Sachin Tendulkar : ಸಚಿನ್ ಭೇಟಿಯಾದ ತೆಂಡೂಲ್ಕರ್​; ವಿಡಿಯೊ ವೈರಲ್​ - Vistara News

ಕ್ರೀಡೆ

Sachin Tendulkar : ಸಚಿನ್ ಭೇಟಿಯಾದ ತೆಂಡೂಲ್ಕರ್​; ವಿಡಿಯೊ ವೈರಲ್​

Sachin Tedulkar : ಬೈಕ್​ನಲ್ಲಿ ಹೋಗುತ್ತಿದ್ದ ಅಭಿಮಾನಿಯನ್ನು ನಿಲ್ಲಿಸಿ ಮಾತನಾಡಿದ ಸಚಿನ್ ಅವರ ಗುಣಕ್ಕೆ ಮೆಚ್ಚುಗೆ ವ್ಯಕ್ತಗೊಂಡಿವೆ.

VISTARANEWS.COM


on

Sachin Tedulkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ (Sachin Tendulkar) ರಸ್ತೆ ಪ್ರಯಾಣದ ಸಂದರ್ಭದಲ್ಲಿ ತಮ್ಮ ಅಪ್ಪಟ ಅಭಿಮಾನಿಯೊಬ್ಬರನ್ನು ಕರೆದು ಮಾತನಾಡಿಸುವ ಮೂಲಕ ಸುದ್ದಿಯಾಗಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ,50 ವರ್ಷದ ಕ್ರಿಕೆಟಿಗ ಈ ವಿಡಿಯೊವನ್ನು ಪೋಸ್ಟ್​ ಮಾಡಿದ್ದಾರೆ. ಕ್ರಿಕೆಟ್ ದೇವರ ಪ್ರೀತಿಗೆ ಸೋಶಿಯಲ್​ ಮೀಡಿಯಾಗಲ್ಲಿ ದೊಡ್ಡ ಪ್ರಮಾಣದಲ್ಲಿ ಮೆಚ್ಚುಗೆ ವ್ಯಕ್ತಗೊಂಡಿದೆ. ಸಚಿನ್​ ಅವರು ಫೆಬ್ರವರಿ 1 ರಂದು ಅಭಿಮಾನಿಯೊಂದಿಗಿನ ಸಂವಾದ ನಡೆಸುವ ಸಣ್ಣ ವೀಡಿಯೊವನ್ನು ಹಂಚಿಕೊಂಡಿದ್ದಾದ್ದಾರೆ.

ವೀಡಿಯೊದಲ್ಲಿ, ಸಚಿನ್ ತೆಂಡೂಲ್ಕರ್ ತಮ್ಮ ಅಭಿಮಾನಿಯೊಂದಿಗೆ ಸಂಭಾಷಣೆಯಲ್ಲಿ ತೊಡಗಿರುವುದನ್ನು ಕಾಣಬಹುದು. ಅಭಿಮಾನಿಗೆ ಆಟೋಗ್ರಾಫ್ ನೀಡುವ ಮೊದಲು ಒಟ್ಟಿಗೆ ಫೋಟೋಗೆ ಪೋಸ್ ಕೂಡ ಕೊಟ್ಟಿದ್ದಾರೆ. ಅದಕ್ಕವರು ಸಚಿನ್​ ಭೇಟಿಯಾದ ತೆಂಡೂಲ್ಕರ್​ ಎಂಬ ಶೀರ್ಷಿಕೆ ಕೊಟ್ಟಿದ್ದಾರೆ.

ಅಭಿಮಾನಿಯೊಂದಿಗೆ ಸಂವಾದ ನಡೆಸಿದ ಸಚಿನ್ ತೆಂಡೂಲ್ಕರ್

ಫೆಬ್ರವರಿ 1 ರಂದು ಸಚಿನ್ ತೆಂಡೂಲ್ಕರ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಒಂದೂವರೆ ನಿಮಿಷದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅಲ್ಲಿ ಅವರು ತಮ್ಮ ಅಭಿಮಾನಿಯೊಂದಿಗೆ ಸಂವಹನ ನಡೆಸುವುದನ್ನು ಕಾಣಬಹುದು.

“ತೆಂಡೂಲ್ಕರ್, ಐ ಮಿಸ್ ಯೂ” ಎಂಬ ವಾಕ್ಯವನ್ನು ಬರೆದ ಮುಂಬೈ ಇಂಡಿಯನ್ಸ್ ಜರ್ಸಿಯನ್ನು ಧರಿಸಿದ್ದ ಟಿಶರ್ಟ್​ ಹಾಕಿಕೊಂಡು ಅಭಿಮಾನಿ ಸ್ಕೂಟರ್​ನಲ್ಲಿ ಹೋಗುತ್ತಿದ್ದರು. ಆತನ ಪಕ್ಕದಲ್ಲಿಯೇ ಕಾರು ನಿಲ್ಲಿಸಿದ ಸಚಿನ್ ತೆಂಡೂಲ್ಕರ್​ ಏರ್​ಪೋರ್ಟ್​ಗೆ ದಾರಿ ಕೇಳುವಂತೆ ನಟಿಸುತ್ತಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಬೈಕ್ ನಲ್ಲಿ ಹೋಗುತ್ತಿದ್ದ ಅಭಿಮಾನಿಯನ್ನ ಅಚ್ಚರಿಗೊಳಿಸಿದ್ದಾರೆ. ಬದಲಿಗೆ ಅವರೊಂದಿಗೆ ಸಾಕಷ್ಟು ಮಾತನಾಡಿದರು. ಆ ವಿಡಿಯೊವನ್ನು ಭಾರತೀಯ ದಂತಕಥೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ:

