Dheekshith Shetty: ಜನರಿಂದಲೇ ದೇಶ ಜನರಿಂದಲೇ ಸಿನಿಮಾ ಎಂದ ದೀಕ್ಷಿತ್ ಶೆಟ್ಟಿ; ʻಬ್ಲಿಂಕ್ʼ ವಿನೂತನ ಪ್ರಯತ್ನ! - Vistara News

ಸ್ಯಾಂಡಲ್ ವುಡ್

Dheekshith Shetty: ಜನರಿಂದಲೇ ದೇಶ ಜನರಿಂದಲೇ ಸಿನಿಮಾ ಎಂದ ದೀಕ್ಷಿತ್ ಶೆಟ್ಟಿ; ʻಬ್ಲಿಂಕ್ʼ ವಿನೂತನ ಪ್ರಯತ್ನ!

Dheekshith Shetty: ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ 8ಕ್ಕೆ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ.

VISTARANEWS.COM


on

Dheekshith Shetty Blink Cinema special video For republic
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರವಿಚಂದ್ರ ಎ ಜೆ ಅವರ ನಿರ್ಮಾಣದ ದೀಕ್ಷಿತ್ ಶೆಟ್ಟಿ (Dheekshith Shetty) ಹಾಗೂ ಚೈತ್ರ ಆಚಾರ್ ಮುಖ್ಯಭೂಮಿಯಲ್ಲಿ ನಟಿಸಿರುವ ʻಬ್ಲಿಂಕ್ʼ ಚಿತ್ರತಂಡ , ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ. ತಮ್ಮ ಚಿತ್ರವನ್ನು ಜನರಿಗೆ ಮುಟ್ಟಿಸುವಲ್ಲಿ ಗೆಲ್ಲಲೇಬೇಕು ಎಂದು ಶಪಥ ಮಾಡಿರುವ ಈ ತಂಡ ಯಾವುದೇ ಮುಚ್ಚು ಮರೆ ಇಲ್ಲದೆ , ನೂತನ ಚಿತ್ರಗಳನ್ನು ಕಟ್ಟುವಲ್ಲಿ , ಜನರಿಗೆ ತಲುಪಿಸುವಲ್ಲಿ ಇರುವ ಸಮಸ್ಯೆಗಳನ್ನು ತಿಳಿಸಲು ವಿನೂತನ ಪ್ರಯೋಗ ಮಾಡಿದ್ದು , “ಜನರಿಂದಲೇ ಸಿನಿಮಾ , ಜನರೇ ಸಿನಿಮಾ” ಎಂಬಾ ವಿಶಿಷ್ಟ ಸಾಲುಗಳು ಜನರ ಮನಸ್ಸನ್ನು ಗೆಲ್ಲುತ್ತಿವೆ. ಚಿತ್ರಮಂದಿರದಿಂದ ದೂರ ಉಳಿದಿರುವ ಜನರಿಗೆ , ಮತ್ತೆ ಚಿತ್ರಮಂದಿರದ ಆ ಮಾಂತ್ರಿಕ ಜಗತ್ತಿನ ವಿಶೇಷತೆಯನ್ನು ಮನಮುಟ್ಟುವಂತೆ ನಿರೂಪಿಸಿದ್ದಾರೆ.

ಮಾರ್ಚ್ 8ಕ್ಕೆ ಬೆಳ್ಳಿತೆರೆಗೆ ಅಪ್ಪಳಿಸಲು ಸಜ್ಜಾದ “ಬ್ಲಿಂಕ್”(Dheekshith Shetty)

ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ 8ಕ್ಕೆ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ʻಬ್ಲಿಂಕ್ʼ ಚಿತ್ರವು ಸೈಫೈ ಪ್ರಕಾರದ ಚಿತ್ರವಾಗಿದ್ದು ಪ್ರೇಕ್ಷಕರನ್ನು ಸೆಳಿದಿಟ್ಟುಕೊಳ್ಳುವುದು ಖಂಡಿತವೆಂದು ನಿರ್ಮಾಪಕ ರವಿಚಂದ್ರ ಎ ಜೆ ಹೇಳುತ್ತಾರೆ.

ಇದನ್ನೂ ಓದಿ: Dheekshith Shetty: ಮಲಯಾಳಂಗೆ ಕಾಲಿಟ್ಟ ‘ದಿಯಾ’ ಹೀರೊ ದೀಕ್ಷಿತ್ ಶೆಟ್ಟಿ!

