Gold Rate Today: 22 ಮತ್ತು 24 ಕ್ಯಾರಟ್‌ ಬಂಗಾರದ ಬೆಲೆ ಇಂದು ಹೀಗಿದೆ ನೋಡಿ - Vistara News

ಕರ್ನಾಟಕ

Gold Rate Today: 22 ಮತ್ತು 24 ಕ್ಯಾರಟ್‌ ಬಂಗಾರದ ಬೆಲೆ ಇಂದು ಹೀಗಿದೆ ನೋಡಿ

ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್ ಬಂಗಾರದ ಧಾರಣೆ (Gold Rate Today) ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆ ಕಾಣದೆ ಯಥಾಸ್ಥಿತಿ ಕಾಪಾಡಿಕೊಂಡಿದೆ.

VISTARANEWS.COM


on

gold girl
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್ ಬಂಗಾರದ ಧಾರಣೆ (Gold Rate Today) ಕಳೆದ ನಾಲ್ಕು ದಿನಗಳಿಂದ ಯಾವುದೇ ಬದಲಾವಣೆ ಕಾಣದೆ ಯಥಾಸ್ಥಿತಿ ಕಾಪಾಡಿಕೊಂಡಿದೆ.

ಇಂದು ಬೆಂಗಳೂರಿನಲ್ಲಿ ನೀವು ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5780ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹46,240 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹57,800 ಮತ್ತು ₹5,78,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,305 ಆಗಿದ್ದರೆ, ಎಂಟು ಗ್ರಾಂ ಬೆಲೆ ₹50,440 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹63,050 ಮತ್ತು ₹6,30,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹73.25, ಎಂಟು ಗ್ರಾಂ ₹586 ಮತ್ತು 10 ಗ್ರಾಂ ₹732.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,325 ಮತ್ತು 1 ಕಿಲೋಗ್ರಾಂಗೆ ₹73,250 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್24 ಕ್ಯಾರಟ್
ದಿಲ್ಲಿ
57,95063,200
ಮುಂಬಯಿ57,800
63,050
ಬೆಂಗಳೂರು57,800 63,050
ಚೆನ್ನೈ 58,250 63,550

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

5) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Samsung: ಸ್ಯಾಮ್‌ಸಂಗ್ ಅಲ್ಟ್ರಾ ಪ್ರೀಮಿಯಂ ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಟಿವಿಗಳು ಸೇರಿದಂತೆ ತನ್ನ ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌ಗಳನ್ನು ಘೋಷಿಸಿದೆ. ಟಿ20 ವಿಶ್ವಕಪ್‌ ಕ್ರಿಕೆಟ್ ಸಮೀಪಿಸುತ್ತಿದ್ದಂತೆ ಗ್ರಾಹಕರು ದೊಡ್ಡ ಟಿವಿಗಳಲ್ಲಿ ಕ್ರೀಡಾಂಗಣದ ಅನುಭವ ಪಡೆಯಲು ‘ಬಿಗ್ ಟಿವಿ ಡೇಸ್’ ಮಾರಾಟ ಪರಿಚಯಿಸಲಾಗಿದೆ.

VISTARANEWS.COM


on

Samsung Big TV Days Sale Exciting offer on big TVs
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ (Samsung) ಅಲ್ಟ್ರಾ ಪ್ರೀಮಿಯಂ ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಟಿವಿಗಳು ಸೇರಿದಂತೆ ತನ್ನ ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌ಗಳನ್ನು ಘೋಷಿಸಿದೆ. ಟಿ20 ವಿಶ್ವಕಪ್‌ ಕ್ರಿಕೆಟ್ ಸಮೀಪಿಸುತ್ತಿದ್ದಂತೆ ಗ್ರಾಹಕರು ದೊಡ್ಡ ಟಿವಿಗಳಲ್ಲಿ ಕ್ರೀಡಾಂಗಣದ ಅನುಭವ ಪಡೆಯಲು ‘ಬಿಗ್ ಟಿವಿ ಡೇಸ್’ ಮಾರಾಟ ಪರಿಚಯಿಸಲಾಗಿದೆ.

‘ಬಿಗ್ ಟಿವಿ ಡೇಸ್’ ಆಫರ್ ಸಮಯದಲ್ಲಿ ಸ್ಯಾಮ್‌ಸಂಗ್ ಟಿವಿಗಳನ್ನು ಖರೀದಿಸುವ ಗ್ರಾಹಕರು, ಅವರು ಖರೀದಿಸಿದ ಟಿವಿಯನ್ನು ಅವಲಂಬಿಸಿ ರೂ. 89990 ಮೌಲ್ಯದ ಸೆರಿಫ್ ಟಿವಿ ಅಥವಾ ರೂ. 79990 ಮೌಲ್ಯದ ಸೌಂಡ್‌ಬಾರ್ ಅನ್ನು ಉಚಿತವಾಗಿ ಪಡೆಯುತ್ತಾರೆ. ಗ್ರಾಹಕರು ರೂ.2990 ದಿಂದ ಆರಂಭವಾಗುವ ಸುಲಭ ಇಎಂಐ ಸೌಲಭ್ಯವನ್ನು ಪಡೆಯಬಹುದು ಮತ್ತು 20% ವರೆಗಿನ ಕ್ಯಾಶ್‌ಬ್ಯಾಕ್ ಅನ್ನು ಕೂಡ ಪಡೆಯಬಹುದು. ಈ ಆಫರ್‌ಗಳು Samsung.com, ಪ್ರಮುಖ ರಿಟೇಲ್ ಅಂಗಡಿಗಳು ಮತ್ತು ಹಲವಾರು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿರುತ್ತವೆ. ರಾಷ್ಟ್ರವ್ಯಾಪಿ ಇರುವ ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಆಫರ್‌ಗಳು ಜೂನ್ 1 ರಿಂದ ಆರಂಭವಾಗುತ್ತದೆ ಮತ್ತು ಜೂನ್ 30, 2024ಕ್ಕೆ ಕೊನೆಗೊಳ್ಳಲಿದೆ. ಆಫರ್‌ಗಳು 98″/85″/83″/77″/75″ ಗಾತ್ರಗಳ ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಶ್ರೇಣಿಯ ಆಯ್ದ ಮಾಡೆಲ್‌ಗಳ ಮೇಲೆ ಲಭ್ಯವಿದೆ.

ಇದನ್ನೂ ಓದಿ: Mysore News: ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ

ಸ್ಯಾಮ್‌ಸಂಗ್ ಗ್ರಾಹಕರ ಟಿವಿ ವೀಕ್ಷಣೆ ಅನುಭವವನ್ನು ಅತ್ಯುನ್ನತಗೊಳಿಸಲು ಮತ್ತು ಅಸಾಧಾರಣ ವೀಕ್ಷಣೆಯ ಅನುಭವಗಳನ್ನು ಒದಗಿಸಲು ಟಿವಿಗಳಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಕ್ರಾಂತಿಕಾರಕ ಶಕ್ತಿಯನ್ನು ಪರಿಚಯಿಸಿದೆ. ಈ ಟೆಲಿವಿಷನ್‌ಗಳು ಎಐ ಬಳಕೆಯ ಮೂಲಕ ಮನೆಯ ಮನರಂಜನಾ ಅನುಭವಕ್ಕೆ ಹೊಸ ರೂಪ ನೀಡಲಿದೆ. ಸುಸ್ಥಿರತೆ ಮತ್ತು ಹೆಚ್ಚಿನ ಭದ್ರತೆ ಒದಗಿಸುತ್ತದೆ.

