Ram Mandir: ರಾಮನ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ಘೋಷಿಸಿ; ಆರ್.‌ ಅಶೋಕ್‌, ಎಚ್‌ಡಿಕೆ ಆಗ್ರಹ - Vistara News

ಕರ್ನಾಟಕ

Ram Mandir: ರಾಮನ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ಘೋಷಿಸಿ; ಆರ್.‌ ಅಶೋಕ್‌, ಎಚ್‌ಡಿಕೆ ಆಗ್ರಹ

Ram Mandir: ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ದಿನ ರಾಜ್ಯದಲ್ಲಿ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಆಗ್ರಹಿಸಿದ್ದಾರೆ. ಈ ಸಂಬಂಧ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸವಾಲು ಹಾಕಿದ್ದಾರೆ.

VISTARANEWS.COM


on

Opposition leader R Ashok
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿಯ (Ram Janmabhoomi) ರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಇರುವುದರಿಂದ ರಾಜ್ಯ ಸರ್ಕಾರವು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ (BJP Karnataka) ಹಾಗೂ ಜೆಡಿಎಸ್‌ (JDS Karnataka) ಆಗ್ರಹಿಸಿದೆ. ಈ ಸಂಬಂಧ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (Opposition leader R Ashok) ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೋರಿದ್ದರೆ, ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸೇರಿದಂತೆ ಇನ್ನಿತರ ನಾಯಕರು ರಜೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಸಿಎಂಗೆ ಆರ್.‌ ಅಶೋಕ್ ಸವಾಲು

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಪತ್ರ ಬರೆದಿದ್ದು, ಇದು ದೇಶದ ಕಾರ್ಯಕ್ರಮವಾಗಿದ್ದು ರಜೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಅವರೇ ಯಾರೂ ಪತ್ರ ಕೊಟ್ಟಿಲ್ಲ ಎಂದು ನೀವು ಹೇಳಿದ್ದೀರಿ. ಈಗ ನಾನು ಪತ್ರ ಕೊಟ್ಟಿದ್ದೇನೆ. ಈಗ ರಜೆ ಕೊಡುತ್ತೀರಾ? ಚೆಂಡು ಈಗ ನಿಮ್ಮ ಅಂಗಳದಲ್ಲಿದೆ. ನಿರ್ಧಾರ ಮಾಡಿ ಎಂದು ಅಶೋಕ್‌ ಸವಾಲು ಹಾಕಿದ್ದಾರೆ.

ಆರ್.‌ ಅಶೋಕ್ ಪತ್ರದಲ್ಲೇನಿದೆ?

500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗಿ ಜನವರಿ 22 ರಂದು ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಈ ದಿನದಂದು ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಸಂಭ್ರಮ, ಸಡಗರದ ಆಚರಣೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿಯವರು ಕೂಡ ವಿಗ್ರಹ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ್ದು, ಈಗಾಗಲೇ ಕೇಂದ್ರ ಸರ್ಕಾರದ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿದ್ದಾರೆ. ರಾಜ್ಯದಲ್ಲೂ ದೊಡ್ಡ ಮಟ್ಟದ ಆಚರಣೆ ನಡೆಯುತ್ತಿದ್ದು, ಆ ದಿನ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕು ಉಂಟಾಗಬಹುದು. ಆದ್ದರಿಂದ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸಾರ್ವಜನಿಕ ಉದ್ದಿಮೆ ಸೇರಿದಂತೆ ಎಲ್ಲ ಕಡೆಗಳಲ್ಲಿ ಅನುಕೂಲವಾಗುವಂತೆ ಜನವರಿ 22 ರಂದು ಒಂದು ದಿನದ ಮಟ್ಟಿಗೆ ಸರ್ಕಾರಿ ರಜೆಯನ್ನು ಘೋಷಿಸಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ” ಎಂದು ಆರ್.‌ ಅಶೋಕ್‌ ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ರಜೆ ಕೊಡಿ ಇಲ್ಲವೇ ಪರಿಣಾಮ ಎದುರಿಸಿ: ಅಶೋಕ್‌ ಎಚ್ಚರಿಕೆ

ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ಇಡೀ ದೇಶವೇ ಕಾತುರದಿಂದ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಯುತ್ತಲಿದೆ. ರಾಮನ ಪ್ರಾಣ ಪ್ರತಿಷ್ಠಾಪನೆ ನೋಡಲು ಎಲ್ಲರಲ್ಲೂ ಕಾತುರತೆ ಇದೆ. ಈ ಹಿಂದೆ ಸೋಮನಾಥ ದೇವಾಲಯ ಪಟೇಲರು ನಿರ್ಮಾಣ ಮಾಡಿದ್ದರು. ಈಗ ಮೋದಿ ಅವರು ಅದೇ ರೀತಿ ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿದೆ. ಕರ್ನಾಟಕದಲ್ಲಿ ಕೂಡ ತಯಾರಾಗಿದೆ. ದೇವಸ್ಥಾನ ಸ್ವಚ್ಛ ಮಾಡಿ ಪೂಜೆಗೆ ತಯಾರಾಗಿದೆ. ಧ್ವಜಗಳನ್ನು ಹಾಕಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಣೆ ಮಾಡಿದೆ. ರಾಜ್ಯದಲ್ಲಿ ರಜೆ ಕೊಡಬೇಕು ಎಂದು ವಿಪಕ್ಷ ನಾಯಕನಾಗಿ ನಾನು ಸಹ ಸಿಎಂಗೆ ಪತ್ರ ಬರೆದು ಆಗ್ರಹಿಸಿದ್ದೇನೆ ಎಂದು ಹೇಳಿದರು.

ಕರ್ನಾಟಕ ಜನರ ಭಾವನೆ ಇದೆ. ಇಲ್ಲಿ ಕೂಡ ಪೂಜೆ ನೋಡಲು ಅರ್ಧ ದಿನ ರಜೆ ಘೋಷಣೆಗೆ ಬೇಡಿಕೆ ಇಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆ ನೀಡಿ, ಯಾರೂ ಪತ್ರ ಕೊಟ್ಟಿಲ್ಲ ಅಂತ‌ ಹೇಳಿದ್ದಾರೆ. ನಾನು ಈಗ ಪತ್ರವನ್ನು ಬರೆದಿದ್ದೇನೆ. ಪತ್ರವನ್ನು ಸಿಎಂಗೆ ಕಳುಹಿಸಿದ್ದೇನೆ. ಯಾವುದೇ ರೀತಿ ಆಚರಣೆಗೆ ತೊಂದರೆ ಆಗದಂತೆ, ತಾವು ರಜೆ ಘೋಷಣೆ‌ ಮಾಡಬೇಕು. ಹಿಂದುಗಳ ಭಾವನೆಗೆ ಧಕ್ಕೆ‌ ಬಾರದಂತೆ ರಜೆ ಘೋಷಣೆ ಮಾಡಬೇಕು. ಪತ್ರ ಕೇಳಿದ್ದೀರಿ, ನಾನೀಗ ಪತ್ರ ಕೊಟ್ಟಿದ್ದೇನೆ. ಚಂಡು ಈಗ ನಿಮ್ಮ ಅಂಗಳದಲ್ಲಿದೆ. ಹಿಂದು ವಿರೋಧಿ ಅನ್ನೋದು ಇತಿಹಾಸ ಪುಟ ಸೇರಬಾರದು. ಕೂಡಲೇ ರಜೆ ಘೋಷಣೆ ಮಾಡಿ. ಶಾಲೆಗಳಲ್ಲಿ ಮಕ್ಕಳು ರಜೆ ಹಾಕಿದರೆ, ಶಿಕ್ಷೆ ಕೊಡ್ತೀವಿ, ಸಾವಿರ ರೂ ಫೈನ್ ಹಾಕುತ್ತೇವೆ ಅಂತ‌ ಹೇಳಿದ್ದಾರೆ. ಅತಿರೇಕದ ಪ್ರವೃತ್ತಿ ಸರಿಯಲ್ಲ. ಈ ರೀತಿ ಮಾಡುವವರಿಗೆ ಪಾಠ ಕಲಿಸಬೇಕಾಗುತ್ತದೆ. ಪೋಷಕರು ಈಗಾಗಲೇ ತಿರುಗಿ ಬಿದ್ದಿದ್ದಾರೆ. ಹಿಂದುಗಳ ಭಾವನೆಗೆ ಧಕ್ಕೆ ತಂದರೆ ನೀವು ಪರಿಣಾಮವನ್ನು ಎದುರಿಸಬೇಕಾಗಲಿದೆ ಎಂದು ಅಶೋಕ್‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Pradeep Eshwar: ಜೆಡಿಎಸ್ ಕಾರ್ಯಕರ್ತನಿಗೆ ಪ್ರದೀಪ್ ಈಶ್ವರ್ ಬೆಂಬಲಿಗರ ಜೇವ ಬೆದರಿಕೆ: ಜೆಡಿಎಸ್ ಕಿಡಿ