ತಮ್ಮ ಚೊಚ್ಚಲ ನಿರ್ದೇಶನದಲ್ಲೇ ಚಿತ್ರದ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ನಿರ್ದೇಶಕ ಶ್ರೀನಿಧಿ ಬೆಂಗಳೂರುರವರು, ಇದೊಂದು ಕಾಲ್ಪನಿಕ ಕಥೆಯಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಚಿತ್ರಗಳು ತೀರಾ ಕಡಿಮೆ ತೆರೆಕಂಡಿದ್ದು ಈ ಚಿತ್ರವು ನೋಡುಗರಲ್ಲಿ ಹೊಸತನ ಮೂಡಿಸುತ್ತದೆ ಎಂದು ನಿರ್ದೇಶಕ ಶ್ರೀನಿಧಿ ಬೆಂಗಳೂರು ಹೇಳುತ್ತಾರೆ.

ʻದಿಯಾʼ, ʻದಸರಾ ʼಖ್ಯಾತಿಯ ನಟ ದೀಕ್ಷಿತ್ ಶೆಟ್ಟಿಯವರು ನಾಯಕ ನಟನ ಜವಬ್ದಾರಿಯನ್ನು ಹೊತ್ತಿದ್ದಾರೆ. ಹಾಗೂ ಹೊಸ ದಿನಚರಿ ಖ್ಯಾತಿಯ ಮಂದಾರ ಬಟ್ಟಲಹಳ್ಳಿ ನಾಯಕಿನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ತೆರೆಕಂಡ ಟೋಬಿ ಮತ್ತು ಸಪ್ತಸಾಗರದಾಚೆ ಎಲ್ಲೋ 2 ಚಿತ್ರದ ಸುರಭಿ ಪಾತ್ರಧಾರಿ ಚೈತ್ರ ಜೆ ಆಚಾರ್ ಬ್ಲಿಂಕ್ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ ಹಾಗೂ ವಜ್ರಧೀರ್ ಜೈನ್, ಗೋಪಾಲಕೃಷ್ಣ ದೇಶಪಾಂಡೆ , ಕಿರಣ್ ನಾಯ್ಕ್ ,ಮುರುಳಿ ಶೃಂಗೇರಿ , ಸುರೇಶ್ ಅನಗಹಳ್ಳಿ ಸೇರಿದಂತೆ ಇನ್ನು ದೊಡ್ಡ ತಾರಬಳಗವಿದೆ.

ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಂ ಎಸ್ ರವರ ಸಂಗೀತ ನಿರ್ದೇಶನವಿದ್ದು , ಅವಿನಾಶ ಶಾಸ್ರ್ತಿರವರ ಕ್ಯಾಮೆರಾ ಕೈ ಚಳಕವಿದೆ..ಹಾಗೂ ಸಂಜೀವ್ ಜಾಗೀರ್ದಾರ್ ರವರ ಸಂಕಲನವಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Vinay Rajkumar: ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ರ ವಿನಯ್ ರಾಜ್ ಕುಮಾರ್? ದೊಡ್ಮನೆ ಫ್ಯಾನ್ಸ್‌ಗೆ ಶಾಕ್‌!

Vinay Rajkumar: ಇದಕ್ಕೆ ಪೂರಕವಾಗಿ ಸ್ವಾತಿಷ್ಠಾ ಕೃಷ್ಣನ್ ಮತ್ತು ವಿನಯ್ ರಾಜ್ ಕುಮಾರ್ ಮಧುಮಗ ಮತ್ತು ಮಧುಮಗಳ ಗೆಟಪ್ಪಿನಲ್ಲಿರುವ ಫೋಟೊಗಳು ವೈರಲ್ ಆಗಿವೆ. ಹಾಗಾದರೆ ಈ ಸುದ್ದಿ ನಿಜನಾ? ಇವರಿಬ್ಬರ ಮದುವೆ ಗಾಸಿಪ್‌ ಆಗಿದ್ದೇಕೆ ಎಂದು ತಿಳಿಯಲು ಮುಂದೆ ಓದಿ!

