ಪಾರದರ್ಶಕತೆಗೆ ಪರ್ಯಾಯ ಪದ ಆಗುತ್ತೇವೆ: ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ - Vistara News

ಕರ್ನಾಟಕ

ಪಾರದರ್ಶಕತೆಗೆ ಪರ್ಯಾಯ ಪದ ಆಗುತ್ತೇವೆ: ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ

ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಜತೆಗೆ ಜನರ ಬಳಿಗೆ ಹೋದಾಗ ಅವರೇ ಮೀಡಿಯಾವನ್ನು ನಂಬರ್‌ ಒನ್‌ ಮಾಡುತ್ತಾರೆ. ದೇಶದ ಹಿತ, ಕನ್ನಡದ ಕಳಕಳಿ ನಮ್ಮ ಬದ್ಧತೆ ಎಂದಿದ್ದಾರೆ ಹರಿಪ್ರಕಾಶ್‌ ಕೋಣೆಮನೆ.

VISTARANEWS.COM


on

vistara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಧ್ಯಮವು ಪಾರದರ್ಶಕತೆಗೆ ಪರ್ಯಾಯ ಪದ ಆಗಬೇಕು. ಆಗ ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ. ಸದುದ್ದೇಶ ಹಾಗೂ ಎರಡು ಪಾರದರ್ಶಕತೆಗಳು ಸೇರಿದಾಗ ಅದು ಜನರ ನಡುವೆ ವಿಶ್ವಾಸಾರ್ಹವೆನಿಸಿಕೊಳ್ಳುತ್ತದೆ ಎಂದು ವಿಸ್ತಾರ ನ್ಯೂಸ್‌ನ ಪ್ರಧಾನ ಸಂಪಾದಕ ಹಾಗೂ ಸಿಇಒ ಹರಿಪ್ರಕಾಶ್‌ ಕೋಣೆಮನೆ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ನಡೆದ ವಿಸ್ತಾರ ನ್ಯೂಸ್‌ ವೆಬ್‌ಸೈಟ್‌ ಲೋಕಾರ್ಪಣೆ ಹಾಗೂ ವಿಸ್ತಾರ ಮೀಡಿಯಾ ಲೋಗೊ ಅನಾವರಣ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ವಿಸ್ತಾರ ನ್ಯೂಸ್‌ನ ಹೂಡಿಕೆದಾರರ ವಿವರ, ಸಂಸ್ಥೆಯ ಆಶಯ ಹಾಗೂ ಧ್ಯೇಯೋದ್ದೇಶಗಳನ್ನೂ ವಿವರಿಸಿದರು.

ಆಶಯ ಬದಲಾಗಬಾರದು

ಮಾಧ್ಯಮ ಪ್ರಜಾತಂತ್ರದ ನಾಲ್ಕನೇ ಅಂಗ ಎನ್ನುತ್ತಾರೆ. ನಾವು ಅತ್ಯಂತ ಪ್ರಧಾನ ಅಂಗವೆನ್ನುವುದನ್ನು ಮೀಡಿಯಾ ಒಪ್ಪಿಕೊಳ್ಳಬೇಕಿದ್ದರೆ ಹಾಗೆಯೇ ಕಾರ್ಯಾಚರಿಸಬೇಕು. ಮಾಧ್ಯಮ ಕೈಬರಹದ ಕಾಲದಿಂದ ಡಿಜಿಟಲ್‌ವರೆಗೆ ಸಾಗಿಬಂದಿದೆ. ಮಾಧ್ಯಮದ ಕಾರ್ಯವಿಧಾನ ಬದಲಾಗುತ್ತಿದೆ. ಮೀಡಿಯಾ ಬಳಕೆದಾರರ ಸಂಖ್ಯೆ ಲಕ್ಷಾಂತರ ಸಂಖ್ಯೆಯಲ್ಲಿ ವಿಸ್ತರಿಸುತ್ತಿದೆ. ಆದರೆ ಆಶಯ ಬದಲಾಗುವುದಿಲ್ಲ, ಬದಲಾಗಬಾರದು. ಸಾಮಾಜಿಕ ಒಳಿತೇ ಆ ಆಶಯವಾಗಿದೆ ಎಂದು ಹರಿಪ್ರಕಾಶ್‌ ಹೇಳಿದರು.

