Business Guide : ಕಿರಾಣಾ ಸ್ಟೋರ್‌ಗಳು ಸೂಪರ್‌ ಮಾರ್ಕೆಟ್‌ ಆಗಿ ಬದಲಾಗಬೇಕೆ? - Vistara News

ವಾಣಿಜ್ಯ

Business Guide : ಕಿರಾಣಾ ಸ್ಟೋರ್‌ಗಳು ಸೂಪರ್‌ ಮಾರ್ಕೆಟ್‌ ಆಗಿ ಬದಲಾಗಬೇಕೆ?

ಕಿರಾಣಾ ಸ್ಟೋರ್‌ಗಳು ಜನರಿಗೆ ದಿನ ನಿತ್ಯ ಬಳಕೆಯ ಉತ್ಪನ್ನ ಮತ್ತು ಸೇವೆಯನ್ನು ನೀಡುತ್ತವೆ. ಇವುಗಳ ಟ್ರೆಂಡ್‌ ಸ್ಟೋರಿ ( Business Guide ) ಇಲ್ಲಿದೆ.

VISTARANEWS.COM


on

kirana store
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದಲ್ಲಿ ಯಾವುದಾದರೂ ವ್ಯಾಪಾರ ಶುರು ಮಾಡಬೇಕು ಎಂದು ಬಯಸುವವರಿಗೆ ಕಿರಾಣಾ ಸ್ಟೋರ್ ಮಾಡಬೇಕು ಎಂಬ ಆಲೋಚನೆಯೂ ಬರುತ್ತದೆ. (Business Guide) ಹಾಗಿದ್ದರೆ ಕಿರಾಣಾ ಸ್ಟೋರ್‌ ತೆರೆಯುವುದು ಹೇಗೆ? ಇ-ಕಾಮರ್ಸ್‌ ಕಾಂಪಿಟೇಶನ್‌ ಎದುರಿಸಿ ಲಾಭ ಗಳಿಸುವುದು ಹೇಗೆ ? ಗಳಿಸುವ ಲಾಭವನ್ನು ಹೇಗೆ ಉಳಿತಾಯ ಮಾಡಿ ಬೆಳೆಸಬೇಕು? ಕಿರಾಣಾ ಸ್ಟೋರ್‌ಗಳು ಸೂಪರ್‌ ಮಾರ್ಕೆಟ್‌ ಆಗಿ ಬದಲಾಗಬೇಕೆ? ಎಂಬುದನ್ನು ನೋಡೋಣ. ಆದರೆ ಇದಕ್ಕೂ ಮುನ್ನ ಕೆಲವೊಂದು ವಿಷಯಗಳನ್ನು ತಿಳಿದುಕೊಳ್ಳಬೇಕು.

ನೋಡಿ, ಭಾರತದಲ್ಲಿ 1.3 ಕೋಟಿ ಕಿರಾಣಾ ಸ್ಟೋರ್‌ಗಳಿವೆ.‌ ಆಫ್‌ಲೈನ್‌ ಸ್ಪರ್ಧೆ ಮಾತ್ರವಲ್ಲದೆ ಆನ್‌ಲೈನ್‌ ಅಥವಾ ಇ-ಕಾಮರ್ಸ್‌ ಮೂಲಕವೂ ಸ್ಪರ್ಧೆ ಇದೆ. ಕಿರಾಣಾ ಸ್ಟೋರ್‌ಗಳಲ್ಲಿ ಸಿಗುವ ಎಲ್ಲ ವಸ್ತುಗಳನ್ನು ಆನ್‌ ಲೈನ್‌ ಮೂಲಕವೂ ಮನೆ ಬಾಗಿಲಿಗೆ ತರಿಸಿಕೊಳ್ಳಬಹುದು. ಎಲ್ಲಿ ಕಡಿಮೆ ಬೆಲೆಗೆ ಸಿಗುತ್ತದೆ ಅಂತ ಜನ ನೋಡುತ್ತಾರೆ.

ಕಿರಾಣಾ ಸ್ಟೋರ್‌ ಆರಂಭಿಸುವವರು ಇತರ ಸ್ಟೋರ್‌ಗಳಿಂತ ತುಸು ಭಿನ್ನವಾದ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಆಕರ್ಷಿಸಬಹುದು. ಇತರ ಸ್ಟೋರ್‌ಗಳಿಗಿಂತ ಸ್ವಲ್ಪ ಹೆಚ್ಚು ಹೊತ್ತು ಸೇವೆ ನೀಡಬಹುದು. ಹೆಚ್ಚು ವಿಶೇಷ ಎನ್ನಿಸುವಂಥ ಉತ್ಪನ್ನಗಳನ್ನು ಮಾರಾಟಕ್ಕಿಡಬಹುದು. ನೀವು ಇರುವ ಏರಿಯಾ ಕೂಡ ನಿಮ್ಮ ಬಿಸಿನೆಸ್‌ ಮಾಡೆಲ್‌ ಅನ್ನು ನಿರ್ಧರಿಸುತ್ತದೆ. ಹೆಚ್ಚು ಮುಂದುವರಿದಿರುವ, ಆರ್ಥಿಕವಾಗಿ ಸಿರಿವಂತರೇ ಹೆಚ್ಚು ಇರುವ ಕಡೆಗಳಲ್ಲಿ ನಿಮ್ಮ ಕಿರಾಣಾ ಸ್ಟೋರ್‌ ಇದ್ದರೆ, ಅಂಥ ಗ್ರಾಹಕರಿಗೆ ಬೇಕಾಗುವ ಬ್ರಾಂಡ್‌ಗಳ ಉತ್ಪನ್ನಗಳನ್ನು ಕೊಡಬೇಕು. ಮಧ್ಯಮ ವರ್ಗ, ಬಡ ಜನತೆ ವಾಸಿಸುವ ಪ್ರದೇಶದಲ್ಲಿ ದುಬಾರಿ ಬ್ರಾಂಡ್‌ಗಳ ಉತ್ಪನ್ನಗಳನ್ನು ತಂದಿಟ್ಟರೆ ನಷ್ಟವಾಗಬಹುದು. ಸಣ್ಣ ಶಾಪ್‌ ಆಗಿದ್ದರೂ, ಚೆನ್ನಾಗಿ ಮಾಡಿ. ಹೋಮ್‌ ಡೆಲಿವರಿ ಸರ್ವೀಸನ್ನೂ ಕೊಡಿ. ಆದರೆ ಸಾಕಷ್ಟು ಶಾಪ್‌ ಗಳು ಇರುವ ಕಡೆಗಳಲ್ಲಿ ನೀವು ತೆರೆಯಬೇಡಿ. ಆಗ ನಿಮಗೆ ಸಿಗುವ ಲಾಭ ಕಡಿಮೆಯಾಗುತ್ತದೆ.

