Actor Yash: ಯಶ್ ಫ್ಯಾನ್ಸ್ ದುರಂತ: ಗಾಯಾಳುಗಳಿಗೆ ಒಂದು ಲಕ್ಷ ರೂ. ಪರಿಹಾರ ಕೊಟ್ಟ ಯಶ್‌! - Vistara News

ಸ್ಯಾಂಡಲ್ ವುಡ್

Actor Yash: ಯಶ್ ಫ್ಯಾನ್ಸ್ ದುರಂತ: ಗಾಯಾಳುಗಳಿಗೆ ಒಂದು ಲಕ್ಷ ರೂ. ಪರಿಹಾರ ಕೊಟ್ಟ ಯಶ್‌!

ಯಶ್ (Actor Yash)​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಮೃತ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್​ ನೀಡಿದ್ದರು. ಅದೇ ವೇಳೆ ಗಾಯಾಳುಗಳ ಬ್ಯಾಂಕ್ ಮಾಹಿತಿ ಪಡೆದು ಪರಿಹಾರದ ಭರವಸೆ ನೀಡಿ ಹೋಗಿದ್ದರು.

VISTARANEWS.COM


on

Yash fans Gadag tragedy 1 lakh for the injured Fans
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಕೆಲವು ಯುವಕರು ಸೇರಿ ಬೃಹತ್‌ ಗಾತ್ರದ ಕಟೌಟ್‌ ರೂಪಿಸಿ ಅದನ್ನು ಕಟ್ಟುವ ಹಂತದಲ್ಲಿ ಅದು ವಿದ್ಯುತ್‌ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು. ಯಶ್ (Actor Yash)​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಮೃತ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್​ ನೀಡಿದ್ದರು. ಅದೇ ವೇಳೆ ಗಾಯಾಳುಗಳ ಬ್ಯಾಂಕ್ ಮಾಹಿತಿ ಪಡೆದು ಪರಿಹಾರದ ಭರವಸೆ ನೀಡಿ ಹೋಗಿದ್ದರು. ಇದೀಗ ನಾಲ್ಕು ಜನ ಗಾಯಾಳುಗಳ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ. ಬ್ಯಾಂಕ್‌ ಖಾತೆಗೆ ನೇರವಾಗಿ ಹಾಕಿದ್ದಾರೆ.

ಏನಿದು ಘಟನೆ?

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಕೆಲವು ಯುವಕರು ಸೇರಿ ಬೃಹತ್‌ ಗಾತ್ರದ ಕಟೌಟ್‌ ರೂಪಿಸಿ ಅದನ್ನು ಕಟ್ಟುವ ಹಂತದಲ್ಲಿ ಅದು ವಿದ್ಯುತ್‌ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು. ಇದಾದ ಬಳಿಕ ಯಶ್‌ ಅವರು ಮೃತಪಟ್ಟ ಮೂವರು ಅಭಿಮಾನಿಗಳ (Actor Yash) ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. 

ಇದನ್ನೂ ಓದಿ: Actor Yash: ಮಲೇಷಿಯಾಗೆ ಹಾರಿದ ʻರಾಕಿಂಗ್‌ ಸ್ಟಾರ್‌’ ಯಶ್‌ʼ: ಫೋಟೊ ವೈರಲ್‌!

ಅಭಿಮಾನಿಗಳು ಹುಟ್ಟು ಹಬ್ಬದ ಸಂದರ್ಭದಲ್ಲಿ (Yash Birthday) ತಮ್ಮ ಅಭಿಮಾನವನ್ನು ಬ್ಯಾನರ್‌, ಕಟೌಟ್‌ಗಳ ಮೂಲಕ ತೋರಿಸುವ ಬದಲು ಒಳ್ಳೆಯ ಕೆಲಸದ ಮೂಲಕ, ಒಳ್ಳೆಯ ಬದುಕಿನ ಮೂಲಕ ತೋರಿಸಬೇಕು ಎಂದು ಯಶ್‌ ಈ ಹಿಂದೆ ಮನವಿ ಮಾಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಚಿತ್ರ ನಟ ಯಶ್‌ ಅವರು ಸಂಜೆಯ ಹೊತ್ತಿಗೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ಮೂಲಕ ಸೂರಣಗಿಗೆ ಆಗಮಿಸಿದ್ದರು. ಅಲ್ಲಿ ಮೃತರ ಮನೆಗಳಿಗೆ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Daali Dhananjay : ಯಾರೂ ಗುರುತಿಸದಂತೆ ಮಾಸ್ಕ್​ ಧರಿಸಿ ಮೆಟ್ರೊದಲ್ಲಿ ಪ್ರಯಾಣಿಸಿದ ನಟ ಡಾಲಿ ಧನಂಜಯ್​