ವಿಸ್ತಾರ ನ್ಯೂಸ್‌ನ ಅನಾವರಣ ದಿನ ಇತಿಹಾಸದೊಂದಿಗೆ ಸೇರಿಕೊಂಡಿದೆ. ಇಂದು ಇಬ್ಬರು ಮಹಾನ್‌ ವ್ಯಕ್ತಿಗಳ ಜನ್ಮದಿನ. ಕೇಸರಿ ಪತ್ರಿಕೆಯ ಮೂಲಕ ಸ್ವಾತಂತ್ರ್ಯ ಹೋರಾಟದ ಕಿಡಿ ಹೊತ್ತಿಸಿದ ಬಾಲ ಗಂಗಾಧರ ತಿಲಕ್‌ ಹಾಗೂ ಸ್ವಾತಂತ್ರ್ಯ ಹೋರಾಟದ ಕಲಿ ಚಂದ್ರಶೇಖರ ಆಜಾದ್‌ ಜನಿಸಿದ ದಿನ ಇಂದು. ಇತಿಹಾಸದೊಂದಿಗೆ ವರ್ತಮಾನವನ್ನು ನಾವು ಜೋಡಿಸುತ್ತಿದ್ದೇವೆ ಎಂದವರು ಹೇಳಿದರು.

ಮಾಧ್ಯಮ ಟೀಕೆಗೆ ಹೊರತಲ್ಲ

ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ ಮಾಧ್ಯಮಕ್ಕೆ ತಾನು ಪ್ರತ್ಯೇಕ ಎಂಬ ಭಾವನೆ ಇರಕೂಡದು. ವರದಿ, ಟೀಕೆ, ವಿಶ್ಲೇಷಣೆಗಳು ಮೀಡಿಯಾದ ಕರ್ತವ್ಯ. ಇದಕ್ಕೆ ಹೊರತಾದ ಜವಾಬ್ದಾರಿಗಳೂ ಇವೆ. ತಾನೂ ಟೀಕೆ ಮತ್ತು ವಿಶ್ಲೇಷಣೆಗೆ ಹೊರತಲ್ಲ ಎಂಬ ಉತ್ತರದಾಯಿತ್ವ ಮೀಡಿಯಾಗೆ ಇರಬೇಕು. ಇದು ವಿಸ್ತಾರ ನ್ಯೂಸ್ ಮೀಡಿಯಾ ತಂಡದ ಜವಾಬ್ದಾರಿಯ ಪ್ರಜ್ಞೆ. ಒಂದು ಬೆರಳನ್ನು ನಾವು ಸಮಾಜದತ್ತ ತೋರಿದಾಗ ನಾಲ್ಕು ಬೆರಳು ನಮ್ಮನ್ನು ತೋರಿಸುತ್ತದೆ ಎಂಬ ಪ್ರಜ್ಞೆ ನಮ್ಮದಾಗಿದೆ ಎಂದವರು ಸ್ಪಷ್ಟಪಡಿಸಿದರು.

