Tarini Movie Kannada: ರಾಜಸ್ಥಾನ್ ಚಲನ ಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ "ತಾರಿಣಿ" - Vistara News

ಸಿನಿಮಾ

Tarini Movie Kannada: ರಾಜಸ್ಥಾನ್ ಚಲನ ಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ “ತಾರಿಣಿ”

Tarini Movie Kannada: “ಶ್ರೀ ಗಜನಿ ಪ್ರೊಡಕ್ಷನ್ಸ್” ಬ್ಯಾನರ್ ನ ಅಡಿಯಲ್ಲಿ ನಿರ್ಮಾಣವಾದ ಈ ಚಿತ್ರಕ್ಕೆ “ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು” ರವರು ಬಂಡವಾಳ ಹೂಡಿ ಒಂದು ಮುಖ್ಯ ಪಾತ್ರದಲ್ಲೂ ಅಭಿನಯಿಸಿದ್ದಾರೆ.

VISTARANEWS.COM


on

Tarini Movie Kannada mamatha Rahuth Got award
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರತಿಷ್ಠಿತ ಚಲನಚಿತ್ರೋತ್ಸವಗಳಲೊಂದಾದ “ರಾಜಸ್ಥಾನ್ ಇಂಟರ್​ನ್ಯಾಷನಲ್ ಫಿಲ್ಮ್ ಫೆಸ್ಟಿವಲ್” ನಲ್ಲಿ “ತಾರಿಣಿ” ಚಿತ್ರದ ಅಭಿನಯಕ್ಕೆ “ಮಮತಾ ರಾಹುತ್” ರವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಜತೆಗೆ “ಬೆಸ್ಟ್ ಕ್ರಿಟಿಕ್ಸ್ ಅವಾರ್ಡ್” (mamatha RahuthTarini Movie Kannada) ಕೂಡ ಬಂದಿದೆ. ಒಟ್ಟು ಎರಡು ಪ್ರಶಸ್ತಿಗಳನ್ನು ʻತಾರಿಣಿʼ ಚಿತ್ರ ತನ್ನ ಮುಡಿಗೇರಿಸಿಕೊಂಡಿದೆ.

‘ಸಿದ್ದು ಪೂರ್ಣಚಂದ್ರ’ ರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಆಯ್ಕೆಯಾಗಿ ಪ್ರದರ್ಶನಗೊಂಡು ಪ್ರಶಸ್ತಿಗಳಿಸುತ್ತಿದೆ. “ಶ್ರೀ ಗಜನಿ ಪ್ರೊಡಕ್ಷನ್ಸ್” ಬ್ಯಾನರ್ ನ ಅಡಿಯಲ್ಲಿ ನಿರ್ಮಾಣವಾದ ಈ ಚಿತ್ರಕ್ಕೆ “ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು” ರವರು ಬಂಡವಾಳ ಹೂಡಿ ಒಂದು ಮುಖ್ಯ ಪಾತ್ರದಲ್ಲೂ ಅಭಿನಯಿಸಿದ್ದಾರೆ.

