Salman Khan: ʻಸಲ್ಮಾನ್ ಖಾನ್ʼ ಜತೆ ಸಿನಿಮಾ ಮಾಡಲಿದ್ದಾರಾ ʼಅನಿಮಲ್‌ʼ ನಿರ್ದೇಶಕ? - Vistara News

ಸಿನಿಮಾ

Salman Khan: ʻಸಲ್ಮಾನ್ ಖಾನ್ʼ ಜತೆ ಸಿನಿಮಾ ಮಾಡಲಿದ್ದಾರಾ ʼಅನಿಮಲ್‌ʼ ನಿರ್ದೇಶಕ?

Salman Khan: ಚಿರಂಜೀವಿ ಮತ್ತು ಶಾರುಖ್ ಖಾನ್ ಅವರಂತಹ ದೊಡ್ಡ ಸ್ಟಾರ್‌ಗಳ ಜತೆ ಕೆಲಸ ಮಾಡುವ ಬಯಕೆಯನ್ನು ಸಂದೀಪ್‌ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Animal Director Sandeep Reddy Vanga film With Salman Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಣಬೀರ್ ಕಪೂರ್ (Ranbir Kapoor) ಮುಖ್ಯ ಭೂಮಿಕೆಯಲ್ಲಿ ನಟಿಸಿರುವ (Animal OTT Release) ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ʼಅನಿಮಲ್‌ʼ ಚಿತ್ರ ಯಶಸ್ಸನ್ನು ಕಂಡಿದೆ. ಸಂದೀಪ್ ರೆಡ್ಡಿ ವಂಗಾ ಅವರು ತಮ್ಮ ಮುಂಬರುವ ಡಾರ್ಕ್ ಆ್ಯಕ್ಷನ್ ಕ್ರೈಮ್ ಥ್ರಿಲ್ಲರ್‌ಗಾಗಿ ಸಲ್ಮಾನ್ ಖಾನ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆಂದು ವರದಿಯಾಗಿದೆ. ಮಾತ್ರವಲ್ಲ ತಮ್ಮ ಇತರ ಪ್ರಾಜೆಕ್ಟ್‌ಗಳಿಗಾಗಿ ಅಲ್ಲು ಅರ್ಜುನ್ ಮತ್ತು ಪ್ರಭಾಸ್ ಜತೆ ಕೈಜೋಡಿಸುತ್ತಿದ್ದಾರೆ ಎಂದೂ ವರದಿಯಾಗಿದೆ. ಚಿರಂಜೀವಿ ಮತ್ತು ಶಾರುಖ್ ಖಾನ್ ಅವರಂತಹ ದೊಡ್ಡ ಸ್ಟಾರ್‌ಗಳ ಜತೆ ಕೆಲಸ ಮಾಡುವ ಬಯಕೆಯನ್ನು ಸಂದೀಪ್‌ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.

ʻಅರ್ಜುನ್ ರೆಡ್ಡಿʼ ಮತ್ತು ʻಕಬೀರ್ ಸಿಂಗ್ʼ, ʻಅನಿಮಲ್‌ʼ ಹೀಗೆ ಹಿಟ್‌ ಸಿನಿಮಾಗಳನ್ನು ನೀಡಿದ್ದವರು ಸಂದೀಪ್ ರೆಡ್ಡಿ ವಂಗಾ. ರಣಬೀರ್ ಕಪೂರ್ ಅಭಿನಯದ ʻಅನಿಮಲ್ʼ ಚಿತ್ರ ಬಿಡುಗಡೆಯಾದಾಗಿನಿಂದ ಹಲವಾರು ಕಾರಣಗಳಿಗಾಗಿ ಸುದ್ದಿ ಮಾಡುತ್ತಲೇ ಇದೆ. ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್‌ ನೀಡಿದ್ದರೂ ಸಹ ಕೆಲವರು ಸಿನಿಮಾ ದೃಶ್ಯಗಳ ಬಗ್ಗೆ ಆರೋಪ ಮಾಡಿದ್ದೂ ಇದೆ.

ಇತ್ತೀಚಿನ ಸಂದರ್ಶನವೊಂದರಲ್ಲಿ, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡುವ ವಿಮರ್ಶಕರ ಬಗ್ಗೆ ತೆರೆದಿಟ್ಟಿದ್ದರು. ಸಂದೀಪ್ ರೆಡ್ಡಿ ವಂಗಾ ಮಾತನಾಡಿ “ನನ್ನ ಚಿತ್ರವನ್ನು ಟೀಕಿಸುವ ಮೂಲಕ ನೀವು ಹಣ, ಖ್ಯಾತಿ, ಹೆಸರು ಎಲ್ಲವನ್ನೂ ಮಾಡುತ್ತಿದ್ದೀರಿ. ʻಕಬೀರ್ ಸಿಂಗ್ʼ ಸಮಯದಲ್ಲಿ ಹೀಗೆ ಆಗಿತ್ತು. ಯಾವೊಬ್ಬ ವಿಮರ್ಶಕನು ಕ್ರಾಫ್ಟ್, ಎಡಿಟಿಂಗ್, ಧ್ವನಿ ವಿನ್ಯಾಸದ ಬಗ್ಗೆ ಮಾತನಾಡುವುದಿಲ್ಲ, ಏಕೆಂದರೆ ಅವರು ಈ ಬಗ್ಗೆ ಅನಕ್ಷರಸ್ಥರು.ಸಿನಿಮಾ ವಿಚಾರಕ್ಕೆ ಬಂದಾಗ ಅವರು ಅವಿದ್ಯಾವಂತರು. ಸಿನಿಮಾಗಳನ್ನು ಹೇಗೆ ಟೀಕಿಸಬೇಕು ಅಥವಾ ಚಲನಚಿತ್ರವನ್ನು ಹೇಗೆ ವಿಮರ್ಶಿಸಬೇಕುಎಂಬ ಪ್ರಜ್ಞೆಯು ಅವರಿಗೆ ಇರುವುದಿಲ್ಲʼʼಎಂದು ಖಾರವಾಗಿಯೇ ಹೇಳಿದ್ದರು.