ನನ್ನ ಮೇಲೆ ಜನರು ಇಷ್ಟೊಂದು ಪ್ರೀತಿಯನ್ನು ತೋರುವುದನ್ನು ನೋಡಿದಾಗ ನನ್ನ ಹೃದಯವು ತುಂಬಿ ಬರುತ್ತದೆ. ಅನಿರೀಕ್ಷಿತವಾಗಿ ಎದುರಾಗುವ ಜನರ ಪ್ರೀತಿಯೇ ಜೀವನವನ್ನು ತುಂಬಾ ವಿಶೇಷಗೊಳಿಸುತ್ತದೆ ಎಂದು ಸಚಿನ್​ ಹೇಳಿಕೊಂಡಿದ್ದಾರೆ. ಇದೇ ವೇಳೆ ಸಚಿನ್​ ಅವರು ಹೆಲ್ಮೆಟ್ ಹಾಕಿಕೊಂಡೇ ಬೈಕ್​ ರೈಡ್ ಮಾಡುತ್ತಿದ್ದ ಅಭಿಮಾನಿಯ ಬಗ್ಗೆ ಮೆಚ್ಚುಗೆ ಸೂಚಿಸುತ್ತಾರೆ. ಚೆನ್ನಾಗಿರಿ ಎಂದು ಹಾರೈಕೆಯನ್ನೂ ತಿಳಿಸುತ್ತಾರೆ.

ಕ್ರಿಕೆಟ್​ ಲೀಗ್​ನ ಮುಖ್ಯಸ್ಥರಾದ ಸಚಿನ್ ತೆಂಡೂಲ್ಕರ್

ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ (ಐಎಸ್​ಪಿಎಲ್) ತನ್ನ ಎಲ್ಲಾ ಆರು ಫ್ರಾಂಚೈಸಿಗಳ ಸಹ ಮಾಲೀಕರ ಹೆಸರುಗಳನ್ನು ಬಹಿರಂಗಪಡಿಸಿದೆ. ಮುಂಬೈನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (Sachin Tendulkar) ಸೇರಿದಂತೆ ಹಲವಾರು ಪ್ರಮುಖ ಐಎಸ್​ಪಿಎಲ್ ಕೋರ್ ಕಮಿಟಿ ಸದಸ್ಯರು ಭಾಗವಹಿಸಿದ್ದರು. ಅದರಲ್ಲಿ ಪ್ರಮುಖವಾಗಿ ಗಮನ ಸೆಳೆದಿದ್ದು ಸಚಿನ್ ತೆಂಡೂಲ್ಕರ್ ಅವರು. ಅವರಲ್ಲದೆ ಆಶಿಶ್ ಶೆಲಾರ್, ಅಮೋಲ್ ಕಾಳೆ, ಸೂರಜ್ ಸಮತ್ ಮತ್ತು ಭಾರತದ ಮಾಜಿ ಮುಖ್ಯ ಕೋಚ್ ಮತ್ತು ಭಾರತ ಕ್ರಿಕೆಟ್​ ತಂಡದ ದಂತಕಥೆ ರವಿ ಶಾಸ್ತ್ರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : Fact Check: ಮೊಹಮ್ಮದ್​ ಶಮಿ-ಸಾನಿಯಾ ಮಿರ್ಜಾ ನಿಶ್ಚಿತಾರ್ಥ ಫೋಟೊ ವೈರಲ್​; ಅಸಲಿಯತ್ತು ಇಲ್ಲಿದೆ 

ಹೈದರಾಬಾದ್, ಮುಂಬೈ, ಬೆಂಗಳೂರು, ಚೆನ್ನೈ, ಕೋಲ್ಕತಾ ಮತ್ತು ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) ಆರು ಐಎಸ್​ಪಿಎಲ್ ತಂಡಗಳಾಗಿವೆ. ರಾಮ್ ಚರಣ್ (ಹೈದರಾಬಾದ್), ಅಮಿತಾಭ್ ಬಚ್ಚನ್ (ಮುಂಬೈ), ಹೃತಿಕ್ ರೋಷನ್ (ಬೆಂಗಳೂರು), ಸೂರ್ಯ (ಚೆನ್ನೈ), ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ (ಕೋಲ್ಕತ್ತಾ) ಮತ್ತು ಅಕ್ಷಯ್ ಕುಮಾರ್ (ಶ್ರೀನಗರ) ಸೇರಿದಂತೆ ಭಾರತದ ಮನರಂಜನಾ ಉದ್ಯಮದ ಕೆಲವು ದೊಡ್ಡ ಸೂಪರ್​ ಸ್ಟಾರ್​ಗಳು ಈ ಎಲ್ಲಾ ತಂಡಗಳ ಸಹ ಮಾಲೀಕರಾಗಿದ್ದಾರೆ.

ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಪೋಷಿಸುವ ಉದ್ದೇಶದೊಂದಿಗೆ ಮಾಡಿರುವ ಸಾಕಾರಗೊಳಿಸುವಲ್ಲಿ ಸಹ ಮಾಲೀಕರು ದೊಡ್ಡ ಪಾತ್ರ ವಹಿಸುತ್ತಾರೆ ಎಂದು ಐಎಸ್​​ಪಿಎಲ್​ ಕೋರ್ ಕಮಿಟಿ ಸದಸ್ಯರಾಗಿರುವ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.

ಇದನ್ನೂ ಓದಿ : Ind vs Eng : ಮೂರನೇ ಪಂದ್ಯಕ್ಕೂ ಜಡೇಜಾ ಅಲಭ್ಯ; ರಾಹುಲ್ ಕತೆ ಏನು?