ʻʻರಾಜಸ್ಥಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಮಮತಾ ರಾಹುತ್ ರವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿರುವುದು ಇಡೀ ತಂಡಕ್ಕೆ ಖುಷಿ ತಂದಿದೆ, ಗರ್ಭಿಣಿಯೊಬ್ಬಳ ಕಥೆಯಾದಾರಿತ ಈ ಸಿನಿಮಾಗೆ ಮಮತಾ ರಾಹುತ್ ಕೂಡ ನೈಜ ಗರ್ಭಿಣಿಯಾಗಿ ಮನೋಜ್ಞವಾಗಿ ಅಭಿನಯಿದ್ದಾರೆʼʼ ಎಂದು ನಿರ್ದೇಶಕರು ಸಂತಸ ವ್ಯಕ್ತಪಡಿಸಿದರು. ʻʻಅವರಿಗೆ ಕೆಲವೊಂದು ಸಂದರ್ಭಗಳಲ್ಲಿ ಕಷ್ಟ ಎನಿಸಿದರೂ ಅದನ್ನು ಯಾರ ಬಳಿಯೂ ಹೇಳಿಕೊಳ್ಳದೆ ಚಿತ್ರೀಕರಣ ಮಾಡಲು ಸಂಪೂರ್ಣ ಸಹಕಾರ ನೀಡಿ, ದೃಶ್ಯ ಕಟ್ಟುವಲ್ಲಿ ಧೈರ್ಯ ತೋರಿದರು. ಅವರು ಗರ್ಭಿಣಿಯಾದ 7ನೇ ತಿಂಗಳಿಂದ ಚಿತ್ರೀಕರಣ ಪ್ರಾರಂಭಿಸಿ ಒಂಬತ್ತನೇ ತಿಂಗಳು ತುಂಬಿದಾಗಲೂ ಚಿತ್ರೀಕರಣ ಮಾಡುತ್ತಲೇ ಇದ್ದೆವು. ಮಗು ಹುಟ್ಟುವ ಸನ್ನಿವೇಶಗಳನ್ನು ಚಿತ್ರೀಕರಿಸುವಾಗ ಅವರದೇ ಮಗುವನ್ನು ಚಿತ್ರಿಸಿಕೊಂಡಿದ್ದು ಮಾತ್ರ ‘ಬೆಸ್ಟ್ ಮೆಮೊರಿ’!! ನೈಜತೆಗೆ ಒತ್ತು ನೀಡುವುದು ಮುಖ್ಯ ಉದ್ದೇಶವಾಗಿದ್ದರಿಂದ ಎಲ್ಲವೂ ಅದ್ಬುತ ಎನಿಸಲು ಸಹಕಾರಿಯಾಗಿದೆʼʼ ಎಂದು ನಿರ್ದೇಶಕರು ಸ್ಮರಿಸಿಕೊಂಡರು.

ಇದನ್ನೂ ಓದಿ: Kannada New Movie: ʻಧೀರ ಸಾಮ್ರಾಟ್‌ʼ ಸಿನಿಮಾಗೆ ಪ್ರಜ್ವಲ್ ದೇವರಾಜ್ ಸಾಥ್

ಅಯೋಧ್ಯ ಇಂಟರ್​ನ್ಯಾಷನಲ್​ ಫಿಲ್ಮ್ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ಸಾಮಾಜಿಕ ಚಿತ್ರ ಪ್ರಶಸ್ತಿ, ಲಂಡನ್ ಇಂಡಿಪೆಂಡೆಂಟ್ ಫಿಲ್ಮ್ ಅವಾರ್ಡ್, ಬಾಲಿವುಡ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಇಂಡೋಗ್ಮಾ ಫೆಸ್ಟಿವಲ್ ಅವಾರ್ಡ್, ಫ್ರಾನ್ಸ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಗೋಲ್ಡನ್ ಜ್ಯೂರಿ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಉತ್ತರ ಪ್ರದೇಶದ ಗ್ಲೋಬಲ್ ತಾಜ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಮೊಕ್ಖೋ ಇಂಟರ್ನ್ಯಾಷನಲ್ ಫಿಲ್ಮ್ ಅವಾರ್ಡ್, ಮಧ್ಯಪ್ರದೇಶದ ವಿಂಧ್ಯ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ಮುಂಬೈ ಇಂಡಿಪೆಂಡೆಂಟ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್, ನ್ಯೂಯಾರ್ಕ್ ಫಿಲ್ಮ್ ಅವಾರ್ಡ್ ಇನ್ನೂ ಮುಂತಾದ ಚಲನಚಿತ್ರಗಳಲ್ಲಿ ಪ್ರದರ್ಶನಗೊಂಡು ʻತಾರಿಣಿʼ ಚಿತ್ರ ಪ್ರಶಸ್ತಿಗೆ ಭಾಜನವಾಗುತ್ತಿದೆ.