Daali Dhananjay : ಡಾಲಿ ಧನಂಜಯರ್ ಅವರು ಕೆಂಗೇರಿಯಿಂದ ಕುಂದಲಹಳ್ಳಿಯ ತನಕ ಮೆಟ್ರೊದಲ್ಲಿ ಪ್ರಯಾಣ ಮಾಡಿದ್ದಾರೆ. ಮೆಟ್ರೊ ರೈಲಿನಲ್ಲಿ ಕುಳಿತಿದ್ದ ವೇಳೆ ಅವರು ಬಾಕ್ಸ್​ ಒಂದನ್ನು ಹಿಡಿದುಕೊಂಡಿದ್ದರು. ಕೆಂಗೇರಿಯಿಂದ ಕುಂದಲಹಳ್ಳಿಯವರೆಗೆ ಅವರು 36 ಕಿಲೋ ಮೀಟರ್ ಮೆಟ್ರೊ ಹಾದಿಯಲ್ಲಿ ಪ್ರಯಾಣಿಸಿದ್ದಾರೆ.

VISTARANEWS.COM


on

Dali Dhananjay
Koo

ಬೆಂಗಳೂರು: ‘ಕೋಟಿ’ ಸಿನಿಮಾದ ಯಶಸ್ಸಿನಲ್ಲಿರುವ ಪ್ರತಿಭಾವಂತ ನಟ ಡಾಲಿ ಧನಂಜಯ್ (Daali Dhananjay)​ ಶನಿವಾರ ಸಂಜೆ ತಮ್ಮ ಕಾರನ್ನು ಬಿಟ್ಟು ಮೆಟ್ರೊ ರೈಲಿನಲ್ಲಿ ಸಂಚರಿಸಿದರು. ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಅವಕಾಶಗಳು ಹಾಗೂ ಯಶಸ್ಸಿನ ಮೂಲಕ ಮಿಂಚುತ್ತಿರುವ ಅವರು ಯಾವುದೇ ಹಮ್ಮು ಇಲ್ಲದೆ ಮೆಟ್ರೊ ರೈಲಿನಲ್ಲಿ ಸಂಚರಿಸಿದರು. ಡಾಲಿ ಧನಂಜಯ್ ಅವರು ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವ ವೇಳೆ ಮಾಸ್ಕ್​ ಹಾಗೂ ಕನ್ನಡಕ ಧರಿಸಿಕೊಂಡಿದ್ದರು. ಹೀಗಾಗಿ ಬಹುತೇಕರಿಗೆ ಅವರು ಪರಿಚಯ ತಕ್ಷಣಕ್ಕೆ ಸಿಗಲಿಲ್ಲ.

ಡಾಲಿ ಧನಂಜಯರ್ ಅವರು ಕೆಂಗೇರಿಯಿಂದ ಕುಂದಲಹಳ್ಳಿಯ ತನಕ ಮೆಟ್ರೊದಲ್ಲಿ ಪ್ರಯಾಣ ಮಾಡಿದ್ದಾರೆ. ಮೆಟ್ರೊ ರೈಲಿನಲ್ಲಿ ಕುಳಿತಿದ್ದ ವೇಳೆ ಅವರು ಬಾಕ್ಸ್​ ಒಂದನ್ನು ಹಿಡಿದುಕೊಂಡಿದ್ದರು. ಕೆಂಗೇರಿಯಿಂದ ಕುಂದಲಹಳ್ಳಿಯವರೆಗೆ ಅವರು 36 ಕಿಲೋ ಮೀಟರ್ ಮೆಟ್ರೊ ಹಾದಿಯಲ್ಲಿ ಪ್ರಯಾಣಿಸಿದ್ದಾರೆ. ಸುಮಾರು ಒಂದೂವರೆ ಗಂಟೆ ಅವಧಿಯ ಪ್ರಯಾಣದ ವೇಳೆ ಅವರು ಮೊಬೈಲ್​ ವೀಕ್ಷಿಸುತ್ತಿದ್ದರು.

