Money plus : ಸೇಲ್ಸ್‌ನಲ್ಲಿ ಯಶಸ್ಸು ಗಳಿಸಲು ಪ್ರಾಕ್ಟೀಸ್‌ ಅಗತ್ಯ - Vistara News

ಮನಿ-ಗೈಡ್

Money plus : ಸೇಲ್ಸ್‌ನಲ್ಲಿ ಯಶಸ್ಸು ಗಳಿಸಲು ಪ್ರಾಕ್ಟೀಸ್‌ ಅಗತ್ಯ

ನೀವು ಸತತವಾಗಿ ಅಭ್ಯಾಸ ಮಾಡುತ್ತಿದ್ದರೆ ಮಾತ್ರ ಬಿಸಿನೆಸ್‌ನಲ್ಲಿ(Money plus) ಯಶಸ್ಸು ಗಳಿಸಬಹುದು.

VISTARANEWS.COM


on

business man
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

‌ಅನೇಕ ಮಂದಿ ಉತ್ಸಾಹದಿಂದ ಸೇಲ್ಸ್‌ ಕ್ಷೇತ್ರಕ್ಕೆ ಪದಾರ್ಪಣೆ ಮಾಡುತ್ತಾರೆ. ( Money plus ) ಆದರೆ ಅದನ್ನು ಸತತವಾಗಿ ಅಭ್ಯಾಸ ಅಥವಾ ಪ್ರಾಕ್ಟೀಸ್‌ ಮಾಡುವುದಿಲ್ಲ. ಒಬ್ಬ ಸೇಲ್ಸ್‌ ಪರ್ಸನ್‌ ವರ್ಷಗಟ್ಟಲೆ ಪ್ರಾಕ್ಟೀಸ್‌ ಮಾಡಬೇಕಾಗುತ್ತದೆ. ಸಂಗೀತಜ್ಞರೂ ಹತ್ತಾರು ವರ್ಷ ಪ್ರಾಕ್ಟೀಸ್‌ ಮಾಡಬೇಕಾಗುತ್ತದೆ. ಬಿಸಿನೆಸ್‌ ಸಲಹೆಗಾರ ಭೂಪೇಂದ್ರ ಸಿಂಗ್‌ ರಾಥೋರ್‌ ಹೇಳ್ತಾರೆ- ನನ್ನ ಅನುಭವದ ಪ್ರಕಾರ ಸೇಲ್ಸ್‌ನಲ್ಲಿ ತಿಂಗಳಿಗೆ 1-2 ಕೋಟಿ ರೂ. ಗಳಿಸಲು 7-8 ವರ್ಷ ಸೇಲ್ಸ್‌ನಲ್ಲಿ ಪರಿಣತಿ ಪಡೆಯಬೇಕು.

ಹಾಗಂತ 7-8 ವರ್ಷ ಬೇಕೆ ಎಂದು ನಿರಾಶರಾಗಬೇಕಿಲ್ಲ. ಮೊದಲ ವರ್ಷದಿಂದಲೇ ನೀವು ಲಕ್ಷ ಅಥವಾ ಎರಡು ಲಕ್ಷ ಗಳಿಸಬಹುದು. ಆದರೆ ನೀವು ದಿನವಹಿ ಆಧಾರದಲ್ಲಿ ಅಭ್ಯಾಸ ಮಾಡಬೇಕಾಗುತ್ತದೆ. ಸೆಲ್ಲಿಂಗ್‌ ಮಾಡುವ ಕಲೆ ಕರಗತವಾದವರು ಕೆಲವೇ ತಿಂಗಳಲ್ಲಿ ಕೋಟ್ಯಂತರ ರೂ. ದುಡ್ಡು ಗಳಿಸುತ್ತಾರೆ. ಪ್ರಾಕ್ಟೀಸ್‌ ಮೇಕ್ಸ್‌ ಪರ್‌ ಫೆಕ್ಟ್‌ ಎನ್ನುವುದು ನಿಜ. ಸೇಲ್ಸ್‌ ವಿಚಾರದಲ್ಲೂ ಇದು ಸತ್ಯ. ನೀವು ವರ್ಷಗಟ್ಟಲೆ ಪ್ರಾಕ್ಟೀಸ್‌ ಮಾಡಲು ತಯಾರಾಗಿರಬೇಕು. ಹಾಗೂ ಪ್ರತಿ ದಿನವೂ ಇದನ್ನು ತಪ್ಪದೆ ಮಾಡಬೇಕು. ರಿಟರ್ನ್‌ ದೊಡ್ಡದಾಗಿರುತ್ತದೆ.

ಬಿಸಿನೆಸ್‌ನಲ್ಲಿ ಸಕ್ಸಸ್‌ ಆಗಲು ಅದ್ಭುತವಾದ ಎರಡು ಮಂತ್ರಗಳಿವೆ. ಅವುಗಳೆಂದರೆ ಓವರ್‌ ಕಮಿಟ್‌ ಮತ್ತು ಓವರ್‌ ಡೆಲಿವರ್.‌ ಅತ್ಯಂತ ಬದ್ಧತೆ ಮತ್ತು ಗರಿಷ್ಠ ಕಾರ್ಯನಿರ್ವಹಣೆ. ಸೇಲ್ಸ್‌ನಲ್ಲಿ ಇವೆರಡೂ ಅನಿವಾರ್ಯ. ಗ್ರೇಟ್‌ ಸೇಲ್ಸ್‌ ಪರ್ಸನ್‌ ಆಗಬೇಕಿದ್ದರೆ ಈ ಎರಡೂ ಗುಣಗಳು ನಿಮ್ಮಲ್ಲಿ ಇರಲೇಬೇಕು. ಭೂಪೇಂದರ್‌ ಸಿಂಗ್‌ ರಾಥೋರ್‌ ಹೇಳುತ್ತಾರೆ- ನಾನು ಇ-ಲರ್ನಿಂಗ್‌ ಪ್ರೋಗ್ರಾಮ್‌ ಶುರು ಮಾಡಿದಾಗ ಗ್ರಾಹಕರಿಗೆ ನೂರಕ್ಕೂ ಹೆಚ್ಚು ವಿಡಿಯೊಗಳನ್ನು ಕಳಿಸುವ ವಾಗ್ದಾನ ಮಾಡಿದ್ದೆ. ಇದು ಓವರ್‌ ಕಮಿಟ್‌ ಮೆಂಟ್‌ ಆಗಿತ್ತು. ಈ ರೀತಿ ನೂರಾರು ಕಂಟೆಂಟ್‌ ವಿಡಿಯೊಗಳನ್ನು ಕೊಡುವ ಮತ್ತೊಬ್ಬ ಅಸಾಮಿಯನ್ನು ನಾನು ಕಂಡಿರಲಿಲ್ಲ. ನೀವು ಓವರ್‌ ಕಮಿಟ್‌ ಆಗಿದ್ದಾಗ ನಿಮ್ಮ ಮನಸ್ಸು ಮತ್ತು ಶರೀರ ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತದೆ.

