ರಾಮ ಮಂದಿರವು 'ಭರತವರ್ಷ ಪುನರ್ ನಿರ್ಮಾಣ'ದ ಆರಂಭ; ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ - Vistara News

ದೇಶ

ರಾಮ ಮಂದಿರವು ‘ಭರತವರ್ಷ ಪುನರ್ ನಿರ್ಮಾಣ’ದ ಆರಂಭ; ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

Ram Mandir: ಜ.22, ಸೋಮವಾರ ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಪ್ರಾಣ ಪ್ರತಿಷ್ಠಾಪನೆಯ ಮುಖ್ಯ ಯಜಮಾನರಾಗಿದ್ದಾರೆ.

VISTARANEWS.COM


on

construction of Ram Mandir beginning of Bharatvarsha Reconstruction Says RSS chief Mohan Bhagwat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಅಯೋಧ್ಯೆಯ (Ayodhya Ram Mandir) ಜನ್ಮಸ್ಥಳದಲ್ಲಿ ರಾಮ್ ಲಲ್ಲಾನ (Ram Lalla) ಪ್ರವೇಶ ಮತ್ತು ದೇವಾಲಯದ ಪ್ರಾಣ ಪ್ರತಿಷ್ಠಾ (Pran Pratishtha Event) ಸಮಾರಂಭವು “ಭರತವರ್ಷದ ಪುನರ್ ನಿರ್ಮಾಣ’ದ ಅಭಿಯಾನದ ಆರಂಭವಾಗಿದೆ(Bharatvarsh). ಇದು ಎಲ್ಲರ ಸಾಮರಸ್ಯ, ಏಕತೆ, ಪ್ರಗತಿ, ಶಾಂತಿ ಮತ್ತು ಯೋಗಕ್ಷೇಮವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ (RSS Chief Mohan Bhagwat) ಅವರು ಹೇಳಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ಲೇಖನದಲ್ಲಿ ಅನೇಕ ಸಂಗತಿಗಳ ಕುರಿತು ಮೋಹನ್ ಭಾಗವತ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ “ಹಿಂದೂ ಸಮಾಜದ ನಿರಂತರ ಹೋರಾಟ” ವನ್ನು ಉಲ್ಲೇಖಿಸಿದ್ದಾರೆ ಮತ್ತು ವಿವಾದದ ಸಂಬಂಧದ ಉಂಟಾದ “ಘರ್ಷಣೆ ಮತ್ತು ಕಹಿ” ಇನ್ನು ಅಂತ್ಯಯಾಗಬೇಕು ಎಂದು ಅವರು ಹೇಳಿದ್ದಾರೆ.

ಹಲವು ವರ್ಷಗಳ ಕಾನೂನು ಹೋರಾಟದ ನಂತರ ಸುಪ್ರೀಂ ಕೋರ್ಟ್, 2019ರ ನವೆಂಬರ್ 9 ರಂದು “ಸತ್ಯ ಮತ್ತು ಸಂಗತಿಗಳನ್ನು” ಪರಿಶೀಲಿಸಿದ ನಂತರ ಮತ್ತು ಪ್ರಕರಣದ ಎಲ್ಲಾ ಪಕ್ಷಗಳ ವಾದಗಳನ್ನು ಆಲಿಸಿ, ಸಮತೋಲಿತ ತೀರ್ಪನ್ನು ಪ್ರಕಟಿಸಿತು ಎಂದು ಮೋಹನ್ ಭಾಗವತ್ ಅವರು ಹೇಳಿದ್ದಾರೆ.

ಧರ್ಮದ ದೃಷ್ಟಿಯಿಂದ ನೋಡುವುದಾದರೆ ಭಾರತೀಯ ಬಹುತೇಕ ಸಮಾಜಗಳಲ್ಲಿ ರಾಮ ಆರಾಧಿಸುವ ದೈವವಾಗಿದ್ದಾರೆ. ಈಗಲೂ ಅವರನ್ನು ಇಡೀ ಸಮಾಜವು ಆದರ್ಶ ಎಂದು ಒಪ್ಪಿಕೊಳ್ಳುತ್ತದೆ. ಆದ್ದರಿಂದ ಈಗ ವಿವಾದದ ಪರ ಮತ್ತು ವಿರುದ್ಧವಾಗಿ ಉದ್ಭವಿಸಿರುವ ಸಂಘರ್ಷವನ್ನು ಕೊನೆಗೊಳಿಸಬೇಕು. ಈ ನಡುವೆ ಎದ್ದಿರುವ ಕಹಿಯೂ ಕೊನೆಯಾಗಬೇಕು. ಸಮಾಜದ ಪ್ರಜ್ಞಾವಂತರು ವಿವಾದ ಸಂಪೂರ್ಣವಾಗಿ ಅಂತ್ಯಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿದ್ದಾರೆ.

