Ram Mandir : ತಮಿಳುನಾಡು ಸ್ಟಾಲಿನ ಸರ್ಕಾರ ಹಿಂದೂ ವಿರೋಧಿ ನಡೆಗೆ ಮದ್ರಾಸ್ ಹೈಕೋರ್ಟ್​ ಚಾಟಿ - Vistara News

ದೇಶ

Ram Mandir : ತಮಿಳುನಾಡು ಸ್ಟಾಲಿನ ಸರ್ಕಾರ ಹಿಂದೂ ವಿರೋಧಿ ನಡೆಗೆ ಮದ್ರಾಸ್ ಹೈಕೋರ್ಟ್​ ಚಾಟಿ

Ram Mandir :ಖಾಸಗಿ ದೇವಾಲಯಗಳು ಮತ್ತು ಸಭಾಂಗಣಗಳಲ್ಲಿ ಅಯೋಧ್ಯೆ ರಾಮ ಮಂದಿರ ಕಾರ್ಯಕ್ರಮವನ್ನು ಪ್ರಸಾರ ಮಾಡಲು ಯಾವುದೇ ಪೊಲೀಸ್ ಅನುಮತಿ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್​​ ತೀರ್ಪು ನೀಡಿದೆ.

VISTARANEWS.COM


on

Madras hIghcourt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಸ್ತಾರ ನ್ಯೂಸ್​ ಬೆಂಗಳೂರು: ರಾಮ ಮಂದಿರ (Ram Mandir) ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ನೇರ ಪ್ರಸಾರ ಹಾಗೂ ಸ್ಥಳೀಯವಾಗಿ ರಾಮ ದೇವರ ಪೂಜೆಯನ್ನು ತಡೆಯಲು ಯತ್ನಿಸಿದ್ದ ತಮಿಳುನಾಡು ಡಿಎಂಕೆ ಸರ್ಕಾರದ ವಿರುದ್ಧ ಮದ್ರಾಸ್​ ಹೈಕೋರ್ಟ್​ ಚಾಟಿ ಬೀಸಿದೆ. ಸ್ಟಾಲಿನ್​ ನೇತೃತ್ವದ ಸರ್ಕಾರಕ್ಕೆ ರಾಮ ಭಕ್ತಿಯನ್ನು ತಡೆಯುವ ಯಾವುದೇ ಅಧಿಕಾರ ಇಲ್ಲ ಎಂದು ಹೇಳಿದೆ.

ತಮಿಳುನಾಡು ಸರ್ಕಾರ ಲೈವ್ ಪ್ರಸಾರ ಹಾಗೂ ಸಾರ್ವಜನಿಕವಾಗಿ ರಾಮದೇವರ ಪೂಜೆಯನ್ನು ಮಾಡುವುದಕ್ಕೆ ತಡೆಯಲು ಯತ್ನಿಸಿತ್ತು. ಪೊಲೀಸರಿಗೆ ಮೌಖಿಕ ಆದೇಶ ನೀಡುವ ಮೂಲಕ ಜನರಿಗೆ ಬೆದರಿಕೆ ಹಾಕುವ ಕೆಲಸ ಮಾಡಿತ್ತು. ಈ ಬಗ್ಗೆ ರಾಮ ಭಕ್ತರು ಸುಪ್ರೀಂ ಕೋರ್ಟ್ ಹಾಗೂ ಮದ್ರಾಸ್ ಹೈಕೋರ್ಟ್​ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್​ ಈ ಕುರಿತು ಸರ್ಕಾರಕ್ಕೆ ನೋಟಿಸ್​ ನೀಡಿದ್ದರೆ, ಮದ್ರಾಸ್ ಹೈಕೋರ್ಟ್​ ಮಾತಿನೇಟುಕೊಟ್ಟಿದೆ.

ಖಾಸಗಿ ದೇವಾಲಯಗಳು ಮತ್ತು ಸಭಾಂಗಣಗಳಲ್ಲಿ ಅಯೋಧ್ಯೆ ರಾಮ ಮಂದಿರ ಕಾರ್ಯಕ್ರಮವನ್ನು ಪ್ರಸಾರ ಮಾಡಲು ಯಾವುದೇ ಪೊಲೀಸ್ ಅನುಮತಿ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್​​ ತೀರ್ಪು ನೀಡಿದೆ. ತಮಿಳುನಾಡಿನ ಖಾಸಗಿ ಸಭಾಂಗಣಗಳಲ್ಲಿ ಅನ್ನದಾನ ಮತ್ತು ಭಜನೆಗಳನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗಾಗಿ ಮದ್ರಾಸ್ ಹೈಕೋರ್ಟ್​​ನ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ವಿಶೇಷ ಅಧಿವೇಶನ ನಡೆಸಿದ ನಂತರ ಈ ತೀರ್ಪು ಬಂದಿದೆ.