VISTARANEWS.COM


on

Vinay Rajkumar wedding pictures swathishta krishnan have gone viral
Koo

ಬೆಂಗಳೂರು: ಈಗಾಗಲೇ ದೊಡ್ಮನೆಯ ಕುಡಿ ಯುವರಾಜ್‌ (Vinay Rajkumar) ದಾಂಪತ್ಯದಲ್ಲಿ ಬಿರುಕು ಮೂಡಿರುವುದು ಗೊತ್ತೇ ಇದೆ. ವಿಚ್ಚೇದನದ ಹಂತಕ್ಕೂ ತಲುಪಿದೆ. ಈ ಪ್ರಕರಣ ಬೆನ್ನಲ್ಲೇ ವಿನಯ್ ರಾಜ್ ಕುಮಾರ್ ಅವರ ಮದುವೆ ಸುದ್ದಿ ಕೂಡ ಜೋರಾಗಿದೆ. ಇದಕ್ಕೆ ಪೂರಕವಾಗಿ ಸ್ವಾತಿಷ್ಠಾ ಕೃಷ್ಣನ್ ಮತ್ತು ವಿನಯ್ ರಾಜ್ ಕುಮಾರ್ ಮಧುಮಗ ಮತ್ತು ಮಧುಮಗಳ ಗೆಟಪ್ಪಿನಲ್ಲಿರುವ ಫೋಟೊಗಳು ವೈರಲ್ ಆಗಿವೆ. ಹಾಗಾದರೆ ಈ ಸುದ್ದಿ ನಿಜನಾ? ಇವರಿಬ್ಬರ ಮದುವೆ ಗಾಸಿಪ್‌ ಆಗಿದ್ದೇಕೆ ಎಂದು ತಿಳಿಯಲು ಮುಂದೆ ಓದಿ!

ಪ್ರೇಮಕಥೆಯ ತೆರೆಯ ಹಿಂದಿನ ಕಥೆ ಎಂಬ ಸಾಲನ್ನೂ ಬರೆದಿದ್ದರು. ಆದರೆ ಈ ಚಿತ್ರ ವೈರಲ್‌ ಆಗುತ್ತಿದ್ದಂತೆ ಇದ್ಯಾವುದು ಗಮನಿಸಿದ ಕೆಲವರು ಜೋಡಿ ಚೆನ್ನಾಗಿದೆ ಎಂದು ಕಮೆಂಟ್‌ ಮೂಲಕ ವಿಶ್‌ ಮಾಡಿದ್ದಾರೆ. ಮಾತ್ರವಲ್ಲ ನಿಮ್ಮಿಬ್ಬರ ಜೋಡಿ ತುಂಬ ಚೆಂದವಾಗಿದೆ ಎಂದು ಶುಭಾಶಯ ತಿಳಿಸುತ್ತಿದ್ದಾರೆ.

ಇನ್ನೂ ಕೆಲವರು ವಿನಯ್ ರಾಜ್ ಕುಮಾರ್ ಅವರ ಮದುವೆ ಆಯ್ತು, ಆದರೆ.. ನಮಗೆ ಗೊತ್ತೇ ಆಗಲಿಲ್ಲವಲ್ಲಾ ಎಂದು ಬೇಸರವನ್ನೂ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಹಲವರಿಗೆ ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಬೇಸರವನ್ನುಂಟು ಮಾಡಿವೆ. ಇನ್ನೂ ಮದುವೆಯ ಶುಭಾಶಯಗಳ ಮಹಾಪೂರ ಹರಿದು ಬಂದ ಬೆನ್ನಲ್ಲಿಯೇ, ‘ಅಯ್ಯೋ.. ನಾನು ನನ್ನ ಪೋಸ್ಟ್‌ನಲ್ಲಿಯೇ ಬಹಳ ಕ್ಲಿಯರ್‌ ಆಗಿ ಬರೆದಿದ್ದೇನೆ. ಇದು ಚಿತ್ರೀಕರಣದ ಸಮಯದಲ್ಲಿ ತೆಗೆದ ಫೋಟೊ ಎಂದು . ಮನವಿಯನ್ನೂ ಸ್ವಾತಿಷ್ಠಾ ಕೃಷ್ಣನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Vinay Rajkumar: ವಿನಯ್‌ ರಾಜ್‌ಕುಮಾರ್ ನಟನೆಯ ʻಗ್ರಾಮಾಯಣʼ ಸೆಟ್‌ಗೆ ಭೇಟಿ ಕೊಟ್ಟ ಶಿವಣ್ಣ-ಗೀತಾ!

 ವಿನಯ್‌ ರಾಜ್ ಕುಮಾರ್ (Vinay Rajkumar) ಅವರು ʻಒಂದು ಸರಳ ಪ್ರೇಮ ಕಥೆʼ ಸಿನಿಮಾ ಬಳಿಕ ʻಗ್ರಾಮಾಯಣʼ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ನಟ ಶಿವರಾಜ್ ಕುಮಾರ್ (Shivaraj Kumar) ಮತ್ತು ಗೀತಾ ಶಿವರಾಜ್ ಕುಮಾರ್ ಅವರು ಸೆಟ್‌ಗೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜತೆಗೆ ಸೇರಿ ಆರಂಭಿಸುತ್ತಿದ್ದಾರೆ.

‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಖ್ಯಾತ ಕಲಾವಿದ ಗೋಪಾಲಕೃಷ್ಣ ದೇಶಪಾಂಡೆ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ಅಪರ್ಣಾ ಕೂಡ ಇದರಲ್ಲಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಅಭಿಷೇಕ್ ಕಾಸರಗೋಡು ಅವರ ಛಾಯಾಗ್ರಹಣವಿದೆ. ದೇವನೂರು ಚಂದ್ರು (Devanur Chandru) ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು.

ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾ ಬಹಳ ಹಿಂದೆ ಸೆಟ್ಟೇರಿತ್ತು. ಆದರೆ ನಾಯಕಿ ಯಾರೆಂಬುದರ ಬಗ್ಗೆ ಸಿನಿರಸಿಕರು ಕುತೂಹಲದಿಂದ ಕಾದಿದ್ದರು. ಇದೀಗ ಮೇಘಾ ಶೆಟ್ಟಿ ನಾಯಕಿ ಎಂಬುದು ಕನ್‌ಫರ್ಮ್‌ ಆಗಿದೆಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಮೇಘಾ ಶೆಟ್ಟಿಯ ಅಭಿನಯಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್; ಆಪ್ತರಿಗೆ ತಟ್ಟಿದೆ ವಿಚಾರಣೆ ಬಿಸಿ!

Actor Darshan: ಈಗಾಗಲೇ ಪೊಲೀಸರು ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್‌ನ ಇಬ್ಬರು ಪರಿಚಯಸ್ಥರನ್ನು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಇದೀಗ ಪೊಲೀಸ್‌ ತನಿಖೆ ವೇಳೆ ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್ ಆಗಿದೆ.

VISTARANEWS.COM


on

Actor Darshan SIM Secret Revealed investigation start
Koo

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧಿತನಾಗಿರುವ ನಟ ದರ್ಶನ್‌ಗೆ (Actor Darshan) ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದೀಗ ಪೊಲೀಸ್‌ ತನಿಖೆ ವೇಳೆ ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್ ಆಗಿದೆ. ನಟ ದರ್ಶನ್ ಮಾತ್ರವಲ್ಲ, ಪವಿತ್ರಗೌಡ, ಪ್ರದೂಷ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನಾಯಕ್ ಕೂಡ ಬೇರೊಬ್ಬರ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವುದು ತನಿಖೆ ವೇಳೆ ಬಯಲಿಗೆ ಬಂದಿದೆ. ಹೀಗಾಗಿ ಸಿಮ್ ಖರೀದಿದಾರರಿಗೆ ಪೊಲೀಸರು ನೋಟಿಸ್‌ ನೀಡಲು ಮುಂದಾಗಿದ್ದಾರೆ. ಮಾತ್ರವಲ್ಲ ದರ್ಶನ್ ಪರಿಚಯಸ್ಥರ ವಿಚಾರಣೆಗೆ ಕೂಡ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಪೊಲೀಸ್‌ ತನಿಖೆ ವೇಳೆ ಆರೋಪಿಗಳು ಬೇರೊಬ್ಬರ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ. ಮಾಹಿತಿ ಸಂಗ್ರಹಿಸಿ ಪರಿಶೀಲನೆ ವೇಳೆ ಸಿಮ್ ಕಾರ್ಡ್ ರಹಸ್ಯ ಬಯಲಾಗಿದೆ. ಹೇಮಂತ್ ಹೆಸರಿನಲ್ಲಿರುವ ಸಿಮ್‌ವನ್ನು ದರ್ಶನ್‌ ಬಳಸುತ್ತಿದ್ದರೆ, ಪವಿತ್ರಗೌಡ ಅವರು ಮನೋಜ್ ಹೆಸರಿನಲ್ಲಿದ್ದ ಸಿಮ್ ಬಳಸುತ್ತಿದ್ದರು. ಆರೋಪಿ ನಂದೀಶ್ ಅವರು ಹೇಮಂತ್ ಹೆಸರಿನಲ್ಲಿ, ಆರೋಪಿ ಪ್ರದ್ಯೂಷ್ ಖಾಸಗಿ ಕಂಪನಿ ಸೀನಿಯರ್ ಮ್ಯಾನೇಜರ್ ಹೆಸರಿನಲ್ಲಿ, ಆರೋಪಿ ಕಾರ್ತಿಕ್ ಅವರು ವೇಲು ಎಂಬಾತನ ಹೆಸರಲ್ಲಿ, ಕೇಶವಮೂರ್ತಿ ಅರು ಪ್ರಜ್ಞಾ ಎಂ ಹೆಸರಲ್ಲಿ, ನಿಖಿಲ್ ನಾಯಕ್ ಅವರು ಗೀತಾ ಹೆಸರಲ್ಲಿ ಸಿಮ್‌ ಬಳಕೆ ಮಾಡುತ್ತಿರುವುದಾಗಿ ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!  

