Operation Dara-e-Bolan: 78 ಪಾಕಿಸ್ತಾನಿ ಸೈನಿಕರನ್ನು ಕೊಂದ ಬಲೂಚ್ ಲಿಬರೇಶನ್ ಆರ್ಮಿ - Vistara News

ವಿದೇಶ

Operation Dara-e-Bolan: 78 ಪಾಕಿಸ್ತಾನಿ ಸೈನಿಕರನ್ನು ಕೊಂದ ಬಲೂಚ್ ಲಿಬರೇಶನ್ ಆರ್ಮಿ

Operation Dara-e-Bolan: ಬಲೂಚ್ ಲಿಬರೇಶನ್ ಆರ್ಮಿ ತನ್ನ ಆಪರೇಷನ್ ದಾರಾ-ಎ-ಬೋಲನ್ ಕಾರ್ಯಾಚರಣೆಯಲ್ಲಿ 78 ಪಾಕಿಸ್ತಾನಿ ಸೈನಿಕರನ್ನು ಕೊಂದಿದೆ ಎಂದು ಬಿಎಲ್ಎ ಹೇಳಿಕೊಂಡಿದೆ.

VISTARANEWS.COM


on

operation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಬಲೂಚ್ ಲಿಬರೇಶನ್ ಆರ್ಮಿ (Baloch Liberation Army-BLA) ತನ್ನ ಆಪರೇಷನ್ ದಾರಾ-ಎ-ಬೋಲನ್ (Operation Dara-e-Bolan) ಕಾರ್ಯಾಚರಣೆಯಲ್ಲಿ 78 ಪಾಕಿಸ್ತಾನಿ ಸೈನಿಕರನ್ನು ಕೊಂದಿದೆ ಎಂದು ಬಿಎಲ್ಎ ಹೇಳಿಕೊಂಡಿದೆ.

“12 ಫಿದಾಯಿನ್‌ಗಳು (ಸ್ವಯಂ ತ್ಯಾಗಿಗಳು) ಸೇರಿದಂತೆ 385 ಬಲೂಚ್ ಸ್ವಾತಂತ್ರ್ಯ ಹೋರಾಟಗಾರರು ಆಪರೇಷನ್ ದಾರಾ-ಎ-ಬೋಲನ್‌ನಲ್ಲಿ ಭಾಗವಹಿಸಿದ್ದರು. ಈ ವೇಳೆ 78 ಪಾಕಿಸ್ತಾನಿ ಸೈನಿಕರನ್ನು ನಿರ್ಮೂಲನೆ ಮಾಡಲಾಗಿದೆ. ಸಾಮಾನ್ಯ ಶತ್ರುವಿನ ವಿರುದ್ಧ ನಡೆಸುವ ಹೋರಾಟದಲ್ಲಿ ಯಾವುದೇ ರಾಷ್ಟ್ರದೊಂದಿಗೆ ಕೈ ಜೋಡಿಸಲು ಬಿಎಲ್ಎ ಸಿದ್ಧ” ಎಂದು ಬಲೂಚ್ ಲಿಬರೇಶನ್ ಆರ್ಮಿ ತಿಳಿಸಿದೆ.

ಜನವರಿ 29ರಿಂದ 31ರ ವರೆಗೆ ಎರಡು ದಿನಗಳ ಕಾಲ ನಡೆದ ಆಪರೇಷನ್ ದಾರಾ-ಇ-ಬೋಲನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಕಾರ್ಯಾಚರಣೆಯಲ್ಲಿ ಮಜೀದ್ ಬ್ರಿಗೇಡ್‌ನ 12 ಫಿದಾಯಿನ್‌ಗಳು, ಫತೇಹ್ ಸ್ಕ್ವಾಡ್, ವಿಶೇಷ ಕಾರ್ಯತಂತ್ರ ಕಾರ್ಯಾಚರಣೆ ದಳ ಮತ್ತು ಗುಪ್ತಚರ ವಿಭಾಗದ ಸದಸ್ಯರು ಸೇರಿದಂತೆ ಗುಂಪಿನ ವಿವಿಧ ಘಟಕಗಳಿಂದ 385 ಬಿಎಲ್ಎ ಹೋರಾಟಗಾರರು ಭಾಗವಹಿಸಿದ್ದರು.