ಸ್ಯಾಮ್‌ಸಂಗ್ ಇಂಡಿಯಾದ ವಿಷುಯಲ್ ಡಿಸ್‌ಪ್ಲೇ ಬ್ಯುಸಿನೆಸ್‌ನ ಹಿರಿಯ ಉಪಾಧ್ಯಕ್ಷ ಮೋಹನ್‌ದೀಪ್ ಸಿಂಗ್ ಈ ಕುರಿತು ಮಾತನಾಡಿ, ಟಿ20 ವಿಶ್ವಕಪ್‌ ಕ್ರಿಕೆಟ್ ಸಂದರ್ಭದಲ್ಲಿ ದೊಡ್ಡ ಗಾತ್ರದ ಪರದೆ ಮತ್ತು ಪ್ರೀಮಿಯಂ ವೀಕ್ಷಣೆಯ ಅನುಭವಕ್ಕೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ನಮ್ಮ ‘ಬಿಗ್ ಟಿವಿ ಡೇಸ್’ ಮಾರಾಟವನ್ನು ಸೂಕ್ತವಾಗಿ ಆಯೋಜಿಸಲಾಗಿದೆ.

ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಟಿವಿಗಳು ಸೇರಿದಂತೆ ನಮ್ಮ ಅಲ್ಟ್ರಾ-ಪ್ರೀಮಿಯಂ ಶ್ರೇಣಿಯ ಟಿವಿಗಳನ್ನು ಅತ್ಯಾಕರ್ಷಕ ಕೊಡುಗೆಗಳ ಜತೆಗೆ ನೀಡುವ ಮೂಲಕ ನಮ್ಮ ಗ್ರಾಹಕರಿಗೆ ತಮ್ಮ ಮನೆಗಳಲ್ಲಿ ನೇರವಾಗಿ ಕ್ರೀಡಾಂಗಣದಲ್ಲಿಯೇ ಕ್ರಿಕೆಟ್ ನೋಡುವಂತೆ ಅನ್ನಿಸುವ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದ್ದೇವೆ. ನಮ್ಮ ಅತ್ಯಾಧುನಿಕ ಎಐ-ಚಾಲಿತ ಟೆಲಿವಿಷನ್‌ಗಳಲ್ಲಿ ನಮ್ಮ ಗ್ರಾಹಕರು ಅಸಾಧಾರಣ ದೃಶ್ಯ ಗುಣಮಟ್ಟ, ಅಪೂರ್ವ ಆಡಿಯೋ ಮತ್ತು ಸಪೂರ ವಿನ್ಯಾಸಗಳನ್ನು ನಿರೀಕ್ಷೆ ಮಾಡಬಹುದು. ಇದಲ್ಲದೆ ಎಐ ಬಳಕೆಯಿಂದ 8ಕೆ ಎಐ ಅಪ್‌ಸ್ಕೇಲಿಂಗ್ ಮತ್ತು ಎಐ ಮೋಷನ್‌ ಎನ್ ಹ್ಯಾನ್ಸರ್ ಪ್ರೊ ನಂತಹ ಫೀಚರ್‌ಗಳು ಕ್ರಿಕೆಟ್ ನೇರಪ್ರಸಾರದ ಸಂದರ್ಭದಲ್ಲಿ ಬಾಲ್ ಅನ್ನು ಸ್ಪಷ್ಟವಾಗಿ ಕಾಣಿಸುವ ಮೂಲಕ ಗ್ರಾಹಕರಿಗೆ ಅದ್ಭುತ ಕ್ರಿಕೆಟ್ ವೀಕ್ಷಣೆಯ ಅನುಭವವನ್ನು ಒದಗಿಸುತ್ತದೆ ಎಂದು ತಿಳಿಸಿದ್ದಾರೆ.

ಸ್ಯಾಮ್‌ಸಂಗ್ ಕಂಪನಿಯು ಭಾರತೀಯ ಗ್ರಾಹಕರಿಗಾಗಿಯೇ ಪ್ರಾದೇಶಿಕವಾಗಿ ಸಿದ್ಧಗೊಳಿಸಲಾದ ಸ್ಮಾರ್ಟ್ ಅನುಭವಗಳನ್ನು ನೀಡಲು ಈ ಟಿವಿಗಳಲ್ಲಿ ಗೇಮಿಂಗ್, ಮನರಂಜನೆ, ಶಿಕ್ಷಣ ಮತ್ತು ಫಿಟ್‌ನೆಸ್‌ನಂತಹ ಸೌಲಭ್ಯಗಳನ್ನು ಒದಗಿಸಿದೆ. ಕ್ಲೌಡ್ ಗೇಮಿಂಗ್ ಸೇವೆಯು ಬಳಕೆದಾರರಿಗೆ ಯಾವುದೇ ಕನ್ಸೋಲ್ ಅಥವಾ ಪಿಸಿ ಅಗತ್ಯವಿಲ್ಲದೆಯೇ ಎಎಎ ಗೇಮ್‌ಗಳನ್ನು ಪ್ಲಗ್ ಮತ್ತು ಪ್ಲೇ ಮೂಲಕ ಆಡಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: Battery Life Tips: ಈ 5 ಸಲಹೆ ಪಾಲಿಸಿ; ನಿಮ್ಮ ಸ್ಮಾರ್ಟ್‌ಫೋನ್ ಬ್ಯಾಟರಿ ಸಾಮರ್ಥ್ಯ ಹೆಚ್ಚಿಸಿ!

ಸ್ಯಾಮ್‌ಸಂಗ್ ಎಜುಕೇಶನ್ ಹಬ್ ಬಳಕೆದಾರರಿಗೆ ಲೈವ್ ತರಗತಿಗಳ ಜತೆಗೆ ದೊಡ್ಡ ಪರದೆಯ ಕಲಿಕೆಯನ್ನು ಒದಗಿಸುತ್ತಿದ್ದು, ನಿಮ್ಮ ಮಕ್ಕಳಿಗೆ ಹೆಚ್ಚು ಸಂವಾದಾತ್ಮಕ ಮತ್ತು ಖುಷಿದಾಯ ಕಲಿಕೆಯ ಸೌಲಭ್ಯ ಒದಗಿಸುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಟಿವಿ ಕೀ ಕ್ಲೌಡ್ ಸೇವೆಯ ಮೂಲಕ ಕ್ಲೌಡ್ ಮೂಲಕ ವಿಷಯದ ನೇರ ಪ್ರಸಾರವನ್ನು ಒದಗಿಸುವುದರಿಂದ ಗ್ರಾಹಕರಿಗೆ ಇನ್ನು ಮುಂದೆ ಸೆಟ್-ಟಾಪ್ ಬಾಕ್ಸ್ ಅಗತ್ಯ ಇರುವುದಿಲ್ಲ. ಸ್ಯಾಮ್‌ಸಂಗ್ ಟಿವಿ ಪ್ಲಸ್ ಫೀಚರ್ ಸುದ್ದಿ, ಚಲನಚಿತ್ರಗಳು, ಮನರಂಜನೆ ಮತ್ತು ಇತ್ಯಾದಿಗಳನ್ನು ವೀಕ್ಷಿಸಲು 100+ ಚಾನೆಲ್‌ಗಳನ್ನು ಉಚಿತವಾಗಿ ಒದಗಿಸುತ್ತದೆ.

