Gicchi Gili Gili season 3: ಶುರುವಾಗಲಿದೆ ಗಿಚ್ಚಿ-ಗಿಲಿಗಿಲಿ ಸೀಸನ್ 3 ; ನಟ ಕೋಮಲ್‌ ಭರ್ಜರಿ ಎಂಟ್ರಿ! - Vistara News

ಕಿರುತೆರೆ

Gicchi Gili Gili season 3: ಶುರುವಾಗಲಿದೆ ಗಿಚ್ಚಿ-ಗಿಲಿಗಿಲಿ ಸೀಸನ್ 3 ; ನಟ ಕೋಮಲ್‌ ಭರ್ಜರಿ ಎಂಟ್ರಿ!

Gicchi Gili Gili season 3: ಇದೀಗ ಕಲರ್ಸ್‌ ವಾಹಿನಿ ಹೊಸ ಪ್ರೋಮೊ ಹಂಚಿಕೊಂಡಿದೆ. ಮೂರನೇ ಸೀಸನ್ನು, ಬರ್ತಾ ಇದ್ದಾರೆ ಮೂರನೇ ಪರ್ಸನ್ನು! ನೋಟ್ ಮಾಡ್ಕೊಳಿ, ಫೆಬ್ರವರಿ 3ಕ್ಕೆ ಎಂದು ಶಿರ್ಷಿಕೆ ನೀಡಿದೆ.

VISTARANEWS.COM


on

Gicchi Gili Gili season 3 started Feb 3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕಾಮಿಡಿ ಟಿವಿ ಶೋ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್‌ಗೆ (Gicchi Gili Gili season 3) ಸಿದ್ಧವಾಗಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಾಮಿಡಿ ಶೋ ‘ಗಿಚ್ಚಿ ಗಿಲಿಗಿಲಿ’ಯ ಮೂರನೇ ಸೀಸನ್  ಫೆಬ್ರವರಿ 3ರಿಂದ ಆರಂಭವಾಗಲಿದ್ದು, ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9ಕ್ಕೆ ವೀಕ್ಷಕರು ಕಾರ್ಯಕ್ರಮವನ್ನು ನೋಡಿ ಆನಂದಿಸಬಹುದು.

ಮೊದಲನ ಸೀಸನ್‌ನ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ʻಗಿಚ್ಚಿ ಗಿಲಿಗಿಲಿ’ಯ ಮೊದಲ ಸೀಸನ್‌ನಲ್ಲಿ ನಿವೇದಿತಾ ಗೌಡ, ಜಗ್ಗಪ್ಪ, ಪ್ರಶಾಂತ್, ಚಂದ್ರಪ್ರಭಾ ಮುಂತಾದವರು ಇದ್ದಿದ್ದರು. ಮೊದಲನೇ ಸೀಸನ್‌ನಲ್ಲಿ ವಂಶಿಕಾ ಅಂಜನಿ ಕಶ್ಯಪ ಹಾಗೂ ಶಿವು ಈ ಶೋನ ವಿಜೇತರಾಗಿ ಹೊರಹೊಮ್ಮಿದ್ದರು. ವಿನೋದ್ ಗೊಬ್ರಗಾಲ್, ನಿವೇದಿತಾ ಗೌಡ ಈ ಶೋನ ರನ್ನರ್ ಅಪ್ ಆಗಿದ್ದರು. ಗಿಚ್ಚಿ ಗಿಲಿಗಿಲಿ ಸೀಸನ್ 2 ವಿನ್ನರ್ ಪಟ್ಟವನ್ನು ಚಂದ್ರಪ್ರಭಾ ಅಲಂಕರಿಸಿದ್ದರು.

ಇದನ್ನೂ ಓದಿ: Gicchi Giligili : ಗಿಚ್ಚಿಗಿಲಿಗಿಲಿ ಖ್ಯಾತಿಯ ಚಂದ್ರಪ್ರಭಾಗೆ ಈಗ ಡಿಕ್ಕಿ ಗಲಿಬಿಲಿ!; Hit and Run ಮಾಡಿ ಪರಾರಿಯಾದ ಕಾಮಿಡಿ ಕಿಲಾಡಿ!

