Hanuman Flag : ಕೆರಗೋಡಿನಲ್ಲಿ 30 ವರ್ಷದ ಹಿಂದೆಯೇ ಹನುಮ ಧ್ವಜ ಇತ್ತು; ಸಾಕ್ಷ್ಯ ಇಲ್ಲಿದೆ - Vistara News

ಮಂಡ್ಯ

Hanuman Flag : ಕೆರಗೋಡಿನಲ್ಲಿ 30 ವರ್ಷದ ಹಿಂದೆಯೇ ಹನುಮ ಧ್ವಜ ಇತ್ತು; ಸಾಕ್ಷ್ಯ ಇಲ್ಲಿದೆ

Hanuman Flag :‌ ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ಹಾರಿಸುತ್ತಿರುವುದು ಇದು ಮೊದಲನೇ ಸಲ ಅಲ್ಲ. ಹಿಂದಿನಿಂದಲೂ ಅಲ್ಲಿ ಧ್ವಜ ಹಾರಿಸಲಾಗುತ್ತಿತ್ತು. ಅಲ್ಲಿ ಮರದ ಕಂಬ ಇತ್ತು ಎಂದು ಅಲ್ಲಿನ ಕೆಲವರು ಹೇಳುತ್ತಾರೆ. ಅದಕ್ಕೆ ಸಂಬಂಧಿಸಿ 30 ವರ್ಷಗಳ ಹಿಂದಿನ ಫೋಟೊವನ್ನು ಬಿಡುಗಡೆ ಮಾಡಿದ್ದಾರೆ.

VISTARANEWS.COM


on

Hanuman Flag keragodu development
ಗ್ರಾಮಸ್ಥರು ಬಿಡುಗಡೆ ಮಾಡಿದ ಚಿತ್ರಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ (Keragodu Village) ಹುಟ್ಟಿರುವ ಹನುಮ ಧ್ವಜ (Hanuman Flag) ವಿವಾದಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ. ಇಲ್ಲಿ ಹೊಸದಾಗಿ 108 ಅಡಿ ಎತ್ತರದ ಧ್ವಜ ಸ್ತಂಭ ಸ್ಥಾಪಿಸಿ ಅದರಲ್ಲಿ ಕಳೆದ ಜನವರಿ 20ರಂದು ಹನುಮ ಧ್ವಜವನ್ನು ಸ್ಥಾಪಸಲಾಗಿತ್ತು. ಆದರೆ, ಇಲ್ಲಿ ಹನುಮ ಧ್ವಜ ಏರಿಸಲು ಅವಕಾಶವಿಲ್ಲ. ಕೇವಲ ರಾಷ್ಟ್ರ ಧ್ವಜ, ನಾಡ ಧ್ವಜ ಮಾತ್ರ ಹಾರಿಸಬಹುದು ಎಂದು ಆಕ್ಷೇಪಿಸಿದ ತಾಲೂಕು ಆಡಳಿತ ಜನವರಿ 28ರ ರಾತ್ರಿ ತೆರವುಗೊಳಿಸಿ ಅಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗಿತ್ತು. ಆದರೆ, ಇಲ್ಲಿ ಹನುಮ ಧ್ವಜ ಹಾರಿಸುವುದು ಮೊದಲ ಸಲವೇನಲ್ಲ. ಹಿಂದಿನಿಂದಲೂ ಹಾರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಅದಕ್ಕೆ ತಡೆ ಒಡ್ಡಲಾಗಿದೆ ಎಂಬ ವಾದವೊಂದು ಕೇಳಿಬಂದಿದೆ.

ಕೆರಗೋಡು ಗ್ರಾಂದಲ್ಲಿ 30 ವರ್ಷಗಳಿಂದಲೇ (30 year old tradition) ಹನುಮ ಧ್ವಜ ಇತ್ತು ಎಂದು ಗ್ರಾಮಸ್ಥರು ದಾಖಲೆ ಬಿಡುಗಡೆ ಮಾಡಿದ್ದಾರೆ. 30 ವರ್ಷದ ಹಿಂದೆ ಧ್ವಜಸ್ತಂಭದ ಬಳಿ ತೆಗೆದಿದ್ದ ಫೋಟೊಗಳು ಈಗ ವಿಸ್ತಾರ ನ್ಯೂಸ್ ಗ ಲಭ್ಯವಾಗಿದೆ.