ಇದನ್ನೂ ಓದಿ: Salman Khan : ತಮ್ಮ ಅರ್ಬಾಜ್ ರಿಂದ ದೂರವಾದ ಮಲೈಕಾಗೆ ಕ್ರಿಸ್ಮಸ್​ ಗಿಫ್ಟ್​ ಕಳುಹಿಸಿದ ಸಲ್ಮಾನ್​ ಖಾನ್​

ಇನ್ನು ಅನಿಮಲ್‌ ಸಿನಿಮಾ ʼ 3 ಗಂಟೆ 21 ನಿಮಿಷಗಳ ಅವಧಿಯ ಚಲನಚಿತ್ರವಾಗಿದೆ. ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಮೂಡಿ ಬಂದಿದೆ.ʼಅನಿಮಲ್‌’ ಚಿತ್ರ 3 ಗಂಟೆ 21 ನಿಮಿಷಗಳಷ್ಟು ದೀರ್ಘವಾಗಿದೆ. ಅಲ್ಲದೆ ಹಿಂಸಾತ್ಮಕ, ಬೋಲ್ಡ್‌ ದೃಶ್ಯಗಳಿಂದಾಗಿ ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಇವುಗಳ ಹೊರತಾಗಿಯೂ ಚಿತ್ರವು ಭರ್ಜರಿ ಯಶಸ್ಸು ದಾಖಲಿಸಿದ್ದು, ರಣಬೀರ್‌ ಕಪೂರ್‌ ವೃತ್ತಿ ಜೀವನದಲ್ಲಿ ಅತೀ ಹೆಚ್ಚು ಗಳಿಕೆ ಕಂಡ ಸಿನಿಮಾವಾಗಿ ಹೊರ ಹೊಮ್ಮಿದೆ. ಈ ಹಿಂದೆ ʼಸಂಜುʼ ರಣಬೀರ್‌ ಕಪೂರ್‌ ನಟನೆಯ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ಚಿತ್ರವಾಗಿತ್ತು.

ಮುಂದೆ, ಸಲ್ಮಾನ್ ಖಾನ್ ಶೀಘ್ರದಲ್ಲೇ ಕರಣ್ ಜೋಹರ್ ಅವರೊಂದಿಗೆ ವಿಷ್ಣುವರ್ಧನ್ ನಿರ್ದೇಶನದ ಹೈ-ಬಜೆಟ್ ಆ್ಯಕ್ಷನ್ ಚಿತ್ರಕ್ಕಾಗಿ ಕೈ ಜೋಡಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಇದು ರೌಡಿಸಂ ಸೆಂಟರ್‌ ಅಲ್ಲ; ನಿಜ ಆಗ್ತಾ ಇದೆಯಾ ಅಂದು ಜಗ್ಗೇಶ್‌ ನುಡಿದಿದ್ದ ಭವಿಷ್ಯ?

VISTARANEWS.COM


on

Actor Darshan warn darshan previous
Koo

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರು ಅರೆಸ್ಟ್‌ ಆದ ಬಳಿಕ ಪರೋಕ್ಷವಾಗಿ ದರ್ಶನ್‌ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದರು. ʻಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ! ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆʼಎಂದು ಬರೆದುಕೊಂಡಿದ್ದರು. ಈ ಹಿಂದೆ ‘ತೋತಾಪುರಿ’ ಸಿನಿಮಾ ಚಿತ್ರೀಕರಣ ಸೆಟ್‌ಗೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿ ಜಗ್ಗೇಶ್ ವಿರುದ್ಧ ಧಿಕ್ಕಾರ ಕೂಗಿದ್ದು ವಿವಾದ ಸೃಷ್ಟಿಸಿತ್ತು. ದರ್ಶನ್ ಹುಡುಗರ ಬಗ್ಗೆ ನಟ ಜಗ್ಗೇಶ್ ಹಗುರವಾಗಿ ಮಾತನಾಡಿದ್ದರು. ಈ ಘಟನೆಯ ಕುರಿತು ಜಗ್ಗೇಶ್‌ ಅವರು ತಮ್ಮ ಟ್ವಿಟರ್‌ ಖಾತೆ ಮೂಲಕ ಅಸಮಾಧಾನ ಹೊರಹಾಕಿದ್ದರು. ಇದೀಗ ಈ ವಿಡಿಯೊ ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ. ಹಿರಿಯ ಕಲಾವಿದರಿಗೆ ಬೆಲೆ ಕೊಡ್ತಾ ಇಲ್ಲ ಎಂಬ ಮಾತುಗಳನ್ನು ಜಗ್ಗೇಶ್‌ ಈ ಹಿಂದೆ ಹೇಳಿಕೊಂಡಿದ್ದರು. ಇದು ರೌಡಿಸಂ ಸೆಂಟರ್‌ ಅಲ್ಲ ಎಂದೂ ಹೇಳಿದ್ದರು. ಸದ್ಯ ಈಗ ಆ ಮಾತು ನಿಜ ಆಗುತ್ತಿದೆ ಎಂದು ಕೆಲವರು ವಿಡಿಯೊವನ್ನು ಮತ್ತೆ ಶೇರ್‌ ಮಾಡಿಕೊಳ್ಳುತ್ತಿದ್ದಾರೆ.

ಜಗ್ಗೇಶ್‌ ಹೇಳಿದ್ದೇನು?

‘ಸಿನಿಮಾ ರಂಗದಲ್ಲಿ ನಾನು 40 ವರ್ಷ ಕೆಲಸ ಮಾಡಿದ್ದೇನೆ. ನಾನು ಏನು ಎಂಬುದು ಮಾಧ್ಯಮದವರಿಗೆ ಗೊತ್ತಿದೆ. ನನ್ನ ಜತೆ ಮಾತನಾಡಲು ಹುಡುಗರ ಬಂದಾಗ ನಾನೇನೂ ಓಡಿಹೋಗಿಲ್ಲ. ಯಾವುದೋ ಒಂದು ಸಣ್ಣ ವಿಷಯ ಇಟ್ಟುಕೊಂಡು ಜಗ್ಗೇಶ್‌ಗೆ ಅಪಮಾನ ಮಾಡಿಬಿಟ್ವಿ ಅಂತ ನಿಮಗೆ ಅನಿಸಿದರೆ ಅದರಿಂದ ನನಗೆ ಯಾವುದೇ ನೋವು, ನಷ್ಟ ಇಲ್ಲʼʼಎಂದಿದ್ದರು.

