BBK SEASON 10: ಫಿನಾಲೆಯಿಂದ ಹೊರಬಿದ್ದ ವಿನಯ್ ಗೌಡ ಮೂರನೇ ರನ್ನರ್‌ ಅಪ್‌ - Vistara News

ಬಿಗ್ ಬಾಸ್

BBK SEASON 10: ಫಿನಾಲೆಯಿಂದ ಹೊರಬಿದ್ದ ವಿನಯ್ ಗೌಡ ಮೂರನೇ ರನ್ನರ್‌ ಅಪ್‌

BBK SEASON 10:  ಬಿಗ್‌ಬಾಸ್‌ ಕನ್ನಡ ಸೀಸನ್‌ 10ರ ಫಿನಾಲೆ ವೇದಿಕೆಯಿಂದ ಇದೀಗ ವಿನಯ್‌ ಗೌಡ ಔಟ್‌ ಆಗಿದ್ದಾರೆ. ಅಂದರೆ ಮೂರನೇ ರನ್ನರ್‌ ಅಪ್‌ ಆಗಿ ಅವರು ಹೊರ ಹೊಮ್ಮಿದ್ದಾರೆ.

VISTARANEWS.COM


on

vinay
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (BBK SEASON 10)ರ ಫಿನಾಲೆ ಅದ್ಧೂರಿಯಾಗಿ ನಡೆದಿದೆ. ಫಿನಾಲೆ ವೇದಿಕೆಯಿಂದ ಮೊದಲು ವರ್ತೂರು ಸಂತೋಷ್‌ ಹೊರ ಬಿದ್ದಿದ್ದರು. ಇದೀಗ ವಿನಯ್‌ ಗೌಡ ಔಟ್‌ ಆಗಿದ್ದಾರೆ. ಅಂದರೆ ಮೂರನೇ ರನ್ನರ್‌ ಅಪ್‌ ಆಗಿ ವಿನಯ್‌ ಹೊರ ಹೊಮ್ಮಿದ್ದಾರೆ.

ಎಲಿಮಿನೇಷನ್‌ ಚಕ್ರದ ಕುರ್ಚಿಯಲ್ಲಿ ಕಾರ್ತಿಕ್, ಸಂಗೀತಾ, ಪ್ರತಾಪ್‌ ಮತ್ತು ವಿನಯ್ ಕೂತಿದ್ದರು. ತಿರುಗುಣಿ ತಿರುಗುತ್ತಿದ್ದ ಹಾಗೆಯೇ ಮೂವರ ಉಸಿರೂ ಅಷ್ಟೇ ಏರಿಳಿಯುತ್ತಿತ್ತು. ಎಲ್ಲ ಸ್ಪರ್ಧಿಗಳು ಕಣ್ಣುಮುಚ್ಚಿ ಪ್ರಾರ್ಥಿಸುತ್ತಿದ್ದರು. ಕೊನೆಗೂ ವಿನಯ್‌ ಎದುರಿಗೆ ಬಂದಾಗ ಮನೆಯ ಬಾಗಿಲು ತೆರೆದುಕೊಂಡಿತು. ವಿನಯ್ ಮನೆಯಿಂದ ಹೊರಬಂದರು.

ಮೂರನೇ ರನ್ನರ್ ಅಪ್ ಆಗಿರುವ ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್ ಮನೆಯೊಳಗೆ ವಿನಯ್ ಗೌಡ ಮೂಡಿಸಿದ ಹೆಜ್ಜೆಗುರುತನ್ನು ತೋರಿಸುವ ಪ್ರಯತ್ನವನ್ನು ಇಲ್ಲಿದೆ.