ಜನವರಿ 31ರ ಸಂಜೆ 7 ಗಂಟೆಗೆ ಮುಕ್ತಾಯಗೊಂಡ ಕಾರ್ಯಾಚರಣೆಯು ತನ್ನ ಎಲ್ಲ ಉದ್ದೇಶಿತ ಗುರಿಗಳನ್ನು ಸಾಧಿಸಿದೆ. ಬಿಎಲ್ಎ ಪಡೆಗಳು ಮ್ಯಾಕ್ ಪಟ್ಟಣ ಮತ್ತು ಆಯಕಟ್ಟಿನ ಪ್ರಮುಖ ಹೆದ್ದಾರಿ ಎನ್ಎಚ್ -65 ಸೇರಿದಂತೆ 70 ಕಿ.ಮೀ. ಪ್ರದೇಶದ ಮೇಲೆ ನಿಯಂತ್ರಣ ಸಾಧಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕಾರ್ಯಾಚರಣೆಯ ಮೊದಲ ಮೂರು ಗಂಟೆಗಳಲ್ಲಿ 45 ಮಂದಿ ಅಸುನೀಗಿದರು. ಬೋಲನ್‌ನ ಪೀರ್ ಘೈಬ್‌ನಲ್ಲಿರುವ ಮಿಲಿಟರಿ ಶಿಬಿರದ ಮೇಲೆ ನಡೆದ ದಾಳಿಯಲ್ಲಿ 10 ಫ್ರಾಂಟಿಯರ್ ಕಾರ್ಪ್ಸ್ (ಎಫ್‌ಸಿ) ಸಿಬ್ಬಂದಿ ಮತ್ತು ಗೋಕುರ್ಟ್‌ನಲ್ಲಿ ಮಿಲಿಟರಿ ಬೆಂಗಾವಲು ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜನವರಿ 30ರಂದು ಬಿಎಲ್ಎ ಹೋರಾಟಗಾರರು ಎಫ್‌ಸಿ ಪ್ರಧಾನ ಕಚೇರಿಗೆ ನುಗ್ಗಿದಾಗ ಹನ್ನೆರಡು ಪಾಕಿಸ್ತಾನಿ ಮಿಲಿಟರಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಹೆಚ್ಚುವರಿಯಾಗಿ, ಐದು ಎಸ್ಎಸ್‌ಜಿ ಕಮಾಂಡೋಗಳು ಮತ್ತು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ.

“ಎಲ್ಲ ಫಿದಾಯಿನ್‌ಗಳು ತಾಯ್ನಾಡಿಗಾಗಿ ತಮ್ಮ ಪ್ರಾಣವನ್ನು ಅರ್ಪಿಸಲು ಯುದ್ಧ ಭೂಮಿಗೆ ಬಂದಿದ್ದರು. ಈ ನಿಸ್ವಾರ್ಥ ಯೋಧರು ಎಫ್‌ಸಿ ಪ್ರಧಾನ ಕಚೇರಿ ಒಳಕ್ಕೆ ನುಸುಳುವಲ್ಲಿ ಯಶಸ್ವಿಯಾದರು ಮತ್ತು ಎರಡು ದಿನಗಳ ಕಾಲ ಶತ್ರು ಪಡೆಗಳನ್ನು ಹಿಮ್ಮೆಟ್ಟಿಸಿದರು. ತಾಯ್ನಾಡಿನ ಈ ಮಹಾನ್ ಪುತ್ರರ ವಿವರಗಳನ್ನು ಶೀಘ್ರದಲ್ಲೇ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದುʼʼ ಎಂದು ಮೂಲಗಳು ಹೇಳಿವೆ.

ಆಪರೇಷನ್‌ನ ಉದ್ದೇಶ

ಬಿಎಲ್ಎ ಪ್ರಕಾರ, ಆಪರೇಷನ್ ದಾರಾ-ಎ-ಬೋಲನ್ ಎರಡು ಪ್ರಾಥಮಿಕ ಉದ್ದೇಶಗಳನ್ನು ಹೊಂದಿತ್ತು. ಮೊದಲನೆಯದಾಗಿ, ಬಲೂಚಿಸ್ತಾನದ ನಗರವನ್ನು ಪಾಕಿಸ್ತಾನದ ‘ಆಕ್ರಮಿತ’ ಪಡೆಗಳಿಂದ ಮುಕ್ತಗೊಳಿಸುವುದು ಮತ್ತು ಎರಡು ದಿನಗಳವರೆಗೆ ನಿಯಂತ್ರಣವನ್ನು ಕಾಪಾಡಿಕೊಳ್ಳಲು ಬಿಎಲ್ಎ ಸಾಮರ್ಥ್ಯವನ್ನು ಪ್ರದರ್ಶಿಸುವುದು. ಸದ್ಯ ಈ ಎರಡು ಉದ್ದೇಶಗಳು ಈಡೇರಿವೆ ಎಂದು ಬಿಎಲ್ಎ ತಿಳಿಸಿದೆ.

ಇದನ್ನೂ ಓದಿ: Houthi Targets : ಹೌತಿ ಉಗ್ರರ ವಿರುದ್ಧ ಮುಂದುವರಿದ ಕಾರ್ಯಾಚರಣೆ, ಯೆಮೆನ್​ನಲ್ಲಿ 36 ನೆಲೆಗಳ ಮೇಲೆ ದಾಳಿ

ಬಲೂಚಿಸ್ತಾನದಲ್ಲಿ ಪಾಕಿಸ್ತಾನಿ ಪಡೆಗಳು ನಡೆಸುವ ದೌರ್ಜನ್ಯಗಳನ್ನು ಪರಿಹರಿಸಲು ಮನವಿಗಳು, ಪ್ರತಿಭಟನೆಗಳು ಮತ್ತು ಮಾನವ ಹಕ್ಕುಗಳ ಹೋರಾಟ ಸಾಕಾಗುವುದಿಲ್ಲ. ಇಂತಹ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಅದು ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Hindu Girl Kidnaping: ಪಾಕ್‌ನಲ್ಲಿ ಹಿಂದೂ ಬಾಲಕಿಯ ಅಪಹರಿಸಿ ಇಸ್ಲಾಂಗೆ ಮತಾಂತರ, ಬಲವಂತದ ಮದುವೆ

Hindu Girl Kidnaping: ಅಪ್ರಾಪ್ತ ವಯಸ್ಸಿನ ಹಿಂದೂ ಹುಡುಗಿಯನ್ನು ಪಾಕಿಸ್ತಾನದ ಶಹದಾಬ್ಕೋಟ್ ಪಟ್ಟಣದ ನಿವಾಸಿ ಗುಲ್ ಹಸನ್ ಅವರ ಪುತ್ರ ಸಮೀರ್ ಅಲಿ ಎಂಬಾತ ಅಪಹರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಿಸಿ ನಂತರ ಬಲವಂತವಾಗಿ ಮದುವೆಯಾದ ಘಟನೆ ನಡೆದಿದೆ.

