Money plus : ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ನಲ್ಲಿ ಯಾಕೆ ಹೂಡಬೇಕು? - Vistara News

ಮನಿ-ಗೈಡ್

Money plus : ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ನಲ್ಲಿ ಯಾಕೆ ಹೂಡಬೇಕು?

ಹೆಚ್ಚಿನ ಮಾರಿಕಟ್ಟೆ ಮೌಲ್ಯ ಇರುವ ಕಂಪನಿಗಳ ಷೇರುಗಳಲ್ಲಿ ( Money plus) ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ಗಳು ಹೂಡಿಕೆ ಮಾಡುತ್ತವೆ.

VISTARANEWS.COM


on

mutual fund
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮ್ಯೂಚುವಲ್‌ ಫಂಡ್‌ ಹೂಡಿಕೆ ಆರಂಭಿಸಲು ಅದರ ಒಂದು ವಿಭಾಗವಾಗಿರುವ ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ ಉತ್ತಮ ಆಯ್ಕೆ. ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ಗಳಲ್ಲಿ ರಿಸ್ಕ್‌ ಕಡಿಮೆ. (Money plus) ಅದೇ ವೇಳೆ ಉತ್ತಮ ಎನ್ನಿಸುವ ಆದಾಯವನ್ನೂ ನೀಡುತ್ತದೆ.

ಮ್ಯೂಚುವಲ್‌ ಫಂಡ್‌ಗಳಲ್ಲಿ ಲಾರ್ಹ್‌ ಕ್ಯಾಪ್‌, ಮಿಡ್‌ ಕ್ಯಾಪ್‌ ಮತ್ತು ಸ್ಮಾಲ್‌ ಕ್ಯಾಪ್‌ ಎಂಬ ವಿಧಗಳಿವೆ. ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ಗಳು ಹೆಚ್ಚಿನ ಮಾರುಕಟ್ಟೆ ಮೌಲ್ಯವಿರುವ ಕಂಪನಿಗಳ (Large cap mutual funds) ಷೇರುಗಳಲ್ಲಿ ಹೂಡಿಕೆ ಮಾಡುತ್ತವೆ. ಸ್ಥಿರ ಬೆಳವಣಿಗೆಯನ್ನು ಈ ಮ್ಯೂಚುವಲ್‌ ಫಂಡ್‌ಗಳು ದಾಖಲಿಸುತ್ತವೆ. ದೀರ್ಘಕಾಲೀನವಾಗಿ ಬಂಡವಾಳದ ಉತ್ತಮ ಮೌಲ್ಯ ವರ್ಧನೆಯಾಗುತ್ತದೆ.

ಫಂಡ್‌ ಹೌಸ್‌ಗಳು ಲಾರ್ಜ್‌ ಕ್ಯಾಪ್‌ ಫಂಡ್‌ಗಳಲ್ಲಿ ನಿಮ್ಮ ಹೂಡಿಕೆಯನ್ನು ಮೇಲುಸ್ತುವಾರಿ ಮಾಡಲು ಶುಲ್ಕವನ್ನು ಸಂಗ್ರಹಿಸುತ್ತವೆ. ಈ ವೆಚ್ಚವನ್ನು ಎಕ್ಸ್‌ಪೆನ್ಸ್‌ ರೇಶಿಯೊ ಎನ್ನುತ್ತಾರೆ. ಫಂಡ್‌ನ ಒಟ್ಟು ಆಸ್ತಿಯಲ್ಲಿ ನಿರ್ದಿಷ್ಟ ಪಾಲನ್ನು ಪಡೆಯಲಾಗುತ್ತದೆ. ಸೆಬಿಯು ಇದಕ್ಕೆ 2.5% ರ ಮಿತಿಯನ್ನು ಹಾಕಿದೆ. ಇದರ ಅರ್ಥ ಏನೆಂದರೆ ಯಾವುದೇ ಮ್ಯೂಚುವಲ್‌ ಫಂಡ್‌ ಸಂಸ್ಥೆಯು ನಿಮ್ಮ ಪೋರ್ಟ್‌ ಫೋಲಿಯೊ ನಿರ್ವಹಣೆಗೆ 2.5% ಕ್ಕಿಂತ ಹೆಚ್ಚು ಪಡೆಯುವಂತಿಲ್ಲ. ಹೀಗಿದ್ದರೂ ಹೆಚ್ಚು ಆದಾಯ ಗಳಿಸುವ ದೃಷ್ಟಿಯಿಂದ ಎಕ್ಸ್‌ಪೆನ್ಸ್‌ ರೇಶಿಯೊ ಎಷ್ಟಿದೆ ಎಂಬುದನ್ನು ಗಮನಿಸಿ.

ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡಗಳಿಗೆ ಅನ್ವಯವಾಗುವ ತೆರಿಗೆಯನ್ನು ಗಮನಿಸೋಣ. ಲಾರ್ಜ್‌ ಕ್ಯಾಪ್‌ ಫಂಡ್‌ಗಳು ಡಿವಿಡೆಂಡ್‌ ಡಿಸ್ಟ್ರಿಬ್ಯೂಷನ್‌ ಟ್ಯಾಕ್ಸ್‌ ( DDT- Dividend distribution tax) ಅನ್ನು ಒಳಗೊಂಡಿರುತ್ತವೆ. ಕ್ಯಾಪಿಟಲ್‌ ಗೇನ್ಸ್‌ ಟ್ಯಾಕ್ಸ್‌ ಕೂಡ ( capital gains tax) ಇರುತ್ತದೆ. ನೀವು ಫಂಡ್‌ ಅನ್ನು ವಿತ್‌ ಡ್ರಾವಲ್‌ ಮಾಡುವ ಸಂದರ್ಭ ಕ್ಯಾಪಿಟಲ್‌ ಗೇನ್ಸ್‌ ಟ್ಯಾಕ್ಸ್‌ ಅನ್ನು ಕಳೆಯಲಾಗುತ್ತದೆ.

ಲಾರ್ಜ್‌ ಕ್ಯಾಪ್‌ ಫಂಡ್‌ಗಳೂ ಇತರ ಯಾವುದೇ ಈಕ್ವಿಟಿ ಫಂಡ್‌ನಂತೆ ಮಾರುಕಟ್ಟೆಯ ಏರಿಳಿತಗಳ ಅಪಾಯವನ್ನು ಎದುರಿಸುತ್ತವೆ. ಲಾರ್ಜ್‌ ಕ್ಯಾಪ್‌ ಫಂಡ್‌ಗಳು ದೀರ್ಘಕಾಲೀನ ದೃಷ್ಟಿಯಿಂದ ಉತ್ತಮ ಸಂಪತ್ತು ಸೃಷ್ಟಿಗೆ ಸಹಾಯಕ. ಕೋಟಕ್‌ ಬ್ಲೂಚಿಪ್‌ ಫಂಡ್-ಡೈರೆಕ್ಟ್‌ ಗ್ರೋತ್‌, ಐಸಿಐಸಿಐ ಪ್ರು ಬ್ಲೂಚಿಪ್‌ ಫಂಡ್-ಡೈರೆಕ್ಟ್‌ ಗ್ರೋತ್‌, ಯುಟಿಐ ಲಾರ್ಜ್‌ ಕ್ಯಾಪ್‌ ಫಂಡ್‌ -ಡೈರೆಕ್ಟ್‌ ಗ್ರೋತ್‌ ಲಾರ್ಜ್‌ ಕ್ಯಾಪ್‌ ಫಂಡ್‌ಗೆ ಉದಾಹರಣೆಗಳಾಗಿವೆ. ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ಗಳು ತೆರಿಗೆ ರಹಿತ ಮ್ಯೂಚುವಲ್‌ ಫಂಡ್‌ ಅಲ್ಲ ಎಂಬುದನ್ನು ಮರೆಯಬಾರದು. ಈ ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ಗಳಲ್ಲಿ 12 ತಿಂಗಳಿಗಿಂತ ಹೆಚ್ಚು ಕಾಲ ಹೂಡಿದ್ದರೆ ಆಗ ಸಿಗುವ ಆಆಯದ ಮೇಲೆ 12% ತೆರಿಗೆ ಅನ್ವಯವಾಗುತ್ತದೆ.

