Train Accident : ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಟ್ರಾವೆಲ್ಸ್‌ ಮಾಲೀಕ ಸಾವು - Vistara News

ಕಲಬುರಗಿ

Train Accident : ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಟ್ರಾವೆಲ್ಸ್‌ ಮಾಲೀಕ ಸಾವು

Train Accident : ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ರವಾನಿಸಿದ್ದಾರೆ.

VISTARANEWS.COM


on

Travels owner dies after falling off moving train
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಚಲಿಸುತ್ತಿರುವ ರೈಲಿನಿಂದ ಬಿದ್ದು ವ್ಯಕ್ತಿ (Train Accident) ಮೃತಪಟ್ಟಿದ್ದಾರೆ. ಅಣವಿರಯ್ಯ ಪ್ಯಾಟಿ ಮನಿ ಮೃತ ದುರ್ದೈವಿ. ಕಲಬುರಗಿಯ ಶಹಾಬಾದ್ ಹಾಗೂ ರೆವೂರ್ ಮಾರ್ಗ ಮಧ್ಯೆ ಈ ದುರ್ಘಟನೆ (Kalaburagi News) ನಡೆದಿದೆ.

ಅಣವಿರಯ್ಯ ಅವರು ಜಿಲ್ಲಾ ಪಂಚಾಯತ್ ಚುನಾವಣೆಯ ಪರಾಜಿತ ಅಭ್ಯರ್ಥಿಯಾಗಿದ್ದರು. ಚಿಂಚೊಳ್ಳಿ ತಾಲೂಕಿನ ಕೊಡ್ಲಿ ಗ್ರಾಮದ ನಿವಾಸಿ ಆಗಿರುವ ಅಣವಿರಯ್ಯ ಪ್ಯಾಟಿಮನಿ, ಕಲಬುರಗಿಯಲ್ಲಿ ಟ್ರಾವೆಲ್ಸ್ ಏಜೆನ್ಸಿ‌ಯನ್ನು ನಡೆಸುತ್ತಿದ್ದರು.

ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಾಡಿ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇಗವಾಗಿ ಹೋಗುತ್ತಿದ್ದ ರೈಲಿನಿಂದ ಬಿದ್ದ ರಭಸಕ್ಕೆ ಅಣವಿರಯ್ಯ ಎಡಗೈ ಪೂರ್ತಿ ನಜ್ಜುಗಜ್ಜಾಗಿತ್ತು. ತಲೆಗೆ ಗಂಭೀರವಾಗಿ ಪೆಟ್ಟಾದ ಕಾರಣಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Self Harming : ವಿಷ ಕುಡಿದು ಫ್ಯಾನ್‌ಗೆ ನೇಣು ಹಾಕಿಕೊಂಡ ಬಸ್‌ ಕಂಡಕ್ಟರ್‌

ಉಳುಮೆ ಮಾಡುವಾಗ ಪಲ್ಟಿ ಹೊಡೆದ ಟ್ರ್ಯಾಕ್ಟರ್‌; ರೈತ ಸ್ಥಳದಲ್ಲೇ ಸಾವು

ಬೆಂಗಳೂರು: ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು (Road Accident) ಸಂಭವಿಸಿದ್ದು, ಮೂವರು ಅಸುನೀಗಿದ್ದರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದು, ರೈತರೊಬ್ಬರು ಮೃತಪಟ್ಟಿದ್ದಾರೆ. ಮಾದಪ್ಪ (58) ಮೃತ ದುರ್ದೈವಿ. ಉಳುಮೆ ಮಾಡುವಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್‌ ಅಡಿ ಸಿಲುಕಿದ ಮಾದಪ್ಪ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕೊಡಗಿನಲ್ಲಿ ಸ್ಕೂಟರ್‌ಗೆ ಬಸ್‌ ಡಿಕ್ಕಿ, ಮಹಿಳೆ ದುರ್ಮರಣ

ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ದುರ್ಮರಣ ಹೊಂದಿದ್ದಾರೆ. ಸಿದ್ದಾಪುರ ಗ್ರಾಮದ ಲಲಿತಾ (53) ಮೃತಪಟ್ಟ ದುರ್ದೈವಿ. ಸ್ಕೂಟಿ ಓಡಿಸುತ್ತಿದ್ದ ಸಿಂಚನಾ ಎಂಬುವವರ ಸ್ಥಿತಿ ಗಂಭೀರವಾಗಿದೆ. ಕೊಡಗಿನ ರಾಷ್ಟ್ರೀಯ ಹೆದ್ದಾರಿ 275ರ ಗುಡ್ಡೆಹೊಸೂರು ಬಳಿ ಅಪಘಾತ ಸಂಭವಿಸಿದೆ.