ಬಿಗ್‌ಬಾಸ್‌ ಮನೆಗೆ ಜನರ ಕಣ್ಣಲ್ಲಿ ಹೀರೊ ಆಗಲು ಬರುವವರು ಸಾಕಷ್ಟಿದ್ದಾರೆ. ಆದರೆ ‘ನಾನು ವಿಲನ್ ಆಗಲು ಬಂದಿದ್ದೇನೆ’ ಎಂದು ಹೇಳಿಕೊಂಡೇ ಬಂದವರು ಬಹುಶಃ ಒಬ್ಬರೇ! ಅವರು ವಿನಯ್ ಗೌಡ. ಈ ಸೀಸನ್‌ನಲ್ಲಿ ನಡೆದ ಅತಿದೊಡ್ಡ ಗಲಾಟೆಗಳನ್ನು ಪಟ್ಟಿಮಾಡಿದಾರೆ ಅದರ ಕೇಂದ್ರದಲ್ಲಿ ವಿನಯ್ ಕಾಣಿಸುತ್ತಾರೆ. ಈ ಮನೆಯಲ್ಲಿ ಅತಿ ಹೆಚ್ಚು ಜನರ ಜೊತೆ ಸ್ನೇಹಸಂಬಂಧ ಕಾಪಾಡಿಕೊಂಡವರ ಪಟ್ಟಿಯನ್ನು ತಯಾರಿಸಿದರೆ ಅದರ ಕೇಂದ್ರದಲ್ಲಿಯೂ ವಿನಯ್ ಇರುತ್ತಾರೆ. ಸದಾಕಾಲ ಯುದ್ಧದ ಉನ್ಮಾದ; ಜತೆಗದ್ದವರ ಹಿತಕಾಯಲು ಸದಾ ಬದ್ಧ ಇದು ವಿನಯ್ ಅವರ ವ್ಯಕ್ತಿತ್ವಕ್ಕೆ ನಿಡಬಹುದಾದ ಟ್ಯಾಗ್‌ಲೈನ್. (https://go.jc.fm/fRhd/uccqjsn2) ಮೂರನೇ ಸ್ಪರ್ಧಿಯಾಗಿ ಬಿಗ್‌ಬಾಸ್ ಮನೆಯೊಳಗೆ ಕಾಲಿಟ್ಟ ವಿನಯ್, ಶೇ 60ರಷ್ಟು ಮತಗಳನ್ನು ಪಡೆದು ಸಮರ್ಥ ಸದಸ್ಯರಾಗಿ ಆಯ್ಕೆಯಾಗಿದ್ದರು.
ಫಿನಾಲೆಗೆ ಎರಡೇ ದಿನಕ್ಕೆ ಮುಂಚಿತವಾಗಿ ಬಿಗ್‌ಬಾಸ್‌ ಮನೆಯಲ್ಲಿ ‘ಜ್ಞಾಪಕ ಚಿತ್ರಶಾಲೆ’ಯನ್ನು ತೆರೆಯಲಾಗಿತ್ತು. ಅಂದರೆ ಗೋಡೆಯ ಮೇಲೆ ಈ ಸೀಸನ್‌ ಅತಿಮುಖ್ಯ ಘಟ್ಟಗಳ ಛಾಯಾಚಿತ್ರವನ್ನು ಇರಿಸಿ, ಸದಸ್ಯರಿಗೆ ಆ ಗಳಿಗೆಗಳನ್ನು ನೆನಪಿಸಿಕೊಳ್ಳಲು ಕೇಳಲಾಗಿತ್ತು. ಅದರಲ್ಲಿ ಕಾರ್ತಿಕ್ ಅವರು ವಿನಯ್‌ ಅವರಿಗೆ ಆಡಿದ ಮಾತು, ‘ನೀನು ಇಷ್ಟೊಂದು ಪರೀಕ್ಷೆಗಳನ್ನು ಒಡ್ಡದಿದ್ದರೆ, ನಾನು ಈವತ್ತು ಈ ಜಾಗದಲ್ಲಿ ನಿಲ್ಲುತ್ತಿರಲಿಲ್ಲ’. ಸಂಗೀತಾ ಆಡಿದ ಮಾತು, ‘ಈ ಮನೆಯಲ್ಲಿ ನೀವಿಲ್ಲದೆ ನಾನಿಲ್ಲ. ನಾನಿಲ್ಲದೆ ನೀವಿಲ್ಲ’. ಪ್ರಮುಖ ಪ್ರತಿಸ್ಪರ್ಧಿಗಳ ಬಾಯಿಂದ ಬಂದ ಈ ಮಾತುಗಳೇ ವಿನಯ್ ಗೌಡ ಅವರ ಸ್ಥಾನ ಎಂಥದ್ದು ಎಂಬುದನ್ನು ತಿಳಿಸುವಂತಿದೆ.

ಟಾಸ್ಕ್‌ನಲ್ಲಿ ಸಾಟಿಯಿಲ್ಲ

ಬಿಗ್‌ಬಾಸ್‌ ಮನೆಯ ಟಾಸ್ಕ್‌ಗಳ ವಿಷಯ ಬಂದರೆ ವಿನಯ್ ಮೂಡಿಸಿದ ಛಾಪು ಯಾರೂ ಅಳಿಸುವಂಥದ್ದಲ್ಲ. ಗುಂಪುಗಳಲ್ಲಿ ಆಡುವಾಗಲೂ, ವೈಯಕ್ತಿಕ ಆಟದಲ್ಲಿಯೂ ವಿನಯ್‌ ಎರಡು ಹೆಜ್ಜೆ ಮುಂದೇ ಇರುತ್ತಿದ್ದರು. ಆಟದಲ್ಲಿ ಅವರ ಅಗ್ರೆಶನ್ ಮನೆಯೊಳಗೆ ಮೂಡಿಸಿದ ಕಂಪನಗಳಿಗೆ ಲೆಕ್ಕವಿಲ್ಲ. ಎರಡನೇ ವಾರದಲ್ಲಿ ಹಳ್ಳಿಮನೆ ಟಾಸ್ಕ್‌ನಲ್ಲಿ ನಮ್ರತಾ ನಾಯಕಿಯಾಗಿದ್ದ ಉಗ್ರಂ ತಂಡ, ತನಿಷಾ ನೇತೃತ್ವದ ತಂಡವನ್ನು ಸೋಲಿಸುವಲ್ಲಿ ವಿನಯ್ ಅವರ ಪಾತ್ರ ಹಿರಿದಾದದ್ದು. ಕುಸ್ತಿಯ ಕಣದಲ್ಲಿ ವಿನಯ್ ಮತ್ತು ಮೈಕಲ್ ಎದುರಾಬದಿರಾದಾಗ ಮೈಕಲ್ ಗೆಲುವನ್ನು ನೆಚ್ಚಿಕೊಂಡವರೇ ಹೆಚ್ಚು. ಆದರೆ ಗೆದ್ದಿದ್ದು ಮಾತ್ರ ವಿನಯ್. (https://go.jc.fm/fRhd/wd6g7o8z)
ಇದು ಗುಂಪಿನಲ್ಲಿ ಅವರ ಆಟದ ಸಾಮರ್ಥ್ಯವನ್ನು ಸಾಬೀತುಗೊಳಿಸಿದರೆ, ನಾಲ್ಕನೇ ವಾರದಲ್ಲಿ ತುಕಾಲಿ ಸಂತೋಷ್ ಅವರನ್ನು ಹಿಂದಿಕ್ಕಿ ನಾಯಕನಾಗಿ ಆಯ್ಕೆಯಾಗಿದ್ದು ಅವರ ವೈಯಕ್ತಿಕ ಆಟದ ಸಾಮರ್ಥ್ಯವನ್ನು ಸಾಬೀತುಗೊಳಿಸುವಂತಿತ್ತು. (https://go.jc.fm/fRhd/lrfrmllh)