ಅಯೋಧ್ಯೆ ಎಂದರೆ ಯುದ್ಧ ಇಲ್ಲದ ನಗರ; ಸಂಘರ್ಷ ಮುಕ್ತ ಸ್ಥಳ. ಈ ಸಂದರ್ಭದಲ್ಲಿ, ಇಡೀ ದೇಶದಲ್ಲಿ, ಅಯೋಧ್ಯೆಯ ಪುನರ್ನಿರ್ಮಾಣವು ಈ ಸಮಯದ ಅಗತ್ಯವಾಗಿದೆ ಮತ್ತು ನಮ್ಮೆಲ್ಲರ ಕರ್ತವ್ಯವಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಸಂದರ್ಭವು ರಾಷ್ಟ್ರೀಯ ಹೆಮ್ಮೆಯ ಪುನರುತ್ಥಾನವನ್ನು ಸೂಚಿಸುತ್ತದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Ram Mandir: ನಾಳೆ ಭಾರತೀಯರಿಗೆ ಸುದಿನ; ಈಡೇರಲಿದೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಕ್ಷಣ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯವಾಗಿ ಸೋಲನುಭವಿಸಿದರೂ ತಾನು ಮಾತ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಇಂದು ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನಾವು ಪಶ್ಚಿಮ ಬಂಗಾಳದಲ್ಲಿ ಸೋತಿಲ್ಲ. ನಿಷ್ಪಕ್ಷಪಾತವಾಗಿ ಚುನಾವಣೆ ನಡೆದಿಲ್ಲ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೆ. ಆದರೆ ಈಗ ರಾಜಭವನಕ್ಕೆ ಹೋಗುವ ಮಾತೇ ಇಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಇವಿಎಂಗಳ ಲೂಟಿ ಮಾಡಲಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಸೇರಿಕೊಂಡಿದೆ. ಆದರೆ ನೈತಿಕವಾಗಿ ನಾವು ಗೆಲುವನ್ನು ಸಾಧಿಸಿದ್ದೇವೆ ಎಂದಿದ್ದಾರೆ.

