿಲ್ಲ. ಅಂದರೆ ನಿಯಮಿತವಾಗಿ ಬ್ರಷ್‌ ಮಾಡುವುದು, ಫ್ಲೋಸ್‌ ಮಾಡುವುದು, ಊಟ-ತಿಂಡಿಯ ನಂತರ ಬಾಯಿಗೆ ನೀರು ಹಾಕಿ ಮುಕ್ಕಳಿಸುವುದು- ಇವೆಲ್ಲ ಅಗತ್ಯ ಅಭ್ಯಾಸಗಳು. ಎಂದೋ ಪ್ರಯಾಣದ ಸಂದರ್ಭದಲ್ಲಿ ಬ್ರಷ್‌ ಮಾಡುವುದಕ್ಕೆ ಅನುಕೂಲವಿಲ್ಲ ಎನ್ನುವಾಗ ಮಾತ್ರವೇ ಮೌತ್‌ವಾಷ್‌ ಬಳಕೆಯನ್ನು ಪರ್ಯಾಯ ಆಗಿಸಿಕೊಳ್ಳಬಹುದೇ ಹೊರತು, ಸದಾ ಅಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Golden Star Ganesh: ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಾಗಿ ನಿಶಾನ್ ರಾಯ್ ಅವರು ಬರೆದು ಚಂದನ್ ಶೆಟ್ಟಿ ಹಾಡಿರುವ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಎಂಬ ಸುಂದರ ಗೀತೆ ಈಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನ ಮಾಲ್ ಆಫ್ ಮೈಸೂರಿನಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು.

VISTARANEWS.COM


on

Golden Star Ganesh Krishnam Pranaya Sakhi movie first song release in Mysore
Koo

ಬೆಂಗಳೂರು: ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಾಗಿ ನಿಶಾನ್ ರಾಯ್ ಅವರು ಬರೆದು ಚಂದನ್ ಶೆಟ್ಟಿ ಹಾಡಿರುವ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಎಂಬ ಸುಂದರ ಗೀತೆ ಈಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನ ಮಾಲ್ ಆಫ್ ಮೈಸೂರಿನಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು.

ಕಾರ್ಯಕ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ಶ್ರೀನಿವಾಸರಾಜು ಅವರು ಫೋನ್ ಮಾಡಿ ಕಥೆ ಹೇಳಬೇಕೆಂದಾಗ ನನಗೆ ಆಶ್ಚರ್ಯವಾಯಿತು. ಅವರು “ದಂಡುಪಾಳ್ಯ” ದಂತಹ ಥ್ರಿಲ್ಲರ್ ಚಿತ್ರ ಮಾಡಿರುವ ನಿರ್ದೇಶಕರು. ನಾನು ನೋಡಿದರೆ ಪ್ರೇಮಕಥೆಗಳ ನಾಯಕ. ನನಗೆ ಇವರು ಯಾವ ತರಹ ಕಥೆ ಮಾಡಿರಬಹುದು ಅಂದುಕೊಂಡು ಕಥೆ ಕೇಳಿದೆ. ಅವರು ಕಥೆ ಶುರು ಮಾಡಿದ ಕೂಡಲೆ ನೀವು ಮದುವೆ ಗಂಡಿನ ತರಹ ಬರುತ್ತೀರಾ. ಎಂಟು ಜನ ನಾಯಕಿಯರು ಮದುವೆ ಹೆಣ್ಣಿನ ತರಹ ಸಿದ್ದವಾಗಿರುತ್ತಾರೆ ಎಂದರು. ಆಗ ಇದು ನನ್ನ ಜಾನರ್‌ನ ಚಿತ್ರ ಅಂದು ಕೊಂಡೆ. ಆದರೆ ಚಿತ್ರದಲ್ಲಿ ಬರೀ ಇಷ್ಟೇ ಇಲ್ಲ. ಒಳ್ಳೆಯ ಟ್ವಿಸ್ಟ್ ಇಟ್ಟಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿದೆ ಎಂದರು ಗೋಲ್ಡನ್ ಸ್ಟಾರ್ ಗಣೇಶ್.

ಇದನ್ನೂ ಓದಿ: Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

ಚಿತ್ರ ನಿರ್ದೇಶಕ ಶ್ರೀನಿವಾಸ್ ರಾಜು ಮಾತನಾಡಿ, ಇದು ಗಣೇಶ್ ಅವರಿಗಾಗಿಯೇ ಮಾಡಿರುವ ಕಥೆ. ಫ್ಯಾಮಿಲಿ ಎಂಟರ್‌ಟೈನರ್. ಎಲ್ಲಾ ಜನರೇಶನ್ ಅವರಿಗೂ ಹಿಡಿಸುವ ಕಥೆಯೂ ಹೌದು. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಆ ಪೈಕಿ ಮೊದಲ ಹಾಡು ಈಗ ಬಿಡುಗಡೆಯಾಗಿದೆ. ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹಿರಿಯ ಹಾಗೂ ಕಿರಿಯ ಕಲಾವಿದರು ಸೇರಿದಂತೆ 64 ಜನ ಕಲಾವಿದರು ಅಭಿನಯಿಸಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಚೊಚ್ಚಲ ಹಾಡಿಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ ಮಾತನಾಡಿ, ಇದೊಂದು ಪರಿಶುದ್ಧ ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರ. ಹಾಡುಗಳು ಚೆನ್ನಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

ಗಾಯಕ ಚಂದನ್ ಶೆಟ್ಟಿ, ಹಾಡಿನಲ್ಲಿ ಅಭಿನಯಿಸಿರುವ ವಿನುತ, ಚಂದನ, ಸುಶ್ಮಿತ ಹಾಗೂ ಚಂದನ ಗೌಡ ಹಾಗೂ ಇತರರು ಈ ಹಾಡಿನ ಕುರಿತು ಮಾತನಾಡಿದರು.‌

ಇದನ್ನೂ ಓದಿ: SBI Warning: ನಕಲಿ ಸಂದೇಶಗಳ ಬಗ್ಗೆ ಎಚ್ಚರ‌ ಇರಲಿ; ಗ್ರಾಹಕರಿಗೆ ಎಸ್ ಬಿ ಐ ಸೂಚನೆ

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading
Advertisement
Bomb Threat
ಪ್ರಮುಖ ಸುದ್ದಿ6 mins ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ19 mins ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ22 mins ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ54 mins ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ54 mins ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ59 mins ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ59 mins ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

MLA Belur Gopalakrishna latest statement in Hosnagara
ಶಿವಮೊಗ್ಗ1 hour ago

MLC Election: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ: ಬೇಳೂರು

Toyota Technical Training Institute students Excellent performance in India Skills Competition 2024
ಕರ್ನಾಟಕ1 hour ago

Toyota: ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024; ಟಿಟಿಟಿಐ ವಿದ್ಯಾರ್ಥಿಗಳ ಉತ್ತಮ ಸಾಧನೆ

World Menstrual Hygiene Day in Hosapete
ಆರೋಗ್ಯ1 hour ago

Vijayanagara News: ಹೊಸಪೇಟೆಯಲ್ಲಿ ವಿಶ್ವ ಋತುಚಕ್ರ ನೈರ್ಮಲ್ಯ ದಿನಾಚರಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು11 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