ಡಾಲಿ ಧನಂಜಯ್​ ಅವರು ಪರಮ್​ ನಿರ್ದೇಶನದ ಕೋಟಿ ಸಿನಿಮಾದ ಯಶಸ್ವಿನಲ್ಲಿದ್ದಾರೆ. ಮಧ್ಯಮ ವರ್ಗದ ಕುಟುಬದ ಕತೆಯನ್ನು ಹೊಂದಿರುವ ಈ ಸಿನಿಮಾವು ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ತೆರೆ ಕಾಣುತ್ತಿದೆ. ಇದೇ ವೇಳೆ ಕೆಲವು ಸೆಲೆಬ್ರಿಟಿಗಳು ಸಿನಿಮಾವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಡಾಲಿ ಧನಂಜರ್ ಅವರು ಪಾತ್ರಾಭಿನಯಕ್ಕೆ ಹೆಚ್ಚಿನ ಮಾರ್ಕ್​ಗಳನ್ನು ಕೊಟ್ಟಿದ್ದಾರೆ. ಜಿಯೋ ಸ್ಟುಡಿಯೋನಿರ್ಮಿಸಿರುವ ಸಿನಿಮಾದಲ್ಲಿ ಧನಂಜಯ್ ಅವರಲ್ಲದೆ, ಮೋಕ್ಷಾ ಕುಶಾಲ್, ರಮೇಶ್ ಇಂದಿರಾ, ತಾರಾ, ರಂಗಾಯಣ ರಘು, ಪೃಥ್ವಿ ಶಾಮನೂರು, ದುನಿಯಾ ವಿಜಯ್ ಮೊದಲಾದವರು ಇದ್ದಾರೆ.

ಇದನ್ನೂ ಓದಿ: Actor Darshan: ಜೈಲು ಸೇರಿದ ನಟ ದರ್ಶನ್ ಮುಂದೆ ಇರೋ ಆಯ್ಕೆಗಳೇನು?

`ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ಡಾಲಿ ಧನಂಜಯ್‌

ಬೆಂಗಳೂರು: ಕನ್ನಡ ಸಿನಿಮಾ ರಂಗದಲ್ಲಿ ʻನಾಡಪ್ರಭು ಕೆಂಪೇಗೌಡʼರ (nadaprabhu kempegowda) ಜೀವನವನ್ನು (Kannada New Movie) ಆಧರಿಸಿದ ಸಂಪೂರ್ಣ ಸಿನಿಮಾ ಬಾರದೇ ಇದ್ದರೂ, ಕೆಲವು ಚಿತ್ರಗಳಲ್ಲಿ ಇವರ ಝಲಕ್‌ಗಳು ಕಾಣಿಸಿಕೊಂಡಿವೆ. ಅಷ್ಟೇ ಅಲ್ಲ ಹಾಡುಗಳಲ್ಲೂ ಮಿಂಚಿದ್ದಾರೆ. ಅಲ್ಲದೇ, ಕೆಂಪೇಗೌಡರ ಪ್ರತಿಮೆಯನ್ನು ಹಿನ್ನೆಲೆಯಾಗಿ ಇಟ್ಟುಕೊಂಡು ಹೆಣೆದಿರುವ ಹಲವು ದೃಶ್ಯಗಳನ್ನೂ ಕಾಣಬಹುದಾಗಿದೆ. ಆದರೀಗ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರವರ ಜೀವನ ಚರಿತ್ರೆ ಸಿನಿಮಾವಾಗುತ್ತಿದೆ. ʻಬೆಂದಕಾಳೂರುʼ ಕಟ್ಟಿದ ನಾಡಪ್ರಭುವಿನ‌ ಕಥೆಯನ್ನು ತೆರೆಗೆ ತರುವ ಕಾಲ ಕೂಡಿ ಬಂದಿದೆ. ಧರ್ಮಬೀರು ನಾಡಪ್ರಭು ಕೆಂಪೇಗೌಡ ಎಂಬ ಶೀರ್ಷಿಕೆಯಡಿ ಸಿನಿಮಾ ಘೋಷಣೆಯಾಗಿದೆ. ನಾಡಪ್ರಭು ಕೆಂಪೇಗೌಡರಾಗಿ ಡಾಲಿ ಧನಂಜಯ್ ಅಬ್ಬರಿಸಲಿದ್ದಾರೆ.