ದಿನಸಿ ಅಂಗಡಿಗಳಲ್ಲಿ ಮಾರ್ಜಿನ್‌ ಅಥವಾ ಲಾಭಾಂಶದ ಪ್ರಮಾಣ ಅತ್ಯಲ್ಪ. ಹಾಗಾದರೆ ಎಷ್ಟು ಬಂಡವಾಳ ಬೇಕು? 5 ಲಕ್ಷ ರೂ.ಗಳಿಂದ 25 ಲಕ್ಷ ರೂ. ತನಕ ಬಂಡವಾಳ ಬೇಕಾಗುತ್ತದೆ. ಉತ್ತಮ ಮಾರ್ಕೆಟ್‌ ಪ್ರದೇಶದಲ್ಲೂ ಭರ್ಜರಿ ವ್ಯಾಪಾರ ನಡೆಯುತ್ತದೆ. ನೀವು ಲಕ್ಷಾಂತರ ರೂ. ಹೂಡಿಕೆಯೊಂದಿಗೆ ಕಿರಾಣಾ ಸ್ಟೋರ್‌ ತೆರೆದಾಗ, ಅದಕ್ಕೆ ಟ್ರೇಡ್‌ ಲೈಸೆನ್ಸ್‌, ಬಾಡಿಗೆ ಕಟ್ಟಡದಲ್ಲಿ ಮಾಡಿದರೆ ಲೀಸ್‌ ಅಗ್ರಿಮೆಂಟ್‌, ಆಹಾರ ವಸ್ತುಗಳ ಮಾರಾಟಕ್ಕೆ ಎಫ್‌ಎಸ್‌ ಎಸ್‌ ಎಐ ಲೈಸೆನ್ಸ್‌, ಶಾಪ್‌ ಆಂಡ್‌ ಎಸ್ಟಾಬ್ಲಿಷ್‌ಮೆಂಟ್‌ ಲೈಸೆನ್ಸ್‌ ಅಗತ್ಯ. ನಿಮ್ಮ ವಾರ್ಷಿಕ ವಹಿವಾಟು 40 ಲಕ್ಷ ರೂ. ದಾಟಿದರೆ ಜಿಎಸ್‌ಟಿ ರಿಜಿಸ್ಟ್ರೇಶನ್‌ ಕೂಡ ಅಗತ್ಯ. ಕಿರಾಣಾ ಸ್ಟೋರ್‌ನ ಇಂಟೀರಿಯರ್‌ ಡಿಸೈನ್‌ ಅನ್ನು 50 ಸಾವಿರ ರೂ.ಗಳಿಂದ ಕೆಲವು ಲಕ್ಷ ರೂ. ತನಕ ಮಾಡಿಸಬಹುದು.

ಕಂಪನಿಯ ಅಧಿಕೃತ ಡೀಲರ್‌ಗಳಿಂದ ದಿನಸಿ ವಸ್ತುಗಳನ್ನು ಖರೀದಿಸಬಹುದು. ಬೇಳೆ ಕಾಳುಗಳು ಬೇಕಿದ್ದರೆ ಪ್ರತ್ಯೇಕ ಡೀಲರ್‌ಗಳಿರುತ್ತಾರೆ. ಅವರು ಕಾಳುಗಳನ್ನು ಲಾರಿಗಳಲ್ಲಿ ತಂದು ಮೂಟೆಗಳಲ್ಲಿ ಮಾರುತ್ತಾರೆ. ಬೇಳೆಕಾಳುಗಳನ್ನು ಸ್ವಚ್ಛಗೊಳಿಸಿ ಸಣ್ಣ ಪ್ಯಾಕೇಟ್‌ಗಳಲ್ಲಿ ಸ್ವಲ್ಪ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು. ಜತೆಗೆ ರಿಟೇಲ್‌ ಆಗಿ ಐಸ್‌ ಕ್ರೀಮ್‌, ಹಾಲು, ಮೊಸರು ಮಾರಾಟ ಮಾಡಬಹುದು. ಮಾರ್ಜಿನ್‌ 5-15% ಸಿಗುತ್ತದೆ. ದಿನಕ್ಕೆ 10,000 ರೂ. ವ್ಯಾಪಾರ ಮಾಡಿದರೆ ಸುಮಾರು 500 ರೂ. ಲಾಭ ಸಿಗುತ್ತದೆ.

ಕಿರಾಣಿ ಅಂಗಡಿ ನಡೆಸುವವರು ಎದುರಿಸುವ ಸವಾಲುಗಳೇನು ಎಂಬುದನ್ನು ನೋಡೋಣ. ಮೊದಲನೆಯದಾಗಿ ಯಾವಾಗಲೂ ಅಂಗಡಿ ತೆರೆಯಬೇಕು. ಬೆಳಗ್ಗೆ 7 ಗಂಟೆಗೆ ತೆರೆದರೆ ರಾತ್ರಿ 10 ರ ತನಕ ತೆರೆದಿರಬೇಕು. ಎರಡನೆಯದಾಗಿ ಲೆಕ್ಕಾಚಾರ ಕರೆಕ್ಟಾಗಿ ಇಟ್ಟುಕೊಳ್ಳಬೇಕು. ಎಂಟಾಣೆ, ಒಂದು ರೂ. ಲೆಕ್ಕದಲ್ಲಿ ಅಲ್ಪ ಲಾಭಾಂಶ ಇರುವುದರಿಂದ ಲೆಕ್ಕಾಚಾರ ಬೇಕು. ಮೂರನೆಯದಾಗಿ ಉದ್ರಿ ಅಥವಾ ಸಾಲಕ್ಕೆ ತೆಗೆದುಕೊಳ್ಳುವ ಗ್ರಾಹಕರು ಇದ್ದೇ ಇರುತ್ತಾರೆ. ಅವರನ್ನು ಸಂಪೂರ್ಣ ದೂರವಿಡಲು ಸಾಧ್ಯವಾಗುವುದಿಲ್ಲ. ನಾಲ್ಕನೆಯದಾಗಿ, ವೈವಿಧ್ಯಮಯ ಉತ್ಪನ್ನಗಳನ್ನು ಇಡಬೇಕು. ಐದನೆಯದಾಗಿ ಒಬ್ಬರಿಂದಲೇ ಅಂಗಡಿ ನಡೆಸುವುದು ಕೂಡ ಕಷ್ಟ. ಇಬ್ಬರು ಇದ್ದರೆ ಸೂಕ್ತ.

ಆರನೆಯದಾಗಿ, ನೀವು ಮಾರುಕಟ್ಟೆಯಿಂದ 10,000 ರೂ. ಮಾಲುಗಳನ್ನು ತಂದು ಇಡುತ್ತೀರಿ. ಅದರಲ್ಲಿ ಒಂದು ರೂಪಾಯಿ-ಹತ್ತು ರೂಪಾಯಿ-ಐವತ್ತು ರೂಪಾಯಿ ಲೆಕ್ಕದ ಅನೇಕ ವಸ್ತುಗಳಿರುತ್ತವೆ. ಅದನ್ನು ಮಾರಾಟ ಮಾಡಿ ಆದಾಯ ಗಳಿಸುವುದು ಸವಾಲು.

