Actor Rajinikanth: ʻಸಂಘಿʼ ಎನ್ನುವ ಶಬ್ದ ಕೆಟ್ಟದ್ದು ಎಂದು ನನ್ನ ಮಗಳು ಹೇಳಿಲ್ಲ ; ರಜನಿಕಾಂತ್! - Vistara News

ಕಾಲಿವುಡ್

Actor Rajinikanth: ʻಸಂಘಿʼ ಎನ್ನುವ ಶಬ್ದ ಕೆಟ್ಟದ್ದು ಎಂದು ನನ್ನ ಮಗಳು ಹೇಳಿಲ್ಲ ; ರಜನಿಕಾಂತ್!

Actor Rajinikanth: ‘ನನ್ನ ಮಗಳು ʻಸಂಘಿʼ ಎನ್ನುವುದು ಕೆಟ್ಟ ಶಬ್ದ ಎಂದು ಎಂದಿಗೂ ಹೇಳಿಲ್ಲ. ನನ್ನ ತಂದೆಯನ್ನು ಏಕೆ ಬ್ರ್ಯಾಂಡ್ ಮಾಡುತ್ತೀರಿ ಎಂದಷ್ಟೇ ಕೇಳಿದ್ದಾರೆ’ ಎಂದಿದ್ದಾರೆ ರಜನಿಕಾಂತ್.

VISTARANEWS.COM


on

Rajinikanth defends daughter Aishwarya Sanghi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ರಜನಿಕಾಂತ್ ಅವರು ತಮ್ಮ ಮುಂಬರುವ ಚಿತ್ರ ʻಲಾಲ್ ಸಲಾಮ್‌ʼ ಸಿನಿಮಾ ಆಡಿಯೊ ಬಿಡುಗಡೆ ಸಮಾರಂಭದಲ್ಲಿ ಮಗಳು ಐಶ್ವರ್ಯಾ ರಜನಿಕಾಂತ್ ಅವರ ಇತ್ತೀಚಿನ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆಡಿಯೊ ಲಾಂಚ್‌ ವೇಳೆ ‘ನನ್ನ ತಂದೆಯನ್ನು ಸಂಘಿ ಎಂದು ಕರೆಯುವುದನ್ನು ನಿಲ್ಲಿಸಿ’ ಎಂದಿದ್ದಾರೆ ಐಶ್ವರ್ಯಾ. ಆದರೀಗ ಈ ಹೇಳಿಕೆಯನ್ನು ರಜಿನಿಕಾಂತ್‌ ಸಮರ್ಥಿಸಿಕೊಂಡಿದ್ದಾರೆ. ‘ನನ್ನ ಮಗಳು ʻಸಂಘಿʼ ಎನ್ನುವುದು ಕೆಟ್ಟ ಶಬ್ದ ಎಂದು ಎಂದಿಗೂ ಹೇಳಿಲ್ಲ. ನನ್ನ ತಂದೆಯನ್ನು ಏಕೆ ಬ್ರ್ಯಾಂಡ್ ಮಾಡುತ್ತೀರಿ ಎಂದಷ್ಟೇ ಕೇಳಿದ್ದಾರೆ’ ಎಂದಿದ್ದಾರೆ ರಜನಿಕಾಂತ್.

ಆಗಿದ್ದೇನು?

ಐಶ್ವರ್ಯಾ ರಜನಿಕಾಂತ್‌ ಜನವರಿ 26 ರಂದು ಚೆನ್ನೈನಲ್ಲಿ ನಡೆದ ಚಿತ್ರದ ಆಡಿಯೊ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ ʻʻನಾನು ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾದಿಂದ ದೂರ ಇರುತ್ತೇನೆ. ಆದರೆ ನನ್ನ ತಂಡ ಹೊರಗಡೆ ಏನಾಗುತ್ತಿದೆ ಎಂದು ಅಪ್‌ಡೇಟ್‌ ಮಾಡುತ್ತಲೇ ಇರುತ್ತಾರೆ. ಕೆಲವು ಪೋಸ್ಟ್‌ಗಳನ್ನು ತೋರಿಸುತ್ತಲೇ ಇರುತ್ತಾರೆ. ಅವುಗಳನ್ನು ನೋಡಿ ನನಗೆ ಕೋಪ ಬರುತ್ತಿತ್ತು. ನಾವೂ ಮನುಷ್ಯರು. ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ನನ್ನ ತಂದೆ ʻಸಂಘಿʼ ಎಂದು ಕರೆದಿದ್ದಾರೆ. ಅದರ ಅರ್ಥವೇನೆಂದು ನನಗೆ ತಿಳಿದಿರಲಿಲ್ಲ, ನಂತರ ನಾನು ʻಸಂಘಿʼ ಪದದ ಅರ್ಥ ತಿಳಿದಾಗ, ನಿರ್ದಿಷ್ಟ ರಾಜಕೀಯ ಪಕ್ಷವನ್ನು ಬೆಂಬಲಿಸುವ ಜನರನ್ನು ಸಂಘಿ ಎಂದು ಕರೆಯುತ್ತಾರೆ ಎಂದು ಹೇಳಿದರು. ಅಷ್ಟೇ ಅಲ್ಲದೇ ʻಸಂಘಿʼ ಆಗಿದ್ದರೆ ಲಾಲ್ ಸಲಾಂ ಅಂಥ ಸಿನಿಮಾ ಮಾಡುತ್ತಿರಲಿಲ್ಲ’ ಎಂದಿದ್ದಾರೆ ಐಶ್ವರ್ಯಾ. ಮಗಳ ಹೇಳಿಕೆ ಕೇಳಿ ರಜನಿಕಾಂತ್ ಅವರು ಕಣ್ಣೀರು ಹಾಕಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: Actor Rajinikanth: ರಜನಿಕಾಂತ್‌ ಅಭಿನಯದ ʼವೆಟ್ಟೈಯನ್‌ʼ ಚಿತ್ರದ ಪೋಸ್ಟರ್‌ ರಿಲೀಸ್‌; ಇಲ್ಲಿದೆ ತಲೈವಾ ಹೊಸ ಲುಕ್‌

ಈಗ ರಜನಿಕಾಂತ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ.‘ನನ್ನ ಮಗಳು ಸಂಘಿ ಎನ್ನುವುದು ಕೆಟ್ಟ ಶಬ್ದ ಎಂದು ಎಂದಿಗೂ ಹೇಳಿಲ್ಲ. ನನ್ನ ತಂದೆಯನ್ನು ಏಕೆ ಬ್ರ್ಯಾಂಡ್ ಮಾಡುತ್ತೀರಿ ಎಂದಷ್ಟೇ ಕೇಳಿದ್ದಾರೆ’ ಎಂದಿದ್ದಾರೆ ರಜನಿಕಾಂತ್.