ನಮ್ಮ ಕರ್ನಾಟಕದ ಕೆಲವು ಭಾಗದಲ್ಲಿ ‘ಹೆಣ್ಣು ಭ್ರೂಣ ಹತ್ಯೆ’ ಕುರಿತಾದ ವಿಷಯಗಳು ಎಲ್ಲಾ ಕಡೆ ಪ್ರಚಲಿತವಾಗಿ ಕರುಳ ಬಳ್ಳಿಗೆ ಕೊಳ್ಳಿ ಇಡುವ ಕೆಲಸಗಳು ನಿರಂತರವಾಗಿ ನಡೆದು ಈಗ ಅದು ಬಹಿರಂಗವಾಗಿದ್ದು ಎಲ್ಲರಿಗು ಕಣ್ಣೀರು ಬರಿಸುವ ಸುದ್ದಿಯಾಗಿ ಹೊರಹೊಮ್ಮಿತ್ತು. ನಾವು ಇದೇ ವಿಷಯವನ್ನು ಕೇಂದ್ರೀಕರಿಸಿ ಸರ್ಕಾರದ ಮತ್ತು ಸ್ವಸ್ತ ನಾಗರೀಕ ಸಮಾಜದ ಪ್ರತಿನಿಧಿಯಾಗಿ ಭವಿಷ್ಯದ ಹಿತಚಿಂತನೆಯಿಂದ ಈ ಕಥೆಯನ್ನು ಸಿದ್ದಪಡಿಸಿದ್ದೇವೆ, ಖಂಡಿತ ಇದೊಂದು ಉತ್ತಮ ಚಿತ್ರವಾಗಿ ಎಲ್ಲರ ಗಮನಸೆಳೆದು ಯಶಸ್ವಿಯಾಗುತ್ತದೆ. ಇಂತಹ ವಿಭಿನ್ನ ಪ್ರಯತ್ನಕ್ಕೆ ಕನ್ನಡಿಗರು ಯಾವತ್ತೂ ಕೈಜೋಡಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಚಿತ್ರತಂಡವಿದೆ.

ನಾಯಕನಾಗಿ “ರೋಹಿತ್” ರವರು ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಿ ಅಭಿನಯಿಸಿದ್ದಾರೆ. ಮುಖ್ಯಪಾತ್ರದಲ್ಲಿ ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ವಿಜಯಲಕ್ಷ್ಮಿ, ಪ್ರಮಿಳಾ ಸುಬ್ರಹ್ಮಣ್ಯ, ಸನ್ನಿ, ಶೀಬಾ, ದೀಪಿಕಾ ಗೌಡ, ಕವಿತ ಕಂಬಾರ್, ಮಟಿಲ್ಢಾ ಡಿಸೋಜಾ,ತೇಜಸ್ವಿನಿ, ಅರ್ಚನ ಗಾಯಕ್ವಾಡ್, ಮಂಜು ನಂಜನಗೂಡು, ರಘು ಸಮರ್ಥ್, ಪ್ರಿನ್ಸ್ ಜಿತಿನ್ ಕೋಟ್ಯಾನ್, ಬೇಬಿ ರಿಧಿ, ಬೇಬಿ ನಿಶಿತಾ,ಚೈತ್ರ, ಶ್ವೇತ ಮುಂತಾದವರು ಅಭಿನಯಿಸಿದ್ದಾರೆ.

ಈ ಚಿತ್ರಕ್ಕೆಅನಂತ್ ಆರ್ಯನ್ ರವರು ಸಂಗೀತ ಸಂಯೋಜಿದರೆ ,ದೀಪಕ್ ರವರು ಸಂಕಲನ ಮಾಡಿದ್ದಾರೆ,ಕಲೆ ಬಸವರಾಜ್ ಆಚಾರ್ಯ, ಡಿ.ಐ ಕೆಲಸವನ್ನು ನಿಖಿಲ್ ಕಾರಿಯಪ್ಪ ನಿರ್ವಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Rohit Sharma: ಬಾಲಿವುಡ್ ಮತ್ತು ಕ್ರಿಕೆಟ್ ಭಾರತದಲ್ಲಿ ಮನರಂಜನೆಯ ಪ್ರಮುಖ ಮೂಲಗಳು. ಎರಡೂ ಕಡೆ ಭರ್ಜರಿ ಮನರಂಜನೆ ಸಿಗುತತದೆ. ಕಾಲ್ಪನಿಕ ಹಾಗೂ ನೈಜ ಪ್ರಪಂಚಲದಲ್ಲಿ ಇದು ಹೆಚ್ಚು ಹತ್ತಿರ ಹಾಗೂ ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಪಡುವಂಥ ಸಂಗತಿ. ಹೀಗಾಗಿ ಕ್ರಿಕೆಟ್​ ಕುರಿತು ಹಲವಾರು ಸಿನಿಮಾಗಳು ಬಂದಿವೆ. ಅದೇ ರೀತಿ ಇದೀಗ ಹೊಸ ಸಿನಿಮಾವೊಂದು ಸೆಟ್ಟೇರಿದ್ದು ಅದರಲ್ಲಿ ಕೆಲವು ಕ್ರಿಕೆಟಿಗರ ಉಪಸ್ಥಿತಿಯನ್ನು ನಿರೀಕ್ಷೆ ಮಾಡಲಾಗಿದೆ.