Hanuman Flag keragodu development111
ಗ್ರಾಮಸ್ಥರು ಬಿಡುಗಡೆ ಮಾಡಿದ ಚಿತ್ರಗಳು

ಕೇಸರಿ ಹನುಮ ಧ್ವಜದ ಜೊತೆಗೆ ನಾಡಹಬ್ಬ, ರಾಷ್ಟ್ರೀಯ ಹಬ್ಬಗಳಲ್ಲೂ ನಾಡಧ್ವಜ, ರಾಷ್ಟ್ರಧ್ವಜಗಳನ್ನೂ ಇಲ್ಲಿ ಹಾರಿಸಲಾಗುತ್ತಿತ್ತು ಎಂದು ಗ್ರಾಮಸ್ಥರು ಹೇಳಿದ್ದಾರೆ. ಈಗ 108 ಅಡಿ ನಿರ್ಮಿಸಿರುವ ನೂತನ ಧ್ವಜ ಸ್ತಂಭದ ಜಾಗದಲ್ಲಿ ಹಿಂದೆ ಸಾದಾರಣ ಮರದ ಕಂಬ ಇತ್ತು ಎನ್ನುವ ಫೋಟೊಗಳನ್ನು ಗ್ರಾಮಸ್ಥರು ನೀಡಿದ್ದಾರೆ.

ಒಂದು ವೇಳೆ ಹಿಂದೆ ಇಲ್ಲಿ ಹನುಮ ಧ್ವಜ ಹಾರಿಸಲಾಗುತ್ತಿತ್ತು ಎಂದರೆ ಅದನ್ನು ಯಾಕೆ ನಿಲ್ಲಿಸಲಾಯಿತು? ಯಾವಾಗ ನಿಲ್ಲಿಸಲಾಯಿತು ಎನ್ನುವುದು ಸ್ಪಷ್ಟವಾಗಿಲ್ಲ.

Hanuman Flag keragodu development112

Hanuman Flag : ಇವರು ಮುಠ್ಠಾಳರು ಎಂದು ಹೇಳಿದ ಗಣಿಗ ರವಿಕುಮಾರ್‌

ಮಂಡ್ಯ: ʻʻಎರಡು ಫೋಟೊ ಬಿಟ್ಟು ಹನುಮಧ್ವಜ ಮೂವತ್ತು ವರ್ಷಗಳಿಂದ ಇದೆ ಅನ್ನುತ್ತಿದ್ದಾರೆ. ಇವರು ಮೂರ್ಖರಾ ಮುಟ್ಠಾಳರ?.ʼ ಎಂದು ಮಂಡ್ಯ ಶಾಸಕ ಗಣಿಗ ರವಿ ಕುಮಾರ್‌ ಕೇಳಿದ್ದಾರೆ.

ಈಗ ಆರ್.ಎಸ್.ಎಸ್ ನವರು ಗೊಂದಲ ಮಾಡುತ್ತಿದ್ದಾರೆ. ಧ್ವಜ ಸ್ತಂಭದ ವಿಚಾರವಾಗಿ ಅವರಲ್ಲೇ ಗೊಂದಲ ಇದೆ ಎಂದು ಹೇಳಿದರು ರವಿ ಗಣಿಗ. ಪೋಟೋ ಬಿಡುಗಡೆ ಮಾಡಿದವರನ್ನ ಮುಠ್ಠಾಳರು ಎಂದು ಕರೆದ ಶಾಸಕ ರವಿ ಗಣಿಗ ಅವರು, ಕೆರಗೋಡಿನಲ್ಲಿ ನಡೆದ ಘಟನಾವಳಿಗಳಿಗೆ ಮಂಡ್ಯ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ರಾಮಚಂದ್ರ ಕಾರಣ ಎಂದು ಆರೋಪಿಸಿದ್ದಾರೆ.