ಖಾಸಗಿ ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಪ್ರಸಾರ ಮಾಡಲು ಯಾವುದೇ ಪೊಲೀಸ್ ಅನುಮತಿ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್​​ ಹೇಳಿದೆ. ಎಚ್ಆರ್ ಮತ್ತು ಸಿಇ ಇಲಾಖೆಯಡಿ ಬರುವ ದೇವಾಲಯಗಳಿಗೆ, ಕಾರ್ಯನಿರ್ವಾಹಕ ಅಧಿಕಾರಿಗೆ ಮುಂಚಿತವಾಗಿ ಮಾಹಿತಿ ನೀಡಿದರೆ ಸಾಕು ಎಂದು ಕೋರ್ಟ್​ ಹೇಳಿದೆ.

ಅಂತಿಮವಾಗಿ ಸಂಬಂಧಪಟ್ಟ ಪ್ರತಿಯೊಬ್ಬರೂ ದೇವರ ಕಡೆಗೆ ಭಕ್ತಿ ಶಾಂತಿ ಮತ್ತು ಸಂತೋಷಕ್ಕಾಗಿ ಮಾತ್ರ ಮತ್ತು ಸಮಾಜದಲ್ಲಿ ಚಾಲ್ತಿಯಲ್ಲಿರುವ ಸಮತೋಲನವನ್ನು ಭಂಗಗೊಳಿಸಲು ಅಲ್ಲ ಎಂಬುದನ್ನು ನೆನಪಿನಲ್ಲಿಡಬೇಕು ಎಂದು ನ್ಯಾಯಮೂರ್ತಿ ವೆಂಕಟೇಶ್ ಹೇಳಿದರು.

ಇದನ್ನೂ ಓದಿ : Ram Mandir : ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ ವಿಸ್ತಾರ ನ್ಯೂಸ್​ ಲೈವ್ ಕವರೇಜ್​ ಇಲ್ಲಿ ನೋಡಿ

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನೇತೃತ್ವದ ತಮಿಳುನಾಡು ಸರ್ಕಾರವು 2024 ರ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರ ಕಾರ್ಯಕ್ರಮಗಳ ನೇರ ಪ್ರಸಾರವನ್ನು ನಿಷೇಧಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ಮತ್ತು ಬಿಜೆಪಿ ನಾಯಕಿ ನಿರ್ಮಲಾ ಸೀತಾರಾಮನ್ ಭಾನುವಾರ (ಜನವರಿ 21) ಆರೋಪಿಸಿದ್ದರು.

ತಮಿಳುನಾಡಿನಲ್ಲಿ 200 ಕ್ಕೂ ಹೆಚ್ಚು ರಾಮನ ದೇವಾಲಯಗಳಿವೆ ಎಂದು ಅವರು ಗಮನಸೆಳೆದರು. ಆದಾಗ್ಯೂ, ಎಚ್ಆರ್ಸಿಇ ಕಾಯ್ದೆ ನಿರ್ವಹಿಸುವ ದೇವಾಲಯಗಳಲ್ಲಿ ರಾಮನ ಹೆಸರಿನಲ್ಲಿ ಯಾವುದೇ ಪೂಜೆ. ಭಜನೆ , ಪ್ರಸಾದ. ಅನ್ನದಾನಕ್ಕೆ ಅಡಚಣೆ ಮಾಡಲಾಗಿದೆ ಎಂದು ಎಕ್ಸ್​ನಲ್ಲಿ ಅವರು ಪೋಸ್ಟ್​ ಮಾಡಿದ್ದರು.

ನಿರ್ಮಲಾ ಆರೋಪವೇನಾಗಿತ್ತು?

