Central Budget 2024: ವಿತ್ತ ಸಚಿವೆ ಮಂಡಿಸಿದ ಬಜೆಟ್‌ ತಯಾರಿಯ ಹಿಂದಿನ ಪ್ರಮುಖ ವ್ಯಕ್ತಿಗಳು ಇವರು - Vistara News

ಬಜೆಟ್ 2024

Central Budget 2024: ವಿತ್ತ ಸಚಿವೆ ಮಂಡಿಸಿದ ಬಜೆಟ್‌ ತಯಾರಿಯ ಹಿಂದಿನ ಪ್ರಮುಖ ವ್ಯಕ್ತಿಗಳು ಇವರು

Central Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಬಜೆಟ್‌ ತಯಾರಿಗೆ ಟಿ.ವಿ.ಸೋಮನಾಥನ್‌, ಅಜಯ್‌ ಸೇಥ್‌, ತುಹಿನ್ ಕಾಂತ್ ಪಾಂಡೆ, ಸಂಜಯ್‌ ಮಲ್ಹೋತ್ರ, ವಿವೇಕ್‌ ಜೋಶಿ, ವಿ.ಅನಂತ ನಾಗೇಶ್ವರನ್‌ ಮತ್ತಿತರರು ಸಹಕರಿಸಿದ್ದಾರೆ.

VISTARANEWS.COM


on

budget 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್‌ (Central Budget 2024) ಮಂಡಿಸಿದ್ದಾರೆ. ಎರಡನೇ ಮೋದಿ ಸರ್ಕಾರದ ಕೊನೆಯ ಬಜೆಟ್‌ ಇದಾಗಿದ್ದು, ನಿರ್ಮಲಾ ಸೀತಾರಾಮನ್‌ ಮಂಡಿಸಿದ 6ನೇ ಬಜೆಟ್‌ ಎನಿಸಿಕೊಂಡಿದೆ. ಈ ಮಧ್ಯಂತರ ಬಜೆಟ್‌ ತಯಾರಿಯ ಹಿಂದೆ ಯಾರೆಲ್ಲ ಕಾರ್ಯ ನಿರ್ವಹಿಸಿದ್ದಾರೆ ಎನ್ನುವ ವಿವರ ಇಲ್ಲಿದೆ.

ಟಿ.ವಿ.ಸೋಮನಾಥನ್‌ (T.V.Somnathan)

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ತಂಡದ ಹಿರಿಯ, ಸನುಭವಿ ಸದಸ್ಯ ಟಿ.ವಿ.ಸೋಮನಾಥನ್‌. ಇವರು 1987ನೇ ಸಾಲಿನ ಐಎಎಸ್‌ ಅಧಿಕಾರಿ. ತಮಿಳುನಾಡು ಮೂಲದ ಇವರು ಅರ್ಥಶಾಸ್ತ್ರದಲ್ಲಿ ಪಿ.ಎಚ್‌.ಡಿ ಪಡೆದಿದ್ದಾರೆ. ಪ್ರಸ್ತುತ ಅವರು ಭಾರತದ ಹಣಕಾಸು ಇಲಾಖೆಯ ಕಾರ್ಯದರ್ಶಿ (ವೆಚ್ಚ ಇಲಾಖೆ) ಆಗಿದ್ದಾರೆ. ಇದಕ್ಕೂ ಮೊದಲು ಅವರು ಪ್ರಧಾನ ಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯಾಗಿದ್ದರು. ಆರಂಭದಲ್ಲಿ ವಾಷಿಂಗ್ಟನ್ ಡಿ.ಸಿ.ಯ ವಿಶ್ವ ಬ್ಯಾಂಕಿನಲ್ಲಿ ನಿರ್ದೇಶಕರಾಗಿ ಡೆಪ್ಯುಟೇಶನ್ ಮೇಲೆ ಕಾರ್ಯ ನಿರ್ವಹಿಸಿದ್ದಾರೆ.

ಅಜಯ್‌ ಸೇಥ್‌ (Ajay Seth)

ಡಿಪಾರ್ಟ್‌ಮೆಂಟ್‌ ಆಫ್‌ ಎಕನಾಮಿಕ್‌ ಅಫೈರ್ಸ್‌ (DEA)ಯ ಕಾರ್ಯದರ್ಶಿಯಾಗಿರುವ ಅಜಯ್‌ ಸೇಥ್‌ 1987ರ ಕರ್ನಾಟಕ ಕೇಡರ್‌ ಬ್ಯಾಚ್‌ನ ಐಎಎಸ್‌ ಅಧಿಕಾರಿ. 2021ರಲ್ಲಿ ಅವರು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. ಅಜಯ್‌ ಸೇಥ್‌ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಮತ್ತು ಮ್ಯಾನೇಜ್‌ಮೆಂಟ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ತುಹಿನ್ ಕಾಂತ್ ಪಾಂಡೆ (Tuhin Kant Pandey)

ಪಂಜಾಬ್‌ ಕೇಡರ್‌ನ 1988ರ ಐಎಎಸ್‌ ಅಧಿಕಾರಿ ತುಹಿನ್‌ ಕಾಂತ ಪಾಂಡೆ. ಪ್ರಸ್ತುತ ಇವರು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ (DIPAM)ನ ಕಾರ್ಯದರ್ಶಿಯಾಗಿದ್ದಾರೆ. ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಪ್ರಯತ್ನ ಮತ್ತು ಜೀವ ವಿಮಾ ನಿಗಮ(ಎಲ್ಐಸಿ)ದ ಆರಂಭಿಕ ಸಾರ್ವಜನಿಕ ಕೊಡುಗೆ(ಐಪಿಒ)ಯ ಘೋಷಣೆ ಕಾರಣದಿಂದ ಅವರು ಜನಪ್ರಿಯರಾಗಿದ್ದಾರೆ.