ರಜನಿಕಾಂತ್ ಮಗಳು ಐಶ್ವರ್ಯಾ ರಜನಿಕಾಂತ್ (Aishwarya Rajinikanth) ನಿರ್ದೇಶನದ ಲಾಲ್ ಸಲಾಮ್‌ (Lal Salaam Poster) ಚಿತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಪಿಲ್ ದೇವ್ ಅತಿಥಿ ಪಾತ್ರವನ್ನು ನಿರ್ವಹಿಸಿದ್ದಾರೆ.ಲಾಲ್ ಸಲಾಮ್ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದೆ. ಎ ಸುಬಾಸ್ಕರನ್ ಪ್ರಸ್ತುತಪಡಿಸಿದ್ದಾರೆ. ಲಾಲ್ ಸಲಾಮ್ ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಕನ್ನಡದಲ್ಲಿ ಬಿಡುಗಡೆಯಾಗಲಿದೆ. ಸ್ನೇಹ ಮತ್ತು ಕ್ರಿಕೆಟ್ ಸುತ್ತ ಸುತ್ತುವ ಈ ಚಿತ್ರದಲ್ಲಿ ರಜನಿಕಾಂತ್ ʻಮೊಯ್ದೀನ್ ಭಾಯ್ʼ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಐಶ್ವರ್ಯ, ವಿಷ್ಣು ಮತ್ತು ವಿಕ್ರಾಂತ್ ಅವರ ಮೊದಲ ಸಹಯೋಗದಲ್ಲಿ ಎಆರ್ ರೆಹಮಾನ್ ಸಂಗೀತ ಸಂಯೋಜಿಸುತ್ತಿದ್ದಾರೆ.

ಲಾಲ್ ಸಲಾಮ್‌ ಸಿನಿಮಾ ಮೂಲಕ ಐಶ್ವರ್ಯಾ ರಜನಿಕಾಂತ್‌ ಏಳು ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ. ಐಶ್ವರ್ಯಾ ಅವರ ಕೊನೆಯ ನಿರ್ದೇಶನದ ಪ್ರಾಜೆಕ್ಟ್ ತಮಿಳು ಆ್ಯಕ್ಷನ್-ಥ್ರಿಲ್ಲರ್ ʻವೈ ರಾಜಾ ವೈʼ. ಇದರಲ್ಲಿ ಧನುಷ್ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ರಜನಿಕಾಂತ್​ ಅವರು ಭಾರತೀಯ ಸಿನಿಮಾ ಕ್ಷೇತ್ರದ ದಿಗ್ಗಜ ಎನಿಸಿಕೊಂಡಿದ್ದರೆ, ಕಪಿಲ್​ ದೇವ್ ಅವರು ವಿಶ್ವ ಕ್ರಿಕೆಟ್​ನ ಶ್ರೇಷ್ಠ ಆಟಗಾರ. ಅವರಿಬ್ಬರೂ ಜತೆಯಾಗಿ ನಟಿಸಿರುವ ಸಿನಿಮಾವನ್ನು ವೀಕ್ಷಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

Actress Akshita : ಕನ್ನಡದ ಸಿದ್ಲಿಂಗು-2 ಚಿತ್ರವನ್ನು ನಿರ್ಮಾಣ ಮಾಡಿದ್ದ ಬ್ಯಾನರಿನಲ್ಲಿಯೇ ಈ ಚಿತ್ರವೂ ತಯಾರಾಗುತ್ತಿದೆ. ಇದು ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿಯೇ ರೂಪುಗೊಳ್ಳಲಿದೆ. ವಿಶೇಷವೆಂದರೆ, ಅಕ್ಷಿತಾ ಬಯಸಿದಂಥಾ ಪಾತ್ರವೇ ಇಲ್ಲಿ ಸಿಕ್ಕಿದೆ. ಸದ್ಯದ ಮಟ್ಟಿಗೆ ಈ ಸಿನಿಮಾ ಬಗೆಗಾಗಲಿ, ಅಕ್ಷಿತಾರ ಪಾತ್ರದ ಬಗೆಗಾಗಲಿ ಹೆಚ್ಚೇನೂ ಮಾಹಿತಿ ಜಾಹೀರು ಮಾಡುವಂತಿಲ್ಲ.

VISTARANEWS.COM


on

Actress Akshita entry to kollywood cinema
Koo

ಬೆಂಗಳೂರು: ಕನ್ನಡದ ನಟ ನಟಿಯರು ಬೇರೆ ಭಾಷೆಗಳಲ್ಲಿ ಮಿಂಚುವುದು ಹೊಸತೇನಲ್ಲ. ಆದರೆ, ಬೇರೆ ಭಾಷೆಗಳಲ್ಲಿ ಜನಪ್ರಿಯತೆ ದಕ್ಕಿದ ಮೇಲೂ ಕನ್ನಡತನವನ್ನೇ ಧ್ಯಾನಿಸುತ್ತಾ, ತಾಯ್ನೆಲದ ಪ್ರೇಕ್ಷಕರನ್ನು ಚೆಂದದ ಪಾತ್ರಗಳ ಮೂಲಕ ಪ್ರಧಾನ ಆದ್ಯತೆಯಾಗಿಸಿಕೊಂಡವರ ಸಂಖ್ಯೆ ಕಡಿಮೆಯಿದೆ. ಆ ಸಾಲಿಗೆ ಸೇರುವ ಗುಣ ಹೊಂದಿರುವವರು ಅಕ್ಷಿತಾ ಬೋಪಯ್ಯ. ಕನ್ನಡದ ಒಂದಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿ ಪ್ರೇಕ್ಷಕರ ಮನಗೆದ್ದಿರುವ ಅಕ್ಷಿತಾ, ಕಾಲದ ಸೆಳವಿಗೆ ಸಿಕ್ಕು ತಮಿಳು ಸೀರಿಯಲ್ ಜಗತ್ತಿಗೆ ಅಡಿಯಿರಿಸಿದ್ದರು. ಈವತ್ತಿಗೆ ಆಕೆಯ ಪಾಲಿಗೆ ತಮಿಳು ಕಿರುತೆರೆಯಲ್ಲಿ ದೊಡ್ಡ ಮಟ್ಟದ ಗೆಲುವು ಸಿಕ್ಕಿದೆ. ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವನ್ನೂ ಸಂಪಾದಿಸಿಕೊಂಡಿರುವ ಅಕ್ಷಿತಾ ಈಗ ತಮಿಳು ಚಿತ್ರವೊಂದರ ಮೂಲಕ ನಾಯಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ.

ʻಬ್ರಹ್ಮಚಾರಿʼ, ʻಐ ಲವ್ ಯೂʼ, ʻಶಿವಾರ್ಜುನʼ ಮುಂತಾದ ಚಿತ್ರಗಳ ಮೂಲಕ ಅಕ್ಷಿತಾ ಕನ್ನಡದ ಪ್ರೇಕ್ಷಕರಿಗೆಲ್ಲ ಪರಿಚಿತರಾಗಿದ್ದಾರೆ. ಈ ನಡುವೆ ತಮಿಳು ಸೀರಿಯಲ್‌ಗಳಾಗಿ ನಟಿಸುವ ಮೂಲಕ ಭಾರೀ ಜನಪ್ರಿಯತೆಯನ್ನೂ ಪಡೆದುಕೊಂಡಿದ್ದಾರೆ. ಹಾಗೆ ಅಕ್ಷಿತಾ ನಟಿಸುತ್ತಿದ್ದ ಪ್ರಸಿದ್ಧ ತಮಿಳು ಧಾರಾವಾಹಿ ನಾಲ್ಕು ತಿಂಗಳ ಹಿಂದೆ ಮುಕ್ತಾಯಗೊಂಡಿತ್ತು. ಅದಾದ ನಂತರ ಸೀರಿಯಲ್ಲುಗಳ ಅವಕಾಶವಿದ್ದರೂ ಕೂಡಾ ಅಕ್ಷಿತಾರ ಆಸಕ್ತಿ ಹೊರಳಿಕೊಂಡಿದ್ದದ್ದು ಸಿನಿಮಾ ರಂಗದತ್ತ. ತಮಿಳು ಕಿರುತೆರೆ ಜಗತ್ತಿನ ಮುಖ್ಯ ನಾಯಕಿಯಾಗಿ ದಾಖಲಾಗಿದ್ದ ಅಕ್ಷಿತಾ, ಸಿನಿಮಾದಲ್ಲಿ ನಟಿಸುವ ಮೂಲಕ ಏಕತಾನತೆಯನ್ನು ದಾಟಿಕೊಳ್ಳುವ ನಿರ್ಧಾರ ಮಾಡಿದ್ದರು.
ಅಂಥಾ ಹೊತ್ತಿನಲ್ಲಿ ತಮಿಳಿನಲ್ಲೊಂದು ಚೆಂದದ ಅವಕಾಶ ಸಿಕ್ಕಿದೆ.

