Malaysia's New King: 300 ಕಾರು, ಪ್ರೈವೇಟ್‌ ಜೆಟ್‌, ಖಾಸಗಿ ಸೇನೆ, ಮಲೇಷ್ಯಾ ರಾಜನ ಸಂಪತ್ತು ನೋಡಿ! - Vistara News

ವಿದೇಶ

Malaysia’s New King: 300 ಕಾರು, ಪ್ರೈವೇಟ್‌ ಜೆಟ್‌, ಖಾಸಗಿ ಸೇನೆ, ಮಲೇಷ್ಯಾ ರಾಜನ ಸಂಪತ್ತು ನೋಡಿ!

Malaysia’s New King: ಜೊಹೊರ್ ಸುಲ್ತಾನ್ ಇಬ್ರಾಹಿಂ ಇಸ್ಕಂದರ್ ಮಲೇಷ್ಯಾದ ಹೊಸ ರಾಜನಾಗಿ ಸಿಂಹಾಸನವನ್ನು ಏರಿದ್ದಾರೆ. ಅಪಾರ ಸಂಪತ್ತಿನಿಂದಲೇ ಅವರು ಜಗತ್ತಿನ ಕಣ್ಣು ಕುಕ್ಕುತ್ತಿದ್ದಾರೆ.

VISTARANEWS.COM


on

Johor Sultan Ibrahim Iskandar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜೊಹೊರ್ ಸುಲ್ತಾನ್ ಇಬ್ರಾಹಿಂ ಇಸ್ಕಂದರ್ (Johor Sultan Ibrahim Iskandar) ಮಲೇಷ್ಯಾದ ಹೊಸ ರಾಜನಾಗಿ ಸಿಂಹಾಸನವನ್ನು (Malaysia’s New King) ಏರಿದ್ದಾರೆ. 65 ವರ್ಷದ ಅವರು ಬರೋಬ್ಬರಿ 5.7 ಬಿಲಿಯನ್ ಡಾಲರ್ (475 ಲಕ್ಷ ಕೋಟಿ ರೂ.) ಮೌಲ್ಯದ ಸಂಪತ್ತನ್ನು ಹೊಂದಿದ್ದಾರೆ. ಅಲ್ಲದೆ ದೇಶದ ಗಡಿಯನ್ನೂ ಮೀರಿ ಆಸ್ತಿ ಸಂಪಾದಿಸಿದ್ದಾರೆ. 300 ಕಾರು, ಪ್ರೈವೇಟ್‌ ಜೆಟ್‌, ಪ್ರತ್ಯೇಕ ಆರ್ಮಿ… ಹೀಗೆ ಐಷರಾಮಿ ಜೀವನ ನಡೆಸುತ್ತಿದ್ದಾರೆ. ಅವರ ಸಂಪತ್ತಿನ ವಿವರ ಇಲ್ಲಿದೆ.

ವಿವಿಧ ಉದ್ಯಮ

ಸುಲ್ತಾನ್ ಇಬ್ರಾಹಿಂ ಅವರ ಸಾಮ್ರಾಜ್ಯವು ರಿಯಲ್ ಎಸ್ಟೇಟ್, ಗಣಿಗಾರಿಕೆ, ದೂರಸಂಪರ್ಕ ಮತ್ತು ತಾಳೆ ಎಣ್ಣೆಯಿಂದ ಹಿಡಿದು ಹಲವಾರು ಉದ್ಯಮಗಳನ್ನು ಒಳಗೊಂಡಿದೆ. ಅವರ ಅಧಿಕೃತ ವೈಭವೋಪೇತ ನಿವಾಸ ಇಸ್ತಾನಾ ಬುಕಿಟ್ ಸೆರೆನ್ ಅಪಾರ ಸಂಪತ್ತಿಗೆ ಸಾಕ್ಷಿಯಾಗಿ ತಲೆ ಎತ್ತಿ ನಿಂತಿದೆ. ಅಡಾಲ್ಫ್ ಹಿಟ್ಲರ್ ಉಡುಗೊರೆಯಾಗಿ ನೀಡಿದ ಕಾರು ಸೇರಿದಂತೆ 300ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಸಂಗ್ರಹವನ್ನು ಮೈದಾನದಲ್ಲಿ ಇರಿಸಲಾಗಿದ್ದು, ಚಿನ್ನ ಮತ್ತು ನೀಲಿ ಬೋಯಿಂಗ್ 737 ಸೇರಿದಂತೆ ಖಾಸಗಿ ಜೆಟ್‌ಗಳ ಸಮೂಹವು ಇವರ ಬಳಿಯಲ್ಲಿದೆ. ಅವರ ಕುಟುಂಬವು ಖಾಸಗಿ ಸೈನ್ಯವನ್ನು ಸಹ ಹೊಂದಿದೆ.