KSRTC Hit bike

ಮಡಿಕೇರಿಯಿಂದ ಮೈಸೂರಿಗೆ ಕೆಎಸ್ಆರ್‌ಟಿಸಿ ಬಸ್ ತೆರಳುತ್ತಿತ್ತು. ಇತ್ತ ಮಹಿಳೆಯರಿಬ್ಬರು ಅತ್ತೂರು ಕಡೆಯಿಂದ ಗುಡ್ಡೆಹೊಸೂರು ಕಡೆಗೆ ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಬಸ್‌ ಹಾಗೂ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನಡಿ ಸಿಲುಕಿದ ಸ್ಕೂಟಿ ನಜ್ಜುಗುಜ್ಜಾಗಿತ್ತು. ಮೃತ ಮಹಿಳೆ ಪರ್ಪಲ್ ಪಾಮ್ ರೆಸಾರ್ಟ್ ಸಿಬ್ಬಂದಿ ಎಂಬ ಮಾಹಿತಿ ಇದೆ. ಸ್ಥಳಕ್ಕೆ ಕುಶಾಲನಗರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Operation Elephant : ಬೀಟಮ್ಮ ಗುಂಪನ್ನು ಬೀಟ್‌ ಮಾಡಲು ಎಂಟ್ರಿ ಕೊಟ್ಟ ಅಭಿಮನ್ಯು ಟೀಂ

ಅಡ್ಡಾದಿಡ್ಡಿ ಚಾಲನೆ; ಬೈಕ್‌ಗೆ ಆಟೋ ಡಿಕ್ಕಿ ಚಾಲಕ ಸಾವು

ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯ ಬಾಲಾಜಿ ಥಿಯೇಟರ್ ಬಳಿ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಹುಲ್ (23) ಮೃತ ದುರ್ದೈವಿ.

ಚಾಲಕ ಅಜಾಗರೂಕತೆಯಿಂದ ಆಟೋ ಚಲಾಯಿಸಿದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಸ್ತೆ ಬಲಬದಿಯಲ್ಲಿ ಆಟೋ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದು ಫುಟ್ ಪಾತ್ ಮೇಲೆ ಮಗುಚಿ ಬಿದ್ದಿದೆ. ಪರಿಣಾಮ ಆಟೋ ಚಾಲಕ ರಾಹುಲ್‌ ಸ್ಥಳದಲ್ಲೇ ಮೃತಪಟ್ಟರೆ, ಆಟೋದಲ್ಲಿದ್ದ ಕಿರಣ್ ಹಾಗೂ ಬೈಕ್ ಸವಾರ ನಂದಕುಮಾರ್‌ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Prajwal Revanna Case: ಗಾಣಗಾಪುರಕ್ಕೆ ಎಚ್‌ಡಿ ರೇವಣ್ಣ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ

Prajwal Revanna Case: ಷ್ಟಗಳನ್ನು ನಿವಾರಣೆ ಮಾಡುವಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರಕ್ಕೆ ಭೇಟಿ ನೀಡಿದ್ದು, ದತ್ತಾತ್ರೇಯನ ದರ್ಶನ ಪಡೆದಿದ್ದಾರೆ. ಒಂದು ಗಂಟೆಗಳ ಕಾಲ ದತ್ತಾತ್ರೇಯ ದೇವಸ್ಥಾನದಲ್ಲಿ ರೇವಣ್ಣ ಪೂಜೆ ಸಲ್ಲಿಸಿದ್ದಾರೆ. ಎಚ್‌ಡಿ ರೇವಣ್ಣ ಅವರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಸತ್ಕಾರ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ಗಾಣಗಾಪುರಕ್ಕೆ ಆಗಮಿಸಿ ದತ್ತನ ದರ್ಶನವನ್ನು ರೇವಣ್ಣ ಪಡೆದಿದ್ದರು.

