BBK SEASON 10: ಬಿಗ್‌ಬಾಸ್‌ ಕಿರೀಟ ಮುಡಿಗೇರಿಸಿಕೊಂಡ ಕಾರ್ತಿಕ್‌; ಡ್ರೋನ್‌ ಪ್ರತಾಪ್‌ ರನ್ನರ್‌ ಅಪ್‌ - Vistara News

ಬಿಗ್ ಬಾಸ್

BBK SEASON 10: ಬಿಗ್‌ಬಾಸ್‌ ಕಿರೀಟ ಮುಡಿಗೇರಿಸಿಕೊಂಡ ಕಾರ್ತಿಕ್‌; ಡ್ರೋನ್‌ ಪ್ರತಾಪ್‌ ರನ್ನರ್‌ ಅಪ್‌

BBK SEASON 10: ಬಿಗ್‌ಬಾಸ್‌ ಕನ್ನಡ ಸೀಸನ್‌ 10ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದ್ದಾರೆ. ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ.

VISTARANEWS.COM


on

karthik
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (BBK SEASON 10)ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದ್ದಾರೆ. ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ. ಆ ಮೂಲಕ ಬಹು ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ.

ಮುಖ್ಯವೇದಿಕೆಯಲ್ಲಿ ಸಂಗೀತಾ ಶೃಂಗೇರಿ ಎರಡನೇ ರನ್ನರ್ ಅಪ್ ಆಗಿದ್ದಾರೆ ಎಂದು ಕಿಚ್ಚ ಘೋಷಿಸಿದರು. ನಂತರ ವೇದಿಕೆಯ ಮೇಲೆ ಉಳಿದಿದ್ದು ಕಾರ್ತಿಕ್ ಮತ್ತು ಡ್ರೋಣ್ ಪ್ರತಾಪ್. ಕಿಚ್ಚನ ಒಂದು ಕೈಯಲ್ಲಿ ಕಾರ್ತಿಕ್ ಕೈ ಮತ್ತೊಂದು ಕೈಯಲ್ಲಿ ಪ್ರತಾಪ್‌ ಕೈ ಇತ್ತು. ಆ ಟೆನ್ಷನ್‌ ಅನ್ನು ಮಾತುಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಇಡೀ ಕರ್ನಾಟಕವೇ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಗಳಿಗೆ ಅದು. ಅದರಲ್ಲಿ ಸುದೀಪ್‌ ಅವರು ಕಾರ್ತಿಕ್ ಅವರ ಕೈಯನ್ನು ಎತ್ತಿ ಹಿಡಿದರು. ಅಂದರೆ ಡ್ರೋಣ್ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ಹತ್ತು ಲಕ್ಷ ರೂಪಾಯಿಗಳ ಬಹುಮಾನ ಪಡೆದುಕೊಂಡಿದ್ದಾರೆ.

ಡ್ರೋಣ್ ಪ್ರತಾಪ್ ಅವರ ಹಲವು ಏರಿಳಿತಗಳ ಜರ್ನಿಯನ್ನು ಅಕ್ಷರಗಳಲ್ಲಿ ಹಿಡಿದಿಡುವ ಪ್ರಯತ್ನ ಜಿಯೊಸಿನಿಮಾ ಮಾಡುತ್ತಿದೆ. ಈ ಸೀಸನ್‌ನ ಬಿಗ್‌ಬಾಸ್ ಮನೆಯಲ್ಲಿ ಅತೀ ಹೆಚ್ಚು ನೋವು ಮತ್ತು ಅಷ್ಟೇ ನಲಿವನ್ನು ಕಂಡ ಸದಸ್ಯ ಎಂದರೆ ಅದು ಡ್ರೋಣ್‌ ಪ್ರತಾಪ್ ಎಂದು ನಿಸ್ಸಂಶಯವಾಗಿ ಹೇಳಬಹುದು. ಅಸಮರ್ಥನಾಗಿ (https://go.jc.fm/fRhd/uccqjsn2) ಮನೆಯೊಳಗೆ ಪ್ರವೇಶಿಸಿದ ಪ್ರತಾಪ್‌, ಹೆಜ್ಜೆ ಹೆಜ್ಜೆಗೂ ಅವಮಾನ ಅನುಭವಿಸಿದರು. ಅವ ಸುಳ್ಳುಗಾರ, ಮೋಸಗಾರ ಎಂಬ ಮಾತುಗಳನ್ನು ಕೇಳಿಸಿಕೊಂಡರು. ತಮ್ಮೆದುರೇ ತಮ್ಮನ್ನು ಆಡಿಕೊಳ್ಳುವ, ತಮಾಷೆ ಮಾಡಿ ನಗುವ ಸದಸದಸ್ಯರ ಮಾತಿಗೆ ಕಿವಿಯಾದರು. ಆದರೆ ಅವರು ಹಲವು ವರ್ಷಗಳ ನಂತರ ತಮ್ಮ ತಂದೆಯ ಜೊತೆ ಮಾತಾಡಿದ್ದು, ಎಷ್ಟೋ ವರ್ಷಗಳ ನಂತರ ಅಮ್ಮನನ್ನು ನೋಡಿದ್ದು ಕೂಡ ಇದೇ ಮನೆಯಲ್ಲಿ! ಈ ಎರಡೂ ಅಂಚಿನ ರೋಲರ್‍‌ಕೋಸ್ಟರ್ ಜರ್ನಿಗೆ ಸಾಕ್ಷಿಯಾಗಿದ್ದು ಬಿಗ್‌ಬಾಸ್‌ ವೇದಿಕೆ ಮತ್ತು ಅದರ ವೀಕ್ಷಕರು. ಡ್ರೋಣ್ ಪ್ರತಾಪ್ ಅವರು ಬಿಗ್‌ಬಾಸ್ ಮನೆಯೊಳಗೆ ಸವೆಸಿದ ದಾರಿಯ ಒಂದು ಕಿರುನೋಟವನ್ನು ಜಿಯೊಸಿನಿಮಾ ನಿಮ್ಮ ಮುಂದಿಡುತ್ತಿದೆ.