ಬ್ಲೂಮ್ಬರ್ಗ್ ಅಂದಾಜಿನ ಪ್ರಕಾರ ಸುಲ್ತಾನ್ ಇಬ್ರಾಹಿಂ ಅವರ ಕುಟುಂಬದ ಸಂಪತ್ತು 5.7 ಬಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದ್ದರೂ, ನಿಜವಾದ ವ್ಯಾಪ್ತಿ ಅದಕ್ಕಿಂತ ಹೆಚ್ಚು ಎನ್ನಲಾಗುತ್ತಿದೆ. ಅವರು ಮಲೇಷ್ಯಾದ ಪ್ರಮುಖ ಮೊಬೈಲ್‌ ಸೇವಾ ಪೂರೈಕೆದಾರರಲ್ಲಿ ಒಂದಾದ ಯು ಮೊಬೈಲ್‌ನಲ್ಲಿ ಶೇ. 24ರಷ್ಟು ಶೇರ್‌ ಹೊಂದಿದ್ದಾರೆ. ಅಲ್ಲದೆ ಖಾಸಗಿ ಮತ್ತು ಸಾರ್ವಜನಿಕ ಕಂಪೆನಿಗಳಲ್ಲಿ ಹೆಚ್ಚುವರಿ ಹೂಡಿಕೆಗಳು ಒಟ್ಟು 588 ಮಿಲಿಯನ್ ಡಾಲರ್‌ ಎಂದು ಅಂದಾಜಿಸಲಾಗಿದೆ. ಸುಲ್ತಾನ್ ಇಬ್ರಾಹಿಂ ಅವರಿಗೆ ಬೈಕ್ ಕ್ರೇಜ್‌ ಕೂಡ ಇದ್ದು, ಹಾರ್ಲೆ-ಡೇವಿಡ್ಸನ್‌ನಲ್ಲಿ ಆಗಾಗ ಪ್ರವಾಸ ಕೈಗೊಳ್ಳುತ್ತಾರೆ.

ಸಿಂಗಾಪುರದಲ್ಲಿ ಬೊಟಾನಿಕ್ ಗಾರ್ಡನ್ಸ್‌ನ ಟೈರ್ಸಾಲ್ ಪಾರ್ಕ್ ಸೇರಿದಂತೆ ವಿಸ್ತಾರವಾದ ಪ್ರದೇಶದಲ್ಲಿ ಅವರು 4 ಬಿಲಿಯನ್ ಡಾಲರ್ ಮೌಲ್ಯದ ಭೂಮಿಯನ್ನು ಹೊಂದಿದ್ದಾರೆ. ಸುಲ್ತಾನ್ ಅವರ ಹೂಡಿಕೆ ಬರೋಬ್ಬರಿ 1.1 ಬಿಲಿಯನ್ ಡಾಲರ್ ಆಗಿದ್ದು, ಷೇರು ಮತ್ತು ರಿಯಲ್ ಎಸ್ಟೇಟ್ ವಹಿವಾಟುಗಳಿಂದ ಗಣನೀಯ ಆದಾಯ ಹರಿದು ಬರುತ್ತಿದೆ ಎಂದು ಅಂದಾಜಿಸಲಾಗಿದೆ.

ಬುಧವಾರ (ಜನವರಿ 31) ಸುಲ್ತಾನ್ ಇಬ್ರಾಹಿಂ ಅಧಿಕೃತವಾಗಿ ಸಿಂಹಾಸನಕ್ಕೆ ಏರಿದ್ದಾರೆ. ಇದಕ್ಕಾಗಿ ಅದ್ಧೂರಿ ಸಮಾರಂಭ ಆಯೋಜಿಸಲಾಗಿತ್ತು. ಉದ್ಯಮಿಗಳು, ರಾಜಕೀಯ ನಾಯಕರು ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು. ಸಿಂಗಾಪುರದ ನಾಯಕತ್ವದೊಂದಿಗಿನ ಅವರ ನಿಕಟ ಸಂಬಂಧಗಳು ಮತ್ತು ಪ್ರಮುಖ ಚೀನೀ ಡೆವಲಪರ್‌ಗಳೊಂದಿಗೆ ವ್ಯಾಪಾರ ಸಂಬಂಧಗಳು ದೇಶೀಯ ಮತ್ತು ವಿದೇಶಾಂಗ ನೀತಿಯ ಮೇಲೆ ಗಣನೀಯ ಪ್ರಭಾವ ಬೀರಲಿದೆ ಎಂದು ನಿರೀಕ್ಷೆ ಇದೆ.

ಇದನ್ನೂ ಓದಿ: Indian student in US: ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು; ನಾಪತ್ತೆಯಾಗಿದ್ದವನು ಶವವಾಗಿ ಪತ್ತೆ

ಐದು ವರ್ಷಗಳಿಗೊಮ್ಮೆ ಆಯ್ಕೆ

ʼಸುಲ್ತಾನರುʼ ಎಂದು ಕರೆಯಲ್ಪಡುವ ಮಲೇಷ್ಯಾದ ಒಂಬತ್ತು ಆನುವಂಶಿಕ ಆಡಳಿತಗಾರರು ಪ್ರತಿ ಐದು ವರ್ಷಗಳಿಗೊಮ್ಮೆ ತಮ್ಮ ನಡುವೆ ರಾಷ್ಟ್ರದ ಮುಖ್ಯಸ್ಥರನ್ನು ಆಯ್ಕೆ ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Drown In River: ರಷ್ಯಾದಲ್ಲಿ ಘೋರ ದುರಂತ; ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳ ಸಾವು

Drown In River: ರಷ್ಯಾದ ಸೈಂಟ್‌ ಪೀಟರ್ಸ್‌ಬರ್ಗ್‌ ಬಳಿ ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇವರು ವೆಲಿಕಿ ನೊವ್ಗೊರೊಡ್ ನಗರದ ಸಮೀಪದಲ್ಲಿರುವ ನೊವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಅಧ್ಯಯನ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ವೋಲ್ಖೋವ್ ನದಿಗೆ ಬಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಲು ಆಕೆಯ ನಾಲ್ವರು ಸ್ನೇಹಿತರು ಯತ್ನಿಸಿದ ವೇಳೆ ಈ ದುರಂತ ನಡೆದಿದೆ.

