Asaduddin Owaisi: ಹೆಂಡತಿ ಬೈದರೆ ಏನು ಮಾಡಬೇಕು? ಓವೈಸಿ ಹೇಳಿದ ಈ ಮಾತು ಪಾಲಿಸಿ! - Vistara News

ದೇಶ

Asaduddin Owaisi: ಹೆಂಡತಿ ಬೈದರೆ ಏನು ಮಾಡಬೇಕು? ಓವೈಸಿ ಹೇಳಿದ ಈ ಮಾತು ಪಾಲಿಸಿ!

Asaduddin Owaisi: ಯಾವಾಗಲೂ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ಅಸಾದುದ್ದೀನ್‌ ಓವೈಸಿ ಅವರೀಗ, ಹೆಂಡತಿ ಜತೆ ಹೇಗೆ ಅನ್ಯೋನ್ಯವಾಗಿರಬೇಕು ಎಂಬುದರ ಕುರಿತು ಕಾರ್ಯಕ್ರಮವೊಂದಲ್ಲಿ ಸಲಹೆ ನೀಡಿದ್ದಾರೆ.

VISTARANEWS.COM


on

Asaduddin Owaisi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್:‌ ಎಐಎಂಐಎಂ ಪಕ್ಷದ ಮುಖ್ಯಸ್ಥ, ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi) ಅವರು ಯಾವಾಗಲೂ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುತ್ತಿರುತ್ತಾರೆ. ಅದರಲ್ಲೂ, ಇಸ್ಲಾಂ ಧರ್ಮದ ಪ್ರವರ್ತಕರಂತೆ ಅವರು ಮಾತನಾಡುತ್ತಾರೆ. ಆದರೆ, ಈ ಬಾರಿ ಅಸಾದುದ್ದೀನ್‌ ಓವೈಸಿ ಅವರು ಕಾರ್ಯಕ್ರಮದಲ್ಲಿ ಗಂಡ-ಹೆಂಡತಿ (Husband And Wife Relationship) ಸಂಬಂಧದ ಬಗ್ಗೆ ಮಾತನಾಡುವ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ. “ಹೆಂಡತಿ ಬೈದರೆ ಸುಮ್ಮನಿರಬೇಕು, ಆಕೆಯ ಮೇಲೆ ದರ್ಪ ತೋರಬಾರದು” ಎಂದು ಪಕ್ಷದ ಕಾರ್ಯಕ್ರಮದಲ್ಲಿ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

“ನಾನು ಇದನ್ನು ತುಂಬ ಸಲ ಹೇಳಿದ್ದೇನೆ. ಇದರಿಂದ ಕೆಲವರ ಮನಸ್ಸಿಗೆ ನೋವಾಗಬಹುದು. ಆದರೆ, ಹೆಂಡತಿಯಾದವಳು ಗಂಡನ ಬಟ್ಟೆಗಳನ್ನು ತೊಳೆಯಬೇಕು, ಅಡುಗೆ ಮಾಡಿ ಬಡಿಸಬೇಕು ಅಥವಾ ನಿಮ್ಮ ತಲೆ ಸವರಬೇಕು ಎಂದು ಎಲ್ಲಿಯೂ ಕುರಾನ್‌ನಲ್ಲಿ ಹೇಳಿಲ್ಲ. ಹಾಗಾಗಿ, ಗಂಡಂದಿರು ತಮ್ಮ ಹೆಂಡತಿಯರ ಮೇಲೆ ಯಾವಾಗಲೂ ದರ್ಪ ತೋರಬಾರದು. ಅವರ ಮೇಲೆ ದೌರ್ಜನ್ಯ ಎಸಗಬಾರದು” ಎಂದು ಕಾರ್ಯಕರ್ತರಿಗೆ ಅಸಾದುದ್ದೀನ್‌ ಓವೈಸಿ ಕಿವಿಮಾತು ಹೇಳಿದರು.