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾ (Ram Mandir) ಸಮಾರಂಭದ ನೇರ ಪ್ರಸಾರವನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ ರಾಮ ಮಂದಿರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರಕ್ಕೆ ನಿಷೇಧ ಆದೇಶ ಹೊರಡಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ. ನಿರ್ಮಲಾ ಸೀತಾರಾಮನ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ತಮಿಳುನಾಡಿನಲ್ಲಿ ಶ್ರೀ ರಾಮನ 200ಕ್ಕೂ ಹೆಚ್ಚು ದೇವಾಲಯಗಳಿವೆ. ಸರ್ಕಾರದಿಂದ ನಿರ್ವಹಿಸುವ ದೇವಾಲಯಗಳಿಗೆ ಜನವರಿ 22ರಂದು ಶ್ರೀ ರಾಮನ ಹೆಸರಿನಲ್ಲಿ ವಿಶೇಷ ಪೂಜೆ , ಭಜನೆ, ಪ್ರಸಾದ, ಅನ್ನದಾನದಿಂದ ಮಾಡದದಂತೆ ಸರ್ಕಾರ ಸೂಚಿಸಿದೆ ಎಂದು ಸೀತಾರಾಮನ್ ಆರೋಪ ಮಾಡಿದ್ದಾರೆ. “ಖಾಸಗಿ ಒಡೆತನದ ದೇವಾಲಯಗಳನ್ನು ಕಾರ್ಯಕ್ರಮಗಳನ್ನು ಆಯೋಜಿಸದಂತೆ ಪೊಲೀಸರು ತಡೆಯುತ್ತಿದ್ದಾರೆ. ಅವರು ಪೆಂಡಾಲ್ ಗಳನ್ನು ಹರಿದುಹಾಕುವುದಾಗಿ ಸಂಘಟಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೂ ವಿರೋಧಿ, ದ್ವೇಷಪೂರಿತ ಕ್ರಮವನ್ನು ಬಲವಾಗಿ ಖಂಡಿಸುತ್ತೇನೆ ಎಂದು ನಿರ್ಮಲಾ ಅವರು ಹೇಳಿಕೊಂಡಿದ್ದಾರೆ .

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

Election Commission :ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ. ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಹಾಲಿ ಸದಸ್ಯರ ಮರಣ ಅಥವಾ ರಾಜೀನಾಮೆಯಿಂದ ಉಂಟಾಗಿರುವ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

VISTARANEWS.COM


on

Election Commission
Koo

ಬೆಂಗಳೂರು: ಜುಲೈ 10, 2024 ರಂದು ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಭಾರತದ ಚುನಾವಣಾ ಆಯೋಗ (Election Commission ) ಘೋಷಿಸಿದೆ. ಬಿಹಾರ, ತಮಿಳುನಾಡು ಮತ್ತು ಮಧ್ಯಪ್ರದೇಶದ ತಲಾ ಒಂದು, ಪಶ್ಚಿಮ ಬಂಗಾಳದ ನಾಲ್ಕು ಮತ್ತು ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ತಲಾ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ. ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಹಾಲಿ ಸದಸ್ಯರ ಮರಣ ಅಥವಾ ರಾಜೀನಾಮೆಯಿಂದ ಉಂಟಾಗಿರುವ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ಉಪಚುನಾವಣೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

  • ಅಧಿಸೂಚನೆ ಪ್ರಕಟಣೆ: ಜೂನ್ 14
  • ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 21
  • ನಾಮಪತ್ರ ಪರಿಶೀಲನೆ: ಜೂನ್ 24
  • ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಜೂನ್ 26
  • ಮತದಾನದ ದಿನಾಂಕ: ಜುಲೈ 10
  • ಫಲಿತಾಂಶ: ಜುಲೈ 13