VISTARANEWS.COM


on

Drown In Rive
Koo

ಮಾಸ್ಕೋ: ರಷ್ಯಾದಲ್ಲಿ ಘೋರ ದುರಂತವೊಂದು ನಡೆದಿದ್ದು, ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ (Drown In River). ಓರ್ವ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೈಂಟ್‌ ಪೀಟರ್ಸ್‌ಬರ್ಗ್‌ (St. Petersburg) ಬಳಿ ನದಿಯಲ್ಲಿ ಈ ಅವಘಡ ಸಂಭವಿಸಿದೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ದೃಢಪಡಿಸಿದೆ. ಶವಗಳನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ರಷ್ಯಾದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದೆ.

ʼʼಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯ ಮೃತಪಟ್ಟಿದ್ದು, ಇವರ ವಯಸ್ಸು ಅಂದಾಜು 18-20 ವರ್ಷ. ಇವರು ವೆಲಿಕಿ ನೊವ್ಗೊರೊಡ್ ನಗರದ ಸಮೀಪದಲ್ಲಿರುವ ನೊವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿ(Novgorod State University)ಯಲ್ಲಿ ಅಧ್ಯಯನ ಮಾಡುತ್ತಿದ್ದರುʼʼ ಎಂದು ಮೂಲಗಳು ವರದಿ ಮಾಡಿವೆ.

ದುರಂತ ನಡೆದಿದ್ದು ಹೇಗೆ?

ವೋಲ್ಖೋವ್ ನದಿಗೆ ಬಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಲು ಆಕೆಯ ನಾಲ್ವರು ಸ್ನೇಹಿತರು ಯತ್ನಿಸಿದ ವೇಳೆ ಈ ದುರಂತ ನಡೆದಿದೆ. ಈ ಪೈಕಿ ಓರ್ವನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಷ್ಯಾದ ಮಾಧ್ಯಮಗಳು ಹೇಳಿವೆ. “ಸಾಧ್ಯವಾದಷ್ಟು ಬೇಗ ಶವಗಳನ್ನು ಸಂಬಂಧಿಕರಿಗೆ ಕಳುಹಿಸಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಅಪಾಯದಿಂದ ಪಾರಾದ ವಿದ್ಯಾರ್ಥಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಾಸ್ಕೋದಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಅಮೆರಿಕದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು

ಕೆಲವು ದಿನಗಳ ಹಿಂದೆ ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಜಾರ್ಜಿಯಾದ ಆಲ್ಫಾರೆಟ್ಟಾ ಬಳಿ ನಡೆದ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು.

ಆರ್ಯನ್‌ ಜೋಷಿ, ಶ್ರಿಯಾ ಅವಸರಲ ಮತ್ತು ಅನ್ವಿ ಶರ್ಮಾ ಮೃತ ವಿದ್ಯಾರ್ಥಿಗಳು. ಈ ಪೈಕಿ ಆರ್ಯನ್‌ ಜೋಷಿ, ಶ್ರೀಯಾ ಅವಸರಳ ಸ್ಥಳದಲ್ಲೇ ಅಸುನೀಗಿದ್ದರೆ, ಅನ್ವಿ ಶರ್ಮಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಗಾಯಯೊಂಡವರನ್ನು ಋತ್ವಿಕ್‌ ಸೋಮೆಪಳ್ಳಿ ಹಾಗೂ ಮೊಹಮ್ಮದ್‌ ಲಿಯಾಕತ್‌ ಎಂದು ಗುರುತಿಸಲಾಗಿತ್ತು.

ಈ ಐವರು ಆಲ್ಫಾರೆಟ್ಟಾ ಹೈಸ್ಕೂಲ್‌ ಮತ್ತು ಜಾರ್ಜಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು. ಇವರಿದ್ದ ಕಾರು ಅತಿ ವೇಗದಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದರು. ಚಾಲಕನ ನಿಯಂತ್ರಣಕ್ಕೆ ಸಿಗದೆ ಮೇ 14ರಂದು ಕಾರು ಆಲ್ಫಾರೆಟ್ಟಾ ಬಳಿ ಅಪಘಾತಕ್ಕೀಡಾಗಿತ್ತು. ʼʼಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ತಲೆಕೆಳಗಾಗಿ ನಿಂತಿತ್ತುʼʼ ಎಂದಯ ಪ್ರತ್ಯಕ್ಷದರ್ಶಿಯೊಬ್ಬರು ಘಟನೆಯ ತೀವ್ರತೆಯನ್ನು ವಿವರಿಸಿದ್ದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳು

ಇವರೆಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿದ್ದರು. ಶ್ರೀಯಾ ಅವಸರಳ ಯುಜಿಎ ಶಿಕಾರಿ (UGA Shikaari) ಡ್ಯಾನ್ಸ್‌ ತಂಡದ ಸದಸ್ಯೆಯಾಗಿದ್ದರು. ಇನ್ನು ಅನ್ವಿ ಶರ್ಮಾ ಯುಜಿಎ ಕಲಾಕಾರ್‌ (UGA Kalakaar) ಮತ್ತು ಕ್ಯಾಪೆಲ್ಲ ಗ್ರೂಪ್‌ (Capella Group)ನ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ನೀವೊಮ್ಮ ಅದ್ಭುತ ಡ್ಯಾನ್ಸರ್‌. ನಿಮ್ಮ ಕಣ್ಮರೆಯ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲʼʼ ಎಂದು ಶಿಕಾರಿ ತಂಡ ಆಘಾತ ಸೂಚಿಸಿತ್ತು. ಕಲಾಕಾರ್‌ ಗ್ರೂಪ್‌ ಕೂಡ ಅನ್ವಿ ಶರ್ಮಾಗೆ ಶ್ರದ್ಧಾಂಜಲಿ ಸಲ್ಲಿಸಿತ್ತು.

ಆರ್ಯನ್‌ ಜೋಷಿ ಪದವಿ ಪಡೆಯಲು ಸಿದ್ಧತೆ ನಡೆಸಿಕೊಂಡಿದ್ದರು. ಆಲ್ಫಾರೆಟ್ಟಾ ಹೈ ಕ್ರಿಕೆಟ್‌ ಟೀಮ್‌ (Alpharetta High cricket team) ತನ್ನ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಆರ್ಯನ್‌ ಜೋಷಿ ನಿಧನಕ್ಕೆ ನೋವು ತೋಡಿಕೊಂಡು, ʼʼಆರ್ಯನ್‌ ಜೋಷಿ ನಮ್ಮ ಬಹು ದೊಡ್ಡ ಬೆಂಬಲಿಗರಾಗಿದ್ದರು ಮತ್ತು ತಮ್ಮ ತಂಡದ ಬೆನ್ನೆಲುಬಾಗಿದ್ದರು. ನಮ್ಮ ತಂಡದ ಗೆಲುವಿನಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದು. ಅವರ ಅಗಲಿಕೆ ನಮ್ಮ ಪಾಲಿಗೆ ತುಂಬಲಾರದ ನಷ್ಟʼʼ ಎಂದು ಬರೆದುಕೊಂಡಿತ್ತು.

ಇದನ್ನೂ ಓದಿ: Student Murder: ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಕೊಲೆ; 9ನೇ ಘಟನೆ

Continue Reading

ವೈರಲ್ ನ್ಯೂಸ್

Sunita Williams: ಡ್ಯಾನ್ಸ್‌ ಮಾಡುತ್ತಲೇ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಭಾರತ ಮೂಲದ ಸುನೀತಾ ವಿಲಿಯಮ್ಸ್; ವಿಡಿಯೊ ವೈರಲ್‌

Sunita Williams: ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಸಂಚರಿಸಿದ್ದ ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ (Boeing Starliner) ಬಾಹ್ಯಾಕಾಶ ನೌಕೆ ಗುರುವಾರ (ಜೂನ್‌ 6) ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಸುರಕ್ಷಿತವಾಗಿ ಇಳಿದಿದೆ. ಈ ವೇಳೆ ಸುನೀತಾ ವಿಲಿಯಮ್ಸ್‌ ಅವರು ಇತರ ಏಳು ಗಗನಯಾತ್ರಿಗಳನ್ನು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ. ಜತೆಗೆ ಡ್ಯಾನ್ಸ್‌ ಮಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೊ ಭಾರೀ ವೈರಲ್‌ ಆಗಿದೆ.

VISTARANEWS.COM


on

Sunita Williams
Koo

ವಾಷಿಂಗ್ಟನ್:‌ ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಸಂಚರಿಸಿದ್ದ ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ (Boeing Starliner) ಬಾಹ್ಯಾಕಾಶ ನೌಕೆ ಗುರುವಾರ (ಜೂನ್‌ 6) ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಸುರಕ್ಷಿತವಾಗಿ ಇಳಿದಿದೆ. ಈ ವೇಳೆ ಸುನೀತಾ ವಿಲಿಯಮ್ಸ್‌ ಅವರು ಇತರ ಏಳು ಗಗನಯಾತ್ರಿಗಳನ್ನು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ. ಜತೆಗೆ ಡ್ಯಾನ್ಸ್‌ ಮಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ (Viral Video) ಆಗಿದೆ.

ಐಎಸ್ಎಸ್‌ನ ಸಂಪ್ರದಾಯದಂತೆ ಗಂಟೆ ಬಾರಿಸುವ ಮೂಲಕ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಸ್ವಾಗತಿಸಲಾಯಿತು. ಡ್ಯಾನ್ಸ್‌ ಮಾಡುತ್ತಲೇ ಅವರು ಕಾಲಿಟ್ಟರು. ಸುನೀತಾ ವಿಲಿಯಮ್ಸ್ ʼಡ್ಯಾನ್ಸ್ ಪಾರ್ಟಿʼ ಬಗ್ಗೆ ಮಾತನಾಡುತ್ತಾ, ತಮ್ಮ ಸಿಬ್ಬಂದಿಯನ್ನು ʼಮತ್ತೊಂದು ಕುಟುಂಬʼ ಎಂದು ಕರೆದಿದ್ದಾರೆ. ಅಂತಹ ದೊಡ್ಡ ಸ್ವಾಗತಕ್ಕಾಗಿ ಧನ್ಯವಾದ ಅರ್ಪಿಸಿದರು.