ಏಳನೆಯದಾಗಿ, ಫೋನ್‌ ಪೇ-ಗೂಗಲ್‌ ಪೇ ಇತ್ಯಾದಿ ಯುಪಿಐ ವ್ಯವಸ್ಥೆಗೆ ತಕ್ಕಂತೆ ಅಪ್‌ ಡೇಟ್‌ ಆಗಬೇಕು. ಭವಿಷ್ಯದ ದಿನಗಳಲ್ಲಿ ಡಿಜಿಟಲ್‌ ಟ್ರಾನ್ಸಕ್ಷನ್‌ ಜಾಸ್ತಿಯಾಗುವುದರಲ್ಲಿ ಸಂದೇಹವೇ ಬೇಡ.

ಎಂಟನೆಯದಾಗಿ ಕಿರಾಣಾ ಸ್ಟೋರ್‌ ನಡೆಸುವವರು ಪಿಗ್ಮಿ, ಚೀಟಿಗಳಲ್ಲಿ ಉಳಿತಾಯ ಮಾಡುತ್ತಾರೆ. ಆದರೆ ಖಾಸಗಿ ವಲಯದ ಚೀಟಿ ಉಳಿತಾಯ ಯೋಜನೆಗಳು ಅಷ್ಟೇ ರಿಸ್ಕ್‌ ಅನ್ನು ಹೊಂದಿರುತ್ತವೆ. ಪಿಗ್ಮಿಯಲ್ಲಿ ಬಡ್ಡಿ ಆದಾಯ ಅತ್ಯಲ್ಪ. ಆದ್ದರಿಂದ ಇವುಗಳಿಗಿಂತ ಹೆಚ್ಚು ಆದಾಯ ನೀಡುವ ಮ್ಯೂಚುವಲ್‌ ಫಂಡ್‌, ಸ್ಟಾಕ್ಸ್‌, ಎನ್‌ಪಿಎಸ್‌, ಪಿಪಿಎಫ್‌ ಇತ್ಯಾದಿಗಳಲ್ಲಿಯೂ ಹೂಡಿಕೆ ಮಾಡುವುದು ಉತ್ತಮ. ಇದರಿಂದ ನಿಮ್ಮ ಗಳಿಕೆಯ ಹಣ ಪರಿಣಾಮಕಾರಿಯಾಗಿ ಬೆಳೆಯುತ್ತದೆ.

ಕೊನೆಯದಾಗಿ ಕಿರಾಣಾ ಸ್ಟೋರ್‌ಗಳು ಸೂಪರ್‌ ಮಾರ್ಕೆಟ್‌ ಆಗಿ ಬದಲಾಗಬೇಕೇ? ಎನ್ನುವುದು. ಈಗಿನ ಗ್ರಾಹಕರು ಸಣ್ಣ ಕಿರಾಣಾ ಅಂಗಡಿಗಳ ಬದಲಿಗೆ ವಿಶಾಲವಾದ ಸೂಪರ್‌ ಮಾರ್ಕೆಟ್‌ಗಳಿಗೆ ಕುಟುಂಬ ಸಮೇತರಾಗಿ ಹೋಗಿ ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬಯಸುತ್ತಾರೆ. ಈ ಟ್ರೆಂಡ್‌ ದಿನೇ ದಿನೆ ಹೆಚ್ಚುತ್ತಿರುವುದರಿಂದ ಕಿರಾಣಾ ಸ್ಟೋರ್‌ ನಡೆಸುವವರು ಸೂಪರ್‌ ಮಾರ್ಕೆಟ್‌ ಬಿಸಿನೆಸ್‌ ಜನಪ್ರಿಯವಾಗುತ್ತಿದೆ. ಹೀಗಿದ್ದರೂ, ಕಿರಾಣಾ ಸ್ಟೋರ್‌ಗೆ ಹೋಲಿಸಿದರೆ ಇದಕ್ಕೆ ಹೆಚ್ಚಿನ ಬಂಡವಾಳ ಅಗತ್ಯ.

ಇಷ್ಟೆಲ್ಲ ಸಂಗತಿಗಳಿದ್ದರೂ, ಕೊನೆಯದಾಗಿ ಕಿರಾಣಾ ಸ್ಟೋರ್‌ ಎಂದರೆ ಹೊಸ ಪ್ರಾಡಕ್ಟ್‌ ಮತ್ತು ಸರ್ವೀಸ್‌ ಅನ್ನು ಸ್ಥಳೀಯರಿಗೆ ನೀಡುವ ಜನೋಪಯೋಗಿ ಕೆಲಸವೂ ಹೌದು. ಆದಾಯ ಮತ್ತು ಲಾಭದ ಜತೆಗೆ ಜನರ ಬೇಸಿಕ್‌ ಅಗತ್ಯಗಳನ್ನು ಪೂರೈಸುವ ಕೆಲಸ ಎನ್ನುವುದು ವಿಶೇಷ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Reliance Jio: ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ ಆಫರ್‌; 15 ಒಟಿಟಿ ಅಪ್ಲಿಕೇಷನ್‌ ಜತೆಗೆ 888 ರೂ. ಪೋಸ್ಟ್ ಪೇಯ್ಡ್ ಪ್ಲಾನ್

Reliance Jio: ರಿಲಯನ್ಸ್ ಜಿಯೋದಿಂದ ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂ. ಆಗಲಿದ್ದು, ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಲಭ್ಯವಿದೆ. ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ ಡೇಟಾ ಸಹ ದೊರೆಯುತ್ತಿದೆ.

VISTARANEWS.COM


on

888 rupees postpaid plan with 15 OTT applications for JioFiber AirFiber customers
Koo

ನವದೆಹಲಿ: ಜಿಯೋಫೈಬರ್ (Jio Fiber) ಹಾಗೂ ಜಿಯೋ ಏರ್ ಫೈಬರ್ (Jio Air Fiber) ಗ್ರಾಹಕರಿಗಾಗಿ ರಿಲಯನ್ಸ್ ಜಿಯೋದಿಂದ (Reliance Jio) ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂಪಾಯಿ ಆಗಲಿದೆ.

ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ (Unlimited) ಡೇಟಾ ಸಹ ದೊರೆಯುತ್ತಿದೆ. ಇದರಿಂದಾಗಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಅಪ್ಲಿಕೇಷನ್‌ಗಳಲ್ಲಿ ಯಾವಾಗ ಮತ್ತು ಎಲ್ಲಿ ಬೇಕಾದರೂ ಕಾರ್ಯಕ್ರಮಗಳ ವೀಕ್ಷಣೆ ಮಾಡಬಹುದಾಗಿದೆ.