ಐಎಸ್​ಪಿಎಲ್​ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿನ್​ ತೆಂಡೂಲ್ಕರ್​ ಟೆನಿಸ್ ಚೆಂಡಿನೊಂದಿಗೆ ವೃತ್ತಿಪರ ಲೀಗ್ ಸ್ವರೂಪದ ಮೂಲಕ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮತ್ತು ಹುಡುಕುವ ಐಎಸ್​ಪಿಎಲ್​ ಪ್ರಮುಖ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಸಹ-ಮಾಲೀಕರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಆಟದೊಂದಿಗಿನ ಈ ಹೊಸ ಒಡನಾಟವನ್ನು ಪ್ರಾರಂಭಿಸುತ್ತಿರುವ ಅವರಿಗೆ ನಾನು ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

WI vs AFG: ಒಂದೇ ಓವರ್​ನಲ್ಲಿ 36 ರನ್​ ಗಳಿಸಿ ಯುವರಾಜ್​ ಸಿಂಗ್​ ದಾಖಲೆ ಸರಿಗಟ್ಟಿದ ನಿಕೋಲಸ್​ ಪೂರನ್​

WI vs AFG: 36 ರನ್​ ಕಲೆಹಾಕುವ ಮೂಲಕ ಪೂರನ್​ ಅವರು ಒಂದೇ ಓವರ್​ನಲ್ಲಿ 36 ರನ್​ ಬಾರಿಸಿದ ಯುವರಾಜ್​ ಮತ್ತು ಕೈರನ್​ ಪೊಲಾರ್ಡ್​ ಅವರನ್ನೊಳಗೊಂಡ ಎಲೈಟ್​ ಪಟ್ಟಿಗೆ ಸೇರ್ಪಡೆಗೊಂಡರು.

VISTARANEWS.COM


on

WI vs AFG
Koo

ಸೈಂಟ್ ಲೂಸಿಯಾ: ಮಂಗಳವಾರ ನಡೆದ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಅಂತಿಮ ಲೀಗ್​ ಪಂದ್ಯದಲ್ಲಿ ವೆಸ್ಟ್​ ಇಂಡೀಸ್​ ತಂಡ ಅಫಘಾನಿಸ್ತಾನ(WI vs AFG) ವಿರುದ್ಧ 104 ರನ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ವಿಂಡೀಸ್​ನ ಎಡಗೈ ಬ್ಯಾಟರ್​ ನಿಕೋಲಸ್​ ಪೂರನ್​(Nicholas Pooran) ಒಂದೇ ಓವರ್​ನಲ್ಲಿ 36 ರನ್​(36 runs in an over) ಬಾರಿಸುವ ಮೂಲಕ ಯುವರಾಜ್​ ಸಿಂಗ್(Yuvraj Singh)​ ಮತ್ತು ಕೈರನ್ ಪೊಲಾರ್ಡ್​ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಪೂರನ್​ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಗಮನ ಸೆಳೆದರು. ಅಜ್ಮತುಲ್ಲಾ ಒಮರ್ಜಾಯ್(Azmatullah Omarzai) ಅವರ ದ್ವಿತೀಯ ಓವರ್​ನಲ್ಲಿ ಸಿಡಿದು ನಿಂತ ಪೂರನ್​ ಮೂರು ಸಿಕ್ಸರ್​ ಮತ್ತು ಮೂರು ಬೌಂಡರಿ ಬಾರಿಸಿ ಒಟ್ಟು 36 ರನ್​ ಕಲೆಹಾಕಿದರು. 2 ನೋಬಾಲ್​ ಮತ್ತು ಒಂದು ವೈಡ್​ 4 ಕೂಡ ಈ ಓವರ್​ನಲ್ಲಿ ದಾಖಲಾಯಿತು. 36 ರನ್​ ಕಲೆಹಾಕುವ ಮೂಲಕ ಪೂರನ್​ ಅವರು ಒಂದೇ ಓವರ್​ನಲ್ಲಿ 36 ರನ್​ ಬಾರಿಸಿದ ಯುವರಾಜ್​ ಮತ್ತು ಕೈರನ್​ ಪೊಲಾರ್ಡ್​ ಅವರನ್ನೊಳಗೊಂಡ ಎಲೈಟ್​ ಪಟ್ಟಿಗೆ ಸೇರ್ಪಡೆಗೊಂಡರು.

ಇದನ್ನೂ ಓದಿ Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

ಯುವರಾಜ್​ ಸಿಂಗ್​ ಅವರು 2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್​ ಟೂರ್ನಿಯ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಸುವರ್ಟ್​ ಬ್ರಾಡ್​ ಅವರ ಓವರ್​ನಲ್ಲಿ ಸತತ 6 ಸಿಕ್ಸರ್​ ಬಾರಿಸುವ ಮೂಲಕ ಈ ಸಾಧನೆ ಮಾಡಿದ್ದರು. ವಿಂಡೀಸ್​ನ ಆಟಗಾರನೇ ಆಗಿರುವ ಕೈರನ್​ ಪೊಲಾರ್ಡ್​ 2021ರಲ್ಲಿ ಶ್ರೀಲಂಕಾದ ಅಕಿಲ್​ ಧನಂಜಯ ಅವರ ಓವರ್​ನಲ್ಲಿ 36 ರನ್​ ಬಾರಿಸಿದ್ದರು.

ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಪೂರನ್​ 53 ಎಸೆತಗಳಿಂದ 89 ರನ್​ ಬಾರಿಸಿ ರನೌಟ್​ ಆಗುವ ಮೂಲಕ ಕೇವಲ 2 ರನ್​ ಅಂತರದಿಂದ ಶತಕ ವಂಚಿತರಾದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ಬರೋಬ್ಬರಿ 8 ಸಿಕ್ಸರ್​ ಮತ್ತು 6 ಬೌಂಡರಿ ಸಿಡಿಯಿತು. ಸಾರಸ್ಯವೆಂದರೆ 36 ರನ್​ ಚಚ್ಚಿಸಿಕೊಂಡ ಒಮರ್ಜಾಯ್ ಅವರೇ ಪೂರನ್​ ಅವರನ್ನು ರನೌಟ್​ ಮಾಡಿದ್ದು.

ಪಂದ್ಯ ಗೆದ್ದ ವಿಂಡೀಸ್​


ಈಗಾಗಲೇ ಸೂಪರ್​-8 ಹಂತಕ್ಕೇರಿರುವ ವಿಂಡೀಸ್​ ಮತ್ತು ಅಫಘಾನಿಸ್ತಾನಕ್ಕೆ ಈ ಪಂದ್ಯ ಕೇವಲ ಅಭ್ಯಾಸಕ್ಕೆ ಸೀಮಿತವಾದ ಪಂದ್ಯವಾಗಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ವೆಸ್ಟ್​ ಇಂಡೀಸ್ ನಿಗದಿತ 20 ಓವರ್​ಗಳಲ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ 5 ವಿಕೆಟ್​ಗೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಕಂಡು ದಂಗಾದ ಅಫಘಾನಿಸ್ತಾನ ಆರಂಭದಿಂದಲೇ ವಿಕೆಟ್​ ಕಳೆದುಕೊಂಡು 114 ರನ್​ಗೆ ಸರ್ವಪತನ ಕಂಡು ಹೀನಾಯ ಸೋಲು ಕಂಡಿತು. ವಿಂಡೀಸ್​ ಪರ ಒಬೆಡ್ ಮೆಕಾಯ್(3), ಅಕಿಲ್​ ಹೊಸೈನ್​ ಮತ್ತು ಗುಡಾಕೇಶ್ ಮೋತಿ ತಲಾ 2 ವಿಕೆಟ್​ ಕಿತ್ತರು.

Continue Reading

ಕ್ರೀಡೆ

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್​ ಆಟಗಾರನಿಗೆ ಗಾಯ

T20 World Cup 2024: ಅಭ್ಯಾಸದ ವೇಳೆ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್ (Suryakumar Yadav)​ ಅವರು ಕೈ ಬೆರಳಿನ ಗಾಯಕ್ಕೆ ತುತ್ತಾಗಿದ್ದಾರೆ.

VISTARANEWS.COM


on

T20 World Cup 2024
Koo

ಬಾರ್ಬಡೋಸ್​: ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಸೂಪರ್​-8 ಪಂದ್ಯ ಆರಂಭಕ್ಕೂ ಮುನ್ನವೇ ಟೀಮ್​ ಇಂಡಿಯಾಕ್ಕೆ ಆಘಾತವೊಂದು ಎದುರಾಗಿದೆ. ತಂಡದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್ (Suryakumar Yadav)​ ಅವರು ಕೈ ಬೆರಳಿನ ಗಾಯಕ್ಕೆ ತುತ್ತಾಗಿದ್ದಾರೆ. ಅಭ್ಯಾಸ ನಡೆಸುವ ವೇಳೆ ಅವರು ಗಾಯಗೊಂಡರು(Suryakumar Yadav suffers minor injury).

ಭಾನುವಾರದಂದು ಬಾರ್ಬಡೋಸ್‌ಗೆ ಆಗಮಿಸಿದ ಭಾರತೀಯ ಆಟಗಾರರು ಕೆರಿಬಿಯನ್ ಬೀಚ್​ನಲ್ಲಿ ವಾಲಿಬಾಲ್​ ಆಡಿ ಎಂಜಾಯ್​ ಮಾಡಿದ್ದರು. ಸೋಮವಾರ ರಾತ್ರಿ ಅಭ್ಯಾಸ ಆರಂಭಿಸಿದ್ದಾರೆ. ಇದೇ ವೇಳೆ ನೆಟ್ಸ್​ನಲ್ಲಿ ಬ್ಯಾಟಿಂಗ್​ ಅಭ್ಯಾಸ ನಡೆಸುತ್ತಿದ್ದ ಸೂರ್ಯಕುಮಾರ್​ ಅವರ ಕೈ ಬೆರಳಿಗೆ ಚೆಂಡಿನೇಟು ಬಿದ್ದಿದೆ. ಕೆಲಕಾಲ ನೋವಿನಿಂದ ಬಳಲಿದ ಅವರುನ್ನು ಫಿಸಿಯೋ ಆರೈಕೆ ಮಾಡಿದ್ದಾರೆ. ಮೂಲಗಳ ಪ್ರಕಾರ ಅವರ ಗಾಯದ ಪ್ರಮಾಣ ಗಂಭೀರವಾಗಿ ಪರಿಣಮಿಸಿಲ್ಲ ಎಂದು ತಿಳಿದುಬಂದಿದೆ. ಒಂದೊಮ್ಮೆ ಮತ್ತೆ ನೋವು ಕಾಣಿಸಿಕೊಂಡರೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ. ಸೂರ್ಯ ಅವರು ಇದೇ ವರ್ಷದ ಜನವರಿಯಲ್ಲಿ ಸ್ಪೋರ್ಟ್ಸ್ ಹರ್ನಿಯಾಕ್ಕಾಗಿ ತೊಡೆಸಂದು ಶಸ್ತ್ರಚಿಕಿತ್ಸೆಗೆ ಒಳಗಾಗಿ ಬಳಿಕ ಐಪಿಎಲ್​ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಿದ್ದರು.