ನಿಯೋ ಕ್ಯೂಎಲ್ಇಡಿ 8ಕೆ

ನಿಯೋ ಕ್ಯೂಎಲ್ಇಡಿ 8ಕೆ ಶ್ರೇಣಿಯು ಎನ್‌ಕ್ಯೂ8 ಎಐ ಜೆನ್2 ಪ್ರೊಸೆಸರ್‌ನಿಂದ ಕಾರ್ಯ ನಿರ್ವಹಿಸುತ್ತದೆ. ಅದು ಎಐ-ಆಧರಿತ ಅನುಭವವನ್ನು ಒದಗಿಸುತ್ತದೆ ಮತ್ತು ಸ್ಪಷ್ಟವಾಗಿರುವ ಚಿತ್ರ ಗುಣಮಟ್ಟವನ್ನು ನೀಡುತ್ತದೆ. ಎನ್‌ಕ್ಯೂ8 ಎಐ ಜೆನ್2 ಪ್ರೊಸೆಸರ್, 256 ಎಐ ನ್ಯೂರಲ್ ನೆಟ್‌ವರ್ಕ್‌ಗಳಿಂದ ಚಾಲಿತವಾಗಿದ್ದು, ನೀವು ಓಟಿಟಿ ನೋಡುತ್ತಿರಲಿ, ನಿಮ್ಮ ಮೆಚ್ಚಿನ ವೀಡಿಯೊ ಗೇಮ್ ಗಳನ್ನು ಆಡುತ್ತಿರಲಿ ಅಥವಾ ಲೈವ್ ಕ್ರೀಡೆಗಳನ್ನು ವೀಕ್ಷಿಸುತ್ತಿರಲಿ ಎಲ್ಲಾ ಸಂದರ್ಭಗಳಲ್ಲೂ 8ಕೆ ಅನುಭವವನ್ನು ನೀಡುವಂತಹ ದೃಶ್ಯ ಮತ್ತು ಆಡಿಯೋ ಎರಡನ್ನೂ ಒದಗಿಸಲು ಸಹಾಯ ಮಾಡುತ್ತದೆ. ಸ್ಯಾಮ್‌ಸಂಗ್‌ನ ನಿಯೋ ಕ್ಯೂಎಲ್ಇಡಿ 8ಕೆ ಟಿವಿಗಳು ಮೋಷನ್ ಆಕ್ಸಲೇಟರ್ ಟರ್ಬೋ ಪ್ರೋ ಫೀಚರ್ ಹೊಂದಿದ್ದು, ಅದು ಹೆಚ್ಚಿನ ವೇಗದ ಗೇಮಿಂಗ್‌ ಆಡುವ ಸಂದರ್ಭದಲ್ಲಿ ದೃಶ್ಯಗಳನ್ನು ಸ್ಥಿರವಾಗಿ ಕಾಣಿಸುತ್ತದೆ ಮತ್ತು ಅಪೂರ್ವ ವೇಗವನ್ನು ಒದಗಿಸುತ್ತದೆ.

ನಿಯೋ ಕ್ಯೂಎಲ್ಇಡಿ 4ಕೆ 2024

ನಿಯೋ ಕ್ಯೂಎಲ್ಇಡಿ 4ಕೆ ಉತ್ಪನ್ನ ಶ್ರೇಣಿಯು ಎನ್‌ಕ್ಯೂ4 ಎಐ ಜೆನ್2 ಪ್ರೊಸೆಸರ್‌ನಿಂದ ಕಾರ್ಯ ನಿರ್ವಹಿಸುತ್ತದೆ. ಈ ಪ್ರೊಸೆಸರ್ ಯಾವುದೇ ವಿಷಯವನ್ನು ಅದ್ಭುತವಾದ 4ಕೆ ದೃಶ್ಯಾವಳಿಯಲ್ಲಿ ತೋರಿಸುತ್ತದೆ ಮತ್ತು ಪ್ರತೀ ದೃಶ್ಯಕ್ಕೂ ಜೀವ ತುಂಬುತ್ತದೆ. ಕ್ವಾಂಟಮ್ ಮ್ಯಾಟ್ರಿಕ್ಸ್ ತಂತ್ರಜ್ಞಾನದಿಂದ ಮತ್ತಷ್ಟು ಶಕ್ತಿ ತುಂಬಲ್ಪಟ್ಟಿದ್ದು, ಸಂಕೀರಣ ದೃಶ್ಯಗಳಲ್ಲಿಯೂ ಅತ್ಯುತ್ತಮ ದೃಶ್ಯ ವೈಭವವನ್ನು ಒದಗಿಸುತ್ತದೆ. ಆಡಿಯೋ ಅನುಭವ ಉನ್ನತೀಕರಿಸಲು ಡಾಲ್ಬಿ ಅಟ್ಮೋಸ್ ವ್ಯವಸ್ಥೆ ಇದೆ. ಒಟ್ಟಾರೆ ನಿಯೋ ಕ್ಯೂಎಲ್ಇಡಿ 4ಕೆ ಶ್ರೇಣಿಯ ಟಿವಿಗಳು ಅತ್ಯದ್ಭುತ 4ಕೆ ಅನುಭವ ನೀಡುತ್ತವೆ.

ಕ್ಯೂಎಲ್ಇಡಿ ಟಿವಿ

ಸ್ಯಾಮ್‌ಸಂಗ್‌ನ ಕ್ಯೂಎಲ್ಇಡಿ ಟಿವಿ ಕ್ವಾಂಟಮ್ ಡಾಟ್ ತಂತ್ರಜ್ಞಾನದೊಂದಿಗೆ ಅತ್ಯದ್ಭುತ ದೃಶ್ಯ ಗುಣಮಟ್ಟವನ್ನು ಒದಗಿಸುತ್ತದೆ. 100% ಬಣ್ಣ ಸ್ಪಷ್ಟತೆ ಹೊಂದಿರುವುದರಿಂದ ಈ ಟಿವಿ, ಎಷ್ಟೇ ಬ್ರೈಟ್‌ನೆಸ್ ಇದ್ದರೂ ಜಾಸ್ತಿ ಮಾಡಿದರೂ ಕಡಿಮೆ ಇದ್ದರೂ ಸೂಕ್ತವಾದ ಬಣ್ಣಗಳನ್ನೇ ಕಾಣಿಸುತ್ತವೆ. ಇದರ ಅಲ್ಟ್ರಾ-ಸ್ಲಿಮ್ ವಿನ್ಯಾಸವು ಯಾವುದೇ ರೀತಿ ಮನೆಯೊಳಗೆ ಸುಂದರವಾಗಿ ಕಾಣಿಸುತ್ತದೆ. ನೀವು ವಾಸಿಸುವ ಸ್ಥಳದ ಸೊಬಗನ್ನು ಹೆಚ್ಚಿಸುತ್ತದೆ.