ಕನ್ನಡದ ಸಿದ್ಲಿಂಗು-2 ಚಿತ್ರವನ್ನು ನಿರ್ಮಾಣ ಮಾಡಿದ್ದ ಬ್ಯಾನರಿನಲ್ಲಿಯೇ ಈ ಚಿತ್ರವೂ ತಯಾರಾಗುತ್ತಿದೆ. ಇದು ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿಯೇ ರೂಪುಗೊಳ್ಳಲಿದೆ. ವಿಶೇಷವೆಂದರೆ, ಅಕ್ಷಿತಾ ಬಯಸಿದಂಥಾ ಪಾತ್ರವೇ ಇಲ್ಲಿ ಸಿಕ್ಕಿದೆ. ಸದ್ಯದ ಮಟ್ಟಿಗೆ ಈ ಸಿನಿಮಾ ಬಗೆಗಾಗಲಿ, ಅಕ್ಷಿತಾರ ಪಾತ್ರದ ಬಗೆಗಾಗಲಿ ಹೆಚ್ಚೇನೂ ಮಾಹಿತಿ ಜಾಹೀರು ಮಾಡುವಂತಿಲ್ಲ. ಆದರೆ, ಒಂದೊಳ್ಳ್ಳೆ ತಂಡ, ಹೊಸತೆನ್ನಿಸುವಂಥಾ ಕಥಾನಕದೊಂದಿಗೆ ಈ ಸಿನಿಮಾ ತಯಾರಾಗುತ್ತಿರುವ ಬಗ್ಗೆ ಅಕ್ಷಿತಾರೊಳಗೊಂದು ಖುಷಿ ಇದೆ. ಸದ್ಯ ಕೊಡಗಿನ ಸುತ್ತಮುತ್ತ ಸದರಿ ಸಿನಿಮಾದ ಚಿತ್ರೀಕರಣ ಸಂಪೂರ್ಣಗೊಂಡಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ತಮಿಳು ಒಂದು ಹಂತದಲ್ಲಿ ಅಕ್ಷಿತಾ ಪಾಲಿಗೆ ಗುರುತಿರದ ಭಾಷೆಯಾಗಿತ್ತು. ಆ ಭಾಷೆಯಲ್ಲೇ ಧಾರಾವಾಹಿಯೊಂದರ ನಾಯಕಿಯಾಗೋ ಅವಕಾಶ ಕೂಡಿ ಬಂದಾಗ, ಪ್ರತಿಭೆಯ ಬಲದಿಂದಲೇ ಅದನ್ನು ತಮ್ಮದಾಗಿಸಿಕೊಂಡಿದ್ದವರು ಅಕ್ಷಿತಾ. ಹಾಗೆ ತಮಿಳು ಕಿರುತೆರೆಗೆ ತೆರಳಿ ಅಲ್ಲಿನ ಪ್ರೇಕ್ಷಕರನ್ನೆಲ್ಲ ಆವರಿಸಿಕೊಂಡಿರುವ ಅಕ್ಷಿತಾ ಪಾಲಿಗೆ, ಅಲ್ಲಿಯೇ ನಟಿಯಾಗಿ ನೆಲೆಗಾಣುವ ವಿಪುಲ ಅವಕಾಶಗಳಿದ್ದಾವೆ. ಆದರೂ ಕೂಡಾ ಕನ್ನಡ ಚಿತ್ರರಂಗವೇ ತನ್ನ ಪಾಲಿನ ಖಾಯಂ ನೆಲೆ ಅಂದುಕೊಂಡಿರುವ ಅವರು, ಈಗಾಗಲೇ ಕರ್ನಾಟಕದ ಅಳಿಯ, ಮಿಸ್ಟರ್ ಆಂಡ್ ಮಿಸೆಸ್ ಎಂಬೆರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅವೆರಡೂ ಸನಿಮಾಗಳೀಗ ಬಿಡುಗಡೆಯ ಹೊಸ್ತಿಲಿನಲ್ಲಿವೆ.

ಹೀಗೆ ಪರಭಾಷಾ ನೆಲದಲ್ಲಿಯೂ ನೆಲೆ ಕಂಡುಕೊಂಡು, ಕನ್ನಡ ಚಿತ್ರರಂಗದಲ್ಲಿಯೂ ಮಿಂಚುವ ಲಕ್ಷಣಗಳನ್ನ ಹೊಂದಿರುವ ಅಕ್ಷಿತಾ ಕೊಡಗಿನವರು. ಬಿಎಸ್‍ಸಿ ಪದವೀಧರೆಯಾಗಿರೋ ಅಕ್ಷಿತಾ ಕ್ಲಾಸಿಕಲ್ ಡ್ಯಾನ್ಸರ್ ಕೂಡಾ ಹೌದು. ಕುಟುಂಬದಲ್ಲಿ ಸಿನಿಮಾ ಹಿನ್ನಲೆ ಇಲ್ಲದಿದ್ದರೂ ಕೂಡಾ ಆರಂಭದಿಂದಲೇ ನಟಿಯಾಗೋ ಕನಸು ಸಾಕಿಕೊಂಡಿದ್ದವರು ಅಕ್ಷಿತಾ. ಪದವಿ ಮುಗಿಯುತ್ತಲೇ ಕೆಲಸಕ್ಕೆ ಸೇರಿಕೊಳ್ಳುವ ಸಂದರ್ಭ ಬಂದಾಗ ಸೀದಾ ತನ್ನ ಕನಸಿನ ಹಾದಿಯಲ್ಲಿ ಧೈರ್ಯವಾಗಿ ಹೆಜ್ಜೆಯೂರಿದ್ದ ಈಕೆ, ಸಾಯಿ ಕುಮಾರ್ ನಟಿಸಿದ್ದ ರಿಯಲ್ ಪೊಲೀಸ್ ಚಿತ್ರದ ಪಾತ್ರವೊಂದರಲ್ಲಿ ನಟಿಸಿದ್ದರು. ಆ ಮೂಲಕ ಎಂಟ್ರಿ ಪಡೆದುಕೊಂಡಿದ್ದ ಅಕ್ಷಿತಾ ಆ ನಂತರದಲ್ಲಿ ಒಂದಷ್ಟು ಚಿತ್ರಗಳಲ್ಲಿ ಸಹನಟಿಯಾಗಿ ನಟಿಸಿ, ನಂತರ ನಾಯಕಿಯಾಗಿಯೂ ಹೊರಹೊಮ್ಮಿದ್ದರು.

