Road Accident: ಟಿಪ್ಪರ್‌ಗೆ ಟೆಂಪೋ ಡಿಕ್ಕಿ, ಚಾಲಕ, ಕ್ಲೀನರ್‌ ಗಂಭೀರ; ಕುಡಿದು ಚಾಲನೆ? - Vistara News

ಕ್ರೈಂ

Road Accident: ಟಿಪ್ಪರ್‌ಗೆ ಟೆಂಪೋ ಡಿಕ್ಕಿ, ಚಾಲಕ, ಕ್ಲೀನರ್‌ ಗಂಭೀರ; ಕುಡಿದು ಚಾಲನೆ?

Road Accident: ಅಪಘಾತದಲ್ಲಿ ಚಾಲಕ ಹಾಗೂ ಕ್ಲೀನರ್‌ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್‌ಗೆ ದಾಖಲು ಮಾಡಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

VISTARANEWS.COM


on

Road accident tempo collides with tipper and driver cleaner critical
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೋಡಿಶೆಟ್ಟಿಪುರದ ಬಳಿ ಟಿಪ್ಪರ್‌ಗೆ ಹಿಂಬದಿಯಿಂದ ಟೆಂಪೋ ಡಿಕ್ಕಿಯಾಗಿದ್ದು, ಚಾಲಕ ಹಾಗೂ ಕ್ಲೀನರ್‌ಗೆ ಗಂಭೀರ (Serious injury) ಗಾಯಗಳಾಗಿವೆ. ಕುಡಿದು ಚಾಲನೆ (Drunk and drive) ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಟಿಪ್ಪರ್‌ಗೆ ಡಿಕ್ಕಿ (Road Accident) ಹೊಡೆದಿದೆ ಎಂದು ಹೇಳಲಾಗಿದೆ.

ಕೋಡಿಶೆಟ್ಟಿಪುರ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ಜನರೇಟರ್ ಟೆಂಪೋ ಇದಾಗಿದೆ ಎಂದು ತಿಳಿದುಬಂದಿದೆ. ಕೋಡಿಶೆಟ್ಟಿಪುರ ಗ್ರಾಮದ ಬಳಿ ಬಂದಾಗ ಟೆಂಪೋ ನಿಯಂತ್ರಣ ತಪ್ಪಿದೆ. ಹೀಗಾಗಿ ಮುಂದೆ ಹೋಗುತ್ತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆಯಲಾಗಿದೆ.

ನಶೆಯಲ್ಲಿದ್ದ ಚಾಲಕ ಹಾಗೂ ಕ್ಲೀನರ್‌ಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್‌ಗೆ ದಾಖಲು ಮಾಡಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Unidentified body: DNA ಪರೀಕ್ಷೆಗಾಗಿ 4 ವರ್ಷದ ಹಿಂದೆ ಹೂತಿದ್ದ ಶವ ಹೊರಕ್ಕೆ! ಸತ್ತ ಮಹಿಳೆ ಯಾರು?

ದಾವಣಗೆರೆ: ಅದೊಂದು ನಾಲ್ಕು ವರ್ಷದ ಹಿಂದಿನ‌ ಸಾವಿನ ಕೇಸ್. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಸಮೀಪ ಮಹಿಳೆಯೊಬ್ಬರ ಶವ (Women body Found) ಪತ್ತೆಯಾಗಿತ್ತು. ಆದರೆ, ಅದು ಯಾರ ಶವ ಎಂಬುದು ಮಾತ್ರ ಗೊತ್ತೇ ಆಗಿರಲಿಲ್ಲ. ಈ ಬಗ್ಗೆ ಪೊಲೀಸರು ಪ್ರಕಟಣೆಯನ್ನೂ ಹೊರಡಿಸಿದ್ದರು. ಆದರೆ, ಯಾರೂ ಸಹ ಗುರುತು ಹಿಡಿದು ಬಂದಿರಲಿಲ್ಲ. ಹೀಗಾಗಿ ಅನಾಮಧೇಯ ವ್ಯಕ್ತಿ ಶವ (Unidentified body) ಎಂದು ನಿರ್ಣಯಿಸಿ ಪೊಲೀಸರು ಶವವನ್ನು ಹೂತು ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದರು. ಆದರೆ, ಈಗ ಈ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಡಿಎನ್‌ಎ ಪರೀಕ್ಷೆಗಾಗಿ ಹೂತಿಡಲಾಗಿದ್ದ ಶವವನ್ನು ಹೊರಕ್ಕೆ ತೆಗೆಯಲಾಗಿದೆ.

ಇದಕ್ಕೆ ಕಾರಣ ನ್ಯಾಯಾಲಯದ ಆದೇಶವಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಹೂತ ಶವವನ್ನು ಪೊಲೀಸರು ಹೊರಕ್ಕೆ ತೆಗೆದಿದ್ದಾರೆ. ಈಗ ಡಿಎನ್‌ಎ ಪರೀಕ್ಷೆ ಬಳಿಕ ಆ ಮಹಿಳೆಯೇ ಹೌದಾ? ಇಲ್ಲವಾ ಎಂಬುದು ತಿಳಿಯಲಿದೆ. ಬಳಿಕ ಈ ಕೇಸನ್ನು ಆತ್ಮಹತ್ಯೆಯೋ? ಕೊಲೆಯೋ ಎಂಬುದರ ಬಗ್ಗೆ ತನಿಖೆಯನ್ನು ನಡೆಸಬೇಕಿದೆ.

