BBK SEASON 10: ಬದಲಾವಣೆಗಳೊಂದಿಗೆ ಹೊಸ ರೀತಿಯಲ್ಲಿ ನಿಮ್ಮ ಮುಂದೆ ಬರಲಿದ್ದೇನೆ ಎಂದ ರಕ್ಷಕ್‌! - Vistara News

ಬಿಗ್ ಬಾಸ್

BBK SEASON 10: ಬದಲಾವಣೆಗಳೊಂದಿಗೆ ಹೊಸ ರೀತಿಯಲ್ಲಿ ನಿಮ್ಮ ಮುಂದೆ ಬರಲಿದ್ದೇನೆ ಎಂದ ರಕ್ಷಕ್‌!

(BBK SEASON 10) ಕ್ಷಮೆ ಕೋರಿ ಅದರ ವಿಡಿಯೋವನ್ನು ಕೂಡ ಹಂಚಿಕೊಂಡಿದ್ದರು. ಇದೀಗ ಮತ್ತೆ ರಕ್ಷಕ್‌ ಹೊಸ ಪೋಸ್ಟ್‌ ಹಂಚಿಕೊಂಡು ಕ್ಷಮೆ ಕೇಳಿದ್ದಾರೆ.

VISTARANEWS.COM


on

Rakshak Bullet Shares Emotional Post On Social Media
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಬಿಗ್ ಬಾಸ್‌’ (BBK SEASON 10) ಮನೆಯಿಂದ ಹೊರಗೆ ಬಂದಮೇಲೆ `ರಕ್ಷಕ್ ಬುಲೆಟ್‌’ ಅನೇಕ ಸಂದರ್ಶನಗಳನ್ನು ನೀಡಿದ್ದರು. ಅದರಲ್ಲಿ ಅವರು ಹೇಳಿದ ಕೆಲವೊಂದು ವಿಚಾರಗಳು ನಟ ಕಿಚ್ಚ ಸುದೀಪ್ ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದವು. ಆ ಸಂಬಂಧ ರಕ್ಷಕ್‌, ಕ್ಷಮೆ ಕೋರಿ ಅದರ ವಿಡಿಯೋವನ್ನು ಕೂಡ ಹಂಚಿಕೊಂಡಿದ್ದರು. ಇದೀಗ ಮತ್ತೆ ರಕ್ಷಕ್‌ ಹೊಸ ಪೋಸ್ಟ್‌ ಹಂಚಿಕೊಂಡು ಕ್ಷಮೆ ಕೇಳಿದ್ದಾರೆ.

ʻಎಲ್ಲರಿಗೂ ನಮಸ್ಕಾರ, ನಿಮ್ಮ ಹತ್ತಿರ ನಾನು ನನ್ನ ಮನದಾಳದ ಮಾತು ಹಂಚಿಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರಿಗೂ ತಿಳಿದಿರುವ ಹಾಗೆ ನಾನು ನಟ ಬುಲೆಟ್ ಪ್ರಕಾಶ್ ಅವರ ಮಗ. ನನ್ನ ತಂದೆ ಸುಮಾರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇಡೀ ರಾಜ್ಯದ ಜನತೆ ಅವರನ್ನು ಹರಸಿ, ಹಾರೈಸಿ ಅತ್ಯಂತ ಉನ್ನತ ಸ್ಥಾನಕ್ಕೆ ಬೆಳೆಸಿದ್ದರು. ಅವರ ಮಗನಾಗಿ ಜನಿಸಿರುವುದು ನನ್ನ ಜನ್ಮ ಜನ್ಮಗಳ ಸುಕೃತ. ಇಂದು ಅವರು ನಮ್ಮೊಂದಿಗಿಲ್ಲದಿದ್ದರೂ ನನಗೆ ನನ್ನ ತಂದೆ ಇಲ್ಲೇ ನನ್ನ ಜೊತೆಯೇ ಇದ್ದಾರೆಂದೇ ಈಗಲೂ ಅನಿಸುತ್ತದೆʼ.

“ಅವರಿದ್ದಾಗ ಎಂದೂ ಅವರನ್ನು ಬಿಟ್ಟು ನಾನು ಇದ್ದಿದ್ದೇ ಇಲ್ಲ. ಆ ಕಾರಣಕ್ಕೋ ಏನೋ ಅವರಲ್ಲಿರುವ ಒಂದು ಗುಣ, ನೇರ ನುಡಿ ನನಗೂ ಬಂದಿದೆ. ರಾಜ್ಯದ ಜನತೆ ತಂದೆಗೆ ಕೊಟ್ಟಿರುವ ಪ್ರೀತಿಯನ್ನು ನನಗೂ ಕೊಟ್ಟಿದ್ದಾರೆ. ನಾನು ಖಂಡಿತವಾಗಲೂ ಎಲ್ಲರಿಗೂ ಚಿರಋಣಿ” ಎಂದು ರಕ್ಷಕ್‌ ಹೇಳಿದ್ದಾರೆ.

ಇದನ್ನೂ ಓದಿ: BBK SEASON 10: ವೈಮನಸ್ಸಿಗೆ ಅಂತ್ಯ ಹಾಡಿದ ಕಾರ್ತಿಕ್‌-ಸಂಗೀತಾ! ಈ ಸ್ನೇಹ ಚಿರಕಾಲ ಹೀಗೇ ಇರಲಿ ಅಂದ್ರು ಫ್ಯಾನ್ಸ್‌!