ಇದನ್ನೂ ಓದಿ: Money plus : ಸ್ಟಾಕ್‌ ಮಾರ್ಕೆಟ್‌ನಲ್ಲಿ ದುಡ್ಡು ಕಳೆದುಕೊಳ್ಳದೆ ಲಾಭ ಮಾಡೋದು ಹೇಗೆ?

20,000 ಕೋಟಿ ರೂ.ಗೂ ಹೆಚ್ಚು ಮಾರುಕಟ್ಟೆ ಬಂಡವಾಳ ಇರುವ ಕಂಪನಿಗಳಲ್ಲಿ ಲಾರ್ಜ್‌ ಕ್ಯಾಫ್‌ ಫಂಡ್‌ಗಳು ಹೂಡಿಕೆಯಾಗುತ್ತಿವೆ, ಸರಾಸರಿ ರಿಸ್ಕ್‌ ಮಾತ್ರ ಬಯಸುವವರು ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ಗಳಲ್ಲಿ ಹೂಡಿಕೆ ಮಾಡಬಹುದು. ನಿಮ್ಮ ಇನ್ವೆಸ್ಟ್‌ ಮೆಂಟ್‌ ಪೋರ್ಟ್‌ ಫೋಲಿಯೊಗೆ ಸ್ಥಿರತೆ ನೀಡುತ್ತದೆ. ಇತರ ಮ್ಯೂಚುವಲ್‌ ಫಂಡ್‌ಗಳಂತೆ ಇಲ್ಲೂ ವೃತ್ತಿಪರ ಗಳು ಮ್ಯಾನೇಜರ್‌ ಫಂಡ್‌ ಅನ್ನು ನಿರ್ವಹಿಸುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

Money Guide: ಭಾರತದಲ್ಲಿ ನಗರ, ಗ್ರಾಮಾಂತರ ಪ್ರದೇಶ ಎನ್ನುವ ಬೇಧವಿಲ್ಲದೆ ಎಲ್ಲ ಕಡೆ ಏಕೀಕೃತ ಪಾವತಿ ಇಂಟರ್ಫೇಸ್ ಜಾರಿಯಲ್ಲಿದೆ. ಹೀಗಾಗಿ ಗೂಗಲ್‌ ಪೇ ಜನಪ್ರಿಯವಾಗಿದೆ. ಇದೀಗ ಗೂಗಲ್‌ ಕಂಪೆನಿ ಭಾರತದಲ್ಲಿ ತನ್ನ ವ್ಯಾಲೆಟ್ ಸೇವೆಯನ್ನು ಪ್ರಾರಂಭಿಸಿದೆ. ಹಾಗಾದರೆ ಗೂಗಲ್ ವ್ಯಾಲೆಟ್‌ ಎಂದರೇನು? ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ? ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಗೂಗಲ್‌ ಪೇ (Google Pay) ಯಾರಿಗೆ ಗೊತ್ತಿಲ್ಲ ಹೇಳಿ? ಭಾರತದಲ್ಲಿ ಸದ್ಯ ಡಿಜಿಟಲ್‌ ಪೇಮೆಂಟ್‌ ಜನಪ್ರಿಯಾಗಿದ್ದು, ಗೂಗಲ್‌ ಪೇ ಬಳಕೆದಾರರ ಸಂಖ್ಯೆ ಹೆಚ್ಚಿದೆ. ನಗರ, ಗ್ರಾಮಾಂತರ ಪ್ರದೇಶ ಎನ್ನುವ ಬೇಧವಿಲ್ಲದೆ ಎಲ್ಲ ಕಡೆ ಏಕೀಕೃತ ಪಾವತಿ ಇಂಟರ್ಫೇಸ್ (UPI) ವ್ಯವಸ್ಥೆ ಜಾರಿಯಲ್ಲಿದೆ. ಹೀಗಾಗಿ ಗ್ರಾಹಕ ಸ್ನೇಹಿಯಾಗಿರುವ ಗೂಗಲ್‌ ಪೇಯ ಬಳಕೆಯೂ ವ್ಯಾಪಕವಾಗಿದೆ. ಈ ಮಧ್ಯೆ ಇದೀಗ ಗೂಗಲ್‌ ಭಾರತದಲ್ಲಿ ತನ್ನ ವ್ಯಾಲೆಟ್ ಸೇವೆಯನ್ನು ಪ್ರಾರಂಭಿಸಿದೆ. ಹಾಗಾದರೆ ಗೂಗಲ್ ವ್ಯಾಲೆಟ್‌ (Google Wallet) ಎಂದರೇನು? ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ (Money Guide).

ಗೂಗಲ್‌ ಪೇ ಆ್ಯಪ್‌ಗಿಂತ ಗೂಗಲ್‌ ವ್ಯಾಲೆಟ್‌ನ ಕಾರ್ಯ ವೈಖರಿ ಭಿನ್ನ. ಗೂಗಲ್ ವಾಲೆಟ್ ಹೆಸರಿಗೆ ತಕ್ಕಂತೆ ನಮ್ಮ ವ್ಯಾಲೆಟ್‌ (ಪರ್ಸ್‌)ನಂತೆಯೇ ಕಾರ್ಯ ನಿರ್ವಹಿಸಲಿದೆ. ಈ ಆ್ಯಪ್‌ನ ಮೂಲಕ ಹಣ ಪಾವತಿ ಮಾಡಲು ಸಾಧ್ಯವಿಲ್ಲ. ಬದಲಾಗಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಲಾಯಲ್ಟಿ ಕಾರ್ಡ್, ಗಿಫ್ಟ್ ಕಾರ್ಡ್, ಬಸ್‌, ಮೆಟ್ರೋ ಟಿಕೆಟ್‌ ಸೇರಿದಂತೆ ಇತರ ಡಿಜಿಟಲ್ ಕಾರ್ಡ್‌ಗಳನ್ನು ಸ್ಟೋರ್ ಮಾಡಿ ಇಟ್ಟುಕೊಳ್ಳಬಹುದಾಗಿದೆ. ಸರಳವಾಗಿ ಹೇಳುವುದಾದರೆ ಗೂಗಲ್ ವ್ಯಾಲೆಟ್‌ ಭಾರತದಲ್ಲಿ ಈಗಾಗಲೇ ಲಭ್ಯವಿರುವ ಡಿಜಿಲಾಕರ್‌ನಂತೆಯೇ ಕಾರ್ಯ ನಿರ್ವಹಿಸಲಿದೆ.

ಸುರಕ್ಷಿತ ವಿಧಾನ

ಇದು ಅತ್ಯಂತ ಸುರಕ್ಷಿತ ಖಾಸಗಿ ಡಿಜಿಟಲ್ ವ್ಯಾಲೆಟ್ ಎಂದು ಕಂಪನಿ ಹೇಳಿದೆ. ಗೂಗಲ್‌ 2022ರಲ್ಲಿ ಅಮೇರಿಕಾದಲ್ಲಿ ಈ ಡಿಜಿಟಲ್ ವ್ಯಾಲೆಟ್ ಅಪ್ಲಿಕೇಶನ್ ಅನ್ನು ಆರಂಭಿಸಿತ್ತು. ಇದಾಗಿ ಸುಮಾರು 2 ವರ್ಷಗಳ ಬಳಿಕ ಭಾರತದಲ್ಲಿ ಕಾರ್ಯಾಚರಿಸುತ್ತಿದೆ. ಗೂಗಲ್‌ ವ್ಯಾಲೆಟ್‌ ಇದೀಗ ಡೌನ್‌ಲೋಡ್ ಮಾಡಲು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಸದ್ಯಕ್ಕೆ ಗೂಗಲ್ ತನ್ನ ವ್ಯಾಲೆಟ್ ಅನ್ನು ಭಾರತದಲ್ಲಿನ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಬಿಡುಗಡೆ ಮಾಡಿದೆ.