ಸೂಳೆಕೆರೆ ಸಮೀಪ ಸಿಕ್ಕಿದ್ದ ಮಹಿಳೆ ಶವ

ಸುಮಾರು 40 ವರ್ಷ ವಯಸ್ಸಿನ ಮಹಿಳೆಯ ಶವವು 2020ರಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಸಮೀಪ ಸಿಕ್ಕಿತ್ತು. ಇದು ಭದ್ರಾನಾಲೆ ಮುಖಾಂತರ ಸೂಳೆಕೆರೆ ತಲುಪಿದೆ ಎಂದು ಅಂದಾಜಿಸಲಾಗಿದೆ. ಆಗ ಅರೆಬರೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಅಂದು ಗುರುತಿಸಲಾಗದಂತಹ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದರಿಂದ ಪೊಲೀಸರು ಸೂಳೆಕೆರೆ ಬದಿಯಲ್ಲಿ ಶವಸಂಸ್ಕಾರವನ್ನು ನೆರವೇರಿಸಿದ್ದರು.

ಮಹಿಳೆ ನಾಪತ್ತೆ ಪ್ರಕರಣ ದಾಖಲಾಗಿತ್ತು

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರತೋಳಲು ಕೈಮರದ ನಾಗರತ್ನಮ್ಮ ಎಂಬುವವರು ಕಾಣೆಯಾದ ಬಗ್ಗೆ 2020ರಲ್ಲಿ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಠಾಣೆಯಲ್ಲಿ ದೂರನ್ನು ದಾಖಲು ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದರೂ ಸಹ ಎಲ್ಲಿಯೂ ಸುಳಿವು ಸಿಕ್ಕಿರಲಿಲ್ಲ. ಆದರೆ, ಪ್ರಕರಣವನ್ನು ಕೈಬಿಡದ ಪೊಲೀಸರು ಹುಡುಕಾಟವನ್ನು ನಡೆಸಿದ್ದರು. ಬಳಿಕ ಸೂಳೆಕೆರೆಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಅದರ ಚಹರೆಯನ್ನು ಪರಿಶೀಲನೆ ನಡೆಸಿದಾಗ ನಾಗರತ್ನಮ್ಮ ಅವರಿಗೂ ಆ ಶವಕ್ಕೂ ಬಹಳ ಸಾಮ್ಯತೆ ಕಂಡು ಬಂದಿದೆ.

ಇದನ್ನೂ ಓದಿ: Karnataka Weather: ಫೆಬ್ರವರಿ ಮೊದಲ ವಾರ ಚಳಿ ಹೇಗೆ? ಹವಾಮಾನ ತಜ್ಞರು ಹೇಳೋದೇನು?

ಎಫ್‌ಎಸ್‌ಎಲ್ ತಜ್ಞರ ಭೇಟಿ

ಹೋಲಿಕೆ ಶಂಕೆ ಹಿನ್ನೆಲೆಯಲ್ಲಿ ಚನ್ನಗಿರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಮೊರೆ ಹೋಗಲಾಗಿತ್ತು. ಈಗ ನ್ಯಾಯಾಲಯವು ಶವವನ್ನು ಹೊರಕ್ಕೆ ತೆಗೆದು ಡಿಎನ್‌ಎ ಪರೀಕ್ಷೆಯನ್ನು ನಡೆಸುವಂತೆ ಆದೇಶಿಸಿದೆ. ಆದೇಶದ ಹಿನ್ನೆಲೆಯಲ್ಲಿ ದಾವಣಗೆರೆ ಎಫ್‌ಎಸ್‌ಎಲ್ ತಜ್ಞರು ಮತ್ತು ಚಿಗಟೇರಿ ಆಸ್ಪತ್ರೆಯ ವೈದ್ಯರ ಸಮಕ್ಷಮದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಶುಕ್ರವಾರ ಶವವನ್ನು ಹೊರತೆಗೆದು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಈಗ ಡಿಎನ್ಎ ಪರೀಕ್ಷೆಗೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಮೃತದೇಹವನ್ನು ರವಾನೆ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

Panjurli Daiva: ಶರತ್‌ ಶೆಟ್ಟಿ ಕೊಲೆ ಆರೋಪಿ ಶರಣಾಗತಿ; ಎಳೆತಂದು ನಿಲ್ಲಿಸಿತೇ ಪಂಜುರ್ಲಿ ದೈವ?

