Megastar Chiranjeevi: ಅನೀಶ್ ಮೀಟ್ ಚಿರು; 'ಆರಾಮ್ ಅರವಿಂದ ಸ್ವಾಮಿ' ಸಿನಿಮಾ ಬಗ್ಗೆ ಮೆಗಾಸ್ಟಾರ್ ಹೇಳಿದ್ದೇನು? - Vistara News

ಸ್ಯಾಂಡಲ್ ವುಡ್

Megastar Chiranjeevi: ಅನೀಶ್ ಮೀಟ್ ಚಿರು; ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾ ಬಗ್ಗೆ ಮೆಗಾಸ್ಟಾರ್ ಹೇಳಿದ್ದೇನು?

Megastar Chiranjeevi: ಸ್ಯಾಂಡಲ್‌ವುಡ್‌ನ ಭರವಸೆಯ ನಟ ಅನೀಶ್ ತೇಜೇಶ್ವರ್ ಅವರು ಹೈದರಾಬಾದ್‌ನಲ್ಲಿ ಟಾಲಿವುಡ್‌ ಮೆಗಾ ಸ್ಟಾರ್ ಚಿರಜೀವಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

VISTARANEWS.COM


on

anish
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಭರವಸೆಯ ನಟ ಕಂ ನಿರ್ದೇಶಕ ಅನೀಶ್ ತೇಜೇಶ್ವರ್ (Anish Tejeshwar). ಕಮರ್ಶಿಯಲ್ ಸಿನಿಮಾ ಹೀರೋ ಆಗಿ ಮಿಂಚಿರುವ ಅನೀಶ್ ರೋಮ್ಯಾಂಟಿಕ್ ಹೀರೋ ಆಗಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ‘ಆರಾಮ್ ಅರವಿಂದ್ ಸ್ವಾಮಿ’ ಆಗಿ ತೆರೆ ಮೇಲೆ ಹೊಸ ಅವತಾರದಲ್ಲಿ ಬರಲು ರೆಡಿಯಾಗಿರುವ ಅವರು, ಧಿಡೀರನೇ ಟಾಲಿವುಡ್ ಮೆಗಾ ಸ್ಟಾರ್ ಚಿರಜೀವಿ (Megastar Chiranjeevi) ಜತೆ ಪ್ರತ್ಯಕ್ಷರಾಗಿದ್ದಾರೆ.

ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣಕ್ಕೆ ಭಜನರಾಗಿರುವ ಮೆಗಾಸ್ಟಾರ್ ಚಿರಂಜೀವಿ ಅವರನ್ನು ನಟ ಅನೀಶ್ ಭೇಟಿಯಾಗಿದ್ದಾರೆ. ಚಿರಂಜೀವಿ ಅವರ ಹೈದರಾಬಾದ್‌ ನಿವಾಸದಲ್ಲಿ ಭೇಟಿಯಾಗಿರುವ ಅವರು, ಮೆಗಾಸ್ಟಾರ್‌ಗೆ ಶುಭಾಶಯ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಬಹುನಿರೀಕ್ಷಿತ ʼಆರಾಮ್ ಅರವಿಂದ ಸ್ವಾಮಿʼ ಚಿತ್ರದ ಕಂಟೆಂಟ್ ತೋರಿಸಿದ್ದಾರೆ. ಸಿನಿಮಾದ ಕಂಟೆಂಟ್ ನೋಡಿ ಮೆಚ್ಚಿಕೊಂಡ ಚಿರಂಜೀವಿ ಅನೀಶ್ ಚಿತ್ರಕ್ಕೆ ಅಭಿನಂದನೆ ತಿಳಿಸಿದ್ದಾರೆ.

ಅನೀಶ್ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆಯಾಗಿದ್ದ ʼಆರಾಮ್ ಅರವಿಂದ ಸ್ವಾಮಿʼ ಟೈಟಲ್ ಟ್ರ್ಯಾಕ್‌ಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಅರ್ಜುನ್ ಜನ್ಯ ಮ್ಯೂಸಿಕ್, ನಾಗಾರ್ಜುನ್ ಶರ್ಮಾ ಸಾಹಿತ್ಯದ ಹಾಡಿಗೆ ಬೊಂಬಾಟ್ ಆಗಿ ಅನೀಶ್ ಕುಣಿದು ಕುಪ್ಪಳಿಸಿದ್ದರು. ಬಾಬಾ ಭಾಸ್ಕರ್ ಮಾಸ್ಟರ್ ಕೊರಿಯೋಗ್ರಾಫಿಯಲ್ಲಿ ಮೂಡಿಬಂದಿದ್ದ ಟೈಟಲ್ ಟ್ರ್ಯಾಕ್ 1 ಕೋಟಿಗೂ ಅಧಿಕ ವೀವ್ಸ್ ಪಡೆದುಕೊಂಡಿದೆ.

ತನ್ನ ಪ್ರಮೋಷನ್ ಕಂಟೆಂಟ್‌ನಿಂದಲೇ ಈಗಾಗಲೇ ಸದ್ದು ಮಾಡುತ್ತಿರುವ ’ಆರಾಮ ಅರವಿಂದ ಸ್ವಾಮಿ’ ಸಿನಿಮಾಗೆ ಅಭಿಷೇಕ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಆ್ಯಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮೂರನೇ ಸಿನಿಮಾವಿದು. ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ’ಆರಾಮ ಅರವಿಂದ ಸ್ವಾಮಿ’ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದ್ದಾನೆ.