ನೀವು ಗೂಗಲ್‌ ವ್ಯಾಲೆಟ್‌ನಲ್ಲಿ ಹಣಕಾಸಿನ ಡೇಟಾವನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಬಹುದು. ಉದಾಹರಣೆಗೆ ನಿಮ್ಮ ಚಲನಚಿತ್ರ ಟಿಕೆಟ್‌ಗಳು ಮತ್ತು ಈವೆಂಟ್ ಟಿಕೆಟ್‌ಗಳನ್ನು ಭೌತಿಕವಾಗಿ ಇಟ್ಟುಕೊಳ್ಳುವ ಬದಲು ಇದರಲ್ಲಿ ಸಂಗ್ರಹಿಸಿಟ್ಟುಕೊಳ್ಳಬಹುದು. ದೇಶದ ದೊಡ್ಡ ಕಂಪನಿಗಳಾದ ಪಿವಿಪಿ ಮತ್ತು ಐನಾಕ್ಸ್‌ಗಳು ಈಗಾಗಲೇ ಗೂಗಲ್ ವ್ಯಾಲೆಟ್‌ನಲ್ಲಿ ಲಭ್ಯ.

ಬಳಸುವುದು ಹೇಗೆ?

  • ಗೂಗಲ್‌ ಪ್ಲೇ ಸ್ಟೋರ್‌ (Play Store)ಗೆ ಹೋಗಿ ಗೂಗಲ್‌ ವ್ಯಾಲೆಟ್‌ (Google Wallet) ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿ.
  • ಅಪ್ಲಿಕೇಷನ್‌ ಓಪನ್‌ ಮಾಡಿ ‘Add to Walletʼ ಆಯ್ಕೆನ್ನು ಸೆಲೆಕ್ಟ್‌ ಮಾಡಿ. ಈಗ ನೀವು ಫೋಟೊ, ಲಾಯಲ್ಟಿ, ಗಿಫ್ಟ್‌ ಕಾರ್ಡ್‌ ಮತ್ತು ಟ್ರಾನ್ಸ್‌ಪೋರ್ಟ್‌ ಪಾಸ್‌ ಎನ್ನುವ ನಾಲ್ಕು ಆಯ್ಕೆಯನ್ನು ಪಡೆಯುತ್ತೀರಿ.
  • ಬಾರ್ ಕೋಡ್ ಅಥವಾ ಕ್ಯೂಆರ್ ಕೋಡ್ ಬಳಸಿ ಪಾಸ್ ರಚಿಸಲು ಫೋಟೊ ಆಯ್ಕೆ ಮಾಡಿ.
  • ವಿವಿಧ ಬ್ರ್ಯಾಂಡ್‌ಗಳಿಂದ ನಿಮ್ಮ ಲಾಯಲ್ಟಿ ಪಾಯಿಂಟ್‌ಗಳನ್ನು ಸೇರಿಸಲು ಲಾಯಲ್ಟಿ ಆಯ್ಕೆ ಬಳಸಿ. ಅದೇ ರೀತಿ ಗಿಫ್ಟ್‌ ಕಾರ್ಡ್ ಮತ್ತು ಟ್ರಾನ್ಸ್‌ಪೋರ್ಟ್‌ ಪಾಸ್‌ ಅನ್ನು ನಿಮ್ಮ ವ್ಯಾಲೆಟ್‌ಗೆ ಸೇರಿಸಿ.

ಗಮನಿಸಿ ಈ ಆ್ಯಪ್‌ನಲ್ಲಿ ಮೊದಲೇ ಹೇಳಿದಂತೆ ನಗದು ಪಾವತಿ ಸಾಧ್ಯವಿಲ್ಲ. ಅದಕ್ಕಾಗಿ ಗೂಗಲ್‌ ಪೇಯನ್ನು ಬಳಸಿ.

ಇದನ್ನೂ ಓದಿ: Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

Continue Reading

ಮನಿ-ಗೈಡ್

Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Money Guide: ರಾಷ್ಟ್ರೀಯ ಪಿಂಚಣಿ ಯೋಜನೆ (NPS) ದೇಶದಲ್ಲಿರುವ ಅತ್ಯುತ್ತಮ ನಿವೃತ್ತಿ ಯೋಜನೆ ಎನಿಸಿಕೊಂಡಿದೆ. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಆದರೆ ಕೆಲವೊಮ್ಮೆ ಅನೇಕ ಕಾರಣಗಳಿಂದ ಎನ್‌ಪಿಎಸ್‌ ಖಾತೆ ನಿಷ್ಕ್ರೀಯವಾಗುತ್ತದೆ. ಇದನ್ನು ಹೇಗೆ ಸರಿಪಡಿಸಬಹುದು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಪ್ರತಿಯೊಬ್ಬ ಉದ್ಯೋಗಿಯೂ ಕೆಲಸಕ್ಕೆ ಸೇರಿದಾಗಿನಿಂದಲೇ ನಿವೃತ್ತಿ ಜೀವನಕ್ಕಾಗಿ ಯೋಜನೆ ರೂಪಿಸುವುದು ಅಗತ್ಯ. ಅದಕ್ಕಾಗಿ ಈಗಲೇ ಒಂದಷ್ಟು ಮೊತ್ತವನ್ನು ಕೂಡಿಡಲು ಆರಂಭಿಸಬೇಕು ಎಂದು ಸಲಹೆ ನೀಡುತ್ತಾರೆ ಆರ್ಥಿಕ ತಜ್ಞರು. ಇದಕ್ಕಾಗಿ ದೇಶದಲ್ಲಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಈ ಪೈಕಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (NPS) ಕೂಡ ಒಂದು. ಎನ್‌ಪಿಎಸ್‌ ಅನ್ನು ನಿವೃತ್ತಿಗೆ ಉತ್ತಮ ಯೋಜನೆ ಎಂದು ಪರಿಗಣಿಸಲಾಗುತ್ತದೆ. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಆದರೆ ಕೆಲವೊಮ್ಮೆ ಅನೇಕ ಕಾರಣಗಳಿಂದ ಎನ್‌ಪಿಎಸ್‌ ಖಾತೆ ನಿಷ್ಕ್ರೀಯವಾಗುತ್ತದೆ. ಇದಕ್ಕೆ ಕಾರಣವೇನು? ಇದನ್ನು ಹೇಗೆ ಸರಿಪಡಿಸಬಹುದು? ಮುಂತಾದ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ಸ್ಥಗಿತಗೊಂಡ ಎನ್‌ಪಿಎಸ್‌ ಖಾತೆಯನ್ನು ಸಕ್ರಿಯಗೊಳಿಸಲು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಕೆಲವೊಂದು ಮಾರ್ಗಸೂಚಿಗಳನ್ನು ನೀಡಿದೆ. ಈ ಕುರಿತಾದ ವಿವರ ಇಲ್ಲಿದೆ.

ಯಾಕಾಗಿ ಖಾತೆ ಸ್ಥಗಿತಗೊಳ್ಳುತ್ತದೆ?

ಕನಿಷ್ಠ ಪಾವತಿಯ ಕೊರತೆ: ಟೈರ್ 1 ಎನ್‌ಪಿಎಸ್‌ ಖಾತೆಗಳಿಗೆ ವಾರ್ಷಿಕ ಕನಿಷ್ಠ 1,000 ರೂ. ಹೂಡಿಕೆ ಮಾಡಬೇಕಾಗುತ್ತದೆ. ಒಂದು ವರ್ಷದೊಳಗೆ ಈ ನಿಯಮ ಪಾಲಿಸದಿದ್ದರೆ ನಿಮ್ಮ ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಟೈರ್ 1 ಸ್ಥಗಿತಗೊಂಡರೆ ಟೈರ್ 2 ಖಾತೆಗಳು ಸಹ ನಿಷ್ಕ್ರಿಯವಾಗುತ್ತವೆ.