ಸಂಜಯ್‌ ಮಲ್ಹೋತ್ರ (Sanjay Malhotra)

ರಾಜಸ್ಥಾನ ಕೇಡರ್‌ನ 1990ರ ಬ್ಯಾಚ್ ಅಧಿಕಾರಿ ಸಂಜಯ್‌ ಮಲ್ಹೋತ್ರಾ ಅವರು ಪ್ರಸ್ತುತ ಕಂದಾಯ ಕಾರ್ಯದರ್ಶಿ. ಇದಕ್ಕೂ ಮುನ್ನ ಅವರು ಹಣಕಾಸು ಸೇವೆಗಳ ವಿಭಾಗದ ಮುಖ್ಯಸ್ಥರಾಗಿದ್ದರು. ಅಲ್ಲದೆ ಅವರು ಹಣಕಾಸು ಸಚಿವರ ಬಜೆಟ್ ಭಾಷಣದ 2ನೇ ಭಾಗದ ಕರಡು ರಚನೆಯಲ್ಲಿಯೂ ತೊಡಗಿಸಿಕೊಂಡಿದ್ದರು.

ವಿವೇಕ್‌ ಜೋಶಿ (Vivek Joshi)

ನಿರ್ಮಲಾ ಸೀತಾರಾಮನ್‌ ತಂಡದ ಹೊಸ ಸದಸ್ಯ ವಿವೇಕ್‌ ಜೋಶಿ. ಇವರು ಹರಿಯಾಣ ಕೇಡರ್‌ನ 1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. 2022ರ ನವೆಂಬರ್‌ನಲ್ಲಿ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿವೇಕ್ ಜೋಶಿ ಅವರು ಜಿನೀವಾ ವಿಶ್ವವಿದ್ಯಾಲಯದಿಂದ ಅಂತಾರಾಷ್ಟ್ರೀಯ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ವಿ.ಅನಂತ ನಾಗೇಶ್ವರನ್‌ (V.Anantha Nageswaran)

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಸಲಹೆಗಾರರಲ್ಲಿ ವಿ.ಅನಂತ ನಾಗೇಶ್ವರನ್ ಕೂಡ ಒಬ್ಬರು. ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿರುವ ಇವರು ಬರಹಗಾರ ಹಾಗೂ ಶಿಕ್ಷಕರೂ ಹೌದು. ಭಾರತದ ಆರ್ಥಿಕತೆಯ ಮೇಲೆ ಜಾಗತಿಕ ಅಂಶಗಳ ಪರಿಣಾಮಗಳನ್ನು ಅವರು ಗಮನಿಸುತ್ತಿರುತ್ತಾರೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಸಭೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಅಹ್ಮದಾಬಾದ್‌ ಐಐಎಂನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: Budget 2024: ಬಜೆಟ್ ಮಂಡಿಸುತ್ತಿದ್ದಂತೆ ರೈಲ್ವೆ ಷೇರುಗಳೇಕೆ ಕುಸಿದವು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Mukesh Ambani: ಬಜೆಟ್ ದಿನ 9,200 ಕೋಟಿ ರೂ. ಕಳೆದುಕೊಂಡಿದ್ದ ಮುಕೇಶ್ ಅಂಬಾನಿ!

ಕೇಂದ್ರ ಬಜೆಟ್‌ ಮಂಡನೆಯಾದ ದಿನ ಷೇರು ಮಾರುಕಟ್ಟೆಯು ಸಣ್ಣ ಕುಸಿತದೊಂದಿಗೆ ಕ್ಲೋಸ್‌ ಆಗಿತ್ತು. ಆದರೆ ಇದು ವಹಿವಾಟಿನ ವೇಳೆ ಬಹುದೊಡ್ಡ ಪರಿಣಾಮವನ್ನು ಬೀರಿತ್ತು. ಕೆಲವು ಷೇರುಗಳು ತೀವ್ರವಾಗಿ ಕುಸಿದರೆ, ಇನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಕಂಡವು. ಇದು ಮುಕೇಶ್ ಅಂಬಾನಿ (Mukesh Ambani) ಸೇರಿದಂತೆ ದೇಶದ ದೊಡ್ಡ ಬಿಲಿಯನೇರ್‌ಗಳ ಸಂಪತ್ತಿನ ಮೇಲೆ ಭಾರೀ ಪರಿಣಾಮವನ್ನು ಬೀರಿತು.

VISTARANEWS.COM


on

By

Mukesh Ambani
Koo

ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವನ್ನು (Ananth Ambani and Radhika Merchant’s wedding) ಅದ್ಧೂರಿಯಾಗಿ ನಡೆಸಿ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದ ರಿಲಯನ್ಸ್ ಉದ್ಯಮಿ ಮುಕೇಶ್ ಅಂಬಾನಿ (businessman Mukesh Ambani) 2024ರ ಕೇಂದ್ರ ಬಜೆಟ್ (Union Budget 2024) ಮಂಡನೆಯಾದ ದಿನ ಷೇರು ಮಾರುಕಟ್ಟೆಯಲ್ಲಿ ಆದ ಏರುಪೇರಿನಿಂದಾಗಿ ಬರೋಬ್ಬರಿ 9,200 ಕೋಟಿ ರೂ. ಕಳೆದುಕೊಂಡಿದ್ದರು!