vistara

ಸಾರ್ವಜನಿಕರಿಗೆ ಲಭ್ಯ

ನಾನು ವಿಜಯ ಕರ್ನಾಟಕ ಪತ್ರಿಕೆ ಬಿಟ್ಟಾಗಿನಿಂದ ಅನೇಕರು ಹೊಸ ಮಾಧ್ಯಮದ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಅದಕ್ಕೆ ಉತ್ತರಗಳನ್ನು ಎಲ್ಲರಿಗೂ ಕಾಣುವಂತೆ ಸಾರ್ವಜನಿಕ ತಾಣದಲ್ಲಿ ತೆರದಿಟ್ಟಿದ್ದೇನೆ. ಈ ಹೊಸ ಮೀಡಿಯಾಕ್ಕೆ ಯಾರು ಹಣ ಹೂಡಿದ್ದಾರೆ ಮತ್ತು ಇದು ಹೇಗೆ ಕೆಲಸ ಮಾಡುತ್ತದೆ ಎಂಬ ಪ್ರಶ್ನೆಗಳು ಮುಖ್ಯವಾಗಿವೆ. ನಮ್ಮ ಹೂಡಿಕೆದಾರರು ಯಾರು ಎಂಬ ವಿವರ ಪಾರದರ್ಶಕವಾಗಿದೆ. ಹೀಗೆ ನಮ್ಮ ವಿವರಗಳನ್ನು ಸಾರ್ವಜನಿಕರಿಗೆ ತೆರೆದಿಟ್ಟ ಮೊತ್ತ ಮೊದಲ ಮಾಧ್ಯಮ ಸಂಸ್ಥೆ ವಿಸ್ತಾರ ನ್ಯೂಸ್ ಎಂದು ಹರಿಪ್ರಕಾಶ್‌ ಹೇಳಿದರು.

ನೀವು ಎಡವೇ ಅಥವಾ ಬಲವೇ ಎಂಬ ಪ್ರಶ್ನೆಯಿದೆ. ಸೈದ್ಧಾಂತಿಕವಾಗಿ ನಾವು ಲೆಫ್ಟೂ ಅಲ್ಲ, ರೈಟೂ ಅಲ್ಲ. ಆದರೆ ಯಾವುದು ರೈಟ್‌ ಎಂಬುದನ್ನು ಖಡಾಖಂಡಿತವಾಗಿ ಹೇಳುತ್ತೇವೆ. ದೇಶದ ಹಿತದ ಪ್ರಶ್ನೆ ಬಂದಾಗ ದೇಶ ಮೊದಲು, ನಂತರ ನಾವು. ಅದು ಮಾಧ್ಯಮವೇ ಇರಲಿ, ಉದ್ಯಮವೇ ಇರಲಿ. ನಮ್ಮ ವಿಶ್ವಾಸಾರ್ಹತೆ ನಿರೂಪಿಸಬೇಕಾದರೆ ಕಾಲವೇ ಉತ್ತರ ಹೇಳಬೇಕು. ಮುಂಬರುವ ದಿನಗಳಲ್ಲಿ ಇದಕ್ಕೆ ಸಾಕ್ಷಿ ಪುರಾವೆ ಜನರಿಗೆ ಸಿಗಲಿದೆ ಎಂದವರು ಹೇಳಿದರು.

ಕನ್ನಡ ಭಾಷೆಯೇ ಆದ್ಯತೆ

ಕನ್ನಡ ಭಾಷೆಗಾಗಿ ನಾವೇನು ಮಾಡುತ್ತೇವೆ ಎಂದು ಹಲವರು ಪ್ರಶ್ನಿಸಿದ್ದಾರೆ. ನಾವು ಕನ್ನಡಿಗರು. ನಮಗೆ ಕನ್ನಡವೇ ಮೊದಲ ಆದ್ಯತೆ. ಕನ್ನಡದ ಹಿತರಕ್ಷಣೆ ಮುಖ್ಯ. ಹಾಗೆಂದು ಇತರ ಭಾಷೆಗಳ ಬಗ್ಗೆ ದ್ವೇಷವಿಲ್ಲ. ಎಲ್ಲವನ್ನು ಒಳಗೊಂಡಾಗ ಭಾರತದ ವಿಕಾಸವಾಗುತ್ತದೆ. ಅದರಲ್ಲಿ ಕನ್ನಡದ ವಿಕಾಸವೂ ಅಡಗಿದೆ. ದೇಶಕ್ಕೆ ಮುಕುಟಪ್ರಾಯವಾದ ಕರ್ನಾಟಕ ರಾಜ್ಯದ ಜನ ಸುಸಂಸ್ಕೃತ, ಸಭ್ಯ, ವಿಚಾರಶೀಲರು. ಇಲ್ಲಿನ ಮಾಧ್ಯಮವೂ ಇಲ್ಲಿನ ಜನರ ಲೋಕರೂಢಿ ಭಾವನೆಗಳನ್ನು ಪ್ರತಿನಿಧಿಸಬೇಕು. ನಾವು ಇಲ್ಲಿನ ಸಂಸ್ಕೃತಿಯನ್ನು ಕಲಶಪ್ರಾಯವಾಗುವಂತೆ ಪ್ರತಿನಿಧಿಸುತ್ತೇವೆ. ನಾವು ಖಚಿತವಾದ ಅಭಿಪ್ರಾಯವನ್ನು ಸ್ಪಷ್ಟವಾದ ಧ್ವನಿಯಲ್ಲಿ ನಿರೂಪಿಸುತ್ತೇವೆ ಎಂದು ಭರವಸೆ ನೀಡಿದರು.