VISTARANEWS.COM


on

Hindu Girl Kidnaping
Koo

ಪಾಕಿಸ್ತಾನ : ಪಾಕಿಸ್ತಾನದ ಕರಾಚಿ ಪ್ರದೇಶದಿಂದ ಅಪ್ರಾಪ್ತ ವಯಸ್ಸಿನ ಹಿಂದೂ ಹುಡುಗಿಯನ್ನು ಅಪಹರಿಸಿ ((Hindu Girl Kidnaping) ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿ ನಂತರ ಆಕೆಯನ್ನು ಬಲವಂತವಾಗಿ ಮದುವೆಯಾದ ಆಘಾತಕಾರಿ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. 16 ವರ್ಷದ ಹುಡುಗಿಯನ್ನು ಪಾಕಿಸ್ತಾನದ ಶಹದಾಬ್ಕೋಟ್ ಪಟ್ಟಣದ ನಿವಾಸಿ ಗುಲ್ ಹಸನ್ ಅವರ ಪುತ್ರ ಸಮೀರ್ ಅಲಿ ಎಂಬಾತ ಅಪಹರಿಸಿ ಮುಸ್ಲಿಂಧರ್ಮಕ್ಕೆ ಮತಾಂತರಿಸಿ ನಂತರ ಬಲವಂತವಾಗಿ ಮದುವೆಯಾದ ಎಂದು ಆರೋಪಿಸಲಾಗಿದೆ.

ಪಾಕಿಸ್ತಾನಿ ಕ್ರಿಶ್ಚಿಯನ್ ಕಾರ್ಯಕರ್ತ ಫರಾಜ್ ಪರ್ವೈಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಸಾರ್ವಜನಿಕವಾಗಿ ಅನಾವರಣಗೊಳಿಸಿದ್ದಾರೆ. ಅದರ ಪ್ರಕಾರ ಸಂಗೀತಾ ಎಂಬ ಬಾಲಕಿಯನ್ನು ಸಮೀರ್ ಅಲಿ ಅಪಹರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿ ನಂತರ ಆಕೆಯನ್ನು ಬಲವಂತವಾಗಿ ಮದುವೆಯಾಗಿದ್ದಾನೆ. ಅಷ್ಟೇ ಅಲ್ಲದೇ ಮತಾಂತರದ ನಂತರ ಆಕೆಗೆ ಹಮೀದಾ ಎಂಬ ಹೊಸ ಹೆಸರನ್ನು ನೀಡಿದ್ದಾರೆ. ಆಕೆಗೆ 15 ವರ್ಷ ವಯಸ್ಸಾಗಿದ್ದರೂ ಕೂಡ ಆರೋಪಿ ಆಕೆಯ ದಾಖಲೆಗಳನ್ನು ಪೋರ್ಜರಿ ಮಾಡಿ ಆಕೆ 19 ವರ್ಷದ ವಯಸ್ಕಳು ಎಂದು ಬಿಂಬಿಸಿ ಆಕೆ ತನ್ನನ್ನು ಮದುವೆಯಾಗಲು ಸಿದ್ಧಳಿದ್ದಾಳೆ ಎಂಬುದಾಗಿ ನಿರೂಪಿಸಿದ್ದಾನೆ.

ಅದಕ್ಕಾಗಿ ಆರೋಪಿಯು ಹುಡುಗಿಗೆ ತಾನು ವಯಸ್ಕಳು ಹಾಗೂ ತನ್ನ ಇಚ್ಛೆಯಂತೆ ಪ್ರೀತಿಯಿಂದ ಆರೋಪಿಯನ್ನು ಮದುವೆಯಾಗುತ್ತಿರುವೆ ಎಂದು ಅಫಿಡವಿಟ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದ್ದಾನೆ. ಮತ್ತು ಆರೋಪಿಯ ವಿರುದ್ಧ ಯಾರಾದರೂ ಪೊಲೀಸರಿಗೆ ದೂರು ನೀಡಿದರೆ ಸಂತ್ರಸ್ತೆ ಇಚ್ಛೆಯಂತೆ ಮದುವೆಯಾಗುತ್ತಿರುವುದು ಎಂದು ತೋರಿಸಲು ಈ ತಯಾರಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಪಾಕಿಸ್ತಾನದಲ್ಲಿ ಹಿಂದೂ ಹುಡುಗಿಯನ್ನು ಅಪಹರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿದ್ದು ಇದೇ ಮೊದಲಲ್ಲ. ಇತ್ತೀಚೆಗೆ ಜೂನ್ 2ರಂದು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 14 ವರ್ಷದ ಹಿಂದೂ ಹುಡುಗಿಯನ್ನು ಗನ್ ತೋರಿಸಿ ಹೆದರಿಸಿ ಅಪಹರಣ ಮಾಡಿ ಬಲವಂತವಾಗಿ ಮತಾಂತರಿಸಿ ಮುಸ್ಲಿಂ ಯುವಕನ ಜೊತೆ ಮದುವೆ ಮಾಡಿಸಿದ್ದರು. ಈ ಬಗ್ಗೆ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಿನ ಆಕ್ರೋಶ ವ್ಯಕ್ತವಾದ ಕಾರಣ ಪೊಲೀಸರು ಆಕೆಯನ್ನು ಪೋಷಕರ ಬಳಿ ಮರಳಿಸಿದ್ದಾರೆ. ಹಾಗೇ ತನಗಾದ ಅನ್ಯಾಯದ ಬಗ್ಗೆ ಸಂತ್ರಸ್ತೆ ಕೋರ್ಟ್‌ನಲ್ಲಿ ತಿಳಿಸಿದರೂ ನ್ಯಾಯಾಧೀಶರು ಆಕೆಗೆ ಹೆತ್ತವರೊಡನೆ ಕಳುಹಿಸಲು ನಿರಾಕರಿಸಿದರು ಎನ್ನಲಾಗಿದೆ.