Hanuman Flag Ganiga Ravi kumar

Hanuman Flag : ರಾಷ್ಟ್ರ ಧ್ವಜಾರೋಹಣ ಮಾಡಿದ ಅಧಿಕಾರಿಗಳ ವಿರುದ್ದ ದೂರು

ಕೆರಗೋಡಿನಲ್ಲಿ ಧ್ವಜಸ್ತಂಭದಲ್ಲಿ ಹಾಕಲಾಗಿದ್ದ ಹನುಮ ಧ್ವಜವನ್ನು ತೆಗೆದು‌ ರಾಷ್ಟ್ರ ಧ್ವಜಾರೋಹಣ ಮಾಡಿದ ಅಧಿಕಾರಿಗಳ ವಿರುದ್ಧ ಬಿಜೆಪಿ ಜಿಲ್ಲಾ ವಕ್ತಾರ ಮಂಜುನಾಥ್‌ ಅವರು ಜಿಲ್ಲಾ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

40 ವರ್ಷದಿಂದ ಇದ್ದ ಹನುಮ ಧ್ವಜದ ಬಾವುಟ ಇಳಿಸಿ ಹಿಂದುಗಳಿಗೆ ಅಪಮಾನ ಮಾಡಿದ್ದಾರೆ. ಧ್ವಜ ಸ್ತಂಭದ ಮುಕ್ಕಾಲು ಭಾಗಕ್ಕೆ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಹಲವು ರೀತಿಯಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಮಂಡ್ಯ ಎಸಿ ಶಿವಮೂರ್ತಿ ಹಾಗೂ ಟಿಪಿ ಸಿಇಒ ವೀಣಾ ವಿರುದ್ಧ ದೂರು ನೀಡಲಾಗಿದೆ. ಅಂದು ಕಾನೂನು ಉಲ್ಲಂಘಿಸಿ ಧ್ವಜಾರೋಹಣ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎನ್ನುವುದು ಮಂಡ್ಯ ಜಿಲ್ಲಾ ಬಿಜಪಿ ವಕ್ತಾರ ಮಂಜುನಾಥ್ ಅವರ ಆಗ್ರಹ.

ಇದನ್ನೂ ಓದಿ: Hanuman Flag: ಹನುಮಧ್ವಜ ಸಂಬಂಧ ನೋಟಿಸ್‌ ಕೊಡಲಿಲ್ಲವೇಕೆ? ನಿಯಮ ಮೀರಿ ರಾಷ್ಟ್ರಧ್ವಜ ಹಾರಿಸಿದ್ದು ಸರಿಯಾ?: ಅಶ್ವತ್ಥನಾರಾಯಣ

ಧ್ವಜ ತೆರವಿನ ವಿರುದ್ಧ ಪ್ರತಿಭಟನೆ ಮಾಡಿದವರ ಮೇಲೆ ಎಫ್‌ಐಆರ್‌

ಈ ನಡುವೆ, ಕಳೆದ ಶನಿವಾರ ರಾತ್ರಿ ಹನುಮ ಧ್ವಜ ತೆಗೆದು ರಾಷ್ಟ್ರ ಧ್ವಜಾರೋಹಣ ಮಾಡಿ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಜನವರಿ 28ರಂದು ರಾತ್ರಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ಮೇಲೆ ಪ್ರಕರಣ ದಾಖಲಾಗಿದ್ದು, ಕೆರಗೋಡು ಪೊಲೀಸ್ ಠಾಣೆಯಲ್ಲಿ‌ ಎಫ್‌ಐಆರ್‌ ಮಾಡಲಾಗಿದೆ. ಹನುಮ ಧ್ವಜ ತೆರವು ವಿರೋಧಿಸಿ ನೂರಾರು ಮಂದಿ ಪ್ರತಿಭಟನೆ ಮಾಡಿದ್ದರು. ಈ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಎಳೆದಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಳಿದೇಗಲು ಗ್ರಾಮದ ಪ್ರತಾಪ್, ಹೊನಗವಳ್ಳಿ ಮಠ ಗ್ರಾಮದ ಅವಿನಾಶ್, ಕೆರಗೋಡು ಗ್ರಾಮದ ಪ್ರಕಾಶ್ ಸೇರಿ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 301, 353, 149 ಅಡಿ ಪ್ರಕರಣ ದಾಖಲಾಗಿದೆ. ತಹಶೀಲ್ದಾರ್ ಶಿವಕುಮಾರ್ ಬಿರಾದಾರ್ ದೂರಿನನ್ವಯ ಕೇಸ್ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಪರಿಷತ್‌ ಚುನಾವಣೆಯ ಇತಿಹಾಸದಲ್ಲೇ ಮೊದಲ ಪ್ರಾಶಸ್ತ್ಯ ಮತದಲ್ಲಿ ಮೊದಲ ಗೆಲುವು ಇದಾಗಿದೆ.

