Hanuman Flag : ನೀನೇ ಗಾಂಡು, ನೀನು Seedless: ಸಿ.ಟಿ ರವಿ, ಶಾಸಕ ನರೇಂದ್ರ ಸ್ವಾಮಿ ಮಧ್ಯೆ ಅವಾಚ್ಯ ವಾರ್‌ - Vistara News

ರಾಜಕೀಯ

Hanuman Flag : ನೀನೇ ಗಾಂಡು, ನೀನು Seedless: ಸಿ.ಟಿ ರವಿ, ಶಾಸಕ ನರೇಂದ್ರ ಸ್ವಾಮಿ ಮಧ್ಯೆ ಅವಾಚ್ಯ ವಾರ್‌

Hanuman Flag : ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಮತ್ತು ಸಿ.ಟಿ. ರವಿ ನಡುವೆ ಗಾಂಡು, ಸೀಡ್‌ಲೆಸ್‌ ವಾರ್‌ ನಡೆದಿದೆ. ಸಿ.ಟಿ. ರವಿ ಅವರು ರಾಷ್ಟ್ರ ಧ್ವಜವನ್ನು ತಾಲಿಬಾನ್‌ ಧ್ವಜ ಎಂದು ಹೇಳಿದ್ದಾರೆ ಎಂದು ನರೇಂದ್ರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

hanuman Flag PM Narendra Swamy CT Ravi fight
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ/ ಚಿಕ್ಕಮಗಳೂರು: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ Hanuman Flag) ವಿವಾದ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಿರುವ ಜತೆಗೇ ರಾಜಕಾರಣಿಗಳ ನಡುವೆ ತೀವ್ರ ಮತ್ತು ಅಸಭ್ಯ ಪದ (Indecent words) ಬಳಕೆಯ ವಾಗ್ವಾದಕ್ಕೂ ಕಾರಣವಾಗಿದೆ. ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿ ಸೋಮವಾರ ನಡೆದ ಬೃಹತ್‌ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕ ಸಿ.ಟಿ. ರವಿ (BJP Leader CT Ravi) ಅವರು ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜ ಎಂದು ಹೇಳಿದ್ದಾರೆ ಎಂದು ಮಳವಳ್ಳಿ ಶಾಸಕ ಪಿಎಂ ನರೇಂದ್ರ ಸ್ವಾಮಿ (Congress MLA PM Narendra Swamy) ಆರೋಪಿಸಿದ್ದಲ್ಲದೆ, ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ.

ಮಂಡ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರು ಸಿ.ಟಿ. ರವಿ ಅವರ ಮೇಲೆ ಕಿಡಿ ಕಾರಿದ್ದಾರೆ.

ʻʻಅಯೋಗ್ಯ ಸಿ.ಟಿ ರವಿ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಅಂದಿದ್ದಾನೆ. ಇವರು ರಾಷ್ಟ್ರ ಧ್ವಜ, ಹೆತ್ತ ತಾಯಿಗೆ ಅವಮಾನ ಮಾಡ್ತಾರೆ. ಸಿ.ಟಿ ರವಿ ವಿರುದ್ದ ನಾನು ಇವತ್ತೆ ದೂರು ನೀಡ್ತಿದ್ದೇನೆ. ಸಿಟಿ ರವಿ ತಾಲೀಬಾನ್ ಧ್ವಜ ಎಂದಿರುವ ಬಗ್ಗೆ ಸಾಕ್ಷಿ ಸಮೇತ ಹೋಗಿ ದೂರು ನೀಡ್ತೇನೆʼʼ ಎಂದು ಹೇಳಿದ ನರೇಂದ್ರ ಸ್ವಾಮಿ ಅವರು ಮಾತಿನ ಭರದಲ್ಲಿ ಸಿಟಿ ರವಿಗೆ ಗಾಂಡು ಎಂದು ಕರೆದಿದ್ದಾರೆ.