ಸದರಿ ಸಿಮ್ ಮಾಲೀಕರ ವಿಚಾರಣೆಗೆ ಪೊಲೀಸರು ಮುಂದಾಗಿದ್ದಾರೆ. ನೋಟಿಸ್ ನೀಡಿ ವಿಚಾರಣೆ ಮಾಡಲು ಪೊಲೀಸರು ಸಿದ್ಧತೆ ಮಾಡುತ್ತಿದ್ದಾರೆ. ಮಾತ್ರವಲ್ಲ ಬೆಂಗಳೂರಿನ ಪ್ರಭಾವಿ ಶಾಸಕನ ಕಾರು ಚಾಲಕನಿಗೂ ನೋಟಿಸ್ ನೀಡಿಲಾಗಿದೆ. ಕಾರ್ತಿಕ್ ಪುರೋಹಿತ್ ಎಂಬ ಕಾರು ಚಾಲಕನಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪುತ್ತಿದ್ದಂತೆ ಪುರೋಹಿತ್ ಎಸ್ಕೇಪ್ ಆಗಿದ್ದಾನೆ. ಈತ ಆರೋಪಿ ಪ್ರದೋಷ್‌ಗೆ ಆಪ್ತನಾಗಿದ್ದ.

ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ

ಈಗಾಗಲೇ ಪೊಲೀಸರು ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್‌ನ ಇಬ್ಬರು ಪರಿಚಯಸ್ಥರನ್ನು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಸಾಕ್ಷಿದಾರರು ಎಂದು ಪರಿಗಣಿಸಿ ಹೇಳಿಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮೋಹನ್ ರಾಜು ಹಾಗೂ ಪ್ರಕಾಶ್ ಹೇಳಿಕೆ ಪಡೆಯಲಿದ್ದಾರೆ. ಹಣಕ್ಕೆ ಸಂಬಂಧಿಸಿದಂತೆ ಹಾಗೇ ಇಬ್ಬರು ಪರಿಚಯಸ್ಥರ ಜೊತೆಗೆ ಇನ್ನೂ ಕೆಲವರ ವಿಚಾರಣೆ ಆಗಲಿದೆ.

ದರ್ಶನ್ ಮನೆ ಕೆಲಸಗಾರರಾದ ಬಾಬುಲ್ ಖಾನ್, ಸುಶೀಲಮ್ಮ ಮತ್ತು ಅಮೀರ್ ಖಾನ್ ,ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಕೆಲಸಗಾರ ಚೇತನ್ ಗೌಡ ಹೇಳಿಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಆರೋಪಿ ಪವಿತ್ರಗೌಡ ಸ್ನೇಹಿತೆ ಸಮಂತ ಎಂಬಾಕೆಗೂ ವಿಚಾರಣೆ ಬಿಸಿ ತಟ್ಟಿದೆ. ಇದರ ಜೊತೆಗೆ ಇನ್ನಷ್ಟು ಪರೋಕ್ಷ ಸಾಕ್ಷಿಗಳ ಸಂಗ್ರಹ ಕೂಡ ಆಗುತ್ತಿದೆ. ಪೊಲೀಸರು ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Chaithra J Achar: ʻರೂಪಾಂತರʼ ಸಿನಿಮಾದ ಹಾಡು ರಿಲೀಸ್‌; ಇಳಕಲ್‌ ಸೀರೆಯಲ್ಲಿ ಮಿಂಚಿದ ಚೈತ್ರಾ ಆಚಾರ್!

Chaithra J Achar: ಈ ‘ರೂಪಾಂತರ’ ಸಿನಿಮಾದ ಹಾಡು ಈಗ ರಿಲೀಸ್ ಆಗಿದೆ. ಸದ್ದಿಲ್ಲದೆ ಸಿನಿಮಾ ಮುಗಿಸಿರುವ ತಂಡ ಈಗಾಗಲೇ “ಕಿತ್ತಾಳೆ” ಎನ್ನುವ ಹಾಡನ್ನು ರಿಲೀಸ್ ಮಾಡಿದೆ. ಈ ಮೂಲಕ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಕಿವಿಗಳಿಗೆ ಇಂಪು ನೀಡಿದೆ.ಇದೇ ಸಿನಿಮಾ ಮೂಲಕ ಸಂಗೀತ ನಿರ್ದೇಶಕ ಮಿಧುನ್ ಮುಕುಂದನ್ ಕೂಡ ಎಂಟ್ರಿ ಕೊಟ್ಟಿದ್ದರು.