ಕುಗ್ಗಿದ್ದ ಪ್ರತಾಪ್ ಅವರ ಕೈ ಹಿಡಿದ ಕಿಚ್ಚ

ಮೊದಲ ವಾರವೇ ಪ್ರತಾಪ್‌, ಅವರನ್ನು ಮನೆಯ ಸದಸ್ಯರ ಮಾತುಗಳು ಕುಗ್ಗಿಸಿದ್ದವು. ಅಲ್ಲಿ ಆದ ಅವಮಾನದಿಂದ ಬೇಸತ್ತ ಪ್ರತಾಪ್ ಬಾತ್‌ರೂಮಿಗೆ ಹೋಗಿ ಬಿಕ್ಕಿ ಬಿಕ್ಕಿ ಅತ್ತಿದ್ದರು. ವಿಶೇಷವಾಗಿ ತುಕಾಲಿ ಸಂತೋಷ್ ಅವರು ಪ್ರತಾಪ್ ಮೇಲೆ ಮಾಡಿದ ಜೋಕ್‌ಗಳು ಅವರನ್ನು ಸಾಕಷ್ಟು ನೋವನ್ನುಂಟು ಮಾಡಿದ್ದವು. ವಾರಾಂತ್ಯದಷ್ಟರಲ್ಲಿ ಸಾಕಷ್ಟು ನಿತ್ರಾಣಗೊಂಡಿದ್ದ ಪ್ರತಾಪ್ ಅವರ ಬೆಂಬಲಕ್ಕೆ ನಿಂತಿದ್ದು ಕಿಚ್ಚ ಸುದೀಪ್‌. ‘ಇನ್ನೊಬ್ಬರನ್ನು ನೋಯಿಸಿ ಜೋಕ್ ಮಾಡುವುದು ಒಳ್ಳೆಯ ಹಾಸ್ಯದ ಲಕ್ಷಣವಲ್ಲ’ ಎಂದು ತುಕಾಲಿ ಅವರನ್ನು ಎಚ್ಚರಿಸಿದ ಅವರು, ‘ಕೈ ಮುಗಿದರೆ ದೇವರೇ ಕ್ಷಮಿಸ್ತಾನಂತೆ. ನಾವ್ಯಾರು ಇನ್ನೊಬ್ಬರಿಗೆ ಶಿಕ್ಷೆ ಕೊಡೋಕೆ’ ಎಂದು ಪ್ರತಾಪ್ ವಿರುದ್ಧ ಮುಗಿಬಿದ್ದವರಿಗೆ ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಇದು ಪ್ರತಾಪ್ ಅವರಿಗೆ ಸಾಕಷ್ಟು ಆತ್ಮವಿಶ್ವಾಸ ತುಂಬಿತ್ತು. ಮನೆಯಲ್ಲಿ ಹೊಸ ಉತ್ಸಾಹದೊಂದಿಗೆ ಆಟಕ್ಕೆ ನಿಲ್ಲುವಂತೆ ಮಾಡಿತ್ತು.