ʻʻಸಿ.ಟಿ ರವಿ ನನಗೂ ಸ್ನೇಹಿತ. ಆದರೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದನ್ನು ಸಹಿಸಲಾಗುವುದಿಲ್ಲ. ಆತ ರಾಷ್ಟ್ರಧ್ವಜದ ಕುರಿತ ಹೇಳಿಕೆ ವಾಪಸ್ ಪಡೆದುಕೊಂಡರೆ ಆತನ ವಿರುದ್ಧ ಹೇಳಿರುವ ನನ್ನ ಹೇಳಿಕೆ ವಾಪಸ್ಸು ಪಡೆಯುತ್ತೇನೆʼʼ ಎಂದು ಅವಾಚ್ಯ ಶಬ್ದದಿಂದ ಸಿಟಿ ರವಿ ಅವರನ್ನು ನಿಂದಿಸಿದ ಪಿಎಂ ನರೇಂದ್ರ ಸ್ವಾಮಿ ಹೇಳಿದರು.

ಇದನ್ನೂ ಓದಿ : Hanuman Flag : ಮಂಡ್ಯಕ್ಕೆ ಬೆಂಕಿ ಹಚ್ಚಿದರೆ ಪರಿಣಾಮ ನೆಟ್ಟಗಿರಲ್ಲ ?; HDKಗೆ ಚಲುವರಾಯ ಸ್ವಾಮಿ ವಾರ್ನಿಂಗ್

HE IS Seedless : ಗಾಂಡು ಹೇಳಿಕೆಗೆ ಸಿ.ಟಿ. ರವಿ ಪ್ರತಿಕ್ರಿಯೆ

ಚಿಕ್ಕಮಗಳೂರು: ತಮ್ಮನ್ನು ಅಯೋಗ್ಯ, ಗಾಂಡು ಎಂಬ ಪದ ಬಳಸಿ ನಿಂದಿರುವ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಅವರ ಹೇಳಿಕೆ ಬಿಜೆಪಿಯ ಹಿರಿಯ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.

Now he is seedless (ಅವರು ಈಗ ಬೀಜರಹಿತ) ಎಂದು ಸಿ.ಟಿ ರವಿ ಅವರು ನರೇಂದ್ರ ಸ್ವಾಮಿಯನ್ನು ಲೇವಡಿ ಮಾಡಿದ್ದಾರೆ. ನರೇಂದ್ರ ‌ಸ್ವಾಮಿ ಮಂತ್ರಿಗಿರಿಗಾಗಿ ಅರ್ಜಿ ಮೇಲೆ ಅರ್ಜಿ ಹಾಕಿ, ಈಗ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಯಾರು ಅದೇ ರೀತಿ ಇರ್ತಾರೋ, ಅವರು ಮಾತ್ರ ಅಂತಹ ಪದ ಬಳಕೆ ಮಾಡುತ್ತಾರೆ. ಅವರ ಮಾತಿನ ದಾಟಿ ನೋಡಿದ್ರೆ now he is seedless. ಆ ಕಾರಣಕ್ಕೆ ಅವರ ಬಾಯಿಂದ ಅಂತಹಾ ಮಾತು ಬಂದಿದೆʼʼ ಎಂದು ಸಿ.ಟಿ. ರವಿ ಹೇಳಿದರು.

ʻʻಸೀಡ್ ಲೆಸ್ ಅಂದ್ರೆ ಗೊತ್ತಲ್ಲಾ… ಅದರಲ್ಲಿ ಬೀಜ ಇರಲ್ಲ… ಏನೂ ಹುಟ್ಟಲ್ಲ. ರಾಜಕೀಯವಾಗಿ now he is seedless. ಅದಕ್ಕೆ ಅವರು ಆ ಪದ ಬಳಸಿದ್ದಾರೆʼʼ ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

R Ashok: ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Opposition party leader r ashok latest statement in Mysuru
Koo

ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.‌ ಅಶೋಕ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ ಬರಗಾಲ ಬಂದಿತ್ತು. ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾ ಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ 3 ಕೋಟಿ ರೂಪಾಯಿ ಆಸ್ತಿ ಇದೆ. ಆದರೆ ಡಿ.ಕೆ. ಶಿವಕುಮಾರ್ ಅವರ ಆಸ್ತಿ ಹೆಚ್ಚಾಗಿದೆ. ಹಾಲಿನ ಪ್ರೋತ್ಸಾಹಧನ 700 ಕೋಟಿ ರೂ‌. ಉಳಿಸಿಕೊಂಡಿದ್ದಾರೆ. ಆಂಬ್ಯುಲೆನ್ಸ್ ಚಾಲಕರು, ಗುತ್ತಿಗೆ ಸಿಬ್ಬಂದಿಗೆ ಸಂಬಳ ಪಾವತಿಯಾಗಿಲ್ಲ. ಕೇರಳಕ್ಕೆ ಬಂದ ಪರಿಸ್ಥಿತಿಯೇ ಇನ್ನು ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನದಲ್ಲಿ ಅಕ್ಕಿ, ಬೇಳೆ, ಗೋಧಿ ಬೆಲೆ 2 ಸಾವಿರ ರೂ.ಗೆ ತಲುಪಿದೆ. ಚಹ ಕುಡಿದರೆ 500 ರೂ. ಕೊಡಬೇಕು. ಸಿದ್ದರಾಮಯ್ಯನವರ ಸರ್ಕಾರ ಇನ್ನೂ ಇದ್ದರೆ ಪಾಕಿಸ್ತಾನದ ಆರ್ಥಿಕತೆ ಕರ್ನಾಟಕಕ್ಕೆ ಬರಲಿದೆ ಎಂದು ಹೇಳಿದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ವಿದ್ಯಾವಂತ ಮತದಾರರು

ಈಗ ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಇಲ್ಲಿ ವಿದ್ಯಾವಂತರೇ ಇದ್ದಾರೆ. ಇದು ಕೈ ಮುಗಿದುಕೊಂಡು ಕೇಳುವ ಮತದಾನ ಅಲ್ಲ. ಎಲ್ಲರನ್ನೂ ಸಂಪರ್ಕಿಸಿ ಮನ ಒಲಿಸಬೇಕಾಗುತ್ತದೆ. ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಬಿಜೆಪಿ ಅಭ್ಯರ್ಥಿ ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮತ ನೀಡಿ ಎಂದು ಮನವಿ ಮಾಡಿದರು.