ಕೇಂದ್ರ ಬಜೆಟ್‌ ದಿನ ಷೇರು ಮಾರುಕಟ್ಟೆಯು ಸಣ್ಣ ಕುಸಿತದೊಂದಿಗೆ ಕ್ಲೋಸ್‌ ಆಗಿತ್ತು. ಆದರೆ ಇದು ವಹಿವಾಟಿನ ವೇಳೆ ಬಹುದೊಡ್ಡ ಪರಿಣಾಮವನ್ನು ಬೀರಿತ್ತು. ಈ ಸಂದರ್ಭದಲ್ಲಿ ವಹಿವಾಟಿನಲ್ಲಿ ಗಮನಾರ್ಹವಾದ ಏರಿಳಿತಗಳು ಕಂಡುಬಂದವು. ಕೆಲವು ಷೇರುಗಳು ತೀವ್ರವಾಗಿ ಕುಸಿದರೆ ಇನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಕಂಡವು. ಇದು ದೇಶದ ದೊಡ್ಡ ಬಿಲಿಯನೇರ್‌ಗಳ ಸಂಪತ್ತಿನ ಮೇಲೆ ಭಾರೀ ಪರಿಣಾಮವನ್ನು ಬೀರಿತು.

ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯದಲ್ಲಿ ಈ ದಿನ ಗಣನೀಯ ಇಳಿಕೆಯಾಗಿದೆ. ಬಜೆಟ್ ದಿನದಂದು, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಏರುವ ನಿರೀಕ್ಷೆ ಇತ್ತು. ಇದರಿಂದ ಮುಕೇಶ್ ಅಂಬಾನಿ ಅವರ ನಿವ್ವಳ ಮೌಲ್ಯವನ್ನು ಹೆಚ್ಚಾಗುತ್ತದೆ ಎಂದೇ ಭಾವಿಸಲಾಗಿತ್ತು. ಆದರೆ ಮಾರುಕಟ್ಟೆಯಲ್ಲಿ ಇದು ವ್ಯತಿರಿಕ್ತ ಪರಿಣಾಮ ಬೀರಿತು.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಅಂಬಾನಿ ಅವರ ನಿವ್ವಳ ಮೌಲ್ಯವು 1.10 ಬಿಲಿಯನ್ ಡಾಲರ್‌ ಅಂದರೆ ಸರಿಸುಮಾರು 9200 ಕೋಟಿ ರೂ. ಗಳಷ್ಟು ಕಡಿಮೆಯಾಗಿದೆ. ಈ ಕುಸಿತದ ಹೊರತಾಗಿಯೂ ಈ ವರ್ಷದ ಆರಂಭದಲ್ಲಿ ಅವರ ಸಂಪತ್ತು 16 ಶತಕೋಟಿ ಡಾಲರ್‌ಗಳಷ್ಟು ಹೆಚ್ಚಾಗಿತ್ತು.

ಕಳೆದ ಕೆಲವು ದಿನಗಳಲ್ಲಿ ಅಂಬಾನಿ ಅವರ ನಿವ್ವಳ ಮೌಲ್ಯವು 7 ಶತಕೋಟಿ ಡಾಲರ್‌ಗಿಂತ ಕಡಿಮೆಯಾಗಿದೆ. ಜುಲೈ 19ರಂದು ಅವರ ನಿವ್ವಳ ಮೌಲ್ಯವು 119 ಶತಕೋಟಿ ಡಾಲರ್ ಆಗಿತ್ತು. ಆದರೆ ಅದು ಈಗ 112 ಶತಕೋಟಿ ಡಾಲರ್‌ಗೆ ಇಳಿದಿದೆ ಎನ್ನಲಾಗಿದೆ.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಇತ್ತೀಚೆಗೆ ಕುಸಿಯುತ್ತಲೇ ಇದ್ದು, ಮುಂದಿನ ದಿನಗಳಲ್ಲಿ ಅಂಬಾನಿ ಸಂಪತ್ತಿನಲ್ಲಿ ಮತ್ತಷ್ಟು ಕುಸಿತ ಉಂಟಾಗಬಹುದು ಎನ್ನಲಾಗಿದೆ.

Mukesh Ambani
Mukesh Ambani


ಇದಕ್ಕೆ ವ್ಯತಿರಿಕ್ತವಾಗಿ ಉದ್ಯಮಿ ಗೌತಮ್ ಅದಾನಿ ಅವರ ಸಂಪತ್ತು ಹೆಚ್ಚಳವಾಗಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಅದಾನಿ ಅವರ ನಿವ್ವಳ ಮೌಲ್ಯವು 751 ಮಿಲಿಯನ್ ಡಾಲರ್‌ಗಳು ಅಂದರೆ ಸರಿಸುಮಾರು 63 ಕೋಟಿ ರೂಪಾಯಿ ಹೆಚ್ಚಳವಾಗಿದೆ. ಅವರ ಸಂಪತ್ತು 102 ಬಿಲಿಯನ್ ಡಾಲರ್‌ ಗಳನ್ನು ತಲುಪಿದೆ. ಈ ವರ್ಷ ಅವರ ಸಂಪತ್ತು 17.8 ಬಿಲಿಯನ್ ಡಾಲರ್‌ಗಳಷ್ಟು ಏರಿಕೆಯಾಗಿದೆ.

Continue Reading

ದೇಶ

Union Budget 2024: ಕೇಂದ್ರ ಬಜೆಟ್‌ನಲ್ಲಿ ಮಾಲ್ಡೀವ್ಸ್‌ಗೆ ಅನುದಾನದಲ್ಲಿ ಭಾರೀ ಕಡಿತ! ನೆರೆಯ ರಾಷ್ಟ್ರಗಳಿಗೆ ಎಷ್ಟೆಷ್ಟು ನೆರವು ಘೋಷಣೆ?