ಒಎಲ್ಇಡಿ ಟಿವಿ

ಪ್ರಪಂಚದ ಮೊದಲ ಗ್ಲೇರ್-ಫ್ರೀ ಓಎಲ್ಇಡಿ ಟಿವಿ ಯಾವುದೇ ರೀತಿಯ ಬೆಳಕು ಇದ್ದರೂ ಗಾಢ ಕಪ್ಪು ಮತ್ತು ಸ್ಪಷ್ಟ ದೃಶ್ಯಗಳನ್ನು ಪ್ರಸಾರ ಮಾಡುವಾಗ ಯಾವುದೇ ರೀತಿಯ ಅನಗತ್ಯ ರಿಫ್ಲೆಕ್ಷನ್‌ಗಳನ್ನು (ಪ್ರತಿಬಿಂಬ) ಕಾಣಿಸುವುದಿಲ್ಲ. ಈ ಟಿವಿಗಳೂ ಅದೇ ಅಸಾಧಾರಣ ಎನ್‌ಕ್ಯೂ4 ಎಐ ಜೆನ್2 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸುತ್ತದೆ.

ಸ್ಯಾಮ್‌ಸಂಗ್‌ನ ಓಎಲ್ಇಡಿ ಟಿವಿಗಳು ರಿಯಲ್ ಡೆಪ್ತ್ ಎನ್‌ಹಾನ್ಸರ್ ಮತ್ತು ಒಎಲ್ಇಡಿ ಎಚ್‌ಡಿಆರ್ ಪ್ರೊನಂತಹ ವೈಶಿಷ್ಟ್ಯಗಳನ್ನು ಹೊಂದಿದ್ದು, ಅದರಿಂದ ದೃಶ್ಯದ ಗುಣಮಟ್ಟವನ್ನು ಮತ್ತಷ್ಟು ಉನ್ನತೀಕರಿಸುತ್ತದೆ. ಜತೆಗೆ ಮೋಷನ್ ಆಕ್ಸಲೇಟರ್ 144 ಹರ್ಟ್ಜ್ ಫೀಚರ್ ಸುಗಮ ಚಲನೆ ಮತ್ತು ವೇಗದ ತ್ವರಿತ ಪ್ರತಿಕ್ರಿಯೆ ಸೌಲಭ್ಯ ಒದಗಿಸುತ್ತಿದ್ದು, ಆದ್ದರಿಂದಲೇ ಸ್ಯಾಮ್ ಓಎಲ್ಇಡಿ ಗೇಮಿಂಗ್‌ಗೆ ಸೂಕ್ತ ಆಯ್ಕೆಯಾಗಿದೆ. ಸಪೂರವಾದ ವಿನ್ಯಾಸ ಹೊಂದಿರುವ ಈ ಓಎಲ್ಇಡಿ ಟಿವಿಗಳು ಮನೆಯಲ್ಲಿ ಎಲ್ಲಿ ಟಿವಿ ಇಟ್ಟಿದ್ದೀರೋ ಆ ಸ್ಥಳದ ಸೊಬಗು ಹೆಚ್ಚಿಸುತ್ತದೆ.

ಇದನ್ನೂ ಓದಿ: World Bicycle Day: ಸೈಕಲ್‌ ಹೊಡೆಯುವುದರ ಲಾಭಗಳು ನಾವಂದುಕೊಂಡಿದ್ದಕ್ಕಿಂತ ಹೆಚ್ಚು!

ಯುಎಚ್‌ಡಿ ಟಿವಿ

ಸ್ಯಾಮ್‌ಸಂಗ್‌ನ ಯುಎಚ್‌ಡಿ ಟಿವಿ ವಿಶಿಷ್ಟವಾದ ಕ್ರಿಸ್ಟಲ್ ಕಲರ್ ತಂತ್ರಜ್ಞಾನ ಹೊಂದಿದ್ದು, ಬಣ್ಣಗಳಿಗೆ ಜೀವ ತುಂಬುತ್ತದೆ, ಪ್ರತಿ ಛಾಯೆಯಲ್ಲೂ ಸೂಕ್ಷ್ಮ ವಿವರಗಳನ್ನು ಕಾಣಿಸುತ್ತದೆ ಮೋಷನ್ ಆಕ್ಸಲೇಟರ್ ಫೀಚರ್ ವೇಗವಾಗಿ ಚಲಿಸುವ ದೃಶ್ಯಗಳನ್ನು ಸುಗಮವಾಗಿ ಮತ್ತು ಸ್ಪಷ್ಟವಾಗಿ ಕಾಣಿಸುತ್ತದೆ. ಪ್ರತಿ ಗೇಮ್, ಚಲನಚಿತ್ರ ಅಥವಾ ಯಾವುದೋ ಶೋ ಅನ್ನು ಹೆಚ್ಚು ಸೊಗಸಾಗಿ ಕಾಣಿಸುತ್ತದೆ ಮತ್ತು ಆನಂದಿಸುವಂತೆ ಮಾಡುತ್ತದೆ.

Continue Reading

ದಾವಣಗೆರೆ

Davangere Lok Sabha Constituency: ದಾವಣಗೆರೆಯಲ್ಲಿ ನಾರಿಶಕ್ತಿ ಕದನ, ಯಾರು ಗೆದ್ದರೂ ಇತಿಹಾಸ

Davangere Lok Sabha Constituency: ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಯಾರು ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದೆ. ಕಾಂಗ್ರೆಸ್‌ನಿಂದ ಪ್ರಭಾ ಮಲ್ಲಿಕಾರ್ಜುನ್‌, ಬಿಜೆಪಿಯಿಂದ ಗಾಯತ್ರಿ ಸಿದ್ದೇಶ್ವರ್‌ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಜಿ.ಬಿ.ವಿನಯ್‌ ಕುಮಾರ್‌ ಅವರು ಕಣಕ್ಕಿಳಿದಿದ್ದು, ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಜಾಸ್ತಿಯಾಗಿದೆ.

