Hampi Utsav 2024: ಹಂಪಿ ಉತ್ಸವ; ಗಮನ ಸೆಳೆದ ಸಾವಯವ, ಸಿರಿಧಾನ್ಯಗಳ ವಸ್ತು ಪ್ರದರ್ಶನ - Vistara News

ವಿಜಯನಗರ

Hampi Utsav 2024: ಹಂಪಿ ಉತ್ಸವ; ಗಮನ ಸೆಳೆದ ಸಾವಯವ, ಸಿರಿಧಾನ್ಯಗಳ ವಸ್ತು ಪ್ರದರ್ಶನ

Hampi Utsav 2024: ಹಂಪಿ ಉತ್ಸವದ ಅಂಗವಾಗಿ ಕೃಷಿ ಇಲಾಖೆಯಿಂದ ಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಏರ್ಪಡಿಸಲಾಗಿರುವ ಸಾವಯವ ಮತ್ತು ಸಿರಿಧಾನ್ಯಗಳ ವಸ್ತು ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ದೊರೆತಿದೆ.

VISTARANEWS.COM


on

Hampi Utsav Organic Cereals Material Display inauguration
ಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಶುಕ್ರವಾರ ಸಾವಯವ ಮತ್ತು ಸಿರಿಧಾನ್ಯಗಳ ವಸ್ತು ಪ್ರದರ್ಶನ ನಡೆಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ (ವಿಜಯನಗರ): ಹಂಪಿ ಉತ್ಸವದ (Hampi Utsav 2024) ಅಂಗವಾಗಿ ಕೃಷಿ ಇಲಾಖೆಯಿಂದ ಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಲಾದ ಸಾವಯವ ಮತ್ತು ಸಿರಿಧಾನ್ಯಗಳ ವಸ್ತು ಪ್ರದರ್ಶನವು ನೋಡುಗರ ಗಮನ ಸೆಳೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಚಾಲನೆ ನೀಡಿದರು.

ಈ ವೇಳೆ ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Job Alert: ಪದವಿ ಪೂರೈಸಿದವರಿಗೆ ಉದ್ಯೋಗಾವಕಾಶ; ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಸಾವಯವ ಮತ್ತು ಸಿರಿಧಾನ್ಯಗಳ ವಸ್ತು ಪ್ರದರ್ಶನದಲ್ಲಿ ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ ಮತ್ತು ಜಮೀನುಗಳಲ್ಲಿ ನೀರಿನ ಹೊಂಡ ನಿರ್ಮಾಣ ಹಾಗೂ ಮಿಶ್ರ ಬೇಸಾಯದ ಜತೆಗೆ ಸಮಗ್ರ ಹಾಗೂ ಸುಸ್ಥಿರ ಕೃಷಿ ಮಾದರಿಗಳನ್ನು ಪ್ರದರ್ಶಿಸುವ ಜತೆಗೆ ರೈತರಿಗೆ ಕೃಷಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು.

ಮುಖ್ಯವಾಗಿ ಸಿರಿ ಧಾನ್ಯಗಳಿಂದ ನಿರ್ಮಿಸಿದ ಕನ್ನಡಾಂಬೆ ಭುವನೇಶ್ವರಿ ತಾಯಿ ಹಾಗೂ ವಿಶ್ವಗುರು ಬಸವಣ್ಣ ಅವರ ಕಲಾಕೃತಿಗಳು ಸೇರಿದಂತೆ ವಿವಿಧ ಕಲಾಕೃತಿಗಳು ಸಾರ್ವಜನಿಕರಿಗೆ ಕೈಬೀಸಿ ಕರೆಯುವಂತಿವೆ. ಇದೆ ವೇಳೆ ಸಿರಿಧಾನ್ಯಗಳ ಪಾಕ ಸ್ಪರ್ಧೆಗೂ ಚಾಲನೆ ದೊರೆಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Karnataka weather Forecast: ರಾಜ್ಯದ ಹಲವೆಡೆ ಮಳೆಯು (Heavy Rain News) ಅಬ್ಬರಿಸುತ್ತಿದ್ದು, ಧಾರವಾಡದಲ್ಲಿ ವೃದ್ಧರೊಬ್ಬರು ಮಳೆಯಲ್ಲೇ ತಪಸ್ಸಿಗೆ ಕುಳಿತ ವಿಡಿಯೊವೊಂದು ವೈರಲ್‌ ಆಗಿದೆ. ಇತ್ತ ಮಳೆಯ ಅವಾಂತರವು ಮುಂದುವರಿದಿದೆ.