ಇದನ್ನೂ ಓದಿ: Dr C N Manjunath: ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

ಈ ಹೊಸ ಯೋಜನೆಯ ಅಡಿಯಲ್ಲಿ ಗ್ರಾಹಕರು 30 ಎಂಬಿಪಿಎಸ್ (Mbps) ವೇಗವನ್ನು ಪಡೆಯಲಿದ್ದು, ಇದರ ಜತೆಗೆ ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್, ಜಿಯೋಸಿನಿಮಾ ಪ್ರೀಮಿಯಂ ರೀತಿಯ ಹದಿನೈದಕ್ಕೂ ಹೆಚ್ಚು ಪ್ರಮುಖ ಒಟಿಟಿ ಅಪ್ಲಿಕೇಷನ್‌ಗಳು ದೊರೆಯುತ್ತವೆ. ಈ ಅಪ್ಲಿಕೇಷನ್‌ನ ಸಬ್‌ಸ್ಕ್ರಿಪ್ಷನ್ ದೊರೆಯುವುದು ಯೋಜನೆಯ ಜತೆಗೆ ಮಾತ್ರ. ಈ ಯೋಜನೆಯನ್ನು ಹೊಸ ಚಂದಾದಾರಷ್ಟೇ ಅಲ್ಲ, 10 ಅಥವಾ 30 ಎಂಬಿಪಿಎಸ್ ಯೋಜನೆಯನ್ನು ಈಗಾಗಲೇ ಬಳಸುತ್ತಿರುವ ಜಿಯೋದ ಈಗಿನ ಬಳಕೆದಾರರು ಸಹ ಪಡೆಯಬಹುದಾಗಿದೆ.

ಇನ್ನು ಈ 888 ರೂಪಾಯಿಯ ಪೋಸ್ಟ್‌ಪೇಯ್ಡ್ ಯೋಜನೆಯು ಪ್ರತಿಯೊಬ್ಬರಿಗೂ ದೊರೆಯಲಿದ್ದು, ಸದ್ಯಕ್ಕೆ ಪ್ರಿಪೇಯ್ಡ್ ಯೋಜನೆ ಹೊಂದಿರುವ ಗ್ರಾಹಕರು ಈ ಹೊಸ ಪೋಸ್ಟ್ ಪೇಯ್ಡ್ ಯೋಜನೆಗೆ ಅಪ್‌ಗ್ರೇಡ್ ಮಾಡಬಹುದು.

ಇದನ್ನೂ ಓದಿ: T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

ಇನ್ನೊಂದು ವಿಶೇಷತೆಯೆಂದರೆ ಇತ್ತೀಚೆಗೆ ಘೋಷಣೆಯಾದ ಜಿಯೋ ಐಪಿಎಲ್ ಧನ್ ಧನಾ ಧನ್ ಆಫರ್ ಕೂಡ ಈ ಯೋಜನೆಗೆ ಅನ್ವಯಿಸುತ್ತದೆ. ಜಿಯೋಫೈಬರ್ ಅಥವಾ ಏರ್ ಫೈಬರ್‌ನ ಅರ್ಹ ಗ್ರಾಹಕರು ತಮ್ಮ ಜಿಯೋ ಹೋಮ್ ಬ್ರಾಡ್ ಬ್ಯಾಂಡ್ ಸಂಪರ್ಕದಲ್ಲಿ 50 ದಿನ ರಿಯಾಯಿತಿ ಕ್ರೆಡಿಟ್ ವೋಚರ್ ಸಹ ಪಡೆಯಬಹುದು. ಈ ಪ್ಲಾನ್ ಮೇ 31, 2024ರ ವರೆಗೆ ಲಭ್ಯವಿರುತ್ತದೆ, ಜಿಯೋ ಡಿಡಿಡಿ (Jio Dhan Dhana Dhan) ಕೊಡುಗೆಯನ್ನು ವಿಶೇಷವಾಗಿ ಟಿ20 ಋತುವಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ವಾಣಿಜ್ಯ

Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

Tata Motors: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ತನ್ನ ಇ-ಕಾರ್ಗೊ ಸಾರಿಗೆ ಪರಿಹಾರಗಳನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ಇದು ಶೂನ್ಯ ಮಾಲಿನ್ಯ ಹೊರಹೊಮ್ಮುವ ಮಿನಿ ಟ್ರಕ್ ಆಗಿದೆ.

VISTARANEWS.COM


on

New Tata Ace EV 1000 launched by Tata Motors
Koo

ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ (Tata Motors) ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಬಿಡುಗಡೆ ಮಾಡಿದ್ದು, ಈ ಮೂಲಕ ತನ್ನ ಇ-ಕಾರ್ಗೊ ಸಾರಿಗೆ ಪರಿಹಾರಗಳನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ಕಟ್ಟಕಡೆಯ ಮೈಲು ತಲುಪಲು ಪೂರಕವಾಗಿ ಈ ವಾಹನವನ್ನು ಕ್ರಾಂತಿಕಾರಕವಾಗಿ ಅಭಿವೃದ್ಧಿಪಡಿಸಲಾಗಿದೆ.

ಏಸ್ ಇವಿ ವಿಶೇಷತೆ ಏನು?

ಹೊಸದಾದ ಏಸ್ ಇವಿ ವಾಹನವು ಶೂನ್ಯ ಮಾಲಿನ್ಯ ಹೊರಹೊಮ್ಮುವ ಮಿನಿ ಟ್ರಕ್ ಆಗಿದ್ದು, 1 ಟನ್‌ವರೆಗೆ ಪೇಲೋಡ್ ಅನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 161 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು. ತನ್ನ ಗ್ರಾಹಕರಿಂದ ಅತ್ಯಮೂಲ್ಯವಾದ ಸಲಹೆಗಳನ್ನು ಪಡೆದುಕೊಂಡು ಅದಕ್ಕೆ ತಕ್ಕಂತೆ ಈ ಏಸ್ ಇವಿಯನ್ನು ಅಭಿವೃದ್ಧಿಪಡಿಸಲಾಗಿದೆ. ಈ ಹೊಸ ಶ್ರೇಣಿಯ ವಾಹನವು ಎಫ್ಎಂಸಿಜಿ, ಬೇವರೇಜಸ್, ಪೇಂಟ್ಸ್ & ಲ್ಯೂಬ್ರಿಕೆಂಟ್ಸ್, ಎಲ್‌ಪಿಜಿ & ಡೈರಿ ಉತ್ಪನ್ನಗಳ ಸಾಗಣೆ ಅಗತ್ಯತೆಗಳನ್ನು ಪೂರೈಸಲಿದೆ.