ಇದನ್ನೂ ಓದಿ: Money Guide : ಸುಲಭವಾಗಿ ನಿಮ್ಮ ಆದಾಯ ಹೆಚ್ಚಿಸಿಕೊಳ್ಳೋದು ಹೇಗೆ?

ನೀವು ಗ್ರಾಹಕರ ಜತೆಗೆ ಚರ್ಚಿಸುವಾಗ ಓವರ್‌ ಕಮಿಟ್‌ ಮೆಂಟ್‌ ಬಗ್ಗೆ ಪ್ರಸ್ತಾಪಿಸಿ. ಲೈಫ್‌ ಟೈಮ್‌ ಸರ್ವೀಸ್‌ ಕೊಡುವೆ ಎಂಬ ವಾಗ್ದಾನ ನೀಡಿ. ಹಾಗೂ ಅದರಂತೆ ನಡೆದುಕೊಳ್ಳಿ. ಇಂಥ ದಿನ ಕರೆ ಮಾಡುವೆ ಎಂದರೆ ಅದೇ ದಿನ ಕರೆ ಮಾಡಿರಿ. ಸೇಲ್ಸ್‌ನಲ್ಲಿ ಫಲಿತಾಂಶ ಎಂದರೆ ಹಣ ಇದ್ದಂತೆ. ಫಲಿತಾಂಶ ಚೆನ್ನಾಗಿ ಬರಬೇಕಿದ್ದರೆ ಹೊಸ ಕೌಶಲಗಳನ್ನು ಕಲಿಯಬೇಕು. ತರಬೇತಿ ಪಡೆಯಬೇಕು. ಇಲ್ಲದಿದ್ದರೆ ಆಯುಷ್ಯ ನಷ್ಟವಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

ಹಣಕಾಸು ನಿಯಮ, ಎಲ್ ಪಿಜಿ ದರ, ಸಂಚಾರ ನಿಯಮ, ಆಧಾರ್ ಕಾರ್ಡ್ ನವೀಕರಣ ಸೇರಿದಂತೆ ಜೂನ್ 1ರಿಂದ ಹಲವು ಪ್ರಮುಖ ಆರ್ಥಿಕ ನಿಯಮಗಳಲ್ಲಿ ಬದಲಾವಣೆಗಳು (New Financial Rules) ಆಗಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

New Financial Rules
Koo

ಮೇ ತಿಂಗಳಾಂತ್ಯದಲ್ಲಿ ಈಗ ನಾವಿದ್ದೇವೆ. ಹೀಗಾಗಿ ಮುಂದಿನ ತಿಂಗಳ ಆರಂಭದಿಂದಲೇ ವಿವಿಧ ಹಣಕಾಸು ನಿಯಮಗಳು (New Financial Rules) ಬದಲಾಗಲಿದೆ. ಜೂನ್ 1ರಿಂದ (june) ಯಾವೆಲ್ಲ ಹೊಸ ನಿಯಮಗಳು ಬರಲಿದೆ, ಹಣಕಾಸು ಕಾನೂನಿನಲ್ಲಿ ಏನೆಲ್ಲಾ ಬದಲಾವಣೆಗಳು ಆಗಲಿದೆ ಎಂಬ ಕುರಿತು ಮಾಹಿತಿ ಇಲ್ಲಿದೆ.

2024ರ ಜೂನ್ 1ರಿಂದ ಐದು ಪ್ರಮುಖ ಆರ್ಥಿಕ ಬೆಳವಣಿಗೆಗಳು ಸಂಭವಿಸುತ್ತಿವೆ. ಇದರಲ್ಲಿ ಮುಖ್ಯವಾಗಿ ಹೊಸ ಹಣಕಾಸು ನಿಯಮಗಳು ಜಾರಿಗೆ ಬರಲಿದೆ. ಅವುಗಳಲ್ಲಿ ಹಣಕಾಸು ನಿಯಮ (Financial Changes), ಎಲ್ ಪಿಜಿ ದರ (LPG Cylinder Prices), ಸಂಚಾರ ನಿಯಮ (New Traffic Rules), ಆಧಾರ್ ಕಾರ್ಡ್ (Aadhaar card update) ನವೀಕರಣ ಸೇರಿವೆ.

ಎಲ್ ಪಿ ಜಿ ಸಿಲಿಂಡರ್ ಬೆಲೆಗಳು

ತೈಲ ಮಾರುಕಟ್ಟೆ ಕಂಪೆನಿಗಳು ಪ್ರತಿ ತಿಂಗಳ ಮೊದಲನೇ ದಿನ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ನಿಗದಿ ಪಡಿಸುತ್ತದೆ ಎಂಬುದನ್ನು ಗಮನಿಸುವುದು ಅತ್ಯಗತ್ಯ. ಮೇ ತಿಂಗಳಲ್ಲಿ ಸಂಸ್ಥೆಗಳು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದವು. ಆದರೂ ತೈಲ ಸಂಸ್ಥೆಗಳು ಜೂನ್ 1 ರಂದು ಮತ್ತೆ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಲಿವೆ.

ತೈಲ ಮಾರುಕಟ್ಟೆ ಕಂಪೆನಿಗಳು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ನಿರ್ಧರಿಸುತ್ತವೆ. 14 ಕೆ.ಜಿ. ದೇಶೀಯ ಮತ್ತು 19 ಕೆ.ಜಿ. ವಾಣಿಜ್ಯ ಸಿಲಿಂಡರ್‌ಗಳ ಬೆಲೆ, ಸಿಎನ್‌ಜಿ ಮತ್ತು ಪಿಎನ್‌ಜಿ ಬೆಲೆಗಳಲ್ಲಿ ಜೂನ್ ಮೊದಲನೇ ತಾರೀಖಿನಂದು ಬದಲಾವಣೆ ಆಗುತ್ತವೆ.

ಬ್ಯಾಂಕುಗಳಿಗೆ ರಜೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬಿಡುಗಡೆ ಮಾಡಿದ ಬ್ಯಾಂಕ್ ಹಾಲಿಡೇ ಪಟ್ಟಿಯ ಪ್ರಕಾರ ಜೂನ್‌ನಲ್ಲಿ 10 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಇದು ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರದ ರಜಾದಿನಗಳನ್ನು ಒಳಗೊಂಡಿದೆ. ಆದರೆ ಈ ರಜೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.