Continue Reading

ಉತ್ತರ ಕನ್ನಡ

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

Lok Sabha Election 2024: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

BJP district president N S Hegde pressmeet in Yallapur
Koo

ಯಲ್ಲಾಪುರ: ಲೋಕಸಭಾ ಚುನಾವಣೆಗೆ (Lok Sabha Election 2024) ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಧ್ಯಾಹ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿ ಬೂತ್‌ನಿಂದ ಮತಗಳಿಕೆಯ ಕುರಿತು ಮಾಹಿತಿ ಪಡೆಯಲಾಗಿದ್ದು, ಪ್ರತಿ ಬೂತ್‌ನಲ್ಲಿ ಬಿಜೆಪಿಗೆ ಮುನ್ನಡೆ ದೊರೆತಿರುವ ಕುರಿತು ಬೂತ್‌ ಅಧ್ಯಕ್ಷರುಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿನ ಶಾಸಕರು, ಮಾಜಿ ಶಾಸಕರುಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಉತ್ತಮ ಅಂತರದ ಮುನ್ನಡೆ ದೊರಕುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 28ರಂದು ಕಳೆದ ಒಂದು ವರ್ಷದಲ್ಲಿ ಜಿಲ್ಲೆಗೆ ಎರಡನೇ ಬಾರಿ ಪ್ರಧಾನಮಂತ್ರಿ ಮೋದಿಜಿಯವರು ಆಗಮಿಸಿದ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಸಂಘಟಸಿದ್ದು, ಅದಕ್ಕೂ ಸಹ ಕೇಂದ್ರದಿಂದ ಪ್ರಶಂಸನೆ ದೊರೆತಿದೆ ಎಂದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಕ್ಷೇತ್ರದಲ್ಲಿ ಚುನಾವಣೆಯ ದೃಷ್ಟಿಯಿಂದ ಕಾರ್ಯನಿರ್ವಹಿಸಿದ ಸಮಿತಿಗಳಿಗೆ, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರುಗಳಿಗೆ ಮೇ 27ರೊಳಗೆ ಪ್ರತಿ ಮಂಡಲದಲ್ಲಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಖುದ್ದು ಪ್ರವಾಸ ಮಾಡಿ, ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಬರದಿಂದ ಕಂಗಾಲಾದ ರೈತರಿಗೆ ಕೇಂದ್ರ ಸರ್ಕಾರದಿಂದ ಸಮಯಕ್ಕೆ ಸರಿಯಾಗಿ ಬೆಳೆ ಪರಿಹಾರ ಧನ ಬಿಡುಗಡೆಯಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಸುಮಾರು 41 ಕೋಟಿ ಪರಿಹಾರ ದೊರೆತಿದ್ದು, ಈ ಪೈಕಿ ಮುಖ್ಯ ಆಹಾರ ಬೆಳೆ ಬೆಳೆಯುವ ಯಲ್ಲಾಪುರ, ಮುಂಡಗೋಡ ಭಾಗದ ರೈತರಿಗೆ ಸಿಂಹಪಾಲು ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ. ಕೇಂದ್ರ ಸರ್ಕಾರದ ಯೋಜನೆಯಡಿ, ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ಬ್ಯಾಂಕ್‌ ಮೂಲಕ ನೇರವಾಗಿ ರೈತರಿಗೆ ಈ ಪರಿಹಾರ ಧನ ದೊರಕುವಂತೆ ಮಾಡಿರುವ ಪ್ರಧಾನಮಂತ್ರಿ ಹಾಗೂ ಕೇಂದ್ರ ಕೃಷಿ ಮಂತ್ರಿಗಳಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಧನ್ಯವಾದಗಳನ್ನು ಸಲ್ಲಿಸ ಬಯಸುತ್ತೇವೆ ಎಂದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಾಜಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್‌ ಪ್ರಮುಖರಾದ ಉಮೇಶ ಭಾಗ್ವತ್‌ ಉಪಸ್ಥಿತರಿದ್ದರು.

Continue Reading

Lok Sabha Election 2024

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

DK Shivakumar: ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಈಗ ಇಲ್ಲಿಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದು, ಚುನಾವಣಾ ಕಾರ್ಯತಂತ್ರಗಳಲ್ಲಿ ತೊಡಗಿದ್ದಾರೆ.