ಇದನ್ನೂ ಓದಿ: UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

ದೇಶಾದ್ಯಂತ 150ಕ್ಕೂ ಹೆಚ್ಚು ಎಲೆಕ್ಟ್ರಿಕ್ ವೆಹಿಕಲ್ ಸಪೋರ್ಟ್ ಸೆಂಟರ್‌ಗಳ ಬೆಂಬಲದೊಂದಿಗೆ ಈ ಏಸ್ ಇವಿ ವಾಹನವು ಅತ್ಯಾಧುನಿಕ, ಸುಧಾರಿತ ಬ್ಯಾಟರಿ ಮ್ಯಾನೇಜ್ಮೆಂಟ್ ಸಿಸ್ಟಂ, ಫ್ಲೀಟ್ ಎಡ್ಜ್ ಟೆಲಿಮ್ಯಾಟಿಕ್ಸ್ ಸಿಸ್ಟಂ ಮತ್ತು ಅತ್ಯುತ್ತಮ ಸಾಮರ್ಥ್ಯವನ್ನು ಹೊಂದಿದ ವಾಹನವಾಗಿದೆ.

ಟಾಟಾ ಸಮೂಹ ಸಂಸ್ಥೆಗಳ ಅಂಗವಾಗಿರುವ Tata UniEVerse ಅಗಾಧವಾದ ಸಾಮರ್ಥ್ಯಗಳನ್ನು ಬಳಸಿಕೊಂಡು ಈ ಏಸ್ ಇವಿಯನ್ನು ಸಿದ್ಧಪಡಿಸಲಾಗಿದೆ. ಗ್ರಾಹಕರಿಗೆ ಸಮಗ್ರ ಇ-ಕಾರ್ಗೊ ಮೊಬಿಲಿಟಿ ಪರಿಹಾರವನ್ನು ನೀಡಲು ದೇಶದ ಪ್ರಮುಖ ಹಣಕಾಸು ಸಂಸ್ಥೆಗಳ ಪಾಲುದಾರಿಕೆಯನ್ನೂ ಸಹ ಹೊಂದಲಾಗಿದೆ. ಇದು ಬಹುಮುಖ ಕಾರ್ಗೊ ಡೆಕ್‌ಗಳೊಂದಿಗೆ ಲಭ್ಯವಿದೆ ಮತ್ತು ದೇಶಾದ್ಯಂತ ಎಲ್ಲಾ ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ಡೀಲರ್ ಶಿಪ್‌ಗಳಲ್ಲಿ ಮಾರಾಟವಾಗಲಿದೆ. ಇದರ ಬೆಲೆ ಸುಮಾರು 9 ಲಕ್ಷ ರೂ. ಆಗುತ್ತದೆ.

ಇದನ್ನೂ ಓದಿ: Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ಎಸ್‌ಸಿವಿ & ಪಿಯು ವಿಭಾಗದ ಉಪಾಧ್ಯಕ್ಷ & ಬ್ಯುಸಿನೆಸ್ ಹೆಡ್ ವಿನಯ್ ಪಾಠಕ್ ಈ ಕುರಿತು ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ನಮ್ಮ ಏಸ್ ಇವಿ ಗ್ರಾಹಕರು ಸರಿಸಾಟಿಯಿಲ್ಲದ ಅನುಭವವನ್ನು ಪಡೆಯುವ ಮೂಲಕ ಅತ್ಯಮೂಲ್ಯ ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರು ಲಾಭವನ್ನು ಮತ್ತು ಸುಸ್ಥಿರತೆಯನ್ನು ಪಡೆದುಕೊಂಡಿದ್ದಾರೆ. ಕ್ರಾಂತಿಕಾರಕ ಶೂನ್ಯ ಮಾಲಿನ್ಯದ ಕಟ್ಟಕಡೆಯ ಸಾರಿಗೆ ಪರಿಹಾರಗಳ ರಾಯಭಾರಿಗಳಾಗಿ ಈ ಗ್ರಾಹಕರು ಹೊರಹೊಮ್ಮಿದ್ದಾರೆ.

ಇದೀಗ ಏಸ್ ಇವಿ 1000 ಬಿಡುಗಡೆಯೊಂದಿಗೆ ಗ್ರಾಹಕರಿಗೆ ಸುಧಾರಿತ ಅನುಭವವನ್ನು ನೀಡುತ್ತಿದ್ದೇವೆ. ಈ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಆರ್ಥಿಕತೆಯನ್ನು ಸುಧಾರಣೆ ಮಾಡಲಾಗುತ್ತಿದೆ. ಏಸ್ ಇವಿ 1000 ಉತ್ಕೃಷ್ಟ ಮೌಲ್ಯ ಮತ್ತು ಕಡಿಮೆ ವೆಚ್ಚದ ಮಾಲೀಕತ್ವವನ್ನು ನೀಡುವ ಮೂಲಕ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡಲಿದೆ ಎಂಬ ವಿಶ್ವಾಸ ನಮ್ಮದಾಗಿದೆ ಎಂದು ತಿಳಿಸಿದ್ದಾರೆ.

ಏಸ್ ಇವಿಯು EVOGEN ಪವರ್ ಟ್ರೇನ್‌ನಿಂದ ಚಾಲಿತವಾಗಿದ್ದು, ಇದು 7 ವರ್ಷಗಳ ಬ್ಯಾಟರಿ ವಾರಂಟಿ ಮತ್ತು 5 ವರ್ಷದ ಸಮಗ್ರ ನಿರ್ವಹಣೆ ಪ್ಯಾಕೇಜ್‌ನೊಂದಿಗೆ ಸರಿಸಾಟಿಯಿಲ್ಲದ ಚಾಲನಾ ಅನುಭವವನ್ನು ನೀಡುತ್ತದೆ. ಇದು ಚಾಲನಾ ಶ್ರೇಣಿಯನ್ನು ಹೆಚ್ಚಿಸಲು ಸುಧಾರಿತ ಬ್ಯಾಟರಿ ಕೂಲಿಂಗ್ ಸಿಸ್ಟಂ ಮತ್ತು ಪುನರುತ್ಪಾದಕ ಬ್ರೇಕಿಂಗ್ ಸಿಸ್ಟಂನೊಂದಿಗೆ ಸುರಕ್ಷಿತ, ಎಲ್ಲಾ ಹವಾಮಾನ ಕಾರ್ಯಾಚರಣೆಗಳನ್ನು ನೀಡುತ್ತದೆ.