ಆ ಸಿನಿಮಾದಲ್ಲಿ ದರ್ಶನ್ ಅಥವಾ ಸುದೀಪ್ ನಟಿಸುತ್ತಾರಾ ಎಂಬ ಚರ್ಚೆಗಳು ಸಹ ನಡೆದಿದ್ದವು, ಆದರೆ ಈಗ ಡಾಲಿ ಧನಂಜಯ್ ಕೆಂಪೇಗೌಡರ ಪಾತ್ರದಲ್ಲಿ ಮಿಂಚಲಿದ್ದಾರೆ. ಈಗಾಗಲೇ ಪೋಸ್ಟರ್ ಬಿಡುಗಡೆ ಆಗಿದೆ. ನಿರ್ದೇಶಕ ಟಿಎಸ್ ನಾಗಾಭರಣ ನಿರ್ದೇಶನ ಮಾಡಲಿದ್ದಾರೆ. ಸಿನಿಮಾಕ್ಕೆ ಎಂಎನ್ ಶಿವರುದ್ರಪ್ಪ, ಶುಭಂ ಗುಂಡಾಲ ನಿರ್ಮಾಣ ಮಾಡುತ್ತಿದ್ದಾರೆ. ‘ಸಂತ ಶಿಷುನಾಳ ಶರೀಫ, ‘ನೀಲ’, ‘ಕಲ್ಲರಳಿ ಹೂವಾಗಿ’ ಇನ್ನೂ ಕೆಲವು ಪೀರಿಯಡ್ ಸಿನಿಮಾಗಳನ್ನು ನಾಗಾಭರಣ ನಿರ್ದೇಶಿಸಿದ್ದಾರೆ. ಈಗ ಕೆಂಪೇಗೌಡರ ಕತೆಯನ್ನು ಸಿನಿಮಾ ಮಾಡಲಿದ್ದಾರೆ.

.ಈ ಹಿಂದೆ ಅಲ್ಲಮನ ಕುರಿತಾದ ಸಿನಿಮಾದಲ್ಲಿ ಧನಂಜಯ್ ನಟಿಸಿದ್ದರು. ಧನಂಜಯ್ ಈ ಪಾತ್ರಕ್ಕಾಗಿ ವಿಶೇಷ ತಯಾರಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದೆ ದಿನೇಶ್ ಬಾಬು ಅವರು ನಾಡಪ್ರಭು ಕೆಂಪೇಗೌಡರ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ‘ನಾಗಾಭರಣ ನ್ಯಾಯಾಲಯದ ಮೂಲಕ ತಡೆ ತಂದರು.

ಇದೀಗ ಈ ‘ನಾಡಪ್ರಭು ಕೆಂಪೇಗೌಡ’ ಸಿನಿಮಾಕ್ಕೆ ನಾಗಾಭರಣ ಅವರೇ ಚಿತ್ರಕತೆ ಬರೆದಿದ್ದು, ಸಾಹಿತಿ ಪ್ರತಿಭಾ ನಂದಕುಮಾರ್ ಅವರು ಬರವಣಿಗೆಯಲ್ಲಿ ಸಹಾಯ ಮಾಡಲಿದ್ದಾರೆ. ನಾಗಾಭರಣ ಅವರ ಪುತ್ರ ನಿರ್ದೇಶಕ ಪನ್ನಗಾಭರಣ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಲಿದ್ದಾರೆ. ವಾಸುಕಿ ವೈಭವ್ ಸಂಗೀತ ನೀಡಲಿದ್ದಾರೆ. ಶಶಿಧರ ಅಡಪ ಅವರು ಸಿನಿಮಾದ ಸೆಟ್ ನೋಡಿಕೊಳ್ಳುತ್ತಿದ್ದಾರೆ.