ವಿವಾದಗಳ ಸರಮಾಲೆ

ವಿಲನ್ ಆಗಲು ಬಯಸುತ್ತೇನೆ ಎಂದು ಒಳಗೆ ಹೋದ ವಿನಯ್ ಮನೆಯೊಳಗಿನ ಹಲವು ಸ್ಪರ್ಧಿಗಳ ಪಾಲಿಗೆ ಅಕ್ಷರಶಃ ವಿಲನ್ ಆದರು. ಹಲವರು ಇವರನ್ನುಎದುರು ಹಾಕಿಕೊಂಡು ಹೀರೊ ಆಗಲು ಯತ್ನಿಸಿದ್ದೂ ಇದೆ. ಕೋಪ, ಅಗ್ರೆಶನ್, ಮುನ್ನುಗ್ಗುವ ಛಲ ಆ ಒತ್ತಡದಲ್ಲಿ ಬಂದ ಮಾತುಗಳಿಂದ ಬಂದ ಮಾತುಗಳು, ಆಡಿದ ವರ್ತನೆಗಳಿಂದ ಮನೆಯ ಹೊರಗೂ ‘ವಿಲನ್’ ಆಗಿ ಕಾಣಿಸಿದ್ದೂ ಇದೆ. ವಿವಾದಗಳ ಸರಪಳಿ ಬಿಗ್‌ಬಾಸ್ ಜರ್ನಿಯುದ್ಧಕ್ಕೂ ಅವರನ್ನು ಸುತ್ತಿಕೊಳ್ಳುತ್ತಲೇ ಇತ್ತು. ಅದು ಕೆಲವೊಮ್ಮೆ ಅತಿರೇಕಕ್ಕೂ ಹೋಗಿತ್ತು. ಮೊದಲು ಸಂಗೀತಾ ಜತೆಗೆ, ಕಾರ್ತಿಕ್ ಜತೆಗೆ, ನಂತರದ ದಿನಗಳಲ್ಲಿ ಪ್ರತಾಪ್ ಜೊತೆಗೆ ಅವರ ಮಾತಿನ ಚಕಮಕಿ ನಡೆಯುತ್ತಲೇ ಇತ್ತು. ಹೂವುಗಳನ್ನು ಕಾಪಾಡಿಸಿಕೊಳ್ಳುವ ಟಾಸ್ಕ್‌ನಲ್ಲಿಯೂ ವಿನಯ್‌ ಅವರ ಆಕ್ರಮಣಕಾರಿ ಆಟ ಜಗಳಕ್ಕೆ ಕಾರಣವಾಗಿತ್ತು. ಇದೇ ಪರಿಸ್ಥಿತಿ ಬಟ್ಟೆಗಳನ್ನು ಒಗೆದು ಹಾಕುವ ‘ಕಲೆ ಒಳ್ಳೆಯದಲ್ಲ’ ಟಾಸ್ಕ್‌ನಲ್ಲಿಯೂ ಉಂಟಾಗಿತ್ತು. ಅಲ್ಲಿ ಅವಿನಾಶ್ ಮತ್ತು ವಿನಯ್ ಮಧ್ಯೆ ನಡೆದ ಘರ್ಷಣೆ, ವಿನಯ್ ಮತ್ತು ಕಾರ್ತಿಕ್ ನಡುವೆ ನಡೆದ ಘರ್ಷಣೆ ಸಾಕಷ್ಟು ಜಗಳ ಹುಟ್ಟಿಸಿತ್ತು. (https://go.jc.fm/fRhd/cgidaeh3).

ರಕ್ಕಸರು ಮತ್ತು ಗಂಧರ್ವರ ಟಾಸ್ಕ್‌ನಲ್ಲಿ ವಿನಯ್ ರಾಕ್ಷಸರಾಗಿದ್ದಾಗ ಕಾರ್ತಿಕ್ ಜತೆಗೆ ನಡೆದುಕೊಂಡ ರೀತಿ ವಿವಾದವನ್ನೇ ಸೃಷ್ಟಿಸಿತ್ತು. ಹಿಟ್ಟನ್ನು ತೆಗೆದುಕೊಂಡು ವಿನಯ್, ಕಾರ್ತಿಕ್ ಮುಖಕ್ಕೆ ಹೊಡೆದಿದ್ದರು. ಹಾಗೆಯೇ ಕಾರ್ತಿಕ್ ನೆಲಕ್ಕೆಸೆದ ಚಪ್ಪಲಿ ವಿನಯ್ ಅವರಿಗೆ ಹೋಗಿ ಬಡಿದಿತ್ತು. ಇದರಿಂದ ಸಿಟ್ಟಿಗೆದ್ದ ವಿನಯ್, ಮನೆಬಿಟ್ಟು ಹೋಗುತ್ತೇನೆ ಎಂದು ಹೇಳಿ ಬಿಗ್‌ಬಾಸ್ ಮುಖ್ಯದ್ವಾರವನ್ನು ತಟ್ಟಿದ್ದರು.