ಈ ನಡುವೆ ತಮಿಳು ಸೀರಿಯಲ್ಲುಗಳ ಅವಕಾಶ ಸಿಕ್ಕಿ, ಅಲ್ಲಿ ಪ್ರಸಿದ್ಧಿ ಬಂದರೂ ಕನ್ನಡವೇ ಅಕ್ಷಿತಾರ ಪಾಲಿಗೆ ಪ್ರಧಾನ ಆದ್ಯತೆಯಾಗಿತ್ತು. ಕನ್ನಡದ ನೆಲೆಯಿಂದಲೇ ಬೇರೆ ಬೇರೆ ಭಾಷೆಗಳಲ್ಲಿಯೂ ನಟಿಸಬೇಕೆಂಬುದು ಅವರ ಬಯಕೆ. ಓರ್ವ ನಟಿಯಾಗಿ ಅಕ್ಷಿತಾರದ್ದು ಭಿನ್ನ ಅಭಿರುಚಿ. ಸಿಕ್ಕ ಅವಕಾಶಗಳನ್ನು ಅಳೆದೂ ತೂಗಿ ಒಪ್ಪಿಕೊಳ್ಳುವ ಈಕೆಯ ಪ್ರಧಾನ ಆದ್ಯತೆ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೇ. ನಟನೆಗೆ ಅವಕಾಶವಿರುವ ಭಿನ್ನ ಪಾತ್ರಗಳಲ್ಲಿ ಮಿಂಚುವ ಆಸೆ ಹೊಂದಿರುವ ಅಕ್ಷಿತಾ ಈಗ ತಮಿಳಿನಲ್ಲಿ ನಾಯಕಿಯಾಗಿ ಅವತರಿಸಿದ್ದಾರೆ. ತೆಲುಗಿಗೂ ಎಂಟರಿ ಕೊಡುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಕನ್ನಡದಲ್ಲಿಯೂ ಒಂದಷ್ಗಟು ಒಳ್ಳೆ ಅವಕಾಶಗಳು ಅವರನ್ನು ಅರಸಿಕೊಂಡು ಬರುತ್ತಿವೆ. ಸ್ತ್ರೀ ಪ್ರಧಾನ ಚಿತ್ರದ ಕನಸು ಹೊಂದಿರೋ ಅಕ್ಷಿತಾ, ಅಂಥಾದ್ದೊಂದು ಅಮೋಘ ಅವಕಾಶ ಕನ್ನಡದಿಂದಲೇ ಸಿಗುವ ನಿರೀಕ್ಷೆ ಹೊಂದಿದ್ದಾರೆ.

Continue Reading

ಕಾಲಿವುಡ್

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Jayam Ravi: ಆರತಿ ರವಿ ಅವರು ಜಯಂ ರವಿ ಅವರೊಂದಿಗಿನ ಎಲ್ಲಾ ಫೋಟೋಗಳನ್ನು ಡಿಲಿಟ್‌ ಮಾಡಿದ್ದಾರೆ. ಜಯಂ ರವಿ ಅವರು 2009ರಲ್ಲಿ ನಿರ್ಮಾಪಕಿ ಸುಜಾತಾ ವಿಜಯಕುಮಾರ್ ಅವರ ಮಗಳು ಆರತಿಯನ್ನು ವಿವಾಹವಾದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ .

VISTARANEWS.COM


on

Jayam Ravi's wife Aarti Ravi removes all her Instagram photos
Koo

ಬೆಂಗಳೂರು: ಬಣ್ಣದ ಲೋಕದಲ್ಲಿ (Jayam Ravi) ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ತಮಿಳು ಸ್ಟಾರ್‌ ಜಯಂ ರವಿ ಮತ್ತು ಪತ್ನಿ ಆರತಿ ದಂಪತಿ ವಿಚ್ಛೇದನ ಪಡೆಯಲಿದ್ದಾರೆ ಎಂದು ವರದಿಯಾಗಿದೆ (Jayam Ravi’s wife Aarti Ravi). ಇತ್ತಿಚೆಗೆ ರವಿ ಹಾಗೂ ಆರತಿ ಅವರು ಫ್ಯಾಮಿಲಿ ಫೋಟೊಗಳನ್ನು ಇನ್‌ಸ್ಟಾದಲ್ಲಿ ಡಿಲೀಟ್‌ ಮಾಡಿದ್ದರು. ಹೀಗಾಗಿ ಜೋಡಿ ಬೇರ್ಪಟ್ಟಿದೆ ಎಂದು ವರದಿಯಾಗಿದೆ.

ಆರತಿ ರವಿ ಅವರು ಜಯಂ ರವಿ ಅವರೊಂದಿಗಿನ ಎಲ್ಲಾ ಫೋಟೋಗಳನ್ನು ಡಿಲಿಟ್‌ ಮಾಡಿದ್ದಾರೆ. ಜಯಂ ರವಿ ಅವರು 2009ರಲ್ಲಿ ನಿರ್ಮಾಪಕಿ ಸುಜಾತಾ ವಿಜಯಕುಮಾರ್ ಅವರ ಮಗಳು ಆರತಿಯನ್ನು ವಿವಾಹವಾದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ . ಮಗ ಆರವ್‌ ಇತ್ತೇಚೆಗೆ ಟಿಕ್‌ ಟಿಕ್‌ ಸಿನಿಮಾದಲ್ಲಿ ನಟಿಸಿದ್ದ. ಇಬ್ಬರೂ ಮುದ್ದಾದ ಜೋಡಿ ಎಂದೇ ಗುರುತಿಸಿಕೊಂಡಿತ್ತು. ಇದೀಗ ಇಬ್ಬರೂ ಒಂದು ವರ್ಷಗಳಿಂದ ದೂರ ಇದ್ದಾರೆ ಎನ್ನಲಾಗಿದೆ.

ಜಯಂ ರವಿ ಅವರು ಮಣಿರತ್ನಂ ಅವರ ಪೊನ್ನಿಯನ್ ಸೆಲ್ವನ್ – 1 ಮತ್ತು 2 ರಲ್ಲಿ ಚೋಳ ಚಕ್ರವರ್ತಿ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ನಟನೆಗೆ ಮೊದಲು, ಜಯಂ ಅವರು ಕಮಲ್ ಹಾಸನ್ ನಟಿಸಿದ ಆಳವಂದನ್ (2001) ನಲ್ಲಿ ಸುರೇಶ್ ಕೃಷ್ಣ ಅವರಿಗೆ ಸಹಾಯಕ ನಿರ್ದೇಶಕರಾಗಿದ್ದರು.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಇದಕ್ಕೂ ಮೊದಲು ಜಯಂ ರವಿ ಅವರು ʼಜೀನಿʼ (Genie) ಚಿತ್ರದಲ್ಲಿ ಮಿಂಚಿದ್ದರು. ಅರ್ಜುನನ್ ಜೂನಿಯರ್ ( ʼಜೀನಿʼ ಫ್ಯಾಂಟಸಿ ಸಿನಿಮಾ. ಇದೇ ಮೊದಲ ಬಾರಿಗೆ ಜಯಂ ರವಿ ಫ್ಯಾಂಟಸಿ ಕಥೆಯಲ್ಲಿ ಬಣ್ಣ ಹಚ್ಚಿದ್ದರು. ಹೀಗಾಗಿ ಫಸ್ಟ್ ಲುಕ್ ಕೂಡ ವಿಭಿನ್ನವಾಗಿತ್ತು. ಸರಪಣಿಯಲ್ಲಿ ಬಂಧಿಯಾಗಿರುವ ಜಯಂ ರವಿ, ಜುಟ್ಟು ಕಟ್ಟಿ ಸ್ಟೈಲೀಶ್ ಲುಕ್‌ನಲ್ಲಿ ಮಿಂಚಿದ್ದರು.

