CBI Raids: ಕಾಯ್ದೆ ಉಲ್ಲಂಘನೆ ಆರೋಪ; ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್‌ ನಿವಾಸದಲ್ಲಿ ಸಿಬಿಐ ಶೋಧ - Vistara News

ದೇಶ

CBI Raids: ಕಾಯ್ದೆ ಉಲ್ಲಂಘನೆ ಆರೋಪ; ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್‌ ನಿವಾಸದಲ್ಲಿ ಸಿಬಿಐ ಶೋಧ

CBI Raids: ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಮತ್ತು ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ಅವರ ಕಚೇರಿ ಮತ್ತು ನಿವಾಸದಲ್ಲಿ ಕೇಂದ್ರ ತನಿಖಾ ದಳ ಶುಕ್ರವಾರ ಶೋಧ ನಡೆಸಿದೆ.

VISTARANEWS.COM


on

harsha mandar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ಉಲ್ಲಂಘನೆಗೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಮತ್ತು ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ (Harsh Mander) ಅವರ ಕಚೇರಿ ಮತ್ತು ನಿವಾಸದಲ್ಲಿ ಕೇಂದ್ರ ತನಿಖಾ ದಳ (CBI) ಶುಕ್ರವಾರ (ಫೆಬ್ರವರಿ 2) ಶೋಧ ನಡೆಸಿದೆ.

ಹರ್ಷ ಮಂದರ್ ಸ್ಥಾಪಿಸಿದ ಸರ್ಕಾರೇತರ ಸಂಸ್ಥೆ (NGO) ಅಮನ್ ಬಿರಾದರಿ (Aman Biradari)ಗೆ ವಿದೇಶಿ ಧನ ಸಹಾಯ ಲಭಿಸಿದ ಬಗ್ಗೆ ತನಿಖೆ ನಡೆಸುವಂತೆ ಗೃಹ ಸಚಿವಾಲಯ (MHA) ಕಳೆದ ವರ್ಷ ಸಿಬಿಐಗೆ ಶಿಫಾರಸು ಮಾಡಿತ್ತು. ಈ ಹಿಂದೆ 2021ರ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪ್ರಾರಂಭಿಸಿದ ಅವ್ಯಹಾರಗಳ ತನಿಖೆಯ ನಂತರ ಮಂದರ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. ಇದೀಗ ತನಿಖೆಯು ಅವರಿಗೆ ಸಂಬಂಧಿಸಿದ ಎರಡು ಎನ್‌ಜಿಒಗಳ ಸುತ್ತ ಕೇಂದ್ರೀಕೃತವಾಗಿ ನಡೆಯಲಿದೆ. ವಿದೇಶಿ ದೇಣಿಗೆ ಪಡೆಯುವ ಎಲ್ಲ ಎನ್‌ಜಿಒಗಳು ಎಫ್‌ಸಿಆರ್‌ಎ ಅಡಿಯಲ್ಲಿ ಗೃಹ ಸಚಿವಾಲಯದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಕಾನೂನು ಹೇಳುತ್ತದೆ.

ವಾಗ್ದಾಳಿ ನಡೆಸಿದ ಪ್ರಶಾಂತ್ ಭೂಷಣ್

ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ವಕೀಲ ಪ್ರಶಾಂತ್ ಭೂಷಣ್, ಸರ್ಕಾರದ ವಿರುದ್ಧ ವಿಮರ್ಶಾತ್ಮಕ ನಿಲುವು ಹೊಂದಿದ್ದರಿಂದ ಹರ್ಷ ಮಂದರ್ ಅವರನ್ನು ಗುರಿಯಾಗಿಸಿ ತನಿಖೆ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ʼʼಹರ್ಷ ಮಂದರ್‌ ಅವರ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸುತ್ತಿದೆ. ಹರ್ಷ ಮಂದರ್‌ ಮಾನವೀಯ ಮತ್ತು ಉದಾತ ವ್ಯಕ್ತಿತ್ವ ಹೊಂದಿರುವ ಹೋರಾಟಗಾರ. ಅವರು ದುರ್ಬಲ ಹಾಗೂ ಬಡವರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಕೇಂದ್ರ ಸರ್ಕಾರವನ್ನು ಟೀಕಿಸುವ ಕಾರಣಕ್ಕೆ ಅವರನ್ನು ಗುರಿಯಾಗಿಸಿಕೊಳ್ಳಲಾಗಿದೆ. ತನ್ನನ್ನು ಟೀಕಿಸುವವರ ವಿರುದ್ಧ ಸರ್ಕಾರವು ದಾಳಿ ನಡೆಸುತ್ತಿದೆʼʼ ಎಂದು ಬರೆದುಕೊಂಡಿದ್ದಾರೆ.

ಯಾರು ಈ ಹರ್ಷ ಮಂದರ್ ?

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿಯ ಸದಸ್ಯರಾಗಿದ್ದ ಮಂದರ್ ಲೇಖಕ, ಸಂಶೋಧಕ, ಶಿಕ್ಷಕ ಮತ್ತು ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದಾರೆ. ಹರ್ಷ ಮಂದರ್ ಅವರು ಆಹಾರದ ಹಕ್ಕು, ಮಾಹಿತಿ ಹಕ್ಕು, ಜೀತದಾಳುಗಳು ಮತ್ತು ಆದಿವಾಸಿಗಳ ಹಕ್ಕುಗಳಿಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ.

ಹರ್ಷ ಮಂದರ್ ಅವರು ಹಲವು ಪುಸ್ತಕಗಳನ್ನೂ ಬರೆದಿದ್ದಾರೆ. Between Memory and Forgetting: Massacre and the Modi Years in Gujarat, Partitions of the Heart: Unmaking the Idea of India, The Right to Food Debates: Social Protection for Food Security in India ಮುಂತಾದವು ಹರ್ಷ ಮಂದರ್ ಅವರ ಜನಪ್ರಿಯ ಕೃತಿಗಳು.