ಫ್ಲೊರಿಡಾದಲ್ಲಿರುವ ಕೇಪ್‌ ಕ್ಯಾನವರಲ್‌ ಸ್ಪೇಸ್‌ ಫೋರ್ಸ್‌ ಸೆಂಟರ್‌ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು. ಉಡಾವಣೆಯಾದ ಸುಮಾರು 26 ಗಂಟೆಗಳ ನಂತರ ಬಾಹ್ಯಾಕಾಶ ನೌಕೆ ಐಎಸ್‌ಎಸ್‌ನಲ್ಲಿ ಇಳಿಯಿತು. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶದಲ್ಲಿ ಒಂದು ವಾರ ಕಳೆಯಲಿದ್ದಾರೆ ಮತ್ತು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಿದ್ದಾರೆ. ನಾಸಾ ಬಾಹ್ಯಾಕಾಶ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಆರನೇ ಬಾಹ್ಯಾಕಾಶ ನೌಕೆ ಎಂಬ ಖ್ಯಾತಿಗೆ ಸ್ಟಾರ್‌ಲೈನರ್‌ ಭಾಜನವಾಯಿತು. 

ಸುನೀತಾ ವಿಲಿಯಮ್ಸ್‌ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿರುವುದು ಇದು ಮೂರನೇ ಬಾರಿ. ಈ ಹಿಂದೆ ಅವರ ಈ ಮೂರನೇ ಬಾಹ್ಯಾಕಾಶ ಪ್ರಯಾಣ ತಾಂತ್ರಿಕ ಕಾರಣಗಳಿಂದ ಎರಡು ಬಾರಿ ಮುಂದೂಡಲ್ಪಟ್ಟಿತ್ತು. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ. ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ (ಮೂರು ಬಾರಿ) ಮಾಡಿದ್ದಾರೆ. 

ಇದನ್ನೂ ಓದಿ: Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

ಗಣೇಶನ ಆರಾಧಕಿ

ವಿಶೇಷ ಎಂದರೆ ಸುನೀತಾ ಇಂದಿಗೂ ಭಾರತದೊಂದಿಗಿನ ತಮ್ಮ ನಂಟನ್ನು ಕಡಿದುಕೊಂಡಿಲ್ಲ. ಅವರು ಗಣಪತಿಯನ್ನು ಆರಾಧಿಸುತ್ತಾರೆ. ಈ ಹಿಂದೆ ಬಾಹ್ಯಾಕಾಶಕ್ಕೆ ತೆರಳುವಾಗ ಅವರು ಗಣೇಶ ವಿಗ್ರಹ ಮತ್ತು ಭಗವದ್ಗೀತೆಯನ್ನು ಕೊಂಡೊಯ್ದಿದ್ದರು. ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ಹಿಂದೆ ತಿಳಿಸಿದ್ದರು. 

Continue Reading

ಪ್ರವಾಸ

Norway Tour: ಜಗತ್ತಿನ ಕೊನೆಯ ದೇಶ ಇದು! ಇಲ್ಲಿ 6 ತಿಂಗಳು ಹಗಲು, 6 ತಿಂಗಳು ರಾತ್ರಿ!

ಉತ್ತರ ಧ್ರುವದ ಸಾಮೀಪ್ಯದಿಂದಾಗಿ ಭೂಮಿಯ ಮೇಲಿನ ಕೊನೆಯ ದೇಶ ಎಂದು ಕರೆಯಲ್ಪಡುವ ನಾರ್ವೆಯಲ್ಲಿ (Norway Tour) ಮಧ್ಯರಾತ್ರಿ ಸೂರ್ಯ ಕಾಣಿಸಿಕೊಳ್ಳುತ್ತಾನೆ. ಆರು ತಿಂಗಳ ನಿರಂತರ ಹಗಲು ಅಥವಾ ಕತ್ತಲೆಯಂತಹ ವಿಶಿಷ್ಟ ವಿದ್ಯಮಾನಗಳನ್ನು ಇಲ್ಲಿ ಅನುಭವಿಸಬಹುದು. ಇಲ್ಲಿನ ಇ-69 ಹೆದ್ದಾರಿಯು ಜಗತ್ತಿನ ಕೊನೆಯನ್ನು ಸೂಚಿಸುತ್ತದೆ. ಆದರೆ ಈ ರಸ್ತೆಯಲ್ಲಿ ಏಕವ್ಯಕ್ತಿ ಪ್ರಯಾಣವನ್ನು ನಿಷೇಧಿಸಲಾಗಿದೆ.