ಸಂಗೀತಾ-ವಿನಯ್‌ ಮುಖಾಮುಖಿ

ಈ ಸೀಸನ್‌ನಲ್ಲಿ ವಿನಯ್ ಗೌಡ ಮತ್ತು ಸಂಗೀತಾ ನಡುವಿನ ಸಂಬಂಧದ ಏರಿಳಿತದ ಗ್ರಾಫ್ ತುಂಬ ಕುತೂಹಲಕಾರಿಯಾಗಿದ್ದು. ಈ ಮೊದಲೇ ಧಾರಾವಾಹಿಯೊಂದರಲ್ಲಿ ಸುಧೀರ್ಘ ಅವಧಿಗೆ ತೆರೆಯನ್ನು ಹಂಚಿಕೊಂಡಿದ್ದ ವಿನಯ್ ಮತ್ತು ಸಂಗೀತಾ ಮತ್ತೆ ಬಿಗ್‌ಬಾಸ್ ಮನೆಯೊಳಗೆ ಭೇಟಿಯಾದಾಗ ಖುಷಿಯಿಂದಲೇ ತಬ್ಬಿಕೊಂಡಿದ್ದರು. ಆದರೆ ಈ ಖುಷಿ ತುಂಬ ಕಾಲ ಉಳಿಯಲಿಲ್ಲ. ಅಸಮರ್ಥರ ಗುಂಪಿನಿಂದ ಬಂದಿರುವ ಸಂಗೀತ ಸೋಪಾ ಮೇಲೆ ಕೂಡಬಾರದು ಎಂದು ವಿನಯ್ ಹೇಳಿದ್ದನ್ನು ಸಂಗೀತಾ ಲೆಕ್ಕಿಸದೇ ಹೋಗಿದ್ದು ಅವರಿಬ್ಬರ ನಡುವೆ ಮೊದಲ ಕಿಡಿ ಹೊತ್ತಿಕೊಳ್ಳಲು ಕಾರಣವಾಯ್ತು. ನಂತರ ಇದು ನಾಮಿನೇಷನ್‌ನಲ್ಲಿಯೂ ಇನ್ನಷ್ಟು ಜೋರಾಗಿ ಉರಿಯಿತು. ಅಲ್ಲಿಂದ ಮುಂದೆ ಅಸಮರ್ಥರು ಸಮರ್ಥರಾದ ನಂತರವೂ ಮನೆ ಎರಡು ಗುಂಪುಗಳಲ್ಲಿ ವಿಂಗಡಿಸಿಹೋಗಿತ್ತು. ಒಂದು ಗುಂಪಿನಲ್ಲಿ ಸಂಗೀತಾ ಮತ್ತು ಕಾರ್ತೀಕ್ ಇದ್ದರೆ, ಇನ್ನೊಂದು ಗುಂಪಿನಲ್ಲಿ ವಿನಯ್ ಇದ್ದರು.

ಮೊದಲೇ ವಾರವೇ ಕಿಡಿಯಾಗಿ ಸಿಡಿದಿದ್ದ ಸಂಗೀತಾ-ವಿನಯ್ ನಡುವಿನ ಅಸಮಧಾನ ಕಿಚ್ಚಾಗಿ ಧಗಧಗಿಸಿದ್ದು ಎರಡನೇ ವಾರದ ಹಳ್ಳಿ ಟಾಸ್ಕ್‌ನಲ್ಲಿ. ಎರಡು ಕುಟುಂಬಗಳಾಗಿ ಆಡುವಾಗ ಒಂದು ಗುಂಪಿಗೆ ವಿನಯ್ ಮತ್ತೊಂದು ಗುಂಪಿಗೆ ಸಂಗೀತಾ ನೇತೃತ್ವ ವಹಿಸಿದ್ದರು. ಒಬ್ಬರು ತಯಾರಿಸಿದ ಸಾಮಗ್ರಿಗಳನ್ನು ಇನ್ನೊಬ್ಬರು ಹಾಳುಗೆಡವುವ ಚಟುವಟಿಕೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಮಾತಿನ ಬಾಣಗಳು ಎರಡೂ ಕಡೆಗಳಿಂದ ಹಾರಿದವು. (https://go.jc.fm/fRhd/xtuscuti) ಆ ಹೊತ್ತಿನಲ್ಲಿ ವಿನಯ್ ‘ನಾವೇನೂ ಕೈಗೆ ಬಳೆ ತೊಟ್ಕೊಂಡಿಲ್ಲ’ ಎಂದು ಆಡಿದ ಮಾತು ಸಂಗೀತಾ ಅವರನ್ನು ಸಿಟ್ಟಿಗೆಬ್ಬಿಸಿತ್ತು. ಅದೇ ಹಟದಲ್ಲಿ ಅವರು ಇಡೀ ಟಾಸ್ಕ್‌ ಅನ್ನು ಕೈತುಂಬ ಬಳೆ ತೊಟ್ಟುಕೊಂಡೇ ಆಡಿದ್ದರು. ಅಲ್ಲದೆ ವಿನಯ್ ಜತೆಗೆ ಜಗಳವಾದಾಗಲೆಲ್ಲ ‘ನಾನು ಬಳೆ ತೊಟ್ಕೊಂಡಿದೀನಿ’ ಎಂದು ಎತ್ತಿತೋರಿಸಿದ್ದರು. (https://go.jc.fm/fRhd/bk942i1p).