‘ನಾನು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಾಗ ಈ ಯಾವನೂ ಹುಟ್ಟಿರಲಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಿ. ನೀವು ಯಾರಿಗೆ ಬಕೆಟ್‌ ಹಿಡಿಯುತ್ತಿದ್ದೀರೋ ಅವರು ಯಾರೂ ಹುಟ್ಟಿರಲಿಲ್ಲ. 80ರ ದಶಕದಲ್ಲಿ ಸಿನಿಮಾ ರಂಗಕ್ಕೆ ಬಂದವನು ನಾನು. ರಾಜ್‌ಕುಮಾರ್‌, ಅಂಬರೀಶ್‌, ವಿಷ್ಣುವರ್ಧನ್‌, ಶಂಕರ್‌ನಾಗ್‌, ಪ್ರಭಾಕರ್‌, ಅನಂತ್‌ನಾಗ್‌ ಅವರ ಜೊತೆ ಹೆಜ್ಜೆ ಹಾಕಿದವನು ನಾನು. ಅಂಥವರ ಜೊತೆ ಬದುಕಿದವನು ನಾನು. ಇವತ್ತು ನಾನು ಈ ಜಾಗದಲ್ಲಿ ನಿಂತಿದ್ದೇನೆ ಎಂದರೆ ನಿಮ್ಮ ಯಾರಿಂದಲೂ ಅಲ್ಲ. ಕನ್ನಡಿಗರಿಂದ, ಕನ್ನಡಿಗರ ಪ್ರೀತಿಯಿಂದ. ಜಗ್ಗೇಶ್‌ ಕಾಗೆ ಹಾರಿಸುತ್ತಾನೆ ಎನ್ನುತ್ತೀರಾ? ನನ್ನ ಬದುಕಿನಲ್ಲಿ ನಾನು ಕಾಗೆ ಹಾರಿಸುವುದಾಗಿದ್ದರೆ 20 ಸಾರಿ ಎಂಎಲ್‌ಎ ಆಗುತ್ತಿದ್ದೆ. 20 ಬಾರಿ ಮಂತ್ರಿ ಆಗುತ್ತಿದ್ದೆ. ಬಕೆಟ್‌ ಹಿಡಿದು ಬೂಟ್‌ ನೆಕ್ಕಿದ್ದರೆ ನೂರಾರು ಪೋಸ್ಟ್‌ಗಳನ್ನು ನಾನು ತೆಗೆದುಕೊಳ್ಳುತ್ತಿದ್ದೆ. ಇವತ್ತು ನಾನು ಸ್ವಾಭಿಮಾನಿಯಾಗಿ ಬದುಕುತ್ತಿರುವುದು ನಿಮ್ಮಿಂದ ಈ ಮಾತುಗಳನ್ನು ಕೇಳಿಸಿಕೊಳ್ಳೋಕೆ ಅಲ್ಲ. ಈ ಕರ್ನಾಟಕದಲ್ಲಿ ನನ್ನ ಮೈ ಮುಟ್ಟೋಕೆ ಯಾವನಿಗಾದ್ರೂ ಆಗತ್ತಾ?’ಎಂದು ಹೇಳಿದ್ದರು.

ಇದನ್ನೂ ಓದಿ: Actor Darshan: ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದ ದರ್ಶನ್‌ ಪುತ್ರ ವಿನೀಶ್;‌ ಪೋಸ್ಟ್‌ನಲ್ಲಿ ಇನ್ನೇನಿದೆ?

ನಾವು ಸತ್ತಮೇಲೆ ನಮ್ಮ ತಿಥಿ ಮಾಡಿ ಆನಂದ ಪಡಿ

ʻʻರಾಜ್‌ಕುಮಾರ್‌, ಅಂಬರೀಷ್‌, ವಿಷ್ಟುವರ್ಧನ್‌ ಸತ್ತ ಮರುದಿನ ಕನ್ನಡದ ಸ್ವಾಭಿಮಾನವೂ ಸಾಯುತ್ತಿದೆ. ನೆನಪಿಟ್ಟುಕೊಳ್ಳಿ, ಉಳಿದಿರುವುದು ನಾವು ಮೂರ್ನಾಲ್ಕು ಜನ ಮಾತ್ರ. ನಾನು, ಶಿವರಾಜ್‌ಕುಮಾರ್‌, ರಮೇಶ್‌ ಅರವಿಂದ್‌, ರವಿಚಂದ್ರನ್‌ ಮಾತ್ರ. ನಾವು ಸತ್ತಮೇಲೆ ನಮ್ಮ ತಿಥಿ ಮಾಡಿ ಆನಂದ ಪಡಿ, ಸಂತೋಷಪಡಿ. ನನ್ನ ಒಕ್ಕಲಿಗತನದ ಬಗ್ಗೆ ಮಾತನಾಡಿದಾಗ ನಾನು ಸುಮ್ಮನಿದ್ದೇನೆ. ಅಲ್ಲಿ 20 ಜನ ಹುಡುಗರು ಬಂದಿದ್ದರು. ಅವರಲ್ಲಿ ಉದ್ವೇಗ ಇತ್ತು. ಒಪ್ಪಿಕೊಳ್ಳುತ್ತೇನೆ. ನಾನು ಓಡಿ ಹೋಗಲಿಲ್ಲವಲ್ಲ. ಗಂಡಸು ಥರ ಇದ್ದುಕೊಂಡು ಮಾತಾಡಿದ್ದೇನೆ. ನನಗೆ ಅವರು ಬುದ್ದಿ ಕಲಿಸಬೇಕಾಗಿಲ್ಲ. ನನಗೆ ಬುದ್ದಿ ಕಲಿಸಬೇಕಾಗಿರುವುದು ರಾಘವೇಂದ್ರ ಸ್ವಾಮಿಗಳು, ಕನ್ನಡಿಗರು ಮತ್ತು ನನ್ನನ್ನು ಹೆತ್ತ ಜನʼʼಎಂದರು.

ಇದು ರೌಡಿಸಂ ಸೆಂಟರ್‌ ಅಲ್ಲ

ʻʻಇಂಥ ಸ್ಥಿತಿಗತಿಯನ್ನು ನೀವು ಬೆಳೆಸಿದರೆ ಚಿತ್ರರಂಗದಲ್ಲಿ ರೌಡಿಸಂ ಶುರು ಮಾಡುತ್ತಾರೆ. ಎಲ್ಲ ನಟರನ್ನೂ ಹೆಸರಿಸೋಕೆ ಶುರು ಮಾಡುತ್ತಾರೆ. ಅದನ್ನು ನೀವು ನಿಲ್ಲಿಸಲೇಬೇಕು. ಇದು ರೌಡಿಸಂ ಸೆಂಟರ್‌ ಅಲ್ಲ. ಇಲ್ಲಿ ಕೂತು-ನಿಂತು ಮಾತನಾಡಬೇಕು. ದೊಡ್ಡವರು-ಚಿಕ್ಕವರು ಇದ್ದಾರೆ. ಇವತ್ತು ಒಬ್ಬ ನಟನ ಸಿನಿಮಾ ಹಿಟ್‌ ಆಯ್ತು ಎಂದರೆ, ಮತ್ತೊಬ್ಬ ನಟ ಹುನ್ನಾರ ಮಾಡ್ತಾನೆ. ನಾವೆಲ್ಲರೂ ಬೆಳೆಯೋಣ ಎಂಬ ಭಾವನೆ ಇಲ್ಲ. ನಾನೊಬ್ಬನೇ ಬೆಳೆಯಬೇಕು ಎಂಬ ಸ್ಥಿತಿ ಬರ್ತಾ ಇದೆ. ಅಪಮಾನ ಮಾಡುವಂತವರನ್ನು ಪ್ರೋತ್ಸಾಹಿಸಬೇಡಿ ಎಂದು ಕನ್ನಡಿಗರಲ್ಲಿ ನಾನು ವಿನಂತಿ ಮಾಡುತ್ತೇನೆ’ ಎಂದಿದ್ದರು ಜಗ್ಗೇಶ್‌.

ಇದೀಗ ಜಗ್ಗೇಶ್‌ ಮಾತನಾಡಿರುವ ಈ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ. ಜಗ್ಗೇಶ್‌ ಅವರ ಈ ಮಾತುಗಳಿಗೆ ಕೆಲವರು ಸಾಥ್‌ ಕೊಟ್ಟಿದ್ದಾರೆ.