ಇದನ್ನೂ ಓದಿ: Kannada New Movie: ಆರಾಮ್ ಅರವಿಂದ್ ಸ್ವಾಮಿ ಬಳಗ ಸೇರಿದ ಬಾಬಾ ಭಾಸ್ಕರ್ ಮಾಸ್ಟರ್

ಈ ಚಿತ್ರದಲ್ಲಿ ನಾಯಕಿಯಾಗಿ ಮಿಲನಾ ನಾಗರಾಜ್‌ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿ ಅನೀಶ್‌ ಮತ್ತು ಮಿಲನಾ ತೆರೆ ಹಂಚಿಕೊಳ್ಳುತ್ತಿದ್ದಾರೆ. ʼಅಕಿರʼ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ವೈ.ವಿ.ಬಿ.ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್.ಬಿ. ಸಂಕಲನ ಚಿತ್ರಕ್ಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

Kannada New Movie: ಇಂಡಿಯನ್ ಫಿಲಂ ಹೌಸ್‌ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

VISTARANEWS.COM


on

Kannada New Movie Nava Digantha latest news
Koo

ಬೆಂಗಳೂರು: ’ನವ ದಿಗಂತ’ ಚಿತ್ರದ ಮುಹೂರ್ತ ಸಮಾರಂಭವು ಶಕ್ತಿ ದೇವತೆ ಸರ್ಕಲ್ ಮಾರಮ್ಮನ ಸನ್ನಿದಿಯಲ್ಲಿ ಸರಳವಾಗಿ ಮುಹೂರ್ತ ನಡೆಯಿತು. ’ಉಸಿರೆ’ ಸಿನಿಮಾದ ನಿರ್ಮಾಪಕಿ ಲಕ್ಷೀಹರೀಶ್ ಕ್ಯಾಮೆರ ಆನ್ ಮಾಡಿದರೆ, ಉದಯೋನ್ಮುಖ ಯುವ ನಟ ಭಾರ್ಗವ್ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಐಟಿ ಕಂಪೆನಿಯಲ್ಲಿ ವ್ಯವಸ್ಥಾಪಕರಾಗಿರುವ ದುರ್ಗಾಮೋಹನ್ ಅವರು ಚಿನ್ಮಯ ಸಿನಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆ ಶುರು ಮಾಡಿ ಮೂರು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಅಲ್ಲದೆ ಇಂಡಿಯನ್ ಫಿಲಂ ಹೌಸ್‌ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

ಸಿನಿಮಾದ ಕುರಿತು ಹೇಳುವುದಾದರೆ, ಪ್ರತಿಯೊಬ್ಬರಿಗೂ ಪ್ರತಿಭೆ ಅನ್ನುವುದು ಹುಟ್ಟಿನಿಂದಲೇ ಬಂದಿರುತ್ತದೆ. ಆದರೆ ಅದನ್ನು ಮರೆತು ಜೀವನಕ್ಕೋಸ್ಕರ ಬೇರೆ ಉದ್ಯೋಗ ಮಾಡುತ್ತಿರುತ್ತೇವೆ. ನಿಜವಾದ ಸಂತೋಷ ಸಿಗುವುದು ಕಲೆಯಿಂದ ಅಂತ ತಿಳಿಯದೆ ಜೀವನ ಸಾಗಿಸುತ್ತಿರುತ್ತೇವೆ. ವೃತ್ತಿ-ಪ್ರವೃತ್ತಿಯನ್ನು ಬದುಕಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ವಿದ್ಯಾರ್ಥಿ ದೆಸೆಯಿಂದ ಬಂದಾಗ ಮಾತ್ರ, ಕೊನೆತನಕ ಸಾರ್ಥಕ ಜೀವನ ನಡೆಸಬಹುದು. ಕಲೆಯ ಕಡೆ ಗಮನ ಹರಿಸಿದರೆ ಅಡ್ಡದಾರಿಗೆ ಹೋಗಲು ಮನಸು ಬಾರದೆ, ಸಕರಾತ್ಮಕ ಚಿಂತನೆ ನಡೆಸಲು ಪ್ರೇರಣೆ ಸಿಗುತ್ತದೆ. ಸಂಗೀತ, ವಾಗ್ಮಿ, ನೃತ್ಯ, ಕ್ರೀಡೆ, ಬರವಣಿಗೆ ಏನೇ ತೆಗೆದುಕೊಂಡರೂ ಅದೇ ಕಲೆಯಾಗಿರುತ್ತದೆ ಹೊರತು ಬೇರೇನೂ ಆಗಿರುವುದಿಲ್ಲ. ಕಲೆಗೆ ಸಾವಿಲ್ಲ. ಕಲೆಯಲ್ಲಿ ತೊಡಗಿಸಿಕೊಂಡವರು ಸದಾ ಉತ್ಸಾಹಿಗಳಾಗಿ ಆನಂದದಿಂದಿರುತ್ತಾರೆ. ಇಂತಹ ಅಂಶಗಳನ್ನು ಬಳಸಿಕೊಂಡು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಪೋಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಒಂದು ಒಳ್ಳೆಯ ಸಂದೇಶ ಕೊಡಲಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಪ್ರೊಫೆಸರ್ ಆಗಿ ಮೇಘನಾ, ವಿದ್ಯಾರ್ಥಿಗಳಾಗಿ ಚೇತನ್, ರೋಷನ್, ಅಭಿಜಿತ್, ಪುಷ್ಪ, ಯಮುನಾ, ಆಶುತೋಷ್, ಭೋಜರಾಜ, ಸಹದ್ಯೋಗಿಗಳಾಗಿ ಅಜಯ್, ಸಂಕೀರ್ತ್ ಉಳಿದಂತೆ ಅನಿಲ್ ಮಾರ್ಟಿಬನ್, ಪ್ರೀತಿಪಾಟೀಲ್, ನವೀನ್, ಸಂಧ್ಯಾ, ಮೂರ್ತಿ, ಲಕ್ಷೀ, ಪ್ರೀತಂ, ವಾಸುದೇವಚಾರ್. ಇವರೆಲ್ಲರಿಗೂ ಪ್ರಥಮ ಅವಕಾಶ. ನಟ ಭಾರ್ಗವ್ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವ ಪಾತ್ರದಲ್ಲಿ ರೀಲ್‌ದಲ್ಲಿ ಅದೇ ರೀತಿ ಕಾಣಿಸಿಕೊಳ್ಳುತ್ತಿದ್ದಾರೆ.