ಪಂಜುರ್ಲಿ ದೈವ (Panjurli Daiva) , “ಆರೋಪಿಯನ್ನು ಪಾತಾಳದಲ್ಲಿದ್ದರೂ ಹುಡುಕಿ ಮುಂದೆ ನಿಲ್ಲಿಸುತ್ತೇನೆ” ಎಂದು ಅಭಯ ನೀಡಿತ್ತು. ಒಂದು ವರ್ಷಕ್ಕೂ ಅಧಿಕ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಕೋರ್ಟ್‌ಗೆ ಶರಣಾಗಿರುವುದರ ಹಿಂದೆ ಪಂಜುರ್ಲಿ ದೈವದ ಮಹಿಮೆ ಇದೆ ಎಂದು ಸ್ಥಳೀಯರು ನಂಬಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ ಹಲವರ ಬಂಧನ ನಡೆದಿದೆ.

VISTARANEWS.COM


on

panjurli daiva sharat shetty murder
ಎಡಚಿತ್ರದಲ್ಲಿ ಕೊಲೆಯಾದ ಶರತ್‌ ಶೆಟ್ಟಿ, ಬಲಚಿತ್ರದಲ್ಲಿ ಆರೋಪಿ ಯೋಗೀಶ್‌ ಆಚಾರ್ಯ.
Koo

ಉಡುಪಿ: ತುಳುನಾಡಿನ (Tulunadu) ಆರಾಧ್ಯ ದೈವವಾದ ಪಂಜುರ್ಲಿ ದೈವದ (Panjurli Daiva) ಕಾರಣಿಕ ಎಂದೇ ವ್ಯಾಖ್ಯಾನಿಸಲಾಗುತ್ತಿರುವ ಘಟನೆಯೊಂದು ಉಡುಪಿ (Udupi news) ಜಿಲ್ಲೆಯಲ್ಲಿ ನಡೆದಿದೆ. ಪಾಂಗಾಳದಲ್ಲಿ ನಡೆದಿದ್ದ ಶರತ್‌ ಶೆಟ್ಟಿ (Sharat Shetty murder) ಎಂಬಾತನ ಕೊಲೆಯ ಪ್ರಮುಖ ಆರೋಪಿಯೊಬ್ಬ ಶರಣಾಗತನಾಗಿದ್ದಾನೆ. ಇದಕ್ಕೂ ಮುನ್ನ ಕೊಲೆಯಾದಾತನ ಕುಟುಂಬಿಕರು ಪಂಜುರ್ಲಿ ದೈವ ಮೊರೆ ಹೋಗಿದ್ದರು.

2023ರ ಫೆಬ್ರವರಿ 5ರಂದು ಉಡುಪಿಯ ಪಾಂಗಾಳ ಎಂಬಲ್ಲಿ ಬಬ್ಬು ಸ್ವಾಮಿ ದೈವಸ್ಥಾನದ ನೇಮದಲ್ಲಿ ಭಾಗವಹಿಸಿದ್ದ ಶರತ್ ಶೆಟ್ಟಿ (42) ಅವರು ದುಷ್ಕರ್ಮಿಗಳಿಗೆ ಬಲಿಯಾಗಿದ್ದರು. ಮಾತುಕತೆಗೆ ಎಂದು ಕರೆದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಪತ್ತೆಯಾಗಿರಲಿಲ್ಲ.

ಬಳಿಕ ಕುಟುಂಬಸ್ಥರು ಮಾರ್ಚ್ 24, 2023ರಂದು ಪಾಂಗಾಳದ ಮನೆಯಲ್ಲಿ ವರ್ತೆ ಪಂಜುರ್ಲಿಗೆ ನೇಮೋತ್ಸವವನ್ನು ಆಯೋಜಿಸಿ, ದೈವದ ಮೊರೆ ಹೋಗಿದ್ದರು. ಈ ಸಂದರ್ಭದಲ್ಲಿ ಪಂಜುರ್ಲಿ ದೈವ (Panjurli Daiva) , “ಆರೋಪಿಯನ್ನು ಪಾತಾಳದಲ್ಲಿದ್ದರೂ ಹುಡುಕಿ ಮುಂದೆ ನಿಲ್ಲಿಸುತ್ತೇನೆ” ಎಂದು ಅಭಯ ನೀಡಿತ್ತು.

ಅಚ್ಚರಿ ಎಂಬಂತೆ, ಮೇ.23ರಂದು ಪ್ರಕರಣ ಎ1 ಆರೋಪಿ ಯೋಗೀಶ್ ಆಚಾರ್ಯ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಒಂದು ವರ್ಷ ಮೂರು ತಿಂಗಳು ತಲೆಮರೆಸಿಕೊಂಡಿದ್ದ ಈತ ಉಡುಪಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿದ್ದಾನೆ. ಯೋಗೀಶ್ ಆಚಾರ್ಯನನ್ನು ಮೇ 30ರ ವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.

ಒಂದು ವರ್ಷಕ್ಕೂ ಅಧಿಕ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಕೋರ್ಟ್‌ಗೆ ಶರಣಾಗಿರುವುದರ ಹಿಂದೆ ಪಂಜುರ್ಲಿ ದೈವದ ಮಹಿಮೆ ಇದೆ ಎಂದು ಸ್ಥಳೀಯರು ನಂಬಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ ಹಲವರ ಬಂಧನ ನಡೆದಿದೆ.