ಇದೀಗ ಕಲರ್ಸ್‌ ವಾಹಿನಿ ಹೊಸ ಪ್ರೋಮೊ ಹಂಚಿಕೊಂಡಿದೆ. ಮೂರನೇ ಸೀಸನ್ನು, ಬರ್ತಾ ಇದ್ದಾರೆ ಮೂರನೇ ಪರ್ಸನ್ನು! ನೋಟ್ ಮಾಡ್ಕೊಳಿ, ಫೆಬ್ರವರಿ 3ಕ್ಕೆ ಎಂದು ಶಿರ್ಷಿಕೆ ನೀಡಿದೆ.

ಈ ಬಾರಿ ಸಾಧು ಕೋಕಿಲ, ಶ್ರುತಿ ಹಾಗೂ ನಟ ಕೋಮಲ್‌ ಜಡ್ಜ್ ಸ್ಥಾನದಲ್ಲಿದ್ದಾರೆ. ನಿರಂಜನ್‌ ದೇಶಪಾಂಡೆ ನಿರೂಪಕರಾಗಿದ್ದಾರೆ.

ಬಿಗ್ ಬಾಸ್ ಮುಗಿದ ಬಳಿಕ ಸಾಲು ಸಾಲು ಧಾರಾವಾಹಿಗಳು ಬರಲು ಸಜ್ಜಾಗಿದೆ. ‘ಶ್ರೀಗೌರಿ’ ಧಾರಾವಾಹಿ ಡಿಸೆಂಬರ್ 28ರಂದು ಪ್ರಸಾರ ಆರಂಭಿಸಲಿದೆ. ಕರಿಮಣಿ’ ಹೆಸರಿನ ಧಾರಾವಾಹಿ ಕೂಡ ಪ್ರಸಾರ ಆರಂಭಿಸಲಿದೆ. ಈ ಧಾರಾವಾಹಿ ರಾತ್ರಿ 9:30ಕ್ಕೆ ಪ್ರಸಾರ ಕಾಣಲಿದೆ. ನಮ್ಮಮ್ಮ ಸೂಪರ್ ಸ್ಟಾರ್’ ಈ ಮೊದಲು ಎರಡು ಸೀಸನ್ ಪ್ರಸಾರ ಕಂಡು ಯಶಸ್ವಿ ಆಗಿದೆ.ಫೆಬ್ರವರಿ 3ರಿಂದ ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಈ ರಿಯಾಲಿಟಿ ಶೋ ಪ್ರಸಾರ ಕಾಣಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Amruthadhaare Serial: ಇಂದು ಭೂಮಿಕಾಗೆ ಹುಟ್ಟು ಹಬ್ಬ: ರೀಲ್‌ ಗಂಡ ಎಸ್ಟೇಟ್​ ಬರೆದು ಕೊಟ್ರು! ರಿಯಲ್‌ ಗಂಡ ಕೊಟ್ಟ ಗಿಫ್ಟ್‌ ಏನು?

Amruthadhaare Serial: ಅಮೃತಧಾರೆ ಧಾರಾವಾಹಿ ʻಬಢೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ನಟ ರಾಜೇಶ್ ಅವರು ಗೌತಮ್ ಎನ್ನುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. . ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

VISTARANEWS.COM


on

Amruthadhaare Serial bhoomika in birthday chaya singh
Koo

ಇಂದು (ಮೇ 16) ಅಮೃತಧಾರೆ ಧಾರಾವಾಹಿ (Amruthadhaare Serial) ಖ್ಯಾತಿಯ ನಟಿ ಛಾಯಾ ಸಿಂಗ್ (Chaya Singh)​ ಅವರಿಗೆ ಜನುಮದಿನದ ಸಂಭ್ರಮ. ಧಾರಾವಾಹಿಯಿಂದ ಜನರಿಗೆ ಭೂಮಿಕಾ ಎಂದೇ ಪರಿಚಯ.