ಅಪೂರ್ಣ ಕೆವೈಸಿ ಪ್ರಕ್ರಿಯೆ: ಎನ್‌ಪಿಎಸ್‌ ಖಾತೆಗಳಿಗೆ ಕೆವೈಸಿ (Know Your Customer) ಅಪ್‌ಡೇಟ್‌ ಮಾಡುವುದು ಕಡ್ಡಾಯಗೊಳಿಸಲಾಗಿದೆ. ನೋಂದಣಿ ವೇಳೆ ಅಪೂರ್ಣ ಮಾಹಿತಿ ನೀಡಿದ್ದರೆ ಅಥವಾ ಸೂಕ್ತ ದಾಖಲೆ ಒದಗಿಸದಿದ್ದರೆ ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಳ್ಳುತ್ತದೆ.

ದಾಖಲಾತಿ ನಮೂನೆ ಸಲ್ಲಿಕೆಯ ವಿಳಂಬ: ತಾಂತ್ರಿಕ ದೋಷ ಅಥವಾ ಕೇಂದ್ರ ರೆಕಾರ್ಡ್ ಕೀಪಿಂಗ್ ಏಜೆನ್ಸಿಗೆ (CRA) ದಾಖಲಾತಿ ನಮೂನೆಯನ್ನು ಸಲ್ಲಿಸುವಲ್ಲಿನ ವಿಳಂಬವು ಖಾತೆ ಸ್ಥಗಿತಗೊಳಿಸಲು ಕಾರಣವಾಗಬಹುದು.

ಆನ್‌ಲೈನ್‌ ಮೂಲಕ ಹೀಗೆ ಸಕ್ರಿಯಗೊಳಿಸಿ

ಕನಿಷ್ಠ ಕೊಡುಗೆ ಪಾವತಿಸಿ / ದಂಡ ಕಟ್ಟಿ: ಎನ್‌ಪಿಎಸ್‌ ಅಕೌಂಟ್‌ಗೆ ಲಾಗಿನ್‌ ಆಗಿ Contribution ವಿಭಾಗಕ್ಕೆ ತೆರಳಿ. ನಿಮ್ಮ ಖಾತೆ ಸ್ಥಗಿತಗೊಂಡ ಅವಧಿಯಿಂದ ತೊಡಗಿ ಇದುವರೆಗೆ ತಿಂಗಳಿಗೆ ಕನಿಷ್ಠ 500 ರೂ. ಪಾವತಿಸಿ. ಹೆಚ್ಚುವರಿಯಾಗಿ 100 ರೂ. ದಂಡವನ್ನೂ ಕಟ್ಟಿ.

ದೃಢೀಕರಣ ಮತ್ತು ಖಾತೆ ಪುನರುಜ್ಜೀವನ: ಆನ್‌ಲೈನ್‌ ಪಾವತಿಯನ್ನು ಯಶಸ್ವಿಯಾಗಿ ಮಾಡಿದ ನಂತರ ಇಮೇಲ್ ಅಕೌಂಟ್‌ಗೆ ದೃಢೀಕರಣದ ಸಂದೇಶ ಬರುತ್ತದೆ. ಬಳಿಕ ಪಿಎಫ್‌ಆರ್‌ಡಿಎ ನಿಮ್ಮ ಖಾತೆಯನ್ನು ಪರಿಶೀಲಿಸಿ ಕೆಲವೇ ದಿನಗಳಲ್ಲಿ ಅದನ್ನು ಮತ್ತೆ ಸಕ್ರಿಯಗೊಳಿಸುತ್ತದೆ.

ಆಫ್‌ಲೈನ್‌ ಮೂಲಕ ಸಕ್ರಿಯಗೊಳಿಸುವ ವಿಧಾನ

ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ: ದಂಡ ಸಹಿತ ಬಾಕಿ ಇರುವ ಮೊತ್ತವನ್ನು ಪಾವತಿಸಿ. ಬಳಿಕ ಎನ್‌ಪಿಎಸ್‌ ವೆಬ್‌ಸೈಟ್‌ನಿಂದ UOS-S10-A ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ. ಅದನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ ಪ್ಯಾನ್‌ ಕಾರ್ಡ್‌ ಪ್ರತಿಯನ್ನು ಲಗತ್ತಿಸಿ. ಇದನ್ನು ನಿಮ್ಮ ಪಿಒಪಿ ಶಾಖೆ (ಬ್ಯಾಂಕ್ ಅಥವಾ ನಿಯೋಜಿತ ಏಜೆನ್ಸಿ)ಗೆ ನೀಡಿ. ಪಿಒಪಿ ನಿಮ್ಮ ಮನವಿಯನ್ನು ಪರಿಶೀಲಿಸಿ ಪಿಎಫ್‌ಆರ್‌ಡಿಎಗೆ ಕಳುಹಿಸುತ್ತದೆ. ಕೆಲವೇ ದಿನಗಳಲ್ಲಿ ಖಾತೆ ಸಕ್ರಿಯಗೊಂಡಿರುವ ಬಗ್ಗೆ ಎಸ್‌ಎಂಎಸ್‌ ಅಥವಾ ಇಮೇಲ್‌ಗೆ ಮಾಹಿತಿ ರವಾನೆಯಾಗುತ್ತದೆ.

ಆಧಾರ್ ದೃಢೀಕರಣ ಕಡ್ಡಾಯ

ದೇಶಾದ್ಯಂತ ಆನ್‌ಲೈನ್‌ ವಂಚನೆ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ಖಾತೆಗಳ ಲಾಗಿನ್ ಪ್ರಕ್ರಿಯೆಯಲ್ಲಿ ಬದಲಾವಣೆ ತಂದಿದೆ. ಏಪ್ರಿಲ್ 1ರಿಂದ ಹೊಸ ನಿಯಮ- ಕಡ್ಡಾಯ ಆಧಾರ್ ಅಥೆಂಟಿಕೇಷನ್‌ ಜಾರಿಗೆ ಬಂದಿದೆ.  

ಇದನ್ನೂ ಓದಿ: Money Guide: ಗಮನಿಸಿ; ಏ. 1ರಿಂದ ಎನ್‌ಪಿಎಸ್ ವಹಿವಾಟಿಗೆ ಆಧಾರ್ ದೃಢೀಕರಣ ಕಡ್ಡಾಯ: ಏನಿದು ಹೊಸ ನಿಯಮ ? ಯಾಕಾಗಿ ?

Continue Reading

ಮನಿ ಗೈಡ್

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌ ಮತ್ತು ಸುಕನ್ಯಾ ಸಮೃದ್ಧಿ; ಇವುಗಳ ಪ್ರಯೋಜನ ಏನೇನು?