VISTARANEWS.COM


on

By

Norway Tour
Koo

ಭೂಮಿಯು (earth) ದುಂಡಗಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ಭೂಮಿಯ ಮೂಲೆ ಮೂಲೆಯಲ್ಲಿ ಒಂದಲ್ಲ ಒಂದು ದೇಶವಿದೆ (country). ಪ್ರತಿಯೊಂದು ದೇಶವು ಅದರ ನೈಸರ್ಗಿಕ ಸೌಂದರ್ಯದಿಂದಾಗಿ (natural beauty) ಸುಂದರವಾಗಿರುತ್ತದೆ. ಕೆಲವು ದೇಶಗಳು ತಮ್ಮ ಐತಿಹಾಸಿಕ ಕಟ್ಟಡಗಳಿಗೆ (historical buildings) ಪ್ರಸಿದ್ಧವಾಗಿವೆ, ಇತರವುಗಳು ತಮ್ಮ ನೈಸರ್ಗಿಕ ದೃಶ್ಯಾವಳಿಗಳಿಂದ. ವಿಶ್ವದ ಅತಿದೊಡ್ಡ ಮತ್ತು ಶ್ರೀಮಂತ ದೇಶಗಳ ಬಗ್ಗೆ ಎಲ್ಲರೂ ಕೇಳಿರಬಹುದು, ಆದರೆ ಭೂಮಿಯ ಮೇಲಿನ ಕೊನೆಯ ದೇಶ ಯಾವುದು ಗೊತ್ತೇ ಅಲ್ಲಿನ ವಿಶೇಷತೆ ಏನು ಗೊತ್ತೇ ?

ವಿಶ್ವದ ಕೊನೆಯ ದೇಶ ನಾರ್ವೆ (Norway Tour). ಇಲ್ಲಿ ಭೂಮಿ ಕೊನೆಗೊಳ್ಳುತ್ತದೆ. ಈ ದೇಶವು ಉತ್ತರ ಧ್ರುವದ ಬಳಿ ಇದೆ. ಅಲ್ಲಿ ಭೂಮಿಯು ತನ್ನ ಅಕ್ಷದ ಮೇಲೆ ತಿರುಗುತ್ತದೆ. ಆದ್ದರಿಂದ, ನಾರ್ವೆ ಹೇಗಿದೆ ಎಂದು ಊಹಿಸಿಕೊಳ್ಳಬಹುದು.
ಬಹಳ ಸುಂದರವಾಗಿರುವ ಈ ದೇಶದಲ್ಲಿ ರಾತ್ರಿ ಬಹಳ ಕಡಿಮೆ. ರಾತ್ರಿಯೇ ಇರುವುದಿಲ್ಲ ಎಂದು ತಿಳಿದರೆ ಆಶ್ಚರ್ಯವಾಗಬಹುದು.

ಉತ್ತರ ನಾರ್ವೆಯ ಹ್ಯಾವರ್‌ಫೆಸ್ಟ್ ನಗರದಲ್ಲಿ, ಸೂರ್ಯ ಕೇವಲ 40 ನಿಮಿಷಗಳ ಕಾಲ ಅಸ್ತಮಿಸುತ್ತಾನೆ. ಆದ್ದರಿಂದ, ಇದನ್ನು ಮಧ್ಯರಾತ್ರಿ ಸೂರ್ಯನ ದೇಶ ಎಂದೂ ಕರೆಯುತ್ತಾರೆ. ಇಲ್ಲಿ ಕೇವಲ 40 ನಿಮಿಷ ಮಾತ್ರ ಕತ್ತಲು, ಉಳಿದ 23 ಗಂಟೆ 20 ನಿಮಿಷಗಳ ಕಾಲ ಈ ನಗರವು ಬೆಳಕಿನಿಂದ ತುಂಬಿರುತ್ತದೆ.


ಬೇಸಿಗೆಯಲ್ಲಿ ಹಿಮ

ಬೇಸಿಗೆಯಲ್ಲಿ ಇಲ್ಲಿ ಹಿಮ ಹೆಪ್ಪುಗಟ್ಟುತ್ತದೆ. ಈ ದೇಶವು ಅತ್ಯಂತ ತಂಪಾದ ವಾತಾವರಣವನ್ನು ಹೊಂದಿದೆ. ಪ್ರಪಂಚದ ಕೆಲವು ದೇಶಗಳಲ್ಲಿ ಬೇಸಿಗೆಯಲ್ಲಿ ತಾಪಮಾನವು 45 ರಿಂದ 50 ಡಿಗ್ರಿಗಳ ನಡುವೆ ಇದ್ದರೆ ಈ ದೇಶದಲ್ಲಿ ಬೇಸಿಗೆಯಲ್ಲಿ ಹಿಮ ಇರುತ್ತದೆ. ಈ ಸಮಯದಲ್ಲಿ ಇಲ್ಲಿ ತಾಪಮಾನ ಶೂನ್ಯ ಡಿಗ್ರಿ. ತೀವ್ರವಾದ ಚಳಿಗಾಲದಲ್ಲಿ ಇಲ್ಲಿ ತಾಪಮಾನವು ಮೈನಸ್ 45 ಡಿಗ್ರಿಗಳಿಗೆ ಇಳಿಯುತ್ತದೆ. ಇಲ್ಲಿನ ಸೌಂದರ್ಯವೇ ಬೇರೆಯದೇ ಪ್ರಪಂಚವನ್ನು ಸೃಷ್ಟಿಸುತ್ತದೆ.