ಇದನ್ನೂ ಓದಿ: ಉತ್ತರಾಖಂಡ ಸಿಎಂಗೆ ಇಂದು ಏಕರೂಪ ನಾಗರಿಕ ಸಂಹಿತೆ ಕರಡು ಹಸ್ತಾಂತರ; ಬಿಗಿ ಭದ್ರತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Election Results 2024: ಮೂರನೇ ಬಾರಿ ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಕೇಂದ್ರ ಸಚಿವ ಸಂಪುಟ ಸಭೆ

Election Results 2024: ಲೋಕಸಭೆ ಚುನಾವಣೆ ಫಲಿತಾಂಶ (Election Results 2024) ಬಂದ ಬಳಿಕ ಎನ್‌ಡಿಎ (NDA) ಮೈತ್ರಿಪಕ್ಷಗಳನ್ನು ಸೇರಿಸಿಕೊಂಡು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ. ಈ ಹಿನ್ನಲೆಯಲ್ಲಿ ಇಂದು (ಜೂನ್‌ 5) ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಸೇರಿದೆ. ಮಂಗಳವಾರ ಫಲಿತಾಂಶ ಪ್ರಕಟವಾದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ ಅವರು ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಘೋಷಿಸಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ.

VISTARANEWS.COM


on

Election Results 2024
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆ ಫಲಿತಾಂಶ (Election Results 2024) ಬಂದ ಬಳಿಕ ಎನ್‌ಡಿಎ (NDA) ಮೈತ್ರಿಪಕ್ಷಗಳನ್ನು ಸೇರಿಸಿಕೊಂಡು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ. ಈ ಹಿನ್ನಲೆಯಲ್ಲಿ ಇಂದು (ಜೂನ್‌ 5) ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಸೇರಿದೆ. ಮಂಗಳವಾರ ಫಲಿತಾಂಶ ಪ್ರಕಟವಾದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ ಅವರು ಎನ್‌ಡಿಎ ಸರ್ಕಾರ ರಚಿಸಲಿದೆ ಎಂದು ಘೋಷಿಸಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ.

ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಎನ್‌ಡಿಎ ನಾಯಕರು ಇಂದು ಪ್ರಧಾನಿ ಮೋದಿ ಅವರ ನಿವಾಸವಾದ 7 ಲೋಕ ಕಲ್ಯಾಣ ಮಾರ್ಗದಲ್ಲಿ ಅಪರಾಹ್ನ 3:30ರ ಸುಮಾರಿಗೆ ಸಭೆ ಸೇರಲಿದ್ದಾರೆ. ಪ್ರಮುಖ ನಾಯಕರಾದ ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್‌ ಕುಮಾರ್‌ ಮತ್ತು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ನಿತೀಶ್‌ ಕುಮಾರ್‌ ಈಗಾಗಲೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಇತ್ತ ಪ್ರತಿಪಕ್ಷಗಳ ‘ಇಂಡಿಯಾ’ ಚುನಾವಣೆಯಲ್ಲಿ ಉತ್ತಮ ಸಾಧನೆ ತೋರಿದ್ದು, ಸರ್ಕಾರ ರಚನೆಗೆ ಕಸರತ್ತು ಆರಂಭಿಸಿದೆ. ‘ಇಂಡಿಯಾ’ ಬಣದ ಸಭೆಯನ್ನು ದೆಹಲಿಯಲ್ಲಿ ಸಂಜೆ 6 ಗಂಟೆಗೆ ಆಯೋಜಿಸಲಾಗಿದೆ.

ಬಹುಮತ ಪಡೆದುಕೊಳ್ಳದ ಬಿಜೆಪಿ

ಈ ಬಾರಿ ಬಿಜೆಪಿಗೆ ಬಹುಮತ ಲಭಿಸಿಲ್ಲ. ಹೀಗಾಗಿ ಕೇಸರಿ ಪಾಳಯ ತನ್ನ ಮಿತ್ರಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸನ್ನಾಹದಲ್ಲಿ ತೊಡಗಿಸಿಕೊಂಡಿದೆ. ಬಿಜೆಪಿ 240 ಸ್ಥಾನಗಳನ್ನು ಗೆದ್ದಿದೆ. 2019ರಲ್ಲಿ ಕಮಲ ಪಡೆ 303 ಸ್ಥಾನ ಗಳಿಸಿತ್ತು. ಮತ್ತೊಂದೆಡೆ ಕಾಂಗ್ರೆಸ್ 99 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಬಲ ಪೈಪೋಟಿ ಒಡ್ಡಿದೆ. ಒಟ್ಟಾರೆಯಾಗಿ ಎನ್‌ಡಿಎ 291 ಸ್ಥಾನ ಗೆದ್ದಿದ್ದು, ʼಇಂಡಿಯಾʼ ಒಕ್ಕೂಟ 233 ಸ್ಥಾನ ಗಳಿಸಿದೆ. ಹೀಗಾಗಿ ‘ಇಂಡಿಯಾ’ ಬಣ ಎನ್‌ಡಿಎಯ ಮಿತ್ರ ಪಕ್ಷಗಳನ್ನು ಸೆಳೆದು ಅಧಿಕಾರದ ಗದ್ದುಗೆಗೆ ಏರಲು ಪ್ರಯತ್ನ ಆರಂಭಿಸಿದೆ. ಬಹುಮತಕ್ಕೆ 272 ಸೀಟು ಅಗತ್ಯ. ಈಗಿನ ಲೆಕ್ಕಾಚಾರದ ಪ್ರಕಾರ ‘ಇಂಡಿಯಾ’ ಮಿತ್ರಪಕ್ಷಗಳಿಗೆ ಬಹುಮತಕ್ಕೆ 39 ಸ್ಥಾನ ಕಡಿಮೆ ಇದೆ. ಎನ್‌ಡಿಎಗೆ ಬಹುಮತಕ್ಕಿಂತ 19 ಹೆಚ್ಚು ಇದೆ. ಬಿಜೆಪಿ ಮ್ಯಾಜಿಕ್ ಫಿಗರ್‌ಗಿಂತ 32 ಕಡಿಮೆ ಸ್ಥಾನ ಹೊಂದಿರುವುದು ಕೇಸರಿ ಪಾಳಯಕ್ಕೆ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: Election Results 2024: ನಿತೀಶ್‌ಕುಮಾರ್, ಚಂದ್ರಬಾಬು ನಾಯ್ಡು ನೆರವಿಲ್ಲದೆ ಮೋದಿ ಸರ್ಕಾರ ನಡೆಸಲಾಗದೆ?