“ಇತ್ತೀಚಿನ ದಿನಗಳಲ್ಲಿ ನನ್ನ ಹೇಳಿಕೆಗಳನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಬಿಡುತ್ತಿದ್ದಾರೆ. ಅದರಿಂದ ನನಗೆ ಕೆಲವೊಮ್ಮೆ ಮಾನಸಿಕವಾಗಿ ಹಿಂಸೆಯಾಗುತ್ತಿದ್ದು, ನಾನು ಯಾರ ಭಾವನೆಗೂ ಧಕ್ಕೆ ತರುವ ಹೇಳಿಕೆಗಳನ್ನಾಗಲಿ ಹಾಗೂ ಯಾರ ಮನಸ್ಸಿಗೂ ನೋವಾಗುವಂತಹ ಹೇಳಿಕೆಗಳನ್ನಾಗಲಿ ನೀಡುವುದನ್ನು ಅಭ್ಯಾಸ ಮಾಡಿಕೊಂಡಿಲ್ಲ” ಎಂದು ರಕ್ಷಕ್‌ ತಿಳಿಸಿದ್ದಾರೆ.

“ಎಲ್ಲೇ ಹೋದರೂ ನನ್ನನ್ನು ರಾಜ್ಯದ ಜನ ಗುರುತಿಸಿ ಪ್ರೀತಿಸಿದ್ದಾರೆ. ಒಂದು ಶುಭ ಸುದ್ದಿಯೆಂದರೆ, ಇತ್ತೀಚಿನ ದಿನಗಳಲ್ಲಿ ಕೆಲವೊಂದು ಸಿನಿಮಾಗಳಿಗೆ ಅವಕಾಶ ಬಂದಿದ್ದು ಈಗಾಗಲೇ ಅದೇ ಕೆಲಸದಲ್ಲಿ ಸಕ್ರಿಯವಾಗಿದ್ದು, ಬರುವಂತಹ ದಿನಗಳಲ್ಲಿ ನನ್ನ ಪರಿಶ್ರಮದಿಂದ ಚಿತ್ರಗಳ ಮೂಲಕ ತಮ್ಮನ್ನು ರಂಜಿಸಿ, ತಮ್ಮ ಮನಸ್ಸಿನಲ್ಲಿ ಮನೆ ಮಾಡುತ್ತೇನೆ. ಎಲ್ಲಾ ಚಿತ್ರರಂಗದ ಹಿರಿಯರು, ನಮ್ಮ ಮಾರ್ಗದರ್ಶಕರು, ಟ್ರೋಲರ್ಸ್‌, ಯೂಟ್ಯೂಬರ್‌ಗಳು ನನಗೆ ಸಾಕಷ್ಟು ಸಹಕಾರ ಬೆಂಬಲ ನೀಡಿದ್ದು, ಇದೇ ರೀತಿ ಮುಂದಿನ ದಿನಗಳಲ್ಲಿ ತಮ್ಮ ಸಹಕಾರ ಬೆಂಬಲ ನನ್ನೊಂದಿಗೆ ಇರಲಿ. ಅತಿ ಶೀಘ್ರದಲ್ಲೇ ಸಾಕಷ್ಟು ಬದಲಾವಣೆಗಳೊಂದಿಗೆ ಹೊಸ ರೀತಿಯಲ್ಲಿ ನಿಮ್ಮ ಮುಂದೆ ಬರಲಿದ್ದೇನೆʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: BBK SEASON 10: ಹೆದರೋ ಕಾಲ ಹೋಯ್ತು; ʻವಿನಯ್‌ʼ ಏಟಿಗೆ ತಿರುಗೇಟು ಕೊಟ್ಟ ಪ್ರತಾಪ್!⁠⁠

ರಕ್ಷಕ್‌ ಹೇಳಿದ್ದೇನು?

ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ರಕ್ಷಕ್‌ ಅವರು ಮಾತನಾಡಿʻʻ ಬಿಗ್ ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳು ಡ್ರಾಮಾ ಮಾಡ್ತಾರೆ. ಕಳಪೆ ಉತ್ತಮ ಅಂತ ಕೊಟ್ಟಮೇಲೆ ಆ ಮಾತಿನ ಮೇಲೆ ಯಾರೂ ನಿಲ್ಲುವುದಿಲ್ಲ. ಸುದೀಪ್‌ ಅವರು ಬಂದ ಮೇಲೆ ಎಲ್ಲವೂ ಬದಲಾಗುತ್ತದೆ. ಸುದೀಪಣ್ಣ ಬಂದ ಬಳಿಕ, ದೇವರು ನಿಂತಿದ್ದಾರೆ. ನಾವೆಲ್ಲ ಭಕ್ತಾದಿಗಳು.. ಅವರು ಹೆಂಗೆ ವರ ಕೊಡ್ತಾರೋ, ಹಂಗೆ ತೆಗೋಬೇಕು ಎನ್ನುವ ಥರ ಎಲ್ಲರೂ ಇರ್ತಾರೆ” ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಈ ಹೇಳಿಕೆ ಭಾರಿ ಟೀಕೆಗೆ ಗುರಿಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Mobile
ದೇಶ2 mins ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 202422 mins ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ34 mins ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ56 mins ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ1 hour ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ2 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ2 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ2 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ3 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ3 hours ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