ರಜೆ ಘೋಷಣೆ ಮಾಡಲು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಅಯೋಧ್ಯೆಗೆ ಹೋಗುತ್ತೇವೆ. ನಾಳೆ ರಜೆ ಘೋಷಣೆ ಮಾಡಬೇಕು ಎನ್ನೋದು ಜನರ ಭಾವನೆ. ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ನೋಡಬೇಕು ಎಂದು ಎಲ್ಲರು ಬಯಸುತ್ತಾರೆ. ಇದು ನಾಡಿನ ಕಾರ್ಯಕ್ರಮವಾಗಿದೆ. ಹೀಗಾಗಿ ರಜೆ ಘೋಷಣೆ ಮಾಡಲು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಈಗಾಗಲೇ ‌ಅನೇಕ ರಾಜ್ಯಗಳು ರಜೆಯನ್ನು ಘೋಷಣೆ ಮಾಡಿವೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

Pralhad Joshi: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪ್ರಸಕ್ತ ಲೋಕಸಭೆ ಚುನಾವಣೆ ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿದ್ದಾರೆ.

VISTARANEWS.COM


on

Union Food and Consumer Affairs Minister Pralhad Joshi latest statement
Koo

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್‌ಗೆ (Congress) ಲೋಕಸಭೆ ಚುನಾವಣೆ (Lok Sabha Election) ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ಮನಬಂದಂತೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧ ಪೋಸ್ಕೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ ಎಂದು ಸಚಿವರು ಖಂಡಿಸಿದ್ದಾರೆ.

ಆ ಮಹಿಳೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ತಮ್ಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌ವೈ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಟ್ವೀಟ್ ಮೂಲಕ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

ಇಲ್ಲ ಸಲ್ಲದ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಎಳೆಯುತ್ತಿರುವುದು ರಾಜಕೀಯ ವೈಷಮ್ಯ ಸರಿ. ಅವರ ಈ ದುರ್ಬುದ್ಧಿಗೆ ತಕ್ಕ ಪಾಠ ಕಲಿಯಲಿದ್ದಾರೆ ಎಂದು ಸಚಿವ ಜೋಶಿ ಎಚ್ಚರಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

Pradeep Eshwar: ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲಿನ ಬಗ್ಗೆ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಕ್ರಿಯಿಸಿದ್ದಾರೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ. ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ? ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ? ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.

VISTARANEWS.COM


on

Pradeep Eshwar
Koo

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಬಳಿಕ ಮತ್ತೆ ʼನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮದ ಮೂಲಕ ಮನೆಮನೆಗೆ ತೆರಳಿ ಜನರ ಅಹವಾಲು ಸ್ವೀಕರಿಸಲು ಶಾಸಕ ಪ್ರದೀಪ್‌ ಈಶ್ವರ್‌ ಮುಂದಾಗಿದ್ದಾರೆ. ಈ ವೇಳೆ ಕ್ಷೇತ್ರದ ನೂತನ ಸಂಸದ ಡಾ.ಕೆ.ಸುಧಾಕರ್‌ ಅವರಿಗೆ ಶುಭ ಹಾರೈಸಿರುವ ಅವರು, ಸುಧಾಕರ್ ದೆಹಲಿಯಲ್ಲಿ ಆರಾಮಾಗಿ ಇರ್ತಾರೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ, ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ, ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ ಎಂದು ಕಾರ್ಯಕರ್ತರಿಗೆ ಹೇಳಿದರು.

ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್‌ಗೆ ಒಂದು ವೋಟ್ ಲೀಡ್ ಬಂದರೂ ರಾಜೀನಾಮೆ ಕೊಡೋದಾಗಿ ಹೇಳಿದ್ದರಿಂದ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯಗಳು ಕೇಳಿಬಂದಿದ್ದವು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಶುಕ್ರವಾರ ʼನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮ ನಡೆಸಲಾಯಿತು. ನಗರದ 17ನೇ ವಾರ್ಡ್‌ನಲ್ಲಿ ಮನೆಮನೆಗೆ ತೆರಳಿ ಶಾಸಕ ಪ್ರದೀಪ್‌ ಈಶ್ವರ್, ಜನರ ಅಹವಾಲು ಆಲಿಸಿದರು.