ಇದೀಗ ಸೌತ್‌ನಲ್ಲಿ ಸಮಂತಾ ನಾಗಚೈತನ್ಯ ಜೋಡಿ ಬೇರೆಯಾಗಿಯೇ ಅಭಿಮಾನಿಗಳು ಬೇಸರದಲ್ಲಿದ್ದರು. ಇದಾದ ಬಳಿಕ ಧನುಷ್‌ ಹಾಗೂ ಐಶ್ವರ್ಯಾ, ಸಂಗೀತ ನಿರ್ದೇಶಕ ಜೀವಿ ಪ್ರಕಾಶ್‌ ಕೂಡ ಬೇರೆಯಾದರು. ಸ್ಯಾಂಡಲ್‌ವುಡ್‌ನಲ್ಲಿ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಬೇರ್ಪಟ್ಟರು.

Continue Reading

South Cinema

Indian 2 Trailer: `ಇಂಡಿಯನ್‌-2′ ಟ್ರೈಲರ್‌ ಔಟ್‌; ಹಲವು ಗೆಟಪ್​ನಲ್ಲಿ ಗಮನಸೆಳೆದ  ಕಮಲ್ ಹಾಸನ್!

Indian 2 Trailer: ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ನಿರ್ಮಿಸಿರುವ ಇಂಡಿಯನ್2 ಜುಲೈ 12 ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.1996ರಲ್ಲಿ ಕಮಲ್ ಹಾಸನ್ ನಟನೆಯ ‘ಇಂಡಿಯನ್’ ಸಿನಿಮಾ ರಿಲೀಸ್ ಆಯಿತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗಿದೆ.

VISTARANEWS.COM


on

Indian 2 trailer Kamal Haasan as master of disguise
Koo

ಬೆಂಗಳೂರು: ಕಮಲ್‌ ಹಾಸನ್‌ ಅಭಿನಯದ ಇಂಡಿಯನ್‌-2 ಸಿನಿಮಾದ ಟ್ರೈಲರ್‌ (Indian 2 Trailer) ಬಿಡುಗಡೆಗೊಂಡಿದೆ. ಕಮಲ್ ಹಾಸನ್ ಅವರು ಹಲವು ಗೆಟಪ್​​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಇಂಡಿಯನ್ 2’ ಚಿತ್ರ ಜುಲೈ 12ರಂದು ಬಿಡುಗಡೆ ಆಗಲಿದೆ. 1996ರಲ್ಲಿ ಕಮಲ್ ಹಾಸನ್ ನಟನೆಯ ‘ಇಂಡಿಯನ್’ ಸಿನಿಮಾ ರಿಲೀಸ್ ಆಯಿತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗಿದೆ.

ಟ್ರೈಲರ್‌ನಲ್ಲಿ ದೇಶದಾದ್ಯಂತ ನಡೆಯುತ್ತಿರುವ ಅನೇಕ ಅಪರಾಧಗಳು ಮತ್ತು ವಂಚನೆಗಳ ಚಿತ್ರಣ ಇದೆ. ಪ್ರಸ್ತುತ ಭಾರತೀಯರು ಹೋರಾಡುತ್ತಿರುವ ಉದ್ಯೋಗಗಳ ಕೊರತೆ, ಭಾರೀ ತೆರಿಗೆ ಹೊರೆಗಳು ಮತ್ತು ಇತರ ಮೂಲಭೂತ ಸೌಲಭ್ಯಗಳ ಕೊರತೆಯಂತಹ ಸಮಸ್ಯೆಗಳ ವಿವರಣೆ ಇವೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆಯನ್ನು ಸಿನಿಮಾ ಹೊಂದಿದೆ. ಮಲ್ ಹಾಸನ್ ಅವರು ಬೇರೆ ಬೇರೆ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಕಮಲ್ ಹಾಸನ್ ಅವರು ಯಾವುದೇ ರೀತಿಯ ಪಾತ್ರ ಕೊಟ್ಟರೂ ಮಾಡಿ ತೋರಿಸುತ್ತಾರೆ. ಇದಕ್ಕೆ ‘ಇಂಡಿಯನ್ 2’ ಮತ್ತೊಂದು ಉದಾಹರಣೆ.

ಚಿತ್ರದಲ್ಲಿ ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ಎಸ್.ಜೆ.ಸೂರ್ಯ, ಪ್ರಿಯಾ ಭವಾನಿ ಶಂಕರ್, ನೆಡುಮುಡಿ ವೇಣು, ವಿವೇಕ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ಸಮುದ್ರಕನಿ, ಬಾಬಿ ಸಿಂಹ, ಬ್ರಹ್ಮಾನಂದಂ, ವೆನ್ನೆಲ ಕಿಶೋರ್, ಜಾಕಿರ್ ಹುಸೇನ್, ಗುರು ಸೋಮಸುಂದರಾಮ್, ದೆಹಲಿ, ಗುರು ಸೋಮಸುಂದರಾಮ್ ಮಿಶ್ರಾ, , ಜಯಪ್ರಕಾಶ್, ಮನೋಬಾಲಾ, ಮತ್ತು ಅಶ್ವಿನಿ ತಂಗರಾಜ್ ಇದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ನಿರ್ಮಿಸಿರುವ ಇಂಡಿಯನ್2 ಜುಲೈ 12 ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?ಇದನ್ನೂ ಓದಿ:

ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ.

ಇಂಡಿಯನ್ 2 ಲುಕ್‌ಗಾಗಿ ಕಮಲ್ ಸಾಕಷ್ಟು ಶ್ರಮ ವಹಿಸಿದ್ದಾರೆ. ಕಳೆದ ವರ್ಷ, ಬರಹಗಾರ ಜಯಮೋಹನ್ ಅವರು ಸೆಟ್‌ಗಳಲ್ಲಿ ಕಮಲ್ ಹಾಸನ್ ಇರುವ ಬಗೆಯನ್ನು ಬಣ್ಣಿಸಿದ್ದರು. ಕಮಲ್‌ ಅವರ ಬದ್ಧತೆ ಮತ್ತು ನಟನಾ ಮಯದಲ್ಲಿ ಹೇಗೆ ಇರುತ್ತಾರೆ ಎಂಬುದರ ಬಗ್ಗೆ ವಿವರಿಸಿದ್ದರು. ʻʻಕಮಲ್ ಅವರು ಸೆಟ್‌ಗಳಲ್ಲಿ ಬಹುತೇಕ ಹಸಿವಿನಿಂದಲೇ ಇರುತ್ತಾರೆ. ನಟಿಸುವ ಸಮಯದಲ್ಲಿ ಏನನ್ನೂ ತಿನ್ನುವುದಿಲ್ಲ. ಇದಕ್ಕೆ ಕಾರಣವೂ ಇದ್ದು, ನಟನೆ ಸಂದರ್ಭದಲ್ಲಿ ಏನನ್ನಾದರೂ ತಿನ್ನುತ್ತಿದ್ದರೆ, ಅಂದರೆ ಬಾಯಲ್ಲಿ ಅಗಿಯುತ್ತಿದ್ದರೆ, ಅದು ಪ್ರಾಸ್ಥೆಟಿಕ್ ಮೇಕ್ಅಪ್ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಅವರು ನಟಿಸುವಾಗ ಕೇವಲ ಜ್ಯೂಸ್ ಡಯಟ್ ಮಾಡುತ್ತಿದ್ದರುʼʼ ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