Continue Reading

ರಾಜಕೀಯ

Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

Actor Darshan: ಸಾಕಷ್ಟು ಊಹಾಪೋಹಗಳ ಮಧ್ಯೆ ದರ್ಶನ್ ಪ್ರಕರಣದಲ್ಲಿ ಸತೀಶ್ ರೆಡ್ಡಿ ಅವರ ಹೆಸರು ಚರ್ಚೆಗೆ ಗುರಿಯಾಗಿತ್ತು. ಇದೀಗ ಮಾಧ್ಯಮದ ಮುಂದೆ ಸತೀಶ್‌ ರೆಡ್ಡಿ ʻʻನಾನು ದರ್ಶನ್ ಅವರನ್ನು ಸೇಫ್ ಮಾಡುತ್ತಿರುವ ಸುದ್ದಿ ಸುಳ್ಳು.. ಇಂಡಸ್ಟ್ರಿಯ ಬಹುತೇಕರು ನನಗೆ ಕ್ಲೋಸ್ ಫ್ರೆಂಡ್ಸ್ʼʼಎಂದಿದ್ದಾರೆ.

VISTARANEWS.COM


on

Actor darshan Satish Reddy On Darshan Case
Koo

ಬೆಂಗಳೂರು: ನಟ ದರ್ಶನ್ (Actor Darshan) ಅವರನ್ನು ಸೇಫ್ ಮಾಡಲು ಪ್ರಭಾವಿ ಶಾಸಕರು, ಸಚಿವರು ಪ್ರಯತ್ನಿಸಿದ್ದರು ಎನ್ನುವ ಮಾತು ಕೇಳಿ ಬಂದಿತ್ತು. ನಟ ದರ್ಶನ್ ಬಂಧನದ ಬಳಿಕ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಸಾಕಷ್ಟು ಊಹಾಪೋಹಗಳ ಮಧ್ಯೆ ದರ್ಶನ್ ಪ್ರಕರಣದಲ್ಲಿ ಸತೀಶ್ ರೆಡ್ಡಿ ಅವರ ಹೆಸರು ಚರ್ಚೆಗೆ ಗುರಿಯಾಗಿತ್ತು. ಇದೀಗ ಮಾಧ್ಯಮದ ಮುಂದೆ ಸತೀಶ್‌ ರೆಡ್ಡಿ ʻʻನಾನು ದರ್ಶನ್ ಅವರನ್ನು ಸೇಫ್ ಮಾಡುತ್ತಿರುವ ಸುದ್ದಿ ಸುಳ್ಳು.. ಇಂಡಸ್ಟ್ರಿಯ ಬಹುತೇಕರು ನನಗೆ ಕ್ಲೋಸ್ ಫ್ರೆಂಡ್ಸ್ʼʼಎಂದಿದ್ದಾರೆ.

ಸತೀಶ್ ರೆಡ್ಡಿ ಮಾತನಾಡಿ ʻ ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು.. ಇಂಡಸ್ಟ್ರಿಯ ಬಹುತೇಕರು ನನಗೆ ಕ್ಲೋಸ್ ಫ್ರೆಂಡ್ಸ್.. ನಾನು ದರ್ಶನ್ ಭೇಟಿಯಾಗಿ 3 ತಿಂಗಳು ಆಗಿದೆ. ದರ್ಶನ್ ವಿಚಾರದಲ್ಲಿ ನನ್ನ ಹೆಸರು ತರುತ್ತಿರುವುದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗ್ಬೇಕು.. ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು.. ನಾನು ಯಾರ ಬಳಿಯೂ ಕೇಳಿಲ್ಲ.. ನಾನು ಒತ್ತಡ ಹಾಕ್ತಿದ್ದೀನಿ ಅನ್ನೋದು ಸುಳ್ಳು.. ನನಗೆ ಕಾಲು ಮುರಿದಿದ್ದ ಸಂದರ್ಭದಲ್ಲಿ ದರ್ಶನ್ ನನ್ನನ್ನು ಭೇಟಿಯಾಗಿದ್ರು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗ್ಬೇಕು. ನಾನು ಈ ವಿಚಾರವಾಗಿ ದರ್ಶನ್ ಪರ ನಿಲ್ಲಲ್ಲ.. ದರ್ಶನ್ ತಪ್ಪು ಮಾಡಿದ್ದಾರಾ, ಇಲ್ವಾ ಅನ್ನೋದು ನ್ಯಾಯಾಲಯದ ಮೆಟ್ಟಿಲಲ್ಲಿದೆ. ಮುಂದೆ ನೋಡೋಣʼʼಎಂದಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹತ್ಯೆ ಶ್ವಾನದ ಮೇಲೆ ʻಆನೆʼ ದಾಳಿ ಮಾಡಿದಂತೆ ಎಂದ ರಾಮ್​ ಗೋಪಾಲ್ ವರ್ಮಾ!