Union Budget 2024: 2,068 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಭೂತಾನ್ ಭಾರತದಿಂದ ಅತಿಹೆಚ್ಚು ಅಭಿವೃದ್ಧಿ ನೆರವು ಪಡೆಯುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಹೆಚ್ಚಳವು ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಯನ್ನು ಒತ್ತಿಹೇಳುತ್ತದೆ. ಇದಕ್ಕೆ ತದ್ವಿರುದ್ಧವಾಗಿ, ಮಾಲ್ಡೀವ್ಸ್ ಹಿಂದಿನ 770 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಕೇವಲ 400 ಕೋಟಿ ರೂಪಾಯಿಗಳನ್ನು ಪಡೆಯುವುದರ ಮೂಲಕ ತೀವ್ರ ಇಳಿಕೆಗೆ ಸಾಕ್ಷಿಯಾಯಿತು. ಮಧ್ಯಂತರ ಬಜೆಟ್ ಈಗಾಗಲೇ 22% ಕಡಿತವನ್ನು ಪ್ರಸ್ತಾಪಿಸಿದೆ, ಆದರೆ ಅಂತಿಮ ಬಜೆಟ್ ಸಹಾಯವನ್ನು 48% ರಷ್ಟು ಕಡಿತಗೊಳಿಸಿತು

VISTARANEWS.COM


on

union budget 2024
Koo

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌(Union Budget 2024)ನಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Seetharaman) ಅವರು ಭಾರತದ ವಿದೇಶಿ ನೆರವು ಹಂಚಿಕೆಗಳಲ್ಲಿ ಗಣನೀಯ ಬದಲಾವಣೆಗಳನ್ನು ಘೋಷಿಸಿದ್ದಾರೆ. ಇದರದಲ್ಲಿ ನೆರೆಯ ರಾಷ್ಟ್ರಗಳಾದ ಮಾಲ್ಡೀವ್ಸ್‌ ಮತ್ತು ಭೂತಾನ್‌ಗೆ ಅನುದಾನ ಹಂಚಿಕೆಯಲ್ಲಿ ಈ ಬಾರಿ ಗಣನೀಯ ಬದಲಾವಣೆ ತರಲಾಗಿದೆ. ಮಾಲ್ಡೀವ್ಸ್‌ ಅನುದಾನದಲ್ಲಿ ಈ ಬಾರಿ ಭಾರೀ ಕಡಿತ ಮಾಡಲಾಗಿದೆ. ಹಾಗೆಯೇ ಭೂತಾನ್‌ ಅನುದಾನದಲ್ಲಿ ಏರಿಕೆ ಮಾಡಲಾಗಿದೆ.

2,068 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಭೂತಾನ್ ಭಾರತದಿಂದ ಅತಿಹೆಚ್ಚು ಅಭಿವೃದ್ಧಿ ನೆರವು ಪಡೆಯುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಹೆಚ್ಚಳವು ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಯನ್ನು ಒತ್ತಿಹೇಳುತ್ತದೆ. ಇದಕ್ಕೆ ತದ್ವಿರುದ್ಧವಾಗಿ, ಮಾಲ್ಡೀವ್ಸ್ ಹಿಂದಿನ 770 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಕೇವಲ 400 ಕೋಟಿ ರೂಪಾಯಿಗಳನ್ನು ಪಡೆಯುವುದರ ಮೂಲಕ ತೀವ್ರ ಇಳಿಕೆಗೆ ಸಾಕ್ಷಿಯಾಯಿತು. ಮಧ್ಯಂತರ ಬಜೆಟ್ ಈಗಾಗಲೇ 22% ಕಡಿತವನ್ನು ಪ್ರಸ್ತಾಪಿಸಿದೆ, ಆದರೆ ಅಂತಿಮ ಬಜೆಟ್ ಸಹಾಯವನ್ನು 48% ರಷ್ಟು ಕಡಿತಗೊಳಿಸಿತು.

ಚೀನಾ ಪರ ನಿಲುವಿಗೆ ಹೆಸರುವಾಸಿಯಾದ ಮೊಹಮದ್ ಮುಯಿಝು ಅವರು ಮಾಲ್ಡೀವ್ಸ್‌ ಅಧ್ಯಕ್ಷರಾಗಿ ಚುನಾಯಿತರಾದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಟ್ಟಿದೆ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅವರ ಆಡಳಿತದ ವಿಮರ್ಶಾತ್ಮಕ ಹೇಳಿಕೆಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರುವ “ಮಾಲ್ಡೀವ್ಸ್ ಬಹಿಷ್ಕಾರ” ಅಭಿಯಾನವನ್ನು ಹುಟ್ಟುಹಾಕಿತು.

ಈ ಬಾರಿ ನೇಪಾಳವು 700 ಕೋಟಿ ರೂಪಾಯಿ ಅತ್ಯಧಿಕ ನೆರವನ್ನು ಪಡೆದುಕೊಂಡಿದೆ. ಇದು ನೇಪಾಳ ಮತ್ತು ಭಾರತದ ಬದ್ಧತೆಯನ್ನು ಬಲಪಡಿಸುತ್ತದೆ. ಶ್ರೀಲಂಕಾವು ಕಳೆದ ವರ್ಷದ 60 ಕೋಟಿ ರೂಪಾಯಿಗಳ ನೆರವು ಪಡೆದಿತ್ತು. ಈ ಬಾರಿ 245 ಕೋಟಿ ರೂಪಾಯಿಗಳನ್ನು ಪಡೆಯುತ್ತಿದ್ದು, ನೆರವಿನಲ್ಲಿ ಗಣನೀಯ ಏರಿಕೆ ಕಂಡಿದೆ.