ಭಾರತ ತನ್ನ ಮಪದಲ ಸೂಪರ್​-8 ಪಂದ್ಯವನ್ನು ಜೂನ್​ 20ರಂದು ಅಫಘಾನಿಸ್ತಾನ ವಿರುದ್ಧ ಆಡಲಿದೆ. ಮಂಗಳವಾರ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ ಸೇರಿ ತಂಡದ ಆಟಗಾರರು ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸ ನಡೆಸಿದ್ದಾರೆ. ವಿರಾಟ್​ ಕೊಹ್ಲಿ ಅವರು ಮತ್ತೆ ತಮ್ಮ ಹಳೆಯ ಬ್ಯಾಟಿಂಗ್​ ಫಾರ್ಮ್ ಕಂಡುಕೊಳ್ಳುವ ನಿಟ್ಟಿನಲ್ಲಿ ಸೋಮವಾರ ಹೆಚ್ಚುವರಿ ಬ್ಯಾಟಿಂಗ್​ ಅಭ್ಯಾಸ ನಡೆಸಿದ್ದರು. ಕಳೆದ ಮೂರು ಪಂದ್ಯಗಳಲ್ಲಿಯೂ ಒಂದಂಕಿಗೆ ಸೀಮಿತರಾಗಿದ್ದರು. ಒಂದು ಪಂದ್ಯದಲ್ಲಿ ಶೂನ್ಯ ಸುತ್ತಿದ್ದರು.​​

ಕೊಹ್ಲಿ ವೈಫಲ್ಯಕ್ಕೆ ನಿಧಾನಗತಿ ಪಿಚ್ ಕಾರಣ!


ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಇದನ್ನೂ ಓದಿ Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

ಸೂಪರ್​ 8 ಹಂತದ ಮೊದಲ ಪಂದ್ಯ ಜೂನ್​ 19ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿವೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 24 ಭಾನುವಾರದಂದು ನಡೆಯಲಿದೆ. ಟೀಮ್​ ಇಂಡಿಯಾದ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಸಾರಗೊಳ್ಳಲಿದೆ.

ಭಾರತದ ಸೂಪರ್​-8 ಪಂದ್ಯದ ವೇಳಾಪಟ್ಟಿ

ಎದುರಾಳಿದಿನಾಂಕತಾಣಪ್ರಸಾರ
ಭಾರತ-ಅಫಘಾನಿಸ್ತಾನಜೂನ್​ 20ಬಾರ್ಬಡೋಸ್ರಾತ್ರಿ 8ಕ್ಕೆ
ಭಾರತ-ಬಾಂಗ್ಲಾದೇಶಜೂನ್​ 22ಆಂಟಿಗುವಾರಾತ್ರಿ 8ಕ್ಕೆ
ಭಾರತ-ಆಸ್ಟ್ರೇಲಿಯಾಜೂನ್​ 24ಸೇಂಟ್ ಲೂಸಿಯಾರಾತ್ರಿ 8ಕ್ಕೆ
Continue Reading

ಕ್ರೀಡೆ

Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

Team India Coach: ಭಾರತವೆಂದರೆ ಜಾಂಟಿ ರೋಡ್ಸ್​ಗೆ ಅಚ್ಚುಮೆಚ್ಚು. ಅದೇ ಕಾರಣಕ್ಕೆ ಅವರು ತನ್ನ ಮಗಳಿಗೆ ‘ಇಂಡಿಯಾ’ ಎಂದು ಹೆಸರಿಟ್ಟಿದ್ದಾರೆ. ಭಾರತಕ್ಕೆ ಆಗಾಗ ಭೇಟಿ ನೀಡುತ್ತಿರುವ ಅವರು ಮುಂಬೈನಲ್ಲಿ ಸರ್ಫಿಂಗ್​ ಮತ್ತು ಕೆಲವು ತೀರ್ಥಕ್ಷೇತ್ರಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುತ್ತಾರೆ.

VISTARANEWS.COM


on

Team India Coach
Koo

ಮುಂಬಯಿ: ಗೌತಮ್​ ಗಂಭೀರ್​ ಅವರು ಟೀಮ್​ ಇಂಡಿಯಾದ(Team India Coach) ಮುಂದಿನ ಕೋಚ್​ ಆಗಲಿದ್ದಾರೆ ಎಂದು ವರದಿಯಾದ ಬೆನ್ನಲ್ಲೇ ಇದೀಗ ದಕ್ಷಿಣ ಆಫ್ರಿಕಾದ ಈ ಮಾಜಿ ಆಟಗಾರ, ಕ್ರಿಕೆಟ್​ ಕಂಡ ಬೆಸ್ಟ್​ ಫೀಲ್ಡರ್​ ಜಾಂಟಿ ರೋಡ್ಸ್(Jonty Rhodes) ಅವರು ಭಾರತ ತಂಡದ ಫೀಲ್ಡಿಂಗ್​ ಕೋಚ್​(Jonty Rhodes ia’s New Fielding Coach) ಆಗಲಿದ್ದಾರೆ ಎಂದು ತಿಳಿದುಬಂದಿದೆ. ತಂಡದ ಇತರ ಕೋಚ್​ಗಳ ಆಯ್ಕೆಯಲ್ಲಿ ತನ್ನ ವ್ಯಕ್ತಿಗಳನ್ನು ನೇಮಿಸಿಕೊಳ್ಳುವ ಅವಕಾಶ ನೀಡಬೇಕೆಂದು ಗಂಭೀರ್​ ಅವರು ಬಿಸಿಸಿಐಗೆ ಬೇಡಿಕೆ ಇಟ್ಟಿದ್ದು ಈ ಬೇಡಿಕೆಯನ್ನು ಬಿಸಿಸಿಐ ಒಪ್ಪಿಕೊಂಡಿದೆ ಎನ್ನಲಾಗಿದೆ.