ಡ್ರೈವಿಂಗ್ ಲೈಸೆನ್ಸ್ ನಿಯಮ

ಹೊಸ ಡ್ರೈವಿಂಗ್ ಲೈಸೆನ್ಸ್ ನಿಯಮಗಳು ಜೂನ್ ತಿಂಗಳಿನಿಂದ ಅನ್ವಯವಾಗಲಿದೆ. ಹೊಸ ನಿಯಮದ ಪ್ರಕಾರ ಅತೀ ವೇಗದಲ್ಲಿ ವಾಹನ ಚಲಾಯಿಸಿದರೆ 1000ರಿಂದ 2000 ರೂ.ವರೆಗೆ ದಂಡ ತೆರಬೇಕಾಗಬಹುದು. ಅದೇ ಸಮಯದಲ್ಲಿ, ಪರವಾನಗಿ ಇಲ್ಲದೆ ವಾಹನ ಚಲಾಯಿಸಿದರೆ 500 ರೂ ದಂಡವನ್ನು ಪಾವತಿಸಬೇಕಾಗುತ್ತದೆ.
ಇದಲ್ಲದೇ ಚಾಲಕ ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸಿದರೆ ದಂಡದ ಮೊತ್ತ ಈಗ ಇರುವುದಕ್ಕಿಂತ ಹೆಚ್ಚಾಗುತ್ತದೆ.

ಭಾರತದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು 18 ವರ್ಷ ಪೂರ್ಣಗೊಂಡಿರಬೇಕು ಎಂಬುದು ಹಳೆಯ ನಿಯಮ. ಹೊಸ ನಿಯಮಗಳ ಅಡಿಯಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿದರೆ 25,000 ರೂ.ವರೆಗೆ ದಂಡ ವಿಧಿಸಲಾಗುತ್ತದೆ.

ಜೂನ್ 1ರಿಂದ ಆರ್ ಟಿಒ ಗಳಿಗಿಂತ ಖಾಸಗಿ ಡ್ರೈವಿಂಗ್ ತರಬೇತಿ ಕೇಂದ್ರಗಳಲ್ಲಿ ಡ್ರೈವಿಂಗ್ ಪರೀಕ್ಷೆಯನ್ನು ನಡೆಸಬಹುದು. ಅಲ್ಲದೇ ಅಪ್ರಾಪ್ತ ವಯಸ್ಕರು ಚಾಲನೆ ಮಾಡುವಾಗ ಅಪಘಾತ ಉಂಟು ಮಾಡಿದರೆ ಅವರು 25 ವರ್ಷ ವಯಸ್ಸಿನವರೆಗೆ ಚಾಲನಾ ಪರವಾನಗಿಯನ್ನು ಪಡೆಯಲು ಅರ್ಹರಾಗಿರುವುದಿಲ್ಲ. ಹೆಚ್ಚುವರಿಯಾಗಿ, ಅವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಬಹುದು. ಅವರ ಪೋಷಕರನ್ನು ಜೈಲಿಗೆ ಕಳುಹಿಸಲಾಗುತ್ತದೆ.

ಇದನ್ನೂ ಓದಿ: Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ


ಆಧಾರ್ ಕಾರ್ಡ್ ನಿಯಮ

ಜೂನ್ 14 ರ ಮೊದಲು ಆಧಾರ್ ಕಾರ್ಡ್ ಅನ್ನು ನವೀಕರಿಸದಿದ್ದರೆ ಮುಂದೆ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಸರಳವಾಗಿ ಹೇಳುವುದಾದರೆ ಜೂನ್ 14 ರ ಅನಂತರ ಆಧಾರ್ ಕಾರ್ಡ್ ನವೀಕರಿಸಲು ಶುಲ್ಕ ವಿಧಿಸಲಾಗುತ್ತದೆ.

ಯುಐಡಿಎಐ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸುವ ದಿನಾಂಕವನ್ನು ಜೂನ್ 14 ರವರೆಗೆ ವಿಸ್ತರಿಸಿದೆ. ಇಂತಹ ಪರಿಸ್ಥಿತಿಯಲ್ಲಿ, ಆಧಾರ್ ಹೊಂದಿರುವವರು ಆನ್‌ಲೈನ್‌ನಲ್ಲಿ ಆಧಾರ್ ಕಾರ್ಡ್ ಅನ್ನು ಸುಲಭವಾಗಿ ನವೀಕರಿಸಬಹುದು. ಆದರೂ ಆಫ್‌ಲೈನ್ ಅಪ್‌ಡೇಟ್‌ಗಾಗಿ ಜೂನ್ 14 ರ ಬಳಿಕ ಆಧಾರ್ ಕೇಂದ್ರಕ್ಕೆ ಹೋಗುವಾಗ ಪ್ರತಿ ಅಪ್‌ಡೇಟ್‌ಗೆ 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Continue Reading

ದೇಶ

SBI Warning: ನಕಲಿ ಸಂದೇಶಗಳ ಬಗ್ಗೆ ಎಚ್ಚರ‌ ಇರಲಿ; ಗ್ರಾಹಕರಿಗೆ ಎಸ್ ಬಿ ಐ ಸೂಚನೆ

ಸೈಬರ್ ವಂಚಕರು ಗ್ರಾಹಕರನ್ನು ವಂಚಿಸಲು ಹೊಸ ಹೊಸ ವಿಧಾನವನ್ನು ಬಳಸಿಕೊಳ್ಳಲು ಪ್ರಾರಂಭಿಸಿದ್ದಾರೆ. ನಕಲಿ ಎಪಿಕೆ ಲಿಂಕ್‌ಗಳ ಮೂಲಕ ಬಳಕೆದಾರರಿಗೆ ರಿವಾರ್ಡ್ ಪಾಯಿಂಟ್‌ಗಳನ್ನು ರಿಡೀಮ್ ಮಾಡಲು ಅವಕಾಶ ನೀಡುತ್ತಾರೆ. ಈ ಬಗ್ಗೆ ಗ್ರಾಹಕರು ಎಚ್ಚರಿಕೆ ವಹಿಸುವಂತೆ ಎಸ್ ಬಿಐ (SBI Warning) ಹೇಳಿದೆ.