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

ಜುಲೈ 10 ರಂದು ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳ ಪಟ್ಟಿ

ಬಿಹಾರ: ಬಿಮಾ ಭಾರತಿ ರಾಜೀನಾಮೆಯಿಂದ ತೆರವಾಧ ರುಪೌಲಿ ಕ್ಷೇತ್ರ
ಪಶ್ಚಿಮ ಬಂಗಾಳ: ಶ್ರೀ ಕೃಷ್ಣ ಕಲ್ಯಾಣಿ ರಾಜೀನಾಮೆಯಿಂದ ತೆರವಾದ ರಾಯ್​ಗಂಜ್ ಸ್ಥಾನ
ಪಶ್ಚಿಮ ಬಂಗಾಳ: ಮುಕುಟ್​​ ಮಣಿ ಅಧಿಕಾರಿ ರಾಜೀನಾಮೆಯಿಂದ ತೆರವಾದ ರಣಘಾಟ್ ದಕ್ಷಿಣ ಕ್ಷೇತ್ರ
ಪಶ್ಚಿಮ ಬಂಗಾಳ: ಬಿಸ್ವಜಿತ್ ದಾಸ್ ರಾಜೀನಾಮೆಯಿಂದ ಬಾಗ್ಡಾ ಸ್ಥಾನ
ಪಶ್ಚಿಮ ಬಂಗಾಳ: ಸಾಧನ್ ಪಾಂಡೆ ನಿಧನದಿಂದ ತೆರವಾದ ಮಣಿಕ್​ತಾಲ್​ ಕ್ಷೇತ್ರ
ತಮಿಳುನಾಡು: ತಿರು ಎನ್​ ಪುಗಳೆಂದಿ ನಿಧನದಿಂದ ತೆರವಾದ ವಿಕ್ರಾವಂಡಿ ಕ್ಷೇತ್ರ
ಮಧ್ಯಪ್ರದೇಶ: ಕಮಲೇಶ್ ಪ್ರತಾಪ್ ಶಾ ರಾಜೀನಾಮೆಯಿಂದಾಗಿ ಅಮರವಾರಾ ಸ್ಥಾನ
ಉತ್ತರಾಖಂಡ: ರಾಜೇಂದ್ರ ಸಿಂಗ್ ಭಂಡಾರಿ ರಾಜೀನಾಮೆಯಿಂದಾಗಿ ಬದರೀನಾಥ್ ಸ್ಥಾನ
ಉತ್ತರಾಖಂಡ: ಸರ್ವತ್ ಕರೀಂ ಅನ್ಸಾರಿ ಅವರ ನಿಧನದಿಂದಾಗಿ ಮಂಗಳೌರ್ ಕ್ಷೇತ್ರ
ಪಂಜಾಬ್​: ಶೀತಲ್ ಅಂಗುರಾ ಅವರ ರಾಜೀನಾಮೆಯಿಂದ ತೆರವಾದ ಪಂಜಾಬ್ ಜಲಂಧರ್ ಪಶ್ಚಿಮ ಸ್ಥಾನ
ಹಿಮಾಚಲ ಪ್ರದೇಶ: ಹೋಶ್ಯಾರ್ ಸಿಂಗ್ ಅವರ ರಾಜೀನಾಮೆಯಿಂದಾಗಿ ಡೆಹ್ರಾಡೂನ್ ಕ್ಷೇತ್ರ
ಹಿಮಾಚಲ ಪ್ರದೇಶ: ಆಶಿಶ್ ಶರ್ಮಾ ಅವರ ರಾಜೀನಾಮೆಯಿಂದಾಗಿ ತೆರವಾದ ಹಮೀರ್ಪುರ ಸ್ಥಾನ
ಹಿಮಾಚಲ ಪ್ರದೇಶ: ಕೆ.ಎಲ್.ಠಾಕೂರ್ ಅವರ ರಾಜೀನಾಮೆಯಿಂದಾಗಿ ತೆರವಾದ ನಲಘರ್ ಸ್ಥಾನ

ಚುನಾವಣೆಗೆ ನಡೆಯುವ ವಿಧಾನಸಭಾ ಕ್ಷೇತ್ರದ ಸಂಪೂರ್ಣ ಅಥವಾ ಯಾವುದೇ ಭಾಗವನ್ನು ಒಳಗೊಂಡಿರುವ ಜಿಲ್ಲೆಗಳಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಅದು ಹೇಳಿದೆ.

Continue Reading

ಪ್ರಮುಖ ಸುದ್ದಿ

Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

Narendra Modi 3.0: ನಮ್ಮದು ರೈತರ ಕಲ್ಯಾಣಕ್ಕೆ ಬದ್ಧವಾಗಿರುವ ಸರ್ಕಾರ. ಆದ್ದರಿಂದ, ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದ್ದು ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ ವಲಯಕ್ಕಾಗಿ ನಾವು ಇನ್ನೂ ಹೆಚ್ಚು ಕೆಲಸ ಮಾಡಲು ಬಯಸುತ್ತೇವೆ ” ಎಂದು ಕಡತಕ್ಕೆ ಸಹಿ ಹಾಕಿದ ನಂತರ ಪಿಎಂ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi 3.0
Koo

ಬೆಂಗಳೂರು: ಭಾನುವಾರ ಸಂಜೆ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ (Narendra Modi 3.0) ಅವರು ಸೋಮವಾರ ‘ಪಿಎಂ ಕಿಸಾನ್ ನಿಧಿ’ ಬಿಡುಗಡೆಯ ಕಡತಕ್ಕೆ ಸಹಿ ಹಾಕಿದರು. ಇದು ಅವರು ಮೂರನೇ ಅವಧಿಯಲ್ಲಿ ಸಹಿ ಹಾಕಿದ ಮೊದಲ ಫೈಲ್​. ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೆ ಅವರು ಸಹಿ ಹಾಕಿದರು. ಇದು 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂ. ಬಿಡುಗಡೆಯಾಗಲಿದೆ.

ನಮ್ಮದು ರೈತರ ಕಲ್ಯಾಣಕ್ಕೆ ಬದ್ಧವಾಗಿರುವ ಸರ್ಕಾರ. ಆದ್ದರಿಂದ, ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದ್ದು ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ ವಲಯಕ್ಕಾಗಿ ನಾವು ಇನ್ನೂ ಹೆಚ್ಚು ಕೆಲಸ ಮಾಡಲು ಬಯಸುತ್ತೇವೆ ” ಎಂದು ಕಡತಕ್ಕೆ ಸಹಿ ಹಾಕಿದ ನಂತರ ಪಿಎಂ ಮೋದಿ ಹೇಳಿದ್ದಾರೆ.