ಇಂದು ಮಾಧ್ಯಮಗಳು ಹೆಚ್ಚಿರಬಹುದು, ಮೀಡಿಯಾಗಳ ನಡುವೆ ಪೈಪೋಟಿಯೂ ಸಾಕಷ್ಟು ಇದ್ದಿರಬಹುದು. ಆದರೆ ಒಟ್ಟಾರೆ ಮಾಧ್ಯಮ ವಲಯದ ಕೊಡುಗೆಯ ಬಗ್ಗೆ ಅತೃಪ್ತಿಯೂ ಇದೆ. ಇಂಥ ಅತೃಪ್ತಿಯ ಜಾಗವನ್ನು ತುಂಬಲು ನಾವು ಬರುತ್ತಿದ್ದೇವೆ. ಇದನ್ನು ಮಾಡಲು ಸಾಧ್ಯವೇ ಎಂದು ಹಲವರು ಹುಬ್ಬೇರಿಸಿದ್ದಾರೆ. ವಿಜಯವಾಣಿಯನ್ನು ಎರಡು ವರ್ಷದಲ್ಲಿ ಓದುಗರ ಪತ್ರಿಕೆಯಾಗಿ, ನಂಬರ್‌ ಒನ್‌ ಮಾಡಲು ಸಾಧ್ಯವಾಯಿತು. ವಿಜಯ ಕರ್ನಾಟಕವನ್ನು ನಾಲ್ಕೂವರೆ ವರ್ಷದಲ್ಲಿ ಮಾರುಕಟ್ಟೆ ನಾಯಕನಾಗಿ ಮಾಡಲು ಸಾಧ್ಯವಾಯಿತು. ಕನ್ನಡನಾಡಿನ ಜನತೆಯಲ್ಲಿ ಭರವಸೆ ಮೂಡಿಸಿದಾಗ ಯಶಸ್ಸು ಸಾಧ್ಯ ಎಂಬುದು ರುಜುವಾತಾಗಿದೆ. ನನ್ನ ಜತೆಗೆ ಧರ್ಮೇಶ್‌ ಮತ್ತು ಶ್ರೀನಿವಾಸ ಹೆಬ್ಬಾರ್ ಅವರು ಬೆನ್ನೆಲುಬಾಗಿ ನಿಂತಿದ್ದಾರೆ.‌ ಮಾಧ್ಯಮ ಲೋಕದ ಅತ್ಯುತ್ತಮ ಪ್ರತಿಭಾವಂತರು ನನ್ನ ಜತೆಗೆ ಕೈಜೋಡಿಸಿ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಸ್ತಾರ ನ್ಯೂಸ್‌ ವೆಬ್‌ಸೈಟ್‌ ಲೋಕಾರ್ಪಣೆ ಹಾಗೂ ವಿಸ್ತಾರ ಮೀಡಿಯಾ ಲೋಗೊ ಅನಾವರಣ ಮಾಡಿದರು. ಕಂದಾಯ ಸಚಿವ ಆರ್. ಅಶೋಕ್‌, ವಿಸ್ತಾರ ನ್ಯೂಸ್‌ ಸಂಸ್ಥೆಯ ಚೇರ್ಮನ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್‌.ವಿ.ಧರ್ಮೇಶ್‌, ಸಂಸ್ಥೆಯ ನಿರ್ದೇಶಕ ಶ್ರೀನಿವಾಸ ಎಸ್.‌ ಹೆಬ್ಬಾರ್‌ ಜತೆಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

