BBK SEASON 10: ಈ ಸಲ ಕಪ್ ಯಾರದ್ದು? ಎಲಿಮಿನೇಟ್ ಆದ ಸ್ಪರ್ಧಿಗಳ ಪ್ರಕಾರ ಯಾರು ವಿನ್‌ ಆಗ್ಬೋದು? - Vistara News

ಬಿಗ್ ಬಾಸ್

BBK SEASON 10: ಈ ಸಲ ಕಪ್ ಯಾರದ್ದು? ಎಲಿಮಿನೇಟ್ ಆದ ಸ್ಪರ್ಧಿಗಳ ಪ್ರಕಾರ ಯಾರು ವಿನ್‌ ಆಗ್ಬೋದು?

BBK SEASON 10: ವಾಗ್ವಾದಗಳು ನಡೆಯುತ್ತಿವೆ. ಪ್ರತಿಯೊಬ್ಬ ಸದಸ್ಯರ ಅಭಿಮಾನಿಗಳೂ ತಮ್ಮ ನೆಚ್ಚಿನ ಸ್ಪರ್ಧಿಯ ಪರವಾಗಿ ಜೋರಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದಾರೆ.

VISTARANEWS.COM


on

Whose cup this time According to the eliminated contestants BBK SEASON 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಹುನಿರೀಕ್ಷಿತ ʻಬಿಗ್‌ಬಾಸ್‌ ಕನ್ನಡ ಸೀಸನ್‌ 10ʼ (BBK SEASON 10) ಬಹುದೊಡ್ಡ ಯಶಸ್ಸಿನೊಂದಿಗೆ ಅಂತಿಮ ಹಂತಕ್ಕೆ ಬಂದು ತಲುಪಿದೆ. ಇದೇ ವಾರಾಂತ್ಯದಲ್ಲಿ ಕಿಚ್ಚ ಸುದೀಪ್‌ ಒಬ್ಬರ ಕೈಯನ್ನು ಎತ್ತಿ ಹಿಡಿಯಲಿದ್ದಾರೆ. ಬಿಗ್‌ಬಾಸ್ ಮನೆಯೊಳಗೆ ರಾರಾಜಿಸುತ್ತಿರುವ ಕಪ್ ಅವರ ಕೈ ಸೇರಲಿದೆ.