VISTARANEWS.COM


on

DK Shivakumar in Uttar Pradesh and Strategy in Amethi and Rae Bareli
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿ 5ನೇ ಹಂತಕ್ಕೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿವೆ. ಇತ್ತ ಟ್ರಬಲ್‌ ಶೂಟರ್‌ ಖ್ಯಾತಿಯ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅಂತಾರಾಜ್ಯಗಳಲ್ಲಿ ಪ್ರಚಾರಕ್ಕೆ ಜೈ ಎಂದಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಆಂಧ್ರಪ್ರದೇಶದ ಕಡಪ ಪ್ರಚಾರಕ್ಕೆ ಹೋಗಿದ್ದ ಡಿಕೆಶಿ ಈಗ ಉತ್ತರ ಪ್ರದೇಶ ತಲುಪಿದ್ದಾರೆ. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಚಾರಕ್ಕೆ ಮುಂದಾಗಿದ್ದು, ತಂತ್ರಗಾರಿಕೆಯಲ್ಲಿ ತೊಡಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆನ್ನಿಗೆ ಡಿ.ಕೆ. ಶಿವಕುಮಾರ್‌ ನಿಂತಿದ್ದಾರೆ. ಕಳೆದ ಬಾರಿ ಅಮೇಥಿಯಲ್ಲಾದ ಸೋಲಿನ ಕಹಿಯನ್ನು ಮರೆಸಲು ಪಣ ತೊಟ್ಟಿರುವ ಡಿಕೆಶಿ ಈಗ ಆ ನಿಟ್ಟಿನಲ್ಲಿ ಪ್ರಚಾರಕ್ಕೆ ಮುನ್ನಡಿ ಬರೆಯಲು ಹೊರಟಿದ್ದಾರೆ. ಅಲ್ಲಿ ಯಾವ ರೀತಿ ತಂತ್ರಗಾರಿಕೆ ಮಾಡಲಿದ್ದಾರೆ? ಅದು ಮತದಾರರ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಫಲಿತಾಂಶ ಬಂದ ಮೇಲಷ್ಟೆ ತಿಳಿಯಬಹುದಾಗಿದೆ.

ಕಾಂಗ್ರೆಸ್‌ಗೆ ಅಮೇಥಿ ಮತ್ತು ರಾಯ್‌ ಬರೇಲಿ ಏಕೆ ಮುಖ್ಯ?

ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಶತಾಯಗತಾಯ ಗೆಲ್ಲಲೇ ಬೇಕಿರುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇಲ್ಲದಿದ್ದರೆ ಅವರ ನಾಯಕತ್ವದ ಮೇಲೆ ಮತ್ತೊಮ್ಮೆ ಪ್ರಶ್ನೆಗಳು ಏಳುತ್ತವೆ. ಹೀಗಾಗಿ ಈ ಕ್ಷೇತ್ರಕ್ಕೆ ಕಾಂಗ್ರೆಸ್‌ ಹೆಚ್ಚಿನ ಒತ್ತನ್ನು ನೀಡಿದೆ. ಇದಕ್ಕಾಗಿಯೇ ಡಿ.ಕೆ. ಶಿವಕುಮಾರ್‌ ಅಲ್ಲಿ ತಮ್ಮ ದೃಷ್ಟಿಯನ್ನು ನೆಟ್ಟಿದ್ದಾರೆ ಎನ್ನಲಾಗಿದೆ.

ಅಮೇಥಿ ವಾಪಸ್‌ಗೆ ತಂತ್ರ

ಇನ್ನು ಅಮೇಥಿ ಲೋಕಸಭಾ ಕ್ಷೇತ್ರ ಸಹ ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿತ್ತು. 1980ರಲ್ಲಿ ಸಂಜಯ್‌ ಗಾಂಧಿ ಮೊದಲ ಬಾರಿಗೆ ಇಲ್ಲಿಂದ ಸ್ಪರ್ಧಿಸಿದ್ದರು. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಸ್ಪರ್ಧೆ ಮಾಡಿದ್ದರು. ಅವರು 1981 ರಿಂದ 1991ರವರೆಗೆ 4 ಬಾರಿ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 1998ರಲ್ಲಿ ಸೋನಿಯಾ ಗಾಂಧಿ, 2004ರಿಂದ 2014ರ ವರೆಗೆ ರಾಹುಲ್‌ ಗಾಂಧಿ ಇಲ್ಲಿಂದಲೇ ಚುನಾಯಿತರಾಗುತ್ತಾ ಬರುತ್ತಿದ್ದರು. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಿ ಬರೋಬ್ಬರಿ 55,120 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇಲ್ಲಿ ರಾಹುಲ್‌ ಗಾಂಧಿಗೆ ಮುಖಭಂಗವಾಗಿತ್ತು. ಆದರೆ, ರಾಹುಲ್‌ ಕೇರಳದ ವಯನಾಡಿನಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಒಂದರಲ್ಲಿ ಹೋದ ಮಾನ, ಇನ್ನೊಂದರಲ್ಲಿ ಬಂತು ಎಂಬಂತೆ ಆಗಿತ್ತು. ಈ ಬಾರಿಯೂ ರಾಹುಲ್‌ ವಯನಾಡು ಹಾಗೂ ರಾಯ್‌ ಬರೇಲಿಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಇನ್ನು ಅಮೇಥಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಎದುರಾಳಿಯಾಗಿ ಕಿಶೋರ್‌ ಲಾಲ್‌ ಶರ್ಮಾ ಸ್ಪರ್ಧೆ ಮಾಡಿದ್ದಾರೆ.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