ಈ ನಿರ್ಧಾರವು ಆಡಳಿತಾರೂಢ ಎನ್​ಡಿಎ ಚುನಾವಣಾ ಗೆಲುವಿನ ನಂತರ ರೈತರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯನ್ನು ಸಾರಿದೆ. ವಿಶೇಷವಾಗಿ ಗ್ರಾಮೀಣ ಭಾರತದಲ್ಲಿ ಕೆಲವು ಹಿನ್ನಡೆಗಳನ್ನು ಎದುರಿಸಿದ್ದ ಕಾರಣ ಈ ಕ್ರಮ ನಿರೀಕ್ಷಿತವಾಗಿದೆ.

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ

72 ಸದಸ್ಯರ ಕೇಂದ್ರ ಸಚಿವ ಸಂಪುಟದ ಮುಖ್ಯಸ್ಥರಾಗಿ ಮೋದಿ ಭಾನುವಾರ ದಾಖಲೆಯ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾನುವಾರ, ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂಪುಟದಲ್ಲಿ ಉನ್ನತ ಸಹೋದ್ಯೋಗಿಗಳಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಎಸ್ ಜೈಶಂಕರ್ ಮತ್ತು ಪಿಯೂಷ್ ಗೋಯಲ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ:8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

ಪ್ರಮುಖ ಮಿತ್ರ ಪಕ್ಷಗಳಾದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾದಳ (ಯುನೈಟೆಡ್) ತಲಾ ಒಂದು ಕ್ಯಾಬಿನೆಟ್ ಸ್ಥಾನ ಪಡೆದುಕೊಂಡಿವೆ.

ಟಿಡಿಪಿ ಮತ್ತು ಜೆಡಿಯು ಹೊರತುಪಡಿಸಿ, ಟಿಡಿಪಿ, , ಜೆಡಿಎಸ್​, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ಲೋಕ ಜನಶಕ್ತಿ ಪಕ್ಷ ಕ್ಯಾಬಿನೆಟ್ ಸ್ಥಾನಗಳನ್ನು ಪಡೆದ ಇತರ ಮಿತ್ರಪಕ್ಷಗಳಾಗಿವೆ.

ಲೋಕ ಜನಶಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಉತ್ತಮ ಪ್ರದರ್ಶನ ನೀಡಿದರು. ಚಿರಾಗ್ ಪಾಸ್ವಾನ್ ಮಾಜಿ ಕ್ಯಾಬಿನೆಟ್ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಮತ್ತು ಎಲ್ಜೆಪಿ ಸಂಸ್ಥಾಪಕ.

Continue Reading

ರಾಜಕೀಯ

8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

ಹೊಸ ಸರ್ಕಾರವು ಶೀಘ್ರದಲ್ಲೇ 8 ನೇ ವೇತನ ಆಯೋಗದ (8th Pay Commission) ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಬಹುದು ಎನ್ನಲಾಗುತ್ತಿದೆಯಾದರೂ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇನ್ನು ಕೆಲವೇ ತಿಂಗಳುಗಳಲ್ಲಿ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ದೊಡ್ಡ ಘೋಷಣೆ ಮಾಡಬಹುದು ಎನ್ನುವ ನಿರೀಕ್ಷೆಯಿದೆ.

VISTARANEWS.COM


on

By

8th Pay Commission
Koo

ನವದೆಹಲಿ: ಪ್ರಧಾನಿ (PM) ನರೇಂದ್ರ ಮೋದಿ (Narendra Modi) ನೇತೃತ್ವದ 3.0 ಸರ್ಕಾರ ರಚನೆಯಾಗಿದ್ದು, ಸಂಪುಟ ಸಚಿವರು (Cabinet Ministers) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಹೊಸದಾಗಿ ರಚನೆಯಾಗಿರುವ ಸರಕಾರದಿಂದ ಈಗ 8ನೇ ವೇತನ ಆಯೋಗ (8th Pay Commission) ರಚನೆ ಸೇರಿದಂತೆ ಹಲವಾರು ನಿರೀಕ್ಷೆಗಳಿವೆ.

ಹೊಸ ಸರ್ಕಾರವು ಶೀಘ್ರದಲ್ಲೇ 8ನೇ ವೇತನ ಆಯೋಗದ ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಬಹುದು ಎನ್ನಲಾಗುತ್ತಿದೆಯಾದರೂ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇನ್ನು ಕೆಲವೇ ತಿಂಗಳುಗಳಲ್ಲಿ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ದೊಡ್ಡ ಘೋಷಣೆ ಮಾಡಬಹುದು ಎನ್ನುವ ನಿರೀಕ್ಷೆಯಿದೆ.