Continue Reading

ಸಿನಿಮಾ

Actor Darshan: 80 ವರ್ಷಗಳ ಹಿಂದೆ ನಡೆದಿತ್ತು ದರ್ಶನ್‌ ಮಾದರಿ ಕ್ರೈಂ! ಜೈಲು ಪಾಲಾಗಿದ್ದರು ತಮಿಳು ಸೂಪರ್ ಸ್ಟಾರ್!

ದರ್ಶನ್ ತೂಗುದೀಪ್ (Actor Darshan) ಅವರ ಬಂಧನವು ತಮಿಳು ಚಿತ್ರರಂಗದ ಮೊದಲ ಸೂಪರ್‌ಸ್ಟಾರ್‌ ಅನ್ನು ನೆನಪಿಸಿದೆ. 80 ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ತ್ಯಾಗರಾಜ್ ಭಾಗವತರ್ ಬಳಿಕ ತಮ್ಮ ಜನಪ್ರಿಯತೆಯನ್ನು ಕಳೆದುಕೊಂಡು ಚಿತ್ರರಂಗದಲ್ಲಿ ನೆನಪಾಗಿ ಉಳಿದರು. ಅವರು ಜೈಲಿನಿಂದ ಹೊರ ಬಂದಾಗ ಎಲ್ಲವೂ ಬದಲಾಗಿತ್ತು! ಈ ಕುರಿತ ಹಿನ್ನೋಟ ಇಲ್ಲಿದೆ.

VISTARANEWS.COM


on

By

Actor Darshan
Koo

ಸ್ನೇಹಿತೆ ಪವಿತ್ರಾ ಗೌಡ (Pavitra Gowda) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಕಳುಹಿಸಿದ ಅಭಿಮಾನಿ ರೇಣುಕಾ ಸ್ವಾಮಿ (Renuka Swamy) ಅವರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಕನ್ನಡ ನಟ ದರ್ಶನ್ (Actor Darshan) ತೂಗುದೀಪ ಅವರನ್ನು ಬಂಧಿಸಿರುವುದು ತಮಿಳುನಾಡಿನ ಮೊದಲ ಸೂಪರ್‌ಸ್ಟಾರ್ ಎಂ.ಕೆ. ತ್ಯಾಗರಾಜ ಭಾಗವತರ್ (M.K. Thyagaraja Bhagavathar) ಅವರನ್ನು ನೆನಪಿಸುವಂತೆ ಮಾಡಿದೆ.

ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸ್ಟಾರ್ ಆಗಿರುವ, ನಟ “ಚಾಲೆಂಜಿಂಗ್ ಸ್ಟಾರ್” ಎಂದು ಕರೆಯಲಾಗುವ ‘ಡಿ ಬಾಸ್’ ಒಂದು ವಾರದಿಂದ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇವರ ಬದುಕಿನ ಈ ಕಥೆ ಎಂಟು ದಶಕಗಳ ಹಿಂದೆ ತಮಿಳು ಚಿತ್ರರಂಗವನ್ನು ಬೆಚ್ಚಿಬೀಳಿಸಿದ ಹಗರಣವನ್ನು ಪ್ರತಿಬಿಂಬಿಸಿದೆ.

1944ರಲ್ಲಿ ಪತ್ರಕರ್ತ ಲಕ್ಷ್ಮೀಕಾಂತನ್ ಹತ್ಯೆ ಪ್ರಕರಣದಲ್ಲಿ ತಮಿಳು ಚಿತ್ರರಂಗದ ಮೊದಲ ಸೂಪರ್‌ಸ್ಟಾರ್ ತ್ಯಾಗರಾಜ ಭಾಗವತರ್ ಮತ್ತು ಅವರ ಸಹವರ್ತಿ ಹಾಸ್ಯನಟ ತಮಿಳು ಚಿತ್ರರಂಗದ ‘ಚಾರ್ಲಿ ಚಾಪ್ಲಿನ್’ ಎಂದೇ ಖ್ಯಾತರಾದ ಎನ್.ಎಸ್. ಕೃಷ್ಣನ್ ಬಂಧನಕ್ಕೆ ಒಳಗಾಗಿದ್ದರು. ಸುಪ್ರೀಂ ಕೋರ್ಟ್‌ಗೆ ಸಮಾನ ಅಧಿಕಾರ ಹೊಂದಿದ್ದ ಪ್ರೈವಿ ಕೌನ್ಸಿಲ್ ಭಾಗವತರ್ ಮತ್ತು ಕೃಷ್ಣನ್ ಅವರಿಗೆ ಕೊಲೆ ಆರೋಪಗಳಿಗಾಗಿ ಅಂಡಮಾನ್ ಜೈಲಿನಲ್ಲಿ 30 ತಿಂಗಳ ಶಿಕ್ಷೆಯನ್ನು ವಿಧಿಸಿತ್ತು. ಅವರು ಜೈಲಿನಿಂದ ಹೊರಬಂದಾಗ ತಮಿಳುನಾಡಿನಲ್ಲಿ ಸಿನಿಮಾ ವೀಕ್ಷಕರನ್ನು ಹೊಸ ನಟರು ಸೆಳೆದಿದ್ದರು.

ರೇಣುಕಾ ಸ್ವಾಮಿ ಮತ್ತು ಲಕ್ಷ್ಮಿಕಾಂತನ್ ಇಬ್ಬರನ್ನೂ ಮಾನಹಾನಿಕರ ಕಾಮೆಂಟ್‌ ಮಾಡಿರುವುದಕ್ಕೆ ಕೊಲೆ ಮಾಡಲಾಗಿದೆ. ಅವರಿಬ್ಬರ ಕೊಲೆಗಳು ಕನ್ನಡ ಮತ್ತು ತಮಿಳು ಚಿತ್ರರಂಗದ ಸೂಪರ್‌ಸ್ಟಾರ್‌ಗಳ ಬಂಧನಕ್ಕೆ ಕಾರಣವಾಯಿತು. ಭಾಗವತರ್ ತಮಿಳು ಚಿತ್ರರಂಗದ ದೊಡ್ಡ ತಾರೆಗಳಲ್ಲಿ ಒಬ್ಬರು. ಅವರ ಜನಪ್ರಿಯತೆ ಅಪಾರವಾಗಿತ್ತು. ಉದಾಹರಣೆಗೆ, ಅವರು ಆ ಕಾಲದಲ್ಲೇ ಪ್ರತಿದಿನ ಮದ್ರಾಸ್‌ನಿಂದ ತಿರುಚ್ಚಿಗೆ ಚಾರ್ಟರ್ ಫ್ಲೈಟ್‌ನಲ್ಲಿ ಬರುತ್ತಿದ್ದರು, ಗುಲಾಬಿಯ ದಳಗಳಲ್ಲಿ ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತಿದೆ. ಕೃಷ್ಣನ್ ಅವರು 1930 ಮತ್ತು 1940ರ ದಶಕದಲ್ಲಿ ಜನಪ್ರಿಯತೆಯನ್ನು ಗಳಿಸುತ್ತಿದ್ದ ದ್ರಾವಿಡ ಚಳವಳಿಯ ಕಾರ್ಯಕರ್ತರಾಗಿದ್ದರು. ಅವರು ಹೆಚ್ಚಿನ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದರು.