ತಂತ್ರಗಾರಿಕೆಯಲ್ಲಿ ನಿಪುಣ

ಸದಾ ಒಬ್ಬಂಟಿಯಾಗಿ, ಯಾವುದರಲ್ಲಿಯೂ ಅಷ್ಟಾಗಿ ಪಾಲ್ಗೊಳ್ಳದ ಕಾರ್ತಿಕ್‌ ಅವರೊಳಗಿದ್ದ ತಂತ್ರಗಾರ ನಿಚ್ಛಳವಾಗಿ ಕಾಣಿಸಿಕೊಂಡಿದ್ದು ನಾಲ್ಕನೇ ವಾರದಲ್ಲಿ. ಆ ವಾರ ನಾಮಿನೇಷನ್‌ ಪಾಸ್‌ಗಳನ್ನು ಬಲೂನ್‌ನಲ್ಲಿ ತುಂಬಿ ಮನೆಯಿಡೀ ಬಲೂನ್‌ಗಳನ್ನು ಇಡಲಾಗಿತ್ತು. ಸದಸ್ಯರು ಬಲೂನ್‌ಗಳನ್ನು ಒಡೆದು ಅದರೊಳಗಿನ ಪಾಸ್‌ಗಳನ್ನು ಹುಡುಕಿ ತೆಗೆದುಕೊಳ್ಳಬೇಕಿತ್ತು. ಈ ಟಾಸ್ಕ್‌ನಲ್ಲಿ ಅತ್ಯಂತ ತಾಳ್ಮೆಯಿಂದಲೇ ಆಡಿದ ಪ್ರತಾಪ್ ಅವರಿಗೆ ಒಟ್ಟು ಐದು ಪಾಸ್‌ಗಳು ಸಿಕ್ಕಿದ್ದವು. ಒಬ್ಬರ ಕೈಯಿಂದ ಇನ್ನೊಬ್ಬರು ಪಾಸ್‌ ಅನ್ನು ಕಸಿದುಕೊಳ್ಳಬಹುದು ಎಂಬ ಕಾರಣಕ್ಕೆ ಪ್ರತಾಪ್‌ ಒಂದೇ ಒಂದು ಪಾಸ್‌ ಅನ್ನು ಕಿಸೆಯಲ್ಲಿಟ್ಟುಕೊಂಡು ಉಳಿದವನ್ನು ಮೈಕ್‌ ಕವರ್ ಒಳಗೆ ಇಟ್ಟಿದ್ದರು.
ಪ್ರತಾಪ್‌ ಬಳಿ ಇದ್ದ ಒಂದು ಪಾಸ್‌ ಅನ್ನು ಕಾರ್ತಿಕ್, ಸ್ನೇಹಿತ್ ಮತ್ತು ಮೈಕಲ್ ಸೇರಿಕೊಂಡು ಬಲವಂತವಾಗಿ ಕಿತ್ತುಕೊಂಡರು. ಹಾಗಾಗಿ ಪ್ರತಾಪ್ ಬಳಿ ಪಾಸ್‌ಗಳು ಇಲ್ಲ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಪಾಸ್ ಗಳಿಸುವ ಅವಧಿ ಮುಗಿದಾಗ ಪ್ರತಾಪ್ ತಮ್ಮ ಬಳಿ ಇದ್ದ ಇನ್ನೂ ನಾಲ್ಕು ಪಾಸ್‌ಗಳನ್ನು ತೆರೆದು ತೋರಿಸಿದರು.ಅದನ್ನು ಕಂಡು ಮನೆಮಂದಿಯೆಲ್ಲರೂ ಬೆಕ್ಕಸ ಬೆರಗಾಗಿದ್ದಂತೂ ನಿಜ. (https://go.jc.fm/fRhd/3sc6mlt4) ತಾವು ಒಡೆದ ಬಲೂನ್‌ಗಳ ಒಳಗೇ ಇದ್ದ ನಾಮಿನೇಷನ್‌ ಪಾಸ್‌ಗಳನ್ನೇ ಮನೆಯ ಉಳಿದ ಸದಸ್ಯರು ಗುರ್ತಿಸದೆ ನಿರ್ಲಕ್ಷಿಸಿದ್ದರು. ಅದನ್ನೂ ಪ್ರತಾಪ್ ಎತ್ತಿಕೊಂಡಿದ್ದರು.

ಇದಲ್ಲದೆ ಅವತ್ತು ಅವರು ನಾಮಿನೇಷನ್‌ ಪಾಸ್‌ಗಳನ್ನು ಬಳಸಿಕೊಂಡು ಸೇವ್ ಮಾಡಿದ ನಾಲ್ಕು ಜನರೂ ಮಹಿಳಾ ಸ್ಪರ್ಧಿಗಳು ಎಂಬುದನ್ನೂ ಗಮನಿಸಬೇಕು. ಇದೂ ಕೂಡ ಪ್ರತಾಪ್ ತಂತ್ರಗಾರಿಕೆಯ ಭಾಗವೇ ಎಂಬುದು ಮುಂದಿನ ದಿನಗಳಲ್ಲಿ ಅವರೆಲ್ಲರೂ ಬೇರೆ ಬೇರೆ ರೀತಿಯಲ್ಲಿ ಪ್ರತಾಪ್ ಬೆಂಬಲಕ್ಕೆ ನಿಂತಿದ್ದೇ ಸಾಕ್ಷಿ. ಇದಲ್ಲದೆ ಐದನೇ ವಾರವೂ ಅವರು ತಮ್ಮ ತಂತ್ರನಿಪುಣತೆಯನ್ನು ತೋರಿಸಿ ಮನೆಯ ಕ್ಯಾಪ್ಟನ್ ಆಗಿದ್ದರು. ಪಾಯಿಂಟ್ಸ್‌ ಖರೀದಿಸುವ ವಾರದಲ್ಲಿಯೂ ಪ್ರತಾಪ್‌ ಅವರ ಸ್ಟ್ರಾಟಜಿಯಿಂದಲೇ ಸಂಗೀತಾ ತಂಡ ಗೆಲುವು ಕಂಡಿದ್ದಲ್ಲದೇ, ಅವರ ತಂಡದಲ್ಲಿದ್ದ ನಮ್ರತಾ, ಪ್ರತಾಪ್ ಅವರ ಬೆಂಬಲದೊಂದಿಗೆ ಕ್ಯಾಪ್ಟನ್ ಕೂಡ ಆದರು. ಇಂಥ ಹತ್ತು ಹಲವು ನಿದರ್ಶನಗಳನ್ನು ಪ್ರತಾಪ್ ಜರ್ನಿಯಲ್ಲಿ ನೋಡಬಹುದು.