“ಗಂಡ ದುಡಿಯುವ ಸಂಬಳದಲ್ಲಿ ಹೆಂಡತಿಗೆ ಪಾಲಿದೆ. ಆದರೆ, ಹೆಂಡತಿ ದುಡಿಯುವ ದುಡ್ಡಿನಲ್ಲಿ ಗಂಡನಿಗೆ ಯಾವುದೇ ಪಾಲು ಇಲ್ಲ. ತುಂಬ ಜನ ಹೆಂಡತಿ ಅಡುಗೆ ಮಾಡಿಲ್ಲ ಎಂದರೆ, ಸರಿಯಾಗಿ ಅಡುಗೆ ಮಾಡಿಲ್ಲ ಎಂದರೆ ಬೈಯುತ್ತಾರೆ. ಸಹೋದರರೇ, ಇದು ಇಸ್ಲಾಂ, ಎಲ್ಲಿಯೂ ಹೆಂಡತಿಯನ್ನು ಗುಲಾಮಳಂತೆ ಕಾಣಬೇಕು ಎಂದು ಉಲ್ಲೇಖಿಸಿಲ್ಲ. ಹೆಂಡತಿಗೆ ಬೈಯುವುದು, ಹೊಡೆಯುವುದು ಸರಿಯಲ್ಲ. ನೀವು ನಿಜವಾಗಿಯೂ ಪ್ರವಾದಿ ಮೊಹಮ್ಮದರ ಅನುಯಾಯಿ ಆಗಿದ್ದರೆ, ಹೆಣ್ಣುಮಕ್ಕಳ ಮೇಲೆ ಕೈ ಎತ್ತುವುದಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿ: Baba Ramdev: ನಾನು ಟೀಕಿಸಿದ್ದು ಓವೈಸಿಯನ್ನು, ಒಬಿಸಿಗಳನ್ನಲ್ಲ ಎಂದ ಬಾಬಾ ರಾಮದೇವ್

ಹಳೆಯ ಕತೆ ಹೇಳಿದ ಓವೈಸಿ

ಗಂಡ-ಹೆಂಡತಿ ಸಂಬಂಧದ ಬಗ್ಗೆ ಕತೆಯ ಮೂಲಕವೂ ಕಾರ್ಯಕರ್ತರಲ್ಲಿ ಅರಿವು ಮೂಡಿಸಿದರು. “ಒಮ್ಮೆ ಫಾರೂಕ್‌ ಎಂಬಾತ ಧರ್ಮಗುರುವಿನ ಮನೆಗೆ ಹೋದ. ಧರ್ಮ ಗುರುವಿನ ಮನೆಗೆ ಹೋಗುತ್ತಲೇ ಆತನ ಹೆಂಡತಿಯು ಬೈಯುತ್ತಿದ್ದಳು. ಧರ್ಮ ಗುರುವಿಗೇ ಹೆಂಡತಿ ಬೈಯುತ್ತಿದ್ದಳು. ನಾನೂ ಇದೇ ಸಮಸ್ಯೆ ಎದುರಿಸುತ್ತಿದ್ದೇನೆ ಗುರುಗಳೇ ಎಂದು ಫಾರೂಕ್‌ ಹೇಳಿದ. ಆಗ ಗುರುಗಳು, ಆಕೆ ನನ್ನ ಹೆಂಡತಿ, ನನ್ನ ಮನೆಯನ್ನು ನೋಡಿಕೊಳ್ಳುತ್ತಾಳೆ. ನನ್ನ ಮಕ್ಕಳಿಗೆ ಜನ್ಮ ನೀಡುವ ಜತೆಗೆ ಅವುಗಳನ್ನು ಪೋಷಣೆ ಮಾಡುತ್ತಾಳೆ. ಅವಳು ಕೂಡ ಮನುಷ್ಯಳೇ. ಆಕೆ ಏನಾದರೂ ಸಿಟ್ಟಿನಲ್ಲಿ ಹೇಳಿದರೆ, ನಾನು ಸುಮ್ಮನೆ ಕೇಳಿಸಿಕೊಳ್ಳುತ್ತೇನೆ ಎಂಬುದಾಗಿ ಫಾರೂಕ್‌ಗೆ ಧರ್ಮ ಗುರುಗಳು ಹೇಳಿದರು” ಎಂಬುದಾಗಿ ಅಸಾದುದ್ದೀನ್‌ ಓವೈಸಿ ಸಂಬಂಧದ ಕುರಿತು ಕತೆಯನ್ನು ನಿದರ್ಶನವಾಗಿ ಹೇಳಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Devendra Fadnavis: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ; ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಫಡ್ನವೀಸ್

Devendra Fadnavis: ದೇವೇಂದ್ರ ಫಡ್ನವೀಸ್‌ ಅವರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಬಲಿಷ್ಠವಾಗಲು ನಾನು ಸಂಘಟನೆ ಮಟ್ಟದಲ್ಲಿ ಕೆಲಸ ಮಾಡಲು ಇಚ್ಛಿಸತ್ತೇನೆ. ಪಕ್ಷದ ಸಂಘಟನೆಗೆ ನನ್ನ ಆದ್ಯತೆ ಇರಲಿದೆ. ಪೂರ್ಣಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾಗಾಗಿ, ಉಪ ಮುಖ್ಯಮಂತ್ರಿ ಹುದ್ದೆಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ” ಎಂಬುದಾಗಿ ತಿಳಿಸಿದ್ದಾರೆ.