VISTARANEWS.COM


on

Prajwal Revanna Case HD Revanna visit to Gangapur and special pooja to Dattatreya
Koo

ಕಲಬುರಗಿ: ಪ್ರಜ್ವಲ್‌ ರೇವಣ್ಣ ಮೇಲಿನ ಅತ್ಯಾಚಾರ ಪ್ರಕರಣಕ್ಕೆ (Prajwal Revanna Case) ಸಂಬಂಧಪಟ್ಟಂತೆ ಬಂದಿರುವ ಸಂಕಷ್ಟಗಳನ್ನು ನಿವಾರಣೆ ಮಾಡುವಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರಕ್ಕೆ ಭೇಟಿ ನೀಡಿದ್ದು, ದತ್ತಾತ್ರೇಯನ ದರ್ಶನ ಪಡೆದಿದ್ದಾರೆ.

ದೇವಸ್ಥಾನದಲ್ಲಿ ದತ್ತನ ನಿರ್ಗುಣ ಪಾದುಕೆಗಳಿಗೆ ಎಚ್.ಡಿ. ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸುವ ಸಲುವಾಗಿ ರೇವಣ್ಣ ಅವರು ತಮ್ಮ ಜತೆಯಲ್ಲಿಯೇ ಪುರೋಹಿತರನ್ನು ಕರೆದುಕೊಂಡು ಬಂದಿರುವುದು ವಿಶೇಷವಾಗಿತ್ತು.

Prajwal Revanna Case HD Revanna visit to Gangapur and special pooja to Dattatreya

ಒಂದು ಗಂಟೆಗಳ ಕಾಲ ದತ್ತಾತ್ರೇಯ ದೇವಸ್ಥಾನದಲ್ಲಿ ರೇವಣ್ಣ ಪೂಜೆ ಸಲ್ಲಿಸಿದ್ದಾರೆ. ಎಚ್‌ಡಿ ರೇವಣ್ಣ ಅವರಿಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಸತ್ಕಾರ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ಗಾಣಗಾಪುರಕ್ಕೆ ಆಗಮಿಸಿ ದತ್ತನ ದರ್ಶನವನ್ನು ರೇವಣ್ಣ ಪಡೆದಿದ್ದರು.

Prajwal Revanna Case HD Revanna visit to Gangapur and special pooja to Dattatreya

ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ರಾಜತಾಂತ್ರಿಕ ಸಮರ ಸಾರಿದೆ. ಪ್ರಜ್ವಲ್‌ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ಇಕ್ಕಟ್ಟಿಗೆ ಸಿಲುಕಿದ್ದು, ಬಂಧನ ಬಹುತೇಕ ಖಚಿತ ಎಂದೇ ಹೇಳಲಾಗಿದೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆಯನ್ನು ಶುರು ಮಾಡಿದೆ. ಕಾರಣ, ಈಗಾಗಲೇ ಅರೆಸ್ಟ್ ವಾರೆಂಟ್, ಸಮೇತ ಪತ್ರ ಎಸ್‌ಐಟಿ ಬರೆದಿದೆ.

ಹೇಗೆ ರದ್ದಾಗುತ್ತದೆ ಪ್ರಜ್ವಲ್ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.

ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.

ಪಾಸ್‌ಪೋರ್ಟ್‌ ರದ್ದಾದರೆ ಮುಂದೇನು?

ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರುವ ಸಾಧ್ಯತೆ ಇದೆ.

ಪಾಸ್‌ಪೋರ್ಟ್ ರದ್ದಾದರೆ ಪ್ರಜ್ವಲ್‌ ಕರೆತರುವುದು ಹೇಗೆ?