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸುಕನ್ಯಾ ಸಮೃದ್ಧಿ ಯೋಜನೆ ಮತ್ತು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ನಿರ್ದಿಷ್ಟ ಉದ್ದೇಶಗಳೊಂದಿಗೆ ವಿನ್ಯಾಸಗೊಳಿಸಲಾದ (Money Guide) ಎರಡು ಪ್ರಮುಖ ಯೋಜನೆಗಳಾಗಿವೆ. ಮಹಿಳೆಯರಿಗೆ ಈ ಎರಡು ಯೋಜನೆಗಳ ಪ್ರಯೋಜನಗಳು ಏನೇನು? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Money Guide
Koo

ಮಹಿಳೆಯರನ್ನು (women) ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು, ಲಿಂಗ ಸಮಾನತೆಯನ್ನು ಉತ್ತೇಜಿಸಲು ಸರ್ಕಾರವು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ವಿಶೇಷ ಉಳಿತಾಯ ಯೋಜನೆಗಳನ್ನು ಪರಿಚಯಿಸಿದೆ. ಸಾಮಾನ್ಯವಾಗಿ ಮಹಿಳೆಯರು ಹಣಕಾಸಿನ ಸೇವೆಗಳ (Money Guide) ಸದುಪಯೋಗಪಡಿಸಲು ಮತ್ತು ಉಳಿತಾಯ ಕಾರ್ಯವಿಧಾನಗಳಲ್ಲಿ ಭಾಗವಹಿಸಲು ಅಡೆತಡೆಗಳನ್ನು ಎದುರಿಸುತ್ತಾರೆ. ವಿಶೇಷ ಉಳಿತಾಯ ಯೋಜನೆಗಳು (saving Scheme) ಅವರನ್ನು ಆರ್ಥಿಕ ಮುಖ್ಯವಾಹಿನಿಗೆ ತರುವ ಗುರಿಯನ್ನು ಹೊಂದಿದ್ದು, ಇದರಿಂದ ಅವರ ಭವಿಷ್ಯಕ್ಕಾಗಿ ಉಳಿತಾಯವನ್ನು ಮಾಡಲು ಪ್ರೋತ್ಸಾಹಿಸುತ್ತವೆ.

ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Scheme) ಮತ್ತು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು (Mahila Samman Saving Certificate) ನಿರ್ದಿಷ್ಟ ಉದ್ದೇಶಗಳೊಂದಿಗೆ ವಿನ್ಯಾಸಗೊಳಿಸಲಾದ ಎರಡು ಪ್ರಮುಖ ಯೋಜನೆಗಳಾಗಿವೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಇದು ಪ್ರಮುಖವಾಗಿದೆ. ಉಳಿತಾಯ ಮತ್ತು ಹೂಡಿಕೆಗೆ ಅವಕಾಶಗಳನ್ನು ಒದಗಿಸುವ ಮೂಲಕ ಈ ಯೋಜನೆಗಳು ಮಹಿಳೆಯರು ತಮ್ಮ ಹಣಕಾಸಿನ ಮೇಲೆ ಹೆಚ್ಚಿನ ನಿಯಂತ್ರಣವನ್ನು ಹೊಂದಲು ಮತ್ತು ಸ್ವತಂತ್ರ ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.


ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಕೇಂದ್ರ ಬಜೆಟ್ 2023ರಲ್ಲಿ ಘೋಷಿಸಲಾದ ಭಾರತ ಸರ್ಕಾರದ ಒಂದು ಬಾರಿಯ ಹೊಸ ಸಣ್ಣ ಉಳಿತಾಯ ಯೋಜನೆಯಾಗಿದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಮಾರ್ಚ್ 2025ರವರೆಗೆ ಎರಡು ವರ್ಷಗಳವರೆಗೆ ಲಭ್ಯವಿದೆ. ಇದು 2 ವರ್ಷಗಳ ಅವಧಿಗೆ ಮಹಿಳೆಯರು ಅಥವಾ ಹುಡುಗಿಯರ ಹೆಸರಿನಲ್ಲಿ 2 ಲಕ್ಷದವರೆಗೆ ಠೇವಣಿ ಸೌಲಭ್ಯವನ್ನು ನೀಡುತ್ತದೆ.

ಬಡ್ಡಿ ದರ

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಮಹಿಳೆಯರು ಅಥವಾ ಬಾಲಕಿಯರ ಹೆಸರಿನಲ್ಲಿ 2 ಲಕ್ಷದವರೆಗೆ ಠೇವಣಿ ಸೌಲಭ್ಯವನ್ನು 2 ವರ್ಷಗಳ ಅವಧಿಗೆ ಶೇ. 7.5ರ ಸ್ಥಿರ ಬಡ್ಡಿ ದರದಲ್ಲಿ ಭಾಗಶಃ ಹಿಂತೆಗೆದುಕೊಳ್ಳುವ ಆಯ್ಕೆಯೊಂದಿಗೆ ನೀಡುತ್ತದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಅಲ್ಪಾವಧಿಗೆ ಮಹಿಳೆಯ ಹೆಸರಿನಲ್ಲಿ ಹೂಡಿಕೆ ಮಾಡುವ ಸ್ಥಿರ ಠೇವಣಿಗಳಿಗೆ (ಎಫ್‌ಡಿ) ಸೂಕ್ತವಾದ ಪರ್ಯಾಯವಾಗಿದೆ ಎಂಬುದು ತಜ್ಞರ ಅಭಿಪ್ರಾಯ.

ಅರ್ಹತೆ

ಯಾವುದೇ ಭಾರತೀಯ ನಿವಾಸಿ ಮಹಿಳೆ ಇದನ್ನು ಪಡೆಯಬಹುದು. ಯಾವುದೇ ವಯಸ್ಸಿನ ನಿರ್ಬಂಧ ಇಲ್ಲ. ಅಪ್ರಾಪ್ತ ವಯಸ್ಸಿನ ಬಾಲಕಿಯ ಸ್ವಾಭಾವಿಕ ಅಥವಾ ಕಾನೂನುಬದ್ಧ ಪೋಷಕರಿಂದ ಖಾತೆಯನ್ನು ಮಾಡಬಹುದು.

ಠೇವಣಿ ಮಿತಿಗಳು

ಕನಿಷ್ಠ ಠೇವಣಿ 1000 ರೂ.ನಿಂದ ಗರಿಷ್ಠ 2 ಲಕ್ಷ ರೂ. ಪ್ರತಿ ಠೇವಣಿದಾರರ ಖಾತೆಗಳ ಸಂಖ್ಯೆಯ ಮೇಲೆ ಯಾವುದೇ ಮಿತಿಯಿಲ್ಲ. ಈ ಯೋಜನೆಯಡಿಯಲ್ಲಿ ಎಲ್ಲಾ ಖಾತೆಗಳ ಒಟ್ಟು ಮೊತ್ತವು 2 ಲಕ್ಷ ರೂ.ಗಳನ್ನು ಮೀರುವುದಿಲ್ಲ. ಒಂದೇ ಗ್ರಾಹಕನಿಗೆ ಈ ಯೋಜನೆಯಡಿಯಲ್ಲಿ ಎರಡು ಖಾತೆಗಳನ್ನು ತೆರೆಯಬಹುದು. ಆದರೆ ಇದರ ನಡುವೆ 3 ತಿಂಗಳ ಮಧ್ಯಂತರ ಸಮಯವಿದೆ.

ಕೊನೆಯ ದಿನಾಂಕ

ಯೋಜನೆಯು ಸೀಮಿತ ಅವಧಿಗೆ ಮಾತ್ರ ಲಭ್ಯವಿದೆ. ಸದ್ಯಕ್ಕೆ, ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಎರಡು ವರ್ಷಗಳ ಯೋಜನೆಯಾಗಿದ್ದು, ಇದು ಏಪ್ರಿಲ್ 2023ರಲ್ಲಿ ಪ್ರಾರಂಭವಾಯಿತು ಮತ್ತು ಮಾರ್ಚ್ 2025ರವರೆಗೆ ಮುಂದುವರಿಯುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆಯನ್ನು ದೇಶಾದ್ಯಂತ ಬ್ಯಾಂಕ್‌ಗಳು ಮತ್ತು ಅಂಚೆ ಕಚೇರಿಗಳ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದು.