ಗಾಂಧಿ ಕುಟುಂಬದ ಅತ್ಯಾಪ್ತನಿಗೆ ಟಿಕೆಟ್‌

ಕಿಶೋರ್‌ ಲಾಲ್‌ ಶರ್ಮಾ ಅವರು ರಾಯ್‌ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳಿಗೆ ಅಘೋಷಿತ ಉಸ್ತುವಾರಿಯಂತೆ ಇದ್ದರು. ಇಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪ್ರತಿನಿಧಿಸುವಾಗ ಹೆಚ್ಚಿನ ಹೊಣೆ ಇವರ ಮೇಲೆಯೇ ಇತ್ತು. ಹೀಗಾಗಿ ಇಲ್ಲಿ ಪಕ್ಷದ ಚಟುವಟಿಕೆಯಲ್ಲಿ ನಿರತರಾಗುತ್ತಿದ್ದರಿಂದ ಅವರಿಗೆ ಕ್ಷೇತ್ರ ಪರಿಚಯದ ಜತೆಗೆ ಸ್ಥಳೀಯ ನಾಯಕರ ಒಡನಾಟವೂ ಇದೆ. ಜತೆಗೆ ಗಾಂಧಿ ಕುಟುಂಬ ಅತ್ಯಾಪ್ತರೂ ಆಗಿದ್ದರಿಂದ ಅವರಿಗೆ ಈ ಬಾರಿ ಅಮೇಥಿಯಿಂದ ಟಿಕೆಟ್‌ ನೀಡಲಾಗಿದೆ. ಈ ಎಲ್ಲ ಕಾರಣಗಳಿಂದ ಅಮೇಥಿಯನ್ನು ಗೆದ್ದು ಬೀಗುವ ಮೂಲಕ ಜಿದ್ದು ಸಾಧಿಸುವ ತವಕದಲ್ಲಿ ಕಾಂಗ್ರೆಸ್‌ ಇದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಈ ಎರಡೂ ಕ್ಷೇತ್ರಗಳ ಮೇಲೆ ಫೋಕಸ್‌ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕೆಲವು ದಿನ ವಾಸ್ತವ್ಯ ಹೂಡಿ ತಂತ್ರಗಾರಿಕೆ ಹೆಣೆಯಲಿದ್ದಾರೆ.

Continue Reading

Lok Sabha Election 2024

Yogendra Yadav: ಈ ಬಾರಿ ಬಿಜೆಪಿಗೆ ಬಹುಮತ ಬರಲ್ಲವೆಂದ ಯೋಗೇಂದ್ರ ಯಾದವ್; ಇವರ ಹಿಂದಿನ ಭವಿಷ್ಯ ನಿಜವಾಗಿತ್ತಾ?

Yogendra Yadav: ಚುನಾವಣಾ ತಜ್ಞ, ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್‌ ಅವರು ಪ್ರಸಕ್ತ ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಹೇಗೆ ಕಡಿಮೆ ಸೀಟುಗಳು ಲಭಿಸುತ್ತವೆ ಎಂಬುದರ ಕುರಿತು ವಿಶ್ಲೇಷಣೆ ಮಾಡಿದ್ದಾರೆ. ಹಾಗಾದರೆ, ಯೋಗೇಂದ್ರ ಯಾದವ್‌ ಭವಿಷ್ಯ ಏನು? ಇದಕ್ಕೂ ಮೊದಲು ಅವರು ನುಡಿದ ಭವಿಷ್ಯ ಏನಾಗಿತ್ತು? ಇಲ್ಲಿದೆ ಮಾಹಿತಿ.