VISTARANEWS.COM


on

By

SBI Warning
Koo

ರಿವಾರ್ಡ್ ಪಾಯಿಂಟ್ ಅಧಿಸೂಚನೆಗಳು (point redemption notifications) ಸೇರಿದಂತೆ ನಕಲಿ ಸಂದೇಶಗಳ (fake messages) ಬಗ್ಗೆ ಗ್ರಾಹಕರು ಎಚ್ಚರಿಕೆ ವಹಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI Warning) ಎಚ್ಚರಿಕೆ ನೀಡಿದೆ. ಎಸ್‌ಎಂಎಸ್ (SMS) ಅಥವಾ ವಾಟ್ಸಾಪ್ (whats app) ಮೂಲಕ ಕಳುಹಿಸಲಾದ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಅಥವಾ ಯಾವುದೇ ಅಪ್ಲಿಕೇಶನ್‌ ಅಥವಾ ಫೈಲ್‌ಗಳನ್ನು ಡೌನ್‌ಲೋಡ್ ಮಾಡದಂತೆ ಬ್ಯಾಂಕ್ ಗ್ರಾಹಕರಿಗೆ ಸಲಹೆ ನೀಡಿದೆ.

ವಿವಿಧ ಬ್ಯಾಂಕಿಂಗ್ ಚಾನೆಲ್‌ಗಳ ಮೂಲಕ ಮಾಡಿದ ನಿಯಮಿತ ವಹಿವಾಟುಗಳಿಗಾಗಿ ಎಸ್‌ಬಿಐ ತನ್ನ ಗ್ರಾಹಕರಿಗೆ ಕಾರ್ಪೊರೇಟ್-ವೈಡ್ ಲಾಯಲ್ಟಿ ಕಾರ್ಯಕ್ರಮವಾಗಿ ಪಾಯಿಂಟ್‌ಗಳನ್ನು ನೀಡುತ್ತದೆ. ಅಲ್ಲದೆ, ಪ್ರತಿ ಪಾಯಿಂಟ್‌ನ ಮೌಲ್ಯವು 25 ಪೈಸೆ. ಅನೇಕ ಬಳಕೆದಾರರು ಹಲವಾರು ತಿಂಗಳುಗಳವರೆಗೆ ತಮ್ಮ ಅಂಕಗಳನ್ನು ಪಡೆದುಕೊಳ್ಳುವುದಿಲ್ಲ.

ಹೆಚ್ಚುತ್ತಿರುವ ವಂಚನೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಸ್‌ಬಿಐ ತನ್ನ ಗ್ರಾಹಕರು ಎಚ್ಚರಿಕೆ ವಹಿಸುವಂತೆ ತಿಳಿಸಿದೆ.

ಸೈಬರ್ ವಂಚಕರು ಗ್ರಾಹಕರನ್ನು ವಂಚಿಸಲು ಹೊಸ ಹೊಸ ವಿಧಾನವನ್ನು ಬಳಸಿಕೊಳ್ಳಲು ಪ್ರಾರಂಭಿಸಿದ್ದಾರೆ. ಮೊದಲಿಗೆ ನಕಲಿ ಎಪಿಕೆ ಲಿಂಕ್‌ಗಳ ಮೂಲಕ ಬಳಕೆದಾರರಿಗೆ ರಿವಾರ್ಡ್ ಪಾಯಿಂಟ್‌ಗಳನ್ನು ರಿಡೀಮ್ ಮಾಡಲು ಅವಕಾಶ ನೀಡುವಂತೆ ಹೇಳುತ್ತಾರೆ. ಹೀಗಾಗಿ ಗ್ರಾಹಕರು ಎಚ್ಚರಿಕೆ ವಹಿಸಬೇಕು.

ಎಪಿಕೆ ಎಂದರೆ ಆಂಡ್ರಾಯ್ಡ್ ಅಪ್ಲಿಕೇಶನ್ ಪ್ಯಾಕೇಜ್. APK ಎನ್ನುವುದು ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಿಂದ ಸಾಧನಗಳಲ್ಲಿ ಅಪ್ಲಿಕೇಶನ್‌ಗಳನ್ನು ವಿತರಿಸಲು ಮತ್ತು ಸ್ಥಾಪಿಸಲು ಬಳಸುವ ಅಪ್ಲಿಕೇಶನ್ ಫೈಲ್ ಫಾರ್ಮ್ಯಾಟ್ ಆಗಿದೆ.
ಎಸ್ ಬಿ ಐ ಯು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಲಿಂಕ್‌ಗಳನ್ನು ಎಂದಿಗೂ ಒದಗಿಸುವುದಿಲ್ಲ ಎಂದು ಬ್ಯಾಂಕ್ ಹೇಳಿಕೊಂಡಿದೆ.

ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಎಸ್‌ಬಿಐ ರಿವಾರ್ಡ್ ಪಾಯಿಂಟ್‌ಗಳನ್ನು ರಿಡೀಮ್ ಮಾಡಲು ವಂಚಕರು ಎಪಿಕೆ ಮತ್ತು ಎಸ್ ಎಂಎಸ್ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ಬ್ಯಾಂಕ್ ಹೇಳಿದೆ.

ಎಸ್ ಬಿಐ ಮಾಡಿರುವ ಪೋಸ್ಟ್ ಪ್ರಕಾರ ಎಸ್‌ಬಿಐ ಎಂದಿಗೂ ಲಿಂಕ್‌ಗಳು ಅಥವಾ ಅಪೇಕ್ಷಿಸದ ಎಪಿಕೆ ಗಳನ್ನು ಎಸ್ ಎಂಎಸ್ ಅಥವಾ ವಾಟ್ಸ್ ಆಪ್ ಮೂಲಕ ಒದಗಿಸುವುದಿಲ್ಲ. ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ ಅಥವಾ ಪರಿಚಯವಿಲ್ಲದ ಫೈಲ್‌ಗಳನ್ನು ಡೌನ್‌ಲೋಡ್ ಮಾಡಬೇಡಿ ಎಂದು ಎಸ್‌ಬಿಐ ತನ್ನ ಗ್ರಾಹಕರಿಗೆ ಹೇಳಿದೆ.


ಎಸ್ ಬಿ ಐ ಪಾಯಿಂಟ್‌ ಚೆಕ್ ಮಾಡುವುದು ಹೇಗೆ?