ಒಂದು ವೇಳೆ ಪಾಸ್‌ಪೋರ್ಟ್‌ ರದ್ದು ಮಾಡಿದರೆ, ಎರಡು ವಿಧಾನಗಳಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಬಹುದು. ಪ್ರಜ್ವಲ್‌ ಯಾವ ದೇಶದಲ್ಲಿದ್ದಾರೋ ಅಲ್ಲಿ ಅವರನ್ನು ಹಸ್ತಾಂತರ ಪ್ರಕ್ರಿಯೆ (Extradition) ಅಡಿ ವಾಪಸ್‌ ಕರೆತರಬಹುದಾಗಿದೆ. ಆದರೆ, ಆ ದೇಶದ ನಡುವೆ ಭಾರತವು ಈ ಮೊದಲು ಒಪ್ಪಂದ ಮಾಡಿಕೊಂಡಿರಬೇಕು. ಇಲ್ಲವಾದಲ್ಲಿ, ಗಡಿಪಾರು ಪ್ರಕ್ರಿಯೆ (Deportation) ಮೂಲಕವೂ ಪ್ರಜ್ವಲ್‌ ಅವರನ್ನು ಕರೆತರಬಹುದು.

ಹಸ್ತಾಂತರ, ಗಡಿಪಾರು ಪ್ರಕ್ರಿಯೆಗಳು ಹೇಗೆ ನಡೆಯುತ್ತವೆ?

  1. ಆರೋಪಿ ಮೊದಲು ಯಾವ ದೇಶದಲ್ಲಿ ಇದ್ದಾನೆ ಎನ್ನುವುದರ ಮಾಹಿತಿಯನ್ನು ಸಂಗ್ರಹಿಸಬೇಕು
  2. ನಂತರ ಆ ದೇಶದೊಟ್ಟಿಗೆ MLAT ( mutual legal assistance treaty) ಪ್ರಕ್ರಿಯೆಯನ್ನು ಆರಂಭ ಮಾಡಬೇಕು
  3. ಅದಾದ ಬಳಿಕ ದೇಶಕ್ಕೆ ಸಂಬಂಧಪಟ್ಟ ಪ್ರಕರಣದ ಮಾಹಿತಿಯನ್ನು ಒದಗಿಸಬೇಕು
  4. ಆಗ ಆ ದೇಶವು ಆರೋಪಿಯನ್ನು ಬಂಧನ ಮಾಡಿ ಇಲ್ಲಿಯ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡುತ್ತದೆ
  5. ಆಗ ಹಸ್ತಾಂತರ ಪ್ರಕ್ರಿಯೆ ಮುಖಾಂತರವಾದರೆ ಇಲ್ಲಿಯ ತನಿಖಾಧಿಕಾರಿಗಳ ತಂಡ ಅಲ್ಲಿ ಬಂಧನವಾದ ವ್ಯಕ್ತಿಯನ್ನು ತಮ್ಮ ವಶಕ್ಕೆ ಹಸ್ತಾಂತರ ಮಾಡಿಕೊಳ್ಳಬೇಕು
  6. ಇದಕ್ಕಾಗಿ ಇಲ್ಲಿಯ ಪ್ರಕರಣದ ಕಡತವನ್ನು ಸಂಬಂಧಪಟ್ಟ ದೇಶದ ಭಾಷೆಗೆ ತರ್ಜುಮೆ‌ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿ ಅನುಮತಿ ಪಡೆಯಬೇಕು
  7. ಗಡಿಪಾರು ಪ್ರಕ್ರಿಯೆಗೊಳಪಡುವುದಾದರೆ, ಇದರಲ್ಲಿ ಆ ದೇಶವೇ ಇಲ್ಲಿಯ ಪ್ರಕರಣದ ಮಾಹಿತಿಯನ್ನು ಅಲ್ಲಿಯ ನ್ಯಾಯಾಲಯಕ್ಕೆ ನೀಡಿ ಗಡಿಪಾರು ಮಾಡಲು ಅನುಮತಿ ಪಡೆಯುತ್ತದೆ
  8. ನಂತರ ಇಲ್ಲಿಯ ವಿದೇಶಾಂಗ ಇಲಾಖೆಗೆ ಆ ದೇಶ ಮಾಹಿತಿ ನೀಡಿ ನಿರ್ದಿಷ್ಟ ವಿಮಾನದಲ್ಲಿ ಆರೋಪಿಯನ್ನು ಕಳಿಸಿಕೊಡುತ್ತದೆ

ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಭಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆ್ಯಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಅರೆಸ್ಟ್‌ ವಾರಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮುಜುಗರ, ಇಕ್ಕಟ್ಟಿಗೆ ಸಿಲುಕಿಸಲು ಪತ್ರ?