VISTARANEWS.COM


on

Rohit Sharma
Koo

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕ್ರಿಕೆಟ್​ ಸಾಧನೆ ಜತೆಗೆ ವಿಭಿನ್ನ ಮನೋಭಾವದ ಮೂಲಕ ಜನಪ್ರಿಯ. ಜನಪ್ರಿಯ ಕ್ರಿಕೆಟಿಗನಾಗಿರುವ ಅವರು ಹಲವಾರು ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಈ ಎಲ್ಲ ಕಂಪನಿಗಳ ಜಾಹೀರಾತುಗಳಿಗಾಗಿ ನಟಿಸುತ್ತಿದ್ದಾಎ. ಇದೀಗ ಅವರು ಬಾಲಿವುಡ್​ ಕಡೆಗೂ ಎಂಟ್ರಿ ಪಡೆದಿದ್ದಾರೆ ಎಂಬುದಾಗಿ ವರದಿಯಾಗಿದೆ. ಅವರು ಕ್ರೀಡೆಯನ್ನು ಆಧಾರಿಸಿ ಮಾಡಿರು ಸಿನಿಮಾ “ಮಿಸ್ಟರ್ & ಮಿಸೆಸ್ ಮಹಿ” ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಗೆ ಮುಂಚಿತವಾಗಿ ಚಲನಚಿತ್ರವನ್ನು ಪ್ರಚಾರ ಮಾಡುವ ಸಲುವಾಗಿ ಈ ಚಿತ್ರವು ಕ್ರೀಡೆಯ ಅತ್ಯಂತ ಪ್ರಸಿದ್ಧ ವ್ಯಕ್ತಿಗಳಲ್ಲಿ ಒಬ್ಬರನ್ನು ಒಳಗೊಂಡ ಮೂಲಕ ವಿಶಿಷ್ಟ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲಿ ರೋಹಿತ್ ಹೆಸರು ಕಾಣಿಸುತ್ತಿದೆ.

ಬಾಲಿವುಡ್ ಮತ್ತು ಕ್ರಿಕೆಟ್ ಭಾರತದಲ್ಲಿ ಮನರಂಜನೆಯ ಪ್ರಮುಖ ಮೂಲಗಳು. ಎರಡೂ ಕಡೆ ಭರ್ಜರಿ ಮನರಂಜನೆ ಸಿಗುತತದೆ. ಕಾಲ್ಪನಿಕ ಹಾಗೂ ನೈಜ ಪ್ರಪಂಚಲದಲ್ಲಿ ಇದು ಹೆಚ್ಚು ಹತ್ತಿರ ಹಾಗೂ ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಪಡುವಂಥ ಸಂಗತಿ. ಹೀಗಾಗಿ ಕ್ರಿಕೆಟ್​ ಕುರಿತು ಹಲವಾರು ಸಿನಿಮಾಗಳು ಬಂದಿವೆ. ಅದೇ ರೀತಿ ಇದೀಗ ಹೊಸ ಸಿನಿಮಾವೊಂದು ಸೆಟ್ಟೇರಿದ್ದು ಅದರಲ್ಲಿ ಕೆಲವು ಕ್ರಿಕೆಟಿಗರ ಉಪಸ್ಥಿತಿಯನ್ನು ನಿರೀಕ್ಷೆ ಮಾಡಲಾಗಿದೆ.

‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ ಎಂಬ ಸಿನಿಮಾ ಬಾಲಿವುಡ್ ಮತ್ತೊಂದು ಕ್ರಿಕೆಟ್ ಆಧಾರಿತ ಡ್ರಾಮಾ ಸಿನಿಮಾಗಿದೆ. ಇದು ಈ ವಾರದ ಕೊನೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು ಭಾರಿ ನಿರೀಕ್ಷೆ ಮುಟ್ಟಿಸಿದೆ. ಪ್ರತಿಭಾವಂತ ನಟ ರಾಜ್ ಕುಮಾರ್ ರಾವ್ ಮತ್ತು ಜಾನ್ವಿ ಕಪೂರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಕಾಲ್ಪನಿಕ ಚಿತ್ರವು ಕ್ರಿಕೆಟ್ ಬಗ್ಗೆ ಉತ್ಸಾಹ ಹೊಂದಿರುವ ದಂಪತಿ ಜೀವನದ ಕುರಿತಾಗಿದೆ.