ಎಸ್ ಬಿ ಐ ಮಾಹಿತಿ ಪ್ರಕಾರ, ಬಳಕೆದಾರರು ಸ್ವಯಂಚಾಲಿತವಾಗಿ ಎಸ್ ಬಿ ಐ ರಿವಾರ್ಡ್ಜ್ ಪ್ರೋಗ್ರಾಂಗೆ ದಾಖಲಾಗುತ್ತಾರೆ. ನೀವು https://www.rewardz.sbi/ ನಲ್ಲಿ ನಿಮ್ಮ ಎಸ್ ಬಿಐ ಪಾಯಿಂಟ್‌ಗಳನ್ನು ರಿಡೀಮ್ ಮಾಡಬಹುದು. ಪೋರ್ಟಲ್ ಅನ್ನು ಬಳಸಲು, ನೀವು ಮೊದಲು ನೋಂದಾಯಿಸಿಕೊಳ್ಳಬೇಕು.

ಇದನ್ನೂ ಓದಿ: RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

https://www.rewardz.sbi ಗೆ ಹೋಗಿ ಮತ್ತು “ಹೊಸ ಬಳಕೆದಾರ” ಆಯ್ಕೆಯನ್ನು ಆರಿಸಿ. ಅನಂತರ SBI Rewardz ಗ್ರಾಹಕ ID ಅನ್ನು ನಮೂದಿಸಿ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ನೀಡಲಾದ ಒನ್-ಟೈಮ್ ಪಾಸ್‌ವರ್ಡ್ (OTP) ಅನ್ನು ನಮೂದಿಸಿ. ನಿಮ್ಮ ವೈಯಕ್ತಿಕ ಮಾಹಿತಿಯನ್ನು ಪರಿಶೀಲಿಸಿ ಮತ್ತು ರಿಡೀಮ್ ಮಾಡಲು ಪ್ರಾರಂಭಿಸಿ.

ಪಾಯಿಂಟ್ ಯಾವುದರಿಂದ ಸಿಗುವುದು?

ಎಸ್ ಬಿ ಐ ಯು ತನ್ನ ಗ್ರಾಹಕರಿಗೆ ಸರಕುಗಳು, ಚಲನಚಿತ್ರ ಟಿಕೆಟ್‌ಗಳು, ಮೊಬೈಲ್/ ಡಿಟಿ ಹೆಚ್ ರೀಚಾರ್ಜ್, ಏರ್‌ಲೈನ್ ಟಿಕೆಟ್‌ಗಳು, ಹೊಟೇಲ್ ಕಾಯ್ದಿರಿಸುವಿಕೆಗಳು ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ವ್ಯಾಪಕ ಶ್ರೇಣಿಯ ಉತ್ಪನ್ನಗಳು ಮತ್ತು ಸೇವೆಗಳಿಗೆ ರಿವಾರ್ಡ್ ಪಾಯಿಂಟ್‌ಗಳನ್ನು ನೀಡುತ್ತದೆ.

Continue Reading

ಮನಿ ಗೈಡ್

EPF Death Claim: ಆಧಾರ್ ದೃಢೀಕರಣ ಇಲ್ಲದೇ ಇದ್ದರೂ ಇಪಿಎಫ್‌ಒ ಡೆತ್ ಕ್ಲೈಮ್ ಸಾಧ್ಯವೆ? ಇಲ್ಲಿದೆ ಮಾಹಿತಿ

ಉದ್ಯೋಗಿಗಳ ಭವಿಷ್ಯ ನಿಧಿ ಖಾತೆ ಹೊಂದಿರುವ ಸದಸ್ಯರ ಮರಣದ ಬಳಿಕ ಅವರ ಆಧಾರ್ ದೃಢೀಕರಣ ಇಲ್ಲದೆಯೂ ಡೆತ್ ಕ್ಲೈಮ್ ಸೆಟ್ಲ್ ಮೆಂಟ್ (EPF Death Claim) ಮಾಡಿಕೊಳ್ಳಬಹುದು. ಇದಕ್ಕಾಗಿ ಇಪಿಎಫ್‌ಒ ಪ್ರಮುಖ ಬದಲಾವಣೆಯನ್ನು ಮಾಡಿದೆ. ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

EPF Death Claim
Koo

ಉದ್ಯೋಗಿಗಳ ಭವಿಷ್ಯ ನಿಧಿ (Employees Provident Fund) ಖಾತೆ ಹೊಂದಿರುವ ಸದಸ್ಯರ ಮರಣದ ಬಳಿಕ ಆಧಾರ್ ( Aadhaar) ದೃಢೀಕರಣಕ್ಕೆ ಸಂಬಂಧಿಸಿ ಎದುರಾಗಿರುವ ಪ್ರಮುಖ ಸವಾಲುಗಳ ಹಿನ್ನೆಲೆಯಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಡೆತ್ ಕ್ಲೈಮ್ (EPF Death Claim) ಮಾಡುವ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಇದು ಆಧಾರ್ ಲಿಂಕ್ ಮಾಡದ ಹಲವಾರು ಸದಸ್ಯರಿಗೆ ಅನುಕೂಲವಾಗಲಿದೆ.

ಮೇ 17ರಂದು ಹೊರಡಿಸಲಾದ ಸುತ್ತೋಲೆಯಲ್ಲಿ ಈ ಪ್ರಕಟಣೆ ಹೊರಡಿಸಲಾಗಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಇ- ಆಫೀಸ್ ಫೈಲ್ ಮೂಲಕ ಪ್ರಭಾರ ಅಧಿಕಾರಿಯಿಂದ (OIC) ಅನುಮೋದನೆ ಪಡೆದ ಬಳಿಕವೇ ಈ ಸೌಲಭ್ಯ ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

ಸತ್ತವರ ಸದಸ್ಯತ್ವ ಮತ್ತು ಹಕ್ಕುದಾರರ ನ್ಯಾಯಸಮ್ಮತತೆಯನ್ನು ದೃಢೀಕರಿಸಲು ಕೈಗೊಂಡ ಪರಿಶೀಲನಾ ಕಾರ್ಯವಿಧಾನಗಳನ್ನು ಕಡತವು ಸೂಕ್ಷ್ಮವಾಗಿ ದಾಖಲಿಸಬೇಕು. ಇದರಲ್ಲಿ ವಂಚನೆಯ ಅಪಾಯವನ್ನು ಕಡಿಮೆ ಮಾಡಲು ಒಐಸಿ ನಿರ್ದೇಶಿಸಿದಂತೆ ಈ ಪ್ರೋಟೋಕಾಲ್ ಅನ್ನು ಎಚ್ಚರಿಕೆಯಿಂದ ಕಾರ್ಯಗತಗೊಳಿಸಲಾಗುವುದು ಎಂದು ಇಪಿಎಫ್‌ಒ ತಿಳಿಸಿದೆ.