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಅನುಕೂಲ

ಸರ್ಕಾರಿ ಸಿಬ್ಬಂದಿಯ ವೇತನ ಹೆಚ್ಚಳಕ್ಕೆ ಸಂಬಂಧಿಸಿ 8ನೇ ವೇತನ ಆಯೋಗವು ತನ್ನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ. ಇದು ಜಾರಿಯಾದರೆ ಕೋಟ್ಯಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಈ ಹಿಂದೆ ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ಹೊಸ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುತ್ತಿತ್ತು. 7ನೇ ವೇತನ ಆಯೋಗವು ಜನವರಿ 2016ರಲ್ಲಿ ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ 8 ನೇ ವೇತನ ಆಯೋಗವು ಜನವರಿ 2026ರಿಂದ ಜಾರಿಗೆ ಬರುವ ಸಾಧ್ಯತೆಯಿದೆ.

ಮುಂದಿನ 8ನೇ ವೇತನ ಆಯೋಗ 2025ರಲ್ಲೇ ರಚನೆಯಾಗಬೇಕು. ಇದು ನಡೆದರೆ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ ಎಂಬುದು ತಜ್ಞರ ಅಭಿಪ್ರಾಯ.

ಹಲವು ಬದಲಾವಣೆ

8ನೇ ವೇತನ ಆಯೋಗದಲ್ಲಿ ಫಿಟ್‌ಮೆಂಟ್ ಅಂಶ ಸೇರಿದಂತೆ ಹಲವು ಬದಲಾವಣೆಗಳು ನಡೆಯುವ ಸಾಧ್ಯತೆ ಇದೆ. ಫಿಟ್‌ಮೆಂಟ್ ಅಂಶವೆಂದರೆ ಹಿಂದಿನ ವೇತನದಿಂದ ವೇತನ ಪರಿಷ್ಕೃರಣೆ ಮಾಡಲು ಪರಿಷ್ಕೃತ ವೇತನದ ಲೆಕ್ಕಾಚಾರ ನಡೆಸಲು ವೇತನ ಆಯೋಗವು ಸೂಚಿಸುವ ನಿರ್ದಿಷ್ಟ ಮೌಲ್ಯವಾಗಿದೆ. ಇದು ಒಂದು ವಿಶಿಷ್ಟ ಅಂಶದ ಮೂಲಕ ಮೂಲ ವೇತನದಲ್ಲಿನ ಪರಿಷ್ಕರಣೆಯನ್ನು ಸೂಚಿಸುತ್ತದೆ. ಫಿಟ್‌ಮೆಂಟ್ ಅಂಶವು ಕೇಂದ್ರ ಸರ್ಕಾರಿ ಸೇವೆಗಳಲ್ಲಿರುವ ಎಲ್ಲಾ ಉದ್ಯೋಗಿಗಳಿಗೆ ಅನ್ವಯಿಸುತ್ತದೆ.

ಉದ್ಯೋಗಿಗಳ ಫಿಟ್‌ಮೆಂಟ್ ಅಂಶವು 3.68 ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನ 18,000 ರೂ. ಗಳಾಗಿದೆ. ಫಿಟ್‌ಮೆಂಟ್ ಅಂಶ ಹೆಚ್ಚಳದಿಂದ ಅವರ ಮೂಲ ವೇತನ 18,000 ರೂ. ನಿಂದ 26,000 ರೂ. ಗೆ ಏರಿಕೆಯಾಗಲಿದೆ.

Continue Reading

ದೇಶ

Reasi Terror Attack : ಜಮ್ಮು – ಕಾಶ್ಮೀರ ಬಸ್ ದಾಳಿಯ ಹೊಣೆ ಹೊತ್ತುಕೊಂಡ ಪಾಕ್ ಲಷ್ಕರ್ ಬೆಂಬಲಿತ ಉಗ್ರ ಸಂಘಟನೆ

Reasi Terror Attack : ಭಯೋತ್ಪಾದಕರನ್ನು ಪತ್ತೆಹಚ್ಚಲು ಉಗ್ರ ನಿಗ್ರ ದಳದ ಅಧಿಕಾರಿಗಳು ಬೃಹತ್ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದ್ದು, ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