Murder case : ಪೊಲೀಸ್‌ ಠಾಣೆ ಸಮೀಪವೇ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

VISTARANEWS.COM


on

By

murder case
Koo

ಚಿಕ್ಕಬಳ್ಳಾಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ (Murder Case) ನಡೆದಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಸಮೀಪವೇ ಈ ಕೃತ್ಯ ನಡೆದಿದೆ. ಶೇಖರ್ ಎಂಬಾತ ಕೊಲೆಯಾದವನು. ಶಿವಕುಮಾರ್ (35) ಕೊಲೆಗೈದ ಆರೋಪಿಯಾಗಿದ್ದಾನೆ.

ಅನೈತಿಕ ಸಂಬಂಧ, ಕಿರುಕುಳ, ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಡುರಸ್ತೆಯಲ್ಲಿ ಶೇಖರ್‌ ಮೇಲೆ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಕಾರ್ಖಾನೆ ಪೇಟೆ ನಿವಾಸಿ ಶಿವಕುಮಾರ್ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದಾನೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೇಖರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿ ಶಿವಕುಮಾರ್‌ ಪತ್ತೆಗೆ ಚಿಕ್ಕಬಳ್ಳಾಪುರ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

ಬೆಳಗಾವಿ: ಬೆಂಗಳೂರು ಹಾಗೂ ಮಂಡ್ಯದಲ್ಲಿ ಕೆಲ ತಿಂಗಳ ಹಿಂದೆ ಹೆಣ್ಣು ಭ್ರೂಣಹತ್ಯೆಯ ಬೃಹತ್‌ ಜಾಲವೊಂದು ಪತ್ತೆಯಾದ ಬೆನ್ನಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲೂ ನಕಲಿ ವೈದ್ಯನು ಭ್ರೂಣ ಹತ್ಯೆ (Foeticide) ಮಾಡಿರುವ ಪ್ರಕರಣವು ಬಯಲಾಗಿದೆ. ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ ಎಂಬಾತನು ಭ್ರೂಣಹತ್ಯೆ ಮಾಡಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಭ್ರೂಣದ ಶವವೊಂದು ಪತ್ತೆಯಾಗಿದೆ. ಇನ್ನಷ್ಟು ಭ್ರೂಣಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ನ ಸಹಾಯಕನಾಗಿರುವ ರೋಹಿತ್ ಕುಪ್ಪಸಗೌಡರ್ ಎಂಬಾತನನ್ನು ಕರೆದುಕೊಂಡು ಹೋಗಿರುವ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ನಕಲಿ ವೈದ್ಯನ ಜಮೀನಿನಲ್ಲಿ ಭ್ರೂಣದ ಶವ ಪತ್ತೆಯಾಗಿದೆ. ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಡಿಎಎಸ್‌ಪಿ ರವಿ ನಾಯ್ಕ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಭ್ರೂಣಗಳನ್ನು ಹೂಳುತ್ತಿದ್ದ ರೋಹಿತ್‌ ಕುಪ್ಪಸಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆತ ತೋರಿಸಿದ ಜಾಗದಲ್ಲಿ ಶೋಧ ನಡೆಸಲಾಗುತ್ತಿದೆ.

ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ. ಈತನನ್ನು ಫಾರ್ಮ್‌ಹೌಸ್‌ಗೆ ಕರೆದುಕೊಂಡು ಹೋಗಿರುವ ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ. ರೋಹಿತ್‌ ತೋರಿಸಿದ ಜಾಗದಲ್ಲಿಯೇ ಒಂದು ಭ್ರೂಣ ಪತ್ತೆಯಾಗಿರುವ ಕಾರಣ ಇನ್ನಷ್ಟು ಭ್ರೂಣಗಳು ಇರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಬ್ದುಲ್‌ ಗಫಾರ್‌ ಲಾಡಖಾನ್‌ ಹಿಂದೆ ಯಾರಿದ್ದಾರೆ? ಜಾಲದಲ್ಲಿ ಯಾರೆಲ್ಲ ತೊಡಗಿಸಿಕೊಂಡಿದ್ದಾರೆ? ಫಾರ್ಮ್‌ಹೌಸ್‌ ಸೇರಿ ಇನ್ನೂ ಹಲವು ಪ್ರದೇಶಗಳಲ್ಲಿ ಭ್ರೂಣಗಳನ್ನು ಹೂಳಲಾಗಿದೆಯೇ ಎಂಬುದು ಸೇರಿ ಹತ್ತಾರು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲೂ ಭ್ರೂಣ ಹತ್ಯೆ ಪ್ರಕರಣಗಳು ಬಯಲಾಗಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Bahaddur Movie: ಆರ್.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಬಹದ್ದೂರ್” ಚಿತ್ರ, ಈಗ 10 ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ.

VISTARANEWS.COM


on

Bahaddur movie is re released on June 21
Koo

ಬೆಂಗಳೂರು: ಆರ್.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ ಹಾಗೂ ಕೆ.ಪಿ. ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಬಹದ್ದೂರ್” ಚಿತ್ರ 2014 ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈಗ ಹತ್ತು ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ (Bahaddur Movie) ಮರು ಬಿಡುಗಡೆಯಾಗುತ್ತಿದ್ದು, ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಚಿತ್ರವನ್ನು ರೀ ರಿಲೀಸ್ ಮಾಡುತ್ತಿದ್ದಾರೆ.

“ಬಹದ್ದೂರ್” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ಧ್ವನಿ ನೀಡಿದ್ದರು.‌ ಪುನೀತ್ ಅವರು ತಮ್ಮ ಅಭಿನಯದ ಚಿತ್ರವನ್ನು ಹೊರತುಪಡಿಸಿ ಧ್ವನಿ ನೀಡಿದ ಮೊದಲ ಚಿತ್ರ “ಬಹದ್ದೂರ್”. ಚಿತ್ರದ ಮೊದಲ ಸನ್ನಿವೇಶಕ್ಕೆ ರವಿಚಂದ್ರನ್ ಅವರು ಕ್ಲ್ಯಾಪ್ ಮಾಡಿ ಹಾರೈಸಿದ್ದರು.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ 627 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ಪುನೀತ್ ರಾಜಕುಮಾರ್ ಅವರೇ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದ್ದರು. ವಿ.ಹರಿಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಇಂದಿಗೂ‌ ಜನಪ್ರಿಯ. “ಬಹದ್ದೂರ್ ” ಬಿಡುಗಡೆಯಾದ ಹತ್ತು ವರ್ಷಗಳಲ್ಲಿ ನೂರಾರೂ ಸಲ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದೆ.

ಇದನ್ನೂ ಓದಿ: T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಈ ಚಿತ್ರ ಪ್ರಸಾರವಾದಗಲೆಲ್ಲ ಉತ್ತಮ ಟಿ.ಆರ್.ಪಿ ಬರುತ್ತಿರುವುದು ವಿಶೇಷ. ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ಅವರ ಅದ್ಭುತ ಅಭಿನಯ ಈ ಚಿತ್ರದ ಹೈಲೆಟ್. ಇದು ಧ್ರುವ ಸರ್ಜಾ ಅಭಿನಯದ ಎರಡನೇ ಚಿತ್ರ. ಹತ್ತು ವರ್ಷಗಳ ಮೇಲೆ ಈ ಚಿತ್ರ ಮರು ಬಿಡುಗಡೆಯಾಗುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕುಮಾರ್.