ಇದನ್ನೂ ಓದಿ: Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

ಈ ಚಲನಚಿತ್ರವು ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಹಲವಾರು ಏರಿಳಿತಗಳನ್ನು ಬಿಂಬಿಸುತ್ತದೆ. ಮಹಿಳಾ ಕ್ರೀಡಾಪಟುಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಖ್ಯಾತಿಯನ್ನು ಇದು ಬೊಟ್ಟು ಮಾಡಿದೆ. ಇದಲ್ಲದೆ, ಕ್ರಿಕೆಟ್ ಕಥಾಹಂದರದ ಅವಿಭಾಜ್ಯ ಅಂಗವಾಗಿರುವುದರಿಂದ, ಚಿತ್ರದ ಆಕರ್ಷಣೆ ಮತ್ತು ವಾಸ್ತವಿಕತೆಯನ್ನು ಹೆಚ್ಚಿಸಲು ರೋಹಿತ್ ಶರ್ಮಾ ಅವರಂತಹ ಕ್ರಿಕೆಟ್ ಸೂಪಸ್ಟಾರ್​ಗಳನ್ನು ಚಿತ್ರ ತಂಡ ಸೇರಿಸಿಕೊಂಡಿದ್ದಾರೆ. ಅವರಲ್ಲಿ ರೋಹಿತ್ ಕೂಡ ಒಬ್ಬರು.

ಚಿತ್ರ ಬಿಡುಗಡೆಗೆ ಕೆಲವು ದಿನಗಳ ಮೊದಲು, ‘ಅಗರ್ ತುಮ್ ಹೋ’ ಎಂಬ ಹಾಡನ್ನು ಯೂಟ್ಯೂಟ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಕೂಡ ಇದ್ದರು. ರಾಜ್​ಕುಮಾರ್​ ಮತ್ತು ಜಾನ್ವಿ ರೋಹಿತ್ ಅವರ ಶತಕವನ್ನು ಊಟದ ಮೇಜಿನ ಬಳಿ ಸಂಭ್ರಮಿಸುತ್ತಿರುವುದು ಹಾಡಿನಲ್ಲಿ ಕಂಡುಬಂದಿದೆ. ಕ್ರಿಕೆಟ್ ಪ್ರೇಮಿಗಳಾಗಿ ತಮ್ಮ ಉತ್ಸಾಹ ತೋರುವುದು ಕಾಣಿಸುತ್ತಿದೆ.

ಈ ಹಾಡಿನಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ಉಪಸ್ಥಿತಿಯು ಕ್ರಿಕೆಟ್ ಅಭಿಮಾನಿಗಳನ್ನು ಚಲನಚಿತ್ರದ ಕಡೆಗೆ ಸೆಳೆಯುವ ಸಾಧ್ಯತೆಯಿದೆ. ಮೇ 31 ರ ಬಿಡುಗಡೆಗೆ ಮುಂಚಿತವಾಗಿ ಅದರ ನಿರೀಕ್ಷೆಯನ್ನು ಹೆಚ್ಚಿಸುತ್ತದೆ. ವಿಶೇಷವೆಂದರೆ, ಚಿತ್ರದ ಪ್ರಮುಖ ನಟಿ ಜಾನ್ವಿ ಕಪೂರ್ ಕೂಡ ಈ ತಿಂಗಳ ಆರಂಭದಲ್ಲಿ ಚಿತ್ರದ ಪ್ರಚಾರಕ್ಕಾಗಿ ಐಪಿಎಲ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Actor Darshan: ದರ್ಶನ್ ಸ್ವಂತ ಹಣ ಖರ್ಚು ಮಾಡಿ ಗ್ರಾನೈಟ್ ಕಳಿಸಿದ್ದರು. ಆದರೆ ಕೆಲಸ ನಡೆಯುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ತಡೆದಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಇದೀಗ ದರ್ಶನ್‌ ಅವರ ಸ್ನೇಹಿತ ನಾಗರಾಜ್‌ ಅವರು ಈ ಬಗ್ಗೆ ವಿಡಿಯೊ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Actor Darshan fans against forest officials Construction of Arjuna tomb
Koo