ದರ್ಶನ್ ಅವರನ್ನು ಬಚಾವ್ ಮಾಡಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎನ್ನುತ್ತಿದ್ದಂತೆ ಅವರು ಯಾರಾಗಿರಬಹುದು ಎನ್ನುವ ಚರ್ಚೆಯೂ ಜೋರಾಗಿತ್ತು. ದರ್ಶನ್​ ಹಾಗೂ ಆತನ ಗ್ಯಾಂಗ್​ನ ಸದಸ್ಯರು ಇದ್ದ ಪೊಲೀಸ್ ಠಾಣೆಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು . ವಿಐಪಿ ಆರೋಪಿಗಳ ಮೇಲೆ ದಾಳಿಯಾಗುವ ಅಥವಾ ಇನ್ಯಾವುದೇ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಠಾಣೆಯ ಹೊರಗಡೆ ಕೆಎಸ್​ಆರ್​​ಪಿ ಪೊಲೀಸ್​ ತಂಡವೊಂದನ್ನು ನಿಯೋಜಿಸಲಾಗಿತ್ತು.

ಇಂದು ನಟ ದರ್ಶನ್ ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಜೂನ್ 11ರಂದು ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿನಲ್ಲಿ ದರ್ಶನ್‌ನನ್ನು ಬಂಧಿಸಿದ್ದರು. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ.

Continue Reading

ಸ್ಯಾಂಡಲ್ ವುಡ್

Actor Darshan: ರೇಣುಕಾಸ್ವಾಮಿ ಹತ್ಯೆ ಶ್ವಾನದ ಮೇಲೆ ʻಆನೆʼ ದಾಳಿ ಮಾಡಿದಂತೆ ಎಂದ ರಾಮ್​ ಗೋಪಾಲ್ ವರ್ಮಾ!

Actor Darshan: ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

VISTARANEWS.COM


on

Actor Darshan Ram Gopal Varma says ELEPHANT attacking a DOG
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಜೈಲು ಸೇರಿದ್ದಾರೆ. ಈ ಪ್ರಕರಣದ ಬಗ್ಗೆ ರಾಮ್​ ಗೋಪಾಲ್ ವರ್ಮಾ ಈ ಹಿಂದೆ ʻʻದರ್ಶನ್ ಅವರು ಕೊಲೆ ಕೇಸ್​ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆʼʼ ಎಂಬರ್ಥದಲ್ಲಿ ಮಾತನಾಡಿದ್ದರು. ಆದರೀಗ ಹೊಸ ಟ್ವೀಟ್‌ ಶೇರ್‌ ಮಾಡಿ ʻʻರೇಣುಕಾ ಸ್ವಾಮಿಯ ಮೇಲೆ ದರ್ಶನ್ ದಾಳಿ ಮಾಡಿರುವುದು, ಆನೆ ಶ್ವಾನದ ಮೇಲೆ ದಾಳಿ ಮಾಡಿದಂತೆʼʼಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ರಾಮ್​ ಗೋಪಾಲ್ ವರ್ಮಾ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻ ರೇಣುಕಾ ಸ್ವಾಮಿಯ ಮೇಲೆ ದರ್ಶನ್ ದಾಳಿ ಮಾಡಿರುವುದು ಆನೆ ಶ್ವಾನದ ಮೇಲೆ ದಾಳಿ ಮಾಡಿದಂತೆ. ಶ್ವಾನ ಅನ್ನೋದು ಅವಹೇಳನಕಾರಿಯಾಗಿ ಅಲ್ಲ. ಆದರೆ ಗಾತ್ರದಲ್ಲಿ ಮಾತ್ರ. ನಾಯಿ ಬೊಗಳಿತು ಎಂದು ಆನೆ ಹೋಗಿ ದಾಳಿ ಮಾಡಿದರೆ ಏನಾಗಬಹುದು? ಖಂಡಿತವಾಗಿಯೂ ಸಾವೇ’ ಎಂದಿದ್ದಾರೆ ರಾಮ್ ಗೋಪಾಲ್ ವರ್ಮಾ. ದರ್ಶನ್ ಅವರನ್ನು ಆನೆ ಎಂದು ಕರೆದಿದ್ದು, ರೇಣುಕಾ ಸ್ವಾಮಿಯನ್ನು ಶ್ವಾನ (ಗಾತ್ರದಲ್ಲಿ) ಎಂದು ಕರೆದಿದ್ದಾರೆ.