 ದರ್ಶನ್‌ ಅರೆಸ್ಟ್​ ಆದ ಬೆನ್ನಲ್ಲೇ ಕರ್ಮ ಫಲ ಎಂದು ಜಗ್ಗೇಶ್‌ ಟ್ವೀಟ್‌

ʻಸರ್ವ ಆತ್ಮಾನೇನ ಬ್ರಹ್ಮ” ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ! ಕರ್ಮ ಜೀವನವನ್ನು ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕು ತತಕ್ಷಣ ಫಲಿತಾಂಶ ಉಂಟು! ರಾಮನಾಗು.. ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲಾ!ʼʼಎಂದು ಬರೆದುಕೊಂಡಿದ್ದಾರೆ. ಮದ ಇದ್ದವನಿಗೆ ಕರುಣೆ ಎಂಬುದೆಲ್ಲ ಇರುವುದಿಲ್ಲ ಎಂಬುದು ಈ ವಾಕ್ಯದ ಅರ್ಥ.ಈ ಮೂಲಕ ಅವರು ದರ್ಶನ್ ಬಗ್ಗೆಯೇ ಟ್ವೀಟ್ ಮಾಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

Continue Reading

ಸಿನಿಮಾ

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

Maharaj: ಬಾಲಿವುಡ್‌ ನಟ ಆಮೀರ್‌ ಖಾನ್‌ ಪುತ್ರ ಜುನೈದ್‌ ಖಾನ್‌ ನಟಿಸಿರುವ ಮೊದಲ ಸಿನಿಮಾ ಮಹಾರಾಜ್‌ ಬಿಡುಗಡೆಗೆ ಗುಜರಾತ್‌ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳು ಸಿನಿಮಾದಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾರಣ ತಡೆಯಾಜ್ಞೆ ನೀಡಲಾಗಿದೆ.

VISTARANEWS.COM


on

Maharaj
Koo

ಗಾಂಧಿನಗರ: ಬಾಲಿವುಡ್‌ ನಟ ಆಮೀರ್‌ ಖಾನ್‌ (Aamir Khan) ಅವರ ಪುತ್ರ ಜುನೈದ್‌ ಖಾನ್‌ (Junaid Khan) ನಟಿಸಿರುವ ಮೊದಲ ಸಿನಿಮಾಗೇ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳಿವೆ ಎಂಬುದಾಗಿ ಹಿಂದು ಸಂಘಟನೆಗಳು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಗುಜರಾತ್‌ ಹೈಕೋರ್ಟ್‌, ಜುನೈದ್‌ ಖಾನ್‌ ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್’ (Maharaj)‌ ಬಿಡುಗಡೆಗೆ ತಡೆಯಾಜ್ಞೆ ನೀಡಿದೆ. ಇದರಿಂದ ಆಮೀರ್‌ ಖಾನ್‌ ಹಾಗೂ ಜುನೈದ್‌ ಖಾನ್‌ಗೆ ತುಸು ಹಿನ್ನಡೆಯಾದಂತಾಗಿದೆ.

ಸಿದ್ಧಾರ್ಥ್‌ ಪಿ. ಮಲ್ಹೋತ್ರಾ ಅವರು ಮಹಾರಾಜ್‌ ಸಿನಿಮಾವನ್ನು ನಿರ್ದೇಶಿಸಿದ್ದರೆ, ಆದಿತ್ಯ ಚೋಪ್ರಾ ನಿರ್ಮಾಪಕರಾಗಿದ್ದಾರೆ. ಜೂನ್‌ 14ರಂದೇ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ರಿಲೀಸ್‌ ಆಗಬೇಕಿತ್ತು. ಆದರೆ, ಭಗವಾನ್‌ ಕೃಷ್ಣನ ಆರಾಧಕರು ಹಾಗೂ ವಲ್ಲಭಾಚಾರ್ಯ ಅವರ ಅನುಯಾಯಿಗಳು ನ್ಯಾಯಾಲಯದ ಮೊರೆ ಹೋದ ಕಾರಣ, ನ್ಯಾಯಾಲಯವು ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳು ಸಿನಿಮಾದಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾರಣ ತಡೆಯಾಜ್ಞೆ ನೀಡಲಾಗಿದೆ. ಹಾಗೆಯೇ, ಸಾಮಾಜಿಕ ಜಾಲತಾಣದಲ್ಲಿ ಬಾಯ್ಕಾಟ್‌ ನೆಟ್‌ಫ್ಲಿಕ್‌ ಅಭಿಯಾನವೂ ಆರಂಭವಾಗಿದೆ.

ಸಿನಿಮಾದಲ್ಲಿ ಏನಿದೆ? ಯಾಕಿಷ್ಟು ವಿವಾದ?

1862ರಲ್ಲಿ ಪುಷ್ಟಿಮಾರ್ಗ ವೈಷ್ಣವ ಪಂಥದ ಮಹಾರಾಜರ ಕುರಿತು ಕರ್ಸನ್‌ದಾಸ್‌ ಮುಲ್ಝಿ ಎಂಬ ಪತ್ರಕರ್ತ ಬರೆದ ಲೇಖನಗಳ ಪ್ರಕರಣವಾಗಿದೆ. ವೈಷ್ಣವ ಪಂಥದ ಮಹಾರಾಜರು ತಮ್ಮ ಅನುಯಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ, ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಅವರನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದು ಸೇರಿ ಹಲವು ಲೇಖನಗಳನ್ನು ಗುಜರಾತಿ ವಾರಪತ್ರಿಕೆ ‘ಸತ್ಯಪ್ರಕಾಶ’ದಲ್ಲಿ ಬರೆದಿದ್ದರು.

ಮಹಾರಾಜರ ಅನುಯಾಯಿಗಳು ಸೇರಿ ಹಿಂದುಗಳು ಕರ್ಸನ್‌ದಾಸ್‌ ಮುಲ್ಝಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿ, ಬ್ರಿಟಿಷ್‌ ನ್ಯಾಯಾಲಯದ ಮೆಟ್ಟಿಲು ಕೂಡ ಹತ್ತಿತ್ತು. 16ನೇ ಶತಮಾನದಲ್ಲಿ ವಲ್ಲಭಾಚಾರ್ಯ ಅವರು ಪುಷ್ಟಿಮಾರ್ಗವನ್ನು ಸಂಸ್ಥಾಪಿಸಿದ್ದು, ಕೃಷ್ಣನ ಆರಾಧಕರು ಈ ಮಾರ್ಗವನ್ನು ಅನುಸರಿಸುತ್ತಾರೆ. ವೈಷ್ಣವ ಪಂಥದ ಮಹಾರಾಜರ ಕುರಿತು ಅವಹೇಳನಕಾರಿಯಾಗಿ ಲೇಖನ ಬರೆದಿದ್ದ ಕರ್ಸನ್‌ದಾಸ್‌ ಮುಲ್ಝಿಯ ಪಾತ್ರವನ್ನೇ ಜುನೈದ್‌ ಖಾನ್‌ ನಿಭಾಯಿಸಿದ್ದಾರೆ.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Continue Reading