Continue Reading

ಕರ್ನಾಟಕ

Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

Foeticide: ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ.

VISTARANEWS.COM


on

Foeticide
Koo

ಬೆಳಗಾವಿ: ಬೆಂಗಳೂರು ಹಾಗೂ ಮಂಡ್ಯದಲ್ಲಿ ಕೆಲ ತಿಂಗಳ ಹಿಂದೆ ಹೆಣ್ಣು ಭ್ರೂಣಹತ್ಯೆಯ ಬೃಹತ್‌ ಜಾಲವೊಂದು ಪತ್ತೆಯಾದ ಬೆನ್ನಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲೂ ನಕಲಿ ವೈದ್ಯನು ಭ್ರೂಣ ಹತ್ಯೆ (Foeticide) ಮಾಡಿರುವ ಪ್ರಕರಣವು ಬಯಲಾಗಿದೆ. ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ ಎಂಬಾತನು ಭ್ರೂಣಹತ್ಯೆ ಮಾಡಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಭ್ರೂಣದ ಶವವೊಂದು ಪತ್ತೆಯಾಗಿದೆ. ಇನ್ನಷ್ಟು ಭ್ರೂಣಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ನ ಸಹಾಯಕನಾಗಿರುವ ರೋಹಿತ್ ಕುಪ್ಪಸಗೌಡರ್ ಎಂಬಾತನನ್ನು ಕರೆದುಕೊಂಡು ಹೋಗಿರುವ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ನಕಲಿ ವೈದ್ಯನ ಜಮೀನಿನಲ್ಲಿ ಭ್ರೂಣದ ಶವ ಪತ್ತೆಯಾಗಿದೆ. ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಡಿಎಎಸ್‌ಪಿ ರವಿ ನಾಯ್ಕ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಭ್ರೂಣಗಳನ್ನು ಹೂಳುತ್ತಿದ್ದ ರೋಹಿತ್‌ ಕುಪ್ಪಸಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆತ ತೋರಿಸಿದ ಜಾಗದಲ್ಲಿ ಶೋಧ ನಡೆಸಲಾಗುತ್ತಿದೆ.

ಫಾರ್ಮ್‌ಹೌಸ್‌ನಲ್ಲಿ ಭ್ರೂಣ ಹೂತಿದ್ದ ಜಾಗ.

ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ. ಈತನನ್ನು ಫಾರ್ಮ್‌ಹೌಸ್‌ಗೆ ಕರೆದುಕೊಂಡು ಹೋಗಿರುವ ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ. ರೋಹಿತ್‌ ತೋರಿಸಿದ ಜಾಗದಲ್ಲಿಯೇ ಒಂದು ಭ್ರೂಣ ಪತ್ತೆಯಾಗಿರುವ ಕಾರಣ ಇನ್ನಷ್ಟು ಭ್ರೂಣಗಳು ಇರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಬ್ದುಲ್‌ ಗಫಾರ್‌ ಲಾಡಖಾನ್‌ ಹಿಂದೆ ಯಾರಿದ್ದಾರೆ? ಜಾಲದಲ್ಲಿ ಯಾರೆಲ್ಲ ತೊಡಗಿಸಿಕೊಂಡಿದ್ದಾರೆ? ಫಾರ್ಮ್‌ಹೌಸ್‌ ಸೇರಿ ಇನ್ನೂ ಹಲವು ಪ್ರದೇಶಗಳಲ್ಲಿ ಭ್ರೂಣಗಳನ್ನು ಹೂಳಲಾಗಿದೆಯೇ ಎಂಬುದು ಸೇರಿ ಹತ್ತಾರು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲೂ ಭ್ರೂಣ ಹತ್ಯೆ ಪ್ರಕರಣಗಳು ಬಯಲಾಗಿದ್ದವು.