ಗಂಭೀರ್​ ಅವರು ಜಾಂಟಿ ರೋಡ್ಸ್ ಜತೆ ಐಪಿಎಲ್​ನಲ್ಲಿ ಲಕ್ನೋ ತಂಡದ ಪರ ಜತೆಯಾಗಿ 2 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಇದೇ ಕಾಂಬಿನೇಷನ್​ನಲ್ಲಿ ಇದೀಗ ಟೀಮ್​ ಇಂಡಿಯಾದಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆ ಕಂಡುಬಂದಿದೆ. 2019ರಲ್ಲಿಯೂ ಜಾಂಟಿ ರೋಡ್ಸ್ ಅವರು ಭಾರತದ ತಂಡದ ಫೀಲ್ಡಿಂಗ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಭಾರತೀಯ ಮೂಲದ ಸಿಬ್ಬಂದಿಗೆ ಬಿಸಿಸಿಐ ಮಣೆ ಹಾಕಿತ್ತು. ಈ ಬಾರಿ ಗಂಭೀರ್​ ಅವರ ಅಭಯಹಸ್ತದಿಂದ ರೋಡ್ಸ್​ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಟಿ20 ವಿಶ್ವಕಪ್​ ಟೂರ್ನಿ ಮುಕ್ತಾಯಗೊಂಡ ತಕ್ಷಣ ನೂತನ ಕೋಚ್​ಗಳ ಹೆಸರು ಪ್ರಕಟಗೊಳ್ಳಲಿದೆ. 54 ವರ್ಷದ ಜಾಂಟಿ ಸದ್ಯ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಫೀಲ್ಡಿಂಗ್​ ಕೋಚ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಪಂಜಾಜ್​ ಕಿಂಗ್ಸ್​ ಮತ್ತು ಮುಂಬೈ ಇಂಡಿಯನ್ಸ್​ ತಂಡದ ಪರ ಫೀಲ್ಡಿಂಗ್​ ಕೋಚ್​ ಆಗಿ ಕಾರ್ಯ ನಿರ್ವಹಿಸಿದ್ದರು.​

ಇದನ್ನೂ ಓದಿ Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

ಭಾರತವೆಂದರೆ ಜಾಂಟಿ ರೋಡ್ಸ್​ಗೆ ಅಚ್ಚುಮೆಚ್ಚು. ಅದೇ ಕಾರಣಕ್ಕೆ ಅವರು ತನ್ನ ಮಗಳಿಗೆ ‘ಇಂಡಿಯಾ’ ಎಂದು ಹೆಸರಿಟ್ಟಿದ್ದಾರೆ. ಭಾರತಕ್ಕೆ ಆಗಾಗ ಭೇಟಿ ನೀಡುತ್ತಿರುವ ಅವರು ಮುಂಬೈನಲ್ಲಿ ಸರ್ಫಿಂಗ್​ ಮತ್ತು ಕೆಲವು ತೀರ್ಥಕ್ಷೇತ್ರಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುತ್ತಾರೆ. ಈ ಬಾರಿಯ ಐಪಿಎಲ್​ ಟೂರ್ನಿಯ ವೇಳೆ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ರಾಮ ಮಂದಿರ ಉದ್ಘಾಟನೆಯ ವೇಳೆಯೂ ಅವರು ಶುಭ ಹಾರೈಸಿದ್ದರು. 2020ರಲ್ಲಿ ಹೃಷಿಕೇಶ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ಹಬ್ಬಕ್ಕೆ ಆಗಮಿಸಿದ್ದ ವೇಳೆ ಜಾಂಟಿ ರೋಡ್ಸ್‌ ಗಂಗಾ ನದಿಗೂ ಭೇಟಿ ನೀಡಿದ್ದರು. ಮೊದಲೇ ಭಾರತ ನೆಲ, ಇಲ್ಲಿನ ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಜಾಂಟಿ ರೋಡ್ಸ್‌ ಭಾರತೀಯರಿಗೆ ಅತ್ಯಂತ ಪವಿತ್ರವಾಗಿರುವ ಗಂಗಾ ನದಿಯಲ್ಲಿ ಸ್ನಾನ ಮಾಡಿ ಸಾರ್ಥಕತೆಯ ಖುಷಿ ಅನುಭವಿಸಿದ್ದರು.

ಮೋದಿ ಅಭಿಮಾನಿ


ಜಾಂಟಿ ರೋಡ್ಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ. ಕಳೆದ ವರ್ಷ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದಿದ್ದ 15ನೇ ಬ್ರಿಕ್ಸ್‌ ಸಮ್ಮೇಳನದಲ್ಲಿ ಮೋದಿ ಅವರು ದಕ್ಷಿಣ ಆಫ್ರಿಕಾಗೆ ಬಂದಿದ್ದ ವೇಳೆ ರೋಡ್ಸ್ ಅವರು ‘ನಮಸ್ಕಾರ ಮೋದಿಜಿ’ ಎಂದು ಸ್ವಾಗತ ಕೋರಿದ್ದರು. “ಭಾರತಕ್ಕೆ ನನ್ನ ಕುಟುಂಬ ಹಲವು ಬಾರಿ ಭೇಟಿ ನೀಡಿದೆ. ಭಾರತವೆಂದರೆ ಭಾವನಾತ್ಮಕ ಸಂಬಂದವೂ ನನಗಿದೆ. ಅದ್ಭುತ ದೇಶ. ಜಾಗತಿಕ ಮಟ್ಟದಲ್ಲಿ ಅಂತಾರಾಷ್ಟ್ರೀಯ ರಾಜಕೀಯ ಹಾಗೂ ಅರ್ಥಶಾಸ್ತ್ರದಲ್ಲಿ ನೀವೊಬ್ಬರು ರೋಲ್ ಮಾಡೆಲ್” ಎಂದು ಬರೆದುಕೊಂಡಿದ್ದರು.