VISTARANEWS.COM


on

Reasi Terror Attack
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಪ್ರವಾಸಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿಯ (Reasi Terror Attack) ಹೊಣೆಯನ್ನು ಪಾಕಿಸ್ತಾನ ಬೆಂಬಲಿತ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್​​ಎಫ್) ವಹಿಸಿಕೊಂಡಿದೆ. ಪ್ರವಾಸಿಗರು ಮತ್ತು ಸ್ಥಳೀಯರಲ್ಲದವರ” ಮೇಲೆ ಇಂತಹ ದಾಳಿಗಳನ್ನು ಮುಂದವರಿಸುತ್ತೇವೆ ಎಂಬುದಾಗಿಯೂ ಉಗ್ರರು ಹೇಳಿಕೊಂಡಿದ್ದಾರೆ. ಅಲ್ಲದೆ ರಿಯಾಸಿ ದಾಳಿಯನ್ನು ‘ಹೊಸ ಆರಂಭಕ್ಕೆ ಮುನ್ನುಡಿ’ ” ಎಂದು ಕರೆದಿದೆ.

ಭಯೋತ್ಪಾದಕರನ್ನು ಪತ್ತೆಹಚ್ಚಲು ಉಗ್ರ ನಿಗ್ರ ದಳದ ಅಧಿಕಾರಿಗಳು ಬೃಹತ್ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದ್ದು, ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ಬಸ್ ಶಿವ ಖೋರಿ ದೇವಾಲಯದಿಂದ ಮಾತಾ ವೈಷ್ಣೋ ದೇವಿ ದೇವಾಲಯದ ಮೂಲ ಶಿಬಿರವಾದ ಕತ್ರಾಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಹತ್ತಿರದ ಕಾಡಿನಲ್ಲಿ ಅಡಗಿದ್ದ ಭಯೋತ್ಪಾದಕರು ವಾಹನದ ಮೇಲೆ ಹೊಂಚು ಹಾಕಿ ಗುಂಡು ಹಾರಿಸಿದರು. ಬಸ್ ಚಾಲಕನಿಗೆ ಗುಂಡು ತಗುಲಿ ಸಮತೋಲನ ಕಳೆದುಕೊಂಡಿದ್ದು, ವಾಹನವು ಕಮರಿಗೆ ಉರುಳಿ ಬಿದ್ದಿದೆ.

ಯಾರಿವರು ಉಗ್ರರು?


ಭಾರತವು 2023 ರಲ್ಲಿ ರೆಸಿಸ್ಟೆನ್ಸ್ ಫ್ರಂಟ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಇದನ್ನು 2019 ರಲ್ಲಿ ಉಗ್ರರು ಸ್ಥಾಪಿಸಿದ್ದರು. ಇದು ಡಜನ್​ಗಟ್ಟೆ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದೆ.

ರಿಯಾಸಿ ಬಸ್ ದಾಳಿಯಲ್ಲಿ ಎರಡರಿಂದ ಮೂರು ಭಯೋತ್ಪಾದಕರು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು ರಾಜೌರಿ ಮತ್ತು ಪೂಂಛ್​​ ನಲ್ಲಿ ಇದೇ ಮಾದರಿಯಲ್ಲಿ ದಾಳಿ ನಡೆಸಿದ್ದರು. ಭಯೋತ್ಪಾದಕರು ಕಾಡಿನಲ್ಲಿ ಅಡಗಿ ಕುಳಿತು ದಾಳಿ ಮಾಡಿದ್ದಾರೆ. ಘಟನೆ ಬಳಿಕ ಭಯೋತ್ಪಾದಕರು ರಿಯಾಸಿಯಿಂದ ಪಲಾಯನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಭಯೋತ್ಪಾದಕರೆಲ್ಲರೂ ಪಾಕಿಸ್ತಾನಿಗಳು ಮತ್ತು ಪಿರ್ ಪಂಜಾಲ್ ಪ್ರದೇಶದ ದಕ್ಷಿಣದಲ್ಲಿ ಎರಡು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಶೋಧ ಕಾರ್ಯಾಚರಣೆಗಾಗಿ ಉಗ್ರ ನಿಗ್ರಹ ದಳ ಡ್ರೋನ್​ಗಳನ್ನು ಬಳಸುತ್ತಿವೆ. ಇದಲ್ಲದೆ, ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ತಂಡವು ಕಾರ್ಯಾಚರಣೆ ನಡೆಸುತ್ತಿದೆ.

ಉಗ್ರದ ದಾಳಿಗೆ ಬಲಿಯಾದವರಲ್ಲಿ ಹೆಚ್ಚಿನವರು ಉತ್ತರ ಪ್ರದೇಶ ಮತ್ತು ರಾಜಸ್ಥಾನದವರು. ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಬಸ್ ನ ಚಾಲಕ ಮತ್ತು ನಿರ್ವಾಹಕರನ್ನು ಸಹ ಗುರುತಿಸಲಾಗಿದ್ದು, ಇಬ್ಬರೂ ರಿಯಾಸಿ ಮೂಲದವರು. ಗಾಯಗೊಂಡವರಲ್ಲಿ 34 ಮಂದಿ ಉತ್ತರ ಪ್ರದೇಶದವರು, ಐವರು ದಿಲ್ಲಿಯವರು ಮತ್ತು ಇಬ್ಬರು ರಾಜಸ್ಥಾನದವರು.