ಪತ್ರಕರ್ತ ಲಕ್ಷ್ಮಿಕಾಂತನ್ ಎರಡನೇ ಮಹಾಯುದ್ಧದ ಸಮಯದಲ್ಲಿ ಜೈಲಿನಿಂದ ಬಿಡುಗಡೆಯಾದವರು. ಅನಂತರ ಅವರು ತಮ್ಮ ನಿಯತಕಾಲಿಕೆಗಳಲ್ಲಿ ಚಲನಚಿತ್ರ ತಾರೆಯರ ಬಗ್ಗೆ ಗಾಸಿಪ್ ಬರೆಯಲು ಪ್ರಾರಂಭಿಸಿದರು.

ಪತ್ರಕರ್ತನ ಕೊಲೆ

ಲಕ್ಷ್ಮೀಕಾಂತನ್ ಅವರು ತಮಿಳು ಚಿತ್ರರಂಗದ ನಟರು ಮತ್ತು ನಟಿಯರ ಬಗ್ಗೆ ಬರೆಯಲು ತೊಡಗಿ ಸಮಾನ ಪ್ರಮಾಣದಲ್ಲಿ ಜನಪ್ರಿಯತೆ ಮತ್ತು ಕುಖ್ಯಾತಿಯನ್ನು ಗಳಿಸಿದರು. ವಾಸ್ತವವಾಗಿ ಪ್ರಿಂಟಿಂಗ್ ಪ್ರೆಸ್ ನಡೆಸಲು ಕಾಂತನ್ ಅವರ ಪರವಾನಗಿಯನ್ನು ರದ್ದುಗೊಳಿಸುವಂತೆ ಕೃಷ್ಣನ್ ಮತ್ತು ಭಾಗವತರ್ ಆಗಿನ ಮದ್ರಾಸ್ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಎಲ್ಲ ಕಡೆಯ ಒತ್ತಡದ ನಡುವೆಯೂ ಕಾಂತನ್ ಗಾಸಿಪ್‌ ಲೇಖನಗಳನ್ನು ಬರೆಯುತ್ತಲೇ ಇದ್ದರು. ಕೆಲವು ನಟರು ಅವರಿಗೆ ಹಣ ನೀಡಿ ತಮ್ಮ ಬಗ್ಗೆ ಬರೆಯದಂತೆ ಹೇಳುತ್ತಿದ್ದರು ಎನ್ನಲಾಗುತ್ತಿತ್ತು.

1944ರ ನವೆಂಬರ್ 8ರಂದು ಕಾಂತನ್ ಮದ್ರಾಸಿನ ಜನನಿಬಿಡ ರಸ್ತೆಯಲ್ಲಿ ಇರಿತಕ್ಕೊಳಗಾಗಿ ಸಾವನ್ನಪ್ಪಿದರು. ಭಾಗವತರ್ ಮತ್ತು ಕೃಷ್ಣನ್ ಇವರ ಕೊಲೆಯಲ್ಲಿ ಪ್ರಮುಖ ಶಂಕಿತರಾಗಿದ್ದರು. 1945ರ ಆರಂಭದಲ್ಲಿ ಅವರನ್ನು ಬಂಧಿಸಿದರು. ವಿಚಾರಣೆ ವೇಳೆ ಅವರು ತಪ್ಪಿತಸ್ಥರೆಂದು ಗುರುತಿಸಲ್ಪಟ್ಟು ಜೀವಾವಧಿ ಶಿಕ್ಷೆಗೆ ಒಳಗಾದರು. ಕೃಷ್ಣನ್ ಮತ್ತು ಭಾಗವತರ್ ಅವರನ್ನು ಅಂಡಮಾನ್ ಜೈಲಿಗೆ ಕಳುಹಿಸಲಾಯಿತು.

ತೀರ್ಪಿನ ವಿರುದ್ಧ ಅವರು ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಲ್‌ಫ್ರೆಡ್ ಹೆನ್ರಿ ಲಿಯೋನೆಲ್ ಲೀಚ್ ಅವರ ಮುಂದೆ ಮೇಲ್ಮನವಿ ಸಲ್ಲಿಸಿದರು. ಲಕ್ಷ್ಮಿಕಾಂತ್ ಮೇಲೆ ದಾಳಿ ಮಾಡಿದವರಲ್ಲಿ ಕೃಷ್ಣನ್ ಮತ್ತು ಭಾಗವತರ್ ಪ್ರಮುಖರು ಎಂದು ಆದೇಶದಲ್ಲಿ ತಿಳಿಸಲಾಗಿದೆ.

1944ರ ಅಕ್ಟೋಬರ್‌ನಲ್ಲಿ ಒಮ್ಮೆ ಕಾಂತನ್ ಮೇಲೆ ದಾಳಿ ನಡೆಸಲಾಯಿತು. ಆಗ ಯಾವುದೇ ಗಂಭೀರವಾದ ಗಾಯವಾಗಲಿಲ್ಲ. ಇದಕ್ಕಾಗಿ ಇಬ್ಬರು ನಟರ ವಿರುದ್ಧ ದೂರು ನೀಡಲು ಕಾಂತನ್ ಬಯಸಿದ್ದರು ಮತ್ತು ವಕೀಲರನ್ನು ಸಂಪರ್ಕಿಸಿದ್ದರು. ಕಾಂತನ್ ಅವರು ದೂರಿನ ಪ್ರತಿಯೊಂದಿಗೆ ವಕೀಲರ ಕಚೇರಿಯಿಂದ ಹಿಂದಿರುಗುತ್ತಿದ್ದಾಗ ಕೊಲೆಯಾಗಿದ್ದಾರೆ ಎಂಬುದನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ದಾಳಿಕೋರರಲ್ಲಿ ಒಬ್ಬರು ಭಾಗವತರನ್ನು ಭೇಟಿಯಾಗಿದ್ದರು. ಕಾಂತನ್ ಹತ್ಯೆಗಾಗಿ ಗ್ಯಾಂಗ್ ಗೆ 2,500 ರೂ ನೀಡುವುದಾಗಿ ಭರವಸೆ ನೀಡಿದರು. ಆರೋಪಿಗಳು ಸಿಕ್ಕಿಬಿದ್ದರೆ ಯಾವುದೇ ಕಾರಣಕ್ಕೂ ನಟರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಪ್ರಮಾಣ ಮಾಡಲು ಹೇಳಿದ್ದರು ಎನ್ನಲಾಗಿದೆ.