ಇದನ್ನೂ ಓದಿ: Terror attack : ಉಗ್ರರ ದಾಳಿ; ತನ್ನ ಪ್ರಾಣ ತ್ಯಾಗ ಮಾಡಿ ಪ್ರಯಾಣಿಕರ ಜೀವ ಉಳಿಸಿದ ಬಸ್‌ ಚಾಲಕ

ಇಷ್ಟೆಲ್ಲಾ ದೌರ್ಜನ್ಯಗಳು ಪಾಕಿಸ್ತಾನದಲ್ಲಿ ಹಿಂದೂ ಹುಡುಗಿಯರ ಮೇಲೆ ಆಗುವುದನ್ನು ಕಂಡು ವಿಶ್ವಸಂಸ್ಥೆಯು ಖಂಡಿಸಿದೆ. ಮುಸ್ಲಿಂರು ಹಿಂದೂಗಳ ಮೇಲೆ ದೌರ್ಜನ್ಯ ಎಸಗುವುದನ್ನು ಕಂಡು ನಿರಾಶೆ ವ್ಯಕ್ತಪಡಿಸಿದೆ. ಬಲವಂತದ ವಿವಾಹ ಮತ್ತು ಧಾರ್ಮಿಕ ಮತಾಂತರಗಳಿಂದಾಗಿ ಪಾಕಿಸ್ತಾನವನ್ನು ಟೀಕಿಸಿದೆ. ಹಾಗೇ ಇಂತಹ ಪ್ರಕ್ರಿಯೆಗಳು ಇನ್ನು ಮುಂದೆ ನಡೆಯಬಾರದೆಂದು ವಿಶ್ವಸಂಸ್ಥೆ ಪಾಕಿಸ್ತಾನಕ್ಕೆ ಕರೆ ನೀಡಿದೆ. ಹಾಗೇ ಬಲವಂತದ ಮದುವೆ ಮತ್ತು ಅಪಹರಣದಿಂದ ರಕ್ಷಿಸುವ ಕಾನೂನುಗಳ ಜಾರಿಯನ್ನು ಬಲಪಡಿಸಲು ಮತ್ತು ದೇಶದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಬದ್ಧತೆಗಳನ್ನು ಪೂರೈಸಲು ವಿಶ್ವಸಂಸ್ಥೆ ತಿಳಿಸಿದೆ.

Continue Reading

ದೇಶ

G7 Summit: ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೋದಿ ಮೊದಲ ವಿದೇಶ ಪ್ರವಾಸ ಇಂದು; ಇಟಲಿಯ ಜಿ7 ಶೃಂಗಸಭೆಯಲ್ಲಿ ಭಾಗಿ

G7 Summit: ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ತಮ್ಮ ಮೊದಲ ವಿದೇಶ ಪ್ರವಾಸವನ್ನು ಗುರುವಾರ (ಜೂನ್‌ 13) ಕೈಗೊಂಡಿದ್ದಾರೆ. ಇಟಲಿಯಲ್ಲಿ ಆಯೋಜಿಸಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಅವರು ತೆರಳುತ್ತಿದ್ದಾರೆ. ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ಜೂನ್‌ 13ರಿಂದ 15ರವರೆಗೆ ಈ ಬಾರಿಯ, 50ನೇ ಜಿ7 ಶೃಂಗಸಭೆಯನ್ನು ಆಯೋಜಿಸಲಾಗಿದೆ.

VISTARANEWS.COM


on

G7 Summit
Koo

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ (Narendra Modi) ಅವರು ತಮ್ಮ ಮೊದಲ ವಿದೇಶ ಪ್ರವಾಸವನ್ನು ಗುರುವಾರ (ಜೂನ್‌ 13) ಕೈಗೊಂಡಿದ್ದಾರೆ. ಇಟಲಿಯಲ್ಲಿ ಆಯೋಜಿಸಿರುವ ಜಿ7 ಶೃಂಗಸಭೆ (G7 Summit)ಯಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಅವರು ತೆರಳುತ್ತಿದ್ದಾರೆ.

ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ಜೂನ್‌ 13ರಿಂದ 15ರವರೆಗೆ ಈ ಬಾರಿಯ, 50ನೇ ಜಿ7 ಶೃಂಗಸಭೆಯನ್ನು ಆಯೋಜಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಅವರನ್ನು ಒಳಗೊಂಡಿರುವ ಉನ್ನತ ಮಟ್ಟದ ನಿಯೋಗವು ಪ್ರಧಾನಿ ಅವರೊಂದಿಗೆ ಇರಲಿದೆ. ಜೂನ್‌ 14ರಂದು ಸಭೆಯಲ್ಲಿ ಮೋದಿ ಅವರು ಪಾಲ್ಗೊಂಡು ಅಂದೇ ಭಾರತಕ್ಕೆ ಹಿಂದಿರುಗಲಿದ್ದಾರೆ.

ಚರ್ಚಾ ವಿಷಯ

ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ವಿಚಾರವು ಜಿ7 ಶೃಂಗಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾದ ಆಕ್ರಮಣದ ಕುರಿತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ. ಜತೆಗೆ ಭಾರತ ರಕ್ಷಣಾ ಮತ್ತು ಸಮುದ್ರ ಮಾರ್ಗದಲ್ಲಿನ ಸಹಕಾರದ ಬಗ್ಗೆ ಪ್ರಸ್ತಾವಿಸಲಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕ, ಇಂಗ್ಲೆಂಡ್‌, ಕೆನಡಾ, ಜರ್ಮನಿ, ಇಟಲಿ, ಜಪಾನ್, ಫ್ರಾನ್ಸ್ ಮತ್ತು ಯುರೋಪಿಯನ್ ಒಕ್ಕೂಟದ ಏಳು ಸದಸ್ಯ ರಾಷ್ಟ್ರಗಳ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ʼʼವಿಶೇಷ ಆಹ್ವಾನಿತರಾಗಿರುವ ಪ್ರಧಾನಿ ಮೋದಿ ಗುರುವಾರ ಉನ್ನತ ಮಟ್ಟದ ನಿಯೋಗದೊಂದಿಗೆ ಇಟಲಿಗೆ ತೆರಳಲಿದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಮರಳಿದ ನಂತರ ಇದು ಅವರ ಮೊದಲ ವಿದೇಶ ಪ್ರವಾಸʼʼ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ತಿಳಿಸಿದ್ದಾರೆ. ʼʼಭಾರತದ ಜಿ20 ಅಧ್ಯಕ್ಷತೆಯ ಅವಧಿಯಲ್ಲಿ ಚರ್ಚಿಸಲಾದ ಕೆಲವು ಪ್ರಮುಖ ವಿಷಯಗಳ ಬಗ್ಗೆ ಅವರು ಪ್ರಸ್ತಾವಿಸಲಿದ್ದಾರೆʼʼ ಎಂದೂ ಹೇಳಿದ್ದಾರೆ.

ಶೃಂಗಸಭೆಯಲ್ಲಿ ರಷ್ಯಾ-ಉಕ್ರೇನ್ ಸಂಘರ್ಷ ಚರ್ಚೆಯ ವಿಷಯಗಳಲ್ಲಿ ಒಂದಾಗುವ ನಿರೀಕ್ಷೆಯಿದೆ. ಸಂಘರ್ಷವನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆ ಉತ್ತಮ ಆಯ್ಕೆಯಾಗಿದೆ ಎಂದು ಭಾರತ ಪುನರುಚ್ಚರಿಸಿದೆ. “ಸಂಘರ್ಷ, ಸಂವಾದ ಮತ್ತು ರಾಜತಾಂತ್ರಿಕತೆಯ ಅಗತ್ಯತೆಯ ಬಗ್ಗೆ ಮಾತ್ರವಲ್ಲ, ಸಂಘರ್ಷವು ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಬೀರುವ ಪರಿಣಾಮ ಬೀರುವ ಬಗ್ಗೆಯೂ ಮಾತನಾಡಲಿದ್ದೇವೆ” ಎಂದು ಕ್ವಾತ್ರಾ ತಿಳಿಸಿದ್ದಾರೆ.

ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರೂ ಪಾಲ್ಗೊಳ್ಳುತ್ತಿದ್ದು, ಮೋದಿ ಅವರೊಂದಿಗೆ ಮಾತುಕತೆ ನಡೆಸುವ ನಿರೀಕ್ಷೆ ಇದೆ. ಜತೆಗೆ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಒಪ್ಪಂಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

ಗ್ರೂಪ್ ಆಫ್ ಸೆವೆನ್ (ಜಿ 7) ಏಳು ಪ್ರಮುಖ ದೇಶಗಳನ್ನು ಒಳಗೊಂಡಿರುವ ಅಂತರ್ ಸರ್ಕಾರಿ ಸಂಸ್ಥೆಯಾಗಿದೆ. ಆರ್ಥಿಕ ನೀತಿ, ಜಾಗತಿಕ ಭದ್ರತೆ ಮತ್ತು ಇತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಸಮನ್ವಯಗೊಳಿಸಲು ಈ ದೇಶಗಳು ವಾರ್ಷಿಕವಾಗಿ ಸಭೆ ಸೇರುತ್ತವೆ. 