ಈ ಫಿನಾಲೆ ವಾರದಲ್ಲಿ ಬಿಗ್‌ಬಾಸ್ ಮನೆಯೊಳಗೆ ಸಂಗೀತಾ, ವಿನಯ್, ಕಾರ್ತಿಕ್, ಪ್ರತಾಪ್, ತುಕಾಲಿ ಸಂತೋಷ್, ವರ್ತೂರು ಸಂತೋಷ್ ಹೀಗೆ ಒಟ್ಟು ಆರು ಸದಸ್ಯರು ಇದ್ದಾರೆ. ಅಷ್ಟೇ ಅಲ್ಲ, ಮಿಡ್‌ ವೀಕ್ ಎಲಿಮಿನೇಷನ್ ಇರುವುದಿಲ್ಲ ಎಂದು ನಿನ್ನೆಯ (ಜ.25) ಎಪಿಸೋಡಿನಲ್ಲಿ ಬಿಗ್‌ಬಾಸ್ ಹೇಳಿದ್ದಾರೆ. ಹಾಗಾಗಿ ಕುತೂಹಲ ಇನ್ನಷ್ಟು ಗರಿಗೆದರಿದೆ. ಈ ಸಲ ಯಾರು ಬಿಗ್‌ಬಾಸ್ ಗೆಲ್ಲುತ್ತಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ವಾಗ್ವಾದಗಳು ನಡೆಯುತ್ತಿವೆ. ಪ್ರತಿಯೊಬ್ಬ ಸದಸ್ಯರ ಅಭಿಮಾನಿಗಳೂ ತಮ್ಮ ನೆಚ್ಚಿನ ಸ್ಪರ್ಧಿಯ ಪರವಾಗಿ ಜೋರಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಪ್ರತಿ ವಾರ ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಸ್ಪರ್ಧಿಗಳು ಹೊರಗೆ ಬರುತ್ತಿದ್ದ ಹಾಗೆಯೇ ಜಿಯೊಸಿನಿಮಾ ಅವರೊಂದಿಗೆ ಎಕ್ಸ್‌ಕ್ಲೂಸೀವ್ “ಬಿಗ್‌ಬ್ಯಾಂಗ್‌’ ಸಂದರ್ಶನ ಮಾಡುತ್ತಿತ್ತು. ಆ ಎಲ್ಲ ಸಂದರ್ಶನಗಳು ಜಿಯೊಸಿನಿಮಾದಲ್ಲಿ ಈಗ ಉಚಿತವಾಗಿ ವೀಕ್ಷಣೆಗೆ ಲಭ್ಯ. ಪ್ರತಿಯೊಬ್ಬ ಸ್ಪರ್ಧಿಯ ಬಿಗ್‌ಬ್ಯಾಂಗ್ ಸಂದರ್ಶನದಲ್ಲಿಯೂ ಕೇಳಲಾಗಿದ್ದ ಒಂದು ಸಾಮಾನ್ಯ ಪ್ರಶ್ನೆ, ‘ಈ ಸಲ ಬಿಗ್‌ಬಾಸ್‌ ಷೋದ ಅಂತಿಮ ಹಂತದಲ್ಲಿ ಇರುವ ಐವರು ಸ್ಪರ್ಧಿಗಳು ಯಾರು?’ಎಂಬುದಾಗಿತ್ತು. ಹಾಗೆಯೇ ಯಾರು ಗೆಲ್ಲಬಹುದು ಎಂಬ ತಮ್ಮ ಊಹೆಯನ್ನೂ ಹಲವು ಸ್ಪರ್ಧಿಗಳು ಈ ಸಂದರ್ಶನಗಳಲ್ಲಿ ಮಾಡಿದ್ದಾರೆ. ಈ ಎಲ್ಲ ಸ್ಪರ್ಧಿಗಳ ಊಹೆಯ ಪ್ರಕಾರ ಈ ಸಲದ ಬಿಗ್‌ಬಾಸ್‌ ಅನ್ನು ಯಾರು ಗೆಲ್ಲುತ್ತಾರೆ? ಕಪ್ ಯಾರ ಕೈಯಲ್ಲಿ ಸೇರಲಿದೆ ಎಂಬುದರ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ. ಇದು ಪೂರ್ತಿಯಾಗಿ ಜಿಯೊಸಿನಿಮಾದಲ್ಲಿ ವಿಕ್ಟೆಡ್ ಸ್ಪರ್ಧಿಗಳ ಊಹೆಯ ಆಧಾರದ ಮೇಲೆ ರೂಪಿಸಲಾದ ವರದಿ.

ಇದನ್ನೂ ಓದಿ: BBK SEASON 10: ಪ್ರತಾಪ್‌ ʻಔಟ್‌ʼ ಆಗಿಲ್ಲ; ಗ್ರ್ಯಾಂಡ್‌ ಫಿನಾಲೆ ತಲುಪಲಿದ್ದಾರೆ ಟಾಪ್‌ 6 ಸ್ಪರ್ಧಿಗಳು!