ನಾಲ್ಕು ಹಾಡುಗಳಿಗೆ ಶರತ್-ಪ್ರಫುಲ್ಲಾ ಸಂಗೀತ, ಪ್ರಜ್ವಲ್ ವಿನೋದ್ ಛಾಯಾಗ್ರಹಣ, ಸಂಕಲನ ನೊಮಾಡಿಕ್ ಸ್ಟುಡಿಯೋ, ನೃತ್ಯ ರೋಶನ್, ಮೇಕಪ್ ಪವಿತ್ರಾ, ಹಾಗೂ ಎರಡು ಸಾಹಸ ದೃಶ್ಯಗಳನ್ನು ಕ್ಯಾಮೆರಾ ಟ್ರಿಕ್ಸ್‌ದಲ್ಲಿ ಚಿತ್ರೀಕರಿಸಲಾಗುವುದು. ಡಾಬಸಪೇಟೆ, ಬೆಂಗಳೂರು ಸುತ್ತಮುತ್ತ ೩೦ ದಿನಗಳ ಕಾಲ ಎರಡು ಹಂತದಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

Continue Reading

ಸ್ಯಾಂಡಲ್ ವುಡ್

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Shiva Rajkumar: ಕನ್ನಡದಲ್ಲಿ ಓಂ ಪ್ರಕಾಶ್ ರಾವ್ ನಿರ್ದೇಶನದ ‘AK-47’ ಸಿನಿಮಾ ಹಿಟ್ ಆಗಿತ್ತು. ಶಿವರಾಜ್‌ಕುಮಾರ್ ಹೀರೊ ಆಗಿ ನಟಿಸಿದ್ದ ಚಿತ್ರಕ್ಕೆ ಕೋಟಿ ರಾಮು ಬಂಡವಾಳ ಹೂಡಿದ್ದರು. ವಿಶೇಷ ಅಂದ್ರೆ ಈ ಚಿತ್ರವನ್ನು ಏಕಕಾಲಕ್ಕೆ ಕನ್ನಡ ಹಾಗೂ ತೆಲುಗಿನಲ್ಲಿ ತೆರೆಗೆ ತರಲಾಗಿತ್ತು. ‘AK-47’ ಕನ್ನಡ ಚಿತ್ರದಲ್ಲಿ ಶಿವಣ್ಣ ಹೀರೊ ಆಗಿ ನಟಿಸಿದರೆ ತೆಲುಗಿನಲ್ಲಿ ಸಾಯಿಕುಮಾರ್ ಮಿಂಚಿದ್ದರು.