VISTARANEWS.COM


on

Chaithra J Achar Kittale Roopanthara Raj B Shetty out
Koo

ಬೆಂಗಳೂರು: ಇತ್ತೀಚೆಗಷ್ಟೆ ʼಟರ್ಬೋʼ ಎಂಬ ಮಲಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ. ಶೆಟ್ಟಿ ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ “ರೂಪಾಂತರ” (Roopanthara)ಎಂಬ ಹೊಸ ಚಿತ್ರದ (Kannada New Movie) ಫಸ್ಟ್‌ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನ ಸೆಳೆದಿದ್ದರು. ಈಗಾಗಲೇ ‘ಟೋಬಿ’, ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಅಂತಹ ಸಿನಿಮಾಗಳಲ್ಲಿ ನಟಿಸಿ ಸಿನಿಪ್ರಿಯರ ಮೆಚ್ಚುಗೆ ಗಳಿಸಿಕೊಂಡಿರುವ ಚೈತ್ರಾ ಆಚಾರ್ (Chaithra J Achar) ‘ರೂಪಾಂತರ’ದಲ್ಲೂ ಕಾಣಿಸಿಕೊಂಡಿದ್ದಾರೆ.

ಈ ‘ರೂಪಾಂತರ’ ಸಿನಿಮಾದ ಹಾಡು ಈಗ ರಿಲೀಸ್ ಆಗಿದೆ. ಸದ್ದಿಲ್ಲದೆ ಸಿನಿಮಾ ಮುಗಿಸಿರುವ ತಂಡ ಈಗಾಗಲೇ “ಕಿತ್ತಾಳೆ” ಎನ್ನುವ ಹಾಡನ್ನು ರಿಲೀಸ್ ಮಾಡಿದೆ. ಈ ಮೂಲಕ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಕಿವಿಗಳಿಗೆ ಇಂಪು ನೀಡಿದೆ.ಇದೇ ಸಿನಿಮಾ ಮೂಲಕ ಸಂಗೀತ ನಿರ್ದೇಶಕ ಮಿಧುನ್ ಮುಕುಂದನ್ ಕೂಡ ಎಂಟ್ರಿ ಕೊಟ್ಟಿದ್ದರು.ಮಿಧುನ್ ಸಂಗೀತಕ್ಕೆ ರಾಜ್ ಸಾಹಿತ್ಯ ರಚಿಸಿದ್ದು “ಕಿತ್ತಾಳೆ” ಹಾಡು ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ. ನಟಿ ಚೈತ್ರಾ ಆಚಾರ್ ಅವರೇ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಅವರೇ ಹಾಡಿರುವುದು ವಿಶೇಷ.

ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ. ಈ ಸಿನಿಮಾದ ಭಾಗವಾಗಿರುವುದು, ಜತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ಬರೆದುಕೊಂಡಿರುವ ರಾಜ್ ಬಿ. ಶೆಟ್ಟಿ, ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಅವರು ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ: Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

ಮತ್ತೆ ಒಂದಾದ ʼಮೊಟ್ಟೆʼ ತಂಡ

ಈ ಚಿತ್ರದ ಇನ್ನೊಂದು ವಿಷೇಶತೆಯೆಂದರೆ ಈ ಹಿಂದೆ ʼಒಂದು ಮೊಟ್ಟೆಯ ಕಥೆʼ ಎಂಬ ಚಿತ್ರವನ್ನು ನಿರ್ಮಿಸಿ ವಿಶ್ವದಾದ್ಯಂತ ಹೆಸರುವಾಸಿಯಾದ ಅದೇ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ. ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್‌ನ ಮೂಲಕ ತೆರೆಗೂ ತರುತ್ತಿದ್ದಾರೆ.

ಒಂದು ಮೊಟ್ಟೆಯ ಕಥೆಯ ನಿರ್ಮಾಪಕ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನು ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.

ಕನ್ನಡದಲ್ಲೊಂದು ವಿಭಿನ್ನ ಪ್ರಯತ್ನ

ಕನ್ನಡ ಚಿತ್ರರಂಗದಲ್ಲಿ ಹೊಸತನ ಬರಬೇಕು ಎನ್ನುವ ಕೂಗು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ “ರೂಪಾಂತರ” ಒಂದು ಪ್ರಮುಖ ಪಾತ್ರ ವಹಿಸಲಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈ ಚಿತ್ರವು ಮಿಥಿಲೇಶ್ ಎಡವಲತ್ ಎನ್ನುವ ಪ್ರತಿಭಾವಂತ ಯುವಕನ ಪ್ರಥಮ ನಿರ್ದೇಶನದ ಚಿತ್ರವಾಗಿದೆ. ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!  