ನಟಿಯ ವಿಶೇಷ ದಿನದಂದು ಜೀ ಕನ್ನಡ ವಾಹಿನಿ ಛಾಯಾ ಸಿಂಗ್​ ಕುರಿತು ವಿಡಿಯೊ ಒಂದನ್ನು ರಿಲೀಸ್​ ಮಾಡಿದೆ. ವಯಸ್ಸಾದರೂ ಮದುವೆಯಾಗದೇ ಉಳಿದ ಮಧ್ಯಮ ಕುಟುಂಬದ ಹೆಣ್ಣುಮಗಳೊಬ್ಬಳು ಹೇಗೆ ಕೋಟ್ಯಧಿಪತಿ ಉದ್ಯಮಿ ಜತೆ ಜೀವನ ನಡೆಸುತ್ತಾಳೆ ಎಂಬುದೇ ಈ ಧಾರಾವಾಹಿಯ ಒನ್‌ಲೈನ್‌ ಸ್ಟೋರಿ.

ಧಾರಾವಾಹಿಯಲ್ಲಿ ಪತಿ ಗೌತಮ್‌ ಹೆಂಡತಿಯ ಹುಟ್ಟುಹಬ್ಬಕ್ಕೆಂದು ಚಿಕ್ಕಮಗಳೂರಿನ ಎಸ್ಟೇಟ್​ ಬರೆದು ಕೊಟ್ಟಿದ್ದಾನೆ. ಇದೀಗ ರಿಯಲ್‌ ಗಂಡ ಪತ್ನಿಗೆ ಏನು ಗಿಫ್ಟ್‌ ಕೊಟ್ಟಿದ್ದಾರೆ? ಎಂದು ನೆಟ್ಟಿಗರು ಪ್ರಶ್ನೆ ಮೂಲಕ ನಟಿಯ ಕಾಲೆಳೆಯುತ್ತಿದ್ದಾರೆ.

ಛಾಯಾ ಅವರ ರಿಯಲ್​ ಲೈಫ್​ ಪತಿಯ ಹೆಸರು ಕೃಷ್ಣ. ಇನ್​ಸ್ಟಾಗ್ರಾಮ್​ನಲ್ಲಿ ಅವರು ಪತಿಯ ಜತೆ ಆಗಾಗ ಫೋಟೋ ಶೇರ್​ ಮಾಡಿಕೊಳ್ಳುತ್ತಿರುತ್ತಾರೆ.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ಕೃಷ್ಣ ಮತ್ತು ಛಾಯಾ ಮದುವೆಯಾಗಿ 11 ವರ್ಷಗಳೇ ಕಳೆದಿವೆ. ಛಾಯಾ ಅವರಿಗೆ ಕೃಷ್ಣ ಅವರ ಪರಿಚಯವಾದದ್ದು, ತಮಿಳು ಚಿತ್ರದಲ್ಲಿ ನಟಿಸುವ ಸಮಯದಲ್ಲಿ.
ಕನ್ನಡ ಸಿನಿರಂಗದಲ್ಲಿಯೂ ಸಕ್ರಿಯರಾಗಿರುವ ಛಾಯಾ, 2000ನೇ ಇಸವಿಯಲ್ಲಿ ತೆರೆಕಂಡ ಪಿ ಶೇಷಾದ್ರಿ ನಿರ್ದೇಶನದ `ಮುನ್ನುಡಿ’ ಚಿತ್ರದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. 
Continue Reading

ಕಿರುತೆರೆ

Bhavani Singh: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಸುಬ್ಬಲಕ್ಷ್ಮಿ ಸಂಸಾರʼ ಧಾರಾವಾಹಿ ನಟ!