Continue Reading

Latest

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ 206 ಸೀಟುಗಳನ್ನು ಗೆದ್ದಿದೆ. ಮೂರನೇ ಎರಡರಷ್ಟು ಬಹುಮತ ಪಕ್ಷಕ್ಕೆ ಸಿಕ್ಕಿದೆ. ಮಮತಾ ಬ್ಯಾನರ್ಜಿ ತನ್ನ ತವರು ಕ್ಷೇತ್ರ ಭವಾನಿಪುರದಲ್ಲೇ ಸೋತಿದ್ದಾರೆ. ಮಮತಾ ಬ್ಯಾನರ್ಜಿಯನ್ನೇ ಸೋಲಿಸಿ ಬಿಜೆಪಿಯ ಸುವೇಂದು ಅಧಿಕಾರಿ, ರಣಧೀರ ಅನ್ನಿಸಿಕೊಂಡಿದ್ದಾರೆ. ನಂದಿಗ್ರಾಮದಲ್ಲೂ ಸುವೇಂದು ಅಧಿಕಾರಿ ಜಯಭೇರಿ ಬಾರಿಸಿದ್ದಾರೆ. ಹಾಗಾದರೆ, ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾ?. ಬಿಜೆಪಿಯ ಯಾವತ್ತಿಗೂ ಅಚ್ಚರಿಯ ನಿರ್ಧಾರ ಪ್ರಕಟಿಸುವಲ್ಲಿ ಎತ್ತಿದ ಕೈ. ಹಾಗಾಗಿ, ಪಶ್ಚಿಮ ಬಂಗಾಳದ ಸಿಎಂ ಯಾರಾಗಬಹುದು? ರೇಸ್‌ನಲ್ಲಿ ಇರೋರು ಯಾರು?
1. ಸುವೇಂದು ಅಧಿಕಾರಿ:
ಸದ್ಯ ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ. ಒಂದು ಕಾಲದಲ್ಲಿ ಟಿಎಂಸಿಯಲ್ಲಿದ್ದಾಗ ಮಮತಾ ಬ್ಯಾನರ್ಜಿ ಪರಮಾಪ್ತ. ಬಿಜೆಪಿಗೆ ಬಂದ ನಂತರ ದೀದಿಯ ಪ್ರಥಮ ಎದುರಾಳಿ. ದೀದಿಯನ್ನು ಅವರ ಭದ್ರಕೋಟೆ ಭವಾನಿಪುರದಲ್ಲೇ ಸೋಲಿಸಿದ ಖ್ಯಾತಿ. ನಂದಿಗ್ರಾಮವನ್ನೂ ಸಹ ಗೆದ್ದಿದ್ದಾರೆ. ಬಿಜೆಪಿಯ ಚುನಾವಣಾ ಯಂತ್ರ ಮುನ್ನಡೆಸಿದ ನೇತಾರ. ಮಮತಾಗೆ ತಕ್ಕ ಟಕ್ಕರ್‌ ಕೊಡಬಲ್ಲ ಬಿಜೆಪಿಯ ಫೈರ್‌ಬ್ರಾಂಡ್‌ ನಾಯಕ. ಸದ್ಯ ರೇಸ್‌ನಲ್ಲಿ ಮುಂಚೂಣಿಯಲ್ಲಿರುವುದು ಸುವೇಂದು ಅಧಿಕಾರಿ.