VISTARANEWS.COM


on

Devendra Fadnavis
Koo

ಮುಂಬೈ: ಮಹಾರಾಷ್ಟ್ರದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election Result 2024) ಬಿಜೆಪಿಯು ಕಳಪೆ ಪ್ರದರ್ಶನ ತೋರಿರುವ ಕಾರಣ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ (Devendra Fadnavis) ಅವರು ಹಿನ್ನಡೆಯ ಹೊಣೆ ಹೊತ್ತು ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮಹಾರಾಷ್ಟ್ರದ (Maharashtra) ಒಟ್ಟು 48 ಕ್ಷೇತ್ರಗಳಲ್ಲಿ ಬಿಜೆಪಿಯು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾರಣ ಉಪ ಮುಖ್ಯಮಂತ್ರಿ ಜವಾಬ್ದಾರಿಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ದೇವೇಂದ್ರ ಫಡ್ನವೀಸ್‌ ಅವರು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ದೇವೇಂದ್ರ ಫಡ್ನವೀಸ್‌ ಅವರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಬಲಿಷ್ಠವಾಗಲು ನಾನು ಸಂಘಟನೆ ಮಟ್ಟದಲ್ಲಿ ಕೆಲಸ ಮಾಡಲು ಇಚ್ಛಿಸತ್ತೇನೆ. ಪಕ್ಷದ ಸಂಘಟನೆಗೆ ನನ್ನ ಆದ್ಯತೆ ಇರಲಿದೆ. ಪೂರ್ಣಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾಗಾಗಿ, ಉಪ ಮುಖ್ಯಮಂತ್ರಿ ಹುದ್ದೆಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ” ಎಂಬುದಾಗಿ ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯು ಒಟ್ಟು 48 ಕ್ಷೇತ್ರಗಳ ಪೈಕಿ 23 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಬಿಜೆಪಿಯು ಈ ಬಾರಿ 9 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕಾಂಗ್ರೆಸ್‌, ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ಹಾಗೂ ಎನ್‌ಸಿಪಿ (ಶರದ್‌ ಪವಾರ್)‌ ಅವರ ಮಹಾ ವಿಕಾಸ್‌ ಅಘಾಡಿಯು ಈ ಬಾರಿ 30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಅದರಲ್ಲೂ, ಕಳೆದ ಬಾರಿ 1 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್‌ಡಿಎಯು ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ನರೇಂದ್ರ ಮೋದಿ ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಸಲ್ಲಿಸಿದರು. ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ. 17ನೇ ಲೋಕಸಭೆ ವಿಸರ್ಜನೆಯ ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊಮ್ಮಿರುವ ಎನ್‌ಡಿಎ ಸರಕಾರ ರಚನೆಯ ಹಕ್ಕು ಮಂಡಿಸಬೇಕಿದೆ. ಮಿತ್ರಪಕ್ಷಗಳ ಜತೆಗೆ ಸಮಾಲೋಚನೆಯ ಬಳಿಕ ಮೋದಿಯವರು ರಾಷ್ಟ್ರಪತಿಗಳ ಮುಂದೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಇದನ್ನೂ ಓದಿ: PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

Continue Reading

ಪ್ರಮುಖ ಸುದ್ದಿ

PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

PM Narendra Modi: ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

VISTARANEWS.COM


on

pm narendra modi resignation
Koo

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ (Resignation) ಸಲ್ಲಿಸಿದರು. ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ. 17ನೇ ಲೋಕಸಭೆ ವಿಸರ್ಜನೆಯ (Lok Sabha dissolvation) ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ದೊಡ್ಡ ಪಕ್ಷವಾಗಿ ಹೊಮ್ಮಿರುವ ಎನ್‌ಡಿಎ (NDA) ಸರಕಾರ ರಚನೆಯ ಹಕ್ಕು ಮಂಡಿಸಬೇಕಿದೆ. ಮಿತ್ರಪಕ್ಷಗಳ ಜೊತೆಗೆ ಸಮಾಲೋಚನೆಯ ಬಳಿಕ ಮೋದಿಯವರು ರಾಷ್ಟ್ರಪತಿಗಳ ಮುಂದೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಎನ್‌ಡಿಎಗೆ ತೆಲುಗುದೇಶಂ, ಜೆಡಿಯು ಬೆಂಬಲ