Continue Reading

ವಿದೇಶ

Khalistan Terror: ಇಟಲಿಯಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ವಿರೂಪಗೊಳಿಸಿದ ಖಲಿಸ್ತಾನಿಗಳು

Khalistan Terror: ಇಟಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲು ನಿರ್ಧರಿಸಿದ್ದ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಖಲಿಸ್ತಾನಿ ಪರ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಿ-5 ರಾಷ್ಟ್ರಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಗೆ ಭೇಟಿ ನೀಡಬೇಕಿರುವ ಸಂದರ್ಭದಲ್ಲಿ ಈ ಘಟನೆ ನಡೆದಿರುವುದು ಆತಂಕ ಮೂಡಿಸಿದೆ.

VISTARANEWS.COM


on

Khalistan Terror
Koo

ನವದೆಹಲಿ: ಖಲಿಸ್ತಾನ್ ಪರ​ ಉಗ್ರರ (Khalistan Terror) ಅಟ್ಟಹಾಸ ಎಲ್ಲೆ ಮೀರಿದೆ. ಇಟಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಲು ನಿರ್ಧರಿಸಿದ್ದ ಮಹಾತ್ಮ ಗಾಂಧೀಜಿ (Mahatma Gandhi) ಅವರ ಪ್ರತಿಮೆಯನ್ನು ಖಲಿಸ್ತಾನಿ ಪರ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಿ-5 ರಾಷ್ಟ್ರಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಗೆ ಭೇಟಿ ನೀಡಬೇಕಿರುವ ಸಂದರ್ಭದಲ್ಲಿ ಈ ಘಟನೆ ನಡೆದಿರುವುದು ಆತಂಕ ಮೂಡಿಸಿದೆ.

ಜತೆಗೆ ಖಲಿಸ್ತಾನಿ ಭಯೋತ್ಪಾದಕರು ಪ್ರತಿಮೆಯ ತಳಭಾಗದಲ್ಲಿ ಗೀಚಿ ವಿರೂಪಗೊಳಿಸಿದ್ದಾರೆ. ಇದರಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ನ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಘಟನೆಯನ್ನು ಭಾರತ ಸರ್ಕಾರವು ತೀವ್ರವಾಗಿ ಖಂಡಿಸಿದ್ದು, ಇಟಲಿ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೊನಿ ಅವರಿಗೆ ತನ್ನ ಅಸಮಾಧಾನವನ್ನು ತಿಳಿಸಿದೆ. ಇದರಿಂದ ಎಚ್ಚೆತ್ತಿರುವ ಅಲ್ಲಿನ ಸರ್ಕಾರ, ಗಾಂಧೀಜಿ ಪ್ರತಿಮೆಯನ್ನು ಸರಿಪಡಿಸಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.

ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಈ ಬಗ್ಗೆ ಮಾತನಾಡಿ, “ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿರುವುದು ದುರದೃಷ್ಟಕರ. ಈ ವಿಷಯದ ಬಗ್ಗೆ ನಾವು ಇಟಲಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆʼʼ ಎಂದು ತಿಳಿಸಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಇಟಲಿಯ ಭಾರತದ ರಾಯಭಾರಿ ವಾಣಿ ರಾವ್, “ದಕ್ಷಿಣ ಇಟಲಿಯ ಬ್ರಿಂಡಿಸಿ ಎಂಬ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪ್ರತಿಮೆಯ ಪೀಠವನ್ನು ಸ್ವಚ್ಛಗೊಳಿಸಲು ಇಟಲಿಯ ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ನಾವು ನಮ್ಮ ಕಳವಳಗಳನ್ನು ತಕ್ಷಣವೇ ಅವರೊಂದಿಗೆ ಹಂಚಿಕೊಂಡಿದ್ದೇವೆ. ಇದಕ್ಕೆ ಕಾರಣರಾದವರನ್ನು ಪತ್ತೆಹಚ್ಚಲು ಮತ್ತು ಸ್ಥಳೀಯ ಕಾನೂನಿನ ಅಡಿಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾವು ವಿನಂತಿಸಿದ್ದೇವೆ” ಎಂದು ಅವರು ವಿವರಿಸಿದ್ದಾರೆ.

ಜಿ 7 ವಾರ್ಷಿಕ ಶೃಂಗಸಭೆಯಲ್ಲಿ (Summit of G7 advanced economies) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು (ಜೂನ್‌ 13) ಇಟಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಅವರನ್ನು ಒಳಗೊಂಡಿರುವ ಉನ್ನತ ಮಟ್ಟದ ನಿಯೋಗವು ಪ್ರಧಾನಿ ಅವರೊಂದಿಗೆ ಇರಲಿದೆ. ಸಭೆ ಮುಗಿಸಿ ಜೂನ್ 14ರಂದು ಸಂಜೆಯ ವೇಳೆಗೆ ಮೋದಿ ಅವರು ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

ಜೂನ್ 13ರಿಂದ 15ರವರೆಗೆ ಇಟಲಿಯ ಅಪುಲಿಯಾದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ನಡೆಯಲಿರುವ ಜಿ 7 ಶೃಂಗಸಭೆಯು ಉಕ್ರೇನ್‌ನಲ್ಲಿ ಉಲ್ಬಣಗೊಳ್ಳುತ್ತಿರುವ ಯುದ್ಧ ಮತ್ತು ಗಾಜಾದಲ್ಲಿನ ಸಂಘರ್ಷದ ಬಗ್ಗೆ ತೀವ್ರ ಚರ್ಚೆ ನಡೆಯುವ ಸಾಧ್ಯತೆ ಇದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾದ ಆಕ್ರಮಣದ ಕುರಿತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Continue Reading

ದೇಶ

Hassan Ali: ರಿಯಾಸಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ; ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದಿದ್ದೇಕೆ?