ಈ ವೇಳೆ ನೂತನ‌ ಸಂಸದ ಡಾ.ಕೆ.ಸುಧಾಕರ್‌ಗೆ ಶುಭ ಹಾರೈಸಿದ ಪ್ರದೀಪ್ ಈಶ್ವರ್, ಒಳ್ಳೆ ಕೆಲಸ ಮಾಡಿಕೊಂಡು ಹೋಗಲಿ. ಜನಾಭಿಪ್ರಾಯ ಸುಧಾಕರ್ ಪರವಾಗಿ ಬಂದಿದೆ. ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಗಲಾಟೆಗಳಾಗುತ್ತಿವೆ. ನನ್ನ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ತಕ್ಷಣ ನಾನು ರಿಯಾಕ್ಟ್ ಮಾಡಿದ್ರೆ ನಮ್ಮ ಕಾರ್ಯಕರ್ತರು, ಅವರ ಕಾರ್ಯಕರ್ತರು ಹೊಡೆದಾಡಿಕೊಳುತ್ತಾರೆ. ನಾನು ಬೈಯ್ಯಬೇಕಾ, ನಾನೇ ಅಖಾಡಕ್ಕೆ ಇಳಿಯುತ್ತೇನೆ‌. ನನ್ನ ಕಾರ್ಯಕರ್ತರನ್ನು ಯಾವುದೇ ಕಾರಣಕ್ಕೂ ಬಲಿ ಕೊಡಲ್ಲ. ನನ್ಮ ಅಸ್ತಿತ್ವದ ಪ್ರಶ್ನೆ ನಾನೇ ಕಾಪಾಡಿಕೊಳ್ತೀನಿ ಎಂದರು.

ಇದನ್ನೂ ಓದಿ | DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

ನಾಲ್ಕೈದು ಕಡೆ ದಾಳಿಯಾದರೂ ನಾನು ತಾಳ್ಮೆಯಿಂದ ಇದ್ದೇನೆ. ಕೆ.ಸುಧಾಕರ್ ದೆಹಲಿಯಲ್ಲಿ ಆರಾಮಾಗಿ ಇರುತ್ತಾರೆ. ನಾನು ಬೆಂಗಳೂರಿನಲ್ಲಿ ಆರಾಮಾಗಿ ಇರುತ್ತೇನೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ. ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ? ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ? ನಮಗೆಲ್ಲಾ ನಮ್ಮ ಹೆಂಡತಿ ಮಕ್ಕಳೇ ಮುಖ್ಯ ಎಂದು ಹೇಳುವ ಮೂಲಕ ನಾವೆಲ್ಲಾ ಒಂದೇ ಎನ್ನುವ ಅರ್ಥದಲ್ಲಿ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ.

ಮನೆಗೆ ಕಲ್ಲು ಹೊಡೆದ ನಾಲ್ಕು ಜನರನ್ನು ಠಾಣೆಗೆ ಕರೆಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫೇಕ್ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ. ಮೈಸೂರಿನ ಅವಿನಾಶ್ ಜೊತೆ ಇನ್ನಿಬ್ಬರು ಹುಡುಗರು ಈ ರೀತಿ ಮಾಡಿದ್ದಾರೆ. ಫೇಕ್ ರಾಜೀನಾಮೆ ಲೆಟರ್ ಹರಿಬಿಟ್ಟಿರುವ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಅಖಾಡದಲ್ಲಿ ನಾನು ಇದ್ದಿದ್ರೆ ಅದರ ಕಥೆ ಬೇರೆ ಆಗ್ತಿತ್ತು

ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಪರೋಕ್ಷವಾಗಿ ರಕ್ಷಾರಾಮಯ್ಯಗೆ ವಿರುದ್ಧ ಅಸಮಾಧಾನ ಹೊರಹಾಕಿದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಅಖಾಡದಲ್ಲಿ ನಾನು ಇದ್ದಿದ್ದರೆ ಅದರ ಕಥೆ ಬೇರೆ ಆಗ್ತಿತ್ತು. ಎಲ್ಲರೂ ಪ್ರದೀಪ್ ಈಶ್ವರ್ ಆಗಕ್ಕೆ ಸಾಧ್ಯವಿಲ್ಲ. ಇನ್ನು ಮುಂದೆ ನಾನೆ ಮನೆಮನೆಗೆ ಸುತ್ತುತ್ತೇನೆ. ಕಾರ್ಯಕರ್ತರನ್ನು ಬಲಪಡಿಸುತ್ತೇನೆ. ಕಾಂಗ್ರೆಸ್ ಪಕ್ಷ ದೊಡ್ಡದು, ಪ್ರದೀಪ್ ಈಶ್ವರ್ ಅಲ್ಲ. ನನ್ನಂಥಹ ಅಹಿಂದ ಹುಡುಗರ ರಕ್ಷಣೆ ಸಿಗಬೇಕಾದರೆ ಕಾಂಗ್ರೆಸ್ ಉಳಿಯಬೇಕು. ಚಿಕ್ಕಬಳ್ಳಾಪುರಲ್ಲಿ ಈ ಸೋಲು ಸೋಲಲ್ಲ, ಗೆಲುವು ಇನ್ನು ಐದು ವರ್ಷ ಮುಂದಕ್ಕೆ ಹೋಗಿದೆ ಅಷ್ಟೇ ಎಂದು ಹೇಳಿದರು.

ಇದನ್ನೂ ಓದಿ | Rahul Gandhi: ನನ್ನ ಮೇಲೆ ಮೋದಿಗಿರುವಷ್ಟು ದೇವರ ಕೃಪೆ ಇಲ್ಲ ಎಂದ ರಾಹುಲ್‌ ಗಾಂಧಿ; ಏಕಿಂಥ ಮಾತು?

ಯಾರೇ ಆಗಿದ್ರೂ ಶಿಕ್ಷೆ ಆಗಲೇ ಆಗುತ್ತೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕೇಸ್‌ನಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ. ರೇಣುಕಾಸ್ವಾಮಿ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಪ್ಪಿತಸ್ತರು ಯಾರೆ ಇದ್ದರೂ ಕಾನೂನು ಕ್ರಮ ಜರುಗಿಸಬೇಕು. ಬೆಂಗಳೂರಿನ ಪೊಲೀಸರು ಬಲಿಷ್ಠವಾಗಿದ್ದಾರೆ. ಕಾನೂನಿಗಿಂತ ದೊಡ್ಡವರು ಈ ಭೂಮಿ ಮೇಲೆ ಯಾರೂ ಇಲ್ಲ. ಯಾರೇ ಆಗಿದ್ರೂ ತಪ್ಪಿಗೆ ಶಿಕ್ಷೆ ಆಗಲೇ ಆಗುತ್ತೆ ಎಂದು ಪ್ರದೀಪ್‌ ಈಶ್ವರ್‌ ಅಭಿಪ್ರಾಯಪಟ್ಟರು.

Continue Reading

ಪ್ರಮುಖ ಸುದ್ದಿ

V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

V Somanna :ಸೋಮಣ್ಣ ಸ್ವಾಗತಕ್ಕೆ ಸಹಾಯಕ ಆಯುಕ್ತರನ್ನು ಕಳುಹಿಸಿದ್ದರು. ಅವರಿಬ್ಬರೂ ಜಿಲಾಸ್ತುವಾರಿ ಸಚಿವ ಜಿ.ಪರಮೇಶ್ವರ್ ಪ್ರವಾಸದ ಕಾರ್ಯಕ್ರಮಗಳಿಗೆ ಹಾಜರಾಗಲು ಹೋಗಿದ್ದರು. ಅವರಿಬ್ಬರ ನಡೆಯಿಂದ ಕೆಂಡಾಮಂಡಲರಾದ ಸೋಮಣ್ಣ ಫೋನ್ ಮೂಲಕವೇ ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