VISTARANEWS.COM


on

By

Karnataka weather Forecast
Koo

ಧಾರವಾಡ: ಹಿರಿಯ ಜೀವಿಯೊಬ್ಬರು ಮಳೆ (Rain News ) ಬರುವಾಗಲೇ ತಪಸ್ಸಿಗೆ ಕುಳಿತ ಘಟನೆ ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ನಡೆದಿದೆ. ಜೋರಾಗಿ ಬರುತ್ತಿದ್ದ ಮಳೆಯಲ್ಲಿ (Karnataka weather Forecast) ನಡು ರಸ್ತೆಯಲ್ಲಿಯೇ ಕಣ್ಣು ಮುಚ್ಚಿ ಕುಳಿತ ವೃದ್ಧ, ಒಂಚೂರು ಅಲುಗಾಡದೆ ತಪಸ್ಸು ಮಾಡಿದ್ದಾರೆ. ಇನ್ನೂ ಈ ದೃಶ್ಯವನ್ನು ಓರ್ವ ಯುವಕನ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಬಳ್ಳಾರಿಯಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಶುಕ್ರವಾರ ವಿಜಯನಗರದಲ್ಲೂ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ ಕೆಲ ಕಾಲ ವಾಹನ ಸವಾರರು ಪರದಾಟಬೇಕಾಯಿತು. ಧಾರವಾಡದ ನಗರದ ಕೆಎಂಎಫ್ ಬಳಿಯ ರಸ್ತೆಯ ಮೇಲೆ ಮೊಣಕಾಲುದ್ದ ನೀರು ಬಂದ ಪರಿಣಾಮ ಸವಾರರು ಬೈಕ್ ತಳ್ಳಿಕೊಂಡು ಹೋದರು. ಇತ್ತ ಗಣಿನಾಡು ಬಳ್ಳಾರಿಯಲ್ಲೂ ವರುಣನ ಆರ್ಭಟ ಜೋರಾಗಿತ್ತು. ಬಿಸಿಲಿನ ತಾಪದಿಂದ ಬೇಸೆತ್ತಿದ್ದ ಜನರಿಗೆ ಮಳೆಯು ಸಂತಸವನ್ನುಂಟು ಮಾಡಿತ್ತು. ಮುಂಗಾರು ಬಿತ್ತನೆಯ ನಿರೀಕ್ಷೆಯಲ್ಲಿರುವ ರೈತರ ಮೊಗದಲ್ಲಿ ಹರ್ಷ ತಂದಿತ್ತು. ಮಳೆಯಿಂದಾಗಿ ಬಳ್ಳಾರಿ ನಗರದ ಕೆಲ ರಸ್ತೆಗಳು ಜಲಾವೃತ್ತವಾಗಿದ್ದವು. ನಗರದ ಹಳೆ ಬಸ್ ನಿಲ್ದಾಣದ ಎದುರುಗಡೆ ರಸ್ತೆಯ ಮೇಲೆ ನೀರು ನಿಂತು ಸವಾರರು ಸಮಸ್ಯೆ ಎದುರಿಸುವಂತಾಯಿತು. ನಗರದ ರಾಯಲ್ ಸರ್ಕಲ್ ಪೆಟ್ರೋಲ್ ಬಂಕ್ ಪ್ರದೇಶ, ರೇಣುಕಾ ಕಿಚನ್ ಮುಂದೆಲ್ಲ ನೀರುಮಯವಾಗಿತ್ತು.

ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಗಾಳೆ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದ್ದವು. ಸಂಡೂರು ತಾಲೂಕಿನಲ್ಲಿ ಮನೆಗಳಿಗೆ, ಹಳೇ ಮಾದಪುರ ಗ್ರಾಮದಲ್ಲಿ ನೀರು ನುಗ್ಗಿದ್ದವು. ಬಳ್ಳಾರಿಯ ಬಂಡಿಮೋಟ್‌ನ ಕೆಲ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಐವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿರುವ ಸಾಮಾನುಗಳು ತೇಲಾಡುತ್ತಿದೆ. ಬಸ್ ನಿಲ್ದಾಣ, ಲಾರಿ ಟರ್ಮಿನಲ್‌ನಲ್ಲೂ ಅವಾಂತರವೇ ಸೃಷ್ಟಿಯಾಗಿದೆ.