ವೈರಲ್ ನ್ಯೂಸ್

Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

ಕಿರುತೆರೆ ನಟಿ ಕಿಶ್ವರ್ ಮರ್ಚೆಂಟ್ ಅವರು ಪೋಸ್ಟ್ (Viral Video) ಮಾಡಿರುವ ವಿಡಿಯೋದಲ್ಲಿ ಪತಿ ಮತ್ತು ನಟ ಸುಯ್ಯಾಶ್ ರಾಯ್‌ ಅವರು ಮಗ ನಿರ್ವೈರ್‌ಗೆ ಮುಸ್ಲಿಮರು ನಡೆಸುವ ಪ್ರಾರ್ಥನೆ ವಿಧಿಗಳನ್ನು ಕಲಿಸುತ್ತಿರುವುದನ್ನು ನೋಡಿರುವ ಸಾಕಷ್ಟು ಮಂದಿ ಬೇರೆ ಬೇರೆ ಅಭಿಪ್ರಾಯಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

By

Viral Video
Koo

ಕಿರುತೆರೆ ನಟಿ (TV actress) ಕಿಶ್ವರ್ ಮರ್ಚೆಂಟ್ (Kishwer Merchantt) ಅವರು ಸಾಮಾಜಿಕ ಜಾಲತಾಣದಲ್ಲಿ (social media) ಮಗ ಸ್ಕಲ್ ಕ್ಯಾಪ್ (skull cap) ಧರಿಸಿರುವ ವಿಡಿಯೋವನ್ನು (Viral Video) ಪೋಸ್ಟ್ ಮಾಡಿದ್ದು, ಇದು ಭಾರಿ ಚರ್ಚೆ ಹುಟ್ಟಿಸಿದೆ. ನಟಿಯನ್ನು ಟ್ರೋಲ್ ಮಾಡಿ ಅನೇಕರು ಕಾಮೆಂಟ್‌ಗಳನ್ನು ಮಾಡಿದ್ದಾರೆ.

ನಟ ಸುಯ್ಯಶ್ ರಾಯ್‌ (Suyyash Rai) ಅವರನ್ನು ವಿವಾಹವಾಗಿರುವ ಕಿಶ್ವರ್ ಮರ್ಚೆಂಟ್ ಅವರ ಮಗ ನಿರ್ವೈರ್ ಸ್ಕಲ್ ಕ್ಯಾಪ್ ಧರಿಸಿರುವ ವಿಡಿಯೋವನ್ನು ಪೋಸ್ಟ್ ಮಾಡಿದ ಬಳಿಕ ಟ್ರೋಲ್‌ಗೆ ಗುರಿಯಾಗಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಿಶ್ವರ್, ನಾನು ಹಿಂದೂವನ್ನು ಮದುವೆಯಾಗಿರುವ ಮುಸ್ಲಿಂ. ಆದರೂ ನಾನು ಚರ್ಚ್, ಗುರುದ್ವಾರ ಅಥವಾ ದೇವಸ್ಥಾನಕ್ಕೆ ಹೋಗುತ್ತೇನೆ. ನಾನು, ನನ್ನ ಮಗನನ್ನು ಎಲ್ಲೆಲ್ಲಿಗೋ ಕರೆದುಕೊಂಡು ಹೋಗುತ್ತೇನೆ ಮತ್ತು ದೇವರು ನಿಜವಾಗಿ ಒಬ್ಬನೇ ಎಂದು ನಂಬುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಕಿಶ್ವರ್ ಮರ್ಚೆಂಟ್ ಅವರು ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಅವರ ಮಗ ನಿರ್ವೈರ್ ಮುಸ್ಲಿಂ ಆಚರಣೆಗಳನ್ನು ಮಾಡುತ್ತಿರುವುದು ಕಂಡು ಬಂದಿದೆ. ಕಿಶ್ವರ್ ಅವರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೋದಲ್ಲಿ ಅವರ ಪತಿ ಮತ್ತು ನಟ ಸುಯ್ಯಾಶ್ ರಾಯ್‌ ಅವರು ಮಗ ನಿರ್ವೈರ್‌ಗೆ ಮುಸ್ಲಿಮರು ನಡೆಸುವ ಪ್ರಾರ್ಥನೆ ವಿಧಿಗಳನ್ನು ಕಲಿಸುತ್ತಿರುವುದನ್ನು ಕಾಣಬಹುದು. ಈ ವಿಡಿಯೋದಲ್ಲಿ ಯುವಕ ಸ್ಕಲ್ ಕ್ಯಾಪ್ ಧರಿಸಿದ್ದಾನೆ.
ಇದರಿಂದ ಕಿಶ್ವರ್ ಸಾಕಷ್ಟು ದ್ವೇಷದ ಕಾಮೆಂಟ್‌ಗಳನ್ನು ಸ್ವೀಕರಿಸಿದರು ಮತ್ತು ಅವರ ಮಗ ನಿರ್ವೈರ್‌ ನನ್ನು ಟ್ರೋಲ್ ಮಾಡಲಾಯಿತು.

ಮುಸ್ಲಿಂ ಆಗಿರುವ ಕಿಶ್ವರ್ ಅವರು ಹಿಂದೂ ಆಗಿರುವ ಸುಯ್ಯಶ್ ರಾಯ್‌ ಅವರನ್ನು ವಿವಾಹವಾಗಿದ್ದಾರೆ. ಮುಸ್ಲಿಮರು ಎಂದಾದರೂ ಭಗವಾನ್ ಅಥವಾ ರಾಮ್ ಎಂಬ ಪದವನ್ನು ಹೇಳುತ್ತಾರಾ? ಮುಸ್ಲಿಂ ಎಂದಾದರೂ ದೇವಸ್ಥಾನಕ್ಕೆ ಹೋಗುತ್ತಾನಾ? ಹಾಗೆ, ನಾವು ಇನ್ನೂ ಮಸೀದಿಗಳಿಗೆ ಹೋಗುತ್ತೇವೆ ಎಂದು ಪ್ರಶ್ನಿಸುವ ಕಾಮೆಂಟ್‌ಗಳು ಇದ್ದವು.

ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಕಿಶ್ವರ್‌, ನಾನು ಮುಸ್ಲಿಂ ಆದರೂ ಗುರುದ್ವಾರ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತೇನೆ. ದೀಪಾವಳಿ ಮತ್ತು ಕ್ರಿಸ್‌ಮಸ್‌ನಂತಹ ಎಲ್ಲಾ ಹಬ್ಬಗಳನ್ನು ಆಚರಿಸುತ್ತೇನೆ. ಪತಿ ಹಿಂದೂವಾದರೂ ಮಗ ಬೇರೆ ಧರ್ಮದ ಬಗ್ಗೆ ಕಲಿಯುವ ಬಗ್ಗೆ ಅವರಲ್ಲಿ ಯಾವುದೇ ಆತಂಕ ವಿಲ್ಲ ಎಂದು ಹೇಳಿದ್ದಾರೆ.