Hassan Ali: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ʼಆಲ್ ಐಸ್ ಆನ್ ರಿಯಾಸಿʼ (All Eyes on Raesi) ಎನ್ನುವ ಪೋಸ್ಟ್‌ ವೈರಲ್‌ ಆಗಿದೆ. ಇದರ ಬೆನ್ನಲ್ಲೇ, ಪಾಕಿಸ್ತಾನದ ಕ್ರಿಕೆಟಿಗ ಹಸನ್‌ ಅಲಿ ಅವರು ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದು ಪೋಸ್ಟ್‌ ಮಾಡುವ ಮೂಲಕ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.

VISTARANEWS.COM


on

Hassan Ali
Koo

ಇಸ್ಲಾಮಾಬಾದ್:‌ ಜಮ್ಮು-ಕಾಶ್ಮೀರದ (Jammu-Kashmir) ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಯ (Reasi Terror Attack) ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದಲ್ಲಿರುವ ಶಿವ ಖೋರಿ ದೇವಸ್ಥಾನಕ್ಕೆ ಹಿಂದು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ʼಆಲ್ ಐಸ್ ಆನ್ ರಿಯಾಸಿʼ (All Eyes on Raesi) ಎನ್ನುವ ಪೋಸ್ಟ್‌ ವೈರಲ್‌ ಆಗಿದೆ. ಇದರ ಬೆನ್ನಲ್ಲೇ, ಉಗ್ರರ ದಾಳಿಯನ್ನು ಪಾಕಿಸ್ತಾನ ಕ್ರಿಕೆಟ್‌ ತಂಡದ ವೇಗಿ ಹಸನ್‌ ಅಲಿ (Hassan Ali) ಅವರು ಖಂಡಿಸಿದ್ದಾರೆ. ಹಾಗೆಯೇ, ಆಲ್‌ ಐಸ್‌ ಆನ್‌ ವೈಷ್ಣೋದೇವಿ (All Eyes On Vaishno Devi) ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.

ವೈಷ್ಣೋದೇವಿಗೆ ತೆರಳುತ್ತಿದ್ದ ಹಿಂದುಗಳ ಮೇಲೆ ಉಗ್ರರು ದಾಳಿ ನಡೆಸಿದ್ದನ್ನು ಹಸನ್‌ ಅಲಿ ಅವರು ಖಂಡಿಸಿದ್ದಾರೆ. ಹಾಗೆಯೇ, ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದು ಪೋಸ್ಟ್‌ ಮಾಡುವ ಮೂಲಕ ಬೆಂಬಲ ಸೂಚಿಸಿದ್ದಾರೆ. ವೈಷ್ಣೋದೇವಿ ಮೇಲೆ ಉಗ್ರರು ಕಣ್ಣಿಟ್ಟಿದ್ದಾರೆ ಎಂದು ಸೂಚಿಸುವ ಜತೆಗೆ, ಎಲ್ಲರ ಗಮನವೂ ವೈಷ್ಣೋದೇವಿ ಯಾತ್ರಾಸ್ಥಳದ ಮೇಲಿದೆ ಎಂಬುದನ್ನು ಅವರು ಇನ್‌ಸ್ಟಾಗ್ರಾಂ ಸ್ಟೋರಿ ಮೂಲಕ ತಿಳಿಸಿದ್ದಾರೆ.

ಹಸನ್‌ ಅಲಿ ಇನ್‌ಸ್ಟಾಗ್ರಾಂ ಸ್ಟೋರಿ

ಹಸನ್‌ ಅಲಿ ಪತ್ನಿ ಭಾರತೀಯಳು!

ಹಸನ್‌ ಅಲಿ ಅವರು ಭಾರತದ ಸಮಿಯಾ ಅರ್ಜು ಅವರನ್ನು ಮದುವೆಯಾಗಿದ್ದಾರೆ. ಹರಿಯಾಣದ ಸಮಿಯಾ ಅರ್ಜು ಅವರನ್ನು ಹಸನ್‌ ಅಲಿ ಅವರು 2019ರಲ್ಲಿ ಮದುವೆಯಾಗಿದ್ದಾರೆ. ಈ ದಂಪತಿಗೆ ಮುದ್ದಾದ ಮಗಳಿದ್ದಾಳೆ. ಸಮಿಯಾ ಅರ್ಜು ಅವರು ದುಬೈನ ಎಮಿರೇಟ್ಸ್‌ ಏರ್‌ಲೈನ್ಸ್‌ನಲ್ಲಿ ಎಂಜಿನಿಯರ್‌ ಆಗಿದ್ದಾರೆ. ಇಬ್ಬರೂ ಎರಡು ವರ್ಷ ಪ್ರೀತಿಸಿ, ಬಳಿಕ ಮದುವೆಯಾಗಿದ್ದಾರೆ.