ಲೋಕಸಭಾ ಚುನಾವಣೆ (Election Results 2024)ಯ ಅಚ್ಚರಿಯ ಫಲಿತಾಂಶ ಹಲವು ರಾಜಕೀಯ ಚಟುವಟಿಕೆಗಳಿಗೆ ಕಾರಣವಾಗಿದೆ. ಈಗಾಗಲೇ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ರಚಿಸುವುದಾಗಿ ಘೋಷಿಸಿದ್ದು, ಇದಕ್ಕಾಗಿ ಸಿದ್ಧತೆ ಆರಂಭವಾಗಿದೆ. ಇದೀಗ ಕಿಂಗ್‌ ಮೇಕರ್‌ ಆಗಿ ಹೊರ ಹೊಮ್ಮಿರುವ ತೆಲುಗು ದೇಶಂ ಪಕ್ಷ (TDP)ದ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದ್ದಾರೆ. ಎನ್‌ಡಿಎ ಜತೆಗೆ ಕೆಲಸ ಮಾಡಿದ್ದರಿಂದ ಗೆಲುವು ಸಾಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟಕ್ಕೆ ಸೇರುವ ವದಂತಿಯನ್ನು ತಳ್ಳಿ ಹಾಕಿರುವ ಟಿಡಿಪಿ, ಎನ್‌ಡಿಎಗೆ ಬೆಂಬಲ ನೀಡುವುದನ್ನು ಮುಂದುವರಿಸುವುದಾಗಿ ಹೇಳಿದೆ. ಬುಧವಾರ ಸಂಜೆ ದೆಹಲಿಯಲ್ಲಿ ಆಯೋಜಿಸಿರುವ ಎನ್‌ಡಿಎ ಸಭೆಯಲ್ಲಿ ಚಂದ್ರಬಾಬು ನಾಯ್ಡು ಭಾಗವಹಿಸಲಿದ್ದಾರೆ ಎಂದೂ ಟಿಡಿಪಿ ತಿಳಿಸಿದೆ. ಆಂಧ್ರ ಪ್ರದೇಶದ 25 ಸೀಟುಗಳ ಪೈಕಿ 21 ಸ್ಥಾನಗಳನ್ನು ಎನ್‌ಡಿಎ ಗೆದ್ದುಕೊಂಡಿದೆ. ಈ ಪೈಕಿ ಟಿಡಿಪಿ ಅತಿ ಹೆಚ್ಚಿನ 16 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದು, ಮಿತ್ರ ಪಕ್ಷವಾದ ಜನಸೇನೆ 2 ಮತ್ತು ಬಿಜೆಪಿ 3 ಕಡೆ ಗೆದ್ದಿದೆ.

ಚಂದ್ರಬಾಬು ನಾಯ್ಡು ಹೇಳಿದ್ದೇನು?

ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಚಂದ್ರಬಾಬು ನಾಯ್ಡು, “ಈ ದೇಶದಲ್ಲಿ ಹಲವಾರು ರಾಜಕೀಯ ಬದಲಾವಣೆಗಳನ್ನು ನೋಡಿದ್ದೇನೆ. ನಾವು ಎನ್‌ಡಿಎಯಲ್ಲಿದ್ದೇವೆ. ನಾನು ಎನ್‌ಡಿಎ ಸಭೆಗೆ ಹೋಗುತ್ತಿದ್ದೇನೆ. ಮತದಾರರ ಬೆಂಬಲಕ್ಕೆ ಧನ್ಯವಾದಗಳು. ರಾಜಕೀಯದಲ್ಲಿ ಏರಿಳಿತಗಳು ಸಾಮಾನ್ಯ. ಇತಿಹಾಸದಲ್ಲಿ ಅನೇಕ ರಾಜಕೀಯ ನಾಯಕರು ಮತ್ತು ಪಕ್ಷಗಳನ್ನು ಜನರು ಸೋಲಿಸಿದ್ದಾರೆ. ಇದೊಂದು ಐತಿಹಾಸಿಕ ಚುನಾವಣೆ” ಎಂದು ಅವರು ಹೇಳಿದ್ದಾರೆ.