ರಾತ್ರಿಯೇ ಇರುವುದಿಲ್ಲ

ಬೇಸಿಗೆಯಲ್ಲಿ ಇಲ್ಲಿ ರಾತ್ರಿ ಇರುವುದಿಲ್ಲ. ಉತ್ತರ ಧ್ರುವದ ಸಾಮೀಪ್ಯದಿಂದಾಗಿ ಇತರ ದೇಶಗಳಂತೆ ಪ್ರತಿದಿನ ಹಗಲು ಅಥವಾ ರಾತ್ರಿ ಇರುವುದಿಲ್ಲ. ಬದಲಾಗಿ ಇದು ಆರು ತಿಂಗಳು ಹಗಲು ಮತ್ತು ಆರು ತಿಂಗಳು ರಾತ್ರಿಯನ್ನು ಹೊಂದಿದೆ. ಚಳಿಗಾಲದಲ್ಲಿ ಇಲ್ಲಿ ಸೂರ್ಯನು ಕಾಣಿಸುವುದಿಲ್ಲ, ಆದರೆ ಬೇಸಿಗೆಯಲ್ಲಿ ಇಲ್ಲಿ ಸೂರ್ಯ ಮುಳುಗುವುದಿಲ್ಲ. ತುಂಬಾ ಆಸಕ್ತಿದಾಯಕವಾಗಿರುವ ಈ ದೇಶವನ್ನು ನೋಡಲು ಸಾಕಷ್ಟು ಪ್ರವಾಸಿಗರು ಆಗಮಿಸುತ್ತಾರೆ.


ಜಗತ್ತಿನ ಕೊನೆ

ಇಷ್ಟೆಲ್ಲಾ ಗೊತ್ತಾದ ಮೇಲೆ ನಾವು ನಾರ್ವೆಗೆ ಹೋಗಬೇಕು ಎನಿಸುವುದರಲ್ಲಿ ಸಂದೇಹವಿಲ್ಲ. ಆದರೆ ಈ ದೇಶದ ಇ-69 ಹೆದ್ದಾರಿಯಲ್ಲಿ ಏಕಾಂಗಿಯಾಗಿ ಹೋಗುವುದನ್ನು ನಿಷೇಧಿಸಲಾಗಿದೆ. ಯಾಕೆಂದರೆ ಈ ಹೆದ್ದಾರಿಯು ಭೂಮಿಯ ತುದಿಗಳನ್ನು ನಾರ್ವೆಗೆ ಸಂಪರ್ಕಿಸುತ್ತದೆ. ಮುಂದೆ ಹೋದಂತೆ ಇಲ್ಲಿಯೇ ರಸ್ತೆ ಕೊನೆಗೊಳ್ಳುತ್ತದೆ. ಅಲ್ಲಿಗೆ ತಲುಪಿದಾಗ ಎಲ್ಲಿಗೆ ಹೋಗಬೇಕೆಂದು ತಿಳಿಯುವುದಿಲ್ಲ. ಯಾಕೆಂದರೆ ಇಲ್ಲಿ ಜಗತ್ತು ಕೊನೆಗೊಳ್ಳುತ್ತದೆ.


ಏಕವ್ಯಕ್ತಿ ಪ್ರಯಾಣ ನಿಷೇಧ

ಈ ಹೆದ್ದಾರಿಯಲ್ಲಿ ಹೋಗಬೇಕೆಂದರೂ ಒಬ್ಬರೇ ಹೋಗುವುದು ನಿಷಿದ್ಧ. ಒಂದು ದೊಡ್ಡ ಗುಂಪಿಗೆ ಮಾತ್ರ ಹೋಗಲು ಅನುಮತಿಸಲಾಗುತ್ತದೆ. ಈ ರಸ್ತೆಯಲ್ಲಿ ಯಾವುದೇ ವ್ಯಕ್ತಿ ಏಕಾಂಗಿಯಾಗಿ ಹೋಗಲು ಅಥವಾ ಏಕಾಂಗಿಯಾಗಿ ವಾಹನ ಚಲಾಯಿಸಲು ಅವಕಾಶವಿಲ್ಲ. ಇಲ್ಲಿ ಎಲ್ಲೆಂದರಲ್ಲಿ ಹಿಮವಿದ್ದು, ಏಕಾಂಗಿಯಾಗಿ ಪ್ರಯಾಣಿಸಿ ದಾರಿ ತಪ್ಪುವ ಸಾಧ್ಯತೆ ಇರುವುದರಿಂದ ಏಕಾಂಗಿ ಪ್ರಯಾಣವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Konark Tourist Destination: ರಜೆಯಲ್ಲಿ ಕೋನಾರ್ಕ್‌ಗೆ ಹೋದಾಗ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಲು ಮರೆಯಬೇಡಿ

ಈ ದೇಶದಲ್ಲಿ ಪೋಲಾರ್ ಲೈಟ್‌ಗಳನ್ನು ನೋಡಿ ಆನಂದಿಸಬಹುದು. ಇಲ್ಲಿ ಸೂರ್ಯಾಸ್ತ ಮತ್ತು ಧ್ರುವ ದೀಪಗಳನ್ನು ವೀಕ್ಷಿಸುವುದು ವಿನೋದಮಯವಾಗಿದೆ. ವರ್ಷಗಳ ಹಿಂದೆ ಇಲ್ಲಿ ಮೀನು ವ್ಯಾಪಾರ ನಡೆಯುತ್ತಿತ್ತು ಎಂದು ಹೇಳಲಾಗುತ್ತದೆ. ಆದರೆ ಕ್ರಮೇಣ ದೇಶವು ಅಭಿವೃದ್ಧಿ ಹೊಂದಿತು ಮತ್ತು ಪ್ರವಾಸಿಗರು ಇಲ್ಲಿಗೆ ಬರಲು ಪ್ರಾರಂಭಿಸಿದರು. ಈಗ ಪ್ರವಾಸಿಗರು ಇಲ್ಲಿ ಉಳಿದುಕೊಳ್ಳಲು ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳ ಸೌಲಭ್ಯವನ್ನೂ ಪಡೆಯುತ್ತಾರೆ.