ತುಳುನಾಡಿನ ಪಂಜುರ್ಲಿ ದೈವದ ಬಗ್ಗೆ ರಿಷಭ್‌ ಶೆಟ್ಟಿ ನಟನೆಯ ʼಕಾಂತಾರʼ ಚಿತ್ರದ ಬಳಿಕ ಹೊರಗಡೆಯೂ ಹೆಚ್ಚು ಅರಿವು ಮೂಡಿತ್ತು. ದಕ್ಷಿಣ ಕನ್ನಡ ಹಾಗೂ ಉಡುಪಿಯ ಕರಾವಳಿಯಲ್ಲಿ ನ್ಯಾಯನಿರ್ಣಯಗಳಿಗೆ ದೈವದ ಕೋಲದಲ್ಲಿ ಪ್ರಶ್ನೆ ಹಾಕುವುದು ಹಾಗೂ ದೈವದಿಂದ ʼಅಭಯʼ ಪಡೆಯುವುದು ಸಾಮಾನ್ಯವಾಗಿ ಕಂಡುಬರುತ್ತದೆ.

ಇದನ್ನೂ ಓದಿ: Glenn Maxwell: ಕಾಂತಾರದ ‘ಪಂಜುರ್ಲಿ’ ಬಲದಿಂದ ಮ್ಯಾಕ್ಸ್‌ವೆಲ್‌ 201 ರನ್ ಚಚ್ಚಿದರೇ?

Continue Reading

ಕರ್ನಾಟಕ

Prajwal Revanna Case: ಬೆಂಗಳೂರಿಗೆ ಪ್ರಜ್ವಲ್‌ ರೇವಣ್ಣ ಟಿಕೆಟ್ ಬುಕ್; ನಾಳೆ ಮಧ್ಯಾಹ್ನ ಜರ್ಮನಿಯಿಂದ ಪ್ರಯಾಣ

Prajwal Revanna Case: ಬೆಂಗಳೂರಿಗೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್‌ ರೇವಣ್ಣ, ಮೇ 30ರಂದು ಮಧ್ಯಾಹ್ನ ಜರ್ಮನಿಯಲ್ಲಿ ಫ್ಲೈಟ್‌ ಹತ್ತಲಿದ್ದಾರೆ. ಅವರು ಬೆಂಗಳೂರಿಗೆ ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಮೇ 31ರಂದು ಭಾರತಕ್ಕೆ ಆಗಮಿಸುವುದಾಗಿ ಹೇಳಿದ್ದ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು, ಇದೀಗ ಬೆಂಗಳೂರಿಗೆ ಟಿಕೆಟ್‌ ಮಾಡಿರುವುದು ಕಂಡುಬಂದಿದೆ. ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್‌ ರೇವಣ್ಣ, ಮೇ 30ರಂದು ಮಧ್ಯಾಹ್ನ ಜರ್ಮನಿಯಲ್ಲಿ ಫ್ಲೈಟ್‌ ಹತ್ತಲಿದ್ದಾರೆ.

ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಗುರುವಾರ ಮಧ್ಯಾಹ್ನ 12.05ಕ್ಕೆ ಮ್ಯೂನಿಚ್‌ನಲ್ಲಿ ಫ್ಲೈಟ್ ಹತ್ತಲಿದ್ದಾರೆ. ಮಧ್ಯರಾತ್ರಿ 12.30ಕ್ಕೆ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರು ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ ಎಂದು ಈಗಾಗಲೇ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಮೇ 27ರಂದು ವಿಡಿಯೊದಲ್ಲಿ ಮಾತನಾಡಿದ್ದ ಪ್ರಜ್ವಲ್‌ ರೇವಣ್ಣ, ನಾನು ಶುಕ್ರವಾರ (ಮೇ 31) ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಕಾಂಗ್ರೆಸ್‌ ನಾಯಕರು ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ ಎಂಬುದಾಗಿ ಹೇಳಿದ್ದರು.

ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ಠಿಕಾಣಿ

ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP ‌Prajwal Revanna Case) ಭಾರತಕ್ಕೆ ಬರುತ್ತಿದ್ದಂತೆ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿಕೊಂಡಿರುವ ಎಸ್‌ಐಟಿ (SIT) ತಂಡ, ಏರ್‌ಪೋರ್ಟ್‌ನಲ್ಲಿಯೇ (Kempegowda International Airport – KIA) ಸದ್ಯ ಠಿಕಾಣಿ ಹಾಕಿದೆ.

ಇದನ್ನೂ ಓದಿ | Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

ಶುಕ್ರವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ಬರುವುದಾಗಿ ಪ್ರಜ್ವಲ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಷ್ಟರವರೆಗೂ ಕಾಯಲು ಎಸ್‌ಐಟಿ ಸಿದ್ದವಾಗಿಲ್ಲ. ಯಾಕೆಂದರೆ ಬರುವುದಾಗಿ ತಿಳಿಸಿ ಪ್ರಜ್ವಲ್‌ ದೇಶದೊಳಗೇ ತಲೆ ಮರೆಸಿಕೊಳ್ಳಬಹುದು ಎಂಬ ಆತಂಕವೂ ಇದೆ. ಹೀಗಾಗಿ ಅದಕ್ಕೂ ಮುನ್ನವೇ, ಅಂದರೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಲೇ ಆರೆಸ್ಟ್‌ ಮಾಡಲು ಎಸ್‌ಐಟಿ ಸಜ್ಜಾಗಿದೆ.