ತಂದೆ ಮಗನ ಮುದ್ದಾದ ವಿಡಿಯೋ

ಈ ವಿಡಿಯೋ ತಂದೆ ಮಗನದ್ದು ತುಂಬಾ ಮುದ್ದಾಗಿದೆ. ಆದ್ದರಿಂದ ನಾನು ಅದನ್ನು ಪೋಸ್ಟ್ ಮಾಡಿದ್ದೇನೆ. ನಾನು ಹಿಂದೂವನ್ನು ಮದುವೆಯಾಗಿರುವ ಮುಸ್ಲಿಂ ಎಂದು ಹೆಚ್ಚಿನವರಿಗೆ ತಿಳಿದಿಲ್ಲ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಕಾರ ಮಗ ಸಣ್ಣ ವಯಸ್ಸಿನಿಂದಲೇ ಎಲ್ಲ ಆಚರಣೆಗಳನ್ನು ನೋಡುತ್ತಿದ್ದಾನೆ. ಈ ಮುದ್ದಾದ ವಿಡಿಯೋಗಾಗಿ ಟ್ರೋಲ್ ಮಾಡುವುದು ಮೂರ್ಖತನ. ಆ ಜನರು ಕೇವಲ ಬುದ್ಧಿಹೀನರು ಮತ್ತು ಅವರು ಕೇವಲ ದ್ವೇಷವನ್ನು ಹರಡಲು ಅಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: YouTuber Dhruv Rathee: ಧ್ರುವ ರಾಥಿಯ ಮೋದಿ ವಿರೋಧಿ ವಿಡಿಯೊ ಗೊತ್ತು; ಅವರ ಲವ್‌ ಸ್ಟೋರಿ ಗೊತ್ತಾ?

ಮಗನಿಗೆ ಹಿಂದೂ ಹೆಸರನ್ನು ಇಟ್ಟಿದ್ದೇನೆ. ದೇವರು ಒಬ್ಬನೇ ಎಂದು ನಂಬುವ ಮೂಲಕ ತನ್ನ ಮಗನಿಗೆ ಪ್ರತಿಯೊಂದು ಧರ್ಮವನ್ನು ಕಲಿಸಲು ಬಯಸುತ್ತಾನೆ ಎಂದು ಕಿಶ್ವರ್ ತಿಳಿಸಿದ್ದಾರೆ.

ಅವನು ಮುಸಲ್ಮಾನರ ಟೋಪಿ ಧರಿಸಿ ಮುಂದೆ ಎಲ್ಲವನ್ನೂ ಕೆಟ್ಟದಾಗಿ ಮಾಡುತ್ತಾನೆ ಎನ್ನುವುದು ಅಸಹ್ಯಕರವಾಗಿದೆ. ಹೀಗೆ ಹೇಳುವವರ ಬಗ್ಗೆ ನನಗೆ ಅನುಕಂಪವಿದೆ. ಯಾಕೆಂದರೆ ಮಕ್ಕಳ ಚಿಂತನೆಗಳು ಅವರ ಪಾಲನೆಯಲ್ಲಿರುತ್ತದೆ. ನನ್ನ ಮಗು ಹಾಗೆ ಇರಬೇಕೆಂದು ನಾನು ಬಯಸುವುದಿಲ್ಲ ಮತ್ತು ಅದಕ್ಕಾಗಿಯೇ ನಾನು ಅವನನ್ನು ಎಲ್ಲೆಡೆ ಕರೆದುಕೊಂಡು ಹೋಗುತ್ತೇನೆ. ದೇವರು ಒಬ್ಬನೇ ಎಂದು ನಂಬುವಂತೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Continue Reading

ಸಿನಿಮಾ

Actor Darshan: ʻಡೆವಿಲ್ʼ ಸಿನಿಮಾಗೆ ದರ್ಶನ್‌ ಪಡೆದಿದ್ದು ಬರೋಬ್ಬರಿ 22 ಕೋಟಿ ರೂ.; ಶಾಕ್‌ನಲ್ಲಿ ನಿರ್ಮಾಪಕ!

VISTARANEWS.COM


on

Actor Darshan devil 22 crore taken by producer
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್‌ ಅವರನ್ನು (Actor Darshan) ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.  ಇನ್ನೇನು ದಚ್ಚು ಫ್ಯಾನ್ಸ್‌ ʻಡೆವಿಲ್‌ʼ ಸಿನಿಮಾ ರಿಲೀಸ್‌ಗೆ ಕಾಯುತ್ತಿರುವಾಗಲೇ ʻದಾಸʼ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾರೆ. ಈ ಮುಂಚೆಯೂ ಹಲವು ಪ್ರಕರಣಗಳಲ್ಲಿ ದರ್ಶನ್‌ ಪೊಲೀಸರು ಅತಿಥಿಯಾಗಿದ್ದರೂ ಈ ಬಾರಿ ಗಂಭೀರ ಪ್ರಕರಣವಾಗಿರುವುದರಿಂದ ದರ್ಶನ್‌ಗೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗುತ್ತಿದೆ. ಇದೀಗ ದರ್ಶನ್‌ ಡೆವಿಲ್‌ ಸಿನಿಮಾಗಾಗಿ 22 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಟೇರ ಯಶಸ್ಸಿನ ಬಳಿಕ ಡೆವಿಲ್‌ ಎಂಬ ಸಿನಿಮಾದಲ್ಲಿ ದರ್ಶನ್‌ ನಟಿಸುತ್ತಿದ್ದಾರೆ. ಈ ವರ್ಷ ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆಯಿತ್ತು. ಈ ಸಿನಿಮಾದ ಶೂಟಿಂಗ್‌ ಭರದಿಂದ ನಡೆಯುತ್ತಿತ್ತು. ಈ ಚಿತ್ರದ ಗ್ಲಿಂಪ್ಸ್‌ ವಿಡಿಯೋ ಕೂಡ ರಿಲೀಸ್‌ ಮಾಡಲಾಗಿತ್ತು. ಡೆವಿಲ್‌ನಲ್ಲಿ ಬಾಲಿವುಡ್‌ ನಟ ಮಹೇಶ್‌ ಮಂಜ್ರೇಕರ್‌ ಕೂಡ ನಟಿಸುತ್ತಿದ್ದಾರೆ. ಪ್ರಕಾಶ್‌ ವೀರ್‌ ನಿರ್ದೇಶನದ ಡೆವಿಲ್‌ ಸಿನಿಮಾಗೆ ದರ್ಶನ್‌ ಬರೋಬ್ಬರಿ 22 ಕೋಟಿ ರೂ. ಪಡೆದುಕೊಂಡಿದ್ದರು.