Continue Reading

ಕ್ರೀಡೆ

Neeraj Chopra: ಇಂದು ಪಾವೊ ನೂರ್ಮಿ ಗೇಮ್ಸ್​ನಲ್ಲಿ ನೀರಜ್ ಚೋಪ್ರಾ ಸ್ಪರ್ಧೆ

Neeraj Chopra: ಜರ್ಮನಿಯ ಯುವ ಜಾವೆಲಿನ್​ ಪಟು ಮ್ಯಾಕ್ಸ್‌ ಡ್ಹೆನಿಂಗ್(Max Dehning) ಅವರಿಂದ ತೀವ್ರ ಪೈಪೋಟಿ ಎದುರಾಗುವ ನಿರೀಕ್ಷೆಯಿದೆ. ನೀರಜ್​ ಈ ಟೂರ್ನಿಯ ಕಣದಲ್ಲಿರುವ ಏಕೈಕ ಭಾರತೀಯ ಅಥ್ಲೀಟ್‌.

VISTARANEWS.COM


on

Neeraj Chopra
Koo

ತುರ್ಕು (ಫಿನ್ಲೆಂಡ್‌): ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಟೂರ್ನಿಗೂ ಮುನ್ನ ನೀರಜ್ ಚೋಪ್ರಾ(Neeraj Chopra) ಅವರು ಹೊಸ ಉತ್ಸಾಹದೊಂದಿಗೆ ಇಂದು (ಮಂಗಳವಾರ) ನಡೆಯುವ ಪಾವೊ ನೂರ್ಮಿ(Paavo Nurmi Games) ಅಥ್ಲೆಟಿಕ್‌ ಕೂಟದಲ್ಲಿ ಭಾಗವಹಿಸಲಿದ್ದಾರೆ. ಜರ್ಮನಿಯ ಯುವ ಜಾವೆಲಿನ್​ ಪಟು ಮ್ಯಾಕ್ಸ್‌ ಡ್ಹೆನಿಂಗ್(Max Dehning) ಅವರಿಂದ ತೀವ್ರ ಪೈಪೋಟಿ ಎದುರಾಗುವ ನಿರೀಕ್ಷೆಯಿದೆ. ನೀರಜ್​ ಈ ಟೂರ್ನಿಯ ಕಣದಲ್ಲಿರುವ ಏಕೈಕ ಭಾರತೀಯ ಅಥ್ಲೀಟ್‌.

19 ವರ್ಷದ ಡ್ಹೆನಿಂಗ್‌ ಇತ್ತೀಚೆಗೆ ನಡೆದ ಟೂರ್ನಿಯೊಂದರಲ್ಲಿ 90 ಮೀ. ದೂರ ಜಾವೆಲಿನ್‌ ಎಸೆದು ಈ ಸಾಧನೆ ತೋರಿದ ಅತಿ ಕಿರಿಯ ಜಾವೆಲಿನ್ ಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದರು. ನೀರಜ್​ ಅವರು ಇದುವರೆಗೂ 90ರ ಗಡಿ ದಾಟಿಲ್ಲ. 89.94 ಮೀ. ದೂರ ಅವರ ಇದುವರೆಗಿನ ವೈಯಕ್ತಿಕ ಶ್ರೇಷ್ಠ ಪ್ರದರ್ಶನವಾಗಿದೆ. ಈ ಎಸೆತವನ್ನು ನೀರಜ್​ 2022ರ ಡೈಮಂಡ್‌ ಲೀಗ್‌ನಲ್ಲಿ ದಾಖಲಿಸಿದ್ದರು. ಹೀಗಾಗಿ ಈ ಟೂರ್ನಿಯಲ್ಲಿ ಅವರಿಗೆ ಡ್ಹೆನಿಂಗ್‌ ಅವರಿಂದ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ಇದು ಮಾತ್ರವಲ್ಲದೆ 2022ರಲ್ಲಿ ನಡೆದಿದ್ದ ಇದೇ ಕೂಟದಲ್ಲಿ ನೀರಜ್​ಗೆ ಸೋಲುಣಿಸಿದ್ದ ಒಲಿವರ್‌ ಹೆಲಾಂಡರ್, ಎರಡು ಬಾರಿಯ ವಿಶ್ವ ಚಾಂಪಿಯನ್ ಆ್ಯಂಡರ್ಸನ್ ಪೀಟರ್ಸ್‌ (ಗ್ರೆನೆಡಾ) ಮತ್ತು 2012ರ ಒಲಿಂಪಿಕ್ ಚಾಂಪಿಯನ್ ಕೆಶೋರ್ನ್ ವಾಲ್ಕಾಟ್‌ (ಟ್ರಿನಿಡಾಡ್‌ ಮತ್ತು ಟೊಬಾಗೊ) ಕೂಡ ಈ ಬಾರಿ ಕಣದಲ್ಲಿದ್ದಾರೆ. ಒಟ್ಟಾರೆ ಬಲಿಷ್ಠ ಜಾವೆಲಿನ್ ಪಟುಗಳ ಮಧ್ಯೆ ಇಂದು ಜಿದ್ದಾಜಿದ್ದಿನ ಹೋರಾಟವೊಂದು ನಡೆಯಲಿದೆ ಎನ್ನಲಡ್ಡಿಯಿಲ್ಲ. ಝೆಕ್‌ ರಿಪಬ್ಲಿಕ್‌ನ ಪ್ರಮುಖ ಸ್ಪರ್ಧಿ, ಕಳೆದ ದೋಹಾ ಡೈಮಂಡ್‌ ಲೀಗ್‌ನಲ್ಲಿ ಚಿನ್ನ ಗೆದ್ದಿದ್ದ ಯಾಕುಬ್‌ ವಾಡ್ಲೆಚ್‌ ಈ ಟೂರ್ನಿಗೆ ಗೈರಾಗಿದ್ದಾರೆ.