ನಾಳೆ ರಾತ್ರಿ 12.35ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ಗೆ ಜರ್ಮನಿಯಿಂದ ಬರಲಿರುವ ಲುಫ್ತಾನ್ಸಾ ವಿಮಾನದಲ್ಲಿ ಪ್ರಜ್ವಲ್‌ ಲ್ಯಾಂಡ್ ಆಗಲಿದ್ದಾರೆ ಎಂದು ಗೊತ್ತಾಗಿದೆ. ವಿಮಾನದಿಂದ ಇಳಿದ ಬಳಿಕ ಪ್ರಜ್ವಲ್‌ ಇಮಿಗ್ರೇಷನ್‌‌‌‌‌ ಡೆಸ್ಕ್‌‌ಗೆ ಬರಬೇಕು. ಪಾಸ್‌ಪೋರ್ಟ್‌ಗೆ ಸ್ಟಾಂಪ್‌‌‌ ಹಾಕಿಸಬೇಕು. ಈಗ ಲುಕೌಟ್‌ ನೋಟೀಸ್‌ ಇರುವುದರಿಂದ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ಅವರನ್ನು ವಶಕ್ಕೆ ಪಡೆಯಲಿದ್ದಾರೆ. ಏರ್‌‌ಪೋರ್ಟ್‌ ಅಧಿಕಾರಿಗಳಿಂದ SITಗೆ ಪ್ರಜ್ವಲ್ ಹಸ್ತಾಂತರ ನಡೆಯಲಿದೆ.

ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಪ್ರಜ್ವಲ್‌ ಟಿಕೆಟ್ ಕಾಯ್ದಿರಿಸಿರುವುದರಿಂದ ಅಲರ್ಟ್ ಆಗಿರುವ ಎಸ್ಐಟಿ ತಂಡ, ಏರ್‌ಪೋರ್ಟ್‌ನಲ್ಲಿಯೇ ಠಿಕಾಣಿ ಹೂಡಿದೆ. ಎರಡು ಮೂರು ಬಾರಿ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿ‌ ಕೊನೆ ಗಳಿಗೆಯಲ್ಲಿ ಕ್ಯಾನ್ಸಲ್ ಮಾಡಿಕೊಂಡಿದ್ದರು. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಏರ್ಪೋರ್ಟ್‌ನಲ್ಲಿ ಬೀಡು ಬಿಟ್ಟಿದ್ದಾರೆ. 31ರಂದು ಬರುದಾಗಿ ಹೇಳಿ ಒಂದು ದಿನ ಮುಂಚಿತವಾಗಿಯೇ ಬಂದ್ರೆ ಕಷ್ಟ ಎಂದು ಏರ್ಪೋರ್ಟ್‌ನಲ್ಲಿ ಎರಡೆರಡು ತಂಡಗಳು ಕಾಯುತ್ತಿವೆ.

ಪ್ರಜ್ವಲ್‌ ಬಂದ ಬಳಿಕ ನಡೆಯುವ ಪ್ರಕ್ರಿಯೆ ಏನು?

ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಬಳಿಕ ಮೆಡಿಕಲ್ ಟೆಸ್ಟ್‌ ಮತ್ತಿತರ ಅಗತ್ಯ ವಿಧಿವಿಧಾನಗಳು ನಡೆಯಲಿವೆ. ನಂತರ ತನಿಖೆ ನಡೆಸಲು ಎಸ್ಐಟಿ ತಯಾರಿ ಮಾಡಿಕೊಳ್ಳುತ್ತಿದೆ. ಎರಡು ಕೋನಗಳಲ್ಲಿ ಪ್ರಜ್ವಲ್ ರೇವಣ್ಣರನ್ನು ವಿಚಾರಣೆ ಮಾಡಲು ಸಿದ್ಧತೆ ನಡೆಸಲಾಗಿದೆ. ತನಿಖೆ ವೇಳೆ ಪ್ರಜ್ವಲ್ ರೇವಣ್ಣ ಎರಡು ತರಹದ ಪ್ರತಿಕ್ರಿಯೆ ನೀಡುವ ಸಾಧ್ಯತೆಯಿದ್ದು, ತಪ್ಪು ಒಪ್ಪಿಕೊಳ್ಳಬಹುದು ಅಥವಾ ತಾನು ಮಾಡಿಯೇ ಇಲ್ಲ ಅನ್ನಬಹುದು. ಈ ಎರಡೂ ಆಯಾಮಗಳಲ್ಲೂ ಎಸ್‌ಐಟಿ ತನಿಖೆ ಮಾಡಬೇಕಿದೆ.