ಬೆಂಗಳೂರು: ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಮೃತಪಟ್ಟಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ ಎಂದು ಮಳೆಗಾಲ ಶುರುವಾಗುವ ಮುನ್ನ ಅರ್ಜುನನ ಸಮಾಧಿ ನಿರ್ಮಾಣಕ್ಕೆ ದರ್ಶನ್‌ (Actor Darshan) ಕರೆ ಕೊಟ್ಟಿದ್ದರು. ದರ್ಶನ್ ಸ್ವಂತ ಹಣ ಖರ್ಚು ಮಾಡಿ ಗ್ರಾನೈಟ್ ಕಳಿಸಿದ್ದರು. ಆದರೆ ಕೆಲಸ ನಡೆಯುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ತಡೆದಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಇದೀಗ ದರ್ಶನ್‌ ಅವರ ಸ್ನೇಹಿತ ನಾಗರಾಜ್‌ ಅವರು ಈ ಬಗ್ಗೆ ವಿಡಿಯೊ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ನಾಗಾರಾಜ್‌ ವಿಡಿಯೊ ಮಾಡಿ ʻʻನಾನು ನಾಗಾರಾಜ್‌. ದರ್ಶನ್‌ ಅವರ ಸ್ನೇಹಿತ. ದರ್ಶನ್‌ ಪರ ಮಾತನಾಡಲು ಬಂದಿರುವೆ. ದರ್ಶನ್‌ ಅವರು ಹೇಳದೇ ಕೇಳದೇ ಅರ್ಜುನ್‌ ಸಮಾಧಿ ಮಾಡಲು ಹುಡುಗರನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ದರ್ಶನ್‌ ಅವರು ಸಮಾಧಿ ಬಗ್ಗೆ ಟ್ವೀಟ್‌ ಮಾಡಿದ್ದರು. ಅದಾದ ಮೇಲೆ ಸರಕಾರ ಈ ಬಗ್ಗೆ ಯಾವುದೇ ಗಮನ ಹರಿಸಿರಲಿಲ್ಲ. ಇದಾದ ಬಳಿಕ ಅರ್ಜುನ ಮಾವುತ ವಿನು ಅವರು ತಂಡ ಅರಣ್ಯ ಅಧಿಕಾರಿಗಳಿಗೆ ಅರ್ಜುನ ಸಮಾಧಿ ಮಾಡಬೇಕು ಎಂದು ರಿಕ್ವೆಸ್ಟ್‌ ಮಾಡುತ್ತಾರೆ. ಅವಕಾಶ ಕೊಡಿ ಎಂದು ಲೆಟರ್‌ ಕೊಟ್ಟಿದ್ದಾರೆ. ಆಗ ಅನುಮತಿ ಕೂಡ ಕೊಟ್ಟಿದ್ದರು. ಹೀಗಾಗಿ ಅನುಮತಿ ಸಿಕ್ಕಿದ ಬಳಿಕ ದರ್ಶನ್‌ ಅವರು ನನ್ನ ಬಳಿ ಹಣವನ್ನು ಕೊಟ್ಟು ಕಲ್ಲುಗಳನ್ನು ವ್ಯವಸ್ಥೆ ಮಾಡು ಅಂದಾಗ ಕಲ್ಲುಗಳನ್ನು ತಂದೆವು. ನಮ್ಮ ಹುಡುಗರು ಮತ್ತು ವಿನು ತಂಡ ಫಾರೆಸ್ಟ್‌ ಒಳಗಡೆ ಸಮಾಧಿ ಕಟ್ಟಲು ಒಟ್ಟಿಗೆ ಹೋಗುತ್ತಾರೆ. ಸ್ಮಾರಕ ಮಾಡಬೇಕು ಎಂದು ಕೆಲಸ ಶುರು ಮಾಡಿದಾಗ, ಅರಣ್ಯ ಅಧಿಕಾರಿಗಳು ಮಾಡಬೇಡಿ ಎಂದು ತಡೆದಿದ್ದಾರೆ. ದರ್ಶನ್ ಸ್ವಂತ ಹಣ ಖರ್ಚು ಮಾಡಿ ಗ್ರಾನೈಟ್ ಕಳಿಸಿದ್ದರು. ಆದರೆ ಕೆಲಸ ನಡೆಯುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ತಡೆದಿದ್ರು. ಹಣವನ್ನೂ ಹಿಂದಿರುಗಿಸೋದಾಗಿ ಹೇಳಿದ್ರು. ಆದರೆ ಇದುವರೆಗೂ ನಮ್ಮ ಖಾತೆಗೆ ಹಣ ಬಂದಿಲ್ಲʼʼ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಸದ್ಯ ದರ್ಶನ್ ಹಾಗೂ ಅರಣ್ಯಾಧಿಕಾರಿಗಳ ಗುದ್ದಾಟ ಮುಂದುವರಿದಿದೆ. “ಮೊದಲು ಅನುಮತಿ ಕೊಟ್ಟು ಬಳಿಕ ನಾವೇ ಮಾಡ್ತೀವಿ ಎನ್ನುತ್ತಿದ್ದಾರೆ.” ಎಂದು ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