ಏತನ್ಮಧ್ಯ, ಮೋದಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಜನಾದೇಶಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸುವ ವೇಳೆ ಅವರು, ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಬಾರಿಗೆ ಸರ್ಕಾರವನ್ನು ರಚಿಸುತ್ತದೆ ಎಂದು ಘೋಷಿಸಿದ್ದಾರೆ. ಇದು ʼವಿಕಸಿತ್‌ ಭಾರತ್ʼ, ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಸಂಕಲ್ಪ ಮತ್ತು ಭಾರತದ ಸಂವಿಧಾನದಲ್ಲಿ ಜನರ ಬಲವಾದ ನಂಬಿಕೆಯ ಗೆಲುವು ಎಂದು ಅವರು ಬಣ್ಣಿಸಿದ್ದಾರೆ.

Continue Reading

Lok Sabha Election 2024

Election Results 2024: ಸರ್ಕಾರ ರಚನೆಯ ಕಸರತ್ತು; ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್

Election Results 2024: ಬಿಹಾರ ಮುಖ್ಯಮಂತ್ರಿ, ಜೆಡಿಯು (JDU) ಮುಖ್ಯಸ್ಥ ನಿತೀಶ್ ಕುಮಾರ್ (Nitish Kumar) ಮತ್ತು ರಾಷ್ಟ್ರೀಯ ಜನತಾ ದಳ (RJD) ಮುಖಂಡ ತೇಜಸ್ವಿ ಯಾದವ್ (Tejashwi Yadav) ಬುಧವಾರ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಈ ಇಬ್ಬರು ಬಿಹಾರದ ನಾಯಕರು ಬೆಳಿಗ್ಗೆ 10.30ಕ್ಕೆ ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸಿದ್ದಾರೆ.

VISTARANEWS.COM


on

Election Results 2024
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024)ಯ ಫಲಿತಾಂಶ (Election Results 2024) ಹೊರ ಬಿದ್ದಿದ್ದು, ಮುಂದಿನ ಸರ್ಕಾರವನ್ನು ರಚಿಸಲು ತೀವ್ರ ಚರ್ಚೆ ಆರಂಭವಾಗಿದೆ. ಈ ಮಧ್ಯೆ ಬಿಹಾರ ಮುಖ್ಯಮಂತ್ರಿ, ಜೆಡಿಯು (JDU) ಮುಖ್ಯಸ್ಥ ನಿತೀಶ್ ಕುಮಾರ್ (Nitish Kumar) ಮತ್ತು ರಾಷ್ಟ್ರೀಯ ಜನತಾ ದಳ (RJD) ಮುಖಂಡ ತೇಜಸ್ವಿ ಯಾದವ್ (Tejashwi Yadav) ಬುಧವಾರ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಈ ಇಬ್ಬರು ಬಿಹಾರದ ನಾಯಕರು ಬೆಳಿಗ್ಗೆ 10.30ಕ್ಕೆ ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸಿದ್ದಾರೆ.

ವಿಶೇಷ ಎಂದರೆ ನಿತಿಶ್‌ ಕುಮಾರ್‌ ಬಿಜೆಪಿ ನೇತೃತ್ವದ ಎನ್‌ಡಿಎ ಬಣದಲ್ಲಿದ್ದರೆ ತೇಜಸ್ವಿ ಯಾದವ್ ಪ್ರತಿಪಕ್ಷಗಳ ʼಇಂಡಿಯಾʼ ಒಕ್ಕೂಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಈ ನಾಯಕರ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ. ನಿತೀಶ್‌ ಕುಮಾರ್‌ ಅವರನ್ನು ʼಇಂಡಿಯಾʼ ಒಕ್ಕೂಟ ತನ್ನತ್ತ ಸೆಳೆಯಲು ಮುಂದಾಗಿರುವುದು ಕೂಡ ರಾಜಕೀಯ ಚಟಿವಟಿಕೆ ಬಿರುಸು ಪಡೆದುಕೊಳ್ಳಲು ಕಾರಣವಾಗಿದೆ. ಕೆಲವು ತಿಂಗಳ ಮೊದಲು, ಎನ್‌ಡಿಎಗೆ ಸೇರುವ ಮುನ್ನ ನಿತೀಶ್ ಕೂಡ ಯುಪಿಎ ಜತೆಗಿದ್ದರು ಎನ್ನುವುದು ಗಮನಾರ್ಹ.

ಕೇಂದ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಯ ಮಿತ್ರ ಪಕ್ಷವಾಗಿ ಎನ್‌ಡಿಯ ಒಕ್ಕೂಟದಲ್ಲಿಯೇ ಉಳಿಯುವುದಾಗಿ ಜೆಡಿಯು ಈಗಾಗಲೇ ಸ್ಪಷ್ಟಪಡಿಸಿದೆ. ಬಿಹಾರದಲ್ಲಿ ಜೆಡಿಯು 12 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 12 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. ಎನ್‌ಡಿಎಯ ಇನ್ನೊಂದು ಮಿತ್ರಪಕ್ಷ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (LJP) 5 ಸ್ಥಾನಗಳನ್ನು ಗೆದ್ದಿದೆ. ಜೆಡಿಯು ನಾಯಕರು ಬುಧವಾರ ಬೆಳಿಗ್ಗೆ ನಿತೀಶ್‌ ಕುಮಾರ್‌ ಅವರನ್ನು ಭೇಟಿಯಾಗಿ ಸರ್ಕಾರ ರಚಿಸುವ ಬಗ್ಗೆ ಚರ್ಚೆ ನಡೆಸಿದ್ದರು.