ಈ ಹಿಂದೆ ಆರ್‌ಜಿವಿ ಎಕ್ಸ್‌ನಲ್ಲಿ ʻʻ”ಚಿತ್ರ ನಿರ್ಮಾಪಕರು ಚಿತ್ರಕಥೆಯನ್ನು ಅಂತಿಮಗೊಳಿಸಿದ ನಂತರವೇ ಚಿತ್ರೀಕರಣವನ್ನು ಪ್ರಾರಂಭಿಸುತ್ತಾರೆ. ಚಿತ್ರೀಕರಣ ನಡೆಯುತ್ತಿರುವಾಗ ಸಾಕಷ್ಟು ಬಾರಿ ನಿರ್ಮಾಪಕರು ಬರೆಯುತ್ತಾರೆ. ಆದರೆ ದರ್ಶನ್ ಕೊಲೆ ಪ್ರಕರಣದಲ್ಲಿ, ಸಿನಿಮಾ ಬಿಡುಗಡೆ ಆದ ಬಳಿಕ ಚಿತ್ರಕಥೆ ಬರೆಯಲಾಗುತ್ತಿದೆ’ ಎಂದಿದ್ದಾರೆ. ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್​ಜಿವಿ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಇನ್ನೊಂದು ಪೋಸ್ಟ್‌ನಲ್ಲಿ ʻʻವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸುತ್ತಿರುವ ಅಭಿಮಾನಿಯನ್ನು ಕೊಲ್ಲಲು ಸ್ಟಾರ್​ ನಟ ಕಟ್ಟರ್​​ ಅಭಿಮಾನಿಗಳನ್ನೇ ಬಳಿಸಿಕೊಂಡಿದ್ದಾರೆ. ಇದು ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿಯ ವಿಲಕ್ಷಣತೆಗೆ ಸೂಕ್ತ ಉದಾಹರಣೆ. ವ್ಯಕ್ತಿ ಆರಾಧನೆ ಅತಿರೇಕಕ್ಕೆ ಹೋದರೆ ಯಾವ ರೀತಿಯ ದುರಂತ ಸಂಭವಿಸಬಹುದು ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ”ಎಂದು ಬರೆದುಕೊಂಡಿದ್ದರು.

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ಕಸ್ಟಡಿಯಲ್ಲಿ ʻಡಿ ಬಾಸ್‌ʼ; ನೆಚ್ಚಿನ ನಟನ ವಿರುದ್ಧ ತಿರುಗಿ ಬಿದ್ರಾ ʻದಚ್ಚುʼ ಫ್ಯಾನ್ಸ್?

Actor Darshan: ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ.

VISTARANEWS.COM


on

Actor Darshan fans turn against D boss
Koo

ಬೆಂಗಳೂರು: ನಟ ದರ್ಶನ್ (Actor Darshan) ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ. ಕೋರ್ಟ್ ವಿಚರಣೆಗೆ ಮೊದಲೇ ಬಹುತೇಕ ದಚ್ಚು ಅಭಿಮಾನಿಗಳು ನಟನ ವಿರುದ್ಧ ತಿರುಗಿ ಬಿದ್ದಿದ್ದಾರೆ.