Continue Reading

ಕ್ರೀಡೆ

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Shreyanka Patil: ಆರ್​ಸಿಬಿ(RCB) ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಗೌರಿ(Gowri) ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್(Samarjit Lankesh) ಜತೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Shreyanka Patil
Koo

ಬೆಂಗಳೂರು: ಟೀಮ್​ ಇಂಡಿಯಾದ ಹಾಗೂ ಆರ್​ಸಿಬಿ(RCB) ತಂಡದ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್(Shreyanka Patil)​ ಅವರು ಗೌರಿ(Gowri) ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್(Samarjit Lankesh) ಜತೆ ಮಸ್ತ್​ ಸ್ಟೆಪ್ಸ್(shreyanka patil dance)​ ಹಾಕಿದ ವಿಡಿಯೊವೊಂದು ವೈರಲ್​ ಆಗಿದೆ.

ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದ ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮದಲ್ಲಿ ಶ್ರೇಯಾಂಕಾ ಪಾಟೀಲ್ ಕೂಡ ಭಾಗಿಯಾಗಿದ್ದರು. ಇದೇ ವೇಳೆ ಅವರು ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕಾ ಪಾಟೀಲ್ ಹುಕ್ ಸ್ಟೆಪ್ ಹಾಕಿ ಮಿಂಚಿದರು. ಶ್ರೇಯಾಂಕಾ ಮತ್ತು ಸಮರ್ಜಿತ್ ಡ್ಯಾನ್ಸ್‌ಗೆ ವಿದ್ಯಾರ್ಥಿಗಳು ಕೂಡಾ ಫಿದಾ ಆಗಿದ್ದರು.

ಈ ನೃತ್ಯದ ವಿಡಿಯೊವನ್ನು ಸಮರ್ಜಿತ್ ಲಂಕೇಶ್ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಧನ್ಯವಾದ ಕೂಡ ತಿಳಿಸಿದ್ದಾರೆ. “ನಮ್ಮ ಚಿತ್ರದ ಟೀಸರ್ ಬಿಡುಗಡೆಗೆ ತುಂಬಾ ಶಕ್ತಿ ತಂದಿದ್ದಕ್ಕಾಗಿ. ಮೈದಾನದಲ್ಲಿ ಮತ್ತು ಹೊರಗೆ ಅದ್ಭುತವಾದ ಪ್ರದರ್ಶನ ತೋರಿದ್ದಕ್ಕೆ ಈ ನರ್ತಕಿಯನ್ನು ಮರೆಯಬಾರದು… ನಮ್ಮ RCB ರಾಣಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿರುವ ಚಿತ್ರ ಇದಾಗಿದೆ. ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.


ʻʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ. ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆದಿದ್ದಾರೆ.