ಈ ಸಲದ ಬಿಗ್‌ಬಾಸ್‌ ಸೀಸನ್‌ನ ಟಾಪ್‌ 5ನಲ್ಲಿ ಯಾರು ಇರುತ್ತಾರೆ ಎಂದು ಎವಿಕ್ಟೆಡ್ ಕಂಟೆಸ್ಟೆಂಟ್ಸ್‌ಗೆ ಕೇಳಲಾದ ಪ್ರಶ್ನೆಗೆ ಅವರು ನೀಡಿದ ಉತ್ತರದಲ್ಲಿ ಅತಿ ಹೆಚ್ಚು ಬಾರಿ ಉಲ್ಲೇಖಿತರಾದವರು ಸಂಗೀತಾ ಶೃಂಗೇರಿ. ಒಟ್ಟೂ ಒಂಬತ್ತು ಜನ ಎಲಿಮಿನೇಟೆಡ್ ಸ್ಪರ್ಧಿಗಳು ಜಿಯೊ ಸಿನಿಮಾ ಸಂದರ್ಶನದಲ್ಲಿ ಸಂಗೀತಾ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. ಕಾರ್ತಿಕ್ ಮಹೇಶ್ ಅವರು ಆರು ಬಾರಿ ಉಲ್ಲೇಖಿತರಾಗಿದ್ದಾರೆ. ತುಕಾಲಿ ಸಂತೋಷ್ ಕೂಡ ಆರು ಸಲವೇ ಉಲ್ಲೇಖಿತರಾಗಿ ಕಾರ್ತಿಕ್ ಸಮಕ್ಕೆ ನಿಂತಿದ್ದಾರೆ. ವಿನಯ್ ಕೂಡ ಪದೇ ಪದೇ ಉಲ್ಲೇಖಿತಗೊಂಡಿರುವ ಸ್ಪರ್ಧಿಗಳಲ್ಲಿ ಒಬ್ಬರು. ನಮ್ರತಾ, ಮೈಕಲ್, ಪವಿ, ಸ್ನೇಹಿತ್‌ ಎಲ್ಲವೂ ವಿನಯ್ ಹೆಸರನ್ನು ಉಲ್ಲೇಖಿಸಿದ್ದಾರೆ.

ಸಂಗೀತಾ ಶೃಂಗೇರಿ(BBK SEASON 10)

ಅಸಮರ್ಥರಾಗಿ ಒಳಗೆ ಹೋಗಿದ್ದರೂ, ಮೊದಲ ವಾರದಿಂದಲೇ ಮನೆಯ ಕೇಂದ್ರಬಿಂದುಗಳಲ್ಲಿ ಒಬ್ಬರಾಗಿದ್ದವರು ಸಂಗೀತಾ ಶೃಂಗೇರಿ. ನಂತರದ ದಿನಗಳಲ್ಲಿಯೂ ಟಾಸ್ಕ್‌ಗಳಲ್ಲಾಗಲಿ, ಮನೆಯ ಕೆಲಸಗಳಲ್ಲಾಗಲಿ, ಚಟುವಟಿಕೆಗಳಲ್ಲಾಗಲಿ, ನಾಮಿನೇಷನ್‌ ಪ್ರಕ್ರಿಯೆಯಲ್ಲಾಗಲಿ ಸಂಗೀತಾ ಹೆಸರು ಮುಂಚೂಣಿಯಲ್ಲಿ ಇದ್ದೇ ಇರುತ್ತಿತ್ತು. ಜಿದ್ದು, ಜಗಳ, ಸ್ಟ್ರಾಟಜಿ ಎಲ್ಲದರಲ್ಲಿಯೂ ಸಂಗೀತಾ ಮುಂದಿರುತ್ತಿದ್ದರು. ಹೀಗಾಗಿಯೇ ಅವರನ್ನು ಮನೆಯೊಳಗೆ ವಿರೋಧಿಸುತ್ತಿದ್ದವರೂ ಟಾಪ್‌ 5ನಲ್ಲಿ ಅವರು ಇರುತ್ತಾರೆ ಎಂದು ಊಹಿಸಿದ್ದರು. ಭಾಗ್ಯಶ್ರೀ, ನೀತು, ಸ್ನೇಹಿತ್, ಪವಿ ಪೂವಪ್ಪ, ಅವಿನಾಶ್, ಸಿರಿ, ತನಿಷಾ ನಮೃತಾ ಇವರೆಲ್ಲರೂ ಟಾಪ್‌ 5ನಲ್ಲಿ ಇರುತ್ತಾರೆ ಎಂದು ಊಹಿಸಿದ್ದರು. ಅದರಲ್ಲಿ ತನಿಷಾ ಮತ್ತು ನಮೃತಾ ಅವರು ಈ ಸಲದ ಬಿಗ್‌ಬಾಸ್‌ ಅನ್ನು ಸಂಗೀತಾ ಅವರೇ ಗೆಲ್ಲಬಹುದು ಎಂದು ಊಹಿಸಿದ್ದಾರೆ.

ಇದನ್ನೂ ಓದಿ: BBK SEASON 10: ಪ್ರತಾಪ್‌ ʻಔಟ್‌ʼ ಆಗಿಲ್ಲ; ಗ್ರ್ಯಾಂಡ್‌ ಫಿನಾಲೆ ತಲುಪಲಿದ್ದಾರೆ ಟಾಪ್‌ 6 ಸ್ಪರ್ಧಿಗಳು!