ಪ್ರಮುಖ ಖಾತೆಗಳಿಗೆ ಬೇಡಿಕೆ?

ಇದೀಗ ಕಿಂಗ್‌ ಮೇಕರ್‌ ಆಗಿರುವ ಟಿಡಿಪಿ ಸರ್ಕಾರದಲ್ಲಿ ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಸಾರಿಗೆ ಖಾತೆಗಳ ಜತೆಗೆ ಸ್ಪೀಕರ್ ಹುದ್ದೆಯನ್ನು ಕೋರಬಹುದು ಎಂದು ಮೂಲಗಳು ತಿಳಿಸಿವೆ. ಜತೆಗೆ ಕೃಷಿ, ಜಲಶಕ್ತಿ, ಐಟಿ ಮತ್ತು ರಾಜ್ಯ ಹಣಕಾಸು ಖಾತೆಗಳಿಗೂ ಬೇಡಿಕೆ ಇಡುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ಟಿಡಿಪಿ 5-6 ಖಾತೆಗಳಿಗಾಗಿ ಹಕ್ಕು ಮಂಡಿಸಲಿದೆ.

ಬೇಷರತ್ತು ಬೆಂಬಲ ಘೋಷಿಸಿದ ಜೆಡಿಯು

ಇತ್ತ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಕೂಡ ಎನ್‌ಡಿಎಗೆ ಬೇಷರತ್ತು ಬೆಂಬಲ ಸೂಚಿಸಿದೆ. ಜೆಡಿಯು ಮುಖಂಡ ಕೆ.ಸಿ.ತ್ಯಾಗಿ ಈ ಬಗ್ಗೆ ಮಾತನಾಡಿ, ಯಾವದೇ ಬೇಡಿಕೆ ಇಲ್ಲದೆ ಎನ್‌ಡಿಎಗೆ ಬೆಂಬಲ ನೀಡುತ್ತಿದ್ದೇವೆ ಎಂದು ಘೋಷಿಸಿದ್ದಾರೆ. ಎನ್‌ಡಿಎ ಸಭೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಈಗಾಗಲೇ ನಿತೀಶ್‌ ಕುಮಾರ್‌ ದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕೆ.ಸಿ.ತ್ಯಾಗಿ, “ಎನ್‌ಡಿಎ ಸಭೆ ದೆಹಲಿಯಲ್ಲಿ ನಡೆಯಲಿದೆ. ಸಭೆಯಲ್ಲಿ ನಿತೀಶ್ ಕುಮಾರ್ ಭಾಗವಹಿಸುತ್ತಿದ್ದಾರೆ. ಈ ವೇಳೆ ಜೆಡಿಯು ಎನ್‌ಡಿಎಗೆ ಬೆಂಬಲ ನೀಡುವ ಮತ್ತು ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಬಗ್ಗೆ ಪತ್ರವನ್ನು ಸಲ್ಲಿಸಲಿದೆ. ʼಇಂಡಿಯಾʼ ಮೈತ್ರಿಕೂಟಕ್ಕೆ ಮರಳುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

Continue Reading

ಪ್ರಮುಖ ಸುದ್ದಿ

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

Uttarkashi Trekking Tragedy: ಉತ್ತರಕಾಶಿಯ ಎತ್ತರದ ಸಹಸ್ತ್ರ ತಾಲ್‌ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದ ಅಪಾಯಕ್ಕೆ ಸಿಲುಕಿತ್ತು. ಅಪಯಾಕ್ಕೆ ಸಿಲುಕಿದ್ದ 13 ಮಂದಿ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಎಂಟು ಮಂದಿಯನ್ನು ರಕ್ಷಿಸಲಾಗಿದೆ.