ಇದನ್ನೂ ಓದಿ:Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

ದಾವಣಗೆರೆಯಲ್ಲಿ ಬಸ್‌ ನಿಲ್ದಾಣ ಜಲಾವೃತ

ದಾವಣಗೆರೆಯ ಹೊನ್ನಾಳಿಯಲ್ಲಿ ಸುರಿದ ಮಳೆಯಿಂದ ಶುಕ್ರವಾರ ಖಾಸಗಿ ಬಸ್ ನಿಲ್ದಾಣ ಜಲಾವೃತಗೊಂಡಿತ್ತು. ಕೆರೆಯಂತಾದ ನಿಲ್ದಾಣದಲ್ಲಿ ಮೊಣಕಾಲಿನ ವರೆಗೆ ನಿಂತ ನೀರು ಪ್ರಯಾಣಿಕರು ಪರದಾಡಬೇಕಾಯಿತು. ಮಳೆ ‌ನೀರು ಸರಾಗವಾಗಿ ಹೋಗಲು ಸರಿಯಾದ ರೀತಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಈ ಅವಸ್ಥೆ ಎಂದು ಕಿಡಿಕಾರಿದರು. ದಾವಣಗೆರೆ, ಮಾಯಕೊಂಡ, ದಾವಣಗೆರೆ ಕುವೆಂಪು ರಸ್ತೆ, ಕೆಬಿ ಬಡಾವಣೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದವು. ದಾವಣಗೆರೆಯ ಈರುಳ್ಳಿ ಮಾರ್ಕೆಟ್ ನ ರೈಲು ಬ್ರಿಡ್ಜ್ ಬಳಿ ರಸ್ತೆಯು ಕೆರೆಯಂತಾಗಿತ್ತು, ಹರಪನಹಳ್ಳಿ, ಜಗಳೂರು ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಸ್ತೆ ದಾಟಲು ವಾಹನ ಸವಾರರು ಹರಸಾಹಸ ಪಟ್ಟವರು.

ಕರಾವಳಿಯಲ್ಲಿ ವರುಣಾರ್ಭಟ

ಉತ್ತರ ಕನ್ನಡದ ಕಾರವಾರ, ಅಂಕೋಲಾ, ಕುಮಟಾ ಸೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಅಂಕೋಲಾದಲ್ಲಿ ಪಟ್ಟಣದ ರಸ್ತೆಯಲ್ಲಿ ಕಣ್ಣುಹಾರಿಯಿಸಿದರೆ ಬರೀ ನೀರೆ ಕಾಣಿಸುತ್ತಿತ್ತು. ಭಾರೀ ಮಳೆಯಿಂದಾಗಿ ರಸ್ತೆ ಬದಿ ವ್ಯಾಪಾರಸ್ಥರು ಪರದಾಡಬೇಕಾಯಿತು.

ಶುಕ್ರವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಅಂಕೋಲಾದ ಬೋಳೆ ನಾಡವರಕೇರಿ ಅಂಗನವಾಡಿ ಕೇಂದ್ರಕ್ಕೆ ನೀರು ನುಗ್ಗಿತ್ತು. ಕಾಲುವೆ ಸೇರಿದಂತೆ ಅಂಗನವಾಡಿ ಕೇಂದ್ರದ ಅಂಗಳದಲ್ಲಿ ನೀರು ಜಮಾವಣೆಯಾಗಿತ್ತು. ನೀರು ಹರಿಯದೇ ಅಂಗನವಾಡಿ ಕೇಂದ್ರದಲ್ಲಿ ತುಂಬಿಕೊಂಡಿತ್ತು. ಅದೃಷ್ಟವಶಾತ್ ಮಕ್ಕಳು ಮನೆಗೆ ಹೋಗಿದ್ದರಿಂದ ಅನಾಹುತ ತಪ್ಪಿತ್ತು. ಇತ್ತ ಅಂಗನವಾಡಿ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಕಿರಾಣಿ ಸೇರಿ ವಸ್ತುಗಳನ್ನು ರಕ್ಷಿಸಿಕೊಳ್ಳಲು ಸಿಬ್ಬಂದಿ ಪರದಾಡಬೇಕಾಯಿತು.