ಯುಎಎನ್ ನಲ್ಲಿ ಸದಸ್ಯರ ವಿವರಗಳು ನಿಖರವಾಗಿದ್ದರೂ ಯುಐಡಿ ಡೇಟಾಬೇಸ್‌ನಲ್ಲಿ ನಿಖರವಾಗಿಲ್ಲದ ಸಂದರ್ಭಗಳಲ್ಲಿ ಮಾತ್ರ ಈ ನಿರ್ದೇಶನಗಳು ಅನ್ವಯಿಸುತ್ತವೆ ಎಂದು ಸೂಚನೆಯು ಉಲ್ಲೇಖಿಸುತ್ತದೆ.

ಸಮಸ್ಯೆಗಳು ಏನು?

ಇಪಿಎಫ್‌ಒ ಸುತ್ತೋಲೆಯಲ್ಲಿ ಉಲ್ಲೇಖಿಸಿರುವಂತೆ ಸಾವಿನ ಸಂದರ್ಭದಲ್ಲಿ ಆಧಾರ್‌ನ ದೃಢೀಕರಣದ ಕುರಿತು ಕ್ಷೇತ್ರ ಕಚೇರಿಗಳು ಹಲವಾರು ಸವಾಲುಗಳನ್ನು ಎದುರಿಸುತ್ತಿವೆ. ಇವುಗಳಲ್ಲಿ ಕೆಲವು ಆಧಾರ್ ದಾಖಲೆಯಲ್ಲಿನ ಅಸಮರ್ಪಕತೆ ಮತ್ತು ಅಪೂರ್ಣ ವಿವರಗಳು, ಆಧಾರ್ ಅನುಷ್ಠಾನದ ಮೊದಲು ವಿವರಗಳ ಅಲಭ್ಯತೆ, ನಿಷ್ಕ್ರಿಯಗೊಳಿಸಿದ ಖಾತೆಗಳು ಮತ್ತು ಆಧಾರ್ ಮೌಲ್ಯೀಕರಿಸುವಲ್ಲಿ ತಾಂತ್ರಿಕ ಸಮಸ್ಯೆಗಳು ಸೇರಿವೆ.

ಈ ಸಮಸ್ಯೆಗಳು ಉಲ್ಲೇಖಿಸಲಾದ ಕ್ಲೈಮ್‌ಗಳನ್ನು ಪ್ರಕ್ರಿಯೆಗೊಳಿಸುವಲ್ಲಿ ಅನಗತ್ಯ ವಿಳಂಬವನ್ನು ಉಂಟು ಮಾಡುತ್ತವೆ. ಅವುಗಳನ್ನು ಪರಿಹರಿಸಲು ಇಪಿಎಫ್‌ಒ ಈಗ ಈ ಷರತ್ತುಗಳೊಂದಿಗೆ ಆಧಾರ್ ಅನ್ನು ಸೀಡಿಂಗ್ ಮಾಡದೆಯೇ ಭೌತಿಕ ಇಪಿಎಫ್‌ ಕ್ಲೈಮ್‌ಗಳನ್ನು ಪಡೆದುಕೊಳ್ಳಲು ಅನುಮತಿಸುತ್ತದೆ.

ಇದನ್ನೂ ಓದಿ: Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

ಪರಿಹಾರ ಹೇಗೆ?

ಇಪಿಎಫ್‌ ಹೊಂದಿರುವ ಸದಸ್ಯನ ಸಾವಿನ ಸಂದರ್ಭದಲ್ಲಿ ಆಧಾರ್ ದೃಢೀಕರಣಕ್ಕೆ ಇಲ್ಲದೆ ಭೌತಿಕ ಕ್ಲೈಮ್‌ ಗಳ ಮೂಲಕ ತಾತ್ಕಾಲಿಕ ಭತ್ಯೆಯನ್ನು ಒದಗಿಸಲು ಒಐಸಿ ಅನುಮೋದನೆ ಕಡ್ಡಾಯವಾಗಿದೆ. ಮೃತರ ಸದಸ್ಯತ್ವ ಮತ್ತು ಹಕ್ಕುದಾರರ ದೃಢೀಕರಣವನ್ನು ಖಚಿತಪಡಿಸಲು ವಿವರವಾದ ಪರಿಶೀಲನೆಯು ಮುಖ್ಯವಾಗಿದೆ. ವಂಚನೆಯನ್ನು ತಡೆಗಟ್ಟಲು ಒಐಸಿ ನಿರ್ದೇಶನದಂತೆ ಸರಿಯಾದ ಕ್ರಮ ಕೈಗೊಳ್ಳಲಾಗುವುದು.

ಆಧಾರ್ ಇಲ್ಲದೇ ಇದ್ದರೆ ಏನು ಮಾಡಬಹುದು?

ಇಪಿಎಫ್‌ಒ ವೆಬ್‌ಸೈಟ್ ಮಾಹಿತಿ ಪ್ರಕಾರ, ಆಧಾರ್ ಇಲ್ಲದ ಸದಸ್ಯರ ಮರಣದ ಸಂದರ್ಭದಲ್ಲಿ ನಾಮಿನಿಯ ಆಧಾರ್ ವಿವರಗಳನ್ನು ದಾಖಲಿಸಲಾಗುತ್ತದೆ ಮತ್ತು ಅವನು ಅಥವಾ ಅವಳು ಜೆಡಿ ಫಾರ್ಮ್‌ಗೆ ಸಹಿ ಮಾಡಬೇಕು. ಇತರ ಪ್ರಕ್ರಿಯೆಗಳು ಒಂದೇ ಆಗಿರುತ್ತವೆ. ನಾಮನಿರ್ದೇಶನವು ಗೈರುಹಾಜರಾಗಿದ್ದರೆ ಕುಟುಂಬದ ಸದಸ್ಯರು ಅಥವಾ ಕಾನೂನುಬದ್ಧ ಉತ್ತರಾಧಿಕಾರಿಗಳು ಜೆಡಿಗೆ ದೃಢೀಕರಿಸಬಹುದು ಮತ್ತು ಅವರ ವಿವರಗಳನ್ನು ಸಲ್ಲಿಸಬೇಕು.