ನಟ ದರ್ಶನ್ ಹಾಗೂ ಅವರ ತಂಡದ ಕರಾಳ ಮುಖ ಒಂದೊಂದೇ ಬಯಲು ಆಗುತ್ತಿದ್ದಂತೆ ದರ್ಶನ್ ಮೇಲೆ ಅಭಿಮಾನಿಗಳಿಗೆ ಅಭಿಮಾನ ಕಡಿಮೆ ಆದಂತಿದೆ. ದರ್ಶನ್ ಅಂದ್ರೆ ಜೀವ ಬಿಡ್ತಿದ್ದ ಫ್ಯಾನ್ಸ್, ಇದೀಗ ದರ್ಶನ್ ಹೆಸರನ್ನು ಎಲ್ಲಿಯೂ ನೋಡಲು ಇಷ್ಟ ಪಡುತ್ತಿಲ್ಲ. ಬೈಕ್‌ನಲ್ಲಿ, ಎಲ್ಲಾದರೂ ದರ್ಶನ್‌ ಹೆಸರು ಕಂಡರೆ ಅದನ್ನು ಅಳಿಸುತ್ತಿದ್ದಾರೆ. ದಚ್ಚು ಹೆಸರು ತೆಗೆಯುತ್ತಿರುವ ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಕೆಲವರು ಈ ವಿಡಿಯೊಗೆ ಸಾಥ್‌ ಕೊಟ್ಟಿದ್ದಾರೆ. ʻʻನಿಮ್ಮ ತಂದೆ ತಾಯಿಗಳು ನಿಜವಾದ ಹಿರೋಗಳು ಅವರೆ ನಿಮಗೆ ಪ್ರೇರಣೆʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ʻʻಕಷ್ಟದ ಸಮಯದಲ್ಲಿ ಬೆನ್ನ ಹಿಂದೆ ಇರುವರು ನಿಜವಾದ ಅಭಿಮಾನಿಗಳುʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ಬದುಕು ನಾಯಿ ಪಾಡು ಆಗ್ಬಿಟ್ಟಿದೆ ಎಂದಿದ್ದ ದರ್ಶನ್;‌ ʻದಚ್ಚುʼ ಏಳು ಬೀಳು ಕುರಿತು ಗಣೇಶ್‌ ಕಾಸರಗೋಡು ಹೇಳಿದ್ದು ಹೀಗೆ!

ಪೊಲೀಸರಿಂದ ಸಿದ್ಧತೆ

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಆರ್.ಆರ್‌.ನಗರ ಶೆಡ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಾಕ್ಷ್ಯ ಕಲೆ ಹಾಕಿದ್ದಾರೆ. ಈಗಾಗಲೇ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತಿತರರ ಹೇಳಿಕೆಗಳನ್ನೂ ದಾಖಲಿಸಲಾಗಿದೆ.

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ದರ್ಶನ್‌ ಜೈಲಿಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

Continue Reading
Advertisement
Suraj Revanna Case
ಕರ್ನಾಟಕ16 mins ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ54 mins ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ1 hour ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Menopausal Weight Gain
ಆರೋಗ್ಯ2 hours ago

Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Vastu Tips
ಧಾರ್ಮಿಕ2 hours ago

Vastu Tips: ತಿಳಿದಿರಲಿ, ಕನ್ನಡಿಯೂ ನುಡಿಯುತ್ತದೆ ನಮ್ಮ ಭವಿಷ್ಯ!

Virat kohli
ಪ್ರಮುಖ ಸುದ್ದಿ3 hours ago

Virat Kohli : ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ ವಿರಾಟ್​ ಕೊಹ್ಲಿ

Dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಮಡದಿಯ ಪ್ರೀತಿಗೆ ಸೋಲುವಿರಿ; ಮನೆಯಲ್ಲಿ ಸಂತೋಷದ ದಿನ

NEET UG
ಪ್ರಮುಖ ಸುದ್ದಿ8 hours ago

NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

T20 world cup 2024
ಪ್ರಮುಖ ಸುದ್ದಿ9 hours ago

T20 World Cup 2024 : ಬಾಂಗ್ಲಾದೇಶ ವಿರುದ್ಧ ಭಾರತಕ್ಕೆಭರ್ಜರಿ 50 ರನ್​ಗಳ ಭರ್ಜರಿ ಗೆಲುವು

Mangalya chain was stolen by pretending to be a police in Shira
ಕರ್ನಾಟಕ9 hours ago

Theft Case: ಶಿರಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯ ಮಾಂಗಲ್ಯ ಕಳವು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