VISTARANEWS.COM


on

Shiva Rajkumar played the dupe for saikumar in film
Koo

ಬೆಂಗಳೂರು: ಸಿನಿಮಾಗಳಲ್ಲಿ ಡ್ಯೂಪ್ ಹಾಕುವುದು ಸರ್ವೇ ಸಾಮಾನ್ಯ. ತೆಲುಗು ನಟ ಸಾಯಿಕುಮಾರ್‌ಗೆ (Shiva Rajkumar) ಕನ್ನಡ ನಟ ಶಿವರಾಜ್‌ಕುಮಾರ್ ಒಂದು ಸಿನಿಮಾದಲ್ಲಿ ಡ್ಯೂಪ್ ಹಾಕಿದ್ದರು. ಇತ್ತೀಚೆಗೆ ಸಂದರ್ಶನವೊಂದರಲ್ಲಿ : ಸಾಯಿಕುಮಾರ್‌ ಈ ವಿಚಾರವನ್ನು ಬಹಿರಂಗಪಡಿಸಿದ್ದರು.ಕನ್ನಡದಲ್ಲಿ ಓಂ ಪ್ರಕಾಶ್ ರಾವ್ ನಿರ್ದೇಶನದ ‘AK-47’ ಸಿನಿಮಾ ಹಿಟ್ ಆಗಿತ್ತು. ಶಿವರಾಜ್‌ಕುಮಾರ್ ಹೀರೊ ಆಗಿ ನಟಿಸಿದ್ದ ಚಿತ್ರಕ್ಕೆ ಕೋಟಿ ರಾಮು ಬಂಡವಾಳ ಹೂಡಿದ್ದರು. ವಿಶೇಷ ಅಂದ್ರೆ ಈ ಚಿತ್ರವನ್ನು ಏಕಕಾಲಕ್ಕೆ ಕನ್ನಡ ಹಾಗೂ ತೆಲುಗಿನಲ್ಲಿ ತೆರೆಗೆ ತರಲಾಗಿತ್ತು. ‘AK-47’ ಕನ್ನಡ ಚಿತ್ರದಲ್ಲಿ ಶಿವಣ್ಣ ಹೀರೊ ಆಗಿ ನಟಿಸಿದರೆ ತೆಲುಗಿನಲ್ಲಿ ಸಾಯಿಕುಮಾರ್ ಮಿಂಚಿದ್ದರು.

ಈ ಬಗ್ಗೆ ನಟ ಸಾಯಿ ಕುಮಾರ್‌ ಮಾತನಾಡಿ ʻʻAK 47 ಸಿನಿಮಾದ ಮಾಡುವಾಗ ಡಬಲ್‌ ವರ್ಷನ್‌ ಮಾಡಬೇಕು ಎಂದು ರಾಮು ಅವರ ಪ್ಲ್ಯಾನ್‌ ಆಗಿತ್ತು. ಲಾಕ್‌ಅಪ್‌ಡೆತ್‌ ಸಿನಿಮಾ ಕೊಟ್ಟಿದ್ದು ಓಂ ಪ್ರಕಾಶ್‌. ರಾಮು ಅವರೇ ಪ್ರೊಡ್ಯೂಸರ್‌ ಆಗಿದ್ದರು. ಆ ಸಿನಿಮಾ ಕನ್ನಡವನ್ನು ಶಿವಣ್ಣ ಮಾಡ್ತಾರೆ, ತೆಲುಗು ನೀವು ಮಾಡಿ ಅಂದರು. ಖಂಡಿತ ಮಾಡ್ತೀನಿ ಎಂದೆ. ಬಾಂಬೆಯಲ್ಲಿ ಮೇಜರ್‌ ಎಪಿಸೋಡ್‌ ಇತ್ತು. ಅವರದ್ದು ನಂದೂ ಸೇಮ್‌ ಕಾಸ್ಟ್ಯೂಮ್‌ ಇತ್ತು. ಆದರೆ ನಾನು ಶೂಟ್‌ ಮಾಡುವಾಗ ಗಾಯಕ್ಕೆ ಒಳಗಾದೆ. ನನಗೆ ಏಟು ಬಿತ್ತು. ಆಸ್ಪತ್ರೆಗೆ ಕರೆದುಕೊಂಡರು. ತಿರಗಾ ಬಂದು ಮತ್ತೆ ಶೂಟಿಂಗ್‌ ಬಂದೆವು. ಟೆಲಿ ಶಾಟ್‌ ಒಂದು ಇತ್ತು. ಬಳಿಕ ನನ್ನ ಶಾಟ್‌ ಎಲ್ಲ ಅವರೇ ಮಾಡಿದ್ರು. ಇನ್ನು ಫೈಟ್ ಮಾಡುವಾಗ ಅಪ್ ಶಾಟ್ ಹೊಡೆಯಬೇಕಿತ್ತು. ಶಿವಣ್ಣ ತುಂಬಾ ಚೆನ್ನಾಗಿ ಮಾಡಿದರು. ನನಗೂ ಮಾಡೋಕೆ ಹೇಳ್ತಾರೆ ಅಂತ ನನಗೆ ಭಯವಾಗಿತ್ತು. ನನ್ನನ್ನು ಕರೆದು ಮಾಡಿ ಎಂದಾಗ ಆಗಲ್ಲ ಎಂದೆ. ಇಲ್ಲ ಮಾಡಲೇಬೇಕು ಎಂದ್ರು. ಶಿವಣ್ಣ ಬಂದ್ರು. ಸೇಮ್ ಡ್ರೆಸ್‌ನಲ್ಲಿ ಇದ್ರು. ಸ್ವಲ್ಪ ಆಂಗಲ್ ಚೇಂಜ್ ಮಾಡ್ಕೊಳ್ಳಿ ಸಾಯಿಗೆ ನಾನೇ ಡ್ಯೂಪ್ ಮಾಡ್ತೀನಿ ಅಂತ ಶಿವಣ್ಣ ಮಾಡಿಬಿಟ್ರು. ಹೈದರಾಬಾದ್ ಸಂಧ್ಯಾ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿತ್ತು. ನಾನು ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದೆ. ಸಿನಿಮಾ ಎಲ್ಲಾ ಚೆನ್ನಾಗಿತ್ತು. ಆ ಶಾಟ್‌ಗೆ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು. ಆದರೆ ಜನ ಅಂದುಕೊಂಡಿದ್ದು ನಾನು ಅಂತ. ಆ ಕ್ಕ್ರೆಡಿಟ್‌ ಶಿವಣ್ಣ ಅವರಿಗೆ ಸೇರಬೇಕು ಎಂದರು.