Continue Reading

ಮನಿ-ಗೈಡ್

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: ಭವಿಷ್ಯಕ್ಕಾಗಿ ಹೂಡಿಕೆ ಮಾಡಬೇಕು ಎನ್ನುವುದು ಬಹುತೇಕರ ಆಗ್ರಹ. ಆದರೆ ಯಾವ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಎನ್ನವ ಬಗ್ಗೆ ಗೊಂದಲ ಮೂಡುತ್ತದೆ. ಇಲ್ಲಿ ನಾವು ನಿಮಗೆ ಪರಿಚಯಿಸುವ ಯೋಜನೆ ಸರ್ಕಾರಿ ಬೆಂಬಲಿತ ಪ್ಲಾನ್‌ ಆಗಿದ್ದು, ಇಲ್ಲಿ ಹೂಡಿಕೆ ಮಾಡುವುದರಿಂದ ಯಾವುದೇ ಆತಂಕವಿಲ್ಲ. ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು 1 ಕೋಟಿ ರೂ.ಗಿಂತ ಹೆಚ್ಚು ಸಂಗ್ರಹಿಸಬಹುದು. ಹಾಗಾದರೆ ಇದು ಯಾವ ಯೋಜನೆ? ಯಾರೆಲ್ಲ ಹೂಡಿಕೆ ಮಾಡಬಹುದು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ, ದುಬಾರಿ ಜೀವನ ಶೈಲಿಯಿಂದಾಗಿ ಹಣಕಾಸಿನ ವಿಚಾರದಲ್ಲಿ ಎಲ್ಲರೂ ಎಚ್ಚರಿಕೆ ವಹಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಉಳಿತಾಯ ಮಾಡುವತ್ತ ಗಮನ ಹರಿಸಬೇಕು ಎನ್ನುವುದು ಆರ್ಥಿಕ ತಜ್ಞರ ಸಲಹೆ. ಹಾಗಾದರೆ ಉಳಿತಾಯ, ನಿವೃತ್ತಿ ಯೋಜನೆಗಳಲ್ಲಿ ಹೂಡಿಕೆ ಮಾಡುವುದಾದರೆ ಯಾವುದು ಉತ್ತಮ? ಎನ್ನುವ ಪ್ರಶ್ನೆ ಸಹಜವಾಗಿ ಎದುರಾಗುತ್ತದೆ. ಇದಕ್ಕೆ ತಜ್ಞರು ನೀಡುವ ಉತ್ತರ ಸಾರ್ವಜನಿಕ ಭವಿಷ್ಯ ನಿಧಿ (Public Provident Fund). ಇದು ಕೇಂದ್ರ ಸರ್ಕಾರ ಬೆಂಬಲಿತ ಪ್ಲಾನ್‌ ಆಗಿದ್ದು, ಸಣ್ಣ ಹೂಡಿಕೆದಾರರು ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಸರ್ಕಾರಿ ಬೆಂಬಲಿತ ಪ್ಲಾನ್‌ ಆದ ಕಾರಣ ಇಲ್ಲಿ ಹೂಡಿಕೆ ಮಾಡುವುದು ಅಪಾಯಕಾರಿ ಅಲ್ಲ ಎನ್ನುವುದು ಬಹು ದೊಡ್ಡ ಪ್ಲಸ್‌ ಪಾಯಿಂಟ್‌. ಪಿಪಿಎಫ್‌ ಖಾತೆ ತೆರೆಯುವವರಿಗೆ ವಾರ್ಷಿಕ ಶೇ. 7.1ರಷ್ಟು ಬಡ್ಡಿ ದೊರೆಯಲಿದೆ. ಅಲ್ಲದೆ ಈ ಹೂಡಿಕೆಯ ಮೂಲಕ ಸಾಲವನ್ನೂ ಪಡೆಯಬಹುದು. ಜತೆಗೆ ತೆರಿಗೆ ವಿನಾಯಿತಿಯೂ ಲಭಿಸುತ್ತದೆ. ವಿಶೇಷ ಎಂದರೆ ನಿಯತಕಾಲಿಕ ಹೂಡಿಕೆಗಳು ಮತ್ತು ಸಂಯೋಜನೆಯ ಮೂಲಕ ನೀವು ಪಿಪಿಎಫ್‌ನಿಂದ 1 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ಸಂಗ್ರಹಿಸಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ (Money Guide).

1 ಕೋಟಿ ರೂ. ಪಡೆಯುವ ವಿಧಾನ

ಹೂಡಿಕೆ ಅವಧಿಒಟ್ಟು ಪಿಪಿಎಫ್‌
ಹೂಡಿಕೆ
ಒಟ್ಟು ಬಡ್ಡಿಮೆಚ್ಯೂರಿಟಿ ಮೊತ್ತ
15 ವರ್ಷ1.5 ಲಕ್ಷ ರೂ.18.18 ಲಕ್ಷ ರೂ.40.68 ಲಕ್ಷ ರೂ.
20 ವರ್ಷ1.5 ಲಕ್ಷ ರೂ.36.58 ಲಕ್ಷ ರೂ.66.58 ಲಕ್ಷ ರೂ.
30 ವರ್ಷ1.5 ಲಕ್ಷ ರೂ.1.09 ಕೋಟಿ ರೂ.1.54 ಕೋಟಿ ರೂ.

ವಿವಿಧ ಅವಧಿಗಳಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂ. ಹೂಡಿಕೆ ಮಾಡುವ ಮೂಲಕ ನಿಮ್ಮ ಮೆಚ್ಯೂರಿಟಿ ಮೊತ್ತವು 40 ಲಕ್ಷ ರೂ.ಯಿಂದ 1.5 ಕೋಟಿ ರೂ.ಗೆ ಹೇಗೆ ಬೆಳೆಯಬಹುದು ಎಂಬುದನ್ನು ಮೇಲಿನ ಉದಾಹರಣೆ ವಿವರಿಸುತ್ತದೆ.

ತೆರಿಗೆ ವಿನಾಯಿತಿ

ಇನ್ನು ಸೆಕ್ಷನ್‌ 80 ಸಿ ಅಡಿಯಲ್ಲಿ 1.5 ಲಕ್ಷ ರೂ. ತನಕ ತೆರಿಗೆ ವಿನಾಯಿತಿ ಸಿಗಲಿದೆ. ಅಂದರೆ ಯೋಜನೆಯಲ್ಲಿ ಮಾಡಿದ ಸಂಪೂರ್ಣ ಹೂಡಿಕೆಯ ಮೇಲೆ ತೆರಿಗೆ ವಿನಾಯಿತಿಯ ಪ್ರಯೋಜನವನ್ನು ನೀವು ಪಡೆಯುತ್ತೀರಿ. ಇದಲ್ಲದೆ, ಹೂಡಿಕೆಯಿಂದ ಪಡೆದ ಬಡ್ಡಿಗೂ ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಅಲ್ಲದೆ ಯೋಜನೆ ಮುಕ್ತಾಯವಾದ ಬಳಿಕ ಪಡೆದಯುವ ಮೊತ್ತವೂ ತೆರಿಗೆಮುಕ್ತವಾಗಿರುತ್ತದೆ.