21 ವರ್ಷದ ಶ್ರೇಯಾಂಕಾ ಪಾಟೀಲ್ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಆರ್‌ಸಿಬಿ ಮಹಿಳಾ ತಂಡಕ್ಕೆ ಆಯ್ಕೆಯಾದರು. ಇಲ್ಲಿ ತೋರಿದ ಪ್ರದರ್ಶನದಿಂದ ಅವರು ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿಯೂ ಆಡುವಂತೆ ಮಾಡಿತ್ತು. ಹಂತ ಹಂತವಾಗಿ ಬೆಳೆದ ಇವರು 2023ರಲ್ಲಿ 21 ವಷದೊಳಗಿನ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅವಕಾಶ ಪಡೆದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

Continue Reading

ಬಾಲಿವುಡ್

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

Kendall Jenner: ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

VISTARANEWS.COM


on

Kendall Jenner American model flaunted
Koo

ಅಮೆರಿಕದ ಪ್ರಖ್ಯಾತ ಮೀಡಿಯಾ ಪರ್ಸನಾಲಿಟಿ ಕ್ರಿಸ್‌ ಜೆನ್ನರ್‌ ಪುತ್ರಿ ಕೆಂಡಲ್‌ ಜೆನ್ನರ್‌ (Kendall Jenner) ತಿಂಗಳಲ್ಲಿ ಎರಡನೇ ಬಾರಿಗೆ ಟಾಪ್‌ಲೆಸ್‌ಆಗಿ ಫೋಟೋಗೆ ಪೋಸ್‌ ನೀಡಿದ್ದಾರೆ.

ಸಂಪೂರ್ಣ ಒದ್ದೆಯಾಗಿ ಮಾದಕ ಪೋಸ್‌ ನೀಡಿದ್ದಾರೆ ಕೆಂಡಲ್‌ ಜೆನ್ನರ್‌. ಫ್ಯಾಷನ್ ಐಕಾನ್‌ ಎಂದೂ ಕರೆಯಲ್ಪಡುವ ಇವರು ಲಕ್ಷಾಂತರ ಫಾಲೋವರ್ಸ್‌ ಹೊಂದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಹಸರು ಬಣ್ಣದ ಈಜು ಉಡುಗೆಯಲ್ಲಿ ಹಾಟ್‌ ಅವತಾರದಲ್ಲಿ ಕಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

Continue Reading
Advertisement
Snake
ಕರ್ನಾಟಕ1 hour ago

Snake: ಸ್ಟ್ಯಾಂಡ್‌ನಲ್ಲಿಟ್ಟಿದ್ದ ಚಪ್ಪಲಿಯೊಳಗೆ ಕೂತಿದ್ದ ಬುಸ್‌ ಬುಸ್‌ ನಾಗಪ್ಪ; ಸ್ವಲ್ಪ ಹುಷಾರಾಗಿರ‍್ರಪ್ಪ! Video ಇಲ್ಲಿದೆ

Varanasi
ದೇಶ2 hours ago

Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Virat kohli
ಕ್ರೀಡೆ2 hours ago

Virat Kohli : ಐಪಿಎಲ್​ 2024ರ ಆರೆಂಜ್ ಕ್ಯಾಪ್ ಗೆದ್ದು ಹೊಸ ದಾಖಲೆ ಬರೆದ ವಿರಾಟ್​ ಕೊಹ್ಲಿ

IPL 2024 Final
ಪ್ರಮುಖ ಸುದ್ದಿ3 hours ago

IPL 2024 Final : 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್​​; ಹೈದರಾಬಾದ್​ಗೆ ನಿರಾಸೆ

The Kapil Sharma Show
ದೇಶ3 hours ago

Physical Abuse: ಕಪಿಲ್‌ ಶರ್ಮಾ ಶೋನಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ

IPL 2024
ಕ್ರೀಡೆ3 hours ago

IPL 2024 Final : ಐಪಿಎಲ್ ಫೈನಲ್​​ನಲ್ಲಿ ಕಡಿಮೆ ಸ್ಕೋರ್​ನ ಕಳಪೆ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್​​

Hardik Pandya
ಕ್ರೀಡೆ4 hours ago

Hardik Pandya : ಡೈವೋರ್ಸ್​ ಗಾಸಿಪ್​ ನಡುವೆ ಹಾರ್ದಿಕ್ ಪಾಂಡ್ಯ ನಾಪತ್ತೆ!

Rain News
ಕರ್ನಾಟಕ4 hours ago

Rain News: ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

Phalody Satta Bazar
ದೇಶ4 hours ago

Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Shivamogga News
ಕರ್ನಾಟಕ5 hours ago

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು8 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