ಬಜೆಟ್‌ನಲ್ಲಿ ದಕ್ಷಿಣ ಏಷ್ಯಾದ ಆಚೆಗಿನ ದೇಶಗಳಿಗೂ ಮೀಸಲಿಡಲಾಗಿದೆ. ಇರಾನ್‌ನ ಚಬಹಾರ್ ಬಂದರು 100 ಕೋಟಿ ರೂಪಾಯಿಗಳನ್ನು ಪಡೆದುಕೊಂಡಿದ್ದು, ಅದರ ಕಾರ್ಯತಂತ್ರದ ಮಹತ್ವವನ್ನು ಎತ್ತಿ ತೋರಿಸುತ್ತದೆ. ಅಫ್ಘಾನಿಸ್ತಾನದ ನೆರವನ್ನು 220 ಕೋಟಿಯಿಂದ 200 ಕೋಟಿಗೆ ಸ್ವಲ್ಪ ಕಡಿಮೆ ಮಾಡಲಾಗಿದೆ. ಬಾಂಗ್ಲಾದೇಶಕ್ಕೆ 120 ಕೋಟಿ ರೂ., ಮ್ಯಾನ್ಮಾರ್‌ನ ನೆರವನ್ನು 320 ಕೋಟಿ ರೂ.ಗಳಿಂದ 250 ಕೋಟಿ ರೂ.ಗೆ ಇಳಿಸಲಾಯಿತು. ಆಫ್ರಿಕನ್ ರಾಷ್ಟ್ರಗಳು ಒಟ್ಟಾರೆಯಾಗಿ 200 ಕೋಟಿ ರೂಪಾಯಿಗಳನ್ನು ಪಡೆದಿವೆ ಮತ್ತು ಮಾರಿಷಸ್‌ಗೆ 370 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ಒಟ್ಟಾರೆ ವಿದೇಶಾಂಗ ವ್ಯವಹಾರಗಳ ಬಜೆಟ್‌ ಎಷ್ಟು?

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಒಟ್ಟು ಬಜೆಟ್ ಅನ್ನು 29,121 ಕೋಟಿ ರೂಗಳಿಂದ 22,154 ಕೋಟಿಗೆ ಇಳಿಸಲಾಗಿದ್ದು, ಇದು ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಹಂಚಿಕೆಯೊಂದಿಗೆ ಹೊಂದಿಕೆಯಾಗುತ್ತದೆ. ಕೇಂದ್ರ ಬಜೆಟ್ 2024-25 ಭಾರತದ ಕ್ರಿಯಾತ್ಮಕ ವಿದೇಶಾಂಗ ನೀತಿಯನ್ನು ಪ್ರತಿಬಿಂಬಿಸುತ್ತದೆ. ಭೂತಾನ್ ಮತ್ತು ಇತರ ನೆರೆಹೊರೆಗಳಿಗೆ ಹೆಚ್ಚಿದ ಬೆಂಬಲವು ಭಾರತದ ವಿಕಸನಗೊಳ್ಳುತ್ತಿರುವ ರಾಜತಾಂತ್ರಿಕ ಆದ್ಯತೆಗಳನ್ನು ಒತ್ತಿಹೇಳುತ್ತದೆ.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

Continue Reading

ಮನಿ-ಗೈಡ್

Tax Saving Tips: 10 ಲಕ್ಷ ರೂ. ಆದಾಯ ಇದ್ದರೂ ತೆರಿಗೆಯಿಂದ ಪಾರಾಗಲು ಸಾಧ್ಯ! ಇಲ್ಲಿದೆ ಸರಳ ಲೆಕ್ಕಾಚಾರ!

Tax Saving Tips: ಕೇಂದ್ರ ಬಜೆಟ್‌ನಲ್ಲಿ ಈ ಬಾರಿ 7.75 ಲಕ್ಷ ರೂ.ವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸಿರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಆದರೆ ವಾರ್ಷಿಕ ಆದಾಯ 10 ಲಕ್ಷ ರೂ.ಗಳಿದ್ದರೂ ಆದಾಯ ತೆರಿಗೆಯಿಂದ (Money Guide) ಮುಕ್ತರಾಗಿ ಇರಬಹುದು. ಇದು ಹೇಗೆ ಎನ್ನುವ ಲೆಕ್ಕಾಚಾರ ಇಲ್ಲಿದೆ.

VISTARANEWS.COM


on

By

Tax Saving Tips
Koo

ಕೇಂದ್ರ ಬಜೆಟ್‌ನಲ್ಲಿ (Union Budget 2024) ಈ ಬಾರಿ (Tax Saving Tips) ಹಣಕಾಸು (Money Guide) ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರು ಹೊಸ ತೆರಿಗೆ ಪದ್ಧತಿಯಡಿ (New Tax Regime) ಬಹುದೊಡ್ಡ ತೆರಿಗೆ ವಿನಾಯಿತಿಯನ್ನು ನೀಡಿದ್ದಾರೆ. ಪ್ರಮಾಣಿತ ತೆರಿಗೆ ಕಡಿತವನ್ನು (standard tax deduction) 50,000 ರೂ.ನಿಂದ 75,000 ರೂ.ಗೆ ಹೆಚ್ಚಿಸಿದ್ದಾರೆ. ಹೀಗಾಗಿ ಸಾಮಾನ್ಯ ಭಾರತೀಯ ನಾಗರಿಕರು 7.75 ಲಕ್ಷ ರೂ.ವರೆಗಿನ ಆದಾಯವನ್ನು (Money Guide) ತೆರಿಗೆ (tax free) ಮುಕ್ತಗೊಳಿಸಬಹುದು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರಾವಧಿಯ 3.0ರ ಮೊದಲ ಬಜೆಟ್‌ನಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಜನರಿಗೆ ಬಹುದೊಡ್ಡ ಪ್ರಯೋಜನವನ್ನು ನೀಡಲಾಗಿದೆ. ಇದರಲ್ಲಿ ಹೊಸ ತೆರಿಗೆ ಪದ್ಧತಿಯಡಿ ದೊಡ್ಡ ರಿಯಾಯಿತಿ ನೀಡಿದ್ದು, ಪ್ರಮಾಣಿತ ಆದಾಯ ತೆರಿಗೆ ಕಡಿತವನ್ನು 50,000 ರೂ. ನಿಂದ 75,000 ರೂ.ಗೆ ಹೆಚ್ಚಿಸಲಾಗಿದೆ.