ಪ್ರಜ್ವಲ್ ರೇವಣ್ಣ ತಪ್ಪು ಒಪ್ಪಿಕೊಂಡರೆ ಎಸ್‌ಐಟಿ ಕೆಲಸ ಸರಾಗವಾಗಲಿದೆ. ಆರೋಪಿತನ ಹೇಳಿಕೆ ದಾಖಲಿಸಿಕೊಂಡು ಸ್ಥಳ ಮಹಜರು ಮಾಡಲಾಗುತ್ತದೆ. ಎಲ್ಲೆಲ್ಲಿ ಕೃತ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ನೀಡಿರುವ ಹೇಳಿಕೆ ಆಧಾರದಲ್ಲಿ ಕರೆದೊಯ್ದು ಸ್ಥಳ ಮಹಜರು ಮಾಡುತ್ತಾರೆ. ಎಂಪಿ ಗೆಸ್ಟ್ ಹೌಸ್, ಹೊಳೆನರಸೀಪುರದ ಫಾರ್ಮ್ ಹೌಸ್ ಸೇರಿ ಹಲವೆಡೆ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ | Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

ಪ್ರಜ್ವಲ್‌ ತಮ್ಮ ಮೇಲಿರುವ ಆರೋಪ ತಳ್ಳಿ ಹಾಕಿದರೆ ಸಂತ್ರಸ್ತೆ ಹೇಳಿಕೆ ಪ್ರಾಮುಖ್ಯತೆ ಪಡೆಯಲಿದೆ. ಆಕೆಯ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ನಡೆಯುತ್ತದೆ. ಈಗಾಗಲೇ ಸಂತ್ರಸ್ತೆ ಹೇಳಿಕೆ ದಾಖಲಿಸಿರುವ ಎಸ್ಐಟಿ, ಜೊತೆಗೆ ಸ್ಥಳ ಮಹಜರು ನಡೆಸಿ ಒಂದಷ್ಟು ಸಾಕ್ಷ್ಯಗಳನ್ನು ಕಲೆಹಾಕಿದೆ. ಇದರ ಜೊತೆಗೆ ಆರೋಪಿ ಹೇಳಿಕೆಯನ್ನೂ ದಾಖಲಿಸಿಕೊಂಡು ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.

Continue Reading

ಕ್ರೈಂ

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

Crime News: ಮಧ್ಯಪ್ರದೇಶದಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವ ಭೀಕರ ಹತ್ಯಾಕಾಂಡವೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅವಿಭಕ್ತ ಕುಟುಂಬದ 7 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Crime News
Koo

ಭೋಪಾಲ್‌: ಮಧ್ಯಪ್ರದೇಶದಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವ ಭೀಕರ ಹತ್ಯಾಕಾಂಡವೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅವಿಭಕ್ತ ಕುಟುಂಬದ 7 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ (Crime News).

ಬೋಡಾಲ್ ಕಛರ್ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಮಹುಲ್ಜಿರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ʼʼಘಟನೆ ಕಾರಣ ಇದುವರೆಗೆ ತಿಳಿದು ಬಂದಿಲ್ಲ. ತನಿಖೆ ಆರಂಭಿಸಲಾಗಿದೆʼʼ ಎಂದು ಅವರು ಹೇಳಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಈ ಗ್ರಾಮಕ್ಕೆ ಚಿಂದ್ವಾರಾ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ.

ಆರೋಪಿ ಮಾನಸಿಕ ಅಸ್ವಸ್ಥ?

ʼʼಮಾನಸಿಕ ಅಸ್ವಸ್ಥನಾಗಿದ್ದ ಕುಟುಂಬದ ಸದಸ್ಯನೊಬ್ಬ ಈ ಕೊಲೆ ಮಾಡಿದ್ದಾನೆʼʼ ಎಂದು ಚಿಂದ್ವಾರದ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಖತ್ರಿ ಅಂದಾಜಿಸಿದ್ದಾರೆ. ʼʼತನ್ನ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ನಂತರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಅವರು ತಿಳಿಸಿದ್ದಾರೆ. ʼʼಮಾನಸಿಕ ಸ್ಥೀಮಿತ ಕಳೆದುಕೊಂಡಿದ್ದ ಆತ ಮಂಗಳವಾರ ರಾತ್ರಿ ತನ್ನ ಕುಟುಂಬದ ಮೇಲೆ ದಾಳಿ ನಡೆಸಿ, ತನ್ನ ಸಹೋದರ, ಅತ್ತಿಗೆ, ಪತ್ನಿ, ಚಿಕ್ಕ ಮಗು ಮತ್ತಿತರರನ್ನು ಕೊಂದಿದ್ದಾನೆ. ಬಳಿಕ ಆತ ಗ್ರಾಮದಿಂದ ಸುಮಾರು 100 ಮೀಟರ್ ದೂರದಲ್ಲಿರುವ ಚರಂಡಿಯ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಘಟನೆಯ ಭೀಕರತೆಯನ್ನು ತೆರೆದಿಟ್ಟಿದ್ದಾರೆ. ಈ ಪೈಕಿ ಮಗುವೊಂದು ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದಲ್ಲಿಯೂ ನಡೆದಿತ್ತು