ಇದನ್ನೂ ಓದಿ: Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

ನಟ ಸಾಯಿಕುಮಾರ್ ಅವರನ್ನು ಕನ್ನಡ ಸಿನಿರಸಿಕರು ಡೈಲಾಗ್ ಕಿಂಗ್ ಎಂದೇ ಹೇಳುತ್ತಾರೆ. ಕನ್ನಡದ ‘ಲಾಕಪ್‌ ಡೆತ್’ ಸಿನಿಮಾ ಮೂಲಕ ಅವರಿಗೆ ದೊಡ್ಡ ಬ್ರೇಕ್ ಸಿಕ್ಕಿತ್ತು. ‘ಪೊಲೀಸ್ ಸ್ಟೋರಿ’ ಸಿನಿಮಾ ದಾಖಲೆ ಬರೆದಿತ್ತು. ಮುಂದೆ ‘ಮುದ್ದಿನ ಕಣ್ಮಣಿ’, ‘ಅಗ್ನಿ ಐಪಿಎಸ್’, ‘ಪೊಲೀಸ್ ಸ್ಟೋರಿ-2’, ‘ಕಲ್ಪನಾ’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದರು. ಇದೀಗ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಎನ್ನುವ ಚಿತ್ರದಲ್ಲಿ ನಿರೂಪ್ ಭಂಡಾರಿ ಜೊತೆ ನಟಿಸುತ್ತಿದ್ದಾರೆ.

Continue Reading

ಸಿನಿಮಾ

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Actor Darshan: ವಿಜಯಲಕ್ಷ್ಮಿ ಆಪ್ತೆ ಹಾಗೂ ನಿರ್ಮಾಪಕಿ ಲತಾ ಜೈಪ್ರಕಾಶ್ ಕೂಡ ದರ್ಶನ್ ಅವರ ಬಗ್ಗೆ ಮಾತನಾಡಿದ್ದು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ಪ್ರತೀ ಬಾರಿ ಆಷಾಢದಲ್ಲಿ ದೇವಸ್ಥಾನಕ್ಕೆ ಬರುತ್ತಿದ್ದವರು ಈ ಬಾರಿ ಬಂದಿಲ್ಲ. ದೇವಸ್ಥಾನದಲ್ಲಿ ಪ್ರತೀ ಆಷಾಢದಲ್ಲೂ ಅತ್ತಿಗೆ ನನಗೆ ಸಿಗುತ್ತಿದ್ದರು.ನನಗೆ ಸುಮಾರು ಹತ್ತು ವರ್ಷದಿಂದಲೂ ವಿಜಯಲಕ್ಷ್ಮಿ ಅತ್ತಿಗೆ ಪರಿಚಯವಿದೆ. ದರ್ಶನ್ ಅಣ್ಣ ‘ಅಂಬರೀಶ್’ ಸಿನಿಮಾ ಮೂಲಕ ಪರಿಚಯವಾಗಿ ನನ್ನ ತಮ್ಮನಿಗೂ ಕ್ಲೋಸ್ ಆಗಿದ್ದರು. ಅತ್ತಿಗೆನೇ ಅಣ್ಣನಿಗೆ ಬಲ ಆಗಿದ್ದಾರೆʼʼಎಂದರು.