ಇದರೊಂದಿಗೆ ತೆರಿಗೆ ಸ್ಲ್ಯಾಬ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. 7.75 ಲಕ್ಷ ರೂ. ಆದಾಯವು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವವರಿಗೆ ಈಗ ಸಂಪೂರ್ಣ ತೆರಿಗೆ ಮುಕ್ತವಾಗಿದೆ. ಆದರೆ ಯಾರೊಬ್ಬರ ವಾರ್ಷಿಕ ಆದಾಯ 10 ಲಕ್ಷ ರೂ.ಗಳಿದ್ದರೆ ಅವರೂ ಆದಾಯ ತೆರಿಗೆಯಿಂದ ಮುಕ್ತರಾಗಿ ಇರಬಹುದು. ಇದಕ್ಕಾಗಿ ಕೆಲವು ಲೆಕ್ಕಾಚಾರಗಳನ್ನು ಇಲ್ಲಿ ನೀಡಲಾಗಿದೆ.

Money Guide
Money Guide


ತೆರಿಗೆ ಉಳಿಸುವುದು ಹೇಗೆ?

1. 10 ಲಕ್ಷ ರೂ.ವರೆಗಿನ ಆದಾಯದ ಮೇಲೆ ಆದಾಯ ತೆರಿಗೆ ಪ್ರಯೋಜನಗಳನ್ನು ಪಡೆಯಲು ತೆರಿಗೆ ರಿಟರ್ನ್ ಸಲ್ಲಿಕೆ ಮಾದರಿಯನ್ನು ಹಳೆಯ ತೆರಿಗೆ ಪದ್ಧತಿಗೆ ಬದಲಾಯಿಸಬೇಕಾಗುತ್ತದೆ. ಇದರಲ್ಲಿ ಅನೇಕ ರೀತಿಯ ಕಡಿತಗಳನ್ನು ಕ್ಲೈಮ್ ಮಾಡಬಹುದು ಮತ್ತು ಅನೇಕ ರೀತಿಯ ಆದಾಯದ ಮೇಲೆ ತೆರಿಗೆಯನ್ನು ಉಳಿಸಬಹುದು.

2. ಹಳೆಯ ತೆರಿಗೆ ವ್ಯವಸ್ಥೆಯನ್ನು ಆರಿಸಿಕೊಂಡರೆ 50,000 ರೂ. ವರೆಗೆ ಪ್ರಮಾಣಿತ ಕಡಿತವನ್ನು ಪಡೆಯಬಹುದು. ಅಂದರೆ 50,000 ರೂ. ವರೆಗೆ ಯಾವುದೇ ತೆರಿಗೆ ಇರುವುದಿಲ್ಲ. ಇದು ಒಟ್ಟು ಆದಾಯದಿಂದ ಮುಂಚಿತವಾಗಿ ಕಡಿತಗೊಳಿಸಲಾಗುವ ಮೊತ್ತವಾಗಿದೆ. ಅಂದರೆ 10 ಲಕ್ಷ ರೂಪಾಯಿ ಗಳಿಸುವ ವ್ಯಕ್ತಿಯ ತೆರಿಗೆಯ ಆದಾಯವು 9.50 ಲಕ್ಷ ರೂಪಾಯಿ ಆಗುತ್ತದೆ.

3. ಇನ್ನು 80ಸಿಯ ಲಾಭವನ್ನು ನೀಡುವ ಪಿಪಿಎಫ್, ಇಪಿಎಫ್ ಮತ್ತು ಎನ್ ಎಸ್ ಸಿಯಂತಹ ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದರೆ 1.5 ಲಕ್ಷ ರೂ.ವರೆಗೆ ತೆರಿಗೆ ಉಳಿಸಬಹುದು. ಇದರಿಂದ 9.50 ಲಕ್ಷದಿಂದ 1.50 ಲಕ್ಷ ರೂ. ಕಡಿತಗೊಳಿಸಿದರೆ ತೆರಿಗೆಯ ಆದಾಯವು 8 ಲಕ್ಷ ರೂ.ಗಳಾಗುತ್ತದೆ.

4. ಅಲ್ಲದೇ ಎನ್ ಪಿ ಎಸ್ ನಲ್ಲಿ ವಾರ್ಷಿಕವಾಗಿ 50,000 ರೂ.ವರೆಗೆ ಹೂಡಿಕೆ ಮಾಡಿದರೆ ಸೆಕ್ಷನ್ 80ಸಿಸಿಡಿ (1ಬಿ) ಅಡಿಯಲ್ಲಿ 50,000 ರೂ. ಹೆಚ್ಚುವರಿ ತೆರಿಗೆ ವಿನಾಯಿತಿ ನೀಡಲಾಗುತ್ತದೆ. ಈ ಸಂದರ್ಭದಲ್ಲಿ 8 ಲಕ್ಷದಿಂದ 50 ಸಾವಿರವನ್ನು ಕಳೆದರೆ ತೆರಿಗೆಯ ಆದಾಯವು 7.50 ಲಕ್ಷ ರೂಪಾಯಿಗಳಾಗುತ್ತದೆ.