VISTARANEWS.COM


on

Uttarkashi Trekking Tragedy
Koo

ಬೆಂಗಳೂರು: ಉತ್ತರಾಖಂಡದ ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನಕ್ಕೆ (Uttarkashi Trekking Tragedy) ಸಿಲುಕಿ ಕರ್ನಾಟಕದ ನಾಲ್ವರು ಚಾರಣಿಗರು ಮೃತಪಟ್ಟಿರುವ ಘಟನೆ ನಡೆದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಚಾರಣಿಗರು, ಟೂರ್‌ ಗೈಡ್‌ಗಳು ಸೇರಿ 22 ಮಂದಿ ತಂಡವೊಂದು ಉತ್ತರಕಾಶಿಯ ಎತ್ತರದ ಸಹಸ್ತ್ರ ತಾಲ್‌ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದ ಅಪಾಯಕ್ಕೆ ಸಿಲುಕಿತ್ತು. ಚಾರಣದಿಂದ ಹಿಂತಿರುಗುವಾಗ ಅಪಾಯಕ್ಕೆ ಸಿಲುಕಿದ್ದ 13 ಮಂದಿ ಪೈಕಿ ನಾಲ್ವರು ಮೃತಪಟ್ಟಿದ್ದಾರೆ.

ಮೇ 29ರಂದು ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಹಾಗೂ ಮೂವರು ಟೂರ್‌ ಗೈಡ್‌ಗಳು ಸೇರಿ 22 ಮಂದಿ ಸಹಸ್ತ್ರ ತಾಲ್‌ಗೆ ಚಾರಣಕ್ಕೆ ತೆರಳಿದ್ದರು. ಸಹಸ್ತ್ರ ತಾಲ್‌ನಿಂದ ಬೇಸ್‌ ಕ್ಯಾಂಪ್‌ಗೆ ಮರಳುತ್ತಿದ್ದಾಗ ಪ್ರತಿಕೂಲ ಹವಾಮಾನಕ್ಕೆ ಚಾರಣಿಗರು ಸಿಲುಕಿದ್ದಾರರೆ. ಈ ವೇಳೆ ಎರಡು ವಾಹನದಲ್ಲಿ 8 ಮಂದಿ ಬೇಸ್‌ ಕ್ಯಾಂಪ್‌ಗೆ ಮರಳಿದ್ದು, 13 ಮಂದಿ ಅಪಾಯದಲ್ಲಿ ಸಿಲುಕಿದ್ದರು. ಈ ಪೈಕಿ ನಾಲ್ವರು ಮೃತಪಟ್ಟಿದ್ದು, ಇನ್ನುಳಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ.

ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ. ಪ್ರಸ್ತುತ ಕೆಲವರು ಈಗ ಕೊಹ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಿದೆ. ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | ‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

ಈ ಬಗ್ಗೆ ಸಚಿವ ಕೃಷ್ಣ ಬೈರೆಗೌಡ ಪ್ರತಿಕ್ರಿಯಿಸಿ, ಉತ್ತರಾಖಂಡ್‌ನಲ್ಲಿ ರಾಜ್ಯದ ಟ್ರೆಕ್ಕಿಂಗ್ ಟೀಂ ಸಿಲುಕಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಲಾಗಿದೆ. ರಕ್ಷಣೆ ಸಂಬಂಧ ಉತ್ತರಾಖಂಡ ಸರ್ಕಾರದ ಜೊತೆ ಮಾತನಾಡಲಾಗಿದೆ. ಖುದ್ದು ತೆರಳಿ ಕಾರ್ಯಚರಣೆ ನೋಡಿಕೊಳ್ಳಿ ಎಂದು ಸೂಚಿಸಿದ್ದರಿಂದ ಡೆಹ್ರಾಡೂನ್‌ಗೆ ಹೊರಟಿರುವುದಾಗಿ ತಿಳಿಸಿದ್ದಾರೆ.

Continue Reading

Lok Sabha Election 2024

Election Results 2024: ಎನ್‌ಡಿಎಗೆ ಬೆಂಬಲ ನೀಡುವುದಾಗಿ ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು; ಬಿಜೆಪಿಗೆ ಬಿಗ್‌ ರಿಲೀಫ್‌

Election Results 2024: ಈಗಾಗಲೇ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ರಚಿಸುವುದಾಗಿ ಘೋಷಿಸಿದ್ದು, ಇದಕ್ಕಾಗಿ ಸಿದ್ಧತೆ ಆರಂಭವಾಗಿದೆ. ಇದೀಗ ಕಿಂಗ್‌ ಮೇಕರ್‌ ಆಗಿ ಹೊರ ಹೊಮ್ಮಿರುವ ತೆಲುಗು ದೇಶಂ ಪಕ್ಷ (TDP)ದ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದ್ದಾರೆ. ಎನ್‌ಡಿಎ ಜತೆಗೆ ಕೆಲಸ ಮಾಡಿದ್ದರಿಂದ ಗೆಲುವು ಸಾಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