ಈ ಬಳೆಯ ವಿವಾದ ಮನೆಯ ಹೊರಗೂ ಸಾಕಷ್ಟು ಸದ್ದು ಮಾಡಿತ್ತು. ಅಷ್ಟೇ ಅಲ್ಲ, ವಾರಾಂತ್ಯದಲ್ಲಿ ಕಿಚ್ಚನ ಪಂಚಾಯ್ತಿಯಲ್ಲಿಯೂ ಈ ವಿಷಯ ಚರ್ಚೆಗೊಳಗಾಗಿತ್ತು. ಸುದೀಪ್ ಅವರು ಆ ವಾರದ ಕಿಚ್ಚನ ಚಪ್ಪಾಳೆಯನ್ನು ‘ಬಳೆ’ಗೇ ಕೊಟ್ಟಿದ್ದರು. ಇದು ಸೋಷಿಯಲ್ ಮೀಡಿಯಾಗಳಲ್ಲಿ ಟ್ರೆಂಡ್ ಆಗಿತ್ತು. ಕೆಲವು ವಾರಗಳ ನಂತರ ಸಂಗೀತಾ, ತಮ್ಮ ಕಂಪರ್ಟ್‌ ಜೋನನ್ನು ಬಿಡಲು ನಿರ್ಧರಿಸಿ ವಿನಯ್ ತಂಡ ಸೇರಿಕೊಂಡರು. ಆಗ ವಿನಯ್ ಜೊತೆಗೆ ಚೆನ್ನಾಗಿಯೇ ಇದ್ದರು. ಆದರೆ ಮುಂದೆ ಅವರ ತಂಡದಿಂದ ಹೊರಬಿದ್ದಾಗ ಸಂಗೀತಾ ಜತೆಗಿನ ಘರ್ಷಣೆ ಮತ್ತೆ ಮುಂದುವರಿದಿತ್ತು.

ಮುಂದೆ ರಕ್ಕಸರು, ಗಂಧರ್ವರು ಟಾಸ್ಕ್‌ನಲ್ಲಿಯೂ ವಿನಯ್ ಸಂಗೀತಾ ನಡುವೆ ಘರ್ಷಣೆ ಉಂಟಾಗಿತ್ತು. ಹೀಗೆ ಪದೇ ಪದೇ ಜಗಳವಾಡಿಕೊಳ್ಳುತ್ತಲೇ ಇದ್ದ ವಿನಯ್ ಮತ್ತು ಸಂಗೀತ ಯಾವತ್ತೂ ಸರಿಹೋಗುವುದಿಲ್ಲವೇನೋ ಅನಿಸುವಂತಿತ್ತು. ಆದರೆ ಶೈನ್ ಮತ್ತು ಶುಭಾ ಮನೆಯೊಳಗೆ ಬಂದಹೋದ ಮೇಲೆ ವಿನಯ್ ಬದಲಾದರು. ಅವರ ಅಗ್ರೆಶನ್ ಗಮನಾರ್ಹವಾಗಿ ಕಡಿಮೆಯಾಯಿತು. ಸಂಗೀತಾ ಜತೆಗಿನ ಸಂಬಂಧವೂ ಸಾಕಷ್ಟು ಸುಧಾರಿಸಿತು.
ಕಳೆದ ಕೆಲವು ವಾರಗಳಲ್ಲಿ ಅವರಿಬ್ಬರೂ ಉತ್ತಮ ಸ್ನೇಹಿತರು ಎನ್ನುವಷ್ಟು ಹತ್ತಿರವಾಗಿದ್ದಾರೆ. ಪರಸ್ಪರ ಬೆನ್ನು ತಟ್ಟಿಕೊಂಡಿದ್ದಾರೆ.

ಭಾವುಕ-ಸ್ನೇಹಪರ ವಿನಯ್

ವಿನಯ್ ಅವರ ಅಗ್ರೆಶನ್ ‘ವಿಲನ್’ ಮುಖದ ಹಿಂದೆ ಒಬ್ಬ ಸ್ನೇಹಪರ ವ್ಯಕ್ತಿಯಿದ್ದಾನೆ. ಪ್ರೀತಿಗೆ ಕರಗುವ, ಸ್ನೇಹಕ್ಕೆ ನಿಲ್ಲುವ ಮಗುಮನಸ್ಸಿನ ಮುಗ್ಧನಿದ್ದಾನೆ ಎಂಬುದೂ ಬಿಗ್‌ಬಾಸ್ ಮನೆಯೊಳಗೆ ಹಲವು ಸಲ ಸಾಬೀತಾಗಿದೆ.
ಹೆಂಡತಿ ಮತ್ತು ಮಗುವನ್ನು ನೆನೆಸಿಕೊಂಡಾಗೆಲ್ಲ ವಿನಯ್ ಕಣ್ಣುಗಳಲ್ಲಿ ನೀರು ಒಸರಿದೆ. ವೈಲ್ಡ್ ಕಾರ್ಡ ಎಂಟ್ರಿಯಲ್ಲಿ ಬಂದ ಪವಿ, ‘ಹೊರಗೆ ನಿಮ್ಮ ಹೆಂಡತಿ, ಮಗ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದ್ದು ಕೇಳಿ ವಿನಯ್ ಬಾತ್‌ರೂಮಿನಲ್ಲಿ ಹೋಗಿ ಬಿಕ್ಕಿಬಿಕ್ಕಿ ಅತ್ತಿದ್ದರು.