ಸಾಲ ಪಡೆಯಲಿರುವ ಅರ್ಹತೆ

ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ನಲ್ಲಿ ನೀವು ಮಾಡುವ ಇನ್ವೆಸ್ಟ್‌ಮೆಂಟ್‌ ಮೇಲೆ ಸಾಲ ಪಡೆಯಬಹುದು. ಖಾತೆ ತೆರೆದ 3-6ನೇ ವರ್ಷದಲ್ಲಿ ಸಾಲ ಪಡೆಯಲು ನೀವು ಅರ್ಹರಾಗಿರುತ್ತೀರಿ. ಇಂಥ ಸಾಲದ ಗರಿಷ್ಠ ಅವಧಿ 36 ತಿಂಗಳು. ಅಕೌಂಟ್‌ನಲ್ಲಿರುವ ಮೊತ್ತದ 25% ಅಥವಾ ಕಡಿಮೆ ಮೊತ್ತವನ್ನು ಮಾತ್ರ ಸಾಲಕ್ಕಾಗಿ ಕ್ಲೈಮ್‌ ಮಾಡಿಕೊಳ್ಳಬಹುದು.‌

ಯಾರೆಲ್ಲ ತೆರೆಯಬಹುದು?

ಭಾರತೀಯ ನಾಗರಿಕರು ಪಿಪಿಎಫ್‌ ಖಾತೆಯನ್ನು ತೆರೆಯಬಹುದು. ಅಪ್ರಾಪ್ತ ವಯಸ್ಕರ ಹೆಸರಿನಲ್ಲಿಯೂ ಖಾತೆ ತೆರೆಯುವ ಸೌಕರ್ಯವಿದೆ. ಅನಿವಾಸಿ ಭಾರತೀಯರು ಹೊಸ ಪಿಪಿಎಫ್‌ ಅಕೌಂಟ್‌ ತೆರೆಯುವಂತಿಲ್ಲ. ಹೀಗಿದ್ದರೂ ಈಗಾಗಲೇ ಇದ್ದರೆ ಅದು ಪೂರ್ಣವಾಗುವ ತನಕ ಸಕ್ರಿಯವಾಗಿರುತ್ತದೆ. ಆದರೆ 5 ವರ್ಷಗಳ ಹೆಚ್ಚುವರಿ ಅವಧಿ ಇರುವುದಿಲ್ಲ. ಈ ಯೋಜನೆಯಲ್ಲಿ ನೀವು ವರ್ಷಕ್ಕೆ ಕನಿಷ್ಠ 500 ರೂ ಮತ್ತು ಗರಿಷ್ಠ 1.5 ಲಕ್ಷ ರೂ.ಗಳನ್ನು ಹೂಡಿಕೆ ಮಾಡಬಹುದು. ಒಂದು ಹಣಕಾಸು ವರ್ಷದಲ್ಲಿ ನೀವು ಗರಿಷ್ಠ 12 ಕಂತುಗಳಲ್ಲಿ ಹಣವನ್ನು ಠೇವಣಿ ಇಡುವ ಸೌಲಭ್ಯವೂ ಇದೆ. ಆಫ್‌ಲೈನ್‌ ಹಾಗೂ ಆನ್‌ಲೈನ್‌ ವಿಧಾನದಲ್ಲಿ ಪಿಪಿಎಫ್‌ ಖಾತೆಯನ್ನು ತೆರೆಯಬಹುದು. 

ಇದನ್ನೂ ಓದಿ: Money Guide: ತೆರಿಗೆ ವಿನಾಯಿತಿ ಪಡೆಯಬೇಕೆ? ಮಾ. 31ರೊಳಗೆ ಪಿಪಿಎಫ್‌ನಲ್ಲಿ ಹೂಡಿಕೆ ಮಾಡಿ

Continue Reading
Advertisement
Job Alert
ಉದ್ಯೋಗ20 seconds ago

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಮೇ 31 ಕೊನೆಯ ದಿನ

kalaburagi cyber crime news fraud
ಕ್ರೈಂ10 mins ago

Cyber Crime: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೈದ್ಯರಿಗೆ ವಂಚನೆ; 76 ಲಕ್ಷ ರೂ. ಸುಲಿಗೆ!

Rishabh Pant Video Calls
ಕ್ರೀಡೆ13 mins ago

Rishabh Pant Video Calls: ನ್ಯೂಯಾರ್ಕ್​ನಿಂದ ವಿಡಿಯೊ ಕಾಲ್​ ಮಾಡಿ ರಿಂಕು ಸಿಂಗ್​ಗೆ ಅಭಿನಂದಿಸಿದ ಪಂತ್​

Bomb Threat
ದೇಶ17 mins ago

Bomb Threat: ಸಾಲು ಸಾಲು ಬಾಂಬ್‌ ಥ್ರೆಟ್‌ ಪ್ರಕರಣ; ತಾಜ್‌ ಹೊಟೇಲ್‌ ಬೆನ್ನಲ್ಲೇ ಇಂಡಿಗೋ ವಿಮಾನಕ್ಕೂ ಬೆದರಿಕೆ

India Head Coach
ಕ್ರೀಡೆ44 mins ago

India Head Coach: ಗಂಭೀರ್‌ ಕೋಚ್​ ಆಗುವುದು ಬಹುತೇಕ ಖಚಿತ; ಕುತೂಹಲ ಮೂಡಿಸಿದ ಜಯ್‌ ಶಾ ಭೇಟಿ

hindalaga jail assault case
ಕ್ರೈಂ1 hour ago

Assault Case: ಹಿಂಡಲಗಾ ಜೈಲಿನಲ್ಲಿ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ; ಭಯದಲ್ಲಿ ಬದುಕುತ್ತಿರುವ ಸಿಬ್ಬಂದಿ!

Viral Video
ವೈರಲ್ ನ್ಯೂಸ್1 hour ago

Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

swagat babu no more
ಸಿನಿಮಾ2 hours ago

Swagat Babu: ಕನ್ನಡ ಚಲನಚಿತ್ರ ನಿರ್ಮಾಪಕ ಸ್ವಾಗತ್ ಬಾಬು ಇನ್ನಿಲ್ಲ

Porsche car accident ವಿಸ್ತಾರ ಸಂಪಾದಕೀಯ
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

Cooking In An Iron Pot
ಆರೋಗ್ಯ3 hours ago

Cooking In An Iron Pot: ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವುದು ಒಳ್ಳೆಯದು! ಯಾಕೆ ಗೊತ್ತೇ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