ದಿದಿಯರ ನೆಚ್ಚಿನ ತಮ್ಮ!

‘ಯಾವಾಗಲೂ ದಿದಿಯರ ಮಡಿಲಿನಲ್ಲಿಯೇ ಇರುತ್ತಾನೆ’, ‘ದಿದಿಯರ ಬೆಂಬಲ ಇಲ್ದಿದ್ರೆ ಅವ್ನತ್ರ ಏನೂ ಮಾಡಕ್ಕಾಗಲ್ಲ’, ‘ದಿದಿ ದಿದಿ ಅಂತ ಯಾವಾಗ್ಲೂ ಅದೇ ಆಯ್ತು’ ಹೀಗೆ ಹತ್ತು ಹಲವು ಟೀಕೆಗಳನ್ನು ಪ್ರತಾಪ್ ಆಗಾಗ ಕೇಳಿಸಿಕೊಂಡಿದ್ದಿದೆ. ಆದರೆ ಅವರು ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮನೆಯೊಳಗೆ ದಿದಿಯರ ನೆಚ್ಚಿನ ತಮ್ಮನಾಗಿದ್ದದ್ದು ಅವರ ಜರ್ನಿಯನ್ನು ಎಷ್ಟೋ ಸಹನೀಯಗೊಳಿಸಿದ್ದಂತೂ ನಿಜ. (https://go.jc.fm/fRhd/5sp80ru9)

ಎಲಿಮಿನೇಷನ್ ಪಾಸ್‌ ನಲ್ಲಿ ಸೇವ್ ಮಾಡುವಾಗ ಪ್ರತಾಪ್ ಮನೆಯ ಹೆಣ್ಣುಮಕ್ಕಳನ್ನೇ ಸೇವ್ ಮಾಡಿದ್ದು, ಅವರಲ್ಲಿ ಪ್ರತಾಪ್ ಬಗ್ಗೆ ಒಂದು ರೀತಿಯ ಕೃತಜ್ಞತಾಭಾವವನ್ನು ಹುಟ್ಟಿಸಿತ್ತು. ಅಲ್ಲದೆ, ಪ್ರತಾಪ್ ಕುಗ್ಗಿದ್ದಾಗ ಅವನ ಬೆಂಬಲಕ್ಕೆ ನಿಂತವರೂ ಈ ದೀದಿಯರೇ. ನಮ್ರತಾ, ಕಲಿಸಿಕೊಟ್ಟ ಡಾನ್ಸ್‌ ಅನ್ನು ಕಿಚ್ಚನ ಮುಂದೆ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ್ದರು. ಬಾತ್‌ರೂಮಿನಲ್ಲಿ ಹೋಗಿ ಅಳುವಾಗ,ಒಬ್ಬಂಟಿಯಾಗಿ ಮಂಕಾಗಿ ಕೂತಾಗ ಅವರ ಜೊತೆಗೆ ನಿಂತಿದ್ದು ಸಂಗೀತಾ, ನಮ್ರತಾ, ಭಾಗ್ಯಶ್ರೀ ಹೀಗೆ ಬಹುತೇಕ ಹೆಣ್ಣುಮಕ್ಕಳೇ. ಸದಸ್ಯರ ಕುಟುಂಬದವರು ಮನೆಯೊಳಗೆ ಬರುವ ವಾರದಲ್ಲಿ ಪ್ರತಾಪ್ ಅವರ ಅಪ್ಪ, ಅಮ್ಮ ಮನೆಯ ಹೆಣ್ಣುಮಕ್ಕಳಿಗೆಲ್ಲ ಸೀರೆ ತಂದುಕೊಟ್ಟಿದ್ದೂ ಪ್ರತಾಪ್ ಜೊತೆಗೆ ದಿದಿಯರ ಆಪ್ತಬಾಂಧವ್ಯ ಹೆಚ್ಚಿಸಲು ಕಾರಣವಾಯ್ತು. ಕೊನೆಯ ವಾರದವರೆಗೂ ಸಂಗೀತಾ, ಪ್ರತಾಪ್ ಅವರ ಬೆನ್ನಿಗೆ ನಿಂತಿದ್ದು, ಮನೆಯಿಂದ ಹೊರಬಂದ ಮೇಲೂ, ‘ಅವನು ಯಾವಾಗಲೂ ನನ್ನ ಚಿಕ್ಕ ತಮ್ಮನಾಗೇ ಇರ್ತಾನೆ’ ಎಂದು ನಮ್ರತಾ ಭಾವುಕರಾಗಿ ಹೇಳಿದ್ದು ಇವೆಲ್ಲವೂ ಪ್ರತಾಪ್ ಅವರ ವ್ಯಕ್ತಿತ್ವವನ್ನು ತೋರಿಸುತ್ತವೆ.