ಜೆಡಿಯು ಹೇಳಿದ್ದೇನು?

ಮಂಗಳವಾರ ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಅವರು ಮಾತನಾಡಿ, ತಮ್ಮ ಪಕ್ಷ ಎನ್‌ಡಿಎಯೊಂದಿಗೆ ಉಳಿಯಲಿದೆ ಎಂದು ಸ್ಪಷ್ಟಪಡಿಸಿದ್ದರು. “ನಾವು ನಮ್ಮ ನಿಲುವನ್ನು ಮುಂದುವರಿಸುತ್ತೇವೆ. ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ, ಜೆಡಿಯು ಮತ್ತೊಮ್ಮೆ ಎನ್‌ಡಿಎಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದೆ. ನಾವು ಎನ್‌ಡಿಎ ಜತೆಗಿದ್ದೇವೆ ಮತ್ತು ನಾವು ಎನ್‌ಡಿಎಯೊಂದಿಗೆ ಮುಂದುವರಿಯುತ್ತೇವೆ” ಎಂದು ಅವರು ಹೇಳಿದ್ದರು.

ಕೆಲವು ದಿನಗಳ ಹಿಂದೆ ʼಇಂಡಿಯಾʼ ಒಕ್ಕೂಟದ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ನಿತೀಶ್ ಕುಮಾರ್ ಅವರಿಗೆ ಕರೆ ಮಾಡಿದ್ದರು. ಇದಾದ ಬಳಿಕ ಬಿಹಾರ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ನಿತೀಶ್ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ: Election Results 2024: ನಿತೀಶ್‌ಕುಮಾರ್, ಚಂದ್ರಬಾಬು ನಾಯ್ಡು ನೆರವಿಲ್ಲದೆ ಮೋದಿ ಸರ್ಕಾರ ನಡೆಸಲಾಗದೆ?

ಫಲಿತಾಂಶದ ವಿವರ

ಇಂಡಿಯಾ ಮಿತ್ರಪಕ್ಷಗಳು ಒಟ್ಟಾಗಿ 233 ಸ್ಥಾನಗಳನ್ನು ಗೆದ್ದಿವೆ. ಇದು ಬಹುಮತಕ್ಕೆ 39 ಸ್ಥಾನ ಕಡಿಮೆ ಬರುತ್ತದೆ. ಬಿಜೆಪಿ ನೇತೃತ್ವದ ಎನ್‌ಡಿಎ 291 ಸ್ಥಾನ ಗೆದ್ದಿದ್ದು, ಇದು ಬಹುಮತಕ್ಕಿಂತ 19 ಹೆಚ್ಚು ಇದೆ. ಬಿಜೆಪಿ ತನ್ನ ಸ್ವಂತ ಬಲದಿಂದ 240 ಸ್ಥಾನ ಗಳಿಸಿದೆ. ಮ್ಯಾಜಿಕ್ ಫಿಗರ್‌ಗಿಂತ 32 ಕಡಿಮೆ. ಯಾವುದೇ ಮೈತ್ರಿಯಲ್ಲಿ ಇಲ್ಲದ ಸಂಸದರಲ್ಲಿ 4 ವೈಎಸ್‌ಆರ್‌ಸಿಪಿ ಮತ್ತು ಪಕ್ಷೇತರರು ಇದ್ದಾರೆ. ಆದ್ದರಿಂದ, ಇಂಡಿಯಾ ಬಣವು ಅಧಿಕಾರವನ್ನು ಪಡೆಯಲು ಬಯಸಿದರೆ ಅವರು ಜೆಡಿಯು, ಟಿಡಿಪಿ ಮತ್ತು ಕೆಲವು ಸ್ವತಂತ್ರರನ್ನು ಒಟ್ಟುಗೂಡಿಸಲೇಬೇಕು. ಮತ್ತೊಂದೆಡೆ, ಬಿಜೆಪಿಯು ಅಧಿಕಾರದಲ್ಲಿ ಉಳಿಯಬೇಕಾದರೆ ಇವರನ್ನು ಎಷ್ಟು ವೆಚ್ಚವಾದರೂ ಉಳಿಸಿಕೊಳ್ಳಬೇಕು.

Continue Reading

ಪ್ರಮುಖ ಸುದ್ದಿ

Election Results 2024: ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ, ಇಂಡಿಯಾ ಸೇರ್ಪಡೆ? ಸುಳಿವು ನೀಡಿದ ಎರಡು ಬೆಳವಣಿಗೆ!

Election Results 2024: ಜೆಡಿಯು (JDU) ಪಕ್ಷದ ಸಂಸದನೊಬ್ಬ, “ಪ್ರಧಾನಿ (Prime Minister) ಸ್ಥಾನಕ್ಕೆ ನಿತೀಶ್‌ಗಿಂತ ಅರ್ಹತೆ ಇರುವವರು ಬೇರೆ ಯಾರು?” ಎಂದು ಬಾಂಬ್‌ ಸಿಡಿಸಿದ್ದಾರೆ. ಹಾಗೆಯೇ ಜೆಡಿಯು ಎಕ್ಸ್‌ನಲ್ಲಿ ಮಾಡಿರುವ ಒಂದು ಪೋಸ್ಟ್‌ನಲ್ಲಿ ಇಂಡಿಯಾ ಬಣದ (INDIA Bloc) ಕಡೆಗೆ ಒಲವು ಹೊಂದಿರುವ ಸುಳಿವು ನೀಡಿದೆ.