ಸುಕನ್ಯಾ ಸಮೃದ್ಧಿ ಯೋಜನೆ

ಸುಕನ್ಯಾ ಸಮೃದ್ಧಿ ಯೋಜನೆ (ಯೋಜನೆ) (SSY) ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80C ಪ್ರಕಾರ ಆಕರ್ಷಕ ಬಡ್ಡಿದರಗಳು ಮತ್ತು ತೆರಿಗೆ ಪ್ರಯೋಜನಗಳನ್ನು ಒದಗಿಸುವ ಮೂಲಕ ಹೆಣ್ಣುಮಕ್ಕಳಿಗೆ ಸಮೃದ್ಧ ಭವಿಷ್ಯವನ್ನು ಭದ್ರಪಡಿಸುವ ಗುರಿಯನ್ನು ಹೊಂದಿದೆ.


ಮಹಿಳಾ ಸಮ್ಮಾನ್ ಮತ್ತು ಸುಕನ್ಯಾ ಸಮೃದ್ಧಿ ನಡುವಿನ ವ್ಯತ್ಯಾಸ

ಸುಕನ್ಯಾ ಸಮೃದ್ಧಿ ಯೋಜನೆಯು ಭಾರತ ಸರ್ಕಾರದ ಒಂದು ಸಣ್ಣ ಠೇವಣಿ ಯೋಜನೆಯಾಗಿದ್ದು, ಇದು ಹೆಣ್ಣು ಮಗುವಿಗೆ ಮಾತ್ರ ಮೀಸಲಾಗಿದೆ. ಈ ಯೋಜನೆಯು ಹೆಣ್ಣು ಮಗುವಿನ ಶಿಕ್ಷಣ ಮತ್ತು ಮದುವೆ ವೆಚ್ಚವನ್ನು ಭರಿಸಲು ಉದ್ದೇಶಿಸಲಾಗಿದೆ.

ಸುಕನ್ಯಾ ಸಮೃದ್ಧಿ ಎಂಬುದು ಭಾರತದಲ್ಲಿನ ಸರ್ಕಾರಿ ಕಾರ್ಯಕ್ರಮವಾಗಿದ್ದು, ಕುಟುಂಬಗಳು ತಮ್ಮ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ಉಳಿಸಲು ಸಹಾಯ ಮಾಡಲು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಬೇಟಿ ಬಚಾವೋ ಬೇಟಿ ಪಢಾವೋ ಅಭಿಯಾನದ ಭಾಗವಾಗಿ 2015 ರಲ್ಲಿ ಪ್ರಾರಂಭಿಸಲಾಯಿತು. ಇದು ವಾರ್ಷಿಕವಾಗಿ ಶೇ. 8.2 ಬಡ್ಡಿದರವನ್ನು ನೀಡುತ್ತದೆ. ಸುಕನ್ಯಾ ಸಮೃದ್ಧಿ ಯೋಜನೆಯು ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಪ್ರಯೋಜನಗಳನ್ನು ಹೊಂದಿದೆ.

ಅರ್ಹತೆ

10 ವರ್ಷ ವಯಸ್ಸಿನ ಹೆಣ್ಣು ಮಗುವಿಗೆ ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆಯಬಹುದು.

ಕನಿಷ್ಠ ಮತ್ತು ಗರಿಷ್ಠ ಠೇವಣಿ

ಕನಿಷ್ಠ 250 ರೂ. ಮತ್ತು ಗರಿಷ್ಠ ರೂ. ವಾರ್ಷಿಕವಾಗಿ 1.5 ಲಕ್ಷ ರೂ. ಗಳನ್ನು ಠೇವಣಿ ಮಾಡಬಹುದು.

ಹೂಡಿಕೆಯ ಅವಧಿ

ಕನಿಷ್ಠ 15 ವರ್ಷಗಳ ಕೊಡುಗೆಗಳ ಅಗತ್ಯವಿದೆ.

ಇದನ್ನೂ ಓದಿ: Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

ಭಾಗಶಃ ಹಿಂತೆಗೆದುಕೊಳ್ಳುವಿಕೆಗಳು

ಹೆಣ್ಣು ಮಗುವಿಗೆ 18 ವರ್ಷ ತುಂಬಿದ ಅನಂತರ ಉನ್ನತ ಶಿಕ್ಷಣದ ವೆಚ್ಚಗಳಿಗಾಗಿ ಭಾಗಶಃ ಹಿಂಪಡೆಯುವಿಕೆಗಳನ್ನು ಅನುಮತಿಸಲಾಗುತ್ತದೆ.

ಖಾತೆ ಮುಚ್ಚುವಿಕೆ

ಖಾತೆಯು 21 ವರ್ಷಗಳಲ್ಲಿ ಪಕ್ವವಾಗುತ್ತದೆ ಅಥವಾ 18 ವರ್ಷ ತುಂಬಿದ ನಂತರ ಹುಡುಗಿಯ ಮದುವೆಯ ಸಂದರ್ಭದಲ್ಲಿ ಅಕಾಲಿಕವಾಗಿ ಖಾತೆಯನ್ನು ಮುಚ್ಚಬಹುದು.

Continue Reading

ಮನಿ-ಗೈಡ್

Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

Money Guide: ಇಂದಿನ ಮಕ್ಕಳೇ ಮುಂದಿನ ಜನಾಂಗ. ಹೀಗಾಗಿ ಮಕ್ಕಳಲ್ಲಿ ಆರ್ಥಿಕ ಶಿಸ್ತು ಬೆಳೆಸುವುದು ಮುಖ್ಯ. ಇದರಿಂದ ಭವಿಷ್ಯದಲ್ಲಿ ಅವರು ಸಾಲಕ್ಕೆ ಕೈ ಚಾಚುವುದು ತಪ್ಪುತ್ತದೆ. ನೀವು ಬಾಯಿ ಮಾತಿನಲ್ಲಿ ಹೇಳುವುದಕ್ಕಿಂತ ಪ್ರಾಕ್ಟಿಕಲ್‌ ಆಗಿ ಅವರಿಗೆ ತಿಳಿ ಹೇಳಲು ಈ ರಜಾ ಅವಧಿ ಅತ್ಯಂತ ಪ್ರಶಸ್ತ ಸಮಯ. ಹಾಗಾದರೆ ಹೇಗೆ ಮಕ್ಕಳಿಗೆ ಪ್ರಾಯೋಗಿಕ ಪಾಠ ಮಾಡಬಹುವುದು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಮಕ್ಕಳಿಗೆ ಈಗ ರಜಾ ಅವಧಿ. ಪಾಠ, ಪರೀಕ್ಷೆ, ಸೆಮಿನಾರ್‌ ಹೀಗೆ ವರ್ಷಪೂರ್ತಿ ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿದ್ದ ಅವರು ರಿಲೀಫ್‌ ಆಗುವ ಸಮಯ. ಈಗ ಬೆಳಗ್ಗೆ ಬೇಗ ಎದ್ದು ಗಡಿಬಿಡಿಯಲ್ಲಿ ಶಾಲೆ, ಕಾಲೇಜಿಗೆ ಓಡಬೇಕೆಂಬ ಧಾವಂತ ಇರುವುದಿಲ್ಲ. ತಮಗೆ ಬೇಕಾದಂತೆ ಕಾಲ ಕಳೆಯಬಹುದು. ಹಾಗಂತ ಅವರನ್ನು ಅವರ ಪಾಡಿಗೆ ಪೂರ್ತಿಯಾಗಿ ಬಿಡಬೇಡಿ. ಅವರಲ್ಲಿ ಆರ್ಥಿಕ ಸಾಕ್ಷರತೆ ಮೂಡಿಸಲು ಇದು ತಕ್ಕ ಸಮಯ. ಎಳವೆಯಲ್ಲಿಯೇ ಆರ್ಥಿಕತೆಯ ವಿಚಾರದಲ್ಲಿ ಅವರಲ್ಲಿ ಶಿಸ್ತು ಮೂಡಿದರೆ ಭವಿಷ್ಯದಲ್ಲಿ ಎದುರಾಗುವ ಅದೆಷ್ಟೋ ಸಮಸ್ಯೆಗಳಿಂದ ಪಾರಾಗಬಹುದು. ನೀವು ಬಾಯಿ ಮಾತಿನಲ್ಲಿ ಹೇಳುವುದಕ್ಕಿಂತ ಪ್ರಾಕ್ಟಿಕಲ್‌ ಆಗಿ ಅವರಿಗೆ ತಿಳಿ ಹೇಳಲು ಈ ರಜಾ ಅವಧಿ ಅತ್ಯಂತ ಪ್ರಶಸ್ತ ಸಮಯ. ಹಾಗಾದರೆ ಹೇಗೆ ಮಕ್ಕಳಿಗೆ ಪ್ರಾಯೋಗಿಕ ಪಾಠ ಮಾಡಬಹುವುದು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ಉಳಿತಾಯದ ಮಹತ್ವ ತಿಳಿ ಹೇಳಿ