V Somanna
Koo

ತುಮಕೂರು: ಕೇಂದ್ರದ ಎನ್​ಡಿಎ ಸರ್ಕಾರದಲ್ಲಿ ಜಲಶಕ್ತಿ ರಾಜ್ಯ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ವಿ. ಸೋಮಣ್ಣ (V Somanna) ಅವರು ತಮ್ಮ ಸ್ವಕ್ಷೇತ್ರ ತುಮಕೂರಿಗೆ ಶುಕ್ರವಾರ ಮೊದಲ ಬಾರಿ ಆಗಮಿಸಿದ್ದರು. ಈ ವೇಳೆ ಶಿಷ್ಟಾಚಾರ ಉಲ್ಲಂಘಿಸಿ ಸ್ಥಳದಲ್ಲಿ ಹಾಜರಿರದ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಸೋಮಣ್ಣ ಅವರದ್ದು ಪೂರ್ವ ನಿಗದಿತ ಭೇಟಿಯಾಗಿದ್ದರೂ ಜಿಲ್ಲಾಧಿಕಾರಿ ಶುಭಕಲ್ಯಾಣ್, ಸಿಇಓ ಪ್ರಭು ಅವರು ಸ್ಥಳದಲ್ಲಿ ಹಾಜರಿರಲಿಲ್ಲ. ಬದಲಾಗಿ ಸೋಮಣ್ಣ ಸ್ವಾಗತಕ್ಕೆ ಸಹಾಯಕ ಆಯುಕ್ತರನ್ನು ಕಳುಹಿಸಿದ್ದರು. ಅವರಿಬ್ಬರೂ ಜಿಲಾಸ್ತುವಾರಿ ಸಚಿವ ಜಿ.ಪರಮೇಶ್ವರ್ ಪ್ರವಾಸದ ಕಾರ್ಯಕ್ರಮಗಳಿಗೆ ಹಾಜರಾಗಲು ಹೋಗಿದ್ದರು. ಅವರಿಬ್ಬರ ನಡೆಯಿಂದ ಕೆಂಡಾಮಂಡಲರಾದ ಸೋಮಣ್ಣ ಫೋನ್ ಮೂಲಕವೇ ತರಾಟೆಗೆ ತೆಗೆದುಕೊಂಡಿದ್ದಾರೆ. ವಿವಾದ ಮಾಡಿಕೊಳ್ಳಲು ಹೋಗಬೇಡಿ. ಸ್ಥಳದಲ್ಲಿ ಹಾಜರಿದ್ದು ಜನರ ಸಮಸ್ಯೆಗೆ ಕಿವಿಯಾಗಬೇಕು. ಇಲ್ಲದಿದ್ದರೆ ಜನವೇ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಕಲುಷಿತ ನೀರು ಸೇವನೆಯಿಂದ ವಾಂತಿ- ಭೇದಿ ಉಂಟಾಗಿ ಆಸ್ಪತ್ರೆಗೆ ದಾಖಲಾಗಿ ಮಧುಗಿರಿ ತಾಲೂಕಿನ ಸಂತ್ರಸ್ತರನ್ನು ಭೇಟಿಯಾದ ಸೋಮಣ್ಣ ಅವರು ಸಾಂತ್ವನ ಹೇಳಿದರು. ಈ ವೇಳೆಯೂ ಈ ವೇಳೆ ಸ್ಥಳದಲ್ಲಿ ಜಿಲ್ಲಾಧಿಕಾರಿ ಇಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಡಿಸಿ ಶುಭಕಲ್ಯಾಣ್, ಸಿಇಓ ಪ್ರಭುಗೆ ಪೋನ್ ಮಾಡಿ ವಿಚಾರಿಸಿದರು. ಪರಿಹಾರ ಹೇಳಲು ಇಲ್ಲಿ ಯಾರೂ ಇಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿಗೂ ಕುಡಿಯುವ ನೀರಿನ ಸಮಸ್ಯೆಗೆ ಏನು ಸಂಬಂಧ. ನೀರು ಕೊಡೋರು ಯಾರು ಎಂದು ಪ್ರಶ್ನಿಸಿದರು.

ಜಿಲ್ಲಾಸ್ಪತ್ರೆಗೆ ನಾನು ಬಂದರೆ ಕೇಳುವುದಕ್ಕೆ ಗತಿಯಿಲ್ಲ. ನನಗೂ ನನ್ನದೇ ಆದಂತಹ ಜವಬ್ದಾರಿಯಿದೆ. ಇಲ್ಲಿ ಒಬ್ಬ ಅಧಿಕಾರಿಯೂ ಇಲ್ಲ. ಸ್ಥಳದಲ್ಲಿ ನೀವು ಇರಬೇಕಿತ್ತು. ಎಲ್ಲೆಲ್ಲಿಗೂ ಹೋಗಿ ನನಗೆ ಟೋಪಿ ಹಾಕಬೇಡಿ. ನಾನು ಎಂಪಿಯಾಗಿ ಆಸ್ಪತ್ರೆಗೆ ಬಂದಿದ್ದೇನೆ. ನಿಮ್ಮ ಯಾವ ಅಧಿಕಾರಿಯೂ ಇಲ್ಲ ಇಲ್ಲ. ಒಬ್ಬ ವೈದ್ಯರು ಇಲ್ಲ. ಜನರಿಗೆ ಮೋಸ ಮಾಡಿದರೆ ಅವರೂ ಪಾಠ ಕಲಿಸುತ್ತಾರೆ ಎಂದು ತರಾಟೆಗೆ ತೆಗೆದುಕೊಂಡರು.