VISTARANEWS.COM


on

Nitish Kumar election results 2024
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆ ಫಲಿತಾಂಶ (Election Results 2024) ಬಂದ ಬಳಿಕ ಎನ್‌ಡಿಎ (NDA) ಮೈತ್ರಿಪಕ್ಷಗಳನ್ನು ಸೇರಿಸಿಕೊಂಡು ಕೇಂದ್ರ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿ ಇರುವಾಗಲೇ, ಬಿಜೆಪಿಗೆ (BJP) ಬೆವರು ಕಿತ್ತುಕೊಳ್ಳುವಂಥ ಕೆಲವು ಬೆಳವಣಿಗೆ ನಡೆದಿವೆ. ನಿತೀಶ್‌ ಕುಮಾರ್‌ (Nitish Kumar) ಅವರ ಜೆಡಿಯು (JDU) ಪಕ್ಷದ ಸಂಸದನೊಬ್ಬ, “ಪ್ರಧಾನಿ (Prime Minister) ಸ್ಥಾನಕ್ಕೆ ನಿತೀಶ್‌ಗಿಂತ ಅರ್ಹತೆ ಇರುವವರು ಬೇರೆ ಯಾರು?” ಎಂದು ಬಾಂಬ್‌ ಸಿಡಿಸಿದ್ದಾರೆ. ಹಾಗೆಯೇ ಜೆಡಿಯು ಎಕ್ಸ್‌ನಲ್ಲಿ ಮಾಡಿರುವ ಒಂದು ಪೋಸ್ಟ್‌ನಲ್ಲಿ ಇಂಡಿಯಾ ಬಣದ (INDIA Bloc) ಕಡೆಗೆ ಒಲವು ಹೊಂದಿರುವ ಸುಳಿವು ನೀಡಿದೆ.

ಬಿಹಾರದ ಜೆಡಿಯು ಸಂಸದ ಡಾ. ಖಾಲಿದ್ ಅನ್ವರ್ ಎಂಬವರು ನಿತೀಶ್‌ ಕುಮಾರ್‌ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ. “ನಿತೀಶ್ ಕುಮಾರ್‌ಗಿಂತ ಉತ್ತಮ ಪ್ರಧಾನಿ ಆಗಬಲ್ಲವರು ಯಾರು?
ನಿತೀಶ್ ಕುಮಾರ್ ಅವರು ಒಬ್ಬ ಅನುಭವಿ ರಾಜಕಾರಣಿ. ಸಮಾಜ ಮತ್ತು ದೇಶವನ್ನು ಅರ್ಥ ಮಾಡಿಕೊಂಡಿದ್ದಾರೆ. ಮತ್ತು ಅವರು ಎಲ್ಲರನ್ನೂ ಗೌರವಿಸುತ್ತಾರೆ. ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಗೌರವಿಸುತ್ತಾರೆ. ನಾವು ಸದ್ಯಕ್ಕೆ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದೇವೆ. ಆದರೆ ಈ ಮೊದಲು ಮತ್ತು ಇಂದೂ ಜನರು ನಿತೀಶ್ ಕುಮಾರ್ ಅವರನ್ನು ಪ್ರಧಾನಿಯಾಗಲು ಬಯಸಿದ್ದಾರೆ. ಇಂದಿನ ಫಲಿತಾಂಶದ ಬಳಿಕ ಜನರ ನಿರೀಕ್ಷೆ ಹೆಚ್ಚಿದೆ” ಎಂದು ಹೇಳಿದ್ದಾರೆ.

“ನಿತೀಶ್‌ ಅವರು ಬಿಹಾರ ರಾಜ್ಯವನ್ನು ಮುಂದಕ್ಕೆ ಕೊಂಡೊಯ್ದ ರೀತಿ, ಅವರು ಕೃಷಿ ಸಚಿವರಾಗಿದ್ದಾಗ ದೇಶಕ್ಕಾಗಿ ರೂಪಿಸಿದ ಮಾರ್ಗಸೂಚಿಯನ್ನು, ಅವರು ರೈಲ್ವೇ ಕ್ಷೇತ್ರಕ್ಕಾಗಿ ಮಾಡಿದ ಕಾರ್ಯವನ್ನು ಸಹ ಜನ ಇಂದಿಗೂ ನೆನಪಿಸಿಕೊಳ್ಳುತ್ತಾರೆ” ಎಂದಿದ್ದಾರೆ ಅನ್ವರ್.‌

ಈ ಮಾತುಗಳು ಎನ್‌ಡಿಎ ಸರ್ಕಾರದಲ್ಲಿ ನಿತೀಶ್‌ ಭಾಗವಹಿಸುವಿಕೆಯ ಕುರಿತು ಸಂಶಯ ಮೂಡಿಸಿವೆ. ನಿತೀಶ್‌ ಕುಮಾರ್‌ ಪ್ರಧಾನ ಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದು, ಅದನ್ನು ತಮ್ಮ ಸಂಸದರ ಮೂಲಕ ಹೇಳಿಸಿದರೇ ಎಂಬ ಜಿಜ್ಞಾಸೆ ಮೂಡಿದೆ. ಅಥವಾ, ಎನ್‌ಡಿಎ ಹಾಗೂ ಇಂಡಿ ಒಕ್ಕೂಟಗಳಲ್ಲಿ ಪ್ರಧಾನಿ ಪದವಿಯನ್ನು ತಮಗೆ ಯಾರು ನೀಡುತ್ತಾರೋ ಅವರ ಜೊತೆ ಹೋಗಲು ಸಿದ್ಧ ಎಂಬ ಸಂದೇಶವನ್ನು ನಿತೀಶ್‌ ರವಾನಿಸಿದರೇ ಎಂಬ ಅನುಮಾನವೂ ಮೂಡಿದೆ.