VISTARANEWS.COM


on

Davangere Lok Sabha Constituency
Koo

ದಾವಣಗೆರೆ: ಬೆಣ್ಣೆ ದೋಸೆಗೆ ಖ್ಯಾತಿಯಾಗಿರುವ ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ (Davangere Lok Sabha Constituency) ಈ ಬಾರಿಯೂ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರ ಕುಟುಂಬಗಳ ನಡುವಿನ ಸಮರವೇ ಜೋರಾಗಿದೆ. ಆದರೆ, ಈ ಕುಟುಂಬಗಳ ಮಹಿಳೆಯರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇದರ ಮಧ್ಯೆಯೇ, ಜಿ.ಬಿ. ವಿನಯ್‌ ಕುಮಾರ್‌ ಅವರು ಕಾಂಗ್ರೆಸ್‌ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಮತಗಳ ವಿಭಜನೆ ನಿರೀಕ್ಷಿಸಲಾಗಿದೆ.

ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರಿಗೆ ಅನಾರೋಗ್ಯದ ಕಾರಣದಿಂದಾಗಿ ಬಿಜೆಪಿಯು ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್‌ ಅವರನ್ನು ಕಣಕ್ಕಿಳಿಸಿದೆ. ಅತ್ತ, ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಇದರಿಂದಾಗಿ ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ನಾರಿಶಕ್ತಿಯ ನಡುವಿನ ದೊಡ್ಡ ಸಮರವಾಗಿದೆ. ಹಾಗಾಗಿ, ಯಾರು ಗೆದ್ದರೂ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಯಾಗಲಿದೆ ಎಂದೇ ಹೇಳಲಾಗುತ್ತಿದೆ.

ಜಿ.ಎಂ.ಸಿದ್ದೇಶ್ವರ್‌ ಅವರು ಅನಾರೋಗ್ಯದ ಮಧ್ಯೆಯೂ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ನರೇಂದ್ರ ಮೋದಿ ಅವರ ಅಲೆಯು ಕೂಡ ಕ್ಷೇತ್ರದಲ್ಲಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಧ್ಯಸ್ಥಿಕೆಯಿಂದಾಗಿ ಕ್ಷೇತ್ರದಲ್ಲಿ ಭುಗಿಲೆದ್ದಿದ್ದ ಭಿನ್ನಮತವು ಶಮನವಾಗಿದೆ. ಹಾಗಾಗಿ, ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಗೆಲುವು ಸಿಕ್ಕರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

ದಾವಣಗೆರೆ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ವರ್ಚಸ್ಸಿದೆ. ಇವರ ಪುತ್ರ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸಚಿವರೂ ಆಗಿದ್ದಾರೆ. ಲಿಂಗಾಯತ ಮತಗಳ ಮೇಲೆ ಇವರ ಕುಟುಂಬದ ಹಿಡಿತವಿದೆ. ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಕಳೆದ ಒಂದು ವರ್ಷದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು ಜನರಿಗೆ ಹತ್ತಿರವಾಗಿದ್ದಾರೆ. ಮಾವ, ಪತಿಯ ಬಲದಿಂದ, ಸಮಾಜ ಸೇವೆ, ಕಾಂಗ್ರೆಸ್‌ ಗ್ಯಾರಂಟಿಗಳ ಫಲವಾಗಿ ಪ್ರಭಾ ಮಲ್ಲಿಕಾರ್ಜುನ್‌ ಅವರು ಮುನ್ನಡೆಯ ವಿಶ್ವಾಸದಲ್ಲಿದ್ದಾರೆ. ಆದರೆ, ಜಿ.ಬಿ.ವಿನಯ್‌ ಕುಮಾರ್‌ ಅವರು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿರುವುದು ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ತುಸು ಹಿನ್ನಡೆ ಎಂದೇ ಹೇಳಲಾಗುತ್ತಿದೆ.

ಪ್ರಭಾ ಮಲ್ಲಿಕಾರ್ಜುನ್

2019, 2014ರ ಫಲಿತಾಂಶ ಏನಾಗಿತ್ತು?

2019ರಲ್ಲಿ ಬಿಜೆಪಿಯ ಜಿ.ಎಂ.ಸಿದ್ದೇಶ್ವರ್‌ ಅವರು ಕಾಂಗ್ರೆಸ್‌ನ ಎಚ್‌.ಬಿ.ಮಂಜಪ್ಪ ಅವರ ವಿರುದ್ಧ ಸುಮಾರು 1.69 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. ಕಳೆದ 4 ಲೋಕಸಭೆ ಚುನಾವಣೆಗಳಲ್ಲೂ ಬಿಜೆಪಿಯಿಂದ ಜಿ.ಎಂ.ಸಿದ್ದೇಶ್ವರ್‌ ಅವರೇ ಗೆಲುವು ಸಾಧಿಸಿದ್ದಾರೆ. 2004, 2009 ಹಾಗೂ 2014ರಲ್ಲೂ ಜಿ.ಎಂ.ಸಿದ್ದೇಶ್ವರ್‌ ಅವರೇ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ: Dakshina Kannada Lok Sabha Constituency : ದಕ್ಷಿಣ ಕನ್ನಡದಲ್ಲಿ ವಿಜಯ ಅಭಿಯಾನ ಮುಂದುವರಿಸಲು ಬಿಜೆಪಿ ಕಾತರ

Continue Reading

ಕ್ರೈಂ

Dead Body Found : ಕಾವೇರಿ ನದಿಯಲ್ಲಿ ತೇಲಿ ಬಂದ ಶವಗಳು; ನೋಡಲು ಮುಗಿಬಿದ್ದ ಜನರು

Dead Body Found : ಕಾವೇರಿ ನದಿಯಲ್ಲಿ ಜೋಡಿ ಶವಗಳು ತೇಲಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

Dead Body Found Bodies found floating in Cauvery river
Koo

ಮಂಡ್ಯ: ಕಾವೇರಿ ನದಿಯಲ್ಲಿ ಮಹಿಳೆ ಹಾಗೂ ಪುರುಷನ ಶವ (Dead Body Found) ಪತ್ತೆಯಾಗಿದೆ. ಮಂಡ್ಯದ ಶ್ರೀರಂಗಪಟ್ಟಣದ ಸಂತೆಮಾಳದ ಬಳಿಯ ಕಾವೇರಿ ನದಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವಗಳು ತೇಲಿ ಬಂದಿವೆ.

ಸ್ಥಳೀಯರೊಬ್ಬರ ಮಾಹಿತಿ ಮೇರೆಗೆ ಸ್ಥಳಕ್ಕೆ ಶ್ರೀರಂಗಪಟ್ಟಣದ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಿಂದ ಶವಗಳ ಹೊರ ತೆಗೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯ ಮೃತರ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ಶುರು ಮಾಡಿದ್ದಾರೆ.