ಇದನ್ನೂ ಓದಿ: IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

ಇದು ಹೆಚ್ಚಿನ ಸಮಯಕ್ಕಾಗಿ ನಿಯಮಿತ ಮತ್ತು ವೇಗದ ಚಾರ್ಜಿಂಗ್ ಸಾಮರ್ಥ್ಯಗಳನ್ನು ಹೊಂದಿದೆ. ಇದು 27kW (36hp) ಮೋಟರ್ ನಿಂದ 130Nm ಪೀಕ್ ಟಾರ್ಕ್ ನೊಂದಿಗೆ ಚಾಲಿತವಾಗಿದೆ. ಬೆಸ್ಟ್-ಇನ್-ಕ್ಲಾಸ್ ಪಿಕಪ್ ಮತ್ತು ಗ್ರೇಡ್ ಸಾಮರ್ಥ್ಯವನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಲೋಡ್ ಮಾಡಲಾದ ಪರಿಸ್ಥಿತಿಗಳಲ್ಲಿ ಸುಲಭವಾಗಿ ಸಾಗಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದೆ.

Continue Reading

ಮನಿ-ಗೈಡ್

Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

Money Guide: ಭಾರತದಲ್ಲಿ ನಗರ, ಗ್ರಾಮಾಂತರ ಪ್ರದೇಶ ಎನ್ನುವ ಬೇಧವಿಲ್ಲದೆ ಎಲ್ಲ ಕಡೆ ಏಕೀಕೃತ ಪಾವತಿ ಇಂಟರ್ಫೇಸ್ ಜಾರಿಯಲ್ಲಿದೆ. ಹೀಗಾಗಿ ಗೂಗಲ್‌ ಪೇ ಜನಪ್ರಿಯವಾಗಿದೆ. ಇದೀಗ ಗೂಗಲ್‌ ಕಂಪೆನಿ ಭಾರತದಲ್ಲಿ ತನ್ನ ವ್ಯಾಲೆಟ್ ಸೇವೆಯನ್ನು ಪ್ರಾರಂಭಿಸಿದೆ. ಹಾಗಾದರೆ ಗೂಗಲ್ ವ್ಯಾಲೆಟ್‌ ಎಂದರೇನು? ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ? ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಗೂಗಲ್‌ ಪೇ (Google Pay) ಯಾರಿಗೆ ಗೊತ್ತಿಲ್ಲ ಹೇಳಿ? ಭಾರತದಲ್ಲಿ ಸದ್ಯ ಡಿಜಿಟಲ್‌ ಪೇಮೆಂಟ್‌ ಜನಪ್ರಿಯಾಗಿದ್ದು, ಗೂಗಲ್‌ ಪೇ ಬಳಕೆದಾರರ ಸಂಖ್ಯೆ ಹೆಚ್ಚಿದೆ. ನಗರ, ಗ್ರಾಮಾಂತರ ಪ್ರದೇಶ ಎನ್ನುವ ಬೇಧವಿಲ್ಲದೆ ಎಲ್ಲ ಕಡೆ ಏಕೀಕೃತ ಪಾವತಿ ಇಂಟರ್ಫೇಸ್ (UPI) ವ್ಯವಸ್ಥೆ ಜಾರಿಯಲ್ಲಿದೆ. ಹೀಗಾಗಿ ಗ್ರಾಹಕ ಸ್ನೇಹಿಯಾಗಿರುವ ಗೂಗಲ್‌ ಪೇಯ ಬಳಕೆಯೂ ವ್ಯಾಪಕವಾಗಿದೆ. ಈ ಮಧ್ಯೆ ಇದೀಗ ಗೂಗಲ್‌ ಭಾರತದಲ್ಲಿ ತನ್ನ ವ್ಯಾಲೆಟ್ ಸೇವೆಯನ್ನು ಪ್ರಾರಂಭಿಸಿದೆ. ಹಾಗಾದರೆ ಗೂಗಲ್ ವ್ಯಾಲೆಟ್‌ (Google Wallet) ಎಂದರೇನು? ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ (Money Guide).

ಗೂಗಲ್‌ ಪೇ ಆ್ಯಪ್‌ಗಿಂತ ಗೂಗಲ್‌ ವ್ಯಾಲೆಟ್‌ನ ಕಾರ್ಯ ವೈಖರಿ ಭಿನ್ನ. ಗೂಗಲ್ ವಾಲೆಟ್ ಹೆಸರಿಗೆ ತಕ್ಕಂತೆ ನಮ್ಮ ವ್ಯಾಲೆಟ್‌ (ಪರ್ಸ್‌)ನಂತೆಯೇ ಕಾರ್ಯ ನಿರ್ವಹಿಸಲಿದೆ. ಈ ಆ್ಯಪ್‌ನ ಮೂಲಕ ಹಣ ಪಾವತಿ ಮಾಡಲು ಸಾಧ್ಯವಿಲ್ಲ. ಬದಲಾಗಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಲಾಯಲ್ಟಿ ಕಾರ್ಡ್, ಗಿಫ್ಟ್ ಕಾರ್ಡ್, ಬಸ್‌, ಮೆಟ್ರೋ ಟಿಕೆಟ್‌ ಸೇರಿದಂತೆ ಇತರ ಡಿಜಿಟಲ್ ಕಾರ್ಡ್‌ಗಳನ್ನು ಸ್ಟೋರ್ ಮಾಡಿ ಇಟ್ಟುಕೊಳ್ಳಬಹುದಾಗಿದೆ. ಸರಳವಾಗಿ ಹೇಳುವುದಾದರೆ ಗೂಗಲ್ ವ್ಯಾಲೆಟ್‌ ಭಾರತದಲ್ಲಿ ಈಗಾಗಲೇ ಲಭ್ಯವಿರುವ ಡಿಜಿಲಾಕರ್‌ನಂತೆಯೇ ಕಾರ್ಯ ನಿರ್ವಹಿಸಲಿದೆ.

ಸುರಕ್ಷಿತ ವಿಧಾನ

ಇದು ಅತ್ಯಂತ ಸುರಕ್ಷಿತ ಖಾಸಗಿ ಡಿಜಿಟಲ್ ವ್ಯಾಲೆಟ್ ಎಂದು ಕಂಪನಿ ಹೇಳಿದೆ. ಗೂಗಲ್‌ 2022ರಲ್ಲಿ ಅಮೇರಿಕಾದಲ್ಲಿ ಈ ಡಿಜಿಟಲ್ ವ್ಯಾಲೆಟ್ ಅಪ್ಲಿಕೇಶನ್ ಅನ್ನು ಆರಂಭಿಸಿತ್ತು. ಇದಾಗಿ ಸುಮಾರು 2 ವರ್ಷಗಳ ಬಳಿಕ ಭಾರತದಲ್ಲಿ ಕಾರ್ಯಾಚರಿಸುತ್ತಿದೆ. ಗೂಗಲ್‌ ವ್ಯಾಲೆಟ್‌ ಇದೀಗ ಡೌನ್‌ಲೋಡ್ ಮಾಡಲು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಸದ್ಯಕ್ಕೆ ಗೂಗಲ್ ತನ್ನ ವ್ಯಾಲೆಟ್ ಅನ್ನು ಭಾರತದಲ್ಲಿನ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಬಿಡುಗಡೆ ಮಾಡಿದೆ.