Election Results 2024
Koo

ನವದೆಹಲಿ: ಲೋಕಸಭಾ ಚುನಾವಣೆ (Election Results 2024)ಯ ಅಚ್ಚರಿಯ ಫಲಿತಾಂಶ ಹಲವು ರಾಜಕೀಯ ಚಟುವಟಿಕೆಗಳಿಗೆ ಕಾರಣವಾಗಿದೆ. ಈಗಾಗಲೇ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ರಚಿಸುವುದಾಗಿ ಘೋಷಿಸಿದ್ದು, ಇದಕ್ಕಾಗಿ ಸಿದ್ಧತೆ ಆರಂಭವಾಗಿದೆ. ಇದೀಗ ಕಿಂಗ್‌ ಮೇಕರ್‌ ಆಗಿ ಹೊರ ಹೊಮ್ಮಿರುವ ತೆಲುಗು ದೇಶಂ ಪಕ್ಷ (TDP)ದ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದ್ದಾರೆ. ಎನ್‌ಡಿಎ ಜತೆಗೆ ಕೆಲಸ ಮಾಡಿದ್ದರಿಂದ ಗೆಲುವು ಸಾಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟಕ್ಕೆ ಸೇರುವ ವದಂತಿಯನ್ನು ತಳ್ಳಿ ಹಾಕಿರುವ ಟಿಡಿಪಿ, ಎನ್‌ಡಿಎಗೆ ಬೆಂಬಲ ನೀಡುವುದನ್ನು ಮುಂದುವರಿಸುವುದಾಗಿ ಹೇಳಿದೆ. ಬುಧವಾರ ಸಂಜೆ ದೆಹಲಿಯಲ್ಲಿ ಆಯೋಜಿಸಿರುವ ಎನ್‌ಡಿಎ ಸಭೆಯಲ್ಲಿ ಚಂದ್ರಬಾಬು ನಾಯ್ಡು ಭಾಗವಹಿಸಲಿದ್ದಾರೆ ಎಂದೂ ಟಿಡಿಪಿ ತಿಳಿಸಿದೆ. ಆಂಧ್ರ ಪ್ರದೇಶದ 25 ಸೀಟುಗಳ ಪೈಕಿ 21 ಸ್ಥಾನಗಳನ್ನು ಎನ್‌ಡಿಎ ಗೆದ್ದುಕೊಂಡಿದೆ. ಈ ಪೈಕಿ ಟಿಡಿಪಿ ಅತಿ ಹೆಚ್ಚಿನ 16 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದು, ಮಿತ್ರ ಪಕ್ಷವಾದ ಜನಸೇನೆ 2 ಮತ್ತು ಬಿಜೆಪಿ 3 ಕಡೆ ಗೆದ್ದಿದೆ.

ಚಂದ್ರಬಾಬು ನಾಯ್ಡು ಹೇಳಿದ್ದೇನು?

ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಚಂದ್ರಬಾಬು ನಾಯ್ಡು, “ಈ ದೇಶದಲ್ಲಿ ಹಲವಾರು ರಾಜಕೀಯ ಬದಲಾವಣೆಗಳನ್ನು ನೋಡಿದ್ದೇನೆ. ನಾವು ಎನ್‌ಡಿಎಯಲ್ಲಿದ್ದೇವೆ. ನಾನು ಎನ್‌ಡಿಎ ಸಭೆಗೆ ಹೋಗುತ್ತಿದ್ದೇನೆ. ಮತದಾರರ ಬೆಂಬಲಕ್ಕೆ ಧನ್ಯವಾದಗಳು. ರಾಜಕೀಯದಲ್ಲಿ ಏರಿಳಿತಗಳು ಸಾಮಾನ್ಯ. ಇತಿಹಾಸದಲ್ಲಿ ಅನೇಕ ರಾಜಕೀಯ ನಾಯಕರು ಮತ್ತು ಪಕ್ಷಗಳನ್ನು ಜನರು ಸೋಲಿಸಿದ್ದಾರೆ. ಇದೊಂದು ಐತಿಹಾಸಿಕ ಚುನಾವಣೆ” ಎಂದು ಅವರು ಹೇಳಿದ್ದಾರೆ.