ಇದೇ ಮಾದರಿಯ ಘಟನೆ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದಲ್ಲಿಯೂ ನಡೆದಿತ್ತು. ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಪಾಲಾಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಕುಟುಂಬದ 5 ಸದಸ್ಯರನ್ನು ಕ್ರೂರವಾಗಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದ. ಮಾನಸಿಕ ಅಸ್ವಸ್ಥನಾಗಿದ್ದ ಆರೋಪಿ ಮೊದಲು ಗುಂಡಿಕ್ಕಿ ತನ್ನ ತಾಯಿಯನ್ನು ಕೊಂದಿದ್ದ. ಬಳಿಕ ಚೂರಿ ಇರಿದು ಪತ್ನಿಯನ್ನು ಹತ್ಯೆ ಮಾಡಿದ್ದ. ನಂತರ ತನ್ನ ಮೂವರು ಮಕ್ಕಳನ್ನು ಟೆರೇಸ್‌ನಿಂದ ಎಸೆದು ಕೊಂದಿದ್ದ. ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

ತಾಯಿ, ಮಗಳು, ಮೊಮ್ಮಗನ ಅನುಮಾನಾಸ್ಪದ ಸಾವು

ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿತ್ತು. ಮನೆಯಲ್ಲಿಯೇ ತಾಯಿ, ಮಗಳು ಹಾಗೂ ಮೊಮ್ಮಗನ ಮೃತದೇಹಗಳು‌ ಪತ್ತೆಯಾಗಿದ್ದವು. ರಾಜೇಶ್ವರಿ (45), ವಸಂತಾ (22) ಹಾಗೂ ಸಾಯಿ (4) ಮೃತ ದುರ್ದೈವಿಗಳು.

ಹಂತಕರು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸೋಮವಾರ ರಾತ್ರಿ ತಾಯಿ ರಾಜೇಶ್ವರಿಗೆ ಮತ್ತೊಬ್ಬ ಮಗಳು ಫೋನ್ ಮಾಡಿದ್ದಾಳೆ. ಆದರೆ ಯಾರು ಫೋನ್‌ ರಿಸೀವ್ ಮಾಡಿರಲಿಲ್ಲ, ಮನೆಯ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮುಂಜಾನೆ ಬಂದು ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಬೆಡ್ ರೂಮ್‌ನಲ್ಲಿ ಮಲಗಿದ್ದಲ್ಲಿ ಅಜ್ಜಿ ಮತ್ತು ಮೊಮ್ಮಗನ ಶವಗಳು ಪತ್ತೆಯಾದರೆ, ಮಗಳು ವಸಂತಾಳ ಶವ ಅಡುಗೆ ಮನೆಯಲ್ಲಿತ್ತು.

Continue Reading

ಕ್ರೈಂ

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Assault Case: ಬೆಳ್ಳೂರು ಗ್ರಾಮಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು. ಕಡೆಗೆ ಪ್ರಕರಣದ ಗಂಭೀರತೆ ಅರಿತು ಪೊಲೀಸರು ದೂರು ಪಡೆದಿದ್ದರು. ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿಂದೆ ದೂರು ಸ್ವೀಕರಿಸದ ಪಿಎಸ್‌ಐ ವಿರುದ್ಧವೂ ಕಂಪ್ಲೆಂಟ್ ದಾಖಲಾಗಿದೆ. ದೂರಿನ ಬೆನ್ನಲ್ಲೇ ಪಿಎಸ್‌ಐ ಅಮಾನತು ಮಾಡಿ ಎಸ್‌ಪಿ ಯತೀಶ್ ಆದೇಶ ನೀಡಿದ್ದಾರೆ.

VISTARANEWS.COM


on

belluru assault case
Koo

ಮಂಡ್ಯ: ಮಂಡ್ಯ ಜಿಲ್ಲೆಯ (Mandya news) ಬೆಳ್ಳೂರು (Belluru Assault case) ಪಟ್ಟಣದಲ್ಲಿ ಹಿಂದೂ ಯುವಕನ (Hindu youth) ಮೇಲೆ ಅನ್ಯ ಕೋಮಿನ ಪುಂಡರು ಹಲ್ಲೆ ನಡೆಸಿದ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರಾಕರಿಸಿದ್ದ ಪಿಎಸ್‌ಐ ಅನ್ನು ಅಮಾನತು (Suspend) ಮಾಡಲಾಗಿದೆ. ಕರ್ತವ್ಯ ಲೋಪ ಕಾರಣ ನೀಡಿ ಬೆಳ್ಳೂರು ಠಾಣೆ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಅಮಾನತು ಮಾಡಿ ಮಂಡ್ಯ ಎಸ್‌ಪಿ ಎನ್. ಯತೀಶ್ ಆದೇಶ ಹೊರಡಿಸಿದ್ದಾರೆ.