ಹಣದ ಉಳಿತಾಯ ಎಲ್ಲರಿಗೂ, ಎಲ್ಲ ಕಾಲಕ್ಕೂ ಅನಿವಾರ್ಯ. ಒಂದಷ್ಟು ಉಳಿತಾಯ ನಿಮ್ಮ ಬಳಿ ಇದ್ದರೆ ಸಾಲ ಮಾಡುವುದರಿಂದ ಪಾರಾಗಬಹುದು. ಆರಂಭದಲ್ಲಿ ಈ ಪಾಠವನ್ನು ಮಕ್ಕಳಿಗೆ ತಿಳಿ ಹೇಳಿ. ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲರಿಗೂ ಇದನ್ನು ಅವರಿಗೆ ಮನದಟ್ಟಾಗುವಂತೆ ವಿವರಿಸಿ. ಮಕ್ಕಳ ಹೆಸರಿನಲ್ಲಿ ಸೇವಿಂಗ್ಸ್‌ ಅಕೌಂಟ್‌ ಓಪನ್‌ ಮಾಡಿ. ಪೋಸ್ಟ್‌ ಆಫೀಸ್‌ನಲ್ಲಿಯೂ ಖಾತೆ ತೆರೆಯಬಹುದು. ಅದರಲ್ಲಿ ನಿಯಮಿತವಾಗಿ ಠೇವಣಿ ಇಡಲು ಹೇಳಿ. ನೀವು ಅವರ ಅಕೌಂಟ್‌ಗೆ ಹಣ ಹಾಕುವುದಕ್ಕಿಂತ ಈ ಕೆಲಸವನ್ನು ಸ್ವತಃ ಅವರೇ ನಿರ್ವಹಿಸಲಿ. ಇದರಿಂದ ಅವರಿಗೆ ಉಳಿತಾಯದ ಪ್ರಾಧಾನ್ಯತೆ ಅರಿವಾಗುತ್ತದೆ. ಇದರ ಜತೆಗೆ ಚಿಕ್ಕ ಮಕ್ಕಳಾಗಿದ್ದರೆ ಮನೆಯಲ್ಲಿಯೇ ಉಳಿತಾಯ ಮಾಡಲು ಪಿಗ್ಗಿ ಬ್ಯಾಂಕ್‌ನ ವ್ಯವಸ್ಥೆ ಮಾಡಿ. ಭವಿಷ್ಯದ ಗುರಿಗಳಿಗಾಗಿ ಉಳಿತಾಯದ ಪ್ರಾಮುಖ್ಯತೆ ಮತ್ತು ಕಾಲಾನಂತರದಲ್ಲಿ ಸಣ್ಣ ಮೊತ್ತಗಳು ಹೇಗೆ ಉತ್ತಮ ಸಂಗ್ರಹವಾಗಿ ಬದಲಾಗಬಹುದು ಎಂಬುದನ್ನು ಅರ್ಥ ಮಾಡಿಸಿ. ಅದಕ್ಕಾಗಿ ಹೀಗೆ ಮಾಡಿ: ಅವರು ಯಾವುದಾದರೂ ವಸ್ತುವಿಗೆ ಬೇಡಿಕೆ ಇಟ್ಟರೆ (ಸೈಕಲ್‌, ಬ್ಯಾಗ್‌ ಇತ್ಯಾದಿ) ಕೂಡಲೇ ತಂದು ಕೊಡಬೇಡಿ. ಅವರ ಉಳಿತಾಯದ ಹಣದಿಂದ ಅವರ ಅಗತ್ಯವನ್ನು ಕಂಡುಕೊಳ್ಳುವ ಬಗ್ಗೆ ಪ್ರಸ್ತಾವಿಸಿ. ನಿರ್ದಿಷ್ಟ ಸಮಯದವರೆಗೆ ಹಣ ಉಳಿಸಿದರೆ ಹೇಗೆ ನಮ್ಮ ಅಗತ್ಯಗಳನ್ನು ಪೂರೈಸಬಹುದು ಎನ್ನುವದನ್ನು ಅವರಿಗೆ ಮನದಟ್ಟು ಮಾಡಿ.

ಪಾರ್ಟ್‌ ಟೈಮ್‌ ಜಾಬ್‌

ಸ್ವಲ್ಪ ದೊಡ್ಡ ಮಕ್ಕಳಾದರೆ (ಎಸ್ಸೆಸ್ಸೆಲ್ಸಿ / ಪಿಯು / ಪದವಿ) ಅವರಿಗೆ ರಜೆಯಲ್ಲಿ ಸಣ್ಣ ಪುಟ್ಟ ಪಾರ್ಟ್‌ ಟೈಮ್‌ ಜಾಬ್‌ ಕೊಡಿಸಿ. ಈ ಮೂಲಕ ಅವರಿಗೆ ಹಣದ ಮಹತ್ವ ತಿಳಿಸಿಕೊಡಿ. ಕಾರ್ಖಾನೆಗಳಲ್ಲಿ ಲೆಕ್ಕ ಪತ್ರ ನೋಡಿಕೊಳ್ಳುವುದು, ಪ್ಯಾಕ್‌ ಮಾಡುವುದು, ಕಂಪ್ಯೂಟರ್‌ ಕೆಲಸ, ಸೇಲ್‌ ಮ್ಯಾನ್‌ / ಸೇಲ್ಸ್‌ ಗರ್ಲ್‌, ಬೆಳಗ್ಗೆ ದಿನ ಪತ್ರಿಕೆ ಹಂಚುವುದು ಇತ್ಯಾದಿ ಕೆಲಸ ಮಾಡುವಂತೆ ಮಕ್ಕಳನ್ನು ಪ್ರೋತ್ಸಾಹಿಸಿ. ಹಳ್ಳಿಯವರಾದರೆ ಹೊಲ, ತೋಟದ ಕೆಲಸಕ್ಕೆ ತಮ್ಮೊಂದಿಗೆ ಬರುವಂತೆ ಹೇಳಿ. ಅವರ ಕೆಲಸಕ್ಕೆ ಅನುಗುಣವಾಗಿ ಇಂತಿಷ್ಟು ಸಂಬಳ ನಿಗದಿ ಪಡಿಸಿ. ಬೇಕಿದ್ದರೆ ಅವರ ಟ್ಯೂಷನ್‌ ಕೂಡ ಮಾಡಬಹುದು. ಒಟ್ಟಿನಲ್ಲಿ ಅವರು ಸಂಪಾದಿಸುವಂತೆ ಮಾಡಿ ಅವರಿಗೆ ದುಡಿಮೆಯ ಮಹತ್ವ ತಿಳಿಸಿ.