ಇದನ್ನೂ ಓದಿ Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

ತೊಡೆಯ ಸ್ನಾಯು ನೋವಿನಿಂದ ವಿಶ್ರಾಂತಿ ಪಡೆದಿದ್ದ ನೀರಜ್​ ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಒಲಿಂಪಿಕ್ಸ್​ಗೆ ಸಿದ್ಧತೆ ನಡೆಸಲಿದ್ದೇನೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ಭುವನೇಶ್ವರದಲ್ಲಿ ನಡೆದ ಫೆಡರೇಷನ್ ಕಪ್ ರಾಷ್ಟ್ರೀಯ ಸೀನಿಯರ್ ಅಥ್ಲೆಟಿಕ್ ಕೂಟದಲ್ಲಿ ಚಿನ್ನ ಗೆದ್ದ ಬಳಿಕ ನೀರಜ್​ ಯಾವುದೇ ಟೂರ್ನಿಯಲ್ಲಿ ಆಡಿರಲಿಲ್ಲ. ಈ ಟೂರ್ನಿ ಮಾತ್ರವಲ್ಲದೆ ಜುಲೈ 7ರಂದು ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿಯೂ ನೀರಜ್​ ಕಣಕ್ಕಿಳಿಯಲಿದ್ದಾರೆ.

ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ನೀರಜ್‌ ಈ ಬಾರಿಯೂ ಚಿನ್ನ ಗೆಲ್ಲಲಿ ಎನ್ನುವುದು ಶತ ಕೋಟಿ ಭಾರತೀಯರ ಆಶಯ ಮತ್ತು ಹಾರೈಕೆಯಾಗಿದೆ. 2024ರಲ್ಲಿ ನಡೆಯುವ ಪ್ಯಾರಿಸ್ ಒಲಿಂಪಿಕ್ಸ್ ಅತಿ ದೊಡ್ಡ ಮತ್ತು ಮಹತ್ವದ ಕ್ರೀಡಾಕೂಟವಾಗಿದೆ. ಸುಮಾರು 200 ದೇಶಗಳ 10,000 ಕ್ರೀಡಾಪಟುಗಳು ಒಲಿಂಪಿಕ್ ವೈಭವಕ್ಕಾಗಿ ಸ್ಪರ್ಧಿಸಲಿದ್ದಾರೆ. ಪ್ಯಾರಿಸ್ ತನ್ನ ಮೂರನೇ ಬಾರಿಗೆ ಆತಿಥೇಯ ನಗರವಾಗಿ (1900 ಮತ್ತು 1924 ರ ನಂತರ) ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲಿದೆ. ಜುಲೈ 26 ರಿಂದ ಆಗಸ್ಟ್ 11ರ ತನಕ ಟೂರ್ನಿ ನಡೆಯಲಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading
Advertisement
Drowned in water
ಯಾದಗಿರಿ12 mins ago

Drowned in Water : ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕ ಬಲಿ; ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದವನು ಮೃತ್ಯು

WI vs AFG
ಕ್ರೀಡೆ13 mins ago

WI vs AFG: ಒಂದೇ ಓವರ್​ನಲ್ಲಿ 36 ರನ್​ ಗಳಿಸಿ ಯುವರಾಜ್​ ಸಿಂಗ್​ ದಾಖಲೆ ಸರಿಗಟ್ಟಿದ ನಿಕೋಲಸ್​ ಪೂರನ್​

NEET UG 2024
Latest35 mins ago

NEET UG 2024: ಮಗಳ ಜೊತೆ ಸೇರಿ ನೀಟ್ ಯುಜಿ ಪರೀಕ್ಷೆ ಬರೆದು ಪಾಸಾದ ಅಪ್ಪ!

Sidhartha Mallya
ಸಿನಿಮಾ40 mins ago

Sidhartha Mallya: ಹಸೆಮಣೆಗೇರಲು ಸಜ್ಜಾದ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ

murder case
ಕ್ರೈಂ55 mins ago

Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

How Much Salt Is Too Much
ಆರೋಗ್ಯ1 hour ago

How Much Salt Is Too Much: ಉಪ್ಪು ಅತಿಯಾಗದಿರಲಿ; ದಿನಕ್ಕೆ ನಾವೆಷ್ಟು ಉಪ್ಪು ತಿನ್ನುತ್ತಿದ್ದೇವೆ ಗೊತ್ತಿರಲಿ

T20 World Cup 2024
ಕ್ರೀಡೆ1 hour ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್​ ಆಟಗಾರನಿಗೆ ಗಾಯ

Narendra Modi
ದೇಶ1 hour ago

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Prajwal revanna case
ಪ್ರಮುಖ ಸುದ್ದಿ2 hours ago

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Team India Coach
ಕ್ರೀಡೆ2 hours ago

Team India Coach: ಜಾಂಟಿ ರೋಡ್ಸ್ ಟೀಮ್​ ಇಂಡಿಯಾದ ಮುಂದಿನ ಫೀಲ್ಡಿಂಗ್​ ಕೋಚ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು23 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು23 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