ಯಾದಗಿರಿಯಲ್ಲಿ ಜಮೀನಿಗೆ ನುಗ್ಗಿದ ನೀರು

ಶುಕ್ರವಾರ ಸಂಜೆ ಯಾದಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ವಡಗೇರಾ ತಾಲೂಕಿನ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಯಕ್ಷಿಂತಿ ಗ್ರಾಮ ಜಮೀನಿಗೆ ನೀರು ನುಗ್ಗಿದೆ. ಜಮೀನಿಗೆ ತೆರಳುವ ರಸ್ತೆಯು ಸಂಪೂರ್ಣ ಜಲಾವೃತಗೊಂಡಿತ್ತು. ಇತ್ತ ಜಮೀನಿಗೆ ತೆರಳಿದ್ದ ಕಾರ್ಮಿಕರಿಗೆ ವಾಪಸ್‌ ಮನೆಗೆ ತೆರಳಲು ಸಂಕಷ್ಟ ಎದುರಿಸಬೇಕಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

Karnataka Rain : ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

VISTARANEWS.COM


on

By

karnataka rain
Koo

ಬೆಳಗಾವಿ: ಬೆಳಗಾವಿಯ ಗೋಕಾಕ ತಾಲೂಕಿನ ಗೋಕಾಕ ಕೊಣ್ಣೂರ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡದ ಭೂತದ ಕಾಟ (Karnataka Rain) ಶುರುವಾಗಿದೆ. ಅದು ಕೂಡ ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

karnataka rain

ಗೋಕಾಕ ಹಾಗೂ ಕೊಣ್ಣೂರು ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ಬಂಡೆಗಳು ಉರುಳಿ ಬೀಳುತ್ತಿವೆ. ಬೆಟ್ಟದಿಂದ ಉರುಳುತ್ತಿರುವ ಬಂಡೆಗಳಿಂದ ಸವಾರರು, ಜನರು ಭಯಭೀತರಾಗಿದ್ದಾರೆ. ಮಳೆಯಿಂದಾಗಿ ಬಂಡೆಗಳ ಕೆಳಗಿನ ಮಣ್ಣು ಕುಸಿಯುತ್ತಿದೆ. ಇದರಿಂದಾಗಿ ಬಂಡೆ ಕಲ್ಲುಗಳು ರಸ್ತೆಗೆ ಬಂದು ಬೀಳುತ್ತಿವೆ. ರಸ್ತೆಯಲ್ಲಿ ಸಂಚರಿಸುವವರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

karnataka rain

ಕೊಚ್ಚಿ ಹೋದ ಬೈಕ್‌

ವಿಜಯಪುರದಲ್ಲಿ ನಿನ್ನೆ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಡೋಣಿ ನದಿ ಉಕ್ಕಿ ಹರಿದಿದೆ. ಪರಿಣಾಮ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ವಿಜಯಪುರ ನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆ ನೀರಲ್ಲಿ ಬೈಕ್‌ವೊಂದು ಕೊಚ್ಚಿ ಹೋದ ಘಟನೆ ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿರುವ ಮಳೆ ನೀರಲ್ಲಿ ಬೈಕ್ ಕೊಂಡೊಯ್ಯುವ ಹರಸಾಹಸದ ವೇಳೆ ಕೊಚ್ಚಿಹೋಗಿದೆ.

ಇದನ್ನೂ ಓದಿ: Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

ಇತ್ತ ತುಮಕೂರು ಜಿಲ್ಲೆಯಲ್ಲಿ ರಾತ್ರಿ ಧಾರಕಾರ ಸುರಿದ ಮಳೆ ರಭಸಕ್ಕೆ ಕೆರೆ, ಕಟ್ಟೆಗಳು ಕೋಡಿ ಬಿದ್ದಿದ್ದವು. ತುಮಕೂರು ಜಿಲ್ಲೆಯ ಕೊರಟಗೆರೆ ಬಳಿಯಿರುವ ಜಂಪೇನಹಳ್ಳಿ ಕೆರೆ ನೀರಿಲ್ಲದೇ ಬತ್ತಿಹೋಗಿತ್ತು. ಇದೀಗ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ ನದಿ ಉಗಮ ಸ್ಥಾನ ಮಹಾಬಲೇಶ್ವರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಈ ವರ್ಷದ ಮೊದಲ ಒಳಹರಿವು 1,768 ಕ್ಯೂಸೇಕ್ ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ.