ಕಣ್ಣಿನ ಗಾಯ, ಆರೋಗ್ಯದ ಏರುಪೇರು

ರಕ್ಕಸರು ಗಂಧರ್ವರ ಟಾಸ್ಕ್‌ನ ವಾರದಲ್ಲಿ ಕುರ್ಚಿಯಲ್ಲಿ ಕೂಡಿಸಿ ನೀರನ್ನು ಸೋಕಿದಾಗ ಪ್ರತಾಪ್ ಮತ್ತು ಸಂಗೀತಾ ಕಣ್ಣುಗಳಿಗೆ ಗಾಯವಾಗಿತ್ತು. ಅದರಿಂದಾಗಿ ಅವರು ಕೆಲಕಲ ಆಸ್ಪತ್ರೆಯನ್ನೂ ಸೇರುವಂತಾಗಿತ್ತು. ತಿರುಗಿ ಬಂದಮೇಲೂ ಹಲವು ದಿನಗಳ ಕಾಲ ಕಣ್ಣಿಗೆ ಕಪ್ಪು ಕನ್ನಡಕ ಇಟ್ಟುಕೊಂಡೇ ಇರುವಂತಾಗಿತ್ತು. (https://go.jc.fm/fRhd/cgidaeh3) ಈ ಹಂತದಲ್ಲಿ ಸಂಗೀತಾ ಜೊತೆಗೆ ಅವರ ಬಾಂಧವ್ಯ ಇನ್ನಷ್ಟು ಗಟ್ಟಿಗೊಂಡಿತು. ಮನೆಯೊಳಗೆ ತಿರುಗಿ ಬಂದಾಗ ಅವರಿಬ್ಬರೂ ಮೊದಲಿಗಿಂತ ಹೆಚ್ಚು ಸ್ಟ್ರಾಂಗ್ ಆಗಿದ್ದಿದ್ದು ಎದ್ದು ಕಾಣಿಸುವಂತಿತ್ತು.
ಸ್ವಾಮೀಜಿ ಅವರು ಭವಿಷ್ಯ ನುಡಿಯುತ್ತ, ನೀನು ಕುಟುಂಬದಿಂದ ದೂರವಿರುವುದು ಒಳಿತು ಎಂದು ಹೇಳಿದ್ದು ಪ್ರತಾಪ್ ಅವರನ್ನು ಕುಗ್ಗಿಸಿತ್ತು. ಅದೇ ನೋವಿನಲ್ಲಿ ಅವರು ಸರಿಯಾಗಿ ಊಟ ಮಾಡದೆ, ಕೊನೆಗೆ ಇನ್‌ಫೆಕ್ಷನ್‌ ಸಮಸ್ಯೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗುವಂತಾಗಿತ್ತು. ಹೀಗೆ ಈ ಸೀಸನ್‌ನಲ್ಲಿ ಪ್ರತಾಪ್ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿ ತಿರುಗಿ ಬಂದರು.

ಭಾವುಕ ಪುನರ್ ಮಿಲನ

ನಾನು ನನ್ನ ಕುಟುಂಬದಿಂದ ಮೂರು ವರ್ಷಗಳಿಂದ ದೂರ ಇದ್ದೇನೆ. ಅವರನ್ನು ಮಾತಾಡಿಸಬೇಕು ಎಂದು ಪ್ರತಾಪ್ ಯಾವಾಗಲೂ ಹೇಳುತ್ತಲೇ ಇದ್ದರು. ಆರನೇ ವಾರಾಂತ್ಯದ ಕಿಚ್ಚಿನ ಎಪಿಸೋಡ್‌ನಲ್ಲಿ ಅವರ ಕನಸು ನನಸಾಯಿತು. ಪೋನ್‌ನಲ್ಲಿ ಪ್ರತಾಪ್ ತಂದೆಯ ಧ್ವನಿ ಮೊಳಗುತ್ತಿದ್ದಂತೆಯೇ ಪ್ರತಾಪ್‌, ‘ಅಪ್ಪಾ’ ಎಂದು ಕರೆಯುತ್ತ ಬಿಕ್ಕಿ ಬಿಕ್ಕಿ ಅತ್ತರು. (https://go.jc.fm/fRhd/in3g4ptn) ಹಲವು ವರ್ಷಗಳ ನಂತರ ಅವರು ತಂದೆಯ ಜೊತೆಗೆ ಮಾತಾಡಿದ್ದು ಎಂಥವರ ಹೃದಯವನ್ನೂ ಕರಗಿಸುವಂತಿತ್ತು. ಮತ್ತೊಂದು ವಾರದಲ್ಲಿ ಎಲ್ಲ ಸದಸ್ಯರ ಕುಟುಂಬದವರೂ ಮನೆಯೊಳಗೆ ಬಂದರು. ಪ್ರತಾಪ್‌ಗೆ ನಮ್ಮ ಕುಟುಂಬದವರು ಬರುತ್ತಾರೋ ಇಲ್ಲವೋ ಎಂಬ ಅನುಮಾನ ಇದ್ದೇ ಇತ್ತು. ಅದಕ್ಕಾಗಿ ಊಟವನ್ನೂ ಮಾಡದೆ ಕಾದಿದ್ದರು. ಕೊನೆಗೂ ಪ್ರತಾಪ್ ತಂದೆ ತಾಯಿ ಮನೆಯೊಳಗೆ ಬಂದಾಗ ಚಿಕ್ಕ ಮಗುವಿನಂತೆ ಖುಷಿಯಿಂದ ಕುಣಿದಾಡಿದರು. (https://go.jc.fm/fRhd/asvzs33m) ತಂದೆಯ ಕೈಯಾರೆ ಬಾಳೆಹಣ್ಣು ತಿನ್ನಿಸಿಕೊಂಡರು. ಕುಟುಂಬದ ಪರಿಸ್ಥಿತಿ ವಿಚಾರಿಸಿಕೊಂಡು, ಇಲ್ಲಿಂದ ಬಂದ ಕೂಡಲೇ ಮನೆಗೆ ಬರುತ್ತೇನೆ. ತಂಗಿಯ ಮದುವೆ ನಾನೇ ನಿಂತು ಮಾಡಿಸುತ್ತೇನೆ ಎಂದು ಮಾತುಕೊಟ್ಟರು. ಅವರ ಪುನರ್‍‌ಮಿಲನ ನೋಡಿ ಎಲ್ಲರೂ ಭಾವುಕಗೊಂಡಿದ್ದರು.