ಅದರಾಚೆಗೆ ಅವರು ಎಂದಿಗೂ ತಮ್ಮ ಸ್ನೇಹಿತರನ್ನು ಬಿಟ್ಟುಕೊಟ್ಟಿಲ್ಲ. ಮನೆಯೊಳಗೇ ಗೆಳೆಯರಾದ ಮೈಕಲ್, ನಮ್ರತಾ, ಸ್ನೇಹಿತ್, ರಕ್ಷಕ್ ಇವರಾರೂ ವಿನಯ್ ಬಗ್ಗೆ ಯಾವತ್ತೂ ಕೆಟ್ಟ ಮಾತುಗಳಾಡಿಲ್ಲ. ಕೆಲವೇ ದಿನಗಳ ಕಾಲ ಮನೆಯೊಳಗಿದ್ದು ವಿನಯ್ ಜೊತೆಗೆ ಒಡನಾಡಿದ ಪವಿ ಕೂಡ, ‘ವಿನಯ್ ಹೊರಗೆ ಕಂಡ ಹಾಗೆ ಇಲ್ಲ. ಅವರು ತುಂಬ ಒಳ್ಳೆಯವರು’ ಎಂದೇ ಹೇಳಿದ್ದರು. ನಮ್ರತಾ, ‘ನನಗೊಬ್ಬ ಅಣ್ಣ ಇಲ್ಲ ಎಂಬ ಕೊರತೆಯನ್ನು ವಿನಯ್ ನೀಗಿಸಿದ್ದಾರೆ’ ಎಂದು ಹೇಳಿದ್ದಾರೆ. ಮೈಕಲ್, ‘ವಿನಯ್ ನನ್ ಪ್ರೀತಿಯ ಮಗ’ ಎಂದು ಹೇಳಿ ಹೊರಗೆ ಹೋಗುವಾಗ ವಿಶೇಷಾಧಿಕಾರವನ್ನು ವಿನಯ್‌ ಅವರಿಗೇ ಕೊಟ್ಟು ಹೋಗಿದ್ದರು. ಸ್ನೇಹಿತ್‌ ಮರಳಿ ಮನೆಗೆ ಬಂದಾಗ ವಿನಯ್ ಗೆಲ್ಲಲೆಂದು ಪೂಜೆ ಮಾಡಿಸಿಕೊಂಡು ಬಂದ ತಾಯತ ಕೊಟ್ಟಿದ್ದರು.

‘ಬೃಂದಾವನ’ ಧಾರಾವಾಹಿ ತಂಡ ಬಿಗ್‌ಬಾಸ್ ಮನೆಯೊಳಗೆ ಬಂದಿದ್ದಾಗ ತಮ್ಮ ಮಗನನ್ನು ನೆನಪಿಸಿಕೊಂಡು ವಿನಯ್ ಕಣ್ಣೀರಾಗಿದ್ದರು. (https://go.jc.fm/fRhd/hmkf1i78). ವಿನಯ್ ಪತ್ನಿ ಅಕ್ಷತಾ ಬಿಗ್‌ಬಾಸ್ ಮನೆಗೆ ಭೇಟಿ ಕೊಟ್ಟಾಗ ವಿನಯ್ ಅಕ್ಷರಶಃ ಮಗುವಿನಂತಾಗಿಬಿಟ್ಟಿದ್ದರು. (https://go.jc.fm/fRhd/cmshpmfn) ಅವರ ಮಗನನ್ನು ಕಂಡು ಖುಷಿಯಿಂದ ಕುಣಿದಾಡಿದ್ದರು. ತಾವು ಅಕ್ಷತಾ ಅವರನ್ನು ನೋಡಿದ್ದು, ಮೆಚ್ಚಿದ್ದನ್ನು ನೆನಪಿಸಿಕೊಂಡು ಇಬ್ಬರೂ ಭಾವುಕರಾಗಿದ್ದರು.