Bhavani Singh: ಪಂಕಜ ಶಿವಣ್ಣ-ಭವಾನಿಸಿಂಗ್ ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಬೇಬಿ ಬಂಪ್‌ ಫೋಟೊ ಶೂಟ್‌ ಮಾಡಿಸಿಕೊಂಡಿದ್ದಾರೆ ಪಂಕಜ್‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಜೋಡಿಗೆ ವಿಶ್‌ ಮಾಡುತ್ತಿದ್ದಾರೆ ಫ್ಯಾನ್ಸ್‌.

VISTARANEWS.COM


on

Bhavani Singh pankaj shivanna couple expecting-their first child
Koo

‘ಚರಣದಾಸಿ’, ‘ಸುಬ್ಬಲಕ್ಷ್ಮಿ ಸಂಸಾರ’,’ರಕ್ಷಾ ಬಂಧನ’ ಖ್ಯಾತಿಯ ಕಿರುತೆರೆ ನಟ ಭವಾನಿ ಸಿಂಗ್ (Bhavani Singh) ಅವರು ತಂದೆಯಾಗುತ್ತಿದ್ದಾರೆ. ಪತ್ನಿ ಪಂಕಜ ಶಿವಣ್ಣ ಕೂಡ ನಟಿಯಾಗಿದ್ದು, ಇದೀಗ ಜೋಡಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದೆ.

ಭವಾನಿ ಸಿಂಗ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್‌ ಶೇರ್‌ ಮಾಡಿ ʻʻನಮ್ಮ ಸಂಸಾರ ದೊಡ್ಡದಾಗುತ್ತಿದೆʼʼ ಎಂದು ಬರೆದುಕೊಂಡಿದ್ದಾರೆ.

‘ಚರಣದಾಸಿ’ ಧಾರಾವಾಹಿ ಮೂಲಕ ನಟನೆಗೆ ಕಾಲಿಟ್ಟರು ನಟ ಭವಾನಿ ಸಿಂಗ್. ಪಂಕಜ ಶಿವಣ್ಣ ಅವರು ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿ ಮೂಲಕ ಭವಾನಿ ಸಿಂಗ್ ಅವರಿಗೆ ಪರಿಚಯವಾದರು.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

2019ರಲ್ಲಿ ಇವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದೀಗ ಐದು ವರ್ಷಗಳ ನಂತರ ಈ ಜೋಡಿ ಸಿಹಿಸುದ್ದಿಯನ್ನು ಹಂಚಿಕೊಂಡಿದೆ.
Continue Reading

ಕಿರುತೆರೆ

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Star Suvarna: ಇಬ್ಬರು ಜನಪ್ರಿಯ ಆ್ಯಂಕರ್‌ಗಳನ್ನು ಹೊಂದಿರುವ ಈ ಶೋ ಒಟ್ಟು ಮೂರು ಸುತ್ತುಗಳನ್ನು ಹೊಂದಿರುತ್ತದೆ. ಇನ್ನು ‘Huu ಅಂತೀಯಾ…Uhuu ಅಂತೀಯಾ’ ಶೋ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿರೋದು ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ. ಹಾಗೂ ನಟನೆ ಹಾಗು ತನ್ನ ಹಾಸ್ಯಗಾರಿಕೆಯ ಮೂಲಕ ನೋಡುಗರ ಮನಗೆದ್ದಿರುವ ಅರುಣ್ ಹರಿಹರನ್. ಇವರಿಬ್ಬರು ಈ ಶೋನ ರೂವಾರಿಗಳಾಗಿದ್ದಾರೆ.

VISTARANEWS.COM


on

Star Suvarna HuAnthiya UhuuAnthiya new celebrity game show
Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ರಿಯಾಲಿಟಿ ಶೋಗಳ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ʻಸ್ಟಾರ್ ಸುವರ್ಣʼ ವಾಹಿನಿಯು ಇದೀಗ ‘Huu ಅಂತೀಯಾ…Uhuu ಅಂತೀಯಾ’ (HuAnthiya UhuuAnthiya) ಎಂಬ (Star Suvarna) ಹೊಸ ಬಗೆಯ ವಿನೂತನ ಗೇಮ್ ಶೋ ಅನ್ನು ಪ್ರಸಾರ ಮಾಡಲಿದೆ.