ಬೆಳ್ಳೂರು ಗ್ರಾಮಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು. ಕಡೆಗೆ ಪ್ರಕರಣದ ಗಂಭೀರತೆ ಅರಿತು ಪೊಲೀಸರು ದೂರು ಪಡೆದಿದ್ದರು. ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿಂದೆ ದೂರು ಸ್ವೀಕರಿಸದ ಪಿಎಸ್‌ಐ ವಿರುದ್ಧವೂ ಕಂಪ್ಲೆಂಟ್ ದಾಖಲಾಗಿದೆ. ದೂರಿನ ಬೆನ್ನಲ್ಲೇ ಪಿಎಸ್‌ಐ ಅಮಾನತು ಮಾಡಿ ಎಸ್‌ಪಿ ಯತೀಶ್ ಆದೇಶ ನೀಡಿದ್ದಾರೆ.

ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ. ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏನಿದು ಪ್ರಕರಣ?

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ (ಮೇ 27) ಸಂಜೆ ಅಭಿಲಾಷ್​ ಎಂಬ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದರು. ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದ ಅಭಿಲಾಷ್​ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿತ್ತು. ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಗಂಭೀರವಾಗಿ ಪೆಟ್ಟು ತಿಂದಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಪಾಯಕಾರಿ ರೀತಿಯಲ್ಲಿ ವಾಹನ ಓಡಿಸಿದ್ದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಮಿತಿ ಮೀರಿದ ವೇಗದಲ್ಲಿ ಕಾರು ಓಡಿಸದಂತೆ ಆ ಗುಂಪಿಗೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರ ಗುಂಪಿ ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಸೋಮವಾರ ಸಂಜೆ ಹಲ್ಲೆ ಮಾಡಿದ್ದರು.

ದೊಡ್ಡ ಗುಂಪು ಹಲ್ಲೆ ಮಾಡಿದ್ದ ಅಭಿಲಾಷ್​ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಅವರ ಆಪ್ತರು ಹೇಳಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸುದ್ದಿಯಾದ ಬಳಿಕ ಬೆಳ್ಳೂರು ಪಟ್ಟಣದಲ್ಲಿ ಆತಂಕ ಮನೆ ಮಾಡಿತ್ತು. ಗಲಾಟೆ ಸಂಭವಿಸುವ ಸಾಧ್ಯತೆಗಳನ್ನು ಮನಗಂಡಿರುವ ಪೊಲೀಸರು ಬೆಳ್ಳೂರು ಪಟ್ಟಣ ಹಾಗೂ ಬಿಜಿಎಸ್ ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದಾರೆ.

ಇದನ್ನೂ ಓದಿ | Physical Abuse: 7ನೇ ಕ್ಲಾಸ್‌ ಹುಡುಗಿ 3 ತಿಂಗಳ ಗರ್ಭಿಣಿ! ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅರೆಸ್ಟ್‌

Continue Reading
Advertisement
Hardik Pandya
ಕ್ರೀಡೆ16 mins ago

Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Viral Video
ವೈರಲ್ ನ್ಯೂಸ್48 mins ago

Viral Video: ಇವನೇ ನಿಜವಾದ ಹೀರೋ! ಇವರ ಧೈರ್ಯ, ಶೌರ್ಯಕ್ಕೆ ಸರಿಸಾಟಿಯೇ ಇಲ್ಲ; ವೈರಲಾಯ್ತು ವಿಡಿಯೋ

TOP 5 Movies big budget Movie in OTT
ಒಟಿಟಿ51 mins ago

TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

panjurli daiva sharat shetty murder
ದಕ್ಷಿಣ ಕನ್ನಡ1 hour ago

Panjurli Daiva: ಶರತ್‌ ಶೆಟ್ಟಿ ಕೊಲೆ ಆರೋಪಿ ಶರಣಾಗತಿ; ಎಳೆತಂದು ನಿಲ್ಲಿಸಿತೇ ಪಂಜುರ್ಲಿ ದೈವ?

Money Guide
ಮನಿ-ಗೈಡ್1 hour ago

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

Prajwal Revanna Case
ಕರ್ನಾಟಕ1 hour ago

Prajwal Revanna Case: ಬೆಂಗಳೂರಿಗೆ ಪ್ರಜ್ವಲ್‌ ರೇವಣ್ಣ ಟಿಕೆಟ್ ಬುಕ್; ನಾಳೆ ಮಧ್ಯಾಹ್ನ ಜರ್ಮನಿಯಿಂದ ಪ್ರಯಾಣ

Gold Rate Today
ಚಿನ್ನದ ದರ2 hours ago

Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

World Digestive Health Day
ಆರೋಗ್ಯ2 hours ago

World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ರಾಹುಲ್‌ ಗಾಂಧಿ rahul gandhi ippb account 2
ಪ್ರಮುಖ ಸುದ್ದಿ2 hours ago

ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

All Eyes on Rafah
ವಿದೇಶ2 hours ago

All Eyes on Rafah: ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ರೋಹಿತ್‌ ಪತ್ನಿ ಪೋಸ್ಟ್‌; ಫುಲ್‌ ಟ್ರೋಲ್‌- ಏನಿದು ʼಆಲ್‌ ಐಸ್‌ ಆನ್‌ ರಫಾʼ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ19 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