2. ಶಮಿಕ್‌ ಭಟ್ಟಾಚಾರ್ಯ:
ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ. ಬಿಜೆಪಿಯನ್ನು ತಳಮಟ್ಟದಲ್ಲಿ ಸಂಘಟಿಸಿದ ಲೀಡರ್‌. ಬೂತ್‌ ಮ್ಯಾನೇಜ್ಮೆಂಟ್‌, ಚುನಾವಣಾ ರಣತಂತ್ರ, ಕಾರ್ಯಕರ್ತರ ನಾಡಿ ಮಿಡಿತ ಅರಿಯಬಲ್ಲ ನಾಯಕ. ಗುಪ್ತಗಾಮಿನಿಯಾಗಿ ಬಿಜೆಪಿಯ ಪ್ರಚಾರ ತಂತ್ರ ನಿರ್ವಹಿಸಿದ್ದರು.
3. ದಿಲೀಪ್‌ ಘೋಷ್‌:
2019ರಿಂದ ಬಂಗಾಳದಲ್ಲಿ ಬಿಜೆಪಿಯನ್ನು ಸಂಘಟಿಸಿದ್ದವರು ದಿಲೀಪ್‌ ಘೋಷ್‌. ಬಿಜೆಪಿ ಬಂಗಾಳದಲ್ಲಿ ಮೂರು ಸ್ಥಾನಗಳಿಂದ 206 ಸ್ಥಾನಗಳಿಗೇರುವಲ್ಲಿ ದಿಲೀಪ್‌ ಘೋಷ್‌ ಪಾತ್ರ ದೊಡ್ಡದು. ಕಾರ್ಯಕರ್ತರಿಗೆ ಕನೆಕ್ಟ್‌ ಆಗುವ ಅನುಭವಿ ನಾಯಕ.
4. ರೂಪಾ ಗಂಗೂಲಿ:
ಮಹಾಭಾರತ ಧಾರಾವಾಹಿಯ “ದ್ರೌಪದಿ” ಪಾತ್ರಧಾರಿಯೇ ರೂಪಾ ಗಂಗೂಲಿ. ಕಿರುತೆರೆ ಧಾರಾವಾಹಿ ಕಾರಣದಿಂದ ಜನಮನದಲ್ಲಿರುವ ನಾಯಕಿ. ಮಮತಾಗೆ ಪರ್ಯಾಯವಾಗಿ ಮಹಿಳಾ ನಾಯಕಿಯನ್ನೇ ಬೆಳೆಸಬೇಕು ಎಂಬ ರಣತಂತ್ರ ಬಿಜೆಪಿಯಲ್ಲಿದ್ದರೆ, ರೂಪಾ ಗಂಗೂಲಿ ಹೆಸರು ಪ್ರಸ್ತಾಪವಾದರೆ ಅಚ್ಚರಿಯಿಲ್ಲ.
5. ಅಗ್ನಿಮಿತ್ರಾ ಪೌಲ್‌:
ಬಿಜೆಪಿಯ ಹೊಸ ತಲೆಮಾರಿನ ಫೈರ್‌ ಬ್ರಾಂಡ್‌ ನಾಯಕಿ. ಮಹಿಳಾ ವಿಷಯಗಳ ಬಗ್ಗೆ ಖಡಕ್‌ ಧ್ವನಿ ಎತ್ತುವ ಅಗ್ನಿಮಿತ್ರಾ, ಮಾಧ್ಯಮಗಳಲ್ಲಿ ಬಿಜೆಪಿ ಇಮೇಜ್‌ ಬೆಳೆಸುವಲ್ಲಿ ದೊಡ್ಡ ಹೆಸರು. ಮಹಿಳಾ ನಾಯಕಿ ಎಂಬ ಕೆಟಗರಿಯಲ್ಲಿ ಅಗ್ನಿಮಿತ್ರಾ ಪೌಲ್‌ ಸ್ಪರ್ಧೆಯಲ್ಲಿದ್ದಾರಂತೆ.