ಇಬ್ಬರು ಜನಪ್ರಿಯ ಆ್ಯಂಕರ್‌ಗಳನ್ನು ಹೊಂದಿರುವ ಈ ಶೋ ಒಟ್ಟು ಮೂರು ಸುತ್ತುಗಳನ್ನು ಹೊಂದಿರುತ್ತದೆ. ಸೆಲೆಬ್ರಿಟಿ ಸ್ಪರ್ಧಿಗಳಿಗೆ 6 ಲಕ್ಷ ರೂಪಾಯಿಗಳನ್ನು ಗೆಲ್ಲುವ ಅವಕಾಶವಿರುತ್ತದೆ. ಮೊದಲ ಸುತ್ತಿನಲ್ಲಿ ಸ್ಪರ್ಧಿಗಳು ಒಬ್ಬರ ನಂತರ ಒಬ್ಬರು ಆಡುತ್ತಾರೆ. ನಿರೂಪಕರು ನೀಡಿದ ಸತ್ಯ ಮತ್ತು ಸುಳ್ಳು ಸಂಗತಿಗಳನ್ನು ಸ್ಪರ್ಧಿಗಳು ಸರಿಯಾಗಿ ಆರಿಸಿದರೆ 1 ಲಕ್ಷ ರೂಪಾಯಿ ಗೆಲ್ಲುವ ಅವಕಾಶವಿದೆ.

ಇನ್ನು ಎರಡನೇ ಸುತ್ತಿನಲ್ಲಿ ಸ್ಪರ್ಧಿಗಳಿಗೆ ಆಹಾರವನ್ನು ಸೇವಿಸುವ ಸವಾಲಿರುತ್ತದೆ, ಮಜಾ ತುಂಬಿರುವ ಟ್ವಿಸ್ಟ್ ಗಳೊಂದಿಗೆ ಒಟ್ಟು 60 ಸೆಕೆಂಡ್‌ಗಳ ಸಮಯವನ್ನು ನೀಡಲಾಗುತ್ತದೆ. ಇದರಲ್ಲಿ ಗೆದ್ದ ವಿಜೇತರು 2 ಲಕ್ಷ ರೂಪಾಯಿಗಳನ್ನು ಗೆಲ್ಲಬಹುದು. ಮೂರನೇ ಹಾಗು ಕೊನೆಯ ಸುತ್ತಿನಲ್ಲಿ ಕೇವಲ ಇಬ್ಬರು ಸ್ಪರ್ಧಿಗಳು ತಮ್ಮ ಅದೃಷ್ಟದ ಆಧಾರದ ಮೇಲೆ ಆಡುತ್ತಾರೆ, ಗೆದ್ದ ಸ್ಪರ್ಧಿಗೆ 3 ಲಕ್ಷಗಳನ್ನು ಗೆಲ್ಲುವ ಅವಕಾಶವಿದೆ. ಇದು ಈ ಗೇಮ್ ಶೋ ನ ನಿಯಮಾವಳಿಗಳು.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

ಇನ್ನು ‘Huu ಅಂತೀಯಾ…Uhuu ಅಂತೀಯಾ’ ಶೋ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿರೋದು ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ. ಹಾಗೂ ನಟನೆ ಹಾಗು ತನ್ನ ಹಾಸ್ಯಗಾರಿಕೆಯ ಮೂಲಕ ನೋಡುಗರ ಮನಗೆದ್ದಿರುವ ಅರುಣ್ ಹರಿಹರನ್. ಇವರಿಬ್ಬರು ಈ ಶೋನ ರೂವಾರಿಗಳಾಗಿದ್ದಾರೆ. ಮೊದಲ ಗ್ರ್ಯಾಂಡ್ ಓಪನಿಂಗ್ ಸಂಚಿಕೆಯಲ್ಲಿ ಸೆಲೆಬ್ರಿಟಿ ಸ್ಫರ್ಧಿಗಳಾಗಿ ನಟ ಡಾರ್ಲಿಂಗ್ ಕೃಷ್ಣ, ನಟಿಯರಾದ ಮಿಲನಾ ನಾಗರಾಜ್ ಹಾಗು ಅಮೃತಾ ಅಯ್ಯಂಗಾರ್ ಭಾಗವಹಿಸಲಿದ್ದಾರೆ.