5. ಗೃಹ ಸಾಲ ಪಡೆದವರು ಆದಾಯ ತೆರಿಗೆಯ ಸೆಕ್ಷನ್ 24ಬಿ ಅಡಿಯಲ್ಲಿ 2 ಲಕ್ಷ ರೂಪಾಯಿಗಳವರೆಗೆ ಬಡ್ಡಿಯನ್ನು ಉಳಿಸಬಹುದು. ಈಗ 7.50 ಲಕ್ಷದಿಂದ 2 ಲಕ್ಷ ರೂಪಾಯಿ ಕಳೆದರೆ 5.50 ಲಕ್ಷ ರೂಪಾಯಿ ಉಳಿಯುತ್ತದೆ.

6. ವೈದ್ಯಕೀಯ ವಿಮೆಗಳನ್ನು ತೆಗೆದುಕೊಂಡಿದ್ದರೆ ಆದಾಯ ತೆರಿಗೆಯ ಸೆಕ್ಷನ್ 80ಡಿ ಅಡಿಯಲ್ಲಿ 25 ಸಾವಿರ ರೂಪಾಯಿಗಳವರೆಗೆ ತೆರಿಗೆ ಉಳಿಸಬಹುದು. ಜೊತೆಗೆ ಹೆಂಡತಿ, ಮಕ್ಕಳ ಹೆಸರಿನಲ್ಲಿ ಆರೋಗ್ಯ ವಿಮೆಯಲ್ಲಿದ್ದರೆ 50,000 ರೂಪಾಯಿಗಳವರೆಗೆ ಹೆಚ್ಚುವರಿ ವಿನಾಯಿತಿ ಪಡೆಯಬಹುದು. ಇದರಿಂದ 5.50 ಲಕ್ಷ ರೂಪಾಯಿಗಳಿಂದ 75,000 ರೂಪಾಯಿಗಳನ್ನು ಹೆಚ್ಚು ಕಳೆದರೆ ಆದಾಯವು 4.75 ಲಕ್ಷ ರೂಪಾಯಿಗಳಾಗಿರುತ್ತದೆ.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಹಳೆಯ ತೆರಿಗೆ ಪದ್ಧತಿಯಲ್ಲಿ 5 ಲಕ್ಷ ರೂಪಾಯಿವರೆಗಿನ ಆದಾಯದ ಮೇಲೆ ಯಾವುದೇ ತೆರಿಗೆ ಇಲ್ಲದಿರುವುದರಿಂದ ಈ ಸಂದರ್ಭದಲ್ಲಿ 10 ಲಕ್ಷ ರೂ. ಆದಾಯವಿದ್ದವರಿಗೂ ಯಾವುದೇ ತೆರಿಗೆ ವಿಧಿಸಲಾಗುವುದಿಲ್ಲ. ಈ ರೀತಿಯಾಗಿ 10 ಲಕ್ಷ ರೂ. ವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸಬಹುದು.

Continue Reading

ಮನಿ-ಗೈಡ್

Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಮುದ್ರಾ ಸಾಲದ (Mudra loan) ಮಿತಿಗಳನ್ನು ಹೆಚ್ಚಿಸಿರುವುದರಿಂದ ಅನೇಕರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ. ಮುಖ್ಯವಾಗಿ ಸಣ್ಣ ಉದ್ಯಮಿಗಳು ಮತ್ತು ಉದ್ಯಮಿಗಳು ಇದರ ಲಾಭ ಪಡೆಯಲಿದ್ದಾರೆ. ಹೆಚ್ಚಿನ ಸಾಲದ ಮಿತಿಯೊಂದಿಗೆ ಇದಕ್ಕೆ ಕೆಲವು ಷರತ್ತುಗಳನ್ನು ಸಹ ಪರಿಚಯಿಸಲಾಗಿದೆ. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.

VISTARANEWS.COM


on

By

Mudra loan
Koo

ಕೇಂದ್ರ ಬಜೆಟ್‌ನಲ್ಲಿ (Union Budget 2024) ಈ ಬಾರಿ ಹಲವಾರು ವಿಷಯಗಳ ಬಗ್ಗೆ ಕಾಳಜಿ ವಹಿಸಲಾಗಿದೆ. ಮೋದಿ ಸರ್ಕಾರದ (Modi government) ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರು ಸಂಸತ್ತಿನಲ್ಲಿ ಮಂಡಿಸಿ ಹಲವು ಜನಪರ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಈ ವೇಳೆ ಅವರು ಮುದ್ರಾ ಸಾಲದ (Mudra loan) ಕುರಿತು ಮಾತನಾಡಿದ್ದು, ಅದರ ಮಿತಿಗಳನ್ನು ಹೆಚ್ಚಿಸಿರುವುದಾಗಿ ತಿಳಿಸಿದ್ದಾರೆ.

ಮುದ್ರಾ ಸಾಲದ ಮಿತಿಗಳನ್ನು ಹೆಚ್ಚಿಸಿರುವುದರಿಂದ ಅನೇಕರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ. ಮುಖ್ಯವಾಗಿ ಸಣ್ಣ ಉದ್ಯಮಿಗಳು ಮತ್ತು ಉದ್ಯಮಿಗಳು ಇದರ ಲಾಭ ಪಡೆಯಲಿದ್ದಾರೆ. ಹೆಚ್ಚಿನ ಸಾಲದ ಮಿತಿಯೊಂದಿಗೆ ಇದಕ್ಕೆ ಕೆಲವು ಷರತ್ತುಗಳನ್ನು ಸಹ ಪರಿಚಯಿಸಲಾಗಿದೆ. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.
ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇದು ಉದ್ಯಮಿಯಾಗಲು ಬಯಸುವವರಿಗೆ ವರದಾನವಾಗಿದೆ.