ಟೀಸರ್ ನಿಂದಲೇ ಕೌತುಕ ಹುಟ್ಟಿಸಿದ ಡೆವಿಲ್ ಸಿನಿಮಾ ಕೇವಲ 25 ದಿನ ಶೂಟಿಂಗ್ ಆಗಿದೆ. ಮೊದಲ ಶೆಡ್ಯೂಲ್ ಚಿತ್ರೀಕರಣದ ವೇಳೆ ದರ್ಶನ್ ಆಕ್ಷನ್ ಸಿಕ್ವೇನ್ಸ್ ಮಾಡೋದಿಕ್ಕೆ ಹೋಗಿ ಎಡಗೈಯಿ ಮುರಿದುಕೊಂಡರು. ಹೀಗಾಗಿ ದಾಸ ಶಸ್ತ್ರ ಚಿಕಿತ್ಸೆಗೆ ಒಳಗಾದ ಕಾರಣ ಈ ಸಿನಿಮಾ ಶೂಟಿಂಗ್ ಮುಂದಕ್ಕೆ ಹಾಕಲಾಗಿತ್ತು. ಈ ಘಟನೆ ನಡೆಯುವ ಎರಡು ದಿನದ ಹಿಂದೆ ಡೆವಿಲ್ ಚಿತ್ರದ ಎರಡನೇ ಹಂತದ ಶೂಟಿಂಗ್ ಆರಂಭವಾಗಿತ್ತು. ನಿನ್ನೆ ದರ್ಶನ್ ಭಾಗವಹಿಸಬೇಕಿತ್ತು ಅಷ್ಟರಲ್ಲಿ ಡಿ ಬಾಸ್ ಪೊಲೀಸರ ಅತಿಥಿಯಾಗಿದ್ದರು.

ಇದನ್ನೂ ಓದಿ: Actor Darshan: ಆರ್ ಆರ್​​ ನಗರ ವಾಸ್ತು ಸರಿಯಿಲ್ಲ, ಕೇಸುಗಳು ಬೀಳ್ತವೆ ಎಂದಿದ್ದರು ಆರ್ಯವರ್ಧನ್​ ಗುರೂಜಿ; ದರ್ಶನ್ ವಿಷಯದಲ್ಲಿ ಸತ್ಯವಾಯ್ತೇ?

ಈ ಕಡೆ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂಬ ಸುದ್ದಿ ಕೇಳಿದ ತಕ್ಷಣ ನಿರ್ದೇಶಕ ಪ್ರಕಾಶ್ ಶಾಕ್‌ಗೆ ಒಳಗಾಗಿ ನಿನ್ನೆ ಶೂಟಿಂಗ್‌ವನ್ನು ಸ್ಟಾಪ್ ಮಾಡಿದ್ದಾರೆ ಎನ್ನಲಾಗಿದೆ. ಡೆವಿಲ್ ಚಿತ್ರವನ್ನ ಡಿಸೆಂಬರ್ 25ಕ್ಕೆ ಬಿಡುಗಡೆ ಮಾಡುತ್ತೇವೆ ಎಂದ ನಿರ್ದೇಶಕ ಪ್ರಕಾಶ್ ಕಂಗಾಲು ಆಗಿದ್ದಾರೆ. ಕಾರಣ ದರ್ಶನ್ ಹೊರಗಡೆ ಬರುವರೆಗೆ ಡೆವಿಲ್ ಹೀರೋ ಸಿನಿಮಾ ಶೂಟಿಂಗ್ ಶುರುವಾಗೋದಿಲ್ಲ. ಹಾಗೇ ಡಿಸೆಂಬರ್ ನಲ್ಲಿ ಡೆವಿಲ್ ಚಿತ್ರ ಬಿಡುಗಡೆ ಇಲ್ಲದೆ ಮುಂದಿನ ವರ್ಷಕ್ಕೆ ಹೋಗುತ್ತೆ. ಅಷ್ಟಕ್ಕೂ ದರ್ಶನ್ ಸಿನಿಮಾಗೆ ತೆಗೆದುಕೊಂಡಿರುವ ಸಂಭಾವನೆ ಬರೋಬ್ಬರಿ 22 ಕೋಟಿ ರೂ. ಎನ್ನಲಾಗಿದೆ ಡೆವಿಲ್ ಚಿತ್ರದ ಬಳಿಕ ದರ್ಶನ್ ನಟಿಸಲು ಒಪ್ಪಿಕೊಂಡ ಚಿತ್ರ ಸಿಂಧೂರ ಲಕ್ಷ್ಮಣ.

ಕ್ರಾಂತಿ ಸಿನಿಮಾ ಮಾಡಿದ್ದ ನಿರ್ಮಾಪಕ ಬಿ ಸುರೇಶ್ ನಿರ್ಮಾಣದ ಹಾಗು ತರುಣ್ ಸುಧೀರ್ ನಿರ್ದೇಶನದ ಸಿಂಧೂರು ಲಕ್ಷ್ನಣ ಸಿನಿಮಾ ಶುರುವಾಗಬೇಕಿತ್ತು. ಆದರೆ ದರ್ಶನ್ ಎಡವಟ್ಟಿನಿಂದ ಸಿಂಧೂರ ಲಕ್ಷ್ಮಣ ಸಿನಿಮಾ ಶೂಟಿಂಗ್ ಕೂಡ ಮುಂದಿನ ವರ್ಷಕ್ಕೆ ಹೋಗಲಿದೆ. ಈ ಸಿನಿಮಾ ದರ್ಶನ್ ಪಡೆದಿರೋ ಅಡ್ವಾನ್ಸ್ 3 ಕೋಟಿ ರೂ. ಯಂತೆ.

ಈ ಚಿತ್ರದ ಮಧ್ಯೆ ದರ್ಶನ್ ಮತ್ತೊಂದು ಬಿಗ್ ಬಜೆಟ್ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದರು. ಅದು ಜೋಗಿ ಪ್ರೇಮ್ ನಿರ್ದೇಶನದ ಕನ್ನಡದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೋಡಕ್ಷನ್ ದರ್ಶನ್ ಬಹುಕೋಟೆ ವೆಚ್ಚದ ಸಿನಿಮಾ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಅಡ್ವಾನ್ಸ್ ಹಣ ಎಂದು ದರ್ಶನ್ 3 ರಿಂದ 5 ಕೋಟಿ ಪಡೆದಿದ್ದಾರೆ ಎನ್ನುವುದು ಗಾಂಧಿನಗರದ ಮಾತು.