ದಾಳಿಯ ಬಳಿಕ ವಾಹನ ಕಮರಿಗೆ ಬಿದ್ದಿದ್ದರೂ ಭಯೋತ್ಪಾದಕರು ಬಸ್ ಮೇಲೆ ಗುಂಡು ಹಾರಿಸುವುದನ್ನು ಮುಂದುವರಿಸಿದ್ದಾರೆ ಎಂದು ದಾಳಿಯಲ್ಲಿ ಬದುಕುಳಿದವರು ತಿಳಿಸಿದ್ದಾರೆ. ಭಯೋತ್ಪಾದಕರು ಕಮರಿಗೆ ಇಳಿದು ಹಲವಾರು ನಿಮಿಷಗಳ ಕಾಲ ಗುಂಡು ಹಾರಿಸುವುದನ್ನು ಮುಂದುವರಿಸಿದ್ದರು.

ಗ್ರಾಮಸ್ಥರ ಸಹಾಯದಿಂದ ಪೊಲೀಸರು ರಾತ್ರಿ ವೇಳೆಗೆ ಪ್ರಯಾಣಿಕರನ್ನು ಸ್ಥಳಾಂತರಿಸಿದ್ದರು. ರಿಯಾಸಿ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸ್ಥಳಾಂತರದ ಮೇಲ್ವಿಚಾರಣೆ ನಡೆಸಿದ್ದು. ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರ ಕುಟುಂಬಗಳಿಗೆ 10 ಲಕ್ಷ ರೂ.ಗಳ ಆರ್ಥಿಕ ಸಹಾಯ ಘೋಷಿಸಿದ್ದಾರೆ.

ಪ್ರಧಾನಿ ಮೋದಿಯಿಂದ ಪ್ರತಿಕ್ರಿಯೆ

ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಗಾಯಗೊಂಡ ಎಲ್ಲರಿಗೂ ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸುವಂತೆ ನಿರ್ದೇಶನ ನೀಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಟ್ವೀಟ್ ಮಾಡಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ, ಕೇಂದ್ರ ಸಚಿವ ಅಮಿತ್ ಶಾ, ಅಧ್ಯಕ್ಷ ದ್ರೌಪದಿ ಮುರ್ಮು, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.

Continue Reading
Advertisement
Physical Abuse
ಮೈಸೂರು2 mins ago

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Election Commission
ಪ್ರಮುಖ ಸುದ್ದಿ7 mins ago

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

bhavani revanna prajwal revanna case
ಪ್ರಮುಖ ಸುದ್ದಿ9 mins ago

Prajwal Revanna Case: ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ! ಅಲ್ಲೇ ಇದ್ದರೂ ಮುಖಾಮುಖಿಯಾಗದ ಅಮ್ಮ- ಮಗ

Niveditha Gowda Chandan Shetty Joint Pressmeet For The First Time
ಕಿರುತೆರೆ26 mins ago

Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ!

Narendra Modi 3.0
ಪ್ರಮುಖ ಸುದ್ದಿ34 mins ago

Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

8th Pay Commission
ರಾಜಕೀಯ39 mins ago

8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

Physical Abuse
ಕ್ರೈಂ40 mins ago

Physical Abuse : ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು, ಮತ್ತಿಬ್ಬರ ಸ್ಥಿತಿ ಗಂಭೀರ

Sonakshi Sinha to marry boyfriend Zaheer Iqbal on June 23
ಬಾಲಿವುಡ್51 mins ago

Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Reasi Terror Attack
ದೇಶ54 mins ago

Reasi Terror Attack : ಜಮ್ಮು – ಕಾಶ್ಮೀರ ಬಸ್ ದಾಳಿಯ ಹೊಣೆ ಹೊತ್ತುಕೊಂಡ ಪಾಕ್ ಲಷ್ಕರ್ ಬೆಂಬಲಿತ ಉಗ್ರ ಸಂಘಟನೆ

Viral Video
ವೈರಲ್ ನ್ಯೂಸ್1 hour ago

Viral Video: ಮೆಕ್ಕಾದಲ್ಲಿ ಬುರ್ಖಾಧಾರಿ ಮಹಿಳೆಯ ಡ್ಯಾನ್ಸ್! ಮುಸ್ಲಿಂ ಸಮುದಾಯದ ಆಕ್ರೋಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