ಷರತ್ತುಗಳು ಏನು?

ಹೆಚ್ಚಿದ ಸಾಲದ ಮಿತಿಗೆ ಅರ್ಹತೆ ಪಡೆಯಲು ಸಾಲಗಾರರು ಈ ಹಿಂದೆ ಮುದ್ರಾ ಸಾಲವನ್ನು ತೆಗೆದುಕೊಂಡು ಪೂರ್ಣವಾಗಿ ಮರುಪಾವತಿಸಿರಬೇಕು. ಹಾಗಿದ್ದರೆ ಮಾತ್ರ ಹೊಸ ಪ್ರಯೋಜನಗಳನ್ನು ಪಡೆಯಬಹುದು.

ಮುದ್ರಾ ಸಾಲ ವಿಭಾಗಗಳು

ಮುದ್ರಾ ಸಾಲಗಳನ್ನು ಮೂರು ವಿಭಾಗಗಳಾಗಿ ವರ್ಗೀಕರಿಸಲಾಗಿದೆ. ʼಶಿಶುʼ ವಿಭಾಗದಲ್ಲಿ 50,000 ರೂ.ವರೆಗೆ ಸಾಲ, ʼಕಿಶೋರʼ ವಿಭಾಗದಲ್ಲಿ 50,000 ರೂ.ನಿಂದ 5 ಲಕ್ಷ ರೂ. ವರೆಗೆ ಸಾಲ, ʼತರುಣ್ʼ ವಿಭಾಗದಲ್ಲಿ 5 ಲಕ್ಷದಿಂದ 10 ಲಕ್ಷ ರೂ.ವರೆಗಿನ ಸಾಲಗಳು.

ಪರಿಣಾಮ ಮತ್ತು ವ್ಯಾಪ್ತಿ ಏನು?

ಪ್ರಧಾನಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಅಡಿಯಲ್ಲಿ 47 ಕೋಟಿಗೂ ಹೆಚ್ಚು ಸಣ್ಣ ಮತ್ತು ದೊಡ್ಡ ಉದ್ಯಮಗಳಿಗೆ 27.75 ಲಕ್ಷ ಕೋಟಿ ರೂ.ಗಳ ಸಾಲವನ್ನು ವಿತರಿಸಲಾಗಿದೆ. ಗಮನಾರ್ಹ ಸಂಗತಿ ಎಂದರೆ ಮಂಜೂರಾದ ಒಟ್ಟು 44.46 ಕೋಟಿ ಸಾಲದಲ್ಲಿ ಶೇ.69ರಷ್ಟು ಮಹಿಳಾ ಉದ್ಯಮಿಗಳಿಗೆ ನೀಡಲಾಗಿದೆ.

Mudra loan
Mudra loan


ಹಿಂದುಳಿದ ವರ್ಗದವರಿಗೆ ಬೆಂಬಲ

2015ರ ಏಪ್ರಿಲ್ 8ರಂದು ಪ್ರಾರಂಭವಾದ ಮುದ್ರಾ ಯೋಜನೆಯು 2016ರಲ್ಲಿ ಪ್ರಾರಂಭವಾದ ಎಸ್‌ಯುಪಿಐ ಯೋಜನೆಯೊಂದಿಗೆ ವಿಶೇಷವಾಗಿ ಮಹಿಳೆಯರು ಮತ್ತು ಎಸ್ ಸಿ/ ಎಸ್‌ಟಿ ಸಮುದಾಯಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗಳು ಹೊಸ ಉದ್ಯಮಗಳ ಸ್ಥಾಪನೆಯನ್ನು ಬೆಂಬಲಿಸುತ್ತವೆ ಮತ್ತು ಮಹಿಳೆಯರ ಆರ್ಥಿಕ ಉನ್ನತಿಗೆ ಪ್ರೋತ್ಸಾಹ ನೀಡುತ್ತದೆ.

ಇದನ್ನೂ ಓದಿ: Union Budget 2024: ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ₹7,559 ಕೋಟಿ ಅನುದಾನ; ಕಳೆದ ವರ್ಷಕ್ಕಿಂತ ಕಡಿಮೆ

ಉದ್ಯಮಶೀಲತೆಗೆ ಉತ್ತೇಜನ

ʼಮುದ್ರಾʼ ಯೋಜನೆ ಮತ್ತು ಎಸ್‌ಯುಪಿಐ ಯೋಜನೆಗಳು ಅಗತ್ಯ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಸಣ್ಣ ಮತ್ತು ಅತಿಸಣ್ಣ ಉದ್ಯಮಗಳನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾಗಿದೆ. ವ್ಯಾಪಾರ ಅವಕಾಶಗಳನ್ನು ಮುಂದುವರಿಸಲು ಅನನುಕೂಲಕರ ಪರಿಸ್ಥಿತಿ ಎದುರಿಸುತ್ತಿರುವವರನ್ನು ಸಬಲೀಕರಣಗೊಳಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಬ್ಯಾಂಕ್‌ಗಳ ಸ್ಥಳೀಯ ಶಾಖೆಗೆ ಹೋಗಿ ಮುದ್ರಾ ಸಾಲ ಯೋಜನೆಯ ಮಾಹಿತಿ ಪಡೆಯಬಹುದು.

Continue Reading
Advertisement
Vaccin for Hiv
ಆರೋಗ್ಯ26 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ35 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ50 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ52 mins ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ53 mins ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ2 hours ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ2 hours ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