ಪ್ರಮುಖ ಖಾತೆಗಳಿಗೆ ಬೇಡಿಕೆ?

ಇದೀಗ ಕಿಂಗ್‌ ಮೇಕರ್‌ ಆಗಿರುವ ಟಿಡಿಪಿ ಸರ್ಕಾರದಲ್ಲಿ ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಸಾರಿಗೆ ಖಾತೆಗಳ ಜತೆಗೆ ಸ್ಪೀಕರ್ ಹುದ್ದೆಯನ್ನು ಕೋರಬಹುದು ಎಂದು ಮೂಲಗಳು ತಿಳಿಸಿವೆ. ಜತೆಗೆ ಕೃಷಿ, ಜಲಶಕ್ತಿ, ಐಟಿ ಮತ್ತು ರಾಜ್ಯ ಹಣಕಾಸು ಖಾತೆಗಳಿಗೂ ಬೇಡಿಕೆ ಇಡುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ಟಿಡಿಪಿ 5-6 ಖಾತೆಗಳಿಗಾಗಿ ಹಕ್ಕು ಮಂಡಿಸಲಿದೆ.

ಇದನ್ನೂ ಓದಿ: Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

ಬೇಷರತ್ತು ಬೆಂಬಲ ಘೋಷಿಸಿದ ಜೆಡಿಯು

ಇತ್ತ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಕೂಡ ಎನ್‌ಡಿಎಗೆ ಬೇಷರತ್ತು ಬೆಂಬಲ ಸೂಚಿಸಿದೆ. ಜೆಡಿಯು ಮುಖಂಡ ಕೆ.ಸಿ.ತ್ಯಾಗಿ ಈ ಬಗ್ಗೆ ಮಾತನಾಡಿ, ಯಾವದೇ ಬೇಡಿಕೆ ಇಲ್ಲದೆ ಎನ್‌ಡಿಎಗೆ ಬೆಂಬಲ ನೀಡುತ್ತಿದ್ದೇವೆ ಎಂದು ಘೋಷಿಸಿದ್ದಾರೆ. ಎನ್‌ಡಿಎ ಸಭೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಈಗಾಗಲೇ ನಿತೀಶ್‌ ಕುಮಾರ್‌ ದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕೆ.ಸಿ.ತ್ಯಾಗಿ, “ಎನ್‌ಡಿಎ ಸಭೆ ದೆಹಲಿಯಲ್ಲಿ ನಡೆಯಲಿದೆ. ಸಭೆಯಲ್ಲಿ ನಿತೀಶ್ ಕುಮಾರ್ ಭಾಗವಹಿಸುತ್ತಿದ್ದಾರೆ. ಈ ವೇಳೆ ಜೆಡಿಯು ಎನ್‌ಡಿಎಗೆ ಬೆಂಬಲ ನೀಡುವ ಮತ್ತು ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಬಗ್ಗೆ ಪತ್ರವನ್ನು ಸಲ್ಲಿಸಲಿದೆ. ʼಇಂಡಿಯಾʼ ಮೈತ್ರಿಕೂಟಕ್ಕೆ ಮರಳುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

Continue Reading
Advertisement
Devendra Fadnavis
ದೇಶ1 min ago

Devendra Fadnavis: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ; ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಫಡ್ನವೀಸ್

SCO vs ENG
ಕ್ರೀಡೆ11 mins ago

SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

murder case infosys engineer
ಕ್ರೈಂ15 mins ago

Murder Case: ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

Govt Employees Association
ಕರ್ನಾಟಕ48 mins ago

Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

pm narendra modi resignation
ಪ್ರಮುಖ ಸುದ್ದಿ54 mins ago

PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

India vs Ireland
ಕ್ರೀಡೆ1 hour ago

India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Uttarkashi Trekking Tragedy
ಪ್ರಮುಖ ಸುದ್ದಿ1 hour ago

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

Election Results 2024
Lok Sabha Election 20242 hours ago

Election Results 2024: ಎನ್‌ಡಿಎಗೆ ಬೆಂಬಲ ನೀಡುವುದಾಗಿ ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು; ಬಿಜೆಪಿಗೆ ಬಿಗ್‌ ರಿಲೀಫ್‌

Election Results 2024
ಪ್ರಮುಖ ಸುದ್ದಿ2 hours ago

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

prajwal revanna case
ಪ್ರಮುಖ ಸುದ್ದಿ2 hours ago

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