Continue Reading

Latest

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

VISTARANEWS.COM


on

ವಿಜಯ್‌ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ. ಇದು ನಿಚ್ಚಳವಾಗುತ್ತಿದೆ. ಸರ್ಕಾರ ರಚನೆಗೆ ಈಗಾಗಲೇ ಟಿವಿಕೆ ಹಕ್ಕು ಮಂಡಿಸಿದೆ. ಎರಡು ವಾರಗಳಲ್ಲಿ ಬಹುಮತ ಸಾಬೀತು ಪಡಿಸುವುದಾಗಿಯೂ ಹೇಳಿದೆ. 234 ಸದಸ್ಯ ಬಲದ ತಮಿಳುನಾಡಿನ ಅಸೆಂಬ್ಲಿಯಲ್ಲಿ ಟಿವಿಕೆಗೆ ಸಿಕ್ಕಿದ್ದು 108 ಕ್ಷೇತ್ರ ಮಾತ್ರ. ಸರಳ ಬಹುಮತದ ನಂಬರ್‌ 118 ತಲುಪಲು ವಿಜಯ್‌ಗೆ ಇನ್ನೂ 10 ಶಾಸಕರು ಬೇಕು. ಬಹುಮತ ಸಾಬೀತು ಪಡಿಸುವುದಷ್ಟೇ ಅಲ್ಲ, ಭವಿಷ್ಯದಲ್ಲಿ ಸರ್ಕಾರವೂ ಸುಭದ್ರವಾಗಿರಬೇಕು. ಈ ನಿಟ್ಟಿನಲ್ಲಿ ನಟ ವಿಜಯ್‌ ಮುಂದಿರುವ ಆಯ್ಕೆಗಳೇನು?
1. ತಮಿಳುನಾಡಿನ ಸಣ್ಣ ಪಕ್ಷಗಳೊಂದಿಗೆ ಮೈತ್ರಿ:
ಹತ್ತು ಶಾಸಕರಿಗಾಗಿ ವಿಜಯ್‌ ತಮಿಳುನಾಡಿನ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಕಾಂಗ್ರೆಸ್‌ 5, ಪಿಎಂಕೆ 4, ಮುಸ್ಲಿಂ ಲೀಗ್‌ 2, ಸಿಪಿಐ 2, ವಿಸಿಕೆ 2, ಸಿಪಿಐಎಂ 2, ಡಿಎಂಡಿಕೆ 1, AMMKMNKZ 1 ಗೆದ್ದಿವೆ. ಈ ಎಲ್ಲಾ ಸಣ್ಣ ಪಕ್ಷಗಳನ್ನು ಸೇರಿಸಿದರೆ, ವಿಜಯ್‌ಗೆ 19 ಶಾಸಕರ ಬೆಂಬಲ ಸಿಗಲಿದೆ. ಕಾಂಗ್ರೆಸ್‌ ಈಗಾಗಲೇ ಟಿವಿಕೆಗೆ ಬೆಂಬಲದ ಮಾತುಗಳನ್ನಾಡಿದೆ.
೨. ಎಐಎಡಿಎಂಕೆ ಜೊತೆ ಮೈತ್ರಿ:
ಎಐಎಡಿಎಂಕೆ ಜೊತೆ ಟಿವಿಕೆ ಮೈತ್ರಿಯ ಸಾಧ್ಯತೆಯೂ ಎರಡನೇ ಆಯ್ಕೆ. ಬಿಜೆಪಿ ಹೊರತುಪಡಿಸಿ ಮೈತ್ರಿಗೆ ಟಿವಿಕೆ ಷರತ್ತು ಹಾಕಬಹುದು. ಎಐಎಡಿಎಂಕೆ 47 ಸ್ಥಾನಗಳನ್ನು ಗೆದ್ದಿದೆ. ಟಿವಿಕೆ-ಎಐಎಡಿಎಂಕೆ ಮೈತ್ರಿಯಾದರೆ ಸುಭದ್ರ ಸರ್ಕಾರ ನೀಡಬಹುದು.
೩. ಡಿಎಂಕೆ ಬಾಹ್ಯ ಬೆಂಬಲ ಸಾಧ್ಯತೆ
ಸಣ್ಣ ಪಕ್ಷಗಳೂ ಸಿಗಲಿಲ್ಲ. ಎಐಎಡಿಎಂಕೆ ಜೊತೆ ಮೈತ್ರಿ ಕುದುರಲಿಲ್ಲ ಎಂದಾದರೆ, ಡಿಎಂಕೆ ಬಾಹ್ಯ ಬೆಂಬಲ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಎಐಎಡಿಎಂಕೆಯನ್ನು ಅಧಿಕಾರದಿಂದ ದೂರ ಇಡಲು, ಡಿಎಂಕೆ ಈ ನಿರ್ಧಾರಕ್ಕೆ ಬಂದರೂ ಬರಬಹುದು ಎನ್ನಲಾಗುತ್ತಿದೆ. ಆದರೆ, ಡಿಎಂಕೆ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ ಎಂದು ಈಗಾಗಲೇ ಸ್ಟಾಲಿನ್‌ ಹೇಳಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