ಈ ಸೀಸನ್‌ನಲ್ಲಿ ಅರ್ಧದಾರಿಯನ್ನು ವಿಲನ್ ಆಗಿಯೇ ಕ್ರಮಿಸಿರುವ ವಿನಯ್ ಕೊನೆಯ ದಿನಗಳಲ್ಲಿ ಸಂಪೂರ್ಣ ಬದಲಾಗಿಬಿಟ್ಟಿದ್ದರು. ಮನಸಲ್ಲಿನ ಎಲ್ಲ ಕಹಿಗಳನ್ನೂ ಹೊರಹಾಕಿ ಎಲ್ಲರ ಕಡೆಗೂ ಸ್ನೇಹದ ಹಸ್ತ ಚಾಚಿದ್ದರು. ‘ಯಾವತ್ತೂ ಇವರ ಜೊತೆ ಸ್ನೇಹ ಬಯಸುವುದಿಲ್ಲ’ ಎಂದು ಉರಿದುಕೊಂಡು ಹೇಳಿದ್ದ ಸಂಗೀತಾ ಅವರ ಕಡೆಗೂ ಸ್ನೇಹದ ಹಸ್ತ ಚಾಚಿದ್ದರು. ‘ನಿಮ್ಮ ಆಸೆ ಏನು ಹೇಳಿ’ ಎಂಬ ಬಿಗ್ ಬಾಸ್ ಪ್ರಶ್ನೆಗೆ, ‘ಮನೆಯ ಎಲ್ಲ ಸದಸ್ಯರೂ ಒಟ್ಟಿಗೇ ಕೂತು ಡಿನ್ನರ್ ಮಾಡಬೇಕು’ ಎಂದು ಹೇಳಿದ್ದರು. (https://go.jc.fm/fRhd/x6fv4ihm).

ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದಾನೆ. ವಿಲನ್ ಟೊ ಹೀರೊ ಎಂದು ವಿನಯ್ ಅವರ ಈ ಜರ್ನಿಯನ್ನು ನಿಸ್ಸಂಶಯವಾಗಿ ಕರೆಯಬಹುದು. ಮೂರನೇ ರನ್ನರ್‌ ಅಪ್‌ (4ನೇ ಸ್ಥಾನ ಪಡೆದ) ಆಗಿರುವ ವಿನಯ್‌ ಗೌಡ ಅವರಿಗೆ 5 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

ಇದನ್ನೂ ಓದಿ: BBK SEASON 10:  ಇಶಾನಿ ತಮ್ಮದೇ ರೀತಿಯಲ್ಲಿ ಸ್ಪರ್ಧಿಗಳನ್ನು ಬೈದಿದ್ದಾ? ಹೊಗಳಿದ್ದಾ?ಹಾಡನ್ನು ನೀವೆ ಕೇಳಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಿಗ್ ಬಾಸ್

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Varthur Santhosh: ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನೆಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ ವರ್ತೂರ್‌ ಸಂತೋಷ್‌.

VISTARANEWS.COM


on

Varthur Santhosh tears
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ (Varthur Santhosh) ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜತೆಗೆ ಅವರ ವಿರುದ್ಧ ಹಲವರು ಟೀಕೆ ಮಾಡುವವರು ಇದ್ದಾರೆ. ವರ್ತೂರು ಸಂತೋಷ್ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಕಣ್ಣೀರು ಹಾಕಿದ್ದಾರೆ. ಕೆಟ್ಟದಾಗಿ ಟೀಕೆಗಳನ್ನು ಮಾಡುತ್ತಿರುವುದರಿಂದ ತಾಯಿ ಊಟ ಮಾಡುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಯೂಟ್ಯೂಬ್ ಚಾನೆಲ್​ನಲ್ಲಿ ಗೆಳೆಯರ ಜತೆ ವಿಡಿಯೊ ಮಾಡಿರುವ ವರ್ತೂರು ಸಂತೋಷ್, ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯುಟ್ಯೂಬ್‌ ಚಾನಲ್‌ ವೊಂದರ ಬಗ್ಗೆ ಹಾಗೂ ಒಬ್ಬ ವ್ಯಕ್ತಿಯ ಬಗ್ಗೆ ಕಟುವಾಗಿಯೇ ಏಕವಚನದಲ್ಲಿ ಮಾತನಾಡಿದ್ದಾರೆ.

ವರ್ತೂರ್‌ ಸಂತೋಷ್‌ (Varthur Santhosh) ಮಾತನಾಡಿ ʻʻಇಡೀ ಕರ್ನಾಟಕ ಜನತೆಗೆ ನಾನು ಹೇಳೋದು ಒಂದೇ. ಇಂದು ಬಹಳ ನೋವಾಗಿದೆ. ನನ್ನ ತಾಯಿ ನನ್ನ ತಂದೆಯನ್ನು ಕಳೆದುಕೊಂಡ ನಂತರ ಗೌರವದಿಂದ ನನ್ನನ್ನು ಸಾಕಿದರು. 2022ರಲ್ಲಿ ರೇಸ್‌ ಮಾಡಿದಾಗ ಬಂದು ಎಂಜಲು ಕಾಸು ತಿಂದ ಮಕ್ಕಳು ಇವರು. ನಮ್ಮ ಅನ್ನ ತಿಂದು ಇವತ್ತು ನಮಗೆ ಅನ್ನುತ್ತಾರೆ. ಅದಕ್ಕೆ ಭಗವಂತನೇ ಸಾಕ್ಷಿ. ನಮ್ಮ ರೇಸ್‌ನಲ್ಲಿ ಇವರೆಲ್ಲ ಒಂದು ಸಾವಿರ, ಎರಡು ಸಾವಿರಕ್ಕೆ ಬಂದವರುʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್‌ ಸಂತೋಷ್‌ ರಿಯಾಕ್ಷನ್‌ ಏನು?