Actor Darshan: ದರ್ಶನ್‌ ಅಭಿನಯದ ತಾರಕ್‌ ಸಿನಿಮಾದಲ್ಲಿ ಯಮುನಾ ಶ್ರೀನಿಧಿ ಅವರು ನಟಿಸಿದ್ದರು. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

Actor Darshan very simple person Yamuna Srinidhi
Koo

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧಿತನಾಗಿರುವ ನಟ ದರ್ಶನ್‌ಗೆ (Actor Darshan) ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.  ದರ್ಶನ್ ಪ್ರಕರಣದ ಬಗ್ಗೆ ಅವರ ಜತೆ ನಟಿಸಿರೋ ಯಮುನಾ ಶ್ರೀನಿಧಿ ವಿಸ್ತಾರ ಜತೆ ಮಾತನಾಡಿದ್ದಾರೆ. ದರ್ಶನ್‌ ಅಭಿಮಾನಿಗಳಿಗೆ ತೀರ್ಪು ಬರುವವರೆಗೆ ತಾಳ್ಮೆಯಿಂದರಲು ಮನವಿ ಮಾಡಿದ್ದಾರೆ.

ದರ್ಶನ್‌ ಅಭಿನಯದ ತಾರಕ್‌ ಸಿನಿಮಾದಲ್ಲಿ ಯಮುನಾ ಶ್ರೀನಿಧಿ ಅವರು ನಟಿಸಿದ್ದರು. ಇದೀಗ ವಿಸ್ತಾರ ಜತೆ ದರ್ಶನ್‌ ಕುರಿತಾಗಿ ಮಾತನಾಡಿದ್ದು ಹೀಗೆ.

ʻʻಆರೋಪಿ ಸ್ಥಾನದಲ್ಲಿ ಯಾರ ಬೇಕಾದರೂ ಇರಬಹುದು. ನ್ಯಾಯಾಂಗ ಇದೆ..ಪೊಲೀಸ್‌ ಇದ್ದಾರೆ. ಅವರ ಕೆಲಸಗಳ ಬಗ್ಗೆ ಮಾತನಾಡುವಷ್ಟು ಜ್ಞಾನ ನನಗೆ ಖಂಡಿತವಾಗಲೂ ಇಲ್ಲ. ನಾವು ಏನಿದ್ರೂ ಅವರ ತೀರ್ಪು ಬಂದಾಗ ಏನು ಎಂದು ಕಾಯುತ್ತ ಇರುವ ಸಾಮಾನ್ಯ ಪ್ರಜೆಗಳು. ನಾನು ನಂಬಿರುವುದು ಉಹಾ ಪೋಹಗಳು. ತಾರಕ್‌ ಸಿನಿಮಾ ವೇಳೆ ನಾನು ದರ್ಶನ್‌ ಅವರ ಜತೆ ಕೆಲಸ ಮಾಡಿದ್ದೆ. ದೇವತಾ ಮನುಷ್ಯ ಅನಿಸಿತ್ತು. ಅವರ ಸರಳತೆ , ಟ್ರೀಟ್‌ ಮಾಡೋದು ಖುಷಿ ಕೊಡತ್ತೆ. ದರ್ಶನ್‌ ಅವರು ಮಗ ಎನ್ನುವ ಪ್ರೀತಿ ಕೊಟ್ಟಿದ್ದಾರೆ. ದರ್ಶನ್‌ ಪ್ರಕರಣಕ್ಕೂ 10 ದಿನ ಮುಂಚೆ ಮೈಸೂರಿನಲ್ಲಿ ಅವರನ್ನು ಮೀಟ್‌ ಮಾಡಿದ್ವಿ. ನಂತರ ನನ್ನ ಗುರುತು ಹಿಡಿದು ಮಾತನಾಡಿಸಿದ್ರು. ಖುಷಿಯಾಯ್ತುʼʼಎಂದರು.

ಇದನ್ನೂ ಓದಿ: Actor Darshan: ದರ್ಶನ್‌ ಕೇಸ್‌ ಬಗ್ಗೆ ಮಾತನಾಡದೇ ಇರೋದಕ್ಕೆ ಕಾರಣ ತಿಳಿಸಿದ ಸಮಲತಾ; ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದೇನು?