VISTARANEWS.COM


on

MLC Election Results
Koo

ಮೈಸೂರು: ವಿಧಾನ ಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ 6 ಕ್ಷೇತ್ರಗಳ ಚುನಾವಣೆಯ (MLC Election Results) ಮತ ಎಣಿಕೆ ಗುರುವಾರ ನಡೆದಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಚುನಾವಣಾ ಇತಿಹಾಸದಲ್ಲೇ ಮೊದಲ ಪ್ರಾಶಸ್ತ್ಯ ಮತದಲ್ಲಿ ಮೊದಲ ಗೆಲುವು ಇದಾಗಿದೆ.

ಜೆಡಿಎಸ್‌ ಅಭ್ಯರ್ಥಿ ವಿವೇಕಾನಂದಗೆ 10,823 ಮತ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡಗೆ 6,201 ಮತ ಬಂದಿವೆ, ವಾಟಾಳ್ ನಾಗರಾಜ್ 84 ಮತ ಗಳಿಸಿದ್ದಾರೆ. ಈ ಮೂಲಕ 4,622 ಮತಗಳ ಭಾರಿ ಅಂತರದಿಂದ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಜೆಡಿಎಸ್‌ ಅಭ್ಯರ್ಥಿ ವಿವೇಕಾನಂದ ಗೆಲುವು ದಾಖಲಿಸಿದ್ದಾರೆ. ಕ್ಷೇತ್ರದಲ್ಲಿ 1049 ಕುಲಗೆಟ್ಟ ಮತಗಳು (ತಿರಸ್ಕೃತ) ದಾಖಲಾಗಿವೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ (south teachers constituency) ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳು ಬರುತ್ತವೆ. ಒಟ್ಟು 20,549 ಮತದಾರರ ಪೈಕಿ 18,979 ಮತಗಳು ಚಲಾವಣೆಯಾಗಿದ್ದವು. ಈ ಚುನಾವಣೆಯಲ್ಲಿ ವಿವೇಕಾನಂದ ಹಾಗೂ ಮರೀತಿಬ್ಬೇಗೌಡ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು.

ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಗೆಲುವಿನ ನಾಗಾಲೋಟಕ್ಕೆ ಮೈತ್ರಿ ಅಭ್ಯರ್ಥಿ ಬ್ರೇಕ್ ಹಾಕಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದು ನಂತರದ ದಿನಗಳಲ್ಲಿ ಕಾಂಗ್ರೆಸ್‌ಗೆ ಬಂದಿದ್ದ ಮರಿತಿಬ್ಬೇಗೌಡ ಸತತ ನಾಲ್ಕು ಬಾರಿ ಗೆದ್ದಿದ್ದರು. ಈ ಬಾರಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ವಿರುದ್ಧ ಪರಾಭವಗೊಂಡಿದ್ದಾರೆ. ಇದರಿಂದ ಮೈಸೂರಿನಲ್ಲಿ ಲೋಕಸಭಾ ಬಳಿಕ ಕಾಂಗ್ರೆಸ್‌ಗೆ ಮತ್ತೊಂದು ಹೊಡೆತ ಬಿದ್ದಂತಾಗಿದೆ.

ವಿವೇಕಾನಂದ ಗೆಲುವು ಹಿನ್ನೆಲೆ ಅವರಿಗೆ ಟ್ವೀಟ್ ಮೂಲಕ ಮಾಜಿ ಸಂಸದ ಪ್ರತಾಪ್ ಸಿಂಹ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ | MLC Election: ವಿಧಾನ ಪರಿಷತ್ ಚುನಾವಣೆ; ಯತೀಂದ್ರ, ಸಿ.ಟಿ.ರವಿ ಸೇರಿ 11 ಅಭ್ಯರ್ಥಿಗಳ ಅವಿರೋಧ ಆಯ್ಕೆ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 3ನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್‌

ಮೈಸೂರು: ನೈರುತ್ಯ ಪದವೀಧರರ ಕ್ಷೇತ್ರ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್‌ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದುವರೆಗೂ 14 ಸಾವಿರ ಮತಗಳ ಎಣಿಕೆ ಆಗಿದ್ದು, ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಗೆ 6,693 ಮತ, ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ಗೆ 3,054 ಮತ ಹಾಗೂ ಆಯನೂರು ಮಂಜುನಾಥ್‌ಗೆ 2397 ಮತ ಬಂದಿವೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Karnataka Weather Forecast: ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆ ಭರ್ಜರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ, ಹಾಸನದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಬೀದರ್‌, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳುರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಮುಂದುವರಿದ ಮಳೆ ಅವಾಂತರ