ಇನ್ನೂ ನದಿಯಲ್ಲಿ ಶವಗಳು ತೇಲುತ್ತಿದೆ ಎಂಬ ವಿಷಯ ಹಬ್ಬುತ್ತಿದ್ದಂತೆ ಜನರುಸೇತುವೆ ಮೇಲೆ ಮುಗಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಸದ್ಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ: Drowns in Lake: ಕೆರೆಯಲ್ಲಿ ಮುಳುಗಿ ಯುವಕ ಸಾವು; ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕೊಟ್ಟಿಗೆಗೆ ಬೆಂಕಿ ತಗುಲಿ ಭಾರೀ ಅಗ್ನಿ ಅವಘಡ

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಕೆಂಚಗದ್ದೆ ಗ್ರಾಮದಲ್ಲಿ ಕೊಟ್ಟಿಗೆಗೆ ಬೆಂಕಿ ತಗುಲಿ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ನಯನ ಮಂಜುನಾಥ ಹೆಗಡೆ ಎಂಬುವವರ ಮನೆಯ ಕೊಟ್ಟಿಗೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿತ್ತು. ನೋಡನೋಡುತ್ತಿದ್ದಂತೆ ಬೆಂಕಿಯು ಕೊಟ್ಟಿಗೆಯಲ್ಲಿದ್ದ ಹುಲ್ಲು ಎಲ್ಲವೂ ಸುಟ್ಟು ಕರಕಲಾಗಿತ್ತು. ಇದರಿಂದಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿತ್ತು. ತೀವ್ರ ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಶಿರಸಿ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಡುಗೆ ಸಿಲಿಂಡರ್ ಸಿಡಿದು ಅಪಾರ ಹಾನಿ

ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರದ ನಿರ್ಮಲನಗರದಲ್ಲಿ ತಡರಾತ್ರಿ ಅಡುಗೆ ಸಿಲಿಂಡರ್ ಸಿಡಿದು ಅಪಾರ ಹಾನಿಯಾಗಿದೆ. ಮಹಮ್ಮದ್ ಶಹಾಬುದ್ದೀನ್ ರಾಝ್ವಿ ಎಂಬುವವರು ಇದ್ದ ಬಾಡಿಗೆ ಮನೆಯಲ್ಲಿ ಸ್ಫೋಟಗೊಂಡಿದೆ. ಮನೆಯಲ್ಲಿ ಗ್ಯಾಸ್ ಆನ್‌ ಮಾಡುವಾಗ ಅನಿಲ ಸೋರಿಕೆಯಾಗಿ ಸಿಲಿಂಡರ್ ಸಿಡಿದಿದೆ.

ಸ್ಫೋಟದಿಂದಾಗಿ ಮನೆಯ ಗೋಡೆ, ಚಾವಣಿ ಬಿರುಕು ಬಿಟ್ಟಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ವೆಸ್ಟ್‌ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಬ್ಲ್ಯಾಸ್ಟ್ ಆದ ಸಿಲಿಂಡರ್ ಸೇರಿ ಎರಡು ಸಿಲಿಂಡರ್ ಹೊರತೆಗೆದರು. ದಾಂಡೇಲಿ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡದಲ್ಲಿ ಶಾಲಾ ವಾಹನದಲ್ಲಿ ಕಾಣಿಸಿಕೊಂಡ ಬೆಂಕಿ

ನವಲೂರು ಬಳಿಯ ಖಾಸಗಿ ರೆಸಿಡೆನ್ಸಿ ಶಾಲಾ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಧಾರವಾಡದ ಕೋರ್ಟ್ ವೃತ್ತದಲ್ಲಿ ಘಟನೆ ನಡೆದಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವಾಗ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ವಾಹನ ಚಾಲಕ ಬಸ್‌ ನಿಲ್ಲಿಸಿ ವಾಹನದಲ್ಲಿದ್ದ ಮಕ್ಕಳನ್ನು ಕೆಳಗಿಸಿದ್ದಾನೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bangalore Rain: ಮಳೆ ಹಾನಿ ಬಗ್ಗೆ ಬೆಸ್ಕಾಂಗೆ ದೂರುಗಳ ಸುರಿಮಳೆ; ಉರುಳಿ ಬಿದ್ದ 176 ವಿದ್ಯುತ್ ಕಂಬ, 9 ಟ್ರಾನ್ಸ್‌ಫಾರ್ಮರ್‌ಗೆ ಹಾನಿ

Bangalore Rain: ಬೆಂಗಳೂರು ನಗರ ವ್ಯಾಪ್ತಿಯಲ್ಲಿ 74 ವಿದ್ಯುತ್ ಕಂಬಗಳು ಧರೆಗುರುಳಿದ್ದು, 102 ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. ಇನ್ನು 9 ಟ್ರಾನ್ಸ್ ಫಾರ್ಮರ್‌ಗಳಿಗೆ ಮಳೆಯಿಂದ ಹಾನಿಯಾಗಿದೆ. ಇದರಿಂದ ಬೆಸ್ಕಾಂಗೆ ಕೋಟ್ಯಂತರ ರೂ. ನಷ್ಟವಾಗಿದೆ.

VISTARANEWS.COM


on

Bangalore Rain
ಬೆಂಗಳೂರಿನ ಬಿಟಿಎಂ ಲೇಔಟ್‌ನ 29ನೇ ಮುಖ್ಯ ರಸ್ತೆಗೆ ಬೃಹತ್ ಮರ ಬಿದ್ದಿದ್ದು, ತೆರವು ಕಾರ್ಯ ನಡೆಯುತ್ತಿದೆ.
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಸುರಿದ ಧಾರಾಕಾರ ಮಳೆಯು (Bangalore Rain) ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹೀಗಾಗಿ ಬೆಸ್ಕಾಂ ಹೆಲ್ಪ್ ಲೈನ್‌ 1912ಗೆ ದೂರುಗಳ ಸುರಿಮಳೆಯೇ ಬಂದಿದ್ದು, ವಿದ್ಯುತ್‌ ಕಂಬಗಳು ಉರುಳಿರುವುದು, ಮರಗಳು ಬಿದ್ದಿರುವುದು, ವಿದ್ಯುತ್‌ ಕಡಿತ ಸೇರಿ ಹಲವು ಸಮಸ್ಯೆಗಳ ಬಗ್ಗೆ ಬರೋಬ್ಬರಿ 8745 ದೂರುಗಳು ದಾಖಲಾಗಿವೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಭಾನುವಾರ (ಜೂ.2) ಸುರಿದ ಮಳೆಯು (Heavy Rain) 133 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿರುವುದು ಕಂಡುಬಂದಿದೆ.

ಧಾರಕಾರ ಮಳೆ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ದೂರುಗಳು ಬಂದಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ 74 ವಿದ್ಯುತ್ ಕಂಬಗಳು ಧರೆಗುರುಳಿದ್ದು, 102 ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. ಇನ್ನು 9 ಟ್ರಾನ್ಸ್‌ಫಾರ್ಮರ್‌ಗಳಿಗೆ ಮಳೆಯಿಂದ ಹಾನಿಯಾಗಿದೆ. ಭಾರಿ ಮಳೆಗೆ ಬೆಸ್ಕಾಂ ತತ್ತರಿಸಿದ್ದು, ತಡರಾತ್ರಿ ಸುರಿದ ಮಳೆಯಿಂದ ಬೆಸ್ಕಾಂಗೆ ಕೋಟ್ಯಂತರ ರೂ. ನಷ್ಟವಾಗಿದೆ.