VISTARANEWS.COM


on

ಪಂಚರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಗೆ ಬೀರಿದೆ. ತಮಿಳುನಾಡಿನಲ್ಲಿ ಟಿವಿಕೆ ಅಚ್ಚರಿ ಮೂಡಿಸಿದ್ದು, ಅಧಿಕಾರದ ಸನಿಹದಲ್ಲಿದೆ. ಕೇರಳಂ ಸೋಲಿನೊಂದಿಗೆ ಭಾರತದಲ್ಲಿ ಎಡರಂಗದ ಅಧಿಕಾರ ಕೊನೆಗೊಂಡಿದೆ. ಮಲೆಯಾಳಿಗಳ ರಾಜ್ಯದಲ್ಲಿ ಹತ್ತು ವರ್ಷಗಳ ಬಳಿಕ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಅಧಿಕಾರಕ್ಕೆ ಬಂದಿದೆ.
ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಮಮತಾ ಆಡಳಿತವನ್ನು ಬಿಜೆಪಿ ಕೊನೆಗಾಣಿಸಿದೆ. ಪಶ್ಚಿಮ ಬಂಗಾಳ ಗೆಲುವಿಗಾಗಿ ಹಠವಿಡಿದ ಬಿಜೆಪಿ ಕೊನೆಗೂ ಯಶ ಸಾಧಿಸಿದೆ. 294 ಸದಸ್ಯ ಬಲದ ಪಶ್ಚಿಮ ಬಂಗಾಳ ಅಸೆಂಬ್ಲಿಯಲ್ಲಿ, ಬಿಜೆಪಿ ಮೂರನೇ ಎರಡು ಭಾಗದಷ್ಟು ಸೀಟುಗಳನ್ನು ಗೆದ್ದಿದೆ. ಕಾಂಗ್ರೆಸ್‌, ಎಡರಂಗ ತಲಾ ಎರಡು ಸೀಟುಗಳಿಗೆ ತೃಪ್ತಿಪಡಬೇಕಾಗಿದೆ. ಇದು ಬಿಜೆಪಿಯ ಅತಿದೊಡ್ಡ ಗೆಲುವಾಗಿದೆ.
ನಟ ವಿಜಯ್‌ ಸುನಾಮಿಗೆ ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಕೊಚ್ಚಿ ಹೋಗಿದೆ. ಸ್ಟಾಲಿನ್‌, ಉದಯನಿಧಿ ಸ್ಟಾಲಿನ್‌ ಸೇರಿದಂತೆ ಘಟಾನುಘಟಿ ನಾಯಕರು ನೆಲಕಚ್ಚಿದ್ದಾರೆ. ನಟ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಚುನಾವಣೆಯಲ್ಲೇ ಅಧಿಕಾರಕ್ಕೆ ಹತ್ತಿರದಲ್ಲಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ 108 ಕ್ಷೇತ್ರಗಳನ್ನು ಗೆದ್ದಿದೆ. ಡಿಎಂಕೆ 79 ಮತ್ತು ಎಐಎಡಿಎಂಕೆ 54 ಕಡೆ ಗೆಲುವು ದಾಖಲಿಸಿವೆ. ದ್ರಾವಿಡ ನಾಡಲ್ಲಿ ನಟ ವಿಜಯ್‌ ಇತಿಹಾಸ ಸೃಷ್ಟಿಸಿದ್ದಾರೆ.
ಇನ್ನು ಕೇರಳಂನಲ್ಲಿ ಆಡಳಿತ ವಿರೋಧಿ ಅಲೆಗೆ ಆಡಳಿತಾರೂಢ ಲೆಫ್ಟ್‌ ಡೆಮಾಕ್ರಾಟಿಕ್‌ ಫ್ರಂಟ್‌ ನೆಲಕಚ್ಚಿದೆ. ಕೇರಳಂ ಫಲಿತಾಂಶ ಮಾತ್ರ ಕಾಂಗ್ರೆಸ್‌ ಖುಷಿಗೆ ಕಾರಣವಾಗಿದೆ. 140 ಸದಸ್ಯ ಬಲದ ವಿಧಾನಸಭೆಯಲ್ಲಿ ಯುಡಿಎಫ್‌ 100 ಕ್ಷೇತ್ರಗಳನ್ನು ಗೆದ್ದಿದೆ. ಎಲ್‌ಡಿಎಫ್‌ 35ಕ್ಕೆ ಸ್ಥಾನಗಳಿಗೆ ಸೀಮಿತವಾಗಿದೆ. ಇದರೊಂದಿಗೆ ದೇಶದಲ್ಲಿ ಎಡರಂಗದ ಆಡಳಿತ ಅಂತ್ಯವಾಗಿದೆ.
ಅಸ್ಸಾಂನಲ್ಲಿ ಬಿಜೆಪಿ ಗೆಲುವಿನ ಹ್ಯಾಟ್ರಿಕ್‌ ಬಾರಿಸಿದೆ. ಹಿಮಂತ ಬಿಸ್ವ ಶರ್ಮಾ ನಾಯಕತ್ವದ ಮುಂದೆ ಗೌರವ್‌ ಗೊಗೊಯಿ ನೇತೃತ್ವದ ಕಾಂಗ್ರೆಸ್‌ ಹೀನಾಯವಾಗಿ ಸೋತಿದೆ. 126 ಸದಸ್ಯ ಬಲದ ಅಸ್ಸಾಂ ಅಸೆಂಬ್ಲಿಯಲ್ಲಿ ಬಿಜೆಪಿ 102 ಸ್ಥಾನಗಳಲ್ಲಿ ಜಯಭೇರಿ ದಾಖಲಿಸಿದೆ. ಕಾಂಗ್ರೆಸ್‌ 21 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಇನ್ನು ಪುದುಚೇರಿಯಲ್ಲಿ ಎನ್‌ಡಿಎ ಅಧಿಕಾರ ಉಳಿಸಿಕೊಂಡಿದೆ. 30 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಎನ್‌ಡಿಎ 18 ಸ್ಥಾನಗಳನ್ನು ಗೆದ್ದಿದೆ. ಡಿಎಂಕೆ ಮೈತ್ರಿಕೂಟ 7 ಹಾಗೂ ಟಿವಿಕೆಯ ಮೂವರು ಗೆಲುವಿನ ನಗೆ ಬೀರಿದ್ದಾರೆ.

Continue Reading
Advertisement
Latest45 minutes ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest4 hours ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest4 hours ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest1 day ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest1 day ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest1 day ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest1 day ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest1 day ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

Rakshit Shetty Richard Anthony Produce By Hombale
ಅವಿಭಾಗೀಕೃತ1 day ago

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

Latest2 days ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