ʻʻಇಷ್ಟೆಲ್ಲ ವಿಡಿಯೊಗಳನ್ನು ಮಾಡುತ್ತಾರೆ. ನಾನು ಮಾತನಾಡಿರುವ ವಿಡಿಯೊ ಯಾವುದಾದರೂ ಹಾಕಿದ್ದಾರಾ? ಕಮೆಂಟ್‌ ಸೆಕ್ಷನ್‌ ಆಫ್‌ ಮಾಡುತ್ತಾರೆ. ನಾನು ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಈ ಮೂಲಕ ಹೇಳುವುದೇನಂದ್ರೆ, ನಾನು ಇದೂವರೆಗೂ ಒಬ್ಬರಿಗೆ ಅನ್ಯಾಯ ಮಾಡಿಲ್ಲ. ಒಬ್ಬರ ಅನ್ನ ಕಿತ್ತುಕೊಂಡಿಲ್ಲʼʼ ಎಂದರು.

ʻʻಕರ್ನಾಟಕ ಜನರು ನನ್ನ ಧರ್ಮ, ದೇವರು. ಇಷ್ಟು ಬೆಳಿಸಿದ್ದೀರಾ ನನ್ನನ್ನು. ನಾನು ಯಾರ ಅನ್ನ ಕಿತ್ತುಕೊಂಡಿಲ್ಲ. ನಾವು ತುಂಬಾ ಮರ್ಯಾದೆ ಇಂದ ಬದುಕಿದ್ದವರು. ನಮ್ಮ ತಾಯಿ ಊಟ ಮಾಡಲ್ಲ ಅಣ್ಣ. ಈ ನನ್ ಮಕ್ಕಳು ಒಂದೊಂದಲ್ಲ ಅಣ್ಣ. ಆ ರೆಕಾರ್ಡಿಂಗ್‌ಗಳು ಎಲ್ಲೆಲ್ಲಿ ಸಿಗ್ತಾವೋ ಆ ಭಗವಂತನಿಗೆ ಗೊತ್ತು. ನಮ್ಮ ಹಾಗೇ ಇದ್ದು, ನಮ್ಮೊಂದಿಗೆ ಇದ್ದು ಹೀಗೆ ಮಾಡುತ್ತಿದ್ದಾರೆ. ನಿಮ್ಮ ಮಕ್ಕಳು ತಣ್ಣಗಿರಲಿʼʼಎಂದು ಬೇಸರ ಹೊರಹಾಕಿದ್ದಾರೆ. ಮಾತ್ರವಲ್ಲ ತಮ್ಮ ಬಗ್ಗೆ ಈ ರೀತಿ ಇಲ್ಲ ಸಲ್ಲದ ವಿಚಾರಗಳನ್ನು ಪೋಸ್ಟ್‌ ಮಾಡಿದ ಯೂಟ್ಯೂಬ್ ಚಾನೆಲ್​ ಅನ್ನು ರಿಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Drone Prathap: ಈ ಮುಂಚೆ ಡ್ರೋನ್‌ ಪ್ರತಾಪ್‌ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಇದೀಗ ಪ್ರತಾಪ್‌ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌.

VISTARANEWS.COM


on

Drone Prathap prayag
Koo

ಬೆಂಗಳೂರು: ಬಿಗ್​ಬಾಸ್​ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿರುವುದು ಗೊತ್ತೇ ಇದೆ. ಡ್ರೋನ್​ ಪ್ರತಾಪ್ ʻಬಿಗ್​ ಬಾಸ್​ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್​ ಎಚ್​ ಎಸ್ (HS Prayag)​ ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್​ ಕಳುಹಿಸಿದ್ದರು ಪ್ರಯಾಗ್‌. ಇದಾದ ಬಳಿಕ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್‌ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್‌. ಡ್ರೋನ್‌ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.

ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!

ಡ್ರೋನ್ ಪ್ರತಾಪ್‌ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್‌ ಹಾಗೂ ತಂಡ ಲೈಸೆನ್ಸ್‌ ಪಡೆಯದೇ ಡ್ರೋನ್‌ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್‌ ಪ್ರತಾಪ್‌ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್‌ ಪ್ರತಾಪ್‌ಗೆ ಡ್ರೋನ್‌ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್‌. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.

ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್‌ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್‌ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್‌ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

ಪ್ರತಾಪ್‌ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!

ಪ್ರತಾಪ್‌ (Drone Prathap) ಅವರು ಸಾರಂಗ್‌ ಅವರಿಗೆ ಒಂಬತ್ತು ಡ್ರೋನ್‌ ನೀಡಬೇಕಿತ್ತು. ಹೀಗಾಗಿ ಸಾರಂಗ್‌ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್‌ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್‌ ಅವರಿಗೆ ಪ್ರತಾಪ್‌ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್‌ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್‌ ಮಾತನಾಡಿ ʻʻನಾನು ಇ-ಮೇಲ್‌ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್‌ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್‌ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್‌ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಪ್ರತಾಪ್‌ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

Continue Reading
Advertisement
SSLC Result
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ4 hours ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ4 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ4 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್4 hours ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Team India
ಪ್ರಮುಖ ಸುದ್ದಿ5 hours ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ5 hours ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

KL Rahul
ಕ್ರೀಡೆ5 hours ago

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

Prajwal Revanna Case
ಕರ್ನಾಟಕ6 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ6 hours ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ6 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ8 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202411 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202414 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ15 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು16 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ23 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