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

Continue Reading

ಶ್ರದ್ಧಾಂಜಲಿ

Iqbal Ahmed Saradgi: ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ

Iqbal Ahmed Saradgi: ಕಲಬುರಗಿಯ ಮಾಜಿ ಸಂಸದ ಕಳೆದ ಹಲವು ತಿಂಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

VISTARANEWS.COM


on

Iqbal Ahmed Saradgi
Koo

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) (EX MP Iqbal Ahmed Saradgi) ಮಂಗಳವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಇವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge) ಹಾಗೂ ಮಾಜಿ ಸಿಎಂ ದಿ. ಧರ್ಮ ಸಿಂಗ್ (Dharm Singh) ಪರಮಾಪ್ತರಲ್ಲಿ ಒಬ್ಬರಾಗಿದ್ದರು.

ಕಲಬುರಗಿ (kalaburagi) ನಗರದಲ್ಲಿ 1944 ಜೂನ್ 5ರಂದು ಜನಿಸಿದ ಸರಡಗಿ, ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿಎಎಲ್ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಪಡೆದು ಸ್ಪರ್ಧಿಸಿ ಎರಡು ಬಾರಿ ಆಯ್ಕೆಯಾಗಿದ್ದರು. ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕೇಂದ್ರ ಹಜ್‌ ಸಮಿತಿ, ವಕ್ಫ್‌ ಮಂಡಳಿಗಳ ಸದಸ್ಯರೂ ಆಗಿದ್ದರು, ಕಳೆದ ಎರಡು ವರ್ಷದಿಂದ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

ಕಳೆದ ಹಲವು ತಿಂಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ತಂದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ.ಜಹೇರಾ ಸರಡಗಿ ಅವರನ್ನು ಅಗಲಿದ್ದಾರೆ.

ನಗರದ ಐವಾನ್- ಇ-ಶಾಹಿ ಪ್ರದೇಶದಲ್ಲಿರುವ ಸರಡಗಿ ನಿವಾಸದಲ್ಲಿ ಇಂದು ಇಡೀ ದಿನ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಸಂಜೆ 5 ಗಂಟೆ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

ವಿಜಯನಗರ: ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ, ಹಂಪಿಯ ಸ್ಮಾರಕಗಳ ಮೇಲೆ ಆಗಿದೆ. ನಿನ್ನೆ ಸುರಿದ ಭಾರಿ ಮಳೆಗೆ ಹಂಪಿಯ ರಥ ಬೀದಿಯಲ್ಲಿರುವ ಸಾಲು ಮಂಟಪಗಳಲ್ಲಿ ಕೆಲವು ಉರುಳಿ ಬಿದ್ದಿವೆ.

ಹಂಪಿಗೆ ವಿಶ್ವಖ್ಯಾತಿಯನ್ನು ತಂದುಕೊಟ್ಟ ವಿಜಯನಗರ ಸಾಮ್ರಾಜ್ಯದ ಕಾಲದ ಕಲ್ಲು ಮಂಟಪಗಳು ಇವಾಗಿದ್ದು, ಮಳೆಗೆ ಕುಸಿದುಬಿದ್ದಿವೆ. ಇವುಗಳನ್ನು ವಿಜಯನಗರ ಅರಸರು ನಿರ್ಮಿಸಿದ್ದರು. ಇವು ಪಂಪಾ ವಿರೂಪಾಕ್ಷ ದೇವಾಲಯದ ರಥ ಬೀದಿಯಲ್ಲಿದ್ದು, ಹಂಪಿಗೆ ಬಂದಿಳಿಯುವವರಿಗೆ ಮೊದಲಾಗಿ ಕಾಣಿಸುವಂತಿವೆ. ಇವು ಮೊದಲೇ ಶಿಥಿಲವಾಗಿದ್ದು, ದುರಸ್ತಿಯ ಅಗತ್ಯದಲ್ಲಿದ್ದವು.