ನೀವು ಗೂಗಲ್‌ ವ್ಯಾಲೆಟ್‌ನಲ್ಲಿ ಹಣಕಾಸಿನ ಡೇಟಾವನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಬಹುದು. ಉದಾಹರಣೆಗೆ ನಿಮ್ಮ ಚಲನಚಿತ್ರ ಟಿಕೆಟ್‌ಗಳು ಮತ್ತು ಈವೆಂಟ್ ಟಿಕೆಟ್‌ಗಳನ್ನು ಭೌತಿಕವಾಗಿ ಇಟ್ಟುಕೊಳ್ಳುವ ಬದಲು ಇದರಲ್ಲಿ ಸಂಗ್ರಹಿಸಿಟ್ಟುಕೊಳ್ಳಬಹುದು. ದೇಶದ ದೊಡ್ಡ ಕಂಪನಿಗಳಾದ ಪಿವಿಪಿ ಮತ್ತು ಐನಾಕ್ಸ್‌ಗಳು ಈಗಾಗಲೇ ಗೂಗಲ್ ವ್ಯಾಲೆಟ್‌ನಲ್ಲಿ ಲಭ್ಯ.

ಬಳಸುವುದು ಹೇಗೆ?

  • ಗೂಗಲ್‌ ಪ್ಲೇ ಸ್ಟೋರ್‌ (Play Store)ಗೆ ಹೋಗಿ ಗೂಗಲ್‌ ವ್ಯಾಲೆಟ್‌ (Google Wallet) ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿ.
  • ಅಪ್ಲಿಕೇಷನ್‌ ಓಪನ್‌ ಮಾಡಿ ‘Add to Walletʼ ಆಯ್ಕೆನ್ನು ಸೆಲೆಕ್ಟ್‌ ಮಾಡಿ. ಈಗ ನೀವು ಫೋಟೊ, ಲಾಯಲ್ಟಿ, ಗಿಫ್ಟ್‌ ಕಾರ್ಡ್‌ ಮತ್ತು ಟ್ರಾನ್ಸ್‌ಪೋರ್ಟ್‌ ಪಾಸ್‌ ಎನ್ನುವ ನಾಲ್ಕು ಆಯ್ಕೆಯನ್ನು ಪಡೆಯುತ್ತೀರಿ.
  • ಬಾರ್ ಕೋಡ್ ಅಥವಾ ಕ್ಯೂಆರ್ ಕೋಡ್ ಬಳಸಿ ಪಾಸ್ ರಚಿಸಲು ಫೋಟೊ ಆಯ್ಕೆ ಮಾಡಿ.
  • ವಿವಿಧ ಬ್ರ್ಯಾಂಡ್‌ಗಳಿಂದ ನಿಮ್ಮ ಲಾಯಲ್ಟಿ ಪಾಯಿಂಟ್‌ಗಳನ್ನು ಸೇರಿಸಲು ಲಾಯಲ್ಟಿ ಆಯ್ಕೆ ಬಳಸಿ. ಅದೇ ರೀತಿ ಗಿಫ್ಟ್‌ ಕಾರ್ಡ್ ಮತ್ತು ಟ್ರಾನ್ಸ್‌ಪೋರ್ಟ್‌ ಪಾಸ್‌ ಅನ್ನು ನಿಮ್ಮ ವ್ಯಾಲೆಟ್‌ಗೆ ಸೇರಿಸಿ.

ಗಮನಿಸಿ ಈ ಆ್ಯಪ್‌ನಲ್ಲಿ ಮೊದಲೇ ಹೇಳಿದಂತೆ ನಗದು ಪಾವತಿ ಸಾಧ್ಯವಿಲ್ಲ. ಅದಕ್ಕಾಗಿ ಗೂಗಲ್‌ ಪೇಯನ್ನು ಬಳಸಿ.

ಇದನ್ನೂ ಓದಿ: Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

Continue Reading

ಉದ್ಯೋಗ

Job News: ಗುಡ್‌ನ್ಯೂಸ್‌; ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಶೀಘ್ರ 12,000 ಉದ್ಯೋಗಿಗಳ ನೇಮಕ

Job News: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಸೂಚನೆ ಶೀಘ್ರದಲ್ಲಿಯೇ ಹೊರ ಬೀಳಲಿದೆ.

VISTARANEWS.COM


on

Job News
Koo

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (State Bank of India) ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ (Information Technology) ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಅಧ್ಯಕ್ಷ ದಿನೇಶ್‌ ಖರಾ (Dinesh Khara) ಮಾಹಿತಿ ನೀಡಿದ್ದಾರೆ (Job News).

”ಸುಮಾರು 11,000ರಿಂದ 12,000 ಉದ್ಯೋಗಿಗಳ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿದೆ. ಈ ನೇಮಕಾತಿ ಬ್ಯಾಂಕ್‌ನ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ಹೊಂದಿದೆ. ಜತೆಗೆ ಸೇವೆಯ ಗುಣಮಟ್ಟವನ್ನು ವೃದ್ಧಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆʼʼ ಎಂದು ಅವರು ವಿವರಿಸಿದ್ದಾರೆ. ʼʼನೇಮಕಗೊಂಡವರಿಗೆ ಆರಂಭದಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ ಬಳಿಕ ಅವರನ್ನು ಐಟಿ ವಿಭಾಗಕ್ಕೆ ಶಿಫಾರಸ್ಸು ಮಡಲಾಗುವುದುʼʼ ಎಂದು ಅವರು ಹೇಳಿದ್ದಾರೆ. ಈ ಮೂಲಕ ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವವರ ಕನಸು ನನಸಾಗಲಿದೆ.