ಆಕ್ರೋಶದ ಮಾತಿಗೆ ತಾಳ್ಮೆಯ ಉತ್ತರ

ಪ್ರತಾಪ್ ಎಂಥ ಸಂದರ್ಭದಲ್ಲಿಯೂ ತಾಳ್ಮೆ ಕಳೆದುಕೊಂಡಿದ್ದು ವಿರಳ. ವಿನಯ್, ಕಾರ್ತಿಕ್, ಸಂಗೀತಾ ಅಥವಾ ಇನ್ಯಾವುದೇ ಮನೆಯ ಸದಸ್ಯರು ಆಕ್ರೋಶದಲ್ಲಿ ಅವರ ಮೇಲೆ ಮುಗಿಬಿದ್ದಾಗಲೂ ಅವರು ಮಾತ್ರ ತಾಳ್ಮೆ ಕಳೆದುಕೊಳ್ಳದೆ ತಣ್ಣಗಿನ ಧ್ವನಿಯಲ್ಲಿ, ಸ್ಪಷ್ಟವಾದ ಮಾತುಗಳಲ್ಲಿ ವಿವರಣೆ ಕೊಡುತ್ತಿದ್ದರು. (https://go.jc.fm/fRhd/6tey7zhf) ಈ ತಾಳ್ಮೆ ಅವರ ಈ ಜರ್ನಿಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ.
ಊಹಿಸಲೂ ಸಾಧ್ಯವಿಲ್ಲದಷ್ಟು ಏರಿಳಿತಗಳ ಪ್ರಯಾಣವನ್ನು ದಾಟಿ ಪ್ರತಾಪ್‌ ಫಿನಾಲೆ ವೀಕ್‌ಗೆ ಅಡಿಯಿಟ್ಟಿದ್ದರು. ‘ಟಿಕೆಟ್‌ ಟು ಫಿನಾಲೆ’ ವಾರದಲ್ಲಿ ಎಲ್ಲರಿಗಿಂತ ಹಚ್ಚು ಅಂಕಗಳನ್ನು ಪಡೆದುಕೊಂಡಿದ್ದರು. ತಾನು ಫಿನಾಲೆ ವಾರಕ್ಕೆ ಕಾಲಿಟ್ಟಿದ್ದೇನೆ ಎಂದೇ ಅಂದುಕೊಂಡಿದ್ದ ಅವರಿಗೆ ಬಿಗ್‌ಬಾಸ್ ಶಾಕ್ ಕೊಟ್ಟಿದ್ದರು. ಅತಿ ಹೆಚ್ಚು ಅಂಕ ಪಡೆದ ಮೂರು ಸದಸ್ಯರಲ್ಲಿ ಯಾರು ಫಿನಾಲೆ ವಾರಕ್ಕೆ ಹೋಗಬೇಕು ಎಂಬುದನ್ನು ಮನೆಯ ಸದಸ್ಯರು ಬಹುಮತಗೊಂದಿಗೆ ನಿರ್ಧರಿಸಬೇಕು ಎಂದು ಹೇಳಿದ್ದರು. ಆ ಹಂತದಲ್ಲಿ ಪ್ರತಾಪ್‌ಗೆ ವೋಟ್ ಹಾಕಿದ್ದು ವರ್ತೂರು ಸಂತೋಷ್ ಒಬ್ಬರೇ. ಸಂಗೀತಾ ಅತಿಹೆಚ್ಚು ಮತಗಳನ್ನು ಪಡೆದು ಫಿನಾಲೆ ವೀಕ್‌ಗೆ ಹೋಗಿದ್ದರು. ಆದರೆ ಜನರ ಮತಗಳ ಸಹಾಯದಿಂದ ಪ್ರತಾಪ್ ಕೂಡ ಫಿನಾಲೆ ವೀಕ್‌ಗೆ ಪ್ರವೇಶಿಸಿದರು.