ಗ್ರಾಮಕ್ಕೆ ರಭಸವಾಗಿ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಕೂನಬೇವು ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ವರುಣ ಅಬ್ಬರಕ್ಕೆ ಕೊನಬೇವು ಗ್ರಾಮ ಜಲಾವೃತಗೊಂಡಿತ್ತು. ಗ್ರಾಮದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿತ್ತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಚಿತ್ರದುರ್ಗ ತಾಲೂಕಿನ ಬೆಳಘಟ್ಟ ಗ್ರಾಮದಲ್ಲಿ ನೀರಿನಲ್ಲಿ ಬಸ್ ಸಿಲುಕಿದ ಘಟನೆಯು ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಆಗುಂಬೆಯಲ್ಲಿ ದುರಂತ; ಅಡಿಕೆ ತೋಟದಲ್ಲಿ ಕಳೆ ಕೀಳುವಾಗ ಸಿಡಿಲು ಬಡಿದು ವ್ಯಕ್ತಿ ಸಾವು

Karnataka Rain : ಭಾರಿ ಮಳೆಗೆ ಅವಾಂತರವು ಮುಂದುವರಿದಿದ್ದು, ಆಗುಂಬೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ಕೆಲ ಗ್ರಾಮದಲ್ಲಿ ನೀರು ನುಗ್ಗಿದ್ದು, ನದಿಯಂತೆ ಸೃಷ್ಟಿಯಾಗಿದೆ.

VISTARANEWS.COM


on

By

karnataka Rain
Koo

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು (Karnataka Rain) ಮೃತಪಟ್ಟಿದ್ದಾರೆ. ನಾಗೇಂದ್ರ (40) ಸಿಡಿಲು ಬಡಿದು ಮೃತಪಟ್ಟವರು.

ಆಗುಂಬೆ ಸಮೀಪದ ಬೀದರಗೋಡು ಗ್ರಾಮದ ನಿವಾಸಿಯಾದ ನಾಗೇಂದ್ರ ಅವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಎಂಬುವರ ಅಡಿಕೆ ತೋಟದಲ್ಲಿ ಕಳೆ ತೆಗೆಯುತ್ತಿದ್ದರು. ಈ ಸಂದರ್ಭದಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ನಾಗೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಳೆ ಶುರುವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗೋಕಾಕ ಕೊಣ್ಣೂರ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡದ ಭೂತದ ಕಾಟ ಶುರುವಾಗಿದೆ. ಅದು ಕೂಡ ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

karnataka rain

ಗೋಕಾಕ ಹಾಗೂ ಕೊಣ್ಣೂರು ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ಬಂಡೆಗಳು ಉರುಳಿ ಬೀಳುತ್ತಿವೆ. ಬೆಟ್ಟದಿಂದ ಉರುಳುತ್ತಿರುವ ಬಂಡೆಗಳಿಂದ ಸವಾರರು, ಜನರು ಭಯಭೀತರಾಗಿದ್ದಾರೆ. ಮಳೆಯಿಂದಾಗಿ ಬಂಡೆಗಳ ಕೆಳಗಿನ ಮಣ್ಣು ಕುಸಿಯುತ್ತಿದೆ. ಇದರಿಂದಾಗಿ ಬಂಡೆ ಕಲ್ಲುಗಳು ರಸ್ತೆಗೆ ಬಂದು ಬೀಳುತ್ತಿವೆ. ರಸ್ತೆಯಲ್ಲಿ ಸಂಚರಿಸುವವರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

ಇದನ್ನೂ ಓದಿ: Assault Case : ಚಿಪ್ಸ್ ಕೊಡಿಸುವ ನೆಪದಲ್ಲಿ ಮಗುವಿನ ಕತ್ತು ಕೊಯ್ದ ಕಿರಾತಕ

ವಿಜಯಪುರದಲ್ಲಿ ನಿನ್ನೆ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಡೋಣಿ ನದಿ ಉಕ್ಕಿ ಹರಿದಿದೆ. ಪರಿಣಾಮ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ವಿಜಯಪುರ ನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆ ನೀರಲ್ಲಿ ಬೈಕ್‌ವೊಂದು ಕೊಚ್ಚಿ ಹೋದ ಘಟನೆ ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿರುವ ಮಳೆ ನೀರಲ್ಲಿ ಬೈಕ್ ಕೊಂಡೊಯ್ಯುವ ಹರಸಾಹಸದ ವೇಳೆ ಕೊಚ್ಚಿಹೋಗಿದೆ.