Continue Reading

ಪ್ರಮುಖ ಸುದ್ದಿ

Sunita Williams: 3ನೇ ಬಾರಿ ಬಾಹ್ಯಾಕಾಶ ಯಾನ ಕೈಗೊಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್;‌ Video ಇದೆ

Sunita Williams: ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಈಗ ಮತ್ತೆ ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಂಡಿದ್ದಾರೆ.

VISTARANEWS.COM


on

Sunita Williams
Koo

ವಾಷಿಂಗ್ಟನ್:‌ ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ (Boeing Starliner) ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಆರಂಭಿಸಿದ್ದಾರೆ. ಸುನೀತಾ ವಿಲಿಯಮ್ಸ್‌ ಅವರು ಬಾಹ್ಯಾಕಾಶಯಾನ ಕೈಗೊಳ್ಳುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಫ್ಲೊರಿಡಾದಲ್ಲಿರುವ ಕೇಪ್‌ ಕ್ಯಾನವರಲ್‌ ಸ್ಪೇಸ್‌ ಫೋರ್ಸ್‌ ಸೆಂಟರ್‌ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು. ಬಾಹ್ಯಾಕಾಶದಲ್ಲಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರು ಒಂದು ವಾರ ಇರಲಿದ್ದಾರೆ. ನಾಸಾ ಬಾಹ್ಯಾಕಾಶ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಆರನೇ ಬಾಹ್ಯಾಕಾಶ ನೌಕೆ ಎಂಬ ಖ್ಯಾತಿಗೆ ಸ್ಟಾರ್‌ಲೈನರ್‌ ಭಾಜನವಾಯಿತು. ಇದಕ್ಕೂ ಮೊದಲು ಮರ್ಕ್ಯುರಿ, ಜೆಮಿನಿ, ಅಪೋಲೊ, ಸ್ಪೇಸ್‌ ಶಟಲ್‌ ಹಾಗೂ ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್‌ ಬಾಹ್ಯಾಕಾಶ ನೌಕೆಗಳನ್ನು ಉಡಾವಣೆ ಮಾಡಲಾಗಿತ್ತು.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ಗಣೇಶನ ಆರಾಧಕಿ

ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ತಿಳಿಸಿದ್ದರು. ಈ ಹಿಂದೆ ಅವರು ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ಯುವ ಮೂಲಕ ಭಾರತೀಯರ ಗಮನ ಸೆಳೆದಿದ್ದರು.

ಇದನ್ನೂ ಓದಿ: Gaganyaan : ಗಗನಯಾನ ಪೈಲೆಟ್​ ಪ್ರಶಾಂತ್​ ನಾಯರ್​ ​ಮದುವೆಯಾದ ಕೇರಳದ ನಟಿ ಲೆನಾ

Continue Reading
Advertisement
T20 World Cup
ಪ್ರಮುಖ ಸುದ್ದಿ3 hours ago

T20 World Cup : ವಿಶ್ವ ಕಪ್​ ಇತಿಹಾಸದಲ್ಲಿ ಮೊದಲ ಗೆಲುವು ದಾಖಲಿಸಿದ ಕೆನಡಾ; ಐರ್ಲೆಂಡ್​ಗೆ ನಿರಾಸೆ

Narendra Modi
ದೇಶ3 hours ago

Narendra Modi: ಹಂಗಾಮಿ ಪ್ರಧಾನಿ ಮೋದಿಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು!

Narendra Modi
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಮೋದಿ ಮೂರನೇ ಅವಧಿ, ಆಗಲಿ ಇನ್ನಷ್ಟು ವಿಕಾಸದ ಬುನಾದಿ

T20 World Cup
ಪ್ರಮುಖ ಸುದ್ದಿ3 hours ago

T20 World Cup : ಪಾಕಿಸ್ತಾನ ತಂಡ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

Naxals
ದೇಶ3 hours ago

ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಹತ್ಯೆ, ಮೂವರು ಯೋಧರಿಗೆ ಗಾಯ

Gas leak
ಪ್ರಮುಖ ಸುದ್ದಿ4 hours ago

Gas Leakage : ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

soraba BJP Mandala president prakash talakaalukoppa pressmeet
ಶಿವಮೊಗ್ಗ4 hours ago

Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Chandrababu Naidu
ದೇಶ4 hours ago

Chandrababu Naidu: 5 ದಿನದಲ್ಲಿ 870 ಕೋಟಿ ರೂ. ಗಳಿಸಿದ ‘ಕಿಂಗ್‌ ಮೇಕರ್’‌ ಚಂದ್ರಬಾಬು ನಾಯ್ಡು; ಹೇಗಂತೀರಾ?

Shreyas Iyer
ಕ್ರೀಡೆ5 hours ago

Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

assault case
ಕ್ರೈಂ5 hours ago

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ10 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