VISTARANEWS.COM


on

Yogendra Yadav
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿದೆ. ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು, ಎಲ್ಲ ಮೈತ್ರಿಕೂಟಗಳು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿವೆ. ಚುನಾವಣೆ ಪೂರ್ವ ಸಮೀಕ್ಷೆಗಳು, ಮತಗಟ್ಟೆಗಳಲ್ಲಿ ವ್ಯಕ್ತವಾದ ಅಭಿಪ್ರಾಯ, ಜನರ ಬೆಂಬಲ ಯಾರಿಗಿದೆ ಎಂಬುದರ ವಿಶ್ಲೇಷಣೆ ಮಾಡುತ್ತಿವೆ. ಆಂತರಿಕ ಸಮೀಕ್ಷೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ, ಚುನಾವಣಾ ತಜ್ಞ, ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್‌ (Yogendra Yadav) ಅವರು ಚುನಾವಣೆ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಅದರಲ್ಲೂ, ಈ ಬಾರಿ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಸಾಧಿಸಲ್ಲ ಎಂದು ಹೇಳಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭವಿಷ್ಯ ಏನಾಗಲಿದೆ ಎಂಬುದರ ಕುರಿತು ವಿಶ್ಲೇಷಣೆ ಮಾಡಿದ ವಿಡಿಯೊವನ್ನು ಯೋಗೇಂದ್ರ ಯಾದವ್‌ ಅವರು ಪೋಸ್ಟ್‌ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 233 ಕ್ಷೇತ್ರಗಳನ್ನು ಮಾತ್ರ ಗೆಲ್ಲಲಿದೆ. ಇದು 70 ಸೀಟುಗಳನ್ನು ಕಳೆದುಕೊಳ್ಳಲಿದೆ. ಇನ್ನು ಬಿಜೆಪಿ ಮೈತ್ರಿ ಪಕ್ಷಗಳು 35 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಲಿವೆ. ಅಲ್ಲಿಗೆ ಎನ್‌ಡಿಎ ಮ್ಯಾಜಿಕ್‌ ನಂಬರ್‌ ಸಮೀಪ ಬರುತ್ತದೆಯೇ ಹೊರತು, ಸ್ಪಷ್ಟ ಬಹುಮತ ಸಿಗುವುದಿಲ್ಲ. ಮಾಧ್ಯಮಗಳು ಹಾಗೂ ರಾಜಕೀಯ ವಿಶ್ಲೇಷಕರು ಅಜೆಂಡಾ ಇಟ್ಟುಕೊಂಡು ಬಿಜೆಪಿ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ವರದಿ ನೀಡುತ್ತಿವೆ” ಎಂದು ಟಾಂಗ್‌ ಕೊಟ್ಟರು.

ಯಾವ ರಾಜ್ಯಗಳಲ್ಲಿ ಬಿಜೆಪಿಗೆ ಹಿನ್ನಡೆ?