ಹೀಗೆ ಅತಿ ಹೆಚ್ಚು ಭಾವುಕ, ನೋವಿನ, ಹೆಮ್ಮೆಯ ಗಳಿಗೆಗಳನ್ನು ಹಾದುಬಂದ ಸ್ಪರ್ಧಿ ಪ್ರತಾಪ್. ಬಿಗ್‌ಬಾಸ್‌ ವೇದಿಕೆ ಅವರ ಇಮೇಜ್‌ ಅನ್ನು ಬದಲಿಸಿದ್ದಂತೂ ನಿಜ. ‘ತಾವು ಹಿಂದೆ ಕೆಲವು ಸಂದರ್ಭದಲ್ಲಿ ತಪ್ಪು ಮಾಡಿದ್ದೇನೆ. ತಪ್ಪು ಮಾತಾಡಿದ್ದೇನೆ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ. ಆದರೆ ಇನ್ನು ಸುಧಾರಿಸಿಕೊಂಡು ನಡೆಯುತ್ತೇನೆ’ (https://go.jc.fm/fRhd/yag7j0j0) ಎಂದು ಅವರು ಹೇಳಿದ್ದೇ ಅವರೊಳಗಿನ ಪರಿವರ್ತನೆಗೆ ಸಾಕ್ಷಿ.

ಇದನ್ನೂ ಓದಿ: BBK SEASON 10: ಫಿನಾಲೆಯಿಂದ ಹೊರಬಿದ್ದ ವಿನಯ್ ಗೌಡ ಮೂರನೇ ರನ್ನರ್‌ ಅಪ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಿಗ್ ಬಾಸ್

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Varthur Santhosh: ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನೆಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ ವರ್ತೂರ್‌ ಸಂತೋಷ್‌.

VISTARANEWS.COM


on

Varthur Santhosh tears
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜತೆಗೆ ಅವರ ವಿರುದ್ಧ ಹಲವರು ಟೀಕೆ ಮಾಡುವವರು ಇದ್ದಾರೆ. ವರ್ತೂರು ಸಂತೋಷ್ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಕಣ್ಣೀರು ಹಾಕಿದ್ದಾರೆ. ಕೆಟ್ಟದಾಗಿ ಟೀಕೆಗಳನ್ನು ಮಾಡುತ್ತಿರುವುದರಿಂದ ತಾಯಿ ಊಟ ಮಾಡುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಯೂಟ್ಯೂಬ್ ಚಾನೆಲ್​ನಲ್ಲಿ ಗೆಳೆಯರ ಜತೆ ವಿಡಿಯೊ ಮಾಡಿರುವ ವರ್ತೂರು ಸಂತೋಷ್, ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ.

ವರ್ತೂರ್‌ ಸಂತೋಷ್‌ (Varthur Santhosh) ಮಾತನಾಡಿ ʻʻಇಡೀ ಕರ್ನಾಟಕ ಜನತೆಗೆ ನಾನು ಹೇಳೋದು ಒಂದೇ. ಇಂದು ಬಹಳ ನೋವಾಗಿದೆ. ನನ್ನ ತಾಯಿ ನನ್ನ ತಂದೆಯನ್ನು ಕಳೆದುಕೊಂಡ ನಂತರ ಗೌರವದಿಂದ ನನ್ನನ್ನು ಸಾಕಿದರು. 2022ರಲ್ಲಿ ರೇಸ್‌ ಮಾಡಿದಾಗ ಬಂದು ಎಂಜಲು ಕಾಸು ತಿಂದ ಮಕ್ಕಳು ಇವರು. ನಮ್ಮ ಅನ್ನ ತಿಂದು ಇವತ್ತು ನಮಗೆ ಅನ್ನುತ್ತಾರೆ. ಅದಕ್ಕೆ ಭಗವಂತನೇ ಸಾಕ್ಷಿ. ನಮ್ಮ ರೇಸ್‌ನಲ್ಲಿ ಇವರೆಲ್ಲ ಒಂದು ಸಾವಿರ, ಎರಡು ಸಾವಿರಕ್ಕೆ ಬಂದವರುʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್‌ ಸಂತೋಷ್‌ ರಿಯಾಕ್ಷನ್‌ ಏನು?

ʻʻಇಷ್ಟೆಲ್ಲ ವಿಡಿಯೊಗಳನ್ನು ಮಾಡುತ್ತಾರೆ. ನಾನು ಮಾತನಾಡಿರುವ ವಿಡಿಯೊ ಯಾವುದಾದರೂ ಹಾಕಿದ್ದಾರಾ? ಕಮೆಂಟ್‌ ಸೆಕ್ಷನ್‌ ಆಫ್‌ ಮಾಡುತ್ತಾರೆ. ನಾನು ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಈ ಮೂಲಕ ಹೇಳುವುದೇನಂದ್ರೆ, ನಾನು ಇದೂವರೆಗೂ ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಒಬ್ಬರ ಅನ್ನ ಕಿತ್ತುಕೊಂಡಿಲ್ಲʼʼ ಎಂದರು.