VISTARANEWS.COM


on

Actor Darshan Lata Jaiprakash says that since Darshan is a devotee of God,
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ (Actor Darshan) ಜೈಲು ಸೇರಿದ್ದಾರೆ. ದರ್ಶನ್ ಜೈಲು ಸೇರಿದ ಬಳಿಕ ಅವರ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.  ವಿಜಯಲಕ್ಷ್ಮಿ ಆಪ್ತೆ ಹಾಗೂ ನಿರ್ಮಾಪಕಿ ಲತಾ ಜೈಪ್ರಕಾಶ್ ಕೂಡ ದರ್ಶನ್ ಅವರ ಬಗ್ಗೆ ಮಾತನಾಡಿದ್ದು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ʻʻನನಗೆ ದರ್ಶನ್‌ ಅಣ್ಣ ಅಷ್ಟು ಆತ್ಮೀಯರು ಅಲ್ಲ. ಆದರೆ ನನ್ನ ತಮ್ಮನಿಗೆ ಕ್ಲೋಸ್‌. ಮತ್ತೆ ಮನೆ ಮಂದಿ ತರವೇ ಇದ್ದಾರೆ. ನಮ್ಮ ಮನೆಯಲ್ಲಿ ಕಲಾವಿದರಿಗೆ ಪ್ರೋತಾಹ ಕೂಡ ಕೊಡುತ್ತೇವೆ. ಅದು ಅಲ್ಲದೇ ಅವರು ದೇವರ ಭಕ್ತರಾಗಿರುವುದರಿಂದ ಈ ರೀತಿ ಘಟನೆ ಎದುರಿಸುತ್ತಿದ್ದಾರೆ ಅಂದ್ರೆ ಆಶ್ಚರ್ಯವಾಗುತ್ತದೆ. ಹೆಣ್ಣು ಮಕ್ಕಳನ್ನು ಗೌರವಿಸುವ ರೀತಿ, ಮಾತನಾಡಿಸುವ ರೀತಿ ದರ್ಶನ್ ಮುಗ್ಧ ಮನಸ್ಸಿಗೆ ಮಾತ್ರ ಇರುವುದು. ಜೈಲಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊರ ಬರುವಾಗ ಉತ್ತಮ ಸ್ಟಾರ್ ಆಗಿ ಹೊರ ಬರಲು ಅವರ ಪತ್ನಿ ವಿಜಯಲಕ್ಷ್ಮಿನೇ ಕಾರಣ. ತಪ್ಪು ಮಾಡುವುದು ಸಹಜ. ಆದರೆ ಜೀವ ಮಾತ್ರ ವಾಪಸ್ಸು ಬರಲ್ಲ. ಆದರೆ ಇದೀಗ ದರ್ಶನ್‌ ಅವರನ್ನು ಕ್ಷಮಿಸಬೇಕು ಅಂತಲ್ಲ. ಅವರಿಗೆ ಅದು ಪ್ರಾಯಶ್ಚಿತ ಆಗಬೇಕು. ಕೋರ್ಟ್‌ನಿಂದ ಏನು ತೀರ್ಪು ಬರುತ್ತೋ ಆರೋಪ ಮುಕ್ತ ಬರಲಿ ಎಂದು ಪ್ರಾರ್ಥನಿಸುತ್ತೇನೆ. ದರ್ಶನ್‌ ಬಂಡಿಮಹಾಕಾಳಿ ದರ್ಶನ ಪಡೆದು ತಡೆ ಹೊಡೆಸಿಕೊಂಡು ಹೋಗುತ್ತಿದ್ದರು. ಅಲ್ಲದೆ ದೇವಿ ಮುಂದೆ ನಿಂತು ವಿಜಯಲಕ್ಷ್ಮಿ ಪ್ರಾರ್ಥನೆ ಮಾಡುತ್ತಿರುವ ಫೋಟೋ ವೈರಲ್ ಆಗಿತ್ತು. ಈ ಫೋಟೋ ಎರಡು ಮೂರು ತಿಂಗಳ ಹಳೆ ಫೋಟೋʼʼ ಎಂದು ಲತಾ ಜೈಪ್ರಕಾಶ್ ಸ್ಪಷ್ಟನೆ ಕೊಟ್ಟರು.

ಇದನ್ನೂ ಓದಿ: Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

ʻʻವಿಜಯಲಕ್ಷ್ಮಿ ಅವರು ತುಂಬ ಓಡಾಡುತ್ತಿದ್ದಾರೆ. ಇಬ್ಬರೂ ದೈವಭಕ್ತರು. ಏನೋ ಒಂದು ಗ್ರಹಚಾರ. ದರ್ಶನ್ ಅಣ್ಣ ದೇವಸ್ಥಾನಕ್ಕೆ ಬರುತ್ತಿದ್ದರು. ಆದರೆ ಅವರು ಜನ ಇದ್ದಾಗ ದೇವಸ್ಥಾನಕ್ಕೆ ಬರುತ್ತಿರಲಿಲ್ಲ. ದೇವಸ್ಥಾನಕ್ಕೆ ಬರಬೇಕು ಅನಿಸಿದಾಗ ಮಿಡ್ ನೈಟ್ ಆದರೂ ದೇವಸ್ಥಾನಕ್ಕೆ ಬಂದು ಪೂಜೆ ಮಾಡಿಸಿಕೊಂಡು ಹೋಗುತ್ತಿದ್ದರು. ಈ ಸಮಸ್ಯೆಯಿಂದ ದರ್ಶನ್ ಅಣ್ಣ ಬೇಗ ಹೊರಬರಲಿ. ವಿಜಯಲಕ್ಷ್ಮಿ ಅತ್ತಿಗೆ ಕೂಡ ಮನೆ ದೇವರು ಮುನೇಶ್ವರನಿಗೆ ಹರಕೆ ಕಟ್ಟಿಕೊಂಡಿದ್ದಾರೆʼʼ ಎಂದು ಬಂಡೆ ಮಹಾಕಾಳಮ್ಮ ದೇವಸ್ಥಾನದ ಟ್ರಸ್ಟಿ ಲತಾ ಜೈಪ್ರಕಾಶ್ ಹೇಳಿದರು.