ಈ ಪ್ರಾಜೆಕ್ಟ್ ಮುಗಿದ ಮೇಲೆ ದರ್ಶನ್ ಮತ್ತೆ ಜಗ್ಗುದಾದ ಸಿನಿಮಾ ನಿರ್ದೇಶಕರಾದ ರಾಘವೇಂದ್ರ ಹೆಗ್ಡೆ ಜೊತೆ ಸಿನಿಮಾ ಮಾಡ್ತಾ ಇದ್ದಾರೆ.‌ ಸಿಂಧೂರ ಲಕ್ಷ್ಮಣ ಚಿತ್ರ ಶೂಟಿಂಗ್ ಮುಗಿದ ಬಳಿಕ ಈ ಚಿತ್ರದ ಸ್ಟಾರ್ ಆಗೋದು ಬಹುಶಃ 2025ನೇ ವರ್ಷದ ಅಂತ್ಯದಲ್ಲಿ. ಈ ಚಿತ್ರಕ್ಕೆ ದರ್ಶನ್ ಮುಂಗಡ ಹಣ ಎಂದು 5 ಕೋಟಿ ರೂ. ಪಡೆದಿದ್ದಾರೆ ಎನ್ನಲಾಗಿದೆ.

ಈ ಚಿತ್ರಗಳ ಬಳಿಕ ದರ್ಶನ್ ತೆಲುಗಿನ ಅತ್ತಾರಿಂಟಿಕಿ ದಾರೇದಿ ಚಿತ್ರದ ನಿರ್ಮಾಪಕರಾದ ಬಿ.ವಿ.ಎಸ್. ಎನ್ ಪ್ರಸಾದ್ ಜೊತೆ ಸಿನಿಮಾ ಮಾತಕಥೆ ಆಗಿ 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರಂತೆ‌. ಈ ಸಿನಿಮಾ ಶುರುವಾಗೋದಿಕ್ಕೆ ಇನ್ನು ಒಂದು ವರ್ಷ ಆಗುತ್ತೆ. ಇದರ ಜತೆಗೆ ತಮಿಳು ನಿರ್ಮಾಪಕ ರಮೇಶ್ ಪಿಳ್ಳೈ ಜೊತೆ ಚಿತ್ರ ಮಾಡುವುದಾಗಿ ದರ್ಶನ್ ಮಾತುಕತೆ ಆಗಿತ್ತು. ಈ ಸಿನಿಮಾ ಮಾಡುವುದಾಗಿ ಅಡ್ವಾನ್ಸ್ ಹಣ ಅಂತಾ 25 ಲಕ್ಷ ಪಡೆದಿದ್ದರಂತೆ‌. ಹಾಗೇ ಮತ್ತೊಬ್ಬ ಹೈದರಾಬಾದ್ ನಿರ್ಮಾಪಕ ರಘುನಾಥ್ ಎಂಬುವರ ಜತೆ ಸಿನಿಮಾ ಮಾತುಕತೆ ಆಗಿದೆ‌. ಈ ಚಿತ್ರಕ್ಕೂ ದರ್ಶನ್ 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರಂತೆ‌. ಇದೀಗ ದರ್ಶನ್‌ ಅವರನ್ನು ನಂಬಿಕೊಂಡು ಸಿನಿಮಾಗಳಿಗೆ ಈಗಾಗಲೇ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿರುವ ನಿರ್ಮಾಪಕರ ಗತಿ ಏನು? ಹಾಗೇ ಸಿನಿಮಾಗಳೆ ಬರುತ್ತಿಲ್ಲ ಎಂಬ ಗಾಸಿಪ್‌ಗಳ ಮಧ್ಯೆ ವರ್ಷಕ್ಕೆ ಒಂದೆರಡು ಸಿನಿಮಾ ಮಾಡುತ್ತಿದ್ದ ದರ್ಶನ್‌ ಜೈಲು ಪಾಲಾದರೆ ಏನು ಕಥೆ? ಎಂದು ಫ್ಯಾನ್ಸ್‌ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

Continue Reading
Advertisement
Actor Darshan warn darshan previous
ಸ್ಯಾಂಡಲ್ ವುಡ್7 mins ago

Actor Darshan: ಇದು ರೌಡಿಸಂ ಸೆಂಟರ್‌ ಅಲ್ಲ; ನಿಜ ಆಗ್ತಾ ಇದೆಯಾ ಅಂದು ಜಗ್ಗೇಶ್‌ ನುಡಿದಿದ್ದ ಭವಿಷ್ಯ?

7th Pay Commission
ಪ್ರಮುಖ ಸುದ್ದಿ12 mins ago

7th pay commission : ಸಂಪುಟದಲ್ಲಿ ಚರ್ಚೆಯಾಗದ 7ನೇ ವೇತನ ಆಯೋಗ ಶಿಫಾರಸು; ಸರ್ಕಾರಿ ನೌಕರರ ಸಂಘಗಳ ಆಕ್ರೋಶ

Heavy Rainfall
ದೇಶ16 mins ago

Heavy Rainfall: ಸಿಕ್ಕಿಂನಲ್ಲಿ ಭಾರೀ ಮಳೆ, ಪ್ರವಾಹ: 6 ಮಂದಿ ಸಾವು, ಭೂಕುಸಿತದಿಂದ ಸಂಪರ್ಕ ಕಡಿತ

Paris Olympics 2024
ಕ್ರೀಡೆ27 mins ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಬೋಪಣ್ಣಗೆ ಶ್ರೀರಾಮ್‌ ಬಾಲಾಜಿ ಜತೆಗಾರ

Tirupati Temple
ಪ್ರಮುಖ ಸುದ್ದಿ40 mins ago

Tirupati Temple : ತಿರುಪತಿ ದೇಗುಲವನ್ನು ಹಿಂದೂ ನಂಬಿಕೆಯಂತೆ ಪವಿತ್ರಗೊಳಿಸುವೆ; ಸಿಎಂ ಚಂದ್ರಬಾಬು ನಾಯ್ಡು ಶಪಥ

Rape Case
ಪ್ರಮುಖ ಸುದ್ದಿ56 mins ago

Rape Case: 14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

Religious Conversion Case
Latest57 mins ago

Religious Conversion Case: ಹಿಂದೂ ಹುಡುಗಿಯ ಖಾಸಗಿ ಫೋಟೊ ತೆಗೆದು ಬ್ಲ್ಯಾಕ್‌ಮೇಲ್‌; ಮತಾಂತರಕ್ಕೆ ಒತ್ತಡ

Kuwait Fire
ವಿದೇಶ59 mins ago

Kuwait Fire: ಕುವೈತ್‌ ಅಗ್ನಿ ದುರಂತ; 45 ಭಾರತೀಯರ ಮೃತದೇಹ ಇಂದು ಸ್ವದೇಶಕ್ಕೆ

Wild Elephant
ಪ್ರಮುಖ ಸುದ್ದಿ1 hour ago

Wild Elephant : ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವವರಿಗೆ ಎಚ್ಚರಿಕೆ; ಆಗಾಗ ಕಾಣಿಸಿಕೊಳ್ಳುತ್ತಿದೆ ಒಂಟಿ ಸಲಗ

Araku Valley Tour
ಪ್ರವಾಸ1 hour ago

Araku Valley Tour: ಆಂಧ್ರಪ್ರದೇಶದ ಅರಕು ವ್ಯಾಲಿ; ಹಲವು ಅದ್ಭುತಗಳ ಸಂಗಮ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