ʻʻಕರ್ನಾಟಕ ಜನರು ನನ್ನ ಧರ್ಮ, ದೇವರು. ಇಷ್ಟು ಬೆಳಿಸಿದ್ದೀರಾ ನನ್ನನ್ನು. ನಾನು ಯಾರ ಅನ್ನ ಕಿತ್ತುಕೊಂಡಿಲ್ಲ. ನಾವು ತುಂಬಾ ಮರ್ಯಾದೆ ಇಂದ ಬದುಕಿದ್ದವರು. ನಮ್ಮ ತಾಯಿ ಊಟ ಮಾಡಲ್ಲ ಅಣ್ಣ. ಈ ನನ್ ಮಕ್ಕಳು ಒಂದೊಂದಲ್ಲ ಅಣ್ಣ. ಆ ರೆಕಾರ್ಡಿಂಗ್‌ಗಳು ಎಲ್ಲೆಲ್ಲಿ ಸಿಗ್ತಾವೋ ಆ ಭಗವಂತನಿಗೆ ಗೊತ್ತು. ನಮ್ಮ ಹಾಗೇ ಇದ್ದು, ನಮ್ಮೊಂದಿಗೆ ಇದ್ದು ಹೀಗೆ ಮಾಡುತ್ತಿದ್ದಾರೆ. ನಿಮ್ಮ ಮಕ್ಕಳು ತಣ್ಣಗಿರಲಿʼʼಎಂದು ಬೇಸರ ಹೊರಹಾಕಿದ್ದಾರೆ. ಮಾತ್ರವಲ್ಲ ತಮ್ಮ ಬಗ್ಗೆ ಈ ರೀತಿ ಇಲ್ಲ ಸಲ್ಲದ ವಿಚಾರಗಳನ್ನು ಪೋಸ್ಟ್‌ ಮಾಡಿದ ಯೂಟ್ಯೂಬ್ ಚಾನೆಲ್​ ಅನ್ನು ರಿಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Drone Prathap: ಈ ಮುಂಚೆ ಡ್ರೋನ್‌ ಪ್ರತಾಪ್‌ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೀಗ ಪ್ರತಾಪ್‌ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌.

VISTARANEWS.COM


on

Drone Prathap prayag
Koo

ಬೆಂಗಳೂರು: ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿರುವುದು ಗೊತ್ತೇ ಇದೆ. ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್​ ಎಚ್​ ಎಸ್ (HS Prayag)​ ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್​ ಕಳುಹಿಸಿದ್ದರು ಪ್ರಯಾಗ್‌. ಇದಾದ ಬಳಿಕ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್‌ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌. ಡ್ರೋನ್‌ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.

ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!

ಡ್ರೋನ್ ಪ್ರತಾಪ್‌ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್‌ ಪ್ರತಾಪ್‌ಗೆ ಡ್ರೋನ್‌ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್‌. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.

ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್‌ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್‌ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

ಪ್ರತಾಪ್‌ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!

ಪ್ರತಾಪ್‌ (Drone Prathap) ಅವರು ಸಾರಂಗ್‌ ಅವರಿಗೆ ಒಂಬತ್ತು ಡ್ರೋನ್‌ ನೀಡಬೇಕಿತ್ತು. ಹೀಗಾಗಿ ಸಾರಂಗ್‌ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್‌ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್‌ ಅವರಿಗೆ ಪ್ರತಾಪ್‌ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್‌ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್‌ ಮಾತನಾಡಿ ʻʻನಾನು ಇ-ಮೇಲ್‌ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್‌ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್‌ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್‌ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಪ್ರತಾಪ್‌ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

Continue Reading
Advertisement
IPL 2024
ಐಪಿಎಲ್ 20248 mins ago

IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

French Yoga Teacher
ಮಹಿಳೆ34 mins ago

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

Vande Bharat Express
ದೇಶ43 mins ago

Vande Bharat Express: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರ ಪ್ರಾರಂಭ

ಕರ್ನಾಟಕ53 mins ago

Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

Prajwal Revanna Case I was never kidnapped and son has made a false complaint Video of victim goes viral
ಕ್ರೈಂ53 mins ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Adhir Ranjan
ದೇಶ1 hour ago

Adhir Ranjan: ಅಂಬಾನಿ ದುಡ್ಡು ಕೊಟ್ಟರೆ ನಾವೂ ಸುಮ್ಮನಾಗುತ್ತೇವೆ ಎಂದ ಕಾಂಗ್ರೆಸ್‌ ನಾಯಕ; ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 hour ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

felicitation programme for SSLC student Harshita D M who got 2nd place in the state
ತುಮಕೂರು2 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

130 crore crop compensation amount paid to Vijayanagara district says DC m S Diwakar
ವಿಜಯನಗರ2 hours ago

Vijayanagara News: ವಿಜಯನಗರ ಜಿಲ್ಲೆಗೆ 130 ಕೋಟಿ ರೂ. ಬೆಳೆ ಪರಿಹಾರ: ಡಿಸಿ

Prajwal Revanna Case Naveen Gowda post against MLA A Manju
ರಾಜಕೀಯ2 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast Heavy rain in chikkmagalur
ಮಳೆ1 hour ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ2 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ5 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ14 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

ಟ್ರೆಂಡಿಂಗ್‌