ʻʻದರ್ಶನ್ ಅಣ್ಣ ಜೈಲು ಸೇರಿದಾಗಿನಿಂದಲೂ ವಿಜಯಲಕ್ಷ್ಮಿ ಅತ್ತಿಗೆ ಅವರ ಹೋರಾಟ ಹಾಗೂ ಓಡಾಟ ಜಾಸ್ತಿ ಆಗಿದೆ. ಇದರಿಂದಾಗಿ ವಿಜಯಲಕ್ಷ್ಮಿ ಅವರು ಪ್ರತೀ ಬಾರಿ ಆಷಾಢದಲ್ಲಿ ದೇವಸ್ಥಾನಕ್ಕೆ ಬರುತ್ತಿದ್ದವರು ಈ ಬಾರಿ ಬಂದಿಲ್ಲ. ದೇವಸ್ಥಾನದಲ್ಲಿ ಪ್ರತೀ ಆಷಾಢದಲ್ಲೂ ಅತ್ತಿಗೆ ನನಗೆ ಸಿಗುತ್ತಿದ್ದರು.ನನಗೆ ಸುಮಾರು ಹತ್ತು ವರ್ಷದಿಂದಲೂ ವಿಜಯಲಕ್ಷ್ಮಿ ಅತ್ತಿಗೆ ಪರಿಚಯವಿದೆ. ದರ್ಶನ್ ಅಣ್ಣ ‘ಅಂಬರೀಶ್’ ಸಿನಿಮಾ ಮೂಲಕ ಪರಿಚಯವಾಗಿ ನನ್ನ ತಮ್ಮನಿಗೂ ಕ್ಲೋಸ್ ಆಗಿದ್ದರು. ಅತ್ತಿಗೆನೇ ಅಣ್ಣನಿಗೆ ಬಲ ಆಗಿದ್ದಾರೆʼʼಎಂದರು.

Continue Reading

ಕ್ರೈಂ

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Actor Darshan: ಇದೀಗ ಕಾಳಿ ಉಪಾಸಕಿ ಚಂದಾ ಪಾಂಡೇ ಅಮ್ಮಾಜಿ ಅವರು ದರ್ಶನ್​ಗೆ ಈ ಸಂಕಷ್ಟ ಎದುರಾಗಲು ಅವರ ತಲೆ ಗೂದಲಿನಿಂದ ಹಿಡಿದು ಹಲವು ಕಾರಣಗಳಿವೆ ಎಂದಿದ್ದು, ಅವುಗಳ ಬಗ್ಗೆ ಮಾಹಿತಿ ಮಾಧ್ಯಮವೊಂದಕ್ಕೆ ನೀಡಿದ್ದಾರೆ. ಕಾಳಿ ಉಪಾಸಕಿ ಚಂದಾ ಪಾಂಡೆ ‘ನಾನು 2018ರಲ್ಲಿ ದರ್ಶನ್ ಗೆ ಎಚ್ಚರಿಕೆ ನೀಡಿದ್ದೆ’ ಎಂದಿದ್ದಾರೆ.

VISTARANEWS.COM


on

Actor Darshan Astrologer Chanda Pandey Said Facing Problems Because Of His vig
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ (Actor Darshan) ಜೈಲು ಸೇರಿದ್ದಾರೆ. ದರ್ಶನ್ ಜೈಲು ಸೇರಿದ ಬಳಿಕ ಅವರ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದೀಗ ಕಾಳಿ ಉಪಾಸಕಿ ಚಂದಾ ಪಾಂಡೇ ಅಮ್ಮಾಜಿ ಅವರು ದರ್ಶನ್​ಗೆ ಈ ಸಂಕಷ್ಟ ಎದುರಾಗಲು ಅವರ ತಲೆ ಗೂದಲಿನಿಂದ ಹಿಡಿದು ಹಲವು ಕಾರಣಗಳಿವೆ ಎಂದಿದ್ದು, ಅವುಗಳ ಬಗ್ಗೆ ಮಾಹಿತಿ ಮಾಧ್ಯಮವೊಂದಕ್ಕೆ ನೀಡಿದ್ದಾರೆ. ಕಾಳಿ ಉಪಾಸಕಿ ಚಂದಾ ಪಾಂಡೆ ‘ನಾನು 2018ರಲ್ಲಿ ದರ್ಶನ್ ಗೆ ಎಚ್ಚರಿಕೆ ನೀಡಿದ್ದೆ’ ಎಂದಿದ್ದಾರೆ.

ಈಗಾಗಲೇ ಚಂಡಿ ಯಾಗ ಮಾಡಿದ್ದಾರೆ ದರ್ಶನ್‌ ಪತ್ನಿ. ಈ ಬಗ್ಗೆ ಕಾಳಿ ಉಪಾಸಕಿ ಚಂದಾ ಪಾಂಡೆ ಮಾತನಾಡಿ ʻಈ ಯಾಗದಿಂದ ಮನೆ ಊಟ ಸಿಗುವ ಸಾಧ್ಯತೆ ಇದೆ. ಅದರ ಜತೆಗೆ ಬೈಲ್‌ ಸಿಗುವಂತದ್ದು. ಯಾರು ತೀರ್ಪು ಕೊಡುತ್ತಾರೆ ಅವರ ಮನಸ್ಸಿನ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಹಾಗಂತ ಎಲ್ಲವೂ ಸಿಕ್ಕೇ ಸಿಗುತ್ತೆ ಎಂದು ಹೇಳಲು ಸಾಧ್ಯವಿಲ್ಲ. ದರ್ಶನ್, ದಸರಾ ಕಾರ್ ರೇಸ್​ನಲ್ಲಿ ಭಾಗವಹಿಸುತ್ತಿರುವುದಾಗಿ ಹೇಳಿದ್ದರು. ಆದರೆ ನಾನು ಬೇಡ, ದರ್ಶನ್​ಗೆ ಕಂಟಕ ಇದೆ. ರೇಸ್​ಗೆ ಹೋದರೆ ಮರಳಿ ಬರುವುದಿಲ್ಲ ಅದನ್ನು ತಪ್ಪಿಸು ಎಂದಿದ್ದೆ. ಹಾಗೆಯೇ ಆತ ಅದನ್ನು ತಪ್ಪಿಸಿದ. ಆದರೆ ಅದಾದ ಸ್ವಲ್ಪ ದಿನಕ್ಕೆ ದರ್ಶನ್​ಗೆ ಕಾರು ಅಪಘಾತವಾಗಿ ಕೈಗೆ ಪೆಟ್ಟಾಯ್ತು. ಆ ಘಟನೆ ಆದ ಬಳಿಕ ದರ್ಶನ್ ನನ್ನ ಬಂದು ಭೇಟಿ ಆಗಿ ಆಶೀರ್ವಾದ ಪಡೆದರುʼʼಎಂದರು.