ಇದನ್ನೂ ಓದಿ: Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Continue Reading

ಕರ್ನಾಟಕ

Darshan Arrested: ಕೊಲೆ ಬಳಿಕ ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ; ಇಂದು ಸ್ಥಳ ಮಹಜರು!

Darshan Arrested: ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಾಗಿ, ಪೊಲೀಸರು ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಮೈಸೂರಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Darshan Arrested
Koo

ಮೈಸೂರು: ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆ ಸಂಬಂಧಿಸಿಂದತೆ ಬಗೆದಷ್ಟೂ ಮಾಹಿತಿ ಬಹಿರಂಗವಾಗುತ್ತಿದೆ. ದರ್ಶನ್‌ ಹಾಗೂ ಗ್ಯಾಂಗ್‌ನನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಭಾನುವಾರ ಮೈಸೂರಿನಲ್ಲಿ (Mysore) ಸ್ಥಳ ಮಹಜರು ನಡೆಸಲಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಬಳಿಕ ಮೈಸೂರಿಗೆ ತೆರಳಿದ ನಟ ದರ್ಶನ್‌ (Actor Darshan) ಅಲ್ಲಿಂದಲೇ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಕುರಿತು ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ನಟ, ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ಏನೂ ನಡೆದೇ ಇಲ್ಲ ಎಂಬಂತೆ ತೋರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

Actor Darshan ACP Chandan Kumar work salute by people

ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ರ‍್ಯಾಡಿಷನ್‌ ಹೋಟೆಲ್‌, ಕುವೆಂಪು ನಗರದ ಗೋಲ್ಡ್‌ ಜಿಮ್‌ ಸೇರಿದಂತೆ ಪೊಲೀಸರು ಹಲವು ಸ್ಥಳಗಳನ್ನು ಮಹಜರು ಮಾಡಲಿದ್ದಾರೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಕರೆದುಕೊಂಡು ಹೋಗಿ ಮಹಜರು ಮಾಡಲಿದ್ದಾರೆ. ಮೈಸೂರಿನಲ್ಲಿ ದರ್ಶನ್‌ ಯಾರಿಗೆ ಕರೆ ಮಾಡಿದ್ದರು? ಯಾರ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರು ಎಂಬುದು ಸೇರಿ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯ ಟೀಮ್‌ಗೆ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಸೇರ್ಪಡೆ

ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿದೆ. ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

ಇದನ್ನೂ ಓದಿ: Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

Continue Reading
Advertisement
Tata Motors SUV Tata Nexon 7th Anniversary Benefit up to Rs 1 lakh for customers
ವಾಣಿಜ್ಯ4 mins ago

Tata Motors: ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ; ಗ್ರಾಹಕರಿಗೆ 1 ಲಕ್ಷ ರೂ.ವರೆಗೆ ಉಳಿತಾಯ!

murder case
ಚಿಕ್ಕಬಳ್ಳಾಪುರ5 mins ago

Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

David Wiese Retirement
ಕ್ರೀಡೆ25 mins ago

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

Money Guide
ಮನಿ-ಗೈಡ್32 mins ago

Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

PMAY
ವಾಣಿಜ್ಯ33 mins ago

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

Bahaddur movie is re released on June 21
ಕರ್ನಾಟಕ34 mins ago

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Darshan Arrested renuka shed like hell more murders here
ಸ್ಯಾಂಡಲ್ ವುಡ್37 mins ago

Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

Foeticide
ಕರ್ನಾಟಕ44 mins ago

Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

SCO vs AUS
ಕ್ರೀಡೆ1 hour ago

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

Darshan Arrested vinish write special message for darshan fathers day
ಸ್ಯಾಂಡಲ್ ವುಡ್1 hour ago

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ21 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