ಬೆಂಗಳೂರಿನಲ್ಲಿ ಭಾನುವಾರ 111.2 ಮಿ.ಮೀ ಮಳೆ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ಸುರಿದ ಮಳೆಯು 133 ವರ್ಷಗಳ ದಾಖಲೆಯನ್ನು ಮುರಿದಿದೆ. ರಾಜಧಾನಿಯಲ್ಲಿ ಮೇ 2ರಂದು 111.2 ಮಿ.ಮೀ ಮಳೆ ಸುರಿದಿದ್ದು, ಜೂನ್ ತಿಂಗಳಲ್ಲಿ ಆದ ದಾಖಲೆಯ ಮಳೆ ಇದಾಗಿದೆ. 1891 ಜೂನ್ 16 ರಂದು 101.6 ಮಿ.ಮೀ ಮಳೆಯಾಗಿತ್ತು. ಆದರೆ, ನೆನ್ನೆ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ ಮುರಿದಿದೆ ಎಂದು ವಿಸ್ತಾರನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

1891 ಜೂನ್ 16 ರಂದು 101.6 ಮಿ.ಮೀ ಮಳೆಯಾಗಿತ್ತು. 2013 ಜೂನ್ 1 ರಂದು 100 ಮಿ.ಮೀ ಮಳೆ ಹಾಗೂ 2009 ಜೂನ್ 11 ರಂದು 89.6 ಮಿ.ಮೀ ಮಳೆಯಾಗಿತ್ತು.

Bangalore Rain

ಇದನ್ನೂ ಓದಿ | Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

ಬೆಂಗಳೂರಿಗೆ ಮುಂಗಾರು ಶಾಕ್‌, ನೂರಾರು ಮರಗಳು ಧರೆಗೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಅಲ್ಲೇ ಲಾಕ್!‌

bangalore rain news

ಬೆಂಗಳೂರು: ಮುಂಗಾರು (monsoon) ಸಾಕಷ್ಟು ಅಬ್ಬರದಿಂದಲೇ ರಾಜಧಾನಿಯನ್ನು (Bangalore rain news) ಪ್ರವೇಶಿಸಿದೆ. ನಿನ್ನೆ ಸಂಜೆಯಿಂದ ಸುರಿದ ಭಾರಿ ಮಳೆಗೆ ನಗರದ (Bengaluru rain news) ಹಲವು ಕಡೆ ಮರಗಳು (trees fall) ಮುರಿದುಬಿದ್ದಿವೆ. ತಗ್ಗು ಪ್ರದೇಶಗಳಿಗೆ ನೀರು (water clogging) ನುಗ್ಗಿದೆ. ಬೆಳ್ಳಂದೂರಿನ ಒಂದು ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗೆ ನೀರು ನುಗ್ಗಿದ್ದು, ನಿವಾಸಿಗಳು ಮನೆಗಳಲ್ಲೇ ಲಾಕ್‌ ಆಗಿದ್ದಾರೆ.

“ನಿನ್ನೆ ಸುರಿದ ಭಾರಿ ಮಳೆಗೆ ನಗರದಲ್ಲಿ ಸುಮಾರು 260ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಬಹುತೇಕ ಜಯನಗರ. ಬಸವನಗುಡಿ ಸುತ್ತಮುತ್ತಲಿನಲ್ಲಿ 100ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಸದ್ಯ ಮರಗಳನ್ನು ತೆರವು ಮಾಡೋದಕ್ಕೆ ಬಿಬಿಎಂಪಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಚರಣೆ ಮಾಡುತ್ತಿದ್ದಾರೆ. ಮೊದಲು ಸಂಚಾರಕ್ಕೆ ಅನುಕೂಲ ಕಲ್ಪಿಸಲು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳ ತೆರವು ಮಾಡುತ್ತಿದ್ದೇವೆ. ಸಂಜೆ ವೇಳೆಗೆ ನಗರದ ಬಹುತೇಕ ಕಡೆ ಮರಗಳನ್ನು ತೆರವು ಮಾಡುತ್ತೇವೆ” ಎಂದು ಬಿಬಿಎಂಪಿ ಅರಣ್ಯ ವಿಭಾಗದ ಮುಖ್ಯಸ್ಥರು ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

Bangalore rain news

ಬೃಹತ್ ಗಾತ್ರದ ಮರಗಳು, ಸಣ್ಣ ಮರಗಳು ಹಾಗೂ ಕೊಂಬೆಗಳು ಧರಾಶಾಯಿಯಾದವು. ಬಸವೇಶ್ವರನಗರದಲ್ಲೂ ಮರಗಳು ಧರೆಗುರುಳಿವೆ. 3ನೇ ಮುಖ್ಯರಸ್ತೆಯಲ್ಲಿ ಕಾರ್ ಮೇಲೆ ಮರ ಬಿದ್ದು ಕಾರ್ ಜಖಂ ಆಗಿದೆ. ಜಯನಗರದ ಕೃಷ್ಣರಾವ್ ಪಾರ್ಕ್ ಬಳಿ ಬೃಹತ್ ಗಾತ್ರದ ಮರ ಟ್ರಾನ್ಸ್‌ಫಾರ್ಮರ್‌ ಮೇಲೆ ಬಿದ್ದು ರಾತ್ರಿ ಇಡೀ ವಿದ್ಯುತ್ ಕಟ್‌ ಆಗಿದೆ. ಜಯನಗರ ಸುತ್ತಮುತ್ತ ಸುಮಾರು ‌50ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಗಿರಿನಗರದಲ್ಲಿ ಮರ ಬಿದ್ದು ಕಾರು ಹಾಗೂ ದ್ವಿಚಕ್ರ ವಾಹನ ಸಂಪೂರ್ಣ ನಜ್ಜು ಗುಜ್ಜು ಆಗಿದೆ.

ಹಲವು ತಗ್ಗು ಪ್ರದೇಶಗಳಲ್ಲಿ ಮನೆಗಳು ಜಲಾವೃತಗೊಂಡವು. ಕೊತ್ತನೂರು ಭಾಗದಲ್ಲಿ ರಸ್ತೆ ಹಾಗೂ ಮನೆಗಳು ಪೂರ್ತಿ ಸಂಪೂರ್ಣ ಜಲಾವೃತವಾಗಿದೆ. ಮನೆಯೊಳಗೆ ನೀರು ತುಂಬಿ ಮನೆ ಮಾಲೀಕರು ಇಡೀ ರಾತ್ರಿ ಜಾಗರಣೆ ಮಾಡಿದರು. ಸುಮಾರು 60ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ತುಂಬಿದೆ. ನಗರದ 8 ವಲಯಗಳಲ್ಲಿ ಮನೆಗಳಿಗೆ ನೀರು ತುಂಬಿ ಅಕ್ಕಿ, ಬೇಳೆ ಸೇರಿದಂತೆ ಇತರೆ ವಸ್ತುಗಳು ಹಾಳಾಗಿವೆ. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವಂತೆ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ.