ತುಕಾಲಿ ಸಂತೋಷ್ (BBK SEASON 10)

ರಂಜನೆ ಮತ್ತು ತಂತ್ರಗಾರಿಕೆ ಎರಡರ ಮಿಶ್ರಣದಂತಿರುವ ತುಕಾಲಿ ಸಂತೋಷ್ ತಮ್ಮ ಜಾಣತನದಿಂದಲೇ ಬಿಗ್‌ಬಾಸ್ ಮನೆಯೊಳಗೆ ಸ್ಥಾನವನ್ನು ಭದ್ರ ಮಾಡಿಕೊಳ್ಳುತ್ತ ಬಂದರು. ವರ್ತೂರು ಸಂತೋಷ್ ಜೊತೆಗಿನ ಅವರ ಸ್ನೇಹಸಂಬಂಧವಂತೂ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಮನೆಯೊಳಗೆ ಅವರ ವರ್ತನೆ, ತಂತ್ರಗಾರಿಕೆಯನ್ನು ಗಮನಿಸಿದ ಉಳಿದ ಸದಸ್ಯರು ತುಕಾಲಿ ಟಾಪ್‌ 5ನಲ್ಲಿ ಇರುತ್ತಾರೆ ಎಂದು ಊಹಿಸಿದ್ದರನಮೃತಾ, ಮೈಕಲ್, ಸಿರಿ, ಸ್ನೇಹಿತ್, ಭಾಗ್ಯಶ್ರೀ ಮತ್ತು ನೀತು ಅವರು ತುಕಾಲಿ ಅವರನ್ನು ಟಾಪ್‌ 5ನಲ್ಲಿ ನೋಡುತ್ತೇವೆ ಎಂದು ಹೇಳಿದ್ದರು. ಅವರ ಊಹೆಯಂತೆ ತುಕಾಲಿ ಟಾಪ್‌6ನಿಂದ ಟಾಪ್‌ 5ಗೆ ಜಿಗಿಯುತ್ತಾರೆ ಎಂದು ಕಾದುನೋಡಬೇಕಷ್ಟೆ.

ಕಾರ್ತಿಕ್ ಮಹೇಶ್‌ (BBK SEASON 10)

ಲವಲವಿಕೆಯ ವ್ಯಕ್ತಿತ್ವ, ಎಲ್ಲದರಲ್ಲಿಯೂ ಪಾಲ್ಗೊಳ್ಳುವ ಉತ್ಸಾಹ, ಸ್ನೆಹಪರ, ಭಾವುಕ ಮನಸ್ಸು ಈ ಎಲ್ಲವೂ ಕಾರ್ತಿಕ್ ಮಹೇಶ್ ಅವರನ್ನು ಮನೆಯ ಬಹುತೇಕ ಸದಸ್ಯರ ಮನಸಲ್ಲಿ ಸ್ಥಾನ ಪಡೆಯುವಂತೆ ಮಾಡಿದ್ದವು. ಕಾರ್ತಿಕ್ ಅವರನ್ನು ಫೇಕ್‌ ಎಂದು ಉಳಿದ ಸದಸ್ಯರು ಉಲ್ಲೇಖಿಸಿದ್ದು ತುಂಬವೇ ವಿರಳ. ಇದು ಅವರ ವ್ಯಕ್ತಿತ್ವದ ಇನ್ನೊಂದು ಆಯಾಮವನ್ನು ಸೂಚಿಸುವಂತಿದೆ. ತನಿಷಾ, ಮೈಕಲ್, ಪವಿ, ಸಿರಿ, ಸ್ನೇಹಿತ್, ಭಾಗ್ಯಶ್ರೀ, ನೀತು ಅವರುಕಾರ್ತಿಕ್ ಅವರನ್ನು ಟಾಪ್ 5ನಲ್ಲಿ ನೋಡುತ್ತೇವೆ ಎಂದು ಊಹಿಸಿದ್ದರು. ಅದರಲ್ಲಿಯೂ ಮನೆಯೊಳಗೆ ಆಪ್ತಸ್ನೇಹವನ್ನು ಕಾಪಾಡಿಕೊಂಡಿದ್ದ ತನಿಷಾ ಅವರು, ‘ಕಾರ್ತಿಕ್ ಗೆಲ್ಲಬೇಕು ಎಂಬ ಆಸೆ ಇದೆ. ಆದರೆ ಸಂಗೀತಾ ಗೆಲ್ಲಬಹುದು ಅನಿಸುತ್ತಿದೆ’ ಎಂದು ಹೇಳಿದ್ದರು. ಸಿರಿ ಕೂಡ, ‘ಕಾರ್ತಿಕ್ ಗೆಲ್ಲಬೇಕು’ ಎಂದು ಹೇಳಿದ್ದರು. ಅದಕ್ಕೆ ಕಾರಣ ಕಾರ್ತೀಕ್ ಜೆನ್ಯೂನ್‌ ಎಂಬುದು.