ʻʻಅಭಿಮಾನಿಗಳ ಬಗ್ಗೆ ನನ್ನ ಅನಸಿಕೆ ಏನೆಂದರೆ ಯಾರೂ ಪ್ರಚೋದಿಸಿಲ್ಲ ಎಂದರೆ ಯಾರೂ ಏನೂ ಮಾಡುವದಕ್ಕೆ ಹೋಗುವುದಿಲ್ಲ. ತೀರ್ಪು ಬರುವ ಮುಂಚೆಯೇ ಏನೇನೋ ಪೋಸ್ಟ್‌ ಹಾಕಿದ್ದಾರೆ. ಪ್ರಚೋದಿನೆಯಿಂದಾಗಿ ಅಭಿಮಾನಿಗಳು ಈ ರೀತಿ ವರ್ತಿಸಿದ್ದಾರೆ ಎಂಬುದು ನನ್ನ ನಂಬಿಕೆ. ಹಾಗೇ ವಿಜಯಲಕ್ಷ್ಮಿ ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಕ್ಷಮೆಯಾಧರಿತ್ರಿಯಾಗಿ ಬದುಕಬೇಕು ಎಂದು ನನ್ನ ತಂದೆ ಹೇಳಿದ್ದರು. ಇದೀಗ ಅವರು ಗಂಡನ ಪಕ್ಕ ನಿಂತು ಹೋರಾಡುತ್ತಿದ್ದಾರೆ. ಹಾಗೇ ಮಗನ ವಿಚಾರಕ್ಕೆ ಬಂದರೆ ಮಕ್ಕಳ ಮನಸ್ಸು ಕೂಡ ತುಂಬ ಸೂಕ್ಷ್ಮ. ಬೇರೆಯವರ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದು ತುಂಬ ಸುಲಭ. ಆದರೆ ವಿನೀಶ್‌ ನೋಡದಾಗ ತುಂಬ ಬೇಜರಾಗತ್ತೆ. ಅಭಿಮಾನಿಗಳಲ್ಲಿ ಕೇಳೊದು ಇಷ್ಟೇ. ತೀರ್ಪು ಬರುವವರೆಗೆ ದಯವಿಟ್ಟು ತಾಳ್ಮೆ ಇರಬೇಕು ಎಂದು ಕೇಳಿಕೊಳ್ಳುತ್ತೇನೆʼʼಎಂದರು.

ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

Continue Reading
Advertisement
Rohit Sharma
ಕ್ರೀಡೆ12 mins ago

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Raj Tarun Police complaint filed by live-in partner
ಟಾಲಿವುಡ್12 mins ago

Raj Tarun: ಟಾಲಿವುಡ್‌ ಯುವ ನಟ ʻರಾಜ್ ತರುಣ್ʼ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ದೂರು ದಾಖಲಿಸಿದ ಪ್ರೇಯಸಿ!

NEET PG 2024
ಶಿಕ್ಷಣ14 mins ago

NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

Electric shock
ದಾವಣಗೆರೆ17 mins ago

Electric shock : ಮೋಟಾರ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌ಗೆ ಮಹಿಳೆ ಸಾವು; ಮೀನು ಹಿಡಿಯಲು ಹೋಗಿ ವ್ಯಕ್ತಿ ನೀರುಪಾಲು

Channaptna By Election CP Yogeshwar
ಪ್ರಮುಖ ಸುದ್ದಿ23 mins ago

Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Viral Video
Latest24 mins ago

Viral Video: ತಲೆಕೂದಲಿನಲ್ಲಿ ಟೀಪಾಟ್ ತಯಾರಿಸಿ ಅದರಿಂದ ನೀರು ಕುಡಿದ ಕೇಶ ವಿನ್ಯಾಸಕಿ!

SC ST Scholarship
ಪ್ರಮುಖ ಸುದ್ದಿ27 mins ago

SC ST Scholarship: ದೆಹಲಿಯಲ್ಲಿ ಎಸ್‌ಸಿ, ಎಸ್‌ಟಿ ಮಕ್ಕಳಿಗೆ ಹಾಸ್ಟೆಲ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ 15,000 ಶಿಷ್ಯವೇತನ: ಸಿಎಂ ಘೋಷಣೆ

Retirement Panning
ಮನಿ-ಗೈಡ್40 mins ago

Retirement Panning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ

electric bike taxi
ಪ್ರಮುಖ ಸುದ್ದಿ57 mins ago

Electric Bike Taxi: ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

Puri Jagannath Yatra
ಧಾರ್ಮಿಕ59 mins ago

Puri Jagannath Yatra: ಜುಲೈ 7ರಂದು ಪುರಿ ಜಗನ್ನಾಥ ರಥಯಾತ್ರೆ; ಇದಕ್ಕಿದೆ ಪೌರಾಣಿಕ ಹಿನ್ನೆಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ1 hour ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ3 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು4 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು4 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ9 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ22 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ24 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