ಸಂಬಳವನ್ನು ಸರಿಯಾಗಿ ಹಂಚಿಕೆ ಮಾಡಿ

ಮಕ್ಕಳ ಸಂಪಾದನೆಯನ್ನು ಮುಂದಿಟ್ಟುಕೊಂಡು ಅದನ್ನು ಯಾವೆಲ್ಲ ರೀತಿ ಹಂಚಿಕೆ ಮಾಡಬಹುದು ಎನ್ನುವುದನ್ನು ಅವರೊಂದಿಗೆ ಚರ್ಚಿಸಿ. ಅವರ ಖರ್ಚಿಗೆ, ಮನೆ ಖರ್ಚಿಗೆ, ಇತರ ಅಗತ್ಯಗಳಿಗೆ ಹಂಚಿಕೆ ಮಾಡಿ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡುವುದು ಹೇಗೆ ಎನ್ನುವುದರ ಯೋಜನೆ ತಯಾರಿಸಿ. ಇನ್ನು ಅನಗತ್ಯ ವಸ್ತುಗಳನ್ನು ಅವರು ಖರೀದಿಸುವುದನ್ನು ತಪ್ಪಿಸಿ. ಅವರ ಆನ್‌ಲೈನ್‌ ಶಾಪಿಂಗ್‌ ಬಗ್ಗೆ ನಿಗಾ ಇಡಿ.

ಬಜೆಟ್‌ ತಯಾರಿಸಲಿ

ಬಜೆಟ್‌ ಯಾಕೆ ಮುಖ್ಯ ಎನ್ನುವುದರ ಕುರಿತು ಮಾಹಿತಿ ನೀಡಿ. ಇದಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಮಂಡಿಸುವ ಬಜೆಟ್‌ನ ಉದಾಹರಣೆ ಕೊಡಬಹುದು. ಬಳಿಕ ಅವರೇ ಬಜೆಟ್‌ ತಯಾರಿಸಲಿ. ಅವರ ಬಳಿ ಇರುವ ಪಾಕೆಟ್‌ ಮನಿ, ಉಡುಗೊರೆ ಸಿಕ್ಕ ಹಣ, ಸಂಬಳವನ್ನು ಆಟದ ವಸ್ತು ಖರೀದಿ, ತಿಂಡಿ ಖರೀದಿ ಮತ್ತು ಉಳಿತಾಯಕ್ಕೆ ಹೇಗೆ ಹಂಚಿಕೆ ಮಾಡಬಹುದು ಎನ್ನುವುದನ್ನು ಅವರೇ ಪ್ಲ್ಯಾನ್‌ ಮಾಡಲಿ.

ಹಾಸಿಗೆ ಇದ್ದಷ್ಟೇ ಕಾಲು ಚಾಚು ಎನ್ನುವ ಪಾಠ

ಮನೆ ಸಾಮಗ್ರಿ ಖರೀದಿಗೆ ಹೋಗುವಾಗ ಅವರನ್ನು ಕರೆದುಕೊಂಡು ಹೋಗಿ. ಕೈಯಲ್ಲಿ ಇರುವ ಹಣದಿಂದ ಹೇಗೆ ನಮ್ಮ ಅಗತ್ಯಗಳನ್ನು ಪೂರೈಸಬಹುದು ಎನ್ನುವುದು ಅವರ ಗಮನಕ್ಕೆ ಬರಲಿ. ನೆನಪಿಡಿ, ಮಕ್ಕಳು ನಿಮ್ಮನ್ನು ನೋಡಿ ಕಲಿಯುವುದರಿಂದ, ನಿಮ್ಮ ಪ್ರಭಾವ ಹೆಚ್ಚೇ ಬೀರುವುದರಿಂದ ನೀವು ಕೂಡ ಆರ್ಥಿಕ ಶಿಸ್ತನ್ನು ರೂಢಿಸಿಕೊಳ್ಳಿ. ಬಿಲ್‌ಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸಿ, ಭವಿಷ್ಯಕ್ಕಾಗಿ ಉಳಿತಾಯ ಮಾಡಿ. ಎಲ್ಲದಕ್ಕಿಂತ ಮುಖ್ಯವಾಗಿ ಹಾಸಿಗೆ ಇದ್ದಷ್ಟೇ ಕಾಲು ಚಾಚುವುದನ್ನು ರೂಢಿಸಿಕೊಳ್ಳಿ. ಅದನ್ನೇ ಮಕ್ಕಳಿಗೂ ತಿಳಿಸಿ. ಮಾತ್ರವಲ್ಲ ಹೂಡಿಕೆಯ ಪ್ರಾಧಾನ್ಯತೆಯ ಬಗ್ಗೆ ಮಕ್ಕಳಿಗೆ ವಿವರಿಸಿ. ಸಂಪತ್ತು ವೃದ್ಧಿಗೆ ಹೂಡಿಕೆ ಎನ್ನುವುದು ಅತ್ಯುತ್ತಮ ಮಾರ್ಗ ಎನ್ನವುದನ್ನು ತಿಳಿಸಿ. ಹೂಡಿಕೆಗೆ ವಿವಿಧ ವಿಧಾನಗಳಿದ್ದರೂ ಸುರಕ್ಷಿತ ಮಾರ್ಗವನ್ನು ಆಯ್ದುಕೊಳ್ಳುವ ಬಗ್ಗೆ ತಿಳಿಸಿ.

ಇದನ್ನೂ ಓದಿ: Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

Continue Reading
Advertisement
New Tata Ace EV 1000 launched by Tata Motors
ವಾಣಿಜ್ಯ1 min ago

Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

Brij Bhushan
Latest7 mins ago

Brij Bhushan : ಡಬ್ಲ್ಯುಎಫ್​ಐ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಲು ಕೋರ್ಟ್​ ಆದೇಶ

Dates Benefits
ಆರೋಗ್ಯ9 mins ago

Dates Benefits: ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ದಿನಕ್ಕೊಂದು ಖರ್ಜೂರ ತಿಂದರೆ ಸಾಕು!

Sanatan Sanstha
ದೇಶ18 mins ago

Sanatan Sanstha: ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು: ಚೇತನ್ ರಾಜಹಂಸ

Prajwal Revanna Case Revanna bail plea to be heard on Monday What is SIT argument
ಕ್ರೈಂ26 mins ago

Prajwal Revanna Case: ಸೋಮವಾರ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: SIT ವಾದ ಏನು? ವಕೀಲ ನಾಗೇಶ್‌ ಕೌಂಟರ್‌ ಏನು?

US Officer
ವಿದೇಶ31 mins ago

ಮನೆಗೆ ನುಗ್ಗಿ ತಮ್ಮದೇ ದೇಶದ ಕಪ್ಪುವರ್ಣೀಯ ಸೇನಾಧಿಕಾರಿಯನ್ನು ಕೊಂದ ಅಮೆರಿಕ ಪೊಲೀಸರು; Video ಇದೆ

Absence Video Case registered against Prajwal for sharing and uploading obscene video in Kudremukh
ಕರ್ನಾಟಕ46 mins ago

Absence Video: ಅಶ್ಲೀಲ ವಿಡಿಯೋ ಶೇರ್‌, ಅಪ್ಲೋಡ್‌ ಮಾಡುತ್ತಿದ್ದ ಪ್ರಜ್ವಲ್‌ ಮೇಲೆ ಕುದುರೆಮುಖದಲ್ಲಿ ಕೇಸ್‌ ದಾಖಲು!

MS Dhoni
ಪ್ರಮುಖ ಸುದ್ದಿ49 mins ago

MS Dhoni : ಧೋನಿಯ ಗಾಯದ ಗುಮಾನಿಗೆ ಸ್ಪಷ್ಟತೆ ನೀಡಿದ ಕೋಚ್ ಫ್ಲೆಮಿಂಗ್​

Road Accident
ಕ್ರೈಂ53 mins ago

Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

IPL 2024
ಪ್ರಮುಖ ಸುದ್ದಿ1 hour ago

IPL 2024 : ಸುನಿಲ್ ಗವಾಸ್ಕರ್ ಮತ್ತು ಹರ್ಷ ಭೋಗ್ಲೆ ವಿರುದ್ಧ ವಿರಾಟ್ ಕೊಹ್ಲಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ4 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ6 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ7 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ13 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ20 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ22 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ22 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