ಸಂತ್ರಸ್ತರಿಗೆ ಸಾಂತ್ವನ

ಕಲುಷಿತ ನೀರು ಕುಡಿದು ಚನ್ನೆನಹಳ್ಳಿ ಗ್ರಾಮದ ಜನರಿಗೆ ಸಚಿವ ಸೋಮಣ್ಣ ಆಸ್ಪತ್ರೆಯಲ್ಲಿ ಸಾಂತ್ವನ ಹೇಳಿದರು. ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರಿಗೆ ಸಾಂತ್ವನ ಹೇಳಿದರು. ವಿ.ಸೋಮಣ್ಣಗೆ ಜಿಲ್ಲಾ ಆರೋಗ್ಯಧಿಕಾರಿ ಓ ಡಾ ಮಂಜುನಾಥ್, ಶಾಸಕ ಜಿ.ಬಿ ಜ್ಯೋತಿ ಗಣೇಶ್, ಸುರೇಶ್ ಗೌಡ ಸಾಥ್ ಕೊಟ್ಟರು.

ಸಿದ್ದಗಂಗಾ ಮಠಕ್ಕೆ ಭೇಟಿ: ತುಮಕೂರಿಗೆ ಆಗಮಿಸಿದ್ದ ಸೋಮಣ್ಣ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ನನ್ನನ್ನ ಎನ್ ಡಿಎ ಸರ್ಕಾರದ ಸಚಿವನನ್ನಾಗಿ ಮಾಡಿದ್ದಾರೆ, ಇದಕ್ಕಾಗಿ ಪ್ರಧಾನಿ ಹಾಗೂ ಗೃಹ ಸಚಿವರಿಗೆ ಧನ್ಯವಾದಗಳು. ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ. ಇಂದು ತುಮಕೂರು ಜಿಲ್ಲೆಯ ಸ್ವಾಮಿಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇವೆ ಎಂದು ಹೇಳಿದರು.

ಮಧುಗಿರಿಯಲ್ಲಿ ಕಲುಷಿತ ನೀರು ಕುಡಿದು ಸಾವನಪ್ಪಿದ್ದಾರೆ. ಇದು ನಡೆಯಬಾರದಿತ್ತು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದೇನೆ. ಜಿಲ್ಲಾಧಿಕಾರಿಯಿಂದ ವರದಿ ಪಡೆಯುತ್ತೇನೆ. ನಾನೂ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುವುದಾಗಿ ಹೇಳಿದರು.

ಇದನ್ನೂ ಓದಿ: CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

ನನಗೆ ಕೊಟ್ಟ ಖಾತೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಪ್ರಧಾನಿ ಮೋದಿ ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ. ಎನ್ ಡಿಎ ಒಕ್ಕೂಟದಿಂದ ರಾಷ್ಟ್ರದ ಎರಡು ಉಪಯುಕ್ತವಾದ ಜವಾಬ್ದಾರಿಗಳನ್ನು ನನಗೆ ನೀಡಿದ್ದಾರೆ. ಇಲಾಖೆಯನ್ನು ಅರ್ಥಮಾಡ್ಕೊಂಡು ನನ್ನ 45 ವರ್ಷದ ರಾಜಕೀಯ ಅನುಭವ ಬಳಸಿಕೊಂಡು ಕೆಲಸ ಮಾಡುವೆ ಎಂದು ಹೇಳಿದರು.

ಭಾನುವಾರ ಕಾರ್ಯಕರ್ತರ ಸಭೆ ಕರೆದಿದ್ದೇನೆ. ಎರಡು ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆಯಲಾಗಿದೆ ಎಂದು ನುಡಿದರು.

Continue Reading

ಉತ್ತರ ಕನ್ನಡ

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Self Harming : ಕುಡಿದ ಅಮಲಿನಲ್ಲಿ ಠಾಣೆಗೆ ಬಂದ ವ್ಯಕ್ತಿಯೊಬ್ಬ ಪಿಎಸ್‌ಐ ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಠಾಣೆ ಎದುರೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

By

Self Harming
ಸಾಂದರ್ಭಿಕ ಚಿತ್ರ
Koo

ಕಾರವಾರ: ಪಿಎಸ್ಐ ಮಾನಸಿಕ ಕಿರುಕುಳ (Self Harming) ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ರಾಮನಗರ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.

ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿದವರು. ಜೂಜಾಟ ಆರೋಪದಡಿ ಭಾಸ್ಕರ್‌ ವಿರುದ್ಧ ರಾಮನಗರ ಪಿಎಸ್ಐ ಬಸವರಾಜ್ ಮಗನೂರು ಪ್ರಕರಣ ದಾಖಲಿಸಿದ್ದರು. ನಿನ್ನೆ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್‌ ಮದ್ಯ ಸೇವಿಸಿ ಬೈಕ್‌ ಮೂಲಕ ಠಾಣೆಗೆ ತೆರಳಿದ್ದಾನೆ.

ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಬಸವರಾಜ್‌ ಸೂಚಿಸಿದ್ದಾರೆ. ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್‌ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

ಮೈಸೂರು: ಬೆಳೆ ಸಾಲ ತೀರಿಸಲಾಗದೆ ಕೆರೆಗೆ ಹಾರಿ ರೈತರೊಬ್ಬರು (Farmer Death) ಆತ್ಮಹತ್ಯೆ (Self Harming) ಮಾಡಿಕೊಂಡು ಮೃತಪಟ್ಟಿದ್ದಾರೆ. ಮೈಸೂರು (Mysuru News) ಜಿಲ್ಲೆಯ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ ನಡೆದಿದೆ. ಅಣ್ಣೇಗೌಡ (57) ಮೃತ ದುರ್ದೈವಿ.

ಅಣ್ಣೇಗೌಡ ಮೂರು ಎಕರೆಯಲ್ಲಿ ತಂಬಾಕು ಮತ್ತಿತರೆ ಬೆಳೆ ಬೆಳೆಯುತ್ತಿದ್ದರು. ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ ಐಒಬಿ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಸಾಲ ಪಡೆದಿದ್ದರು. ಖಾಸಗಿ ಬ್ಯಾಂಕ್‌ನಲ್ಲಿ 14 ಲಕ್ಷ ರೂ. ಹಾಗೂ 5 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹತ್ತದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆರೆಯಿಂದ ರೈತನ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
NEET UG 2024
ಶಿಕ್ಷಣ11 mins ago

NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

Union Food and Consumer Affairs Minister Pralhad Joshi latest statement
ಕರ್ನಾಟಕ12 mins ago

Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

Aliens
ವಿಜ್ಞಾನ23 mins ago

Aliens: ಏಲಿಯನ್‌ಗಳು ಅನ್ಯಗ್ರಹ ಜೀವಿಗಳಲ್ಲ; ಈ ಭೂಮಿಯ ರಹಸ್ಯ ನಿವಾಸಿಗಳು! ಹಾರ್ವರ್ಡ್ ವಿಜ್ಞಾನಿಗಳ ಸಂಶೋಧನೆ

Actress Siri marriage to actor prabhakar
ಬಿಗ್ ಬಾಸ್23 mins ago

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Yusuf Pathan
ಕ್ರೀಡೆ37 mins ago

Yusuf Pathan: ಜಮೀನು ಒತ್ತುವರಿ ಆರೋಪ; ನೂತನ ಸಂಸದ ಯೂಸುಫ್ ಪಠಾಣ್​ಗೆ ನೋಟಿಸ್

Pradeep Eshwar
ಪ್ರಮುಖ ಸುದ್ದಿ39 mins ago

Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

OTT Release
Latest42 mins ago

OTT Release: ಈ ವಾರ ಒಟಿಟಿಯಲ್ಲಿ ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು

Actor Darshan Assistant Malli missing case
ಸ್ಯಾಂಡಲ್ ವುಡ್48 mins ago

Actor Darshan: ಹಲವು ವರ್ಷಗಳಿಂದ ದರ್ಶನ್ ಆಪ್ತ ʻಮಲ್ಲಿʼನಾಪತ್ತೆ; ರೇಣುಕಾ ಸ್ವಾಮಿಯ ಗತಿಯೇ ಆಯ್ತಾ?

V Somanna
ಪ್ರಮುಖ ಸುದ್ದಿ59 mins ago

V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

Self Harming
ಉತ್ತರ ಕನ್ನಡ1 hour ago

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