ಭಾರತದ ಸೆಲೆಬ್ರಿಟಿಗಳು ಮೌನ

ಇತ್ತೀಚೆಗೆ ಇಸ್ರೇಲ್‌ನ ವೈಮಾನಿಕ ದಾಳಿಯ ನಂತರ ದಕ್ಷಿಣ ಗಾಜಾದಲ್ಲಿ 45 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಬಳಿಕ ದಕ್ಷಿಣ ಗಾಜಾದ ರಫಾ ನಗರದಲ್ಲಿನ ನಿರಾಶ್ರಿತರ ಶಿಬಿರದಲ್ಲಿ ಡೇರೆಗಳ ಚಿತ್ರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದರಲ್ಲಿ ʼಆಲ್ ಐಸ್ ಆನ್ ರಫಾʼ ಎಂದು ಬರೆದು, ರಫಾ ನಿರಾಶ್ರಿತರಿಗೆ ಬೆಂಬಲ ವ್ಯಕ್ತಪಡಿಸಲಾಗಿತ್ತು. ಈ ಪೋಸ್ಟ್‌ ಅನ್ನು ಭಾರತದ ಸೆಲೆಬ್ರಿಟಿಗಳೂ ಹಂಚಿಕೊಂಡಿದ್ದರು.

ಪ್ರಿಯಾಂಕಾ ಚೋಪ್ರಾ, ವರುಣ್ ಧವನ್, ಆಲಿಯಾ ಭಟ್, ಸಮಂತಾ ರುತ್ ಪ್ರಭು, ತ್ರಿಪ್ತಿ ಡಿಮ್ರಿ, ರಿಚಾ ಚಡ್ಡಾ, ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಮುಂತಾದ ಸೆಲೆಬ್ರಿಟಿಗಳು ʼಆಲ್ ಐಸ್ ಆನ್ ರಫಾʼ ಪೋಸ್ಟ್‌ ಹಂಚಿಕೊಂಡು ಕಂಬನಿ ಮಿಡಿದಿದ್ದರು. ಸದ್ಯ ಇವರೆಲ್ಲ ಭಾರತದಲ್ಲೇ ನಡೆದ ದುರಂತದ ಬಗ್ಗೆ ಮೌನ ವಹಿಸಿದ್ದು ನೆಟ್ಟಿಗರನ್ನು ಕೆರಳಿಸಿದೆ. ʼಆಲ್ ಐಸ್ ಆನ್ ರಿಯಾಸಿʼ ಎನ್ನುವ ಪೋಸ್ಟ್‌ ಈ ಸೆಲೆಬ್ರಿಟಿಗಳ ಸೋಷಿಯಲ್‌ ಮೀಡಿಯಾದಲ್ಲಿ ಯಾಕೆ ಕಾಣಿಸಿಕೊಂಡಿಲ್ಲ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

Continue Reading
Advertisement
Hindu Girl Kidnaping
Latest9 mins ago

Hindu Girl Kidnaping: ಪಾಕ್‌ನಲ್ಲಿ ಹಿಂದೂ ಬಾಲಕಿಯ ಅಪಹರಿಸಿ ಇಸ್ಲಾಂಗೆ ಮತಾಂತರ, ಬಲವಂತದ ಮದುವೆ

Glasses or Lenses
ಆರೋಗ್ಯ12 mins ago

Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

SSLC examination-2 to begin from tomorrow at over 700 centres
ಬೆಂಗಳೂರು14 mins ago

SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

weight lifting
ಪ್ರಮುಖ ಸುದ್ದಿ16 mins ago

Weight Lifting: ಮೊಣಕಾಲಿನ ಸಂಧಿವಾತವಿದ್ದರೂ 68ನೇ ವಯಸ್ಸಿನಲ್ಲಿ 60 ಕೆಜಿ ಭಾರ ಎತ್ತುವ ಅಜ್ಜಿ!

Online Order Tragedy
ಪ್ರಮುಖ ಸುದ್ದಿ26 mins ago

Online Order Tragedy: ಆನ್‌ಲೈನ್‌ನಿಂದ ತರಿಸಿದ ಐಸ್‌ಕ್ರೀಂನಲ್ಲಿತ್ತು ಮನುಷ್ಯರ ಬೆರಳು!

Ajit Doval
ದೇಶ42 mins ago

Ajit Doval: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ 3ನೇ ಅವಧಿಗೆ ನೇಮಕ; ಉಗ್ರರಿಗೆ ನಡುಕ

karnataka weather Forecast
ಮಳೆ49 mins ago

Karnataka Weather : ಭಾರಿ ಮಳೆಗೆ ಕುಸಿದು ಬಿದ್ದ ಮಣ್ಣಿನ ಮನೆ; ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ

Actor Darshan devil 22 crore taken by producer
ಸಿನಿಮಾ1 hour ago

Actor Darshan: ʻಡೆವಿಲ್ʼ ಸಿನಿಮಾಗೆ ದರ್ಶನ್‌ ಪಡೆದಿದ್ದು ಬರೋಬ್ಬರಿ 22 ಕೋಟಿ ರೂ.; ಶಾಕ್‌ನಲ್ಲಿ ನಿರ್ಮಾಪಕ!

Shirt Fashion
ಫ್ಯಾಷನ್1 hour ago

Shirt Fashion: ಮೆನ್ಸ್ ಹೈ ಫ್ಯಾಷನ್‌ಗೆ ಲಗ್ಗೆ ಇಟ್ಟ ಪ್ರಯೋಗಾತ್ಮಕ ರ‍್ಯಾಂಪ್‌ ಶರ್ಟ್

BS Yediyurappa
ಕರ್ನಾಟಕ1 hour ago

BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್, ಶೀಘ್ರವೇ ಬಂಧನ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