ಹಂಪಿಯ ಸ್ಮಾರಕಗಳು ಯುನೆಸ್ಕೋ ಪಟ್ಟಿಗೆ ಸೇರಿವೆ. ಹೀಗಾಗಿಯೇ ಇವುಗಳನ್ನು ನೋಡಲು ವಿದೇಶಗಳಿಂದ ಜನ ಆಗಮಿಸುತ್ತಾರೆ. ಆದರೆ ಪುರಾತತತ್ವ ಇಲಾಖೆ ಇವುಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಸ್ಮಾರಕಗಳ ರಕ್ಷಣೆಗೆ ಲಕ್ಷ ಲಕ್ಷ ರೂಪಾಯಿ ಹಣ ಬರುತ್ತಿದ್ದರೂ, ಕೇಂದ್ರ ಪುರಾತತ್ವ ಇಲಾಖೆ ಇವುಗಳ ಸ್ಥಿತಿಗತಿಯ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ದೂರಲಾಗಿದೆ.

ಕಳೆದ ಒಂದು ವಾರದಿಂದ ವಿಜಯನಗರ ಜಿಲ್ಲಾದ್ಯಾಂತ ಉತ್ತಮ ಮಳೆಯಾಗುತ್ತಿದೆ. ಹಂಪಿಯಲ್ಲಿ ಇನ್ನಷ್ಟು ಶಿಥಿಲ ಸ್ಮಾರಕಗಳಿವೆ. ಸೂಕ್ತ ನಿರ್ವಹಣೆ ಇಲ್ಲದೇ ಇದ್ದಕ್ಕಿದ್ದಂತೆ ಉರುಳಿ ಬಿದ್ದಿರುವ ಸಾಲು ಮಂಟಪಗಳು, ಐತಿಹಾಸಿಕ ಹಂಪಿಯ ಸ್ಮಾರಕಗಳ ನಿರ್ವಹಣೆಯ ಸಮಸ್ಯೆಯತ್ತ ಬೆಟ್ಟು ಮಾಡಿವೆ.

ಇದನ್ನೂ ಓದಿ: Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

Continue Reading

ಮಳೆ

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Rain News : ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 8 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮೇ 22ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ (rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರ ಕೂಡಿದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 29 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

8 ಜಿಲ್ಲೆಗಳಲ್ಲಿ ಮಳೆ ರುದ್ರ ನರ್ತನ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದಷ್ಟು ಈ ಭಾಗದ ಜನರು ಮರದಡಿ ನಿಲ್ಲುವುದು, ಮಳೆ ಸಮಯದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
COMEDK UGET 2024 Result Declared Tomorrow Afternoon How to view and download
ಶಿಕ್ಷಣ2 mins ago

COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

IPL 2024
ಪ್ರಮುಖ ಸುದ್ದಿ34 mins ago

IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

Share Market
ದೇಶ44 mins ago

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

IPL 2024
ಪ್ರಮುಖ ಸುದ್ದಿ1 hour ago

IPL 2024 : ಮಾಜಿ ನಾಯಕ ಶೇನ್​ ವಾರ್ನ್​ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್​

IPL 2024
ಕ್ರೀಡೆ1 hour ago

IPL 2024 : ಮುಂದಿನ ವರ್ಷವೂ ಧೋನಿ ಐಪಿಎಲ್​ ಆಡ್ತಾರೆ; ಸಿಎಸ್​ಕೆ ಸಿಇಒ ಸ್ಪಷ್ಟನೆ

Golden Star Ganesh Krishnam Pranaya Sakhi movie first song release on May 25 in Mysore
ಸಿನಿಮಾ2 hours ago

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Prashant Kishor
ದೇಶ2 hours ago

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Virat Kohli
ಕ್ರೀಡೆ2 hours ago

Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Karnataka rain
ಮಳೆ3 hours ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ3 hours ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ16 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