Bangalore rain news

ರಸ್ತೆಯಲ್ಲಿ ನೀರು ನಿಂತಿದ್ದು ಒಂದು ತರಹದ ಸಮಸ್ಯೆಯಾದರೆ, ವಿದ್ಯುತ್ ಕಂಬಗಳದ್ದು ಮತ್ತೊಂದು ಸಮಸ್ಯೆ. ಕಂಬಗಳು ಮುರಿದು ಬಿದ್ದಿವೆ. ಉಮಾ ಥಿಯೇಟರ್ ಬಳಿ 4 ವಿದ್ಯುತ್ ಕಂಬಗಳು ಗಾಳಿಯಿಂದ ಅರ್ಧಂಬರ್ಧ ಬಿದ್ದಿವೆ. 4 ವಿದ್ಯುತ್ ಕಂಬಗಳ ವಯರ್ ರಸ್ತೆಯಲ್ಲಿ ಬಿದ್ದರೆ ವಾಹನ ಸವಾರರ ಜೀವಕ್ಕೆ ಹಾನಿ ಸಾಧ್ಯತೆ ಇದೆ. ಲಾಲ್‌ಬಾಗ್‌ನಲ್ಲಿ ಮರ ಬಿದ್ದು ಕಾಂಪೌಂಡ್ ಕುಸಿತವಾಗಿದೆ.

ಇದನ್ನೂ ಓದಿ: Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

ನಿನ್ನೆ ಸುರಿದ ಮಳೆಗೆ ಬೆಳ್ಳಂದೂರಿನ ಗ್ರೀನ್ ಎಲಿಗೆನ್ಸ್ ಅಪಾರ್ಟ್ಮೆಂಟ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದ್ದು, ನಾಲ್ಕು ಕಾರು, ಬೈಕ್‌ಗಳು ಮುಳುಗಿವೆ. ರಾಜಕಾಲುವೆ ನೀರು ಅಪಾರ್ಟ್ಮೆಂಟ್‌ನೊಳಗೆ ನುಗ್ಗಿದೆ. ಕಳೆದ ಮೂರು ದಿನದಿಂದ ಅಪಾರ್ಟ್ಮೆಂಟ್‌ಗೆ ವಿದ್ಯುತ್‌ ಸಂಪರ್ಕ ಕಟ್‌ ಆಗಿದೆ. ನಿವಾಸಿಗಳು ಅಪಾರ್ಟ್ಮೆಂಟ್‌ನಲ್ಲೇ ಲಾಕ್ ಆಗಿದ್ದಾರೆ. ಅಪಾರ್ಟ್ಮೆಂಟ್ ಬೇಸ್‌ಮೆಂಟ್‌ನಿಂದಲೇ ಓಡಾಡಲು ದಾರಿ ಆಗಿರುವ ಕಾರಣ, ಕತ್ತಿನವರೆಗೆ ನಿಂತಿರುವ ನೀರಿನಲ್ಲಿ ಓಡಾಡಲಾಗದೆ 40 ಫ್ಲಾಟ್ ಮಾಲೀಕರು ಅಲ್ಲೇ ಬಾಕಿ ಆಗಿದ್ದಾರೆ. ಪಕ್ಕದ ಕಾಂಪೌಂಡ್‌ಗೆ ಏಣಿ ಹಾಕಿ ಓಡಾಟ ಮಾಡುತ್ತಿದ್ದಾರೆ.

Continue Reading
Advertisement
Samsung Big TV Days Sale Exciting offer on big TVs
ದೇಶ2 mins ago

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Davangere Lok Sabha Constituency
ದಾವಣಗೆರೆ4 mins ago

Davangere Lok Sabha Constituency: ದಾವಣಗೆರೆಯಲ್ಲಿ ನಾರಿಶಕ್ತಿ ಕದನ, ಯಾರು ಗೆದ್ದರೂ ಇತಿಹಾಸ

Rahul Dravid
ಕ್ರಿಕೆಟ್6 mins ago

Rahul Dravid: ರೋಹಿತ್​, ಕೊಹ್ಲಿ, ಪಂತ್​ ಸೇರಿ ಎಲ್ಲ ಆಟಗಾರರಿಗೆ ಖಡಕ್​ ಎಚ್ಚರಿಕೆ ನೀಡಿದ ಕೋಚ್​ ದ್ರಾವಿಡ್​

Kannada New Movie Mandela nari shrinivas
ಸ್ಯಾಂಡಲ್ ವುಡ್6 mins ago

Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

Election Result 2024
ಪ್ರಮುಖ ಸುದ್ದಿ12 mins ago

Election Result 2024: ಇಂಡಿ ಒಕ್ಕೂಟ ಸಭೆ ಸೇರಿದ್ದ ಸ್ಥಳದಲ್ಲೇ ವಾಸ್ತುದೋಷ, ಅಂದು ಅಮವಾಸ್ಯೆ ಬೇರೆ; ಹಾಗಾಗಿ…

Fact Check
Fact Check23 mins ago

Fact Check: ಸೋಲುವ ಭೀತಿಯಲ್ಲಿ ಬ್ಯಾಂಕಾಕ್‌ಗೆ ಹಾರಲು ಸಿದ್ಧರಾದ್ರಾ ರಾಹುಲ್‌ ಗಾಂಧಿ? ವೈರಲ್‌ ಆಗಿರುವ ಬೋರ್ಡಿಂಗ್‌ ಪಾಸ್‌ನ ಅಸಲಿಯತ್ತೇನು?

Benefits Of Walk After Meal
ಆರೋಗ್ಯ27 mins ago

Benefits Of Walk After Meal: ಊಟದ ಬಳಿಕ ಲಘುವಾದ ವಾಕಿಂಗ್‌ ಮಾಡಿ, ಆರೋಗ್ಯದಲ್ಲಿನ ಬದಲಾವಣೆ ನೋಡಿ!

Dead Body Found Bodies found floating in Cauvery river
ಕ್ರೈಂ32 mins ago

Dead Body Found : ಕಾವೇರಿ ನದಿಯಲ್ಲಿ ತೇಲಿ ಬಂದ ಶವಗಳು; ನೋಡಲು ಮುಗಿಬಿದ್ದ ಜನರು

Ram Charan Instagram story of daughter Klin Kaara receiving bujji
ಟಾಲಿವುಡ್33 mins ago

Ram Charan: ರಾಮ್‌ಚರಣ್‌ ಮಗಳಿಗೆ ಸಿಕ್ತು ಪ್ರಭಾಸ್‌ರಿಂದ ಪುಟಾಣಿ ಬುಜ್ಜಿ!

Kedar Jadhav Retirement
ಕ್ರಿಕೆಟ್42 mins ago

Kedar Jadhav Retirement: ಧೋನಿ ಶೈಲಿಯಲ್ಲೇ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕೇದಾರ್​ ಜಾಧವ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