ಈ ರಿಯಾಲಿಟಿ ಶೋ ನ ಟೈಟಲ್ ಟ್ರ್ಯಾಕ್‌ಗೆ ನೋಡುಗರು ಫಿದಾ ಆಗಿದ್ದು, ಮಸ್ತ್ ಮನರಂಜನೆಗೆ ಕಾತುರತೆಯಿಂದ ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಕುಳಿತು ವೀಕ್ಷಿಸುವ ವೀಕ್ಷಕರಿಗೂ “ಐ ಫೋನ್” ಗೆಲ್ಲುವ ಅವಕಾಶವನ್ನು ಸ್ಟಾರ್ ಸುವರ್ಣ ವಾಹಿನಿಯು ನೀಡುತ್ತಿದೆ. ಮೊದಲ ಹಾಗು ಎರಡನೇ ಸಂಚಿಕೆಯ ಕೊನೆಯಲ್ಲಿ ಕೇಳುವ ಪ್ರಶ್ನೆಗೆ ಸರಿಯಾದ ಉತ್ತರವನ್ನು ನೀಡಿದರೆ ‘I Phone’ ಗೆಲ್ಲುವ ಅವಕಾಶವನ್ನು ನೋಡುಗರು ಪಡೆಯುತ್ತಾರೆ.

ಇದೀಗ ಪ್ರೇಕ್ಷಕರನ್ನು ಮನರಂಜಿಸಲು ಬರ್ತಿದೆ ಹೊಚ್ಚ ಹೊಸ ಯೂನಿಕ್ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ. ‘ ಇದೇ ಮೇ 19 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ಸ್ವಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Continue Reading

ಕಿರುತೆರೆ

Anchor Anushree: ಖುಷಿಯಾಗಿದ್ರೂ ಕಷ್ಟ, ಸಾಧನೆ ಹೊಗಳಿದ್ರೆ ಬಕೆಟ್‌ ಅಂತೀರಾ: ಅನುಶ್ರೀ ಬೇಸರ

Anchor Anushree: ಕೆಲವು ದಿನಗಳ ಹಿಂದೆ ತುಳು ಪಾಡ್‌ಕಾಸ್ಟ್‌ನಲ್ಲಿ ಸಂದರ್ಶನ ಕೊಟ್ಟಿದ್ದರು. ತಮ್ಮ ಮದುವೆ ವಿಚಾರ ಸೇರಿದಂತೆ ಹಲವು ವೈಯಕ್ತಿಕ ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದರು. ಇದೀಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ ಮೂಲಕ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ಅನುಶ್ರೀ ಅವರು ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.

VISTARANEWS.COM


on

Anchor Anushree talking with fans on instagram live
Koo

ಕಿರುತೆರೆ ಜನಪ್ರಿಯ ನಿರೂಪಕಿ, ಸ್ಯಾಂಡಲ್‌ವುಡ್‌ ನಟಿ (Sandalwood star) ಅನುಶ್ರೀ (Anchor anushree) ಅವರು ಕೆಲವು ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ತುಳು ಪಾಡ್‌ಕಾಸ್ಟ್‌ನಲ್ಲಿ ಸಂದರ್ಶನ ಕೊಟ್ಟಿದ್ದರು. ತಮ್ಮ ಮದುವೆ ವಿಚಾರ ಸೇರಿದಂತೆ ಹಲವು ವೈಯಕ್ತಿಕ ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದರು.

ಇದೀಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ ಮೂಲಕ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಮೇ 13ರಂದು ನೇರ ಪ್ರಸಾರದಲ್ಲಿ ಬಂದಿರುವ ಅನುಶ್ರೀಯವರು, ಕೆಲವೊಂದು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಈ ಸಂದರ್ಭದಲ್ಲಿ ಅವರು ಅನುಶ್ರೀ ಅವರು ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.

ʻʻಖುಷಿಯಾಗಿದ್ದರೆ ಓವರ್​ ಆ್ಯಕ್ಟಿಂಗ್​ ಅಂತೀರಿ, ಸ್ವಲ್ಪ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದರೆ ಅದಕ್ಕೂ ಓವರ್ ಆ್ಯಕ್ಟಿಂಗ್​ ಅಂತೀರಿ, ಏನನ್ನಾದರೂ ನೋಡಿ ಆಶ್ಚರ್ಯ ಪಟ್ಟರೆ ಅದಕ್ಕೂ ಹಾಗೆಯೇ ಹೇಳುತ್ತೀರಿ… ಸಾಧನೆಯನ್ನು ಹೊಗಳಿದರೆ ಬಕೆಟ್​ ಅಂತೀರಿ. ಒಂದೊಂದು ಭಾವನೆಗೂ ಒಂದೊಂದು ಹೆಸರು ಕೊಡ್ತೀರಾʼʼ ಎಂದು ನೋವು ತೋಡಿಕೊಂಡರು. ʻʻಹತ್ತು ಜನರು ಹೀಗೆಲ್ಲಾ ಹೇಳಿದ್ರೂ, ಕೋಟ್ಯಂತರ ಮಂದಿ ಹರಸುವವರು ಇದ್ದಾರೆ. ಅವರ ಹೊಟ್ಟೆ ತಣ್ಣಗಾಗಿರಲಿʼʼ ಎಂದಿದ್ದಾರೆ.

Continue Reading
Advertisement
ASI who was injured in a road accident died in kunigal
ಕರ್ನಾಟಕ7 mins ago

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

IPL 2024
ಕ್ರಿಕೆಟ್17 mins ago

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

Prajwal Revanna Case KR Nagar victim kidnapping case Satish sent to judicial custody
ಕ್ರೈಂ19 mins ago

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Pay attention to childrens safety during holidays Minister Lakshmi Hebbalkar appeals to parents
ಬೆಳಗಾವಿ25 mins ago

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

Four Digit PIN
ತಂತ್ರಜ್ಞಾನ37 mins ago

Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

Nitish Kumar Reddy
Latest39 mins ago

Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

Medicine Price
ದೇಶ47 mins ago

Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

Belagavi News Masked man stabs TC and four others for asking them to show tickets on train
ಕ್ರೈಂ50 mins ago

Belagavi News: ರೈಲಲ್ಲಿ ಟಿಕೆಟ್‌ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ನಾಲ್ವರಿಗೆ ಚಾಕು ಇರಿದ ಮುಸುಕುಧಾರಿ; ಒಬ್ಬ ಸಾವು, ನಾಲ್ವರು ಗಂಭೀರ

Skin Care Tips in Kannada
ಆರೋಗ್ಯ1 hour ago

Skin Care Tips in Kannada: ಈ ಕಾರಣಕ್ಕಾಗಿ ನೀವು ಸನ್‌ಸ್ಕ್ರೀನ್‌ ಹಚ್ಚಿಕೊಳ್ಳಲೇಬೇಕು!

Car Care tips
ಪ್ರಮುಖ ಸುದ್ದಿ1 hour ago

Car Care Tips : ನಿಮ್ಮ ಕಾರಿನ ಈ ಬಿಡಿಭಾಗಗಳಿಗೂ ಇವೆ ಎಕ್ಸ್​ಪೈರಿ ಡೇಟ್​​; ಅವುಗಳು ಯಾವವು ಎಂಬುದು ತಿಳಿದಿರಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ6 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು10 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