ಇದನ್ನೂ ಓದಿ: BBK SEASON 10: ಬದಲಾವಣೆಗಳೊಂದಿಗೆ ಹೊಸ ರೀತಿಯಲ್ಲಿ ನಿಮ್ಮ ಮುಂದೆ ಬರಲಿದ್ದೇನೆ ಎಂದ ರಕ್ಷಕ್‌!

ವಿನಯ್ ಗೌಡ

‘ಐ ಆಮ್ ವಿಲನ್’ ಎನ್ನುತ್ತಲೇ ಒಳಹೋದ ವಿನಯ್ ಗೌಡ ಮನೆಯೊಳಗಿನ ಹಲವರ ಪಾಲಿಗೆ ಹೀರೊ ಆಗಿದ್ದೂ ಸತ್ಯ. ಒಂದು ಹಂತದಲ್ಲಿಯಂತೂ ಸ್ವತಃ ಸುದೀಪ್‌ ಅವರೇ, ‘ನಮ್ಮ ಕಣ್ಣಿಗೆ ಒಬ್ಬರು ಮಾತ್ರ ಫಿನಾಲೆ ವೀಕ್‌ಗೆ ಹೋಗುವ ಕಂಟೆಸ್ಟೆಂಟ್ ಆಗಿ ಕಾಣಿಸುತ್ತಿದ್ದಾರೆ. ಉಳಿದವರು ಅವರನ್ನು ಗೆಲ್ಲಿಸಲು ಪ್ರಯತ್ನಿಸುತ್ತಿರುವ ಹಾಗೆ ಕಾಣಿಸುತ್ತಿದೆ’ ಎಂದೇ ನೇರವಾಗಿ ಹೇಳಿದ್ದರು. ಅವರು ಹೇಳಿದ್ದು ವಿನಯ್ ಅವರ ಬಗ್ಗೆಯೇ. ನಂತರದ ವಾರಗಳಲ್ಲಿಈ ಲೆಕ್ಕಾಚಾರ ಬದಲಾಯಿತಾದರೂ, ವಿನಯ್ ಅವರು ತಮ್ಮದೇ ದಾರಿಯಲ್ಲಿ ಮುಂದೆ ನಡೆಯುತ್ತಲೇ ಬಂದರು. ಜಿಯೊಸಿನಿಮಾ ಸಂದರ್ಶನಗಳಲ್ಲಿ ನಮ್ರತಾ, ಮೈಕಲ್, ಪವಿ, ಸ್ನೇಹಿತ್‌ ಎಲ್ಲವೂ ವಿನಯ್ ಹೆಸರನ್ನು ಉಲ್ಲೇಖಿಸಿದ್ದಾರೆ. ಮೈಕಲ್‌, ನಮೃತಾ ಮತ್ತು ಸ್ನೇಹಿತ್ ‘ವಿನಯ್ ಗೆಲ್ಲಬೇಕು ಎಂಬುದು ನನ್ನ ಆಸೆ’ ಎಂದು ಹೇಳಿಕೊಂಡಿದ್ದಾರೆ.