ಕೋಲಾರದಲ್ಲಿ ಗುರುವಾರ ಸುರಿದ ದಿಢೀರ್‌ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತಗೊಂಡಿತ್ತು. ಸುಮಾರು 2-3 ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ದೊಡ್ಡ ದೊಡ್ಡ ವಾಹನಗಳು ಜಲಾವೃತಗೊಂಡ ರಸ್ತೆಯಲ್ಲೇ ಬಂದರೆ, ಬೈಕ್‌ ಸವಾರರು ತಳ್ಳಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

karnataka weather Forecast

ಇತ್ತ ಶಾಲಾ ‌ಮಕ್ಕಳು ಮನೆಗೆ ತೆರಳಲು ಹರಸಾಹಸ ಪಡೆಬೇಕಾಯಿತು. ಅಪಾಯವನ್ನು ಲೆಕ್ಕಿಸದೆ ಸೈಕಲ್‌ನಲ್ಲಿ ಹೋದ ಶಾಲಾ ವಿದ್ಯಾರ್ಥಿಯೊಬ್ಬ ನೀರಿನ ರಭಸಕ್ಕೆ ವಾಪಸ್‌ ಹಿಂದಕ್ಕೆ ಬಂದಿದ್ದ. ಅಂಡರ್‌ಪಾಸ್‌ನಲ್ಲಿ ನೀರು ಸರಿಯಾಗಿ ಹರಿದು ಹೋಗಲು ಆಗದ ಕಾರಣಕ್ಕೆ ಈ ಸಮಸ್ಯೆ ಆಗಿದೆ ಎಂದು ಸಾರ್ವಜನಿಕರು ಕಿಡಿಕಾರಿದರು.

karnataka weather Forecast

ಮಾವಿನ ಮಾರುಕಟ್ಟೆಗೆ ತೆರಳಲು ಇರುವ ಏಕೈಕ ಮಾರ್ಗವಿದು. ಪ್ರತಿ ಬಾರಿ ಮಳೆಯಾದರೂ ಇದೇ ಪರಿಸ್ಥಿತಿ ಎದುರಾಗುತ್ತದೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Karnataka weather Forecast

ಇನ್ನೂ ರಾಜಧಾನಿ ಬೆಂಗಳೂರು ನಗರದಲ್ಲಿ ಮಳೆ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ಆದರೆ ಕೆಲವೆಡೆ ಮರಗಳ ತೆರವು ಕಾರ್ಯಾಚರಣೆ ನಡೆದಿಲ್ಲ. ರಸ್ತೆ ಹಾಗೂ ಫುಟ್‌ಪಾತ್‌ ಮಧ್ಯೆ ಮರದ ರೆಂಬೆ, ಕೊಂಬೆಗಳು ಬಿದ್ದಿವೆ. ಹೀಗಾಗಿ ಜನರ ಓಡಾಟ ಸೇರಿ ವ್ಯಾಪಾರಸ್ಥರು ಪರದಾಡಬೇಕಾಗಿದೆ. ಇನ್ನೂ ಜಯನಗರದಲ್ಲಿ ಮರಗಳು ಬಿದ್ದ ಕಾರಣ ವ್ಯಾಪಾರಸ್ಥರಿಗೆ ಅನಾನುಕೂಲವಾಗಿದೆ. ಬಿಬಿಎಂಪಿ‌ಯವರು ಮರ ಕತ್ತರಿಸಿ ಪಕ್ಕಕ್ಕೆ ಹಾಕಿ ಹೋಗಿದ್ದಾರೆ. ಆದರೆ ಅದನ್ನು ತೆರವು ಮಾಡದೆ ಇರುವುದರಿಂದ ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ ಎಂದು ವೃದ್ಧೆಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Karnataka Rain : ತಡರಾತ್ರಿ ಸುರಿದ ಭಾರಿ ಮಳೆಯು ಸಾವು-ನೋವಿಗೆ ಕಾರಣವಾಗಿದೆ. ತುಮಕೂರಲ್ಲಿ ಮಳೆಗೆ (Rain Effected) ಮರ ಬಿದ್ದು ಮೇಕೆಗಳು ಮೃತಪಟ್ಟರೆ, ಮನೆಗಳು, ವಾಹನಗಳು ಜಖಂಗೊಂಡಿವೆ. ಶಿವಮೊಗ್ಗದಲ್ಲಿ ಸಿಡಿಲಿಗೆ ಎಲೆಕ್ಟ್ರಾನಿಕ್‌ ಅಂಗಡಿ ಸುಟ್ಟು ಭಸ್ಮವಾಗಿದೆ.