ನ್ಯಾಯಾಲಯವು ವಿವರವಾಗಿ ಸಾಕ್ಷ್ಯಗಳು, ಸಾಕ್ಷಿಗಳ ಹೇಳಿಕೆಗಳು ಮತ್ತು ಇತರ ವಿಷಯಗಳನ್ನು ವಿಶ್ಲೇಷಿಸಿತು. ಕೃಷ್ಣನ್ ಮತ್ತು ಭಾಗವತರು ಲಕ್ಷ್ಮೀಕಾಂತನ ಕೊಲೆಯಲ್ಲಿ ತಪ್ಪಿತಸ್ಥರೆಂದು ನಿರ್ಧರಿಸಿ, 1945ರ ಅಕ್ಟೋಬರ್ ನಲ್ಲಿ ಆದೇಶದ ಪ್ರತಿಯನ್ನು ಪ್ರೈವಿ ಕೌನ್ಸಿಲ್‌ಗೆ ಸಲ್ಲಿಸಲಾಯಿತು. ಅಲ್ಲಿ ಭಾಗವತರ್ ಮತ್ತು ಕೃಷ್ಣನ್ ಅವರನ್ನು ಕೆ.ಎಂ. ಮುನ್ಷಿ ಪ್ರತಿನಿಧಿಸಿದರು. ಅವರು ಅನಂತರ ಸ್ವತಂತ್ರ ಭಾರತದಲ್ಲಿ ಮಂತ್ರಿಯಾಗಿದ್ದು, ಸಂವಿಧಾನದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಪ್ರೈವಿ ಕೌನ್ಸಿಲ್ ಅಂತಿಮವಾಗಿ ಅವರ ಅಪರಾಧವನ್ನು ರದ್ದುಗೊಳಿಸಿ, ಭಾಗವತರ್ ಮತ್ತು ಕೃಷ್ಣನ್ ಅವರನ್ನು ಜೈಲಿನಿಂದ ಮುಕ್ತಗೊಳಿಸಿತು.

ಪ್ರಕರಣದ ಮರುವಿಚಾರಣೆಗೆ ಆದೇಶಿಸಲಾಯಿತಾದರೂ ಲಕ್ಷ್ಮೀಕಾಂತನ ಕೊಲೆಯನ್ನು ಯಾರು ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲು ವಿಫಲವಾಯಿತು. ಎಂಟು ದಶಕಗಳು ಕಳೆದರೂ ಲಕ್ಷ್ಮೀಕಾಂತನ್ ಹತ್ಯೆ ಪ್ರಕರಣ ಇತ್ಯರ್ಥವಾಗದೆ ಉಳಿದಿದೆ.

ಇದನ್ನೂ ಓದಿ: Actor Chiranjeevi: ಮೆಗಾಸ್ಟಾರ್ ಚಿರಂಜೀವಿ ಮಾಜಿ ಅಳಿಯ ಶಿರಿಷ್ ಭಾರದ್ವಾಜ್ ನಿಧನ

ಜೈಲಿನಿಂದ ಹೊರ ಬಂದಾಗ ಎಲ್ಲವೂ ಬದಲಾಗಿತ್ತು

ಭಾಗವತರ್ ಮತ್ತು ಕೃಷ್ಣನ್ ಜೈಲಿನಿಂದ ಹೊರಬಂದಾಗ ಅವರ ಜನಪ್ರಿಯತೆ ಕ್ಷೀಣಿಸಿತ್ತು. ಬಂಧನಕ್ಕೂ ಮುನ್ನ 12 ಯೋಜನೆಗಳನ್ನು ಹೊಂದಿದ್ದ ಭಾಗವತರ್ ಬಿಡುಗಡೆಯಾದ ಅನಂತರ ಯಾವುದನ್ನೂ ಪಡೆಯಲು ಸಾಧ್ಯವಾಗಲಿಲ್ಲ. ಕೃಷ್ಣನ್ ಅವರ ಬಳಿಯೂ ಹಣ ಉಳಿದಿರಲಿಲ್ಲ. ಅವರು ಚಿತ್ರರಂಗಕ್ಕೆ ಮರುಪ್ರವೇಶಿಸಲು ಪ್ರಯತ್ನಿಸಿದರೂ ಅದು ವಿಫಲವಾಯಿತು.

ಭಾಗವತರು ತಮ್ಮ ಎಲ್ಲಾ ಹಣವನ್ನು ಕಳೆದುಕೊಂಡರು ಮತ್ತು ಮಧುಮೇಹ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ 1959ರಲ್ಲಿ ನಿಧನರಾದರು. ಕೊನೆಯ ದಿನಗಳಲ್ಲಿ ಸಂಗೀತ ಕಛೇರಿಗಳನ್ನು ನೀಡಿ ಜೀವನ ಸಾಗಿಸಲು ಪ್ರಯತ್ನಿಸಿದರು. ಭಾಗವತರು ಸಾಯುವಾಗ 40 ವರ್ಷ ಕೂಡ ಆಗಿರಲಿಲ್ಲ. ಕೃಷ್ಣನ್ ಬಳಿಕ ಉತ್ತಮವಾಗಿ ಕಾರ್ಯನಿರ್ವಹಿಸಿದರು. ಅವರು 1957ರಲ್ಲಿ ತಮ್ಮ 48ನೇ ವಯಸ್ಸಿನಲ್ಲಿ ಸಾಯುವ ಮೊದಲು ಕೆಲವು ಪಾತ್ರಗಳನ್ನು ನಿರ್ವಹಿಸುವಲ್ಲಿ ಯಶಸ್ವಿಯಾದರು.

ಚಿತ್ರರಂಗದಲ್ಲಿ ಭಾಗವತರ್ ಅವರ ಅವನತಿ ಎಂ.ಜಿ. ರಾಮಚಂದ್ರನ್ ಅವರ ಉದಯಕ್ಕೆ ಕಾರಣವಾಯಿತು. ಅವರು ಒಂದು ದಶಕದ ಕಾಲ ಮುಖ್ಯಮಂತ್ರಿಯಾಗುವ ಮೊದಲು ಮೂರು ದಶಕಗಳ ಕಾಲ ತಮಿಳು ಚಿತ್ರರಂಗದಲ್ಲಿ ಸೂಪರ್ ಸ್ಟಾರ್ ಆಗಿ ಮೆರೆದರು.

Continue Reading
Advertisement
Prajwal revanna Case
ಕರ್ನಾಟಕ10 mins ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Actress Akshita entry to kollywood cinema
ಕಾಲಿವುಡ್15 mins ago

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

ಕ್ರೀಡೆ17 mins ago

Yusuf Pathan: ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜೈ ಹಿಂದ್‌ ಘೋಷಣೆ ಕೂಗಿದ ಯೂಸುಫ್ ಪಠಾಣ್

ಕಿರುತೆರೆ43 mins ago

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Renuka Swamy Murder
ಕರ್ನಾಟಕ50 mins ago

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

IND vs ENG Semi Final
ಕ್ರೀಡೆ50 mins ago

IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

Lok Sabha Speaker
ದೇಶ53 mins ago

Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

actor producer and Cow lover Mahendra Munnoth donated 51 lakh rupees to cow shelter
ಬೆಂಗಳೂರು54 mins ago

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bhaavaramayana Ramavatarana book release programme on June 29 in Bengaluru
ಕರ್ನಾಟಕ56 mins ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Varthur Santhosh Animal Transport Rules Violation Allegation
ಕ್ರೈಂ60 mins ago

Varthur Santhosh: ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿದ್ದ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