ಇತ್ತ ತುಮಕೂರು ಜಿಲ್ಲೆಯಲ್ಲಿ ರಾತ್ರಿ ಧಾರಕಾರ ಸುರಿದ ಮಳೆ ರಭಸಕ್ಕೆ ಕೆರೆ, ಕಟ್ಟೆಗಳು ಕೋಡಿ ಬಿದ್ದಿದ್ದವು. ತುಮಕೂರು ಜಿಲ್ಲೆಯ ಕೊರಟಗೆರೆ ಬಳಿಯಿರುವ ಜಂಪೇನಹಳ್ಳಿ ಕೆರೆ ನೀರಿಲ್ಲದೇ ಬತ್ತಿಹೋಗಿತ್ತು. ಇದೀಗ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ ನದಿ ಉಗಮ ಸ್ಥಾನ ಮಹಾಬಲೇಶ್ವರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಈ ವರ್ಷದ ಮೊದಲ ಒಳಹರಿವು 1,768 ಕ್ಯೂಸೇಕ್ ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ.

ಗ್ರಾಮಕ್ಕೆ ರಭಸವಾಗಿ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಕೂನಬೇವು ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ವರುಣ ಅಬ್ಬರಕ್ಕೆ ಕೊನಬೇವು ಗ್ರಾಮ ಜಲಾವೃತಗೊಂಡಿತ್ತು. ಗ್ರಾಮದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿತ್ತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಚಿತ್ರದುರ್ಗ ತಾಲೂಕಿನ ಬೆಳಘಟ್ಟ ಗ್ರಾಮದಲ್ಲಿ ನೀರಿನಲ್ಲಿ ಬಸ್ ಸಿಲುಕಿದ ಘಟನೆಯು ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

Electric shock : ಕರೆಂಟ್‌ ಶಾಕ್‌ನಿಂದ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ. ಶಾಲೆಗೆಂದು ಹೋದವಳು ಮಸಣ ಸೇರಿದ್ದಾಳೆ. ಬಾಲಕಿಯ ಅಗಲಿಕೆಗೆ ಇಡೀ ಊರಿಗೆ ಊರೇ ದುಃಖದಲ್ಲಿದೆ.

VISTARANEWS.COM


on

By

Electric shock in vijayanagara
Koo

ವಿಜಯನಗರ: ತಾಯಿಯ ಕೈತುತ್ತು ತಿಂದು ಆ ಬಾಲಕಿ ಖುಷಿ ಖುಷಿಯಿಂದ ಬ್ಯಾಗ್‌ ಏರಿಸಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ್ದಳು. ಆದರೆ ಕ್ರೂರ ವಿಧಿಗೆ ಪ್ರಪಂಚ ನೋಡಬೇಕಾದ ಬಾಲಕಿ ಉಸಿರು ಚೆಲ್ಲಿದ್ದಾಳೆ. ಮುಂಜಾನೆ ಶಾಲೆಗೆ ಹೋದವಳು ಮನೆಗೆ ಹೆಣವಾಗಿ ಬಂದಿದ್ದಾಳೆ. ವಿದ್ಯುತ್ ಸ್ಪರ್ಶಿಸಿ (Electric shock) ಬಾಲಕಿ ದಾರುಣ ಅಂತ್ಯ ಕಂಡಿದ್ದಾಳೆ.

ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ತುಳಸಿ ಎಂಬಾಕೆ ಕರೆಂಟ್‌ ಶಾಕ್‌ನಿಂದ ಮೃತಪಟ್ಟವಳಿ. ತುಳಸಿ ಅದೇ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು.

Electric shock in vijayanagara Class II girl dies of electrocution

ಬಾಲಕಿ ತುಳಸಿ ಕರೆಂಟ್‌ ಶಾಕ್‌ನಿಂದ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಮಡುಗಟ್ಟಿದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೂಡ್ಲಿಗಿ ಪಿಎಸ್‌ಐ ಎರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

ರಷ್ಯಾದಲ್ಲಿ ಘೋರ ದುರಂತ; ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳ ಸಾವು

ಮಾಸ್ಕೋ: ರಷ್ಯಾದಲ್ಲಿ ಘೋರ ದುರಂತವೊಂದು ನಡೆದಿದ್ದು, ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ (Drown In River). ಓರ್ವ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೈಂಟ್‌ ಪೀಟರ್ಸ್‌ಬರ್ಗ್‌ (St. Petersburg) ಬಳಿ ನದಿಯಲ್ಲಿ ಈ ಅವಘಡ ಸಂಭವಿಸಿದೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ದೃಢಪಡಿಸಿದೆ. ಶವಗಳನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ರಷ್ಯಾದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದೆ.

ʼʼಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯ ಮೃತಪಟ್ಟಿದ್ದು, ಇವರ ವಯಸ್ಸು ಅಂದಾಜು 18-20 ವರ್ಷ. ಇವರು ವೆಲಿಕಿ ನೊವ್ಗೊರೊಡ್ ನಗರದ ಸಮೀಪದಲ್ಲಿರುವ ನೊವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿ(Novgorod State University)ಯಲ್ಲಿ ಅಧ್ಯಯನ ಮಾಡುತ್ತಿದ್ದರುʼʼ ಎಂದು ಮೂಲಗಳು ವರದಿ ಮಾಡಿವೆ.

ದುರಂತ ನಡೆದಿದ್ದು ಹೇಗೆ?

ವೋಲ್ಖೋವ್ ನದಿಗೆ ಬಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಲು ಆಕೆಯ ನಾಲ್ವರು ಸ್ನೇಹಿತರು ಯತ್ನಿಸಿದ ವೇಳೆ ಈ ದುರಂತ ನಡೆದಿದೆ. ಈ ಪೈಕಿ ಓರ್ವನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಷ್ಯಾದ ಮಾಧ್ಯಮಗಳು ಹೇಳಿವೆ. “ಸಾಧ್ಯವಾದಷ್ಟು ಬೇಗ ಶವಗಳನ್ನು ಸಂಬಂಧಿಕರಿಗೆ ಕಳುಹಿಸಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಅಪಾಯದಿಂದ ಪಾರಾದ ವಿದ್ಯಾರ್ಥಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಾಸ್ಕೋದಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಅಮೆರಿಕದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು

ಕೆಲವು ದಿನಗಳ ಹಿಂದೆ ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಜಾರ್ಜಿಯಾದ ಆಲ್ಫಾರೆಟ್ಟಾ ಬಳಿ ನಡೆದ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು.

ಆರ್ಯನ್‌ ಜೋಷಿ, ಶ್ರಿಯಾ ಅವಸರಲ ಮತ್ತು ಅನ್ವಿ ಶರ್ಮಾ ಮೃತ ವಿದ್ಯಾರ್ಥಿಗಳು. ಈ ಪೈಕಿ ಆರ್ಯನ್‌ ಜೋಷಿ, ಶ್ರೀಯಾ ಅವಸರಳ ಸ್ಥಳದಲ್ಲೇ ಅಸುನೀಗಿದ್ದರೆ, ಅನ್ವಿ ಶರ್ಮಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಗಾಯಯೊಂಡವರನ್ನು ಋತ್ವಿಕ್‌ ಸೋಮೆಪಳ್ಳಿ ಹಾಗೂ ಮೊಹಮ್ಮದ್‌ ಲಿಯಾಕತ್‌ ಎಂದು ಗುರುತಿಸಲಾಗಿತ್ತು.

ಈ ಐವರು ಆಲ್ಫಾರೆಟ್ಟಾ ಹೈಸ್ಕೂಲ್‌ ಮತ್ತು ಜಾರ್ಜಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು. ಇವರಿದ್ದ ಕಾರು ಅತಿ ವೇಗದಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದರು. ಚಾಲಕನ ನಿಯಂತ್ರಣಕ್ಕೆ ಸಿಗದೆ ಮೇ 14ರಂದು ಕಾರು ಆಲ್ಫಾರೆಟ್ಟಾ ಬಳಿ ಅಪಘಾತಕ್ಕೀಡಾಗಿತ್ತು. ʼʼಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ತಲೆಕೆಳಗಾಗಿ ನಿಂತಿತ್ತುʼʼ ಎಂದಯ ಪ್ರತ್ಯಕ್ಷದರ್ಶಿಯೊಬ್ಬರು ಘಟನೆಯ ತೀವ್ರತೆಯನ್ನು ವಿವರಿಸಿದ್ದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳು

ಇವರೆಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿದ್ದರು. ಶ್ರೀಯಾ ಅವಸರಳ ಯುಜಿಎ ಶಿಕಾರಿ (UGA Shikaari) ಡ್ಯಾನ್ಸ್‌ ತಂಡದ ಸದಸ್ಯೆಯಾಗಿದ್ದರು. ಇನ್ನು ಅನ್ವಿ ಶರ್ಮಾ ಯುಜಿಎ ಕಲಾಕಾರ್‌ (UGA Kalakaar) ಮತ್ತು ಕ್ಯಾಪೆಲ್ಲ ಗ್ರೂಪ್‌ (Capella Group)ನ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ನೀವೊಮ್ಮ ಅದ್ಭುತ ಡ್ಯಾನ್ಸರ್‌. ನಿಮ್ಮ ಕಣ್ಮರೆಯ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲʼʼ ಎಂದು ಶಿಕಾರಿ ತಂಡ ಆಘಾತ ಸೂಚಿಸಿತ್ತು. ಕಲಾಕಾರ್‌ ಗ್ರೂಪ್‌ ಕೂಡ ಅನ್ವಿ ಶರ್ಮಾಗೆ ಶ್ರದ್ಧಾಂಜಲಿ ಸಲ್ಲಿಸಿತ್ತು.

ಆರ್ಯನ್‌ ಜೋಷಿ ಪದವಿ ಪಡೆಯಲು ಸಿದ್ಧತೆ ನಡೆಸಿಕೊಂಡಿದ್ದರು. ಆಲ್ಫಾರೆಟ್ಟಾ ಹೈ ಕ್ರಿಕೆಟ್‌ ಟೀಮ್‌ (Alpharetta High cricket team) ತನ್ನ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಆರ್ಯನ್‌ ಜೋಷಿ ನಿಧನಕ್ಕೆ ನೋವು ತೋಡಿಕೊಂಡು, ʼʼಆರ್ಯನ್‌ ಜೋಷಿ ನಮ್ಮ ಬಹು ದೊಡ್ಡ ಬೆಂಬಲಿಗರಾಗಿದ್ದರು ಮತ್ತು ತಮ್ಮ ತಂಡದ ಬೆನ್ನೆಲುಬಾಗಿದ್ದರು. ನಮ್ಮ ತಂಡದ ಗೆಲುವಿನಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದು. ಅವರ ಅಗಲಿಕೆ ನಮ್ಮ ಪಾಲಿಗೆ ತುಂಬಲಾರದ ನಷ್ಟʼʼ ಎಂದು ಬರೆದುಕೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Job News
ಕರ್ನಾಟಕ2 mins ago

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

T20 World Cup
ಪ್ರಮುಖ ಸುದ್ದಿ25 mins ago

T20 World Cup : ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಅಮೆರಿಕ ತಂಡ

All achievements in life are easy if there is Guru's grace says Sri Satyatmatirtha Swamiji
ಮೈಸೂರು31 mins ago

Mysore News: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ; ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

Akasa Air
ದೇಶ34 mins ago

Akasa Air: ಗೋರಖ್​ಪುರದಿಂದ ದೆಹಲಿ ಮತ್ತು ಬೆಂಗಳೂರಿಗೆ ಆಕಾಶ ಏರ್ ನೇರ ವಿಮಾನ

Alliance Candidates Win in MLC South West Constituency Celebration at Ripponpet
ಶಿವಮೊಗ್ಗ50 mins ago

Shivamogga News: ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

A trader lost more than three and a half lakhs by opening a WhatsApp group message
ಕರ್ನಾಟಕ56 mins ago

Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

Nitish Kumar
ದೇಶ58 mins ago

Nitish Kumar: ಮುಂದಿನ ಸಲ ನಿಮ್ಮೆದುರು ಪ್ರತಿಪಕ್ಷಗಳ ಎಲ್ಲರಿಗೂ ಸೋಲು; ನಿತೀಶ್‌ ಮಾತಿಗೆ ನಕ್ಕ ಮೋದಿ!

World Environment Day
Latest59 mins ago

World Environment Day:ವಿಶ್ವ ಪರಿಸರ ದಿನವನ್ನು ವಿಶೇಷವಾಗಿ ಆಚರಿಸಿದ ‘ಕೇಳಚಂದ್ರ ಕಾಫಿ’

MLC Election Results
ಕರ್ನಾಟಕ1 hour ago

MLC Election Results: ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ; ಕಾಂಗ್ರೆಸ್ ಪಾಲಾದ ಎರಡೂ ಸ್ಥಾನ!

Karnataka weather Forecast
ಮಳೆ1 hour ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 hour ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