VISTARANEWS.COM


on

By

Karnataka Rain
Koo

ತುಮಕೂರು: ತುಮಕೂರು ಜಿಲ್ಲೆಯಲ್ಲಿ ರಾತ್ರಿ ಗಾಳಿ ಸಹಿತ ಸುರಿದ ಭಾರಿ ಮಳೆಗೆ (Karnataka Rain) ಹಳೆಯ ಬೇವಿನ ಮರವೊಂದು ಕುಸಿದು ಬಿದ್ದಿದೆ. ಪರಿಣಾಮ ಮೂರು ಮನೆಗಳು ಹಾಗೂ ಒಂದು ಇಟಿಯೋಸ್ ಕಾರು ಜಖಂಗೊಂಡಿದೆ. ಸುಮಾರು 120 ವರ್ಷದ ಹಳೆಯ ಬೃಹತ್ ಮರ ಬಿದ್ದು ಅವಾಂತರವೇ ಸೃಷ್ಟಿಯಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಹುಸೇನ್ ಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬುವರಿಗೆ ಸೇರಿದ ಕಾರು ಹಾಗೂ ನಾಗರಾಜ್, ಮಾಧವರಾಜ್, ಅಕಲಪ್ಪ ಎಂಬುವರಿಗೆ ಸೇರಿದ ಮನೆಗಳಿಗೆ ಹಾನಿಯಾಗಿದೆ. ಒಂದು ಬೈಕ್ ಕೂಡ ಜಖಂ ಆಗಿದ್ದು, ಮರದಡಿ ಕಟ್ಟಿದ್ದ ಎರಡು ಮೇಕೆಗಳು ಮೃತಪಟ್ಟಿವೆ. ಸುಮಾರು ನಾಲ್ಕೈದು ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸಿಡಿಲು ಬಡಿದು ಹೊತ್ತಿ ಉರಿದ ಅಂಗಡಿ

ಶಿವಮೊಗ್ಗ ಹೊರವಲಯದ ಜಾವಳ್ಳಿ ಗ್ರಾಮದಲ್ಲಿ ಸಿಡಿಲು ಸಹಿತ ಧಾರಾಕಾರವಾಗಿ ಸುರಿದ ಮಳೆಗೆ ಅಂಗಡಿಯೊಂದು ಹೊತ್ತಿ ಉರಿದಿದೆ. ಸಿಡಿಲು ಬಡಿದ ಕಾರಣಕ್ಕೆ ಎಲೆಕ್ಟ್ರಿಕ್‌ ಅಂಗಡಿ ಧಗೆ ಧಗೆನೇ ಹೊತ್ತಿ ಉರಿದಿದೆ. ಮಳೆಯಲ್ಲೇ ಬೆಂಕಿ ಜ್ವಾಲೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. 10 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ವೀರಭದ್ರಪ್ಪ ಎಂಬುವರಿಗೆ ಅಂಗಡಿ ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: Dead Body Found : ಸೇತುವೆ ಸಮೀಪದಲ್ಲಿತ್ತು ಕೊಳೆತ ಮಹಿಳೆಯ ಶವ; ಹಂತಕರು ಯಾರು?

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ದೊಡ್ಡಬಳ್ಳಾಪುರ: ರಾಜ್ಯದ ಹಲವೆಡೆ ಬುಧವಾರ ಸಂಜೆ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಪಕ್ಕದ ಅಂಗಡಿಗಳು ಹಾಗೂ ಮೆಡಿಕಲ್ ಸ್ಟೋರ್‌ಗೂ ನೀರು ನುಗ್ಗಿ ಹಾನಿಯಾಗಿದೆ.