ಜನತಾ ದಳ (ಸಂಯುಕ್ತ) ಬಿಹಾರದಲ್ಲಿ 14 ಸ್ಥಾನಗಳಲ್ಲಿ ಮುಂದಿದೆ ಬಿಜೆಪಿ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟು 40 ಲೋಕಸಭಾ ಕ್ಷೇತ್ರಗಳು ಇಲ್ಲಿವೆ. ಏತನ್ಮಧ್ಯೆ ಇಲ್ಲಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಷ್ಟ್ರೀಯ ಜನತಾದಳ ಐದು ಸ್ಥಾನ, ಕಾಂಗ್ರೆಸ್ ಎರಡು ಸ್ಥಾನ, ಕಮ್ಯುನಿಸ್ಟ್ ಪಕ್ಷ 1 ಸ್ಥಾನ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) 1 ಸ್ಥಾನ ಗಳಿಸಿವೆ.

ಇನ್ನೊಂದು ಬೆಳವಣಿಗೆಯಲ್ಲಿ, ಜೆಡಿಯು ಪಕ್ಷದ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಾಕಲಾದ ಒಂದು ಪೋಸ್ಟ್‌, ಇನ್ನಷ್ಟು ಅಚ್ಚರಿ ಮೂಡಿಸಿದೆ. ಅದರಲ್ಲಿ, ರಾಜ್ಯದಲ್ಲಿ ಪಕ್ಷವನ್ನು ಗೆಲ್ಲಿಸಿರುವ ನಿತೀಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಪಕ್ಷ, “ನ್ಯಾಯ್ ಕೆ ಸಾಥ್ ವಿಕಾಸ್ ಕಾ ಸಂಕಲ್ಪ್ ಹೋ ರಹಾ ಪೂರಾ (ನ್ಯಾಯದೊಂದಿಗೆ ಅಭಿವೃದ್ಧಿಯ ನಿರ್ಣಯವನ್ನು ಈಡೇರಿಸಲಾಗುತ್ತಿದೆ)” ಎಂದು ಬರೆದಿದೆ. ನಿತೀಶ್ ಕುಮಾರ್ ಅವರು ಅಭಿವೃದ್ಧಿ ಕುರಿತು ಮಾತನಾಡಿರುವ ವಿಡಿಯೋವನ್ನು ಪಕ್ಷವು ಹಂಚಿಕೊಂಡಿದೆ. ವಿಡಿಯೋದಲ್ಲಿರುವ ಹಿನ್ನೆಲೆ ಸಂಗೀತ ರಜನಿಕಾಂತ್ ಅವರ ಜೈಲರ್ ಚಿತ್ರದ್ದು.

ಇಲ್ಲಿ ʼನ್ಯಾಯʼ ಎಂಬ ಪದ ಕಾಂಗ್ರೆಸ್‌ನ ಪ್ರಣಾಳಿಕೆಯೊಂದಿಗೆ ತಳುಕು ಹಾಕಿಕೊಂಡಿದೆ. ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ʼನ್ಯಾಯಪತ್ರʼ ಎಂದು ಕರೆಯಲಾಗಿದೆ. ಆದರೆ, ʼವಿಕಾಸ್‌ʼ ಎಂಬ ಪದವು ಮೋದಿಯವರೊಂದಿಗೆ ತಳುಕು ಹಾಕಿಕೊಂಡಿದೆ. ಮೋದಿಯವರು ತಮ್ಮ ಭಾಷಣಗಳಲ್ಲಿ ಪದೇ ಪದೆ ಉಲ್ಲೇಖಿಸುವ ಸಂಗತಿಯೆಂದರೆ ʼಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್.ʼ ಹೀಗೆ ಎರಡೂ ಪದಗಳನ್ನು ಏಕಕಾಲಕ್ಕೆ ಬಳಸಿ, ಎರಡೂ ಒಕ್ಕೂಟಗಳ ಜೊತೆಗೆ ಹೋಗಲು ತಾನು ಸಿದ್ಧ ಎಂಬ ಸಂದೇಶವನ್ನು ಕೂಡ ನಿತೀಶ್‌ ರವಾನಿಸಿದ್ದಾರೆ ಎಂದು ತರ್ಕಿಸಲಾಗಿದೆ.

ಈ ಎರಡು ಸಂದೇಶಗಳ ಮೂಲಕ, ಪ್ರಧಾನಿ ಪದವಿಯನ್ನು ತನಗೆ ನೀಡಿದರೆ ತಾನು ಇಂಡಿಯಾ ಜೊತೆಗೂ ಹೋಗಲು ಸಿದ್ಧ ಎಂಬುದನ್ನು ನಿತೀಶ್‌ ಸಾರಿದ್ದಾರೆ ಎಂದು ಸಂದೇಹಿಸಲಾಗುತ್ತಿದೆ.

ಇದನ್ನೂ ಓದಿ: Election Results 2024: ನಿತೀಶ್‌ಕುಮಾರ್, ಚಂದ್ರಬಾಬು ನಾಯ್ಡು ನೆರವಿಲ್ಲದೆ ಮೋದಿ ಸರ್ಕಾರ ನಡೆಸಲಾಗದೆ?

Continue Reading

Lok Sabha Election 2024

Election Results 2024: ಅತಿ ಹೆಚ್ಚು ಮತ್ತು ಅತಿ ಕಡಿಮೆ ಅಂತರದಿಂದ ಗೆದ್ದ ಅಭ್ಯರ್ಥಿಗಳಿವರು!