ಉದ್ಯೋಗಿಗಳ ಸಂಖ್ಯೆಯಲ್ಲಿ ಕುಸಿತ

ಮಾರ್ಚ್‌ ಅಂತ್ಯಕ್ಕೆ ಎಸ್‌ಬಿಐ ಉದ್ಯೋಗಿಗಳ ಸಂಖ್ಯೆ 2,32,296ಕ್ಕೆ ಕುಸಿದಿದೆ. ಕಳೆದ ವರ್ಷ ಇದೇ ವೇಳೆಗೆ 2,35,858 ಉದ್ಯೋಗಿಗಳಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು 2024ರ ಮಾರ್ಚ್‌ 31ಕ್ಕೆ ಕೊನೆಗೊಂಡ ತ್ರೈ ಮಾಸಿಕದಲ್ಲಿ ಎಸ್‌ಬಿಐಯ ನಿವ್ವಳ ಲಾಭ ಶೇ. 24ರಷ್ಟು ಏರಿಕೆ ದಾಖಲಿಸಿ 20,698 ಕೋಟಿ ರೂ.ಗೆ ತಲುಪಿದೆ. ಕಳೆದ ವರ್ಷ ಈ ಅವಧಿಯಲ್ಲಿ ಎಸ್‌ಬಿಐ 16,695 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಬಡ್ಡಿಯ ಆದಾಯ ಶೇ. 19ರಷ್ಟು ವೃದ್ಧಿಸಿ 92,951 ಕೋಟಿ ರೂ.ಯಿಂದ 1.11 ಲಕ್ಷ ಕೋಟಿ ರೂ.ಗೆ ತಲುಪಿದೆ. ದೇಶದಲ್ಲಿ ಉದ್ಯಮ ಆಧಾರಿತ ಚಟುವಟಿಕೆ ಹೆಚ್ಚುತ್ತಿರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಎಸ್‌ಬಿಐಯ ಒಟ್ಟು ಆದಾಯವೂ ಏರುಗತಿಯಲ್ಲಿದೆ. 1.06 ಲಕ್ಷ ಕೋಟಿ ರೂ.ಯಿಂದ 1.28 ಲಕ್ಷ ಕೋಟಿ ರೂ.ಗೆ ಜಿಗಿತ ಕಂಡಿದೆ. ಜತೆಗೆ ನಿರ್ವಹಣಾ ವೆಚ್ಚವೂ ಹಿಂದಿನ ವರ್ಷದ 29,732 ಕೋಟಿ ರೂ.ಗಳಿಂದ 30,276 ಕೋಟಿ ರೂ.ಗೆ ಏರಿಕೆ ಕಂಡಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ.

ಇದನ್ನೂ ಓದಿ: Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

ನಿರೀಕ್ಷೆ ಮೀರಿದ ಲಾಭಾಂಶ

ಆರ್ಥಿಕ ತಜ್ಞರು ಈ ತ್ರೈಮಾಸಿಕದಲ್ಲಿ ಎಸ್‌ಬಿಐ 13,400 ಕೋಟಿ ರೂ. ಲಾಭ ದಾಖಲಿಸಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಫಲಿತಾಂಶ ಈ ಎಲ್ಲ ನಿರೀಕ್ಷೆಗಳನ್ನೂ ಮೀರಿದ್ದು, ಬರೋಬ್ಬರಿ 20,698 ಕೋಟಿ ರೂ. ನಿವ್ವಳ ಲಾಭ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಎಸ್‌ಬಿಐ ತನ್ನ ಪ್ರತಿ ಈಕ್ವಿಟಿ ಷೇರಿಗೆ 13.70 ರೂ. ಲಾಭಾಂಶ ಘೋಷಿಸಿದೆ. ತ್ರೈ ಮಾಸಿಕ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಎಸ್‌ಬಿಐ ಷೇರುಗಳಲ್ಲಿ ಜಿಗಿತ ಕಂಡು ಬಂದಿದೆ. ಮೇ 9ರಂದು ಎಸ್‌ಬಿಐ ಷೇರುಗಳು ಸುಮಾರು ಶೇ. 3ರಷ್ಟು ಹೆಚ್ಚಾಗಿ 834.40 ರೂ.ನಲ್ಲಿ ವಹಿವಾಟು ನಡೆಸುವುದು ಕಂಡುಬಂತು. ಎಸ್‌ಬಿಐನ ಒಟ್ಟು ಅನುತ್ಪಾದಕ ಆಸ್ತಿ (ಜಿಎನ್‌ಪಿಎ) ಪ್ರಮಾಣ ಶೇ.2.24ಕ್ಕೆ ಇಳಿಕೆಯಾಗಿದೆ. ಇದು ಕಳೆದ ವರ್ಷ ಶೇ . 2.78ರಷ್ಟು ಇತ್ತು.

Continue Reading
Advertisement
Narendra Modi
ದೇಶ30 mins ago

Narendra Modi: ಶಿಂಧೆ, ಅಜಿತ್‌ ಬಣಕ್ಕೆ ನೀವೇ ಸೇರಿಬಿಡಿ; ಠಾಕ್ರೆ, ಶರದ್‌ ಪವಾರ್‌ಗೆ ಮೋದಿ ಸಲಹೆ!

Wonderla Bengaluru
ಕರ್ನಾಟಕ31 mins ago

Wonderla Bengaluru: ತಾಯಂದಿರ ದಿನ ಹಿನ್ನೆಲೆ ವಂಡರ್‌ಲಾದಿಂದ ವಿಶೇಷ ಆಫರ್‌; 2 ಟಿಕೆಟ್‌ ಖರೀದಿಸಿದರೆ ತಾಯಿಗೆ ಫ್ರೀ ಎಂಟ್ರಿ!

IPL 2024
ಕ್ರೀಡೆ34 mins ago

IPL 2024 : ಚೆನ್ನೈ ವಿರುದ್ಧ ಗುಜರಾತ್​ಗೆ 35 ರನ್ ವಿಜಯ, ಆರ್​​ಸಿಬಿ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು

Court Order
ದೇಶ1 hour ago

Cash Transfers: ಚುನಾವಣೆ; ಸರ್ಕಾರದ 14 ಸಾವಿರ ಕೋಟಿ ರೂ. ಜನರ ಖಾತೆಗೆ ವರ್ಗಾಯಿಸಲು ಕೋರ್ಟ್‌ ತಡೆ!

Prajwal Revanna Case
ಕರ್ನಾಟಕ1 hour ago

Prajwal Revanna Case: 36 ಸೆಕೆಂಡ್‌‌ಗಳ ಮತ್ತೊಂದು ಆಡಿಯೊ ಬಾಂಬ್; ಪ್ರಜ್ವಲ್ ಕೇಸ್‌‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್!

Mr. & Mrs. Mahi'
ಪ್ರಮುಖ ಸುದ್ದಿ2 hours ago

Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

888 rupees postpaid plan with 15 OTT applications for JioFiber AirFiber customers
ತಂತ್ರಜ್ಞಾನ2 hours ago

Reliance Jio: ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ ಆಫರ್‌; 15 ಒಟಿಟಿ ಅಪ್ಲಿಕೇಷನ್‌ ಜತೆಗೆ 888 ರೂ. ಪೋಸ್ಟ್ ಪೇಯ್ಡ್ ಪ್ಲಾನ್

Prajwal Revanna case SIT to issue Red Corner Notice against Prajwal
ಕ್ರೈಂ2 hours ago

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ; ಯಾವ ದೇಶದಲ್ಲಿದ್ದರೂ ಅರೆಸ್ಟ್‌ ಮಾಡಲು ಸಿದ್ಧತೆ?

IPL 2024
ಕ್ರೀಡೆ2 hours ago

IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

US
ಪ್ರಮುಖ ಸುದ್ದಿ3 hours ago

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ10 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ12 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ13 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ19 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 day ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