ಕೆಆರ್‌ಡಿಸಿಎಲ್‌ನವರು ರಸ್ತೆ ಕಾಮಗಾರಿ ವೇಳೆ ಚರಂಡಿ ವ್ಯವಸ್ಥೆ ಮಾಡದಿರುವುದೇ ಮಳೆ ನೀರು ನುಗ್ಗಲು ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಎತ್ತರದ ಪ್ರದೇಶದಲ್ಲಿನ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ. ರಾತ್ರಿಯೆಲ್ಲ ಮನೆಗಳಲ್ಲಿ ವಿದ್ಯುತ್ ಇಲ್ಲದೆ ಜನರು ಪರದಾಡಿದ್ದಾರೆ. ಮಳೆ ನೀರನ್ನು ಮನೆಯಿಂದ ಹೊರಗೆ ಎತ್ತೋಯ್ಯೊಲು ಹರಸಾಹಸ ಪಟ್ಟಿದ್ದಾರೆ. ಮನೆಯಲ್ಲಿದ್ದ ದಿನಸಿ, ಅಂಗಡಿಗಳಲ್ಲಿನ ತರಕಾರಿ ಎಲ್ಲವೂ ನೀರು ಪಾಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಮಳೆ ಅಲರ್ಟ್‌; ಬೆಂಗಳೂರಲ್ಲಿ ಹೇಗೆ?

Rain news : ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ (Karnataka Weather Forecast) ಇದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯೊಂದಿಗೆ (Heavy Rain) ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಜೂನ್‌ 7ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬುಧವಾರ ಕರಾವಳಿಯ ಉತ್ತರ ಕನ್ನಡದಲ್ಲಿ ಭಾರಿ ಮಳೆಗೆ ಗುಡುಗು ಸಾಥ್‌ ನೀಡಲಿದೆ. ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 30-40 ಕಿಮೀ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ನಿನ್ನೆ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ನಿನ್ನೆ ಮಂಗಳವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kangana Ranaut
ಪ್ರಮುಖ ಸುದ್ದಿ21 mins ago

Kangana Ranaut : ನಟಿ ಕಂಗನಾಗೆ ಏರ್​ಪೋರ್ಟ್​ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಯಾವುದು?

Lok Sabha Election 2024
ದೇಶ28 mins ago

Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

Viral Video
ವೈರಲ್ ನ್ಯೂಸ್41 mins ago

Viral Video: ಏಕಾಏಕಿ ಕುಸಿದು ಸಾವನ್ನಪ್ಪಿದ ಮೆಡಿಕಲ್ ಸಿಬ್ಬಂದಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕರ್ನಾಟಕ50 mins ago

MLC Election Results: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಜಯಭೇರಿ

ಬೆಂಗಳೂರು1 hour ago

Bangalore News : ಕೇಳಚಂದ್ರ ಕಾಫಿಗೆ ಎಚ್​ಆರ್​ಡಿ ಮುಖ್ಯಸ್ಥರಾಗಿ ಡಾ.ಪಿ.ಕುರಿಯನ್ ರಾಫೆಲ್ ನೇಮಕ

MLC Election Results
ಪ್ರಮುಖ ಸುದ್ದಿ2 hours ago

MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

TA Sharavana congratulated former CM hd Kumaraswamy who was elected to Lok Sabha from Mandya
ಬೆಂಗಳೂರು2 hours ago

TA Sharavana: ಮಂಡ್ಯದಿಂದ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆ; ಸಾಯಿಬಾಬಾ ಪ್ರಸಾದ ನೀಡಿ, ಅಭಿನಂದಿಸಿದ ಟಿ.ಎ.ಶರವಣ

Stock market Crash
ಪ್ರಮುಖ ಸುದ್ದಿ2 hours ago

Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

Lok Sabha Election 2024
ರಾಜಕೀಯ2 hours ago

Lok Sabha Election 2024: ಈ ಬಾರಿ ಲೋಕಸಭೆ ಪ್ರವೇಶಿಸಲಿದ್ದಾರೆ 41 ಪಕ್ಷಗಳ ಸಂಸದರು!

Fancy Handbags Fashion
ಫ್ಯಾಷನ್2 hours ago

Fancy Handbags Fashion: ಸ್ಟೈಲಿಶ್‌ ಲುಕ್‌ಗೆ ಫ್ಯಾನ್ಸಿ ಹ್ಯಾಂಡ್‌ ಬ್ಯಾಗ್‌ಗಳ ಸಾಥ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