Election Results 2024: ಇಡೀ ವಿಶ್ವವೇ ಕುತೂಹಲದಿಂದ ನೋಡುತ್ತಿದ್ದ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕೆಲವು ಕಡೆ ಅಭ್ಯರ್ಥಿಗಳು ತಮ್ಮ ಪ್ರತಿಸ್ಪರ್ಧಿಗಳಿಂತ ಭಾರೀ ಅಂತರದಿಂದ ಗೆದ್ದರೆ ಇನ್ನು ಕೆಲವೆಡೆ ಗೆಲುವಿನ ಅಂತರ ತೀರಾ ಕಡಿಮೆ ಕಂಡು ಬಂದಿದೆ. ಹಾಗಾದರೆ ಅತೀ ಹೆಚ್ಚು ಮತ್ತು ಅತೀ ಕಡಿಮೆ ಅಂತರದಿಂದ ಗೆದ್ದವರು ಯಾರು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Election Results 2024
Koo

ನವದೆಹಲಿ: ಇಡೀ ವಿಶ್ವವೇ ಕುತೂಹಲದಿಂದ ನೋಡುತ್ತಿದ್ದ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ (Election Results 2024). ಎನ್‌ಡಿಎ (NDA) ಮೈತ್ರಿಕೂಟ ಸತತ ಮೂರನೇ ಬಾರಿ ದೆಹಲಿ ಗದ್ದುಗೆ ಏರಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಸತತ ಸೋಲುಗಳಿಂದ ಕಂಗೆಟ್ಟಿದ್ದ ಕಾಂಗ್ರೆಸ್‌ (Congress)ಗೆ ಈ ಚುನಾವಣೆ ಚೇತರಿಕೆ ನೀಡಿದೆ. ಕೆಲವು ಕಡೆ ಅಭ್ಯರ್ಥಿಗಳು ತಮ್ಮ ಪ್ರತಿಸ್ಪರ್ಧಿಗಳಿಂತ ಭಾರೀ ಅಂತರದಿಂದ ಗೆದ್ದರೆ ಇನ್ನು ಕೆಲವೆಡೆ ಗೆಲುವಿನ ಅಂತರ ತೀರಾ ಕಡಿಮೆ ಕಂಡು ಬಂದಿದೆ. ಹಾಗಾದರೆ ಅತೀ ಹೆಚ್ಚು ಮತ್ತು ಅತೀ ಕಡಿಮೆ ಅಂತರದಿಂದ ಗೆದ್ದವರು ಯಾರು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಅತೀ ಹೆಚ್ಚು ಅಂತರದಿಂದ ಜಯ ಗಳಿಸಿದವರು

ಅಭ್ಯರ್ಥಿಕ್ಷೇತ್ರಪ್ರತಿಸ್ಪರ್ಧಿಅಂತರ
ಶಂಕರ್‌ ಲಾಲ್ವಾನಿ
(ಬಿಜೆಪಿ)
ಇಂದೋರ್‌
(ಮಧ್ಯ ಪ್ರದೇಶ)
ʼನೋಟಾʼ11.72 ಲಕ್ಷ
ರಕಿಬುಲ್ ಹುಸೇನ್
(ಕಾಂಗ್ರೆಸ್‌)
ಧುಬ್ರಿ
(ಅಸ್ಸಾಂ)
ಬದ್ರುದ್ದೀನ್ ಅಜ್ಮಲ್
(ಎಐಯುಡಿಎಫ್)
10.12 ಲಕ್ಷ
ಶಿವರಾಜ್‌ ಸಿಂಗ್‌ ಚೌಹಾನ್‌
(ಬಿಜೆಪಿ)
ವಿದಿಶಾ
(ಮಧ್ಯ ಪ್ರದೇಶ)
ಪ್ರತಾಪ್ ಭಾನು ಶರ್ಮಾ
(ಕಾಂಗ್ರೆಸ್)
8.2 ಲಕ್ಷ
ಸಿ.ಆರ್‌.ಪಾಟೀಲ್‌
(ಬಿಜೆಪಿ)
ನವ್ಸಾರಿ
(ಗುಜರಾತ್‌)
ನೈಶಾದ್ ಭಾಯ್ ಭೂಪತ್
ಭಾಯ್ ದೇಸಾಯಿ (ಕಾಂಗ್ರೆಸ್)
7.73 ಲಕ್ಷ
ಅಮಿತ್‌ ಶಾ
(ಬಿಜೆಪಿ)
ಗಾಂಧಿನಗರ (ಗುಜರಾತ್‌)ಸೋನಾಲ್ ಪಟೇಲ್ (ಕಾಂಗ್ರೆಸ್‌)7.44 ಲಕ್ಷ

ಅತೀ ಕಡಿಮೆ ಅಂತರದಿಂದ ಜಯ ಗಳಿಸಿದವರು

ಅಭ್ಯರ್ಥಿಕ್ಷೇತ್ರಪ್ರತಿಸ್ಪರ್ಧಿಅಂತರ
ರವೀಂದ್ರ ದತ್ತಾರಾಮ್ ವಾಯ್ಕರ್ (ಏಕನಾಥ್ ಶಿಂಧೆ ಶಿವಸೇನೆ)ಮುಂಬೈ ವಾಯುವ್ಯ (ಮಹಾರಾಷ್ಟ್ರ)ಅಮೋಲ್ ಗಜಾನನ್ ಕೀರ್ತಿಕರ್
(ಶಿವಸೇನೆ
ಯುಬಿಟಿ)
48
ಅಡೂರು ಪ್ರಕಾಶ್‌
(ಕಾಂಗ್ರೆಸ್‌)
ಆಟಿಂಗಲ್‌
(ಕೇರಳ)
ವಿ.ಜಾಯ್‌
(ಸಿಪಿಐ (ಎಂ)
684
ಅಜೇಂದ್ರ ಲೋಧಿ (ಸಮಾಜವಾದಿ ಪಾರ್ಟಿ)ಹಮೀರ್ಪುರ್
(ಉತ್ತರ ಪ್ರದೇಶ)
ಕುನ್ವರ್ ಪುಷ್ಪೇಂದ್ರ
ಸಿಂಗ್ (ಬಿಜೆಪಿ)
2,629
ರಮಾಶಂಕರ್ ರಾಜ್ಭರ್ (ಸಮಾಜವಾದಿ ಪಾರ್ಟಿ)ಸೇಲಂಪುರ್
(ಉತ್ತರ ಪ್ರದೇಶ)
ರವೀಂದ್ರ
ಕುಶಾವಾಹ (ಬಿಜೆಪಿ)
3,573

ರಾಜ್ಯವಾರು ಸರಾಸರಿ ಅಂತ

2024ರ ಲೋಕಸಭಾ ಚುನಾಚಣೆಯ ಜಯದ ಸರಾಸರಿ ಅಂತರ 1.6 ಲಕ್ಷ ಮತಗಳು. ಈ ಪೈಕಿ 5ಕ್ಕಿಂತ ಹೆಚ್ಚು ಸೀಟುಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಮಧ್ಯ ಪ್ರದೇಶ ಮೊದಲ ಸ್ಥಾನದಲ್ಲಿದೆ. ಇಲ್ಲಿ ಜಯದ ಅಂತರ 3.4 ಲಕ್ಷ ಮತಗಳು.