ಮನೆಯಿಂದ ಹೊರಬಂದ ಸ್ಪರ್ಧಿಗಳ ಊಹೆ ಏನೇ ಇದ್ದರೂ ಅದು ಊಹೆ ಮಾತ್ರವೇ. ಅದು ನಿರ್ಧಾರಾತ್ಮಕ ಅಲ್ಲವೇ ಅಲ್ಲ. ಯಾಕೆಂದರೆ ಕೊನೆಗೂ ಒಬ್ಬ ಸ್ಪರ್ಧಿ ಬಿಗ್‌ಬಾಸ್ ಗೆಲ್ಲಲು ಸಾಧ್ಯವಾಗುವುದು ಜನರ ವೋಟ್‌ನಿಂದ. ಮನೆಯಿಂದಾಚೆಗೆ ಜನರ ಕಣ್ಣಿಗೆ ಅವರ ವ್ಯಕ್ತಿತ್ವ ಹೇಗೆ ಕಾಣಿಸುತ್ತಿದೆ, ಅದನ್ನು ಅವರು ಎಷ್ಟು ಮೆಚ್ಚಿಕೊಳ್ಳುತ್ತಿದ್ದಾರೆ, ಆ ಮೆಚ್ಚುಗೆ ಎಷ್ಟರಮಟ್ಟಿಗೆ ಮತಗಳಾಗಿ ಬದಲಾಗುತ್ತಿವೆ ಎನ್ನುವುದೇ ಗೆಲುವಿನ ನಿರ್ಣಾಯಕ ಸಂಗತಿ. ಹಾಗೆ ನೋಡಿದಾಗ, ಮನೆಯೊಳಗೆ ಉಳಿದಿರುವ ಪ್ರತಾಪ್, ವರ್ತೂರು ಸಂತೋಷ್ ಅವರ ಜನಪ್ರಿಯತೆ ಏನೂ ಕಮ್ಮಿಯದಲ್ಲ. ಹಾಗಾಗಿ ಎಲಿಮಿನೇಟೆಡ್ ಸ್ಪರ್ಧಿಗಳ ಊಹೆಯನ್ನು ಸುಳ್ಳಾಗಿಸಿ ಇವರಿಬ್ಬರಲ್ಲಿ ಒಬ್ಬರು ‘ಈ ಸಲ ಕಪ್ ನಮ್ದೆ’ ಎಂದು ಗೆಲುವಿನ ನಗು ಬೀರಿದರೂ ಅಚ್ಚರಿಯಿಲ್ಲ.

ಈ ಎಲ್ಲ ಊಹೆ, ನಿರೀಕ್ಷೆ, ಆತಂಕಗಳಿಗೆ ಉತ್ತರ ಸಿಗಲು ತುಂಬ ಕಾಯಬೇಕಾಗಿಲ್ಲ. ಈ ಭಾನುವಾರ ನಡೆಯಲಿರುವ ಫಿನಾಲೆಯಲ್ಲಿ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ. ಫಿನಾಲೆಯ ನೇರಪ್ರಸಾರ ಜಿಯೊಸಿನಿಮಾದಲ್ಲಿ ವೀಕ್ಷಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Karnataka weather Forecast
ಮಳೆ9 mins ago

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಯಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

MLC N Ravikumar Spoke in North East Graduate Constituency Election Preliminary meeting in hosapete
ವಿಜಯನಗರ11 mins ago

MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

Lok Sabha Election
ದೇಶ18 mins ago

Lok Sabha Election: 5ನೇ ಹಂತದಲ್ಲಿ ಕೇವಲ ಶೇ.56ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Public Exam Good news for students of classes 5 and 8 and 9 Important decision of Karnataka government
ಶಿಕ್ಷಣ22 mins ago

Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

KKR vs SRH
ಕ್ರೀಡೆ33 mins ago

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

Air Crashes
ವಿದೇಶ35 mins ago

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

Phone Tapping
ಕರ್ನಾಟಕ45 mins ago

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Star Fashion
ಫ್ಯಾಷನ್46 mins ago

Star Fashion: ಮಾಲಾಶ್ರೀ ಮಗಳ ಬಿಗ್‌ ಬ್ಲ್ಯಾಕ್‌ ಜುಮ್ಕಾ ಲವ್‌!

Benjamin Netanyhu
ವಿದೇಶ48 mins ago

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

Legislative Council Election dates fixedVoting on June 13
ರಾಜಕೀಯ51 mins ago

Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