ʻʻಚಂಡಿಯಾಗಕ್ಕೆ ಅದರದ್ದೇ ಆದ ವಿಧಿ ವಿಧಾನಗಳನ್ನು ಮಾಡಲೇ ಬೇಕು. ಮುಖ್ಯವಾಗಿ ಅಹಂ ವನ್ನು ಬಿಡಬೇಕು. ನಾನು ಎನ್ನುವ ಶಬ್ದ ಬಿಡಬೇಕು. ಅಹಂ ಎನ್ನುವುದಕ್ಕೆ ಶನಿನೂ ಕಾರಣವೇ.ನಮ್ಮಲ್ಲಿ ತರ್ಕವನ್ನು ಅಳವಡಿಸಿಕೊಳ್ಳಬೇಕು. ಆಗ ಇಂತಹ ದುರಂತಗಳು ನಡೆಯಲ್ಲ. ನನ್ನ ಸಲಹೆ ಮೀರಿ ವಿಗ್ ಹಾಕಿದ್ರು. ಇದರಿಂದಾಗಿ ಅವರ ಗ್ರಹಗತಿಯಲ್ಲಿ ಬದಲಾವಣೆ ಆಗಿದೆ. ಅವರಿಗೆ ಇನ್ನೂ ಸಾಕಷ್ಟು ಗಂಡಾಂತರ ಬರೋ ಸಾಧ್ಯತೆ ಇದೆ. ನಾನು ಪ್ರಚಾರ ತಗೋತೀನಿ ಅಂದ್ಕೋಬಾರ್ದು ಅಂತ ನಾನು ಯಾವುದನ್ನೂ ನಾನೇ ನಾನಾಗಿ ಹೇಳೋದಿಲ್ಲ. ನಾನಿವತ್ತು ಮಾತನಾಡ್ತಾ ಇರೋದು ವಿಜಯಲಕ್ಷ್ಮಿ ಅವರ ಮುಖ ನೋಡಿ, ತುಂಬಾ ನೊಂದಿದಾರೆ ಅವರು. ಜನ್ಮತಃ ಬಂದಿರುವ ಕೇಶವಿನ್ಯಾಸ ಮಾಡಿಸಿಕೊಂಡರೆ ಉತ್ತಮ’ ಎಂದಿದ್ದಾರೆ ಕಾಳಿಕಾಮಾತೆ ಉಪಾಸಕಿ ಚಂದಾ ಪಾಂಡೆ.ʼʼಎಂದರು.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕುಟುಂಬ ಭೇಟಿಯಾಗಿ ಧನ ಸಹಾಯ ಮಾಡಿದ ವಿನೋದ್‌ ರಾಜ್‌ !

(Actor Darshan) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಲ್ಲಿದ್ದಾರೆ. ಇಷ್ಟಾದರೂ ದರ್ಶನ್‌ಗೆ ಕೆಲವು ಅಭಿಮಾನಿಗಳು ಹಾಗೂ ನಟ ನಟಿಯರು ಬೆಂಬಲ ನೀಡಿದ್ದಾರೆ. ದಿನ ಕಳೆದಂತೆ ತನಿಖೆಯಿಂದ ಬೆಚ್ಚಿ ಬೀಳಿಸುವ ಸತ್ಯಗಳು ಹೊರಬೀಳುತ್ತಿವೆ. ಕಲೆವರು ಅಂದಿನಿಂದ ದರ್ಶನ್‌ಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. 

Continue Reading
Advertisement
Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ3 mins ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ14 mins ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ23 mins ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್54 mins ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ1 hour ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ2 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ2 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Aishwarya Rai Bachchan
ಸಿನಿಮಾ2 hours ago

Aishwarya Rai Bachchan: ಐಶ್ವರ್ಯಾ ರೈ ಧರಿಸಿರುವ V ಆಕಾರದ ಈ ವಜ್ರದುಂಗುರದ ವಿಶೇಷತೆ ಗೊತ್ತೆ?

Mukesh Ambani
ವಾಣಿಜ್ಯ2 hours ago

Mukesh Ambani: ಮುಕೇಶ್ ಅಂಬಾನಿಯ ಒಂದು ದಿನದ ಆದಾಯ 163 ಕೋಟಿ ರೂ! ಒಟ್ಟು ಸಂಪತ್ತೆಷ್ಟು?

Minister Dinesh Gundurao drives for the 5th Kannada Sahitya Sammelana in Bengaluru
ಬೆಂಗಳೂರು3 hours ago

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ7 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ8 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