ಯೋಗೇಂದ್ರ ಯಾದವ್‌ ಅವರ ವಿಶ್ಲೇಷಣೆ ಪ್ರಕಾರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈ ಬಾರಿ ಬಿಜೆಪಿಗೆ ಹಿನ್ನಡೆಯಾಗಲಿದೆ. ಕರ್ನಾಟಕದಲ್ಲಿ ಬಿಜೆಪಿ 10 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಇನ್ನುಳಿದಂತೆ, ಮಹಾರಾಷ್ಟ್ರದಲ್ಲಿ 20, ರಾಜಸ್ಥಾನ ಹಾಗೂ ಗುಜರಾತ್‌ನಲ್ಲಿ ತಲಾ 10 ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಳ್ಳಲಿದೆ. ಇನ್ನು, ಹರಿಯಾಣ, ಪಂಜಾಬ್‌, ಹಿಮಾಚಲ ಪ್ರದೇಶ ಹಾಗೂ ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ತಲಾ 10 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಆ ಮೂಲಕ ಎನ್‌ಡಿಎ ಒಟ್ಟು 100 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂಬುದಾಗಿ ಅಂದಾಜಿಸಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೈಗೊಂಡ ಬಹುತೇಕ ಸಮೀಕ್ಷೆಗಳಲ್ಲಿ ಎನ್‌ಡಿಎ ಮೈತ್ರಿಕೂಟವೇ ಅಧಿಕಾರಕ್ಕೆ ಬರಲಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ, ಯೋಗೇಂದ್ರ ಯಾದವ್‌ ಅವರು ಫಲಿತಾಂಶದ ಕುರಿತು ವಿಶ್ಲೇಷಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

2019ರಲ್ಲಿ ನುಡಿದ ಭವಿಷ್ಯ ಏನಾಗಿತ್ತು?

2019ರ ಸಾರ್ವತ್ರಿಕ ಚುನಾವಣೆ ಫಲಿತಾಂಶದ ಕುರಿತು 2018ರಲ್ಲಿಯೇ ಯೋಗೇಂದ್ರ ಯಾದವ್‌ ಅವರು ವಿಶ್ಲೇಷಣೆ ಮಾಡಿದ್ದರು. ಬಿಜೆಪಿ ನೇತೃತ್ವದ ಎನ್‌ಡಿಎ ಚುನಾವಣೆಯಲ್ಲಿ 100 ಸೀಟುಗಳನ್ನು ಕಳೆದುಕೊಳ್ಳಲಿದೆ. ಬಿಜೆಪಿಯೊಂದೇ 65 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಆ ಮೂಲಕ ಎನ್‌ಡಿಎ ಬಹುಮತ ಸಾಬೀತುಪಡಿಸುವುದಿಲ್ಲ ಎಂದೇ ಹೇಳಿದ್ದರು. ಇನ್ನು, 2019ರಲ್ಲಿ ಲೇಖನ ಬರೆದಿದ್ದ ಯೋಗೇಂದ್ರ ಯಾದವ್‌, 2004ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ. ಆಗಲೂ ವಾಜಪೇಯಿ ಅವರ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನಲಾಗುತ್ತಿತ್ತು. ಆದರೆ, ಫಲಿತಾಂಶ ಉಲ್ಟಾ ಆಯಿತು. 2019ರ ಚುನಾವಣೆಯಲ್ಲೂ ಇದೇ ರೀತಿ ಆಗಲಿದೆ ಎಂದು ಲೇಖನದಲ್ಲಿ ಉಲ್ಲೇಖಿಸಿದ್ದರು. ಆದರೆ, ಚುನಾವಣೆ ಫಲಿತಾಂಶದ ಬಳಿಕ ಎಲ್ಲವೂ ಉಲ್ಟಾ ಆಗಿತ್ತು. ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. ರೈತ ಚಳವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗುತ್ತದೆ ಎಂದು ಇವರು ಭವಿಷ್ಯ ನುಡಿದಿದ್ದರು. ಆದರೆ ಅಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಬಿಜೆಪಿ ಸತತ ಎರಡನೇ ಬಾರಿ ಭಾರಿ ಬಹುಮತದ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Continue Reading
Advertisement
Karnataka weather Forecast
ಮಳೆ8 mins ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

World Hypertension Day Today is Global Blood Pressure Day
ಆರೋಗ್ಯ2 hours ago

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

Pakistan
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ7 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ7 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ7 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ7 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು7 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ7 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 mins ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ17 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು20 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