ಇನ್ನು ಎರಡನೇ ಸ್ಥಾನದಲ್ಲಿ ಗುಜರಾತ್‌ ಇದ್ದು ಇಲ್ಲಿ 2.8 ಲಕ್ಷ ಮತ ಮತ್ತು ಉತ್ತರಾಖಂಡದಲ್ಲಿ 2.3 ಲಕ್ಷ ಮತಗಳ ಅಂತರ ಕಂಡು ಬಂದಿದೆ. ತಮಿಳುನಾಡಿನಲ್ಲಿ 2.2 ಲಕ್ಷ ಮತಗಳ ಮಾರ್ಜಿನ್‌ ಕಂಡು ಬಂದಿದೆ. ಇನ್ನು ಪಂಜಾಬ್‌ನಲ್ಲಿ ಗೆಲುವಿನ ಸರಾಸರಿ ಅಂತರ 70,500 ದಾಖಲಾಗಿದೆ. ಉತ್ತರ ಪ್ರದೇಶದಲ್ಲಿ, ಮಹಾರಾಷ್ಟ್ರ, ಬಿಹಾರದಲ್ಲಿಯೂ ಒಂದು ಲಕ್ಷಕ್ಕಿಂತ ಕಡಿಮೆ ಕಂಡು ಬಂದಿದೆ.

ಇದನ್ನೂ ಓದಿ: Election Results 2024: 10 ಲಕ್ಷ ಮತಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿದ ಬಿಜೆಪಿಯ ಶಂಕರ್‌ ಲಾಲ್ವಾನಿ! ಗರಿಷ್ಠ ವೋಟುಗಳಿಂದ ಗೆದ್ದವರ ಮಾಹಿತಿ ಇಲ್ಲಿದೆ

Continue Reading
Advertisement
Election Results 2024
Lok Sabha Election 202424 mins ago

Election Results 2024: ಮೂರನೇ ಬಾರಿ ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಕೇಂದ್ರ ಸಚಿವ ಸಂಪುಟ ಸಭೆ

Valmiki Corporation Scam
ಪ್ರಮುಖ ಸುದ್ದಿ28 mins ago

Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

Election Results 2024
Lok Sabha Election 20241 hour ago

Election Results 2024: ಸರ್ಕಾರ ರಚನೆಯ ಕಸರತ್ತು; ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್

Nitish Kumar election results 2024
ಪ್ರಮುಖ ಸುದ್ದಿ1 hour ago

Election Results 2024: ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ, ಇಂಡಿಯಾ ಸೇರ್ಪಡೆ? ಸುಳಿವು ನೀಡಿದ ಎರಡು ಬೆಳವಣಿಗೆ!

Suicide attempt
ಪ್ರಮುಖ ಸುದ್ದಿ1 hour ago

Suicide Attempt : ಕಾಮಗಾರಿ ನಡೆಸಿದ 9 ಕೋಟಿ ರೂಪಾಯಿ ಬಿಲ್​ಬಾಕಿ , ಗುತ್ತಿಗೆದಾರನಿಂದ ಆತ್ಮಹತ್ಯೆ ಯತ್ನ

Murder Case
ಪ್ರಮುಖ ಸುದ್ದಿ2 hours ago

Murder News : ಹಾಸನದಲ್ಲಿ ನಟೋರಿಯಸ್​ ರೌಡಿ ಚೈಲ್ಡ್​ ರವಿ ಬರ್ಬರ ಕೊಲೆ

Election Results 2024
Lok Sabha Election 20242 hours ago

Election Results 2024: ಅತಿ ಹೆಚ್ಚು ಮತ್ತು ಅತಿ ಕಡಿಮೆ ಅಂತರದಿಂದ ಗೆದ್ದ ಅಭ್ಯರ್ಥಿಗಳಿವರು!

Chikkodi Lok Sabha Result:
ಪ್ರಮುಖ ಸುದ್ದಿ2 hours ago

Chikkodi Lok Sabha Result : ಕಾಂಗ್ರೆಸ್​ ವಿಜಯೋತ್ಸವದಲ್ಲಿ ಪಾಕಿಸ್ತಾನ ಪರ ಜೈಕಾರ ಕೂಗಿದ ಜಮೀರನ ಬಂಧನ

Election Results 2024 chandrababu naidu nitish kumar 2
ಪ್ರಮುಖ ಸುದ್ದಿ2 hours ago

Election Results 2024: ನಿತೀಶ್‌ಕುಮಾರ್, ಚಂದ್ರಬಾಬು ನಾಯ್ಡು ನೆರವಿಲ್ಲದೆ ಮೋದಿ ಸರ್ಕಾರ ನಡೆಸಲಾಗದೆ?

Election Results 2024
ದೇಶ3 hours ago

Election Results 2024: ಸುದೀರ್ಘ ಅವಧಿಗೆ ಪ್ರಧಾನಿ ಆಗ್ತಾರಾ ಮೋದಿ?; ನೆಹರೂ, ಇಂದಿರಾ ಸಾಲಿಗೆ ಸೇರೋದು ಪಕ್ಕಾನಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